Saturday, February 21, 2026
Saturday, February 21, 2026
Home Blog Page 216

Madhu Bangarappa ಬೆಂಗಳೂರಿಗೆ ಭೇಟಿ ನೀಡಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಫರ್ಡಿನಾಂಡ್ ರೋಮುಡ್ಜ್

0

Madhu Bangarappa ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು.

ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

Madhu Bangarappa ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ‌ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Keladi Shivappa Nayaka University of Agricultural ಆಗಸ್ಟ್ 18 ರಿಂದ ಬೇಕರಿ ಘಟಕಗಳಲ್ಲಿ ವಿವಿಧ ಉತ್ಪನ್ನಗಳ ತಯಾರಿಕೆ ಕೌಶಲ್ಯ ತರಬೇತಿ ಆರಂಭ

0

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಆಗಸ್ಟ್ 18 ರಿಂದ ಸೆ. 16 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.16 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದು.

Sahyadri College ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಬೀಳ್ಕೊಡುಗೆ

0

Sahyadri College ಹೃದಯಸ್ಪರ್ಶಿ ಸಾಮೂಹಿಕ ಬೋಳ್ಕೊಡುಗೆ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಬುಧವಾರ ಸಂಜೆ ಕಂಟ್ರೀಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದರು.
ಸಹ್ಯಾದ್ರಿ ಕಾಲೇಜಿನಲ್ಲಿ ಓದಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಇತ್ತೀಚೆಗೆ ನಿವೃತ್ತರಾದ ಐವರನ್ನು ಅಭಿನಂದಿಸಿ, ಹರಸಿ, ನಿವೃತ್ತಿ ಜೀವನಕ್ಕೆ ಬೀಳ್ಕೊಡಲಾಯಿತು.
ಹೊಸನಗರ ಕಾಲೇಜಿನ ಸಹ ಪ್ರಾಧ್ಯಾಪಕ ಹಾಗೂ ವಾಗ್ಮಿ ಡಾ.ಕೆ. ಪ್ರಭಾಕರರಾವ್, ಕುವೆಂಪು ವಿವಿ ಹಿರಿಯ ಸಹಾಯಕ ಎಲ್.ಎನ್. ಶಾಂತರಾಜು, ಬಸವಾನಿಯ ಪಿಯು ಕಾಲೇಜಿನ ಉಪನ್ಯಾಸಕ ನಾಗೇಶ್ ವಿ.ಕೆ., ಕಮ್ಮರಡಿ ಹೈಸ್ಕೂಲ್ ಮುಖ್ಯೋಪಾಧ್ಯಾಯ ಸುರೇಶ್ ಎನ್.ಟಿ., ಕುಂಕುವದ ಸಹಕಾರ ಸಂಘದ ತೇಜಾನಾಯ್ಕ್ ಇವರೆಲ್ಲರೂ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಉದ್ಯೋಗ ಪಡೆದು ನಿವೃತ್ತರಾದವರು.

ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್. ಮಂಜುನಾಥ್ ಮತ್ತು ಮಾಚೇನಹಳ್ಳಿಯ ಕೆ.ಎಸ್.ಆರ್.ಪಿ.ಯ ಎಸ್ಪಿ, ಯುವಕುಮಾರ್ ಹಾಗೂ ಗೆಳೆಯರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ಸನ್ಮಾನಿತರಾಗಿ ನಿವೃತ್ತರ ಪರವಾಗಿ ಮಾತನಾಡಿದ ಡಾ.ಕೆ. ಪ್ರಭಾಕರರಾವ್, ಸ್ನೇಹ ಎಂಬುದು ಅತಿ ಮಧುರ. ಅದು ಕಾಲ, ದೇಶವನ್ನೂ ಮೀರಿದ್ದು. ನಾವೆಲ್ಲರೂ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇವೆ. ವೃತ್ತಿ ನಮಗೆ ತೃಪ್ತಿ ತಂದಿದೆ. ಸರ್ಕಾರಿ ಕೆಲಸದಲ್ಲಿ ನಿವೃತ್ತಿ ಸಹಜ ಕ್ರಿಯೆ. ನಿವೃತ್ತಿ ನಂತರವೂ ಕ್ರಿಯಾಶೀಲರಾಗಿರೋಣ ಎಂದರು.
ನಿವೃತ್ತಿಯಾದವರನ್ನು ಸನ್ಮಾನಿಸಿ ಮಾತನಾಡಿದ ಡಾ.ಕೆ.ಎನ್. ಮಂಜುನಾಥ್, ನಿವೃತ್ತರಾದ ಎಲ್ಲಾ ಗೆಳೆಯರು ತಮ್ಮ ತಮ್ಮ ವೃತ್ತಿಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಮಾನವೀಯತೆಯೇ ನಿಜವಾದ ಸೇವೆ ಎಂದರು.

ಕೆ.ಎಸ್.ಆರ್.ಪಿ. ಎಸ್ಪಿ ಯುವಕುಮಾರ್ ಮಾತನಾಡಿ, ನಾವೆಲ್ಲರೂ ಸಹ್ಯಾದ್ರಿ ಕಾಲೇಜಿನಲ್ಲಿ ಓದಿದವರು. ಈ ಕಾಲೇಜಿಗೊಂದು ದೊಡ್ಡ ಪರಂಪರೆ ಇದೆ. ನಿವೃತ್ತರಾದವರನ್ನು ಅಭಿನಂದಿಸುವುದು ಒಂದು ಸಂಪ್ರದಾಯ. ಇದು ಸೇವೆ ಸಲ್ಲಿಸಿದ ಸಾರ್ಥಕ ಕ್ಷಣಕ್ಕೆ ಸಾಕ್ಷಿಯಾಗುತ್ತದೆ ಎಂದರು.

ಸರ್ಕಾರಿ ವೃತ್ತಿ ಹಿಡಿಯದೇ ಕೃಷಿ ಕ್ಷೇತ್ರ ಆರಿಸಿಕೊಂಡ ಮಾಳೂರು ಹಿರೇಗೋಡಿನ ಹರಿಯಪ್ಪ ಈ.ಎನ್. ಅವರು ಮಾತನಾಡಿ, ಸ್ನೇಹವೇ ದೊಡ್ಡದು. ಕೃಷಿ ಕ್ಷೇತ್ರ ಒಂದು ಪವಿತ್ರ ಕ್ಷೇತ್ರವಾಗಿದೆ ಎಂದರು.

Sahyadri College ರಾಷ್ಟ್ರೀಯ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಚಿಕ್ಕಪೆಂಚಾಲಯ್ಯ, ಬಸವಾನಿ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕೆ.ಸಿ., ಗಾಂಧಿಬಜಾರ್ ನ ಗೋಲ್ಡ್ ಸ್ಮಿತ್ ಮೋಹನ್ ಹೆಚ್.ಎನ್., ಆನಂದಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ನಾಯ್ಕ್, ಭದ್ರಾವತಿಯ ಹಳೆನಗರ ಉರ್ದು ಪ್ರೌಢಶಾಲೆಯ ದೈಹಿಕ ಶಿಕ್ಷಕ ಲಕ್ಷ್ಮಣ್, ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಆರುಂಡಿ ಶ್ರೀನಿವಾಸ್ ಮುಂತಾದವರಿದ್ದರು.

ಸೊರಬದಲ್ಲಿ ವಾಹನ ದಟ್ಟಣೆ ತಡೆಗಟ್ಟಲು ಕ್ರಮ-‘ ಪಿಎಸ್ಐ’ ಎಂ.ಹೆಚ್. ನವೀನ್ ಕುಮಾರ್

0

ಸೊರಬ ಪಟ್ಟಣದಲ್ಲಿನ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಿರಿದಾದ ರಸ್ತೆಯಲ್ಲಿ ಎಲ್ಲೆಂದರೆಲ್ಲಿ ವಾಹನಗಳ ನಿಲುಗಡೆ ಹಾಗೂ ಸಂಚಾರದಿಂದ ಸರಣಿ ಅಪಘಾತಗಳು ನಿರಂತರವಾಗಿ ಜರುಗುತ್ತಿವೆ. ಜನರ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ಪಿಎಸ್ಐ ಎಂ.ಎಚ್. ನವೀನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ವೇದಿಕೆಯ ನಗರ ಘಟಕದ ಅಧ್ಯಕ್ಷ ಜಿ. ಕೆರಿಯಪ್ಪ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದು ಒತ್ತಾಯಿಸಿದರು.

ಮುಖ್ಯ ರಸ್ತೆಯ ಎರಡು ಇಕ್ಕೆಲಗಳಲ್ಲಿ ವಾಹನ ಚಾಲಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿದ್ದಾರೆ. ಇತರೆ ವಾಹನಗಳು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಗುತ್ತಿದ್ದು, ಪಟ್ಟಣದಲ್ಲಿ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದೆ. ವಾಹನ ನಿಲುಗಡೆಗೆ ಸರಿಯಾದ ನಿಯಮಾವಳಿಗಳನ್ನು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪಿಎಸ್ಐ ಎಂ.ಎಚ್. ನವೀನ್ ಕುಮಾರ್ ಮಾತನಾಡಿ, ಈಗಾಗಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗಿದೆ. ಅಪ್ರಾಪ್ತರು ಮತ್ತು ಸಮರ್ಪಕ ದಾಖಲೆಗಳು ಇಲ್ಲದ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿ ವಾಹನ ದಟ್ಟಣೆ ತಡೆಗಟ್ಟಲು ರಸ್ತೆಯ ಎಡ ಮತ್ತು ಬಲ ಭಾಗದಲ್ಲಿ ಒಂದು ದಿನದಂತೆ ವಾಹನ ನಿಲ್ಲಿಸುವ ಕುರಿತು ಕ್ರಮ ವಹಿಸುವುದಾಗಿ ತಿಳಿಸಿದರು.

ವೇದಿಕೆಯ ಗೌರವಾಧ್ಯಕ್ಷ ಎಚ್. ನಾಗರಾಜ್, ಉಪಾಧ್ಯಕ್ಷ ಪ್ರಕಾಶ್ ಆಟೋ, ಸಂತೋಷ ಸೊಪ್ಪಿನಕೇರಿ, ಪ್ರಮುಖರಾದ ಮಹೇಶ್ ಖಾರ್ವಿ, ಅಭಿ ಹೋಯ್ಸಳ, ವಿನಾಯಕ, ರಾಘವೇಂದ್ರ ಮಡಿವಾಳ, ಸುನೀಲ, ಶಶಿ ಸೇರಿದಂತೆ ಇತರರಿದ್ದರು.

Shivamogga Karnataka Sanga ಆಗಸ್ಟ್ 9, ಭೈರಪ್ಪನವರ ಕೃತಿಗಳ ಬಗ್ಗೆ ಕಾದಂಬರಿಕಾರ್ತಿ ಸಹನಾ ವಿಜಯ ಕುಮಾರ್ ಅವರಿಂದ ವಿಶೇಷ ಉಪನ್ಯಾಸ

0

Shivamogga Karnataka Sanga ದಿನಾಂಕ 09 ಆಗಸ್ಟ್ 2025ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತ್ರಿ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬೆಂಗಳೂರಿನ ಶ್ರೀಮತಿ ಸಹನಾ ವಿಜಯಕುಮಾರ್, ಸಾಹಿತಿಗಳು ಇವರು ‘ಭರಪ್ಪನವರ ಕೃತಿಗಳಲ್ಲಿ ಮೌಲ್ಯ ಮೀಮಾಂಸೆ’ ವಿಷಯದ ಕುರಿತು ಮಾತನಾಡಲಿದ್ದಾರೆ.

ಕನ್ನಡದಲ್ಲಿ ಬರೆದು ವಿಶ್ವಮಾನ್ಯತೆ ಪಡೆದ ಸಾಹಿತಿ, ಕಾದಂಬರಿ ಪ್ರಪಂಚದ ಪ್ರಖರ ಸೂರ್ಯ, ಕನ್ನಡ ಸಾಹಿತ್ಯ ಲೋಕದ ಭೀಮಕಾಯ ಡಾ. ಎಸ್. ಎಲ್ ಭೈರಪ್ಪನವರ 95ರ ಹುಟ್ಚು ಹಬ್ಬದ ಸಂದರ್ಭದಲ್ಲಿ ಶಿವಮೊಗ್ಗೆಯ ಕರ್ನಾಟಕ ಸಂಘ ಒಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.

“ಕಶೀರ” ಖ್ಯಾತಿಯ ಶ್ರೀಮತಿ ಸಹನಾ ವಿಜಯಕುಮಾರ್ ತಮ್ಮ ವಿಶಿಷ್ಠವಾದ ಕಾದಂಬರಿಗಳ ಮೂಲಕ ಈಗಾಗಲೇ ಕನ್ನಡಸಾಹಿತ್ಯಾಸಕ್ತರ ಮನಸ್ಸನ್ನು ಆವರಿಸಿದ್ದಾರೆ.

Shivamogga Karnataka Sanga ಇವರು, ಇದೇ ಬರುವ ಶನಿವಾರ ಸಂಜೆ (09/08/2025) ಕರ್ನಾಟಕ ಸಂಘದಲ್ಲಿ ನಡೆಯಲಿರುವ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ “ಭೈರಪ್ಪನವರ ಕೃತಿಗಳಲ್ಲಿ ಮೌಲ್ಯ ಮೀಮಾಂಸೆ” ಕುರಿತು ಮಾತನಾಡಲಿದ್ದಾರೆ .

Shiralakoppa Lions Club ಗ್ರಾಮಾಂತರ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಲಿ- ಯೋಗಿರಾಜ್

0

Shiralakoppa Lions Club ಶಿರಾಳಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಗ್ರಾಮಾಂತರ ಶಾಲೆಗಳಲ್ಲಿ ಶಾಶ್ವತ ಸೇವಾ ಯೋಜನೆ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಶಾಲಾ ಮಕ್ಕಳಿಗೆ ರೈನ್ ಕೋಟ್ ವಿತರಣೆ ಕಾರ್ಯಕ್ರಮವನ್ನು ಸಮೀಪದ ತಾಳಗುಂದ ಮತ್ತು ಬಸವನಂದಿಹಳ್ಳಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಯೋಗಿರಾಜ್ ಮಾತನಾಡುತ್ತಾ, ನಾವು ಶಾಲೆಗಳಲ್ಲಿ ಕಾರ್ಯಕ್ರಮ ನಡೆಸಲು ಎರಡು ಕಾರಣ. ಒಂದು ಸರ್ಕಾರಿ ಗ್ರಾಮಾಂತರ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವುದು ಮತ್ತು ಎರಡನೇ ಕಾರಣ ಮಕ್ಕಳಲ್ಲಿ ಸೇವಾ ಮನೋಭಾವದ ಬೀಜಾಂಕುರವಾಗಲಿ. ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಪ್ರೇರಣೆಯಾಗಲಿ ಎಂಬುದು. ನಮ್ಮ ಈ ಚಿಕ್ಕ ಚಿಕ್ಕ ಸೇವೆಗಳು ಮುಂದಿನ ದಿನಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಬದಲಾವಣೆ ತರುವುದು ಎಂಬುದು ನಮ್ಮ ನಂಬಿಕೆ ಎನ್ನುತ್ತಾ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯದರ್ಶಿ ರೇಣುಕಯ್ಯ, ಖಜಾಂಚಿ ಮೋಹನ್, ಸದಸ್ಯರಾದ ಗಿರೀಶ್, ಶಿವಕುಮಾರ್, ಸುರೇಶ್, ಶಾಲಾ ಸಿಬ್ಬಂದಿ, ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಒಟ್ಟು 240 ವಿದ್ಯಾರ್ಥಿಗಳಿಗೆ ರೈನ್ ಕೋಟ್ ವಿತರಣೆ ಮಾಡಲಾಯಿತು.

Shiralakoppa Lions Club ಈ ಕಾರ್ಯಕ್ರಮ ವಿದ್ಯಾರ್ಥಿಗಳು ಸಂಭ್ರಮ, ಸಂತೋಷದಿಂದ ಸ್ವೀಕರಿಸಿ, ತೊಟ್ಟು ಕೊಡುಗೆ ನೀಡಿದ ಕ್ಲಬ್ ಗೆ ಶುಭಹಾರೈಸಿದರು.

Tourism Development Forum ಬಳ್ಳಿಗಾವಿ,ತಾಳಗುಂದ,ಬಂದಳಿಕೆ…ಐತಿಹಾಸಿಕ ಮಹತ್ವದ ಸ್ಥಳಗಳಿಗೆ ಪ್ರವಾಸ ಹೋಗಬೇಕೆ,?ಇಲ್ಲಿದೆ ಮಾಹಿತಿ

0

Tourism Development Forum ಶಿವಮೊಗ್ಗ ನಗರದ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ವತಿಯಿಂದ 17.08.25 ರ ಭಾನುವಾರದಂದು ಪೌರಾಣಿಕ ಮತ್ತು ಐತಿಹಾಸಿಕ ಸ್ಥಳಗಳಾದ ಶಿಕಾರಿಪುರ, ಬಳ್ಳಿಗಾವಿ, ತಾಳಗುಂದ, ಬಂದಳಿಕೆ, ಕೋಟಿಪುರ ಮತ್ತು ಕುಪ್ಪಗಡ್ಡೆ ಪ್ರದೇಶಗಳಿಗೆ ಪ್ರವಾಸವನ್ನ ಏರ್ಪಡಿಸಲಾಗಿದೆ. ಈ ಪ್ರವಾಸದಲ್ಲಿ ನುರಿತ ಇತಿಹಾಸ ಬಲ್ಲ ಮಾರ್ಗದರ್ಶಿಗಳನ್ನು ಕಳಿಸಲಾಗುವುದು.

ಆಸಕ್ತರು ಪ್ರವಾಸದ ಶುಲ್ಕ ರೂ. 700 ಪಾವತಿಸಿ ಈ ಪ್ರವಾಸಕ್ಕೆ ಆಗಮಿಸಬಹುದು.

45 ಜನರಿಗೆ ಮಾತ್ರ ಅವಕಾಶವಿದ್ದು ಮೊದಲು ಹೆಸರು ನೊಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು.

ಹೆಸರು ನೊಂದಾಯಿಸಲು ದಿಲೀಪ್ ನಾಡಿಗ್ 6361124316 ಇವರನ್ನು ಸಂಪರ್ಕಿಸಬೇಕು ಎಂದು ವೇದಿಕೆ ಕಾರ್ಯದರ್ಶಿ ಏನ್. ಗೋಪಿನಾಥ್ ರವರು ತಿಳಿಸಿದ್ದಾರೆ.

Department of Kannada and Culture ಆಗಸ್ಟ್ 9. ಶರಣ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಮತ್ತು ಕೊರಚ ಸಮಾಜ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 09 ರಂದು ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಯೋಜಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಉದ್ಘಾಟನೆಯನ್ನು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು.

Department of Kannada and Culture ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸುವರು.

ಸಮಾಜದ ಮುಖಂಡರಾದ ಅನಿಲ್ ಕುಮಾರ್ ಲಕ್ಕಿನಕೊಪ್ಪ ಇವರು ವಿಶೇಷ ಉಪನ್ಯಾಸವನ್ನು ನೀಡುವರು.

DC Shivamogga ಗೌರಿ ಗಣೇಶೋತ್ಸವ- ಈದ್ ಮಿಲಾದ್ ಹಬ್ಬಗಳ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಣೆಗೆ ಆಸಕ್ತರ ನೋಂದಾವಣೆಗೆ ಮಾಹಿತಿ

0

DC Shivamogga ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.

DC Shivamogga ಆದ್ದರಿಂದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಭದ್ರಾವತಿ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಸಾಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.

Graama Bharathi Foundation ದಂಪತಿಗಳಲ್ಲಿ ಸ್ವಪ್ರತಿಷ್ಠೆ ಬಾರದೇ ಇದ್ದರೆ ಕುಟುಂಬಗಳು ಚನ್ನಾಗಿರುತ್ತವೆ – ವಿಜೇಂದ್ರ ಪ್ರಕಾಶ್

0

Graama Bharathi Foundation ಪುರಾತನ ಭಾರತೀಯ ಸಂಸ್ಕೃತಿಯಲ್ಲಿ ಕುಟುಂಬಗಳ ವಿಘಟನೆ ಮತ್ತು ವಿಚ್ಛೇದನ ಪ್ರಕರಣಗಳನ್ನು ಕಾಣಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಆಧುನಿಕ ಜೀವನಕ್ಕೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯನ್ನು ಈಗಿನ ಪೀಳಿಗೆ ಅನುಸರಿಸಲು ಹೋಗಿ ಕುಟುಂಬದ ಸಾಮರಸ್ಯ ಕಳೆದುಕೊಂಡು ವಿಘಟನೆಗಳು ಹೆಚ್ಚಾಗುತ್ತಿದೆ. ಜನರು ಅವಿಭಕ್ತ ಕುಟುಂಬದ ಮಹತ್ವವನ್ನು ಅರಿಯ ಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕದ ಕುಟುಂಬ ಪ್ರಭೋದನದ ಶಿವಮೊಗ್ಗ ವಿಭಾಗದ ಸಂಯೋಜಕ ವಿಜೇಂದ್ರ ಪ್ರಕಾಶ್ ಅಭಿಪ್ರಾಯಪಟ್ಟರು. ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗ ಕಾರಣಗಿರಿ, ಕುಟುಂಬ ಪ್ರಭೋಧನ, ಅರೋಗ್ಯ ಭಾರತಿ ಇವರುಗಳ ಆಶ್ರಯದಲ್ಲಿ ನಡೆದ ದಂಪತಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ದಂಪತಿಗಳಲ್ಲಿ ಹೊಂದಾಣಿಕೆ ಮುಖ್ಯ, ಇಬ್ಬರಲ್ಲೂ ಸ್ವಪತ್ರಿಷ್ಟೆ ಬಾರದೆ ಇದ್ದರೆ ಕುಟುಂಬಗಳು ಚೆನ್ನಾಗಿರುತ್ತವೆ ಎಂದು ಅವರು ಹೇಳಿದರು.

ವೈದ್ಯೆ ಪಲ್ಲವಿ ಮಾತನಾಡಿ ಹಿಂದು ಕುಟುಂಬಗಳಲ್ಲಿ ಮುಖ್ಯವಾಗಿ ಹಿರಿಯರ ಅಭಿಪ್ರಾಯಗಳಿಗೆ ಮನ್ನಣೆ ಕೊಡುವುದರಿಂದ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿರುವುದಿಲ್ಲ. ಆಧುನಿಕ ಕುಟುಂಬದ ಸದಸ್ಯರಲ್ಲಿ ಕೊಳ್ಳುಬಾಕತನ, ಅತಿಯಾಸೆ, ಇತರರ ಬಗ್ಗೆ ಮತ್ಸರ ಹೆಚ್ಚಾಗುತ್ತಿದೆ. ಇವುಗಳನ್ನು ಬಿಟ್ಟು ಕೂಡಿಬಾಳುವ ಸಂಸ್ಕೃತಿಯನ್ನು ಅಳವಡಿಸಿಕೊಂಡರೆ ಜೀವನ ನೆಮ್ಮದಿಯಿಂದ ಕೂಡಿರುತ್ತದೆ. ಇಲ್ಲದಿದ್ದಾಗ ಕುಟುಂಬದಲ್ಲಷ್ಟೆ ಅಲ್ಲದೆ ಸಮಾಜದಲ್ಲೂ ಅಶಾಂತಿ ನೆಲೆಸುತ್ತದೆ ಎಂದು ಹೇಳಿದರು.

Graama Bharathi Foundation ಇದೇ ಸಂದರ್ಭದಲ್ಲಿ 50 ವರ್ಷಗಳ ಕಾಲ ದಾಂಪತ್ಯಜೀವನ ನಡೆಸಿದ ದಂಪತಿಗಳಿಗೆ ಸನ್ಮಾನಿಸಲಾಯಿತು. ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ, ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ನಳಿನಚಂದ್ರ, ಅರೋಗ್ಯಭಾರತಿಯ ಶ್ರೀಧರ್, ಪ್ರದಾನ ಕಾರ್ಯದರ್ಶಿ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ವಿನಾಯಕ ಪ್ರಭು ನಿರೂಪಿಸಿ, ಆರತಿ ಮಹೇಶ್ ಪ್ರಾರ್ಥಿಸಿ, ಕೇಶವ ಸಂಪೆಕೈ ಸ್ವಾಗತಿಸಿ ಚಿದಂಬರ ವಂದಿಸಿದರು.