Friday, February 20, 2026
Friday, February 20, 2026
Home Blog Page 203

Institute of Science Technology Research and Arts Progress ಇಸ್ರೋ ಬಾಹ್ಯಾಕಾಶ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳ ಆಸಕ್ತಿ‌ ಮೂಡಿಸಲು ಕೃಷಿ ವಿವಿಯಿಂದ ಅನ್ವೇಷಣೋತ್ಸವ-2025

0

Institute of Science Technology Research and Arts Progress ವಿಜ್ಞಾನ ತಂತ್ರಜ್ಞಾನ ಸಂಶೋಧನೆ ಮತ್ತು ಕಲಾ ಪ್ರಗತಿ ಸಂಸ್ಥೆ (SASTRA) ಹಾಗು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ(KSSRC) ವತಿಯಿಂದ ಕೆಳದಿ ಶಿವಪ್ಪ ನಾಯಕ ಕೃಷಿ ತೋಟಗಾರಿಗೆ ವಿಜ್ಞಾನಗಳ ವಿಶ್ವವಿದ್ಯಾಲಯ (KSNUAHS), ಶಿವಮೊಗ್ಗ ಇವರ ಸಹಯೋಗದಲ್ಲಿ ಐದು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ – ಅನ್ವೇಷಣೋತ್ಸವ2025 ಕಾರ್ಯಕ್ರಮ ನಡೆಸಲಾಗುತ್ತಿದೆ. ದಿನಾಂಕ 18-08-2025 ರಿಂದ 22-8-2025 ರವರೆಗೆ ದೇಶದ ವಿವಿಧ ಸರ್ಕಾರಿ ಹಾಗು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.

ಇಸ್ರೋ ನಡೆಸುವ ಸ್ಪೇಸ್ ಆನ್ ವೀಲ್ಸ್ (Space on Wheels) ಈ ಪ್ರದರ್ಶನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಬಾಹ್ಯಾಕಾಶ ವಿಜ್ಞಾನ ಹಾಗೂ ತಂತ್ರಜ್ಞಾನಗಳ ಬಗ್ಗೆ ಕುತೂಹಲ ಮೂಡಿಸಲು ರೂಪುಗೊಂಡಿದೆ. ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿ ವಿಜ್ಞಾನ ಕಂಪು ಪಸರಿಸುವ ಉದ್ದೇಶವಾಗಿದೆ.

ಇಸ್ರೋ ಕಾರ್ಯಕ್ರಮದ ವೈಶಿಷ್ಟ್ಯಗಳು:
• ಉಪಗ್ರಹಗಳ ಮಾದರಿ ಪ್ರದರ್ಶನ (INSAT, ಚಂದ್ರಯಾನ, ಮಂಗಳಯಾನ ಇತ್ಯಾದಿ)
• ಉಡಾವಣಾ ವಾಹನಗಳ ಮಾದರಿ (PSLV, GSLV ಇತ್ಯಾದಿ)
• ಬಾಹ್ಯಾಕಾಶ ನೌಕೆಗಳ ಚಿತ್ರ-ಮಾದರಿಗಳು
• ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪೋಸ್ಟರ್ ಹಾಗೂ ಮಾಹಿತಿ ಫಲಕಗಳು
• ಆಡಿಯೋ-ವಿಜುವಲ್ ಪ್ರದರ್ಶನಗಳು
• ವಿದ್ಯಾರ್ಥಿಗಳೊಂದಿಗೆ ಸಂವಾದ (ಇಸ್ರೋ ವಿಜ್ಞಾನಿಗಳಿಂದ)

ವಿ.ಐ.ಟಿ.ಎಂ – ಸೈನ್ಸ್ ಆನ್ ವೀಲ್ಸ್
ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನ ಸಂಗ್ರಹಾಲಯ (Visvesvaraya Industrial & Technological Museum – VITM) ನಡೆಸುವ “ಸೈನ್ಸ್ ಆನ್ ವೀಲ್ಸ್” (Museum on Wheels) ಮೊಬೈಲ್ ಪ್ರದರ್ಶನವು ಗ್ರಾಮಾಂತರ ಹಾಗೂ ಅರೆ-ನಗರ ಪ್ರದೇಶಗಳ ಜನತೆಗೆ ವಿಜ್ಞಾನ ತಲುಪಿಸುವ ವಿಶಿಷ್ಟ ಯೋಜನೆಯಾಗಿದೆ.

ಈ ಬಸ್‌ನಲ್ಲಿ 24 ವೈಜ್ಞಾನಿಕ ಪ್ರದರ್ಶನ ವಸ್ತುಗಳು ಅಳವಡಿಸಲ್ಪಟ್ಟಿದ್ದು, ಜನರು ತಮ್ಮ ಊರನ್ನು ಬಿಟ್ಟುಕೊಳ್ಳದೆ ವಿಜ್ಞಾನವನ್ನು ಅನುಭವಿಸಲು ಅವಕಾಶ ದೊರೆಯುತ್ತದೆ.

VITM ಕಾರ್ಯಕ್ರಮದ ವೈಶಿಷ್ಟ್ಯಗಳು:
• ಬಸ್‌ನಲ್ಲಿ ಅಳವಡಿಸಿದ 24 ವಿಜ್ಞಾನ ಪ್ರದರ್ಶನ ವಸ್ತುಗಳು
• ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರಾಯೋಗಿಕ ಮಾದರಿಗಳು
• ಪ್ರದರ್ಶನ + ವಿವರಣೆ ಮೂಲಕ ಸರಳವಾಗಿ ವಿಜ್ಞಾನ ಪರಿಚಯ
• ವಿದ್ಯಾರ್ಥಿಗಳಿಗೆ ಹಸ್ತಪ್ರಯೋಗ (hands on learning) ಕಲಿಕೆಯ ಅನುಭವ.

ಉದ್ದೇಶಗಳು:
• ಪ್ರಾಯೋಗಿಕ ಕಲಿಕೆಯಿಂದ ವಿಜ್ಞಾನ ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ಮಾಡುವುದು.

Institute of Science Technology Research and Arts Progress ಡಿಆರ್‌ಡಿಓ (Defence Research and Development Organisation)
ತನ್ನ ತಂತ್ರಜ್ಞಾನ ಸಾಧನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ವಿವಿಧ ಜನಸಂಪರ್ಕ (Outreach) ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಇವುಗಳ ಮೂಲಕ ದೇಶದ ರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ವಿಜ್ಞಾನ-ತಂತ್ರಜ್ಞಾನ ಆವಿಷ್ಕಾರಗಳನ್ನು ಜನಸಾಮಾನ್ಯರಿಗೂ ತಲುಪಿಸಲಾಗುತ್ತದೆ.

DRDO ಕಾರ್ಯಕ್ರಮದ ವೈಶಿಷ್ಟ್ಯಗಳು:
• ಪ್ರದರ್ಶನಗಳು – ಡಿಆರ್‌ಡಿಓ ಅಭಿವೃದ್ಧಿಪಡಿಸಿದ ಶಸ್ತ್ರಾಸ್ತ್ರ, ರಕ್ಷಣಾ ತಂತ್ರಜ್ಞಾನ, ರೋಬೋಟಿಕ್ಸ್, ರಾಡಾರ್, ಡ್ರೋನ್‌ಗಳು ಇತ್ಯಾದಿ
• ವಿದ್ಯಾರ್ಥಿ ಕಾರ್ಯಾಗಾರಗಳು – ವಿಜ್ಞಾನ-ತಂತ್ರಜ್ಞಾನದಲ್ಲಿ ವೃತ್ತಿ ರೂಪಿಸಲು ಪ್ರೇರಣೆ ನೀಡುವುದು
• ವೀಡಿಯೊ / ಚಲನಚಿತ್ರ ಪ್ರದರ್ಶನ – ಉದಾಹರಣೆಗೆ ಮಿಷನ್ ಶಕ್ತಿ ಕುರಿತ ಮಕ್ಕಳಿಗಾಗಿ ಡಾಕ್ಯುಮೆಂಟರಿ ತಯಾರಿಸಲಾಗಿತ್ತು, ಇದರಲ್ಲಿ ಡಿಆರ್‌ಡಿಓ ಸಾಮರ್ಥ್ಯಗಳನ್ನು ಸರಳವಾಗಿ ವಿವರಿಸಲಾಗಿದೆ
• ವಿಜ್ಞಾನಿಗಳೊಂದಿಗೆ ಸಂವಾದ – ವಿದ್ಯಾರ್ಥಿಗಳಿಗೆ ನೇರ ಪ್ರೇರಣೆ ಮತ್ತು ಮಾರ್ಗದರ್ಶನ.

ಪ್ಲಾಸ್ಮಾ ಸಂಶೋಧನಾ ಸಂಸ್ಥೆ (IPR)
ಪ್ಲಾಸ್ಮಾ ಮತ್ತು ಫ್ಯೂಷನ್ ತಂತ್ರಜ್ಞಾನ ಜನರಿಗೆ ಹತ್ತಿರ
ಪ್ಲಾಸ್ಮಾ ಸಂಶೋಧನಾ ಸಂಸ್ಥೆ (Institute for Plasma Research – IPR), ಗಾಂಧಿನಗರ, ಗುಜರಾತ್
ಇದು ಭಾರತ ಸರ್ಕಾರದ ಅಣುಶಕ್ತಿ ಇಲಾಖೆಯ (DAE) ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಂಶೋಧನಾ ಸಂಸ್ಥೆಯಾಗಿದ್ದು, ಪ್ಲಾಸ್ಮಾ ಮತ್ತು ಫ್ಯೂಷನ್ ವಿಜ್ಞಾನದಲ್ಲಿ ದೇಶದ ಮುಂಚೂಣಿಯ ಸಂಸ್ಥೆ.

ಪ್ರದರ್ಶನದ ವೈಶಿಷ್ಟ್ಯಗಳು:
• ಪ್ಲಾಸ್ಮಾದ ಜೀವಂತ ಪ್ರದರ್ಶನಗಳು – ವಿವಿಧ ಬಗೆಯ ಪ್ಲಾಸ್ಮಾ ಮತ್ತು ಅವುಗಳ ಪ್ರಾಯೋಗಿಕ ಉಪಯೋಗಗಳು
• ತ್ಯಾಜ್ಯ ನಿರ್ವಹಣೆ (Waste Management)
• ವಸ್ತ್ರೋದ್ಯಮ (Textile Industry)
• ವೈದ್ಯಕೀಯ ಕ್ಷೇತ್ರ (Medical Applications)
• ಫ್ಯೂಷನ್ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರದರ್ಶನಗಳು
• ಟೋಕಮಾಕ್ (Tokamak) ಮಾದರಿ ಮತ್ತು ಅದರ ಪ್ಲಾಸ್ಮಾ ಬಂಧನ ಕಾಯಿಲ್‌ಗಳು
• ಐಟರ್ (ITER) ಯೋಜನೆಯ ಸ್ಕೇಲ್ ಮಾದರಿ
• ಕ್ರಯೊ-ಪಂಪ್ (Cryo-pump) ಹಾಗೂ ಅದರ ಉಪಯೋಗಗಳು
• ಪೋಸ್ಟರ್‌ಗಳು ಮತ್ತು ಮಾಹಿತಿ ಫಲಕಗಳು – ಪ್ಲಾಸ್ಮಾ ತಂತ್ರಜ್ಞಾನದ ಸಂಶೋಧನೆ ಮತ್ತು ಅದರ ಭವಿಷ್ಯ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ವಿಶೇಷ
• ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪ್ಲಾಸ್ಮಾ ಮತ್ತು ಫ್ಯೂಷನ್ ವಿಜ್ಞಾನದಲ್ಲಿ ಜ್ಞಾನ ವೃದ್ಧಿ
• ವಿಜ್ಞಾನ ಪ್ರೇಮಿಗಳಿಗೆ ಹೊಸ ತಂತ್ರಜ್ಞಾನಗಳ ಪರಿಚಯ
• ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿ ರೂಪಿಸಲು ಪ್ರೇರಣೆ ಮತ್ತು ಮಾರ್ಗದರ್ಶನ.

ಭಾರತ ಡೊಮ್ ಇನೋವೇಶನ್ಸ್ ರವರ ಮೊಬೈಲ್ ಪ್ಲಾನೆಟೋರಿಯಂ ಮತ್ತು ಟೆಲಿಸ್ಕೋಪ್ (Bharath Dome Innovation’s Planetarium & Telescope) ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಸಂಪೂರ್ಣ ಡೋಮ್ (Full-dome) ಶೋಗಳು ಮೂಲಕ ಬಾಹ್ಯಾಕಾಶದ ಅದ್ಭುತ ಜಗತ್ತನ್ನು ಪರಿಚಯಿಸುತ್ತದೆ. ಇದು ಶಾಲೆಗಳು, ಕಾಲೇಜುಗಳು ಹಾಗೂ ಸಮುದಾಯ ಕೇಂದ್ರಗಳಿಗೆ ತೆರಳಿ ಜ್ಯೋತಿಶಾಸ್ತ್ರ ಮತ್ತು ಬಾಹ್ಯಾಕಾಶ ವಿಜ್ಞಾನವನ್ನು ನೇರವಾಗಿ ತಲುಪಿಸುತ್ತದೆ.

ಭಾರತ್ ಡೊಮ್ ಕಾರ್ಯಕ್ರಮದ ವೈಶಿಷ್ಟ್ಯಗಳು:
• ನಕ್ಷತ್ರಗಳು, ಗ್ರಹಗಳು, ಆಕಾಶಗಂಗೆಗಳು ಮತ್ತು ಬಾಹ್ಯಾಕಾಶ ಮಿಷನ್‌ಗಳ ಬಗ್ಗೆ ಡೋಮ್ ಶೋಗಳು
• ಇಂಟರಾಕ್ಟಿವ್ ಸೆಷನ್‌ಗಳು ಹಾಗೂ ಹಸ್ತಪ್ರಯೋಗ ಚಟುವಟಿಕೆಗಳು
• ಟೆಲಿಸ್ಕೋಪ್ ತಯಾರಿ ಹಾಗೂ ಮಾದರಿ ರಾಕೆಟ್ ನಿರ್ಮಾಣ ಕಾರ್ಯಾಗಾರಗಳು
• ವಿಜ್ಞಾನಿಗಳಿಂದ ನೇರ ಪ್ರಸ್ತುತಿಗಳು

ಉದ್ದೇಶಗಳು:
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನ ಕುತೂಹಲ ಮೂಡಿಸುವುದು
• ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸಾಧಿಸಿರುವ ತಾಂತ್ರಿಕ ಶಕ್ತಿ ಮತ್ತು ಸ್ವಾವಲಂಬನೆ ಪರಿಚಯಿಸುವುದು
• ವಿಜ್ಞಾನ ಮತ್ತು ಇಂಜಿನಿಯರಿಂಗ್ ವೃತ್ತಿಗೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು
ಉದ್ದೇಶ:
• ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಬಗ್ಗೆ ಕುತೂಹಲ ಬೆಳೆಸುವುದು
• ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧಿಸಿದ ಹೆಜ್ಜೆಗುರುತುಗಳನ್ನು ಪರಿಚಯಿಸುವುದು
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನದ ಬಗ್ಗೆ ಪ್ರೇರಣೆ ಮೂಡಿಸುವುದಾಗಿದೆ ಎಂದು ಆಯೋಜನಾ ಸಮಿತಿಯ ಸದಸ್ಯರಾದ ಡಾ. ಎಸ್. ಓಂಕಾರ್ ನಾಯ್ಕ್, (ಅಧ್ಯಕ್ಷರು, SASTRA) ಉದ್ದೇಶಗಳು:
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನ ಕುತೂಹಲ ಮೂಡಿಸುವುದು
• ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸಾಧಿಸಿರುವ ತಾಂತ್ರಿಕ ಶಕ್ತಿ ಮತ್ತು ಸ್ವಾವಲಂಬನೆ ಪರಿಚಯಿಸುವುದು
• ವಿಜ್ಞಾನ ಮತ್ತು ಇಂಜಿನಿಯರಿಂಗ್ ವೃತ್ತಿಗೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು
ಉದ್ದೇಶ:
• ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಬಗ್ಗೆ ಕುತೂಹಲ ಬೆಳೆಸುವುದು
• ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧಿಸಿದ ಹೆಜ್ಜೆಗುರುತುಗಳನ್ನು ಪರಿಚಯಿಸುವುದು
• ಯುವ ಮನಸ್ಸಿನಲ್ಲಿ ವಿಜ್ಞಾನ-ತಂತ್ರಜ್ಞಾನದ ಬಗ್ಗೆ ಪ್ರೇರಣೆ ಮೂಡಿಸುವುದಾಗಿದೆ ಎಂದು ಆಯೋಜನಾ ಸಮಿತಿಯ ಸದಸ್ಯರಾದ ಡಾ. ಎಸ್. ಓಂಕಾರ್ ನಾಯ್ಕ್, (ಅಧ್ಯಕ್ಷರು, SASTRA) ತಿಳಿಸಿದ್ದಾರೆ.

Keladi Shivappa Nayaka University of Agricultural ಆಗಸ್ಟ್ 18 ರಂದು ಇರುವಕ್ಕಿಯಲ್ಲಿನ ಕೃಷಿ ವಿವಿಯಲ್ಲಿ ” ಅಡಿಕೆ ಕೃಷಿ, ರೋಗ, & ಕೀಟಗಳ ನಿರ್ವಹಣೆ ” ಬಗ್ಗೆ ತರಬೇತಿ ಕಾರ್ಯಕ್ರಮ

0

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ ಹಾಗೂ ಸಸ್ಯ ರೋಗಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ, ಇರುವಕ್ಕಿ ಇವರ ಸಹಯೋಗದೊಂದಿಗೆ ” ಅಡಿಕೆ ಬೇಸಾಯ, ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ ಯಲ್ಲಿ ದಿನಾಂಕ:18.08.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

Keladi Shivappa Nayaka University of Agricultural ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

District Legal Services Authority ನ್ಯಾ.ಎಂ.ಎಸ್.ಸಂತೋಷ್ ಅವರಿಂದ ಅಬ್ಬಲಗೆರೆ ಗ್ರಾಮ ಪಂಚಾಯತ್ ನ ಅಂಗನವಾಡಿಗೆ ಅನಿರೀಕ್ಷಿತ ಭೇಟಿ

0

District Legal Services Authority ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ ಎಸ್ ರವರು ಅಬ್ಬಲಗಿರಿ ಗ್ರಾಮ ಪಂಚಾಯತ್ ನಲ್ಲಿರುವ ಅಂಗನವಾಡಿಗೆ ಅನಿರೀಕ್ಷಿತ ಭೇಟಿ ನೀಡಿ ಸ್ಥಳ ಪರಿಶೀಲನೆ ಮತ್ತು ವಹಿಗಳ ತಪಾಸಣೆ ಮಾಡಿದರು.

Independence Day ವಿವಿಧ ಕ್ಷೇತ್ರದಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ಸನ್ಮಾನ

0

Independence Day 79 ಸ್ವಾತಂತ್ರ ದಿನಾಚರಣೆ 2025 ರ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ.ಬಸ್.ನಿಲ್ದಾಣ ಶಿವಮೊಗ್ಗದಲ್ಲಿ ನೇಸರ ಸೆಂಟರ್ ಫಾರ್ ರೂರಲ್ ಅಡ್ವಾನ್ಸ್ ಮೆಂಟ್ (ರಿ), ಶಿವಮೊಗ್ಗ, ನಿಸರ್ಗ ಶಿಕ್ಷಣ ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ,(ರಿ) ರಿಪ್ಪನ್ ಪೇಟೆ,
ಶ್ರೀ ಅನ್ನಪೂರ್ಣಶ್ವರಿ ಸ್ವಸಹಾಯ ಸಂಘ, ವಿನೋಬನಗರ, ಶಿವಮೊಗ್ಗ, ಮಹಾಲಕ್ಷ್ಮೀ ಆಟೋಮೊಬೈಲ್ಸ್, ಆಟೋಕಾಂಪ್ಲೆಕ್ಸ್, ಶಿವಮೊಗ್ಗ, ಇವರುಗಳ ಸಂಯುಕ್ತ ಆಶ್ರದಲ್ಲಿ ಸಾರ್ವಜನಿಕರ ಪರವಾಗಿ ಈ ಅಭಿನಂದನಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ ಸೇವೆ ಸಲ್ಲಿಸುತ್ತಿರುವ ಸಮುದಾಯದ ವ್ಯವಹಾರಿಕಯಾದ ಶ್ರೀಮತಿ ಅನುಪಮಾ.T.R. ರವರಿಗೆ ಮತ್ತು ಕೋಲಾರ ವಿಭಾಗ ದಿಂದ ಕೊಲ್ಲೂರು ಹೋಗುವ ಕ.ರಾ.ರ. ಸಾ.ಸಂಸ್ಥೆ. ಬಸ್ ಚಾಲಕರಾದ ಶ್ರೀ ನಾಗರಾಜ್ & Independence Day ನಿರ್ವಹಕರಾದ ಶ್ರೀ ಶ್ರೀ ಮಂಜುನಾಥ್.K. ರವರುಗಳು ಉತ್ತಮ ಕರ್ತವ್ಯ ನಿರ್ವಹಿಸುತ್ತಿರುವ ಹೆಮ್ಮೆ ಎನಿಸಿದ್ದು ಸಾರ್ವಜನಿಕರಲ್ಲಿ ಅಭಿಪ್ರಾಯ ಪಡೆದು ಸಂಸ್ಥೆಗಳಿಂದ ಸಮೀಕ್ಷೆ ನಡೆಸಿ ಅಭಿನಂದನೆ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದ ಉಪಸ್ಥಿತಿಯಲ್ಲಿ, ನಿಲ್ದಾಣ ಅಧಿಕಾರಿಗಳಾದ ಶ್ರೀ ಕೃಷ್ಣ ಮುರ್ತಿ, ದೂದಾನಾಯಕ್ ವಿಚಾರಣಾ ಕೊಠಡಿ, ಮಂಜುನಾಥ್, ಲೋಕೇಶ್, ದಿನೇಶ, ಉಮೇಶ್, ನಾಗರಾಜ್, ಉಷಾ ಮತ್ತು ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದರು.

ಜಿಲ್ಲಾ ತೋಟಗಾರಿಕಾ ಬೆಳಗಾರರ ಸಂಘದ ವಾರ್ಷಿಕ ಮಹಾಸಭೆ ಪ್ರಕಟಣೆ

0

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆ.19 ರ ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷರಾದ ಆರ್.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಅಪಾರ ಸದಸ್ಯರ ಸಮ್ಮುಖದಲ್ಲಿ ಸರ್ಕಾರಿ ನೌಕರರ ಭವನ, ಆರ್‌ಟಿಓ ಕಚೇರಿ ರಸ್ತೆ, ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದು ಎಲ್ಲಾ ಸದಸ್ಯರು ಆಗಮಿಸಬೇಕೆಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.

B.Y.Raghavendra ವಿಶ್ವಮಟ್ಟದ ಕಣ್ಣಿನ ಚಿಕಿತ್ಸೆಯನ್ನ ಅತ್ಯಂತ ಸಮರ್ಪಕ ವೆಚ್ಚದಲ್ಲಿ ಮಾಡಲಾಗುತ್ತಿದೆ – ಸಂಸದ ರಾಘವೇಂದ್ರ

0

B.Y.Raghavendra ಕುವೆಂಪು ರಸ್ತೆಯಲ್ಲಿ ರುವ ಹೆಚ್.ಇ. ಕಮರ್ಷಿಯಲ್ ಕಟ್ಟಡದಲ್ಲಿರುವ ವಾಸನ್ ಐ ಕೇರ್ ಆಸ್ಪತ್ರೆಯ ವಿಸ್ತರಣೆ ಹಾಗೂ ಹೊಸ ಸುಧಾರಿತ ತಂತ್ರಜ್ಞಾನ ಒಳಗೊಂಡ ಹಾಗೂ ನವೀಕರಣಗೊಂಡಿರುವ ಕಟ್ಟಡದ ಉದ್ಘಾಟನೆಯನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟನೆ ಮಾಡಿದರು.

2012ರಲ್ಲಿ ಶಿವಮೊಗ್ಗದಲ್ಲಿ ಆರಂಭವಾದ ಆಸ್ಪತ್ರೆಯಲ್ಲಿ ವಿಶ್ವಮಟ್ಟದ ಕಣ್ಣಿನ ಚಿಕಿತ್ಸೆ ಯನ್ನು ಅತ್ಯಂತ ಸಮರ್ಪಕ ವೆಚ್ಚದಲ್ಲಿ ನೀಡಲಾಗುತ್ತಿದ್ದು, ಶಿವಮೊಗ್ಗದ ಜನತೆ ಈ ಆಸ್ಪತ್ರೆಯ ಉಪಯೋಗವನ್ನು ಪಡಿಸಿಕೊಳ್ಳವೇಕು ಎಂದು ಸಂಸದರು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಇದುವರೆಗೂ 19 ಶಾಖೆಗಳನ್ನು ಹಾಗೂ ದೇಶದಲ್ಲಿ 169 ಶಾಖೆಗಳನ್ನು ಹೊಂದಿರುವ ವಾಸನ್ ಐ ಕೇರೆ ಆಸ್ಪತ್ರೆ ಹೊಸ ಉತ್ಸಾಹದೊಂದಿಗೆ ಇಂದಿನಿಂದ ಕಾರ್ಯನಿರ್ವಹಿಸಲಿದೆ..

ಈಗಾಗಲೇ ಆಸ್ಪತ್ರೆಯಲ್ಲಿ ಫೇಕೋಯಂತ್ರ ಮತ್ತು ಅತ್ಯಾಧುನಿಕ ಮೈಕ್ರೋ ಸ್ಕೋಪ್‌ಗಳನ್ನು ಬಳಸಿ ಕಣ್ಣಿನ ಪೊರೆ ಹಾಗೂ ರೆಟಿನಾ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ, ಸಾರ್ವಜನಿಕರಿಗೆ ಉತ್ತಮ‌ಸೇವೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.

B.Y.Raghavendra ಪ್ರಸ್ತುತ ಇರುವ ಸೌಲಭ್ಯಗಳಿಗಿಂತ ಹೆಚ್ಚು ಅಂತರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ನವೀಕೃತ ಆಸ್ಪತ್ರೆಯಲ್ಲಿ ಆಳವಡಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಿಯಾಯತಿ ದರದಲ್ಲಿ ಶಸ್ತ್ರಚಿಕಿತ್ಸೆ ನೆಡೆಸಲಾಗುತ್ತದೆ ಎಂದು ನೇತ್ರತಜ್ಞರಾದ ಡಾ. ಚಂದ್ರಕಾಂತ ಪೂಜಾರಿ ಹೇಳಿದ್ರು. ಇನ್ನು ಶಾಖೆಯಲ್ಲಿ ನುರಿತ ನೇತ್ರತಜ್ಞರಾದ ಡಾ. ಆರ್, ಪ್ರಸನ್ನಕುಮಾರ್, ಡಾ. ಗುಣಶ್ರಿ, ಡಾ. ಹೆಚ್, ಜಿ. ರಶ್ಮಿ, ಡಾ. ಶೃತಿ ಬಿದರಿ ಹಾಗೂ ಸಿಬ್ಬಂದಿಗಳು ಇದ್ದು ಸಾರ್ವಜನಿಕ ಸದುಪಯೋಗ ಪಡಿಸಿಕೊಳ್ಳಬೇಕು ವಾಸನ್ ಐ ಕೇರೆ ಡೈರೆಕ್ಟರ್ ಸುಂದರಂ ಮುರುಗೇಶನ್ ತಿಳಿಸಿದರು.

ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕ ಎಸ್.ಎನ್. ಚನ್ನಬಸಪ್ಪ, ಡಿ.ಎಸ್‌. ಅರುಣ್, , ವಿಜಯಲಕ್ಷ್ಮೀ ಸಿ. ಪಾಟೀಲ್, ಆಗಮಿಸಿ ನವೀಕೃತ ಆಸ್ಪತ್ರೆಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭಕೋರಿದರು.

Independence Day ಹರಮಘಟ್ಟದ ಅಂಗನವಾಡಿ ಕೇಂದ್ರದಲ್ಲಿ ವರ್ಣರಜಿತ ಸ್ವಾತಂತ್ರ್ಯೊತ್ಸವ

0

Independence Day ಹರಮಘಟ್ಟ ವಲಯದ ಹುಣಸೋಡು ಅಂಗನವಾಡಿ ಕೇಮದ್ರದಲ್ಲಿ ಮಕ್ಕಳಿಂದ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದೊಂದಿಗೆ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತೆ ಅನಸೂಯ ಬಾಯಿ, ಲೋಕಿ ಬಾಯಿ, ಸಹಾಯಕಿ ಮತ್ತು ಬಾಲ ವಿಕಸ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.

Independence Day ಭದ್ರಾವತಿ ಸೈಲ್- ವಿಐಎಸ್ಎಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

Independence Day ಸುಸಜ್ಜಿತವಾದ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಸೈಲ್-ವಿಐಎಸ್‌ಎಲ್‌ವತಿಯಿಂದ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈಭವದಿಂದ ಆಚರಿಸಲಾಯಿತು. ಸೈಲ್-ವಿಐಎಸ್‌ಎಲ್‌ನ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್.ಚಂದ್ವಾನಿ ಮುಖ್ಯ ಅತಿಥಿಯಾಗಿದ್ದರು, ಮುಖ್ಯ ಅತಿಥಿಯನ್ನು ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಅವರು ಬರಮಾಡಿಕೊಂಡರು. ಮುಖ್ಯ ಅತಿಥಿಗಳು ತ್ರಿವರ್ಣ ಧ್ವಜವನ್ನು ಹಾರಿಸಿದರು. ವಿಐಎಸ್‌ಎಲ್ ಸೆಕ್ಯುರಿಟಿ, ಸರ್.ಎಮ್.ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಪೈಲೆಟ್ಸ್, ಭದ್ರಾವತಿಯ ವಿವಿಧ ಪ್ರೌಢಶಾಲೆಗಳು ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಂದ ಪಥಸಂಚಲನ, ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ಕಾರ್ಯಕ್ರಮಗಳು ನಡೆದವು.

ಶ್ರೀ ಬಿ.ಎಲ್. ಚಂದ್ವಾನಿರವರು ಕವಾಯತ್ತನ್ನು ವೀಕ್ಷಿಸಿ, ಪಥಸಂಚಲನ ತಂಡಗಳಿAದ ಗೌರವ ವಂದನೆ ಸ್ವೀಕರಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

೭೯ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಐಎಸ್‌ಎಲ್ ಸಮುದಾಯದ ಸಾಧಕರಾದ ಶ್ರೀ ಜತಿನ್.ಕೆ, ಕು. ಸಾನಿಕಾ ದೇವಾಂಗ ಮಠ್, ಶ್ರೀ ಪ್ರತೀಕ್ ಬಡಿಗೇರ್, ೨೦೨೪-೨೫ ರಲ್ಲಿ ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದ್ವಿತೀಯ, ಚತುರ್ಥ ಹಾಗೂ ೬ನೇ ರ‍್ಯಾಂಕ್ ಪಡೆದವಾಗಿದ್ದು ಅವರಿಗೆ ಸನ್ಮಾನಿಸಲಾಯಿತು.

ವಿಐಎಸ್.ಎಲ್ ಉದ್ಯೋಗಿಗಳಾದ ಶ್ರೀ ಸೀತಾರಾಮ್, ೨೦೨೪ ದಸರಾ ಸಿ.ಎಂ. ಕಪ್ ಬಾಲ್ ಬ್ಯಾಂಡ್ಮಿAಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ, ಶ್ರೀ ಎಮ್.ಎಸ್.ಕುಮಾರ್, ಉಪ ಮಹಾಪ್ರಬಂಧಕರು (ಚಾಲನೆ), ಶ್ರೀ ಎಮ್. ಕೃಷ್ಣ, ಉಪಪ್ರಬಂಧಕರು (ಮಿಲ್ಸ್ ಮತ್ತು ಆರ್.ಟಿ.ಎಸ್) ಇವರ ಸಕ್ಷಮ್ ಬ್ಯುಸಿನೆಸ್ ಕ್ವಿಜ್ ಸಾಧನೆಗಾಗಿ, ಹಾಗೂ ಶ್ರೀ ನಾಗೇಶ್ ಹಾಗೂ ಶ್ರೀ ಪ್ರವೇಶ್ ಝಾ, ಇವರ ಸಮರ್ಥ್ ಬ್ಯುಸಿನೆಸ್ ಕ್ವಿಜ್ ಸಾಧನೆಗಾಗಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳು ಮತ್ತು ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಹಾಗೂ ಗೌರವಾನ್ವಿತ ಅತಿಥಿಗಳು, ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಸ್ಕೌಟ್ಸ್, ಹಿರಿಯ ಅಧಿಕಾರಿಗಳು, ವಿಐಎಸ್‌ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳೊಂದಿಗೆ ಕುಶಲೋಪರಿ ವಿಚಾರಿಸಿದರು.

Independence Day ಕಾರ್ಯಕ್ರಮವನ್ನು ಶ್ರೀಮತಿ ಕೆ.ಎಸ್. ಶೋಭ, ಉಪ ಪ್ರಬಂಧಕರು (ಹೆಚ್.ಆರ್) ಮತ್ತು ಶ್ರೀ ಎಮ್.ಎಲ್. ಯೋಗೇಶ್, ಕಿರಿಯ ಪ್ರಬಂಧಕರು (ಹೆಚ್.ಆರ್ – ಎಲ್ & ಡಿ) ನಿರೂಪಿಸಿದರು ಮತ್ತು ವಿಐಎಸ್‌ಎಲ್ ಸಾರ್ವಜನಿಕ ಸಂಪರ್ಕ, ಟ್ರಾಫಿಕ್, ನಗರಾಡಳಿತ ಮತ್ತು ಭದ್ರತಾ ಇಲಾಖೆಗಳು ಸಂಯೋಜಿಸಿದ್ದ ಈ ಕಾರ್ಯಕ್ರಮ ನೆರೆದಿದ್ದ ಜನಸಮೂಹದಲ್ಲಿ ದೇಶಭಕ್ತಿ ಮತ್ತು ದೇಶಪ್ರೇಮವನ್ನು ಮೂಡಿಸಿತು.

ಸ್ವಾತಂತ್ರ ದಿನಾಚರಣೆಯ ಅಂಗವಾಗಿ ವಿಐಎಸ್‌ಎಲ್ ವತಿಯಿಂದ ಉಚಿತ ಸಸಿ (ನುಗ್ಗೆ, ಪಪ್ಪಾಯ, ತುಳಸಿ, ಮಾವು, ನೇರಳೆ, ಹೊಂಗೆ ಇತ್ಯಾದಿ) ವಿತರಣಾ ಕಾರ್ಯಕ್ರಮವನ್ನು ೧ ವಾರ ಹಮ್ಮಿಕೊಳ್ಳಲಾಗಿದ್ದು, ಕಂಪನಿಯ ಮುಖ್ಯ ದ್ವಾರದ ಬಳಿ ಸಸಿಯನ್ನು ಪಡೆಯಬಹುದಾಗಿ ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ.

S.N. Channabasappa ರಾಷ್ಟ್ರಗೀತೆ,ರಾಷ್ಡ್ರಧ್ವಜ,& ರಾಷ್ಟ್ರಪ್ರೇಮ‌ ರೂಢಿಸಿ ಅವುಗಳನ್ನ ಗೌರವಿಸುವ ಭಾವನೆಯನ್ನ ನಾವು ಬೆಳೆಸಿಕೊಳ್ಳಬೇಕು- ಎಸ್.ಎನ್.ಚನ್ನಬಸಪ್ಪ

0

S.N. Channabasappa ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರ ಪ್ರೇಮವನ್ನು ಪ್ರೀತಿಸುವ, ಗೌರವಿಸುವ ಹಾಗೂ ಆಧರಿಸುವುದನ್ನು ಪ್ರತಿಯೊಬ್ಬ ಪ್ರಜೆಯು ಬೆಳೆಸಿಕೊಳ್ಳಬೇಕು ಎಂದು ಶಿವಮೊಗ್ಗ ಶಾಸಕರಾದ ಶ್ರೀಯುತ ಹೆಚ್.ಎಸ್.ಚನ್ನಬಸಪ್ಪನವರು ಹಿರಿಯ ಸ್ವಾತಂತ್ರ್ಯ ಹೋರಾಟಗರರಾದ ಗಾಂದಿ ಬಸಪ್ಪನವರ ವಂದೇ ಮಾತರಂ ನಿಲಯದ ಮಹಡಿಯ ಮೇಲೆ 79ನೇ ಸ್ವತಂತ್ರ ದಿನಚಾರಣೆಯ ಧ್ವಜರೋಹಣ ಮಾಡುತ್ತಾ ನುಡಿದರು.

ಮುಂದುವರೆದು ಶ್ರೀಯುತರು ಈ ಕುಟುಂಬ ಎರಡು ರಾಷ್ಟ್ರೀಯ ಹಬ್ಬಗಳಾದ ಗಾಂಧಿ ಜಯಂತಿ ಹಾಗೂ ಸ್ವಾತಂತ್ರ್ಯ ದಿನಚಾರಣೆಯನ್ನು ಅರ್ಥಪೂರ್ಣವಾಗಿ 79 ವರ್ಷದಿಂದ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಹಾಗೂ ಅನುಕರಣೀಯ ಎಂದು ನುಡಿದರು.

ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಯುತ ಸಿ.ಎಸ್.ಚಂದ್ರಬೂಪಾಲ್‌ರವರು ಗಾಂಧಿ ಬಸಪ್ಪನವರ ಈ ಮನೆಯಲ್ಲಿ ಬಾಳಿ ಬದುಕಿದವರು, ಕುಟುಂಬದವರು ಅವರ ಆದರ್ಶಗಳನ್ನು ಮೈಗೂಡಿಕೊಂಡಿ ಸಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ನುಡಿದರು.

S.N. Channabasappa ಅಶೋಕ್ ಗಾಂಧಿ ಬಸಪ್ಪನವರಿಂದ ಸ್ವಾಗತ, ವಾಸುದೇವರವರಿಂದ ಅಧ್ಯಕ್ಷರ ನುಡಿ, ಸತೀಶ್‌ರವರಿಂದ ವಂದನಾರ್ಪಣೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಹಿಯನ್ನು ಹಂಚಿ ಸಂಭ್ರಮಿಸಲಾಯಿತು. ನಂತರ ಬಡಾವಣೆಯ ಜನರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Acharya Tulsi National College of Commerce ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ವಿಶೇಷ ಶ್ರಮಾದಾನ

0

Acharya Tulsi National College of Commerce ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು, ಎರಡು ಮತ್ತು ಮೂರರ ಅಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಕಾಲೇಜಿನಲ್ಲಿ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಅದರ ಅರಿವು ಮತ್ತು ಜಾಗೃತಿಯನ್ನು ಮೂಡಿಸಲಾಯಿತು.
ಪ್ರಾಂಶುಪಾಲರಾದ ಮಮತಾ ಪಿ ಆರ್ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಒಂದರ ಅಧಿಕಾರಿಯಾದ ಮಂಜುನಾಥ್ ಎನ್ ಘಟಕ 2 ಅಧಿಕಾರಿ ಪ್ರೊ ಪ್ರವೀಣ್ ಬಿ ಎನ್ ಘಟಕ 3 ಅಧಿಕಾರಿ ಗಾಯತ್ರ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.