Saturday, February 21, 2026
Saturday, February 21, 2026
Home Blog Page 217

Shivamogga City Corporation ಮಲೆನಾಡು ಪರಂಪರೆ & ಆಹಾರೋತ್ಸವಕ್ಕೆ ನಗರ ಪಾಲಿಕೆ ಸಹಕಾರಕ್ಕಾಗಿ ಎನ್.ಗೋಪಿನಾಥ್ ಮನವಿ

0

Shivamogga City Corporation ಶಿವಮೊಗ್ಗ ಜಿಲ್ಲಾ ಮಹಾ ನಗರಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ರನ್ನು ಎನ್. ಗೋಪಿನಾಥ್ ಅವರು ಭೇಟಿ ಮಾಡಿ
ನಮ್ಮ ಕನಸಿನ ಶಿವಮೊಗ್ಗದ ಪರವಾಗಿ ಆಯುಕ್ತರ ಕನಸಿನ ಸ್ವಚ್ಛಸುಂದರ ಮಾದರಿ ಶಿವಮೊಗ್ಗ ನಿರ್ಮಾಣ ಸಂಬಂಧ ವಿಚಾರ ವಿನಿಮಯ ಮಾಡಿದರು. ನಮ್ಮ ಕನಸಿನ ಶಿವಮೊಗ್ಗ ಪರವಾಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಎನ್ .ಗೋಪಿನಾಥ್ ಅವರು ನಗರದ ಹಲವು ಸಂಘ ಸಂಸ್ಥೆ ಗಳ ಸಹಕಾರದೊಂದಿಗೆ ನಡೆಸಲು ಉದ್ದೇಶಿಸಿರುವ ಮಲೆನಾಡು ಪರಂಪರೆ ಹಾಗೂ ಆಹಾರೋತ್ಸವ ನಡೆಸಲು ಮಹಾನಗರ ಪಾಲಿಕೆ ಯ ಸಹಕಾರ ಕೋರಿದರು.

DC Shivamogga ಮಹಿಳೆ & ಮಕ್ಕಳ ಸಂಬಂಧಿತ ಸೂಕ್ಷ್ಮ ಪ್ರಕರಣಗಳ ಇತ್ಯರ್ಥಕ್ಕೆ ಶಿಶು ಅಭಿವೃದ್ಧಿ ಅಧಿಕಾರಿಗಳ ನೈತಿಕ ಸಹಕಾರ ಅವಶ್ಯ- ಡಿಸಿ ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿನ ಪ್ರತಿಮಗುವಿನ ಮಾಹಿತಿ ಹೊಂದಿದ್ದು, ಕೆಲವು ಸೂಕ್ಷ್ಮ ಪ್ರಕರಣಗಳ ಮೂಲ ಅರಿತು ಅದರ ಇತ್ಯರ್ಥಕ್ಕೆ ವಿಶೇಷ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ವತಿಯಿಂದ ನೈತಿಕ ಮತ್ತು ಕಾನೂನಾತ್ಮಕ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಹಂತದಲ್ಲಿ ಇತ್ಯರ್ಥವಾಗದ ಸಮಸ್ಯೆಗಳನ್ನು ಕೂಡಲೇ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತಿದೆ. ಕೆಲವು ಗ್ರಾಮಗಳಲ್ಲಿನ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕೂಡಲೇ ನಿರಾಕ್ಷೇಪಣಾ ಪತ್ರ ನೀಡಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಸೂಚಿಸಿದರು.

ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯವಾಗಿರುವ ಗರ್ಭಿಣಿ, ಬಾಣಂತಿ ಮತ್ತು ಹಸುಕಂದಮ್ಮಗಳ ಅಧಿಕೃತ ಮಾಹಿತಿ, ಶಾಲೆಯಿಂದ ಹೊರಗುಳಿದ ಹಾಗೂ ನಿತ್ಯ ಶಾಲೆಗೆ ಹೋಗುತ್ತಿರುವ ಮಕ್ಕಳ ದಾಖಲೆಗಳನ್ನು ನಿರ್ವಹಿಸುವಂತೆ ಸೂಚಿಸಿದ ಅವರು, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿನ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಇದೇ ಸಂದರ್ಭದಲ್ಲಿ ಅಲ್ಲಿನ ಅಪೌಷ್ಠಿಕ ಮಕ್ಕಳ ಬಗ್ಗೆಯೂ ಮಾಹಿತಿ ಪಡೆದು, ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಮೊಕದ್ದಮೆ ದಾಖಲಿಸಲು ಗಮನಹರಿಸಬೇಕು. ಅಪ್ರಾಪ್ತರ ವಿವಾಹ ನಿಯಂತ್ರಣಕ್ಕೆ ಗಮನಹರಿಸಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎನ್.ಹೇಮಂತ್‌ ಅವರು ಮಾತನಾಡಿ, ಮಕ್ಕಳ ರಕ್ಷಣಾ ಕಾವಲು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಕಾರ್ಯಕ್ಷೇತ್ರದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಮಕ್ಕಳ ಸಮಗ್ರ ವಿವರಗಳನ್ನು ಹೊಂದಿರಬೇಕು ಎಂದರು.

DC Shivamogga ಸಂಬಂಧಿತ ಇಲಾಖಾಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳನ್ನು ಕ್ಷಮಿಸಲಾಗದು. ಸಂಬಂಧಿತ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಪ್ರತಿ ವಿಷಯದ ಕುರಿತು ವಿಸ್ತೃತ ಚರ್ಚೆಗಳು ನಡೆದು, ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಗಳಲ್ಲಿ ಅವುಗಳ ಪರಿಣಾಮಗಳ ಬಗ್ಗೆಯೂ ಚರ್ಚಿಸಬೇಕು. ತಪ್ಪಿದಲ್ಲಿ ಸಂಬಂಧಿತ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ 400ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು. ಮಾತೃವಂದನಾ ಯೋಜನೆಯ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.ಹೇಮಂತ್‌ ಹೇಳಿದ್ದಾರೆ.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಸಂತೋಷ್‌ ಎಂ.ಎಸ್.‌, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಭಾರತಿ ಭಜಂತ್ರಿ, ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷ ತಾಜುದ್ದೀನ್‌ಖಾನ್‌ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

DC Shivamogga ಜಿಲ್ಲಾ ಪ್ರವಾಸೋದ್ಯಮ ವಿಕಾಸಕ್ಕೆ ವಿವಿಧ ಪ್ರೋತ್ಸಾಹನ ಯೋಜನೆ ಘೋಷಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಹಾಗೂ ದೇಶದ ಜನರನ್ನು ಜಿಲ್ಲೆಗೆ ಆಕರ್ಷಿಸುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಪ್ರಯತ್ನದ ಭಾಗವಾಗಿ, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಹಲವು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಸೆಪ್ಟಂಬರ್‌ 22ರಂದು ದೇಶದಾದ್ಯಂತ ಆಚರಿಸಲಾಗುತ್ತಿರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ನಗರದ ಛಾಯಾಗ್ರಾಹಕರ ಸಂಘ, ಹವ್ಯಾಸಿ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಹೃದಯಭಾಗದಲ್ಲಿರುವ ಶಿವಮೊಗ್ಗ ಜಿಲ್ಲೆ ನೈಸರ್ಗಿಕ ಸೌಂದರ್ಯ, ಸಾಂಸ್ಕೃತಿಕ ಪರಂಪರೆ ಮತ್ತು ಕ್ರೀಡೆ-ಸಾಹಸಕ್ಕೆ ಮಹತ್ವ ಪಡೆದುಕೊಂಡಿದೆ. ವಿಶ್ವವಿಖ್ಯಾತ ಜೋಗ-ಜಲಪಾತದಿಂದ ಆಗುಂಬೆಯ ಸೂರ್ಯಾಸ್ತದವರೆಗಿನ ಅನೇಕ ವಿಷಯಗಳಿಗೆ ಸದಾ ಜೀವಂತವಾಗಿದೆ. ಇಲ್ಲಿನ ಹಲವು ಉಸಿರು ಬಿಗಿಹಿಡಿಯುವ ಕಡಿದಾದ ಕಣಿವೆಗಳು, ಮೈಜುಮ್ಮೆನಿಸುವಂತ ದೃಶ್ಯಗಳು, ರೋಮಾಂಚಕ ಸಾಹಸ-ಕ್ರೀಡೆಗಳಿಗೆ ಜಿಲ್ಲೆ ಸದಾ ನೆನಪಿನಲ್ಲಿ ಉಳಿಯಲಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು, ಮಂದಿರ-ಮಸೀದಿ-ಚರ್ಚುಗಳು, ಐತಿಹಾಸಿಕ ಸ್ಥಳಗಳು, ಕವಿ-ಕಲಾವಿದರು, ಸಾಹಿತ್ಯ, ನೃತ್ಯ ಸಂಗೀತ ಕ್ಷೇತ್ರದ ಸಾಧಕರು, ನದಿ-ನಾಲೆ-ಜಲಪಾತಗಳು, ತಪ್ಪಲು ಪ್ರದೇಶಗಳು ಮತ್ತಿತರ ವಿವರಗಳನ್ನು ಸಚಿತ್ರವಾಗಿ ಸಾಮಾಜಿಕ ಜಾಲತಾಣಗಳು ಮತ್ತಿತರ ಪ್ರಸಾರ ಮಾಧ್ಯಮಗಳನ್ನು ಬಳಸಿಕೊಂಡು ಜಗತ್ತಿನಾದ್ಯಂತ ಜಿಲ್ಲೆಯನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದರು.

ಈ ಕಾರ್ಯದಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ವಿಕಾಸಕ್ಕೆ ಇರಬಹುದಾದ ಬಾಗಿಲುಗಳು ಸಹಜವಾಗಿ ತೆರೆದುಕೊಳ್ಳಲಿವೆ. ಮಾತ್ರವಲ್ಲ ಹಲವು ಕ್ಷೇತ್ರಗಳಲ್ಲಿನ ವ್ಯವಹಾರ, ವಾಣಿಜ್ಯ ವಹಿವಾಟುಗಳಿಗೆ ಅವಕಾಶ ದೊರೆಯಲಿದೆ. ಅಷ್ಟೇ ಅಲ್ಲದೇ ನಿರುದ್ಯೋಗಿಗಳ ಉದ್ಯೋಗದ ಸಮಸ್ಯೆಗೆ ತಕ್ಕಮಟ್ಟಿನ ಪರಿಹಾರ ಲಭಿಸಲಿದೆ ಎಂಬ ಆಶಯ ಹೊಂದಿರುವುದಾಗಿ ಅವರು ತಿಳಿಸಿದರು.

ಅಲ್ಲದೇ ಜಿಲ್ಲೆಯಾದ್ಯಂತ ಆಯ್ದ 60ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಲಾಗುವುದು. ಜಿಲ್ಲೆಯ ಅಧಿಕೃತ, ನಂಬಿಕಾರ್ಹ, ಮಾಹಿತಿಯುಕ್ತ ವೆಬ್‌ಸೈಟ್‌ನ್ನು ಆರಂಭಿಸಿ, ಜಿಲ್ಲೆಯ ಛಾಯಾಚಿತ್ರ ಸಹಿತ ಸಮಗ್ರ ಮಾಹಿತಿ, ಐತಿಹಾಸಿಕ ಸ್ಥಳಗಳು, ಸ್ಥಳ ಐತಿಹ್ಯಗಳು, ವ್ಯಕ್ತಿಚಿತ್ರಗಳು, ವನ್ಯಜೀವಿಗಳು, ಸ್ಟೇಹೋಂ, ವಸತಿ ಗೃಹಗಳು, ಊಟೋಪಹಾರ, ಮತ್ತಿತರ ವಿಶೇಷತೆಗಳು, ನದಿ-ನಾಲೆ ಜಲಪಾತಗಳು, ತಪ್ಪಲು ಪ್ರದೇಶಗಳು, ಸ್ಥಳದಿಂದ ಸ್ಥಳಕ್ಕೆ ಇರುವ ದೂರ, ಕಾಲಮಾನಕ್ಕನುಗುಣವಾಗಿ ಬದಲಾಗುವ ವಿಶೇಷಗಳನ್ನೊಳಗೊಂಡಂತೆ ಮಾಹಿತಿಯನ್ನು ಒದಗಿಸಲಾಗುವುದು ಎಂದ ಅವರು, ಈ ಜಾಲತಾಣದಲ್ಲಿ ಅತ್ಯಪರೂಪದ ಜಿಲ್ಲೆಯ ವಿಶೇಷಗಳಿರುವ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು. ಇದರೊಂದಿಗೆ ಕಾಫೀ ಟೇಬಲ್‌ ಬುಕ್‌ನ್ನು ಪ್ರಕಟಿಸಲಾಗುವುದು ಎಂದರು.

ಈ ಎಲ್ಲವುಗಳ ವ್ಯವಸ್ಥಿತ ಆಯೋಜನೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗುವುದು. ಅಲ್ಲದೇ ಪ್ರವಾಸೋದ್ಯಮದಲ್ಲಿ ಆಸಕ್ತರಿರುವವರು ನೀಡುವ ಅಮೂಲ್ಯ ಸಲಹೆಗಳನ್ನು ನೀಡಲು ಮುಕ್ತ ಅವಕಾಶ ನೀಡಲಾಗಿದೆ ಎಂದರು.

DC Shivamogga ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ ಅವರು ಮಾತನಾಡಿ, ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗುವ ಸ್ಪರ್ಧೆಗಳನ್ನು ಸೆಪ್ಟಂಬರ್‌ 11ರೊಳಗಾಗಿ ಪೂರ್ಣಗೊಳಿಸಲಾಗುವುದು. ಸ್ಪರ್ಧೆಗಳಲ್ಲಿ ಪ್ರಮುಖವಾಗಿ ಜಿಲ್ಲೆಯಲ್ಲಿನ ವಿಶೇಷತೆಗಳನ್ನೊಳಗೊಂಡಂತೆ ವಿಡಿಯೋಗ್ರಫಿ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನ 40,000/-, ದ್ವಿತೀಯ ಬಹುಮಾನ 30,000/- ಹಾಗೂ ತೃತೀಯ ಬಹುಮಾನ 20,000/-ರೂ.ಗಳ ನಗದು ಬಹುಮಾನ ನೀಡಲಾಗುವುದು. ಅಲ್ಲದೇ 25,000/-ರೂ.ಗಳ ವಿಶೇಷ ಬಹುಮಾನ ನೀಡಲಾಗುವುದು.

ಫೋಟೋಗ್ರಫಿ ಸ್ಪರ್ಧೆ ಮತ್ತು ರೀಲ್ಸ್‌ ಸ್ಪರ್ಧೆ : ಪ್ರತ್ಯೇಕವಾಗಿರುವ ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅನುಕ್ರಮವಾಗಿ 8,000/-, 5,000/- ಮತ್ತು 3,000/-ರೂ.ಗಳ ನಗದು ಪುರಸ್ಕಾರ ನೀಡಲಾಗುವುದು. ಅಲ್ಲದೇ 10,000/-ರೂ.ಗಳ ವಿಶೇಷ ಬಹುಮಾನ ನೀಡಲಾಗುವುದು.

ಲಾಂಛನ ವಿನ್ಯಾಸ ಸ್ಪರ್ಧೆ(LOGO) : ಜಿಲ್ಲೆಯ ಮಹತ್ವದ ಹಲವು ವಿಶೇಷತೆಗಳನ್ನು ಬಿಂಬಿಸುವಂತೆ ಅತ್ಯುತ್ತಮ ರೀತಿಯಲ್ಲಿ ಲಾಂಛನ ವಿನ್ಯಾಸಗೊಳಿಸುವ ವಿನ್ಯಾಸಕಾರರಿಗೆ 30,000/-ರೂ.ಗಳ ಬಹುಮಾನ ನೀಡಲಾಗುವುದು.

ಘೋಷವಾಕ್ಯ ಸ್ಪರ್ಧೆ (TAGLINE) : ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ, ಎಲ್ಲರನ್ನೂ ಆಕರ್ಷಿಸುವ ರೀತಿಯಲ್ಲಿ ಜಿಲ್ಲೆಯನ್ನು ಇಲ್ಲಿನ ಮಹತ್ವಗಳನ್ನು ಪರಿಚಯಿಸುವ ಹಾಗೆ ಘೋಷವಾಕ್ಯ ರಚಿಸುವ ಓರ್ವರಿಗೆ ರೂ.5,000/-ಗಳ ನಗದು ಬಹುಮಾನ ನೀಡಲಾಗುವುದು ಎಂದರು.

ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ಅನುಕೂಲಗಳಿಗೆ ಚಿತ್ರೀಕರಣ, ಛಾಯಾಚಿತ್ರ ಮಾಡುವವರಿಗೆ ಜಿಲ್ಲಾಡಳಿತದ ವತಿಯಿಂದ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿರುವ ಅವರು, ಈ ಸ್ಪರ್ಧೆಗಳ ಕುರಿತಾದ ವಿವರಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪ್ಪ, ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಅಮರೇಶ್, ಬಸವರಾಜ್‌, ಪ್ರಕಾಶ್‌, ನಾಗರಾಜ್‌, ಸತೀಶ್‌, ಶ್ರೀನಿವಾಸ್‌, ಸೋಮಶೇಖರ್‌, ಮಂಜುನಾಥ್‌, ಗುರುರಾಜ್‌ ಮತ್ತಿತರರು ಉಪಸ್ಥಿತರಿದ್ದರು.

CM Siddharamaiah ಬೆಂಗಳೂರು ವಿಕ್ಟೋರಿಯ ಆಸ್ಪತ್ರೆಯನ್ನ 300 ಹಾಸಿಗೆಗಳ ಹಂತಕ್ಕೆ ಹೆಚ್ಚಿಸುವ ಪ್ರಸ್ತಾವನೆ ಇದೆ – ಸಿದ್ಧರಾಮಯ್ಯ

0

CM Siddharamaiah ಸಿಎಂ ಸಿದ್ದರಾಮಯ್ಯನವರು ಮಳೆ ಕಾರಣದಿಂದ ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ, ಆದರೂ ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು, ಯಾರ ಬಳಿಯೂ ಹಣ ಪಡೆಯಬಾರದು ಎಂದು ಸೂಚಿಸಿದರು.

ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು.
ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದರು.

CM Siddharamaiah ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆ. ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.

120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

S.N.Chennabasappa ಗಾಂಧಿ ಬಜಾರ್ & ನೆಹರು ರಸ್ತೆಯ ವರ್ತಕರ ಸಮಸ್ಯೆಗಳ ಬಗ್ಗೆ ಶಾಸಕ ಚೆನ್ನಿ ಸಭೆ

0

S.N.Chennabasappa ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಾನ್ಯ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ನೆಹರು ರಸ್ತೆ ಹಾಗೂ ಗಾಂಧಿ ಬಜಾರ್ ವರ್ತಕರ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಮೂಲಭೂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಮುಂದಿನ ದಿನಗಳಲ್ಲಿ ನಗರದಲ್ಲಿ ಶಿಸ್ತುಪಾಲಿತ ಹಾಗೂ ಸುರಕ್ಷಿತ ವ್ಯಾಪಾರದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ, ಈ ಕೆಳಕಂಡ ಪ್ರಮುಖ ಅಂಶಗಳ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದರು:

  1. ಗಾಂಧಿ ಬಜಾರ್‌ ಕೆಲ ಕಿಡಿಗೇಡಿಗಳಿಂದ ಉಂಟಾಗುತ್ತಿರುವ ಟ್ರಾಫಿಕ್ ಅಶಿಸ್ತಿಗೆ ಸಂಬಂಧಿಸಿದಂತೆ ತಕ್ಷಣದ ನಿಗಾವಹಿಸಲು ಸೂಚನೆ ನೀಡಿದರು.
  2. ಅನಧಿಕೃತವಾಗಿ ಬೇರೆ ರಾಜ್ಯಗಳಿಂದ ಬಂದಿರುವ ಕೆಲವು ವ್ಯಾಪಾರಿಗಳು ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  3. ಐಡಿ ಕಾರ್ಡ್ ಇಲ್ಲದಂತೆ ವ್ಯಾಪಾರ ನಡೆಸುತ್ತಿರುವವರ ಬಗ್ಗೆ ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದವರ ವಿರುದ್ಧ ಕ್ರಮ ವಹಿಸಲು ತಿಳಿಸಿದರು.
  4. ಅಸಮರ್ಪಕವಾಗಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವ ಪ್ರವೃತ್ತಿ, ವ್ಯಾಪಾರ ಪ್ರದೇಶಗಳಲ್ಲಿ ಗಂಭೀರ ಟ್ರಾಫಿಕ್ ಸಮಸ್ಯೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ, ಪಾರ್ಕಿಂಗ್ ನಿಯಮಗಳ ಅಳವಡಿಕೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
  5. ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಕೆಲ ಕಿಡಿಗೇಡಿಗಳ ವಿರುದ್ಧ ಕ್ರಮ ವಹಿಸುವಂತೆ ಸೂಚಿಸಿದರು.
  6. ಹಬ್ಬದ ಸಂದರ್ಭಗಳಲ್ಲಿ ಉಂಟಾಗುವ ಪಾರ್ಕಿಂಗ್ ಗೊಂದಲಗಳನ್ನು ನಿಯಂತ್ರಿಸಲು, ಪ್ರತ್ಯೇಕ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.
  7. ನೆಹರು ರಸ್ತೆಯಲ್ಲಿನ ಪಾರ್ಕಿಂಗ್ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.
  8. ನೆಹರು ರಸ್ತೆಯಲ್ಲಿನ ಅಪಾಯಕಾರಿಯಾದ ಗುಂಡಿಗಳನ್ನು ತ್ವರಿತವಾಗಿ ದುರಸ್ತಿ ಮಾಡಬೇಕೆಂದು ತಿಳಿಸಿದರು.
  9. ಡಿವೈಡರ್‌ಗಳ ಮೇಲೆ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಿ, ದಾರಿಗಳ ದೃಶ್ಯತೆ ಮತ್ತು ಸುರಕ್ಷತೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
  10. ಅನಧಿಕೃತವಾಗಿ ಹಾಕಲಾಗಿರುವ ಫ್ಲೆಕ್ಸ್ ಬೋರ್ಡುಗಳು, ನಗರ ಸೌಂದರ್ಯವನ್ನು ಹಾನಿಗೊಳಿಸುತ್ತಿರುವುದರಿಂದ ಅವನ್ನು ತೆರವುಗೊಳಿಸಲು ತಕ್ಷಣದ ಕ್ರಮ ಕೈಗೊಳ್ಳಲು ಆದೇಶಿಸಿದರು.

S.N.Chennabasappa ಈ ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು, ವರ್ತಕರ ಸಂಘದ ಪ್ರತಿನಿಧಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

L B & S.B.S. College ವಿಶೇಷ ಚೇತನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆ-ಡಾ.ಶಶಿಧರ್

0

L B & S.B.S. College ಚೈತನ್ಯ ವಿಶೇಷ ಶಿಕ್ಷಣ ಶಾಲೆಯು ವಿಶೇಷ ಚೇತನ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುತ್ತಿದ್ದು ಇದರಿಂದಾಗಿ ಈ ಮಕ್ಕಳ ಸರ್ವತೋಮುಖ ಬೆಳವಣಿಗೆ ಕಂಡುಬಂದಿರುವುದು ಅಭಿನಂದನೀಯವಾಗಿದೆ, ಎಂದು ಎಮ್.ಡಿ.ಎಫ್.ನಿರ್ದೇಶಕರು, ಮತ್ತು ಎಲ್ ಬಿ & ಎಸ್.ಬಿ.ಎಸ್. ಕಾಲೇಜ್ ನ ನಿವೃತ್ತ ಪ್ರಾಂಶುಪಾಲರಾದ ಡಾ. ಶಶಿಧರ್ ಹೇಳಿದರು.

“ಸಣ್ಣ ಜಿಗಿತಗಳು ಮತ್ತು ದೊಡ್ಡ ಅದ್ಭುತಗಳು” ಎಂಬ ಕಪ್ಪೆ ಸಂಕುಲದ ಬಗ್ಗೆ ಮಾಹಿತಿ ಕಾರ್ಯಾಗಾರದ ಸಾಕ್ಷ್ಯಚಿತ್ರ ಪ್ರದರ್ಶನ ಸಮಾರಂಭದಲ್ಲಿ ಮಾತನಾಡಿದರು.

ದಿನಾಂಕ:06-08-2025 ರಂದು ಕಂಚಿಕೈ ದೇವಪ್ಪ ಸಭಾಂಗಣ ಎಲ್ ಬಿ ಕಾಲೇಜ್ ನಲ್ಲಿ ಚೈತನ್ಯ ವಿಶೇಷ ಶಿಕ್ಷಣ ಟ್ರಸ್ಟ್, ಯೂಥ್ ಕನ್ಸರ್ವೇಷನ್ ಆಕ್ಷನ್ ನೆಟ್ ವರ್ಕ್,(youth Conservation Action Network)ಹಾಗೂ ಎಲ್ ಬಿ ಎಂಡ್ ಎಸ್ ಬಿ ಎಸ್ ಕಾಲೇಜ್ ಆಶ್ರಯದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

You CAN ಸಂಸ್ಥೆಯ Earth Education Fellowship nalli kaarya ನಿರ್ವಹಿಸುತ್ತಿರುವ ಅಂಜಲಿ ಪೂಜಾರಿ ಯವರು ವಿವಿಧ ವಿಭಾಗದ ಕಲೆಗಳನ್ನು ಬಳಸಿ ಪ್ರಕೃತಿಯೊಂದಿಗೆ ಸಂಬಂಧ ಬೆಸೆಯುವುದು ಮತ್ತು ಸಂವಹನ ನಡೆಸುವುದಕ್ಕೆ ಈ ವಿಶೇಷ ಚೇತನ ಮಕ್ಕಳನ್ನು ಆಯ್ಕೆ ಮಾಡಿಕೊಂಡಿದ್ದು, ಅದರ ಅಂಗವಾಗಿ ಕಪ್ಪೆಗಳ ಕುರಿತಾದ ಸಾಕ್ಷ್ಯಚಿತ್ರ “THE LITTLE PLANET” ಪ್ರದರ್ಶಿಸಲಾಯಿತು.

ಸುಮಾರು 9 ವರ್ಷಗಳಿಂದ ಕಪ್ಪೆಗಳ ಬಗ್ಗೆ ತಮ್ಮ ತಂಡ ಅಧ್ಯಯನ ಮತ್ತು ಚಿತ್ರೀಕರಣ ನಡೆಸಿದ್ದು, ಈ ಚಿತ್ರವನ್ನು ವಿಶೇಷ ಚೇತನ ಮಕ್ಕಳಿಗಾಗಿ ಪ್ರದರ್ಶಿಸುತ್ತಿರುವುದು ತುಂಬಾ ಸಂತಸ ತಂದಿದೆ ಎಂದು ಈ ಚಿತ್ರದ ನಿರ್ದೇಶಕರಾದ ಸುಹಾಸ್ ಪ್ರೇಮಕುಮಾರ್ ಹೇಳಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಪ್ಪೆಗಳು ಸುಮಾರು 20ಕ್ಕೂ ಹೆಚ್ಚು ಪ್ರಭೇದಗಳಿದ್ದು, ಕಪ್ಪೆಗಳ ಸಂಖ್ಯೆ ಜಾಸ್ತಿ ಇದ್ದಷ್ಟೂ ಪರಿಸರ ಆರೋಗ್ಯವಾಗಿರುತ್ತದೆ ಎಂದು ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಾಂತ್ ನಾಯಕ್ ಅಭಿಪ್ರಾಯ ಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು LB ಕಾಲೇಜ್ ನ ಪ್ರಾಂಶುಪಾಲರಾದ ಶ್ರೀ ಲಕ್ಷ್ಮೀಶ ವಹಿಸಿದ್ದರು.

ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ B H ರಾಘವೇಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಾಂತಲಾ ಸುರೇಶ್ ಸ್ವಾಗತಿಸಿದರು.

L B & S.B.S. College ಶಾಲೆಯ ಮಕ್ಕಳು ಪ್ರಾರ್ಥಿಸಿದರು.ಶಿಕ್ಷಕರಾದ ವೆಂಕಟೇಶ್ ನಿರೂಪಿಸಿ ವಂದಿಸಿದರು.ಸಮಾರಂಭದಲ್ಲಿ ಲಿಟಲ್ ಪ್ಲಾನೆಟ್ ತಂಡದ ಶ್ರೀಕಾಂತ್ ನಾಯಕ್, ಗಿರೀಶ್ ಜನ್ನೆ, ಪ್ರದೀಪ್ ಕಲ್ಲಹಳ್ಳಿ ಈಶಾನ್ಯ ಪಾಲ್ಗೊಂಡಿದ್ದರು. M D F ಸಂಸ್ಥೆಯ ನಿರ್ದೇಶಕರಾದ ಜಗದೀಶ್ ಒಡೆಯರ್ ಮತ್ತು ಚೈತನ್ಯ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಕೆ ಏನ್, ರಾಮಸ್ವಾಮಿ ಕಳಸವಳ್ಳಿ, ಶ್ರೀಕಾಂತ ಉಪಸ್ಥಿತರಿದ್ದರು.

District Consumer Disputes Redressal Commission ಆನ್ ಲೈನ್ ಮೂಲಕ ಟೀಪುಡಿ ತರಿಸುವಾಗ ಮುಖಬೆಲೆಗಿಂತ ಅಧಿಕ ದರ ಸ್ವೀಕಾರ ಗ್ರಾಹಕರ ಪರ ತೀರ್ಪು ನೀಡಿದ ಆಯೋಗ

0

District Consumer Disputes Redressal Commission ಟೀಪುಡಿಗೆ ಹೆಚ್ಚಿನ ದರವನ್ನು ಪಡೆದು ಸಾಗಿಸಿದ ಎದುರುದಾರ ಸಂಸ್ಥೆಗಳ ವಿರುದ್ದ ದಾಖಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ಮೆಹಬೂಬ್ ಮುದಸಿರ್ ಖಾನ್ ಸಿ.ಎ ಎಂ.ಎಂ.ಖಾನ್ ಶಿವಮೊಗ್ಗ ಇವರು ಸಿಇಓ ಫ್ಲಿಪ್‌ಕಾರ್ಟ್ ಇಂಟರ್‌ನೆಟ್ ಪ್ರೆöÊ.ಲಿ, ಬೆಂಗಳೂರು, ಹಿರಿಯ ವ್ಯವಸ್ಥಾಪಕರು ಫ್ಲಿಪ್‌ಕಾರ್ಟ್ ಇಂಟರ್‌ನೆಟ್ ಪ್ರೆöÊ.ಲಿ, ಬೆಂಗಳೂರು ಹಾಗೂ ವಿಜಿ ಫುಡ್ ಮತ್ತು ಕೇಟರ್ಸ್ ನವದೆಹಲಿ ಇವರ ವಿರುದ್ದ ದೂರನ್ನು ಸಲ್ಲಿಸಿ, ದೂರುದಾರರು ದಿ: 04-07-2024 ರಂದು 01 ಕೆ ಜಿ ತಾಜ್ ಮಹಲ್ ಟೀಪುಡಿಯನ್ನು ಎದುರುದಾರರಿಂದ ತರಿಸಲು ಆನ್‌ಲೈನ್‌ನಲ್ಲಿ ಬುಕ್ ಮಾಡಿದ್ದು, ಅದರ ಬೆಲೆ ರೂ.849 ಮತ್ತು ಸಾಗಣೆ ವೆಚ್ಚವಾಗಿ ರೂ.41 ಗಳನ್ನು ಒಟ್ಟು ರೂ.890 ಗಳನ್ನು ಎದುರುದಾರರಿಂದ ಪಡೆದು 01 ಕೆ ಜಿ ಟೀಪುಡಿಯ ಪೊಟ್ಟಣವನ್ನು ಕಳುಹಿಸಿರುತ್ತಾರೆ.

ಆದರೆ ಟೀಪುಡಿಯ ಪೊಟ್ಟಣದ ಮೇಲೆ ನಮೂದಿಸಿರುವ ಗರಿಷ್ಟ ಮಾರಾಟ ಬೆಲೆ ರೂ.825/- ಗಳಾಗಿದ್ದು ದೂರುದಾರರಿಂದ ರೂ.849 ಗಳನ್ನು ಪಡೆದಿರುತ್ತಾರೆ.

ಈ ವಿಷಯವನ್ನು ಎದುರುದಾರರಿಗೆ ಇ-ಮೇಲ್ ಮೂಲಕ ತಿಳಿಸಿದ್ದು 1 ಮತ್ತು 2ನೇ ಎದುರುದಾರರು ಸದರಿ ಸಮಸ್ಯೆಯನ್ನು ಬಗೆಹರಿಸದ ಕಾರಣ ಎದುರುದಾರರಿಗೆ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ಮೊತ್ತವನ್ನು ಪಡೆದಿದ್ದು ಉಳಿದ ಮೊತ್ತ ಹಿಂದಿರುಗಿಸಲು ತಿಳಿಸಿ ಪತ್ರ ಬರೆದಿರುತ್ತಾರೆ. ಈ ಪತ್ರಗಳು ಎದುರುದಾರರಿಗೆ ತಲುಪಿದ್ದರೂ ಸಹ ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಹಾಗೂ ಸಮಸ್ಯೆಯನ್ನು ಬಗೆಹರಿಸದೇ ಸೇವಾನ್ಯೂನ್ಯತೆ ಎಸಗಿದ್ದಾರೆಂದು ದೂರುನ್ನು ಸಲ್ಲಿಸಿರುತ್ತಾರೆ.

1 ಮತ್ತು 2ನೇ ಎದುರುದಾರರು ತಕರಾರನ್ನು ಸಲ್ಲಿಸಿ, ದೂರುದಾರರು ಬುಕ್ ಮಾಡಿರುವ ಟೀಪುಡಿ ಪೊಟ್ಟಣವು 3ನೇ ಎದುರುದಾರರು ಒದಗಿಸಿದ್ದು, 1 ಮತ್ತು 2ನೇ ಎದುರುದಾರರು ಸಾಗಣೆ ಮಾಡುವವರಾಗಿದ್ದು ಹಾಗೂ ಗರಿಷ್ಟ ಬೆಲೆಗಿಂತ ಹೆಚ್ಚಿನ ಮೊತ್ತ ಪಡೆದಿರುವವರು 3ನೇ ಎದುರುದಾರರು ಆದ್ದರಿಂದ 1 ಮತ್ತು ನೇ ಎದುರುದಾರರು ಯಾವುದೇ ಸೇವಾ ನ್ಯೂನ್ಯತೆ ಮಾಡಿಲ್ಲದಿರುವುದರಿಂದ ತಮ್ಮ ವಿರುದ್ದದ ದೂರನ್ನು ವಜಾ ಮಾಡಲು ಕೋರಿರುತ್ತಾರೆ.

District Consumer Disputes Redressal Commission ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವಂತಹ ಪ್ರಮಾಣ ಪತ್ರ, ದಾಖಲಾತಿಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ವಯ ಎದುರುದಾರರು ಸೇವಾ ನ್ಯೂನ್ಯತೆಯನ್ನು ಎಸಗಿರುತ್ತಾರೆಂದು ತೀರ್ಮಾನಿಸಿ ದೂರನ್ನು ಪುರಸ್ಕರಿಸಿ ದೂರುದಾರರು ಸದರಿ ಟೀಪುಡಿ ಪೊಟ್ಟಣವನ್ನು ಎದುರುದಾರರಿಗೆ ಹಿಂದಿರುಗಿಸಲು ಮತ್ತು 1 ರಿಂದ 3 ನೇ ಎದುರುದಾರರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ದೂರುದಾರರಿಗೆ ರೂ.890/- ಗಳನ್ನು ವಾರ್ಷಿಕ ಶೇ.9 ರಂತೆ ಬಡ್ಡಿಯನ್ನು ಸೇರಿಸಿ ದಿ: 19-09-2024 ರಿಂದ ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸಬೇಕು.

ತಪ್ಪಿದಲ್ಲಿ ವಾರ್ಷಿಕ ಶೇ.12 ರಂತೆ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು. ಹಾಗೂ 1 ರಿಂದ 3ನೇ ಎದುರುದಾರರು ರೂ.25000/- ಗಳನ್ನು ಮಾನಸಿಕ ಹಿಂಸೆಗೆ ಮತ್ತು ದೂರಿನ ಖರ್ಚು ವೆಚ್ಚಗಳಿಗಾಗಿ ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸುವುದು. ತಪ್ಪಿದಲ್ಲಿ ಸದರಿ ಮೊತ್ತಕ್ಕೆ ವಾರ್ಷಿಕ ಶೇ.12 ರಷ್ಟು ಬಡ್ಡಿಯನ್ನು ಸೇರಿಸಿ ಪಾವತಿಸುವಂತೆ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಜು.29 ರಂದು ಆದೇಶಿಸಿದೆ.

Rotary Shivamogga ಆಗಸ್ಟ್ 9, ಶಿವಮೊಗ್ಗದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಸ್ತನ ಆರೋಗ್ಯ ತಪಾಸಣೆ ನೋಂದಣಿಗೆ ಆಹ್ವಾನ

0

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಹಾಗೂ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇವರ ಸಹಯೋಗದಲ್ಲಿ ಆಗಸ್ಟ್ 9ರಂದು ಬೆಳಗ್ಗೆ 10.30ಕ್ಕೆ ರಾಜೇಂದ್ರ ನಗರದ ರೋಟರಿ ಶಾಲೆ ಆವರಣದಲ್ಲಿ ಕೃತಕ ಬುದ್ಧಿಮತ್ತೆ ಉಪಯೋಗಿಸಿ ಸ್ತನ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ.

ಈ ತಪಾಸಣೆಯಲ್ಲಿ ಸ್ಪರ್ಶ ಇಲ್ಲ, ನೋವು ಇಲ್ಲ, ವಿಕಿರಣದ ಆತಂಕವಿಲ್ಲ. ಮಹಿಳೆಯರಿಂದಲೇ ತಪಾಸಣೆ, ಕೇವಲ 10-15 ನಿಮಿಷದಲ್ಲಿ ತಪಾಸಣೆ ಆಗಲಿದೆ. ಮೊದಲು ನೋಂದಾಯಿಸಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ತಪಾಸಣೆಗೂ ಮೂರು ಗಂಟೆಗಳ ಮೊದಲು ವ್ಯಾಯಾಮ, ಯೋಗ ಮಾಡಿರಬಾರದು. ತಪಾಸಣೆಗೆ ಒಂದು ಗಂಟೆ ಮುಂಚೆ ಮುನ್ನ ಆಹಾರ, ಹಣ್ಣು, ಪಾನೀಯ ಸೇವಿಸಬಾರದು. ಹೆಚ್ಚಿನ ಮಾಹಿತಿಗೆ 9483683754 ಹಾಗೂ ನೋಂದಣಿಗೆ 8317443637 ಸಂಪರ್ಕಿಸಬಹುದಾಗಿದೆ.

Rotary Shivamogga ತಪಾಸಣೆಗೆ ನೋಂದಣಿ ಕಡ್ಡಾಯವಾಗಿದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ್ ತಿಳಿಸಿದ್ದಾರೆ.

Sagar Social Welfare Department ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

0

Sagar Social Welfare Department ಸಾಗರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3 ವರ್ಷದ ಅವಧಿಗೆ ಇಬ್ಬರು ಸಾಮಾಜಿಕ ಕಾರ್ಯಕತರು ಅದರಲ್ಲಿ ಓರ್ವ ಮಹಿಳೆ ಹಾಗೂ ಹಣಕಾಸು ಮತ್ತು ಪತ್ತಿನ ವ್ಯವಹಾರವನ್ನು ನಡೆಸುವ ಸಂಸ್ಥೆಗಳನ್ನು ಪ್ರತಿಸಿಧಿಸುವ ಒಬ್ಬ ವ್ಯಕ್ತಿಯನ್ನು ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶನ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ

ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿರುತ್ತದೆ. ಮ್ಯಾನ್ಯುಯಲ್ ಸ್ಕಾವೆಂಜಿಂಗ್ ನೇಮಕಾತಿ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ 24 ರ ಅಡಿಯಲ್ಲಿ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರ ನೇಮಕ ಮಾಡಿಕೊಳ್ಳಲಾಗುತ್ತದೆ. ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. Sagar Social Welfare Department ಉಪವಿಭಾಗದಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವ ಅಥವಾ ಉಪವಿಭಾಗದಲ್ಲಿ ವಾಸಿಸುತ್ತಿರುವ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಾಮಾಜಿಕ ಕಾರ್ಯಕರ್ತರು ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯಾಗಿರತಕ್ಕದ್ದು. ಹಾಗೂ ಪತ್ತಿನ ವ್ಯವಹಾರವನ್ನು ನಡೆಸುವ ಸಂಸ್ಥೆಗಳನ್ನು ಪ್ರತಿನಿಧಿಸುವ ಒಬ್ಬ ವ್ಯಕ್ತಿಯನ್ನು ಸಮಿತಿಗೆ ನಾಮನಿರ್ದೇಶನ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಮೊ.ಸಂ.9480843192,ದೂ.ಸA.08183-229402 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ.

S.N.Chennabasappa ಬೀದಿಬದಿ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ವ್ಯವಸ್ಥೆ ಆಗುವವರೆಗೂ ತಾತ್ಕಾಲಿಕವಾಗಿ ತೊಂದರೆ ಕೊಡಬೇಡಿ- ಶಾಸಕ ಚನ್ನಬಸಪ್ಪ

0

S.N.Chennabasappa ಟ್ರಾಫಿಕ್ ಸಮಸ್ಯೆಯ ನೆಪದಲ್ಲಿ ಟ್ರಾಫಿಕ್ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಹೂವಿನ ವ್ಯಾಪಾರಿಗಳಿಗೆ ತೊಂದರೆ ನೀಡುತ್ತಿರುವ ಕುರಿತು ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಶಿವಪ್ಪ ನಾಯಕ ಹೂವಿನ ಮಾರುಕಟ್ಟೆಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿದರು.

ಶ್ರಾವಣ ಮಾಸದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರವು ಸಕ್ರಿಯಗೊಂಡಿರುವ ಈ ಸಂದರ್ಭದಲ್ಲಿ, ವ್ಯಾಪಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

S.N.Chennabasappa ಈಗಾಗಲೇ ಪಾಲಿಕೆ ವತಿಯಿಂದ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರವಾಗಿ ಮಳಿಗೆಗಳು ನಿರ್ಮಿಸಲಾಗಿದ್ದು, ಅದರ ಹಂಚಿಕೆಯ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, ಮಳಿಗೆ ಹಂಚಿಕೆಯಾಗುವವರೆಗೂ ಯಾವುದೇ ತೆರವು ಕಾರ್ಯಾಚರಣೆ ಅಥವಾ ಅಡಚಣೆ ಉಂಟುಮಾಡದಂತೆ, ತಾತ್ಕಾಲಿಕವಾಗಿ ವ್ಯಾಪಾರ ಮಾಡುವ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.