Sunday, February 22, 2026
Sunday, February 22, 2026
Home Blog Page 220

Department of Labour ಶ್ರಮಿಕ ತಾತ್ಕಾಲಿಕ ವಸತಿಗೃಹ ಸೌಕರ್ಯ ಹೇಗಿದೆ? ಒಂದು ದಿನಕ್ಕೆಎಷ್ಟು ಶುಲ್ಕ‌? ಮಾಹಿತಿಗೆ ಓದಿ

0

Department of Labour ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆಗೊಳಿಸಿದರು.
ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಸುರಕ್ಷಿತವಾಗಿ ತಂಗಲು ಅವರಿಗೆ ಈ ವಸತಿ ಸಮುಚ್ಚಯವನ್ನು ಮಂಡಳಿ ವತಿಯಿಂದ ಈ ಸಮುಚ್ಚಯವನ್ನು ನಿರ್ಮಿಸಲಾಗಿದೆ. ೨೦೨೨ ರ ಜೂನ್ ಮಾಹೆಯಲ್ಲಿ‌ಕಾಮಗಾರಿ ಆರಂಭಗೊಂಡಿತ್ತು.
ಶ್ರಮಿಕ ತಾತ್ಕಾಲಿಕ ಸಮುಚ್ಚಯ ವಿವರ:

10 ಎಕರೆ ಪ್ರದೇಶದಲ್ಲಿ ವಸತಿ ನಿಲಯಗಳು ಮತ್ತು ವಸತಿ ಗೃಹಗಳನ್ನು‌ನಿರ್ಮಿಸಲಾಗಿದೆ.
ಒಟ್ಟು 03 ವಸತಿ ನಿಲಯ ಬ್ಲಾಕ್ಗಳು ಇದ್ದಯ, ಪ್ರತಿ ಬ್ಲಾಕ್ ನಲ್ಲಿ 11 ಡಾರ್ಮಿಟರಿಗಳಿವೆ. ಪ್ರತಿ ಡಾರ್ಮೆಟರಿಯಲ್ಲಿ 24 ವಸತಿ ಸಾಮರ್ಥ್ಯ ಇದೆ. ಪ್ರತಿ ಬ್ಲಾಕ್ ನ ವಸತಿ ಸಾಮರ್ಥ್ಯ 264 ಇದ್ದು ಒಟ್ಟು 03 ಬ್ಲಾಕ್ ಗಳ ವಸತಿ ಸಾಮರ್ಥ್ಯ 792 ಇದೆ.
ಹಾಗೂ 03 ವಸತಿ ಗೃಹ ಬ್ಲಾಕ್ ಗಳನ್ನು ನಿರ್ಮಿಸಿದ್ದು, ಪ್ರತಿ ಬ್ಲಾಕ್ ನಲ್ಲಿ 12 ಫ್ಲಾಟ್ ಗಳು, ಒಟ್ಟು 36 ಫ್ಲಾಟ್ ಗಳು, 144 ವಸತಿ ಸಾಮರ್ಥ್ಯ ಇದ್ದು, 01ಬಿಹೆಚ್ ಕೆವಿಸ್ತೀರ್ಣ 400 ಚ. ಅಡಿ ಇದೆ.
ತಾತ್ಕಾಲಿಕ ವಸತಿ ಸಮುಚ್ಚಯದಲ್ಲಿ
ಕಾರ್ಮಿಕರು ಅಡುಗೆ ಮಾಡಲು ಅನುಕೂಲವಾಗುವಂತೆ ಡಾರ್ಮಿಟರಿಯಲ್ಲಿ ಸುಸಜ್ಜಿತವಾದ ಅಡುಗೆ ಮನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಬಿಸಿ ನೀರಿಗಾಗಿ ಸೋಲಾ‌ರ್ ಪ್ಯಾನಲ್‌ ವ್ಯವಸ್ಥೆ ಇದೆ.
ಡಾರ್ಮಿಟರಿಗಳಲ್ಲಿ 02 ಹಂತದ ಬಂಕರ್ ಬೆಡ್ ಗಳನ್ನು ನೀಡಲಾಗಿರುತ್ತದೆ. ಆವರಣದಲ್ಲಿ ಆಡಳಿತ ಕಚೇರಿ ಇದೆ.
ವಸತಿ ಸೌಕರ್ಯ ಪಡೆಯಲು ಒಂದು ದಿನಕ್ಕೆ ರೂ.50/-ಗಳ ಶುಲ್ಕವನ್ನು ವಿಧಿಸಲಾಗುವುದು.
ಸಚಿವರು ವಸತಿ ಸಮುಚ್ಚಯವನ್ನು‌ ಲೋಕಾರ್ಪಣೆಗೊಳಿಸಿದ ನಂತರ ಪರಿವೀಕ್ಷಿಸಿದರು. ಈ ವೇಳೆ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಇತರೆ ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

gramina saksharatha scheme ಮಕ್ಕಳಿಗೆ ಉತ್ತಮ ಗುಣಮಟ್ಟದ ಸ್ವೆಟರ್ ವಿತರಿಸಲಾಗುತ್ತಿದೆ- ಜಗದೀಶ್ ಹೊಸೂರು

0

gramina saksharatha scheme ಮಕ್ಕಳ ಆರೋಗ್ಯದ ದೃಷ್ಠಿಯಿಂದ ಮಳೆ ಮತ್ತು ಚಳಿಗಾಲದಲ್ಲಿ ಉಪಯೋಗಕ್ಕೆ ಬರಲಿ ಎಂಬ ಉದ್ದೇಶದಿಂದ ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಜಗದೀಶ್ ಹೊಸೂರು ಹೇಳಿದರು.
ತಾಲೂಕಿನ ಗೆಂಡ್ಲ ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೇಂದ್ರ ಸರ್ಕಾರದ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮಕ್ಕಳಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಸ್ವೆಟರ್‌ಗಳನ್ನು ವಿತರಿಸಲಾಗುತ್ತಿದೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈಗಾಗಲೇ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಯ ಒಂದರಿAದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಲಾಗುತ್ತಿದೆ ಎಂದರು.
gramina saksharatha scheme ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣ್, ಶಾಲಾ ಮುಖ್ಯಶಿಕ್ಷಕ ಜಿ.ಎಂ. ಶಿವಕುಮಾರ, ಶಿಕ್ಷಕರಾದ ಎಚ್.ಪಿ. ಯಶೋಧ, ಜೆ. ಅರುಂಧತಿ, ಗ್ರಾಮದ ಮುಖಂಡರಾದ ರಾಮಪ್ಪ ಜಡ್ಡಿಹಳ್ಳಿ, ಸಂತೋಷ್, ಚನ್ನಪ್ಪ, ಮಹೇಶ್, ಪರಶುರಾಮ್, ಬಸವರಾಜ್ ಇತರಿದ್ದರು.

S.N. Channabasappa ಪ್ರತಿಯೊಂದು ವಾರ್ಡಿನ ಅಭಿವೃದ್ಧಿಯೇ ನಮ್ಮ ಧ್ಯೇಯ- ಶಾಸಕ ಚನ್ನಬಸಪ್ಪ

0

S.N. Channabasappa ವಾರ್ಡ್ ನಂಬರ್ 31ರ ಮೇಲಿನ ತುಂಗನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಹಲವು ವರ್ಷಗಳ ಬೇಡಿಕೆಯಾದ ಹಕ್ಕುಪತ್ರದ ಸಮಸ್ಯೆ, ಕುಡಿಯುವ ನೀರಿನ ಕೊರತೆ, ರಸ್ತೆಗಳ ದುರಸ್ಥಿ, ಹಾಗೂ ಸ್ವಚ್ಛತೆ ಸಂಬಂಧಿತ ಅನೇಕ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ, ತಕ್ಷಣವೇ ಕ್ರಮಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದರು.

ಹಕ್ಕುಪತ್ರದ ವಿಚಾರದಲ್ಲಿ ಕೂಡ ದಾಖಲೆ ಪರಿಶೀಲನೆ ಪ್ರಕ್ರಿಯೆ ವೇಗವಾಗಿಸಿ, ನವಂಬರ್ ತಿಂಗಳೊಳಗೆ ನ್ಯಾಯಯುತ ಹಕ್ಕು ಪತ್ರ ವಿತರಿಸುವ ಕುರಿತು ಚರ್ಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳಾದ ಶ್ರೀ ವಿಜಯಕುಮಾರ್, ಶ್ರೀ ಮಾರುತಿ, ಜಲಮಂಡಳಿ ಅಧಿಕಾರಿಗಳು, ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, ಸ್ಥಳೀಯ ಭಾಜಪಾ ಮುಖಂಡರು, ಕಾರ್ಯಕರ್ತರು ಮತ್ತು ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

Santosh S. Lad ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ- ಸಚಿವ ಸಂತೋಷ್ ಎಸ್ .ಲಾಡ್

0

Santosh S. Lad ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನ ಲೋಕಾರ್ಪಣೆ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Santosh S. Lad ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವಪೂರ್ಣವಾದ ಬಿಲ್‌ಗಳನ್ನು ಪಾಸ್ ಮಾಡಿದೆ. ಅಮೇಜಾನ್, ಸ್ವಿಗ್ಗಿ, ಝೊಮ್ಯಾಟೊ ಬ್ಲಿಂಕ್‌ಇಟ್‌ಗಳಲ್ಲಿ ಕೆಲಸ ಮಾಡುವ 5 ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ರಾಜ್ಯದಲ್ಲಿ ಇದ್ದಾರೆ. ಅವರಿಗಾಗಿಯೇ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಸಮರ್ಪಕವಾದ ಗಿಗ್ ಬಿಲ್ ಪಾಸ್ ಆಗಿದೆ. ಸಾಗಾಣಿಕೆ ದರದ ಮೇಲೆ 1 ರಿಂದ 5% ಹಣ ಮತ್ತು ಸರ್ಕಾರ ನೀಡುವ ಹಣದಿಂದ ಅವರಿಗೆ ಅನುಕೂಲ ಮಾಡಲಾಗುತ್ತಿದೆ. ಎರಡನೆಯದು ಸಹನಟರು, ಟಿಕೆಟ್ ನೀಡುವವರು, ತಂತ್ರಜ್ಞರು, ಪೌರಾಣಿಕ ನಾಟಕ ನಟರು ಸೇರಿದಂತೆ ಹಿನ್ನೆಲೆಯಲ್ಲಿ ಕೆಲಸ ಮಾಡುವ ಕೆಲಸಗಾರಗಾಗಿ ಸಿನಿ ಬಿಲ್ ಪಾಸ್ ಮಾಡಿದ್ದು, ಶೇ. 1 ರಿಂದ 2 ಸೆಸ್ ಮತ್ತು ಸರ್ಕಾರದ ಹಣ ಸೇರಿಸಿ ಅನುಕೂಲ ಮಾಡಲಾಗಿದೆ. ಹಾಗೂ ಕಮರ್ಷಿಯಲ್ ಡ್ರೈವರ್ ಕ್ಲೀನರ್, ಮೆಕ್ಯಾನಿಕ್ ಇತರೆ ಕಾರ್ಮಿಕರ ಸಾರಿಗೆ ಬಿಲ್ ಪಾಸ್ ಮಾಡಿದ್ದು, ಅಪಘಾತ, ಮರಣ ಅಥವಾ ತೊಂದರೆಯಾದಲ್ಲಿ ರೂ. 5 ಲಕ್ಷ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ತಾಸಿಗೆ 20 ಸಾವಿರ ಮರಣ ಸಂಭವಿಸುತ್ತಿದ್ದು ಪ್ರತಿ ದಿನ 480 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ದುಡಿಯುವ ವರ್ಗವೇ ಇದಕ್ಕೆ ಹೆಚ್ಚು ಬಲಿಯಾಗುತ್ತಿರುವ ಕಾರಣ ದೇಶದ ಜಿಡಿಪಿಗೆ ಶೇ.3 ನಷ್ಟವಾಗುತ್ತಿದೆ. ಸಭೆಗಳಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳು ಅಪಘಾತ ಆಗದಂತೆ ಅರಿವು ಮೂಡಿಸಿ, ಹೆಲ್ಮೆಟ್ ಕಡ್ಡಾಯಗೊಳಿಸಬೇಕು ಎಂದರು.
20 ಜನರಿಗಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುವೆಡೆ ಮಾಲೀಕರು 5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚುಟಿ ಪಾವತಿಸಬೇಕು. ಈ ರೀತಿಯ 6 ಸಾವಿರ ಕಂಪೆನಿಗಳು ಇಲಾಖೆಯಡಿ ನೋಂದಣಿಯಾಗಿದ್ದು, ಅಧಿಕಾರಿಗಳು ಗ್ರಾಚುಟಿ ಪಾವತಿ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.
ಎಸ್‌ಸಿ/ ಎಸ್‌ಟಿ ಯವರಿಗೆ ಕೆಲಸ ನೀಡುವ ಖಾಸಗಿ ಸಂಸ್ಥೆ/ಕಂಪನಿಗೆ ಕಾರ್ಮಿಕ ಇಲಾಖೆಯಿಂದ ಅವರಿಗೆ ಪಾವತಿಸಲು ಶೇ. 50 ಹಣ ನೀಡುವ ದೇಶದಲ್ಲೇ ಪ್ರಪ್ರಥಮ ಯೋಜನೆ ‘ಆಶಾದೀಪ’ ಕಾರ್ಮಿಕರ ಪಾಲಿಗೆ ಆಶಾದೀಪವಾಗಿದೆ. ಇದೇ ಮೊದಲ ಬಾರಿಗೆ ಇಲಾಖೆಯು 91 ಸಣ್ಣ ಸಣ್ಣ ಕೆಲಸ ಮಾಡುವ ಸಮುದಾಯಗಳನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಅಸಂಘಟಿತ ವರ್ಗದ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ ಡೀಸೆಲ್, ಪೆಟ್ರೋಲ್ ನಿಂದ 50 ಪೈಸಾ ದಿಂದ 1 ರೂ. ಸೆಸ್ ನೀಡಿದಲ್ಲಿ ಅನುಕೂಲವಾಗುತ್ತದೆ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರ್ಕಾರ ರೂ. 56 ಸಾವಿರ ಕೋಟಿಯಿಂದ 60 ಸಾವಿರ ಕೋಟಿವರೆಗೆ ಇದಕ್ಕಾಗಿ ಪ್ರತಿ ವರ್ಷ ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ಅಭಿವೃದ್ಧಿಗಾಗಿ ನೀಡಿದೆ. ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳ ಓಡಾಟ ಹೆಚ್ಚಿದೆ. ಶೇ.40 ಹೆಣ್ಣು ಮಕ್ಕಳ ಪ್ರಯಾಣ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳಡಿ ಬಡವರಿಗೆ ನೀಡುತ್ತಿರುವುದು ಉಳಿತಾಯಕ್ಕಾಗಿ ಅಲ್ಲ. ಆ ಹಣ ಸಂಪೂರ್ಣವಾಗಿ ಮತ್ತೆ ಮಾರುಕಟ್ಟೆಗೆ ವಾಪಸ್ ಬರುತ್ತಿರುವ ಕಾರಣ ರಾಜ್ಯದ ಜಿಡಿಪಿ ಭಾರತದಲ್ಲಿ ನಂ.1 ಕ್ಕೇರಿದೆ.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ. ದೇಶದ ಜಿಡಿಪಿ 4 ನೇ ಸ್ಥಾನದಲ್ಲಿದೆ. ರಾಜ್ಯದ ತಲಾ ಆದಾಯ ಸರಾಸರಿ ರೂ. 2 ಲಕ್ಷ ಇದೆ. ದೇಶ ಪ್ರಗತಿ ಆಗಬೇಕಾದರೆ ಪ್ರತಿಯೊಬ್ಬರ ಕೈಯಲ್ಲಿ ಹಣ ಬರಬೇಕು. ವಿವಿಧ ದೇಶಗಳ ಅಭಿವೃದ್ದಿ, ಅನ್ವೇಷಣೆ, ಸಂಶೋಧನೆ, ವಿಜ್ಞಾನಗಳ ಬಗ್ಗೆ ಚರ್ಚಿಸಬೇಕು. ಸಮಾಜ ಸುಧಾರಣೆ ನಿಟ್ಟಿನಲ್ಲಿ ಚರ್ಚೆ ಆಗಬೇಕು. ವಿಚಾರಗಳ ಬಗ್ಗೆ ವಿಮರ್ಶೆ ಆದಾಗ ಬದಲಾವಣೆ ಸಾಧ್ಯ. ರೈತರಿಗೆ ಅನುಕೂಲವಾಗುವಂತಹ ನಿರ್ಧಾರಗಳು ಆಗಬೇಕು. ಆನ್‌ಲೈನ್ ಬೆಟ್ಟಿಂಗ್ ನಿಲ್ಲಬೇಕು. ಕ್ರಿಕೆಟ್ ಬಿಸಿಸಿಐ ಬದಲಾಗಿ ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆ ಅಡಿ ಬರಬೇಕು ಎಂದು ಮನವಿ ಮಾಡಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾರ್ಮಿಕರು ದೇಶದ ಆಸ್ತಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ತಲುಪಿಸುತ್ತಿದೆ. ವಲಸೆ ಕಾರ್ಮಿಕರಿಗೆ ಅನುಕೂಲವಾಗಲೆಂದು ಸಿದ್ಲಿಪುರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳು ಹಾಗೂ ಸಮುದಾಯ ಭವನ ಲೋಕಾರ್ಪಣೆ ಮಾಡುತ್ತಿರುವುದು ಅತ್ಯಂತ ಸಂತಸದ ವಿಷಯ. ಅದೇ ರೀತಿಯಲ್ಲಿ ಕಾರ್ಮಿಕರಿಗೆ ಅನುಕೂಲವಾಗಲು ಶಿಕಾರಿಪುರ ಮತ್ತು ಸಾಗರದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಚಿವರು ಸಹಕರಿಬೇಕು. ದೇಶದಲ್ಲಿ 31 ಕೋಟಿ ಅಸಂಘಟಿತ ಕಾರ್ಮಿಕರಿದ್ದು ಅದರಲ್ಲಿ ಶೇ.54 ಮಹಿಳಿಯರಿದ್ದಾರೆ. ಜಿಲ್ಲೆಯಲ್ಲಿ 3.5 ಲಕ್ಷ ಅಸಂಘಟಿತ ಕಾರ್ಮಿಕರು ನೋಂದಣಿಯಾಗಿದ್ದು ಇಶ್ರಮ್ ಕಾರ್ಡ್ ನೀಡಲಾಗುತ್ತಿದೆ. ಒನ್ ನೇಷನ್ ಒನ್ ಕಾರ್ಡ್ ಕೊಡಲು ಕ್ರಮ ವಹಿಸಲಾಗುತ್ತಿದೆ. 60 ವರ್ಷ ತುಂಬಿದವರಿಗೆ ರೂ. 3000 ಪಿಂಚಣಿ ನೀಡಲಾಗುವುದು.
ಕಾರ್ಮಿಕ ಸಚಿವರು ಕಾರ್ಮಿಕರ ಪರವಾಗಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಇಎಸ್‌ಐ ಸೌಲಭ್ಯ ಪಡೆಯಲು ರೂ. 21 ಸಾವಿರ ಆದಾಯ ಮಿತಿ ಇದ್ದು ಇದನ್ನು 30 ಸಾವಿರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ನಡೆಯುತ್ತಿದೆ. ಭದ್ರಾವತಿ ಉಕ್ಕಿನ ಕಾರ್ಖಾನೆಗೆ ಮರು ಜೀವ ನೀಡಲು ಚರ್ಚೆ ನಡೆಯುತ್ತಿದೆ. ಬಂಡವಾಳ ಹೂಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ.
ಇದಕ್ಕೆ ಸಂಬAಧಿಸಿದAತೆ ಕೇಂದ್ರದಲ್ಲಿ 2 ಕಡತ ಬಾಕಿ ಇದ್ದು, ಅದು ವಿಲೇ ಆದ ನಂತರ 8-10 ಸಾವಿರ ಕೋಟಿ ಅನುದಾನ ತಂದು ಮರು ಜೀವ ಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಎಂಪಿಎA ಮತ್ತು ವಿಐ ಎಸ್ ಎಲ್ ಕಾರ್ಖಾನೆಗಳಿಗೆ ಜೀವ ಬಂದಲ್ಲಿ 20 ರಿಂದ 25 ಸಾವಿರ ಕಾರ್ಮಿಕರಿಗೆ ಶಕ್ತಿ ಬರಲಿದೆ ಈ ನಿಟ್ಟಿನಲ್ಲಿ ಕಾರ್ಮಿಕರು ಸಚಿವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ರಾಜ್ಯದಲ್ಲಿ ಸದಾ ಕಾರ್ಮಿಕರ ಏಳ್ಗೆಗಾಗಿ ಶ್ರಮ ವಹಿಸುತ್ತಿರುವ ಕಾರ್ಮಿಕ ಸಚಿವರಿಗೆ ಅಭಿನಂದನೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಕಾರ್ಮಿಕರ ಭವನ ನಿರ್ಮಿಸಲು ಸಹಕರಿಬೇಕು. ಅಡುಗೆ ಬಡಿಸುವವರನ್ನೂ ಅಸಂಘಟಿತ ಕಾರ್ಮಿಕರ ಪಟ್ಟಿಗೆ ಸೇರಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹೆಚ್ಚಿಸಬೇಕೆಂದು ಮನವಿ ಮಾಡಿದರು.
ಕಾರ್ಮಿಕ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಎಸ್.ಬಿ ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಚಿವರು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ಕಾರ್ಡ್ ಮತ್ತು ಮೃತಪಟ್ಟವರ ಅವಲಂಬಿತರಿಗೆ ಚೆಕ್ ವಿತರಿಸಿದರು.
ಶಾಸಕರಾದ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸೂಡಾ ಅಧ್ಯಕ್ಷ ಸುಂದರೇಶ್, ಕಾರ್ಮಿಕ ಆಯುಕ್ತರಾದ ಡಾ.ಗೋಪಾಲಕೃಷ್ಣ , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಗಳಾದ ಭಾರತಿ, ಜಿ.ಪಂ.ಸಿಇಒ ಹೇಮಂತ್. ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರು, ಜಿಲ್ಲಾ ಕಾರ್ಮಿಕ ಅಧಿಕಾರಿ, ಮುಖಂಡರು, ಕಾರ್ಮಿಕರು, ಸಾರ್ವಜನಿಕರು ಹಾಜರಿದ್ದರು.

Department of Transport ಶಿವಮೊಗ್ಗದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ

0

Department of Transport ಶಿವಮೊಗ್ಗದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಆಶ್ರಯದಲ್ಲಿ
ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯ ಭವನ”ವನ್ನು ಉದ್ಘಾಟಿಸಿದರು. Department of Transport ಉದ್ಘಾಟನಾ ಕಾರ್ಯಕರ್ಮದಲ್ಲಿ ಶಾಸಕರಾದ ಚನ್ನಬಸಪ್ಪ, ಶಾರದಾ ಪೂರ್ಯನಾಯಕ್, ಮೆಲ್ಮನೆ ಸದಸ್ಯ ಅರುಣ್, ರಾಜ್ಯ ಲಿಡ್ಕರ್ ನಿಗಮದ ಅಧ್ಯಕ್ಷ ನಾಗರಾಜ್ ಮುಂಡರಗಿ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

Department of Tourism ಬುಡಕಟ್ಟು ಗ್ರಾಮಗಳಲ್ಲಿ “ಹೋಂಸ್ಟೇ” ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಅಹ್ವಾನ

0

Department of Tourism ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರ ಸಚಿವಾಲಯದ “ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ” ಯೋಜನೆಯಡಿಯಲ್ಲಿ ಗ್ರಾಮಗಳನ್ನು ಅಭಿವೃದ್ದಿಪಡಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತಹ ಹೊಂ ಸ್ಟೇ ನಿರ್ಮಿಸಲು ಹಾಗೂ ಅದನ್ನು ನವೀಕರಿಸಲು ಪ್ರವಾಸೋದ್ಯಮ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ಶಿವಮೊಗ್ಗ ಜಿಲ್ಲೆಯ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ವಿರುಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿಯ ಸದಾಶಿವಪುರ ಗ್ರಾಮಗಳನ್ನು ಗುರುತಿಸಲಾಗಿದ್ದು, ಗ್ರಾಮಗಳನ್ನು ಅಭಿವೃದ್ದಿಪಡಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೊಂಸ್ಟೇ ನಿರ್ಮಿಸಲು ರೂ.5 ಲಕ್ಷ ಹಾಗೂ ನವೀಕರಿಸಲು ರೂ.3 ಲಕ್ಷ ಸಹಾಯಧನ ನೀಡಲಾಗುತ್ತದೆ.
ಈ ಗ್ರಾಮಗಳನ್ನು ಆತಿಥ್ಯ ಕ್ಷೇತ್ರವನ್ನಾಗಿ ಮಾಡಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದು ಇದರ ಮುಖ್ಯ ಉದ್ದೇಶವಾಗಿದ್ದು, “ಡೆವಲಪ್ಮೆಂಟ್ ಆಫ್ ಹೊಂ ಸ್ಟೇ ಇನ್ ಟ್ರೈಬಲ್ ಏರಿಯಾ” ಯೋಜನೆಯನ್ನು ಮುದ್ದಿನಕೊಪ್ಪ ಮತ್ತು ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಬುಡಕಟ್ಟು ಜನಾಂಗದವರು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು.
Department of Tourism ಅರ್ಜಿ ಸಲ್ಲಿಸಲು ಆ.11 ರಂದು ಕೊನೆಯ ದಿನಾಂಕವಾಗಿದ್ದು, ಅರ್ಹ ಆಸಕ್ತರು/ ಕುಟುಂಬದವರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಫೋಟೋ, ಡಿಕ್ಲರೇಷನ್ ಫಾರ್ಮ್, ಗ್ರಾಮ ಪಂಚಾಯಿತಿಯ ಎನ್‌ಓಸಿ ದಾಖಲೆಗಳ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-251444 ಹಾಗೂ 7026296510 ಗೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

CM Siddharamaiah ಸಾಂವಿಧಾನಿಕ ಸಮಾನತೆ ಖಾತರಿ ಪಡಿಸುತ್ತೇವೆ,ಎಐಸಿಸಿ ಕಾನೂನು ಸಮ್ಮೇಳನದಲ್ಲಿ ಸೀಎಂ ಸಿದ್ಧರಾಮಯ್ಯ ಹೇಳಿಕೆ

0

CM Siddharamaiah ಶ್ರೀಮತಿ ಇಂದಿರಾ ಗಾಂಧಿಯವರಂತಹ ನಾಯಕರು 20 ಅಂಶಗಳ ಕಾರ್ಯಕ್ರಮ ಮತ್ತು ರಾಷ್ಟ್ರೀಕರಣದಂತಹ ಸುಧಾರಣೆಗಳ ಮೂಲಕ ಹಿಂದುಳಿದ ವರ್ಗ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸಲು ಸಕಾರಾತ್ಮಕ ಕ್ರಮಗಳನ್ನು ಬಳಸಿದರು. ಆದರೆ ರಾಜೀವ್ ಗಾಂಧಿಯವರು 73 ಮತ್ತು 74 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಪಂಚಾಯತ್ ಮಟ್ಟದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಖಾತ್ರಿ ಪಡಿಸಿದರು. ಸಾಮಾಜಿಕ ನ್ಯಾಯವನ್ನು ಮುಂದೂಡಲು ಸಾಧ್ಯವಿಲ್ಲ. ಅದನ್ನು ಈಗ, ಇಲ್ಲಿಯೇ ತಲುಪಿಸಬೇಕು ಎಂದು ಕಾಂಗ್ರೆಸ್ ನಂಬುತ್ತದೆ.

ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಮತ್ತು ರಾಜಕೀಯಕ್ಕೆ ನಾವು ಕುರುಡರಾಗಲು ಸಾಧ್ಯವಿಲ್ಲ. ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ದುರ್ಬಲಗೊಳಿಸುವುದು ಮತ್ತು ಈಗಾಗಲೇ ಪ್ರಬಲವಾಗಿರುವ ಪ್ರಭುತ್ವ ರಾಜ್ಯವನ್ನು ರಚಿಸುವುದು ಅದರ ಉದ್ದೇಶವಾಗಿದೆ. ಆದ್ದರಿಂದ, ರಾಜ್ಯದ ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ಸಮಾನವಾಗಿ ವಿತರಿಸುವ ಮತ್ತು ಅತ್ಯಂತ ಹಿಂದುಳಿದವರನ್ನು ತಲುಪುವ ಸಮಗ್ರ ಮತ್ತು ಬಹುತ್ವ ಸಮಾಜವನ್ನು ಮರುಸ್ಥಾಪಿಸುವ ಅವಶ್ಯಕತೆಯಿದೆ. ಸಮಾಜದ ಅತ್ಯಂತ ಹಿಂದುಳಿದ ವರ್ಗಗಳನ್ನು ಸಬಲರನ್ನಾಗಿಸುವ ಮೂಲಕ ಬಡವರು ಧ್ವನಿಯನ್ನು ಕಂಡುಕೊಳ್ಳಲು ಸಾಧ್ಯವಾಗಿಸಬಹುದು.

ನಮ್ಮ ಸಂವಿಧಾನದಲ್ಲಿ ನಂಬಿಕೆಯಿರುವವರಿಗೆ, ನಾವು ನಿಜವಾದ ಸಮಾನತೆ ಮತ್ತು ಭ್ರಾತೃತ್ವವನ್ನು ಸಾಧ್ಯವಾಗಿಸಿದಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರವಾಗುತ್ತದೆ. ಅದು ಸಾಮಾಜಿಕ ನ್ಯಾಯವಲ್ಲದೆ ಬೇರೇನೂ ಅಲ್ಲ. ಸಮಾನತೆಯನ್ನು ಸಾಧಿಸಲು ಕೇವಲ ತಾರತಮ್ಯ ಮಾಡದ ನಿಷ್ಕ್ರಿಯತೆಯ ಬದಲಿಗೆ ರಾಜ್ಯದಿಂದ ಸಕ್ರಿಯ ಹಸ್ತಕ್ಷೇಪದ ಅಗತ್ಯವಿದೆ. ನೈಜ ಸಮಾನತೆಯನ್ನು ಖಾತರಿಪಡಿಸುವುದು ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಮ್ಮೆಲ್ಲರ ಮೇಲಿರುವ ಹೊಣೆಗಾರಿಕೆ.

CM Siddharamaiah ಕರ್ನಾಟಕ ಸರ್ಕಾರ ಮತ್ತು ನನ್ನ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಬದ್ಧತೆಯು ಸಂವಿಧಾನದ ಉದ್ದೇಶವನ್ನು ಪೂರೈಸುವುದು, ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದಾಗಿದೆ. ನಾವು ಆ ಹಾದಿಯಲ್ಲಿಯೇ ಸಾಗುತ್ತೇವೆ.

S.N. Channabasappa ಪ್ರಜ್ಞಾ ಸಿಂಗ್ & ಇತರರು ನಿರ್ದೋಷಿ ತೀರ್ಪು, ಹಿಂದೂ ರಾಷ್ಟ್ರಕ್ಕೆ ಸಿಕ್ಕ ಜಯ – ಶಾಸಕ‌ ಚನ್ನಬಸಪ್ಪ

0

S.N. Channabasappa ಶಿವಮೊಗ್ಗದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪನವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಲೆಗಾಂವ್ ಸ್ಫೋಟದ ವೇಳೆ ಇಡೀ ದೇಶ ಬೆಚ್ಚಿ ಬಿದ್ದಿತ್ತು.17 ವರ್ಷದ ಬಳಿಕ ಈಗ ಆರೋಪಿಗಳು ನಿರಾಪರಾಧಿಯಾಗಿ ಹೊರ ಹೊಮ್ಮಿದ್ದಾರೆ.
ಇದು ಹಿಂದೂ ರಾಷ್ಟ್ರಕ್ಕೆ ಸಿಕ್ಕ ಜಯವಾಗಿದೆ.ಇದು ಹಿಂದೂ ರಾಷ್ಟ್ರ ಎಂದು ಈ ಹಿಂದೆ ಹಲವಾರು ನಾಯಕರು ಹೇಳಿದ್ದರು ಎಂದು ಹೇಳಿದರು. ಹಿಂದೂ ರಾಷ್ಟ್ರದ ಸಮಗ್ರತೆ ಹಾಳು ಮಾಡಲು ಆಗಿನ ಕಾಂಗ್ರೆಸ್ ನಾಯಕರು ಮುಂದಾಗಿದ್ದರು.ಅನೇಕ ತನಿಖೆಗಳು ಆಗ ನಡೆದಿದ್ದರೂ ಆರೋಪಿಸಲಾಗುತ್ತಿತ್ತು.
ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಕರ್ನಲ್ ಪ್ರಸಾದ್ ಅವರನ್ನು ತುಳಿಯುವ ಯತ್ನ ಮಾಡಲಾಗಿತ್ತು.
ಈ ಮೂಲಕ ಕಾಂಗ್ರೆಸ್ ನ ನೀತಿ ತಿಳಿಯುತ್ತದೆ ಎಂದು ತಿಳಿಸಿದರು.

ಹಿಂದೂ ನಾಯಕರನ್ನು ತುಳಿಯುವ ನಿಟ್ಟಿನಲ್ಲಿ ಯುಪಿಎ ಸರ್ಕಾರ ಮುಂದಾಗಿತ್ತು. ಒಬ್ಬ ಹಿಂದೂ ಭಯೋತ್ಪಾದಕ ಆಗಲು ಸಾಧ್ಯವಿಲ್ಲ.ಷಡ್ಯಂತ್ರದ ಹಿನ್ನೆಲೆಯಲ್ಲಿ ಮನಸ್ಸಿಗೆ ಬಂದಂತೆ ಕೇಸುಗಳನ್ನು ಹಾಕಲಾಗಿತ್ತು.ಆಗಿನ ಅಧಿಕಾರಿಗಳ ವಿರುದ್ಧ ಉದ್ದೇಶ ಪೂರ್ವಕವಾಗಿ ಯಾರು ಮಾಡಿದ್ದರೂ ಅವರ ವಿರುದ್ಧ ತನಿಖೆಯಾಗಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದವರು ಆರೋಪ ಮಾಡಿದವರೆಲ್ಲಾ ಈಗ ಕ್ಷಮೆ ಯಾಚಿಸಬೇಕು.
ಈ ದೇಶಕ್ಕೆ, ಈ ರಾಜ್ಯದ ಜನರಿಗೆ ಈ ಬಗ್ಗೆ ಗೊತ್ತಾಗಬೇಕು.ಸಿಮಿ ಸಂಘಟನೆಯನ್ನು ಬಲಿಪಶು ಮಾಡಬಾರದು ಎಂಬ ನಿಟ್ಟಿನಲ್ಲಿ ಷಡ್ಯಂತ್ರದಿಂದ ಸಿಮಿ ಸಂಘಟನೆ ದಾಳಿ ಮಾಡಿದ ಪ್ರಕರಣ ಕಾಂಗ್ರೆಸ್ ಕೈ ಬಿಟ್ಟಿತ್ತು.
ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ತಂಡವನ್ನು ಸದೆಬಡಿಯಲು ಸಂಚು ರೂಪಿಸಲಾಗಿತ್ತು ಎಂದರು.

S.N. Channabasappa ಕಾಂಗ್ರೆಸ್ ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈ ದೇಶದ ಪ್ರಜೆಗಳೇ ಅಲ್ಲ.
ದಿಗ್ವಿಜಯ್ ಸಿಂಗ್ ಆಗ ಆರ್.ಎಸ್.ಎಸ್. ಸಂಘಟನೆಯು ಭಯೋತ್ಪಾದನಾ ತರಬೇತಿ ಶಿಬಿರಗಳು ನಡೆಸುತ್ತಿವೆ ಎಂದು ಹೇಳಿರುತ್ತಾರೆ.
ದಿಗ್ವಿಜಯ್ ಸಿಂಗ್ ಒಬ್ಬ ಹುಚ್ಚ
ಕಾಂಗ್ರೆಸ್ ನಲ್ಲಿ ಈ ರೀತಿ ಹಲವಾರು ಜನ ಹುಚ್ಚರಿದ್ದಾರೆ.
ಕಾಂಗ್ರೆಸ್ ನ ದುಷ್ಟ ನೀತಿ ಈಗ ಬಯಲಾಗಿದೆ ಎಂದು ತಿಳಿಸಿದರು.

CM Siddharamaiah ಸಿದ್ಧರಾಮಯ್ಯ ಜನ್ಮದಿನ ಆಚರಣೆ, ಅಭಿಮಾನಿ ಬಳಗದಿಂದ‌ 77 ಈಡುಗಾಯಿ ಪೂಜೆ

0

CM Siddharamaiah ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ಸರ್ವ ಜನಾಂಗದ ನಾಯಕ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಅಂಗವಾಗಿ ನಗರದ ಗ್ರಾಮ ದೇವತೆ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ಹಾಗೂ ಶಿವಮೊಗ್ಗ ಜಿಲ್ಲೆ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ “ವಿಶೇಷ ಪೂಜೆ ಸಲ್ಲಿಸಿ 77 ಈಡಗಾಯಿ ಸಮರ್ಪಣೆ ಮಾಡಿ ವಿಶೇಷವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನಕುಮಾರ್ ಅವರು ಸಾಮಾಜಿಕ ನ್ಯಾಯವನ್ನೇ ಉಸಿರಾಗಿರಿಸಿಕೊಂಡಿರುವ ಸಮಾಜವಾದಿ ನೇತಾರ, ಭಾಗ್ಯಗಳ ಸರದಾರ, ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರ ಬದುಕುಗಳಿಗೆ ಹೊಸ ಭರವಸೆ ತುಂಬಿದ ಕರುನಾಡ ಭಾಗ್ಯವಿಧಾತ, ನಮ್ಮೆಲ್ಲರ ಮಾರ್ಗದರ್ಶಿಗಳು, ನಾಡಿನ ಅತ್ಯಂತ ಶ್ರೇಷ್ಠ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ನಾಡ ದೇವತೆ ತಾಯಿ ಚಾಮುಂಡೇಶ್ವರಿ ಹಾಗೂ ಶಿವಮೊಗ್ಗದ ಗ್ರಾಮದೇವತೆ ಕೋಟೆ ಮಾರಿಕಾಂಬ ದೇವಿಯ ಅನುಗ್ರಹ ಅವರ ಮೇಲೆ ಸದಾ ಇರಲಿ ಎಂದು ಹುಟ್ಟುಹಬ್ಬದ ಶುಭಾಶಯ ಕೋರಿದರು.

CM Siddharamaiah ಈ ಸಂದರ್ಭದಲ್ಲಿ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್ .ರವಿಕುಮಾರ್ ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ , ಮಾಜಿ ಉಪ ಮಹಾಪೌರರಾದ ಎಚ್ ಪಾಲಾಕ್ಷಿ, ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ನ ಮುಖಂಡ ಹೆಚ್‌.ಪಿ. ಗಿರೀಶ್, ಬಿ ಲೋಕೇಶ್, ಪಂಚ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್ ,ಬಸವರಾಜ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಂ ರಾಕೇಶ್, ಕೆ ಎಲ್ ಪವನ್ , ಪುಷ್ಪಕ್ ಕುಮಾರ್, ಟಿ ಗುರುಪ್ರಸಾದ್, ರಾಜೇಶ್ ಮಂದಾರ, ರಾಹುಲ್ ಸಿಗೆಹಟ್ಟಿ, ಆರ್‌ಎಂ ಓಂ, ಸಂತೋಷ್ ಪುರಲೆ, ರಾಘವೇಂದ್ರ ರಾಮಿನಕೊಪ್ಪ, ಅದ್ನನ್, ಶ್ರೀಕಾಂತ್, ಪ್ರವೀಣ್ ಕಾಶಿಪುರ, ಸಂತೋಷ್ ,ಕಿರಣ್, ಶರತ್ ,ಸಂದೇಶ್ ಪಕ್ಷದ ಮುಖಂಡರುಗಳಾದ ಯು ಶಿವಾನಂದ್ ,ನವಲೆ ಮಂಜುನಾಥ್ , ಸುವರ್ಣ ನಾಗರಾಜ್ ,ಕವಿತಾ ಎಂ ಬಿ , ಶಾರದಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Karnataka State Bioenergy Development Board ರಾಜ್ಯದ 234 ತಾಂತ್ರಿಕ ವಿವಿಯ ಕಾಲೇಜುಗಳ ಸಾಲಿನಲ್ಲಿ ಶಿವಮೊಗ್ಗ ಜೆ ಎನ್ ಸಿ ಇ ಐದನೇ ಸ್ಥಾನದಲ್ಲಿರುವುದು ಹೆಮ್ಮೆ- ಎಸ್.ಈ.ಸುಧೀಂದ್ರ

0

Karnataka State Bioenergy Development Board ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶ್ರೀ ಎಸ್ ಈ ಸುಧೀಂದ್ರ ಅವರು ದಿನಾಂಕ 2.08.2025 ರಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಭಾರತೀಯ ವಿಜ್ಞಾನ ಮಂದಿರ, ಬೆಂಗಳೂರು ಹಾಗೂ ಜವಹರಲಾಲ್ ನೆಹರು ಕಾಲೇಜ್ ಆಫ್ ಇಂಜಿನಿಯರಿಂಗ್, ಶಿವಮೊಗ್ಗ ಅವರ ಸಹಯೋಗದಲ್ಲಿ ಆಯೋಜಿಸಲಾಗಿರುವ 48 ನೇ ಆಯೋಜಿಸಲಾಗಿರುವ 48 ನೇ ಸ್ಟೂಡೆಂಟ್ ಪ್ರಾಜೆಕ್ಟ್ ಪ್ರೋಗ್ರಾಮ್(SPP) ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಈ ಸಮಾರೋಪ ಕಾರ್ಯಕ್ರಮಕ್ಕೆ
ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವುದು ಹಾಗೂ ಇದೇ ಸಂದರ್ಭದಲ್ಲಿ ಮಂಡಳಿಯ ಬಿ ಆರ್ ಐ ಡಿ ಸಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆಯನ್ನು ಜೈವಿಕ ಇಂಧನ ಸಸಿಗಳನ್ನು ನೀಡುವುದರ ಮೂಲಕ ಹಾಗೂ ವಾಹನಗಳಿಗೆ ಬಯೋ ಡೀಸೆಲ್ ಹಾಕುವುದರ ಮೂಲಕ ಆಚರಣೆ ಮಾಡಿದ್ದಕ್ಕೂ ಧನ್ಯವಾದಗಳನ್ನು ತಿಳಿಸಿದರು.

ಜವಹರಲಾಲ್ ನೆಹರು ಕಾಲೇಜ್ ಆಫ್ ಇಂಜಿನಿಯರಿಂಗ್ ಸಂಸ್ಥೆಯ ಬಗ್ಗೆ ಮಾತನಾಡುತ್ತಾ, ಈ ತಾಂತ್ರಿಕ ಸಂಸ್ಥೆ ಸ್ವಾತಂತ್ರ್ಯ ಪೂರ್ವ1946 ರಲ್ಲಿ ಪ್ರಾರಂಭವಾಗಿದ್ದು,44 ವರ್ಷಗಳ ಇತಿಹಾಸವನ್ನು ಹೊಂದಿದೆ. ಬೆಳಗಾವಿ ತಾಂತ್ರಿಕ ವಿಶ್ವವಿದ್ಯಾಲಯದಡಿ ಬರುವ 233 ಕಾಲೇಜುಗಳ ಪೈಕಿ 5ನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ.

ಇದೇ ಸಂದರ್ಭದಲ್ಲಿ ಜೈವಿಕ ಇಂಧನ ಪಿತಾಮಹ ಸರ್ ರುಢಾಲ್ಪ್ ಡೀಸೆಲ್ ಅವರ ನೆನಪಿನಲ್ಲಿ ಪ್ರತಿವರ್ಷ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುತ್ತಿರುವ ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆಗೆ, ಜೆಎನ್ಸಿಯ ಬಿಆರ್‌ಐಡಿಸಿ ಕೇಂದ್ರದಲ್ಲಿ ಜೈವಿಕ ಇಂಧನ ಸಸಿಗಳನ್ನು ನೆಡುವುದು, ವಾಹನಗಳಿಗೆ ಜೈವಿಕ ಇಂಧನ ಹಾಕುವುದರ ಮೂಲಕ ಚಾಲನೆ ನೀಡಿರುವುದು ನನಗೆ ಸಂತೋಷದ ಹಾಗೂ ಹೆಮ್ಮೆಯ ವಿಚಾರವಾಗಿದೆ.

01.8 .2025 , ರಂದು ರಾಜ್ಯದ ವಿವಿಧ ಇಂಜಿನಿಯರಿಂಗ್ ಸಂಸ್ಥೆಗಳ ಮತ್ತು ಮ್ಯಾನೇಜ್ಮೆಂಟ್ ಸಂಸ್ಥೆಗಳ ವಿದ್ಯಾರ್ಥಿಗಳು ಮಂಡಿಸಿರುವ ಸ್ಟೂಡೆಂಟ್ ಪ್ರಾಜೆಕ್ಟ್ ಗಳು, ಎಕ್ಸಿಬಿಷನ್ ಹಾಗೂ ಪೋಸ್ಟರ್ ಪ್ರೆಸೆಂಟೇಶನ್ ಗಳ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಇಂದು ಈ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಹಾಗೂ ಪ್ರಶಸ್ತಿ ಪತ್ರಗಳ ವಿತರಣೆ ಅಂತಿಮ ಘಟ್ಟದ ಕಾರ್ಯಕ್ರಮ ಜರಗುತ್ತಿದ್ದು, ಈ ರಾಜ್ಯ ಮಟ್ಟದ ವಿಜ್ಞಾನ ಮತ್ತು ತಾಂತ್ರಿಕತೆಯ ಪ್ರದರ್ಶನವು ಮಹತ್ತರ ಮತ್ತು ಇಂದಿನ ಅವಶ್ಯಕತೆಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಲಿದೆ ಎಂದು ನಂಬಿದ್ದೇನೆ. ಈ ಕಾರ್ಯಕ್ರಮಕ್ಕೆ ಅಸ್ಸಾಂ, ಕೇರಳ ರಾಜ್ಯಗಳ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಗಳಿಂದ ವಿಜಯ್ ಕೃಷ್ಣ ಮಲ್ಲೋತರ, ಇಬ್ರಾಹಿ ಇಬ್ರಾಹಿಂ ಬತ್ತಿಸ್ ಈ ಸಂದರ್ಭದಲ್ಲಿ ಸ್ವಾಗತಿಸಿ ಅಭಿನಂದಿಸಿದರು.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿಜ್ಞಾನ ಮತ್ತು ತಾಂತ್ರಿಕತೆಯ ಅಭಿವೃದ್ಧಿ ರಾಜ್ಯದ ಎಲ್ಲಾ ರಂಗಗಳಲ್ಲಿನ ಮುಂದುವರಿಕೆಗೆ ಅವರ ದೂರ ದೃಷ್ಟಿ ಕಾರಣ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯವರೇ ಆದ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಆಕಾಂಕ್ಷೆ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಲ್ಲಿ ವಿಜ್ಞಾನ ಮತ್ತು ತಾಂತ್ರಿಕತೆಯ ಕುರಿತು ಆಸಕ್ತಿ ಬೆಳೆಸುವುದಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು 2010 – 11ರಿಂದ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗೆ ಕೈಜೋಡಿಸಿದ್ದು , ಒಡಂಬಡಿಕೆ ಮೂಲಕ ಕೆ ಎಸ್ ಸಿ ಎಸ್ ಟಿ ಬಯೋಫಿಯಲ್ ಸೆಲ್ ನಿರಂತರವಾಗಿ ಮಂಡಳಿಯ ಸಹಯೋಗದಲ್ಲಿರುವುದು ಹೆಮ್ಮೆಯ ಮತ್ತು ವಿಜ್ಞಾನ ಮತ್ತು ತಾಂತ್ರಿಕತೆಗೆ ಆದ್ಯತೆ ನೀಡಿರುವುದು ಪ್ರಮುಖ ಅಂಶವಾಗಿದೆ. ಮಂಡಳಿ ಇದುವರೆಗೆ ಕೆ ಎಸ್ ಸಿ ಎಸ್ ಟಿ ಗೆ 1.50 ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ವಿಜ್ಞಾನ ಮತ್ತು ತಾಂತ್ರಿಕ ಪ್ರಾಜೆಕ್ಟ್ ಗಳ ಅನುಷ್ಠಾನಕ್ಕಾಗಿ ಒದಗಿಸಲಿದೆ ಎಂದು ಈ ಸಂದರ್ಭದಲ್ಲಿ ಹೇಳಬಯಸಿದ್ದೇನೆ. ಎಸ್ ಸಿ ಎಸ್ ಟಿ ಹಾಗೂ ಕೆ ಎಸ್ ಬಿ ಡಿ ಬಿ ಒಂದೇ ಫ್ಯಾಮಿಲಿಯಂತೆ ಜೈವಿಕ ಇಂಧನ ಕಾರ್ಯಕ್ಷೇತ್ರಗಳ ಅನುಷ್ಠಾನ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುತ್ತಾ ಕ್ರಿಯಾಶೀಲವಾಗಿ ಮುಂದುವರಿಯುತ್ತಿರುವುದನ್ನು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ನಾನು ಹೇಳಲೇಬೇಕಾದ ಹಾಗೂ ಅಭಿನಂದಿಸಬೇಕಾದ ವಿಷಯವಾಗಿದೆ.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ತಮಗೆಲ್ಲರಿಗೂ ತಿಳಿದಿರುವಂತೆ ರಾಜ್ಯದಲ್ಲಿ ಕ್ರಮಗಳ ಕುರಿತು ಅರಿವು, ಜಾಗೃತಿ ಮೂಡಿಸಲು ಕಾರ್ಯಾಗಾರಗಳು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಮ್ಮೇಳನಗಳು, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಗಳನ್ನು ನೀಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿ ಆರ್ ಐ ಡಿ ಸಿ ಕೇಂದ್ರಗಳು, ನಾಲ್ಕು ಕಂದಾಯ ವಿಭಾಗಗಳಲ್ಲಿ ಜೈವಿಕ ಇಂಧನ ಉದ್ಯಾನಗಳು, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಜೈವಿಕ ಇಂಧನ ಸಂಶೋಧನೆ ಮತ್ತು ಗುಣಮಟ್ಟ ಖಾತ್ರಿ ಪ್ರಯೋಗ ಶಾಲೆ, 12 ಜಿಲ್ಲೆಗಳಲ್ಲಿ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಸಹಯೋಗ ಮತ್ತು ಅತಿ ಮುಖ್ಯವಾಗಿ ವಿಜ್ಞಾನ ಮತ್ತು ತಾಂತ್ರಿಕತೆಯ ವಿಭಾಗದಲ್ಲಿ ಕೆ ಎಸ್ ಸಿ ಎಸ್ ಟಿ ಯೊಂದಿಗೆ ಒಡಂಬಡಿಕೆ ತಮಗೆಲ್ಲರಿಗೂ ತಿಳಿದ ವಿಷಯವಾಗಿದೆ. ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು 2010 – 11ರಿಂದ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಂಶೋಧನೆ ಕೈಗೊಂಡು, ಸಂಶೋಧನೆಗಳ ಪ್ರಬಂಧಗಳನ್ನು ಮಂಡಿಸಲು, ಎಕ್ಸಿಬಿಷನ್ ಹಾಗೂ ಪೋಸ್ಟರ್ ಗಳನ್ನು ಪ್ರದರ್ಶಿಸಲು ಸಹಕಾರ ನೀಡುತ್ತಾ ಬಂದಿದೆ.

ಇದುವರೆಗೂ ಸುಮಾರು 500ಕ್ಕೂ ಹೆಚ್ಚಿನ ವಿಜ್ಞಾನ ಮತ್ತು ತಾಂತ್ರಿಕತೆಯ ಪ್ರಬಂಧ ಗಳು ಮಂಡನೆಯಾಗಿದ್ದು, ನೂರಕ್ಕೂ ಹೆಚ್ಚಿನ ಎಕ್ಸಿಬಿಷನ್ ಮತ್ತು ಪೋಸ್ಟರ್ ಪ್ರೆಸೆಂಟೇಶನ್ಗಳಾಗಿರಬಹುದು ವಿದ್ಯಾರ್ಥಿಗಳು ಜೈವಿಕ ಇಂಧನ ಕ್ಷೇತ್ರದಲ್ಲಿ ತೋರಿಸಿರುವ ಅಪಾರ ಆಸಕ್ತಿ ಮತ್ತು ಜಾಗತಿಕ ಮಟ್ಟದಲ್ಲಿ ಇಂಧನ ಕ್ಷೇತ್ರದಲ್ಲಿ ಜೈವಿಕ ಇಂಧನಗಳು ತನ್ನದೇ ಆದ ಪ್ರಭಾವ ಬೀರಲು ಕೊಡುಗೆ ನೀಡಿವೆ ಎಂದರೆ ತಪ್ಪಾಗಲಾರದು.

ಜವಾಹರ್ ಲಾಲ್ ನೆಹರು ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಜೈವಿಕ ಇಂಧನ ಮಾಹಿತಿ ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆ ಕೇಂದ್ರವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ಕಂದಾಯ ವಿಭಾಗದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಇರುವಕ್ಕಿಯಲ್ಲಿ 50 ಎಕರೆ ಪ್ರದೇಶದಲ್ಲಿ ಜೈವಿಕ ಇಂಧನ ಉದ್ಯಾನವನ ಸ್ಥಾಪಿಸಲಾಗಿದೆ. ಶಿವಮೊಗ್ಗದಲ್ಲಿ ಐ ಡಿ ಸಿ ಕೇಂದ್ರ ಇನ್ನೊಂದು ಜೈವಿಕ ಇಂಧನ ಉದ್ಯಾನ ಗಳು ಕಾರ್ಯನಿರ್ವಹಿಸುತ್ತಿದ್ದು ಜೈವಿಕ ಇಂಧನ ಕ್ಷೇತ್ರದ ಸಮಗ್ರ ಪರಿಚಯ ಮಾಡಿಕೊಡುವಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಲು ಸಂತೋಷಪಡುತ್ತೇನೆ.
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಕಳೆದ ಒಂದು ಸಾಲಿನಲ್ಲಿ ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು ಮುಂದಿನ ವರ್ಷದಲ್ಲಿ ಈ ಎಲ್ಲಾ ಕಾರ್ಯ ಯೋಜನೆಗಳು ಅನುಷ್ಠಾನಗೊಂಡು ಕರ್ನಾಟಕ ರಾಜ್ಯವು ಇಡೀ ರಾಷ್ಟ್ರದಲ್ಲಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಜೈವಿಕ ಇಂಧನ ಕ್ಷೇತ್ರದ ಮಾದರಿಯಾಗುವ ನಿಟ್ಟಿನಲ್ಲಿ ಕಾರ್ಯನಿರತನಾಗಿದ್ದು ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ, ತಾಂತ್ರಿಕ ಸಂಸ್ಥೆಗಳ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳ, ವಿಜ್ಞಾನ ಕೇಂದ್ರಗಳ ಸಹಕಾರವು ಈ ಜೈವಿಕ ಇಂಧನ ಮಿಷನ್ ನಲ್ಲಿ ಕೈಜೋಡಿಸಬೇಕೆಂದು ತಮ್ಮೆಲ್ಲರನ್ನು ಆಹ್ವಾನಿಸುತ್ತಿದ್ದೇನೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಹಲವಾರು ನೂತನ ಕಾರ್ಯಯೋಜನೆಗಳ ಮೂಲಕ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ಮೂಲಸೌಕರ್ಯಗಳ ಸೃಜನೆ, ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಹಯೋಗ, ವಿಷಯ ಪರಿಣಿತರು, ತಾಂತ್ರಿಕ ತಜ್ಞರು, ಸಲಹೆಗಾರರು, ವಿವಿಧ ವಿಶ್ವವಿದ್ಯಾಲಯಗಳು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂರ್ಕಿಣಗಳು, ದೇಶ, ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಗಳೊಂದಿಗೆ ನಡೆಸಿರುವ  ಚರ್ಚೆಗಳ ಕುರಿತು ವಿವರಣೆ ನೀಡಿದರು. ಪ್ರಸ್ತಾಪಿತ ನೂತನ ಜೈವಿಕ ಇಂಧನ ನೀತಿಯ ಮುಖ್ಯ ಉದ್ದೇಶಗಳು, ಗುರಿಗಳು ಹಾಗೂ ಮುಂದಿನ 05 ವರ್ಷಗಳಲ್ಲಿ ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆ ಕುರಿತು ಪರಿಚಯಿಸಿ,  ಉದ್ದೇಶಿತ ಜೈವಿಕ ಇಂಧನ ನೀತಿಯು ಪ್ರಮುಖವಾಗಿ ಕೈಗಾರಿಕರಣಕ್ಕೆ ಒತ್ತು ನೀಡುವುದು ಹಾಗೂ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿವಿಧ ಜೈವಿಕ ಇಂಧನ ಉತ್ಪಾದನಾ ಘಟಕಗಳ ಆರಂಭಕ್ಕೆ ಅವಕಾಶಗಳಿರುವುದನ್ನು ಇರುವುದನ್ನು ಪ್ರತಿಪಾಧಿಸಿದರು. ಪ್ರಸ್ತುತ ಕೇಂದ್ರ ಸರ್ಕಾರದಿಂದ ಪ್ರಾಯೋಜಿತಗೊಂಡಿರುವ SATAT, ಗೋಬರ್ದನ್‌ ಯೋಜನೆಗಳಲ್ಲಿ ಉತ್ಪಾದನೆಯಾಗುವ ಜೈವಿಕ ಇಂಧನ ಉತ್ಪನ್ನಗಳ ಕೊಂಡುಕೊಳ್ಳುವ ಒಡಂಬಡಿಕೆ ಸರ್ಕಾರ ಬದ್ದವಾಗಿದೆ.
ಉದ್ದೇಶಿತ ನೂತನ ಜೈವಿಕ ಇಂಧನ ನೀತಿಯ ಕುರಿತು ಪ್ರಸ್ತಾಪಿಸಿ ರಾಜ್ಯದಲ್ಲಿ ಮುಂದಿನ 05 ವರ್ಷಗಳಲ್ಲಿ 01 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷಿಸಲಾಗಿದ್ದು, 03 ಲಕ್ಷಕ್ಕೂ ಹೆಚ್ಚಿನ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ಸೃಜನೆ, ರೈತರ ಕುಟುಂಬಗಳ ಆದಾಯದ ಹೆಚ್ಚಳ, ಯುವ ಉದ್ದಿಮೆದಾರರಿಗೆ ಪ್ರೋತ್ಸಾಹ ದೊರೆಯಲಿದ್ದು, ಮುಂದಿನ ಐದು ವರ್ಷಗಳು ಕರ್ನಾಟಕ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಲಿದ್ದು, ನೂತನ ಜೈವಿಕ ಇಂಧನ ನೀತಿಯಲ್ಲಿ ಪ್ರಸ್ತಾಪಿಸಿದ ಪ್ರಸ್ತಾಪಿತ ಉದ್ದೇಶಗಳು ಭವಿಷ್ಯ ಭಾರತದ ನಿರ್ಮಾಣದಲ್ಲಿ ತನ್ನದೇ ಆದ ಕೊಡುಗೆಗಳನ್ನು ನೀಡಲಿವೆ. ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಕೊಡುಗೆಯು ರಾಷ್ಟ್ರವನ್ನು ವಿಶ್ವದಲ್ಲಿ ಮೂರನೇ ಆರ್ಥಿಕ ಸ್ಥಾನವನ್ನು ತಲುಪಲು ತನ್ನದೇ ಆದ ಕೊಡುಗೆಯನ್ನು ನೀಡಲಿದೆ ಎಂದು ಆಶಿಸಿದರು.

ಇಂದಿನ ಈ ಸಮಾರೋಪ ಸಮಾರಂಭದಲ್ಲಿ ಎಸ್.ಎನ್. ನಾಗರಾಜ, ಪ್ರೊ. ಅಶೋಕ್ ಎಂ ರಾಯಚೂರ್, ಕಾರ್ಯದರ್ಶಿಗಳು, ಕೆ ಎಸ್ ಸಿ ಎಸ್ ಟಿ, ಡಾ. ವೈ ವಿಜಯಕುಮಾರ್, ಪ್ರಿನ್ಸಿಪಾಲ್ ಜೆಎನ್ಸ್ ಸಿಇ, ಕೆ.ಎಸ್ .ಬಿ.ಡಿ.ಯ ಯೋಜನಾ ಸಲಹೆಗಾರರಾದ ಡಾ.ದಯಾನಂದ ಜಿ.ಎನ್ . ಕೆ ಎಸ್ ಸಿ ಎಸ್ ಟಿ ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಡಾ. ಕೆ ಎನ್ ವೆಂಕಟೇಶ್, ಜೈರಾಮ್, ಡಾ. ಚೇತನ್ ಎಸ್ ಜಿ, ಡಾ. ರವಿ ಕುಮಾರ್, ಕೋರ್ಡಿನೇಟರ್ ಬಿ ಆರ್ ಐ ಡಿ ಸಿ, ಜೆ ಎಂ ಸಿ ಇ ಬೋಧಕ ಹಾಗೂ ಎಲ್ಲಾ ಸಿಬ್ಬಂದಿಗಳು, ರಾಜ್ಯದ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳಿಂದ ಆಗಮಿಸಿದ್ದ ಪ್ರಾಚಾರ್ಯರು, ವಿದ್ಯಾರ್ಥಿಗಳು, ಪ್ರಾಜೆಕ್ಟ್ ಮೌಲ್ಯಮಾಪಕರು, ಮಾರ್ಗದರ್ಶಕರು ಭಾಗವಹಿಸಿದ್ದರು.