Thursday, June 11, 2026
Thursday, June 11, 2026
Home Blog Page 204

Usha Multispeciality Hospital ಹದಿಹರೆಯದ ಹೆಣ್ಣುಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ: ಡಾ.ರಕ್ಷಾರಾವ್

0

Usha Multispeciality Hospital ಹೆಣ್ಣುಮಕ್ಕಳಿಗೆ ಶಿಕ್ಷಣದೊಂದಿಗೆ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕಲಿಸಬೇಕು ಎಂದು ಉಷಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್, ಪ್ರಸೂತಿ ಸ್ತ್ರೀರೋಗ ತಜ್ಞೆ ಡಾ.ರಕ್ಷಾರಾವ್ ಹೇಳಿದರು.

ಅವರು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ಹದಿಹರೆಯದ ವಯಸ್ಸಿನ ಸಮಸ್ಯೆಗಳು, ಋತು ಶುಚಿತ್ವ, ಪೋಕ್ಸೋ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುವುದು ಸಹಜ. ಈ ಅವಧಿಯಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ, ಸಂವಹನ ಮತ್ತು ಭರವಸೆಯ ವಾತಾವರಣದ ಅಗತ್ಯವಿದೆ ಎಂದರು.

ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮ ಇವುಗಳ ಮಹತ್ವವನ್ನು ತಿಳಿಸಿದರು.

ಋತುಶುಚಿತ್ವವನ್ನು ಸರಿಯಾಗಿ ಪಾಲಿಸದಿದ್ದರೆ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಆದ್ದರಿಂದ ತಮ್ಮ ಪೋಷಕರ ಜೊತೆಗೆ ಮುಕ್ತವಾಗಿ ಮಾತನಾಡುವ ಮೂಲಕ ಸಲಹೆಗಳನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

Usha Multispeciality Hospital ಮಕ್ಕಳ ರಕ್ಷಣೆಯ ಉದ್ದೇಶದಿಂದ ರಚಿಸಲಾದ ಪೋಕ್ಸೋಕಾಯ್ದೆ ಕುರಿತು ಅರ್ಥವಾಗುವ ರೀತಿಯಲ್ಲಿ ಮಕ್ಕಳ ಸುರಕ್ಷತೆಯ ಪ್ರಮುಖ ಅಂಶಗಳನ್ನು ವಿವರಿಸಿದರು
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಮ್, ಶಿಕ್ಷಕಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Rotary Jubilee Club ಪರಿಸರ ಉಳಿಸಲು”ಈಶ್ವರ ವನ” ಸ್ಥಾಪಿಸಿದ್ದೇನೆ- ನವ್ಯಶ್ರೀ ನಾಗೇಶ್

0

Rotary Jubilee Club ನಮ್ಮ ದೇಶದ ಪರಿಸರವನ್ನು ಬಗರಹುಕುಂ, ಅಭಿವೃದ್ಧಿ ಹೆಸರಿನಲ್ಲಿ ಬಹಳಷ್ಟು ಹಾನಿಮಾಡುತ್ತಿದ್ದೇವೆ. ಪ್ರಕೃತಿ ಇಲ್ಲದೆ ಮಳೆ ಬೆಳೆ ಇಲ್ಲ. ಮುಂದೆ ಜೀವನ ಸಾಗಿಸುವುದು ಹೇಗೆ? ಆದ್ದರಿಂದ ನನ್ನ ಕೈಲಾದ ಮಟ್ಟಿಗೆ ಪುಟ್ಟ ಪ್ರಯತ್ನದಿಂದ ‘ಈಶ್ವರವನ’ ಸ್ಥಾಪಿಸಿರುವುದಾಗಿ, ರೋಟರಿ ಜ್ಯೂಬಿಲಿ ಕ್ಲಬ್ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.

ನಾನೇನು ಹೆಚ್ಚು ಓದಿದವನಲ್ಲ, ವಾರನ್ನ ಮಾಡಿಕೊಂಡು ಬೆಳೆದವನು. ಪದವಿ ಪಡೆದು ಕೆಲಸವು ಸಿಕ್ಕಿತ್ತು. ಆದರೆ ನನ್ನದೆ ಸ್ವಂತ ಉದ್ಯೋಗ ಮಾಡಬೇಕೆಂದು ಬಯಸಿ ಚಿಕ್ಕದಾಗಿ ಪ್ರಾರಂಭಿಸಿದ ಉದ್ಯಮ, ಶಿವಮೊಗ್ಗದ ಜನರ ಪ್ರೀತಿಗೆ ಪಾತ್ರರಾಗಿ ಇಂದು ತಕ್ಕಮಟ್ಟಿಗೆ ಉತ್ತಮ ಗಳಿಕೆಕಂಡು ಹಲವರಿಗೆ ಉದ್ಯೋಗ ನೀಡಿದ್ದೇನೆ.

ಸಮಾಜಕ್ಕೆ ಹಲವು ಋಣ ತೀರಿಸುವ ಜವಾಬ್ದಾರಿ ಎಲ್ಲರ ಮೇಲು ಇರುತ್ತದೆ. ಹಿಂದೆ ‘ದೇವರ ವನ’ ಎಂದು ಗಿಡಮರ ಬೆಳೆಸಿ ಪೂಜಿಸುತ್ತಿದ್ದರು. ಅದರಂತೆ ನನ್ನ ದುಡಿಮೆಯಲ್ಲಿ ಸ್ವಲ್ಪ ವ್ಯಯಿಸಿ, ನಶಿಸುತ್ತಿರುವ ಗಿಡಮರಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದ್ದೇನೆ.

ಈಗಾಗಲೇ ನೂರೈವತ್ತಕ್ಕಿಂದ ಹೆಚ್ಚಿನ ಗಿಡಗಳನ್ನು ಗುರ್ತಿಸಿ ಬೆಳೆಸುತ್ತಿದ್ದೇನೆ. ಸಾವಿರಾರುಮಕ್ಕಳಿಗೆ ಅವುಗಳ ಪರಿಚಯ ಪ್ರತೀ ವರ್ಷ ಮಾಡಿಸುತ್ತಿದ್ದೇನೆ, ಅವರಿಂದ ಪ್ರಮಾಣಸಹ ಮಾಡಿಸುತ್ತಿದ್ದೇವೆ.

ಇದು ಚಿಕ್ಕ ಪ್ರಯತ್ನ. ಸಾರ್ವಜನಕರಿಗೆ ಪ್ರತಿ ವರ್ಷ ಶಿವರಾತ್ರಿಯಂದು ವಿಶೇಷ ಪೂಜೆ ಏರ್ಪಡಿಸಿ ಸಸ್ಯರಾಶಿಯ ಪರಿಚಯ ಈಶ್ವರನ ಆರಾಧನೆಗೆ ಅವಕಾಶ ಮಾಡಿಕೊಡುತ್ತಿದ್ದೇನೆ.

ಹಲವು ಸಂಘ ಸಂಸ್ಥೆ, ದಾನಿಗಳ ಸಹಕಾರದಿಂದ ಸರ್ಕಾರಿ ಆಸ್ವತ್ರೆಗೆ ಬರುವ ರೋಗಿಗಳ ಸಂಬಂದಿಗಳಗೆ ಪ್ರತಿದಿನ ಉಚಿತ ಆಹಾರ ನೀಡುವ ಕಾರ್ಯವನ್ನು ಪ್ರಾರಂಭಿಸಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿ.ಎಸ್.ಅಶ್ವಥ್ ಮಾತನಾಡಿ ಕಷ್ಟದಿಂದ ಓದಿ ಮುಂದೆ ಸ್ವಂತ ಉದ್ಯಮಸ್ಥಾಪಿಸಿ, ಹಲವರಿಗೆ ಬದುಕುನೀಡಿ, ಎಲೆಮರೆ ಕಾಯಿಯಂತೆ ಬೆಳೆದಿ ಇಂದು ನಗರದಲ್ಲಿ ಅತ್ಯುತ್ತಮ ಕಾರ್ಯಮಾಡುತ್ತಿರುವ ನವ್ಯಶ್ರಿನಾಗೇಶ್ ಮನೆ ಮಾತಾಗಿದ್ದಾರೆ.

Rotary Jubilee Club ಅವರ ಸಮಾಜಮುಖಿ ಕಾರ್ಯ ಹೀಗೆ ಮುಂದುವರಿದು, ಮುಂದಿನ ಪೀಳಿಗೆಗೆ ಮಾದರಿಯಾಗಲಿ ಎಂದರು.

ಭಾರದ್ವಾಜ್ ಸ್ವಾಗತಿಸಿದರು, ಲಕ್ಷ್ಮೀನಾರಾಯಣ್ ಪ್ರಾಸ್ತಾವಿಕವಾಗಿ ಮಾತನಾಡಿದರು ಲಕ್ಷ್ಮೀನಾರಾಯಣ್ ವಂದಿಸಿದರು.

Akashavani Bhadravati ನಮ್ಮ ತಾಯ್ನುಡಿಯನ್ನ ಗೌರವಿಸಬೇಕು- ಡಾ.ಡಿ.ಆರ್. ಭಾರತೀದೇವಿ

0

Akashavani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ಸದಸ್ಯರಾದ ಡಾ. ಭಾರತಿದೇವಿ ಡಿ.ಆರ್ ಅವರು ಅನ್ನಕೊಡುವ ಭಾಷೆಯೆಂದು ಬೇರೆ ಭಾಷೆಯನ್ನು ಓಲೈಸದೆ ನಮ್ಮ ತಾಯ್ನುಡಿಯನ್ನ ಗೌರವಿಸಬೇಕು ಹಾಗು ಕರ್ನಾಟಕvದವರೆಲ್ಲರೂ ಒಗ್ಗೂಡಿ ನಾವು ಕನ್ನಡಿಗರೂ ಎನ್ನುವ ಭಾವನೆ ಬೆಳೆಸಿಕೊಳ್ಳಲು ತಿಳಿಸಿದರು.

ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಅವರು ಕನ್ನಡ ನಾಡು ನುಡಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ, ಜ್ಞಾನಪೀಠ ಮತ್ತು ಮುಖ್ಯಮಂತ್ರಿಗಳನ್ನ ನೀಡಿ ಕನ್ನಡದ ಹೋರಾಟದಲ್ಲಿಯೂ ಅತ್ಯಂತ ಪ್ರಮುಖ ಪಾತ್ರವಹಿಸಿದ್ದು ಅದನ್ನ ಉಳಿಸಿ ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಕೃಷ್ಣಪ್ಪ ರವರು ಹಳ್ಳಿಯಲ್ಲಿ ಹುಟ್ಟಿದರೂ ಇಂಗ್ಲೀಷಿನ ವ್ಯಾಮೋಹವನ್ನ ಬೆಳೆಸಿಕೊಂಡು ಹೋಗುತ್ತಿರುವಾಗ ನಮ್ಮಲ್ಲಿರುವ ಕನ್ನಡದ ಕೀಳಿರೆಮೆಯನ್ನ ಬಿಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಕಾಶವಾಣಿಯ ಕಾರ್ಯಕ್ರಮ, ತಾಂತ್ರಿಕ, ಆಡಳಿತ, ಉದ್ಘೋಷಕವರ್ಗ ಹಾಗು ನಿರ್ಮಾಣ ತಂಡದ ಎಲ್ಲಾ ಸಿಬ್ಬಂದಿಗಳಿಗೆ ಮಡಿಕೆ ಒಡೆಯುವ ಸ್ಪರ್ಧೆ ಮತ್ತು ಮ್ಯೂಸಿಕಲ್ ಚೇರ್ ಹಾಗು ಅಂತ್ಯಾಕ್ಷರಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

Akashavani Bhadravati ಎಸ್.ಎಂ.ಸುಧಾಕರ್ ಅವರು ಸ್ವಾಗತಿಸಿ, ಕೇಶವಮೂರ್ತಿಯವರು ವಂದನಾರ್ಪಣೆಯನ್ನು ಸಲ್ಲಿಸಿದರು. ಅರ್ಪಿತಾ ನಾಯುರ್ ನಿರೂಪಣೆ ಮಾಡಿದರು. ಐವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಅದ್ದೂರಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Women and Child Development Department ಡಿಸೆಂಬರ್ 3. ವಿಶ್ವವಿಕಲಚೇತನರ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

0

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.3 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ “ ಸಾಮಾಜಿಕ ಪ್ರಗತಿಯನ್ನು ಸಾಧಿಸಲು ವಿಲಚೇತನರನ್ನು ಒಳಗೊಂಡ ಸಮಾಜವನ್ನು ರೂಪಿಸುವುದು” ಎಂಬ ಘೋಷವಾಕ್ಯದಡಿ 2025 ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ಸಚಿವೆಯಾದ ಲಕ್ಷ್ಮಿ
ಆರ್.ಹೆಬ್ಬಾಳ್ಕರ್, ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
Women and Child Development Department ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘಗಳ ಮುಖ್ಯಸ್ಥರು, ಪದಾಧಿಕಾರಿಗಳು ಪಾಲ್ಗೊಳ್ಳುವರು.

Department of Transport ಸಂಚಾರ ವಾಹನ ದಂಡಶುಲ್ಕ ಪಾವ್ತಿ. ಸಾರಿಗೆ ಇಲಾಖೆ ಪ್ರಕಟಣೆ

0

Department of Transport ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.

ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.

Department of Transport 1991-92 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬಂಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರೇಶ್ ಡಿ.ಹೆಚ್.ತಿಳಿಸಿದ್ದಾರೆ.

Shivamogga Youth Hostel ಪ್ರವಾಸಿಗರೇ ಗಮನಿಸಿ, ಯೂತ್ ಹಾಸ್ಟೆಲ್ಸ್ ಸಂಸ್ಥೆಯಿಂದ ಭೂತಾನ್ ಪ್ರವಾಸ

0

ಶಿವಮೊಗ್ಗ ಯೂತ್ ಹಾಸ್ಟೆಲ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ವತಿಯಿಂದ 16.01.2026 ರಿಂದ 23.01.2026 ರ ವರೆಗೆ ಭೂತಾನ್ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ.

ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು ಮೊದಲು ಹೆಸರು ನೊಂದಾಯಿಸಿದವರಿಗೆ ಅದ್ಯತೆ.
ಶುಲ್ಕ; ರೂ 66000.00 ಒಬ್ಬರಿಗೆ
ಬೆಂಗಳೂರು ನಿಂದ ಬಾಗ್ದೋರ ವರೆಗೆ ವಿಮಾನದ ಪ್ರಯಾಣ ನಂತರ ಅಲ್ಲಿಂದ ಭೂತಾನ್ ಗೆ ಬಸ್ ನಲ್ಲಿ ಪ್ರಯಾಣ ಬರುವಾಗ ಕೂಡ ಹೀಗೆ ವ್ಯವಸ್ಥೆ ಇರುತ್ತದೆ.

Shivamogga Youth Hostel ಪಾಸ್ ಪೋರ್ಟ್ ಬೇಡ,
ಹೆಚ್ಚಿನ ಮಾಹಿತಿಗಾಗಿ ಎಸ್.ಎಸ್.ವಾಗೇಶ್ ದೂರವಾಣಿ ನಂಬರ್ 7892548980 ಇವರನ್ನು ಸಂಪರ್ಕಿಸಬಹುದು. ಎಂದು ವೇದಿಕೆಯ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ.

Bhadravati VISL ಡಿಸೆಂಬರ್ 28.ಭದ್ರಾವತಿ ವಿಐಎಸ್ಎಲ್ ನಿವೃತ್ತ ಉದ್ಯೋಗಿಗಳ ಸಂಘದ ಚುನಾವಣೆ

0

Bhadravati VISL ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ವಿಐಎಸ್‌ಎಲ್ ನಿವೃತ್ತ ಉದ್ಯೋಗಿಗಳ ಕಲ್ಯಾಣ ಕೇಂದ್ರದ ಮುಂದಿನ ಐದು ವರ್ಷ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯ ಚುನಾವಣೆ ಡಿ.28ಕ್ಕೆ ಸಿಲ್ವರ್ ಜ್ಯುಬಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸ್ವೇಡಿಯಂ ಪಕ್ಕ ನ್ಯೂಟೌನ್ ಭದ್ರಾವತಿಯಲ್ಲಿ ನಡೆಸಲು ನ.25ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಮಹೇಶ್ವರಪ್ಪ ತಿಳಿಸಿದ್ದಾರೆ.

Bhadravati VISL ಚುನಾವಣಾಧಿಕಾರಿಯಾಗಿ ಎಸ್.ಸುಮಂತ್‌ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಈ ಚುನಾವಣೆಯಲ್ಲಿ ಪ್ರತಿಯೊಬ್ಬ ನಿವೃತ್ತ ಸದಸ್ಯರು ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ.

S.N.Chennabasappa ಜಿಲ್ಲಾ ಯೋಜನಾ ಸಭೆಯಲ್ಲಿ ಪ್ರಮುಖ ವಿಷಯಗಳನ್ನ ಚರ್ಚಿಸಿದ ಶಾಸಕ ಚನ್ನಬಸಪ್ಪ

0

S.N.Chennabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು, ಶಿವಮೊಗ್ಗ ನಗರದ ಪ್ರಮುಖ ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಸವಾಲುಗಳ ಕುರಿತು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಚರ್ಚಿಸಲಾದ ನಿರ್ಣಾಯಕ ವಿಷಯಗಳ ಸಂಕ್ಷಿಪ್ತ ವಿವರಣೆ:

  1. ಶೈಕ್ಷಣಿಕ ಸಮಸ್ಯೆಗಳು ಮತ್ತು ಬೇಡಿಕೆಗಳು:
    ಕಾಲೇಜು ಕಟ್ಟಡ ಸಮಸ್ಯೆ: ಸರ್ಕಾರಿ ಪ್ರಥಮ ದರ್ಜೆ ಬಾಲಕಿಯರ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಜಾಗದ ಸಮಸ್ಯೆಯನ್ನು ಬಗೆಹರಿಸಿ, ಕಾಮಗಾರಿ ಆರಂಭಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಶಿಕ್ಷಕರ ಕೊರತೆ: ನಗರದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿನ ದೈಹಿಕ ಶಿಕ್ಷಕರ ಕೊರತೆಯನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಿದರು.

ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆ: ಅನುದಾನಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

  1. ಕಾನೂನು, ಆರೋಗ್ಯ ಮತ್ತು ಸಮಾಜ ಕಲ್ಯಾಣ:
    ಮಾದಕ ವಸ್ತುಗಳ ಹಾವಳಿ (ಗಾಂಜಾ): ಶಿವಮೊಗ್ಗ ನಗರದಲ್ಲಿ ಗಾಂಜಾ ಹಾವಳಿ ಮಿತಿಮೀರಿ ಹೆಚ್ಚಾಗಿದ್ದು, ಹದಿಹರೆಯದ ಯುವಕರು ಮಾದಕ ವ್ಯಸನಿಗಳಾಗುತ್ತಿರುವುದರ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಲಾಯಿತು. ಈ ಗಾಂಜಾ ಹಾವಳಿಯನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಯ ಸುಧಾರಣೆ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರ, ಪರಿಣಾಮಕಾರಿ ಉಸ್ತುವಾರಿ ಸಮಿತಿ ಇಲ್ಲದಿರುವುದು ಮತ್ತು ಬಡ ರೋಗಿಗಳಿಗೆ ಎದುರಾಗುತ್ತಿರುವ ಅನಾನುಕೂಲಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನದಟ್ಟು ಮಾಡಲಾಯಿತು. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವಂತೆ ಕೋರಿದರು.

S.N.Chennabasappa ಬಿಪಿಎಲ್ ಕಾರ್ಡ್ ಸಮಸ್ಯೆ: ಬ್ಯಾಂಕಿನಿಂದ ಸಾಲ ಪಡೆಯಲು ಐಟಿ ರಿಟರ್ನ್ಸ್ ಸಲ್ಲಿಸಿರುವ ಕಡುಬಡವರ ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿರುವುದರಿಂದ ಆಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಗಮನ ಸೆಳೆದು, ತಾತ್ಕಾಲಿಕವಾಗಿ ಕಾರ್ಡ್‌ಗಳನ್ನು ರದ್ದು ಮಾಡದಂತೆ ಸೂಚಿಸುವಂತೆ ಮನವಿ ಮಾಡಿದರು.

  1. ಅಪೂರ್ಣಗೊಂಡ ಕಾಮಗಾರಿ:
    ನಗರದ ಗುಂಡಪ್ಪ ಶೆಡ್ಡಿನಲ್ಲಿ ಬಾಬು ಜಗಜೀವನ್ ರಾಮ್ ನಿಗಮದ ವತಿಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡ ನಿರ್ಮಾಣ ಕಾಮಗಾರಿಯ ಕುರಿತು ತಕ್ಷಣ ಗಮನಹರಿಸಿ, ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿದರು.

Sharanappa Saladpur ಹೆಚ್ಚುತ್ತಿರುವ ಮಾದಕ ವಸ್ತು ಬಳಕೆ ಗಮನಿಸಿ ಪುನರ್ವಸತಿ ಕೇಂದ್ರಗಳ ಕಾರ್ಯವೈಖರಿ ಬದಲಾಗಬೇಕು- ಶರಣಪ್ಪ ಸಲಾದಪುರ

0

Sharanappa Saladpur ಬೆಂಗಳೂರು ನಗರದ ಮದ್ಯ ಹಾಗೂ ಮಾದಕವಸ್ತುಗಳ ವ್ಯಸನಿಗಳಿಗೆ ಪುನರ್ವಸತಿ ನೀಡುತ್ತಿರುವ ಕೇಂದ್ರಗಳಿಗೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ನಗರದ ಪೀಣ್ಯ 2ನೇ ಹಂತದ, ಬಾಲಾಜಿನಗರದಲ್ಲಿರುವ
ಗುಡ್ ಡೇ ಟ್ರಸ್ಟ್ ಹಾಗೂ
ಸುಂಕದಕಟ್ಟೆಯಲ್ಲಿರುವ ಸನ್ ರೈಸ್ ರಿಅಬ್ಲಿಟೇಷನ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ, ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ಮೂಲಭೂತ ಸೌಕರ್ಯಗಳು, ಚಿಕಿತ್ಸಾ ವಿಧಾನಗಳು, ತಜ್ಞರ ಲಭ್ಯತೆ, ನಿವಾಸಿ ರೋಗಿಗಳಿಗೆ ದೊರೆಯುವ ಆಹಾರ, ಆರೋಗ್ಯ ಸೇವೆಗಳ ಬಗ್ಗೆ ಸ್ಥಳದಲ್ಲೇ ಮಾಹಿತಿ ಪಡೆದರು.

Sharanappa Saladpur ಪುನರ್ವಸತಿ ಕೇಂದ್ರಗಳ ಆಡಳಿತಾಧಿಕಾರಿಗಳ ಜೊತೆ ನಡೆಸಿದ ಚರ್ಚೆಯಲ್ಲಿ, ವ್ಯಸನಮುಕ್ತಿಗಾಗಿ ವಿಜ್ಞಾನಾಧಾರಿತ ಸಮಾಲೋಚನಾ ವಿಧಾನ, ಮನೋವೈದ್ಯರ ನಿರಂತರ ಹಾಜರಾತಿ ಹಾಗೂ ಕುಟುಂಬ ಸಲಹಾ ಕಾರ್ಯಕ್ರಮಗಳನ್ನು ಬಲಪಡಿಸಬೇಕು ಹಾಗೂ ರೋಗಿಗಳ ಸುರಕ್ಷತೆ ಮತ್ತು ಮಾನವೀಯ ವರ್ತನೆಗೆ ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಮಾದಕವಸ್ತು ಬಳಕೆ ಯುವಜನರಲ್ಲಿ ವೇಗವಾಗಿ ಹೆಚ್ಚುತ್ತಿರುವುದನ್ನು ಗಮನಿಸಿ, ಪುನರ್ವಸತಿ ಕೇಂದ್ರಗಳ ಕಾರ್ಯಪದ್ಧತಿ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ, ಪುನರ್ವಸತಿ ಕೇಂದ್ರಗಳ ಮಾಲೀಕರಾದ ಕಾರ್ತಿಕ್, ಮಣಿ, ಹಾಗೂ ಪದಾಧಿಕಾರಿಗಳಾದ ಕುಶಾಲ್ ಹರುವೇಗೌಡ, ರವಿಕುಮಾರ್, ಶರತ್, ವಿಶ್ವನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Bangalore University ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬೆಂಗಳೂರು ವಿವಿಯಿಂದ ಗೌರವ ‘ಡಿ ಲಿಟ್’ ಪದವಿ ಪ್ರದಾನ

0

Bangalore University ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ 60ನೇ ಘಟಿಕೋತ್ಸವದ ಅಂಗವಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನೀಡಲಾಗಿರುವ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಗೌರವ ಪದವಿಯನ್ನು ರಾಜಭವನದ ಬಾಂಕ್ವೆಟ್ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ನಂತರ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು “ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಎಂಬ ಪ್ರತಿಷ್ಠಿತ ಮತ್ತು ಗೌರವಾನ್ವಿತ ಬಿರುದನ್ನು ಪಡೆದಿರುವುದು ನಿಮ್ಮ ವಿದ್ವತ್ತು ಮತ್ತು ಸಮಾಜ, ರಾಜ್ಯ ಮತ್ತು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಿಗೆ ದೊರೆತ ಅತ್ಯುನ್ನತ ಮನ್ನಣೆಯಾಗಿದೆ.

ಈ ಪದವಿ ನಿಮ್ಮ ನಿರಂತರ ಕೆಲಸ, ಸೃಜನಶೀಲತೆ ಮತ್ತು ಅತ್ಯುತ್ತಮ ಬೌದ್ಧಿಕ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನೀವು ಪ್ರತಿಷ್ಠಿತ ಮತ್ತು ಜನಪ್ರಿಯ ರಾಜಕೀಯ ಕುಟುಂಬದಿಂದ ಬಂದಿದ್ದರೂ, ವೈಯಕ್ತಿಕ ಕೆಲಸ, ಸರಳತೆ ಮತ್ತು ಜನರಲ್ಲಿ ನಿರಂತರ ಸಕ್ರಿಯ ಉಪಸ್ಥಿತಿಯ ಮೂಲಕ ನಿಮ್ಮ ಛಾಪು ಮೂಡಿಸಿದ್ದೀರಿ” ಎಂದು ಹೇಳುವ ಮೂಲಕ ಯು.ಟಿ.ಖಾದರ್ ಅವರನ್ನು ಅಭಿನಂದಿಸಿದರು.

“ವಿದ್ಯಾರ್ಥಿ ದಿನಗಳಿಂದಲೇ, ಯುವ ಸಂಘಟನೆಗಳು ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕ ಜೀವನವನ್ನು ಗುರಿಯಾಗಿಸಿಕೊಂಡು ಮತ್ತು ಕ್ರಮೇಣ ಕರ್ನಾಟಕ ರಾಜಕೀಯದಲ್ಲಿ ಬಲಿಷ್ಠ, ಸೂಕ್ಷ್ಮ ಮತ್ತು ವಿಶ್ವಾಸಾರ್ಹ ನಾಯಕನಾಗಿ ಹೊರಹೊಮ್ಮಿರುವ ಯು.ಟಿ.ಖಾದರ್ ಅವರು, ಸತತವಾಗಿ ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಇದು ಸಾರ್ವಜನಿಕರ ನಂಬಿಕೆ ಮತ್ತು ನಿಮ್ಮ ನಿರಂತರ ಸಂಪರ್ಕಕ್ಕೆ ಸಾಕ್ಷಿಯಾಗಿದೆ.

ವಿಧಾನಸಭೆಯ ಸ್ಪೀಕರ್ ಆಗಿ, ಸಂವಾದ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಸ್ಕೃತಿಯನ್ನು ಪ್ರತಿಪಾದಿಸಿದ್ದೀರಿ. ವಿಧಾನಸಭೆಯ ಕಲಾಪಗಳನ್ನು ನಡೆಸುವ ಮೂಲಕ, ಅಭಿಪ್ರಾಯ ವ್ಯತ್ಯಾಸಗಳಿದ್ದರೂ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ನಮ್ಮ ಬದ್ಧತೆ ಯಾವಾಗಲೂ ಅಚಲವಾಗಿರಬೇಕು ಎಂದು ನೀವು ಪ್ರದರ್ಶಿಸಿದ್ದೀರಿ. ಅವರ ವಿವಿಧ ಆಯಾಮಗಳನ್ನು ಮುಟ್ಟಿರುವ ಗಂಭೀರತೆ, ಸೂಕ್ಷ್ಮತೆ ಮತ್ತು ನಾವೀನ್ಯತೆಯು ಖಂಡಿತವಾಗಿಯೂ ಸಮಾಜ, ರಾಜ್ಯ ಮತ್ತು ರಾಷ್ಟ್ರವನ್ನು ಶ್ರೀಮಂತಗೊಳಿಸುತ್ತದೆ” ಎಂದು ಶ್ಲಾಘಿಸಿದರು.

“ಬೆಂಗಳೂರು ವಿಶ್ವವಿದ್ಯಾಲಯವು ನೀಡಿದ ಈ ಗೌರವವು ಖಾದರ್ ಅವರ ವರ್ಷಗಳ ಸಮರ್ಪಿತ ಸಾರ್ವಜನಿಕ ಸೇವೆ, ಆಡಳಿತಾತ್ಮಕ ಸಮಗ್ರತೆ ಮತ್ತು ಬಹುಮುಖಿ ಸಾಮಾಜಿಕ ಕೊಡುಗೆಗಳನ್ನು ಗುರುತಿಸಿ ನೀಡಲಾಗಿದೆ.

Bangalore University ಈ ಡಿ.ಲಿಟ್. ಪದವಿಯು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ, ಸಮರ್ಪಣೆ ಮತ್ತು ಪರಿಶ್ರಮದಿಂದ ಮಾಡಿದ ಕೆಲಸವು ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಈ ಪ್ರತಿಷ್ಠಿತ ಗೌರವಕ್ಕಾಗಿ ಅಭಿನಂದಿಸುತ್ತೇನೆ. ನಿಮ್ಮ ಅನುಭವ ಮತ್ತು ಬುದ್ಧಿವಂತಿಕೆಯು ಮುಂಬರುವ ದಿನಗಳಲ್ಲಿ ಸಮಾಜಕ್ಕೆ ಮಾರ್ಗದರ್ಶನ ನೀಡುವುದನ್ನು ಮತ್ತು ದೇಶವನ್ನು ಸರ್ವೋಚ್ಚವೆಂದು ಪರಿಗಣಿಸಿ ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರೆಸಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಮಾನ್ಯ ವಿಧಾನಸಭೆ ಸ್ಪೀಕರ್ ಶ್ರೀ ಯು.ಟಿ. ಖಾದರ್ ಫರೀದ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಎಸ್.ಎಂ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.