Rotary Club Shimoga Midtown ರೋಟರಿ ಕೇವಲ ಒಂದು ಕ್ಲಬ್ ಅಲ್ಲ, ಇದು ಮನುಷ್ಯತ್ವದ ವಿದ್ಯಾಲಯ. ಸದಸ್ಯತ್ವ ಪ್ರವೇಶದ್ವಾರ ಆಗಿದ್ದು, ಸದಸ್ಯರಾದ ನಂತರ ಸ್ನೇಹ, ಸೇವೆ, ಮೌಲ್ಯಗಳು ಮತ್ತು ಮಾನವೀಯತೆಯ ಮಹಾದಾರಿ ತೆರೆದುಕೊಳ್ಳುತ್ತದೆ ಎಂದು ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರೋಟರಿ ಪ್ರಪಂಚಾದ್ಯಂತ ಆರೋಗ್ಯ, ಶಿಕ್ಷಣ, ಶುದ್ಧ ನೀರು, ಶಾಂತಿ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಒಬ್ಬ ಸಾಮಾನ್ಯ ಸದಸ್ಯನು ಸೇವಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಬ್ರಹ್ಮಕುಮಾರಿ ಸಂಸ್ಥೆಯ ಸ್ವಾತಿ ಅಕ್ಕ ಮಾತನಾಡಿ, ಬ್ರಹ್ಮಕುಮಾರಿ ಸಂಸ್ಥೆಯು ವಿಶ್ವಾದ್ಯಂತ ತನ್ನ ಕಾರ್ಯ ವೈಖರಿಯಿಂದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಪ್ರೀತಿ ಬೆಸೆದಿದೆ. ಸಹೋದರ ಸಹೋದರಿಯರ ಬಾಂಧವ್ಯದ ಸಂಕೇತವಾದ ರಾಖಿ, ಕೇವಲ ರಕ್ಷಣೆಯ ದಾರವಲ್ಲ, ಅದು ಪ್ರೀತಿ, ವಿಶ್ವಾಸ ಮತ್ತು ಬದ್ಧತೆಯ ಪ್ರತೀಕ. ರಾಖಿ ಕಟ್ಟುವುದು ಹೃದಯಗಳನ್ನು ಕಟ್ಟುವುದು, ಆತ್ಮೀಯ ಸಂಬಂಧಗಳನ್ನು ಗಟ್ಟಿಗೊಳಿಸುವುದು ಎಂದು ತಿಳಿಸಿದರು.
Rotary Club Shimoga Midtown ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ರೋಟರಿ ಸೇವಾ ಪ್ರೇರಣೆ ಮತ್ತು ರಾಖಿ ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುತ್ತಿದ್ದೇವೆ. ಇದು ನಮ್ಮ ಕ್ಲಬ್ನ ವೈಶಿಷ್ಟ್ಯ ಮತ್ತು ಹೆಮ್ಮೆ ಎಂದು ಹೇಳಿದರು.
ಕಾರ್ಯಕ್ರಮವು ಸೇವಾ ತತ್ವ, ಸ್ನೇಹದ ಬಾಂಧವ್ಯ ಹಾಗೂ ಸಂಸ್ಕೃತಿಯ ಅರ್ಥಪೂರ್ಣ ಸಂಗಮವಾಗಿತ್ತು. ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಕಾರ್ಯದರ್ಶಿ ನಿತಿನ್ ಯಾದವ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಆನಂದ್ಮೂರ್ತಿ, ವಲಯ ಸೇನಾನಿ ಎಸ್.ಪಿ.ಶಂಕರ್, ಮಾಜಿ ಅಧ್ಯಕ್ಷ ಬಸವರಾಜ್ ಎಂ.ಆರ್., ನಾಗರಾಜ್ ಎಂ., ಧನರಾಜ್ ಬಿ.ಜಿ, ದೇವೇಂದ್ರಪ್ಪ ಆರ್, ಸಿ.ಎನ್ ಮಲ್ಲೇಶ್, ರೋಟರಿ ಸದಸ್ಯರು, ಇನ್ನರ್ವೀಲ್ ಸಹೋದರಿಯರು, ಬ್ರಹ್ಮಕುಮಾರಿ ಕುಟುಂಬ, ಯೋಗ ಕೇಂದ್ರದ ಸದಸ್ಯರು ಇದ್ದರು.
Rotary Club Shimoga Midtown ರೋಟರಿ ಕ್ಲಬ್ ,ಕೇವಲ ಕ್ಲಬ್ ಅಲ್ಲ. ಮನುಷ್ಯತ್ವದ ದೇವಾಲಯ-ವಸಂತ ಹೋಬಳಿದಾರ್
World Elephant Day 2025 ಆನೆ- ಮಾನವ ಸಂಘರ್ಷ ನಿರ್ವಹಣೆ & ಸಹಬಾಳ್ವೆಯ ಸಂದೇಶ ಸಾರುವ ದಿನವೇ ಆನೆಗಳಿಗೆ ಗೌರವ ಸಲ್ಲಿಸುವ ದಿನ- ಕೆ.ಟಿ.ಹನುಮಂತಪ್ಪ
World Elephant Day 2025 ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ ದಿನ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ ಟಿ ಹನುಮಂತಪ್ಪ ತಿಳಿಸಿದರು.
ಕರ್ನಾಟಕ ಅರಣ್ಯ ಇಲಾಖೆ, ಶಿವಮೊಗ್ಗ ವನ್ಯಜೀವಿ ವಿಭಾಗ, ಶಿವಮೊಗ್ಗ ವನ್ಯಜೀವಿ ಉಪ ವಿಭಾಗ ಸಕ್ರೆಬೈಲು ವನ್ಯಜೀವಿ ವಲಯ ಇವರ ವತಿಯಿಂದ ಮಂಗಳವಾರ ಸಕ್ರೆಬೈಲಿನಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಆನೆ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಕ್ರೆಬೈಲು ಆನೆ ಶಿಬಿರವು ತುಂಗಾ ನದಿಯ ದಂಡೆಯಲ್ಲಿ ಸ್ಥಾಪಿತವಾಗಿದ್ದು ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಪ್ರಕೃತಿ ಪ್ರಿಯರು ಮತ್ತು ವನ್ಯಜೀವಿ ಉತ್ಸಾಹಿಗಳಿಗೆ ಆನೆಗಳ ಜೀವನ ಕ್ರಮ ಹಾಗೂ ಸಂರಕ್ಷಣೆ ಕುರಿತು ತಿಳಿದುಕೊಳ್ಳುವುದರ ಜೊತೆಗೆ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಅತ್ಯುತ್ತಮ ಸ್ಥಳವಾಗಿದೆ.
ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ. ಪಳಗಿಸಿದ ಆನೆಗಳು ಆನೆ ಸೆರೆ ಕಾರ್ಯಾಚರಣೆ, ಉಪಟಳ ನೀಡುವ ಆನೆ ಹಿಮ್ಮೆಟ್ಟಿಸಲು ಹಾಗೂ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತವೆ. ಇಲ್ಲಿ ಚಾಣಾಕ್ಷ ಮಾವುತರು, ಸಿಬ್ಬಂದಿಗಳು ಇದ್ದಾರೆ.
ಆನೆಗಳ ಪ್ರಾಮುಖ್ಯತೆ, ಆನೆಗಳ ಸಾಧನೆಗಳು, ಕಾರ್ಯಾಚರಣೆಗಳು ಮತ್ತು ಅವುಗಳ ಇತಿಹಾಸ ಕುರಿತು ಮಾಹಿತಿಯುಳ್ಳ ನಾಮಫಲಕ ಅಳವಡಿಸುವ ಅಥವಾ ಮಾಹಿತಿ ಕೇಂದ್ರ ಸ್ಥಾಪಿಸುವ ಹಾಗೂ ವಿದ್ಯಾರ್ಥಿಗಳಿಗೆ ಪರಿಸರ, ಪ್ರಾಣಿಗಳು ಮಾನವ ಸಂಘರ್ಷ, ವನ್ಯಜೀವಿ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಶೈಕ್ಷಣಿಕ ಕಾರ್ಯಕ್ರಮ ಮಾಡುವ ಯೋಜನೆ ಕೂಡ ಇದೆ.
ಆನೆ ಬಿಡಾರದಿಂದ ರವಿ ಮತ್ತು ಶಿವ ಎಂಬ ಎರಡು ಆನೆಗಳನ್ನು ಮಧ್ಯ ಪ್ರದೇಶಕ್ಕೆ ಹಾಗೂ ಕೃಷ್ಣ ಮತ್ತು ಅಭಿಮನ್ಯು ಎಂಬ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ಕಳುಹಿಸಿಕೊಡಲಾಗಿದೆ. ಮಾನವ-ಆನೆ ಸಂಘರ್ಷ, ಆನೆಗಳ ಭಾವನಾತ್ಮಕ ಸಂಬAಧಗಳು, ಅವುಗಳ ಸಾಧನೆ, ಆನೆಗಳ ನಿಜವಾದ ಪ್ರಾಮುಖ್ಯತೆ ಕುರಿತು ಮಾಹಿತಿ ಫಲಕ ಹಾಗೂ ಶಿಕ್ಷಣ, ಸಂಶೋಧನೆ, ದತ್ತು ಇತರೆ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸಲಾಗುವುದು ಎಂದರು.
World Elephant Day 2025 ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ್ ಮಾತನಾಡಿ, ತಮ್ಮ ಹಿಂಡುಗಳನ್ನು ಮುನ್ನಡೆಸುವ ಹಾಗೂ ಮಾರ್ಗದರ್ಶನ ನೀಡುವ ಹೆಣ್ಣು ಆನೆಗಳು ಮತ್ತು ಅವು ಹಂಚಿಕೊಳ್ಳುವ ಆಳವಾದ ಹಾಗೂ ಶಾಶ್ವತವಾದ ನೆನಪುಗಳ ಹಿನ್ನೆಲೆ ‘ಮಾತೃ ಪ್ರಧಾನರು ಮತ್ತು ನೆನಪುಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಇಂದಿನ ವಿಶ್ವ ಆನೆಗಳ ದಿನವನ್ನುಆಚರಿಸಲಾಗುತ್ತಿದೆ. ಹಿಂಡನ್ನು ಮುನ್ನಡೆಸುವ ಹೆಣ್ಣು ಆನೆಯು ತನ್ನ ವಿಶೇಷವಾದ ನೆನಪಿನ ಶಕ್ತಿಯಿಂದ ಗುಂಪಿನ ಎಲ್ಲರಿಗೆ ನೀರು, ಆಹಾರ ಒದಗಿಸಲು ಸಹಕರಿಸುತ್ತದೆ ಎಂದರು.
ವಿಶ್ವ ಆನೆಗಳ ದಿನಾಚರಣೆ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ಅಂಚೆ ಲಕೋಟೆ ತಯಾರಿಸಿ ಬಿಡುಗಡೆಗೊಳಿಸಲಾಗುತ್ತಿದೆ. ಮಾನವ ಆನೆ ಸಂಘರ್ಷದಿAದ ಬಾಧಿತ ಕಾಡಂಚಿನ ಸಮುದಾಯಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಪುರದಾಳು, ಹೆದ್ದಾರಿಪುರ, ಬೆಳ್ಳೂರು ಶಾಲೆಗಳಲ್ಲಿ ಚಿತ್ರಕಲೆ, ಪ್ರಬಂಧ ಮತ್ತು ಪೋಸ್ಟರ್ ರಚನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸಕ್ರೆಬೈಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆನೆ ಮುಖವಾಡಗಳನ್ನು ಧರಿಸಿ ಜಾಥಾ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ, ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಿಗೆ ಆನೆ ತಜ್ಞರೊಂದಿಗೆ ವಿಶೇಷ ವೆಬಿನಾರ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಅAಚೆ ಲಕೋಟೆ ಬಿಡುಗಡೆ : ಕಾರ್ಯಕ್ರಮದಲ್ಲಿ ವಿಶ್ವ ಆನೆ ದಿನಾಚರಣೆ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಲಾಯಿತು.
ಅಂಚೆ ಇಲಾಖೆ ಅಂಚೆ ಅಧೀಕ್ಷಕರಾದ ಜಯರಾಂ ಶೆಟ್ಟಿ ಮಾತನಾಡಿ, ವಿಶ್ವ ಆನೆ ದಿನಾಚರಣೆ 2025 ರ ಸ್ಮರಣಾತ್ಮಕವಾಗಿ ಈ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಗಿದೆ. ಈ ಲಕೋಟೆ ನಿಗದಿತ ಸಂಖ್ಯೆ ಅಂದರೆ 2000 ಸಂಖ್ಯೆಯಲ್ಲಿ ಮಾತ್ರ ಇದ್ದು, ಇದರ ಮೌಲ್ಯ ರೂ.30 ಆಗಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಲಾಗುತ್ತದೆ. ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಸಕ್ರೆಬೈಲಿನ ಆನೆ ಬಿಡಾರದ ಮಾಹಿತಿಯನ್ನು ಲಕೋಟೆ ಮೂಲಕ ಬಿತ್ತರಿಸಲಾಗುತ್ತದೆ. ಈ ಲಕೋಟೆ ಲಭ್ಯತೆ ಸೀಮಿತವಾಗಿರುವ ಕಾರಣಕ್ಕೆ ಮುಂದೆ ಇದರ ಮೌಲ್ಯ ವೃದ್ದಿಯಾಗುತ್ತಾ ಹೋಗುತ್ತದೆ ಎಂದು ಮಾಹಿತಿ ನೀಡಿದರು.
ಆನೆಮರಿಗಳ ನಾಮಕರಣ:
ಶಿಬಿರದ ತುಂಬಾ ಸಂಭ್ರಮದ-ಹಬ್ಬದ ವಾತಾವರಣ ಮೂಡಿತ್ತು. ಆನೆಗಳನ್ನು ಬಣ್ಣದ ಚಿತ್ತಾರದೊಂದಿಗೆ ಅಲಂಕರಿಸಿ, ಇಷ್ಟವಾದ ತಿನಿಸುಗಳೊಂದಿಗೆ ಆಚರಣೆ ನಡೆಯಿತು. ಪೂಜಾ ವಿಧಿವಿಧಾನಗಳನ್ನೂ ನಡೆಸಲಾಯಿತು. ಈ ವೇಳೆ ನೇತ್ರಾವತಿ ಮತ್ತು ಭಾನುಮತಿ ಆನೆಗಳಿಗೆ ಜನಿಸಿದ ಹೆಣ್ಣು ಆನೆ ಮರಿಗಳಿಗೆ ಕ್ರಮವಾಗಿ ಚಾಮುಂಡಿ ಮತ್ತು ತುಂಗಾ ಎಂದು ನಾಮಕರಣ ಮಾಡಲಾಯಿತು. ಎಲ್ಲ ಆನೆಗಳಿಗೆ ಅವುಗಳಿಗೆ ಇಷ್ಟವಾದ ಫಲ-ತರಕಾರಿಗಳನ್ನು ತಿನ್ನಿಸಿ ಸಂಭ್ರಮಿಸಲಾಯಿತು. ಆನೆ ಪ್ರಿಯ ಸಾರ್ವಜನಿಕರು, ಮಕ್ಕಳು ಆನೆಗಳ ಲೋಕದಲ್ಲಿ ವಿಹರಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಕಾರ್ಯಕ್ರಮದಲ್ಲಿ ಎಸಿಎಫ್ ವಿಜಯಕುಮಾರ್, ಆರ್ಎಫ್ಒ ವಿನಯ್ ಜೆ ಆರ್, ಇತರೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.
Madhu Bangarappa ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ನೆರವಾಗಲು ಗ್ರಂಥಾಲಯಗಳನ್ನ ಬಲಪಡಿಸಬೇಕಿದೆ- ಮಧು ಬಂಗಾರಪ್ಪ
Madhu Bangarappa ಭಾರತದ ಗ್ರಂಥಾಲಯ ವಿಜ್ಞಾನ ಪಿತಾಮಹರಾದ ಡಾ. ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು, ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಹೆಚ್ಚಿನ ಸಂಪನ್ಮೂಲಗಳನ್ನು ಹೊಂದುವಂತೆ ಗ್ರಂಥಾಲಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಂಥಪಾಲಕಾರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
“ಇದು ನಾನು ಮಂತ್ರಿಯಾದ ನಂತರ ಮೂರನೇ ಬಾರಿಗೆ ಗ್ರಂಥಪಾಲಕರ ದಿನವನ್ನು ಆಚರಿಸುತ್ತಿದ್ದೇನೆ. ಕಳೆದ ವರ್ಷ ತುಮಕೂರಿನಲ್ಲಿ ನಾವು ಬಹಳ ವಿಜೃಂಭಣೆಯಿಂದ ಆಚರಿಸಿದ್ದೆವು. ಇಂದು ಗ್ರಂಥಾಲಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಡಾ. ಎಸ್.ಆರ್. ರಂಗನಾಥನ್ ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಹಾಗೂ ಅವರಂತೆಯೇ ಅಸಂಖ್ಯಾತ ಗ್ರಂಥಪಾಲಕರ ಶ್ರಮದಿಂದ ಇಂದು ಕರ್ನಾಟಕದಲ್ಲಿ 2500ಕ್ಕೂ ಹೆಚ್ಚಿನ ಗ್ರಂಥಾಲಯಗಳಿರುವುದು ಹೆಮ್ಮೆಯ ವಿಚಾರ,” ಎಂದು ಸಚಿವರು ಹೇಳಿದರು.
ರಾಜ್ಯದ ಹಲವಾರು ಗ್ರಂಥಾಲಯಗಳಿಗೆ ಭೇಟಿ ನೀಡಿದ ಅನುಭವವನ್ನು ಹಂಚಿಕೊಂಡ ಸಚಿವರು, ದುಬಾರಿ ತರಬೇತಿ ಕೇಂದ್ರಗಳಿಗೆ ಹೋಗಲು ಸಾಧ್ಯವಿಲ್ಲದ ವಿದ್ಯಾರ್ಥಿಗಳು ದಿನವಿಡೀ ಗ್ರಂಥಾಲಯಗಳಲ್ಲಿ ಓದುತ್ತಾರೆ ಎಂದು ತಿಳಿಸಿದರು.
“ಇದರಿಂದಲೇ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ JEE ಹಾಗೂ NEET ತರಬೇತಿ ಯೋಜನೆಯನ್ನು ಆರಂಭಿಸುವ ಪ್ರೇರಣೆ ದೊರೆಯಿತು. ಪ್ರಸ್ತುತ 25,000 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಕರ್ನಾಟಕವು ಇಂತಹ ಸೌಲಭ್ಯ ಒದಗಿಸುವ ಏಕೈಕ ರಾಜ್ಯವಾಗಿದೆ. ಇಂತಹ ಸೌಲಭ್ಯದಿಂದ ಗೌರಿಬಿದನೂರಿನ ಎನ್. ಸಂಕೇತ್ ರಾಜ್ ಐಐಟಿ ಖರಗ್ಪುರ್ಗೆ ಪ್ರವೇಶ ಪಡೆದಿದ್ದಾರೆ,” ಎಂದ ಹಂಚಿಕೊಂಡರು.
Madhu Bangarappa ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳೆಲ್ಲರಿಗೂ ಉಚಿತ ತರಬೇತಿ ವಿಸ್ತರಿಸುವ ಉದ್ದೇಶವಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು. ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಹೆಚ್ಚಿಸಲು, ಬೇಕಾದ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದರ ಬಗ್ಗೆ ಒತ್ತು ನೀಡಿದರು.
ಪ್ರತಿ ಗ್ರಂಥಪಾಲಕರೂ ಒಂದು ವಿಶ್ವವಿದ್ಯಾಲಯದ ಮುಖ್ಯಸ್ಥರಿದ್ದಂತೆ. ಗ್ರಂಥಾಲಯ ಬಲಪಡಿಸುವಲ್ಲಿ ಸವಾಲುಗಳಿದ್ದರೂ ನಮ್ಮ ಸರ್ಕಾರ ಅದನ್ನು ಬಲಪಡಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಸಚಿವರು ಹೇಳಿದರು. ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪನವರಿಗೆ ಬಹಳ ಓದುವ ಹವ್ಯಾಸವಿತ್ತು ಎಂದು ಹಂಚಿಕೊಂಡರು.
ಶಿಕ್ಷಣ ಇಲಾಖೆಯ ಸುಧಾರಣೆಗಳ ಕುರಿತು ಮಾತನಾಡಿದ ಅವರು, ಮೂರು ಪರೀಕ್ಷಾ ಪದ್ಧತಿ ಹಾಗೂ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಗೆ ವೆಬ್ಕಾಸ್ಟಿಂಗ್ ಮತ್ತು ಶಿಕ್ಷಣ ಇಲಾಖೆಯ ಇನ್ನೂ ಹಲವು ನೂತನ ಕ್ರಮಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ, ಡಾ. ಕರಿಗೌಡ ಬೀಚನಹಳ್ಳಿ (ಅಧ್ಯಕ್ಷರು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ), ಡಾ. ಬಿ. ಎಸ್. ಶಿವರಾಮ್ (ಗ್ರಂಥಾಲಯ ಮುಖ್ಯಸ್ಥ – NAL), ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಬಸವರಾಜೇಂದ್ರ ಹೆಚ್. (ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ) ಉಪಸ್ಥಿತರಿದ್ದರು.
Shimoga Bharat Scouts and Guides ಸ್ಕೌಟ್ ತರಬೇತಿ ಪಡೆದವರಿಗೆ ಕೇಂದ್ರದ ಉದ್ಯೋಗಗಳಲ್ಲಿ ಶೇ 10 ಮೀಸಲಾತಿ -ಪಿ.ಜಿ.ಆರ್.ಸಿಂಧ್ಯಾ
Shimoga Bharat Scouts and Guides ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸ್ಕೌಟ್ ಮತ್ತು ಗೈಡ್ಸ್ ತರಬೇತಿಗಳು ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ, ಮಾಜಿ ಗೃಹಮಂತ್ರಿ ಪಿಜಿಆರ್ ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನಿಪುಣ್ ಪರೀಕ್ಷಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ನಂತರ ಉದ್ಯೋಗ ಕ್ಷೇತ್ರಕ್ಕೆ ಕಾಲಿಟ್ಟಾಗ, ವಿಶೇಷವಾಗಿ ಕೇಂದ್ರ ಸರ್ಕಾರದ ರೈಲ್ವೆ, ಪೋಸ್ಟ್ ಆಫೀಸ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸ್ಕೌಟ್ ತರಬೇತಿ ಪಡೆದ ಪ್ರಮಾಣ ಪತ್ರ, ದಾಖಲೆಗಳನ್ನು ನೀಡಿದಾಗ ಶೇ. 10 ಮೀಸಲಾತಿ ದೊರಕುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಜೀವನವನ್ನು ಸುಂದರವಾಗಿಸಿಕೊಳ್ಳಲು ವಿದ್ಯೆಯ ಜೊತೆಗೆ ಸ್ಕೌಟ್ಸ್ ಚಳುವಳಿಯಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣರಾಗುತ್ತಾರೆ. ಶಿವಮೊಗ್ಗ ಜಿಲ್ಲಾ ಶಾಖೆ ತುಂಬಾ ವ್ಯವಸ್ಥಿತ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ರಾಜ್ಯದಲ್ಲೇ ಒಂದು ಮಾದರಿ ಸಂಸ್ಥೆಯಾಗಿ ಹೊರಬಂದಿದೆ. ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಸ್ಥಳೀಯ ಸಂಸ್ಥೆಯ ತಾಲೂಕು ಸಂಸ್ಥೆ ಹಾಗೂ ಜಿಲ್ಲಾ ಪದಾಧಿಕಾರಿಗಳ ಸಹಕಾರ ಅತ್ಯಂತ ಮುಖ್ಯ ಎಂದು ಪ್ರಶಂಸಿಸಿದರು.
ಭಾರತ್ ಸ್ಕೌಟ್ಸ್ ಅಂಡ್ ಜಿಲ್ಲಾ ಗೈಡ್ಸ್ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಅಧಿಕಾರ ವಹಿಸಿಕೊಂಡ ನಂತರ ಹಲವಾರು ಪ್ರಮುಖ ಕಾರ್ಯಕ್ರಮಗಳನ್ನು ರಾಜ್ಯ ಸಂಸ್ಥೆ ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸಿಕೊಂಡು ಬಂದಿದ್ದೇವೆ. ಸ್ಕೌಟ್ಸ್ ಅಂಡ್ ಗೈಡ್ಸ್ ಚಳುವಳಿಯಲ್ಲಿ ತೊಡಗಿಸಿಕೊಂಡು ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಗಳಲ್ಲಿ ಸ್ಕೌಟ್ ಘಟಕಗಳು ಸ್ಥಾಪನೆ ಆಗಬೇಕುಮನೆ ಮನೆಗೆ ಸ್ಕೌಟ್ ತಲುಪಬೇಕು ಎಂದರು.
Shimoga Bharat Scouts and Guides ರಾಜ್ಯ ಸಂಘಟನಾ ಆಯುಕ್ತೆ ಮಂಜುಳಾ, ಕೇಂದ್ರ ಸ್ಥಾನಿಕ ಆಯುಕ್ತ ಜಿವಿಜಯಕುಮಾರ್, ಜಂಟಿ ಕಾರ್ಯದರ್ಶಿ ವೈ ಆರ್ ವೀರೇಶಪ್ಪ, ಖಜಾಂಚಿ ಚೂಡಾಮಣಿ ಈ ಪವಾರ್, ಜಿಲ್ಲಾ ರೋವರ್ ಆಯುಕ್ತ ಕೆ ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಎಚ್ ಶಿವಶಂಕ್ರಪ್ಪ, ಕೃಷ್ಣಸ್ವಾಮಿ, ಲಕ್ಷ್ಮೀ ಕೆ ರವಿ, ವಿನಯ ಭೂಷಣ್, ಹೆಚ್ ಜ್ಯೋತಿ, ಪರಿಮಳ, ಮಂಜುಳಾ, ಗಣಪತಿ, ರಮ್ಯಾ, ಸ್ಕೌಟ್ ಆಯುಕ್ತ ಎಸ್ ಜಿ ಆನಂದ್, ರುದ್ರಪ್ಪ ಚಿಲೂರು, ಎನ್ ಆರ್ ಚಂದ್ರಶೇಖರ್, ದೇವಪ್ಪ, ಸಂಗೀತಾ ಬಗಲಿ, ಬಸವಣ್ಣಪ್ಪ ಉಪಸ್ಥಿತರಿದ್ದರು.
Quit India Movement Anniversary ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಾಶಿನಾಥ ಶೆಟ್ಟಿ ಅವರಿಗೆ ಸ್ವಗೃಹದಲ್ಲಿ ಗೌರವ ಸಲ್ಲಿಕೆ
Quit India Movement Anniversary ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಶ್ರೀ ಕಾಶಿನಾಥ ಶೆಟ್ಟಿ ಇವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಾಯಿತು
Gurudatta Hegde ಸಾರ್ವಜನಿಕ ಶಾಂತಿ ,ಸುವ್ಯವಸ್ಥೆ ದೃಷ್ಟಿಯಿಂದ ಸೆ.5 ರಿಂದ 10 ರವರೆಗೆ ಜಿಲ್ಲಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಾಜ್ಞೆ- ಗುರುದತ್ತ ಹೆಗಡೆ.
Gurudatta Hegde ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.
ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರಮುಖ, ಅತಿಸೂಕ್ಷ್ಮಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, Gurudatta Hegde ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊAದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Santhosh MS ಷಿಕಾರಿಪುರ ಪೊಲೀಸ್ ಠಾಣೆಗೆ ನ್ಯಾ.ಎಂ.ಎಸ್.ಸಂತೋಷ್ ಅನಿರೀಕ್ಷಿತ ಭೇಟಿ
Santhosh MS ದಿನಾಂಕ 11.08.2025 ಸೋಮವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ಸಂತೋಷ್ ಎಂ ಎಸ್ ರವರು ಶಿಕಾರಿಪುರ ನಗರ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ವಹಿಗಳನ್ನು ಮತ್ತು ಪೊಲೀಸ್ ಠಾಣೆಯ ತಪಾಸಣೆ ಮಾಡಿದರು.
Government Residential Polytechnic for Women. Shivamogga ಮಹಿಳಾ ಪಾಲಿಟೆಕ್ನಿಕ್ ನಲ್ಲಿನ ಅರಿವು ಅಂಗಳಕಾರ್ಯಕ್ರಮದಲ್ಲಿ ಭರತ್ ಕುಮಾರ್ ಅವರಿಂದ ಕಾನೂನು ಮಾಹಿತಿ
Government Residential Polytechnic for Women. Shivamogga ಆ.11 ರಂದು ಶಿವಮೊಗ್ಗದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭರತ್ ಕುಮಾರ್ ರವರು ಅರಿವು ಅಂಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಪೋಕ್ಸೋ ಬಗ್ಗೆ ಕಾನೂನಿನ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿನಿಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಎಲ್ಲಾ ಭೋದಕ/ಭೋದಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Gurudatta Hegde ಗಣಪತಿ ವಿಸರ್ಜನೆಗೆ ತೆಪ್ಪ ಬಳಸಿದಲ್ಲಿ ಲೈಫ್ ಜಾಕೆಟ್ ಧರಿಸುವುದುಕಡ್ಡಾಯ – ಗುರುದತ್ತ ಹೆಗಡೆ
Gurudatta Hegde ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Gurudatta Hegde ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳAದು ವಿಸರ್ಜನೆಯನ್ನು ಮೆರವಣೆಗೆ ಮೂಲಕ ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ವಿಸರ್ಜನೆ ಮಾಲಿದ್ದು, ಈ ಹಿಂದೆ ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮಗುಚಿ 12 ಜನ ಸಾವನ್ನಪ್ಪಿದ ದುರ್ಘಟನೆ ಸಂಘವಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಮಾಡಿದಲ್ಲಿ ಕೇವಲ 2 ರಿಂದ 3 ಜನ ಮಾತ್ರ ತೆಪ್ಪದ ಮೂಲಕ ಲೈಫ್ ಜಾಕೆಟ್ ಧರಿಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ವಿಸರ್ಜನೆ ಮಾಡಬೇಕೆಂದು ಅವರು ಆದೇಶಿಸಿದ್ದಾರೆ.
Morarji Desai Residential ಆನವೇರಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜಿಗೆ ಪ್ರವೇಶಾತಿ
Morarji Desai Residential 2025-26 ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿ ತಾಲ್ಲೂಕು ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Morarji Desai Residential ಪಿಸಿಎಂಬಿ ಕೋರ್ಸ್ನಲ್ಲಿ ಒಟ್ಟು 40 ಸೀಟ್ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನಾಂಕವಾಗಿದೆ. ಎಸ್ಎಸ್ಎಲ್ಸಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್ಎಸ್ಎಲ್ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್ಎಟಿಎಸ್ ನಂ, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಅಥವಾ ಆದಾಯ ಪ್ರಮಾಣ ಪತ್ರ ನಕಲುಪ್ರತಿ, ಪೋಷಕರು ಅಥವಾ ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9535636963 ಗೆ ಸಂಪರ್ಕಿಸಬಹುದೆAದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.
