Monday, August 3, 2026
Monday, August 3, 2026
Home Blog Page 2060

ವಾಹನಗಳ ಖರೀದಿ : ಇಳಿಕೆ

0

ಭಾರತದಲ್ಲಿ ಹಬ್ಬಗಳು ತನ್ನದೇ ಆದಂತಹ ವಿಶೇಷತೆಯನ್ನು ಹೊಂದಿದೆ ಆ ಸಮಯದಲ್ಲಿ ಜನರು ವಾಹನಗಳನ್ನು ಹೆಚ್ಚಾಗಿ ಕೊಳ್ಳುತ್ತಾರೆ. ಹೀಗಾಗಿ ಹಬ್ಬಗಳ ಸಮಯದಲ್ಲಿ ವಾಹನಗಳ ರಿಟೈಲ್ ಮಾರಾಟವು ಹೆಚ್ಚಾಗಿ ನಡೆಯುತ್ತದೆ ಆದರೆ ಪ್ರಸ್ತುತ ವರ್ಷದ ಹಬ್ಬದ ಸಮಯದಲ್ಲಿ ವಾಹನಗಳ ರಿಟೈಲ್ ಮಾರಾಟವು ಶೇ. 8ರಷ್ಟು ಇಳಿಕೆ ಕಂಡಿದೆ ಎಂದು ಭಾರತೀಯ ವಾಹನ ವಿತರಕರ ಸಂಘಟನೆಗಳ ಒಕ್ಕೂಟವು ತಿಳಿಸಿದೆ.

ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಾಹನಗಳ ಮಾರಾಟ ಕಳೆದ ವರ್ಷಕ್ಕಿಂತ ಇಳಿಕೆ ಕಂಡಿದೆ ಪ್ರಯಾಣಿಕ ವಾಹನಗಳ ಮಾರಾಟ ಶೇ. 26 ರಷ್ಟು ಇಳಿಕೆ ಆದರೆ. ದ್ವಿಚಕ್ರ ವಾಹನ ಮಾರಾಟ ಶೇ. 18 ರಷ್ಟು ಇಳಿಕೆಯಾಗಿದೆ.

ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಬ್ಬದ ಸಮಯದಲ್ಲಿ ವಾಹನಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಭಾರತದ ಮೇಲೆ ಸೆಮಿಕಂಡಕ್ಟರ್ ಕೊರತೆಯು ಪರಿಣಾಮ ಬೀರಿದೆ. ಐಷಾರಾಮಿ ವಾಹನಗಳಾದ ಎಕ್ಸ್ ಯು ವಿ, ಕಾಂಪ್ಯಾಕ್ಟ್ ವಾಹನಗಳನ್ನು ಗ್ರಾಹಕರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ವಿಂಕೇಶ್ ಗುಲಾಟಿ ತಿಳಿಸಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ- ಸಿಎಂ

0

ಅಂತರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ’ ಅಂಗವಾಗಿ ಗ್ರಾಮಗಳ ಸ್ತ್ರೀಶಕ್ತಿ ಸಂಘ ಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಮಹಿಳೆಯರಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಂತಹ ‘ಒಗ್ಗಟ್ಟಾಗಿ ಬೆಳೆಯೋಣ’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಧ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮವನ್ನು ಒಂದುವಾರದೊಳಗೆ ರೂಪಿಸಿ ಮಹಿಳೆಯರು ಉದ್ಯೋಗ ಹೊಂದುವಂತೆ ವಿಶೇಷ ಯೋಜನೆ ಜಾರಿ ಮಾಡಲಾಗುವುದು’ ಎಂದು ಸಿಎಂ ತಿಳಿಸಿದರು.

2019ರ ಕೈಗಾರಿಕಾ ನೀತಿ ಒಳಗೊಂಡಿದ್ದ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಕಗಳ ಅಧ್ಯಾಯನವನ್ನು 2020-25ರ ನೀತಿಯಲ್ಲಿ ಸೇರಿಸಲಾಗುವುದು. ಈಗಾಗಲೇ ಮಹಿಳಾ ಉದ್ಯಮಿಗಳಿಗೆ ನೀಡುವ ನೀಡುವ ಅನುದಾನದಲ್ಲಿ ರಿಯಾಯಿತಿ ನೀಡಲಾಗಿದೆ. ಜಮೀನು ಖರೀದಿಗೆ ರಿಯಾಯಿತಿ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಕೆ ಆರ್ ಎಸ್ ಜಲಾಶಯ ತುಂಬುತ್ತಿದೆ

0

ರಾಜ್ಯದಲ್ಲಿ ಎರಡು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆ 18 ಸಾವಿರ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಶ್ರೀರಂಗಪಟ್ಟಣ, ನಿಮಿಷಾಂಬ ದೇವಾಲಯದ ಬಳಿ ನದಿಗೆ ಯಾರು ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ ಹಾಗೂ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕೆ ಆರ್ ಎಸ್ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದ್ದು ಜಲಾಶಯದ ನೀರಿನ ಗರಿಷ್ಠ ನೀರಿನ ಮಟ್ಟ 124.80 ಅಡಿ ಹೆಚ್ಚಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ದಿನದ ಅವಧಿಯಲ್ಲಿ 47.16 ಟಿಎಂಸಿ ಅಡಿಗಳಷ್ಟು ನೀರಿತ್ತು. ಈ ಬಾರಿ ಜಲಾಶಯದಲ್ಲಿ ಸದ್ಯ 49.45 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ ತಿಳಿಸಿದರು.

ಗಗನಕ್ಕೇರಿದ ತರಕಾರಿ ಬೆಲೆ

0

ಅಕಾಲಿಕ ಮಳೆಯಿಂದಾಗಿ ರಾಜ್ಯಾದ್ಯಂತ ಅಪಾರ ಬೆಳೆ ನಷ್ಟ ಉಂಟಾದ ಪರಿಣಾಮ ಈಗ ತರಕಾರಿ ಬೆಲೆ ಗ್ರಾಹಕರ ಕೈಗೆ ನಿಟುಕಲಾಗದಷ್ಟು ದುಬಾರಿಯಾಗಿದೆ.

 ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ಮಳೆಯಿಂದಾಗಿ ನೀರುಪಾಲಾಗಿದೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣದಿಂದ ತರಕಾರಿ ಬೆಲೆಗಳು ದುಬಾರಿಯಾಗಿದ್ದು ಬಡ ಹಾಗೂ ಮಧ್ಯಮ ವರ್ಗದವರು ತರಕಾರಿ ಕೊಳ್ಳುವುದು ಕಷ್ಟವಾಗಿದೆ.

ಶಿವಮೊಗ್ಗದಲ್ಲಿ ವಾರದಿಂದೀಚೆಗೆ ಬಿಟ್ಟು ಬಿಡದೆ ವರುಣ ಆರ್ಭಟ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ತರಕಾರಿಗಳಾದ ಟೊಮೇಟೊ ಕೆಜಿಗೆ 70 ರೂಪಾಯಿ, ಬೀನ್ಸ್ ಕೆಜಿಗೆ 50.ರೂ , ಜವಳಿಕಾಯಿ ಕೆಜಿಗೆ 50.ರೂ, ಗೆಡ್ಡೆಕೋಸು 40.ರೂ ಹಾಗೂ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಸೊಪ್ಪುಗಳು ಪ್ರತಿ ಕಟ್ಟಿಗೆ 10ರಿಂದ 20 ರೂಪಾಯಿ ಬೆಲೆ ಏರಿಕೆಯಾಗಿದೆ.

ಮಳೆಯನ ರಂಪಾಟ ಹೀಗೆ ಮುಂದುವರೆದರೆ ತರಕಾರಿಯ ಆವಕ ಕಡಿಮೆಯಾಗಿ ತರಕಾರಿ ಕ್ಷಾಮ ತಲೆದೋರಿತು ಎಂಬ ಆತಂಕ ಗ್ರಾಹಕರಲ್ಲಿ ಕಾಡುತ್ತಿದೆ.

ಡಿಜಿಟಲ್ ಕರೆನ್ಸಿ ಭಾರತದಲ್ಲಿ ಚಲಾವಣೆ ಪ್ರಯೋಗ?

0

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2022ರ ಮಾರ್ಚ್ ತಿಂಗಳಲ್ಲಿ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರುವ ನಿರೀಕ್ಷೆ ಇದೆ. ಈ ಕುರಿತು ಆರ್ ಬಿ ಐ ಹಿರಿಯ ಅಧಿಕಾರಿ ಪಿ. ವಾಸುದೇವನ್ ಎಸ್ ಬಿ ಐ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಸಿಬಿಡಿಸಿ ಎಂಬುದು ಸಾಮಾನ್ಯ ವಿಷಯವಲ್ಲ. ಇದನ್ನು ಅವಸರದಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗದು. ಎಲ್ಲಾ ಆಯಾಮಗಳು, ಸಿದ್ಧತೆಗಳ ನ್ನು ಮಾಡುವುದು ಅನಿವಾರ್ಯ ಎಂದು ವಾಸುದೇವನ್ ಹೇಳಿದ್ದಾರೆ.

ಪ್ರಸ್ತುತ ಸಮಯದಲ್ಲಿ ಚಲಾವಣೆಯಲ್ಲಿರುವ ಕರೆನ್ಸಿ ರೂಪಾಯಿಗೆ ಪರ್ಯಾಯವಾಗಿ ಬಳಸಬಹುದಾದ, ವರ್ಚುವಲ್ ಕರೆನ್ಸಿ ಡಿಜಿಟಲ್ ಕರೆನ್ಸಿ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ಸಿಬಿಸಿಸಿ ಚಲಾವಣೆಗೆ ತರಲು ಆರ್ ಬಿ ಐ ನಿರ್ಧರಿಸಿದೆ.
ಇದು ಬಿಟ್ ಕಾಯಿನ್ ಮಾದರಿಯಾಗಿತ್ತು ಕರೆನ್ಸಿ ಅಲ್ಲ. ಬಿಟ್ ಕಾಯಿನ್ ಡಿಜಿಟಲ್ ದತ್ತಾಂಶಗಳಿಗೆ ಸಂಗ್ರಹಿಸಲಾಗಿರುತ್ತದೆ. ಯಾವುದೇ ಸರ್ಕಾರಿ ನಿಯಂತ್ರಕ ವ್ಯವಸ್ಥೆಗೆ ಸಂಬಂಧಿಸಿರುವುದಿಲ್ಲ. ಆದರೆ ಆರ್ ಬಿ ಐ ಡಿಜಿಟಲ್ ಕರೆನ್ಸಿ ಸರ್ಕಾರದ ಮಾನ್ಯತೆಗಳನ್ನು ಹೊಂದಿರುತ್ತದೆ.

ಆರ್ ಬಿ ಐ ಕರೆನ್ಸಿ ಯಿಂದ ಕಾಗದದ ನೋಟುಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಹಣಕಾಸು ವರ್ಗಾವಣೆಗೆ ತಂತ್ರಜ್ಞಾನದ ನೆರವಿನಿಂದ ಸುಲಭವಾಗಲಿದೆ. ಖಾಸಗಿ ಕ್ರಿಪ್ಟೋ ಕರೆನ್ಸಿಗಳಿಗೆ ಪರ್ಯಾಯವಾಗಿ ಡಿಜಿಟಲ್ ಕರೆನ್ಸಿಯನ್ನು ಚಲಾವಣೆ ಗೊಳಿಸಬಹುದಾಗಿದೆ.

ಕ್ರಿಪ್ಟೊ ಕರೆನ್ಸಿ : ಯುವಜನತೆ ಜಾಗೃತರಾಗಿ

0

ಸೈಬರ್ ತಂತ್ರಜ್ಞಾನ ಕುರಿತ ‘ಸಿಡ್ನಿ ಡಯಲಾಗ್’ ವೇದಿಕೆಯಲ್ಲಿ ವರ್ಚುವಲ್ ಆಗಿ ಭಾರತದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ ‘ಇಡೀ ಜಗತ್ತಿನ ಪ್ರಜಾತಂತ್ರ ದೇಶಗಳು ಬಿಟ್ ಕಾಯಿನ್ ಹಾಗೂ ಕ್ರಿಪ್ಟೊ ಕರೆನ್ಸಿಗಳು ಹ್ಯಾಕರ್ ಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಪರಸ್ಪರ ಸಹಕಾರ ನೀಡಬೇಕೆಂದು’ ಒತ್ತಾಯಿಸಿದರು.

ಕ್ರಿಪ್ಟೊ ಕರೆನ್ಸಿಗಳನ್ನು ಭಯೋತ್ಪಾದಕ ಸಂಘಟನೆಗಳು ಹಾಗೂ ಸಂಘಟಿತ ಅಪರಾಧ ಎಸಗುವ ಗುಂಪುಗಳು ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಭಾರತ ಮತ್ತು ಇತರೆ ದೇಶಗಳಲ್ಲಿ ಆತಂಕ ಮೂಡಿದೆ. ಅರ್ಥ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಅಪಾಯವನ್ನು ಕ್ರಿಪ್ಟೊ ಕರೆನ್ಸಿಗಳು ತಂದೊಡ್ಡಿದೆ ಎಂಬ ಕಳವಳ ಎಲ್ಲೆಡೆ ವ್ಯಕ್ತವಾಗಿದೆ.

ಆರ್ಥಿಕ ಅಪರಾಧಗಳನ್ನು ಎಸಗಿ, ವಿದೇಶಕ್ಕೆ ಪರಾರಿಯಾಗಿರುವವರನ್ನು ದೇಶಕ್ಕೆ ವಾಪಸ್ ಕರೆಸಲು ಎಲ್ಲಾ ಬಗ್ಗೆ ಪ್ರಯತ್ನಗಳು ನಡೆಸಲಾಗಿದೆ ಎಂದು ಈ ವೇಳೆ ಮೋದಿ ಅವರು ತಿಳಿಸಿದರು.

ಕ್ರಿಪ್ಟೊ ಕರೆನ್ಸಿಗಳು ನಮ್ಮ ಯುವಕರನ್ನು ಹಾಳು ಮಾಡಬಲ್ಲದು ಎಂದು ಆತಂಕ ಮೋದಿಜಿ ಈ ವೇಳೆ ವ್ಯಕ್ತಪಡಿಸಿದ್ದರು.

ಕಳುವಾದ ಮಾಲು ವಾರಸುದಾರರಿಗೆ ವಾಪಸ್

0

ಕಳೆದ ಒಂದು ವರ್ಷದೊಳಗಿನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸರು 231 ಪ್ರಕರಣಗಳನ್ನು ಪತ್ತೆಹಚ್ಚಿ 3.3.ರೂ ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 518 ಸ್ವತ್ತು ಕಳುವು ಪ್ರಕರಣಗಳು ದಾಖಲಾಗಿತು. ಅದರಲ್ಲಿ 231 ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬರೋಬ್ಬರಿ 3.3 ಕೋಟಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಸಂಬಂಧಪಟ್ಟ ವಾರಸುದಾರರಿಗೆ ಹಿಂತಿರುಗಿಸಿದರು.

2ಕೆಜಿ 879 ಗ್ರಾಂ ಬಂಗಾರದ ಆಭರಣಗಳು, 14 ಕೆಜಿ 394 ಗ್ರಾಂ ಬೆಳ್ಳಿ ಸಾಮಗ್ರಿಗಳು, 73 ವಾಹನಗಳು, 27 ಮೊಬೈಲ್ ಫೋನ್ ಗಳು, 6 ಜಾನುವಾರುಗಳು, 39 ಕ್ವಿಂಟಲ್ ಅಡಿಕೆ, ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳೆದುಕೊಂಡಿದ್ದ ವಾರಸುದಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು ಹಿಂತಿರುಗಿಸಿದರು.

ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ತಿರುಪತಿಯಲ್ಲಿ ಮಹಾಪೂರ, ಯಾತ್ರಿಕರಿಗೆ ಅಡಚಣೆ

0

ತಿರುಪತಿಯಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಭಕ್ತಾದಿಗಳ ಸುರಕ್ಷತೆಗಾಗಿ, ಬೆಟ್ಟದ ಮೇಲಿರುವ ದೇವಾಲಯಕ್ಕೆ ತೆರಳುವ 2 ಪಾದಚಾರಿ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ನಿಯಮಗಳು ಜಾರಿಯಲ್ಲಿದೆ ಎಂದು ತಿರುಪತಿ ತಿರುಮಲ ದೇವಸ್ಥಾನದ ಟ್ರಸ್ಟ್ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ನೇಲ್ಲೂರು , ಚಿತ್ತೂರು ಹಾಗೂ ಕಡಪ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಇಲ್ಲಿನ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿರಂತರವಾಗಿ ಸುರಿಯುತ್ತಿರುವ ತೀವ್ರ ಮಳೆಯಿಂದಾಗಿ ತಿರುಪತಿಯಲ್ಲಿನ ಜನಜೀವನಕ್ಕೆ ಅಡ್ಡಿ ಉಂಟಾಗಿದೆ. ತಿರುಪತಿಗೆ ಬರುವಂತಹ ಭಕ್ತಾದಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ವೆಂಕಟರಮಣನ ದೇವಾಲಯಕ್ಕೆ ಸಾಗುವ ರಸ್ತೆಗಳ ಮೇಲೆ ಕಲ್ಲು, ಮಣ್ಣು ತುಂಬಿಕೊಂಡಿದೆ. ಅವುಗಳನ್ನು ತೆರವುಗೊಳಿಸುವ ಕೆಲಸದಲ್ಲಿ ಅಧಿಕಾರಿ ,ಸಿಬ್ಬಂದಿಗಳು ನಿರತರಾಗಿದ್ದಾರೆ.

ವೆಂಕಟೇಶ್ವರನ ದರ್ಶನಕ್ಕೆ ಸಾಗುವ ಸರದಿಸಾಲಿನ ಜಾಗದಲ್ಲಿ ನೀರು ನಿಂತಿದೆ. ತಿರುಪತಿಯ ರೇಣಿಗುಂಟ ವಿಮಾನ ನಿಲ್ದಾಣ ವು ಜಲಾವೃತಗೊಂಡಿದೆ. ತಿರುಪತಿ ಹೈದರಾಬಾದ್ ಮತ್ತು ಬೆಂಗಳೂರು ವಿಮಾನಗಳು ವಾಪಸ್ ತೆರಳುವಂತೆ ಸೂಚಿಸಲಾಗಿದೆ. ದೆಹಲಿಯಿಂದ ಬರುವ ವಿಮಾನವನ್ನು ಕೂಡ ರದ್ದುಗೊಳಿಸಲಾಗಿದೆ. ಈ ವಿಷಯವನ್ನು ತಿರುಪತಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್. ಸುರೇಶ್ ತಿಳಿಸಿದ್ದಾರೆ.

ನಾರಾಯಣ ಗಿರಿಯಲ್ಲಿರುವ ಅತಿಥಿ ಭವನದ ಮೂರು ಕೊಠಡಿಗಳು ಭೂಕುಸಿತದಿಂದ ಜಖಂ ಆಗಿವೆ. ಅಲ್ಲಿ ವಸತಿ ಹೊಂದಿದ್ದ, ಯಾತ್ರಿಕರನ್ನು ಎಸ್ ವಿ ಅತಿಥಿ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ.

ಸ್ವರ್ಣಮುಖಿ ನದಿಯ ಪ್ರವಾಹದಿಂದಾಗಿ ತಿರುಪತಿ ಸನಿಹದ ಶ್ರೀನಿವಾಸ ಮಂಗಾಪುರದಲ್ಲಿ 2 ಆಟೋರಿಕ್ಷಾಗಳು ತೇಲಿ ಹೋಗಿದೆ. ರೇಣಿಗುಂಟ ಹೆದ್ದಾರಿಯಲ್ಲಿ ಬರುವ ಆಂಜನೇಯಪುರ ಎಂಬಲ್ಲಿನ ಸೇತುವೆಯ ಮೇಲೆ ಲಾರಿ ಒಂದು ನಿಂತ ಪರಿಣಾಮ, ವಾಹನ ಚಾಲನೆಗೆ ಅಡ್ಡಿ ಉಂಟಾಗಿದೆ.

ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು ಚಿತ್ತೂರು ಜಿಲ್ಲಾಧಿಕಾರಿಗಳಿಗೆ, ಪರಿಸ್ಥಿತಿಯ ಬಗ್ಗೆ ಪರಮರ್ಶೆ ನಡೆಸಿದ್ದಾರೆ.

ಪ್ರಸ್ತುತ ಪ್ರವಾಹದಲ್ಲಿ ಸಿಕ್ಕಿರುವ ಜನರನ್ನು ರಕ್ಷಿಸಲು ಮತ್ತು ಪುನರ್ವಸತಿ ಕಲ್ಪಿಸಲು ಆದೇಶ ನೀಡಿದ್ದಾರೆ.

ಮೂರು ಕೃಷಿ ಕಾಯ್ದೆ ವಾಪಸ್: ಪ್ರಧಾನಿ ಘೋಷಣೆ

0

ಈಗ ಜಾರಿಯಲ್ಲಿರುವ ಮೂರು ಕೃಷಿ ಕಾಯ್ದೆಗಳನ್ನು ಸರ್ಕಾರವು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭ ಮಾಡಲಿದೆ. ಬರುವ ಸಂಸತ್ತಿನ ಅಧಿವೇಶನದಲ್ಲಿ, ಅವುಗಳನ್ನು ಸಂವಿಧಾನಾತ್ಮಕ ಕ್ರಮಗಳ ಮೂಲಕ ವಜಾ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ್ ಕೃಷಿಕರು ಈ ಮೂರು ಕೃಷಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ, ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಧಾನಿ ಮೋದಿಜಿ ಅವರು ಪ್ರತಿಭಟನಾನಿರತ ಕೃಷಿಕರು ತಮ್ಮ ಮನೆಗಳಿಗೆ ಹಿಂದಿರುಗಬೇಕು. ಮತ್ತು ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅವರು ತಮ್ಮ ಸಂದೇಶದಲ್ಲಿ ಈ ಕೃಷಿ ಕಾಯ್ದೆಗಳ ಗುರಿಯು ಕೃಷಿಕರನ್ನು ಬಲಪಡಿಸುವುದೇ ಆಗಿದೆ. ಆದರೆ ಉತ್ತಮ ಪ್ರಯತ್ನ ಮಾಡಿದರು ಕೂಡ, ಕೆಲವು ವರ್ಗದ ಕೃಷಿಕರನ್ನು ಮನವರಿಕೆ ಮಾಡಿಕೊಡಲಾಗಲಿಲ್ಲ.

“ನಾನು, ಮತ್ತಷ್ಟು ಕಠಿಣವಾಗಿ ಶ್ರಮಿಸುತ್ತೇನೆ. ನಿಮ್ಮ ಕನಸುಗಳನ್ನು ,ದೇಶದ ಕನಸುಗಳನ್ನು ಈಡೇರಿಸಲು ಸಾಧ್ಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಅನಾಹುತ,ಅವ್ಯಾಹತ

0

ಬಂಗಾಳಕೊಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕೆಲವೆಡೆ ಭಾರಿ ಪ್ರಮಾಣದ ಮಳೆಯಾಗುತ್ತದೆ. ಇನ್ನು ಒಂದು ವಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ನಿರಂತರ ವಾಯುಭಾರ ಕುಸಿತ ಕ್ಕೆ ಕೇವಲ ‘ಲಾ ನಿನಾ ಚಂಡಮಾರುತ ‘ಒಂದೇ ಕಾರಣವಲ್ಲ. ಜಾಗತಿಕ ತಾಪಮಾನವು ಕಾರಣವಾಗಿದೆ. ಇದು ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿ ಹೆಚ್ಚು ಮಳೆ. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಡಿಮೆ ಮಳೆ ತರುತ್ತದೆ. ಇದರಿಂದ ಪ್ರಕೃತಿ ವಿಕೋಪಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಮಾಲೋಚಕ ಡಾ. ಜಿ. ಎಸ್. ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.

ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಸುರಿಯುವ ವಾಡಿಕೆ ಮಳೆಗಿಂತ ಶೇ.62 ರಷ್ಟು ಅಧಿಕವಾಗಿದೆ.

ಲಾ ನಿನಾ ಚಂಡಮಾರುತದ ಪರಿಣಾಮದಿಂದ ವಾಯುಭಾರಕುಸಿತ ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಿದೆ. ಮತ್ತೆ ಕುಸಿತ ಮುಂದುವರಿಯುವ ಸಾಧ್ಯತೆಯಿದೆ. ಇದರಿಂದ ಮಳೆ ನಿಲ್ಲುವ ಸಾಧ್ಯತೆ ಕಡಿಮೆ ಇದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಮಳೆ ರಭಸಕ್ಕೆ ಕೆಲವು ಹಳೆಯ ಕಟ್ಟಡಗಳು ನೆಲಕ್ಕುರುಳಿವೆ. ಬೆಳೆ ಹಾನಿ ಉಂಟಾಗಿದೆ. ಅನೇಕ ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಇಂದು 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ತುಮಕೂರು, ಬೆಳಗಾವಿ, ದಾರವಾಡ ಮುಂತಾದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.