Sunday, February 22, 2026
Sunday, February 22, 2026
Home Blog Page 224

Bapuji Institute of Hi-Tech Education ಜಾಗತಿಕ ಸಾಧನೆ ಆಧುನಿಕ ತಂತ್ರಜ್ಞಾನಗಳು ಪೂರಕ – ಡಾ.ಎಚ್.ಬಿ.ಮಂಜುನಾಥ್

0

Bapuji Institute of Hi-Tech Education ಆಧುನಿಕ ತಂತ್ರಜ್ಞಾನದ ಸಾಧನ ಸವಲತ್ತುಗಳು ಜಾಗತಿಕ ಮಟ್ಟದ ಸಾಧನೆಗಳನ್ನು ಮಾಡಲು ಪೂರಕವಾಗಿದ್ದು ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳವ ಗುರಿ ಹೊಂದಬೇಕು ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಕರೆ ಕೊಟ್ಟರು.

ಅವರು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ನೂತನ ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ‘ಗುರಿ ನಿಶ್ಚಯ ಹಾಗೂ ಯಶಸ್ಸು’ ಎಂಬ ವಿಷಯವಾಗಿ ಮಾತನಾಡುತ್ತಾ ಪಠ್ಯ ವಿಷಯಗಳೊಂದಿಗೆ ಸಮಕಾಲೀನ ವಸ್ತು ಸ್ಥಿತಿಯ ಅರಿವು ಯೋಜನೆಗಳ ರೂಪಿಸುವಿಕೆಗೆ ಅತ್ಯವಶ್ಯ ವಾಗಿದ್ದು ಇದನ್ನು ಪಡೆದುಕೊಳ್ಳಲು ಆಧುನಿಕ ತಂತ್ರಜ್ಞಾನದ ಸಂಪರ್ಕ ಸಾಧನಗಳು ಅನುಕೂಲಕರವಾಗಿವೆ, ಉದ್ಯಮಶೀಲತೆಯ ಕನಸನ್ನು ವಿದ್ಯಾರ್ಥಿ ದೆಸೆಯಿಂದಲೇ ಕಾಣುತ್ತಾ ಓದಿನೊಂದಿಗೆ ಅದರ ಸಾಕಾರಕ್ಕೂ ಯೋಚನೆ ಮತ್ತು ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದರು.
Bapuji Institute of Hi-Tech Education ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ನೂತನ ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥರನ್ನು ಉಪಪ್ರಾಧ್ಯಾಪಕ ಬಿ ಬಿ ಮಂಜುನಾಥ ಸನ್ಮಾನಿಸಿ ಗೌರವಿಸಿದರು.

Guarantee Scheme ಜಿಲ್ಲೆಯಲ್ಲಿ 197520 ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದಾರೆ- ಎಚ್.ಎಂ.ಮಧು

0

Guarantee Scheme ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಗೃಹಲಕ್ಮಿ ಯೋಜನೆಯಿಂದ ಆರ್ಥಿಕ ಚಟುವಟಿಕೆ ಕೈಗೊಂಡ ಕನಿಷ್ಠ 25 ಮಹಿಳಾ ಫಲಾನುಭವಿಗಳ ಯಶೋಗಾಥೆಯ ವಿಡಿಯೋಗಳನ್ನು ಚಿತ್ರೀಕರಣ ಮಾಡಿ ನೀಡುವಂತೆ ತಾಲ್ಲೂಕು ಸದಸ್ಯರಿಗೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಮಧು ಹೆಚ್. ಎಂ. ತಿಳಿಸಿದರು.

ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.

ಗೃಹಲಕ್ಮಿ ಯೋಜನೆಯು ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು ಶಿವಮೊಗ್ಗ ತಾಲ್ಲೂಕಿನಲ್ಲಿ ಒಟ್ಟು 107520 ಜನ ಮಹಿಳೆಯರು ನೋಂದಣಿಯಾಗಿದ್ದು, 2044 ಐಟಿ/ಜಿಎಸ್‌ಟಿ ಫಲಾನುಭವಿಗಳು ಇದ್ದಾರೆ. ಮರಣ ಹೊಂದಿರುವ ಕುರಿತು 298 ಅರ್ಜಿ ಸ್ವೀಕೃತವಾಗಿದ್ದು ಪ್ರಸ್ತುತ 90 ಫಲಾನುಭವಿಗಳ ಎನ್‌ಪಿಸಿಐ ಬಾಕಿ ಇದೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜುಲೈ ತಿಂಗಳಲ್ಲಿ ಒಟ್ಟು 10077.35 ಕೋಟಿ ಹಣ ಬಿಡುಗಡೆಯಾಗಿರುತ್ತದೆ. ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಒಟ್ಟು 220168 ಗ್ರಾಹಕರಿದ್ದು 2024-25 ನೇ ಸಾಲಿನಲ್ಲಿ 107812094 ಕೋಟಿ ಹಣ ಸಬ್ಸಿಡಿ ನೀಡಲಾಗಿದೆ ಹಾಗೂ 2025-26 ನೇ ಸಾಲಿನಲ್ಲಿ 222253 ಗ್ರಾಹಕರಿದ್ದು 102553733 ಕೋಟಿ ಸಬ್ಸಿಡಿ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಕೆಲವು ಮಹಿಳೆಯರಿಗೆ ಗೃಹಲಕ್ಮಿ ಹಣ ಜಮೆಯಾಗದಿರುವ ಕುರಿತು ಪರಿಶೀಲನೆ ಮಾಡಲಾಗಿ, ಎನ್‌ಪಿಸಿಐ ದೋಷದಿಂದ ಗೃಹಲಕ್ಮಿ ಹಣ ಜಮೆಯಾಗುತ್ತಿಲ್ಲ ಮತ್ತು ಕೆಲವು ಬ್ಯಾಂಕ್ ಖಾತೆಗಳಿಗೆ ಮೊಬೈಲ್ ನಂಬರ್ ನೋಂದಣಿಯಾಗದೆ ಓಟಿಪಿ ಬಾರದೇ ಇರುವ ಕಾರಣ ಗೃಹಲಕ್ಮಿ ಯೋಜನೆಯ ಹಣವು ಜಮೆಯಾಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾತೆ ತೆರೆಯುವ ಮೂಲಕವೂ ಸಮಸ್ಯೆಯನ್ನು ಪರಿಹರಿಸಬಹುದು ಎಂದ ಅವರು ಐಜಿಎಸ್‌ಟಿ ಪಾವತಿ ಎಂದು ತೋರಿಸುತ್ತಿರುವ ಫಲಾನುಭುವಿಗಳ ಸಮಸ್ಯೆಯನ್ನು ಸಹ ಪರಿಶಿಲಿಸುವಂತೆ ತಿಳಿಸಿದರು.

Guarantee Scheme ಶಕ್ತಿ ಯೋಜನೆಯ ಮೂಲಕ ತಾಲ್ಲೂಕಿನಲ್ಲಿ ಶೇ.61.5 ರಷ್ಟು ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು ಇದರಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹೆಚ್ಚು ಸಬಲರಾಗುತ್ತಿದ್ದಾರೆ. ಮತ್ತು ಇದರಿಂದ ಸಾರಿಗೆ ಇಲಾಖೆಗೆ ಕೂಡಾ ಹೆಚ್ಚು ಆದಾಯ ಬರುತ್ತಿದೆ ಎಂದರು.

ಜಿಲ್ಲಾ ಉದ್ಯೋಗಾಧಿಕಾರಿಗಳಾದ ಖಲಂದರ್ ಖಾನ್ ಮಾತಾನಾಡಿ, ಮೇ ತಿಂಗಳ ತನಕ ಶಿವಮೊಗ್ಗ ತಾಲ್ಲೂಕಿನಲ್ಲಿ ಯುವನಿಧಿ ಯೋಜನೆಯಡಿ ರೂ.58,81,500 ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು ಈ ವರ್ಷವೂ ಅರ್ಹ ವಿದ್ಯಾರ್ಥಿಗಳು ನೋಂದಣಿಯನ್ನು ಮಾಡುವಂತೆ ತಿಳಿಸಿದರು.

ಈ ಯೋಜನೆಯಡಿ ಎರಡು ವರ್ಷಗಳ ಕಾಲ ಫಲಾನುಭವಿಗಳಾಗಬಹುದಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸೇವಾಸಿಂಧು ಪೋರ್ಟಲ್ ಮೂಲಕ ಸ್ವಯಂಕೃತ ಘೋಷಣೆಯನ್ನು ಮಾಡಿಕೊಳ್ಳಬೇಕು. ಇದರ ಜೊತೆಗೆ ಹೊಸದಾಗಿ ಕೌಶಲ್ಯ ತರಬೇತಿ ನೀಡಲು ಯುವನಿಧಿ ಪ್ಲಸ್ ಎಂಬ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯ ಕಾರ್ಯದರ್ಶಿಯಾದ ತಾರಾ ಎನ್, ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿಯ ಸದಸ್ಯರುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Keladi Shivappa Nayaka University of Agricultural ಆಗಸ್ಟ್ 5, ಇರುವಕ್ಕಿಯಲ್ಲಿ “ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ ” ಕಾರ್ಯಾಗಾರ

0

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಯಲ್ಲಿ ಒಂದು ದಿನದ ಕಾರ್ಯಗಾರವನ್ನು ದಿನಾಂಕ 05.08.2025 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿರುತ್ತದೆ.

” ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ”
ಕುರಿತು ತಾಂತ್ರಿಕ ಕಾರ್ಯಗಾರ

ಈ ಕಾರ್ಯಗಾರದ ವಿಶೇಷತೆಗಳು

  1. ಕೃಷಿ ಅರಣ್ಯ ತಂತ್ರಜ್ಞಾನಗಳು
  2. ಅನುತ್ಪಾದಕ ಭೂಮಿಯನ್ನು ಉತ್ಪಾದನೆಡೆಗೆ ಕೃಷಿ ಅರಣ್ಯ
  3. ಕೃಷಿ ಅರಣ್ಯಕ್ಕೆ ಸಂಬಂಧಿಸಿದ ಯೋಜನೆಗಳು
  4. ಮರದ ಅಳತೆಯ ಕುರಿತು ಪ್ರಾತ್ಯಕ್ಷಿಕೆ

Keladi Shivappa Nayaka University of Agricultural ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

Madhu Bangarappa ಹಕ್ಕುಪತ್ರ ನೀಡಿಕೆ ತುಂಬಾ ಹೆಮ್ಮೆಯ ವಿಷಯ.ಇನ್ನೂ 10.000 ಎಕರೆಯಷ್ಟು ಭೂಮಿ ಹಕ್ಕು ನೀಡಬೇಕಿದೆ- ಮಧು ಬಂಗಾರಪ್ಪ

0

Madhu Bangarappa ಹಕ್ಕುಪತ್ರ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಹಕ್ಕುಪತ್ರ ನೀಡಲು ಹೆಮ್ಮೆ ಮತ್ತು ಸಂತೋಷವಾಗುತ್ತದೆ ಎಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಕಂದಾಯ ಇಲಾಖೆ, ಸೊರಬ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ಸೊರಬ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಕ್ಕು ಪತ್ರ ನೀಡುವುದು ಹೆಮ್ಮೆಯ ವಿಷಯ. ಹಕ್ಕುಪತ್ರ ಇಲ್ಲದವರಿಗೆ ಹಕ್ಕು ಪತ್ರ ಒದಗಿಸಲು ಸರ್ಕಾರ ಶ್ರಮಿಸುತ್ತಿದೆ. ಕಂದಾಯ ಸಚಿವರು ಕಂದಾಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗುತ್ತಿದ್ದಾರೆ. ೯೪ ಸಿ, ೯೪ ಸಿಸಿ ಅರ್ಜಿಗಳಿಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ, ಈ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ಹಕ್ಕು ಪತ್ರ ಇಲ್ಲದವರಿಗೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಜನರು ಸರ್ಕಾರದ ಮೇಲೆ ವಿಶ್ವಾಸ ಇಡಬೇಕು.
ಅರಣ್ಯ ಹಕ್ಕು ಕಾಯ್ದೆಯನ್ವಯ ಅರಣ್ಯದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ನ್ಯಾಯ ಒದಗಿಸುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಶರಾವತಿ ಸಂತ್ರಸ್ತರು ೧೯೫೮ ರಲ್ಲಿ ಜಲಾಶಯಕ್ಕಾಗಿ ತಮ್ಮ ಭೂಮಿ ಬಿಟ್ಟುಕೊಟ್ಟಿದ್ದು ಈವರೆಗೆ ಅವರಿಗೆ ಹಕ್ಕು ಪತ್ರ ನೀಡಲಾಗಿಲ್ಲ, ಸಾಗರ, ತೀರ್ಥಹಳ್ಳಿ ಹೊಸನಗರ, ಭದ್ರಾವತಿ ಕಡೆಯಲ್ಲಿ ಸಂತ್ರಸ್ತರಿದ್ದಾರೆ.

ಇವರಿಗೆ ಸುಮಾರು
೧೦ ಸಾವಿರ ಎಕರೆಯಷ್ಟು ಭೂಮಿ ನೀಡಬೇಕಿದ್ದು, ದೊಡ್ಡ ಮಟ್ಟದ ಕಾನೂನು ರೂಪಿಸಿ ಕ್ರಮ ಕೈಗೊಳ್ಳಬೇಕಿದೆ. ಈ‌ ನಿಟ್ಟಿನಲ್ಲಿ ಚರ್ಚೆ, ಪ್ರಕ್ರಿಯೆ ನಡೆಯುತ್ತಿದೆ.

ತಾಲ್ಲೂಕಿನಲ್ಲಿ ಹಕ್ಕುಪತ್ರ ಇಲ್ಲದ ಗ್ರಾಮಗಳಲ್ಲಿ ಮುಖಂಡರು, ಸಮಿತಿ ಸದಸ್ಯರು ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಹಕ್ಕು ಪತ್ರ ನೀಡುವ ಪ್ರಕ್ರಿಯೆ ಚುರುಕುಗೊಳಿಸಬೇಕು.

ಶಾಸಕರುಗಳಿಗೆ ಕ್ಷೇತ್ರ ಅಭಿವೃದ್ಧಿಗೆ ರೂ. ೫೦ ಕೋಟಿ ಮಂಜೂರಾಗಿದ್ದು, ಸೊರಬದಲ್ಲಿ ರೂ. ೪೬ ಕೋಟಿ ಅನುದಾನವನ್ನು ರಸ್ತೆಗಾಗಿ ಬಳಕೆ ಮಾಡಲಾಗುತ್ತಿದೆ.೩೦ ಕಿ.ಮೀ ಪ್ರಗತಿ ಪಥ ರಸ್ತೆ ಕಾಮಗಾರಿ‌ ಕೈಗೊಳ್ಳಲಾಗುತ್ತಿದೆ. ರಸ್ತೆಗಾಗಿ ಸುಮಾರು ೧೦೦ ಕೋಟಿ ಅನುದಾನ ಅಗತ್ಯವಿದೆ. ರೂ. ೧೬೨ ಕೋಟಿ ಅನುದಾನ ನೀರಾವರಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದರು.

Madhu Bangarappa ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿದ್ದು, ಜನರ ಬಾಳಲ್ಲಿ ಬೆಳಕಾಗಿದೆ.
ಶಿಕ್ಷಣ ಇಲಾಖೆಯಲ್ಲಿ ೪೩ ಸಾವಿರ ಕೋಟಿ ಅನುದಾನ ಬಳಕೆ ಮಾಡಲಾಗುತ್ತಿದೆ. ೪ ರಿಂದ ೫ ಸಾವಿರ ಕೋಟಿ ಸಿಎಸ್ ಆರ್ ನಿಧಿ ತರಲಾಗಿದೆ. ಉಚಿತ ಪಠ್ಯ, ಸಮವಸ್ತ್ರ, ಶೂ, ಮಧ್ಯಾಹ್ನದ ಬಿಸಿಯೂಟದೊಂದಿಗೆ
ವಾರದಲ್ಲಿ ೬ ದಿನ ೫೭ ಲಕ್ಷ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಟರ್ಯಾಕ್ಟಿವ್ ಸ್ಮಾರ್ಟ್ ತರಗತಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಪ್ರತಿ
ಹೋಬಳಿಗೊಂದು ಕೆಪಿಎಸ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದ ಅವರು ಅನುಕೂಲ ಇರುವವರು ತಾವು ಓದಿದ ಸರ್ಕಾರಿ ಶಾಲೆಗಳಿಗೆ ಕೊಡುಗೆ ನೀಡಲು ಮುಂದೆ ಬರುವಂತೆ ಕರೆ ನೀಡಿದರು.

ತಹಶಿಲ್ದಾರ್ ಮಂಜುಳಾ ಹೆಗಡಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ ಪಿ ರುದ್ರೇಗೌಡ ಮಾತನಾಡಿ, ರಾಜ್ಯ ಸರ್ಕಾರ ಹಕ್ಕು ಪತ್ರ ಇಲ್ಲದ ಗ್ರಾಮಗಳಿಗೆ ಹಕ್ಕು ಪತ್ರ ನೀಡುತ್ತಿರುವುದು ಅಭಿನಂದನೀಯ.‌ ಹಕ್ಕು ಪತ್ರ ಅಗತ್ಯವಿರುವ ಇನ್ನೂ ಬೇರೆ ಗ್ರಾಮಗಳಿವೆ.‌ಅವುಗಳಿಗೂ ಮುಂದಿನ ದಿನಗಳಲ್ಲಿ ಈ ಸೌಲಭ್ಯ ಒದಗಲಿದೆ. ಹಕ್ಕುಪತ್ರದಿಂದಾಗಿ ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ . ಆದ್ದರಿಂದ ಎಲ್ಲರೂ ಈ ನಿಟ್ಟಿನಲ್ಲಿ ಸಹಕರಿಸಬೇಕು.
ಸಚಿವರು, ಸೊರಬ ತಾಲ್ಲೂಕಿನ ಹಂಚಿ ತಾಂಡ ಮತ್ತು ತತ್ತೂರು ವಡ್ಡಿಗೆರೆ 2 ಕಂದಾಯ ಗ್ರಾಮಗಳ 96 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು‌ ವಿತರಿಸಿದರು.

Shri Acharya Tulsi National College of Commerce ಯುವಜನತೆಯ ಸರ್ವಾಂಗೀಣ ಬೆಳವಣಿಗೆ ಆಗಲು ಸ್ಕೌಟ್& ಗೈಡ್ಸ್ ಸೇರಿರಿ- ರಾಜೇಶ್ ವಿ ಅವಲಕ್ಕಿ

0

Shri Acharya Tulsi National College of Commerce ಶ್ರೀ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ನೂತನವಾಗಿ ಪ್ರಥಮ ವರ್ಷ ಪದವಿ ತರಗತಿಗಳನ್ನು ಸೇರಿಕೊಂಡಿರುವ ಯುವಕ ಯುವತಿಯರಿಗೆ ಸ್ಕೌಟ್ ಗೈಡ್ ಚಳುವಳಿಯ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ವಿ. ಅವಲಕ್ಕಿ ಅವರು ಮಾತನಾಡುತ್ತಾ ಮೇಲಿನಂತೆ ತಿಳಿಸಿದರು. ಮುಂದುವರೆದ ಅವರು ವಿಶ್ವ ವ್ಯಾಪ್ತಿ ಆಗಿರುವಂತಹ, ದೇಶಭಕ್ತಿಯನ್ನು ಪ್ರಜ್ವಲಿಸುವ ಸೇವಾ ಮನೋಭಾವನೆಯನ್ನು ಉದ್ದೀಪನ ಗೊಳಿಸುವ ಈ ಚಳುವಳಿಯ ಮುಖಾಂತರ ವೈಯಕ್ತಿಕವಾಗಿ ತಮ್ಮ ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಬೆಳೆಬಹುದಾಗಿದ್ದು ಸದೃಢ ರಾಷ್ಟ್ರ ಕಟ್ಟುವ, ಸಮಾಜಕ್ಕೆ – ರಾಷ್ಟ್ರಕ್ಕೆ ಉತ್ತಮ, ಉಪಯೋಗವಾಗುವಂತಹ ಯುವ ಪಡೆಯನ್ನ, ಮಾಡುತ್ತ ಕಲಿಯುವಿಕೆ, ಚಿಕ್ಕ ಚಿಕ್ಕ ತಂಡಗಳಲ್ಲಿ ಕೆಲಸ ಮಾಡುವುದು, ಪ್ರಗತಿಪರ ಶಿಕ್ಷಣ ಮತ್ತು ಹೊರಾಂಗಣ ಶಿಕ್ಷಣ ಮೂಲಕ ತರಬೇತಿಗೊಳಿಸಿ ರಾಷ್ಟ್ರಕ್ಕೆ ಸಮರ್ಪಿಸುವುದೇ ಈ ಚಳುವಳಿಯ ಉದ್ದೇಶವಾಗಿದೆ. ದೇವರಿಗೆ ಕರ್ತವ್ಯ, ದೇಶಕ್ಕೆ ಕರ್ತವ್ಯ ಮತ್ತು ಸ್ವ-ಶಿಸ್ತು ತತ್ವದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಈ ಚಳುವಳಿಯಲ್ಲಿ ಯುವಕ ಯುವತಿಯರು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪದಕಗಳನ್ನು ಪಡೆಯುವುದರ ಜೊತೆಗೆ ರಾಜ್ಯದ ರಾಷ್ಟ್ರದ ವಿವಿಧ ಭಾಗಗಳಲ್ಲಿ ಏರ್ಪಡಿಸುವ ಹಲವಾರು ಶಿಬಿರಗಳಲ್ಲಿ ಭಾಗವಹಿಸುತ್ತಾ ತಮ್ಮ ಸಂವಹನ ಕಲೆ, ವರ್ತನೆ ಮತ್ತು ಶಿಸ್ತಿನಿಂದ ಬದುಕುವುದನ್ನು ಕಲಿಯಬಹುದಾಗಿದೆ. ಇಂತಹ ಉತ್ತಮ ಅವಕಾಶವನ್ನ ಒದಗಿಸುವ ಈ ಚಳುವಳಿಗೆ ತಾವೆಲ್ಲರೂ ಸೇರಿಕೊಂಡು ರಾಷ್ಟ್ರ ಕಟ್ಟುವ ಈ ಚಳುವಳಿಯ ಭಾಗವಾಗಬೇಕೆಂದು ಕೇಳಿಕೊಂಡರು. Shri Acharya Tulsi National College of Commerce ಇಂತಹ ಅವಕಾಶ ಕೊಡುತ್ತಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಮತ್ತು ಆಚಾರ್ಯ ತುಳಿಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಿಗೂ ಮತ್ತು ಎಲ್ಲ ಉಪನ್ಯಾಸಕ ವರ್ಗದವರಿಗೆ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ವಿವಿಧ ಯುವ ಸಂಸ್ಥೆಗಳ ಚಟುವಟಿಕೆಗಳ ಸಂಯೋಜಕರು, ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಕೇಂದ್ರ ಸ್ಥಾನಕ್ಕೆ ಆಯುಕ್ತರಾದ ಶ್ರೀ ಜಿ ವಿಜಯ್ ಕುಮಾರ್ ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗಾಗಿ ಇರುವ ಇಂತಹ ಉತ್ತಮ ಅವಕಾಶವನ್ನ ಸದ್ಬಳಕೆ ಮಾಡಿಕೊಂಡು ಸ್ಕೌಟ್ ಚಳುವಳಿಯ ಸಕ್ರಿಯ ಸದಸ್ಯರಾಗುವಂತೆ ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ನಾಗರಾಜ್ ದೈಹಿಕ ಶಿಕ್ಷಣ ನಿರ್ದೇಶಕರು ಮಾತನಾಡುತ್ತಾ ವಿದ್ಯಾರ್ಥಿಗಳು ಕಾಲೇಜಿನ ವತಿಯಿಂದ ಕೊಡುತ್ತಿರುವಂತಹ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರಿದರು. ಅಧ್ಯಕ್ಷತೆಯನ್ನು ವಹಿಸಿದ್ದಂತಹ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಮಮತಾ ಮೇಡಂ ರವರು ಮಾತನಾಡುತ್ತಾ ಕಳೆದ ಐದು ವರ್ಷಗಳಿಂದ ಕಾಲೇಜಿನಲ್ಲಿ ಚಳುವಳಿಯ ಚಟುವಟಿಕೆಗಳು ನಡೆಯುತ್ತಿದ್ದು ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಲವಾರು ಶಿಬಿರಗಳಲ್ಲಿ ಭಾಗವಹಿಸಿ ರಾಜ್ಯ ಪುರಸ್ಕಾರ ಪ್ರಶಸ್ತಿಗಳನ್ನು ಪಡೆದು ಕಾಲೇಜಿಗೆ ಉತ್ತಮ ಹೆಸರನ್ನು ತಂದುಕೊಟ್ಟಿದ್ದಾರೆ ಅವರಿಗೆ ಅಭಿನಂದಿಸುತ್ತ ನೂತನ ವಿದ್ಯಾರ್ಥಿಗಳಿಗೂ ಸಹ ಇಂತಹ ಅವಕಾಶಗಳಿದ್ದು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದಲ್ಲಿ ರೇಂಜರ್ ಲೀಡರ್ ಪ್ರೊಫೆಸರ್ ಶ್ರೀಮತಿ ಸತಿ ಭಾರತಿ ದಯಾನಂದ , ರೋವರ್ ಲೀಡರ್ ಪ್ರೊಫೆಸರ್ ನವೀನ್ ತೇಲ್ಕರ್, ಪ್ರೊಫೆಸರ್ ಸೌಪರ್ಣಿಕಾ ಉಮೇಶ್, ಪ್ರೊಫೆಸರ್ ಶೃತಿ ಕೆ, ಶ್ರೀ ಪುನೀತ್ ಹೆಚ್. ಜಿ. ಉಪಸ್ಥಿತರಿದ್ದರು. ರೇಂಜರ್ ಕುಮಾರಿ ರುಚಿತ ಸರ್ವರನ್ನು ಸ್ವಾಗತಿಸಿದರು. ಕುಮಾರಿ ಸಿಂಚನಗೌಡ ವಂದಿಸಿದರು. ರೇಂಜರ್ ಕುಮಾರಿ ಅನನ್ಯ ಎನ್. ಎಸ್. ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Backward Classes Welfare Department ಮೆಟ್ರಿಕ್ ನಂತರದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

0

Backward Classes Welfare Department 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Backward Classes Welfare Department ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನಾಂಕವಾಗಿದೆ. ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770005, ಇ-ಮೇಲ್bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Rotary Shimoga ಇಂಟರ್ಯಾಕ್ಟ್ ಸಂಸ್ಥೆಯು ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ-ಕೆ.ಬಿ.ರವಿಶಂಕರ್

0

Rotary Shimoga ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂಟರಾಕ್ಟ್ ಮುಖಾಂತರ ಮಕ್ಕಳಲ್ಲಿ ನಾಯಕತ್ವ ಕೌಶಲ್ಯಗಳನ್ನು ಬೆಳೆಸಲು ಸಾಧ್ಯವಾಗಲಿದೆ. ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು. ಇದು ಕೇವಲ ಕ್ಲಬ್ ಅಲ್ಲ, ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಕಿಶೋರ್ ಕುಮಾರ್ ಡಿ ಮಾತನಾಡಿ, ಈ ಶಾಲೆಯಲ್ಲಿ ಕಲಿತ ಪಾಠಗಳು ನಿಮ್ಮನ್ನು ಜೀವನದಲ್ಲಿ ಮಹಾನ್ ವ್ಯಕ್ತಿಗಳಾಗಿ ರೂಪಿಸಲಿದೆ. ವಿದ್ಯಾರ್ಥಿಗಳು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

Rotary Shimoga ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಡಾ. ಧನಂಜಯ್ ಮಾತನಾಡಿ, ಮಕ್ಕಳಲ್ಲಿ ಅಸಾಧಾರಣ ಸಾಮರ್ಥ ಹೊಂದಿರುವವರು ಇರುತ್ತಾರೆ. ನಮ್ಮ ಭವಿಷ್ಯ ನಾವೇ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಶಿಕ್ಷಣದಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು. ಇತರರ ಬದುಕನ್ನೂ ಬೆಳಗಿಸಬಹುದು ಎಂದರು.

ಟ್ರಸ್ಟ್ ಉಪಾಧ್ಯಕ್ಷೆ ನಾಗವೇಣಿ ಮಾತನಾಡಿ, ಬಡತನ ಎನ್ನುವುದು ಅಡಚಣೆಯಾಗಬಹುದು. ಆದರೆ ಅದು ಕನಸುಗಳಿಗೆ ಕಡಿವಾಣವಲ್ಲ. ನಮ್ಮ ಹಿನ್ನೆಲೆ ಏನೇ ಇರಲಿ, ಶ್ರದ್ಧೆ, ಶ್ರಮ ಮತ್ತು ನಂಬಿಕೆಯಿಂದ ನಾವು ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಬ್ಧಕೋಶಗಳನ್ನು ನೀಡಿ ಗೌರವಿಸಲಾಯಿತು. ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರೀತಮ್, ಕಾರ್ಯದರ್ಶಿಯಾಗಿ
ಬನಶ್ರೀ ಅಧಿಕಾರ ವಹಿಸಿಕೊಂಡು. ಶಾಲೆಯ ವಿದ್ಯಾರ್ಥಿಗಳಿಗೆ ಡಿಕ್ಷನರಿ, ಪೆನ್, ನೋಟ್‌ಬುಕ್ ವಿತರಿಸಲಾಯಿತು.

ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ, ಮುಷ್ತಕ್ ಆಲಿ, ಪರಮೇಶ್, ಗಣೇಶ್, ಆರ್.ಮನೋಹರ್, ಪ್ರೀತಮ್, ರೂಪ, ಬನಶ್ರಿ, ಮುಖ್ಯಶಿಕ್ಷಕ ಸೂರ್ಯನಾರಾಯಣ್ ಮತ್ತಿತರು ಉಪಸ್ಥಿತರಿದ್ದರು.

Radiological and Imaging Association ತಂತ್ರಜ್ಞಾನದ ಬಳಕೆಯಿಂದ ಲಿಂಗಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ.- ಡಾ.ನಟರಾಜ್

0

Radiological and Imaging Association ಐ.ಅರ್.ಐ.ಎ (IRIA) ರಾಷ್ಟ್ರಮಟ್ಟದ “ಶಕ್ತಿ” ಯೋಜನೆ ಅಡಿಯಲ್ಲಿ ಭಾರತೀಯ ರೇಡಿಯೊಲಾಜಿಕಲ್ ಮತ್ತು ಇಮೆಜಿಂಗ್ ಅಸೋಸಿಯೇಷನ್ ಶಿವಮೊಗ್ಗ ಉಪಾವಿಭಾಗವು ಶಿವಮೊಗ್ಗದಲ್ಲಿ ಇತ್ತಿಚೆಗೆ ನಿರಂತರ ವೈದ್ಯಕೀಯಾ ಶಿಕ್ಷಣ ಕಾರ್ಯಕ್ರಮವನ್ನು (CME) ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮತಾನಾಡಿದ ನಮ್ಮ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಿ.ಎಚ್.ಓ ಡಾ. ನಟರಾಜ್ರವರು ಶಿವಮೊಗ್ಗದ ರೇಡಿಯೊಲಾಜಿಸ್ಟ್-ಸ್ಕಾನಿಂಗ್ ತಜ್ಞರ ಹಾಗೂ ಅವರ ಕಾರ್ಯ ಕ್ಷಮತೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಪಿ.ಸಿ.ಪಿ.ಎನ್.ಡಿ.ಟಿ ACT ಗರ್ಭದಾರಣೆ ಪೂರ್ವ ಮತ್ತು ಪ್ರಸವ ಪೂರ್ವ ವಗರ್ಿಕರಣ, ಹೆಣ್ಣು ಭ್ರೂಣ ಪತ್ತೆ ಮತ್ತು ಪ್ರಸವ ಪೂರ್ಣ ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ಮಾತನಾಡುತ್ತ ಒಂದು ಸ್ವಸ್ತ ಸಮಾಜವು ಯಾವುದೇ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಆರೋಗ್ಯವಾಗಿರಲು ಕಾರಣ ಜನಸಂಖ್ಯೆಯಾ ಸಮಾನಾದ ಲಿಂಗಾನುಪಾತ. ಹೆಣ್ಣು ಮತ್ತು ಗಂಡು ಸಮಾನ ಸ್ಥಾನ-ಮಾನವನ್ನು ಅನುಭವಿಸುವ ಅಭಿವೃದ್ಧಿಹೊಂದಿದ ಸಮಾಜಗಳಲ್ಲಿ ಸಮನ್ಯವಾಗಿ ಪುರುಷರಿಗಿಂತ ಹೆಚ್ಚು ಹೆಣ್ಣು ಮಕ್ಕಳಸಂಖ್ಯೆಯು ಇರುತ್ತದೆ. ಪ್ರತಿಕೂಲ ಲಿಂಗನುಪಾತವು ಕ್ಷೀಣವಾದ ಸಾಮಜಿಕಾ ಆರೋಗ್ಯವನ್ನು ಬಿಂಬಿಸುವುದಷ್ಟೆ ಅಲ್ಲದೆ ಸ್ವಸ್ತ ಸಮಾಜವನ್ನು ಅಭಿವೃದ್ಧಿಹೊಂದುವಲ್ಲಿ ಅನುಚಿತವಾಗಿರುತ್ತದೆ. ತಂತ್ರಜ್ಞಾನಗಳ ದುರ್ಬಳಕೆಯಿಂದ ಹುಟ್ಟುವ ಮಗುವಿನ ಲಿಂಗ ಪತ್ತೆ ಮಾಡುವುದು ಮತ್ತು ಹಾಗು ಭ್ರೂಣ ಹತ್ಯೆಗೆ ಪ್ರಚೋದಿಸುವುದು ಶಿಕ್ಷಾರ್ಹ ಅಪರಾಧ. ಇದನ್ನು ವಿರೋಧಿಸಿ ತಡೆಯುವ ನಿಟ್ಟಿನಲ್ಲಿ ಎಲ್ಲರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

Radiological and Imaging Association ಶಿವಮೊಗ್ಗದಲ್ಲಿ ಈ ನಿಟ್ಟಿನಲ್ಲಿ ಎಲ್ಲರು ಹೆಚ್ಚು ಜಾಗುರುಕಾರಗಿ ಕೆಲಸ ಮಾಡುತ್ತಿದ್ದರೆಂದು ಶ್ಲಾಘಿಸಿದರು.
ಇದೆ ಸಮಯದಲ್ಲಿ ಡಿ.ಎಚ್.ಓ ಡಾ.ನಟರಾಜ್ರವರನ್ನು ಬಹಳ ಅತ್ಮಿಯಾವಾಗಿ ಅಭಿನಂದಿಸಲಾಯಿತು.

ಐ.ಅರ್.ಐ.ಎ ರಾಜ್ಯದ ಮಟ್ಟದ ಅಧ್ಯಕ್ಷರಾದ ಡಾ.ಪ್ರವಿಣ್ರವರು ಮತ್ತು ಶಿವಮೊಗ್ಗ ಐ.ಅರ್.ಐ.ಎ ಉಪಾವಿಭಾದ ಅಧ್ಯಕ್ಷರಾದ ಡಾ. ಉಮಾ ಪಾಂಡುರಂಗಿ, ಉಪಾಧ್ಯಕ್ಷರಾದ ಡಾ.ಅರುಣ್ ಎಂ.ಎಸ್, ಹಾಗೂ ಕಾರ್ಯಕಾರಿಣಿ ಸಮಿತಿಯ ಡಾ.ಪರಮೆಶ್ವರ್ ಶಿಗ್ಗವ್, ಡಾ.ಅಖಿಲಾ ಹಾಗೂ ಡಾ.ಶ್ರೀಕಾಂತ್ ಮತ್ತಿತ್ತರರು ಉಪಸ್ಥಿತರಿದ್ದರು.

Sarvajnendra Saraswati Pratisthana ಭದ್ರಾವತಿಯಲ್ಲಿ ಶ್ರೀಭಗವದ್ಗೀತಾ ಅಭಿಯಾನ ಉದ್ಘಾಟನೆ

0


Sarvajnendra Saraswati Pratisthana ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಆಶ್ರಯದಲ್ಲಿ
ಶ್ರೀಭಗವದ್ಗೀತಾ ಅಭಿಯಾನ 2025 ರ ಚಟುವಟಿಕೆಯ ಅಂಗವಾಗಿ ಭದ್ರಾವತಿಯಲ್ಲಿ ಅಭಿಯಾನದ ಉದ್ಘಾಟನೆ ನೆರವೇರಿತು.

ಅಭಿಯಾನದ ಶಿವಮೊಗ್ಗ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ ಜಿ ಭಟ್ ಅವರು ಮೊದಲಿಗೆ ಮಾತನಾಡಿದರು.
ಸ್ವರ್ಣವಲ್ಲಿ ಸಂಸ್ಥಾನದ ಪೂಜ್ಯಶ್ರೀ ಗಂಗಾಧರ ಸರಸ್ವತಿ ಮಹಾಸ್ವಾಮಿಗಳು ರಾಜ್ಯಾದ್ಯಂತ ಭಗವದ್ಗೀತೆ ಅಭಿಯಾನ ಆರಂಭಿಸಿದ್ದಾರೆ.
ನಿತ್ಯ ಬದುಕಿನ ಸಮಸ್ಯೆಗಳಿಗೆ ಗೀತೆಯಲ್ಲಿ ಉತ್ತರವಿದೆ.
ಇಂದಿನ ಯುವಪೀಳಿಗೆ ಮತ್ತು ಶಾಲಾಮಕ್ಕಳಲ್ಲಿ ಗೀತೆಯ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಎಲ್ಲಾ ಜಿಲ್ಲೆಗಳಲ್ಲೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲಿ ಗೀತ ಕಂಠಪಾಠ ಸ್ಪರ್ಧೆ ಗಳನ್ನ ಏರ್ಪಡಿಸಲಾಗಿದೆ. ಇದಕ್ಕೆ ಜಾತಿಮತ ಮೀರಿ ಎಲ್ಲಾ ಸಮುದಾಯದವರಿಗೂ ಮುಕ್ತವಾದ ಅವಕಾಶವಿದೆ ಎಂದರು.

Sarvajnendra Saraswati Pratisthana
ಪ್ರಧಾನ ಕಾರ್ಯದರ್ಶಿಗಳಾದ ಪ್ರೊ‌.ಬಾಲಕೃಷ್ಣ ಹೆಗಡೆ ಅವರು ಶಾಲಾಕಾಲೇಜುಗಳಲ್ಲಿ
ಗೀತ ಜಾಗೃತಿ ಚಟುವಟಿಕೆ ಹೇಗೆ ಹಮ್ಮಿಕೊಳ್ಳಬೇಕೆಂದು ವಿವರಿಸಿದರು.
ಅಸಕ್ತಿಯ ವಿಷಯವೆಂದರೆ ಶಿವಮೊಗ್ಗದ ಆಕ್ಸ್ ಫರ್ಡ್ ಶಾಲೆಯಲ್ಲಿ ಅತ್ಯಂತ ಉತ್ಸಾಹದಿಂದ ವಿದ್ಯಾರ್ಥಿವೃಂದಕ್ಕೆ ಸ್ಪರ್ಧೆ ನಡೆಸಲು ಅವಕಾಶ ನೀಡಿದ್ದಾರೆ.
ಈವರ್ಷದ ನವೆಂಬರ್ 30 ರಂದು ಶಿವಮೊಗ್ಗದಲ್ಲಿ ಸಮಾರೋಪವಾಗಲಿದೆ ಎಂದು ತಿಳಿಸಿದರು. ಅಭಿಯಾನದ ಕಾರ್ಯಕಾರಿ ಸಮಿತಿ ಯ
ಮಂಜುನಾಥಶರ್ಮ. ಶಂಕರಮಠದ ಶ್ರೀನಾಗರಾಜ್. ಆನಂದ್ ಕೂದುವಳ್ಳಿ.
ಕೃಷ್ಣಸ್ವಾಮಿ, ಪುಷ್ಪಾ ಸುಬ್ರಹ್ಮಣ್ಯ‌ ಮುಂತಾದವರು ಉಪಸ್ಥಿತರಿದ್ದರು

Shivamogga City Corporation ವೀರಶೈವ ಕಲ್ಯಾಣ ಮಂದಿರದ ರಸ್ತೆ, ಬೀದಿಬದಿ ವ್ಯಾಪಾರಸ್ಥರನ್ನ ತೆರವುಗೊಳಿಸಿದ ನಗರಪಾಲಿಕೆ

0

Shivamogga City Corporation ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು.

ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ ಹೆಲ್ತ್ ವಿಭಾಗದ ಹೆಲ್ತ್ ಇನ್ಸ್ ಪೆಕ್ಟರ್ ವಸಂತ್ ಮತ್ತು ನಲ್ಮ್ ಅಧಿಕಾರಿ ಅನುಪಮಾರವರ ನೇತೃತ್ವದ ತಂಡ ವೀರಶೈವ ಕಲ್ಯಾಣ ಮಂದಿರದ ರಸ್ತೆಯಲ್ಲಿದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕಾರ್ಯಾಚರಣೆಯೂ ಸಾರ್ವಜನಿಕರ ಹೊಗಳಿಕೆಗೆ ಕಾರಣವಾಗಿದೆ.