Friday, February 20, 2026
Friday, February 20, 2026
Home Blog Page 202

Friends Center ಸರಿಯಾದ ನಿದ್ರೆ, ಬೆಳಿಗ್ಗೆ ಬೇಗ ಏಳುವುದು, ನಕ್ಕು ನಲಿವುದು ಬಾಳಿಗೆ ದಿವ್ಯೌಷಧ- ಡಾ.ಧನಂಜಯ ಸರ್ಜಿ

0

Friends Center ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು. ಸರಿಯಾದ ಜೀವನಶೈಲಿ ಉತ್ತಮ ಆರೋಗ್ಯ ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದಲ್ಲಿ ಗೋಪಾಲಗೌಡ ಬಡಾವಣೆಯ ವಿಶಾಲ್ ಮಾರ್ಟ್ ಎದುರಿನಲ್ಲಿ ಫ್ರೆಂಡ್ಸ್ ಸೆಂಟರ್ ನೇತ್ರ ಮತ್ತು ರಕ್ತ ಭಂಡಾರದಲ್ಲಿ ಸುಧೇನು ಆಯುರ್ವೇದ ಪಂಚಕರ್ಮ ಕ್ಲಿನಿಕ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಆರೋಗ್ಯ ಕಾಪಾಡಿಕೊಳ್ಳುವಲ್ಲಿ ನಿದ್ರೆಯು ಮುಖ್ಯ. ಸರಿಯಾದ ನಿದ್ರೆಯು ಔಷಧಿ. ಬೆಳಗ್ಗೆ ಬೇಗ ಏಳುವುದು ಸಹ ಔಷಧಿ. ನಗುವುದು, ಕುಟುಂಬದವರೊಂದಿಗೆ ಕುಳಿತು ಊಟ ಮಾಡುವುದು ಕೂಡ ಸಹ ಒಂದು ಔಷಧಿ. ಜೀವನಕ್ರಮದಲ್ಲಿ ಧನಾತ್ಮಕ ಬದಲಾವಣೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಫ್ರೆಂಡ್ಸ್ ಸೆಂಟರ್ 58 ವರ್ಷಗಳಿಂದ ಸೇವಾ ಮನೋಭಾವನೆಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ರಕ್ತದಾನ ಮತ್ತು ನೇತ್ರದಾನಗಳ ಮಹತ್ವದ ಅರಿವು ಮೂಡಿಸುವ ಕೆಲಸ ಒಳ್ಳೆಯದು. ಒಮ್ಮೆ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೇಳಿದರು.

ವರ್ಷದಲ್ಲಿ ಸಾವಿರಾರು ಜನರು ವಿವಿಧ ಅಂಗಾಂಗಳ ವೈಫಲ್ಯದಿಂದ ಸಾಯುತ್ತಿದ್ದಾರೆ. ಅವರಿಗೆ ಅಂಗಾಂಗ ದಾನ ಸಿಗುವುದರಿಂದ ಎಷ್ಟೋ ಜನರ ಜೀವ ಉಳಿಸಬಹುದು. ಅಂಗಾಂಗ ದಾನ ಮಾಡುವುದರಿಂದ 7 ಜನರ ಜೀವ ಉಳಿಸಬಹುದು ಎಂದು ಹೇಳಿದರು.

Friends Center ಆಯುರ್ವೇದವು ಭಾರತ ದೇಶ ಪ್ರಪಂಚಕ್ಕೆ ನೀಡಿದ ವಿಶೇಷವಾದ ಜ್ಞಾನ ಆಗಿದ್ದು, ಆಯುರ್ವೇದ ಮತ್ತು ಆಲೋಪತಿ ಸೇರಿ ಎಲ್ಲ ಪದ್ಧತಿಯ ಉದ್ದೇಶವು ರೋಗಿಗಳ ಆರೋಗ್ಯ ಕಾಪಾಡುವುದೇ ಆಗಿದೆ ಎಂದು ತಿಳಿಸಿದರು.

ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ ಸೆಂಟರ್ ನೇತ್ರ ಮತ್ತು ಭಂಡಾರ ಅಧ್ಯಕ್ಷ ವಿ.ನಾಗರಾಜ್, ವೈದ್ಯರಾದ ಡಾ. ಎಂ.ಗಿರೀಶ್‌ಬಾಬು, ಡಾ. ಅಶೋಕ್‌ಕುಮಾರ್, ಡಾ. ಪಲ್ಲವಿ ಕೆ.ಜಿ., ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಎಸ್.ದತ್ತಾತ್ರಿ, ಸ್ವಪ್ನಾ ಬದ್ರಿನಾಥ್, ಎಂ.ಎನ್.ವೆಂಕಟೇಶ್, ಯು.ರವೀಂದ್ರನಾಥ್.ಐತಾಳ್, ಎಲ್.ಎಂ.ಮೋಹನ್, ರಾಜೇಶ್ ಉಪಸ್ಥಿತರಿದ್ದರು.

Bhadra Wildlife Sanctuary ಸಕ್ರೆಬೈಲ್ ಸುತ್ತಮುತ್ತ ಕಾಡಾನೆ ದಾಂಧಲೆ, ರೈತರಿಗೆ ಬೆಳೆ ನಷ್ಟ ಆತಂಕ

0

Bhadra Wildlife Sanctuary ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು ಹಾಗೂ ಬಾಳೆಗಿಡಗಳನ್ನು ನಾಶ ಮಾಡಿದೆ. ಆನೆಯ ಓಡಾಟವನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾರ್ವಜನಿಕರು ಅದನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಕ್ಯಾರೇ ಮಾಡದ ಒಂಟಿ ಸಲಗ ತೋಟದಲ್ಲಿ ಸಿಕ್ಕ ವಸ್ತುಗಳನ್ನು ತಿನ್ನುತ್ತಾ ನದಿಯಲ್ಲಿ ಈಜುತ್ತಾ ಆನೆ ನಡೆದಿದ್ದೇ ದಾರಿ ಎಂಬಂತೆ ಓಡಾಡುತ್ತಿದೆ.
Bhadra Wildlife Sanctuary ಈ ಹಿಂದೆಯೂ ಸಹ ಅನೇಕ ಕಾಡಾನೆಗಳು ಭದ್ರಾ ಅಭಯಾರಣ್ಯದಿಂದ ನದಿ ದಾಟಿ ಈಚೆಗೆ ಬಂದಿದ್ದವು. ಕಳೆದ ತಿಂಗಳು ಸಹ ಸಕಲೇಶ್​ಪುರದಿಂದ ರೇಡಿಯೋ ಕಾಲರ್​ ಆನೆಯೊಂದು ಬಂದಿತ್ತು, ನಂತರ ಸಕ್ರೆಬೈಲ್​ನ ಕುಮ್ಕಿ ಆನೆಗಳ ಸಹಾಯದಿಂದ ಅದನ್ನು ಸೆರೆಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆ ಪ್ರತ್ಯಕ್ಷವಾಗಿದ್ದು, ರೈತರಿಗೆ ಸಂಕಟವಾಗಿ ಪರಿಣಮಿಸಿದೆ. ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ದೇಶದಲ್ಲಿ ವಾರ್ಷಿಕವಾಗಿ ಸರಾಸರಿ ಅರವತ್ತು ಸಾವಿರ ನೇತ್ರದಾನ ಪ್ರಕರಣಗಳು ದಾಖಲಾಗಿವೆ – ಡಾ.ಎಚ್.ಬಿ.ಮಂಜುನಾಥ್

0

ಮಧ್ಯಂತರ ಅಂಧತ್ವದಿಂದ ಬಳಲುತ್ತಿರುವ ಲಕ್ಷಾಂತರ ಮಂದಿಯ ಪುನರ್ ದೃಷ್ಟಿಗೆ ನೇತ್ರದಾನಿಗಳ ಅವಶ್ಯವಿದ್ದು ನಿವೃತ್ತ ನೇತ್ರ ಪರೀಕ್ಷಕರು ನೇತ್ರದಾನಕ್ಕೆ ಜನರನ್ನು ಪ್ರೇರೇಪಿಸುವ ಸೇವಾ ಕಾರ್ಯವನ್ನು ಮಾಡಬೇಕು ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಕರೆ ಕೊಟ್ಟರು. ಅವರಿಂದು ಕರ್ನಾಟಕ ನಿವೃತ್ತ ನೇತ್ರ ಪರೀಕ್ಷಕರ ಪ್ರಥಮ ರಾಜ್ಯಮಟ್ಟದ ಸ್ನೇಹಕೂಟದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ದೇಶದಲ್ಲಿ ವಾರ್ಷಿಕ ಸುಮಾರು ಒಂದು ಲಕ್ಷ ಮಂದಿ ಮಧ್ಯಂತರ ಅಂಧತ್ವದವರಿಗೆ ನೇತ್ರ ಕಸಿಗಾಗಿ ಸುಮಾರು ಎರಡು ಲಕ್ಷ ಎಪ್ಪತ್ತು ಸಾವಿರ ನೇತ್ರಗಳ ಅವಶ್ಯಕತೆ ಇದ್ದು ವಾರ್ಷಿಕ ನಮ್ಮ ದೇಶದಲ್ಲಿ ಸುಮಾರು 56 ಸಾವಿರದಿಂದ 66 ಸಾವಿರ ಮಾತ್ರ ನೇತ್ರದಾನಗಳು ನಡೆಯುತ್ತಿದ್ದು ಮರಣಾ ನಂತರ ಮಣ್ಣಲ್ಲಿ ಮಣ್ಣಾಗುವ ಬೆಂಕಿಯಲ್ಲಿ ಬೂದಿಯಾಗುವ ಮುನ್ನ ಮೃತರ ನೇತ್ರಗಳನ್ನು ಸೂಕ್ತ ಸಮಯದ ಒಳಗೆ ದಾನ ಮಾಡುವಂತೆ ಸಮಾಜದಲ್ಲಿ ಜಾಗೃತಿ ಉಂಟಾಗಬೇಕಿದೆ. ಕಣ್ಣಿನ ತೊಂದರೆಗೆ ಕಾರಣವಾಗುವ ಅನ್ನಾಂಗಗಳ ಕೊರತೆ ಬಗ್ಗೆ ಸಮಾಜಕ್ಕೆ ತಿಳಿಸಬೇಕಾಗಿದೆ ಅಲ್ಲದೆ ಶಾಲಾ ಮಕ್ಕಳನ್ನು ಪ್ರಾಥಮಿಕ ಹಂತದಲ್ಲೇ ನೇತ್ರ ಪರೀಕ್ಷೆಗೆ ಒಳಪಡಿಸಿದಲ್ಲಿ ಮುಂದೆ ಉಂಟಾಗಬಹುದಾದ ಕಣ್ಣಿನ ತೊಂದರೆಗಳು ಈಗಲೇ ತಡೆಯಬಹುದಾಗಿದ್ದು ಈ ನಿಟ್ಟಿನಲ್ಲೂ ನಿವೃತ್ತ ನೇತ್ರ ಪರೀಕ್ಷಕರು ಸ್ವಯಂ ಪ್ರೇರಣೆಯಿಂದ ಜನಜಾಗೃತಿ ಮೂಡಿಸುವ ಕೆಲಸಗಳನ್ನು ವೈಯಕ್ತಿಕವಾಗಿ ಹಾಗೂ ಸಾಂಘಿಕವಾಗಿ ಮಾಡಬೇಕು ಎಂದು ಎಚ್ ಬಿ ಮಂಜುನಾಥ್ ಹೇಳಿದರು . ನಿವೃತ್ತ ನೇತ್ರ ತಜ್ಞ ಡಾ.ಎ ಬಿ ಕಾಕಡೆ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ನೇತ್ರ ತಜ್ಞ ಡಾ. ಎಸ್ ಎಸ್ ಕೊಳಕೂರ್ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ ಹೆಚ್ ಎಂ ವೀರಯ್ಯ ಮುಂತಾದವರು ಮುಖ್ಯ ಅತಿಥಿಗಳಾಗಿದ್ದು ಕಾರ್ಯಕ್ರಮದ ನಿರೂಪಣೆಯನ್ನು ನಿವೃತ್ತ ನೇತ್ರಾಧಿಕಾರಿ ಪ್ರಕಾಶ್ ಸವದತ್ತಿ ಮಾಡಿದರು.ರಂಗನಾಥ ಸ್ವಾಗತ ಕೋರಿದರು. ನಿವೃತ್ತ ನೌಕರರ ಮಿನಿ ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಿತು.

CM Siddaramaiah ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಅನುಸೂಚಿತ ಜಾತಿ/ ಪಂಗಡ ಅಭಿವೃದ್ಧಿ ಪರಿಷತ್ತಿನ ಸಭೆ

0

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು.

CM Siddaramaiah ಈ‌ ಸಭೆಯಲ್ಲಿ, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Appu Chess Association ಅಂತರ ಜಿಲ್ಲಾ ಚೆಸ್ ಪಂದ್ಯಾವಳಿ ಶಿವಮೊಗ್ಗದ ಚಿರಂತನ್ ಮೊದಲ ಸ್ಥಾನ

0

Appu Chess Association ಅಪ್ಪು ಚೆಸ್ ಅಸೋಸಿಯಷನ್ ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಿದ್ದ ಅಂತರ್ ಜಿಲ್ಲಾ ರ್ಯಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಶಿವಮೊಗ್ಗದ ಚಿರಂತ್ ಎಂ.ಡಿ ಗೆಲುವು ಸಾಧಿಸಿದ್ದಾರೆ. ಒಟ್ಟು ಎಂಟು ಸುತ್ತುಗಳ ಪಂದ್ಯದಲ್ಲಿ 7.5 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನವನ್ನು ಚಿರಂತ್ ತಮ್ಮದಾಗಿಸಿಕೊಂಡಿದ್ದಾರೆ. ನಗದು ಬಹುಮಾನ ಹಾಗೂ ಟೂರ್ನಮೆಂಟ್ ವಿನ್ನರ್ ಎಂಬ ಬಿರುದು ಪಡೆದಿದ್ದಾರೆ. Appu Chess Association ಈ ಟೂರ್ನಮೆಂಟ್ ನಲ್ಲಿ 200ಕ್ಕೂ ಅಧಿಕ ಮಂದಿ ಆಟಗಾರರು ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದರು. ನಿವೃತ್ತ ಬ್ಯಾಂಕ್ ಉದ್ಯೋಗಿ ದೀಪಕ್ ಎಂ.ಎಸ್ ಹಾಗೂ ಸುಧಾ ದಂಪತಿ ಪುತ್ರ ಚಿರಂತ್, ಸದ್ಯ ವಿನೋಬನಗರದ ನಿವಾಸಿಯಾಗಿದ್ದಾರೆ.

Krishna Janmashtami ಕಲ್ಪತರು ಶ್ರೀಚೌಡೇಶ್ವರಿ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

0

Krishna Janmashtami ಶಿವಮೊಗ್ಗ ಹೊಸಮನೆ ಬಡಾವಣೆಯ ಪ್ರಸಿದ್ಧ ಕಲ್ಪತರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ರಾಧಾ ಕೃಷ್ಣರ ವೇಷಭೂಷಣ ಸ್ಪರ್ಧೆ ಜರುಗಿತು. ತಾಯ್ತಂದೆಯರು ಮಕ್ಕಳಿಗೆ ಭಕ್ತಿಯಿಂದ ವೇಷಭೂಷಣ ಮಾಡಿಸಿ ಕಳುಹಿಸಿದ್ದು, ಪುಟಾಣಿಗಳ ಕಲೆ-ಭಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಉತ್ತಮ ವೇಷಭೂಷಣ ತೊಟ್ಟ ನಾಲ್ವರು ಮಕ್ಕಳಿಗೆ ಬಹುಮಾನ ನೀಡಿ, ಎಲ್ಲರಿಗೂ ನೀತಿಕಥೆ ಪುಸ್ತಕ, ಬರವಣಿಗೆಯ ಪುಸ್ತಕ, ಪೆನ್ಸಿಲ್, ರಬ್ಬರ್ ಮತ್ತು ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಶ್ರೀ ವಿಶ್ವನಾಥ ನಾಯಕ ಅವರು ಬಹುಮಾನ ವಿತರಿಸಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀ ಸಿ.ಎನ್. ಮಲ್ಲೇಶ್ ಅವರು ಶ್ರೀಕೃಷ್ಣ ಶ್ಲೋಕಗಳನ್ನು ಹೇಳಿ ಪುಟಾಣಿಗಳನ್ನು ಪ್ರೇರೇಪಿಸಿದರು.
ಪುರೋಹಿತರಾದ ಶ್ರೀ ಸಂತೋಷ್ ಭಟ್ ಅವರು ಕೃಷ್ಣ ಮಹಿಮೆಯ ಸುಂದರವಾದ ಗೀತೆ ಹಾಡಿ ಮಕ್ಕಳಿಗೆ ಸಂತೋಷ ತುಂಬಿದರು.

Krishna Janmashtami ಕಾರ್ಯಕಾರಿ ಸಮಿತಿಯ ಸದಸ್ಯರು ಮಕ್ಕಳಿಗೆ ಪ್ರೋತ್ಸಾಹ ನೀಡಿದರು. ಕೊನೆಯಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ದೇವಾಲಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಲಾಯಿತು.

Innerwheel Club Shivamogga ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರೋಟರಿ ಸೇವೆ ಸಲ್ಲಿಸುತ್ತಿದೆ- ಲತಾ.ಎಂ.ರಮೇಶ್

0

Innerwheel Club Shivamogga ಸಮಾಜಮುಖಿ ಕಾರ್ಯಗಳಲ್ಲಿ ನಮ್ಮ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಅಧ್ಯಕ್ಷೆ ಲತಾ ಎಂ ರಮೇಶ್ ಹೇಳಿದರು.

ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ವತಿಯಿಂದ ವಿಶ್ವ ಹಿರಿಯರ ನಾಗರಿಕರ ದಿನಾಚರಣೆ ಪ್ರಯುಕ್ತ ಹಾಗೂ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಹಿರಿಯ ನಾಗರಿಕರೊಂದಿಗೆ ಸುಂದರ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣ, ಆರೋಗ್ಯ ಸೇರಿದಂತೆ ವೈವಿಧ್ಯ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಶಾಲಾ ಮಕ್ಕಳಿಗೆ ನೆರವು, ಶಾಲೆಗಳಿಗೆ ಮೂಲಸೌಕರ್ಯ, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ತಪಾಸಣಾ ಶಿಬಿರ ಹಮ್ಮಿಕೊಳ್ಳುತ್ತಿದೆ. ಸೇವಾ ಆಶಯದಿಂದ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ರೋಟರಿ ಕ್ಲಬ್ ನಿಂದ “ಆಚಾರ್ಯ ದೇವೋಭವ” ಪ್ರಶಸ್ತಿ ಗಳಿಸಿದ ಇಂದಿರಾ ಮೂರ್ತಿ ಅವರು ಶಾರದೆ, ಕೃಷ್ಣ, ರಾಮನ ಹಾಡುಗಳನ್ನು ವೀಣೆ ನುಡಿಸುವುದರ ಮೂಲಕ ಸುಲಲಿತವಾಗಿ ಹಾಡನ್ನು ಹಾಡಿ ಎಲ್ಲರ ಮನ ಗೆದ್ದರು. ಮಾಧವ ಆಚಾರ್ಯರು ಗೋವರ್ಧನ ಗೋ ಸಂರಕ್ಷಣಾ ಸಂಸ್ಥೆ ಪರವಾಗಿ ಕೃಷ್ಣನಿಗೆ ಪ್ರಿಯವಾದ “ಗೋವಿನ ಸಂರಕ್ಷಣೆ” ನಮ್ಮೆಲ್ಲರ ಕರ್ತವ್ಯ ಎಂದರು.

Innerwheel Club Shivamogga ಶ್ರೀ ರಂಜಿನಿ ದತ್ತಾತ್ರಿ ಎಲ್ಲರನ್ನು ಸ್ವಾಗತಿಸಿದರು. ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಕಾರ್ಯದರ್ಶಿ ಶ್ರುತಿ ರಾಕೇಶ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ದತ್ತಾತ್ರಿ, ಕೀರ್ತನಾ, ಸುಧಾ ಮಾಧವಚಾರ್ಯ, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಎನ್.ಜಿ.ಉಷಾರವರು ಉಪಸ್ಥಿತರಿದ್ದರು. ಶ್ರೀ ರಂಜಿನಿ ದತ್ತಾತ್ರಿ ಅವರು ಹಲವಾರು ಭಜನೆಗಳನ್ನು ಅವರೊಂದಿಗೆ ಹಾಡಿ ಸಂಭ್ರಮಿಸಿದರು.

Chamber of commerce ದೇಶ ಭಕ್ತಿಗೀತೆಗಳು ನಮ್ಮ ಸಂಸ್ಕೃತಿಯ ಮಹತ್ವ ಮತ್ತು ಅರಿವು ಮೂಡಿಸುತ್ತವೆ – ಎನ್. ಗೋಪಿನಾಥ್

0

Chamber of commerce Shivamogga ದೇಶಭಕ್ತಿ ಗೀತೆಗಳು ನಮ್ಮ ಸಂಸ್ಕೃತಿಯ ಮಹತ್ವ ಅರಿವು ಮೂಡಿಸುವ ಜತೆಯಲ್ಲಿ ರಾಷ್ಟ್ರ ಭಕ್ತಿ ಜಾಗೃತಗೊಳಿಸುತ್ತದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ ಗೌರವಾಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಎಸ್ ಆರ್ ಕೆ ಕರೋಕೆ ತಂಡ ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ದೇಶಭಕ್ತಿ ಗೀತೆಗಳ ನಾಡು ನುಡಿ ಬಿಂಬಿಸುವ ಗಾಯನ ಸ್ಪರ್ಧೆ ಹಾಗೂ ರಾಷ್ಟ್ರಭಕ್ತರ ವೇಷಭೂಷಣ ನೃತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಸ್ವಾತಂತ್ರ್ಯೋತ್ಸವವನ್ನು ಹಲವರು ಹಲವು ವಿಧದಲ್ಲಿ ಆಚರಿಸುತ್ತಾರೆ. ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಆಚರಿಸುತ್ತಿರುವುದು ಶ್ಲಾಘನೀಯ. ಇದೊಂದು ಒಳ್ಳೆಯ ಪರಿಪಾಠ ತೋರಿಸುತ್ತವೆ ಎಂದು ತಿಳಿಸಿದರು.
ರೋಟರಿಯ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಭಾರತ ಇಂದು ಜಗತ್ತಿನ ಮೂರನೆಯ ಆರ್ಥಿಕತೆಯಾಗುವತ್ತ ಸಾಗುತ್ತಿದೆ. ದೇಶಭಕ್ತಿಯ ಭಾವನೆಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದು ದೇಶಭಕ್ತಿ ಮೂಡಿಸುವ ಕಾರ್ಯ ಮಾಡುತ್ತದೆ ಎಂದು ನುಡಿದರು.
Chamber of commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಸಂಗೀತ ಭಾವಗಳ ಅಭಿವ್ಯಕ್ತಿಯ ಮಾಧ್ಯಮ. ಎಲ್ಲಾ ಭಾವಗಳನ್ನು ಹೃದಯಗಳಿಗೆ ಮುಟ್ಟಿಸುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಖಜಾಂಚಿ ಜಿ ವಿಜಯಕುಮಾರ್ ಮಾತನಾಡಿ, ಸಂಗೀತ ನಮ್ಮ ಭಾವನೆಗಳನ್ನು ಹಾಗೂ ನಮ್ಮ ಸಂತೋಷವನ್ನು ಇಮ್ಮಡಿಗೊಳಿಸುತ್ತದೆ. ಇಂತಹ ಕಾರ್ಯಕ್ರಮಗಳಿಂದ ಜೀವನೋತ್ಸಾಹ ಮತ್ತು ದೇಶಭಕ್ತಿ ಹೆಚ್ಚುತ್ತದೆ. ಆಗಾಗ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಧ್ವನಿ ಸಂಸ್ಕರಣವಾಗುತ್ತದೆ ಮತ್ತು ನಮ್ಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಮಥುರಾ ನಾಗರಾಜ ಅವರು ತಮ್ಮ ಸಾರಥ್ಯದಲ್ಲಿ ಹಲವಾರು ಪ್ರತಿಭೆಗಳಿಗೆ ಅವಕಾಶಗಳನ್ನು ಕಲ್ಪಿಸಿ ಕೊಡುವುದರ ಮುಖಾಂತರ ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸುತ್ತಾರೆ ಎಂದರು.
ಮಥುರಾ ನಾಗರಾಜ್, ಯೇಸುದಾಸ್, ಕೇಶವಸ್ವಾಮಿ, ರೇಖಾ ಸತೀಶ್, ರೂಪಾ, ಎಸ್ ಎಸ್ ಕರೋಕೆ ತಂಡದ ಪದಾಧಿಕಾರಿಗಳು ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 50ಕ್ಕೂ ಹೆಚ್ಚು ಕಲಾವಿದರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮಿಸಿದರು.

Haranahalli Government Higher Primary School ಹಾರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಇಂಗ್ಲಿಷ್ ಮಾಧ್ಯಮ ತರಗತಿ ಉದ್ಘಾಟನೆ

0

Haranahalli Government Higher Primary School ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 79ನೇ ಸ್ವತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುವುದರ ಮೂಲಕ “ಇಂಗ್ಲಿಷ್ ಮಾಧ್ಯಮ” ಶಾಲೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಷಣ್ಮುಖಪ್ಪ ಮತ್ತು ಸದಸ್ಯರಾದ ಸುಕನ್ಯಾ, ಜೈಶೀಲ, ಶಾಲೆಯ ಹಳೆಯ ವಿದ್ಯಾರ್ಥಿ ಚೇತನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ರೂಪಾಲೇಖನ, ಸಹ ಶಿಕ್ಷಕರಾದ ಕುಸುಮ ದೊಡ್ಡಮನಿ, ಎಸ್. ವಿ. ವೀಣಾರಾಣಿ, ದೀಪಾ ಮಾಳಗಿ, ಅನಿತಾ, ಗೋಪಿನಾಥ್, ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಅಡಿಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Institute of Science Technology Research and Arts Progress ಇಸ್ರೋ ಬಾಹ್ಯಾಕಾಶ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳ ಆಸಕ್ತಿ‌ ಮೂಡಿಸಲು ಕೃಷಿ ವಿವಿಯಿಂದ ಅನ್ವೇಷಣೋತ್ಸವ-2025

0

Institute of Science Technology Research and Arts Progress ವಿಜ್ಞಾನ ತಂತ್ರಜ್ಞಾನ ಸಂಶೋಧನೆ ಮತ್ತು ಕಲಾ ಪ್ರಗತಿ ಸಂಸ್ಥೆ (SASTRA) ಹಾಗು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ(KSSRC) ವತಿಯಿಂದ ಕೆಳದಿ ಶಿವಪ್ಪ ನಾಯಕ ಕೃಷಿ ತೋಟಗಾರಿಗೆ ವಿಜ್ಞಾನಗಳ ವಿಶ್ವವಿದ್ಯಾಲಯ (KSNUAHS), ಶಿವಮೊಗ್ಗ ಇವರ ಸಹಯೋಗದಲ್ಲಿ ಐದು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ – ಅನ್ವೇಷಣೋತ್ಸವ2025 ಕಾರ್ಯಕ್ರಮ ನಡೆಸಲಾಗುತ್ತಿದೆ. ದಿನಾಂಕ 18-08-2025 ರಿಂದ 22-8-2025 ರವರೆಗೆ ದೇಶದ ವಿವಿಧ ಸರ್ಕಾರಿ ಹಾಗು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.

ಇಸ್ರೋ ನಡೆಸುವ ಸ್ಪೇಸ್ ಆನ್ ವೀಲ್ಸ್ (Space on Wheels) ಈ ಪ್ರದರ್ಶನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಬಾಹ್ಯಾಕಾಶ ವಿಜ್ಞಾನ ಹಾಗೂ ತಂತ್ರಜ್ಞಾನಗಳ ಬಗ್ಗೆ ಕುತೂಹಲ ಮೂಡಿಸಲು ರೂಪುಗೊಂಡಿದೆ. ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿ ವಿಜ್ಞಾನ ಕಂಪು ಪಸರಿಸುವ ಉದ್ದೇಶವಾಗಿದೆ.

ಇಸ್ರೋ ಕಾರ್ಯಕ್ರಮದ ವೈಶಿಷ್ಟ್ಯಗಳು:
• ಉಪಗ್ರಹಗಳ ಮಾದರಿ ಪ್ರದರ್ಶನ (INSAT, ಚಂದ್ರಯಾನ, ಮಂಗಳಯಾನ ಇತ್ಯಾದಿ)
• ಉಡಾವಣಾ ವಾಹನಗಳ ಮಾದರಿ (PSLV, GSLV ಇತ್ಯಾದಿ)
• ಬಾಹ್ಯಾಕಾಶ ನೌಕೆಗಳ ಚಿತ್ರ-ಮಾದರಿಗಳು
• ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪೋಸ್ಟರ್ ಹಾಗೂ ಮಾಹಿತಿ ಫಲಕಗಳು
• ಆಡಿಯೋ-ವಿಜುವಲ್ ಪ್ರದರ್ಶನಗಳು
• ವಿದ್ಯಾರ್ಥಿಗಳೊಂದಿಗೆ ಸಂವಾದ (ಇಸ್ರೋ ವಿಜ್ಞಾನಿಗಳಿಂದ)

ವಿ.ಐ.ಟಿ.ಎಂ – ಸೈನ್ಸ್ ಆನ್ ವೀಲ್ಸ್
ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನ ಸಂಗ್ರಹಾಲಯ (Visvesvaraya Industrial & Technological Museum – VITM) ನಡೆಸುವ “ಸೈನ್ಸ್ ಆನ್ ವೀಲ್ಸ್” (Museum on Wheels) ಮೊಬೈಲ್ ಪ್ರದರ್ಶನವು ಗ್ರಾಮಾಂತರ ಹಾಗೂ ಅರೆ-ನಗರ ಪ್ರದೇಶಗಳ ಜನತೆಗೆ ವಿಜ್ಞಾನ ತಲುಪಿಸುವ ವಿಶಿಷ್ಟ ಯೋಜನೆಯಾಗಿದೆ.

ಈ ಬಸ್‌ನಲ್ಲಿ 24 ವೈಜ್ಞಾನಿಕ ಪ್ರದರ್ಶನ ವಸ್ತುಗಳು ಅಳವಡಿಸಲ್ಪಟ್ಟಿದ್ದು, ಜನರು ತಮ್ಮ ಊರನ್ನು ಬಿಟ್ಟುಕೊಳ್ಳದೆ ವಿಜ್ಞಾನವನ್ನು ಅನುಭವಿಸಲು ಅವಕಾಶ ದೊರೆಯುತ್ತದೆ.

VITM ಕಾರ್ಯಕ್ರಮದ ವೈಶಿಷ್ಟ್ಯಗಳು:
• ಬಸ್‌ನಲ್ಲಿ ಅಳವಡಿಸಿದ 24 ವಿಜ್ಞಾನ ಪ್ರದರ್ಶನ ವಸ್ತುಗಳು
• ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರಾಯೋಗಿಕ ಮಾದರಿಗಳು
• ಪ್ರದರ್ಶನ + ವಿವರಣೆ ಮೂಲಕ ಸರಳವಾಗಿ ವಿಜ್ಞಾನ ಪರಿಚಯ
• ವಿದ್ಯಾರ್ಥಿಗಳಿಗೆ ಹಸ್ತಪ್ರಯೋಗ (hands on learning) ಕಲಿಕೆಯ ಅನುಭವ.

ಉದ್ದೇಶಗಳು:
• ಪ್ರಾಯೋಗಿಕ ಕಲಿಕೆಯಿಂದ ವಿಜ್ಞಾನ ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ಮಾಡುವುದು.

Institute of Science Technology Research and Arts Progress ಡಿಆರ್‌ಡಿಓ (Defence Research and Development Organisation)
ತನ್ನ ತಂತ್ರಜ್ಞಾನ ಸಾಧನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ವಿವಿಧ ಜನಸಂಪರ್ಕ (Outreach) ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಇವುಗಳ ಮೂಲಕ ದೇಶದ ರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ವಿಜ್ಞಾನ-ತಂತ್ರಜ್ಞಾನ ಆವಿಷ್ಕಾರಗಳನ್ನು ಜನಸಾಮಾನ್ಯರಿಗೂ ತಲುಪಿಸಲಾಗುತ್ತದೆ.

DRDO ಕಾರ್ಯಕ್ರಮದ ವೈಶಿಷ್ಟ್ಯಗಳು:
• ಪ್ರದರ್ಶನಗಳು – ಡಿಆರ್‌ಡಿಓ ಅಭಿವೃದ್ಧಿಪಡಿಸಿದ ಶಸ್ತ್ರಾಸ್ತ್ರ, ರಕ್ಷಣಾ ತಂತ್ರಜ್ಞಾನ, ರೋಬೋಟಿಕ್ಸ್, ರಾಡಾರ್, ಡ್ರೋನ್‌ಗಳು ಇತ್ಯಾದಿ
• ವಿದ್ಯಾರ್ಥಿ ಕಾರ್ಯಾಗಾರಗಳು – ವಿಜ್ಞಾನ-ತಂತ್ರಜ್ಞಾನದಲ್ಲಿ ವೃತ್ತಿ ರೂಪಿಸಲು ಪ್ರೇರಣೆ ನೀಡುವುದು
• ವೀಡಿಯೊ / ಚಲನಚಿತ್ರ ಪ್ರದರ್ಶನ – ಉದಾಹರಣೆಗೆ ಮಿಷನ್ ಶಕ್ತಿ ಕುರಿತ ಮಕ್ಕಳಿಗಾಗಿ ಡಾಕ್ಯುಮೆಂಟರಿ ತಯಾರಿಸಲಾಗಿತ್ತು, ಇದರಲ್ಲಿ ಡಿಆರ್‌ಡಿಓ ಸಾಮರ್ಥ್ಯಗಳನ್ನು ಸರಳವಾಗಿ ವಿವರಿಸಲಾಗಿದೆ
• ವಿಜ್ಞಾನಿಗಳೊಂದಿಗೆ ಸಂವಾದ – ವಿದ್ಯಾರ್ಥಿಗಳಿಗೆ ನೇರ ಪ್ರೇರಣೆ ಮತ್ತು ಮಾರ್ಗದರ್ಶನ.

ಪ್ಲಾಸ್ಮಾ ಸಂಶೋಧನಾ ಸಂಸ್ಥೆ (IPR)
ಪ್ಲಾಸ್ಮಾ ಮತ್ತು ಫ್ಯೂಷನ್ ತಂತ್ರಜ್ಞಾನ ಜನರಿಗೆ ಹತ್ತಿರ
ಪ್ಲಾಸ್ಮಾ ಸಂಶೋಧನಾ ಸಂಸ್ಥೆ (Institute for Plasma Research – IPR), ಗಾಂಧಿನಗರ, ಗುಜರಾತ್
ಇದು ಭಾರತ ಸರ್ಕಾರದ ಅಣುಶಕ್ತಿ ಇಲಾಖೆಯ (DAE) ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಂಶೋಧನಾ ಸಂಸ್ಥೆಯಾಗಿದ್ದು, ಪ್ಲಾಸ್ಮಾ ಮತ್ತು ಫ್ಯೂಷನ್ ವಿಜ್ಞಾನದಲ್ಲಿ ದೇಶದ ಮುಂಚೂಣಿಯ ಸಂಸ್ಥೆ.

ಪ್ರದರ್ಶನದ ವೈಶಿಷ್ಟ್ಯಗಳು:
• ಪ್ಲಾಸ್ಮಾದ ಜೀವಂತ ಪ್ರದರ್ಶನಗಳು – ವಿವಿಧ ಬಗೆಯ ಪ್ಲಾಸ್ಮಾ ಮತ್ತು ಅವುಗಳ ಪ್ರಾಯೋಗಿಕ ಉಪಯೋಗಗಳು
• ತ್ಯಾಜ್ಯ ನಿರ್ವಹಣೆ (Waste Management)
• ವಸ್ತ್ರೋದ್ಯಮ (Textile Industry)
• ವೈದ್ಯಕೀಯ ಕ್ಷೇತ್ರ (Medical Applications)
• ಫ್ಯೂಷನ್ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರದರ್ಶನಗಳು
• ಟೋಕಮಾಕ್ (Tokamak) ಮಾದರಿ ಮತ್ತು ಅದರ ಪ್ಲಾಸ್ಮಾ ಬಂಧನ ಕಾಯಿಲ್‌ಗಳು
• ಐಟರ್ (ITER) ಯೋಜನೆಯ ಸ್ಕೇಲ್ ಮಾದರಿ
• ಕ್ರಯೊ-ಪಂಪ್ (Cryo-pump) ಹಾಗೂ ಅದರ ಉಪಯೋಗಗಳು
• ಪೋಸ್ಟರ್‌ಗಳು ಮತ್ತು ಮಾಹಿತಿ ಫಲಕಗಳು – ಪ್ಲಾಸ್ಮಾ ತಂತ್ರಜ್ಞಾನದ ಸಂಶೋಧನೆ ಮತ್ತು ಅದರ ಭವಿಷ್ಯ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ವಿಶೇಷ
• ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪ್ಲಾಸ್ಮಾ ಮತ್ತು ಫ್ಯೂಷನ್ ವಿಜ್ಞಾನದಲ್ಲಿ ಜ್ಞಾನ ವೃದ್ಧಿ
• ವಿಜ್ಞಾನ ಪ್ರೇಮಿಗಳಿಗೆ ಹೊಸ ತಂತ್ರಜ್ಞಾನಗಳ ಪರಿಚಯ
• ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿ ರೂಪಿಸಲು ಪ್ರೇರಣೆ ಮತ್ತು ಮಾರ್ಗದರ್ಶನ.

ಭಾರತ ಡೊಮ್ ಇನೋವೇಶನ್ಸ್ ರವರ ಮೊಬೈಲ್ ಪ್ಲಾನೆಟೋರಿಯಂ ಮತ್ತು ಟೆಲಿಸ್ಕೋಪ್ (Bharath Dome Innovation’s Planetarium & Telescope) ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಸಂಪೂರ್ಣ ಡೋಮ್ (Full-dome) ಶೋಗಳು ಮೂಲಕ ಬಾಹ್ಯಾಕಾಶದ ಅದ್ಭುತ ಜಗತ್ತನ್ನು ಪರಿಚಯಿಸುತ್ತದೆ. ಇದು ಶಾಲೆಗಳು, ಕಾಲೇಜುಗಳು ಹಾಗೂ ಸಮುದಾಯ ಕೇಂದ್ರಗಳಿಗೆ ತೆರಳಿ ಜ್ಯೋತಿಶಾಸ್ತ್ರ ಮತ್ತು ಬಾಹ್ಯಾಕಾಶ ವಿಜ್ಞಾನವನ್ನು ನೇರವಾಗಿ ತಲುಪಿಸುತ್ತದೆ.

ಭಾರತ್ ಡೊಮ್ ಕಾರ್ಯಕ್ರಮದ ವೈಶಿಷ್ಟ್ಯಗಳು:
• ನಕ್ಷತ್ರಗಳು, ಗ್ರಹಗಳು, ಆಕಾಶಗಂಗೆಗಳು ಮತ್ತು ಬಾಹ್ಯಾಕಾಶ ಮಿಷನ್‌ಗಳ ಬಗ್ಗೆ ಡೋಮ್ ಶೋಗಳು
• ಇಂಟರಾಕ್ಟಿವ್ ಸೆಷನ್‌ಗಳು ಹಾಗೂ ಹಸ್ತಪ್ರಯೋಗ ಚಟುವಟಿಕೆಗಳು
• ಟೆಲಿಸ್ಕೋಪ್ ತಯಾರಿ ಹಾಗೂ ಮಾದರಿ ರಾಕೆಟ್ ನಿರ್ಮಾಣ ಕಾರ್ಯಾಗಾರಗಳು
• ವಿಜ್ಞಾನಿಗಳಿಂದ ನೇರ ಪ್ರಸ್ತುತಿಗಳು

ಉದ್ದೇಶಗಳು:
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನ ಕುತೂಹಲ ಮೂಡಿಸುವುದು
• ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸಾಧಿಸಿರುವ ತಾಂತ್ರಿಕ ಶಕ್ತಿ ಮತ್ತು ಸ್ವಾವಲಂಬನೆ ಪರಿಚಯಿಸುವುದು
• ವಿಜ್ಞಾನ ಮತ್ತು ಇಂಜಿನಿಯರಿಂಗ್ ವೃತ್ತಿಗೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು
ಉದ್ದೇಶ:
• ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಬಗ್ಗೆ ಕುತೂಹಲ ಬೆಳೆಸುವುದು
• ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧಿಸಿದ ಹೆಜ್ಜೆಗುರುತುಗಳನ್ನು ಪರಿಚಯಿಸುವುದು
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನದ ಬಗ್ಗೆ ಪ್ರೇರಣೆ ಮೂಡಿಸುವುದಾಗಿದೆ ಎಂದು ಆಯೋಜನಾ ಸಮಿತಿಯ ಸದಸ್ಯರಾದ ಡಾ. ಎಸ್. ಓಂಕಾರ್ ನಾಯ್ಕ್, (ಅಧ್ಯಕ್ಷರು, SASTRA) ಉದ್ದೇಶಗಳು:
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನ ಕುತೂಹಲ ಮೂಡಿಸುವುದು
• ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸಾಧಿಸಿರುವ ತಾಂತ್ರಿಕ ಶಕ್ತಿ ಮತ್ತು ಸ್ವಾವಲಂಬನೆ ಪರಿಚಯಿಸುವುದು
• ವಿಜ್ಞಾನ ಮತ್ತು ಇಂಜಿನಿಯರಿಂಗ್ ವೃತ್ತಿಗೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು
ಉದ್ದೇಶ:
• ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಬಗ್ಗೆ ಕುತೂಹಲ ಬೆಳೆಸುವುದು
• ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧಿಸಿದ ಹೆಜ್ಜೆಗುರುತುಗಳನ್ನು ಪರಿಚಯಿಸುವುದು
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನದ ಬಗ್ಗೆ ಪ್ರೇರಣೆ ಮೂಡಿಸುವುದಾಗಿದೆ ಎಂದು ಆಯೋಜನಾ ಸಮಿತಿಯ ಸದಸ್ಯರಾದ ಡಾ. ಎಸ್. ಓಂಕಾರ್ ನಾಯ್ಕ್, (ಅಧ್ಯಕ್ಷರು, SASTRA) ತಿಳಿಸಿದ್ದಾರೆ.