Monday, August 3, 2026
Monday, August 3, 2026
Home Blog Page 2059

ಶಿಥಿಲ ಕಟ್ಟಡದಲ್ಲಿ ಶಾಲೆ ನಡೆಸ ಕೂಡದು

ಅಪಾಯದ ಸ್ಥಿತಿಯಲ್ಲಿರುವ ಶಾಲಾ ಕಟ್ಟಡ ಮತ್ತು ಶಿಥಿಲಗೊಂಡಿರುವ ಕೊಠಡಿಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ತಿಳಿಸಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಕೊರೋನಾ ಕಾರಣ ಸ್ಥಗಿತಗೊಂಡಿದ್ದ ಶಾಲೆಗಳು ಪುನರಾರಂಭಗೊಂಡಿದೆ. ಆದರೆ ಕಳೆದೆರಡು ವಾರಗಳಿಂದ ರಾಜ್ಯದಾದ್ಯಂತ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಇದರಿಂದ ಅನೇಕ ಕಡೆ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳು ನೆಲಕ್ಕುರುಳಿವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಅವಘಡ ಸಂಭವಿಸಿದರೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇವರ ಹಿತದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಥಿಲಗೊಂಡಿರುವ, ಅಪಾಯ ಸ್ಥಿತಿಯಲ್ಲಿರುವ ಶಾಲಾಕಟ್ಟಡ ದ ಕೊಠಡಿಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಡೆಸ ಕೂಡದು ಎಂದು ತಿಳಿಸಿದೆ.

ಎಲ್ಲಾ ಉಪನಿರ್ದೇಶಕರು, ಡಯಟ್ ಪ್ರಾಂಶುಪಾಲರು, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಸೇರುವ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕೂಡ ಸೂಚನೆ ನೀಡಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಯುವಜನ ಸಮೀಕ್ಷೆ : ಯೂನಿಸೆಫ್ ವರದಿ

0

ಕೋವಿಡ್ ಪೂರ್ವ ಪರಿಸ್ಥಿತಿಯಲ್ಲಿದ್ದ ಶಿಕ್ಷಣದ ಗುಣಮಟ್ಟ ಈಗ ಮತ್ತಷ್ಟು ಉತ್ತಮವಾಗಿದೆ ಎಂದು ಭಾರತೀಯ ಯುವಜನತೆ ಅಭಿಪ್ರಾಯಪಟ್ಟಿದೆ. ಯುನಿಸೆಫ್ ಗ್ಯಾಲಪ್ ಇಂಟರ್ನ್ಯಾಷನಲ್ ಸರ್ವೇ ಪ್ರಕಾರ ಈ ಅಭಿಪ್ರಾಯ ಹೊರಹೊಮ್ಮಿದೆ.

ಜಗತ್ತಿನ 21 ರಾಷ್ಟ್ರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಭಾರತದ 1500 ಜನರನ್ನು ಈ ಬಗ್ಗೆ ಸಮೀಕ್ಷೆಗೆ ಒಳಪಡಿಸಲಾಗಿತ್ತು. 40 ವರ್ಷಕ್ಕೂ ಮೀರಿದ ಶೇ. 45 ಮಂದಿ ಶಿಕ್ಷಣವು ಜೀವನದ ಯಶಸ್ಸನ್ನು ನಿರ್ಧರಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ. ಶೇ.58 ರಷ್ಟು ಯುವಜನರ ಪ್ರಕಾರ ಇಂದಿನ ಎಳೆಯರು ಬಹಳಷ್ಟು ಒತ್ತಡಕ್ಕೆ ಈಡಾಗುತ್ತಿದ್ದಾರೆ ಎಂದಿದ್ದಾರೆ. 15 ರಿಂದ 24 ವರ್ಷದೊಳಗಿನ ಯುವಜನತೆ ಇಂದಿನ ಶೈಕ್ಷಣಿಕ ಗುಣಮಟ್ಟ ಹಿಂದಿಗಿಂತಲೂ ಉತ್ತಮವಾಗಿದೆ ಎಂದಿದ್ದಾರೆ.ಈ ಯುವ ಜನತೆಗೆ ಜಗತ್ತು ಪ್ರಶಸ್ತವಾಗಿದೆ ತಿಳಿಸಿದ್ದಾರೆ ಎಂಬ ವಿಷಯವನ ಭಾರತದ ಯುನಿಸೆಫ್ ಪ್ರತಿನಿಧಿಯಾಗಿರುವ ಯಸುಮಾಸ ಕಿಮುರ ಹೇಳಿದ್ದಾರೆ.

ಈ ವರದಿಯ ಪ್ರಕಾರ ಶೇ.55 ರಷ್ಟು ಯುವಜನ ಹವಾಮಾನ ವೈಪರೀತ್ಯದ ಬಗ್ಗೆ ತಿಳಿದುಕೊಂಡಿದ್ದಾರೆ. ಶೇ.65 ರಷ್ಟು ಯುವಜನತೆ ರಾಜಕಾರಣಿಗಳು ಮಕ್ಕಳ ಅಭಿಪ್ರಾಯಗಳನ್ನು ಆಲಿಸಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಬಹುಪಾಲು ಶೇ.57 ರಷ್ಟು ಯುವಜನತೆ ಹೆಣ್ಣುಮಕ್ಕಳ ಮದುವೆ ವಯಸ್ಸು 18ಕ್ಕೂ ಹೆಚ್ಚಿರಬೇಕು ಎಂದು ಬಯಸುತ್ತಾರೆ.

ಮತ್ತಷ್ಟು ಕುತೂಹಲಕರ ಸಮೀಕ್ಷೆ ಎಂದರೆ ಶೇ.57 ರಷ್ಟು ಯುವಜನತೆ ನಿತ್ಯ ಇಂಟರ್ನೆಟ್ ಬಳಸುತ್ತಾರೆ ಎಂದು ವಿವಿಧ ಸಮೀಕ್ಷೆಗಳ ಮೂಲಕ ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಾಗರದಲ್ಲಿ ರಾಷ್ಟ್ರೀಯ ಸಂಗೀತೋತ್ಸವ

0

ಸಾಗರದಲ್ಲಿ ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯ , ಭಾರತ ಸರ್ಕಾರ ಸಂಸ್ಕೃತಿ ಸಚಿವಾಲಯ, ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸಂಗೀತೋತ್ಸವ ನಡೆಯಲಿದೆ.

ನವೆಂಬರ್ 20,21 ಮತ್ತು 22ರಂದು 21 ನೇ ವರ್ಷದ ‘ಏಕವಿಂಶ’ ರಾಷ್ಟ್ರೀಯ ಸಂಗೀತೋತ್ಸವ ನಡೆಯಲಿದೆ ಎಂದು ವಿದುಷಿ ವಸುಧಾ ಶರ್ಮ ಮಾಧ್ಯಮ ಮಿತ್ರರಿಗೆ ತಿಳಿಸಿದರು.

ನವೆಂಬರ್ 21ರಂದು ಬೆಂಗಳೂರಿನ ಅನಿರುದ್ಧ ಐತಾಳ್ ಅವರಿಂದ ಹಿಂದುಸ್ತಾನಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿಯ ವೇಳೆ ಯಕ್ಷ ಸಂಗೀತ ವಿಶೇಷ ಕಾರ್ಯಕ್ರಮ ನಡೆಯಲಿದೆ.

ನವೆಂಬರ್ 22 ರಂದು ಧಾರವಾಡದ ವಿದ್ವಾನ್ ವಿಜಯ ಪಾಟೀಲ್ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿದ್ವಾನ್ ನಿರಂಜನ ದಿಂಡೋಡಿ ಬೆಂಗಳೂರು ಅವರಿಂದ ಕರ್ನಾಟಕಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಈ ಮೂರು ದಿನಗಳು ಸಹ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ದೇಶದ ವಿವಿಧ ಕಡೆಯಿಂದ ಹೆಸರಾಂತ ಗಾಯಕರು ಆಗಮಿಸಲಿದ್ದಾರೆ. ತಮ್ಮ ಸ್ವರ ತರಂಗಗಳ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. 21ನೇ ವರ್ಷದ ‘ಏಕ ವಿಂಶ ‘ ರಾಷ್ಟ್ರೀಯ ಸಂಗೀತೋತ್ಸವದಲ್ಲಿ ಸಂಗೀತದ ಸಂಗೀತದ ಸವಿ ಸವಿಯಲು ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರತಿಭಟನೆ ಹಿಂಪಡೆಯುವುದಿಲ್ಲ-ಟಿಕಾಯತ್

0

ದೇಶವ್ಯಾಪಿ ಕಳೆದ ಒಂದು ವರ್ಷದಿಂದ ಭಾರೀ ವಿವಾದವನ್ನು ಹುಟ್ಟುಹಾಕಿದ್ದ ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಮಾನ್ಯ ಪ್ರಧಾನ ಮಂತ್ರಿ ಅವರು ವಾಪಸ್ ಪಡೆಯುವುದಾಗಿ ಈಗಾಗಲೇ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ದೇಶದಾದ್ಯಂತ ರೈತರು ವಿರೋಧಿಸಿದ್ದರು. ಈ ಸಂಬಂಧ ಮೋದಿ ಅವರು “ಕಾಯ್ದೆಯ ಗುರಿಯು ಸಣ್ಣ ರೈತರನ್ನು ಬಲಪಡಿಸುವುದೇ ಆಗಿದೆ ಆದರೆ ಕೆಲವು ವರ್ಗದ ಕೃಷಿಕರನ್ನು ಮನವರಿಕೆ ಮಾಡಿಕೊಡಲು ಆಗಲಿಲ್ಲ. ನಾನು ಮತ್ತಷ್ಟು ಕಠಿಣವಾಗಿ ಶ್ರಮಿಸುತ್ತೇನೆ. ನಿಮ್ಮ ಕನಸುಗಳನ್ನು, ದೇಶದ ಕನಸುಗಳನ್ನು ಈಡೇರಿಸಲು ಸಾಧ್ಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಕೃಷಿ ಕಾಯಿದೆ ಹಿಂಪಡೆಯುವ ಬಗ್ಗೆ ಪ್ರಧಾನಿಯವರ ನಿರ್ಧಾರ ತಿಳಿದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪ್ರತಿಕ್ರಿಯಿಸಿದ್ದಾರೆ. “ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಸಂಸತ್ತಿನಲ್ಲಿ ಈ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಕಾಯುತ್ತೇವೆ” ಎಂದು ತಿಳಿಸಿದ್ದಾರೆ.

“ದೇಶದ ಅನ್ನದಾತರು ಸತ್ಯಾಗ್ರಹದ ಮೂಲಕ ದುರಹಂಕಾರವನ್ನು ಮಣಿಸಿದ್ದಾರೆ. ಅನ್ಯಾಯದ ವಿರುದ್ಧ ವಿಜಯಕ್ಕೆ ಅಭಿನಂದನೆಗಳು ಜೈಹಿಂದ್, ದೇಶದ ರೈತರಿಗೆ ಜೈ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕಾಯ್ದೆ ಹಿಂಪಡೆ ಕುರಿತಂತೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ” ಎನ್ ಡಿ ಎ ಸರ್ಕಾರ ಸ್ಪಂದನಾಶೀಲ. ಹೀಗಾಗಿಯೇ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎನ್ನುವ ರೈತರ ಬೇಡಿಕೆಗಳಿಗೆ ಸ್ಪಂದಿಸಿದೆ. ಚುನಾವಣೆ ಉದ್ದೇಶಕ್ಕಾಗಿ ಕಾಯ್ದೆ ಹಿಂದಕ್ಕೆ ಪಡೆದಿಲ್ಲ” ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು “ಒಣ ಪ್ರತಿಷ್ಠೆಗೆ ಒಳಗಾಗದೇ ಕೃಷಿ ಕಾಯ್ದೆಗಳನ್ನು ಹಿಂಪಡೆದ ಮೋದಿ ನಿರ್ಧಾರ ಸ್ವಾಗತಾರ್ಹ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

“ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನ ಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ” ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕೃಷಿ ಕಾಯ್ದೆ ಹಿಂಪಡೆ ಕುರಿತಂತೆ ಪ್ರತಿಕ್ರಿಯಿಸಿದರು.

“ಮೋದಿ ಅವರ ಏಕಾಏಕಿ ನಿರ್ಧಾರದಲ್ಲಿ ವಿಶ್ವಾಸದ ಕೊರತೆ ಕಾಣುತ್ತಿದೆ. ಮೊದಲೇ ಸ್ಪಂದಿಸಿದ್ದರೆ ಮುಜುಗರ ಆಗುತ್ತಿರಲಿಲ್ಲ. ಚುನಾವಣೆಗಳ ಲಾಭ-ನಷ್ಟ ಇಟ್ಟುಕೊಂಡು ಅವರು ತೀರ್ಮಾನ ತೆಗೆದುಕೊಂಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೋದಿ ಅವರ ಈ ನಿರ್ಧಾರ ಕುರಿತು ಟೀಕಿಸಿದ್ದಾರೆ.

ಏನೇ ಆಗಲಿ ಒಂದು ವರ್ಷದಿಂದ ಮಳೆ, ಗಾಳಿ, ಚಳಿ ಎನ್ನದೇ ನಿರಂತರ ಹೋರಾಟ ಕೈಗೊಂಡಿದ್ದ ರೈತರಿಗೆ ಜಯ ಸಿಕ್ಕಂತಾಗಿದೆ. ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಿದ್ದ ಪ್ರಧಾನಿ ಮೋದಿ ಅವರ ನಿರ್ಧಾರದಿಂದ ದೇಶದಾದ್ಯಂತ ರೈತ ಸಂಘಟನೆಗಳಿಂದ ವಿಜಯೋತ್ಸವ ಆಚರಣೆ ನಡೆಯುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಟಿ-20 ಸರಣಿ : ಭಾರತದ ವಶ

0

ಟಿ – 20 ಕ್ರಿಕೆಟ್ ಟೂರ್ನಿಯ 2ನೇ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಿತು.
3 ಪಂದ್ಯಗಳ ಟಿ – 20 ಸರಣಿಯ ಹಣಾಹಣಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಸರಣಿ ತನ್ನದಾಗಿಸಿಕೊಂಡಿದೆ.
ರಾಂಚಿಯ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎದುರಾಳಿ ತಂಡಕ್ಕೆ ಮೊದಲಿಗೆ ಬ್ಯಾಟಿಂಗ್ ಆಡಲು ಅವಕಾಶ ಮಾಡಿಕೊಟ್ಟಿತು. ಈ ಹಣಾಹಣಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 153 ರನ್ ಗಳಿಸಿತು.
ಆರಂಭಿಕ ಜೋಡಿ ಮಾರ್ಟಿನ್ ಗಪ್ಟಿಲ್ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸಿ 31 ರನ್ ಗಳಿಸಿಕೊಂಡರು ಮತ್ತು ಡೇರಿಲ್ ಮಿಚೆಲ್ 28 ಎಸೆತಗಳಲ್ಲಿ 31 ರನ್ ಗಳಿಸಿಕೊಂಡರು ಆತಿಥೇಯ ಬೌಲರ್ ಗಳಿಗೆ ಬಿಸಿ ಮುಟ್ಟಿಸಿದರು. ಕೇವಲ 4 ಓವರ್ ಗಳಲ್ಲಿ 48 ರನ್ ಗಳುನ್ನು ಸೇರಿಸಿದರು. ಮಧ್ಯಮವೇಗಿ ದೀಪಕ್ ಚಾಹರ್ ಅವರು ಹಾಕಿದ ಎಸೆತ ಅನೀರಿಕ್ಷಿತವಾಗಿ ತುಸು ಎತ್ತರಕ್ಕೆ ಪುಟಿಯಿತು. ಗಪ್ಟಿಲ್ ತಳ್ಳಲು ಪ್ರಯತ್ನಿಸಿದರು. ಬ್ಯಾಟಿನ ಮೇಲ್ಭಾಗಕ್ಕೆ ಬಡಿದ ಚೆಂಡು ಚೆಂಗ್ಗನೆ ಮೇಲಕ್ಕೆ ಹಾರಿತು. ವಿಕೆಟ್ ಕೀಪರ್ ರಿಷಾಬ್ ಪಂತ್ ಚೆಂಡನ್ನು ಕ್ಯಾಚ್ ಇಡಿದರು.
ಮಾರ್ಕ್ ಚಾಪ್ ಮನ್ 17 ಎಸೆತಗಳಲ್ಲಿ 21 ರನ್ ಗಳಿಸಿ ಬಿರುಸಿನ ಆಟ ಆರಂಭಿಸಿದರು. ಆದರೆ ಒಂಭತ್ತನೇ ಓವರ್ ನಲ್ಲಿ ಅಕ್ಷರ್ ಪಟೇಲ್ ಸ್ಪಿನ್ ಮೋಡಿಗೆ ಶರಣಾದರು. 2 ಓವರ್ ಗಳ ನಂತರ ಡೆರಿಲ್ ಮಿಚೆಲ್ ಕೂಡ ಔಟಾದರು. ಅಂತರಾಷ್ಟ್ರೀಯ ಟಿ – 20 ಕ್ರಿಕೆಟ್ ನಲ್ಲಿ ಚೊಚ್ಚಲ ವಿಕೆಟ್ ಗಳಿಸಿದ ಹರ್ಷಲ್ ಸಂಭ್ರಮಿಸಿದರು.
ಈ ಹೊತ್ತಿನಲ್ಲಿ ಗ್ಲೆನ್ ಫಿಲಿಪ್ಸ್ ತಂಡಕ್ಕೆ ಅಸರೆಯಾದರು. 21 ಎಸೆತಗಳಲ್ಲಿ 34 ರನ್ ಗಳಿಸಿದರು. 3 ಸಿಕ್ಸರ್ ಸಿಡಿಸಿದ ಅವರು ತಂಡವನ್ನು ದೊಡ್ಡ ಮೊತ್ತದತ್ತ ಮುನ್ನಡೆಸುವ ಭರವಸೆ ಮೂಡಿಸಿದರು. ಅಷ್ಟರಲ್ಲಿಯೇ ಫಿಲಿಪ್ಸ್ ವಿಕೆಟ್ ಗಳಿಸಿ ಹರ್ಷಲ್ ಪಟೇಲ್ ಮಿಂಚಿದರು. ಆರಂಭದಲ್ಲಿ ಗಪ್ಟಿಲ್ ರಿಂದ ದಂಡನೆಗೊಳಗಾಗಿದ್ದ ಭುವನೇಶ್ವರ್ ಕುಮಾರ್ 18ನೇ ಓವರ್ ನಲ್ಲಿ ಜಿಮ್ಮಿ ನಿಷಾಮ್ ವಿಕೆಟ್ ಗಳಿಸುವಲ್ಲಿ ಸಫಲರಾದರು.
ಆದರೆ ಅಶ್ವಿನ್ ಶಿಸ್ತಿನ ದಾಳಿಯ ಮುಂದೆ ರನ್ ಗಳಿಗೆ ಸುಲಭವಾಗಿರಲಿಲ್ಲ. ಟಿಮ್ ಸೀಫರ್ಟ್ 15 ಎಸೆತಗಳಲ್ಲಿ 13 ರನ್ ಗಳಿಸಿದರು. ವಿಕೆಟ್ ಗಳಿಸಿದ ಅಶ್ವಿನ್ ಹೆಚ್ಚು ರನ್ ಬಿಟ್ಟುಕೊಡದೆ ದಾಂಡಿಗರನ್ನ ಕಾಡಿದರು.
154 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಆಡಿದ ಭಾರತ ತಂಡದ ರೋಹಿತ್ ಶರ್ಮಾ ಬಳಗ 16 ಎಸೆತ ಬಾಕಿ ಉಳಿದಿರುವಾಗಲೇ ಗೆಲುವಿನ ದಡ ಸೇರಿತು.
ಆರಂಭಿಕ ಜೋಡಿ ಮೊದಲ ವಿಕೆಟ್ ಗೆ ರಾಹುಲ್ ಮತ್ತು ರೋಹಿತ್ 80 ಎಸೆತಗಳಲ್ಲಿ 117 ರನ್ ಸೇರಿಸಿ ಭದ್ರ ಬುನಾದಿ ಹಾಕಿಕೊಟ್ಟರು.ನಂತರ ಟಿಮ್ ಸೌಧಿ 3 ವಿಕೆಟ್ ಕಬಳಿಸಿದರು ರಿಷಬ್ ಪಂತ್ ಮತ್ತು ವೆಂಕಟೇಶ್ ಅಯ್ಯರ್ ಜೊತೆಗೂಡಿ ಜಯದತ್ತ ಮುನ್ನುಗ್ಗಿದರು.
ಭರವಸೆ ಇರಿಸಿದಂತೆ ರಿಷಬ್ ಪಂತ್ ಸಿಕ್ಸರ್ ಸಿಡಿಸಿ ಗೆಲುವಿನ ಕಹಳೆ ಊದಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಿ- ಸೆಲ್ವ ಕುಮಾರ್

0

ಶಿವಮೊಗ್ಗದ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು, ಹಾವು ಕಡಿತ ಹೀಗೆ ಮುಂತಾದ ಪ್ರಕರಣಗಳಲ್ಲಿ ಸಂತ್ರಸ್ಥರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು. ಇದಕ್ಕೆ ಜಿಲ್ಲಾಡಳಿತ ಅನುದಾನ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಸೂಚಿಸಿದ್ದಾರೆ.

ಸಹಾಯಧನವನ್ನು ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡುವವರೆಗೂ ಮಂದಗತಿಯಲ್ಲಿ ಕಾರ್ಯ ನಿರ್ವಹಿಸಬಾರದು. ಜಿಲ್ಲಾಡಳಿತದ ಅನುದಾನವನ್ನು ಬಳಸಿಕೊಂಡು ಶೀಘ್ರದಲ್ಲಿ ಪರಿಹಾರಧನ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಸಮಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗುತ್ತಿರುವ ಬೆಳೆ, ಜೀವ ಹಾನಿ ಮಾಹಿತಿ ಪಡೆದು ತಕ್ಷಣ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅದರ ಗಡವು ಮೀರುವ ಒಳಗೆ ಪೂರ್ಣಗೊಳಿಸಬೇಕು.

ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕೆಲವು ವರ್ಷಗಳಿಂದ ಮನೆ ಕಟ್ಟಿಕೊಂಡಿಲ್ಲ. ಕಳೆದ ಬಾರಿಯ ಮಳೆಯ ಪರಿಣಾಮವಾಗಿ ಅನೇಕ ಮನೆಗಳು ನೆಲ ಸಮಾಧಿಯಾಗಿವೆ. ನಿರಾಶ್ರಿತರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು. ಫಲಾನುಭವಿಗಳು ಈಗಾಗಲೇ ಮನೆ ನಿರ್ಮಿಸಿಕೊಂಡಿದ್ದಾರೆ. ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಅನುದಾನ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಸಭೆಯಲ್ಲಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಆಸ್ಟ್ರೇಲಿಯಾ : ಕೋವಿಡ್ ಅಲೆ !

0

ಸತತ ಒಂದೂವರೆ ವರ್ಷದಿಂದ ಇಡೀ ವಿಶ್ವಕ್ಕೆ ಕೋವಿಡ್-19 ಸಾಂಕ್ರಾಮಿಕವಾಗಿ ಪರಿಣಮಿಸಿದೆ. ಈ ಸೋಂಕಿನ ನಾಲ್ಕನೇ ಅಲೆಯ ನಿಯಂತ್ರಣ ಹಾಗೂ ಸಾವು ನೋವುಗಳಿಂದ ಪಾರಾಗಲು ಆಸ್ಟ್ರೇಲಿಯಾ ಸರ್ಕಾರ ಹತ್ತು ದಿನಗಳಲ್ಲಿ ಜಾರಿಗೆ ನಿರ್ಧರಿಸಿ ಪ್ರಧಾನಿ ಅಲೆಗ್ಸಾಂಡರ್ ಶಾಲೆನ್ ಬರ್ಗ್ ಆದೇಶ ಹೊರಡಿಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಶಾಲೆಗಳು ತೆರೆದಿದ್ದು, ಪೋಷಕರೊಂದಿಗೆ ಮಾತ್ರವೇ ಮಕ್ಕಳು ತೆರಳಲು ಅವಕಾಶ ನೀಡಲಾಗಿದೆ. ಶಿಕ್ಷಕರಿಂದ ಅಗತ್ಯ ಮಾರ್ಗದರ್ಶನಗಳನ್ನು ಪಡೆಯಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆಸ್ಟ್ರೇಲಿಯದ 10 ಸಾವಿರ ಜನರಲ್ಲಿ ಏಳು ದಿನಗಳಿಂದ ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಆಸ್ಟ್ರೇಲಿಯದಲ್ಲಿ ಇದುವರೆಗೂ ಅತ್ಯಂತ ಕಡಿಮೆ ಪ್ರಮಾಣದ ಲಸಿಕೆ ಪಶ್ಚಿಮ ಯೂರೋಪ್ ನಲ್ಲಿ ನೀಡಲಾಗಿದೆ ಎಂದು ದಾಖಲಾಗಿದೆ. ಕೇವಲ ಶೇ. 65 ರಷ್ಟು ಜನರು ಮಾತ್ರ ಕೋವಿಡ್ -19 ನಿರೋಧಕ ಲಸಿಕೆಯನ್ನು ಪಡೆದಿದ್ದಾರೆ. 89 ಲಕ್ಷ ಜನಸಂಖ್ಯೆಯುಳ್ಳ ಆಸ್ಟ್ರೇಲಿಯಾದಲ್ಲಿ ಒಟ್ಟು ಇದುವರೆಗೆ 11,525 ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬೆಳೆ ಹಾನಿ ಸಮೀಕ್ಷೆ ನಡೆಸಿ- ಕೃಷಿ ಸಚಿವ

0

ರಾಜ್ಯದಲ್ಲಿ ಎರಡು ವಾರದಿಂದೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳು ಸಂಪೂರ್ಣ ನೀರು ಪಾಲಾಗಿದ್ದು ಹೊಲಗದ್ದೆಗಳು ಜಲಾವೃತವಾಗಿದೆ.

ಹಾವೇರಿ ಜಿಲ್ಲೆಯ ಹಿರೆಕೆರೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಳ್ಳೂರ್, ಚಟ್ನಹಳ್ಳಿ ಹಾಗೂ ಪುರದ ಕೆರೆ ಗ್ರಾಮಗಳಿಗೆ ಭೇಟಿ ನೀಡಿ. ಪರಿಶೀಲನೆ ನಡೆಸಿ ರೈತರಿಗೆ ಸಾಂತ್ವನ ಹೇಳಿದರು.

ಸಚಿವರು ಮಾತನಾಡಿ ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆ ನಡೆಸಿ, ಕ್ಷಣ ವರದಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಳೆಹಾನಿ ಪ್ರದೇಶಕ್ಕೆ ಡಿಸಿ ಗಳು ಭೇಟಿ ಮಾಡಬೇಕು- ಸಿ.ಎಂ

0

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಅನೇಕ ಬೆಳೆ ಹಾನಿಯಾಗಿದೆ. ಮಳೆಯಿಂದ ಉಂಟಾದ ಹಾನಿಯ ಪರಿಹಾರ ಕಾರ್ಯಕ್ಕಾಗಿ ತಕ್ಷಣವೇ 130 ಕೋಟಿ ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಭ ತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳ ಹಾನಿಯ ಬಗ್ಗೆ ಪ್ರಾಥಮಿಕ ಮಾಹಿತಿ ಇದ್ದು, ನಿಖರವಾದ ಮಾಹಿತಿಯನ್ನು ಪ್ರತಿ ಜಿಲ್ಲೆಯಿಂದ ಪಡೆಯುತ್ತಿದ್ದೇನೆ. ಸಮೀಕ್ಷೆ ನಂತರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಕಳೆದೆರಡು ತಿಂಗಳಿನಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಹಾನಿಯ ಉಂಟಾದ ಹಾನಿಯ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಸಂವಾದ ನಡೆಸಿದರು.

ಮಳೆಯ ಪರಿಣಾಮವಾಗಿ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ 10 ಸಾವಿರ ಪರಿಹಾರ ನೀಡಬೇಕು. ಸಾಂತ್ವನ ಕೇಂದ್ರಗಳಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಬೇಕು. ಪರಿಹಾರ ಕಾರ್ಯಕ್ಕೆ ಈ ಹಿಂದಿನ ವರ್ಷಗಳಲ್ಲಿ ಹೊರತುಪಡಿಸಿ ರುವ ಮಾರ್ಗಸೂಚಿಗಳನ್ನು ಪಾಲಿಸಲು ಅವರು ಸಲಹೆ ನೀಡಿದರು ಎಂದು ಮೂಲಗಳು ತಿಳಿಸುತ್ತವೆ.

ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬೆಳೆ ಮತ್ತು ಇತರ ಹಾನಿಯ ಬಗ್ಗೆ ಮಾಡಿಟ್ಟುಕೊಳ್ಳಬೇಕು. ಕೇಂದ್ರ ತಂಡ ಬರುವುದು ಇನ್ನೂ ಒಂದು ತಿಂಗಳಾಗಬಹುದು. ಆ ಸಂದರ್ಭದಲ್ಲಿ ಬೆಳೆಯೇ ಇರುವುದಿಲ್ಲ. ಅದಕ್ಕೋಸ್ಕರ ಹಾನಿಯ ಕುರಿತ ವಿಡಿಯೋ ಮಾಡಬಹುದು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ .ಅಶೋಕ್ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತೋಟಗಾರಿಕಾ ಸಚಿವ ಮುನಿರತ್ನ, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕ: ಉದ್ಯಮ ಸ್ನೇಹಿ ರಾಜ್ಯ

0

ಬೆಂಗಳೂರಿನಲ್ಲಿ ತಂತ್ರಜ್ಞಾನ ಶೃಂಗ ಸಭೆಯ ಎರಡನೇ ದಿನ ‘ಬೆಂಗಳೂರು ನೆಕ್ಟ್ಸ್’ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ನವೋದ್ಯಮ ಹೆಚ್ಚಲು ಮತ್ತು ಇರುವ ಉದ್ಯಮಗಳು ಅಭಿವೃದ್ಧಿ ಕಾಣಲು ಇಲ್ಲಿನ ಸಂಸ್ಕೃತಿ ಕಾರಣ ಎಂದು ರಾಜ್ಯ ಸ್ಮಾರ್ಟ್ ಅಪ್ ಗ್ರೂಪ್ ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಗ ಶತಕೋಟಿ ಡಾಲರ್ ವಹಿವಾಟಿನ ಯೂನಿಕಾರ್ನ್ ಕಂಪನಿಗಳು ಸದ್ದು ಮಾಡುತ್ತಿವೆ. ಇನ್ನು ಒಂದೆರಡು ವರ್ಷಗ ಳಲ್ಲಿ 10 ಕೋಟಿ ಡಾಲರ್ ವಹಿವಾಟು ನಡೆಸುವ ಡೆಕಾಕಾರ್ನ್ ಕಂಪನಿಗಳು ರಾರಾಜಿಸಲಿವೆ ಎಂದರು. ಇದರ ಶ್ರೇಯಸ್ಸು ಶೇ. 90ರಷ್ಟು ನಮ್ಮ ರಾಜ್ಯದ ಸಂಸ್ಕೃತಿಗೆ ಸಲ್ಲಬೇಕು. ಇಲ್ಲಿ ಯಾವ ಪಕ್ಷದ ಸರ್ಕಾರ ಬಂದರು ಉದ್ಯಮ ಸ್ನೇಹಿಯಾಗಿರುತ್ತದೆ. ವಿಷನ್ ಗ್ರೂಪ್ ಗಳನ್ನು ಸ್ಥಾಪಿಸುವುದವರಲ್ಲಿ ನಮ್ಮವರೇ ಮೊದಲಿಗರು ಎಂದು ರಾಜ್ಯ ಸ್ಮಾರ್ಟ ವಿಷನ್ ಗ್ರೂಪ್ ನ ಮುಖ್ಯಸ್ಥ ತಿಳಿಸಿದರು.

‘ಇಂಥ ಸ್ಟಾರ್ಟಪ್ ಸ್ನೇಹಿ ವಾತಾವರಣ ಇರುವುದರಿಂದಲೇ ದೆಹಲಿ ಮತ್ತು ಜೈಪುರ ಗಳಿಂದ ಕಂಪನಿಗಳು ನಂತರ ಗೊಂಡವು’ ಎಂದು ಸುಜಿತ್ ಕುಮಾರ್ ಹರ್ಷಿಲ್ ಮಾಥೂರ್ ಹೇಳಿದರು.

ಕಿಂಡ್ರೆಲ್ ಕಂಪನಿಯ ಲಿಂಗರಾಜ ಸಾಹುಕಾರ್ ಅವರು ತಮ್ಮ ಸ್ಟಾರ್ಟಪ್ ನಲ್ಲಿ 19000 ಉದ್ಯೋಗಿಗಳು ಇರುವುದನ್ನು ತಿಳಿಸಿದರು.