Wednesday, May 6, 2026
Wednesday, May 6, 2026
Home Blog Page 20

ಏಪ್ರಿಲ್ 23, ಶ್ರೀಭಗೀರಥ ಜಯಂತಿ ಆಚರಣೆಗೆ ಸಿದ್ಧತೆ, ಮಾಹಿತಿ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏ.23 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬಾಗಲಕೋಟೆ ಜಿಲ್ಲೆಯ ಮುದೋಳ್ ತಾಲೂಕಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರರಾದ ನಾಗರಾಜ್ ಶಿರೇಳ್ ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

ಹುಲಿಕಲ್ ಘಾಟಿ ಕುಸಿತ: ಬಸ್ ಬದಲಿಸಲು ಹತ್ತುವ ಪ್ರಯಾಣಿಕರಿಗೆ ರಕ್ಷಣೆ ಇಲ್ಲದೆ ಅನಾನುಕೂಲ

0

ಹುಲಿಕಲ್ ಘಾಟಿ ಕುಸಿತದಿಂದ ಮೂವರು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಿಲ್ಲಾಡಳಿತ ಮಂಡಳಿಯವರು ಪ್ರಯಾಣಕ್ಕೆ ಬಸ್ ಗಳ ಅದಲು ಬದಲು ವ್ಯವಸ್ಥೆ ಕಲ್ಪಿಸಿದ್ದಾರೆ ‌.

ಒಂದು ಕಡೆಯಿಂದ ಇನ್ನೊಂದು ಕಡೆಗೆ ಬಸ್ ಇಳಿದು ಇನ್ನೊಂದು ಬಸ್ ಹತ್ತಲು ಅವಕಾಶ ಕಲ್ಪಿಸಲಾಗಿದೆ.

ಬಸ್ ಇಳಿದು ಹತ್ತುವ ವೇಳೆ ಮೆಟ್ಟಿಲುಗಳ ಮೂಲಕ ಬರಲು ಅವಕಾಶ ನೀಡಲಾಗಿದ್ದು, ಆದರೆ ಮೆಟ್ಟಿಲು ಹತ್ತುವಾಗ ಯಾವುದೇ ರಕ್ಷಣೆ ಇಲ್ಲದೆ ಪ್ರಯಾಣಿಕರ ಪರದಾಡುತ್ತಿದ್ದಾರೆ.

ಕಿರಿದಾದ ಜಾಗದಲ್ಲಿ ಬಸ್ ಇಳಿದು ಹತ್ತುವಾಗ ಪ್ರಯಾಣಿಕರಿಗೆ ಗಾಯಗಳಾಗಿವೆ.

ಸೂಕ್ತ ಮುನ್ನೆಚ್ಚರಿಕೆ ಕ್ರಮಗಳಿಲ್ಲದೇ ಪ್ರಯಾಣಿಕರ ಪರದಾಡುವಂತಾಗಿದ್ದು,
ಬಿಸಿಲಿನಲ್ಲಿ ಮೆಟ್ಟಿಲು ಹತ್ತಲು ಮೆಲ್ಚಾಣಿ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಚಂಡಿಕಾಂಬ ದೇವಾಲಯದ ಮುಂಭಾಗ ಬಸ್ ಇಳಿದು ಕೆಳಗೆ ಹೋಗ ಬೇಕಾದ ಪರಿಸ್ಥಿತಿ ಇದೆ.

ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳನ್ನು ಸಂಪರ್ಕ ಕಲ್ಪಿಸುವ ಘಾಟಿ ಇದಾಗಿದೆ.

ಪ್ರಯಾಣಿಕರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

0

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರ ಕಂಚಿ ಬಾಗಿಲು ವಾಸಿ ನಾರಾಯಣ ಡಿ.ಎನ್. ಎಂಬುವವರ ತಾಯಿ 67 ವರ್ಷದ ತಿಮ್ಮಮ್ಮ ದೊಡ್ಡನರಸಯ್ಯ ಎಂಬ ಮಹಿಳೆ ಏ. 10 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈಕೆಯ ಚಹರೆ 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಎಡಕೈ ಮೇಲೆ ಕೆಂಚಮ್ಮ ಎಂಬ ಹಚ್ಚೆಯ ಗುರುತಿದೆ. ಮನೆಯಿಂದ ಹೋಗುವಾಗ ಬಂಗಾರ ಬಣ್ಣದ ಅಂಚಿರುವ ಕಂದು ಬಣ್ಣದ ಸೀರೆ, ಗಿಳಿಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ.

Bhadravati Police ಈ ಮಹಿಳೆಯ ಬಗ್ಗೆ ಸುಳಿವು ದೊರೆತಲ್ಲಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ದೂ.ಸಂ.: 08282-266343 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಯುವಕರು ನಗರೀಕರಣದ ಆಕರ್ಷಣೆಗೆ ತುತ್ತಾಗಿ ರೈತರ ಕೆಲಸ ಕುಂಠಿತ- ಡಾ.ಶೇಖರ್ ಗೌಳೇರ್

0

ನಮ್ಮ ಪೂರ್ವಜರು ಸ್ವತಹ ಬದುಕು ಕಟ್ಟಿಕೊಂಡು, ವರ್ಷಕ್ಕೆ ಬೇಕಾದಷ್ಟು ಆಹಾರ ಧಾನ್ಯ ಬೆಳೆದು ಕೃಡೀಕರಿಸಿ, ಬಾವಿ ನೀರು ಉಪಯೋಗಿಸಿ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದರು ಎಂದು, ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.
ನವ ನಾಗರೀಕೆಗೆ ಜನ ಹೊಂದಿ ಕೊಂಡು ಎಲ್ಲಾ ಕಾರ್ಯಗಳನ್ನು ಸರ್ಕಾರವೆ ಮಾಡಲಿ ಎಂದು ಹುಯಿಲು ಎಬ್ಬಿಸುತ್ತಾರೆ. ಇದು ಎಷ್ಟು ಸರಿ? ಗ್ರಾಮೀಣ ಪ್ರದೇಶ ಹೊಂದಿದ ರೈತರೆ ಹೆಚ್ಚಿರುವ ನಮ್ಮ ರಾಷ್ಟ್ರದಲ್ಲಿ ಸ್ವಾವಲಂಬಿ ಬದುಕು ನಷಿಸುತ್ತಿದೆ.
ಸಿರಿಧಾನ್ಯಗಳ ಬೆಲೆ ಹೆಚ್ಚಾಗಿದೆ. ಎಲ್ಲರೂ ವಾಣಿಜ್ಯಬೆಳೆ ಅಡಿಕೆ ಬೆಳೆಯಲು ಪ್ರಾರಂಭಿಸಿದ್ದಾರೆ. ನೀರು ಇರುವ ಕಡೆ ಕಬ್ಬು ಬತ್ತ ಹೆಚ್ಚು ಬೆಳೆಯುತ್ತಾರೆ. ಒಟ್ಟರೆ ವಾಣಿಜ್ಯ ಬೆಳಗೆ ಜೋತು ಬಿದ್ದು, ಇತರ ಜೀವನ ಉಪಯೋಗಿ ಬೆಳೆಕಡೆ ಗಮನ ಹರಿಸುತ್ತಿಲ್ಲ. ಯುವಕರು ನಗರೀಕರಣದ ಆಕರ್ಷಣೆಗೆ ಒಳಗಾಗಿ ರೈತರ ಕೆಲಸ ಕುಂಟಿತವಾಗಿದೆ.
1945 ರಲ್ಲಿ ಹಿರೋಷಿಮ-ನಾಗಸಾಕಿ ಸುಂದರ ನಗರಗಳ ಮೇಲೆ ಅಣು ಬಾಂಬ್ ಪ್ರಯೋಗದಿಂದ ನಷಿಸಿ ಹೊಗಿದ್ದರು, ಈಗ ದೇಶಾಭಿಮಾನದಿಂದ ಸುಂದರ ದೇಶವಾಗಿ ಹೊರ ಹೊಮ್ಮಿದೆ. ಶುದ್ದ ನದಿಗಳು, ಪ್ಲಾಸ್ಟಿಕ್ ಮುಕ್ತ ಪ್ರದೇಶಗಳು, ಅತೀ ಚಿಕ್ಕ ಹೂ ಛರಿಯ ವಸಂತ ವೃತು ಆಚರಣೆ ಇಂದಿಗೂ ಮನೆ ಮಂದಿಯೆಲ್ಲ ಸೇರಿ ದೇಶವೆ ಹಬ್ಬ ಆಚರಿಸುತ್ತಾರೆ. ಗುಡ್ಡ ಕುಸಿಯದಂತೆ ತಂತಿ ಬಿಗಿದು ಸೀಮೆಂಟ್ ಕಟ್ಟೆ ಕಟ್ಟಿ ಸುಭದ್ರ ಗೊಳಿಸಿದ್ದಾರೆ. ಬುದ್ಧನ ಆಸೆಯಂತೆ ಶಾಂತಿ ಯಿಂದ ನೆಲಸಿ, ಮೌನಕ್ಕೆ ಹೆಚ್ಚು ಮಹತ್ವ ನೀಡಿ ಕಾರ್ಯಕ್ಕೆ ಹೆಚ್ಚು ಗಮನ ಹರಿಸಿ ದೇಶ ಸದೃಡ ಗೊಳಿಸಿ, ವಿಶ್ವದ ಗಮನ ಸೆಳೆದಿದ್ದಾರೆ.
ನಮ್ಮ ದೇಶಕ್ಕೆ ಇರುವ ಪ್ರಕೃತಿ ಸಂಪತ್ತು ಬೇರೆ ದೇಶಗಳಲ್ಲಿ ಇಲ್ಲ. ಅದನ್ನು ಉಳಿಸಿ ಕೊಂಡು, ಮುಂದಿನ ಪೀಳಿಗೆಗೆ ಕೊಟ್ಟರೆ ನಮ್ಮ ದೇಶ ಉನ್ನತ ಸ್ಥಾನಕ್ಕೆ ಹೋಗ ಬಹುದು ಎಂದರು.
ಬಿ.ಎಸ್.ಅಶ್ವಥ್ ಅಧ್ಯಕ್ಷತೆ ವಹಿಸಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ರೇವಣಸಿದ್ದಪ್ಪ ವಂದಿಸಿದರು. ಉಮಾದೇವಿ, ಪ್ರವೀಣ್ ಜವಳಿ, ವಾಗೇಶ್, ರಾಜಶೇಖರ್, ನರೇಶ್ ಜೈನ್ ಮುಂತಾದವರು ಇದ್ದರು.

ಪಶ್ಚಿಮ ಘಟ್ಟ ಗಳ ಕಾರ್ಯಪಡೆ ಅಧ್ಯಕ್ಷರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

0

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್‌ರವರು ಏ.20 ರಿಂದ 23ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏ. 20 ರಂದು ಮಧ್ಯಾಹ್ನ 3.00ಕ್ಕೆ ಭದ್ರಾವತಿಗೆ ಆಗಮಿಸಿ ಭದ್ರಾವತಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಮಧ್ಯಾಹ್ನ 4.00ಕ್ಕೆ ದೊಡ್ಡೆರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 6.00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಏ. 21 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಲೆಶಂಕರದಲ್ಲಿ ಮೇ ಮಾಹೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಪೂರ್ವಬಾವಿ ಸಭೆ ನಡೆಸಲಿದ್ದಾರೆ. ಸಂಜೆ 4.00ಕ್ಕೆ ಅಮ್ಮನಘಟ್ಟ ಗ್ರಾಮದಲ್ಲಿ ಗ್ರಾಮೀಣ ಜನಗಳ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಂಚ ಗ್ರಾಮದಲ್ಲಿ ಸ್ಥಳೀಯ ಜನರೊಂದಿಗೆ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಹಾಗೂ ಕಾರ್ಗಲ್ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಏ. 22 ರಂದು ಬೆಳಗ್ಗೆ ಜೋಗದ ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ, ಸಾಗರ ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.00ಕ್ಕೆ ಉ.ಕ ಸಿದ್ದಾಪುರ ತಾಲೂಕಿನ ಗೇರುಸೊಪ್ಪೆ ಗ್ರಾಮದಲ್ಲಿ ಸ್ಥಳ ವೀಕ್ಷಣೆ ಹಾಗೂ ಸ್ಥಳೀಯರೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸಂಜೆ 6.00ಕ್ಕೆ ಮುರುಡೇಶ್ವರ, ಭಟ್ಕಳದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸಂಜೆ 7.00ಕ್ಕೆ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಏ. 23 ರಂದು ಬೆಳಗ್ಗೆ 10.00ಕ್ಕೆ ಕೊಲ್ಲೂರು ಹಾಗೂ ಬೆಳಗ್ಗೆ 11.00ಕ್ಕೆ ಸಿಗಂದೂರು ತೆರೆಳಿ ಅಲ್ಲಿನ ಸ್ಥಳೀಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಕೊಡಚಾದ್ರಿ ತೆರಳಿ ಕೊಡಚಾದ್ರಿ ತೀರದ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಸಂಜೆ 4.30ಕ್ಕೆ ಚಕ್ರನಗರದ ಅರಣ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಾಸ್ಸು ತೆರಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

State Bank of India ಪೊಲೀಸ್ ಇಲಾಖೆಯವರು ಸರ್ಕಾರದಿಂದ ಎಂಓಯು ಪಡೆದ ಬ್ಯಾಂಕುಗಳ ಸೌಲಭ್ಯಗಳನ್ನ ಸದ್ಬಳಕೆ ಮಾಡಿಕೊಳ್ಳಬೇಕು- ಬಿ.ನಿಖಿಲ್

0

State Bank of India ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು.
ದಿ: 12-10-2025 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ ಹೊಂದಿದ್ದ ಎಲ್. ಚಂದ್ರಶೇಖರ್, ಆರ್‌ಹೆಚ್‌ಸಿ-60, 8ನೇ ಪಡೆ, ಕೆಎಸ್‌ಆರ್‌ಪಿ, ಶಿವಮೊಗ್ಗ ಇವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನೀಡಲಾದ ರೂ.1 ಕೋಟಿ ಪರಿಹಾರ ಚೆಕ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶನಿವಾರ 8ನೇ ಪಡೆ, ಕೆಎಸ್‌ಆರ್‌ಪಿ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಶನಿವಾರ ದಿವಂಗತ ಎಲ್ ಚಂದ್ರಶೇಖರ್‌ರವರ ಪತ್ನಿ ಶ್ರೀಮತಿ ಸುಮಲತಾ ಮತ್ತು ಅವರ ಮಕ್ಕಳಿಗೆ ರೂ.1 ಕೋಟಿ ಚೆಕ್‌ನ್ನು ವಿತರಣೆ ಮಾಡಲು ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮೃತ ಎಲ್ ಚಂದ್ರಶೇಖರ್‌ರವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಶಿವಮೊಗ್ಗ ಶಾಖೆಯಲ್ಲಿ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಖಾತೆದಾರರಾಗಿರುತ್ತಾರೆ. ಆದ್ದರಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಈ ಸೌಲಭ್ಯ ದೊರೆಯುತ್ತಿದೆ ಎಂದರು.
ಎಸ್. ಯುವಕುಮಾರ್, ಕಮಾಂಡೆಂಟ್, 8ನೇ ಪಡೆ, ಕೆಎಸ್‌ಆರ್‌ಪಿ ಶಿವಮೊಗ್ಗ ಇವರು ಮಾತನಾಡಿ, ನೌಕರರು ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಅಪಘಾತ, ದುರ್ಘಟನೆಗಳು ಸಂಭವಿಸಿದಾಗ ಕುಟುಂಬವು ಆರ್ಥಿಕ ದುಸ್ಥಿತಿಗೆ ಒಳಗಾಗದಂತೆ ತಡೆಯುವ ಸಲುವಾಗಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಿಎಂಎಸ್‌ಬಿವೈ ಮತ್ತು ಪಿಎಂಜೆಜೆಬಿವೈ ವಿಮೆ ಹಾಗೂ ಪೊಲೀಸ್ ಸ್ಯಾಲರಿ ಪ್ಯಾಕೇಜ್‌ಗೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
State Bank of India ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚಾರ್ಲರವರು ಎಲ್ ಚಂದ್ರಶೇಖರ್‌ರವರ ಪತ್ನಿ ಶ್ರೀಮತಿ ಸುಮಲತಾ ಮತ್ತು ಅವರ ಮಕ್ಕಳಿಗೆ ರೂ.1 ಕೋಟಿ ಚೆಕ್‌ನ್ನು ವಿತರಣೆ ಮಾಡಿದರು ಈ ವೇಳೆ ಎಸ್‌ಬಿಐ ನ ಪ್ರಾದೇಶಿಕ ಪ್ರಬಂಧಕರು ವಿಜಯ್ ಸಾಯಿ ಮದುಗುಲ, ಎಸ್‌ಬಿಐ(ಡಿ-ವಿಎಎಸ್)ಮುಖ್ಯ ಪ್ರಬಂಧಕರಾದ ಕೆ.ಪುಷ್ಪಲತ, ಎಸ್‌ಬಿಐ ಬಿ ಹೆಚ್ ರಸ್ತೆ ಶಾಖೆಯ ಮುಖ್ಯ ಪ್ರಬಂಧಕರಾದ ಪ್ರಕಾಶ್‌ಕುಮಾರ್, ಮತ್ತು 8ನೇ ಪಡೆಯ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಬಸ್ಸಿನಿಂದ ಇಳಿಯುತ್ತಿದ್ದ ಪ್ರಯಾಣಿಕನಿಗೆ ಕಾರು ಢಿಕ್ಕಿಯಾಗಿ ಸಾವು

0

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಮೂಗೂಡ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.

69 ವರ್ಷದ ಮೂಗೂಡ್ತಿ ನಿವಾಸಿ ಇಬ್ರಾಹಿಂ ಅವರು ರೀಪನ್ ಪೇಟೆಯಿಂದ ಮೂಗೂಡ್ತಿಗೆ ಪ್ರಯಾಣಿಸಿ , ಬಸ್ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನ ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ರಾಹಿಂ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

0

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.21 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Sri Shankaracharya Jayanti ಶಿವಮೊಗ್ಗದ ನಿವೃತ್ತ ಸಂಸ್ಕೃತ ಉಪನ್ಯಾಸಕ ಎ.ಎಸ್.ಕೃಷ್ಣಮೂರ್ತಿರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

ಶಿವಮೊಗ್ಗದಲ್ಲಿ ಸ್ಮಾರ್ಟ್ ಸೊಸೆಯಂದಿರು ಚಿತ್ರೀಕರಣ

0

ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಆಗಲಿರುವ “ಸ್ಮಾರ್ಟ್ ಸೊಸೆಯಂದಿರು” ಸರಣಿಯ ವಿಶೇಷ ಸಂಚಿಕೆಗಳನ್ನು ಏಪ್ರಿಲ್ 14ರಿಂದ 17ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಕಡೆಗೆ ಚಿತ್ರೀಕರಣ ನಡೆಸಲಾಯಿತು.

ಸ್ಮಾರ್ಟ್ ಸೊಸೆಯಂದಿರು ಕಾರ್ಯಕ್ರಮವು ಅತ್ತೆ ಮತ್ತು ಸೊಸೆ ನಡುವಿನ ಮಧುರ ಬಾಂಧವ್ಯಗಳನ್ನು ಬೆಸೆಯುವ ಒಂದು ಪ್ರಯತ್ನವಾಗಿ ರೂಪುಗೊಂಡಿದೆ. ಚಂದನ ವಾಹಿನಿಯ ತಂಡ ಮನೆ ಮನೆಗಳಿಗೆ ಭೇಟಿ ನೀಡಿ ಅತ್ತೆ ಮತ್ತು ಸೊಸೆಯಂದಿರ ನಡುವಿನ ಸಂಬಂಧಗಳ ಕುರಿತು ಮಾತುಕತೆ, ಆಟ ಹಾಗೂ ಹಾಡುಗಳೊಂದಿಗೆ ಚಿತ್ರೀಕರಣ ನಡೆಸಿದೆ.

ಸಂಚಿಕೆಯಲ್ಲಿ ಪಾಲ್ಗೊಂಡವರಿಗೆ ಅಭಿನಂದನಾ ಪತ್ರವನ್ನು ನೀಡಲಾಗುತ್ತದೆ ಎಂದು ಕಾರ್ಯಕ್ರಮದ ನಿರ್ಮಾಪಕ ಎಂ.ಜಿ.ಗೋವಿಂದರಾಜು ಮಾಹಿತಿ ನೀಡಿದರು. ಸ್ಮಾರ್ಟ್ ಸೊಸೆಯಂದಿರು ಶಿವಮೊಗ್ಗದ ವಿಶೇಷ ಸಂಚಿಕೆಗಳ ನಿರ್ಮಾಣದಲ್ಲಿ ನಿರೂಪಕರಾಗಿ ರಾಜಶೇಖರ್.ಎಚ್, ಛಾಯಾಗ್ರಾಹಕರಾಗಿ ಎಸ್.ಲೋಕಾಭಿರಾಮನ್ ಮತ್ತು ಮನೋಜ್ ಆರ್, ಧ್ವನಿಗ್ರಹಣದಲ್ಲಿ ಎಂ.ಮಾರಪ್ಪ ಮತ್ತು ಎಂ.ಬಾಲಚಂದ್ರ ಮತ್ತು ಕಾರ್ಯಕ್ರಮದ ಪರಿಕಲ್ಪನೆ ಹಾಗೂ ನಿರ್ಮಾಪಕರಾಗಿ ಎಂ.ಜಿ.ಗೋವಿಂದರಾಜು ಪಾಲ್ಗೊಂಡು ಯಶಸ್ವಿಯಾಗಿ 10 ಸಂಚಿಕೆಗಳನ್ನು ಪೂರೈಸಿದ್ದಾರೆ. ಈ ಸಂಚಿಕೆಗಳು ಶೀಘ್ರದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9.30ಕ್ಕೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.