Sunday, February 22, 2026
Sunday, February 22, 2026
Home Blog Page 222

Shivamogga City Corporation ಬಾಕಿಯಿರುವ ನೀರಿನ ಕಂದಾಯ ಪಾವ್ತಿಸಲು ನಗರ ಪಾಲಿಕೆ ಪ್ರಕಟಣೆ

0

Shivamogga City Corporation ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಬಳಕೆದಾರರು/ ಮಾಲೀಕರು ನೀರಿನ ಕಂದಾಯ ಪಾವತಿ ಮಾಡಲು ತಪ್ಪಿದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಆದುದರಿಂದ ನೀರಿನ ಸಂಪರ್ಕಗಳನ್ನು ಕಡಿತಗೊಳಿಸುವ ಅಹಿತಕರ ಘಟನೆಗೆ ಬಳಕೆದಾರರು/ ಮಾಲೀಕರು ಅವಕಾಶ ನೀಡದೇ 7 ದಿನದೊಳಗಾಗಿ ನೀರಿನ ಕಂದಾಯವನ್ನು ಪಾವತಿಸಲು ತಿಳಿಸಿದ್ದಾರೆ.

Indian Dental Association ವಿದ್ಯಾರ್ಥಿಗಳು ಬಾಯಿ ಮತ್ತು ದಂತಾರೋಗ್ಯದ ಬಗ್ಗೆ ಗಮನವಹಿಸಬೇಕು – ‘ಎಸಿ ‘ಸತ್ಯನಾರಾಯಣ

0

Indian Dental Association ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಚಿಕ್ಕ ವಯಸ್ಸಿನಿಂದೆಲೇ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ ಬಾಯಿ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿಗಳಾದ ಸತ್ಯನಾರಾಯಣ ತಿಳಿಸಿದರು.

ಶಿವಮೊಗ್ಗ ನಗರದ ಭಾರತೀಯ ದಂತ ವೈದ್ಯ ಸಂಘದಿಂದ ಕೆ.ಆರ್.ಪುರಂನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ಹಾಗೂ ದಂತ ಆರೋಗ್ಯದ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.

ಶಿವಮೊಗ್ಗ ತಹಸೀಲ್ದಾರ್ ರಾಜೀವ್ ಮಾತನಾಡಿ, ದಂತ ಆರೋಗ್ಯ ಶಿಬಿರದ ಪ್ರಯೋಜನವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ದೊರೆಯುವಂತೆ ಆಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಿವಮೊಗ್ಗ ತಾಲ್ಲೂಕಿನ ಆಯ್ದ 25 ಶಾಲೆಗಳ ವಿದ್ಯಾರ್ಥಿಗಳಿಗೆ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೇಸ್ಟ್ ಹಾಗೂ ಟೂತ್ ಬ್ರಷ್ ವಿತರಣೆ ಮಾಡಲಾಯಿತು. ಇದೇ ಸಮಯದಲ್ಲಿ ಎಲ್.ಕೆ.ಜಿ. ಯಿಂದ 7 ನೇ ತರಗತಿ ಮಕ್ಕಳಿಗೆ ವೈಸ್ಟ್ ಕೋಟ್ (ಜಾಕೇಟ್) ವಿತರಿಸಲಾಯಿತು.

Indian Dental Association ಕಾರ್ಯಕ್ರಮದಲ್ಲಿ ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ಗೌತಮ್,
ಡಾ. ಮೇಜರ್ ವಿಕ್ರಂ, ಡಾ. ಮಂಜುನಾಥಸ್ವಾಮಿ ಕೊಪ್ಪದ್, ಡಾ. ಸತೀಶ್ ಚಂದ್ರ, ಮುಖ್ಯ ಶಿಕ್ಷರಾದ ದಾನೇಶ್ವರಿ ಹಾಗೂ ಇತರರು ಹಾಜರಿದ್ದರು.

Department of Information and Public Relations ಚಿಕ್ಕ ವಯಸ್ಸಿನಿಂದಲೇ ದುಶ್ಚಟಗಳಿಂದ ದೂರವಿರಬೇಕು – ಸಿ.ಎಸ್.ಚಂದ್ರಭೂಪಾಲ್

0

Department of Information and Public Relations ಚಿಕ್ಕ ವಯಸ್ಸಿನಿಂದಲೇ ದುಶ್ಚಟಗಳಿಂದ ದೂರವಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎನ್‌ಎಸ್‌ಎಸ್ ಘಟಕ 1, 2, 3, ಬಾಪೂಜಿನಗರ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ.ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆ.01 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವ್ಯಸನಮುಕ್ತ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ಮಹಾಂತ ಶಿವಯೋಗಿಗಳು ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಳ್ಳುತ್ತಾ ವ್ಯಸನಗಳಿಂದ ಮುಕ್ತರಾಗಿರಬೇಕೆಂದು ಜಾಗೃತಿ ಮೂಡಿಸುತ್ತಿದ್ದರು. ಯುವಜನತೆ ಸೇರಿದಂತೆ ಎಲ್ಲರೂ ಗುಟ್ಕಾ, ಸಿಗರೇಟ್, ತಂಬಾಕು, ಮದ್ಯ ಮುಂತಾದ ಮಾದಕ ವ್ಯಸನಗಳಿಂದ ದೂರ ಇರಬೇಕು. ಆರೋಗ್ಯವೇ ಎಲ್ಲಕ್ಕೂ ಮೂಲ. ಆರೋಗ್ಯ ಬಹಳ ಮುಖ್ಯವಾಗಿದ್ದು, ದೈಹಿಕ, ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ದುಶ್ಚಟಗಳಿಂದ ದೂರವಿದ್ದಾಗ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ, ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದ ಅವರು ಸರ್ಕಾರಿ ಶಾಲಾ ಕಾಲೇಜುಗಳು ಮಾದರಿಯಾಗಿರಬೇಕು ಎಂದರು.

ಪಾಸಿಟಿವ್ ಮೈಂಡ್ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಡಾ.ಐಶ್ವರ್ಯಾ ವಿ.ಹೆಚ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಅರಿವೇ ಗುರು. ನಮ್ಮ ಅರಿವನ್ನು ನಾವು ಗುರುವಾಗಿ ಸ್ವೀಕರಿಸಿ ಉತ್ತಮ ಮಾರ್ಗದಲ್ಲಿ ನಡೆಯಬೇಕು. ವರದಿಯೊಂದರ ಪ್ರಕಾರ ಭಾರತದಲ್ಲಿ 16 ಕೋಟಿ ಜನರು ಮದ್ಯಪಾನಕ್ಕೆ, 3.1 ಕೋಟಿ ಜನ ಗಾಂಜಾ, 5.7 ಕೋಟಿ ಜನ ಯಾವುದಾದರೊಂದು ವ್ಯಸನಕ್ಕೆ ತುತ್ತಾಗಿದ್ದಾರೆ. ಸಾಮಾನ್ಯವಾಗಿ 14 ರಿಂದ 15 ವಯಸ್ಸಿನಲ್ಲಿ ಈ ವ್ಯಸನ ಶುರುವಾಗುತ್ತದೆ. ಮೀಡಿಯಾ ಪ್ರಭಾವ, ಜಾಹಿರಾತುಗಳಿಂದ ಶೇ.60 ರಷ್ಟು ಮಾದಕ ವಸ್ತುಗಳ ಬಳಕೆ ಹೆಚ್ಚಿದೆ ಎಂದು ವರದಿಯೊಂದು ಹೇಳುತ್ತದೆ.
ಪಾರ್ಟಿ ಸಂಸ್ಕೃತಿ, ಕಾನೂನು ಬಾಹಿರ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಹೆಚ್ಚಾಗಿರುವುದು ಹೀಗೆ ಹಲವು ಕಾರಣಗಳಿಂದ ಈ ವ್ಯಸನ ಸುಲಭವಾಗಿದೆ. ಹದಿ ವಯಸ್ಸಿನ ಗುಂಪಿನವರು ಬೇಗ ವ್ಯಸನಗಳಿಗೆ ಬಲಿಯಾಗುತ್ತಾರೆ. ನಮ್ಮ ದೇಶ ಯೂತ್ ಅಡಿಕ್ಷನ್ ಸೆಂಟರ್ ಆಗುತ್ತಿದೆ. ಇದಕ್ಕೆ ಹದಿಹರೆಯದ ಕುತೂಹಲ, ಮೀಡಿಯಾ ಪ್ರಭಾವ, ಹೆದರಿಕೆ, ನೋವು, ಇತರೆ ಹಲವಾರು ಕಾರಣಗಳಿವೆ ಕೇವಲ 0.5 ರಷ್ಟು ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾದಕ ವಸ್ತುಗಳು ನಮ್ಮ ನಡವಳಿಕೆ, ಮೂಡು, ಯೋಚಿಸುವ ಕ್ರಮವನ್ನು ಬದಲಿಸುತ್ತದೆ. ತಲೆನೋವು, ನಿದ್ರೆ ಸಮಸ್ಯೆ, ತೊದಲು, ಗಂಟಲು, ಹೊಟ್ಟೆ, ಮೆದುಳು, ಹೃದಯಕ್ಕೆ ಹಾನಿ ಮಾಡುತ್ತವೆ, ಕ್ಯಾನ್ಸರ್ ಸೇರಿದಂತೆ ಅನೇಕ ರೀತಿಯ ಖಾಯಿಲೆಗಳೂ ಬರುತ್ತವೆ. ಮಾನಸಿಕ ಆರೋಗ್ಯ ಕೆಟ್ಟು ಕೋಪ, ಕುಟುಂಬದಿಂದ ದೂರವಿರುವುದು, ಅಪಾಯಕಾರಿ ನಡವಳಿಕೆ, ಸಮಾಜ ಘಾತುಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಈ ರೀತಿಯ ಸಮಸ್ಯೆಗಳು ಉದ್ಭವವಾಗುತ್ತವೆ. ಚಟಗಳು ನಮ್ಮ ಮೆದುಳಿನ ರಾಸಾಯನಿಕಗಳನ್ನು ಏರುಪೇರು ಮಾಡುತ್ತವೆ.
ಮದ್ಯ, ಗಾಂಜಾ, ಓಪಿಯಾಡ್ಸ್, ಕೊಕೇನ್, ವಿವಿಧ ಬಗೆಯ ಮಾದಕ ವಸ್ತುಗಳ ಬಳಕೆದಾರರು ಇದ್ದಾರೆ. ಮಾದಕ ವಸ್ತು ತೆಗೆದುಕೊಂಡು ಅಪಾಯಕಾರಿ ಚಟುವಟಿಕೆಯಲ್ಲಿ ತೊಡಗುವುದು, ಅಪರಾಧ ಚಟುವಟಿಕೆಯಲ್ಲಿ ತೊಡಗುವವರು ಇದ್ದಾರೆ.

Department of Information and Public Relations ಗೆಳೆಯರು ಸೇರಿದಂತೆ ಯಾರೇ ಮಾದಕ ವಸ್ತುಗಳನ್ನು ಬಳಸಲು ಮನವೊಲಿಸಿದರೆ ಬೇಡ ಎನ್ನಬೇಕು. ಮನಸ್ಸು ದುರ್ಬಲ ಆಗಬಾರದು. ಒಳ್ಳೆಯ ಗೆಳೆಯರನ್ನು ಮಾಡಿಕೊಳ್ಳಬೇಕು. ಒಂದು ವೇಳೆ ವ್ಯಸಕ್ಕೆ ತುತ್ತಾದಲ್ಲಿ ವ್ಯಸನವನ್ನು ತಕ್ಷಣಕ್ಕೆ ಬಿಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಬಿಡಬೇಕು. ವ್ಯಸನ ಮುಕ್ತರಾಗಲು ಚಿಕಿತ್ಸೆ, ಆಪ್ತ ಸಮಾಲೋಚನೆ ಲಭ್ಯವಿದ್ದು ಅದನ್ನು ಪಡೆಯಲು ಮುಂದೆ ಬರಬೇಕು ಎಂದು, ಪಾಸಿಟಿವ್ ಮೈಂಡ್ ಆಸ್ಪತ್ರೆ ಆಪ್ತ ಸಮಾಲೋಚಕರಾದ ಡಾ.ಐಶ್ವರ್ಯಾ ವಿ ಹೆಚ್ ಎಂದು ಹೇಳಿದ್ದಾರೆ.

ಮಾದಕ ವಸ್ತುಗಳು ಮಾತ್ರ ಕಿಕ್ ಕೊಡುವುದಿಲ್ಲ. ಯಶಸ್ಸು, ಸಾಧನೆಗಳು ಕೂಡ ಕೊಡುತ್ತವೆ. ಸರ್ಕಾರ, ಸಂಘ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಈ ನಿಟ್ಟಿನಲ್ಲಿ ಅರಿವು ಮೂಡಿಸುತ್ತಿದ್ದು, ವಿದ್ಯಾರ್ಥಿಗಳಾದ ನೀವು ಕೂಡ ಜಾಗೃತರಾಗಿ ತಮ್ಮ ಸುತ್ತಮುತ್ತ ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.
ಡಿಹೆಚ್‌ಓ ಡಾ.ನಟರಾಜ್ ಮಾತನಾಡಿ, ಯುವಜನತೆ ಮೊದ ಮೊದಲಿಗೆ ಫ್ಯಾಷನ್‌ಗಾಗಿ, ಅಥವಾ ಗೆಳೆಯರ ಒತ್ತಡಕ್ಕೆ ಮಣಿದು ಮಾದಕ ವಸ್ತುಗಳನ್ನು ತೆಗೆದುಕೊಳ್ಳಲು ಶುರು ಮಾಡುತ್ತಾರೆ. ಅದು ಬರ ಬರುತ್ತಾ ಚಟವಾಗಿ ಪರಿಣಮಿಸಿ, ದೈಹಿಕ, ಮಾನಸಿಕ, ಸಾಮಾಜಿಕ, ಕೌಟುಂಬಿಕ ಹೀಗೆ ಎಲ್ಲ ರೀತಿಯಲ್ಲಿ ದುಷ್ಪರಿಣಾಮ ಬೀರುತ್ತದೆ. ಖುಷಿಗಾಗಿ ಆರಂಭವಾದದ್ದು ವ್ಯಸನವಾಗಿ ಮಾರ್ಪಟ್ಟು ಆರೋಗ್ಯ ಹದಗೆಡುತ್ತಾ ಹೋಗಿ ಜೀವನವೇ ಹಾಳಾಗುತ್ತದೆ.
ಹದಿಹರೆಯದ ವೇಳೆ ಯುವಜನತೆ ದುಶ್ಚಟಗಳಿಗೆ ದಾಸರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ವಯಸ್ಸಿನ ಗುಂಪಿನವರು ಅತ್ಯಂತ ಜಾಗೃತೆಯಿಂದ ಇರಬೇಕು. ವ್ಯಸನಕ್ಕೊಳಗಾದ ವ್ಯಕ್ತಿ ಒಂದೇ ಬಾರಿ ಅದರಿಂದ ಹೊರ ಬರಲು ಸಾಧ್ಯವಾಗುವುದಿಲ್ಲ. ನಡುಕ, ಸಿಟ್ಟು, ಕೋಪ ಇತರೆ ಲಕ್ಷಣಗಳು ಹೆಚ್ಚಾಗಿರುತ್ತವೆ.

ವ್ಯಸನಮುಕ್ತವಾಗಲು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದ್ದು, ಚಿಕಿತ್ಸೆ ಪಡೆಯಲು ಮುಂದೆ ಬಂದು ಇದರಿಂದ ಹೊರಬರಬೇಕು. ಯುವಜನತೆ ದೇಶದ ಆಸ್ತಿಯಾಗಿದ್ದು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ವಾರ್ತಾಧಿಕಾರಿ ಆರ್.ಮಾರುತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ಜೀವನದಲ್ಲಿ ಏನೇ ಮಾಡಬೇಕು ಮತ್ತು ಸಾಧಿಸಬೇಕೆಂದರೂ ಆರೋಗ್ಯ ಬಹಳ ಮುಖ್ಯವಾಗಿದ್ದು ಯುವಜನತೆ ಸೇರಿದಂತೆ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಬಾಗಲಕೋಟೆ ಜಿಲ್ಲೆಯ ಡಾ.ಮಹಾಂತ ಶಿವಯೋಗಿಗಳು ಜನರ ಆರೋಗ್ಯದ ಹಿತದೃಷ್ಟಿಯಿಂದ ದುಶ್ಚಟಗಳನ್ನು ಬಿಡಿಸಲು ತಮ್ಮ ಜೋಳಿಗೆಯಲ್ಲಿ ದುಶ್ಚಟಗಳ ಭಿಕ್ಷೆ ಬೇಡಿ, ಯುವಜನತೆ, ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಅವರ ಸ್ಮರಣಾರ್ಥ ರಾಜ್ಯ ಸರ್ಕಾರ ಅವರ ಜನ್ಮ ದಿನವಾದ ಆ.1 ನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತಿದೆ. ದುಶ್ಚಟಗಳು ಸರ್ವಾಂಗೀಣ ಅಭಿವೃದ್ದಿಗೆ ಮಾರಕವಾಗಿದ್ದು, ಯುವಜನತೆ ಸೇರಿದಂತೆ ಎಲ್ಲರೂ ಯಾವುದೇ ದುಶ್ಚಟಗಳಿಂದ ದೂರ ಇರಬೇಕು ಎಂದು ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಜಿ.ಚನ್ನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾವಿ ಹಾಕಿದ, ಯಾವ ಪದವಿಯೂ ಇಲ್ಲದ ಡಾ.ಮಹಾಂತ ಶಿವಯೋಗಿಗಳು ಜನರನ್ನು ದುಶ್ಚಟಗಳಿಂದ ಮುಕ್ತ ಗೊಳಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದು ಅವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ.

ಸಾಮಾನ್ಯವಾಗಿ ಪಾಸಿಟಿವ್ ಮತ್ತು ನೆಗೆಟಿವ್ ಚಟಗಳಿರುತ್ತವೆ. ಆದರೆ ನಾವು ಉತ್ತಮ ಚಟಗಳನ್ನು ಹತ್ತಿಸಿಕೊಳ್ಳಬೇಕು. ಸಂಗೀತ, ಸಾಹಿತ್ಯ ,ಪ್ರವಾಸ, ಸಾಧನೆ ಇಂತಹ ವ್ಯಸನ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ವಿದ್ಯಾ, ಎಸ್‌ಸ್‌ಎಸ್ ಘಟಕ 1, 2 ಮತ್ತು 3 ರ ಸಂಯೋಜಕರಾದ ಸೋಮಶೇಖರ್, ಸುಧಾಕರ್, ಜಾನ್ಹವಿ, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Department of Kannada and Culture ವಿಶೇಷ ಘಟಕ/ಗಿರಿಜನ ಉಪಯೋಜನೆಗಳಡಿ ಪ.ಜಾ/ಪ.ಪಂಗಡದ ಕಲಾವಿದರು/ಸಂಸ್ಥೆಗಳಿಗೆ ಸರ್ಕಾರದಿಂದ ನೆರವು- ಹೆಚ್. ಉಮೇಶ್

0

Department of Kannada and Culture ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ/ಪಂಗಡದ ಕಲಾವಿದರು ಮತ್ತು ಸಂಸ್ಥೆಗಳಿಗೆ ಕಲೆ-ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಭದ್ರಾವತಿ ನಗರದ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಆಯೋಜಿಸಿದ್ದ ಮಹಿಳಾ ಡೊಳ್ಳು ಕುಣಿತ ಹಾಗೂ ಜನಪದ/ರಂಗಗೀತೆಗಳ ಕಲಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ವಾರದಲ್ಲಿ ಮೂರು ದಿನ, 6 ತಿಂಗಳ ಕಾಲ 25 ಜನ ಪರಿಶಿಷ್ಟ ಜಾತಿಯ ಕಲಾವಿದರಿಗೆ ಡೊಳ್ಳು ಕುಣಿತ ತರಬೇತಿ ನೀಡಲಾಗುತ್ತಿದೆ. ಗಂಡು ಕಲೆಯೆಂದೇ ಹೆಸರಾಗಿರುವ ಡೊಳ್ಳು ಕುಣಿತದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರು ಆಸಕ್ತಿ ತೋರಿ ಕಲಿಯುತ್ತಿರುವುದು ವಿಶೇಷವಾಗಿದೆ. ಹಾಗೂ 15 ಜನರಿಗೆ ಜಾನಪದ ಗೀತೆ ಮತ್ತು ರಂಗಗೀತೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
Department of Kannada and Culture ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಸ್ವಾಗತ ಭಾಷಣ ಮಾಡಿದರು.
ಡೊಳ್ಳು ಕಲೆಯ ಬಗ್ಗೆ ಹಿರಿಯ ಡೊಳ್ಳು ಕಲಾವಿದರಾದ ಹೆಗ್ಗೋಡಿನ ಪಣಿಯಮ್ಮ ಹಾಗೂ ಮಂಜು ರಂಗಾಯಣ ಇವರು ರಂಗಗೀತೆ/ ಜಾನಪದ ಗೀತೆಗಳ ಬಗ್ಗೆ ಮಾಹಿತಿಯನ್ನು ಮಾಹಿತಿ ನೀಡಿದರು. ನಿಲಯ ಪಾಲಕರಾದ ಶೀಲಾ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿಗಳು, ಪೋಷಕರು ಹಾಜರಿದ್ದರು.

Prime Minister Jeevan Jyoti Bhima Yojana ಎಲ್ಲರೂ ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಬೇಕು- ಜಿಪಂ.ಸಿಇಓ ಹೇಮಂತ್

0

Prime Minister Jeevan Jyoti Bhima Yojana ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕರೆ ನೀಡಿದರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸ್ಯಾಚುರೇಶನ್ ಕ್ಯಾಂಪನ್ನು ಕೊಂನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜುಲೈ 31ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ಉದ್ಘಾಟಿಸಿ ನಂತರ ಮಾತನಾಡಿದರು. ಜನರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಜಿಲ್ಲೆಯಲ್ಲಿ ಪಿ.ಎಂ.ಜೆ.ಜೆ.ಬಿ.ವೈ ಪಿ.ಎಂ.ಎಸ್ .ಬಿ.ವೈ ಅಟಲ್ ಪೆನ್ಷನ್ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವ ಉದ್ದೇಶದಿಂದ ಜುಲೈ 1 ರಿಂದ ಸೆಪ್ಟಂಬರ್ 30ರವರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮಾನ್ಯ ಜನರನ್ನು ಆರ್ಥಿಕ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಹಾಗೂ ಈ ಯೋಜನೆಗಳನ್ನು ತಲುಪುವಿಸುವ ಉದ್ದೇಶವಾಗಿದೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಇದು ಅಪಘಾತ ವಿಮಾ ಯೋಜನೆಯಾಗಿದ್ದು ಅಪಘಾತ ಉಂಟಾದಾಗ ಅಥವಾ ಅಂಗವಿಕಲವಾದರೆ ಈ ಹಣ ಪಡೆಯಬಹುದಾಗಿರುತ್ತದೆ. ಉಳಿತಾಯ ಖಾತೆ ಹೊಂದಿರುವ ಪ್ರತಿಯೊಬ್ಬ ನಾಗರಿಕನು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ 18 ವರ್ಷದಿಂದ 70 ವರ್ಷದ ನಾಗರಿಕರು ಪ್ರತಿ ವರ್ಷಕ್ಕೆ 20 ರೂ ಪಾವತಿಸಿದರೆ ಅಪಘಾತವಾದಾಗ ಎರಡು ಲಕ್ಷದಷ್ಟು ಹಣವನ್ನು ಪಡೆದುಕೊಳ್ಳಬಹುದಾಗಿದೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ 18 ರಿಂದ 50 ವರ್ಷದೊಳಗಿನ ಎಲ್ಲಾ ಉಳಿತಾಯ ಖಾತೆದಾರರು ಈ ಯೋಜನೆ ಅರ್ಹರಾಗಿದ್ದು ವಾರ್ಷಿಕ 436 ರೂಪಾಯಿ ಪ್ರೀಮಿಯಂ ಪಾವತಿಸಿದರೆ ಸಾವು ಸಂಭವಿಸಿದರೆ 2 ಲಕ್ಷ ರೂಪಾಯಿ ವಿಮಾ ಮೊತ್ತವನ್ನು ಪಡೆಯಬಹುದಾಗಿರುತ್ತದೆ. Prime Minister Jeevan Jyoti Bhima Yojana ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಹಾಗೂ ಅಟಲ್ ಪೆನ್ಷನ್ ಯೋಜನೆ ಇದರ ಉಪಯೋಗವನ್ನು ಪಡೆದುಕೊಳ್ಳಲು ಕೋರಿದರು. ನಂತರ ಮಾತನಾಡಿದ ಕೆನರಾ ಬ್ಯಾಂಕ್ ಡ್ಯೆಪುಟಿ ಜನರಲ್ ಮ್ಯಾನೇಜರ್ ದೇವರಾಜ್ ಅವರು ಜಿಲ್ಲೆಯಲ್ಲಿ 2024 25ರ ಆರ್ಥಿಕ ವರ್ಷದಲ್ಲಿ ಅಟಲ್ ಪೆನ್ಷನ್ ಯೋಜನೆ ಅಡಿಯಲ್ಲಿ .4,850, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 22611, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಅಡಿಯಲ್ಲಿ30196 ಜನ ಮಾತ್ರ ಅರ್ಹರಾಗಿದ್ದು ಈ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಬಹಳ ಕಡಿಮೆಯಾಗಿದ್ದು ಇದನ್ನು ಹಂತ ಹಂತವಾಗಿ ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೆ ತಿಳಿಸುವುದು ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಲೀಡ್ ಬ್ಯಾಂಕ್ ನ ಮ್ಯಾನೇಜರ್ ಹನುಮಂತಪ್ಪ ಅವರು ಸೈಬರ್ ಕ್ರೈಂ ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸ್ವಉದ್ಯೋಗ ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಇದರ ಪ್ರಯೋಜನವನ್ನು ಪಡೆಯುವ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯ ವಿಮೆ ಮೊತ್ತವನ್ನು ಪಾವತಿಸಲಾಯಿತು. ಕಾರ್ಯಕ್ರಮದಲ್ಲಿ ಡಿವಿಜನ್ ಮ್ಯಾನೇಜರ್ ವೀರರಾಘವನ್ ಶಿವಾನಂದ ಅಸುಂಡಿ ಫೈನಾನ್ಸಿಯಲ್ ಲಿಟ್ರೇಸಿ ಕೋಆರ್ಡಿನೇಟರ್ ಶಂಕ್ರಪ್ಪ ಬಿ ಆರ್ ಕೆನರಾ ಬ್ಯಾಂಕಿನ ಉದ್ಯೋಗಿಗಳು ಉಪಸ್ಥಿತರಿದ್ದರು

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

0

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

Shivamogga Sugama Sangeet Parishath ಶಿವಮೊಗ್ಗ ಜಿಲ್ಲೆ ಸುಗಮ ಸಂಗೀತವೇ ಅಲ್ಲದೇ ಚಿತ್ರರಂಗಕ್ಕೂ ಕೊಡುಗೆ ನೀಡಿದೆ – ಎನ್.ಗೋಪಿನಾಥ್

0

Shivamogga Sugama Sangeet Parishath ಸುಗಮ ಸಂಗೀತ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯ ಸಾಕಷ್ಟು ಕಲಾವಿದರು ವಿಶೇಷವಾದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಗೌರವಾಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ಕಲಾವಿದರನ್ನು ಬೀಳ್ಕೊಟ್ಟು ಮಾತನಾಡಿ, ಸುಗಮ ಸಂಗೀತ ಪರಿಷತ್ ರಾಷ್ಟ್ರ ಮಟ್ಟದ ಕಲಾವಿದರನ್ನು ಗೌರವಿಸುವುದರ ಮುಖಾಂತರ ಬೇರೆ ಬೇರೆ ಕಲಾವಿದರಿಗೆ ಸ್ಪೂರ್ತಿಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಸುಗಮ ಸಂಗೀತ ತಾಯಿ ಬೇರು. ಚಿತ್ರರಂಗಕ್ಕೂ ಸಹ ವಿಶೇಷವಾದ ಕೊಡುಗೆ ನೀಡಿದಂತಹ ಮಹನೀಯರು ಜಿಲ್ಲೆಯಲ್ಲಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಸುಗಮ ಸಂಗೀತ ಪರಿಷತ್ ಸಾಕಷ್ಟು ಕಾರ್ಯಗಳನ್ನು ಮಾಡುತ್ತಿದ್ದು, ಶಾಂತಾ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸುವುದರ ಮುಖಾಂತರ ತನ್ನದೇ ಆದ ಚಾಪು ಮೂಡಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಸುಗಮ ಸಂಗೀತ ಗೀತೋತ್ಸವದಲ್ಲಿ ನಮ್ಮ ಕಲಾವಿದರಿಗೆ ಹಾಡಲು ಅವಕಾಶ ಸಿಕ್ಕಿರುವುದು ತುಂಬಾ ಹೆಮ್ಮೆಯಾಗಿದೆ ಎಂದು ಹೇಳಿದರು.

Shivamogga Sugama Sangeet Parishath ಮೈಸೂರು ಕಲಾಮಂದಿರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನದಲ್ಲಿ ಭಾಗವಹಿಸಿ ಹಾಡುತ್ತಿರುವ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಸದಸ್ಯರು ಹಾಗೂ ಕಲಾವಿದರನ್ನು ಬೀಳ್ಕೊಡಲಾಯಿತು.
ಸಮ್ಮೇಳದಲ್ಲಿ ಭಾಗವಹಿಸುತ್ತಿರುವ ಕಲಾವಿದರಾದ ಆಕಾಶವಾಣಿ ದೂರದರ್ಶನ ಕಲಾವಿದರಾದ ಉಮಾ ದಿಲೀಪ್, ಜಯಶ್ರೀ ಶ್ರೀಧರ್, ರಮಾ ಸುಬ್ರಹ್ಮಣ್ಯ, ಧನಪಾಲ್ ಸಿಂಗ್, ಸುದೀ ಗೌಡ, ರೋಟರಿ ಜಿ.ವಿಜಯಕುಮಾರ್, ಶುಭ ಹರ್ಷ, ಬಿಂದು ವಿಜಯಕುಮಾರ್, ಶೋಭಾ ಸತೀಶ್, ಮುರಳಿ, ಸಾಕೇತ್, ಲಕ್ಷ್ಮೀ ಮಹೇಶ್ ಇದ್ದರು.

Rotary Club Shivamogga ಪ್ರಾಮಾಣಿಕತೆ, ತಾಳ್ಮೆ &ಸಹಾನುಭೂತಿ ಬೆಳೆಸಿಕೊಳ್ಳಲು ಶಾಲಾ ಶಿಕ್ಷಣದಿಂದ ಸಾಧ್ಯ- ಬಿ.ಬಸವರಾಜ್

0

Rotary Club Shivamogga ಶೈಕ್ಷಣಿಕವಾಗಿ ಮಾತ್ರವಲ್ಲದೆ ಪ್ರಾಮಾಣಿಕತೆ, ತಾಳ್ಮೆ ಮತ್ತು ಸಹಾನುಭೂತಿ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಶಾಲೆಯು ಸಹಕಾರಿಯಾಗಲಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯ ಎಂದು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ವಿನೋಬನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಟರಾಕ್ಟ್ ಕ್ಲಬ್ ಉದ್ಘಾಟಿಸಿ ಮಾತನಾಡಿ, ಜೀವನವು ರೂಪುಗೊಳ್ಳಲು ಪ್ರಾರಂಭಿಸುವ ಸ್ಥಳ ಎಂದರೆ ಶಾಲೆ. ಪ್ರತಿ ದಿನವೂ ವಿದ್ಯಾರ್ಥಿಗಳು ಹೊಸತನಗಳನ್ನು ಶಾಲೆಯಲ್ಲಿ ಕಲಿಯಬಹುದಾಗಿದೆ. ಶಾಲಾ ಜೀವನವು ಕೇವಲ ತರಗತಿ ಕೊಠಡಿಗಳು ಮತ್ತು ಪರೀಕ್ಷೆಗಳಿಗಿಂತ ಹೆಚ್ಚಿನದ್ದಾಗಿದೆ. ನಗು, ಸ್ನೇಹ, ಕಲಿಕೆ, ಶಿಸ್ತು ಮತ್ತು ಕೌಶಲ್ಯಗಳು ಬೆಳೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ನಂತರ ನೂತನವಾಗಿ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಶ್ರೇಯಸ್ ಮತ್ತು ಕಾರ್ಯದರ್ಶಿ ಜಯಶ್ರೀ ಅವರ ತಂಡಕ್ಕೆ ಶುಭ ಹಾರೈಸಿದರು.
ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ಶಾಲೆಯು ಎರಡನೇ ಮನೆ ಇದ್ದಂತೆ, ಶಾಲೆಯು ಶೈಕ್ಷಣಿಕ ಧ್ಯೇಯದ ಜತೆಗೆ ಉತ್ತಮ ನಾಗರಿಕನನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿವೆ. ಶಾಲೆಗಳಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

Rotary Club Shivamogga ಶಾಲೆಯ ಪ್ರಭಾರ ಮುಖ್ಯಶಿಕ್ಷಕ ರಮೇಶ್ ಮಾತನಾಡಿ, ರೋಟರಿ ಕ್ಲಬ್ ಸೆಂಟ್ರಲ್ ವತಿಯಿಂದ ಶಾಲೆಗೆ ಅಗತ್ಯ ನೆರವು ದೊರಕಿದೆ ಎಂದರು. ಇಂಟರಾಕ್ಟ್ ಚೇರ್ಮನ್ ಗೀತ ಜಗದೀಶ್, ಕಾರ್ಯದರ್ಶಿ ಜಯಶೀಲ ಶೆಟ್ಟಿ, ಆನಂದ್ ಎಸ್ ಜಿ, ಧರ್ಮೇಂದ್ರ ಸಿಂಗ್, ಈಶ್ವರ್ ಬಿವಿ, ಅನ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ್ ಮತ್ತು ಕಾರ್ಯದರ್ಶಿ ಮಥುರಾ ಧನಂಜಯ್, ಶುಭ ಚಿದಾನಂದ್ ಹಾಗೂ ಶಿಕ್ಷಕಿ ಶೋಭಾ ಹಿರೇಮಠ ಮತ್ತು ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Bhima Scheme ಅಟಲ್ ಪೆನ್ಷನ್, ಜೀವನ್ ಜ್ಯೋತಿ, ಸುರಕ್ಷಾ ಭೀಮಾ ಯೋಜನೆಗಳ ಬಗ್ಗೆ ನಾಗರೀಕರಿಗೆ ಹೆಚ್ಚು ಮಾಹಿತಿ ನೀಡಿ- ದೇವರಾಜ್

0

Bhima Scheme ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕರೆ ನೀಡಿದರು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸ್ಯಾಚುರೇಶನ್ ಕ್ಯಾಂಪನ್ನು ಕೊಂನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜುಲೈ 31ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ಉದ್ಘಾಟಿಸಿ ನಂತರ ಮಾತನಾಡಿದರು ಜನರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಜಿಲ್ಲೆಯಲ್ಲಿ ಪಿ.ಎಂ.ಜೆ.ಜೆ.ಬಿ.ವೈ ಪಿ.ಎಂ.ಎಸ್ .ಬಿ.ವೈ ಅಟಲ್ ಪೆನ್ಷನ್ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವ ಉದ್ದೇಶದಿಂದ ಜುಲೈ 1 ರಿಂದ ಸೆಪ್ಟಂಬರ್ 30ರವರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮಾನ್ಯ ಜನರನ್ನು ಆರ್ಥಿಕ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಹಾಗೂ ಈ ಯೋಜನೆಗಳನ್ನು ತಲುಪುವಿಸುವ ಉದ್ದೇಶವಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಇದು ಅಪಘಾತ ವಿಮಾ ಯೋಜನೆಯಾಗಿದ್ದು ಅಪಘಾತ ಉಂಟಾದಾಗ ಅಥವಾ ಅಂಗವಿಕಲವಾದರೆ ಈ ಹಣ ಪಡೆಯಬಹುದಾಗಿರುತ್ತದೆ. ಉಳಿತಾಯ ಖಾತೆ ಹೊಂದಿರುವ ಪ್ರತಿಯೊಬ್ಬ ನಾಗರಿಕನು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ 18 ವರ್ಷದಿಂದ 70 ವರ್ಷದ ನಾಗರಿಕರು ಪ್ರತಿ ವರ್ಷಕ್ಕೆ 20 ರೂ ಪಾವತಿಸಿದರೆ ಅಪಘಾತವಾದಾಗ ಎರಡು ಲಕ್ಷದಷ್ಟು ಹಣವನ್ನು ಪಡೆದುಕೊಳ್ಳಬಹುದಾಗಿದೆ. Bhima Scheme ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ 18 ರಿಂದ 50 ವರ್ಷದೊಳಗಿನ ಎಲ್ಲಾ ಉಳಿತಾಯ ಖಾತೆದಾರರು ಈ ಯೋಜನೆ ಅರ್ಹರಾಗಿದ್ದು ವಾರ್ಷಿಕ 436 ರೂಪಾಯಿ ಪ್ರೀಮಿಯಂ ಪಾವತಿಸಿದರೆ ಸಾವು ಸಂಭವಿಸಿದರೆ 2 ಲಕ್ಷ ರೂಪಾಯಿ ವಿಮಾ ಮೊತ್ತವನ್ನು ಪಡೆಯಬಹುದಾಗಿರುತ್ತದೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಹಾಗೂ ಅಟಲ್ ಪೆನ್ಷನ್ ಯೋಜನೆ ಇದರ ಉಪಯೋಗವನ್ನು ಪಡೆದುಕೊಳ್ಳಲು ಕೋರಿದರು. ನಂತರ ಮಾತನಾಡಿದ ಕೆನರಾ ಬ್ಯಾಂಕ್ ಡ್ಯೆಪುಟಿ ಜನರಲ್ ಮ್ಯಾನೇಜರ್ ದೇವರಾಜ್ ಅವರು ಜಿಲ್ಲೆಯಲ್ಲಿ 2024 25ರ ಆರ್ಥಿಕ ವರ್ಷದಲ್ಲಿ ಅಟಲ್ ಪೆನ್ಷನ್ ಯೋಜನೆ ಅಡಿಯಲ್ಲಿ .4,850, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 22611, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಅಡಿಯಲ್ಲಿ30196 ಜನ ಮಾತ್ರ ಅರ್ಹರಾಗಿದ್ದು ಈ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಬಹಳ ಕಡಿಮೆಯಾಗಿದ್ದು ಇದನ್ನು ಹಂತ ಹಂತವಾಗಿ ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೆ ತಿಳಿಸುವುದು ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಲೀಡ್ ಬ್ಯಾಂಕ್ ನ ಮ್ಯಾನೇಜರ್ ಹನುಮಂತಪ್ಪ ಅವರು ಸೈಬರ್ ಕ್ರೈಂ ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು ಇದೇ ಸಂದರ್ಭದಲ್ಲಿ ಸ್ವಉದ್ಯೋಗ ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಇದರ ಪ್ರಯೋಜನವನ್ನು ಪಡೆಯುವ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯ ವಿಮೆ ಮೊತ್ತವನ್ನು ಪಾವತಿಸಲಾಯಿತು ಕಾರ್ಯಕ್ರಮದಲ್ಲಿ ಡಿವಿಜನ್ ಮ್ಯಾನೇಜರ್ ವೀರರಾಘವನ್ ಶಿವಾನಂದ ಅಸುಂಡಿ ಫೈನಾನ್ಸಿಯಲ್ ಲಿಟ್ರೇಸಿ ಕೋಆರ್ಡಿನೇಟರ್ ಶಂಕ್ರಪ್ಪ ಬಿ ಆರ್ ಕೆನರಾ ಬ್ಯಾಂಕಿನ ಉದ್ಯೋಗಿಗಳು ಉಪಸ್ಥಿತರಿದ್ದರು.

Karnataka Arya Vaishya Community Development Corporation ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯವೈಶ್ಯ ನಿಗಮದಿಂದ ಅರ್ಜಿ ಆಹ್ವಾನ

0

Karnataka Arya Vaishya Community Development Corporation ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್‌ಸೈಟ್ www.kacdc.karnataka.gov.in ರಲ್ಲಿ ದಿ: 31/10/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 08182-229634 ನ್ನು ಅಥವಾ ಹಾಗೂ ಕ್ಯೂಆರ್ ಕೋಡ್ ಬಳಸಿ ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.