Friday, February 20, 2026
Friday, February 20, 2026
Home Blog Page 206

ಪ್ರತಿಭೆಗಳಿಗೆ ಶ್ಲಾಘನೆ ಸೇರಿದರೆ ಮಕ್ಕಳು ಮೇಲೆ ಬರಲು ಸಾಧ್ಯ- ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್

0

Canara Bank ಪ್ರತಿಭಾ ಪುರಸ್ಕಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯಾದ ರಮೇಶ್ ಅವರು ಅಭಿಪ್ರಾಯಪಟ್ಟರು.

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ನೀಡುವ ಕೆನರಾ ಬ್ಯಾಂಕ್ ಡಾ. ಬಿಆರ್ ಅಂಬೇಡ್ಕರ್ ವಿದ್ಯಾ ಜ್ಯೋತಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು ಮಕ್ಕಳು ಬಹಳ ಸಂತೋಷ ಸಂಭ್ರಮ ಪಡೆಯುವ ವಿಚಾರವಾಗಿದ್ದು ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಪ್ರತಿಭೆಯನ್ನು ಗುರುತಿಸಿ ಬೆನ್ನು ತಟ್ಟುವುದರಿಂದ ಮಕ್ಕಳು ಮೇಲೆ ಬರಲು ಸಾಧ್ಯ ಇಚ್ಛಾ ಶಕ್ತಿ ಇರಬೇಕು ಆಗ ಮಾತ್ರ ಸಾಧನೆ ಮೆಟ್ಟಿಲು ಏರಲು ಸಾಧ್ಯವಾಗುತ್ತದೆ ಎಂದರು.

ಅಂಬೇಡ್ಕರ್ ಅವರ ಹತ್ತಿರ ಯಾವುದೇ ಆಸ್ತಿ ಹಣ ಇಲ್ಲದಿದ್ದರೂ ಅವರು ಇಡೀ ಜಗತ್ತು ಅವರನ್ನು ಗುರುತಿಸಿತು ಕಾರಣ ಅವರಲ್ಲಿ ಇರುವ ವಿದ್ಯೆ ಆ ವಿದ್ಯೆಯಿಂದಲೇ ಅವರು ನಮ್ಮ ಸಂವಿಧಾನವನ್ನು ರಚಿಸಿ ಇಡೀ ಜಗತ್ತಿಗೆ ಮಾದರಿಯಾದರೂ ಇಂತಹ ಮಹಾನ್ ವ್ಯಕ್ತಿಯ ಹೆಸರಿನಿಂದ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅದರಲ್ಲೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಾಧನೆ ಮಾಡಿರುವ ವಿದ್ಯಾರ್ಥಿನಿಯರಿಗೆ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ನಂತರ ಮಾತನಾಡಿದ ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರಾದ ದೇವರಾಜ್ಆರ್ ಅವರು ಕಳೆದ 20 ವರ್ಷಗಳಿಂದ ಕೆನರಾ ಬ್ಯಾಂಕ್ ವಿದ್ಯಾ ಜ್ಯೋತಿಯನ್ನು ನೀಡುತ್ತಿದೆ ಪ್ರತಿ ಶಾಖೆಯಿಂದ ಆರು ಮಕ್ಕಳಂತೆ 62 ಶಾಖೆಯಿಂದ 372 ಮಕ್ಕಳಿಗೆ ಒಟ್ಟು 15 ಲಕ್ಷ ರೂ ಶಿವಮೊಗ್ಗ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಿಂದ ನೀಡುತ್ತಿದೆ ಐದು ಆರು ಹಾಗೂ 7ನೇ ತರಗತಿ ಮಕ್ಕಳಿಗೆ 3000 ಹಾಗೂ 8 9 10ನೇ ತರಗತಿ ಮಕ್ಕಳಿಗೆ 5000 ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ ವಿದ್ಯಾರ್ಥಿನಿಯರು ಐದನೇ ತರಗತಿಯಲ್ಲಿ ವಿದ್ಯಾರ್ಥಿವೇತನ ತೆಗೆದುಕೊಳ್ಳಲು ಪ್ರಾರಂಭಿಸಿದರೆ ಹತ್ತನೇ ತರಗತಿಯವರೆಗೂ ಪ್ರತಿಭಾ ಪುರಸ್ಕಾರ ತೆಗೆದುಕೊಳ್ಳುವಂತಹ ಆಗಬೇಕು ಎಂದು ಹಾರೈಸಿದರು.

ನನಗೂ ಹತ್ತನೇ ತರಗತಿಯಲ್ಲಿ 25 ರೂ ಪ್ರತಿಭಾ ಪುರಸ್ಕಾರ ಪಡೆದಿದ್ದೆ ಮೊತ್ತ ಮುಖ್ಯವಲ್ಲ ಪ್ರತಿಭೆಯನ್ನು ಗುರುತಿಸುವುದು ಬಹಳ ಮುಖ್ಯ ಎಂದರು ಕೆನರಾ ಆಸ್ಪೈರ್ (aspire)ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕೆನರಾ ಬ್ಯಾಂಕಿನ ವಿವಿಧ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಕೋರಿದರು.

Canara Bank ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಜು ಅಣಜಿ ಹಿರಿಯ ವ್ಯವಸ್ಥಾಪಕರಾದ ಪ್ರಶಾಂತ್, ಗೀತಾಂಜಲಿ ಪ್ರಸನ್ನ ಕುಮಾರ್ ವಿವಿಧ ಶಾಖೆಯ ಮುಖ್ಯಸ್ಥರು ಹಾಗೂ ಪೋಷಕರು ಉಪಸ್ಥಿತರಿದ್ದರು.

Independence Day ದೇಶಪ್ರೇಮದಿಂದ ದೇಶದ ಉನ್ನತಗಾಗಿ ದುಡಿಯಬೇಕು- ಎಸ್.ಚಿನ್ನಪ್ಪ

0

Independence Day 79ನೇ ಸ್ವಾತಂತ್ರೋತ್ಸವವನ್ನು ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಎಸ್ ಚಿನ್ನಪ್ಪ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. ಸ್ವಾತಂತ್ರಕ್ಕಾಗಿ ದುಡಿದ, ಮಡಿದ ಎಲ್ಲರಿಗೂ ನೆನಪಿಸಿಕೊಂಡು ಅವರಂತೆಯೇ ನಮಗೂ ದೇಶಪ್ರೇಮ, ದೇಶಭಕ್ತಿ, ದೇಶದ ಉನ್ನತಿಗಾಗಿ ದುಡಿಯಬೇಕೆಂದು ಮಾತನಾಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ಮಾಲತೇಶ್, ರಂಗನಾಥ್, ಅಂತೋಣಿರಾಜ್, ಜುನೇದ್, ಇದಾಯತ್ ಇನ್ನಿತರರಿದ್ದರು

MESCOM ಆಗಸ್ಟ್ 18, ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಶಿವಮೊಗ್ಗ ನಗರ ಉಪವಿಭಾಗ-2 ರಲ್ಲಿ ಆ.18 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ನೇತೃತ್ವದಲ್ಲಿ ನಗರದ ಎನ್.ಟಿ ರಸ್ತೆಯಲ್ಲಿರುವ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

KVTSDC – ORA ಆಗಸ್ಟ್ 18. ವಿದೇಶಗಳಲ್ಲಿನ ಉನ್ನತ ಆಧ್ಯಯನ ಅವಕಾಶಗಳ ಬಗ್ಗೆ ರಾಜ್ಯದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

0

KVTSDC – ORA ಕೆವಿಟಿಎಸ್‌ಡಿಸಿ ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಆ.17 ರ ಭಾನವಾರದಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮವನ್ನು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮದಲ್ಲಿ 10 ಕ್ಕೂ ಹೆಚ್ಚು ವಿದೇಶಗಳ 60 ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿರ್ದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶ ಕಲ್ಪಿಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://studyroad.ksdckarnataka.com ಮೂಲಕ ನೋಂದಾಯಿಸಿಕೊಂಡು ಮಾಹಿತಿ ಶಿಬಿರದಲ್ಲಿ ಭಾಗವಹಿಸಬಹುದು.

KVTSDC – ORA ಹೆಚ್ಚಿನ ಮಾಹಿತಿಗೆ ದೂ.ಸಂ: 7338674791, 7338674794, 7338674798, 7338674792 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್ ಎಂ ಸುರೇಶ್ ತಿಳಿಸಿದ್ದಾರೆ.

Shivamogga Police ತುಂಗಾ ಚಾನಲ್ ಸೇತುವೆ ಕೆಳಗೆ ಅನಾಮಧೇಯ ಪುರುಷನ ಮೃತ ದೇಹ ಪತ್ತೆ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಪ್ರಕಟಣೆ

0

Shivamogga Police ಕ್ಯಾತನಕೊಪ್ಪದಿಂದ ಸೂಗೂರಿಗೆ ಹೋಗುವ ಅಪ್ಪರ್ ತುಂಗಾ ಚಾನಲ್ ನೀರಿನಲ್ಲಿ ಯಾವುದೋ ಅನಾಮಧೇಯ ಗಂಡಸಿನ ಶವವು ತೇಲಿಕೋಂಡು ಬಂದು ಮಾಡಿ ಕ್ಯಾತನಕೊಪ್ಪದಿಂದ ಸೂಗೂರಿನ ಮದ್ಯದಲ್ಲಿ ಗುರಕಳ್ಳೇರ ಶಿವಣ್ಣನವರ ಅಡಿಕೆ ತೋಟದ ಹತ್ತಿರ ಇರುವ ತುಂಗಾ ಚಾನಲ್ ಸೇತುವೆಯ ಮದ್ಯದ ಪಿಲ್ಲರ್ ಕಂಬಕ್ಕೆ ಸುಮಾರು 30 ರಿಂದ 40 ವರ್ಷದ ಅನಾಮಧೇಯ ಗಂಡಸಿನ ಮೃತ ದೇಹವು ಪತ್ತೆಯಾಗಿದೆ.

ಈತನ ಚಹರೆ: ಸುಮಾರು 5.6 ಅಡಿ ಎತ್ತರ ಇದ್ದು ದುಂಡು ಮುಖ ಕಂದು ಬಣ್ಣ ಹೊಂದಿದ್ದು ದಪ್ಪನೆಯ ಮೈಕಟ್ಟು ಹೊಂದಿರುತ್ತಾನೆ. ಮೃತನ ದೇಹವು ಕೊಳೆತು ಮೇಲ್ಬಾಗದ ಚರ್ಮ ಕೊಳೆತು ಒಳಬಾಗ ಬಿಳಿ ಮತ್ತು ಕೆಂಪು ಬಣ್ಣದ ಚರ್ಮ ಕಾಣುತ್ತಿರುತ್ತದೆ.

ತಲೆಯ ಕೂದಲು ಉದುರಿಹೋದಂv ಕಂಡು ಬಂದಿರುತ್ತದೆ. ಮೃತನ ಬಲಮುಂಗೈಯಲ್ಲಿ ‘♡’ ಸಿಂಬಲ್ ಇದ್ದು ಅದರೊಳಗೆ ಐ ಮತ್ತು s ಹಚ್ಚೆ ಗುರುತು ಇರುತ್ತದೆ.

Shivamogga Police ಧರಿಸಿದ್ದ ಉಡುಪು; ಕೆಂಪು ಬಣ್ಣದ ಸ್ಯಾಂಡೋ ಬನಿಯನ್ ಹಾಗೂ ಕಡು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಬಲ ಮುಂಗೈಯಲ್ಲಿ ಕಬ್ಬಿಣದ ಕಡಗ ಇರುತ್ತದೆ.
ಈ ಮೃತ ವ್ಯಕ್ತಿಯ ಸಂಬಂಧಿಕರು ವಾರಸುದಾರರು ಪತ್ತೆಯಾದಲ್ಲಿ ಸಿಪಿಐ ಗ್ರಾಮಾಂತರ ವೃತ್ತ ಶಿವಮೊಗ್ಗ ಅಥವಾ ಪಿ.ಎಸ್.ಐ. ಗ್ರಾಮಾಂತರ ಪೊಲೀಸ್ ಠಾಣೆ ಶಿವಮೊಗ್ಗ ಅಥವಾ ಪೊಲೀಸ್ ಕಂಟ್ರೋಲ್ ರೂಮ್ ಶಿವಮೊಗ್ಗ ಪೋನ್ ನಂ 100 ಗೆ ಮಾಹಿತಿ ನೀಡಲು ಸೂಚಿಸಿದೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 08182-261418, 261410, 261422, 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ನೀಡಿದೆ.

Rotary Shivamogga ಸಹೋದರರ ಭ್ರಾತೃತ್ವ.ಪರಸ್ಪರ ರಕ್ಷಣಾ ಭಾವ ,ರಕ್ಷಾ ಬಂಧನ ಆಚರಣೆ ಸಂಕೇತ- ಕೆ.ವಿ.ರವಿಶಂಕರ್

0

Rotary Shivamogga ಭಾರತೀಯ ಸಂಸ್ಕೃತಿಯಲ್ಲಿ ಸಹೋದರ ಸಹೋದರಿಯರ ಸಂಬಂಧ ಅತ್ಯಂತ ವಿಶೇಷವಾದದ್ದು ಎಂದು ರೋಟರಿ ಶಿವಮೊಗ್ಗ ಪೂರ್ವಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ವಿ.ರವಿಶಂಕರ್ ಅಭಿಮತ ವ್ಯಕ್ತಪಡಿಸಿದರು.

ಅವರು ರೋಟರಿ ಶಾಲೆಯಲ್ಲಿ ರಕ್ಷಾ ಬಂಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ಷಾಬಂಧನದಂದು ಪ್ರತಿ ವರ್ಷ ರಕ್ಷಾ ಬಂಧನ ನೂಲೂ ಹುಣ್ಣಿಮೆ ಎಂದು ಸಹೋದರಿಯರು ರಕ್ಷಾ ಬಂಧನ ಸಹೋದರರಿಗೆ ರಕ್ಷಾ ಬಂಧನವನ್ನು ಕಟ್ಟುವುದರ ಮುಖಾಂತರ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ ಸಹೋದರರ ಬ್ರಾತೃತ್ವ ಹಾಗೂ ಪರಸ್ಪರರಲ್ಲಿ ರಕ್ಷಣಾ ಭಾವದಿಂದ ಈ ಹಬ್ಬ ಎಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.

ರೋಟರಿ ಮಾಜಿ ಸಾಯಕ ಗವರ್ನರ್ಜಿ ವಿಜಯ್ ಕುಮಾರ್ ಮಾತನಾಡಿ, ಸಹೋದರಿಯರು ರಕ್ಷಾ ಬಂಧನ ಸಹೋದರರಿಗೆ ರಕ್ಷಾ ಬಂಧನವನ್ನು ಕಟ್ಟುವುದರ ಮುಖಾಂತರ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ರಕ್ಷಾ ಬಂಧನವೂ ಸಹೋದರ ಸಹೋದರಿಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚುಗೊಳಿಸುತ್ತದೆ ಎಂದು ರಕ್ಷಾ ಬಂಧನ್ ಮಹತ್ವವನ್ನು ತಿಳಿಸಿದರು.

Rotary Shivamogga ಇದೇ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳ ಕೈಗೆ ರಕ್ಷಾ ಬಂಧನ್ ಕಟ್ಟಿ ಶ್ರೀ ಹಂಚಿ ಸಂಭ್ರಮಿಸಿದರು ಕಾರ್ಯಕ್ರಮದಲ್ಲಿ ಮಾಜಿ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ, ಉಪಾಧ್ಯಕ್ಷರಾದ ನಾಗವೇಣಿ ಎಸ್.ಆರ್, ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ನೆಪ್ಟ್ಯೂನ್ ಕಿಶೋರ್ ಡಾಕ್ಟರ್ ಧನಂಜಯ, ಇನ್ನರ್ ವೀಲ್ ಮಾಜಿ ಅಧ್ಯಕ್ಷರುಗಳಾದ ಬಿಂದು ವಿಜಯ ಕುಮಾರ್, ರೂಪ ಹಾಗೂ ಮುಖ್ಯೋಪಾಧ್ಯಾಯರುಗಳು ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

Nalanda Chess Academy ನಳಂದ ಚೆಸ್ ಅಕಾಡೆಮಿ ಬೆಳ್ಳಿಹಬ್ಬದ ವಿಶೇಷ. ಯಶಸ್ವಿಯಾಗಿ ನಡೆದ ಚೆಸ್ ಪಂದ್ಯಾವಳಿ

0

Nalanda Chess Academy ನಳಂದ ಚೆಸ್ ಅಕಾಡೆಮಿಯ ಬೆಳ್ಳಿ ಮಹೋತ್ಸವ ಆಚರಣೆ ಅಕಾಡೆಮಿಯ ಆವರಣದಲ್ಲಿ ಭವ್ಯವಾದ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ತೀರ್ಪುಗಾರರಾಗಿ ಗೌರವಾನ್ವಿತ ಅಂತರರಾಷ್ಟ್ರೀಯ ಮಧ್ಯಸ್ಥಗಾರ ಮಂಜುನಾಥ್ ಎಂ., ಆಜಾದ್ ಆಚಾರ್ಯ ಮತ್ತು ರಮೇಶ್ ಎ.ಆರ್ ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ಎರಡು ಪ್ರಮುಖ ವಿಭಾಗಗಳಿದ್ದು ಮುಕ್ತ ವಿಭಾಗ ಮತ್ತು 15 ವರ್ಷದೊಳಗಿನವರ ವಿಭಾಗ ಸ್ಪರ್ಧೆ ನಡೆಸಿ ಆಕರ್ಷಕ ಟ್ರೋಫಿಗಳು ಮತ್ತು ನಗದು ಬಹುಮಾನಗಳನ್ನು ವಿವಿಧ ವಿಭಾಗಗಳಲ್ಲಿ ವಿಜೇತರಿಗೆ ನೀಡಲಾಯಿತು.
ಇದರಲ್ಲಿ ಅನುಭವಿಗಳು, 15 ವರ್ಷಕ್ಕಿಂತ ಮೇಲ್ಪಟ್ಟ ಬಾಲಕರು ಮತ್ತು ಹುಡುಗಿಯರು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕರು ಮತ್ತು ಹುಡುಗಿಯರು, ಹಾಗೆಯೇ 13 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 11 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮತ್ತು 9 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಭಾಗವಹಿಸಿದ್ದರು.
Nalanda Chess Academy ಈ ಪಂದ್ಯಾವಳಿಯಲ್ಲಿ ಹಳೆಯ ವಿದ್ಯಾರ್ಥಿಗಳು, ಪ್ರಸ್ತುತ ಬ್ಯಾಚ್‌ನ ವಿದ್ಯಾರ್ಥಿಗಳು, ಪೋಷಕರು ಮತ್ತು ನಳಂದ ಸಂಸ್ಥೆಯ ತರಬೇತುದಾರ ಶ್ರೀಕೃಷ್ಣ ಉಡುಪ ಹಾಗೂ ಅವರ ಸ್ನೇಹಿತರು ಭಾಗವಹಿಸಿದ್ದರು.
ಕರ್ನಾಟಕದ ಅಸಾಧಾರಣ ಚೆಸ್ ಪ್ರತಿಭೆ ಮತ್ತು ಅಕಾಡೆಮಿಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಚಿರಂತನ್ ಎಂ.ಡಿ. ಅವರ ಮುಕ್ತ ವಿಭಾಗದಲ್ಲಿ ಗೆಲುವು ದಿನದ ಪ್ರಮುಖ ಅಂಶವಾಗಿತ್ತು.

University of Agriculture ಆಗಸ್ಟ್ 18 ರಿಂದ ಶಿವಮೊಗ್ಗ ಕೃಷಿ ಕಾಲೇಜಿನಲ್ಲಿ ” ಅನ್ವೇಷಣೋತ್ಸವ-ವಿಜ್ಞಾನ ಪ್ರದರ್ಶನ”

0

University of Agriculture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ವತಿಯಿಂದ ದಿ : 18-08-2025 ರಿಂದ 22-08-2025 ರವರೆಗೆ “ಅನ್ವೇಷಣೋತ್ಸವ” ಎಂಬ ವಿಜ್ಞಾನ ಪ್ರದರ್ಶನವನ್ನು ನವುಲೆ ಆವರಣದ ಕೃಷಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಮತ್ತು ಸೊಸೈಟಿ ಫಾರ್ ಅಡ್ವಾನ್ಸ್ಮೆಂಟ್ ಇನ್ ಸೈನ್ಸ್, ಟೆಕ್ನಾಲಜಿ, ರಿಸರ್ಚ್ ಅಂಡ್ ಆರ್ಟ್ಸ್ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಯುವ ವಿಜ್ಞಾನಿಗಳನ್ನು ಪೋಷಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮವು ಮಹತ್ವದ ಪಾತ್ರ ವಹಿಸುತ್ತದೆ.
ದಿನಾಂಕ 18-08-2025 ರಂದು ಬೆಳಿಗ್ಗೆ 10.30 ಕ್ಕೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರÀಪ್ಪನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳು ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಈ ಮೇಳವನ್ನು ಜಿಲ್ಲಾ ಮಟ್ಟದ ವಿಜ್ಞಾನ ಕಾರ್ಯಕ್ರಮವನ್ನಾಗಿ ಮಾಡುವ ಉದ್ದೇಶ ಹೊಂದಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಂದ ಸುಮಾರು 25,000 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.
ಈ ವಿಜ್ಞಾನ ಪ್ರದರ್ಶನದಲ್ಲಿ ಪ್ಲಾಸ್ಮಾ ರಿಸರ್ಚ್ ಸಂಸ್ಥೆಯಿಂದ ವಿವಿಧ ವಿಜ್ಞಾನಗಳ ವಿಷಯಗಳಲ್ಲಿ ನೇರ ಪ್ರದರ್ಶನ, ತರಬೇತಿ ಕಾರ್ಯಕ್ರಮಗಳು, ಪ್ರತಿಷ್ಠಿತ ಸಂಸ್ಥೆಯ ವಿಜ್ಞಾನಿಗಳಿಂದ ಮಾಹಿತಿ ಹಂಚಿಕೊಳ್ಳುವುದು ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳು ಇರುತ್ತವೆ.
ಈ ಪ್ರದರ್ಶನದಲ್ಲಿ ಇಸ್ರೋ ಮತ್ತು ಡಿ ಆರ್ ಡಿ ಓ ಸಂಸ್ಥೆಗಳಿಂದ ವಿಜ್ಞಾನಿಗಳು ಆಗಮಿಸಲಿದ್ದು ತಮ್ಮ ಕ್ಷೇತ್ರದಲ್ಲಿ ಪ್ರದರ್ಶನ ಪ್ರದರ್ಶನವನ್ನು ಮಾಡಿ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ
ವಿಶ್ವೇಶ್ವರಯ್ಯ ತಾಂತ್ರಿಕ ಮ್ಯೂಸಿಯಂ ಮತ್ತು ಆಟೋಮಿಕ್ ಎನರ್ಜಿ ಸಂಸ್ಥೆಯಿಂದ ಉತ್ತಮವಾದ ವೈಜ್ಞಾನಿಕ ತಾಂತ್ರಿಕ ಮಾಹಿತಿ ಜೊತೆಗೆ ನೇರ ಪ್ರದರ್ಶನದ ವ್ಯವಸ್ಥೆ ಮಾಡುವುದರ ಜೊತೆಗೆ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆರ್ಯಭಟ ಪ್ಲಾನೆಟೋರಿಯಂ ಮತ್ತು ಟೆಲಿಸ್ಕೋಪ್ ಸಂಸ್ಥೆಯಿಂದ ಬಾಹ್ಯಾಕಾಶ ವಿಜ್ಞಾನದ ನೇರ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು ಇದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ವಿಜ್ಞಾನಿಗಳೊಂದಿಗೆ ಮುಕ್ತವಾಗಿ ಚರ್ಚೆ ಮಾಡಲು ಅವಕಾಶವಿರುತ್ತದೆ.
University of Agriculture ವಿಜ್ಞಾನ ಪ್ರದರ್ಶನ ಮೇಳದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಕೌನ್ಸಿಲ್‌ನ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರು ಭಾಗವಹಿಸಲಿದ್ದಾರೆ, ಇಸ್ರೋದ ಮಾಜಿ ಅಧ್ಯಕ್ಷರು ಮತ್ತು ವಿಜ್ಞಾನಿಗಳಾದ ಡಾ. ಎಸ್ ಕಿರಣ್ ಕುಮಾರ್ ಅವರು ಭಾಗವಹಿಸಿ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ.
ಅದೇ ರೀತಿ ಆಟೋಮಿಕ್ ಎನರ್ಜಿ ಸಂಸ್ಥೆಯ ವಿಜ್ಞಾನಿಗಳು, ವಿಜ್ಞಾನ ಪ್ರದರ್ಶನ ಸಮಿತಿಯ ಅಧ್ಯಕ್ಷರು, ಸೆಕ್ರೆಟರಿರವರು ಮತ್ತು ಇತರೆ ವಿಜ್ಞಾನ ಸಂಸ್ಥೆಗಳ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳು ಡಾಕ್ಟರ್ ಆರ್ ಸಿ ಜಗದೀಶ್ ಮತ್ತು ಎಲ್ಲಾ ವಿಶ್ವವಿದ್ಯಾಲಯದ ಅಧಿಕಾರಿ ವೃಂದದವರು, ಪ್ರಾಧ್ಯಾಪಕರು, ವಿಜ್ಞಾನಿಗಳು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ತಿಪ್ಪೇಶ ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Chamber Of commerce Shivamogga ನಾವೆಲ್ಲಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನ ಗೌರವಿಸಬೇಕು- ಬಿ.ಗೋಪಿನಾಥ್

0

Chamber Of commerce Shivamogga ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ತಲುಪುವ ಗುರಿಯತ್ತ ಭಾರತ ಸಾಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನೇತಾಜಿ ಸುಭಾಷ್‌ಚಂದ್ರ ಬೋಸ್, ಭಗತ್ ಸಿಂಗ್, ಮಹಾತ್ಮ ಗಾಂಧಿ ಸೇರಿದಂತೆ ಲಕ್ಷಾಂತರ ಹೋರಾಟಗಾರರು ಸ್ವಾತಂತ್ರ್ಯ ಗಳಿಸಲು ಬ್ರಿಟಿಷ್ ಆಡಳಿತಗಾರರ ವಿರುದ್ಧ ನಿರಂತರವಾಗಿ ಹೋರಾಡಿದರು. ನಾವೆಲ್ಲರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಗೌರವಿಸಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ನಂತರ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಿಂದ ಭಾರತದಲ್ಲಿ ಅನೇಕ ದೊಡ್ಡ ಮತ್ತು ಸಣ್ಣ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಉತ್ಪಾದನೆ ಮತ್ತು ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಹಸಿರು ಕ್ರಾಂತಿ ಮತ್ತು ಇತರ ಕೃಷಿ ತಂತ್ರಜ್ಞಾನಗಳ ಅಳವಡಿಕೆಯಿಂದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದರು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ತ್ವರಿತ ಬೆಳವಣಿಗೆಯು ಭಾರತವನ್ನು ಜಾಗತಿಕ ವೇದಿಕೆಗೆ ಏರಿಸಿದೆ. ಸರಕು ಮತ್ತು ಸೇವಾ ತೆರಿಗೆ, ಆದಾಯ ತೆರಿಗೆ ಕಾಯ್ದೆ, ಡಿಜಿಟಲ್ ಕ್ರಾಂತಿ, ಏಕೀಕೃತ ಪಾವತಿ ಇಂಟರ್‌ಫೇಸ್, ಮೂಲಸೌಕರ್ಯ ಅಭಿವೃದ್ಧಿ, ಪರಮಾಣು ಶಕ್ತಿ, ಬಾಹ್ಯಾಕಾಶ ಪರಿಶೋಧನೆ, ಜೈವಿಕ ತಂತ್ರಜ್ಞಾನ, ರಕ್ಷಣಾ ಮೂಲಸೌಕರ್ಯ, ಸಾಮಾಜಿಕ, ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಹೇಳಿದರು.
Chamber Of commerce Shivamogga ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಆರ್ಥಿಕ ಸುಧಾರಣೆಗಳ ನೀತಿಯಿಂದ ಭಾರತದ ಆರ್ಥಿಕತೆಯು ಜಾಗತಿಕ ಮಾರುಕಟ್ಟೆಗೆ ತೆರೆದುಕೊಂಡಿದೆ. ಪ್ರಸಕ್ತ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯಿಂದ 2027ಕ್ಕೆ 5 ಟ್ರಿಲಿಯನ್ ಆರ್ಥಿಕತೆ ತಲುಪುವ ಗುರಿ ಇಟ್ಟುಕೊಳ್ಳುವುದರ ಮೂಲಕ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಪ್ರದೀಪ್ ವಿ ಎಲಿ, ವಿ.ಕೆ.ಜೈನ್, ಎಸ್.ಎಸ್.ಉದಯ್‌ಕುಮಾರ್, ಎಸ್.ಪಿ.ಶಂಕರ್, ಬಿ.ವಿ.ಲಕ್ಷ್ಮೀ ಗೋಪಿನಾಥ್, ಸಹನಾ ಸುಭಾಷ್, ಕೆ.ಬಿ.ಶಿವಕುಮಾರ್, ಬಿ.ಮಂಜೇಗೌಡ, ರವಿಪ್ರಕಾಶ್ ಜನ್ನಿ, ಮಾಜಿ ಅಧ್ಯಕ್ಷರಾದ ಡಿ.ಎಸ್.ಅರುಣ್, ಕೆ.ವಿ.ವಸಂತ್ ಕುಮಾರ್, ಡಿ.ಎಂ.ಶಂಕ್ರಪ್ಪ, ಜೆ.ಆರ್.ವಾಸುದೇವ್, ಜಿ.ಎನ್.ಪ್ರಕಾಶ್, ಡಿ.ಎಸ್.ನಟರಾಜ್, ದೇವರಾಜ್, ಪ್ರಶಾಂತ್ ಶಾಸ್ತ್ರಿ, ಕಾರ್ಯನಿರ್ವಾಹಕ ಕಾರ್ಯದರ್ಶಿ ಕಮಲಾಕ್ಷರಪ್ಪ, ಸಿಬ್ಬಂದಿ ಚೆನ್ನವೀರಪ್ಪ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳು ಭಾಗವಹಿಸಿದ್ದರು.

Girish Kaleidoscope ಆಗಸ್ಟ್ 16. ಮುರಳಿಧರ ಖಜಾನೆ ಅವರ”ಗಿರೀಶ್ ಕೆಲೈಡೋಸ್ಕೋಪ್ ” ಕೃತಿ ವಿಶ್ಲೇಷಣೆ

0

Girish Kaleidoscope ನಗರದ ಬಹುಮುಖಿ ಆಯೋಜನೆಯ 57 ಕಾರ್ಯಕ್ರಮವಾಗಿ, ಆ.16 ರ ಶನಿವಾರ ಸಂಜೆ 5.30 ಕ್ಕೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ -ೆ್ರಂಡ್ಸ್ ಸೆಂಟರ್ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಮುರಳೀಧರ ಖಜಾನೆಯವರ ಗಿರೀಶ್ ಕಾರ್ನಾಡ್ ಕೆಲೈಡೋಸ್ಕೋಪ್ ಕೃತಿ ಕುರಿತು ಸಂವಾದ ನಡೆಯಲಿದೆ.
ಈ ಕೃತಿಯನ್ನು ಕುರಿತು ಖ್ಯಾತ ವಿಮರ್ಶಕ ಟಿ. ಪಿ. ಅಶೋಕರವರು ಮಾತನಾಡಲಿದ್ದು, ಕೃತಿಕಾರ ಮುರಳೀಧರ ಖಜಾನೆ, ಪುಸ್ತಕದ ಸಂಪಾದಕರಾದ ಹಿರಿಯ ಸಂಗೀತ ಶಾಸöಜ್ಞ ಎಂ. ಕೆ. ಶಂಕರ್ ಸಂವಾದ ನಡೆಸಿಕೊಡಲಿದ್ದಾರೆ.
ಶಿವಮೊಗ್ಗ ಮೂಲದ ಮುರಳೀಧರ ಖಜಾನೆಯವರು ಸುಮಾರು ನಾಲ್ಕು ದಶಕಗಳ ಕಾಲ ಪತ್ರಕರ್ತರಾಗಿ ಪ್ರಜಾವಾಣಿ, ಉದಯವಾಣಿ ಹಾಗೂ ದಿ ಹಿಂದೂ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿರುವ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಒಡನಾಡುತ್ತಿರುವ ಅಪರೂಪದ ಪತ್ರಕರ್ತರು ಹಾಗೂ ಬರಹಗಾರರು. ಅವರು ಶಿವಮೊಗ್ಗೆಯಲ್ಲಿ ಇದ್ದ ಸಂದರ್ಭದಲ್ಲಿ ರಂಗಭೂಮಿಯಲ್ಲಿಯೂ ಗುರುತಿಸಿಕೊಂಡಿದ್ದು, ಅಭಿನಯ ತಂಡದ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಿನ್ನೆಲೆಯಲ್ಲಿಯೂ ಕೆಲಸ ಮಾಡಿದ್ದಾರೆ. ಜೊತೆಗೆ ಅನೇಕ ಜನಪರ ಹೋರಾಟಗಳಲ್ಲಿಯೂ ಕೂಡಾ ಭಾಗಿಯಾಗಿದ್ದಾರೆ. ಮುರಳಿರವರು, ರುಸ್ತುಂ ಬರುಚ ಇವರ ಕೊಶ್ವನ್ ಆ-ï -ÉÊಥ್ ( ನಂಬಿಕೆಯ ಪ್ರಶ್ನೆ) ಹಾಗೂ ಡಿ. ಮಂಡಲ್ ರವರ ಅಯೋಧ್ಯ ಆರ್ಕಾ್ಯಲಜಿ ಎ.ಆರ್.ಕೃಷ್ಣಮೂರ್ತಿ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ . ಅಲ್ಲದೆ ರ‍್ಯಾಂಡಮ್ ರಿ-É್ಲಕ್ಷನ್ಸ್ – ಎ ಕೆಲೈಡೋಸ್ಕೋಪಿಕ್ ಮ್ಯೂಸಿಂಗ್ಸ್ ಆನ್ ಕನ್ನಡ ಸಿನೆಮಾ ಹೆಸರಿನ ಇಂಗ್ಲಿಷ್ ಪುಸ್ತಕದ ನಂತರ ಈಗ ಕಾರ್ನಾಡ್ ಕೆಲೈಡೋಸ್ಕೊಪ್ ಇಂಗ್ಲೀಷ್ ಕೃತಿ ಪ್ರಕಟಿಸಿದ್ದಾರೆ. ಭಾರತೀಯ ಚಲನಚಿತ್ರದ ಬಗ್ಗೆ ಅಽಕೃತವಾಗಿ ಮಾತನಾಡಬಲ್ಲ ಇವರು, ಜಿ. ವಿ. ಅಯ್ಯರ್, ಗರುದತ್, ಪ್ರಸಿದ್ಧ ಛಾಯಾಗ್ರಾಹಕ ವಿ. ಕೆ. ಮೂರ್ತಿ ಕುರಿತಾಗಿ ಕೃತಿಗಳನ್ನು ಸಧ್ಯದಲ್ಲಿಯೇ ಹೊರತರಲಿದ್ದಾರೆ. ಹಾಗೆಯೇ ಕನ್ನಡ ರಂಗಭೂಮಿಗೆ ಮಹತ್ವದ ನಾಟಕವೊಂದರ ರಚನೆಯಲ್ಲಿಯೂ ತೊಡಗಿದ್ದಾರೆ.
Girish Kaleidoscope ಇವರ ಮಹತ್ವದ ಪುಸ್ತಕ ಕುರಿತ ಚರ್ಚೆ ಹಾಗೂ ಸಂವಾದದಲ್ಲಿ ಸಾಹಿತ್ಯಾಸಕ್ತರು, ಸಿನಿಮಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9449284495, 9845014229, 95380 20367 ರಲ್ಲಿ ಸಂಪರ್ಕಿಸಬಹುದು.