Thursday, June 11, 2026
Thursday, June 11, 2026
Home Blog Page 202

Shimoga News ಅಂದುಕೊಳ್ಳಬಲ್ಲ, ಮಾಡಬಲ್ಲ ಏಕೈಕ ಜೀವಿ, ಮನುಷ್ಯ.- ಚೇತನ್ ರಾಂ.

0

Shimoga News ಜೀವ ಜಗತ್ತಿನಲ್ಲಿ ಏನನ್ನಾದರೂ ಅಂದುಕೊಳ್ಳಬಲ್ಲ ಹಾಗೂ ಅಂದುಕೊಂಡದ್ದನ್ನು ಮಾಡಬಲ್ಲ ಸಾಮರ್ಥ್ಯವಿರುವ ಏಕೈಕ ಜೀವಿ ಮನುಷ್ಯ, ಆದ್ದರಿಂದ ಉತ್ತಮವಾದುದನ್ನು ಅಂದುಕೊಳ್ಳಬೇಕು ಅದನ್ನು ಮತ್ತಷ್ಟು ಉತ್ತಮವಾಗಿ ಮಾಡಬೇಕು ಎಂದು ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ ಮೈಸೂರಿನ ಚೇತನ್ ರಾಮ್ ಆರ್ ಎ ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

ಅವರಿಂದು ಲೇಕ್ ವ್ಯೂ ನ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ಬಿಸಿಎ ವತಿಯಿಂದ ವಿವಿಧ ಜಿಲ್ಲೆಗಳ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಏರ್ಪಾಡಾಗಿದ್ದ ‘ಪರೀಕ್ಷೆ ಒಂದು ಹಬ್ಬ- ಬನ್ನಿ ಆಚರಿಸೋಣ’ ಎಂಬ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಸಿಕ್ಕಿರುವುದನ್ನು ಸಂತೋಷದಿಂದ ಅನುಭವಿಸದೆ ಸಿಗದಿರುವ ಬಗ್ಗೆ ಕೊರಗುವುದೇ ಈಗಿನ ಪೀಳಿಗೆಯ ಸ್ಥಿತಿಯಾಗಿದೆ, ನಗುವಿನಿಂದಲೇ ಜೀವನದಲ್ಲಿ ಯಶ ಸಾಧಿಸಬಹುದು, ಪರೀಕ್ಷೆಗೂ ಭಯ ಪಡದೆ ನಗುನಗುತ್ತ ಓದಿ ಬರೆಯಬೇಕು ಎಂದರು.

Shimoga News ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಮೂಡುಬಿದರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ ಸದಾಕತ್ ಮಾತನಾಡುತ್ತಾ ಸಾಧನೆಯ ಹೆಜ್ಜೆಯಲ್ಲಿ ನಿರ್ಧಾರಗಳು ಮುಖ್ಯ, ಕಲಿಕೆಯು ಭಾರವಲ್ಲ ಸಂತಸದಾಯಕ, ಸಮಯ ಪಾಲನೆ, ಶಿಸ್ತು, ಕಠಿಣ ಪರಿಶ್ರಮ ಯಶಸ್ಸಿಗೆ ಬೇಕು ಎಂದರು. ಹಿರಿಯ ತಂತ್ರಾಂಶ ತಜ್ಞರುಗಳು ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಗಳೂ ಆದ ಮಂಜುನಾಥ ಮಸ್ಕಿ ಹಾಗೂ ಹರ್ಷ ಗೋಪಾಲರಾವ್ ಮಾತನಾಡಿ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ಚೇರ್ಮನ್ ಅಥಣಿ ಎಸ್ ವೀರಣ್ಣನವರು ಕೃತಕ ಬುದ್ಧಿಮತ್ತೆ ಬಂದ ನಂತರ ಹೊಸ ಹೊಸ ಅವಕಾಶಗಳು ಹೆಚ್ಚಾಗಿ ಒದಗಲಿವೆ, ಇದರ ಅನುಕೂಲ ಪಡೆಯುವ ಕೌಶಲ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಾಗಿದೆ ಎಂದರು. ಕಾಲೇಜಿನ ಬಗ್ಗೆ ಪ್ರಾಂಶುಪಾಲ ಡಾ. ಬಿ ವೀರಪ್ಪನವರು ಮಾತನಾಡಿದರು. ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ, ಸಂಪನ್ಮೂಲ ವ್ಯಕ್ತಿ ಮಹಾಬಲೇಶ್ವರ ತುಂಗಾ, ಪ್ರೊ. ಸಿದ್ಧಲಿಂಗಪ್ಪ ಕೆ, ಪ್ರೊ. ಬಕ್ಕೇಶ್ ಮುಂತಾದವರು ಉಪಸ್ಥಿತರಿದ್ದು ಶ್ರಾವಣಿ ಪ್ರಾರ್ಥನೆ ಹಾಡಿದರೆ ಜ್ಯೋತಿಕಾ, ಕೀರ್ತಿ, ಸಂತೋಷ, ಕೀರ್ತನ ಹಾಗೂ ಪ್ರಶಾಂತಿನಿ ಬಿ ಎಂ ಅತಿಥಿಗಳ ಪರಿಚಯ ಮಾಡಿದರು. ವಿವಿಧ ಜಿಲ್ಲೆಗಳ 17ಕ್ಕೂ ಹೆಚ್ಚು ಪದವಿಪೂರ್ವ ಕಾಲೇಜುಗಳ 1300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Roller Skating ರೋಲರ್ ಸ್ಕೇಟಿಂಗ್ ಸಂಸ್ಥೆಯಿಂದ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಕ್ಕೆ ಆಯ್ಕೆ ಪ್ರಕ್ರಿಯೆ.

0

Roller Skating ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಡಿಸೆಂಬರ್ 6 ಮತ್ತು 7 ರಂದು ರಾಜ್ಯಮಟ್ಟದ ಸ್ಕೇಟಿಂಗ್ ಪಟುಗಳನ್ನು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆಯನ್ನು ನಗರದ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದಲ್ಲಿ ನಡೆಸಲಾಗುತ್ತಿದೆ.

Roller Skating ಕರ್ನಾಟಕ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಅವರು ರಾಜ್ಯಮಟ್ಟದ ಟೆನಾಸಿಟಿ, ಫ್ಯಾನ್ಸಿ ಇನ್‌ಲೈನ್, ಕ್ವಾಡ್, ಇನ್‌ಲೈನ್ ಸ್ಕೇಟಿಂಗ್ ಪಟುಗಳನ್ನು ಆಯ್ಕೆ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಸ್ಕೇಟಿಂಗ್ ಕ್ರೀಡೆಗಳನ್ನು ನಡೆಸಲು ಉದ್ದೇಶಿಸಿದ್ದು, ಅದಕ್ಕೆ ಕ್ರೀಡಾಸಕ್ತರು ಭಾಗವಹಿಸಿ ಇದರ ಸದುಪಯೋಗ ಪಡೆಯಲು ಅಧ್ಯಕ್ಷ ಗಿರೀಶ್ ಮತ್ತು ಕಾರ್ಯದರ್ಶಿ ಕೆ.ಎಂ. ಶೇಖರ್ (ಬಾಬು) ಕೋರಿದ್ದಾರೆ. ಮಾಹಿತಿಗೆ ಮೊ. 7483885457, 9480294366 ರಲ್ಲಿ ಸಂಪರ್ಕಿಸಿ.

MESCOM ಸಾಗರ ಮೆಸ್ಕಾಂ ಕಛೇರಿಯಲ್ಲಿ ಡಿಸೆಂಬರ್ 2 ರಂದು ಜನಸಂಪರ್ಕ ಸಭೆ

0

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಡಿ. 02 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರುಸದು ಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ ; 9480880595.

Agricultural irrigation project ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪಡೆಯಲು ಅರ್ಜಿ ಆಹ್ವಾನ

0

Agricultural irrigation project ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶಿಕಾರಿಪುರ ತಾಲೂಕಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇ. 90 ಸಹಾಯಧನ ಲಭ್ಯವಿರುತ್ತದೆ. ಈಗಾಗಲೇ ಮಳೆಗಾಲ ಮುಕ್ತಾಯವಾಗಿದ್ದು, ಮುಂದಿನ ದಿನಗಳಲ್ಲಿ ಬೇಸಿಗೆ ಹಂಗಾಮು ಪ್ರಾರಂಭವಾಗಲಿರುವುದರಿಂದ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

2018-19 ನೇ ಸಾಲಿನ ಹಿಂದೆ ಹನಿ ನೀರಾವರಿ ಘಟಕ ಅಳವಡಿಸಿಕೊಂಡವರು ಘಟಕ ಹಾಳಾಗಿದ್ದರೆ ಪುನಃ ಹೊಸದಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ರೈತರಿಗೂ ಪುನಃ ಶೇ. 90 ರ ಸಹಾಯಧನ ನೀಡಲು ಅವಕಾಶವಿರುವುದರಿಂದ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Agricultural irrigation project ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಅಂಜನಾಪುರ-8861994178, ತಾಳಗುಂದ – 7975515575, ಕಸಬಾ-9113812090, ಉಡುಗಣಿ – 9108548454, ಹೊಸೂರು – 6363095898 ಗಳನ್ನು ಸಂಪರ್ಕಿಸುವುದು.

TRAFFIC POLICE ಸಂಚಾರಿ ವಾಹನ ಶೇ.50 ದಂಡ ಶುಲ್ಕ ರಿಯಾಯಿತಿ. ಸಾಗರ ಸಾರಿಗೆ ಅಧಿಕಾರಿಗಳ ಪ್ರಕಟಣೆ.

0

TRAFFIC POLICE ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬAಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.
1991-92 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ TRAFFIC POLICE 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬAಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರೇಶ್ ಡಿ.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hoysala Bravery Award ಎಂ.ಆರ್.ಮಧು ಗೆ ಹೊಯ್ಸಳ ಶೌರ್ಯ ಪ್ರಶಸ್ತಿ

0

Hoysala Bravery Award 2025-26 ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಯೋಜನೆಯಡಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಶೌರ್ಯ ಪ್ರಶಸ್ತಿಗೆ ಶಿವಮೊಗ್ಗ ನಗರದ ಸಾಗರ ತಾಲೂಕಿನ ಆನಂದಪುರ, ಯಡೆಹಳ್ಳಿಯ ಮಾ|| ಮಧು ಎಂ.ಆರ್. ಇವನಿಗೆ ನ. 28 ರಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ Hoysala Bravery Award ನಡೆದ ಐ.ಸಿ.ಡಿ.ಎಸ್. ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಹೊಯ್ಸಳ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Guarantee scheme ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಅಕ್ಷಯ ಪಾತ್ರೆ- ಹೆಚ್.ಎಂ.ಮಧು.

0

Guarantee scheme ಸರ್ಕಾರದ ಜನಪರ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಸರ್ಕಾರ ನೀಡುವ ಪಂಚ ಗ್ಯಾರಂಟಿಗಳು ಬಡವರ ಮತ್ತು ಮಧ್ಯಮ ವರ್ಗದವರ ಪಾಲಿಗೆ ಅಕ್ಷಯ ಪಾತ್ರೆಯಾಗಿದೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ ಮಧು ಹೇಳಿದರು.
ಶನಿವಾರ ನಗರದ ತಾಲ್ಲೂಕು ಪಂಚಾಯತ್‌ನಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡವರು, ಮಧ್ಯಮ ವರ್ಗದವರು ಹಾಗೂ ಮಹಿಳೆಯರು ಇನ್ನೂ ದೇಶದಲ್ಲಿ ಆರ್ಥಿಕವಾಗಿ, ಸಾಮಾಜಿವಾಗಿ ಹಿಂದುಳಿದಿದ್ದಾರೆ. ಅವೆಲ್ಲರನ್ನೂ ಸಬಲರನ್ನಾಗಿ ಮಾಡಿ ಸಮಾಜದ ಮುಖ್ಯಭೂಮಿಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ಅನುಷ್ಟಾನ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ ಪಂಚ ಗ್ಯಾರಂಟಿ ಯೋಜನೆಗಳು ಸಮಪರ್ಕವಾಗಿ ಜಾರಿ ಆಗಿದ್ದು, ಇದರಿಂದ ರಾಜ್ಯದಲ್ಲಿ ಅದೆಷ್ಟೋ ಬಡವರು, ಮಧ್ಯಮ ವರ್ಗದವರು ಹಾಗೂ ಮಹಿಳೆಯರಿಗೆ ಫಲವನ್ನು ಪಡೆದು ನೆಮ್ಮದಿಯಿಂದಿದ್ದಾರೆ. ಇದರಂತೆ ಜಿಲ್ಲೆಯ ತಾಲ್ಲೂಕಿನಲ್ಲೂ ಕೂಡ ತಾಲ್ಲೂಕು ಮಟ್ಟದ ಪ್ರಾಧಿಕಾರದಿಂದ ಇದನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದರು.
ಸರ್ಕಾರದ ಜನಪರ ಕಾಳಜಿಯಿಂದ ಹಾಗೂ ಅಭಿವೃದ್ದಿ ಉದ್ದೇಶದಿಂದ ಈಡೇರಿಸಲು ಅಧಿಕಾರಿಗಳ ಒಳಗೊಂಡAತೆ ತಾಲ್ಲೂಕು ಮಟ್ಟದ ಪ್ರಾಧಿಕಾರದ ಸದಸ್ಯರುಗಳು ಕಾರ್ಯಕ್ಷಮತೆಯಿಂದ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದವರೆಗೂ ಮೀಸಲಾಗಿದೆ. ಜನರಿಗೆ ಆದಷ್ಟು ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ. ಆಗ ಮಾತ್ರ ಉತ್ತಮವಾದ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು
ಅಗಸ್ಟ್-2025 ರ ಮಾಹೆಯಲ್ಲಿ ಜಿಲ್ಲೆಯ 1,07,655 ಫಲಾನುಭವಿಗಳ ಖಾತೆಗೆ ಗೃಹಲಕ್ಷಿö್ಮÃ ಹಣ ಜಮಾ ಮಾಡಲಾಗಿದೆ. ಇನ್ನೂ 2044 ಖಾತೆಗಳು ಐಟಿ/ಜಿಎಸ್‌ಟಿ ಫಲಾನುಭವಿಗಳಿದ್ದು, ಇದರಲ್ಲಿ 304 ಅರ್ಜಿಗಳನ್ನು ಕಚೇರಿ ಸ್ವೀಕರಿಸಲಾಗಿದೆ. ಹಾಗೂ ಎನ್‌ಪಿಸಿಐ ಯಲ್ಲಿ 300 ಫಲಾನುಭವಿಗಳು ಬಾಕಿ ಇದೆ.
ಅನ್ಯಭಾಗ್ಯ ಯೋಜನೆಗೆ ಸಂಬAಧಿಸಿದAತೆ ಸರ್ಕಾರವು ಸಚಿವ ಸಂಪುಟದಲ್ಲಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದು, ಇನ್ನೂ ಮುಂದೆ 5 ಕೆಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿ ಬದಲಾಗಿ ಆಹಾರಧಾನ್ಯಗಳ ಕಿಟ್ ನೀಡಲಿದೆ. ಈ ಯೋಜನೆ ಜನವರಿ-2026 ರಿಂದ ಜಾರಿಯಾಗಲಿದೆ.
Guarantee scheme ಈಗಾಗಲೇ ಸರ್ಕಾರದ ಆದೇಶದಂತೆ ಐಟಿ ಹೊಂದಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಬೇಕೆಂದು ಆದೇಶ ಮಾಡಲಾಗಿದ್ದು, ಅದರಂತೆ 1.20 ಲಕ್ಷ ಆದಾಯ ಹೊಂದಿರುವ 1,562 ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಕಾರ್ಡ್ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. ಇನ್ನೂ 7,716 ಕಾರ್ಡ್ಗಳು ಬಾಕಿ ಉಳಿದಿವೆ. ಹಾಗೂ ಹೊಸ ಪಡಿತರ ಚೀಟಿಗೆ 208 ಅರ್ಜಿಗಳು ಬಂದಿದ್ದು, ಅದನ್ನು ಪರಿಶೀಲಿಸಿ ಅನುಮೋದಿಸಲಾಗುತ್ತದೆ.
ಅನ್ನ ಸುವಿಧ ಯೋಜನೆಯಡಿ ಸರ್ಕಾರ 75 ವರ್ಷ ದಾಟಿದ ವ್ಯಕ್ತಿಗಳಿಗೆ ಮನೆಯ ಬಾಗಿಲಿಗೆ ಅಕ್ಕಿಯನ್ನು ನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗಿದೆ. ಪ್ರತಿ ತಿಂಗಳು 6 ರಿಂದ 15 ತಾರೀಖು ಒಳಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ತಾಲ್ಲೂಕು ಮಟ್ಟದಲ್ಲಿ 7.51 ಕೋಟಿ ವಿದ್ಯುತ್ ಬಳಕೆ ಮಾಡಲಾಗಿದ್ದು, ಸರ್ಕಾರದಿಂದ 6.34ಕೋಟಿ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಯುವ ನಿಧಿ ಯೋಜನೆ ಅಡಿಯಲ್ಲಿ ಜುಲೈ-2025 ಮಾಹೆಯವರೆಗೂ 2,95,03,500 ಕೋಟಿ ಹಣವನ್ನು ವಿದ್ಯಾರ್ಹತೆಯನುಸಾರವಾಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 7 ಕೋಟಿ ಮಹಿಳಾ ಫಲಾನುಭವಿಗಳು ಪ್ರಯಾಣ ಮಾಡಿದ್ದು, ಇದರಿಂದ 276 ಕೋಟಿ ಆದಾಯ ಸರ್ಕಾರ ಖಜಾನೆ ಬಂದಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಸಿಓ ಪರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಶಿವಾನಂದ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯ ಟಿ.ಸಿ ಜಯಪ್ಪ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

S.N.Chennabasappa ಶಿವಮೊಗ್ಗ 30ನೇ ವಾರ್ಡಿನಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ

0

S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 30ರ ಸೀಗೆಹಟ್ಟಿಯಲ್ಲಿನ ಕೆಂಚರಾಯನ ಬೀದಿಯಲ್ಲಿ ಯುಜಿಡಿ (Underground Drainage) ಕಾಮಗಾರಿಗೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಯುಜಿಡಿ ಯೋಜನೆಯು ಪ್ರದೇಶದಲ್ಲಿನ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

S.N.Chennabasappa ಈ ಸಂದರ್ಭದಲ್ಲಿ, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಶಂಕರ್ ಗನ್ನಿ, ಬಿಜೆಪಿಯ ಸ್ಥಳೀಯ ಪ್ರಮುಖರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

ಪ್ರಾದೇಶಿಕ ಸಮ್ಮೇಳನದಲ್ಲಿ ಸಂಸ್ಥೆಯ ಸಾಧನೆಗೆ ಪ್ರಶಸ್ತಿ ಸ್ವೀಕರಿಸಿದ ಎನ್.ಜಿ.ಉಷಾ

0

ಪ್ರಾದೇಶಿಕ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನಾ ಸಂಸ್ಥೆಯ ಅಧ್ಯಕ್ಷರಾದ ಎನ್ ಜಿ ಉಷಾ ಹಾಗೂ ಸದಸ್ಯರು ಸಮಾಜ ಸೇವಾ ಯೋಜನೆಗಳಿಗಾಗಿ ಅತ್ಯುತ್ತಮ ಘಟಕ ಪ್ರಶಸ್ತಿ, ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಿದ್ಯಾನಿಧಿ ಪ್ರಶಸ್ತಿ ಮತ್ತು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪುರಸ್ಕಾರಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Usha Multispeciality Hospital ಹದಿಹರೆಯದ ಹೆಣ್ಣುಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ: ಡಾ.ರಕ್ಷಾರಾವ್

0

Usha Multispeciality Hospital ಹೆಣ್ಣುಮಕ್ಕಳಿಗೆ ಶಿಕ್ಷಣದೊಂದಿಗೆ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕಲಿಸಬೇಕು ಎಂದು ಉಷಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್, ಪ್ರಸೂತಿ ಸ್ತ್ರೀರೋಗ ತಜ್ಞೆ ಡಾ.ರಕ್ಷಾರಾವ್ ಹೇಳಿದರು.

ಅವರು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ಹದಿಹರೆಯದ ವಯಸ್ಸಿನ ಸಮಸ್ಯೆಗಳು, ಋತು ಶುಚಿತ್ವ, ಪೋಕ್ಸೋ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುವುದು ಸಹಜ. ಈ ಅವಧಿಯಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ, ಸಂವಹನ ಮತ್ತು ಭರವಸೆಯ ವಾತಾವರಣದ ಅಗತ್ಯವಿದೆ ಎಂದರು.

ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮ ಇವುಗಳ ಮಹತ್ವವನ್ನು ತಿಳಿಸಿದರು.

ಋತುಶುಚಿತ್ವವನ್ನು ಸರಿಯಾಗಿ ಪಾಲಿಸದಿದ್ದರೆ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಆದ್ದರಿಂದ ತಮ್ಮ ಪೋಷಕರ ಜೊತೆಗೆ ಮುಕ್ತವಾಗಿ ಮಾತನಾಡುವ ಮೂಲಕ ಸಲಹೆಗಳನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

Usha Multispeciality Hospital ಮಕ್ಕಳ ರಕ್ಷಣೆಯ ಉದ್ದೇಶದಿಂದ ರಚಿಸಲಾದ ಪೋಕ್ಸೋಕಾಯ್ದೆ ಕುರಿತು ಅರ್ಥವಾಗುವ ರೀತಿಯಲ್ಲಿ ಮಕ್ಕಳ ಸುರಕ್ಷತೆಯ ಪ್ರಮುಖ ಅಂಶಗಳನ್ನು ವಿವರಿಸಿದರು
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಮ್, ಶಿಕ್ಷಕಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.