Friday, February 6, 2026
Friday, February 6, 2026
Home Blog Page 21

Bhadravati VISL ಭದ್ರಾವತಿ ವಿಐಎಸ್ಎಲ್ ಸಂಸ್ಥಾಪಕರ ದಿನಾಚರಣೆ.

0

Bhadravati VISL ವಿಐಎಸ್ ಎಲ್ ನಲ್ಲಿ ಸಂಸ್ಥಾಪಕರ ದಿನಾಚರಣೆ ಅತ್ಯುತ್ತಮ ಇಂಜೀನಿಯರ್, ರಾಜನೀತಿಜ್ಞ ಸರ್.ಎಮ್. ವಿಶ್ವೇಶ್ವರಾಯರವರ ಮಾರ್ಗದರ್ಶನ ಮತ್ತು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ನೇತೃತ್ವದಲ್ಲಿ ೧೯೧೮, ಜನವರಿ ೧೮ ರಂದು ಮೈಸೂರು ವುಡ್ ಡಿಸ್ಟಿಲೇಶನ್ ಮತ್ತು ಐರನ್ ವರ್ಕ್ಸ್ ಹೆಸರಿನಲ್ಲಿ ಭದ್ರಾವತಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

Bhadravati VISL ಆ ದಿನವನ್ನು ವಿಐಎಸ್ ಎಲ್ ನಲ್ಲಿ ಸಂಸ್ಥಾಪಕರ ದಿನವೆಂದು ಪ್ರತೀವರ್ಷ ಆಚರಿಸಲಾಗುವುದು. ಅದರಂತೆ ಈ ವರ್ಷವೂ ಸಹ ವಿಐಎಸ್ ಎಲ್ ಸ್ಥಾಪನೆಯ ವರ್ಷದ ಅಂಗವಾಗಿ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ದಿನಾಂಕ ೧೮.೦೧.೨೦೨೬ ರಂದು ಮಾಲಾರ್ಪಣೆ ಮಾಡುವ ಮೂಲಕ ವಿ.ಐ.ಎಸ್.ಎಲ್‌ನ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು. ಶ್ರೀ ಅನುಪ್ ಕುಮಾರ್, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಕೆ.ಬಿ. ಮಲ್ಲಿಕಾರ್ಜುನ, ಅಧ್ಯಕ್ಷರು, ಕಾರ್ಮಿಕರ ಸಂಘ ಮತ್ತು ಶ್ರೀ ಅಜಯ್ ಸೋಂಕುವಾರ್, ಅಧ್ಯಕ್ಷರು, ಅಧಿಕಾರಿಗಳ ಸಂಘ ಇವರುಗಳು ವಿಐಎಸ್ ಎಲ್ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಸರ್. ಎಮ್. ವಿಶ್ವೇಶ್ವರಾಯರವರಿಗೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ಮಹಾಪ್ರಬಂಧಕ ಶ್ರೀ ನವೀನ್ ರಾಹುಲ್‌ರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

Chess ತೀರ್ಥಹಳ್ಳಿಯ ಎ.ಹೆಚ್.ಆದ್ಯಾಗೆ ಚೆಸ್ಪಂದ್ಯಾವಳಿಯಲ್ಲಿ ಕಂಚಿನ ಪದಕ

0

Chess U -14 ರಾಷ್ಟ್ರ ಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿದ್ದ ತೀರ್ಥಹಳ್ಳಿಯ ಕುವರಿ ಆದ್ಯಾ ಎ ಹೆಚ್ ವೈಯುಕ್ತಿಕ ಚಿನ್ನದ ಪದಕ ಹಾಗೂ ತಂಡಕ್ಕೆ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಇವರು ಕೊಪ್ಪ ತಾಲ್ಲೂಕು ಬಂಡಿಗಡಿ ಪ್ರೌಢಶಾಲಾ ಶಿಕ್ಷಕರಾದ ಅನಿಲ್ ರವರ ಮಗಳಾಗಿದ್ದಾರೆ.

Makar Sankranti ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ.

0

Makar Sankranti ಪ್ರತಿ ವರ್ಷದಂತೆ ಈ ವರ್ಷವೂ ಕಿರ್ಲೋಸ್ಕರ್ ಫೆರೆಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ವತಿಯಿಂದ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಉದ್ಯೋಗಿಗಳು ಹಾಗೂ ಅವರ ಕುಟುಂಬದ ಸದಸ್ಯರು ಒಟ್ಟಾಗಿ ಸೇರಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮ, ಸಡಗರ ಮತ್ತು ಸಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.

ಸಂಸ್ಥೆಯ ಕಾರ್ಖಾನೆಯ ಮುಂಭಾಗದಲ್ಲಿರುವ ಸಾಲು ಮರದ ತಿಮ್ಮಕ್ಕ ಉದ್ಯಾನವನ’ದಲ್ಲಿ ಈ ಹಬ್ಬದ ಕಾರ್ಯಕ್ರಮವನ್ನು ದಿನಾಂಕ 17-01-2026 ರಂದು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಹರ್ಷೋಲ್ಲಾಸದಿಂದ ಆಯೋಜಿಸಲಾಗಿತ್ತು.
ಭಾರತೀಯ ಸಂಸ್ಕೃತಿಯಲ್ಲಿ ಸಂಕ್ರಾಂತಿ ಹಬ್ಬವು ಕೃಷಿ, ಪ್ರಕೃತಿ ಮತ್ತು ಮಾನವ ಸಂಬಂಧಗಳ ಮಹತ್ವವನ್ನು ಸಾರುವ ವಿಶೇಷ ಹಬ್ಬವಾಗಿದ್ದು, ಹೊಸ ಬೆಳೆ, ಹೊಸ ಆಶಯ ಮತ್ತು ಸಮೃದ್ಧಿಯ ಸಂಕೇತವಾಗಿ ಆಚರಿಸಲಾಗುತ್ತದೆ. ಈ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಿರ್ಲೋಸ್ಕರ್ ಸಂಸ್ಥೆಯು ಪ್ರತಿವರ್ಷವೂ ಕುಟುಂಬ ಸದಸ್ಯರು ಸೇರಿ ಈ ಹಬ್ಬವನ್ನು ಆಚರಿಸುವ ಮೂಲಕ ಸಂಸ್ಕ್ರತಿ ಮತ್ತು ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸುತ್ತಿದೆ.

ಈ ಸಂಭ್ರಮಾಚರಣೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್.ವಿ. ಗುಮಾಸ್ತೆ ಹಾಗೂ ಶ್ರೀಮತಿ ಕಮಲಾ ಗುಮಾಸ್ತೆ ಅವರು ಉಪಸ್ಥಿತರಿದ್ದು, ಉದ್ಯೋಗಿಗಳು ಮತ್ತು ಅವರ ಕುಟುಂಬದವರೊಂದಿಗೆ ಆತ್ಮೀಯವಾಗಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದರು. ಆಡಳಿತ ಮಂಡಳಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀ ಆರ್.ಎಸ್. ಶ್ರೀವತ್ಸನ್ ಅವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ಕಾರ್ಯಕ್ರಮಕ್ಕೆ ವಿಶೇಷ ಘನತೆ ನೀಡಿದರು. ಜೊತೆಗೆ ಸಿಒಒ ಶ್ರೀ ಸಿ. ರಮೇಶ್ ಮತ್ತು ಕುಟುಂಬ, ಶ್ರೀ ಎಂ.ಜಿ. ನಾಗರಾಜ್ ಮತ್ತು ಕುಟುಂಬ, ಶ್ರೀ ಜಿ.ಎಸ್. ಕೃಷ್ಣಮೂರ್ತಿ ಮತ್ತು ಕುಟುಂಬ ಅವರುಗಳ ಉಪಸ್ಥಿತಿಯು ಕಾರ್ಯಕ್ರಮದ ವೈಭವವನ್ನು ಇನ್ನಷ್ಟು ಹೆಚ್ಚಿಸಿತು.

Makar Sankranti ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಶ್ರೀ ಶಿವಯ್ಯ ಸ್ವಾಮಿ ಅವರ ಮಾರ್ಗದರ್ಶನ ಮತ್ತು ಮುಂದಾಳತ್ವದಲ್ಲಿ ಈ ಕಾರ್ಯಕ್ರಮವನ್ನು ಸುಸೂತ್ರವಾಗಿ ಆಯೋಜಿಸಲಾಗಿತ್ತು. ಹಬ್ಬದ ಮಹತ್ವವನ್ನು ಸಾರುವಂತೆ ಪರಂಪರೆಯ ಉಡುಪು, ಸಾಂಪ್ರದಾಯಿಕ ಅಲಂಕಾರ ಮತ್ತು ಹಬ್ಬದ ವಾತಾವರಣವನ್ನು ನಿರ್ಮಿಸಲಾಗಿದ್ದು, ಉದ್ಯಾನವನವು ಸಂಪೂರ್ಣವಾಗಿ ಹಬ್ಬದ ಕಳೆಗಟ್ಟಿತ್ತು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಎಳ್ಳು-ಬೆಲ್ಲ ಹಂಚಿಕೆ ನಡೆಯಿತು. ‘ಎಳ್ಳು ಬೆಲ್ಲ ಉಂಡು ಒಳ್ಳೆ ಮಾತಾಡು’ ಎಂಬ ಸಂಪ್ರದಾಯದಂತೆ ಎಲ್ಲರೂ ಪರಸ್ಪರ ಎಳ್ಳು-ಬೆಲ್ಲ ಹಂಚಿಕೊಂಡು ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರಿದರು. ಬಳಿಕ ಸಾಂಪ್ರದಾಯಿಕ ಹಬ್ಬದ ಭೋಜನವನ್ನು ಒಟ್ಟಾಗಿ ಆಸ್ವಾದಿಸುವ ಮೂಲಕ ಉದ್ಯೋಗಿಗಳು ಮತ್ತು ಕುಟುಂಬದ ಸದಸ್ಯರು ಸಂತಸದಿಂದ ಕಾಲ ಕಳೆಯಲಾಯಿತು.

ಈ ಸಂಕ್ರಾಂತಿ ಸಂಭ್ರಮಾಚರಣೆಯು ಕೇವಲ ಹಬ್ಬದ ಆಚರಣೆಯಷ್ಟೇ ಅಲ್ಲದೆ, ಸಂಸ್ಥೆಯೊಳಗಿನ ಮಾನವೀಯ ಸಂಬಂಧ, ಕುಟುಂಬ ವಾತಾವರಣ ಮತ್ತು ಸಂಸ್ಥೆಯ ಸಾಮಾಜಿಕ
ಮೌಲ್ಯಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿತ್ತು. ಇಂತಹ ಕಾರ್ಯಕ್ರಮಗಳು ಉದ್ಯೋಗಿಗಳ ಮನೋಬಲವನ್ನು ಹೆಚ್ಚಿಸುವುದರ ಜೊತೆಗೆ ಸಂಸ್ಥೆಯೊಂದಿಗಿನ ಆತ್ಮೀಯತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ.

ಒಟ್ಟಾರೆ, ಕಿರ್ಲೋಸ್ಕರ್ ಫೆರೆಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಂಕ್ರಾಂತಿ ಸಡಗರವು ಸಂಪ್ರದಾಯ, ಸಂಸ್ಕೃತಿ ಮತ್ತು ಒಗ್ಗಟ್ಟಿನ ಸುಂದರ ಸಂಗಮವಾಗಿ ಯಶಸ್ವಿಯಾಗಿ ನೆರವೇರಿತು.

ವರದಿ
ಮುರುಳೀಧರ್ ನಾಡಿಗೇರ್

B. Y. Raghavendra ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸದಾ ಸಹಕರಿಸುವೆ- ಸಂಸದ ರಾಘವೇಂದ್ರ.

0

B. Y. Raghavendra ದೇಶದಲ್ಲಿ ಮುಂದೆ ನೆಡಯಲಿರುವ ಓಲಂಪಿಕ್, ಪ್ಯಾರಾ ಓಲಂಪಿಕ್ಕ್ರೀಡಾಕೂಟದಲ್ಲಿ ನಾಡಿನ ಕ್ರೀಡಾಪ್ರತಿನಿಧಿಗಳು ಭಾಗವಹಿಸಿ, ನಾಡಿನ ಕೀರ್ತಿಪತಾಕೆಯನ್ನು ಹಾರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ನೌಕರ ಪ್ರತಿಭಾವಂತ ಕ್ರೀಡಾಪಟುಗಳಿಗೆ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವ ಮೂಲಕ, ಚೆಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ದಿನನಿತ್ಯ ಒಂದಿಲ್ಲೊಂದು ಒತ್ತಡದಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ಬದುಕಿನ ಅಮೂಲ್ಯ ಸಮಯವನ್ನು ಕೆಲಸದಲ್ಲಿಯೇ ಕಳೆದು ಹೋಗುತ್ತದೆ. ಕುಟುಂಬಕ್ಕಾಗಲೀ, ತಮ್ಮ ಆರೋಗ್ಯಕ್ಕಾಗಲೀ ಸಮಯ ಕೊಡುವುದು ನಿರೀಕ್ಷಿಸಿದಂತೆ ಸಾಧ್ಯವಾಗುವುದಿಲ್ಲ. ಇಂತಹ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಪ್ರತಿಭಾವಂತ ನೌಕರರಿಗೆ ಮಾನಸಿಕ ನೆಮ್ಮದಿ, ಉಲ್ಲಾಸ ದೊರೆಯುವುದಲ್ಲದೇ ದೈಹಿಕ ಚೈತನ್ಯ ಹೆಚ್ಚಿ, ಕಾರ್ಯದಲ್ಲಿ ನವೋಲ್ಲಾಸ ಹೆಚ್ಚಲಿದೆ ಎಂದವರು ನುಡಿದರು.


ನೌಕರರು ಅನೇಕ ಸಂದರ್ಭಗಳಲ್ಲಿ ತಮ್ಮ ಕಚೇರಿಯ ಮೇಲಾಧಿಕಾರಿಗಳ, ಸ್ಥಳೀಯ ಜನಪ್ರತಿನಿಧಿಗಳ ಒತ್ತಡ, ಇಂತಹ ಸಮಸ್ಯೆ-ಸವಾಲುಗಳಲ್ಲಿಯೇ ದಿನದ ಕಡತಗಳನ್ನು ನಿರ್ವಹಿಸುತ್ತಾರೆ. ಆದಾಗ್ಯೂ ನೌಕರರು ಯಾವುದೇ ಆತಂಕಗಳಿಗೆ ಒಳಗಾಗದಂತೆ ಹಾಗೂ ನೌಕರರ ಸಮಸ್ಯೆಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ ಅವರು ತಿಳಿಸಿದರು.


ಕಾರ್ಯಾಂಗದ ಘನತೆಯನ್ನು ಎತ್ತಿಹಿಡಿಯುವಲ್ಲಿ ನೌಕರರ ಪಾತ್ರ ಪ್ರಮುಖವಾದುದ್ದಾಗಿದೆ. ಸರ್ಕಾರಿ ನೌಕರರ ಪ್ರಾಮಾಣಿಕ ಸೇವೆಯಿಂದ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾಲಿದೆ ಎಂದ ಅವರು, ಅಂತಹ ನೌಕರರೂ ಕೂಡ ಸ್ವಾಭಿಮಾನದ, ಅವರ ನೆಮ್ಮದಿ ಬದುಕಿಗೆ ಆಸರೆಯಾಗಬೇಕಾದುದು ನಮ್ಮೆಲ್ಲರ ಕರ್ತವ್ಯವೂ ಹೌದು ಎಂದವರು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ಸದಸ್ಯ ಡಿ.ಎಸ್. ಅರುಣ್ಅವರು ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿದ್ದರೂ ಇಂದಿನ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ನೌಕರರ ಕ್ರೀಡಾಪಟುಗಳ ಸಂಖ್ಯೆಯಲ್ಲಿ ಹಾಗೂ ಅವರ ಉತ್ಸಾಹದಲ್ಲಿ ಯಾವುದೇ ಕೊರತೆ ಕಾಣುತ್ತಿಲ್ಲ ಎಂದ ಅವರು, ನಗರದಲ್ಲಿನ ಕ್ರೀಡಾಪಟುಗಳ ಉತ್ತೇಜನ ಮತ್ತು ನಿರಂತರ ಕಲಿಕೆಗಾಗಿ ನೆಹರೂ ಕ್ರೀಡಾಂಗಣವಲ್ಲದೇ ಅನೇಕ ಕ್ರೀಡಾಂಗಣಗಳು ಪ್ರೇರಕ ಶಕ್ತಿಯಾಗಿವೆ ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮಾತನಾಡಿ, ಎಲ್ಲರಲ್ಲಿಯೂ ಕ್ರೀಡಾ ಮನೋಭಾವ ಮುಖ್ಯವಾಗಿದೆ. ಖೇಲೋ ಇಂಡಿಯ ಕಲ್ಪನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅದ್ಭುತ ಕಲ್ಪನೆಯಾಗಿದೆ. ಇದರಿಂದಾಗಿ ರಾಷ್ಟ್ರದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಸೃಜಿಸಲು ಕಾರಣವಾಗಿದೆ. ಕ್ರೀಡಾಕೂಟಗಳು ಕ್ರೀಡಾಸಕ್ತರ ಪ್ರತಿಭೆಯ ಅನಾವರಣಕ್ಕೆ ಉತ್ತಮ ಅವಕಾಶವಾಗಿರಲಿವೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದಿಂದ ಭದ್ರಾವತಿಯ ಅವಳಿ ಕಾರ್ಖಾನೆಗಳ ಉಳಿವು-ಬೆಳವಣಿಗೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಕ್ರಮ ವಹಿಸುತ್ತಿದ್ದಾರೆ. ಅಂತೆಯೇ ಕಾರ್ಖಾನೆಗಳ ಆವರಣದೊಳಗೆ ಬೃಹತ್ಪ್ರಮಾಣದ ಎಲ್ಲಾ ರೀತಿಯ ಕ್ರೀಡಾಂಗಣಗಳಿದ್ದು, ಅವುಗಳನ್ನು ಅಭಿವೃದ್ಧಿಪಡಿಸಿದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲು ಸಾಧ್ಯವಾಗಲಿದೆ. ಈ ಎಲ್ಲಾ ವಿಷಯವನ್ನು ಗಮನದಲ್ಲಿಟ್ಟುಕೊಂಡು ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದ ಅವರು, ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ಕಾರ್ಯನಿರ್ವಹಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಕ್ರೀಡೆ ಮನೋರಂಜನೆಗೆ ಮಾತ್ರವಲ್ಲ, ಪ್ರತಿಭೆಯ ಅನಾವರಣಕ್ಕೆ, ಪರಿಪಕ್ವತೆಗೆ ಸಹಕಾರಿಯಾಗಿದೆ. ಅಂತೆಯೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕ್ರೀಡಾ ಸ್ಪೂರ್ತಿಯಿಂದಲೇ, ಅದರ ಘನತೆಯನ್ನು ಎತ್ತಿಹಿಡಿಯುವುದಕ್ಕಾಗಿ ಭಾಗವಹಿಸಬೇಕು. ಇವೆಲ್ಲವೂ ತಮ್ಮ ವೃತ್ತಿ ಬದುಕಿನಲ್ಲಿ ಉತ್ಸಾಹ, ಉಲ್ಲಾಸ ಹೊಮ್ಮಿಸುವಲ್ಲಿ

ಸಹಾಯಕವಾಗಲಿದೆ ಎಂದರು.

B. Y. Raghavendra ರಾಜ್ಯ ಮಟ್ಟದ ನೌಕರರ ಕ್ರೀಡಾಕೂಟವು 2026ರ ಫೆಬ್ರವರಿ ಎರಡನೇ ವಾರದಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಆಯೋಜಿಸಲಾಗುತ್ತಿದ್ದು, ವಿಜೇತ ಕ್ರೀಡಾಪಟುಗಳು ಭಾಗವಹಿಸುವಂತೆ ಮನವಿ ಮಾಡಿದರು.

• ನೌಕರರ ಸಂಘದ ಪದಾಧಿಕಾರಿಗಳ ಸಂಘಟಿತ ಪ್ರಯತ್ನದಿಂದ ಮುಂದಿನ ದಿನಗಳಲ್ಲಿ ಕೇಂದ್ರಕ್ಕೆ ಸಮಾನವಾದ ವೇತನ ಪಡೆಯಲಿದ್ದೇವೆ. ಸರ್ಕಾರದೊಂದಿಗೆ ಸಂಘರ್ಷಕ್ಕೆ ಅವಕಾಶವಿಲ್ಲದಂತೆ ಬೇಡಿಕೆಯನ್ನು ಪೂರೈಸಲು ವಿನಂತಿಸಲಾಗುವುದು. ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ಹೋರಾಟ ಅನಿವಾರ್ಯವಾಗಬಹುದಾಗಿದೆ. ಇದರೊಂದಿಗೆ ಎನ್.ಪಿ.ಎಸ್.ಬದಲಾಗಿ ಓ.ಪಿ.ಎಸ್.ಸೌಲಭ್ಯವೂ ನಮ್ಮ ಪ್ರಮುಖ ಬೇಡಿಕೆಗಳಲ್ಲೊಂದಾಗಿದ್ದು, ಅದರ ಈಡೇರಿಕೆಗೂ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅದರಂತೆ ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿಲಿದೆ. ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ವಿಧಾನ ಪರಿಷತ್ಸದಸ್ಯ ಡಿ.ಎಸ್.ಅರುಣ್, ಕರ್ನಾಟಕ ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಜಿ.ಪಲ್ಲವಿ, ರಾಜ್ಯ ಕೈಮಗ್ಗ ಮತ್ತು ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಚೇತನ್ಕೆ.ಗೌಡ, ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ, ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಆರ್.ಪಾಪಣ್ಣ, ಸಿದ್ಧಬಸಪ್ಪ, ದಿನೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಇದ್ದರು.

Klive Special Article ಶ್ರೀ ಮದ್ಭಗವದ್ಗೀತೆ ಮತ್ತು ಅಪರಾಧ ಶಾಸ್ತ್ರ

0

ಲೇ: ಡಾ.ರಾಮಕೃಷ್ಣ ಮುದ್ದೇಪಾಲ.

ಲೇಖನಮಾಲೆ ಭಾಗ 2

ಧರ್ಮದ ಪರಿಕಲ್ಪನೆ ಮತ್ತು ಆಚರಣೆ ದೃಢವಾಗಿದ್ದ ಒಂದು ಕಾಲದಲ್ಲಿ ಅಪರಾಧರಹಿತ ಮತ್ತು ಪಾಪರಹಿತ ಸಮಾಜವಿದ್ದಿರಬಹುದು. ತ್ರೇತಾಯುಗದ ರಾಮರಾಜ್ಯ ಪಾಪರಹಿತವಾಗಿತ್ತೆಂದು ವಾಲ್ಮೀಕಿ ಮಹರ್ಷಿಗಳು ಉಲ್ಲೇಖಿಸಿದ್ದಾರೆ.
ಇಂತಹ ಸನ್ನಿವೇಶವನ್ನು ಅಥವಾ ಆಶಯವನ್ನು ಮಹಾಭಾರತದಲ್ಲಿ ಭೀಷ್ಮಾಚಾರ್ಯರು ಯುಧಿಷ್ಠಿರನಿಗೆ ಹೇಳಿದ ಈ ಮಾತಿನಿಂದಲೂ ಗ್ರಹಿಸಬಹುದು.
ನ ರಾಜ್ಯಂ ನ ರಾಜಾಸೀತ್‌ ನ ದಂಡ್ಯೋ ನ ಚ ದಾಂಡಿಕಃI
ಧರ್ಮೇಣೈವ ಪ್ರಜಾ: ಸರ್ವಾಃ ರಕ್ಷಂತಿ ಸ್ಮ ಪರಸ್ಪರಂII
ರಾಜ್ಯವಿರಲಿಲ್ಲ , ರಾಜನೂ ಇರಲಿಲ್ಲ, ದಂಡಿಸಲ್ಪಡುವವನು ಇರಲಿಲ್ಲ, ದಂಡಿಸುವವನೂ ಇರಲಿಲ್ಲ ಧರ್ಮದಿಂದಲೇ ಪ್ರಜೆಗಳು ತಮ್ಮನ್ನು ರಕ್ಷಿಸಿಕೊಳ್ಳುತ್ತಿದ್ದರು.
ಮುಂದೇನಾಯಿತು? ಸಮಾಜ ಸಂಕೀರ್ಣವಾಗುತ್ತ ಜನರಲ್ಲಿ ಕಾಮ ಕ್ರೋಧ ಮೋಹಗಳು ಆವರಿಸಿದವು. ಧರ್ಮ ಹಿನ್ನೆಲೆಗೆ ಸರಿದ ಪರಿಣಾಮ ಅಪರಾಧಗಳು ಮುನ್ನೆಲೆಗೆ ಬಂದವು. ಹಾಗೆಯೇ ಅಪರಾಧಿಗಳನ್ನು ಶಿಕ್ಷಿಸುವ ವ್ಯವಸ್ಥೆ ಜಾರಿಗೆ ಬಂದಿತು. ಇಂದಿನ ನಮ್ಮ ದೇಶದ ಮತ್ತು ವಿಶ್ವದ ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿದರೆ, ಸುಧಾರಿತ ನ್ಯಾಯ ವ್ಯವಸ್ಥೆಯಿದ್ದರೂ ಅಪರಾಧಗಳು ಹೆಚ್ಚುತ್ತಿರುವುದು ಕಳವಳಕಾರೀ ಸಂಗತಿ.
ಭಾರತದ ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೋದ ಪ್ರಕಾರ ೨೦೨೩ರಲ್ಲಿ ೭.೨% ಅಪರಾಧ ವೃದ್ಧಿ, ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳಲ್ಲಿ ಕ್ರಮವಾಗಿ ೪% ಮತ್ತು ೯.೨% ವೃದ್ಧಿ ಕಂಡುಬಂದಿರುತ್ತದೆ. ಶ್ವೇತಾಪರಾಧಗಳು ಮತ್ತು ಸೈಬರ್‌ ಅಪರಾಧಗಳು ಎಗ್ಗಿಲ್ಲದೇ ನಡೆಯುತ್ತಿವೆ. ಅತ್ಯಂತ ವೇಗದಲ್ಲಿ ಬದಲಾಗುತ್ತಿರುವ ಆಧುನಿಕ ಸಮಾಜದಲ್ಲಿ ಅಪರಾಧದ ಪ್ರಮಾಣ ಮತ್ತು ಅಪರಾಧದ ಸ್ವರೂಪ ಎರಡರಲ್ಲೂ ಹೆಚ್ಚಳವಾಗುತ್ತಿರುವುದರಿಂದ ಅಪರಾಧರಹಿತ ಸಮಾಜವನ್ನು ಕಲ್ಪಿಸಲು ಸಾಧ್ಯವಿಲ್ಲದಿದ್ದರೂ ಅಪರಾಧಗಳ ಪ್ರಮಾಣವನ್ನು ತಗ್ಗಿಸಿ ಸಮಾಜದ ಹಿತಕಾಯುವುದು ಅಪರಾಧಶಾಸ್ತ್ರದ ಆಶಯ. ಅಪರಾಧವನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಆರಕ್ಷಕ ಇಲಾಖೆಯ ಹೊಣೆ. ಅಪರಾಧ ಘಟಿಸಿದ ನಂತರ ಅದನ್ನು ಪತ್ತೆಮಾಡಿ ಅಪರಾಧಿಗಳನ್ನು ನ್ಯಾಯಾಂಗ ವ್ಯವಸ್ಥೆಯ ಮುಖಾಂತರ ಶಿಕ್ಷೆಗೆ ಗುರಿಪಡಿಸುವುದು ಆರಕ್ಷಕರ ಆದ್ಯ ಕರ್ತವ್ಯವಾದರೂ ಅಪರಾಧ ನಡೆಯದಂತೆ ತಡೆಗಟ್ಟುವುದು ಆರಕ್ಷಕರ ಕಾರ್ಯಕ್ಷಮತೆಯ ದ್ಯೋತಕವಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಹೊಣೆಗಾರಿಕೆಯೂ ಪ್ರಾಮುಖ್ಯತೆಯನ್ನು ಹೊಂದಿದೆ.

MESCOM ಜನವರಿ 18. ಆಲ್ಕೊಳ ಸುತ್ತಮುತ್ತ ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ

0

MESCOMಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, MESCOM ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Rotary Club Shimoga ವೃತ್ತಿ ಸಾಧನೆ ಜೊತೆ ಸಮಾಜಮುಖಿ ಸೇವೆ ಆಸಕ್ತಿ ಅವಶ್ಯಕ- ಡಿ.ಕಿಶೋರ್ ಕುಮಾರ್

0

Rotary Club Shimoga ವೃತ್ತಿಯಲ್ಲಿ ಉನ್ನತ ಸಾಧನೆ ಮಾಡುವ ಜತೆಯಲ್ಲಿ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಳ್ಳುವುದು ಅವಶ್ಯಕ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಸಹ್ಯಾದ್ರಿ ಸಂಸ್ಥೆ, ಸಂಜೀವಿನಿ ರಕ್ತನಿಧಿ ಸಂಸ್ಥೆ ಮತ್ತು ನೆಪ್ಚೂನ್ ಮಾರುತಿ ಆಟೋ ವರ್ಕ್ಸ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ರೋಟರಿ ಸಂಸ್ಥೆಯು ವಿಶ್ವಾದ್ಯಂತ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಬಿ.ಎನ್.ಸಂತೋಷ್‌ಕುಮಾರ್ ಮಾತನಾಡಿ, ರೋಟರಿ ಸಂಸ್ಥೆ ಜತೆ ಜೆಸಿಐ ಕೈಜೋಡಿಸಿ ಹಲವಾರು ಕಾರ್ಯಕ್ರಮ ಕೈಗೊಳ್ಳುತ್ತೇವೆ. ರಕ್ತದಾನ ಪ್ರಕ್ರಿಯೆಯು ಅತ್ಯಂತ ಶ್ರೇಷ್ಠ ದಾನ ಎಂದು ಹೇಳಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪಾದನೆ ಜತೆಗೆ ಕೊಬ್ಬಿನಾಂಶ ಕಡಿಮೆಯಾಗಿ ಸದೃಢ ಆರೋಗ್ಯ ನಮ್ಮದಾಗುತ್ತದೆ. ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಜನರಲ್ಲಿ ಅರಿವು ಮೂಡುತ್ತದೆ ಎಂದು ತಿಳಿಸಿದರು.

Rotary Club Shimoga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ ರಾಂಪುರ ಮಾತನಾಡಿ, ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ತುರ್ತು ಸಂದರ್ಭದಲ್ಲಿ ಇನ್ನೊಬ್ಬ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದರು.

ನೆಪ್ಚೂನ್ ಸಂಸ್ಥೆಯ ಮಾಲೀಕರಾದ ಕಿಶೋರ್‌ಕುಮಾರ್, ಗೋಪಾಲ್‌ನಾಯಕ್, ಎಂ.ಎಲ್.ಗುರುರಾಜ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಮಾಜಿ ಅಧ್ಯಕ್ಷ ಗಣೇಶ್, ರೋಟರಿ ಮಾಜಿ ಅಧ್ಯಕ್ಷರಾದ ಸತೀಶ್ ಚಂದ್ರ, ಸಂಜೀವಿನಿ ಸಂಸ್ಥೆ ಸಿಬ್ಬಂದಿ ಇತರರಿದ್ದರು

B.Y. Raghavendra ಕುಲಕಸುಬುಗಳನ್ನ ಆಧರಿಸಿದ ವಿಶ್ವಕರ್ಮ ಸಮುದಾಯದ ಸಬಲೀಕರಣಕ್ಕೆ ಪ್ರಧಾನಿಯವರ ಯೋಜನೆ ವರದಾನ- ಸಂಸದ ರಾಘವೇಂದ್ರ

0

B.Y. Raghavendra ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಶುಭ ಕೋರಲಾಯಿತು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

B.Y. Raghavendra ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಶ್ರೀ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಶ್ರೀ ಕುಮಾರಸ್ವಾಮಿ, ಪ್ರಮುಖರಾದ ಶ್ರೀ ಎನ್.ಕೆ. ಜಗದೀಶ್, ಶ್ರೀ ಜ್ಯೋತಿ ಪ್ರಕಾಶ್, ಶ್ರೀ ಕೆ. ದೇವರಾಜ್ ಹಾಗೂ ಇತರರು.

ನಿವೃತ್ತ ರಕ್ಷಣಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

0

ಮಿಲಿಟರಿ ಕ್ಯಾಂಟೀನ್ ಮತ್ತು ಲೆಕ್ಕಪತ್ರಗಳ ಅನುಭವವುಳ್ಳ 64 ವರ್ಷ ವಯಸ್ಸಿನೊಳಗಿನ ನಿವೃತ್ತ ರಕ್ಷಣಾ ಅಧಿಕಾರಿ (ಡಿಫೆನ್ಸ್ ಆಫೀರ‍್ಸ್) ಗಳಿಂದ ಒಪ್ಪಂದದ ಮೇರೆಗೆ ವಿರಾಜಪೇಟೆ ಮತ್ತು ಕೋಲಾರ ಈ ಸ್ಥಳಗಳಲ್ಲಿ ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಜ.20 ರೊಳಗಾಗಿ Canteen Officer, Golden Palm Canteen cell, c/o HQ K&K Sub Area, Cubbon Road, Bengaluru – 560001”” ಎಂಬ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಮಿಂಚAಚೆ gpccellkksa@gmail.com ಮೂಲಕ ಕಳುಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಹತೆ, ಅರ್ಜಿ ನಮೂನೆಗಳಿಗಾಗಿ gpcscblr.co.in GPC ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

ಕೀರ್ತಿಶೇಷ ಶಾಮನೂರು ಶಿವಶಂಕರಪ್ಪನವರ ಛಾಯಾಚಿತ್ರ ಸಂಕಲನ: ಡಾ.ಮಂಜುನಾಥ್ ಗೆ ಸನ್ಮಾನ

0

ಕೀರ್ತಿಶೇಷ ಡಾ. ಶಾಮನೂರು ಶಿವಶಂಕರಪ್ಪನವರ ಬಾಲ್ಯದಿಂದ ಅಂತ್ಯದವರೆಗಿನ ಅಮೂಲ್ಯ ಛಾಯಾಚಿತ್ರಗಳ ಸಂಗ್ರಹ ಮಾಡಿಕೊಟ್ಟ ಹಿರಿಯ ಪತ್ರಿಕಾ ಛಾಯಾಗ್ರಾಹಕ ಡಾ. ಎಚ್. ಬಿ. ಮಂಜುನಾಥರನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

ಶಿವಶಂಕರಪ್ಪನವರ ಸೋದರ ಸೊಸೆ ಗಿರಿಜಮ್ಮನವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.