Holalur Canara Bank Rural Self-Employment Training Centre ಶಿವಮೊಗ್ಗ ಸ್ಥಳಿಯ ಹೊಳಲೂರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಪ್ರಧಾನರಾದ ಶ್ರೀಯುತ ಕೆ ಜಿ ನಿಂಗಪ್ಪನವರು ನೆರವೇರಿಸಿದರು. ಶ್ರೀತರು ಮಾತನಾಡುತ್ತ ಸ್ವಾತಂತ್ರ್ಯ ಹೋರಾಟಕ್ಕಾಗಿ ಅನೇಕ ರಾಷ್ಟ್ರಭಕ್ತರದ ಮಹಾತ್ಮ ಗಾಂಧೀಜಿ ಸುಭಾಷ್ ಚಂದ್ರ ಬೋಸ್ ಮುಂತಾದ ಮಹಾನ್ ಆದರ್ಶ ವ್ಯಕ್ತಿಗಳ ಆದರ್ಶಗಳನ್ನ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ತ್ಯಾಗ ಬಲಿದಾನವನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು. Holalur Canara Bank Rural Self-Employment Training Centre ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ದೀಪ, ಪ್ರೀತಿ ಹಾಗೂ ನಾಗರಾಜ್ ರವರು ಮಾತನಾಡಿದರು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ತರಬೇತಿಯ ಫಲಾನುಭವಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಅನೇಕ ಸ್ವತಂತ್ರ ಹೋರಾಟಗಾರರ ವೇಷಭೂಷಣವನ್ನು, ದೇಶಭಕ್ತಿ ಗೀತೆ, ಜನಪದ ಗೀತೆ, ದೇಶಪ್ರೇಮದ ಕುರಿತು ಅನೇಕ ನೃತ್ಯಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Holalur Canara Bank Rural Self-Employment Training Centre ರಾಷ್ಟ್ರಭಕ್ತರ ಆದರ್ಶಗಳನ್ನ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಕೆ.ಜಿ.ನಿಂಗಪ್ಪ
Klive Special Article ಶ್ರೀಕೃಷ್ಣ ಸ್ಮರಣೆ ಲೇ: ಎನ್.ಜಯಭೀಮ ಜೊಯಿಸ್. ಶಿವಮೊಗ್ಗ
Klive Special Article ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣ ಪರಮಾತ್ಮನ
ಭಕ್ತಿಯ ಸ್ಮರಣೆ ಮತ್ತು ಪಾದಪದುಮಗಳಿಗೆ ನಮನಗಳಿಂದ ಅರ್ಚನೆ.
ಉಡುಪಿಯಲಿ ಬಾಲಕೃಷ್ಣಹೀಗೆ ನಿಂತಿದ್ದಾನೆ.
ಕೈಯಲ್ಲಿ ಕಡಗೋಲು ಹಿಡಿದಿದ್ದಾನೆ.
ಮಜ್ಜಿಗೆ ಕಡೆಯಲು ಅಲ್ಲ.ನಮ್ಮಲ್ಲಿರುವ ಅಜ್ಞಾನವನ್ನು ಕಡೆದು ಜ್ಞಾನವೆಂಬೋ ಬೆಣ್ಣೆಯು ಹೊರಬರಲು.
ನಾನು,ನನ್ನದು ಎನ್ನುವ ಬಂಧನವ ಕಿತ್ತುಹಾಕು
ನನ್ನೊಡೆಯಾ.ಕಡೆಗಣಿಸಬೇಡ ಸ್ವಾಮಿ ಈ ನಿನ್ನ
ಮಕ್ಕಳ ಕೋರಿಕೆಯನ್ನು.
ಶರಧಿ ಶಯನನಾದ ನಿನಗೆ,.ನಾನು ಎರಡೂ ಕೈಗಳಿಂದ ನಿನ್ನ ಪಾದ ಹಿಡಿದು ಬೇಡಿಕೊಳ್ಳುತ್ತಿರುವೆನು ಗೋವಿಂದ.ಈಸಂಸಾರಬಂಧನವನ್ನುತರಿದುಹಾಕು.ಶಾಶ್ವತವಲ್ಲದಮೋಹವನ್ನು ದೂರಮಾಡು.
ನನ್ನಲ್ಲಿರುವ ಷಡ್ವೈರಿಗಳನ್ನು ನಾಶಮಾಡುಗೋವಿಂದ.
ನಿನ್ನಲ್ಲಿ ಭಕ್ತಿಮಾಡುವ ಮನಸ್ಸನ್ನು ಕೊಟ್ಟು ಕಾಪಾಡು
ಜನಾರ್ಧನ.
Klive Special Article ನಿನ್ನ ಸ್ಮರಣೆ ಮಾಡಿ ಮತ್ತೆಮತ್ತೆಮಾಡಿ,ನೈವೇದ್ಯಕ್ಕೆಂದು ಚೆನ್ನಾಗಿ ಮಾಗಿರುವ ಹಣ್ಣನ್ನು ತಂದಿರುವೆ,ಇದೆಲ್ಲವೂ ನನ್ನದಲ್ಲ,ನೀನೇ ಕೊಟ್ಟದ್ದು ನಿನಗೇ ಅರ್ಪಿಸುತ್ತಿದ್ದೇನೆ.
ನಿನ್ನ ಶಿಖೆಯಲ್ಲಿ ನವಿಲುಗರಿ,ಪಾದಕ್ಕೆ ಘಿಲ್ ಘಿಲ್ ಶಬ್ದಮಾಡುವಗೆಜ್ಜೆಗಳು,ಸೊಂಟಕ್ಕೆಮುತ್ತಿನೊಡ್ಯಾನದಿಂದ ಶೋಭಿತನಾಗಿರುವಜಗದೊಡೆಯ ನನ್ನವನು ನೀನುಚೆಲುವಚೆನ್ನಿಗರಾಯನಾದ ಶ್ರೀಹರಿ. ಇಂತಹಚೆಲುವಶ್ರೀಕೃಷ್ಣನನ್ನು(ವೃಂದಾವನವಿಹಾರಿ)ಶ್ರೀಕೃಷ್ಣಜಯಂತಿಯಂದು ಭಕ್ತಿಯಿಂದ ನಮ್ಮ ತಪ್ಪುಗಳನ್ನೆಲ್ಲಾ ಮನ್ನಿಸಿ,ಎಲ್ಲರನ್ನೂ ಕಾಪಾಡು ಎಂದು ಪ್ರಾರ್ಥಿಸೋಣ.
“ನರಜನ್ಮ ಬಂದಾಗ ನಾಲಿಗೆ ಇರುವಾಗ ಕೃಷ್ಣಾ
ಎನಬಾರದೆ”.
National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ
National Indian Military Collegehttp://National Indian Military College 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8 ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾ 07-12-2025 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಜುಲೈ 2026ಕ್ಕೆ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅ.15 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಬೆಂಗಳೂರು-560025 ಇವರಿಗೆ ಸಲ್ಲಿಸಬಹುದೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ ದೂ. ಸಂ. : 080-25589459 ಹಾಗೂ ಜಾಲತಾಣ: www.rimc.gov.in ಅಥವಾ ಹತ್ತಿರದ ಸೈನಿಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ .
BGS School-College ಈಗ ಹೊಂದುತ್ತಿರುವ ಅಭಿವೃದ್ಧಿಯ ಹೆಜ್ಜೆಗಳು ನಿರೀಕ್ಷಿತ ಫಲ ನೀಡುತ್ತವ- ನಿವೃತ್ತ ಆರ್ಮಿ ಸುಬೇದಾರ್ ಚಂದ್ರಪ್ಪ
BGS School-College ನಮ್ಮದೇಶ ಹಳ್ಳಿಗಳ ನಾಡು ಹಲವು ಜಾತಿ, ಮತ,ಧರ್ಮಗಳ, ಭೇದ ಭಾವ ವಿಲ್ಲದ ದೇಶ ಯಾವುದಾದರು ಇದೆ ಅಂದರೆ ಅದು, ಪ್ರಪಂಚದಲ್ಲಿಯೇ ನಮ್ಮ ದೇಶ ಮಾತ್ರ. ಹಾಗಾಗಿಯೇ ವಿವಿಧತೆಯಲ್ಲಿ ಏಕತೆಯನ್ನು ಸಾರುವ ಏಕೈಕ ರಾಷ್ಟ್ರ ಭಾರತ ದೇಶ ಮಾತ್ರ ಎಂದು ನಿವೃತ ಆರ್ಮಿ ಸುಬೇದಾರ್ ಚಂದ್ರಪ್ಪ ಬಿ. ಅಭಿಪ್ರಾಯಪಟ್ಟರು.
ಅವರು ಗುರುಪುರದ ಬಿಜಿಎಸ್ ಶಾಲಾ- ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ದೇಶ ಈಗ ಹೊಂದುತ್ತಿರುವ ಅಭಿವೃದ್ಧಿಯ ಹೆಜ್ಜೆಗಳು ಸದ್ಯದಲ್ಲೇ ಇನ್ನಷ್ಟು ಒಳ್ಳೆಯ ನಿರೀಕ್ಷಿತ ಫಲ ನೀಡುತ್ತವೆ ಎಂದು ಹೇಳಿದರು.
ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದಂತಹ ಸಂವಿಧಾನದಿಂದ ಶಿಕ್ಷಣ, ಬಡತನ, ಹಸಿವಿನಿಂದ ಇಂಗಿಸುವ ಜೊತೆಗೆ ಇನ್ನಷ್ಟು ವೈಜ್ಞಾನಿಕವಾಗಿ ಅಭಿವೃದ್ಧಿಗೊಳ್ಳಲು ಸಾಧ್ಯವಾಯಿತು ಎಂದರು.
1947ರ ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಐತಿಹಾಸಿಕ ನೆನಪುಗಳನ್ನು ತಿರುವಿನೋಡಿದಾಗ ನಾವೀಗ ಸಬಲರು ಹಾಗೂ ಸುಜ್ಞಾನಿಗಳು ಆಗುವಂತಹ ದಿಟ್ಟ ಹೆಜ್ಜೆಗಳನ್ನು ಇಡುತ್ತಿದ್ದೇವೆ. ಅಂತಹ ಹೆಜ್ಜೆಗೆ ಇಂದಿನ ಮಕ್ಕಳೇ ಸ್ಪೂರ್ತಿ, ಹಾಗಾಗಿ ನೀವು ದೇಶ ಪ್ರೇಮದ ಜೊತೆಗೆ, ದೇಶದ ಅಭಿವೃದ್ದಿಗೆ ಕೈ ಜೋಡಿಸುವಂತೆ ಮಕ್ಕಳಿಗೆ ಕರೆ ನೀಡಿದರು.
BGS School-College ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಮಾತನಾಡುತ್ತಾ, ದೇಶ ಅಭಿವೃದ್ಧಿ ಹೊಂದಲು ನೀವುಗಳು ಈ ಕ್ಷಣದಿಂದಲೇ ಬದಲಾವಣೆ ತಂದುಕೊಳ್ಳುವ ಅಗತ್ಯವಿದೆ.ಓದಿನ ವಿಷಯಗಳ ಬಗ್ಗೆ ಶ್ರದ್ದೆ, ಹಾಗೂ ಸಮಯಪ್ರಜ್ಞೆ ಹೊಂದಬೇಕಿದೆ. ವಿಶೇಷವಾಗಿ ಎಲ್ಲರೂ ದೇಶದ ಬಗ್ಗೆ ಅಭಿಮಾನವನ್ನು ಹೊಂದುವಂತರಾಗ ಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ಹರೀಶ್, ಶಿಕ್ಷಕರು,ಉಪನ್ಯಾ ಸಕರು,ಇನ್ನು ಮುಂತಾದವರು ಉಪಸ್ಥಿತರಿದ್ದರು. ಶಾಲಾ ಕಾಲೇಜಿನ ಮಕ್ಕಳಿಂದ ಸ್ವಾತಂತ್ರ ಹೋರಾಟಗಾರರ ಬಗ್ಗೆ ಮಾತನಾಡಿದರು ಮತ್ತು ದೇಶಭಕ್ತಿ ಗೀತೆಯನ್ನು ಹಾಡಿದರು.
DC Shivamogga ಗುಡ್ಡೆಕಲ್ ಜಾತ್ರೆ ನಿಮಿತ್ತ ಸಂಚಾರಿ ವಾಹನಗಳಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ ಸೂಚನೆ – ಗುರುದತ್ತ ಹೆಗಡೆ
DC Shivamogga ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 116ರ ಅನ್ವಯ ದಿನಾಂಕ: 16.08.2025 ಅಂದರೆ ಈ ದಿನ ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ತಾತ್ಕಾಲಿಕವಾಗಿ ವಾಹನಗಳ ಸಂಚಾರ ನಿಷೇಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.
ವಾಹನಗಳ ಮಾರ್ಗ ಬದಲಾವಣೆಯ ವಿವರ:
ಬೆಂಗಳೂರು, ಭದ್ರಾವತಿ ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್ಗಳು ಮತ್ತು ಸಿಟಿ ಬಸ್ಗಳು ಹಾಗೂ ಕಾರು ವಾಹನಗಳು ಎಂ ಆರ್ ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಹೋಗುವ ಎಲ್ಲ ಭಾರೀ ವಾಹನ ಮತ್ತು ಎಲ್ಲಾ ಬಸ್ಗಳು ಮತ್ತು ಸಿಟಿ ಬಸ್ಗಳು ಹಾಗೂ ಕಾರು ವಾಹನಗಳು ಬೈಪಾಸ್ ರಸ್ತೆ ಎಂ ಆರ್ ಎಸ್ ಸರ್ಕಲ್ ಮುಖಾಂತರ ಹೋಗುವುದು.
ಚಿತ್ರದುರ್ಗ ಹೊಳೆಹೊನ್ನೂರುನಿಂದ ಶಿವಮೊಗ್ಗ ನಗರಕ್ಕೆ ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಒಳಬರುವುದು ಮತ್ತು ಹೊರಹೋಗುವುದು.
ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಲಘು ವಾಹನಗಳು ಪಿಳ್ಳಂಗಿರಿ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಮತ್ತು ಹೊಳಬೆನವಳ್ಳಿ ತಾಂಡ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪ ಮೂಲಕ ಬಿ.ಹೆಚ್. ರಸ್ತೆಗೆ ಸೇರಿಕೊಂಡು ಬೈಪಾನ್ ರಸ್ತೆಯ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು.
DC Shivamogga ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ಮತ್ತು ಕಾರು ವಾಹನಗಳು) ಬೈಪಾಸ್ ರಸ್ತೆಯ ಮಾರ್ಗವಾಗಿ ಮಲವಗೊಪ್ಪದ ಯಲವಟ್ಟಿ ಕ್ರಾಸ್ನಿಂದ ಯಲವಟ್ಟಿ ಮಾರ್ಗವಾಗಿ ಪಿಳ್ಳಂಗಿರಿ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವುದು.
ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರೀ ವಾಹನ ಎಲ್ಲಾ ಬಸ್ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ಕೆ.ಇ.ಬಿ ಸರ್ಕಲ್ ಉಷಾ ನರ್ಸಿಂಗ್ ಹೋಂ ಸರ್ಕಲ್, 100 ಅಡಿ ರಸ್ತೆ ವಿನೋಬನಗರ ಮಾರ್ಗವಾಗಿ ಹೋಗುವುದು.
ಹೊಳೆಹೊನ್ನೂರು ಸರ್ಕಲ್ನಿಂದ ಗುರುಪುರದ ಯಲವಟ್ಟಿ ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ ಮಾಡಲಾಗಿದೆ.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ತಿಳಿಸಿದ್ದಾರೆ.
Vagdevi Charitable Trust ವಿಶೇಷ ಚೇತನರಿಗೆ ಉಚಿತ ಪೆಟ್ಟಿಗೆ ನೆರವು ನೀಡಿದ ವಾಗ್ದೇವಿ ಟ್ರಸ್ಟ್
Vagdevi Charitable Trust ವಾಗ್ದೇವಿ ಚಾರಿಟಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಎಪ್ಪತ್ತೊಂಭತ್ತನೇ ಸ್ವಾತಂತ್ರ್ಯೋತ್ಸವ ವಿಶೇಷವಾಗಿ ಜರುಗಿತು.
ತೀರ್ಥಹಳ್ಳಿ ತಾಲೂಕು ಕೊಂಡ್ಲೂರು ಎಂಬಲ್ಲಿ ವಾಸವಾಗಿರುವ ವಿಕಲಚೇತನ ವ್ಯಕ್ತಿ ಶ್ರೀ ಕೆ ಎಂ ಸುಧೀರ್ ಇವರಿಗೆ ಟ್ರಸ್ಟ್ ನ ವತಿಯಿಂದ ಒಂದು ಪೆಟ್ಟಿಗೆ ಅಂಗಡಿ (petty shop) ಯನ್ನು ಉಚಿತವಾಗಿ ನೀಡಲಾಯಿತು.
ಅವರ ವಾಸಸ್ಥಾನದ ಸಮೀಪದಲ್ಲಿ ಐತಿಹಾಸಿಕ ಸ್ಥಳ ಕವಲೆ ದುರ್ಗಕ್ಕೆ ಹೋಗುವ ಮಾರ್ಗದಲ್ಲಿ ಈ ಪೆಟ್ಟಿಗೆ ಅಂಗಡಿಯನ್ನು ಇರಿಸಲಾಗಿದೆ.
ಕೊಂಡ್ಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಟ್ರಸ್ಟಿನ ಸೇವಾಕಾರ್ಯವನ್ನ ಶ್ಲಾಘಿಸಿದರು.
Vagdevi Charitable Trust ಟ್ರಸ್ಟ್ ನ ಅಧ್ಯಕ್ಷರು ಮತ್ತು ಎಲ್ಲ ಟ್ರಸ್ಟಿಗಳು ಹಾಗೂ ಅನೇಕ ದಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದಾನಿಗಳ ಔದಾರ್ಯದಿಂದಲೇ ನಮ್ಮ ಸಂಸ್ಥೆ ನಡೆಯುತ್ತಿದೆ. ನಮ್ಮ ವಾಗ್ದೇವಿ ಚಾರಿಟಬಲ್ ಟ್ರಸ್ಟ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಕಾಯಿಲೆ ಪೀಡಿತ ಬಡವರಿಗೆ ಔಷಧೋಪಚಾರ, ತುಂಬಾ ಬಡವರಿಗೆ ರೇಶನ್ ಕೊಡುವುದು, ಅನಾಥಾಶ್ರಮಗಳಿಗೆ ಸಹಾಯ ಮಾಡುವುದು ಮುಂತಾದ ಕಾರ್ಯಕ್ರಮಗಳನ್ನು ವರ್ಷವಿಡಿ ಮಾಡುತ್ತಿರುತ್ತೇವೆ. ಈ ವರ್ಷ ಡಿಸೆಂಬರ್ ತಿಂಗಳಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವುದರಿಂದ 10 ವಿಶೇಷವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ತೀರ್ಮಾನಿಸಲಾಗಿದೆ ಎಂದು ಟ್ರಸ್ಟಿನ ಚಟುವಟಿಕೆ ಬಗ್ಗೆ
ಕೆ ಲೈವ್ ನ್ಯೂಸ್ ಗೆ ಶ್ರೀರವಿರಾಜ ವೈದ್ಯ ಅವರು ತಿಳಿಸಿದರು .
ಪ್ರಸ್ತುತ ಶ್ರೀ ಸುಧೀರ್ ಅವರಿಗೆ ನೀಡಿರುವ ಮಳಿಗೆಯ ನೆರವು ಒಂಭತ್ತನೆಯ ಕಾರ್ಯಕ್ರಮವಾಗಿದೆ ಎಂದು ಉಪಸ್ಥಿತರಿದ್ದ ಟ್ರಸ್ಟಿ ಡಿ.ಜಿ.ಮಂಜುನಾಥ್ ಈ ಸಂದರ್ಭದಲ್ಲಿ ನುಡಿದರು.
Independence Day ವೀರಯೋಧರ ಜೀವನ ಸ್ಫೂರ್ತಿಯಾಗಲಿ :ಲತಾ ಎಂ.ರಮೇಶ್
Independence Day ವಿನೋಬನಗರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯಕ್ತ “ದೇಶ ಮೊದಲು” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಯಶಸ್ವಿಯಾಯಿತು.
ನಾಡಿನ ರಾಜರು ಮತ್ತು ವೀರ ಯೋಧರು ಕುರಿತು 15ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸುಂದರವಾಗಿ ಪ್ರಸ್ತುತಪಡಿಸಿದರು. ಶ್ರೀರಂಜಿನಿ ಅವರ ನೇತೃತ್ವದಲ್ಲಿ ಕ್ರಿಯಾಶೀಲತೆ, ದೇಶಭಕ್ತಿ ಗೀತೆಯೊಂದಿಗೆ ಅತ್ಯಂತ ಸುಂದರವಾಗಿ ಮೂಡಿಬಂದಿತು.
ಇನ್ನರ್ವ್ಹೀಲ್ ಅಧ್ಯಕ್ಷೆ ಲತಾ ಎಂ.ರಮೇಶ್ ಮಾತನಾಡಿ, 79ನೇ ಸ್ವಾತಂತ್ರö್ಯ ದಿನಾಚರಣೆ ಶುಭಾಶಯ. ನಾಡಿನ ರಾಜರು, ವೀರಯೋಧರ ಜೀವನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ವಿದ್ಯಾರ್ಥಿಗಳು ದೇಶದ ಇತಿಹಾಸ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಈ ಸಂದಂರ್ಭದಲ್ಲಿ ಸಂಸ್ಥೆ ನಿರ್ದೇಶಕಿ ಜ್ಯೋತಿ ಪವಾರ್ ಮಕ್ಕಳಿಗೆ ಶುಭ ಹಾರೈಸಿದರು. ಸಂಸ್ಥೆ ನಿರ್ದೇಶಕಿ ಹೇಮಾ ಮೋಹನ್ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ರಾಮಪ್ಪ, ಶೋಭಾ, ಅನಿತಾ ಭಾಗವಹಿಸಿದ್ದರು.
Independence Day ಈ ಸಂದರ್ಭದಲ್ಲಿ ಮಕ್ಕಳಿಗೆ ದೇಶ ಭಕ್ತರ ಜೀವನ ಚರಿತ್ರೆಯ ಪುಸ್ತಕ ಹಾಗೂ ಪೆನ್ಗಳನ್ನು ವಿತರಿಸಲಾಯಿತು. ಗುರುಗಳಿಗೂ ಸನ್ಮಾನಿಸಿ ಕಿರುಕಾಣಿಕೆ ನೀಡಲಾಯಿತು.
Kateel Ashok Pai Memorial College ಗಾಂಧೀಜಿ & ಇತರ ಹೋರಾಟಗಾರರ ತ್ಯಾಗದಿಂದ ಬಂದ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು- ಡಾ.ಸಂಧ್ಯಾ ಕಾವೇರಿ
Kateel Ashok Pai Memorial College ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಶಿವಮೊಗ್ಗ, ಇವರ ವತಿಯಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐ ಕ್ಯೂ ಎ ಸಿ ಸಹಯೋಗದಲ್ಲಿ 79 ನೇ
ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ನೆರವೇರಿಸಿದ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿಯವರು ಮಾತನಾಡಿ,
ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರೆಲ್ಲರನ್ನು ನಾವೆಲ್ಲರೂ ನೆನಪಿಸಿ
ಕೊಳ್ಳಬೇಕಾದ ಸುದಿನವಿದು ಮಹಾತ್ಮ ಗಾಂಧೀಜಿ ಸೇರಿದಂತೆ ಹಲವು ಮಹನೀಯರ ತ್ಯಾಗ ಬಲಿದಾನ
ಹಾಗೂ ಹೋರಾಟದ ಫಲವೇ ಸ್ವಾತಂತ್ರ್ಯ. ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ
ಮಾರ್ಗದಲ್ಲಿ ತಂದುಕೊಟ್ಟ ಈ ಸ್ವಾತಂತ್ರ್ಯವನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು, ಪ್ರತಿ
ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಬೇಕು ಕಟೀಲ್ ಅಶೋಕ್ ಪೈ ಸಮೂಹ ಸಂಸ್ಥೆಗಳು ಈ
ಸಂಕಲ್ಪದ ಭಾಗವಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಈ ಸಂಧರ್ಭದಲ್ಲಿ ಈ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು
ಕೆಲವು ದೃಢಸಂಕಲ್ಪವನ್ನು ಮಾಡುವುದರ ಮೂಲಕ ¸ ಮಾಜಮುಖಿ ಯೋಚನೆ ಮತ್ತು ಯೋಜನೆಗಳಿಂದ
ಈ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಭಾರತವು ಜಾಗತಿಕವಾಗಿ ನಡೆಯುತ್ತಿರುವ ಯುದ್ಧಗಳಲ್ಲಿ
ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಕಾರಣಕ್ಕೂ ಭಾಗಿಯಾಗದಿರಲಿ ಎಂದು ಹಾರೈಸೋಣ.
ಜಗತ್ತಿನೆಲ್ಲೆಡೆ ಶಾಂತಿ ನೆಮ್ಮದಿ ನೆಲೆಗೊಳ್ಳಲಿ ಯುದ್ಧದ ಕಾರ್ಮೋಡ ಹಿಂದೆ ಸರಿಯಲಿ ಈ
ಸ್ವಾತಂತ್ರ್ಯೋತ್ಸವ ನಮ್ಮೆಲ್ಲರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಲಿ ಎಂದು ಆಶಿಸಿದರು.
ಈ ಸಂಧರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಉಪನ್ಯಾಸಕರು ಹಾಗೂ
ಸಿಬ್ಬಂದಿವರ್ಗದವರು ಪುಷ್ಪ ಸಮರ್ಪಣೆಯನ್ನು ನೆರವೇರಿಸಿದರು.
Kateel Ashok Pai Memorial College ಶೈಕ್ಷಣಿಕ ನಿರ್ದೇಶಕರಾದ ಪ್ರೊ. ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ ಹಾಗೂ ಐ ಕ್ಯೂ ಎ ಸಿ ಸಂಯೋಜಕರಾದ ಡಾ. ಅರ್ಚನಾ ಭಟ್ ರಾಷ್ಟ್ರೀಯ ಸೇವಾ ಯೋಜನೆಯ
ಘಟಕ-೧,೨ ರ ಕಾರ್ಯಕ್ರಮಾಧಿಕಾರಿಗಳಾದ ಡಾ. ಸುಕೀರ್ತಿ ಹಾಗೂ ಮೋಹನ್ ಕುಮಾರ್. ಆರ್.
ಉಪಸ್ಥಿತರಿದ್ದರು. ಕು. ತನ್ಮಯಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ನೆರವೇರಿತು.
Independence Day ಗ್ಯಾರಂಟಿ ಯೋಜನೆಗಳಿಂದ ವಾರ್ಷಿಕ ಅಂದಾಜು₹ 50.000 ಕ್ಕೂ ಅಧಿಕ ಮೊತ್ತದ ಆರ್ಥಿಕ ಸೌಲಭ್ಯ- ಮಧು ಬಂಗಾರಪ್ಪ
Independence Day ಶಿವಮೊಗ್ಗ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು.
ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಸಂದೇಶ ನೀಡಿದರು.
ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರಾದ ಎಸ್. ಬಂಗಾರಪ್ಪ ನವರು ಸೇರಿದಂತೆ ನಾಲ್ಕು ಮುಖ್ಯ ಮಂತ್ರಿಗಳನ್ನು ನೀಡಿದ ಹಾಗೂ ರಾಷ್ಟ್ರ ಕವಿಗಳಾದ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಮತ್ತು ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡ ಸೇರಿದಂತೆ ಅನೇಕರು ಜನಿಸಿದ ಪುಣ್ಯಭೂಮಿ.
ನಮ್ಮ ಸರ್ಕಾರವು ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಡಿಮೆ ಅವಧಿಯಲ್ಲಿ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳು
ಯಶಸ್ವಿಯಾಗಿ ಜನರಿಗೆ ತಲುಪಿದ್ದು, ಜನರ ಜೀವನದಲ್ಲಿ ಸುಧಾರಣೆ ಕಾಣಬಹುದಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಅಂದಾಜು ರೂ.50,000ಕ್ಕೂ ಅಧಿಕ ಮೊತ್ತದ ಆರ್ಥಿಕ ಸೌಲಭ್ಯ ನೇರವಾಗಿ ದೊರೆಯುತ್ತಿದೆ.
ಗೃಹಲಕ್ಷ್ಮಿಯೋಜನೆಯಿಂದ ಜಿಲ್ಲೆಯ 3,87,638 ಫಲಾನುಭವಿಗಳಿಗೆ ರೂ. 1567.74 ಕೋಟಿಗಳನ್ನು ಡಿಬಿಟಿ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ.
ಶಕ್ತಿ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 6.32 ಕೋಟಿ ಮಹಿಳಾ ಪ್ರಯಾಣಿಕರು ಇದುವರೆಗೆ ಪ್ರಯಾಣಿಸಿ, ಈ ಯೋಜನೆಯ ಲಾಭಪಡೆದಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಈ ವರೆಗೆ ಜಿಲ್ಲೆಯಲ್ಲಿ 3,52,840 ಲಕ್ಷ ಪಡಿತರ ಕಾರ್ಡುದಾರರಿಗೆ ರೂ. 359.97 ಕೋಟಿ ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದೆ.
ಈ ವರ್ಷದ ಫೆಬ್ರವರಿಯಿಂದ 10ಕೆಜಿ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ನೀಡಲಾಗುತ್ತಿದೆ.
ಗೃಹ ಜ್ಯೋತಿ ಯೋಜನೆಯಡಿ ಇದುವರೆವಿಗೂ 4.69 ಲಕ್ಷ ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ಮೊತ್ತ ರೂ. 481.04 ಕೋಟಿ ವೆಚ್ಚ ಮಾಡಲಾಗಿದೆ.
ಶಿವಮೊಗ್ಗದಿಂದಲೇ ಯುವನಿಧಿ ಯೋಜನೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಚಾಲನೆ ನೀಡಿದರು.
ಇದುವರೆವಿಗೂ ಈ ಯೋಜನೆಯಡಿ ಜಿಲ್ಲೆಯ 6894 ವಿದ್ಯಾರ್ಥಿಗಳಿಗೆ ರೂ.17.88 ಕೋಟಿಯನ್ನು ಅವರ ಖಾತೆಗಳಿಗೆ ಜಮಾಮಾಡಲಾಗಿದೆ.
Independence Day ಈ ಬಾರಿ ಉತ್ತಮ ಮಳೆಯಿಂದಾಗಿ ಜಿಲ್ಲೆಯ ಕೆರೆ, ಕಾಲುವೆಗಳಲ್ಲಿ ನೀರು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಜಿಲ್ಲೆಗೆ ನೂತನವಾಗಿ 5 ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.
ಮತ್ಸ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮಹಿಳಾ ಮೀನುಗಾರರಿಗೆ ಉಚಿತ ಮೀನು ಮರಿ ಮತ್ತು ಮೀನಿನ ಆಹಾರ ವಿತರಣೆ ಹಾಗೂ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಮೀನುಗಾರರ ಕುಟುಂಬಗಳಿಗೆ 25 ಮನೆಗಳನ್ನು ಮಂಜೂರು ಮಾಡಲಾಗಿದೆ.
ಶಿರಾಳಕೊಪ್ಪ, ಅಮೃತ್ ಯೋಜನೆಯಡಿ ಶಿಕಾರಿಪುರ, ಹೊಳೆಹೊನ್ನೂರು, ಜೋಗ-ಕಾರ್ಗಲ್, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ ಪಟ್ಟಣ ಪಂಚಾಯಿತಿ, ಪುರಸಭೆಗೆ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗೆ ಶೀಘ್ರುದಲ್ಲಿ ಚಾಲನೆ ದೊರೆಯಲಿದೆ.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸೊರಬ ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ನೀರಾವರಿ ಯೋಜನೆ ಮಂಜೂರು ಮಾಡಲಾಗಿದ್ದು, ಒಟ್ಟಾರೆ ರೂ.307.80 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಕುಂಸಿ – ಗಾಜನೂರು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ರೂ.125 ಕೋಟಿ ಅನುಮೊದನೆ ದೊರಕಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಇತ್ತೀಚಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ 4ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ.
ಹಾಗೂ ಶಿಕ್ಷಣ ಇಲಾಖೆಯಲ್ಲಿ ಕಡಿಮೆ ಅಂಕ ಪಡೆದ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮೂರು ಪರಿಕ್ಷಾ ನೀತಿ (Three Exam Policy) ಜಾರಿಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ಎಲ್ಲಾ ವಿದ್ಯಾರ್ಥಿಗಳಿಗೆ 2ನೇ ಅಥವಾ 3ನೇ ಪರೀಕ್ಷೆಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
2025-26ನೇ ಸಾಲಿನಲ್ಲಿ ಪ್ರಥಮ ಬಾರಿಗೆ ರಾಜ್ಯದ 5000 ಸರ್ಕಾರಿ ಶಾಲೆಗಳಲ್ಲಿ ಎಲ್ಜಿ & ಯುಕೆಜಿ ತರಗತಿಗಳು, 4000 ಸರ್ಕಾರಿ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳನ್ನು ಹಾಗೂ ರಾಜ್ಯದಲ್ಲಿ 500 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ.
ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ 25000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಎನ್ಇಇಟಿ/ಜೆಇಇ/ಸಿಇಟಿ ತರಬೇತಿ ನೀಡಲಾಗುತ್ತಿದೆ. ಸದರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು 2024-25ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯು ಐಐಟಿ ಖರಗುರ ಗೆ ಪ್ರವೇಶಾತಿ ಪಡೆದಿರುವುದು ಶಿಕ್ಷಣ ಸಚಿವನಾಗಿ ನನಗೆ ಹೆಮ್ಮಯ ವಿಷಯವಾಗಿದೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಒಂದೇ ಸೂರಿನಡಿಯಲ್ಲಿ ಎಲ್.ಕೆ.ಜಿ ಯಿಂದ ದ್ವಿತೀಯ ಪಿ.ಯು.ಸಿ ವರೆಗೂ ವಿದ್ಯಾಭ್ಯಾಸ ನೀಡುವ ಸಲುವಾಗಿ ಜಿಲ್ಲೆಯಲ್ಲಿ 11 ಕೆ.ಪಿ.ಎಸ್ ಶಾಲೆಗಳನ್ನು ನಡೆಸಲಾಗುತ್ತಿದೆ.
ಜಿಲ್ಲೆಯ 17 ರಿಂದ 20 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜಿಸಲಾಗಿದೆ.
ಜಿಲ್ಲೆಗೆ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 02 ವಸತಿ ನಿಲಯಗಳನ್ನು ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ದ್ವಿ-ಭಾಷಾ ಮಾಧ್ಯಮ ಶಾಲೆಗಳಿಗೆ ಗಣನೀಯವಾಗಿ ಬೇಡಿಕೆ ಹೆಚ್ಚಿದೆ. ಇದರ ಅನ್ವಯ, ಹಾಲಿ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 171 ದ್ವಿ-ಭಾಷಾ ಮಾಧ್ಯಮ ಶಾಲೆಗಳನ್ನು ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಸರ್ಕಾರದ ಈ ನಿರ್ಧಾರದ ಫಲವಾಗಿ, ಹೆಚ್ಚಿನ ಸಂಖ್ಯೆಯ ಮಕ್ಕಳು ಸರ್ಕಾರಿ ಶಾಲೆಗಳ ಕಡೆಗೆ ಆಕರ್ಷಿತರಾಗಿದ್ದಾರೆ.
ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ, ವಿತರಣೆ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ.
ಜಿಲ್ಲೆಯಲ್ಲಿ 2178 ಶಾಲೆಗಳಲ್ಲಿ ಬಿಸಿ ಊಟ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು ಒಟ್ಟು 1,32,682 ವಿದ್ಯಾರ್ಥಿಗಳು ಯೋಜನೆಯ ಅನುಕೂಲವನ್ನು ಪಡೆಯುತ್ತಿದ್ದಾರೆ. ರಾಜ್ಯಾದ್ಯಂತ ಒಟ್ಟಾರೆಯಾಗಿ 51,61,390 ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ವಿದ್ಯಾರ್ಥಿಗಳಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸಲು 6 ದಿನಗಳು ಮೊಟ್ಟೆಯನ್ನು ನೀಡುತ್ತಿರುವುದರ ಜೊತೆಗೆ ಸರ್ಕಾರದ ಶೇಕಡ 25% ಅನುದಾನ ಹಾಗೂ ಸತ್ಯ ಸಾಯಿ ಸಂಸ್ಥೆಯ ಶೇಕಡ 75% ಅನುದಾನದೊಂದಿಗೆ ವಾರದ 05 ದಿನಗಳು ರಾಗಿ ಮಾಲ್ಟ್ ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಯಡಿ ‘ನಿಮ್ಮ ಮನೆಯ ಸಮೀಪ ಆರೋಗ್ಯ ಸೇವೆ’ ಧ್ಯೇಯದೊಂದಿಗೆ ಉಚಿತ ಚಿಕಿತ್ಸೆ ನೀಡುವ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.
ದೇಶದಲೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ‘ಅಂಧತ್ವ ಮುಕ್ತ ಶಿವಮೊಗ್ಗ” ಎಂಬ ಅಭಿಯಾನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ.
ಮೆಗ್ಗಾನ್ ಆಸ್ಪತ್ರೆಯನ್ನು ಉನ್ನತೀಕರಿಸುವುದಲ್ಲದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಯು ಪ್ರಗತಿಯಲ್ಲಿದೆ.
50 ಹಾಸಿಗೆಗಳ ಕ್ರಿಟಿಕಲ್ ಕೇರ್ ಯುನಿಟ್ ಮತ್ತು ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡ ಕಾಮಗಾರಿಗೆ ಶೀಘ್ರದಲಿ ಚಾಲನೆ ದೊರೆಯಲಿದೆ ಹಾಗೂ ಸಿಮ್ಸ್ ನಲ್ಲಿ ಪರಿಶಿಷ, ಜಾತಿ & ಪರಿಶಿಷ ಪಂಗಡ ವೈದ್ಯಕೀಯ ವಿದ್ಯಾರ್ಥಿಗಳಿಗೆ 100 ಹಾಸಿಗೆ ವಸತಿನಿಲಯದ ಕಟ್ಟಡ ಕಾಮಗಾರಿ ಪುಗತಿಯಲ್ಲಿದೆ.
ಮಹತ್ಮಾ ಗಾಂಧಿ ನಗರ ವಿಕಾಸ ಯೋಜನೆ ಹಂತ-2 ರಲ್ಲಿ ರೂ.117.50 ಕೋಟಿ ಅನುದಾನ ಜಿಲ್ಲೆಗೆ ಮಂಜೂರಾಗಿರುತ್ತದೆ. ಪಿಎಂಜಿಎಸ್ವೈ ಪುಗತಿ ಪಥ ಯೋಜನೆಯಡಿಯಲ್ಲಿ ಶಿವಮೊಗ್ಗ, ಜಿಲ್ಲೆಗೆ ಒಟ್ಟು 162ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲು ರೂ 118.08 ಕೋಟಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯಿಂದ ಅನುಮೋದನೆಯಾಗಿರುತ್ತದೆ.
ಜಿಲ್ಲೆಯಲ್ಲಿ ಹಲವು ದಶಕಗಳಿಂದ ಇತ್ಯರ್ಥವಾಗದೆ ಉಳಿದಿದ್ದ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಸನ್ಮಾನ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ಮಾರ್ಗದರ್ಶನದಲ್ಲಿ, ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಮಾನ್ಯ ಸರ್ವೋಚ್ಚ ನ್ಯಾಯಾಲಯ ದಲ್ಲಿ ಸಮರ್ಥವಾಗಿ ವಾದ ಮಂಡಿಸಲು ಹಿರಿಯ ವಕೀಲರೊಬ್ಬರನ್ನು ನೇಮಿಸಲಾಗಿದೆ. ಅಂತೆಯೇ ಅದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ಸಂತ್ರಸ್ಥರ ಸಮೀಕ್ಷೆ ಕಾರ್ಯ ನಡೆದಿದ್ದು, ಸಂತ್ರಸ್ತರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಬದ್ಧವಾಗಿದೆ.
ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಭದ್ರಾವತಿಯಲ್ಲಿ ನೂತನ ಕಾರ್ಮಿಕರ ಸಮುದಾಯ ಭವನ ಮತ್ತು ಶಿವಮೊಗ್ಗದ ಹೊರವಲಯ ಸಿದ್ಧಿಪುರದಲ್ಲಿ ವಸತಿ ಕಟ್ಟಡ ನಿರ್ಮಿಸಲಾಗಿದೆ. ಸೊರಬ ತಾಲ್ಲೂಕಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ನೀಡಲು ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜೋಗದಲ್ಲಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಅತೀ ಶೀಘ್ರದಲ್ಲಿ ಉದ್ಘಾಟನೆ ನಡೆಯಲಿದೆ. ಹಾಗೂ ನೂತನ ಜಿಲ್ಲಾಡಳಿತ ಭವನ ನಿರ್ಮಾಣ, ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಕಾಯ್ದೆ ಕುರಿತಾದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
21 ಕವಾಯಿತು ತುಕಡಿಗಳು ಶಿಸ್ತು ಮತ್ತು ಆಕರ್ಷಕ ಪಥ ಸಂಚಲನ ನಡೆಸಿದರು.
ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶಭಕ್ತಿ ಗೀತೆಗಳ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಡಿಎಆರ್ ಆರ್ ಪಿಅಐಸೋಮಶೇಖರ್ ಹೆಚ್ ಪಿ ಇವರು ಕವಾಯಿತು ಮುಖ್ಯ ದಂಡ ನಾಯಕರಾಗಿ ಕನ್ನಡದಲ್ಲಿ ಆದೇಶಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯಿಂದ ಸಾಂಕೇತಿಕವಾಗಿ 5 ಜನ ಅರ್ಚಕರಿಗೆ ತತ್ಸಿಕ್ ಹಣವನ್ನು ನೀಡಲಾಯಿತು.
ಎಸ್ ಎಸ್ ಎಲ್ ಸಿ ಯಲ್ಲಿ 625 ಕ್ಕೆ 625 ಅಂಕ ಗಳಿಸಿದ 6 ಮಕ್ಕಳಿಗೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
8 ಜನ ಸರ್ಕಾರಿ ನೌಕಕರಿಗೆ ಸರ್ವೋತ್ತಮ ಪ್ರಶಸ್ತಿ ನೀಡಲಾಯಿತು.
ಗೃಹ ಇಲಾಖೆಯ ವತಿಯಿಂದ ಸಿಎಂ ಪದಕ ಪಡೆದ ಗೃಹರಕ್ಷಕ ಎಸ್.ಟಿ ಆನಂದ್ ಅವರನ್ನು ಸನ್ಮಾನಿಸಲಾಯಿತು.
ಶಿಸ್ತಿನ ಕವಾಯಿತು ಪ್ರದರ್ಶಿಸಿದ ತುಕುಡಿಗಳಾದ ಎನ್ ಸಿಸಿ ಕಸ್ತೂರಬಾ ಬಾಲಿಕಾ ಪ್ರೌಢಶಾಲೆ ಪ್ರಥಮ, ಮೊರಾರ್ಜಿ ದೇಸಾಯಿ ಬಾಲಕರ ವಸತಿ ಶಾಲೆ ಗಾಜನೂರು ದ್ವಿತೀಯ ಹಾಗೂ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆ ವಿಭಾಗದ ಭಾರತ ಸೇವಾದಳಕ್ಕೆ ತೃತೀಯ ಬಹುಮಾನ ಪಡೆಯಿತು.
ಅತ್ಯುತ್ತಮ ಸಾಂಸ್ಕೃತಿಕ ನೃತ್ಯ ಪ್ರದರ್ಶಿಸಿದ
ಮಾಚೇನಹಳ್ಳಿಯ ಪೊಲೀಸ್ ಪಬ್ಲಿಕ್ ಶಾಲೆಗೆ ಪ್ರಥಮ,
ಗೋಪಾಳದ ನಂದನ ವಿದ್ಯಾ ಸಂಸ್ಥೆಗೆ ದ್ವಿತೀಯ, ಬಹುಮಾನ ಹಾಗೂ ಗೋಪಾಳದ ಅನನ್ಯ ಪ್ರೌಢಶಾಲೆಗೆ ತೃತೀಯ ಸ್ಥಾನ ಘೋಷಿಸಿ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕರಾದ ಎಸ್ ಎನ್ ಚನ್ನಬಸಪ್ಪ
ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
Department of Youth Empowerment and Sports ಆಗಸ್ಟ್16. ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
Department of Youth Empowerment and Sports ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ 10.30 ಕ್ಕೆ ನಗರ ನೆಹರು ಕ್ರೀಡಾಂಗಣದಲ್ಲಿ 2025-26 ನೇ ಸಾಲಿನ ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಭದ್ರವಾತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳು ಅಭಿವೃದ್ದಿ ನಿಗಮ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಇವರ ಗೌರವ ಉಪಸ್ಥಿತಿ ಇರಲಿದೆ.
Department of Youth Empowerment and Sports ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪಾಲ್ಗೊಳ್ಳುವರು, ಜನಪ್ರತಿನಿಧಿಗಳು, ಅಧಿಕಾರಿಗಳು, ಕ್ರೀಡಾಪಟುಗಳು ಪಾಲ್ಗೊಳ್ಳುವರು.
