Saturday, February 21, 2026
Saturday, February 21, 2026
Home Blog Page 215

S.N.Chennabasappa ಶಿವಮೊಗ್ಗ ದಸರಾ- 2025 ಆಚರಣೆ. ಶಾಸಕ ಚೆನ್ನಿ & ಪಾಲಿಕೆ ಆಯುಕ್ತರ ಪೂರ್ವಸಿದ್ಧತಾ ಸಭೆ

0

S.N.Chennabasappa ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ, ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲಿಕೆಯ ಆಯುಕ್ತರಾದ ಮಾನ್ಯ ಮಾಯಣ್ಣ ಗೌಡ ಅವರೊಂದಿಗೆ “ಶಿವಮೊಗ್ಗ ದಸರಾ – 2025” ಕುರಿತು ಸಭೆ ನಡೆಸಿ, ದಸರಾ ಉತ್ಸವವನ್ನು ಯಶಸ್ವಿಯಾಗಿ, ಸಾಂಸ್ಕೃತಿಕ ವೈಭವದಿಂದ ಹಾಗೂ ಸಾರ್ವಜನಿಕರ ಹೆಚ್ಚಿನ ಭಾಗವಹಿಸಿಕೊಡುವ ರೀತಿಯಲ್ಲಿ ಆಯೋಜಿಸುವ ಕುರಿತು ಅನೇಕ ವಿಷಯಗಳನ್ನು ಚರ್ಚಿಸಿದರು.

ಈ ಸಂದರ್ಭದಲ್ಲಿ:

  1. ಹತ್ತು ದಿನಗಳ ಕಾಲ ನಡೆಯಲಿರುವ ಶಿವಮೊಗ್ಗ ದಸರಾ ಉತ್ಸವಕ್ಕಾಗಿ ಸಮಗ್ರ ಸಿದ್ಧತೆಗಳನ್ನು ತಕ್ಷಣದಿಂದ ಆರಂಭಿಸಲು ಸೂಚಿಸಿದರು.
  2. ಉತ್ಸವದ ಸುಗಮ ನಿರ್ವಹಣೆಗೆ ತಾತ್ಕಾಲಿಕ ಸಮಿತಿ ರಚಿಸುವ ನಿರ್ಧಾರ ಕೈಗೊಂಡರು.
  3. ಉತ್ಸವದ ವಿವಿಧ ತಯಾರಿಗಳನ್ನು ನೋಡಿಕೊಳ್ಳಲು ಒಟ್ಟು 14 ಸಮಿತಿಗಳನ್ನು ರಚಿಸಲು ನಿರ್ದೇಶನ ನೀಡಿದರು.
  4. ಅಂಬಾರಿ ಉತ್ಸವ ಕಾರ್ಯಕ್ರಮಕ್ಕಾಗಿ ಅಗತ್ಯ ತಯಾರಿಗಳನ್ನು ಸಮಯಕ್ಕೆ ಮುನ್ನ ಪೂರ್ಣಗೊಳಿಸಲು ಸೂಚಿಸಿದರು.
  5. ಜಂಬೂಸವಾರಿ ಕಾರ್ಯಕ್ರಮಕ್ಕೆ ಆನೆಗಳ ಅನುಮತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
  6. ಉತ್ಸವಕ್ಕೆ ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರದಿಂದ ತರುವ ಕುರಿತು ಸಮಾಲೋಚನೆ ನಡೆಸಿದರು.
  7. ಸಾರ್ವಜನಿಕರ ಹೆಚ್ಚಿನ ಪಾಲ್ಗೊಳ್ಳುವಿಕೆ, ಪ್ರವಾಸಿಗರ ಆಕರ್ಷಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯತೆ ಮತ್ತು ಭದ್ರತಾ ಕ್ರಮಗಳಿಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು.
  8. ಉತ್ಸವದ ಹತ್ತು ದಿನಗಳ ಅವಧಿಯಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಕಲಾ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮನ್ವಯದೊಂದಿಗೆ, ಎಲ್ಲ ವರ್ಗದ ಜನರಿಗೆ ಆಕರ್ಷಕ ಅನುಭವ ಒದಗಿಸಲು ತೀರ್ಮಾನಿಸಲಾಯಿತು.
  9. ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಅಂಬೇಡ್ಕರ್ ಭವನ, ಕುವೆಂಪು ರಂಗಮಂದಿರ ಹಾಗೂ ಹಳೆ ಜೈಲು ಆವರಣವನ್ನು ಮುಂಚಿತವಾಗಿ ಕಾಯ್ದಿರಿಸಿ, ದಸರಾ ಉತ್ಸವಕ್ಕೆ ಸಂಪೂರ್ಣವಾಗಿ ಮೀಸಲಿಡುವಂತೆ ಸೂಚಿಸಿದರು.

ಜಗತ್ತಿಗೆ ಬಟ್ಟೆಯ ಮೊಟ್ಟ ಮೊದಲು ಪರಿಚಯ ಮಾಡಿಕೊಟ್ಟಿದ್ದೇ ಭಾರತ- ಡಾ.ಹೆಚ್.ಬಿ.ಮಂಜುನಾಥ್

0

ವಿಶ್ವದ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೋದ್ಯಮದ ಪಾತ್ರವು ಮಹತ್ತರವಾಗಿದ್ದು ನೇಕಾರ ವೃತ್ತಿಯು ಇದರ ಮೂಲವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.

ಅವರು ನಗರದ ಸ್ವಕುಳ ಸಾಳಿ ಸಮಾಜ ನೇಕಾರ ವತಿಯಿಂದ ಸದ್ಯೋಜಾತ ಶಿವಾಚಾರ್ಯ ಹಿರೇಮಠದಲ್ಲಿ ಏರ್ಪಾಡಾಗಿದ್ದ ಭಗವಾನ್ ಶ್ರೀ ಜಿಹ್ವೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಜವಳಿ ಕೈಗಾರಿಕೋದ್ಯಮದ ಮೂಲಪುರುಷರು ನೇಕಾರರು. ಕೈಮಗ್ಗದಿಂದ ಬಟ್ಟೆ ನೇಯುವ ನೇಕಾರರಿಗೆ ಭಗವಾನ್ ಜಿಹ್ವೇಶ್ವರರು ಆರಾಧ್ಯ ದೈವವಾಗಿದ್ದು ಶಿವನ ನಾಲಗೆಯಿಂದ ಹುಟ್ಟಿ ಬಂದ ಜೀಹ್ವೇಶ್ವರರು ದೇವತೆಗಳಿಗೆ ಉಡಲು ಬಟ್ಟೆ ನೇಯ್ದು ಕೊಟ್ಟರು. ನೇಯ್ಗೆಯಲ್ಲಿ ಉದ್ದ ನೂಲಿನ ಹಾಸು ಹಾಗೂ ಅಡ್ಡನೂಲಿನ ಹೊಕ್ಕು ಮುಖ್ಯವಾಗಿದ್ದು ಉದ್ದನೂಲಿನ ಹಾಸು ಜ್ಞಾನದ ವೈಶಾಲ್ಯತೆಯ ಸಂಕೇತವಾದರೆ ಅಡ್ಡನೂಲಿನ ಹೊಕ್ಕು ವಿದ್ಯೆಯ ಸಂಕೇತವಾಗುತ್ತದೆ. ಹಾಸು ಹೊಕ್ಕು ನೂಲುಗಳು ಕೂಡಿ ವಸ್ತ್ರ ಸಿದ್ಧವಾಗುವಂತೆ ಸುಜ್ಞಾನ ಸದ್ವಿದ್ಯೆಗಳು ಕೂಡಿದಾಗ ಸುಸಂಸ್ಕೃತಿ ಸಾಕಾರವಾಗುತ್ತದೆ. ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಾದ ಇಂದೇ ನೇಕಾರರ ಮೂಲಪುರುಷರಾದ ಜಿಹ್ವೇಶ್ವರರ ಜಯಂತಿ ಬಂದಿರುವುದು ಬಹಳ ವಿಶೇಷ ಎಂದರಲ್ಲದೆ ಜಗತ್ತಿಗೆ ಬಟ್ಟೆಯ ಪರಿಚಯವನ್ನು ಮೊಟ್ಟಮೊದಲು ಮಾಡಿ ಕೊಟ್ಟಿದ್ದು ಭಾರತ ದೇಶ. ವಿಶ್ವದ ಜವಳಿ ಕೈಗಾರಿಕೋದ್ಯಮದ ಮೊತ್ತವು ವಾರ್ಷಿಕ ಸುಮಾರು ಒಂದುವರೆ ಟ್ರಿಲಿಯನ್ ಡಾಲರ್ ಗಳಷ್ಟಿದ್ದರೆ ಭಾರತದ ಜವಳಿ ಉದ್ಯಮದ ವಾರ್ಷಿಕ ಮೊತ್ತವೇ ಸುಮಾರು 160 ಬಿಲಿಯನ್ ಡಾಲರ್ ಗಳಷ್ಟಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಅವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಿಗೆ ಸಕಾರಾತ್ಮಕ ಉತ್ತೇಜನಗಳ ಅವಶ್ಯಕತೆ ಇದ್ದು ಇಂತಹ ಕಾರ್ಯಕ್ರಮಗಳಿಗೆ ಮಕ್ಕಳು ಹೆಚ್ಚಾಗಿ ಬರುವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಬಿ ಎನ್ ಮಲ್ಲೇಶ್ ರವರು ಕುಲ ಕಸಬುಗಳಿಗೆ ತೊಂದರೆ ಬಂದಾಗ ಬೇರೆ ವೃತ್ತಿ ಅವಲಂಬಿಸಲು ಶಿಕ್ಷಣವು ಅವಶ್ಯ ಮಕ್ಕಳ ಉತ್ತಮ ಶಿಕ್ಷಣಕ್ಕೆ ಆದ್ಯತೆ ಕೊಡಬೇಕೆಂದರು.

ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಿ ಮಾಲತೇಶ್ ರಾವ್ ಜಾದವ್ ಮುಖ್ಯ ಅತಿಥಿಗಳಾಗಿ ಮಾತನಾಡಿ ಮುಂದಿನ ವರ್ಷಗಳಲ್ಲಿ ಸಮಾಜದವರು ತಮ್ಮದೇ ಆದ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಸುವಂತೆ ಅಗಲಿ ಎಂದು ಆಶಿಸಿದರು.

ಸಾನಿಧ್ಯ ವಹಿಸಿ ಆಶೀರ್ವಚನವನ್ನು ನೀಡಿದ ಜಡೆಸಿದ್ದ ಶಿವಯೋಗೀಶ್ವರ ಮಠದ ಡಾ. ಶಿವಾನಂದ ಮಹಾಸ್ವಾಮಿಗಳು ಜಿಹ್ವೆ ಎಂದರೆ ನಾಲಿಗೆ, ನಾಲಿಗೆಯನ್ನು ಹರಿಬಿಟ್ಟಲ್ಲಿ ಅಪಾಯ ತಪ್ಪಿದ್ದಲ್ಲ, ಅದಕ್ಕಾಗಿಯೇ ಭಗವಂತ ನಾಲಿಗೆಯ ನಿಗ್ರಹಕ್ಕೆ ಮುಚ್ಚಳ ರೂಪದಲ್ಲಿ ತುಟಿಗಳನ್ನು ಕೊಟ್ಟಿದ್ದಾನೆ ಎಂದರು.

ದಾವಣಗೆರೆ ಸ್ವಕುಳಸಾಳಿ ಸಮಾಜದ ಅಧ್ಯಕ್ಷರಾದ ಸುರೇಂದ್ರ ಕುಮಾರ್ ವಾಂಜ್ರೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ದಾನಿಗಳಿಗೆ ಸನ್ಮಾನ ನೆರವೇರಿತು.

ಕ್ಷೀರಸಾಗರದ ಹನುಮಂತಪ್ಪ, ಡಿ ನಾಗೇಂದ್ರ ಸರೋದೆ, ಗಣೇಶ್ ಕ್ಷೀರಸಾಗರ ಮುಂತಾದವರು ಉಪಸ್ಥಿತರಿದ್ದ ವೇದಿಕೆಯಲ್ಲಿ ಕಾರ್ಯಕ್ರಮದ ನಿರೂಪಣೆಯನ್ನು ಪ್ರಧಾನ ಕಾರ್ಯದರ್ಶಿ ಧರ್ಮರಾಜ್ ವಿ ಏಕಬೋಟೆ ಮಾಡಿದರೆ ಪ್ರಾರ್ಥನೆಯನ್ನು ಸಮಾಜದ ಮಹಿಳಾ ಮಂಡಳಿಯವರು ಹಾಡಿದರು.

ಸ್ವಾಗತವನ್ನು ಮಂಜುನಾಥ ಕಾಂಬ್ಳೆ ಕೋರಿದರೆ ವಂದನೆಗಳನ್ನು ವಾಸುದೇವ ಸಾಕ್ರೆ ಅರ್ಪಿಸಿದರು. ಸುಬ್ರಹ್ಮಣ್ಯಂ ಕೆಂದೋಳೆ ವಿರಚಿತ ಮೂಲಸ್ಥಂಭ ಸಾಳೀ ಮಹಾತ್ಮ್ಮ ಪುರಾಣ ಗ್ರಂಥ ಬಿಡುಗಡೆಗೆ ನೆರವೇರಿತು.

ನೇತ್ರ ದಾನಿ ಭದ್ರಾವತಿಯ ಬಿ.ಹೆಚ್.ರುದ್ರಪ್ಪ ನಿಧನ

0

ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಉಪಾಧ್ಯಕ್ಷರು. ರಾಷ್ಟ್ರೀಯ ಸ್ವಯಂ ಸೇವಕ . ಸಂಘ ಪರಿವಾರದ ಹಿರಿಯರು ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರು ಆದ ಬಿ ಹೆಚ್ ರುದ್ರಪ್ಪನವರು 94 ವರ್ಷ. ಇವರಿಗೆ. ಇಬ್ಬರು ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳು ಇದ್ದು. ನಿನ್ನೆ ಸಂಜೆ ಅವರ ಸ್ವಗೃಹದಲ್ಲಿ ದೈವಾಧೀನರಾದರು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಹಾಗೂ ಮೃತರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿ ಕಿರಣ್ ಕುಮಾರ್ ಸಜ್ಜನ್. ಹಾಗೂ ಗೌರವಾಧ್ಯಕ್ಷರಾದ ಭದ್ರಾವತಿ ಶಾಸಕರಾದ ಬಿಕೆ ಶ್ರೀ ಸಂಗಮೇಶ್ವರ.. ಕಟ್ಟಡ ಸಮಿತಿಯ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿ ಪ್ರಕಾಶ್. ನಿರ್ದೇಶಕರಗಳಾದ ಕಾನೂರು ಮಲ್ಲಿಕಾರ್ಜುನ್. ಎಂವಿ ಸಜ್ಜನ್ ಶೆಟ್ಟರ್. ಹಾಗೂ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರು ಪದಾಧಿಕಾರಿಗಳು ಸದಸ್ಯರು. ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಘಟಕದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ತೀರ್ವ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಅಂತ್ಯ ಸಂಸ್ಕಾರ ಇಂದು ಭದ್ರಾವತಿಯ ವೀರಶೈವ ರುದ್ರಭೂಮಿಯಲ್ಲಿ. ಸಂಜೆ 4:00ಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

MESCOM ಆಗಸ್ಟ್ 12. ಮೆಸ್ಕಾಂ ಆನವಟ್ಟಿ ಉಪಕಛೇರಿಯಲ್ಲಿ ಜನ ಸಂಪರ್ಕ ಸಭೆ

0

MESCOM ಮೆಸ್ಕಾಂ ಆನವಟ್ಟಿ ಉಪವಿಭಾಗ ಕಛೇರಿಯಲ್ಲಿ ದಿನಾಂಕ 12.08.2025 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ 9448998783 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ತಿಳಿಸಿದೆ.

Karnataka State Open University ರಾಜ್ಯ ಮುಕ್ತ ವಿವಿಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

Karnataka State Open University ಈಗಾಗಲೇ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಆಲ್ಕೋಳ ವೃತ್ತದಲ್ಲಿರುವ ಕರಾಮುವಿ ಪ್ರಾದೇಶಿಕ ವಿಭಾಗದಲ್ಲಿ ಪ್ರವೇಶಾತಿಯನ್ನು ಪಡೆಯಬಹುದು. ಕಛೇರಿಯು ಎಲ್ಲಾ ಭಾನುವಾರ, ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರಾಮುವಿನ ವೆಬ್‌ಸೈಟ್ ಮೊ.ಸಂ. 9739803295, 7338069870, 9480765905 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಶಿಷ್ಠರ ಅಭಿವೃದ್ಧಿಗಾಗಿ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ

0

ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ 2025-26 ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಸೆ.10 ರಂದು ಕೊನೆಯ ದಿನವಾಗಿದ್ದು, 2023-24 ಮತ್ತು 2024-25 ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದವರು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಹಾಗೂ ಭೂ ಒಡೆತನ ಯೋಜನೆಗಳಿಗೆ ಶಿವಮೊಗ್ಗ-1, ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು, ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://sevasindhu.karnataka.gov.in ಹಾಗೂ ದೂ.ಸಂ.08182-224349 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಾಪಕರು ತಿಳಿಸಿದ್ದಾರೆ.

Agricultural Science Centre ಗಮನಿಸಿ! ತಾಳಗುಪ್ಪ- ಯಶವಂತಪುರ ರೈಲು ಸಂಚಾರ ಸಮಯ ಪರಿಷ್ಕರಣೆ

0

Agricultural Science Centre ಇತ್ತೀಚಿನ ಯುಗದಲ್ಲಿ ನೂತನ ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಲ್ಲೂ ಹಬ್ಬಿದ್ದು, ಕೃಷಿ ಕ್ಷೇತ್ರಕ್ಕೂ ಕಾಲಿಟ್ಟಿರುವುದು ಸಂತಸದ ಸಂಗತಿ. ಇದರಿಂದ ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ಕೃಪಿ ಇಲಾಖೆ ಉಪನಿರ್ದೇಶಕಿ ಮಂಜುಳಾ.ಜಿ ಹೇಳಿದರು.
ಕೃಷಿ ವಿಜ್ಞಾನ ಕೇಂದ್ರ, ಇಫ್ಕೋ ಸಂಸ್ಥೆ ಹಾಗೂ ಕೋರಮಂಡಲ ಸಂಸ್ಥೆ ಇವರ ಸಹಯೋಗದೊಂದಿಗೆ ಆ.01 ರಂದು ಹಾರನಹಳ್ಳಿ ಹೋಬಳಿಯ ರಾಮನಗರ ಗ್ರಾಮದಲ್ಲಿ ಹಾಗೂ ಆ.2 ರಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಿದ್ದ ತರಬೇತಿ ಹಾಗೂ ಪದ್ದತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿದರು.
ಇತ್ತೀಜಿನ ದಿನಗಳಲ್ಲಿ ಡ್ರೋನ್ ಹಾಗೂ ನ್ಯಾನೋ ರಸಗೊಬ್ಬರಗಳ ಬಳಕೆ ರೈತರಿಗೆ ಆಶಾಕಿರಣವಾಗಿದೆ. ಕೃಷಿ ಇಲಾಖೆ ಆತ್ಮ ಯೋಜನೆಯಡಿ ರೈತರಿಗೆ ಕ್ಷೇತ್ರಮಟ್ಟದಲ್ಲಿ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ತರಬೇತಿ, ಕಿಸಾನ್ ಗೋಷ್ಠಿಗಳು ಹಾಗೂ ಪದ್ದತಿ ಪ್ರಾತ್ಯಕ್ಷಿಕೆಗಳ ಮುಖಾಂತರ ರೈತರಿಗೆ ಅರಿವು ಮೂಡಿಸಲಾಗುತ್ತಿದೆ.
Agricultural Science Centre ರೈತರಿಗೆ ಹರಳು ರೂಪದ ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರವನ್ನು ಕೊಡುವ ಬದಲಾಗಿ ನ್ಯಾನೋ ಯೂರಿಯಾ (ಶೇ.20 ಸಾರಜನಕ)-500 ಮಿಲಿ ಬಾಟಲಿನಲ್ಲಿ ಲಭ್ಯವಿದ್ದು (ರೂ.225 ದರ) ಮತ್ತು ನ್ಯಾನೋ ಡಿ.ಎ.ಪಿ (ಶೇ.8 ಸಾರಜನಕ ಮತ್ತು ಶೇ.16 ರಂಜಕ)-500 ಮಿಲಿ ಬಾಟಲಿನಲ್ಲಿ ಲಭ್ಯವಿರುವ (ದರ ರೂ.600) ದ್ರವ ರೂಪದ ರಸಗೊಬ್ಬರಗಳನ್ನು ಶೀಫಾರಿತ ಪ್ರಮಾಣದಲ್ಲಿ ಬೆಳೆಗಳಿಗೆ ಸಿಂಪರಣೆ ಮಾಡಬೇಕು ಎಂದು ಮಾಹಿತಿ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ರಮೇಶ್ ಎಸ್.ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅತಿಯಾದ ಯೂರಿಯಾ ಗೊಬ್ಬರ ಬಳಕೆಯಿಂದ ಮನುಷ್ಯ ಹಾಗೂ ಮಣ್ಣಿನ ಆರೋಗ್ಯದ ಮೇಲೆ ವಿಪರೀತ ದುಷ್ಪರಿಣಾಮಗಳನ್ನು ಬೀರುತ್ತಿವೆ. ಅತಿಯಾಗಿ ಬಳಕೆಯಾಗುವ ಸಾರಜನಕವು ಅಂರ್ತಜಲವನ್ನು ಸೇರಿ ನೀರನ್ನು ನೈಟ್ರೇಟ್ ಅಂಶಗಳಿAದ ನೀರನ್ನು ಕಲುಷಿತಗೊಳಿಸುತ್ತಿದೆ. ಹಾಗೂ ಉತ್ಪಾದಿಸುವ ಆಹಾರ ದಾನ್ಯಗಳಲ್ಲೂ ಸಹ ರಾಸಾಯನಿಕ ಶೇಷಾಂಶಗಳು ಸೇರಿ ಕ್ಯಾನ್ಸ್ರ್ ಮತ್ತು ಹೃದಯ ಸಂಬAಧಿತ ಕಾಯಿಲೆಗಳನ್ನು ಸೃಷ್ಠಿಸುತ್ತಿವೆ. ಅದೇ ರೀತಿ ಮಣ್ಣು ಸಹ ತನ್ನ ಸತ್ವವನ್ನು ಕಳೆದುಕೊಂಡು ಬಂಜೆಯಾಗುತ್ತಿದೆ. ಆದ್ದರಿಂದ ರೈತರುಗಳು ಯೂರಿಯಾ ರಸಗೊಬ್ಬರದ ಬದಲಾಗಿ ನ್ಯಾನೋ ಯೂರಿಯಾ ರಸಗೊಬ್ಬರ ಬಳಸುವಮತೆ ಮನವಿ ಮಾಡಿಕೊಂಡರು.
Agricultural Science Centre ಇಫ್ಕೋ ಸಂಸ್ಥೆ ಹಾಗೂ ಕೋರಮಂಡಲ ಸಂಸ್ಥೆಯ ಪ್ರತಿನಿದಿಗಳು ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ. ಬಳಕೆ ಕುರಿತು ಮಾತನಾಡಿ, ಈ ದ್ರವ ರೂಪದ ರಸಗೊಬ್ಬರವನ್ನು ಬೆಳೆಗಳು 25- 30 ದಿನಗಳಿದ್ದಾಗ (ಮೊದಲನೇ ಹಂತ) ಮತ್ತು 50-55 ದಿನಗಳಲ್ಲಿ (ಎರಡನೇ ಹಂತ) ಸಿಂಪಡಿಸುವುದರಿAದ ಪೋಷಕಾಂಶಗಳ ಸದ್ಬಳಕೆಯಾಗಿ ಉತ್ತಮ ಬೆಳೆ ಬೆಳವಣಿಗೆ ಮತ್ತು ಇಳುವರಿ ಸಾಧ್ಯವಾಗುತ್ತದೆ. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಅಧಿಕ ಹರಡುವಿಕೆ ಸಾಮರ್ಥ್ಯ ಹೊಂದಿರುವುದರಿAದ ಇವುಗಳನ್ನು ಇತರೆ ಕೀಟನಾಶಕ, ಶಿಲಿಂಧ್ರನಾಶಕಗಳೊAದಿಗೆ (ತ್ರಾಮ ಅಂಶವಿರುವ ಶಿಲೀಂದ್ರನಾಶಕ ಹೊರತು ಪಡಿಸಿ) ಸೇರಿಸಿ ಸಿಂಪರಣೆ ಮಾಡಬಹುದಾಗಿದೆ. ಇದರಿಂದಾಗಿ ಮೇಲು ಗೊಬ್ಬರವಾಗಿ ಬಳಸುವ ಯೂರಿಯಾ ಚೀಲವನ್ನು ಶೇ.50 ರಷ್ಟು ಕಡಿಮೆ ಮಾಡಬಹುದಾಗಿದೆ. ಹಾಗೂ ಡ್ರೋನ್ ಮುಖಾಂತರ 5 ನಿಮಿಷದಲ್ಲಿ 1 ಎಕರೆ ಸಿಂಪರಣೆ ಮಾಡುವುದರಿಂದ ಕಡಿಮೆ ಸಮಯದಲ್ಲಿ ಸಿಂಪಡಿಸುವುದಲ್ಲದೆ ಕೂಲಿ ಆಳುಗಳ ಸಮಸ್ಯೆಯನ್ನು ಸಹ ಪರಿಹರಿಸಬಹುದು ಎಂಬುದಾಗಿ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ರಮೇಶ್, ಕೃಷಿ ಅಧಿಕಾರಿ ಪ್ರತಿಮಾ, ಸುನೀಲ್, ವಿವಿ ವಿಜ್ಞಾನಿಗಳು, ಕೃಷಿಕ ಸಮಾಜದ ನಿರ್ದೇಶಕರು ಮತ್ತು ರೈತರು ಹಾಜರಿದ್ದರು.

Rotary Club Shimoga ಮಗು ಆರೋಗ್ಯವಾಗಿರಬೇಕೆಂದರೆ ತಾಯಿ ಎದೆ ಹಾಲು ಕಡ್ಡಾಯ ಕುಡಿಸಬೇಕು- ರಾಜಶ್ರೀಬಸವರಾಜ್

0

Rotary Club Shimoga ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ. ಮಗು ಆರೋಗ್ಯವಾಗಿ ಇರಬೇಕು ಎಂದರೆ ಕಡ್ಡಾಯವಾಗಿ ತಾಯಿ ಎದೆ ಹಾಲು ನೀಡಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಹೇಳಿದರು.
ಗುರುಪುರದ ಅಂಗನವಾಡಿಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಗರ್ಭಿಣಿ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ತಾಯಿ ಎದೆ ಹಾಲು ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಗುವಿನ ಬೆಳವಣಿಗೆಗೆ ಸ್ತನ್ಯಪಾನವು ಅತ್ಯಂತ ಅವಶ್ಯಕವಾಗಿದೆ. ತಾಯಿಯ ಎದೆ ಹಾಲಿನಿಂದ ಮಗುವಿಗೆ ಉತ್ತಮ ಪೋಷಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ತಾಯಿ ಮತ್ತು ಮಗುವಿನ ನಡುವೆ ಪ್ರೀತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಮಾತನಾಡಿ, ರೋಟರಿ ಸಂಸ್ಥೆ ಸಮಾಜದಲ್ಲಿ ಆರೋಗ್ಯಕರ ವಾತಾವರಣ ಸೃಷ್ಟಿ ಮಾಡುವಲ್ಲಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದೆ. ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ತರವಾದದ್ದು. ಶಿವಮೊಗ್ಗ ನಗರದಲ್ಲಿ ಸರ್ಜಿ ಆಸ್ಪತ್ರೆ ಜೊತೆಗೂಡಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ತೆರೆಯಲಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ಪರಿಸರ, ರಸ್ತೆ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದರು.
ವಲಯ ಸೇನಾನಿ ಕಿರಣ್‌ಕುಮಾರ್ ಜಿ ಮಾತನಾಡಿ, ಆರೋಗ್ಯವೂ ಮಾನವನ ಅಭಿವೃದ್ಧಿಗೆ ಅತ್ಯಂತ ಸಹಕಾರಿಯಾಗಿದೆ. ಆರೋಗ್ಯ ಎಂಬ ಪದವು ಸಂಪೂರ್ಣ ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಯೋಗ ಕ್ಷೇಮದ ಸ್ಥಿತಿ ಸೂಚಿಸುತ್ತದೆ. ಇನ್ನು ಹೆಚ್ಚು ಹೆಚ್ಚು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ನಡೆಸಬೇಕು ಎಂದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸುಲೋಚನಾ ಅವರು ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕುರಿತು ಮಾಹಿತಿ ನೀಡಿದರು. ಎಫ್ ಪಿ ಎ ಐ ನ ಸತೀಶ್ ಹಾಗೂ ಅಂಗನವಾಡಿಯ ಮೆಹರುನ್ನೀಸಾ, ಸೋನಾ ಬಾಯಿ ಮತ್ತು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಜ್ಯೋತಿ ಶ್ರೀರಾಮ್, ಮಥುರಾ ಧನಂಜಯ್ ಉಪಸ್ಥಿತರಿದ್ದರು.

Rotary Club Shivamogga ಆಹಾರ & ಜೀವನಶೈಲಿಯಲ್ಲಿ ಸರಳ ಬದಲಾವಣೆಯಿಂದ ಡಯಾಬಿಟಿಸ್ ನಿಯಂತ್ರಣ ಸಾಧ್ಯ- ಡಾ.ಬಿ.ಪ್ರೀತಂ

0

Rotary Club Shivamogga ಜೀವನಶೈಲಿಯಲ್ಲಿ ಸರಳ ಬದಲಾವಣೆ ಮಾಡಿಕೊಳ್ಳುವುದರಿಂದ ಔಷಧವಿಲ್ಲದೆ ಸಹ ಡಯಾಬಿಟಿಸ್ ನಿಯಂತ್ರಣ ಸಾಧ್ಯ ಎಂದು ಡಾ. ಪ್ರೀತಮ್ ಬಿ. ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಭವನದಲ್ಲಿ ಆರೋಗ್ಯದ ಮಹತ್ವ ಬಿಂಬಿಸುವ ಡಯಾಬಿಟಿಸ್ ರಿವರ್ಸಲ್ ವಿಷಯ ಕುರಿತು ಮಾತನಾಡಿ, ರೋಗ ಬಂದ ಮೇಲೆ ಮಾತ್ರ ಚಿಕಿತ್ಸೆ ಪಡೆಯುವುದಕ್ಕಿಂತ ಆರೋಗ್ಯ ಶಿಸ್ತಿನಿಂದಲೇ ಪರಿಹಾರ ಹುಡುಕಬೇಕು ಎಂದು ತಿಳಿಸಿದರು.

ಆಹಾರವೇ ಔಷದಿ ಕುರಿತ ವೈಜ್ಞಾನಿಕ ದೃಷ್ಟಿಕೋನವನ್ನು ಅತ್ಯಂತ ಸರಳವಾಗಿ ವಿವರಿಸಿದರು. ಪಿಪಿಟಿ ಪ್ರಸ್ತುತಿ, ಜೀವನದ ಉದಾಹರಣೆಗಳು, ಆರೋಗ್ಯದ ಮೂಲ ತತ್ವಗಳ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಅಧ್ಯಕ್ಷ ಕೆ.ಎಸ್. ವಿಶ್ವನಾಥ ನಾಯಕ ಮಾತನಾಡಿ, ಆರೋಗ್ಯವೇ ಬದುಕಿನ ಮೂಲ ಎನ್ನುವುದರನ್ನು ಅರಿತುಕೊಳ್ಳಬೇಕು. ಆಹಾರ ಮತ್ತು ಜೀವನಶೈಲಿಯ ಶಿಸ್ತಿನ ಕುರಿತು ಸರಳವಾಗಿ ಅನುಸರಿಸಬೇಕು ಎಂದರು.

ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಅವರು ಉತ್ತುಂಗ ಪತ್ರಿಕೆಯನ್ನು ಬಿಡುಗಡೆ ಮಾಡಿ ಕ್ಲಬ್‌ನ ಚಟುವಟಿಕೆಗಳ ಮೆಚ್ಚುಗೆ ವ್ಯಕ್ತಪಡಿಸಿದರು. ವಲಯ ಸೇನಾನಿ ಎಸ್.ಪಿ.ಶಂಕರ್ ಅವರು ಸೇವೆಯೊಂದಿಗೆ ಆರೋಗ್ಯದ ಚಟುವಟಿಕೆಗಳು ಕುರಿತು ಮಾತನಾಡಿದರು.

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಕಾರ್ಯದರ್ಶಿ ನಿತಿನ್ ಯಾದವ್ , ನಿಕಟಪೂರ್ವ ಅಧ್ಯಕ್ಷ ಎಂ.ಆರ್.ಬಸವರಾಜ್, ಇನ್ನರ್ ವೀಲ್ ಕ್ಲಬ್‌ನ ಅಧ್ಯಕ್ಷೆ ಶೀಲಾ ಸುರೇಶ್, ಕಾರ್ಯದರ್ಶಿ ರೂಪಾ ರವಿ, ಮಾಜಿ ಅಧ್ಯಕ್ಷರಾದ ಎಂ.ಪಿ.ಆನಂದಮೂರ್ತಿ, ಜಗನ್ನಾಥ್, ಎಂ.ನಾಗರಾಜ್, ಡಾ. ಎಚ್.ಎಲ್.ಮಹೇಂದ್ರ, ಸಿ.ಎನ್.ಮಲ್ಲೇಶ್, ಎಂ.ಆರ್.ಬಸವರಾಜ್, ಉದಯಕುಮಾರ್, ಯೋಗ ಕೇಂದ್ರದ ನಿತ್ಯ ಭಾಗಿಯಾಗುವ ಸದಸ್ಯರು, ಮತ್ತು ರೋಟರಿ ಕುಟುಂಬದ ಎಲ್ಲಾ ಸದಸ್ಯರು ಹಾಜರಿದ್ದರು.

B.Y. Raghavendra ತಮ್ಮಡಿಹಳ್ಳಿ ಪ್ರದೇಶದಲ್ಲಿ ರಾಷ್ಟ್ರೀಯ ರಕ್ಷಾ ವಿವಿ ಸ್ಥಾಪಿಸಲು ಸ್ಥಳ ಮಂಜೂರಾತಿ ಆಗಿದೆ. ಮೂಲಭೂತ ಸೌಕರ್ಯಗಳಿಗೆ ಅನುದಾನಕ್ಕೆ ಬಿ.ವೈ.ರಾಘವೇಂದ್ರ ಮನವಿ

0

B.Y. Raghavendra ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದರು.
B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ತಮ್ಮಡಿಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು 22 ಎಕರೆ 19 ಗುಂಟೆ ಜಾಗವು ಮಂಜೂರಾಗಿದ್ದು, ಸದರಿ ಜಾಗದಲ್ಲಿ ಖಾಯಂ ಆಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸೂಕ್ತ ಅನುದಾನವನ್ನು ನೀಡುವಂತೆ ಕೋರಿಕೆ ಸಲ್ಲಿಸಿದರು.