Monday, August 3, 2026
Monday, August 3, 2026
Home Blog Page 2061

ಏಳು ಸಹಸ್ರಕ್ಕೂ ಹೆಚ್ಚು ಹಳ್ಳಿಗಳಿಗೆ 4G ಸೌಲಭ್ಯ

0

ಆಂಧ್ರಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಐದು ರಾಜ್ಯಗಳಾದ್ಯಂತ ಮಹತ್ವಾಕಾಂಕ್ಷೆಯ ಜಿಲ್ಲೆಗಳ ವ್ಯಾಪ್ತಿಗೆ ಒಳಪಡದ ಹಳ್ಳಿಗಳಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೊದಲ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. “ಯೋಜನೆಯು 44 ಮಹತ್ವಾಕಾಂಕ್ಷೆಯ ಜಿಲ್ಲೆಗಳ 7,287 ಹಳ್ಳಿಗಳಲ್ಲಿ 4G ಆಧಾರಿತ ಮೊಬೈಲ್ ಸೇವೆಗಳನ್ನು ಒದಗಿಸಲು ಉದ್ದೇಶಿಸಿದೆ. ಐದು ವರ್ಷಗಳ ಕಾರ್ಯಾಚರಣೆಯ ವೆಚ್ಚ 6,466 ಕೋಟಿ ರೂ.
“ಈ ಯೋಜನೆಗೆ ಸಾರ್ವತ್ರಿಕ ಸೇವಾ ಬಾಧ್ಯತೆಯ ನಿಧಿಯಿಂದ ಹಣವನ್ನು ನೀಡಲಾಗುವುದು. ಒಪ್ಪಂದಕ್ಕೆ ಸಹಿ ಹಾಕಿದ ನಂತರ 18 ತಿಂಗಳೊಳಗೆ ಯೋಜನೆ ಪೂರ್ಣಗೊಳ್ಳುತ್ತದೆ ಮತ್ತು ನವೆಂಬರ್ 23 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ” ಎಂದು ತಿಳಿದು ಬಂದಿದೆ. ಗುರುತಿಸಲ್ಪಟ್ಟ ಗ್ರಾಮಗಳಲ್ಲಿ 4G ಮೊಬೈಲ್ ಸೇವೆಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದ ಕೆಲಸವನ್ನು ಅಸ್ತಿತ್ವದಲ್ಲಿರುವ ಸಾರ್ವತ್ರಿಕ ಸೇವಾ ಬಾಧ್ಯತೆಯ ನಿಧಿಯ ಕಾರ್ಯವಿಧಾನಗಳ ಪ್ರಕಾರ ಮತ್ತು ಮುಕ್ತ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯ ಮೂಲಕ ನೀಡಲಾಗುತ್ತದೆ. 5 ರಾಜ್ಯಗಳಾದ್ಯಂತ ಮಹತ್ವಾಕಾಂಕ್ಷೆಯ ಜಿಲ್ಲೆಗಳ ದೂರದ ವ್ಯಾಪ್ತಿಯ ಪ್ರದೇಶಗಳಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸುವ ಪ್ರಸ್ತುತ ಪ್ರಸ್ತಾವನೆಯು ಸ್ವಾವಲಂಬನೆಗೆ ಉಪಯುಕ್ತವಾದ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸುತ್ತದೆ. ಕಲಿಕೆಯನ್ನು ಸುಗಮಗೊಳಿಸುತ್ತದೆ, ಮಾಹಿತಿ ಮತ್ತು ಜ್ಞಾನದ ಪ್ರಸರಣ, ಕೌಶಲ್ಯ ಉನ್ನತೀಕರಣ ಮತ್ತು ಅಭಿವೃದ್ಧಿ, ವಿಪತ್ತು ನಿರ್ವಹಣೆ, ಇ-ಆಡಳಿತ ಉಪಕ್ರಮಗಳು, ಉದ್ಯಮಗಳ ಸ್ಥಾಪನೆ ಮತ್ತು ಇ-ಕಾಮರ್ಸ್ ಸೌಲಭ್ಯಗಳು, ಜ್ಞಾನ ಹಂಚಿಕೆ ಮತ್ತು ಉದ್ಯೋಗಾವಕಾಶಗಳ ಲಭ್ಯತೆಗಾಗಿ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಬೆಂಬಲವನ್ನು ಒದಗಿಸುವುದು ಮತ್ತು ಪ್ರಜಾಪ್ರಭುತ್ವ ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ಆತ್ಮ ನಿರ್ಭರದ ಉದ್ದೇಶಗಳನ್ನು ಪೂರೈಸುವ ಡಿಜಿಟಲ್ ಇಂಡಿಯಾದ ದೃಷ್ಟಿಯನ್ನು ಪೂರೈಸುವುದು ಈ ಯೋಜನೆಯ ಮಹತ್ವವಾಗಿದೆ.

ಮಕ್ಕಳೊಂದಿಗೆ ಬರೆಯಿರಿ -ಲೇಖಕ ಕಾರ್ತಿಕ್ ಶಂಕರ್

0

ಕಾರ್ತಿಕ್ ಶಂಕರ್ ಅವರು ವಿಕಾಸಾತ್ಮಕ ಪರಿಸರಶಾಸ್ತ್ರಜ್ಞ.
ಇವರು ಪರಿಸರ ವಿಜ್ಞಾನ ಮತ್ತು ವಿಕಸನೀಯ ಜೀವನಚರಿತ್ರೆ ಕಪ್ಪೆ, ಹಲ್ಲಿಗಳು, ಹಾವುಗಳು ಮತ್ತು ಪಶ್ಚಿಮ ಘಟ್ಟಗಳಾದ್ಯಂತ ಸಮುದ್ರ ಆಮೆಗಳು ಮತ್ತು ಬಂಡೆಗಳ ಮೀನುಗಳ ನಡುವೆ ಅಧ್ಯಯನ ಮಾಡಿದ್ದಾರೆ. ಇದರ ಮಧ್ಯೆ, ಇವರು ರೋಹಿಣಿ ನಿಲೇಕಣಿ ಅವರೊಂದಿಗೆ ಆಮೆಯ ಆಕರ್ಷಕ ಜೀವನದ ಬಗ್ಗೆ ಭಾಷಣವನ್ನು ನೀಡಿದ್ದರು. ಇದರ ಪರಿಣಾಮದಿಂದ ಕಾರ್ತಿಕ್ ಶಂಕರ್ ಅವರು ಮಕ್ಕಳಿಗೆ ವಿಜ್ಞಾನದ ಬಗ್ಗೆ ಬರೆಯಲು ಪ್ರಾರಂಭಿಸಿದರು. ಅವರ ಕಣ್ಣುಗಳಿಂದ ವಿಜ್ಞಾನವು ಸುಂದರ ಮತ್ತು ಓದಲು ಸಾಧ್ಯವಿದೆ ಎಂದು ನಾನು ಕಂಡುಕೊಂಡೆ ಎಂದು ಹೇಳುತ್ತಾರೆ. ಇವರ ವೈಜ್ಞಾನಿಕ ಪತ್ರಿಕೆಗಳನ್ನು ಸಾಮಾನ್ಯವಾಗಿ ಕೆಲವು ಜನರು ಓದುತ್ತಾರೆ ಆದರೆ ಮಕ್ಕಳಿಗಾಗಿ ಇವರು ಬರೆದ ಪುಸ್ತಕಗಳು 10,000 ಪ್ರತಿಗಳು ಮಾರಾಟವಾಗಿವೆ. ಇವರು ಆಮೆಗಳ ಮೇಲೆ ಬರೆದ ಪುಸ್ತಕವನ್ನು ರೊಮೇನಿಯನ್ ಮತ್ತು ಇಂಗ್ಲೊ ಸೇರಿದಂತೆ 12 ಭಾಷೆಗಳಿಗೆ ಅನುವಾದಿಸಲಾಗಿದೆ. ಇದರಿಂದ ಮಕ್ಕಳನ್ನು ತಲುಪಲು ಸಾಧ್ಯವಾಗುವುದು ಸಂತೋಷಕರವಾಗಿದೆ ಎನ್ನುತ್ತಾರೆ ಕಾರ್ತಿಕ್ ಶಂಕರ್. ಇವರು ನೀಲಗಿರಿಯಲ್ಲಿನ ಪೊದೆ ಕಪ್ಪೆಯ ಬಗ್ಗೆಯೂ ಬರೆದಿದ್ದಾರೆ. ನೈಸರ್ಗಿಕ ಪ್ರಪಂಚದೊಂದಿಗಿನ ಇವರ ಆಕರ್ಷಣೆ, ಅದರ ಜಟಿಲತೆಗಳು ಮತ್ತು ವಿಸ್ಮಯಗಳನ್ನು ಮಕ್ಕಳಿಗೆ ತಿಳಿಸಲು ಪ್ರಯತ್ನಿಸುತ್ತಾರೆ. ಜನರು ತಮ್ಮ ಸುತ್ತಲೂ ಇರುವದನ್ನು ಸಂರಕ್ಷಿಸುವಲ್ಲಿ ತೊಡಗಿಸಿಕೊಳ್ಳುವುದು ಕಡಿಮೆ ಎಂಬುದು ಇವರ ನಂಬಿಕೆ. ಸಂರಕ್ಷಣೆ ಎಂದರೆ ಜನರು ಮತ್ತು ಪ್ರಕೃತಿಯನ್ನು ಪ್ರತ್ಯೇಕಿಸುವುದು ಅಲ್ಲ ಆದರೆ, ಎಲ್ಲಾ ಜೀವಗಳ ನಡುವಿನ ಸಂಬಂಧಗಳ ವ್ಯಾಪ್ತಿಯನ್ನು ಉತ್ತೇಜಿಸುವುದು ಎಂದು ಮಕ್ಕಳಿಗೆ ತಿಳಿ ಹೇಳುತ್ತಾರೆ.
ನಾವು ಬದಲಾಗಬಹುದು ಎಂದು ನಾವು ಭಾವಿಸುತ್ತೇವೆ, ಅದಕ್ಕಾಗಿಯೇ ನಾವು ವಿಜ್ಞಾನ, ಸಂರಕ್ಷಣೆ ಅಥವಾ ಕಲೆಯಲ್ಲಿ ಕೆಲಸ ಮಾಡುತ್ತೇವೆ. ನಾವು ಸಂವಹನ ಮಾಡಬೇಕು ಮಕ್ಕಳಿಗೆ ಅಂತಹ ಭರವಸೆ, ಹವಾಮಾನದ ನೈಜತೆಯ ಬಗ್ಗೆ ಅವುಗಳನ್ನು ರಕ್ಷಿಸುವುದರ ಬಗ್ಗೆ ತಿಳಿಸುವುದು ಅತ್ಯಗತ್ಯವಾಗಿದೆ ಎಂದು ಹೇಳುತ್ತಾರೆ. ಆಮೆಗಳ ಕುರಿತಾದ ಇವರ ಪುಸ್ತಕದಲ್ಲಿ, ನಾಯಕಿ ತನ್ನ ಮೂಲದ ಕಡಲ ತೀರಕ್ಕೆ ದಾರಿ ಮಾಡಿಕೊಡುತ್ತಾಳೆ ಆದರೆ ಅವಳು ಮೊದಲು ಟ್ರಾಲ್ ಬಲೆಗಳು ಮತ್ತು ಶಾರ್ಕ್‌ಗಳಂತಹ ಮಾರಣಾಂತಿಕ ಬೆದರಿಕೆಗಳಿಂದ ಪಾರಾಗಬೇಕು. ಇತರ ಆಮೆಗಳು ಬಲೆಗಳಲ್ಲಿ ಸಿಕ್ಕಿಬಿದ್ದಿರುವ ಕೆಲವು ಚಿತ್ರಣಗಳಿವೆ. ನನ್ನ ಬರಹಗಳು ಮಕ್ಕಳಿಗೆ ಪ್ರಕೃತಿಯ ಹೊಸ ನೋಟವನ್ನು ವಿಕಸಿಸಲು ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಸಂರಕ್ಷಣೆಯು ಸಾಮಾನ್ಯವಾಗಿ ಎಲೈಟ್ ಮತ್ತು ಬಹಿಷ್ಕಾರದ ಕ್ಷಣವಾಗಬಹುದು, ಅದು ಮಾನವರು ಮತ್ತು ಪ್ರಕೃತಿಯನ್ನು ಪರಸ್ಪರ ಪ್ರತ್ಯೇಕವಾಗಿ ಯೋಚಿಸಲು ಒಲವು ತೋರುತ್ತದೆ- ಆದ್ದರಿಂದ, ಇದು ಭೂಮಿಯಿಂದ ವಾಸಿಸುವ ಈಗಾಗಲೇ ಅಂಚಿನಲ್ಲಿರುವ ಸಮುದಾಯಗಳ ಮೇಲೆ 7 ಪರಿಣಾಮಗಳನ್ನು ಉಂಟುಮಾಡಬಹುದು. ಸೌಂದರ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳೊಂದಿಗೆ ವಿವಿಧ ರೀತಿಯ ಸಮರ್ಥನೀಯ ಬಳಕೆಯನ್ನು ಒಳಗೊಂಡಿರುವ ಮಾನವರು ಮತ್ತು ಪ್ರಕೃತಿಯ ನಡುವೆ ನಾವು ಹೆಚ್ಚು ಸಂಪರ್ಕವನ್ನು ಬೆಳೆಸಿಕೊಳ್ಳಬೇಕು. ಇದು ಸಂಭವಿಸಬೇಕಾದರೆ, ನಾವು ಮಕ್ಕಳೊಂದಿಗೆ ಬೆರೆಯಲು ಪ್ರಾರಂಭಿಸಬೇಕು. ಮಕ್ಕಳು ಯಾವಾಗಲೂ ನೈಸರ್ಗಿಕ ಪ್ರಪಂಚದ ಅದ್ಭುತ ಗುಣಗಳನ್ನು ಇಷ್ಟಪಡುವುದು ಗಮನಾರ್ಹ. ಮಕ್ಕಳಲ್ಲಿ ಪ್ರಕೃತಿಯ ಕುರಿತು ಸುಂದರವಾದ ದೃಶ್ಯವನ್ನು ಕಟ್ಟಬೇಕು. ಬಾಲ್ಯದಲ್ಲಿಯೇ ಮಕ್ಕಳಿಗೆ ಪರಿಸರದ ಬಗೆಗಿನ ಒಲವನ್ನು ಹೆಚ್ಚಿಸಬೇಕು. ಇದರಿಂದ ಅವರು ಒಳ್ಳೆಯ ಮೌಲ್ಯಗಳನ್ನು ಕಲಿಯುತ್ತಾರೆ. ಪ್ರಕೃತಿಯನ್ನು ಪ್ರೀತಿಸುತ್ತಾರೆ ಎಂದು ಕಾರ್ತಿಕ್ ಶಂಕರ್ ಅವರು ಭಾವಿಸುತ್ತಾರೆ.

ದೇಶದಲ್ಲಿ ಇ- ಕಾಮರ್ಸ್ ಚೇತರಿಕೆ

0

ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಇ-ಕಾಮರ್ಸ್ ವಹಿವಾಟಿನಿಂದಾಗಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಉತ್ಪನ್ನಗಳನ್ನು ವಿಶ್ವ ಮಾರುಕಟ್ಟೆಗೆ ರಫ್ತು ಮಾಡಲು ಸಹಕಾರಿಯಾಗಿದೆ. ಇದರಿಂದ ದೇಶದ ರಫ್ತು ಹೆಚ್ಚಿಸಲು ಸಾಧ್ಯವಾಗಲಿದೆ.

ಎಂಎಸ್ಎಂಇ ಗಳು ಮಾರುಕಟ್ಟೆ ಪ್ರವೇಶಕ್ಕೆ ನಿರ್ಬಂಧ, ಆರಂಭಿಕ ಹೂಡಿಕೆಯ ಸವಾಲು, ಬೇಡಿಕೆಯಲ್ಲಿ ಅನಿಶ್ಚಿತತೆಯನ್ನು ಎದುರಿಸುತ್ತಿವೆ. ಈ ಸವಾಲುಗಳನ್ನು ಪರಿಹರಿಸಲು ಇ ಕಾಮರ್ಸ್ ಸಹಾಯಕಾರಿಯಾಗುತ್ತದೆ. ಇ-ಕಾಮರ್ಸ್ ವೇದಿಕೆಯು ಎಂಎಸ್ಎಂಇ ಗಳಿಗೆ ಜಾಗತಿಕ ಮಟ್ಟದಲ್ಲಿ ಗ್ರಾಹಕರನ್ನು ಸಂಪರ್ಕಿಸಲು ಸಹಾಯಕವಾಗುತ್ತದೆ. ಗಡಿಯಾಚೆಗಿನ ವ್ಯವಹಾರವನ್ನು ಹೆಚ್ಚಿಸಲು ಸುಲಭವಾಗುತ್ತದೆ. ಅಂತರಾಷ್ಟ್ರೀಯ ಗ್ರಾಹಕರನ್ನು ಸೆಳೆಯಲು ಸಾಧ್ಯವಾಗುತ್ತದೆ.

ಏಳರಿಂದ ಎಂಟು ವರ್ಷಗಳ ಹಿಂದೆ ಎಂ.ಎಸ್.ಎಂ.ಇ ರಫ್ತು ವ್ಯವಹರಿಸಲು ಜಾಗತಿಕ ವ್ಯಾಪಾರ ಮೇಳಗಳಲ್ಲಿ ಭಾಗವಹಿಸಬೇಕಾಗಿತ್ತು. ಅಲ್ಲಿ ಆರ್ಡರ್ ಗಳನ್ನು ಬುಕ್ ಮಾಡಬೇಕಾಗುತ್ತಿತ್ತು. ಲಾಜಿಸ್ಟಿಕ್ಸ್, ಪೇಮೆಂಟ್ ಗೆ ಕಾಯುವುದು ಇತ್ಯಾದಿ ಸವಾಲುಗಳು ಎದುರಾಗುತ್ತಿದ್ದವು. ಆದರೆ ಈಗ ತಂತ್ರಜ್ಞಾನದ ಮುಖಾಂತರ ಇ-ಕಾಮರ್ಸ್ ಕ್ಷೇತ್ರ ವಿಸ್ತಾರವಾಗಿರುವುದರಿಂದ ಅಡಚಣೆಗಳನ್ನು ನಿವಾರಿಸಬಹುದಾಗಿದೆ.

ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ : ಸಂದೇಶ್ ಜವಳಿ

0

ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ ಹೊಸ ಆಯಾಮಗಳನ್ನು ರಂಗಾಸಕ್ತರಿಗೆ ಪರಿಚಯಿಸುವ, ನಾಟಕ ಸಾಹಿತ್ಯವನ್ನು ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಸಹಯೋಗದೊಂದಿಗೆ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದರು.

ಮೂರು ತಿಂಗಳ ಅವಧಿಯಲ್ಲಿ ರಂಗಪಠ್ಯಗಳಾದ ಜಾಗತಿಕ ರಂಗಭೂಮಿ, ಭರತನ ನಾಟ್ಯಶಾಸ್ತ್ರ, ಭಾರತೀಯ ರಂಗಭೂಮಿ, ಅಭಿನಯ ಸಿದ್ಧಾಂತಗಳು ಮತ್ತು ಪ್ರಾಯೋಗಿಕ ತರಗತಿಗಳಾದ ನಾಟಕ ಪ್ರಕಾರಗಳು ಮತ್ತು ರಚನೆ, ನಿರ್ದೇಶನ ಮತ್ತು ರಂಗ ತರಬೇತಿ ಮತ್ತು ನೇಪಥ್ಯ ವಿಚಾರಗಳ ಕುರಿತು ತರಬೇತಿ ನೀಡಲಾಗುವುದು. ಮುಂದಿನ ವರ್ಷದಿಂದ ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಒಂದು ವರ್ಷದ ರಂಗಶಿಕ್ಷಣ ಕೋರ್ಸ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ರಂಗಶಿಕ್ಷಣಕ್ಕೆ ಸೇರ ಬಯಸುವ ಅಭ್ಯರ್ಥಿಗಳು ಕನಿಷ್ಟ ಪಿಯುಸಿ/ತತ್ಸಮಾನ ತೇರ್ಗಡೆಯಾಗಿರಬೇಕು. 18ರಿಂದ 35 ವರ್ಷ ಒಳಗಿರಬೇಕು. ಕೋರ್ಸಿನ ತರಬೇತಿ ಅವಧಿ ಸಂಜೆ 5.30ರಿಂದ ರಾತ್ರಿ 8ರವರೆಗೆ ನಡೆಯಲಿದ್ದು, ವಾರದಲ್ಲಿ ನಾಲ್ಕು ದಿನ ಕಟೀಲು ಅಶೋಕ ಪೈ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. 30ಮಂದಿಗೆ ಪ್ರವೇಶಕ್ಕೆ ಅವಕಾಶವಿದ್ದು, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ರಂಗಾಯಣ ಮತ್ತು ಕಾಲೇಜಿನಲ್ಲಿ ಲಭ್ಯವಿದೆ. ಅರ್ಜಿಯೊಂದಿಗೆ ಶೈಕ್ಷಣಿಕ ಅಂಕಪಟ್ಟಿಯ ಪ್ರತಿ, ಪಾರ್ಸ್‍ಪೋರ್ಟ್ ಅಳತೆಯ 4 ಭಾವಚಿತ್ರ ಮತ್ತು ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು ಎಂದರು.

ಕಾಶ್ಮೀರ: ಕುಲ್ಗಾಂ ನಲ್ಲಿ ಉಗ್ರರ ಹತ್ಯೆ

0

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ ತಯ್ಬಾ ಕಮಾಂಡರ್ ಸೇರಿದಂತೆ ಐವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.

ಕುಲ್ಗಾಂ ಜಿಲ್ಲೆಯ ಗೋಪಾಲಪೊರ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆಯಿತು. ಈ ಸಂದರ್ಭದಲ್ಲಿ ಭದ್ರತಾ ಪಡೆಯ ಗುಂಡಿಗೆ ಐವರು ಉಗ್ರರು ಬಲಿಯಾಗಿದ್ದಾರೆ.

ಉಗ್ರರು ಅಡಗಿ ಕುಳಿತಿರುವುದು ಖಚಿತವಾದ ಬಳಿಕ ಭದ್ರತಾ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ಗುಂಡಿನ ಚಕಮಕಿ ನಡೆದಿದೆ. ಈ ವೇಳೆಗೆ ಸೇನಾ ದಾಳಿಯಲ್ಲಿ ಉಗ್ರರನ್ನು ಹತ್ಯೆಗಯ್ಯಲಾಗಿದೆ.

ಪುಲ್ವಾಮ ಹೆದ್ದಾರಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಇಬ್ಬರು ಲಷ್ಕರ್ ಉಗ್ರರು ಸೆರೆಸಿಕ್ಕಿದ್ದಾರೆ. ಅಮೀರ್ ಬಶೀರ್ ಮತ್ತು ಮುಕ್ತಾರ್ ಭಟ್ ಎಂಬ ಉಗ್ರರಿಂದ ಅಪಾರ ಸ್ಪೋಟಕ ಸಾಧನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಟಿ-20 ಕಿವಿಸ್ ವಿರುದ್ಧ ಭಾರತಕ್ಕೆ ಜಯ

0

ಟಿ – 20 ಕ್ರಿಕೆಟ್ ಟೂರ್ನಿಯು ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವೆ ಪಂದ್ಯ ನಡೆಯಿತು. ನ್ಯೂಜಿಲೆಂಡ್ ವಿರುದ್ಧ ಭಾರತ ರೋಚಕ ಜಯ ಸಾಧಿಸಿತು.
ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು ಎದುರಾಳಿ ತಂಡವು ಮೊದಲಿಗೆ ಬ್ಯಾಟಿಂಗ್ ಮಾಡಿ ಮೊದಲ ಹಂತದ ಜೊತೆಗೂಡಿದ ಗಪ್ಟಿಲ್ 42 ಎಸೆತಗಳಲ್ಲಿ 70 ರನ್ ಗಳಿಸಿಕೊಂಡರು ಮತ್ತು ಮಾರ್ಕ್ ಚಾಪ್ ಮನ್ 50 ಎಸೆತಗಳಲ್ಲಿ 63 ರನ್ ಗಳಿಸಿ ಅವರ ಶತಕದ ಜೊತೆಯಾಟದಿಂದಾಗಿ ಕೀವಿಸ್ ತಂಡವು 20 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 164 ರನ್ ಗಳಿಸಿತು.
ಗಪ್ಟಿಲ್ ಮತ್ತು ಚಾಪ್ ಮನ್ ಶತಕದ ಜೊತೆಯಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಎರಡನೇ ವಿಕೆಟ್ ಜೊತೆಯಾಟದಲ್ಲಿ 109 ರನ್ ಗಳನ್ನ ತಂಡಕ್ಕೆ ಸೇರಿಸಿದರು.
ಮೊದಲ ಓವರ್ ನಲ್ಲಿಯೇ ಡೆರಿಲ್ ಮಿಚೆಲ್ ಔಟಾದರು. ಇದರಿಂದಾಗಿ ತಂಡವು ಕುಸಿಯುವ ಆತಂಕವನ್ನ ಗಪ್ಟಿಲ್ ಮತ್ತು ಚಾಪ್ ಮನ್ ದೂರಮಾಡಿದರು. 14 ನೇ ಓವರ್ ನವರೆಗೂ ಇವರಿಬ್ಬರ ಇನ್ನಿಂಗ್ಸ್ ಗೆ ಸ್ಥಿರತೆ ಒದಗಿಸಿದ್ದರು ಆಫ್ ಸ್ಪಿನ್ನರ್ R.ಅಶ್ವಿನ್ ಎಸೆತದ ತಿರುವು ಗುರುತಿಸುವಲ್ಲಿ ಎಡವಿದ ಚಾಪ್ ಮನ್ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಜೊತೆಯಾಟ ಮುರಿದುಬಿತ್ತು. ಅದೇ ಓವರ್ ನಲ್ಲಿ ಅಶ್ವಿನ್ ಅವರು ಗ್ಲೆನ್ ಫಿಲಿಪ್ಸ್ ವಿಕೆಟ್ ಕೂಡ ಗಳಿಸಿದರು.
ನ್ಯೂಜಿಲೆಂಡ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸಲು ನಮ್ಮ ಬೌಲರ್ ಗಳು ಪ್ರಯತ್ನಿಸಿದರು. ಆದರೂ ಗಪ್ಟಿಲ್ ಮತ್ತು ಟಿಮ್ ಸೀಫರ್ಟ್ 40 ರನ್ ಗಳನ್ನ ಸೇರಿಸಿದರು. ಮಧ್ಯಮ ವೇಗಿ ದೀಪಕ್ ಚಾಹಲ್ 18 ನೇ ಓವರ್ ನಲ್ಲಿ ಗಪ್ಟಿಲ್ ವಿಕೆಟ್ ಪಡೆಯುವುದರೊಂದಿಗೆ ಅಬ್ಬರದ ಆಟಕ್ಕೆ ತಡೆಯೊಡ್ಡಿದರು. ನಂತರದ ಓವರ್ ನಲ್ಲಿ ಭುವನೇಶ್ವರ್ ಎಸೆತದಲ್ಲಿ ಸೀಫರ್ಟ್ ಔಟಾದರು.
165 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಹೋರಾಡಿದ ಭಾರತ ತಂಡವು ಕೇವಲ 19.4 ಓವರ್ ಗಳಲ್ಲಿ 166 ರನ್ ಗಳಿಸಿ ಜಯ ಸಾಧಿಸಿತು. ರೋಹಿತ್ ಶರ್ಮಾ ನಾಯಕತ್ವದ ಮೊದಲ ಟಿ – 20 ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ದಾಖಲಿಸಿತು. K.L ರಾಹುಲ್ 14 ಎಸೆತಗಳಲ್ಲಿ 15 ರನ್ ಗಳಿಸಿ ಮತ್ತು ರೋಹಿತ್ 36 ಎಸೆತಗಳಲ್ಲಿ 48 ರನ್ ಗಳನ್ನ ಗಳಿಸಿ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಜೊತೆಯಾಟದಲ್ಲಿ 50 ರನ್ ಸೇರಿಸಿದರು.
6 ನೇ ಓವರ್ ನಲ್ಲಿ ರಾಹುಲ್ ಔಟಾದಾಗ ಕ್ರೀಸ್ ಗೆ ಬಂದ ಸೂರ್ಯ ಕುಮಾರ್ ಯಾದವ್ ಇನ್ನಿಂಗ್ಸ್ ನ ರೂಪವನ್ನೇ ಬದಲಿಸಿದರು.
ಮುಂಬೈ ಜೋಡಿ ರೋಹಿತ್ ಮತ್ತು ಸೂರ್ಯ 2 ನೇ ವಿಕೆಟ್ ಜೊತೆಯಾಟದಲ್ಲಿ 50 ರನ್ ಸೇರಿಸಿದರು. ಸೂರ್ಯ 40 ಎಸೆತಗಳಲ್ಲಿ 60 ರನ್ ಗಳಿಸಿ ತಮ್ಮ ನಾಯಕನಿಗಿಂತಲೂ ಹೆಚ್ಚು ಬೀಸಾಟವಾಡಿದರು. 6 ಬೌಂಡರಿ ಹಾಗೂ ಅಮೋಘ 3 ಸಿಕ್ಸರ್ ಗಳನ್ನ ಸಿಡಿಸಿದರು. ಈ ಹಂತದಲ್ಲಿ ಜಯ ಸುಲಭವಾಗಿ ಒಲಿಯುವ ಆಶಾಭಾವ ಮೂಡಿತ್ತು.
ಶ್ರೇಯಸ್ ಅಯ್ಯರ್ 5 ರನ್ ಗಳಿಸಿ ಮತ್ತು ಪದಾರ್ಪಣೆ ಮಾಡಿದ ವೆಂಕಟೇಶ್ ಅಯ್ಯರ್ 2 ಎಸೆತದಲ್ಲಿ 4 ರನ್ ಗಳಿಸಿ ಬೇಗ ಔಟಾದರು. ಇನ್ನೊಂದೆಡೆ ಕಿವೀಸ್ ತಂಡದ ವೇಗಿ ಟೆಂಪ್ ಬೌಲ್ಟ್ 14 ನೇ ಓವರ್ ನಲ್ಲಿ ರೋಹಿತ್ ಮತ್ತು 17 ನೇ ಓವರ್ ನಲ್ಲಿ ಸೂರ್ಯಕುಮಾರ್ ವಿಕೆಟ್ ಗಳಿಸಿದರು. ಇದರಿಂದಾಗಿ ಭಾರತಕ್ಕೆ ಗೆಲುವು ಸುಲಭವಾಗಿ ಒಲಿಯುವುದು ತಪ್ಪಿತು.
ಕೊನೆಯ ಓವರ್ ನವರೆಗೂ ಕುತೂಹಲ ಮನೆ ಮಾಡಿತು ನ್ಯೂಜಿಲೆಂಡ್ ಬೌಲರ್ ಗಳು ತಮ್ಮ ಅನುಭವ ಪ್ರದರ್ಶಿಸಿ ಭಾರತ ಗೆಲುವಿನ ರನ್ ಗಾಗಿ ಪರದಾಡುವಂತೆ ಮಾಡಿದರು.ಜಾಣತನದಿಂದ ಪಟೇಲ್ 1 ರನ್ ಗಳಿಸಿ ರಿಷಬ್ ಪಂತ್ ಗೆ ಗೆಲುವಿನ ರನ್ ಹೊಡೆಯಲು ಅವಕಾಶ ಮಾಡಿಕೊಟ್ಟರು. ಪಂದ್ಯ ಬೆಳೆಸಿದ ರಿಷಬ್ ಪಂತ್ ಔಟಾಗದೆ 17 ರನ್ ಗಳಿಸಿ ಕೊನೆಯ 3 ಎಸೆತಗಳಲ್ಲಿ ತಂಡದ ಗೆಲುವಿಗೆ 3 ರನ್ ಗಳ ಅವಶ್ಯಕತೆ ಇತ್ತು . ಆಗ ಪಂತ್ ಬೌಂಡರಿ ಹೊಡೆಯುವ ಮೂಲಕ ಗೆಲುವಿನ ಕಾಣಿಕೆ ನೀಡಿದರು.

ರೈತರಿಗೆ ಶೀಘ್ರ ಪರಿಹಾರ : ಸಿಎಂ ಬೊಮ್ಮಾಯಿ

0

ರಾಜ್ಯದಲ್ಲಿ ಮಳೆಯಿಂದ ಆಗಿರುವ ಬೆಳೆ ಹಾನಿಯ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟು ಬೇಗ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿ ಬೇಗನೆ ಕೆಡುವ ಹಣ್ಣು ತರಕಾರಿ ಮತ್ತು ಇತರ ವಸ್ತುಗಳ ಬಗ್ಗೆಯೂ ಸಂಪೂರ್ಣ ವರದಿ ಸಲ್ಲಿಸುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಭತ್ತದ ಹಾಗೂ ಇತರೆ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತು ಮಹತ್ವದ ಸಭೆ ನಡೆಸಲಾಗುತ್ತಿದೆ. ಬೆಳೆ ಹಾನಿಯಿಂದಾಗಿ ತರಕಾರಿ ಹಣ್ಣುಗಳು ಹಾಗೂ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಬೆಳೆ ಪರಿಹಾರದ ಬಗ್ಗೆ ಪತ್ರ ಬರೆಯುವುದಕ್ಕೆ ಮೊದಲೇ ಬೆಳೆ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಕೃಷಿ ವಿಚಕ್ಷಣಾದಳ ಸಭೆ: ಸಚಿವರ ಸೂಚನೆ.

0

ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆಯಾದ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಿಗಾದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಿಗೊಳಿಸಲು ತಿಳಿಸಿದರು.

ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿ ಅವುಗಳನ್ನು ಬುಡಸಹಿತ ಕಿತ್ತು ಹಾಕಬೇಕು. ರೈತರಿಗೆ ಅನ್ಯಾಯ ವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಾಗಲಿ, ಇನ್ಯಾರೇ ಆಗಲಿ ಶಾಮಿಲ್ ಆಗದಂತೆ ನೋಡಿಕೊಂಡು ತಪ್ಪಿತಸ್ಥರ ವಿರುದ್ಧ ರ್ನಿದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ “ಟೋಲ್ ಫ್ರೀ- ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಿ ಕೋಶಕ್ಕೂ ವಿಸ್ತರಿಸುವಂತೆ ಈ ಸಭೆಯಲ್ಲಿ ಸಚಿವರು ಸೂಚಿಸಿದರು.

ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಜನಪ್ರತಿನಿಧಿಗಳಿಗೆ, ಪ್ರಧಾನಿ ಕಿವಿಮಾತು

0

ಅಖಿಲ ಭಾರತ ಶಾಸನಸಭೆಗಳ 82ನೇ ಸಮ್ಮೇಳನ ಶಿಮ್ಲಾದಲ್ಲಿ ನಡೆಯಿತು. ಈ ಸಮ್ಮೇಳನವನ್ನು ಉದ್ದೇಶಿಸಿ ಮಾನ್ಯ ಪ್ರಧಾನ ಮಂತ್ರಿಯವರು ಆನ್ಲೈನ್ ಮುಖಾಂತರ ಮಾತನಾಡಿದರು.

“ಭಾರತೀಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳು ಸಂಸತ್ ಕಲಾಪಗಳನ್ನು ಬಹಳ ಸಾರಿ ಹಾಳುಗೆಡವುತ್ತಿದ್ದಾರೆ. ಏಕ ಭಾರತ, ಶ್ರೇಷ್ಠ ಭಾರತ ಮಂತ್ರಕ್ಕೆ ಪೂರ್ವಕವಾಗಿ ಜನ ಪ್ರತಿನಿಧಿಗಳು ಮನೆಯಲ್ಲಿ ಮತ್ತು ಸಾರ್ವಜನಿಕ ಜೀವನದಲ್ಲಿ ವರ್ತಿಸಬೇಕಿದೆ. ದೇಶದಲ್ಲಿ ವಿಭಿನ್ನ ಧ್ವನಿಗಳು, ಭಿನ್ನಾಭಿಪ್ರಾಯಗಳು ಇರುವುದು ಸಾಧಾರಣ. ಇದೆ ಈ ದೇಶದ ಶಕ್ತಿ. ವಿವಿಧತೆಗೆ ನಮ್ಮ ಸಂಘಟನಾ ಶಕ್ತಿ ಎನ್ನುವುದನ್ನು ಸಂಸದರು, ಶಾಸಕರು ಅಧಿಕಾರಿಗಳು ಮರೆಯಬಾರದು ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ ಬಹಳ ಪ್ರಮುಖವಾಗಿವೆ. ನಾವೆಲ್ಲರೂ ಒಂದೇ ಮಂತ್ರದೊಂದಿಗೆ ಪೂರ್ಣ ಬದ್ಧತೆ ಪ್ರದರ್ಶಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ. ನಮ್ಮ ಮಂತ್ರ, ಜವಾಬ್ದಾರಿ ನಿರ್ವಹಣೆ ಮಾತ್ರವೇ ಆಗಿರಬೇಕು ಎಂದು ಪ್ರಧಾನಿಯವರು ಕಿವಿಮಾತು ಹೇಳಿದ್ದಾರೆ.

ಫೋಟೋಗ್ರಫಿಯ ರೋಚಕ ಕ್ಷಣಗಳು

0

ಕಲಿಮ್ ಉಲ್ಲಾ ಮೂಲತಃ ತರಿಕೆರೆಯವರು. ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡದ ಮೇಷ್ಟ್ರು. ಕಥೆ, ಪ್ರಬಂಧ, ಲೇಖನಗಳ ಜೊತೆಗೆ ವೈಲ್ಡ್ ಲೈಫ್ ಫೋಟೋಗ್ರಫಿ ಇವರ ಹವ್ಯಾಸಗಳು. ತರಗತಿಗಳಲ್ಲಿ ನ ಇವರ ಜೀವನಾನುಭವಗಳು ಪ್ರಜಾವಾಣಿ ಪತ್ರಿಕೆಯಲ್ಲಿ “ಕ್ಲಾಸ್ ಟೀಚರ್” ಎಂಬ ಅಂಕಣವಾಗಿ ಸಾಕಷ್ಟು ಹೆಸರು ಮಾಡಿತು. ಮುಂದೆ ಕ್ಲಾಸ್ ಟೀಚರ್ ಹೆಸರಿನ ಪುಸ್ತಕ ಪ್ರಕಟಗೊಂಡು ಜನಪ್ರಿಯವಾಗಿ ಎರಡು ಮುದ್ರಣಗಳನ್ನು ಕಂಡಿದೆ. 2016ನೇ ಸಾಲಿನ ರಾಜ್ಯಮಟ್ಟದ ಮುಸ್ಲಿಂ ಸಾಹಿತ್ಯ ಪ್ರಶಸ್ತಿಯನ್ನೂ ಗಳಿಸಿದ ಈ ಕೃತಿಯ ಎರಡು ಪ್ರಬಂಧಗಳು ಕ್ರಮವಾಗಿ ಕುವೆಂಪು ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳ ಭಾಗವಾಗಿವೆ. ಕಲಿಮ್ ಉಲ್ಲಾ ಪೂರ್ಣಚಂದ್ರ ತೇಜಸ್ವಿಯವರ ಕಥನಗಳ ಮೇಲೆ ವಿಶೇಷ ಸಂಶೋಧನೆ ಮಾಡಿ ಎಂ.ಫಿಲ್. ಹಾಗೂ ಪಿ.ಹೆಚ್.ಡಿ. ಗಳಿಸಿದ್ದಾರೆ.
ವನ್ಯ ಪ್ರಾಣಿಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಎಂದರೆ ಜೀವನ ಮರಣದ ಸವಾಲು. ಅಂತಹ ರೋಚಕ ಕ್ಷಣವನ್ನು ಇವರ ಬರಹದಲ್ಲಿ ಕಾಣಬಹುದು.

ಫೋಟೋಗ್ರಫಿಯ ರೋಚಕ ಕ್ಷಣಗಳು
ಫೊಟೋಗ್ರಫಿಯ ಹುಚ್ಚು ನೆತ್ತಿಗೇರಿದ ನಂತರ ನಾ ಹಿಡಿದ ಹಾದಿ ಕಾಡಾಗಿತ್ತು. ಕಾಡಿನ ಬದುಕೇ ಒಂದು ರೋಚಕ ಅನುಭವ. ಮನುಷ್ಯ ಲೋಕ ಕೊಡುವ ಮಾಲಿನ್ಯಗಳ ಮರೆಸುವ ಮದ್ದು ಕಾಡ ಮಡಿಲು ಕೊಡಬಲ್ಲದು. ನಮಗೆ ಬೇಕಾದ ಹಕ್ಕಿಯನ್ನೋ ಪ್ರಾಣಿಯನ್ನೋ ಹಾವನ್ನೋ ಹುಡುಕುವ ತವಕವೇ ಒಂದು ರೋಮಾಂಚನ. ಬಯಸಿದ್ದು ಸಿಕ್ಕರೆ ಮತ್ತಷ್ಟು ಖುಷಿ. ಸಿಗದೆ ಹೋದರೆ ಆ ವಿರಹವೂ ಒಂದು ಸವಿ. ಕೆಲವೊಮ್ಮೆ ನಿರೀಕ್ಷಿಸದ ಮತ್ತೇನೋ ಸಿಕ್ಕು ಹುಟ್ಟುವ ಸಂತಸ ಹೇಳತೀರದ್ದು. ಬದುಕು ಸದಾ ಅನಿರೀಕ್ಷಿತಗಳ ಬಯಸುತ್ತದೆ. ಮನಸ್ಸು ಹೊಸದನ್ನು ಹುಡುಕುತ್ತದೆ. ಇದೆಲ್ಲಾ ನನಗೀಗ ಸಿಗುತ್ತಿರುವುದು ಕ್ಯಾಮೆರಾ ಹೊತ್ತು ನಡೆದ ಮೇಲೆಯೇ.
ಒಮ್ಮೆ ಹಿಮಾಲಯದ ಸೆರಗಲ್ಲಿ ನಿಂತು ಗೋಲ್ಡ್‌ ಪಿಂಚ್‌ ಎಂಬ ಬಣ್ಣದ ಹಕ್ಕಿಗಾಗಿ ಕಾಯುತ್ತಿದೆ. ಅಕಸ್ಮಾತ್‌ ಕಾಲ ಕೆಳಗೊಮ್ಮೆ ಬಗ್ಗಿ ನೋಡಿದಾಗ ಅಚ್ಚರಿ ಯಾಯಿತು. ಅವು ಪ್ರಾಣಿಯ ಕಾಲಿನ ಹೆಜ್ಜೆಯ ಗುರುತುಗಳಾಗಿದ್ದವು. ನಾನು ಬರುವ ಕೆಲವೇ ನಿಮಿಷಗಳ ಮೊದಲು ಅಲ್ಲಿಂದ ಹಿಮ ಚಿರತೆಯೊಂದು ಹಾದು ಹೋಗಿತ್ತು. ನಾನೊಮ್ಮೆ ಸಿಕ್ಕಿದ್ದರೆ ನನ್ನ ಫೋಟೋಗೆ ಮಾಲೆ ಆ ದಿನವೇ ಖಂಡಿತಾ ಬಿದ್ದಿರುತ್ತಿತ್ತು!
ಮತ್ತೊಮ್ಮೆ ಬೆಳ್ಳಂಬೆಳಗ್ಗೆ ಗಣೇಶ ಗುಡಿಯಲಿ ನಡೆದು ಹೋಗುವ ದಾರಿಯಲ್ಲಿ ಮಂಜು ಕವಿದಿತ್ತು. ಅಸ್ಪಷ್ಟ ಆಕೃತಿಗಳು ಓಡಾಡುತ್ತಿದ್ದವು. ಮೊದಲಿಗೆ ಅವು ಊರ ನಾಯಿಗಳರಬಹುದೆಂದು ಅಂದಾಜಿಸಿದೆ. ಕ್ಯಾಮೆರಾ ಹಿಡಿದು ಒಂದು ಚಿತ್ರ ತೆಗೆದು ನೋಡಿದಾಗ ಅವು ಚಿರತೆಗಳೆಂದು ಗೊತ್ತಾಯಿತು. ತಾಯಿ ತನ್ನ ಮೂರು ಮರಿಗಳ ಜೊತೆ ಆಟವಾಡುತ್ತಿತ್ತು. ನನಗೆ ತಿರುಗಿ ಓಡುವುದೋ, ನಿಂತು ಪಟ ತೆಗೆಯುವುದೋ? ಗೊತ್ತಾಗದೆ ಅರೆ ಕ್ಷಣದಲ್ಲಿ ಜೀವ ಬಾಯಿಗೆ ಬಂದಿತ್ತು. ಆದದ್ದಾಗಲಿ ಎಂದು ಭಂಡ ದೈರ್ಯ ಮಾಡಿ ಫೋಟೋ ತೆಗೆದೆ. ನನ್ನಷ್ಟೇ ಗಾಬರಿಯಾಗಿದ್ದ ಮರಿ ಚಿರತೆ ದೂರದಲ್ಲಿ ಕೂತು ನನ್ನನ್ನೇ ದಿಟ್ಟಿಸುತ್ತಿತ್ತು. ಫೊಟೋಗ್ರಫಿಯ ನಿಜವಾದ ರೋಚಕತೆ ಅರ್ಥವಾಗಿದ್ದು ಆಗಲೇನೆ.
ಮತ್ತೊಮ್ಮೆ ಜೀಪಿನಲ್ಲಿ ಕೂತು ಪಟ ತೆಗೆಯುವಾಗ ಚಿರತೆ ನನ್ನ ಕಡೆಗೇ ನಡೆದು ತೀರ ಹತ್ತಿರಕ್ಕೆ ಬಂದಿತು. ನಾನು ಜಿದ್ದಿಗೆ ಬಿದ್ದು ಕ್ಲಿಕ್ಕಿಸುತ್ತಲೇ ಇದ್ದೆ. ಮತ್ತೊಮ್ಮೆ ಆಗಿದ್ದಾಗಲಿ ಎಂಬ ಜಗಭಂಡತನ. ತೀರಾ ಸಮೀಪಕ್ಕೆ ಬಂದು ಪಕ್ಕದಿಂದ ಹಾದು ಹೋದ ಮೇಲೆ ಭಯವಾಗಿದ್ದಂತೂ ನಿಜ. ಕ್ಯಾಮೆರಾ ಕೊಡುವ ಹುರುಪು, ದೈರ್ಯಗಳು ಸರಿಯೋ ತಪ್ಪೋ ಗೊತ್ತಿಲ್ಲ. ಮತ್ತೊಮ್ಮೆ ಆನೆ ಅಟ್ಟಿಸಿಕೊಂಡು ಬಂದಾಗ ಹಠಕ್ಕೆ ಬಿದ್ದು ಪಟ ಕ್ಕಿಕ್ಕಿಸುತ್ತಲೇ ಇದ್ದೆ. ಕೊನೆ ಗಳಿಗೆಯಲ್ಲಿ ಅಂತೂ ಬಚಾವು. ಇಂತಹ ಅನೇಕ ಸಂಗತಿಗಳು ವೈಲ್ಡ್‌ ಲೈಫ್‌ ಫೋಟೋಗ್ರಫಿಯಲ್ಲಿ ನಡೆಯುತ್ತಲೇ ಇರುತ್ತವೆ.

ಪರಿಚಯ:
ಕಲಿಮ್ ಉಲ್ಲಾ ಮೂಲತಃ ತರಿಕೆರೆಯವರು. ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡದ ಮೇಷ್ಟ್ರು. ಕಥೆ, ಪ್ರಬಂಧ, ಲೇಖನಗಳ ಜೊತೆಗೆ ವೈಲ್ಡ್ ಲೈಫ್ ಫೋಟೋಗ್ರಫಿ ಇವರ ಹವ್ಯಾಸಗಳು. ತರಗತಿಗಳಲ್ಲಿ ನ ಇವರ ಜೀವನಾನುಭವಗಳು ಪ್ರಜಾವಾಣಿ ಪತ್ರಿಕೆಯಲ್ಲಿ “ಕ್ಲಾಸ್ ಟೀಚರ್” ಎಂಬ ಅಂಕಣವಾಗಿ ಸಾಕಷ್ಟು ಹೆಸರು ಮಾಡಿತು. ಮುಂದೆ ಕ್ಲಾಸ್ ಟೀಚರ್ ಹೆಸರಿನ ಪುಸ್ತಕ ಪ್ರಕಟಗೊಂಡು ಜನಪ್ರಿಯವಾಗಿ ಎರಡು ಮುದ್ರಣಗಳನ್ನು ಕಂಡಿದೆ. 2016ನೇ ಸಾಲಿನ ರಾಜ್ಯಮಟ್ಟದ ಮುಸ್ಲಿಂ ಸಾಹಿತ್ಯ ಪ್ರಶಸ್ತಿಯನ್ನೂ ಗಳಿಸಿದ ಈ ಕೃತಿಯ ಎರಡು ಪ್ರಬಂಧಗಳು ಕ್ರಮವಾಗಿ ಕುವೆಂಪು ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳ ಭಾಗವಾಗಿವೆ. ಕಲಿಮ್ ಉಲ್ಲಾ ಪೂರ್ಣಚಂದ್ರ ತೇಜಸ್ವಿಯವರ ಕಥನಗಳ ಮೇಲೆ ವಿಶೇಷ ಸಂಶೋಧನೆ ಮಾಡಿ ಎಂ.ಫಿಲ್. ಹಾಗೂ ಪಿ.ಹೆಚ್.ಡಿ. ಗಳಿಸಿದ್ದಾರೆ.
ವನ್ಯ ಪ್ರಾಣಿಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಎಂದರೆ ಜೀವನ ಮರಣದ ಸವಾಲು. ಅಂತಹ ರೋಚಕ ಕ್ಷಣವನ್ನು ಇವರ ಬರಹದಲ್ಲಿ ಕಾಣಬಹುದು.