Wednesday, May 6, 2026
Wednesday, May 6, 2026
Home Blog Page 21

Bharat scout and Guides ವಿಪತ್ತು ಸಂದರ್ಭಗಳಲ್ಲಿ ನೆರವಾಗುವ ಯುವ ಆಪದ್ ಮಿತ್ರ

0

Bharat scout and Guides ವಿಪತ್ತು ಸಂದರ್ಭಗಳಲ್ಲಿ ಪ್ರಾಣ ಮತ್ತು ಆಸ್ತಿ ಹಾನಿ ತಡೆಗಟ್ಟಲು, ಯುವ ಸ್ವಯಂ ಸೇವಕರಿಗೆ ತರಬೇತಿ ನೀಡುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದು ಕಮಾಂಡಿಂಗ್ ಆಫೀಸರ್ ಲೆಪ್ಟಿನೆಂಟ್ ಕರ್ನಲ್ ಮಾಣಿಕ್ ಪಟಾನಿಯಾ ಹೇಳಿದರು.

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಸಹಯೋಗದೊಂದಿಗೆ ಶಿವಮೊಗ್ಗದ 300 ಎನ್‌ಸಿಸಿ ಕೆಡೆಟ್‌ಗಳಿಗೆ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವ ಆಪದ್ ಮಿತ್ರ” ನಾಗರೀಕ ರಕ್ಷಣಾ ತರಬೇತಿ ಶಿಬಿರದ ಉದ್ಘಾಟನೆಯಲ್ಲಿ ಮಾತನಾಡಿದರು.

ಯುವ ಆಪದ್ ಮಿತ್ರ ಯೋಜನೆಯು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಭಾರತ್ ಸೌಟ್ಸ್ & ಗೈಡ್ಸ್ ಕರ್ನಾಟಕದ ಸಹಯೋಗದೊಂದಿಗೆ ರೋವರ್ಸ್, ರೇಂಜರ್ಸ್, ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ತರಬೇತಿ ನೀಡುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ ಯುವ ಜನರಿಗೆ ಪ್ರವಾಹ, ಭೂಕಂಪ ಮುಂತಾದ ತುರ್ತು ಸಂದರ್ಭಗಳಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಕೌಶಲ್ಯ ಮತ್ತು ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಭಾರತ್ ಸೌಟ್ಸ್ ಮತ್ತು ಗೈಡ್ಸ್ನ ರೋವರ್ಸ್, ರೇಂಜರ್ಸ್ ಮತ್ತು ದಳನಾಯಕರನ್ನು ತರಬೇತಿ ಶಿಬಿರಗಳಿಗೆ ನಿಯೋಜಿಸಲಾಗುತ್ತದೆ. ವಿವಿಧ ಜಿಲ್ಲೆಗಳಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ತರಬೇತಿ ಪಡೆದವರು ತುರ್ತು ಸಂದರ್ಭಗಳಲ್ಲಿ ರಕ್ಷಣಾ ಕಾರ್ಯಾಚರಣೆ, ಪ್ರಥಮ ಚಿಕಿತ್ಸೆ ಮತ್ತು ಸಹಾಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದರು.

Bharat scout and Guides ಜಿಲ್ಲಾ ಆಯುಕ್ತ (ರೋವರ್) ಕೆ.ರವಿ ಅವರು ಯುವ ಆಪದ್ ಮಿತ್ರ ತರಬೇತಿಯ ಬಗ್ಗೆ ಎನ್‌ಸಿಸಿ ಕೆಡೆಟ್‌ಗಳಿಗೆ ವಿವರಣೆ ನೀಡಿದರು. ಆರ್.ಕೆ ಶಂಕರ್, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ ಕೆ.ವಿ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲೆಯ 300 ಎನ್‌ಸಿಸಿ ಕೆಡೆಟ್‌ಗಳು ಒಂದು ವಾರ ಯುವ ಆಪದ್ ಮಿತ್ರ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಾನುವಾರುಗಳಿಗೆ ಕಾಲುಬಾಯಿ ಜ್ವರ ನಿರೋಧಕ ಲಸಿಕೆ ಕಾರ್ಯಕ್ರಮ

0

ಶಿವಮೊಗ್ಗ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ. 22ರವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ಸಿಬ್ಬಂದಿಗಳು ಮನೆಮನೆಗೆ ತೆರಳಿ ಉಚಿತವಾಗಿ ಲಸಿಕೆಯನ್ನು ಹಾಕಲಿದ್ದು, ಜಾನುವಾರು ಮಾಲೀಕರು ಇಲಾಖಾ ಸಿಬ್ಬಂದಿಗಳೊಂದಿಗೆ ಸಹಕರಿಸಿ ಕಾಲುಬಾಯಿ ರೋಗಮುಕ್ತ ಜಿಲ್ಲೆಯನ್ನಾಗಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

ಏಪ್ರಿಲ್ 20 ರ ಸಂಜೆ 5.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 20 ರ ಸಂಜೆ 5.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ವಿಶ್ವಮಾನವ, ಮಹಾನ್ ಮಾನವತಾವಾದಿ, ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭದ್ರಾವತಿಯ ಆಧ್ಯಾತ್ಮಿಕ ಚಿಂತಕರು ಹಾಗೂ ಮನೋ ಚಿಕಿತ್ಸಕರಾದ ಡಾ. ಸಂತೋಷ್ ಕುಮಾರ್‌ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

B.Y. Raghavendra ಶಿವಮೊಗ್ಗದ ಜನದಟ್ಟಣೆ ಇರುವ ಪ್ರಮುಖ ವೃತ್ತಗಳಲ್ಲಿ ಜಪಾನ್ ಮಾದರಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ರಾಘವೇಂದ್ರರಿಂದ ಸಭೆ

0

B.Y. Raghavendra ಶಿವಮೊಗ್ಗ ನಗರದ ಸುಗಮ ಸಂಚಾರ ಹಾಗೂ ಮೂಲಭೂತ ಸೌಕರ್ಯಗಳ ವೃದ್ಧಿಯ ದೃಷ್ಟಿಯಿಂದ ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾದರು.

ಸಭೆಯ ಪ್ರಮುಖಾಂಶಗಳು:

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ: ಸುಬ್ಬಯ್ಯ ಮೆಡಿಕಲ್ ಕಾಲೇಜಿನಿಂದ ಎಂ.ಆರ್.ಎಸ್ ವೃತ್ತದವರೆಗೆ (NH-13) ಹಾಗೂ ಹರಿಗೆಯಿಂದ ಸಾಗರ ರಸ್ತೆಯ ಶ್ರೀರಾಂಪುರದವರೆಗೆ (NH-206) ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕುರಿತು ಕೇಂದ್ರ ಭೂಸಾರಿಗೆ ಮಂತ್ರಾಲಯಕ್ಕೆ ಸಲ್ಲಿಸಿರುವ ಮನವಿಯ ಪ್ರಗತಿಯ ಬಗ್ಗೆ ಚರ್ಚಿಸಲಾಯಿತು.

ಆಧುನಿಕ ಮೇಲ್ಸೇತುವೆಗಳು (Foot Overbridge): ನಗರದ ಜನದಟ್ಟಣೆ ಇರುವ ಪ್ರಮುಖ ವೃತ್ತಗಳಲ್ಲಿ ಪಾದಚಾರಿಗಳು ರಸ್ತೆ ದಾಟುವಾಗ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಜಪಾನ್ ಮಾದರಿಯ ಆಧುನಿಕ ಮೇಲ್ಸೇತುವೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಎಂ.ಆರ್.ಎಸ್ ವೃತ್ತ, ಸಂದೇಶ್ ಮೋಟಾರ್ ವೃತ್ತ, ಮುಖ್ಯ ಬಸ್ ನಿಲ್ದಾಣ ವೃತ್ತ, ಪ್ರವಾಸಿ ಮಂದಿರ ವೃತ್ತ ಮತ್ತು ಗಾಡಿಕೊಪ್ಪ ಸರ್ಕಾರಿ ಶಾಲೆಯ ಹತ್ತಿರ ಈ ಸೇತುವೆಗಳ ನಿರ್ಮಾಣದ ಸಾಧ್ಯತೆಗಳ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

B.Y. Raghavendra ಈ ಸಭೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ರಾಷ್ಟ್ರೀಯ ಹೆದ್ದಾರಿ ಯೋಜನಾ ವಿಭಾಗದ ಮುಖ್ಯಸ್ಥರಾದ ಶ್ರೀ ಅನುಪ್ ಶರ್ಮ, ಇಇ ಶ್ರೀ ಲೋಕೇಶ್, ಮೆಸ್ಕಾಂ ಇಇ ಶ್ರೀ ವೀರೇಂದ್ರ, ಸಂಚಾರಿ ಪೊಲೀಸ್ ವಿಭಾಗದ ಡಿವೈಎಸ್ಪಿ ಶ್ರೀ ಸಂಜೀವ್ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೊಳಲೂರು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರ: ಆಸ್ತಕರಿಂದ‌ ಅರ್ಜಿ ಆಹ್ವಾನ

0

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ೧೮ ರಿಂದ ೪೯ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

12 ದಿನಗಳ ಕುರಿ ಸಾಕಾಣಿಕೆ ತರಬೇತಿಯು ಎಪ್ರೀಲ್ ,27 ರಿಂದ ಪ್ರಾರಂಭವಾಗಲಿದೆ

ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216(ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9481955721, 9743429595, 9164411580, 9632961707, 8722384541, 9449371579,

2026-27 ನೇ ಸಾಲಿಗೆ ಖಾಸಗಿ ಕೃಷಿ ಕಾಲೇಜು ಆರಂಭಿಸಲು ನೋಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

0

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಯೋಜಿತ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಲೇಜು ಸಂಯೋಜನೆ ಬಯಸುವ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು/ ಹೊಸೈಟಿಗಳು /ಟ್ರಸ್ಟ್ ಗಳಿಂದ ಅರ್ಜಿ ಆಹ್ವಾನಿಸಿದೆ.
ಬಿ.ಎಸ್ಸಿ. (ಹಾನರ್ಸ್) ಕೃಷಿ (ಬಿಎಸ್‌ಸಿ (ಹಾನ್ಸ್) ಕೃಷಿ), ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ಬಿ.ಟೆಕ್ (ಕೃಷಿ ಇಂಜಿನಿಯರಿAಗ್) ಬಿ.ಟೆಕ್.ಕೃಷಿ ಬಯೋಟೆಕ್ನಾಲಜಿ ಬಿ.ಟೆಕ್ (ಕೃಷಿ ಬಯೋಟೆಕ್ನಾಲಜಿ), ಬಿ.ಟೆಕ್ ಫುಡ್ ಟೆಕ್ನಾಲಜಿ ಬಿ.ಎಸ್ಸಿ (ಹಾನರ್ಸ್) ಅರಣ್ಯ (ಬಿಎಸ್ಸಿ ಹಾನರ್ಸ್), ಅರಣ್ಯಶಾಸ್ತç, ಬಿಎಸ್ಸಿ (ಹಾನರ್ಸ್) ಕಮ್ಯೂನಿಟಿ ವಿಜ್ಞಾನ (ಬಿಎಸ್ಸಿ (ಹಾನ್ಸ್)ಸಮುದಾಯ ವಿಜ್ಞಾನ), ಬಿಎಸ್ಸಿ (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್ (ಬಿಎಸ್ಸಿ.(ಹಾನ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್ ಬಿಎಸ್ಸಿ(ಹಾನರ್ಸ್) ತೋಟಗಾರಿಕೆ(ಬಿಎಸ್ಸಿ (ಹಾನ್ಸ್)ತೋಟಗಾರಿಕೆ ಮತ್ತು ಬಿಎಸ್ಸಿ (ಹಾನರ್ಸ್) ರೇಷ್ಮೆ (ಬಿಎಸ್ಸಿ (ಹಾನ್ಸ್) ರೇಷ್ಮೆ ಸಾಕಾಣಿಕೆ) ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಅರ್ಜಿ ಹಾಗೂ ಮಾಹಿತಿಯನ್ನು www.uahs.edu.in ಜಾಲತಾಣದಿಂದ ಪಡೆದು, ಮೇ.06 ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ www.uahs.edu.in ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

Mescom ಏಪ್ರಿಲ್ 19. ಶಿವಮೊಗ್ಗದ ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ವಿದ್ಯಾನಗರ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶ್‌ನಗರ, ಪುರಲೆ, ಅಪೂರ್ವ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಗೋಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶ. ಬಿ.ಹೆಚ್.ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ, ಟಿಜಿಎನ್ ಲೇಔಟ್, ಜೋಸೆಫ್ ನಗರ, ಚರ್ಚ್ ಕಾಂಪೌಂಡ್, ಕಾನ್ವೆಂಟ್ ರಸ್ತೆ, ಲೂರ್ದ್ ನಗರ, ಸರ್.ಎಂ.ವಿ.ರಸ್ತೆ, ಕುವೆಂಪು ರಂಗಮಂದಿರ, ಗಾಂಧಿಪಾರ್ಕ್, ಮಹಾನಗರ ಪಾಲಿಕೆ, ಪಾರ್ಕ್ ಬಡಾವಣೆ, ದುರ್ಗಿಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

MESCOM ಏಪ್ರಿಲ್ 18. ಶಿವಮೊಗ್ಗ ಅಂಬೇಡ್ಕರ್ ಭವನ ಪ್ರದೇಶದ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಏ. 18 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಅಂಬೇಡ್ಕರ್ ಭವನದಿಂದ ಮಲ್ಟಿಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಕಸ್ತೂರಬಾ ರಸ್ತೆ, ಮಹಾನಗರ ಪಾಲಿಕೆ, ವೀರಶೈವ ಕಲ್ಯಾಣ ಮಂಟಪ ಹತ್ತಿರ, ಅಂಬೇಡ್ಕರ್ ರಸ್ತೆ, ನೆಹರು ರಸ್ತೆ, ಬಸವಸದನ ಹತ್ತಿರ, ಕಲ್ಯಾಣ ಜ್ಯುವೆಲರಿ, ವೆಂಕಟೇಶ್ವರ ಸ್ವೀಟ್ ಹೌಸ್, ಶಿವಪ್ಪ ನಾಯಕ ಸರ್ಕಲ್, ಹೂ ಮಾರುಕಟ್ಟೆ, ಗಾಂಧಿಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

National Education Committee ವಿಜ್ಞಾನದಲ್ಲಿ ಎಲ್ಲದಕ್ಜೆ ಉತ್ತರ ಲಭ್ಯ.ಆದರೆ ನೈಜ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ- ಪಿ.ಸಂಜೀವ್ ಕುಮಾರ್

0

National Education Committee ತಾಂತ್ರಿಕ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅದೃಷ್ಟವಂತರು. ಇಂದಿನ ವಿಜ್ಞಾನ ತಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಆದರೆ ಇದುವರೆವಿಗೂ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ದೊರಕಿಲ್ಲ. ರಕ್ತದಾನ ಶ್ರೇಷ್ಠದಾನ ಎಂದು ಡಿವೈಎಸ್ ಪಿ ಸಂಜೀವ್ ಕುಮಾರ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ, ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ, ರೋಟರಿ ಕ್ಲಬ್, ಶಿವಮೊಗ್ಗ ಜ್ಯುಬಿಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕ ಜವಾಹರಲಾಲ್ ನೆಹರು ತಾಂತ್ರಿಕ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜೆ. ಎನ್.ಎನ್.ಸಿ. ಕಾಲೇಜಿನ ಲೈಬ್ರೆರಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ-2027 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮವಾದ ವಿಚಾರಗಳ ಕಡೆಗೆ ಗಮನ ಹರಿಸಬೇಕು. ಮತ್ತು ಭರಿಸುವ ಹಾಗೂ ದೇಹಕ್ಕೆ ಹಾನಿಕಾರಕವಾಗುವ ವಸ್ತುಗಳಿಂದ ದೂರ ಉಳಿದು, ರಸ್ತೆ ಸುರಕ್ಷಿತ ವಾಹನ ಚಾಲನೆಗೆ ಹೆಚ್ಚಿನ ಮಹತ್ವ ನೀಡಿದಾಗ, ಸಮಾಜ ಸುರಕ್ಷಿತವಾಗಿರಲು ಸಹಕಾರಿ. ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗ ದಾತರಾಗಿ. ಆದಾಯ ಪಡೆಯುವುದಕ್ಕಿಂತ, ನೀಡುವುದರಲ್ಲಿ ಹೆಚ್ಚಿನ ಸಂತೋಷವಿದೆ. ವಿದ್ಯಾವಂತರು ಕೃಷಿ ಚಟುವಟಿಗಳಲ್ಲಿ ತಾಂತ್ರಿಕ ನೆರವು ನೀಡಿ ಆರ್ಥಿಕವಾಗಿ ದೇಶ ಸದೃಡವಾಗಲು ಶ್ರಮಿಸಿ ಎಂದು ಎಂದು ಕಿವಿ ಮಾತು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಡಾ. ಟಿ.ಆರ್.ಅಶ್ವಥನಾರಾಯಣ್ ಶೆಟ್ಟಿ ಮಾತನಾಡಿ, ಐವತ್ತು ವರ್ಷಗಳ ಹಿಂದೆ ರಕ್ತದಾನದ ಬಗ್ಗೆ ಇಷ್ಟು ಅನುಕೂಲ ಇರಲಿಲ್ಲ. ತಮ್ಮ ಶ್ರೀನಿಧಿಯಲ್ಲಿ ರಕ್ತದಾನಿಗಳ ದೂರವಾಣಿ ಸಂಖ್ಯೆ ಸಂಗ್ರಹಿಸಿ ಅವಶ್ಯಕರಿಗೆ ಸಹಾಯ ಮಾಡುತ್ತಿದ್ದೆವು. ಅಂದು ವೈಯುಕ್ತಿಕವಾಗಿ ನಲವತ್ತು ಬಾರಿ ರಕ್ತದಾನ ಮಾಡಿದ್ದನ್ನು ಸ್ಮರಿಸಿಕೊಂಡರು.

ಸ್ವಯಂ ಪ್ರೇರಿತ ರಕ್ತದಾನ ಸೇವಾ ಸಂಸ್ಥೆಯ ಅಧ್ಯಕ್ಷರಾದ ಧರಣೇಂದ್ರ ದಿನಕರ್ ಮಾತನಾಡಿ, ತಾವು ಈ ದಿನ ಒಂದು ನೂರ ಇಪ್ಪತ್ತೊಂದನೆ ಬಾರಿಗೆ ರಕ್ತದಾನ ಮಾಡುತ್ತಿದ್ದು, ಸುರೇಶ್ ರವರು ತ್ತೊಂಬತ್ತೆರಡು ಬಾರಿ, ವಾಗೇಶ್ ಎಂಬತ್ತು ಬಾರಿ, ಜಿ.ವಿಜಯಕಮಾರ್ ನಲವತ್ತೈದು ಬಾರಿ, ಬಸವರಾಜ್ ಮುವತ್ತೈದು ಬಾರಿ ಹೀಗೆ ಇನ್ನೂ ಹಲವರು ನಗರದಲ್ಲಿ ರಕ್ತದಾನ ಮಾಡಿದ್ದು ನಾವೆಲ್ಲ ಸೇರಿ ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದಿಂದ ಉತ್ತಮ ಕಾರ್ಯ ಮಾಡುತ್ತಿದ್ದು, ಈ ಉತ್ತಮ ಕಾರ್ಯಕ್ಕೆ ವಿದ್ಯಾರ್ಥಿಗಳ ಸಹಕಾರ ಕೂಡಾ ಬಹಳ ಮುಖ್ಯ ಎಂದರು.

ಸಮಾಜ ಸೇವರಾದ ನವ್ಯಶ್ರೀ ನಾಗೇಶ್ ಮಾತನಾಡಿ, ತಮ್ಮ ದೈನಂದಿನ ದುಡಿಮೆಯಲ್ಲಿ ಕೆಲವು ಭಾಗ ಪ್ರಕೃತಿ ರಕ್ಷಣೆಗೆ, ಇಂತಹ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವವರಿಗೆ ಸಹಕರಿಸಿ, ಸಮಾಜದಲ್ಲಿ ಅಳಿಲು ಸೇವೆ ಸಲ್ಲಿಸುವ ಮೂಲಕ ತೃಪ್ತಿ ಹೊಂದುತ್ತಿರುವುದಾಗಿ ತಿಳಿಸಿದರು.

National Education Committee ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಎನ್.ಎನ್.ಸಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ.ವಿಜಯಕುಮಾರ್ ವಹಿಸಿದ್ದರು. ರೋಟರಿ ಜ್ಯುಬಿಲಿ ಅಧ್ಯಕ್ಷರಾದ ಅಶ್ವಥ್ ಬಿ.ಎಸ್., ಎನ್.ಎಸ್.ಎಸ್. ಅಧಿಕಾರಿ ಅರುಣ್ ಕುಮಾರ್, ಬಸವರಾಜ್, ರೋಟರಿ ಜ್ಯುಬಿಲಿ ಕಾರ್ಯದರ್ಶಿ ರೇವಣಸಿದ್ದಪ್ಪ, ಕಾಲೇಜ್ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Chamber of Commerece Shivamogga ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಸಂಚಾರ ಮುಂದುವರೆಸಲು ಮನವಿ

0

Chamber of Commerece Shivamogga ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಶಿವಮೊಗ್ಗ ಮತ್ತು ಬೆಂಗಳೂರು ವಿಮಾನ ಸೇವೆಗಳನ್ನು ಪ್ರಾರಂಭಿಸಿರುವುದು ಮಲೆನಾಡು ಪ್ರದೇಶಕ್ಕೆ ಅನುಕೂಲವಾಗಿದೆ. ಪ್ರಯಾಣಿಕರ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿದ್ದು, ಲಾಭದಾಯಕ ಮಾರ್ಗವಾಗಿ ನಡೆಯುತ್ತಿದೆ. ಆದರೂ ಪ್ರಸ್ತುತ ಇರುವ ವಿಮಾನ ಸಂಪರ್ಕ ಮತ್ತು ಹಾರಾಟಗಳ ಸಂಖ್ಯೆಗಳು ಕಡಿಮೆ ಇದ್ದು, ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗದ ಕೈಗಾರಿಕೆ, ವ್ಯಾಪಾರ, ಶಿಕ್ಷಣ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಇಲ್ಲ. ಬೆಂಗಳೂರು ಮತ್ತು ಶಿವಮೊಗ್ಗ ಸಂಪರ್ಕವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಬಿ.ಗೋಪಿನಾಥ್ ಮನವಿ ಮಾಡಿದರು.

ಕೈಗಾರಿಕೆಗಳು ಮತ್ತು ಉದ್ಯಮಿಗಳಿಗೆ ಹೊಸ ಹೂಡಿಕೆಗಳನ್ನು ಆಕರ್ಷಿಸಲು ವಿಮಾನ ಸಂಪರ್ಕ ನೆರವಾಗುತ್ತದೆ. ರಾಜ್ಯ ಸರ್ಕಾರದ ಮಹತ್ವದ ಐಟಿ ಬಿಯಾoಡ್ ಬೆಂಗಳೂರು ಯೋಜನೆಗೆ ಸಹಕಾರಿ ಆಗುತ್ತದೆ. ಪ್ರವಾಸೋದ್ಯಮ ಉತ್ತೇಜಿಸುತ್ತದೆ. ಕೃಷಿ ಉತ್ಪನ್ನಗಳನ್ನು ರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸಲು ಕೃಷಿ ಲಾಜಿಸ್ಟಿಕ್ಸ್ ಅನ್ನು ಸುಧಾರಿಸುತ್ತದೆ. ಇಂಡಿಗೋ, ಸ್ಟಾರ್ ಏರ್ ಮತ್ತು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗಳೊಂದಿಗೆ ಸಂವಹನ ನಡೆಸಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೆಚ್ಚಿನ ವಿಮಾನ ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸರ್ಕಾರ ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು. ಶಿವಮೊಗ್ಗ ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವುದರಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ಮಲೆನಾಡಿನ ಆರ್ಥಿಕ, ಪ್ರವಾಸೋದ್ಯಮ ಹಾಗೂ ಉದ್ಯೋಗಾವಕಾಶಗಳಿಗೆ ಶಕ್ತಿ ತುಂಬಿ ಜಿಲ್ಲೆಯ ವ್ಯಾಪಾರ ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿ ಶಿವಮೊಗ್ಗ ಬೆಂಗಳೂರು ವಿಮಾನಯಾನ ಸೇವೆಯನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ, ಇಂಡಿಗೋ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ಸಂಚಾರ ಸೇವೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲು ಬಿಡುವುದಿಲ್ಲ ಎಂದರು.

Chamber of Commerece Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ ಎಂ.ಅಂಗಡಿ, ಕೆ.ಬಿ.ಶಿವಕುಮಾರ್, ಎಸ್.ಎಸ್.ಉದಯಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕುಮಾರ್, ಪ್ರದೀಪ್ ವಿ ಎಲಿ ಹಾಜರಿದ್ದರು.