Reliance Company ರಿಲಯನ್ಸ್ ಕಂಪನಿ ಸಹ ಬಾಗಿತ್ವದಲ್ಲಿ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್ ನಲ್ಲಿ ರಾಷ್ಟ್ರಧ್ವಜವಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಮಾರಾಟ ಮಾಡಲು ಮುಂದಾಗಿರುತ್ತಾರೆ ಈ ಬಾಟಲಿಯು ಜನರು ಕುಡಿದ ಮೇಲೆ ಎಲ್ಲಿಂದಲ್ಲಿ ಎಸೆಯುವ ಪ್ರವೃತ್ತಿಯನ್ನು ಹೊಂದಿರುತ್ತಾರೆ ಅಲ್ಲದೇ ಆ ಬಾಟಲಿಯನ್ನು ಎಲ್ಲರೂ ತುಳಿದುಕೊಂಡು ಓಡಾಡುವ ಸಂದರ್ಭ ಇರುತ್ತದೆ. Reliance Company ಈ ಬಾಟಲಿಯ ಮೇಲೆ ನಮ್ಮ ರಾಷ್ಟ್ರಧ್ವಜ ಹೋಲುವ ಚಿತ್ರವನ್ನು ಮುದ್ರಿಸುವುದರಿಂದ ಅದನ್ನು ತುಳಿಯುವುದು ಎಸೆಯುವುದು ಅ ಗೌರವ ತೋರಿದಂತಾಗುತ್ತದೆ ಹಾಗಾಗಿ ಈ ಕೂಡಲೇ ಆ ಬಾಟಲಿಯ ಮೇಲೆ ಇರುವ ಚಿತ್ರವನ್ನು ನಿಷೇಧಿಸುವಂತೆ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಈ ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ನಗರಾಧ್ಯಕ್ಷರಾದ ಜೀವನ್ ಡಿ ಜಿಲ್ಲಾ ಕಾರ್ಯದರ್ಶಿ ರಾಮು ನಗರ ಕಾರ್ಯದರ್ಶಿ ರಾಮು ಯುವ ಅಧ್ಯಕ್ಷ ಸಂತೋಷ್ ಪದಾಧಿಕಾರಿಗಳು ಹಾಜರಿದ್ದರು
Independence Day ಸಿರಿಗೆರೆಯಲ್ಲಿ ಶಾಲಾಮಕ್ಕಳಿಗೆ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಸ್ವೆಟರ್ ವಿತರಣೆ
Independence Day ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆ ಅಡಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಿರಿಗೆರೆ ವಿದ್ಯಾರ್ಥಿಗಳಿಗೆ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರರವರು ಸ್ವೆಟರ್ ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜಿತ, ಅಭಿಜಿತ್, ಗ್ರಾಮದ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.
Independence Day ಮಕ್ಕಳಲ್ಲಿ ಆತ್ಮಸ್ಥೈರ್ಯ ವೃದ್ಧಿಯಾಗಬೇಕು- ಗಾರಾ ಶ್ರೀನಿವಾಸ್
Independence Day ಶಿವಮೊಗ್ಗ ನಗರದ ಇಸ್ಲಾಪುರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಸಾಂಸ್ಕೃತಿಕ ಸ್ವಾತಂತ್ರ್ಯೋತ್ಸವವನ್ನು ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಪೋರಂ ವತಿಯಿಂದ ಆಯೋಜಿಸಲಾಗಿತ್ತು, ಶಾಶ್ವತ ಧ್ವಜಸ್ಥಂಭದ ಧ್ವಜಾರೋಹಣವನ್ನು ಶಾಲಾ ಅಭಿವೃದ್ದಿ ಸಮಿತಿಯ ಜಯಲಕ್ಷ್ಮೀ ನೆರವೇರಿಸಿದರು,
ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಪೋರಂ ಅಧ್ಯಕ್ಷರಾದ ಗಾರಾ.ಶ್ರೀನಿವಾಸ್ ರವರು ಮಾತನಾಡಿ ಮಕ್ಕಳಲ್ಲಿ ಆತ್ಮಸ್ಥೇರ್ಯ ವೃದ್ದಿಯಾಗಬೇಕಿದೆ, ಅದರಿಂದ ಅವರೊಳಗಿನ ಸಾಮರ್ಥ್ಯ ಹೊರಬೀಳಲು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶಾಂತರವರ ಶಿಕ್ಷಕ ತಂಡ ಉತ್ತಮ ಕೆಲಸ ನಿರ್ವಹಿಸುತ್ತಿದೆ, ಶಿಕ್ಷಣಕ್ಕೆ ಎಷ್ಟು ಹೊತ್ತು ಕೊಡಬೇಕು ಅಷ್ಟೆ ಸಾಂಸ್ಕೃತಿಕವಾಗಿಯು ನೀಡಿದ್ದಾರೆ, ಹೀಗಾಗಿಯೇ ಎಲ್ಲಾ ಮಕ್ಕಳಲ್ಲೂ ಕಲಾ ಆಸಕ್ತಿ ತಳೆದಿದೆ ಎಂದರು,
ದೇಶಭಕ್ತಿ ಗೀತೆ, ನೃತ್ಯ, ಭಾಷಣ ಹಾಗೂ ಬಾಲ್ಯವಿವಾಹ ಎಂಬುವ ಸಾಮಾಜಿಕ ಪಿಡಗಿನ ಜ್ವಲತಂತೆಯನ್ನು ಕಿರುನಾಟಕದ ಮೂಲಕ ಕಟ್ಟಿಕೊಟ್ಟ ವಿದ್ಯಾರ್ಥಿಗಳಾದ ಪ್ರಕೃತಿ, ಮಹಾಲಕ್ಷ್ಮೀ, ಚೆಂದನ, ಅನು, ಪಲ್ಲವಿ, ಸಂಜಯ್, ಐಶು, ಪ್ರತಿಕ್ಷ, ಸ್ವಪ್ನ, ತೇಜಸ್ರವರ ಪ್ರಯತ್ನ ನಿಜಕ್ಕೂ ಭಾವನಾತ್ಮಕವಾಗಿ ಕೂಡಿತ್ತು, ಅವರಲ್ಲಿನ ಸ್ವಯಂಪ್ರೇರಿತವಾದ ಕಲಾ ಕೌಶಲ್ಯ ಹಾಗೂ ಶಿಕ್ಷಕರ ಪ್ರೋತ್ಸಾಹ ಮೆಚ್ಚುವಂತಹದ್ದು ಎಂದು ವಿವರಿಸಿದರು,
ಸನ್ಮಾನಿತರಾಗಿ ಆಗಮಿಸಿದ್ದ ವಕೀಲರು ಆಗಿರುವ ಎಲ್.ಗೀತಾಮಾನೆ ಅವರು ಮಾತನಾಡಿ, ಸ್ವಾತಂತ್ರ್ಯ ಎಂಬುದು ಹಾಗೆಯೇ ಬಂದಿದ್ದಲ್ಲ ಹಿರಿಯರ ಶ್ರಮ, ಹೋರಾಟ, ತ್ಯಾಗ ಬಲಿದಾನಗಳಿಂದ ಬಂದಿದೆ, ಸ್ವಾತಂತ್ರ್ಯದ ಹಿಂದಿನ ದಿನಗಳು ಹಾಗೂ ನಂತರದ ದಿನಗಳನ್ನು ಉಲ್ಲೇಖಿಸಿದ ಅವರು ಸಾಂವಿಧಾನಿಕವಾದ ಓದು ಹಾಗೂ ಹೋರಾಟಗಾರರ ನಿಲುವುಗಳ ಹೆಜ್ಜೆಗಳನ್ನು ಇಂದು ಸ್ಮರಿಸಲೇಬೇಕು ಜೀವನದ ಜೊತೆಗೆ ನೆನಪು ಮಾಡಿಕೊಳ್ಳಬೇಕಾದ ಹೊತ್ತು ಇದಾಗಿದೆ ಎಂದು ಎಲ್.ಗೀತಾಮಾನೆ ಅವರು ನುಡಿದರು,
Independence Day ಶಿಕ್ಷಣ, ಶಿಕ್ಷಕರವರುಗಳ ಪಾತ್ರ ಬಹುಮುಖ್ಯವಾಗಿದೆ, ಶಿಕ್ಷಕರಾದವರು ದಂಡನೆ ನೀಡದೆ ಹೋದರೆ ವಿದ್ಯಾರ್ಥಿಗಳು ಉತ್ತಮ ಪ್ರಜೆ ಆಗಲು ಸಾಧ್ಯವಾಗುವುದಿಲ್ಲ, ಇದಕ್ಕೆ ಪೋಷಕರು ಕೂಡ ಜವಾಬ್ದಾರಿ ಮೆರೆದು ಶಿಕ್ಷಕರಿಗೆ ಬೆಂಬಲಿಸುವ ಅಗತ್ಯತೆ ಇದೆ, ಇಲ್ಲವಾದಲ್ಲಿ ಹದಿಹರೆಯದ ಅವರ ಅಪ್ರಬುದ್ದತೆಯ ತಪ್ಪಿಗೆ ಮುಂದೊಂದು ದಿನ ಅದು ಮುಂದುವರೆದು ಜೈಲಿನಲ್ಲಿ ಕಾಲ ದೂಡುವ ಸಂದರ್ಭಗಳು ಎದುರಾಗಬಹುದು ಹೀಗಾಗಿ ಶಿಕ್ಷಣದ ಆಸಕ್ತಿಯೊಂದಿಗೆ ಶಿಕ್ಷಕರಿಗೆ ಗೌರವಿಸುವ ಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ಈ ಸಂದರ್ಭದಲ್ಲಿ ವಕೀಲರಾದ ಎಲ್.ಗೀತಾಮಾನೆ ಅವರಿಗೆ ಸನ್ಮಾನಿಸಲಾಯಿತು, ಹಾಗೂ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಪೋರಂ ನಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಲಾಯಿತು, ವೇದಿಕೆಯಲ್ಲಿ ನಿವೃತ್ತ ಪ್ರಾಧ್ಯಪಕರಾದ ಪುಷ್ಪಾವತಿ ಹಾಗೂ ಶಾಲಾ ಅಭಿವೃದ್ದಿ ಸಮಿತಿಯ ಜಯಲಕ್ಷ್ಮೀ ರವರುಗಳು ಉಪಸ್ಥಿತರಿದ್ದರು,
ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಉಮಾ, ಲೀಲಾವತಿ, ನಿವೃತ್ತ ಶಿಕ್ಷಕಿ ಸರೋಜ, ಹಾಗೂ ಪೋರಂ ನ ನವೀನ್ ತಲಾರಿ, ಪರಮೇಶ್ವರ್, ಅನಿಲ್, ಭರತ್ ಗುತ್ತಿ, ಚಿರಂಜೀವಿ ಬಾಬು, ಸಿದ್ದರಾಮ ಅವರುಗಳು ಭಾಗವಹಿಸಿದ್ದರು.
Independence Day ನಾವೆಲ್ಲಾ ಒಂದೇ ಎಂಬ ಭಾವನೆ ಹಿಡಿದೆತ್ತಿ ದೇಶದ ಪ್ರಗತಿಗೆ ಕೈಜೋಡಿಸಬೇಕು- ಮಂಜುಳಾ ಬಿ.ಹೆಗಡಾಳ್.
Independence Day ನಮ್ಮದೇಶ ಹಳ್ಳಿಗಳ ನಾಡು ಹಲವು ಜಾತಿ, ಮತ,ಧರ್ಮಗಳ, ಭೇದ ಭಾವ ವಿಲ್ಲದ ದೇಶ ಯಾವುದಾದರು ಇದೆ ಅಂದರೆ ಅದು, ಪಂಚದಲ್ಲಿಯೇ ನಮ್ಮ ದೇಶ ಮಾತ್ರ. ಹಾಗಾಗಿಯೇ ವಿವಿಧತೆಯಲ್ಲಿ ಏಕತೆಯನ್ನು ಸಾರುವ ಏಕೈಕ ರಾಷ್ಟ್ರ ಭಾರತ ದೇಶ ಮಾತ್ರ ಎಂದು ನಿವೃತ ಆರ್ಮಿ ಸುಬೇದಾರ್ ಚಂದ್ರಪ್ಪ ಬಿ. ಅಭಿಪ್ರಾಯಪಟ್ಟರು.
ಅವರು ಗುರುಪುರದ ಬಿಜಿಎಸ್ ಶಾಲಾ- ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ದೇಶ ಈಗ ಹೊಂದುತ್ತಿರುವ ಅಭಿವೃದ್ಧಿಯ ಹೆಜ್ಜೆಗಳು ಸದ್ಯದಲ್ಲೇ ಇನ್ನಷ್ಟು ಒಳ್ಳೆಯ ನಿರೀಕ್ಷಿತ ಫಲ ನೀಡುತ್ತವೆ ಎಂದು ಹೇಳಿದರು.
ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದಂತಹ ಸಂವಿಧಾನದಿಂದ ಶಿಕ್ಷಣ, ಬಡತನ, ಹಸಿವಿನಿಂದ ಇಂಗಿಸುವ ಜೊತೆಗೆ ಇನ್ನಷ್ಟು ವೈಜ್ಞಾನಿಕವಾಗಿ ಅಭಿವೃದ್ಧಿಗೊಳ್ಳಲು ಸಾಧ್ಯವಾಯಿತು ಎಂದರು.
1947ರ ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಐತಿಹಾಸಿಕ ನೆನಪುಗಳನ್ನು ತಿರುವಿನೋಡಿದಾಗ ನಾವೀಗ ಸಬಲರು ಹಾಗೂ ಸುಜ್ಞಾನಿಗಳು ಆಗುವಂತಹ ದಿಟ್ಟ ಹೆಜ್ಜೆಗಳನ್ನು ಇಡುತ್ತಿದ್ದೇವೆ. ಅಂತಹ ಹೆಜ್ಜೆಗೆ ಇಂದಿನ ಮಕ್ಕಳೇ ಸ್ಪೂರ್ತಿ, ಹಾಗಾಗಿ ನೀವು ದೇಶ ಪ್ರೇಮದ ಜೊತೆಗೆ, ದೇಶದ ಅಭಿವೃದ್ದಿಗೆ ಕೈ ಜೋಡಿಸುವಂತೆ ಮಕ್ಕಳಿಗೆ ಕರೆ ನೀಡಿದರು.
ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಮಾತನಾಡುತ್ತಾ, ದೇಶ ಅಭಿವೃದ್ಧಿ ಹೊಂದಲು ನೀವುಗಳು ಈ ಕ್ಷಣದಿಂದಲೇ ಬದಲಾವಣೆ ತಂದುಕೊಳ್ಳುವ ಅಗತ್ಯವಿದೆ.ಓದಿನ ವಿಷಯಗಳ ಬಗ್ಗೆ ಶ್ರದ್ದೆ, ಹಾಗೂ ಸಮಯಪ್ರಜ್ಞೆ ಹೊಂದಬೇಕಿದೆ. ವಿಶೇಷವಾಗಿ ಎಲ್ಲರೂ ದೇಶದ ಬಗ್ಗೆ ಅಭಿಮಾನವನ್ನು ಹೊಂದುವಂತರಾಗ ಬೇಕಿದೆ ಎಂದು ಹೇಳಿದರು.
Independence Day ಇದೇ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ಹರೀಶ್, ಶಿಕ್ಷಕರು,ಉಪನ್ಯಾ ಸಕರು,ಇನ್ನು ಮುಂತಾದವರು ಉಪಸ್ಥಿತರಿದ್ದರು. ಶಾಲಾ ಕಾಲೇಜಿನ ಮಕ್ಕಳಿಂದ ಸ್ವಾತಂತ್ರ ಹೋರಾಟಗಾರರ ಬಗ್ಗೆ ಮಾತನಾಡಿದರು ಮತ್ತು ದೇಶಭಕ್ತಿ ಗೀತೆಯನ್ನು ಹಾಡಿದರು.
Shri Mallikarjuna Murugarajendra Shri ಗುರು ವ್ಯಕ್ತಿ ಮಾತ್ರವಲ್ಲ ಶಕ್ತ, ಸತ್ಯ, ಶಾಶ್ವತ ಬೆಳಕು- ಶ್ರೀ ಮಲ್ಲಿಕಾರ್ಜುನ ಮುರುಘರಾಜೆಂದ್ರಶ್ರೀ
Shri Mallikarjuna Murugarajendra Shri ಮನೆ ಮನೆಗಳಲ್ಲಿ ಧಾರ್ಮಿಕ ಚಿಂತನೆ ಮೂಡಿಸುವಲ್ಲಿ ಶ್ರಾವಣ ಚಿಂತನ ಕಾರ್ಯಕ್ರಮ ಹೆಚ್ಚು ಪ್ರಭಾವಿಸುತ್ತದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಕೃಷಿ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ವತಿಯಿಂದ ಶಿವಗಂಗಾ ಯೋಗ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಶ್ರಾವಣ ಚಿಂತನ 2025 ಕಾರ್ಯಕ್ರಮದಲ್ಲಿ ಮಾತನಾಡಿ, ಗುರು ವ್ಯಕ್ತಿ ಮಾತ್ರವಲ್ಲ, ಶಕ್ತಿ, ಸತ್ಯ, ಶಾಶ್ವತ ಬೆಳಕು. ಬದುಕಿನ ಪ್ರತಿಯೊಂದು ಶ್ರೇಷ್ಠ ಚಿಂತನೆ, ಪ್ರತಿಯೊಂದು ದಯಾ ಕರುಣೆ ಗುರುವಿನ ಪ್ರತಿಫಲನ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ಜೀವನದ ಬೆಳವಣಿಗೆಯಲ್ಲಿ ಗುರುಗಳ ಮಾರ್ಗದರ್ಶನ ಅವಶ್ಯ. ರೋಟರಿ ಚಟುವಟಿಕೆಗಳು ಸಮಾಜಸೇವೆಯ ಪಥದಲ್ಲಿ ದೀಪದಂತೆ ಬೆಳಗುತ್ತವೆ ಎಂದರು.
ವಿದ್ವಾನ್ ಜಿ.ಎಸ್.ನಟೇಶ್ ಅವರು “ಮುದದಿ ಬೆಳಕ ತೋರಿದಂತಯ್ಯ ಗುರು” ಎಂಬ ಮಂಕುತಿಮ್ಮನ ಕಗ್ಗದ ಪದ್ಯ ಉಲ್ಲೇಖಿಸಿ, ಗುರುವಿನ ಸಾನಿಧ್ಯ ಜೀವನದ ಕತ್ತಲೆಯನ್ನು ಶಾಶ್ವತವಾಗಿ ತೊಲಗಿಸುವ ದಿವ್ಯ ಜ್ಯೋತಿ ಎಂದು ವಿವರಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಕಾರ್ಯದರ್ಶಿ ನಿತಿನ್ ಯಾದವ್ ಮಾತನಾಡಿ, ತಂದೆ ತಾಯಿಯೇ ಮೊದಲ ಗುರುಗಳು ಎಂದು ತಿಳಿಸಿದರು.
Shri Mallikarjuna Murugarajendra Shri ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಅವರು ಗುರುಪ್ರೇರಿತ ಜೀವನದಲ್ಲಿ ಆರೋಗ್ಯ, ಯೋಗಾಭ್ಯಾಸ ಮತ್ತು ಧಾರ್ಮಿಕ ಹವ್ಯಾಸಗಳ ಮೌಲ್ಯವನ್ನು ತಿಳಿಸಿದರು.
ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ವಲಯ ಸೇನಾನಿ ಎಸ್.ಪಿ.ಶಂಕರ್, ಸುರೇಶ್, ಮಲ್ಲೇಶ್, ಬಿಂದು ವಿಜಯ ಕುಮಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಸಚ್ಚಿದಾನಂದ, ಅನಿಲ್, ನೀಲಕಂಠ ರಾವ್, ರವಿ, ಕುಸುಮ, ಜ್ಯೋತಿ, ನಾಗರತ್ನ, ಸುಮಾ ನಟರಾಜ್, ಸುಜಾತ, ವಿಜಯ ಬಾಯರ್, ಚಂದ್ರಪ್ಪ, ಮಾಜಿ ಅಧ್ಯಕ್ಷರಾದ ಎಂ ಆರ್ ಬಸವರಾಜ್, ಎಸ್ ಪಿ ಶಂಕರ್, ದೇವೇಂದ್ರಪ್ಪ ಹಾಗೂ ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಹಾಜರಿದ್ದರು.
Chamber of commerce ಸಿಗಂದೂರು ಸೇತುವೆ ದೇಶದ ಎರಡನೇ ಅತ್ಯುದ್ದ ಕೇಬಲ್ ಸೇತುವೆ. ಸಂಸದ ರಾಘವೇಂದ್ರ ಅವರ ಸಂಕಲ್ಪದ ಫಲ- ಬಿ.ಗೋಪಿನಾಥ್
Chamber of commerce ಶಿವಮೊಗ್ಗ ಜಿಲ್ಲೆಗೆ ರಸ್ತೆ, ರೈಲ್ವೆ, ವಿಮಾನ ಸಂಪರ್ಕ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಿ ಶುಭಕೋರಲಾಯಿತು.
ಸಿಗಂದೂರಿನಲ್ಲಿ ದೇಶದಲ್ಲಿಯೇ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಅತಿ ಹೆಚ್ಚು ಯೋಜನೆಗಳನ್ನು ತರುವಲ್ಲಿ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ. ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ವಿನೋದ್ ಕುಮಾರ್, ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್, ಸಹನಾ ಸುಭಾಷ್, ಗಣೇಶ ಎಂ.ಅಂಗಡಿ, ಪ್ರದೀಪ್ ವಿ ಎಲಿ, ಎಸ್.ಪಿ.ಶಂಕರ್, ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎನ್.ಗೋಪಿನಾಥ್ ಇತರರಿದ್ದರು.
Rotary Shivamogga ಸ್ವಾತಂತ್ರ್ಯ, ಲಕ್ಷಾಂತರ ಜನರ ತ್ಯಾಗ, ಬಲಿದಾನದ ಫಲ- ಡಿ.ಕಿಶೋರ್ ಕುಮಾರ್
Rotary Shivamogga ರೋಟರಿ ಪೂರ್ವ ಆಂಗ್ಲಮಾದ್ಯಮ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು
ಈ ಸಂದರ್ಭದಲ್ಲಿ ದ್ಷಜಾರೋಹಣವನ್ನು ನೆರೆವೇರಿಸಿ ರೊಟರಿ ಪೂರ್ವದ ಅದ್ಯಕ್ಷರಾದ ರೊ. ಕಿಶೋರ್ ಕುಮಾರ್.ಡಿ. ರವರು ವಿದ್ಯಾರ್ಥಿಗಳನ್ನೂದ್ದೇಶಿಸಿ ಮಾತನಾಡುತ್ತಾ ಸುಮಾರು ೨೦೦ ವರ್ಷಗಳ ಆಂಗ್ಲರ ಸ್ವಾತಂತ್ರ್ಯಹರಣದ ಬಿಡುಗಡೆಗಾಗಿ ಲಕ್ಷಾಂತರ ಜನರ ಹೋರಾಟ ತ್ಯಾಗ ಬಲಿದಾನ ರಕ್ತ ಕಣ್ಣೀರುಗಳ ಫಲಶೃತಿಯಿಂದಾಗಿ ಭಾರತವು ಇಂದು ವಿಶ್ವಗುರುವಾಗಿ ಹೊರಹೊಮ್ಮಿದೆ, ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿದ್ದ ಮಹಾತ್ಮಾಗಾಂಧಿ ಸರ್ ದಾರ್ ವಲ್ಲಭಾಯಿ ಪಟೇಲ್ , ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರಬೊಸ್, ಬಗತ್ ಸಿಂಗ್ ರಾಜಗುರು, ಲೋಕಮಾನ್ಯ ಬಾಲ ಗಂಗಾಧರ ತಿಲಕ್, ಇನ್ನೂ ಮುಂತಾದ ಆನೇಕ ಮಹನೀಯರ ಚರಿತ್ರೆಯನ್ನು ಓದಿ ಅವರಂತೆಯೇ ರಾಷ್ಟ ಭಕ್ತರಾಗಿ ರಾಷ್ಟದ ಅಭಿವೃದ್ದಿಗಾಗಿ ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆನೀಡಿದರು.
ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟಿ ನ ಮ್ಯಾನೇಜಿಂಗ್ ಟ್ರಸ್ಟಿ ರೊ. ಕೆ ಬಿ ರವಿಶಂಕರ್ ರವರು ಮಾತನಾಡುತ್ತಾ ಇಂದಿನ ಯುವಜನತೆಯಲ್ಲಿ ಇತಿಹಾಸದ ಪ್ರಜ್ಙೆಇಲ್ಲವೆಂದು ಇತಿಹಾಸವನ್ನು ಮರೆತರೆ ಐತಿಹಾಸಿಕ ಸಂದರ್ಭಗಳ ಸೃಷ್ಟಿ ಸಾದ್ಯವಿಲ್ಲವೆಂದು ಈನಿಟ್ಟಿನಲ್ಲಿ ವಿದ್ಯಾರ್ಥಿಗಳು ಜನಪರ ಹೋರಾಟದ ಮನೋಬಾವವನ್ನು ಬೆಳೆಸಿಕೊಳ್ಳಬೇಕೆಂದು ಕರೆನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಯದರ್ಶಿಗಳು ಮಾತನಾಡುತ್ತಾ ಸಮಾರಂಭದಲ್ಲಿ ಸ್ವಾತಂತ್ರ್ಯಹೊರಾಟದ ೧೮೫೭ರಿಂದ ೧೯೪೭ರ ವರೆಗಿನ ಅವಧಿಯಲ್ಲಿ ಸ್ಟತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮಗಾಂಧಿ, ನೆಹರು, ವಲ್ಲಭಾಯಿ ಪಟೇಲ್, ಸುಭಾಷ್ ಚಂದ್ರಬೊಸ್, ಬಾಬಾ ಸಹೇಬ್ ಅಂಬೇಡ್ಕರ್ ಕಿತ್ತೂರು ರಾಣಿ ಚೆನ್ನಮ್ಮ, ಜಾನ್ಸಿರಾಣಿ ಲಕ್ಷ್ಮೀಬಾಯಿ, ಸಾವಿತ್ರಬಾಯಿಪುಲೆ, ಚಂದ್ರಶೇಕರ್ ಅಜಾದ್, ರಾಜ್ ಗುರು ಶುಕ್ದೇವ್, ಸಂಗೋಳ್ಳಿ ರಾಯಣ್ಣ, ಮುಂತಾದ ಮಹನೀಯರ ವೇಷಭೋಷಣಗಳನ್ನು ತೊಟ್ಟು ಸ್ಟತಂತ್ರ್ಯ ಹೊರಾಟದ ಐತಿಹಾಸಿಕ ದಿನಗಳನ್ನು ನೆನಪುಮಾಡಿಕೊಟ್ಟ ವಿದ್ಯರ್ಥಿಗಳನ್ನು ಅಭಿನಂದಿಸಿ ಅವರಂತೆಯೇ ರಾಷ್ಟನಾಯಕರಾಗಬೇಕೆಂದು ಕರೆನೀಡಿದರು.
ಇದೇ ಸಮಾರಂಭದಲ್ಲಿ ರೊಟರಿ ಪೂರ್ವದ ಕಾರ್ಯದರ್ಶಿ ರೊ. ಧನಂಜಯ್ ಇವರು ಮಾತನಾಡುತ್ತಾ ಶಿಸ್ತು ಸಂಯಮ ಮಾಹಾಪುರುಷರ ಆತ್ಮಕಥೆಗಳನ್ನು ಓದುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ರೊಟರಿ ಪೂರ್ವ ಆಂಗ್ಲ ಮಾದ್ಯಮಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳೆಲ್ಲರು ಮುಂದಿನದಿನಗಳಲ್ಲಿ ಭಾರತದ ಸತ್ ಪಜ್ರೆಗಳಾಗಿ ಬೆಳೆಯಬೇಕೆಂದು ಆಮೂಲಕ ರಾಷ್ಟ್ರದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
Rotary Shivamogga ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಟ್ರಸ್ಟಿಗಳಾದ ರೊ. ವಿಜಯಕುಮಾರ್ ರವರು ಮಾತನಾಡುತ್ತಾ ಈ ದಿನ ರೋಟರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾಗಿದ್ದ ಎಲ್ಲಾ ಹೋರಾಟಗಾರರ ವೇಷ ಭೋಷಣಗಳನ್ನು ತೊಟ್ಟಿದ್ದ ಮಕ್ಕಳನ್ನು ನೊಡಿದಾಗ ರೊಮಾಂಚನ ಉಂಟಾಗುತ್ತದೆಂದು, ಕಾರಣ ಇಂದಿನ ಯುವಜನತೆಗೆ ಇತಿಹಾಸ ಪುರುಷರ ನೆನಪು ಇಲ್ಲದಿರುವ ಪ್ರಯುಕ್ತ ಈ ವೇಷ ಭೋಷಣಗಳ ಮೂಲಕ ಇತಿಹಾಸವನ್ನು ಮರು ಸೃಷಿಮಾಡಿ ಸಮಾರಂಭಕ್ಕೆ ಹೆಚ್ಚಿನ ಮೆರುಗನ್ನು ತಂದುಕೊಟ್ಟ ವಿದ್ಯಾರ್ಥಿಗಳಿಗೆ ಈನಿಟ್ಟಿನಲ್ಲಿ ಸಹಕರಿಸಿದ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿದರು.
ಈ ಸಮಾರಂಭದಲ್ಲಿ ಟ್ರಸ್ಟಿನ ಖಜಾಂಚಿಯಾದ ರೊ. ಎನ್ ಬಿ ಮಂಜುನಾಥ ರವರು ಮಾತನಾಡುತ್ತಾ ನಮ್ಮ ದೇಶ ಪ್ಲಾಸ್ಟಿಕ್ ಮುಕ್ತ ದೇಶವಾಗಬೇಕೆಂದು ಕರೆನೀಡಿದರು.
ಉಪಾದ್ಯಕ್ಷರಾದ ಶ್ರೀಮತಿ ನಾಗವೇಣಿ ಎಸ್, ರೊ. ಕಡಿದಾಳ್ ಗೋಪಾಲ್, ಡಾ||ಪರಮೇಶ್ವರ್ ಶಿಗ್ಗಾಂವ್, ಆರ್. ರೊ. ಪ್ರತಾಪ್. ಇನ್ನರ್ ವ್ಹೀಲ್ ಅಧ್ಯಕ್ಷರಾದ ವೀಣಾ ಸುರೇಶ್ ಪ್ರಾಂಶುಪಾಲರಾದ ಆರ್. ಸೂರ್ಯನಾರಾಯಣ್ ಭಾಗವಹಿಸಿದ್ದು ಶ್ರೀಮತಿ ಕಾವ್ಯ ಇವರ ನಿರೂಪಣೆಯಲ್ಲಿ ಶ್ರೀಮತಿ ಶ್ವೇತ ರವರ ವಂದನಾರ್ಪಣೆಯೊಂದಿಗೆ ಸಮಾರಂಭವನ್ನು ಮುಕ್ತಾಯಗೊಳಿಸಲಾಗಿತ್ತು.
ಯುದ್ಧಗಳಲ್ಲಿ ಭಾಗವಿಹಿಸಿದ್ದ ಹಿರಿಯ ರಾಮಚಂದ್ರ ತೆಲಗಿ ಅವರಿಗೆ ಸನ್ಮಾನ
ಹಲವಾರು ಯುದ್ಧ ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ನಮ್ಮ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ ಹೋರಾಟಗಾರರು.
ಇನ್ನೊಬ್ಬ ಅತಿಥಿ ಧೀರೇಂದ್ರ ಕುಮಾರ ಚೀಫ್ ಮೆನೇಜರ್ ಕೆನರಾ ಬ್ಯಾಂಕ ದುರ್ಗಿಗುಡಿ ಶಾಖೆ ಶಿವಮೊಗ್ಗ. ಇವರು ನಿವೃತ್ತ ಯೋಧರು ಇವರಿಗೆ ಸನ್ಮಾನ . ರೋಟರಿ ಅಧ್ಯಕ್ಷ ಬಸವರಾಜ ಅರ್ ರವರಿಂದ ಕಾರ್ಯಕ್ರಮ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ಶಿವಕುಮಾರರವರು ಸ್ವಾಗತಿಸಿದರು
ರವೀಂದ್ರ ನಾಥ ಐತಾಳ, ನಾಗರಾಜ ಎಸ್.ಅರ್, ಜಗದೀಶ ಸರ್ಜ ಹಾಗೂ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಜಾಂಜಿ ಶ್ರೀಧರ ವಂದನಾರ್ಪಣೆ ಮಾಡಿದರು.
Madhu Bangarappa ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ಗೆ ಮೂಲಭೂತ ಸೌಕರ್ಯ ಒದಗಿಸಲು ಮನವಿ
Madhu Bangarappa ಶಿವಮೊಗ್ಗ ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯ ಗಳನ್ನು ನಿರ್ಮಿಸಿ ಕೊಡಬೇಕೆಂದು ಮಾನ್ಯ ಶ್ರೀ ಮಧು ಬಂಗಾರಪ್ಪನವರು, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಚಿನ್ನಪ್ಪ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ರಂಗನಾಥ್, ಮಾಲತೇಶ್, ಜುನೇದ್, ಅಂತೋನಿ ರಾಜ್,ಇದಾಯತ್ ಇನ್ನಿತರರಿದ್ದರು.
MESCOM ಆಗಸ್ಟ್ 18. ಮೆಸ್ಕಾಂನ ನ್ಯೂಮಂಡ್ಲಿ ಉಪ ವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
MESCOM ಶಿವಮೊಗ್ಗ ನಗರ ಉಪವಿಭಾಗ-2 ರಲ್ಲಿ ಆ.18 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ನೇತೃತ್ವದಲ್ಲಿ ನಗರದ ಎನ್.ಟಿ.ರಸ್ತೆ, ನ್ಯೂಮಂಡ್ಲಿಯಲ್ಲಿರುವ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
MESCOM ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.
