Thursday, September 17, 2026
Thursday, September 17, 2026
Home Blog Page 2121

ಟಿ-20 : ಸ್ಕಾಟ್ ವಿರುದ್ಧ ನಮಿ ಜಯ

0

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ರ ನಮೀಬಿಯಾ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್ ಶಿಶು ನಮಿಬಿಯ ಜಯಭೇರಿ ಬಾರಿಸಿದೆ.

ಅಬುಧಾಬಿಯಲ್ಲಿ ಬುಧವಾರ ನಡೆದ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ನಮೀಬಿಯ ತಂಡವು ಫೀಲ್ಡಿಂಗ್
ಆಯ್ಕೆಮಾಡಿಕೊಂಡರು. ಟಾಸ್ ಸೋತ ಸ್ಕಾಟ್ಲೆಂಡ್ ತಂಡ ಮೊದಲ ಬ್ಯಾಟಿಂಗ್ನಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು.
109 ರನ್ ಗುರಿಯನ್ನು ಬೆನ್ನಟ್ಟಿದ ನಮೀಬಿಯಾ ತಂಡವು ಜಾನ್ ಸ್ಮಿತ್ ಅವರ ಜವಾಬ್ದಾರಿಯುತ ಆಟದಿಂದಾಗಿ 19.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಜಯಭೇರಿ ಬಾರಿಸಿದೆ. ನಮೀಬಿಯಾ ತಂಡದ ಜಾನ್ ಸ್ಮಿತ್ ಅವರು 23 ಎಸೆತಕ್ಕೆ 2 ಬೌಂಡರಿ, 2 ಸಿಕ್ಸರ್ ಬಾರಿಸಿ 32 ರನ್ ಗಳನ್ನು ಕಲೆಹಾಕಿದರು. ವಿಲಿಯಮ್ಸ್ 23, ಮೈಕಲ್ ವ್ಯಾನ್ ಲಿಂಗೆನ್ 18, ಡೇವಿಡ್ ವೀಸ್ 16 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

ವಿಜ್ಞಾನಿಗಳಿಗೆ ಅಭಿನಂದನೆ ಅರ್ಪಣೆ

0

ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಸರುವಾಸಿಯಾದ ಶಿವಮೊಗ್ಗ ಜಿಲ್ಲೆ ಈಗ ವಿಜ್ಞಾನ ರಂಗದಲ್ಲೂ ಪ್ರಪಂಚ ಗಮನಿಸುವ ಸಾಧನೆ ಮಾಡುತ್ತಿದೆ. ಇತ್ತೀಚೆಗಷ್ಟೇ ಜಗತ್ತಿನ ಶ್ರೇಷ್ಠ ಶೇ.2 ವಿಜ್ಞಾನಿಗಳ ಪಟ್ಟಿಯನ್ನ ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದೆ.
ಅದರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರತಿಭಾವಂತರಾದ ಡಾ.ಬಿ.ಇ. ಕುಮಾರಸ್ವಾಮಿ ಮತ್ತು ಡಾ.ಬಿ.ಜೆ. ಗಿರೀಶ್ ಅವರು ವಿಜ್ಞಾನಿಗಳ ಸ್ಥಾನ ಪಡೆದಿದ್ದಾರೆ.

ಈ ಸಂತೋಷವನ್ನು ಹಂಚಿಕೊಳ್ಳಲು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಅವರನ್ನು ಪುರಸ್ಕರಿಸಲಾಯಿತು.

ಈ ಸಮಾರಂಭದಲ್ಲಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.‌ ಸಿ. ಎಂ. ತ್ಯಾಗರಾಜ, ಸಿಂಡಿಕೇಟ್ ಸದಸ್ಯರುಗಳಾದ ಜಿ.ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಪ್ರೊ. ಕಿರಣ್ ದೇಸಾಯಿ, ರಾಮಲಿಂಗಪ್ಪ.ಹೆಚ್, ಬಿ.ನಿರಂಜನ್ ಮೂರ್ತಿ, ಎನ್.ಆರ್ ಮಂಜುನಾಥ್, ಎಸ್.ಆರ್. ನಾಗರಾಜ್ ಮತ್ತಿತರು ಉಪಸ್ಥಿತರಿದ್ದರು.

ಪೆಗಾಸಸ್ : ತನಿಖಾ ಸಮಿತಿ ರಚನೆ

0

ಇಸ್ರೇಲ್ ನಿರ್ಮಿತ ಪೆಗಾಸಸ್ ತಂತ್ರಾಂಶ ಬಳಸಿ ಗೂಢಚರ್ಯೆ ಮಾಡಲಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯು ಆಗಾಗ ಕಾಣಿಸಿಕೊಳ್ಳುತ್ತಿದೆ.
ಕೇಂದ್ರ ಸರ್ಕಾರವು ಈಗಾಗಲೇ ಸುಪ್ರೀಂ ಗೆ ಉತ್ತರಿಸಿದ್ದರೂ, ಅದು ತೃಪ್ತಿಕರವಲ್ಲವೆಂದು ಅಭಿಪ್ರಾಯ ಪಟ್ಟ ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಿತ್ತು.ಈ ವಿಚಾರವಾಗಿ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ಪೆಗಾಸಸ್ ಕುರಿತ 12 ದಾವೆಗಳ ಸಂಯೋಜಿತ ಕೇಸ್ ನ ವಿಚಾರಣೆಯ ತೀರ್ಪು ಪ್ರಕಟಿಸುವ ಮುನ್ನ ಸಿಜೆಐ ಎನ್.ವಿ. ರಮಣ ಅವರು,’ಒಂದು ರಹಸ್ಯವನ್ನು ಕಾಪಾಡಬೇಕು ಎಂದು ನೀವು ಬಯಸಿದರೆ, ಅದನ್ನು ನೀವು ನಿಮ್ಮಿಂದಲೇ ಬಚ್ಚಿಟ್ಟುಕೊಳ್ಳಬೇಕು’ ಎಂಬ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
ದೇಶದಲ್ಲಿ ಖಾಸಗೀತನದ ಹಕ್ಕುಗಳ ರಕ್ಷಣೆ ಕುರಿತು ಆಗಾಗ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ‘ ಡಿಜಿಟಲ್ ಅತ್ಯವಶ್ಯಕ’ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಈ ದೆಸೆಯಲ್ಲಿ ಕೇಂದ್ರವೇ ಸಮಿತಿಯನ್ನು ರಚಿಸಿದರೆ ಪೂರ್ವಾಗ್ರಹಕ್ಕೆ ಅವಕಾಶವಾದಂತಾಗುತ್ತದೆ. ಆದ ಕಾರಣ ಸುಪ್ರೀಂ ಮಧ್ಯ ಪ್ರವೇಶ ಮಾಡಿ ನ್ಯಾಯಯುತ ಸಮಿತಿಗೆ ಅವಕಾಶ ಕೊಟ್ಟಿದೆ.
ಮುಖ್ಯವಾಗಿ ಈ ತನಿಖೆಯು ಭಾರತೀಯ ನಾಗರಿಕರ ಮೊಬೈಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ಪೆಗಾಸಸ್ ರಹಸ್ಯ ಜಾಲ ಬೀಸಿದೆಯೇ ? ಅವುಗಳಲ್ಲಿನ ದತ್ತಾಂಶವನ್ನು ಪಡೆಯಲಾಗಿದೆಯೇ? ಎಂಬ ಮುಂತಾದ ಗಹನೀಯ ಅಂಶಗಳ ಕುರಿತು ತನಿಖೆ ಬೆಳಕು ಚೆಲ್ಲಬೇಕಿದೆ.
ಈ ಸಮಿತಿಯಲ್ಲಿ ತನಿಖೆಯ ಉಸ್ತುವಾರಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ಕಾರ್ಯನಿರ್ವಹಿಸಲಿದ್ದಾರೆ.
ಇವರ ಜೊತೆಗೆ ನಿವೃತ್ತ ಐಪಿಎಸ್ ಅಧಿಕಾರಿ ಅಲೋಕ್ ಜೋಶಿ, ಅಂತರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆಯ ಸಂದೀಪ್ ಒಬೆರಾಯ್, ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಸೈಬರ್ ಭದ್ರತೆ ಮತ್ತು ಡಿಜಿಟಲ್ ವಿಜ್ಞಾನ ವಿಭಾಗದ ಡೀನ್, ಪ್ರಭಾಹರನ್ ಪಿ., ಅಮೃತ ವಿಶ್ವ ವಿದ್ಯಾಪೀಠಂ, ಹಾಗೂ ಐಐಟಿ ಬಾಂಬೆಯ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಅಶ್ವಿನ್ ಅನಿಲ್ ಗುಮಸ್ತೆ, ಕಾರ್ಯನಿರ್ವಹಿಸಲಿದ್ದಾರೆ.

ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಆಯ್ಕೆ ಪಟ್ಟಿ

0

ಒಲಿಂಪಿಕ್ ಸ್ವರ್ಣ ವಿಜೇತ ನೀರಜ್ ಚೋಪ್ರಾ, ಫುಟ್ಬಾಲ್ ತಾರೆ ಸುನಿಲ್ ಛೇಟ್ರಿ,ಮಹಿಳಾ ಕ್ರಿಕೆಟರ್ ಮಿಥಾಲಿ ಸೇರಿದಂತೆ 11 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪುರಸ್ಕಾರ, ಮತ್ತು 35 ಕ್ರೀಡಾ ಸಾಧಕರ ಹೆಸರುಗಳನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಟೋಕಿಯೋದಲ್ಲಿ ಬೆಳ್ಳಿ ಪದಕ ಗೆದ್ದ ಕುಸ್ತಿಪಟು ರವಿ ದಹಿಯಾ, ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೋರ್ಗೂಹೈನ್, ಭಾರತದ ಹಾಕಿ ತಂಡದ ಗೋಲ್ ಕೀಪರ್ ಶ್ರೀಜೇಶ್,
ಪ್ಯಾರಾಲಿಂಪಿಕ್ಸ್ ಪದಕ ವಿಜೇತರಾದ ಶೂಟರ್ ಅವನಿ ಲೇಖರ, ಮನೀಷ್ ನರ್ವಾಲ್, ಜಾವೆಲಿನ್ ಥ್ರೋ ಅಥ್ಲೀಟ್ ಸುಮಿತ್ ಅಂಟಿಲ್, ಬ್ಯಾಡ್ಮಿಂಟನ್ ಆಟಗಾರರಾದ ಪ್ರಮೋದ್ ಭಗತ್, ಕೃಷ್ಣ ನಾಗರ್ ಅವರಿಗೆ ಖೇಲ್ ರತ್ನ, ಹಾಗೂ ಹೆಮ್ಮೆಯ ಕನ್ನಡಿಗ ಸುಹಾಸ್ ಯತಿರಾಜ್ ಅವರ ಹೆಸರು ಅರ್ಜುನ ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿದೆ. ಈ ಎಲ್ಲಾ ಹೆಸರುಗಳನ್ನು ಶಿಫಾರಸು ಮಾಡಿ ಆಯ್ಕೆ ಪಟ್ಟಿಯನ್ನು ಕ್ರೀಡಾ ಸಚಿವಾಲಯಕ್ಕೆ ಸಲ್ಲಿಸಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿ

0

ರಾಜ್ಯಾದ್ಯಂತ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 2021-22 ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 3,522 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿ ಸರ್ಕಾರ ಅನುಮೋದನೆ ನೀಡಿದೆ.
ಹೊಸ ನೇಮಕದ ಬದಲು ಈ ಹಿಂದೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಅರ್ಜಿ ಪಡೆದು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಪರಿಶೀಲಿಸಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
1,3,5 ನೇ ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿನ ಕಾರ್ಯಭಾರಕ್ಕೆ ಅನುಗುಣವಾಗಿ ಉಪನ್ಯಾಸಕರ ನೇಮಕ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ.
ಕಳೆದ ವರ್ಷ ತೆರವಾಗಿದ್ದ ಒಟ್ಟು 2,832 ಉಪನ್ಯಾಸಕ ಹುದ್ದೆಗಳ ಪೈಕಿ 1,835 ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗಿತ್ತು.ಆದರೆ, ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಗೊಂಡಿದೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು. ಸರ್ಕಾರವು ಎಂಟು ತಿಂಗಳ ಅವಧಿಗೆ 3,522 ಅತಿಥಿ ಉಪನ್ಯಾಸಕರ ನೇಮಕಕ್ಕೆ ಒಪ್ಪಿಗೆ ಸೂಚಿಸಿದೆ.

ರಾಜ್ಯ ನೌಕರರಿಗೆ ತುಟ್ಟಿಭತ್ಯೆ ಕೊಡುಗೆ

0

ರಾಜ್ಯದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವದ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಕೆಲ ದಿನಗಳ ಹಿಂದೆಯಷ್ಟೇ ಶೇ.3 ರಷ್ಟು ತುಟ್ಟಿಭತ್ತೆ ಹೆಚ್ಚಿಸಿತ್ತು. ಈಗ ರಾಜ್ಯ ಸರ್ಕಾರಿ ನೌಕರರಿಗೂ ಇದೇ ಸೌಲಭ್ಯ ಒದಗಿಸಲಾಗಿದ್ದು ಹಣಕಾಸು ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.
ಮೂಲ ವೇತನದಲ್ಲಿ ಶೇಕಡಾ ಮೂರರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಿಸಿ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಆದೇಶಿಸಿದೆ.
ರಾಜ್ಯದ 5.50 ಲಕ್ಷ ನೌಕರರು ಹಾಗೂ 5 ಲಕ್ಷ ಪಿಂಚಣಿದಾರರು ಸೇರಿದಂತೆ ಒಟ್ಟು 10.50 ಲಕ್ಷ ಮಂದಿ ತುಟ್ಟಿಭತ್ಯೆ ಹೆಚ್ಚಳದ ಲಾಭ ಪಡೆಯಲಿದ್ದಾರೆ.
ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 6,616 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದರೊಂದಿಗೆ ವೇತನ ಮತ್ತು ಪಿಂಚಣಿ ಭರಿಸಲೆಂದು ವಾರ್ಷಿಕ 75,000 ಕೋಟಿ ರೂಪಾಯಿಗಳನ್ನು ಸರ್ಕಾರ ವ್ಯಯ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಚೀನಾ : ಬೆಂಬಿಡದ ಕೋವಿಡ್

0

ಕಳೆದ ಮಂಗಳವಾರ ಜನನಿಬಿಡ ಲಾನ್ಸೋ ನಗರದಲ್ಲಿ 29 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇಡೀ ನಗರವನ್ನು ಲಾಕ್ ಡೌನ್ ಮಾಡಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಅಥವಾ ವೈದ್ಯಕೀಯ ಚಿಕಿತ್ಸೆಗೆ ನಾಗರೀಕರಿಗೆ ಬಂದು ಹೋಗಲು ಮಾತ್ರ ಅವಕಾಶವಿದೆ.

ಚೀನಾದ ಉತ್ತರಭಾಗದ 10 ಸಾವಿರಕ್ಕೂ ಹೆಚ್ಚು ಜನ ಮನೆಯಲ್ಲಿಯೇ ಇರಬೇಕೆಂದು ನಿರ್ಬಂಧಿಸಲಾಗಿದೆ. ಪ್ರವಾಸಿ ತಾಣಗಳ ಭೇಟಿಗೆ ಮಿತಿ ನಿರ್ಬಂಧ ಜಾರಿಗೊಳಿಸಿದೆ. ಅಗತ್ಯವಿಲ್ಲದೇ ಯಾರು ನಗರವನ್ನು ಬಿಟ್ಟು ಹೋಗಬಾರದೆಂದು ಎಚ್ಚರಿಸಿದೆ. ಡೆಲ್ಟಾ ವೈರಾಣು ಸೋಂಕಿನ ಶೀಘ್ರ ಹರಡುವಿಕೆಯಿಂದ ಚೀನಾದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಗುಂಪು-ಗುಂಪಾಗಿ ಬರುವ ದೇಶಿಯ ಪ್ರವಾಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಆರೋಗ್ಯ ಸಿಬ್ಬಂದಿಗೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ. ಬರುವ ದಿನಗಳಲ್ಲಿ ಈ ವೈರಾಣು ಹೆಚ್ಚು ಸೋಂಕನ್ನು ಹರಡಬಹುದೆಂದು ತಪಾಸಣೆಯನ್ನು ಕೂಡ ಶೀಘ್ರ ಕೈಗೊಳ್ಳಬೇಕೆಂದು ಆದೇಶಿಸಲಾಗಿದೆ.

ಚೀನಾ ರಾಜಧಾನಿ ಬೀಜಿಂಗ್ ನ ಚಾನ್ಸ್ ಪಿಂಗ್ ಜಿಲ್ಲೆಯಲ್ಲಿ ಸ್ಥಳೀಯವಾಗಿ 2 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ಸಂಗತಿಯನ್ನು ಬೀಜಿಂಗ್ ನ ರೋಗ ನಿಯಂತ್ರಣ ಕೇಂದ್ರದ ಉಪನಿರ್ದೇಶಕರಾದ ಪಾಂಗ್ ಜಿಂಗ್ ಹೊ ಹೇಳಿದ್ದಾರೆ. 55 ವರ್ಷ ಮೇಲಿನ ವ್ಯಕ್ತಿಗಳಿಗೆ ಈ ಹೊಸ ಸೋಂಕು ಉಂಟಾಗಿದ್ದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪಾಂಗ್ ಜಿಂಗ್ ಹೊ ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದಂತೆ ಮಂಗೋಲಿಯಾದ ಒಳನಾಡು, ಗೈಜೊ, ಗ್ಯಾನ್ ಸೂ, ಹೆಬೇ, ಹುನಾನ್ ಮತ್ತು ಶಾಂಜಿ ಮುಂತಾದ ನಗರಗಳಲ್ಲಿ ಈ ಹೊಸ ಪ್ರಕರಣ ಪತ್ತೆಯಾಗಿದೆ.

ಚೀನಾದ ಮುಖ್ಯ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು 96,797 ಆಗಿದ್ದು, ಕಳೆದ ಭಾನುವಾರ ಪತ್ತೆಯಾಗಿದೆ. ಇದರಲ್ಲಿ ಇನ್ನು ಚಿಕಿತ್ಸೆ ಪಡೆಯುತ್ತಿರುವ 573 ರೋಗಿಗಳನ್ನು ಕೂಡ ಒಳಗೊಂಡಿದೆ ಹಾಗೂ ಇದರಲ್ಲಿ 20 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಟಿ-20 : ಬಾಂಗ್ಲಾ ವಿರುದ್ಧ ಇಂಗ್ಲೆಂಡ್ ರೋಚಕ ಗೆಲುವು

0

ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ‘ಎ’ ಗುಂಪಿನಲ್ಲಿರುವ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶದ ನಡುವೆ ಪಂದ್ಯ ನಡೆಯಿತು. ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿತು.

ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶದ ನಡುವಿನ ಆಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತ್ತು. ಆ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡವು ಕೇವಲ 14.1 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 126 ರನ್ ಬಾರಿಸಿ ಭರ್ಜರಿ ಜಯಗಳಿಸಿದೆ.

28 ರನ್ ಗಳಿಸಿದ ಡೇವಿಡ್ ಮಲಾನ್ ಮತ್ತು 8 ರನ್ ಗಳಿಸಿದ ಜಾನಿ ಬೋಸ್ಟ್ ಅಜೇಯರಾಗಿ ಉಳಿದರು. ಇಂಗ್ಲೆಂಡಿನ ಆರಂಭಿಕ ಜೋಡಿ ರಾಯ್ ಮತ್ತು ಬಟ್ಲರ್ 18 ರನ್ ಗಳಿಸಿ ಕೇವಲ 4 ಓವರ್ ಗಳಲ್ಲಿ 37 ರನ್ ಗಳನ್ನು ಕಲೆ ಹಾಕಿದರು.
ರಾಯ್ ಮತ್ತು ಡೇವಿಡ್ ಮಲಾನ್ ಎರಡನೇ ವಿಕೆಟ್ ಜೊತೆಯಾಟದಲ್ಲಿ 73 ರನ್ ಗಳಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು.ಆದರೆ 13ನೇ ಓವರ್ ನಲ್ಲಿ ರಾಯ್ ಔಟಾದರು. ನಂತರ ಬಂದ ಮಿಲಾನ್ ಮತ್ತು ಜಾನಿ ವಿಕೆಟ್ ಪತನಕ್ಕೆ ಅವಕಾಶ ಮಾಡಿಕೊಡದೆ ಇಂಗ್ಲೆಂಡ್ ತಂಡವನ್ನು ಗೆಲುವಿನ ಗಡಿ ತಲುಪಿಸಿದರು.

ಬೀದಿ ಬದಿ ವ್ಯಾಪಾರಗಳಿಗೆ ಪೋಲಿಸ್ ಕಟ್ಟೆಚ್ಚರಿಕೆ

0

ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು
ಶಿವಮೊಗ್ಗದ ಬಿ.ಹೆಚ್ ರಸ್ತೆ, ನೆಹರೂ ರಸ್ತೆ, ಗಾಂಧಿ ಬಜಾರ್ ಸೇರಿದಂತೆ ಪ್ರಮುಖ ರಸ್ತೆಯ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅಂಗಡಿಗಳ ಬೋರ್ಡ್, ಕೆಲವು ಸಾಮಾಗ್ರಿಗಳನ್ನು ಟೈಗರ್ ವಾಹನದಲ್ಲಿ ಕೊಂಡೋಯ್ದ ಅಧಿಕಾರಿಗಳು ಪುಟಪಾತ್ ನಲ್ಲಿ ವ್ಯಾಪಾರ ಮಾಡದಂತೆ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ದಿನನಿತ್ಯ ಶಿವಮೊಗ್ಗದಲ್ಲಿ ಮುಖ್ಯರಸ್ತೆಗಳ ಆಜು-ಬಾಜಿನಲ್ಲಿ ವ್ಯಾಪಾರ ಮಾಡಿ, ಬದುಕು ಕಟ್ಟಿಕೊಳ್ಳುವುದನ್ನು ನೋಡಿದ್ದೇವೆ. ಅವರಿಗೆ ಸ್ವಂತ ಕಟ್ಟಡವಿಲ್ಲ, ಬಾಡಿಗೆ ನೀಡಲು ಶಕ್ತಿಯಿಲ್ಲ. ಹೀಗಾಗಿ ಅನಿವಾರ್ಯತೆಯಿಂದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದಾಗಿ ಪುಟ್ಬಾತ್ ನಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೀದಿಬದಿಯ ಇಂಥ ವ್ಯಾಪಾರಿಗಳದ್ದು ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ.ಈ ಸಮಸ್ಯೆಗಳನ್ನು ಅತ್ಯಂತ ಸಂವೇದನಾಶೀಲತೆಯಿಂದ ಬಗೆಹರಿಸುವುದು ಮಹಾನಗರಪಾಲಿಕೆಯ ಜವಾಬ್ದಾರಿಯೂ ಆಗಿದೆ.

ಟಿ-20 ಪಾಕ್ ಸತತ ಗೆಲುವು

0

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಗ್ರೂಪ್ 2 ರ ಹಂತದಲ್ಲಿರುವ ಪಾಕಿಸ್ತಾನ. ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ತಂಡಗಳ ವಿರುದ್ಧ ಪಂದ್ಯ ನಡೆಯಿತು. ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ತಂಡದ ವಿರುದ್ಧ ಭರ್ಜರಿ ಜಯಗಳಿಸಿದೆ.

ಶಾರ್ಜಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ನ್ಯೂಜಿಲೆಂಡ್ ತಂಡ ಕೇವಲ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. 134 ರನ್ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿದ ಪಾಕಿಸ್ತಾನ ತಂಡವು ಕೇವಲ 18.4 ಓವರ್ ಗಳಲ್ಲಿ ಕೇವಲ 5 ವಿಕೆಟ್ ನಷ್ಟಕ್ಕೆ 135 ರನ್ ಬಾರಿಸಿ ಜಯ ಸಾಧಿಸಿದೆ.

ಮೊದಲ ವಿಕೆಟ್ ಜೊತೆಯಾಟಕ್ಕೆ ಕಾಲಿಟ್ಟ ಮಲ್ಲಿಕ್ ಮತ್ತು ಆಸಿಫ್ ಇವರ ಆಟ ಭರ್ಜರಿಯಾಗಿತ್ತು. ಮಲ್ಲಿಕ್ ಅವರ ಅಮೂಲ್ಯ ಬ್ಯಾಟಿಂಗ್ ನಿಂದ ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಗಳನ್ನು ಸಿಡಿಸಿ 27 ರನ್ ಗಳಿಸಿದರು. ಹಾಗೆಯೇ ಆಸಿಫ್ ಅಲಿ ಅವರು ಕೇವಲ 12 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸಿಡಿಸಿ 27 ರನ್ ಗಳಿಸಿದರು. ಇವರ ನಡುವಿನ ಅಜೇಯ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಘಟ್ಟದಲ್ಲಿ ಸತತ ಎರಡನೇ ಜಯಗಳಿಸಿ ಇತಿಹಾಸ ದಾಖಲಿಸುವುದಕ್ಕೆ ನೆರವಾದರು.
ಗ್ರೂಪ್ -1 ರಲ್ಲಿ ಪಾಕಿಸ್ತಾನ ತಮ್ಮ ಸ್ಥಾನವನ್ನು ಭದ್ರಗೊಳಿಸುವಲ್ಲಿ ಲಗ್ಗೆ ಹಾಕಿದೆ. ಬರುವ 31ರಂದು ಭಾರತ – ನ್ಯೂಜಿಲ್ಯಾಂಡ್ ತಂಡಗಳ ನಡುವೆ ನಡೆಯಲಿರುವ ಪಂದ್ಯ, ಸೆಮಿಫೈನಲ್ ಪಂದ್ಯವನ್ನು ನಿರ್ಧರಿಸುವಲ್ಲಿ ಪ್ರಮುಖವಾಗಿದೆ.