Wednesday, June 10, 2026
Wednesday, June 10, 2026
Home Blog Page 2021

ಮಕ್ಕಳ ಸಂತಸದಲ್ಲಿ ಪಾಲ್ಗೊಂಡ, ಸಚಿವ ನಾಗೇಶ್

0

ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ಆರಂಭ. ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಶಿವಮೊಗ್ಗ ಸನಿಹದ ಮಲವಗೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದರು. ಮಕ್ಕಳೊಂದಿಗೆ ಸಚಿವರು ಸಂವಾದ ನಡೆಸಿದರು.”ಕಳೆದ ಹದಿನೈದು ದಿನಗಳಿಂದ ಶಾಲೆ ಯಾವಾಗ ಆರಂಭವಾಗುವುದು ಅಂತ ಕಾಯುತ್ತಿದ್ದರು. ಕಳೆದವಾರ ವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಲಾ ಆರಂಭದ ನಿರ್ಣಯ ತೆಗೆದುಕೊಳ್ಳಲಾಯಿತು. ಅದರ ಫಲವಾಗಿ ಇಂದು ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ. ನಾನು ಕೂಡ ಉತ್ಸುಕತೆಯಿಂದ ಭೇಟಿ ನೀಡಿದ್ದೇನೆ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು, ಶಿಕ್ಷಕರು ಹೂ ,ಸಿಹಿ ನೀಡಿ ಮಕ್ಕಳನ್ನು ಸ್ವಾಗತ ಮಾಡಿದ್ದಾರೆ.

ಸದ್ಯಕ್ಕೆ ಸಿಲಬಸ್ ಕಡಿತವಿಲ್ಲ. ಅಗತ್ಯಬಿದ್ದರೆ ಚಿಂತನೆ ಮಾಡ್ತೀವಿ. ಈಗ ಇರುವ ಅವಧಿಯಲ್ಲಿ ಸಿಲಬಸ್ ಪೂರ್ಣ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ. ರಜೆಯ ದಿನಗಳಲ್ಲೂ ಸಹ ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡುತ್ತೇವೆ. ರಾಜ್ಯದಲ್ಲಿ ಹಂತಹಂತವಾಗಿ ಎಲ್ಲಾ ಶಾಲೆಗಳು ಇಂದಿಗೆ ಆರಂಭವಾಗಿವೆ. ರಾಜ್ಯದ ಕೆಲವು ಶಾಲೆಗಳಲ್ಲಿ ಇನ್ನಷ್ಟು ವ್ಯವಸ್ಥೆ ಮಾಡಬೇಕಿದೆ. ಪ್ರತಿವರ್ಷ ಮಕ್ಕಳ ಸಂಖ್ಯೆಯನ್ನು ಆಧರಿಸಿ ಶಾಲೆಗಳಲ್ಲಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಳ ಮಾಡುತ್ತೇವೆ”ಎಂದು ಸಚಿವ ನಾಗೇಶ್ ರವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಸೇವೆಗೆ ಸಿದ್ಧ ಪಡಿಸಿದ ಮಾದರಿ : ಡಾ.ಶ್ರೀ ವೀರೇಂದ್ರ ಹೆಗ್ಗಡೆ

0

ಭಾರತೀಯ ಪರಂಪರೆಯಲ್ಲಿ ಅನೇಕ ಮಠ-ಮಾನ್ಯ, ಸಂಘ-ಸಂಸ್ಥೆಗಳು, ಸಾಮಾಜಿಕ ಸೇವೆ ಸಲ್ಲಿಸುತ್ತಾ ಬಂದಿದೆ. ಸಮುದಾಯದ ಅಭಿವೃದ್ಧಿಯನ್ನು ಗಮನದಲ್ಲಿರಿಸಿ, ಸಾಧುಸಂತರು, ಸಾರ್ವಜನಿಕ ಮುಖಂಡರು, ಮುಂಚೂಣಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅಂತಹ ತಾರ ಸಮೂಹದಲ್ಲಿ ಹೊಳೆಯುವವರಲ್ಲಿ ನಮ್ಮ ಹೆಮ್ಮೆಯ ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ಡಾ.ವೀರೇಂದ್ರ ಹೆಗ್ಗಡೆಯವರು.

ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಂಟ್ವಾಳದಲ್ಲಿ ಮುಗಿಸಿದರು. ಪ್ರೌಢ ಶಿಕ್ಷಣವನ್ನು ಉಜಿರೆಯಲ್ಲಿ ಮುಗಿಸಿದ ನಂತರ , ಬೆಂಗಳೂರಿನ ಕಾಲೇಜು ಶಿಕ್ಷಣವನ್ನು ಪೂರೈಸಿದರು.

1968ರಲ್ಲಿ ತಂದೆ ಶ್ರೀ. ರತ್ನವರ್ಮ ಹೆಗ್ಗಡೆ ತರುವಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ದ 20 ನೇ ಧರ್ಮಾಧಿಕಾರಿಯಾದರು. ಆಗಿನ್ನೂ ಅವರಿಗೆ ವಯಸ್ಸು ಕೇವಲ 21 ವರ್ಷ. ತಾರುಣ್ಯದಲ್ಲೇ ಸಮಾಜ ಸೇವೆಯ ಬಗ್ಗೆ ಡಾ.ವೀರೇಂದ್ರ ತರತರಹದ ಆಸಕ್ತಿ ಬೆಳೆಸಿಕೊಂಡಿದ್ದರು. ಸಾಮಾಜಿಕ ಪ್ರಗತಿಯ ಬಗ್ಗೆ ಗಂಭೀರವಾಗಿ ಆಲೋಚಿಸುತ್ತಾ ಬಂದರು. ಅದರ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯನ್ನು ಆರಂಭಿಸಿದರು. 1982 ರಿಂದಲೂ ಈ ಯೋಜನೆಗಳು ಗ್ರಾಮೀಣರಿಗೆ,ಜನಸಾಮಾನ್ಯರಿಗೆ ಸಹಾಯಕವಾಗಿವೆ.
ಕೃಷಿ ಅಭಿವೃದ್ಧಿ,ಸಮುದಾಯದ ಹಿತ ಚಿಂತನೆ, ಅವರ ವಿಶಿಷ್ಟ ಗುಣಗಳಾಗಿವೆ. ಅವರು ಈ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಭಾರತ ಸರ್ಕಾರವು ಅವರ ಈ ಸಮಾಜ ಸೇವೆ ಗುರುತಿಸಿ 2015ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. 1985 ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ.
1994 ರಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ ದೊರಕಿದೆ. ಇಷ್ಟಲ್ಲದೆ ಇನ್ನಷ್ಟು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದು ತಮ್ಮ ಮೌಲ್ಯವನ್ನು ಹೆಚ್ಚಿಸಿಕೊಂಡಿವೆ.
ಸಮಾಜಸೇವೆಗೆ ಯಾರೇ ಪ್ರವೇಶ ಮಾಡಲಿ ಶ್ರೀ ವೀರೇಂದ್ರ ಹೆಗ್ಗಡೆಯವರ ಸಾಧನೆ ಸಿದ್ಧಪಡಿಸಿದ ಮಾದರಿಯಾಗಿದೆ. ಇದೀಗ ತಾನೆ ಶ್ರೀ ಕ್ಷೇತ್ರ ಧರ್ಮಾಧಿಕಾರಿಯಾಗಿ 54 ಸಾರ್ಥಕ ಸಂವತ್ಸರಗಳನ್ನ ಪೂರೈಸಿರುವ ಅವರಿಗೆ ಶ್ರೀ ಮಂಜುನಾಥೇಶ್ವರನು ಸಕಲ ಆಯುರಾರೋಗ್ಯ ಭಾಗ್ಯಗಳ್ಳನ್ನ ನೀಡಲಿ ಎಂಬುವುದೇ ನಮ್ಮ ಆಶಯ.

ಎಂಆರ್ ಐ ಯಂತ್ರ ಶೀಘ್ರ ಬಳಕೆಗೆ ಬರಲಿ

0

ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ತನ್ನದೇ ಖ್ಯಾತಿ ಇದೆ. ಅಷ್ಟೇ ಅಲ್ಲದೆ ಸರ್ಕಾರಿ ಆಸ್ಪತ್ರೆಗಳೆಂದರೆ ಶ್ರೀ ಸಾಮಾನ್ಯರಿಗೆ ಸುಲಭ ಚಿಕಿತ್ಸೆಯ ಕೇಂದ್ರಗಳಾಗಿವೆ. ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳ ಮೂಲಕ ತಪಾಸಣೆ ಕೈಗೆಟಕುವ ದರದಲ್ಲಿ ಇರುತ್ತವೆ.ಆದರೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿನ ಎಂಆರ್ ಐ ಸ್ಕ್ಯಾನಿಂಗ್ ಯಂತ್ರ ಸಾಮಾನ್ಯರ ಪಾಲಿಗೆ ಕನ್ನಡಿಯೊಳಗಿನ ಗಂಟೆನೋ ಅನಿಸುವ ಆತಂಕ ಉಂಟಾಗಿದೆ. ಆರು ತಿಂಗಳೇ ಕಳೆದಿದ್ದರೂ, ಎಂ ಆರ್ ಐ ಯಂತ್ರವು ಸಂಪೂರ್ಣ ದುರಸ್ತಿ ಕಂಡಿಲ್ಲ. ಹೀಗಾಗಿ ತಪಾಸಣೆ ಕಾರ್ಯ ನಿಂತಿದೆ.
ಇದರಿಂದಾಗಿ ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆ ಇದ್ದರೂ, ದುಬಾರಿ ದರ ನೀಡಿ ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವಂತಾಗಿದೆ. ಕೊರೊನಾ ಸೋಂಕು ಉಲ್ಭಣಗೊಂಡಿದ್ದ ಸಂದರ್ಭದಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಯಂತ್ರ ಇದ್ದ ಕೊಠಡಿಯೊಳಗೆ ಇತರೇ ಸಾಧನಗಳನ್ನು ಸಾಗಿಸುವ ವೇಳೆ ಯಂತ್ರದ ಹೀಲಿಯಂ ಸೋರಿಕೆಯಾಗಿದೆ. ಇದರಿಂದಾಗಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ಯಂತ್ರ ಕೆಲಸ ನಿರ್ವಹಿಸದಂತಾಗಿದೆ ಎಂಬುದು ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆಸ್ಪತ್ರೆ ಆಡಳಿತ ಮಂಡಳಿ ಪತ್ರ ವ್ಯವಹಾರ ಕೈಗೊಂಡು ಮೂರ್ನಾಲ್ಕು ತಿಂಗಳು ಕಳೆದ ಮೇಲೆ ಯಂತ್ರವನ್ನು ಸರಿಪಡಿಸಲಾಗಿತ್ತು. ಆದರೆ, ಅದನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಯೋಗಾರ್ಥ ಪರೀಕ್ಷೆ ನಡೆಸಿ ಹಸ್ತಾಂತರಿಸುವ ವೇಳೆ ಮತ್ತೆ ಹೀಲಿಯಂ ಅನಿಲ ಸೋರಿಕೆ ಆಗಿದೆ ಎಂದು ತಿಳಿದು ಬಂದಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಪರೀಕ್ಷೆಗೆ 1,500 ರೂಪಾಯಿ ದರ ನಿಗದಿಪಡಿಸಲಾಗಿದೆ. ಆದರೆ, ಇದೀಗ ರೋಗಿಗಳು ಖಾಸಗಿ ಲ್ಯಾಬ್ ಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡು ವರದಿ ತರಬೇಕಾದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಸರ್ಕಾರ ನಿಗದಿಪಡಿಸಿರುವ 1,500 ರೂ. ವೆಚ್ಚದಲ್ಲೇ ಪರೀಕ್ಷೆ ಮಾಡುವಂತೆ ಖಾಸಗಿ ಲ್ಯಾಬ್ ಗಳಿಗೆ ಸೂಚನೆ ನೀಡಿದ್ದಾರೆ.
ಒಟ್ಟಿನಲ್ಲಿ ಬಡಜನರ ಪಾಲಿಗೆ ಅನುಕೂಲವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಳಾಗಿರುವ ಯಂತ್ರವನ್ನು ಶೀಘ್ರವಾಗಿ ಸಂಪೂರ್ಣ ದುರಸ್ತಿಪಡಿಸಬೇಕು ಅಥವಾ ಹೊಸ ಯಂತ್ರವನ್ನು ಖರೀದಿಸಿ , ಬಡ ಜನರಿಗೆ ಆಗುತ್ತಿರುವ ಆರ್ಥಿಕ ಹೊರೆ ಮತ್ತು ಆತಂಕವನ್ನು ನೀಗಿಸಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಿಮ್ಮನೆ ರೆಸಾರ್ಟ್ ಗೆ ಪ್ರಶಸ್ತಿಯ ಗರಿ – Kimmane Golf Resort

0

ಶಿವಮೊಗ್ಗದ ಸಾಗರ ರಸ್ತೆಯ ಮಲ್ಲಿಗೇನಹಳ್ಳಿ ಬಳಿ ಇರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಸಂಸ್ಥೆಗೆ “ಬೆಸ್ಟ್ ಗಾಲ್ಫ್ ರೆಸಾರ್ಟ್ ಇನ್ ಏಷ್ಯಾ 2021” ಪ್ರಶಸ್ತಿ ನೀಡಲಾಗಿದೆ (Kimmane Golf Resort). ದುಬೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇಂಟರ್ ನ್ಯಾಷನಲ್ ಟ್ರಾವೆಲ್ ಸಂಸ್ಥೆಯು ಈ ಪುರಸ್ಕಾರ ಘೋಷಿಸಿದೆ. ಈ ರೆಸಾರ್ಟ್ ಸುಮಾರು 65 ಎಕ್ಕರೆ ಅಷ್ಟು ವಿಸ್ತಾರವಾಗಿದ್ದು. 9 ಹೋಲ್ ಗಾಲ್ಫ್ ಕೋರ್ಸ್, 30 ಐಶಾರಾಮಿ ಕೊಠಡಿಗಳು, ಬಾರ್, ರೆಸ್ಟೋರೆಂಟ್, ಒಳಾಂಗಣ ಔತಣಕೂಟ, ಸುಸಜ್ಜಿತ ಬೆಡ್ ರೂಂ, ಟೀ ಬಾರ್, ಟೇಬಲ್ ಟೆನ್ನಿಸ್, ಸ್ನೂಕರ್, ಫಿಟ್ನೆಸ್ ಸೆಂಟರ್, ಮೀನುಗಾರಿಕೆ ಸೌಲಭ್ಯಗಳನ್ನು ಒಳಗೊಂಡಿದೆ. ಗಾಲ್ಫ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕಿಮ್ಮನೆ ಜಯರಾಮ್ ಅವರ ಪ್ರಕಾರ ಈ ರೆಸಾರ್ಟ್ ಸ್ವಚ್ಛಂದ ಪರಿಸರದಿಂದಾಗಿ ವಿಶ್ವದರ್ಜೆಯ ಸೌಲಭ್ಯಗಳಿಂದ ಗಾಲ್ಫ್ ಪ್ರೀಯರ ಹಾಗೂ ಪ್ರವಾಸಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಶಿವಮೊಗ್ಗದ ಸನಿಹವೇ ಇರುವ ನಿಸರ್ಗದ ತಾಣ ಪ್ರವಾಸಿಗರನ್ನೂ ಆಕರ್ಷಿಸುತ್ತಿದೆ.

ಕಿಮ್ಮನೆ ಗಾಲ್ಫ್ ಮತ್ತು ವಿರಾಮ ಕ್ರೀಡೆಯ ವ್ಯವಹಾರಕ್ಕೆ ಶಿವಮೊಗ್ಗದ ಮೊದಲ ಪ್ರವೇಶವಾಗಿದೆ. ಪ್ರಪಂಚದ ಐಷಾರಾಮಿ ಗಾಲ್ಫ್ ರೆಸಾರ್ಟ್‌ಗಳಲ್ಲಿ ಮೋಜಿನ ಕಿರು ಕೋರ್ಸ್‌ಗಳ ಸಾಲಿನಲ್ಲಿ ವಿನ್ಯಾಸಗೊಳಿಸಲಾಗಿದೆ, ಕಿಮ್ಮನೆ ಗಾಲ್ಫ್ ರೆಸಾರ್ಟ್‌ಗೆ ಹೊಂದಿಕೊಂಡಿರುವ ಕಿಮ್ಮನೆ ಗಾಲ್ಫ್ ಟೆರೈನ್, 9-ಹೋಲ್, 3236-ಯಾರ್ಡ್ ಕೋರ್ಸ್, ಪಾರ್ 35 ಲೇಔಟ್ ಆಗಿದೆ. ಗಾಲ್ಫ್ ಕೋರ್ಸ್ ಸವಾಲಿನಷ್ಟೇ ಮೋಡಿ. ಗಾಲ್ಫ್ ಅನ್ನು ಯಾವಾಗಲೂ ಜನರನ್ನು ಸಂಪರ್ಕಿಸಲು ಮತ್ತು ಕುಟುಂಬಗಳನ್ನು ಒಟ್ಟುಗೂಡಿಸುವ ಸಾಧನವಾಗಿ ಗ್ರಹಿಸಲಾಗಿದೆ.

 Shimoga news

ಮೀನುಕೃಷಿಕರಿಗೂ ಈಗ ಕಿಸಾನ್ ಕಾರ್ಡ್

0

ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿನ ಎಲ್ಲಾ ಪ್ರಯೋಜನಗಳನ್ನು ಮೀನುಗಾರರಿಗೂ ನೀಡಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಲ್ ಮುರುಗನ್ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಯೋಜನೆಯಾಗಿದೆ. ಇದರ ಮೂಲಕ ರೈತರು ಸಕಾಲದಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು 1998 ರಲ್ಲಿ ಪ್ರಾರಂಭಿಸಲಾಯಿತು. ರೈತರಿಗೆ ಸಕಾಲದಲ್ಲಿ ಅಲ್ಪಾವಧಿ ಸಾಲ ನೀಡುವುದು ಇದರ ಉದ್ದೇಶವಾಗಿದೆ. ಈಗ ಈ ಸೌಲಭ್ಯವನ್ನು ಶೀಘ್ರವೇ ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ಹೇಳಿದ್ದಾರೆ.
ಎಲ್ಲ ರೈತರು ಅಥವಾ ಜಂಟಿ ರೈತರು, ಗುತ್ತಿಗೆ ರೈತರು, ಹತ್ತು ರೈತರು ಒಳಗೊಂಡಿರುವ ಜಂಟಿ ಹೊಣೆಗಾರಿಕೆ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯಬಹುದಾಗಿದೆ. ಇವರು ಒಂದು ಅವಧಿಯಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ಕೆಸಿಸಿ ಸಾಲ ಪಡೆದ ರೈತರ ಬೆಳೆಗಳಿಗೆ ಬೆಳೆ ವಿಮೆ ಕೂಡ ಲಭ್ಯವಿರುತ್ತದೆ. ಈಗ ಎಲ್ಲ ಸೌಲಭ್ಯಗಳನ್ನು ಮೀನುಗಾರರಿಗೂ ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
“ಕಡಲ ಆಹಾರ ರಪ್ತು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಅಂತರಾಷ್ಟ್ರೀಯ ಗುಣಮಟ್ಟ ಹಾಗೂ ಅತ್ಯಾಧುನಿಕ ಸಂಸ್ಕರಣಾ ಘಟಕಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ” ಎಂದು ಸಚಿವರು ಮಾಹಿತಿ ನೀಡಿದರು.

ಫೇಸ್ಬುಕ್ ಅಸಲಿ v/s ನಕಲಿ

0

ಭಾರತದಲ್ಲಿ ದ್ವೇಷ ಭಾಷಣ, ಸುಳ್ಳು ಸುದ್ದಿಗಳು ಮತ್ತು ಹಿಂಸಾಚಾರವನ್ನು ಫೇಸ್ಬುಕ್ನ ನಿಯಮಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ ಎಂಬುದು ಫೇಸ್ಬುಕ್ ಆಂತರಿಕ ವರದಿಯಲ್ಲಿ ವಿವರಿಸಲಾಗಿದೆ.
‘ಫೇಸ್ಬುಕ್ ನ ಉದ್ಯೋಗಿಯೊಬ್ಬರು, ತಾವು ಕೇರಳದವರು ಎಂದು ಬಿಂಬಿಸಿಕೊಳ್ಳುವ ಅಂತಹ ನಕಲಿ ಖಾತೆಯನ್ನು 2019ರ ಪೆಬ್ರವರಿಯಲ್ಲಿ ಆರಂಭಿಸಿದ್ದರು. ಆ ಖಾತೆಗೆ ಬರುವ ಸ್ನೇಹ ಸಲಹೆಗಳು, ಸ್ನೆಹ ವಿನಂತಿಗಳು. ವಿಡಿಯೋ ಮತ್ತು ಪೋಸ್ಟ್ ಸಲಹೆಗಳನ್ನು ಫೇಸ್ಬುಕ್ ನಿಯಮಕ್ಕೆ ಅನುಗುಣವಾಗಿ ಅಂಗೀಕರಿಸುತ್ತಾ ಹೋಗುವುದು ಈ ಅಧ್ಯಯನದ ಭಾಗವಾಗಿತ್ತು. ಖಾತೆ ಆರಂಭಿಸಿ ಮೂರು ವಾರಗಳ ಅವಧಿಯಲ್ಲಿ ದ್ವೇಷ ಭಾಷಣ, ಸುಳ್ಳು ಸುದ್ದಿ ಮತ್ತು ಹಿಂಸಾಚಾರವನ್ನು ಉದ್ದೀಪಿಸುವ ಫೇಸ್ಬುಕ್ ಗುಂಪುಗಳ, ಖಾತೆಗಳ, ಪೋಸ್ಟ್ ಗಳ ಸಲಹೆಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿದ್ದವು. ಇದಕ್ಕೆ ಸಂಬಂಧಿಸಿದ ವರದಿಯನ್ನು ನಂತರದ ಒಂದು ತಿಂಗಳಲ್ಲಿ ಫೇಸ್ಬುಕ್ ಆಂತರಿಕವಾಗಿ ಪ್ರಕಟಿಸಿತ್ತು’ ಎಂಬ ಮಾಹಿತಿ ತಿಳಿದು ಬಂದಿದೆ.
2019ರ ಚುನಾವಣೆ ಸಂದರ್ಭದಲ್ಲಿ ಫೇಸ್ಬುಕ್ ಕೇಂದ್ರ ಕಚೇರಿಯ ಸಂಶೋಧಕರು ಭಾರತಕ್ಕೆ ಭೇಟಿ ನೀಡಿ ಅಲ್ಲಿನ ಉದ್ಯೋಗಿಗಳ ಜತೆ ಮಾತುಕತೆ ನಡೆಸಿದ್ದರು. ಭಾರತದಲ್ಲಿ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಕಠಿಣವಾದ ನಿಯಮಗಳ ಅಗತ್ಯವಿದೆ. ಅವುಗಳನ್ನು ಕಾರ್ಯರೂಪಕ್ಕೆ ತರಬೇಕು ಎಂಬುದು ಅಲ್ಲಿನ ಉದ್ಯೋಗಗಳ ಅಭಿಪ್ರಾಯವಾಗಿತ್ತು ಎಂಬುದನ್ನು ‘ಇಂಡಿಯನ್ ಎಲೆಕ್ಷನ್ “ಕೇಸ್ ಸ್ಟಡಿ” ವರದಿಯಲ್ಲಿ ಫೇಸ್ ಬುಕ್ ದಾಖಲಿಸಿದೆ.
ಕೆಲವು ಗುಂಪುಗಳು ಅದರಲ್ಲೂ ಪ್ರಧಾನವಾಗಿ ಬಹಳಷ್ಟು ಗ್ರೂಪ್ ಗಳು ಮುಸ್ಲಿಂ ವಿರೋಧಿ ಭಾವನೆಯನ್ನು ಕೆರಳಿಸುವ ಪೋಸ್ಟ್ ಗಳನ್ನು ಮಾಡುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ನಕಲಿ ಗ್ರೂಪ್ ಗಳನ್ನ ಸೃಷ್ಟಿಸಿ ಸಾಮಾಜಿಕರ ಭಾವನೆ ಕೆರಳುವಂಥ ಪೋಸ್ಟ್ ಗಳನ್ನ ಹಾಕುವ ಪ್ರಯತ್ನಗಳ ಬಗ್ಗೆಯೂ ಈ ವರದಿ
ಅಧ್ಯಯನ ಮಾಡಿದೆ.
ಈ ವರದಿಯನ್ನ ನೋಡಿದರೆ ಸಾಮಾಜಿಕ ಜಾಲತಾಣಗಳಲ್ಲಿ ಅಸಲಿ ಅಥವಾ ನಕಲಿ ಗ್ರೂಪ್ ಯಾವುದು ಎಂದು
ಜಾಲಗಾರರಿಗೆ ಗೊಂದಲವಾಗುವುದಂತೂ ಖಂಡಿತ

ವಿಶ್ವ ವಿಜ್ಞಾನಿ ಪಟ್ಟಿಗೆ ಡಾ.ಕುಮಾರಸ್ವಾಮಿ – ಡಾ. ಗಿರೀಶ್

0

ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಹೊರಡಿಸಿರುವ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಕುಮಾರಸ್ವಾಮಿ ಮತ್ತು ಡಾ. ಗಿರೀಶ್ ಸ್ಥಾನ ಪಡೆದಿದ್ದಾರೆ.
ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೇಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡವು ಸಿದ್ಧಪಡಿಸಿರುವ ವಿಶ್ವದ ಟಾಪ್ ಶೇಕಡಾ 2 ವಿಜ್ಞಾನಿಗಳ ಅಂಕಿಅಂಶಗಳನ್ನು ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ ಎಂದು ಕುವೆಂಪು ವಿವಿ ತಿಳಿಸಿದೆ.

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದ್ದಾರೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54804ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಷಯಗಳ ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 165713ನೇ ಸ್ಥಾನದಲ್ಲಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc.) 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಪ್ರಾಧ್ಯಾಪಕರ ಸಾಧನೆಯು ಕುವೆಂಪು ವಿವಿಗೆ ಹೆಮ್ಮೆ ತಂದಿದೆ ಎಂದು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅವರು ಅಭಿನಂದಿಸಿದ್ದಾರೆ.

ಅಡಿಕೆ ಕೃಷಿಕ, ಮಳೆಗೆ ಹೈರಾಣ

0

ಗಾಳಿ, ಗುಡುಗು-ಸಿಡಿಲು, ಮಳೆಯಿಂದಾಗಿ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣಾಗಿದ್ದಾರೆ. ಅಕ್ಟೋಬರ್ ತಿಂಗಳ ಅಂತ್ಯ ಸಮೀಪಿಸಿದರು ಕಡಿಮೆಯಾಗದ ಕಾರಣ ಮಲೆನಾಡು ಭಾಗದ ಅಡಕೆ ಮತ್ತು ಭತ್ತದ ಬೆಳೆಗಳ ಹಾನಿಉಂಟಾಗಿದೆ.


ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಅಧಿಕವಾಗಿದ್ದರು ಅಡಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಇಲ್ಲದಂತಾಗಿದೆ. ಅಕಾಲಿಕ ಮಳೆಯಿಂದಾಗಿ ಅಡಕೆ ಕೊಯ್ಲು ಮಾಡಲು ಆಗದ ಕಾರಣ ಅಡಕೆ ಹಣ್ಣಾಗಿ ಉದುರ ತೊಡಗಿದೆ. ಅಲ್ಲದೆ ಅಡಿಕೆ ಕೊಳೆರೋಗ ಕಾಣಿಸಿಕೊಂಡಿದ್ದು ರೈತರಿಗೆ ದಿಕ್ಕೆ ತೋಚದಂತಾಗಿದೆ.
ವಾಡಿಕೆಗಿಂತ ಈ ಬಾರಿ ಅಕ್ಟೋಬರ್ 22 ರವರೆಗೆ ಜಿಲ್ಲೆಯಾದ್ಯಂತ ಅಧಿಕ ಮಳೆಯಾಗಿದು. ಅಂಕಿಅಂಶಗಳ ಪ್ರಕಾರ ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಶೇಕಡಾ 42ರಷ್ಟು ಮಳೆಯಾದರೆ, ಶಿವಮೊಗ್ಗ ಶೇಕಡ 84, ಸೊರಬ ಶೇಕಡ 114, ತೀರ್ಥಹಳ್ಳಿ ಶೇಕಡ 84, ಶಿಕಾರಿಪುರ ಶೇಕಡಾ 157, ಭದ್ರಾವತಿ ಶೇಕಡ 141 ರಷ್ಟು ಅಧಿಕ ಮಳೆಯಾಗಿದೆ.
ಅಕಾಲಿಕ ಮಳೆ ಅಡಕೆ ಬೆಳೆಗಾರರಿಗೆ ಶಾಪವಾಗಿ ಪರಿಣಮಿಸಿದೆ ಬಯಲುಸೀಮೆ ಪ್ರದೇಶದಲ್ಲಿ ಈಗಾಗಲೇ ಅಡಿಕೆ ಕೊಯ್ಲು ಮುಗಿದು ಮಾರುಕಟ್ಟೆಗೆ ಅಡಿಕೆ ಬಂದಿದೆ. ಆದರೆ ಮಲೆನಾಡ ರೈತರು ಇನ್ನೂ ಕೊಳೆ ಔಷಧಿ ಸಿಂಪರಣೆ ಮಾಡುವ ಪರಿಸ್ಥಿತಿ ಬಂದಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಡಕೆ ಬೆಳೆಗಾರರಿಗೆ ಬೆಳೆನಷ್ಟ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮ್ಯಾಮ್ ಕೋಸ್ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಕಾರಂತ ಮತ್ತು ಶಂಭಾಜೋಶಿ ಸ್ಮರಣ ಪ್ರಶಸ್ತಿ ಪ್ರದಾನ

0

ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಸಂಶೋಧಕ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಹಾಗೂ ಡಾ.ಎನ್.ಎಸ್ ಲೀಲಾ ಅವರಿಗೆ ಕರ್ನಾಟಕ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ, ವಿಜಯನಗರ ಸಾಮ್ರಾಜ್ಯ, ಹಂಪಿಯನ್ನು ಹಾಳು ಮಾಡಿದವರು ಮುಸ್ಲಿಮರು ಎಂಬ ತಪ್ಪು ಕಲ್ಪನೆ ಎಲ್ಲೆಡೆ ಬಿತ್ತರವಾಗಿದೆ. ಆದರೆ, ಹಿಂದೂಗಳ ನಡುವಿನ ಪರಸ್ಪರ ಧ್ವೇಷದಿಂದ ಹಂಪಿ, ಹಾಳು ಬೀಳಲು ಕಾರಣ ಎಂದು ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿದರು.

“ಆಡು ಮುಟ್ಟದ ಸೊಪ್ಪಿಲ್ಲ,ಕಾರಂತರು ಮೆಟ್ಟದ ಜ್ಞಾನ ಕ್ಷೇತ್ರಗಳಿಲ್ಲ”. ಸ್ಥಾನ,ಮಾನ,ಧನದಾಹದ ಈ ಕಾಲದಲ್ಲಿ ಶಿವರಾಮ ಕಾರಂತರ ರ ತಿಳುವಳಿಕೆಗೂ, ನಮ್ಮ ತಿಳುವಳಿಕೆಗೂ ಅಜಗಜಾಂತರವಿದೆ. ಶಿವರಾಮ ಕಾರಂತರು ಮತ್ತು ಶಂಭಾ ಜೋಶಿ ಅವರ ಜೋಡಿ, ದೇಶ ವಿದೇಶಗಳನ್ನು ಸುತ್ತಿ,ಅನೇಕ ಕೋಶಗಳನ್ನು ಓದಿ ಸಂಗ್ರಹಿಸಿಕೊಂಡು. ಆ ಸಾರವನ್ನು ತಮ್ಮ ಲೇಖನದ ಮೂಲಕ ಉಣಬಡಿಸಿದ ಸಾಧನೆ ಕಾರಂತರದ್ದು ಎಂದು ಡಾ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ವಿಜ್ಞಾನ ಬರಹಗಾರ್ತಿ,ನಿವೃತ್ತ ಪ್ರಾಧ್ಯಾಪಕಿ ಡಾ.ಎನ್ ಎಸ್ ಲೀಲಾ ಅವರು ತಿಳಿಸಿದರು.

ದೇವಾಲಯ ನಾಶ ಇಸ್ಕಾನ್ ಪ್ರತಿಭಟನೆ

0

ಜಗತ್ತಿನಾದ್ಯಂತ ಇಸ್ಕಾನ್ ಅನುಯಾಯಿಗಳು ದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮತ್ತು ಇಬ್ಬರು ಇಸ್ಕಾನ್ ಅನುಯಾಯಿಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು. ಭಾರತ ಸೇರಿ ವಿಶ್ವದ 150 ದೇಶಗಳಲ್ಲಿ ಇರುವ 700 ಇಸ್ಕಾನ್ ಮಂದಿರಗಳ ಭಕ್ತರು ಪ್ರತಿಭಟನೆ ನಡೆಸಿದರು. ಹನ್ನೆರಡು ಗಂಟೆಗಳ ಕಾಲ ಇಸ್ಕಾನ್ ಮಂದಿರಗಳಲ್ಲಿ ಅಖಂಡ ಭಜನೆ ನಡೆಸಲಾಯಿತು.
ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳು, ಮನೆ ಅಂಗಡಿಗಳ ಮೇಲೆ ನಡೆಸಿರುವ ಸರಣಿ ದಾಳಿ ಹಾಗೂ ಇಸ್ಕಾನ್ ಅನುಯಾಯಿಗಳ ಹತ್ಯೆಯಿಂದಾಗಿ ಹಿಂದುಗಳು ಆಘಾತ ಗೊಂಡಿದ್ದು, ಬಾಂಗ್ಲಾದೇಶದ ಹಿಂದುಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಇಸ್ಕಾನ್ ವಕ್ತಾರ ಬಿಮಲ್ ಕೃಷ್ಣದಾಸ ತಿಳಿಸಿದರು.