Saturday, February 21, 2026
Saturday, February 21, 2026
Home Blog Page 207

Shri Raghavendra Swami ಎಂ.ಎನ್.ಸುಂದರ ರಾಜ್ ವಿರಚಿತ “ಗುರುಕಾರುಣ್ಯ” ಅಪರೂಪದ ಪುಸ್ತಕ- ಬಿಂದು ವಿಜಯ ಕುಮಾರ್

0

Shri Raghavendra Swami ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಯ ಪ್ರಯುಕ್ತ ಒಂದು ಮಠಕ್ಕೆ ಹೋಗಿದ್ದೆ ಅಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಕುರಿತಾದ “ಗುರು ಕಾರುಣ್ಯ” ಎಂಬ ಪುಸ್ತಕ ಇಟ್ಟಿದ್ದರು. ಅದನ್ನು ಕೊಳ್ಳಲು ಭಕ್ತರು ನೂಕು ನುಗ್ಗಲು. ನಾನು ಅಲ್ಲಿ ಹೋಗಿ ನೋಡಿದಾಗ ಆ ಕೃತಿಯನ್ನು ಬರೆದವರು ನನ್ನ ಗುರುಗಳು ಮತ್ತು ಲೇಖಕರು ಆದ ಎಂ.ಎನ್.ಸುಂದರ ರಾಜ ಅವರು.
ಆ ಪುಸ್ತಕವನ್ನು ನಾನು ಕೊಂಡೆ. ಪುಟಗಳನ್ನು ಒಳ ತೆರೆದಂತೆ ರಾಯರ ಕುರಿತು ಅತ್ಯಂತ ಮನೋಜ್ಞವಾಗಿ ಬರೆದ ಕೃತಿಯಾಗಿತ್ತು. ಪ್ರಾರಂಭದಲ್ಲೇ ಮಂತ್ರಾಲಯ ಶ್ರೀಗಳ ಅನುಗ್ರಹ ಸಂದೇಶವು ಇತ್ತು. ನನಗೆ ತುಂಬಾ ಸಂತೋಷವಾಗಿ ಸುಂದರ ರಾಜ್ ಅವರಿಗೆ ಫೋನ್ ಮಾಡಿದೆ. ಆಗ ತಿಳಿದ ವಿಷಯವೇನೆಂದರೆ ಶ್ರೀಯುತರು 1000 ಪ್ರತಿಗಳನ್ನು ಮುದ್ರಿಸಿ ಚಿತ್ರದುರ್ಗ, ಬೆಂಗಳೂರು, ಶಿವಮೊಗ್ಗ, ಆಯನೂರು, ಬಾಳಗಾರು ಮುಂತಾದ ಕಡೆ ಇರುವ ಶ್ರೀ ರಾಘವೇಂದ್ರ ಸ್ವಾಮಿಗಳ ಎಂಟು ಮಠಗಳಿಗೆ ತಲಾ 100ರಂತೆ ಕಳಿಸಲಾಗಿದೆ ಎಂದು ತಿಳಿಯಿತು. ಇದುವರೆಗೂ ಅಲ್ಲಿ ಕಳಿಸಿದ ಪುಸ್ತಕಗಳು ಸುಮಾರು 850 ಕೇವಲ ಒಂದೇ ದಿನದಲ್ಲಿ ಮಾರಾಟವಾಗಿ, ಮತ್ತೆ ಬೇಡಿಕೆ ಬಂದಿರುವುದಾಗಿ ಗೊತ್ತಾಯಿತು. ಆ ಮಾರಾಟದಿಂದ ಬಂದ ಹಣವನ್ನು ಅದೇ ಮಠಕ್ಕೆ ಕಾಣಿಕೆಯಾಗಿ ನೀಡಿರುವುದಾಗಿ ತಿಳಿಸಿದಾಗ ನನಗೆ ತುಂಬಾ ಆಶ್ಚರ್ಯವಾಯಿತು. ಒಂದು ಕೃತಿ ಕೇವಲ ಒಂದೇ ದಿನದಲ್ಲಿ 850 ಪ್ರತಿಗಳು ಮಾರಾಟವಾಗಿದೆ ಎಂದರೆ ನಂಬಲು ಸಾಧ್ಯವಾಗಲಿಲ್ಲ ಆದರೆ ಅದು ಸತ್ಯದ ಸಂಗತಿಯಾಗಿತ್ತು. ” ಗುರು ಕಾರುಣ್ಯ ” ಎಂಬ ಹೆಸರಿನ ಈ ಕೃತಿ ರಾಘವೇಂದ್ರ ಸ್ವಾಮಿಗಳ ಸೂಕ್ಷ್ಮವಾದ ಜೀವನ ಚರಿತ್ರೆ. ಅವರ ಜೀವನದಲ್ಲಿ ನಡೆದ ಅಪರೂಪದ ಘಟನೆಗಳು, ಮಂತ್ರಾಕ್ಷತೆಯ ಮಹತ್ವ, ರಾಯರು ಬರೆದಿರುವ ಸುಮಾರು 24 ಕೃತಿಗಳ ಸೂಕ್ಷ್ಮ ಪರಿಚಯ ಇವೆಲ್ಲವುಗಳನ್ನು ಒಳಗೊಂಡಿದೆ ಅಲ್ಲದೆ ರಾಘವೇಂದ್ರ ಸ್ವಾಮಿಗಳನ್ನು ಸಮೀಪದಿಂದ ನೋಡಿದ ಮತ್ತು ಅವರ ಜೊತೆಯಲ್ಲಿ ಇದ್ದ ಲಕ್ಷ್ಮಿನಾರಾಯಣಚಾರ್ಯ ಅವರು ಬರೆದಿರುವ “ಶ್ರೀ ರಾಘವೇಂದ್ರ ವಿಜಯ”ದ ಕೆಲವು ಭಾಗಗಳನ್ನು ಸಹ ಈ ಕೃತಿಯಲ್ಲಿ ಮುದ್ರಿಸಲಾಗಿದೆ.

Shri Raghavendra Swami ನನಗೆ ತುಂಬಾ ಸಂತೋಷದ ವಿಚಾರವಾದದ್ದು 50 ರೂಪಾಯಿ ಬೆಲೆಯ ಈ ಕೃತಿ ಬಹುಬೇಗ ಮಾರಾಟವಾಗಿ ದಾಖಲೆ ನಿರ್ಮಿಸಿದ್ದು. ಅಂದರೆ ರಾಯರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕೃತಿಯನ್ನು ಕೊಂಡು ಓದಿ ಪುನೀತರಾಗುವುದು. ಈಗಲೂ ಈ ಕೃತಿ ಪಡೆಯಲು ಹೆಚ್ಚು ಜನ ಉತ್ಸುಕರಾಗಿ ಮತ್ತಷ್ಟು ಕೃತಿಗಳಿಗೆ ಬೇಡಿಕೆ ಇಟ್ಟಿರುವುದು ತಿಳಿದುಬಂತು. ಅಂದರೆ ಒಂದು ಕೃತಿ ಚೆನ್ನಾಗಿದ್ದರೆ, ಮೌಲ್ಯಯುತವಾಗಿದ್ದರೆ ಅದನ್ನು ಓದುವವರ ಸಂಖ್ಯೆ ಇರುವುದು ಸಮಾಧಾನಕರ ವಿಷಯ.
ಈ ಕೃತಿ ಎಲ್ಲರೂ ಓದುವಂತಹದ್ದು ಮತ್ತು ಸುಲಭವಾಗಿ ತಿಳಿಯುವಂತದ್ದು. ಇಂತಹ ಒಂದು ಸುಂದರ ಕೃತಿಯನ್ನು ರಚಿಸಿದ ಶ್ರೀಯುತರಿಗೆ ನಾನು ಅಭಿವಂದಿಸುತ್ತೇನೆ. ಉಡುಪಿ ರಚನಾ ಮಾಡಿ ಮುದ್ರಿಸಿ, ಅದನ್ನು ಸುಲಭ ಬೆಲೆಗೆ ಎಲ್ಲರಿಗೂ ದೊರೆಯುವಂತೆ ಮಾಡಿ ಅದರಿಂದ ಬಂದ ಹಣ ಆಯಾ ಮಠಗಳಿಗೆ ಕಾಣಿಕೆಯಾಗಿ ನೀಡಿರುವುದು ಒಂದು ಅಪರೂಪದ ಸಂಗತಿಯಾಗಿದೆ. ಇಂಥ ಕೃತಿಗಳು ಹೆಚ್ಚು ಹೆಚ್ಚು ಜನರಿಗೆ ತಲುಪುವಂತಾಗಲಿ ಎಂಬ ಹಾರೈಕೆ ಮಾತ್ರ ನನ್ನದು. ಎಂದು
ಮಾಜಿ ಇನ್ನರ್ ವೀಲ್ ಅಧ್ಯಕ್ಷರಾದ
ಬಿಂದು ವಿಜಯ ಕುಮಾರ್ ತಿಳಿಸಿದ್ದಾರೆ.

Gurudatta Hegde ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬಗಳ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಸೌಹಾರ್ದ ಕರೆ

0

Gurudatta Hegde ಜಿಲ್ಲೆಯಾದ್ಯಂತ ಆಗಸ್ಟ್‌27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌05 ನಡೆಯಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬಗಳ ಸಂದರ್ಭದಲ್ಲಿ ಬೈಕ್‌ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲದೇ ವಿಶೇಷವಾಗಿ ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ತೆಪ್ಪ ಇಟ್ಟುಕೊಂಡಿರಬೇಕು. ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್‌ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದವರು ತಿಳಿಸಿದರು.
ಗಣಪತಿ ಅಥವಾ ಈದ್‌ಮಿಲಾದ್‌ಹಬ್ಬದ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ.
ನಡೆಯುವ ಪ್ರಮುಖ ಬೀದಿಗಳಲ್ಲಿ, ವರ್ತುಲಗಳಲ್ಲಿ ಸಾಕಷ್ಟು ಬೀದಿದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಗತ್ಯವಿರುವಲ್ಲಿ ಡ್ರೋಣ ಕಣ್ಗಾವಲು ಇಡಲಾಗುವುದು ಎಂದರು.
Gurudatta Hegde ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಕೆರೆ, ಕಟ್ಟೆ-ಕಾಲುವೆಗಳು ಸುರಕ್ಷಿತ ತಾಣಗಳಾಗಿರುವ ಬಗ್ಗೆ ಹಾಗೂ ಅಗತ್ಯವಿರುವಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಗಮನಹರಿಸಬೇಕೆಂದವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧರ್ಮಗಳ ಹಬ್ಬ ಆಚರಣೆಗಳು ಶಾಂತಿ-ಸೌಹಾರ್ಧಯುತವಾಗಿ ನಡೆಯುವಲ್ಲಿ ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಸ್ಥಳೀಯ ಪೊಲೀಸ್‌ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಉತ್ಸವ, ಮೆರವಣಿಗೆಗಳು ನಡೆಯುವ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾ, ಬೀದಿದೀಪ ಅಳವಡಿಕೆ ಹಾಗೂ ರಾಜಬೀದಿಗಳ ಸ್ವಚ್ಚತೆ ಹಾಗೂ ಕಲ್ಲುಮಣ್ಣುಗಳ ರಾಶಿಗಳು ಇಲ್ಲದಿರುವಂತೆ ಗಮನಹರಿಸಬೇಕು. ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್‌ಹಾಗೂ ಸ್ಥಳೀಯ ಸಂಸ್ಥೆಗಳಿಂದ ಶುದ್ಧ ಕುಡಿಯುವ ನೀರಿನ ಸ್ಥಾವರಗಳನ್ನು ಅಗತ್ಯವಿರುವಲ್ಲಿ ಸ್ಥಾಪಿಸುವಂತೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಪೊಲೀಸ್‌ಇಲಾಖೆಯು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದರು.
ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತ ಗಮನಹರಿಸಬೇಕು. ಸಂಘ-ಸಂಸ್ಥೆಗಳ ಹಲವು ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಸ್ಥಳೀಯ ಸಂಸ್ಥೆಗಳು ನೀಡಿರುವ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಸೂಚಿಸಬೇಕು. ಸರ್ಕಾರಿ ಸ್ವತ್ತುಗಳಿಗೆ ಹಾನಿ ಉಂಟಾದಲ್ಲಿ ಕಾರ್ಯಕ್ರಮಗಳ ಆಯೋಜಕರೇ ಹೊಣೆಗಾರರಾಗಿದ್ದು, ಅಲ್ಲಿನ ನಷ್ಟವನ್ನು ಭರಿಸಿಕೊಡಲು ಬದ್ದರಾಗಿರಬೇಕು. ಕೆಲವು ಸಂದರ್ಭಗಳಲ್ಲಿ ಮತೀಯ, ಜನಾಂಗೀಯ ವಿಷಯಗಳಿದ್ದಾಗ ಸೂಕ್ಷ್ಮವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಸಂದರ್ಭದಲ್ಲಿ ಪೊಲೀಸ್‌ಇಲಾಖೆಯ ಸಹಕಾರ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.
ಈ ಹಬ್ಬಗಳ ಆಚರಣೆಯ ದಿನಗಳಲ್ಲಿ, ಮೆರವಣಿಗೆ ಸಾಗುವಲ್ಲಿ ವಿದ್ಯುತ್‌ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಗಣಪತಿ ಪ್ರತಿಷ್ಠಾಪನೆಗಾಗಿ ಏಕಗವಾಕ್ಷಿ ಸೌಲಭ್ಯದ ಮೂಲಕ ನಿಬಂಧನೆಗಳಿಗೊಳಪಟ್ಟು ಅನುಮತಿ ನೀಡಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಥರ್ಮೋಕೋಲ್ , ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಪೂಜೆಗೆ ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಇವು ನೈಸರ್ಗಿಕವಾಗಿ ಜೈವಿಕವಾಗಿ ವಿಘಟನೀಯವಲ್ಲದವು ಮತ್ತು ಅವುಗಳು ದೀರ್ಘಕಾಲದವರೆಗೆ ನೀರಿನ ಮೇಲೆ ತೇಲುತ್ತಲೇ ಇರುತ್ತವೆ, ಇದರಿಂದಾಗಿ ಜಲಮೂಲಗಳು ಮತ್ತು ಜಲ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ವಿಗ್ರಹಗಳನ್ನು ಹೆಚ್ಚಾಗಿ ಸೀಸ ಮತ್ತು ಪಾದರಸದಿಂದ ಕೂಡಿದ ಬಣ್ಣಗಳಿಂದ ಅಲಂಕರಿಸಲಾಗುತ್ತದೆ, ಇದು ಜಲಮೂಲಗಳ ಸಸ್ಯ ಮತ್ತು ಪ್ರಾಣಿಗಳನ್ನು ನಾಶಮಾಡುವ ನಿರಂತರ ಪ್ರಕ್ರಿಯೆಗೆ ಕಾರಣವಾಗುತ್ತದೆ.
ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ನೈಸರ್ಗಿಕ ಮಣ್ಣು ಮತ್ತು ಸರಳ ಜೇಡಿಮಣ್ಣಿನಿಂದ ತಯಾರಿಸಲಾಗುತ್ತದೆ, ನೈಸರ್ಗಿಕ ರಾಸಾಯನಿಕಗಳಿಂದ ಅಲಂಕರಿಸಲಾಗುತ್ತದೆ. ಈ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅಥವಾ ಪ್ರಕೃತಿಗೆ ಬಿಟ್ಟಾಗ, ಅವು ಯಾವುದೇ ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡದೆ ಕರಗುತ್ತವೆ. ಪ್ರಕೃತಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ಸ್ಥಳೀಯ ಕುಶಲಕರ್ಮಿಗಳಿಂದ ಪಡೆಯಲಾಗುತ್ತದೆ, ನೈಸರ್ಗಿಕ ಸಸ್ಯ ಆಧಾರಿತ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಸಂಕಲ್ಪ ಮಾಡೋಣ. ಹಸಿರು ಪಟಾಕಿಯನ್ನೇ ಬಳಸೋಣ.

Delhi World School ತಾಯಿ ಭಾರತಿಗೆ ಗೀತೆಗಳ ಆರತಿ. ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳಿಂದ ಗೀತ ಗಾಯನ

0

Delhi World School ಭಾರತ ಸ್ಕೌಟ್ ಅಂಡ್ ಗೈಡ್ ಹಾಗೂ ಮಲ್ನಾಡ್ ಓಪನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದ ತಾಯಿ ಭಾರತಿಗೆ ಗೀತೆಗಳ ಆರತಿ ೧೨ನೇ ಆವೃತ್ತಿ ಕಾರ್ಯಕ್ರಮದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ, ವಿಶೇಷ ಆಹ್ವಾನಿತರಾಗಿ ಮಾಜಿ ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡ, ಸಂಗೀತ ಶಿಕ್ಷಕಿ ರೂಪ ಹೊಳ್ಳ ಸೇರಿದಂತೆ ಹಲವರು ಭಾಗವಹಿಸಿದ್ದರು.

Rotary Club Shimoga Midtown ನಮ್ಮ ಭಾರತ ಪರಿವರ್ತನೆಯೆಡೆಗೆ ಸಾಗುತ್ತಿದೆ- ಮಹಾಲಿಂಗಪ್ಪ

0

Rotary Club Shimoga Midtown ನಮ್ಮ ರಾಷ್ಟ್ರ ಪರಿವರ್ತನೆಯಡೆಗೆ ಸಾಗುತ್ತಿದೆ -ಮಹಾಲಿಂಗಪ್ಪ
ಹಿಂದೆ ವಿದೇಶದಲ್ಲಿ ಭಾರತೀಯರಿಗೆ ಹೆಚ್ಚಿನ ಗೌರವ ಇರಲಿಲ್ಲ. ಆದರೆ ಈಗ ನಮ್ಮ ಪ್ರಜೆಗಳನ್ನು ಕಂಡರೆ ವಿಶೇಷ ಗೌರವದಿಂದ ಭಾರತೀಯರೆ ಎಂದು ನೋಡುತ್ತಿದ್ದಾರೆ, ಇದರಿಂದ ತಿಳಿಯುತ್ತದೆ ನಮ್ಮ ಭಾರತ ದೇಶ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ನ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹಾಲಿಂಗಪ್ಪ ನವರು ಮಾತನಾಡುತ್ತಿದ್ದರು.
ಬೇರೆ ದೇಶದಲ್ಲಿ ನಮ್ಮಂತೆ ಪ್ರಕೃತಿ ಅರಿತು ಯಾವುದೇ ಆಚರಣೆ ಇಲ್ಲ. ನಾಮ್ಮಲ್ಲಿ ಪ್ರಕೃತಿಕ ಬದಲಾವಣೆ ತಕ್ಕಂತೆ ಹಬ್ಬ ಆಚರಿಸುವುದು, ಹೆಣ್ಣುಮಕ್ಕಳಿಗೆ, ಹಿರಿಯರಿಗೆ ಗೌರವ ನೀಡುವ ಸಂಸ್ಕೃತಿ ಹೊಂದಿರುವ ದೇಶ ಬೇರೊಂದಿಲ್ಲ. ಕಂಕಣ ಕಟ್ಟಿ ಪೂಜೆ ಮಾಡುತ್ತೇವೆ. ಅದೇ ರೀತಿ ದೇಶ ಕಾಯಲು ಸದಾ ಕಂಕಣ ಕಟ್ಟಿರ ಬೇಕು.
Rotary Club Shimoga Midtown ರಕ್ಷ ಬಂಧನಕ್ಕೆ ಹಲವಾರು ಕಥೆಗಳಿವೆ ಶ್ರೀಕೃಷ್ಣನಿಗೆ, ಸುಭದ್ರೆ ತಾನು ಉಟ್ಟ ದಾವಣಿ ತುದಿ ಹರಿದು ಕೃಷ್ಣನಿಗೆ ಕಟ್ಟಿ ತನ್ನ ರಕ್ಷಣೆ ಕೊನೆಯತನಕ ನಿನ್ನದೆ ಎಂದು ಕೋರಿಕೆ ಸಲ್ಲಿಸಿದ್ದಳು ಎಂದು ಪ್ರತಿಥಿ ಇದೆ. ಪರಿಸರದ ಭಾಗವಾಗಿ ನಾವು ಮೌಲ್ಯ ಕಂಡು ಕೊಂಡಿದ್ದೆವೆ. ಸ್ವಾಮಿ ವಿವೇಕಾನಂದರು ಚಿಕಾಗೊದಲ್ಲಿ ಭಾಷಣ ಮಾಡಿ ಪ್ರಪಂಚವೇ ಕೊಂಡಾಡುವಾಗ, ನಮ್ಮ ದೇಶದಲ್ಲಿಯು ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲು ಶಿಷ್ಯವೃಂದ ತಯಾರಿ ನಡೆಸಿ, ಸಾರೋಟಿನಲ್ಲಿ ಕೂರಿಸಿಕೊಂಡು ತಾವೇ ಏಳೆದೊಯ್ಯಲು ಸಿದ್ದರಾಗಿದ್ದಾಗ, ಅವರು ಹಡಗಿನಿಂದ ಇಳಿದು ದೂರದಲ್ಲಿದ್ದ ಮಣ್ಣಿನಲ್ಲಿ ಹೊರಳಾಡಿ, ಮಲೀನವಾಗಿದ್ದ ದೇಹ, ನನ್ನ ಮಾತೃ ಭೂಮಿ ಮಣ್ಣುತಾಗಿ ಪವಿತ್ರನಾದೆ ಎಂದರಂತೆ.
ಆದರೆ ಇತ್ತೀಚೆಗೆ ನಾಗರೀಕರಲ್ಲಿ ಶಿಷ್ಟಚಾರ ಕಡಿಮೆಯಾಗುತ್ತಿದೆ. ಕಸದ ವಿಲೇವರಿಗಿಂತ ಮುಂಚೆ, ಅದರ ಉತ್ಪತಿಯನ್ನು ಕಡಿಮೆ ಮಾಡುವ ಬಗ್ಗೆ ಗಮನ ಹರಿಸಿ. ಹೀಗೆ ಚಿಕ್ಕ ಚಿಕ್ಕ ವಿಚಾರಗಳಲ್ಲಿ ಪರಿವರ್ತನೆ ತಂದು ದೇಶದ ಗೌರವ ಕಾಪಾಡುವ ಜವಾಬ್ದಾರಿ ನಮ್ಮ ನಾಗರೀಕರದೆ ಎಂದರು. ಅಧ್ಯಕ್ಷತೆ ವಹಿಸಿದ್ದ ರೊ.ಬಿ.ಎಸ್.ಅಶ್ವಥ್ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಉಮೇಶ್ ವಂದಿಸಿದರು. ಭಾರದ್ವಾಜ್, ನಾಗರಾಜ್, ವಿಮಲರೇವರ್ಣಕರ್, ನವೀನ್, ಹೇಮಶೇಖರ್, ಸುಬ್ರಮಣ್ಯ ಮುಂತಾದವರಿದ್ದರು.

Guarantee Scheme ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿಜಾರಿಮಾಡಲು ಅಧಿಕಾರಿಗಳು ಸಹಕರಿಸಿ- ಸಿ.ಎಸ್.ಚಂದ್ರಭೂಪಾಲ್

0

Guarantee Scheme ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು ಇನ್ನೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ತಿಳಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹರನ್ನು ತಲುಪಲು ಅಧಿಕಾರಿಗಳು ಸೇರಿದಂತೆ ಎಲ್ಲರೂ ಸಹಕರಿಸಬೇಕು. ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ ಎಂದರು.
ಜಿಲ್ಲಾ ಮಟ್ಟದ ಉಪಾಧ್ಯಕ್ಷರಾದ ಶಿವಣ್ಣ ಹಾಗೂ ಸದಸ್ಯರಾದ ಶಿವಾನಂದ್ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ರಚನೆಯಾಗುವ ಜಾಗೃತಿ ಸಮಿತಿ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅವರ ಪಾತ್ರವೇನು ಎಂದು ಪ್ರಶ್ನಿಸಿದ ಅವರು ಸಮಿತಿ ಸದಸ್ಯರ ಹೆಸರನ್ನು ಹಾಗೂ ಕುಂದು ಕೊರತೆಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ಆಹಾರ ಇಲಾಖೆಯ ಉಚಿತ ಟೋಲ್‌ಫ್ರೀ ಸಂಖ್ಯೆಯನ್ನು ಸಹ ಪ್ರತಿ ನ್ಯಾಯ ಬೆಲೆ ಅಂಗಡಿಯಲ್ಲಿ ಬರೆಸಬೇಕು ಎಂದರು.
ಉಪಾಧ್ಯಕ್ಷರು ಮತ್ತು ಸದಸ್ಯರು ಮಾತನಾಡಿ, ಸಾಗರ, ತೀರ್ಥಹಳ್ಳಿಗೆ ಬಸ್ ಬಿಡಲು ಕೇಳಿಕೊಂಡಿದ್ದೆವು. ಹಲವೆಡೆ ಸಿಟಿ ಬಸ್ ಬಿಡುವ ಬಗ್ಗೆಯೂ ಕೆಎಸ್‌ಆರ್‌ಟಿಸಿ ಕ್ರಮ ವಹಿಸಿಲ್ಲ. ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.
ಗೃಹಲಕ್ಷಿö್ಮ ಯೋಜನೆಯಡಿ ಐಟಿ/ಜಿಎಸ್‌ಟಿ ಪೇಯೀ ಎಂದು ಸ್ಟೇಟಸ್ ತೋರಿಸುತ್ತಿರುವವರಿಗೆ ಈ ಸೌಲಭ್ಯ ದೊರೆಯುತ್ತಿಲ್ಲ. ಐಟಿ/ಜಿಎಸ್‌ಟಿ ಪಾವತಿ ಮಾಡುತ್ತಿಲ್ಲವೆಂದು ಹಿಂಬರಹ ನೀಡಿದರೂ ಪರಿಗಣಿಸುತ್ತಿಲ್ಲ. ಈ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.
ಸೊರಬ ತಾಲ್ಲೂಕು ಸಮಿತಿ ಸದಸ್ಯರು ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಒಂದು ವಾರವಷ್ಟೇ ಪಡಿತರ ವಿತರಣೆಯಾಗುತ್ತಿದ್ದು ಕೂಲಿ ಕೆಲಸಕ್ಕೆ ಹೋಗುವವರಿಗೆ ಪಡಿತರ ಪಡೆಯಲು ಕಷ್ಟವಾಗುತ್ತಿದೆ. 15 ದಿನವಾದರೂ ಪಡಿತರ ನೀಡುವಂತೆ ಆಗಬೇಕೆಂದರು.
Guarantee Scheme ಶಿವಮೊಗ್ಗ ತಾಲ್ಲೂಕು ಸಮಿತಿ ಅಧ್ಯಕ್ಷ ಹೆಚ್ ಎಂ ಮಧು ಮಾತನಾಡಿ, ತಾಲ್ಲೂಕು ಮಟ್ಟದ ಸಭೆಗೆ ಮೆಸ್ಕಾಂ ಅಧಿಕಾರಿಗಳು ಹಾಜರಾಗುತ್ತಿಲ್ಲ. ತಾಲ್ಲೂಕು ಸಮಿತಿ ಸಭೆಗೆ ಸಂಬAಧಿಸಿದ ಎಲ್ಲ ಅಧಿಕಾರಿಗಳು ಬರಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 401790 ಮಹಿಳೆಯರು ಅಂದರೆ ಶೇ.94.63 ನೋಂದಣಿಯಾಗಿದ್ದು, ಜೂನ್ ಮಾಹೆವರೆಗೆ ರೂ.308416 ಮಹಿಳೆಯರಿಗೆ ಹಣ ಪಾವತಿಯಾಗಿದೆ ಎಂದು ತಿಳಿಸಿದರು.
ಆಹಾರ ಇಲಾಖೆಯ ಉಪನಿರ್ದೇಶಕರಾದ ಅವಿನ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿಯಿಂದ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 1368324 ಜನರು ನೋಂದಣಿಯಾಗಿದ್ದು ಈವರೆಗೆ ಯೋಜನೆಯಡಿ 360.54 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಶಕ್ತಿ ಯೋಜನೆಯಡಿ ಜಿಲ್ಲೆಯಿಂದ ಈವರೆಗೆ 52977358 ಮಹಿಳಾ ಪ್ರಯಾಣಿಕರು ಅಂದರೆ ಶೇ.63.0 ರಷ್ಟು ಫಲಾನುಭವಿಗಳು ಉಚಿತವಾಗಿ ಪ್ರಯಾಣ ಮಾಡಿದ್ದು ನಿಗಮಕ್ಕೆ ರೂ.3797.98 ಕೋಟಿ ಆದಾಯ ಲಭಿಸಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ರಾಮಚಂದ್ರ ತಿಳಿಸಿದರು.
ಮೆಸ್ಕಾಂ ಅಧಿಕಾರಿ ಮಾತನಾಡಿ, ಗೃಹಜ್ಯೋತಿ ಯೋಜನೆಯಡಿ ಈವರೆಗೆ 469298 ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು ಸರ್ಕಾರ ಒಟ್ಟು ರೂ.48104.25 ಕೋಟಿ ವೆಚ್ಚ ಮಾಡಿದೆ ಎಂದು ತಿಳಿಸಿದರು.
ಉದ್ಯೋಗಾಧಿಕಾರಿ ಖಲಂದರ್ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಈವೆರೆಗೆ ಒಟ್ಟು 6894 ಫಲಾನುಭವಿಗಳು ನೋಂದಣಿಯಾಗಿದ್ದು ರೂ.5,59,29,000/- ಗಳನ್ನು ಪಾವತಿಸಲಾಗಿದೆ ಎಂದರು.
ಯುವನಿಧಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ನೋಂದಣಿಯಾಗಲು ಪ್ರೇರೇಪಿಸುವ ಪೋಸ್ಟರ್‌ನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Department of Muzrai ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

0

Department of Muzrai ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ “ಬಿ” ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.12 ರಂದು ಕೊನೆಯ ದಿನವಾಗಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು.
Department of Muzrai ಅರ್ಜಿದಾರನಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ
ನಮೂನೆ-1 (ಬಿ) (22 ನೇ ನಿಯಮ) ರಲ್ಲಿ ಭರ್ತಿ ಮಾಡಬೇಕು.
ನಿಗದಿಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kempegowda Jayanti ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಆಯೋಜನೆ, ಮಾಹಿತಿ

0

Kempegowda Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ 10 ಗಂಟೆಗೆ ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ರಸಪ್ರಶ್ನೆ, ಪ್ರಬಂಧ, ಕವನ ವಾಚನ ಮತ್ತು ಚಿತ್ರಕಲಾ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ.
Kempegowda Jayanti ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್, ಸಾಗರ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು, ರಾಷ್ಟಿçÃಯ ಶಿಕ್ಷಣ ಕಾರ್ಯದರ್ಶಿ, ತಹಸೀಲ್ದಾರ್, ಶಿವಮೊಗ್ಗ ತಾಲ್ಲೂಕು ಇಓ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಧಿಕಾರಿ, ಕಸ್ತೂರಿ ಬಾಲಿಕ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಪ್ರಾಂಶುಪಾಲರು, ಅಧಿಕಾರಿಗಳು, ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳ ಅಧ್ಯಕ್ಷರು ಪಾಲ್ಗೊಳ್ಳುವರು.

Shubha Mangala Kalyana Mantapa ಶುಭ ಮಂಗಳ ಮಂದಿರದಲ್ಲಿ ಸಾಮೂಹಿಕ ವಿವಾಹ.ಅಧಿಕಾರಿಗಳ ಭೇಟಿ & ಪರಿಶೀಲನೆ

0

Shubha Mangala Kalyana Mantapa ಈ ದಿನ ಶಿವಮೊಗ್ಗ ತಾಲೂಕಿನ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ರಾಜೀವ್ ತಹಶಿಲ್ದಾರ್ ರವರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಲಾಗಿ ಎಂಟು ಜೋಡಿಗಳ ವಿವಾಹ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ತಿಳಿಸಿದ್ದು ಎರಡು ಜೋಡಿಗಳು ಅಪ್ರಾಪ್ತರಾಗಿರುವ ಕಾರಣ ಆರು ಜೋಡಿಗಳ ವಿವಾಹವನ್ನು ನಡೆಸಲು ಆಯೋಜಕರಿಗೆ ತಿಳಿಸಲಾಯಿತು .
ಆರು ವಯಸ್ಕ ಜೋಡಿಗಳ ವಿವಾಹವನ್ನು ನಡೆಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Santhosh MS ರಾಷ್ಟ್ರೀಕೃತ ಬ್ಯಾಂಕುಗಳ ವ್ಯವಸ್ಥಾಪಕರಿಗೆ ಖಾಯಂ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಿದ ನ್ಯಾ.ಮಂಜುನಾಥ್ ನಾಯಕ್

0

Santhosh MS ದಿನಾಂಕ 13.8.2025ರಂದು ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಂಜುನಾಥ್ ನಾಯಕ್ ರವರು ಜಿಲ್ಲಾ ವಕೀಲರ ಸಂಘದ ಭವನದಲ್ಲಿ ಶಿವಮೊಗ್ಗ ತಾಲೂಕಿನ ಎಲ್ಲಾ ರಾಷ್ಟ್ರೀಕೃತ ಬ್ಯಾಂಕಿನ ವ್ಯವಸ್ಥಾಪಕರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಲಾದ ಖಾಯಂ ಲೋಕ ಅದಾಲತ್ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಮಂಗಳೂರಿನ ಕಾಯಂ ಲೋಕ ಅದಾಲತ್ನಲ್ಲಿ ಈ ಮುಂಚೆ ಸೇವೆ ಸಲ್ಲಿಸುತ್ತಿದ್ದ ಹಾಗೂ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನಾಯಾಧೀಶರಾಗಿರುವಂತಹ ಶ್ರೀ ಅಭಯ ಧನ್ಪಾಲ ಚೌಗಲಾ ರವರು ಖಾಯಂ ಲೋಕ ಅದಾಲತ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರು ಪಡೆದುಕೊಂಡ ತಮ್ಮ ಅನುಭವವನ್ನು ಹಂಚಿಕೊಂಡು ಖಾಯಂ ಲೋಕ ಅದಾಲತ್ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತು ಅತಿ ವೇಗದಲ್ಲಿ ಪರಿಹಾರವನ್ನು Santhosh MS ಪಡೆದುಕೊಳ್ಳುವ ಉಪಯುಕ್ತ ವೇದಿಕೆಯಾಗಿದೆ ಎಂದು ಎಲ್ಲಾ ವ್ಯವಸ್ಥೆಗಳಿಗೆ ಮಾಹಿತಿಯನ್ನು ನೀಡಿದರು. ಈ ವೇಳೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ರಾಘವೇಂದ್ರ ಸ್ವಾಮಿ ರವರು ಮಾತನಾಡಿ ಖಾಯಂ ಲೋಕ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವಲ್ಲಿ ಎಲ್ಲಾ ವಕೀಲರಿಗೂ ಈ ವಿಷಯದ ಬಗ್ಗೆ ಚರ್ಚೆಯಿಂದಾಗಿ ಹೆಚ್ಚಿನ ಪ್ರಕರಣಗಳು ದಾಖಲಿಸುವಲ್ಲಿ ಅನುಕೂಲವಾಯಿತು ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಶ್ರೀ ಸಂತೋಷ ಎಂ ಎಸ್ ರವರು ಎಲ್ಲರನ್ನು ಸ್ವಾಗತಿಸಿದರು. ಅರೆ ಕಾಲಿಕ ಕಾನೂನು ಸ್ವಯಂಸೇವಕರಾದ ಶ್ರೀ ವೆಂಕಟೇಶ ಎಸ್ ಬಿ ರವರು ವಿಷಯದ ಕುರಿತು ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರಿಗೆ ಮಾಹಿತಿಯನ್ನು ನೀಡಿದರು.

Krishi Nagar Shakthi Ganapathi Temple ಅಂಗಾರಕ ಸಂಕಷ್ಠಿ .ಕೇಷಿ ನಗರ ಶ್ರೀಶಕ್ತಿ ಗಣಪತಿಗೆ ವಿಶೇಷ ಪೂಜೆ- ಟಿ.ಡಿ.ಅರವಿಂದ್.

0

Krishi Nagar Shakthi Ganapathi Temple ವರ್ಷದಲ್ಲಿ ಕೇವಲ ಒಂದೆರಡು ಬಾರಿ ಬರುವ ಅದರಲ್ಲೂ ಮಂಗಳವಾರ ಬಂದಿರುವ ಅಂಗಾರಕ ಸಂಕಷ್ಟಿ ತುಂಬಾ ವಿಶೇಷ ಈ ದಿನದಂದು ಗಣಪತಿಯನ್ನು ಪ್ರಾರ್ಥಿಸಿ ಪೂಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂದು ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದರು ನಿನ್ನೆ ರಾತ್ರಿ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆ.. ಅಲಂಕಾರ ಹಾಗು ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ
Krishi Nagar Shakthi Ganapathi Temple ಭಕ್ತ ಮಹಾಶಯರಿಗೆ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು ಎಂದು ಶ್ರೀ ಶಕ್ತಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿಡಿ ಅರವಿಂದ್ ತಿಳಿಸಿದರು 500ಕ್ಕೂ ಹೆಚ್ಚು ಭಕ್ತರು ಈ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು ಸಮಿತಿಯ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು