Shimoga News ದೀಪ ಪ್ಲಾಜಾದಲ್ಲಿ ಚಿರಂತನ ಚಿತ್ತಾರ ಹವ್ಯಾಸಿ ಚಿತ್ರಕಲಾ ಶಾಲೆ ಆಯೋಜಿಸಿದ್ದ ಮಕ್ಕಳ ಚಿತ್ರಕಲಾ ಪ್ರದರ್ಶನವನ್ನು ಶಿವಮೊಗ್ಗ ಟೈಮ್ಸ್ ಸಂಪಾದಕ ಎಸ್.ಚಂದ್ರಕಾಂತ್ ಅವರು ಹೂವಿನ ಚಿತ್ರ ಬರೆಯುವುದರ ಮೂಲಕ ಉದ್ಘಾಟಿಸಿ ಮಕ್ಕಳಿಗೆ ಶುಭಕೋರಿದರು.
ಸಾಂಪ್ರದಾಯಿಕ ಚಿತ್ರ ಕಲಾವಿದೆ ಹಾಗೂ ಚಿತ್ರಕಲಾ ಶಾಲೆ ಅಧ್ಯಕ್ಷೆ ಸಿ.ಎಸ್.ಕಾತ್ಯಾಯಿನಿ ಮಾತನಾಡಿ,
ಮಕ್ಕಳ ಚಿತ್ರಕಲಾ ಪ್ರದರ್ಶನ ಅವರ ಜೀವನದಲ್ಲಿ ಒಂದು ಸವಿನೆನಪು. ಪೋಷಕರ ಮಕ್ಕಳಿಗೆ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.
ಪಾಸಿಟಿವ್ ಮೈಂಡ್ ಹಾಸ್ಪಿಟಲ್ನ ಮಾನಸಿಕ ತಜ್ಞ ಡಾ. ಅರವಿಂದ್ ಮಾತನಾಡಿ, ಮಕ್ಕಳಲ್ಲಿ ಸಕಾರಾತ್ಮಕ ಆಲೋಚನೆ ಬೆಳೆಸಬೇಕು. ನಿರಂತರ ದೈಹಿಕ ಚಟುವಟಿಕೆ ಅಭ್ಯಾಸ ಮಾಡಬೇಕು. ಮಕ್ಕಳ ಮನಸ್ಸಿನ ಭಾವನೆ, ಮಗುವಿನ ವ್ಯಕ್ತಿತ್ವ, ತಂದೆ ತಾಯಿಯೊಂದಿಗಿನ ಭಾಂದವ್ಯ ಹೀಗೆ ವಿವಿಧ ವಿಷಯಗಳ ಬಗ್ಗೆ ಗಮನ ನೀಡಬೇಕು ಎಂದರು.
ಪ್ರತಿಯೊಂದು ಮಗು ಅರ್ಥೈಸಿಕೊಳ್ಳವ ಬೇರೆ ಬೇರೆ ರೀತಿ ದೃಷ್ಟಿಕೋನಗಳು, ಭಾವನೆಗಳು, ಖಿನ್ನತೆಗಳು ಬೇರೆ ಬೇರೆಯಾಗಿರುತ್ತದೆ. ಇವುಗಳ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಮಕ್ಕಳು ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಸೋಲಿಗೆ, ಅವಮಾನಗಳಿಗೆ ಅಂಜಬೇಡಿ, ಕೆಲಸದಲ್ಲಿ ಶ್ರದ್ಧೆ ಇಡಬೇಕು. ಮನೋಶಕ್ತಿ ಬೆಳೆಸಿಕೊಳ್ಳಬೇಕು. ಮಕ್ಕಳ ಮನೋವಿಕಾಸವಾಗಲು ಎಲ್ಲವನ್ನೂ ಅನುಭವಿಸಲು ಬಿಡಬೇಕು ಎಂದು ಹೇಳಿದರು.
Shimoga News ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮಂಜುನಾಥ್, ರೂಪಾ, ಕವಿತಾ, ಅಕ್ಷತ ಮಸ್ಕಿ, ಕವಿತ ರಾವ್, ಉಮ, ರೋಹಿಣಿ, ಸಾಹಿತ್ಯ, ಸತ್ಶ್ರಶ್ರೀ ಹಾಜರಿದ್ದರು. ಚಿತ್ರಕಲಾ ಪ್ರದರ್ಶನದಲ್ಲಿ ಒಟ್ಟು 50 ಮಕ್ಕಳು ಭಾಗವಹಿಸಿದ್ದರು. 280ಕ್ಕೂ ಹೆಚ್ಚು ಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.
ಅತಿಥಿಗಳಿಂದ ಚಿತ್ರ ಕಲಾಕೃತಿಗಳನ್ನು ರಚಿಸಿ ಪ್ರದರ್ಶಿಸಿದ ಎಲ್ಲಾ ಮಕ್ಕಳಿಗೆ ಅಭಿನಂದನಾ ಪತ್ರ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಮಕ್ಕಳು ಸಂಭ್ರಮದಿಂದ ಭಾಗವಹಿಸಿದ್ದರು.
Shimoga News ಮಕ್ಕಳಲ್ಲಿ ಸಕಾರಾತ್ಮಕಆಲೋಚನಾ ವಿಧಾನ ಬೆಳೆಸಬೇಕು- ಮನೋವೈದ್ಯ ಡಾ.ಟಿ.ಅರವಿಂದ್.
Shimoga News ಬಾಲ್ಯದಿಂದಲೇ ಏನಾದರೂ ಸಾಧಿಸುವ ಛಲ ಇತ್ತು- ಆರ್.ವಂದನಾ
Shimoga News ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತೆ ಆರ್.ವಂದನಾ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗುರು ಹಿರಿಯರ ಮಾರ್ಗದರ್ಶನದಿಂದ ಇಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆಯಲು ಸಾಧ್ಯವಾಯಿತು. ಬಾಲ್ಯದಿಂದಲೇ ಜೀವನದಲ್ಲಿ ಏನಾದರೂ ಸಾಧಿಸುವ ಛಲ ಇತ್ತು. ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ವಿಭಾಗದಲ್ಲಿ ಟಾಪರ್ ಆಗಿದ್ದೇನೆ ಎಂದು ತಿಳಿಸಿದರು.
ವಿಟಿಯು ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಆರ್.ವಂದನಾ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್ಕುಮಾರ್ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ನೆಪ್ಚೂನ್ ಕಿಶೋರ್ಕುಮಾರ್ ಮಾತನಾಡಿ, ವಂದನಾ ಅವರ ಸಾಧನೆ ನಮ್ಮ ಜಿಲ್ಲೆಗೆ ಕೀರ್ತಿ ತಂದಿದ್ದು, ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಪೂರ್ತಿಯಾಗಿದೆ. ವಂದನಾ ಅವರು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲಿ ಎಂದು ಶುಭಹಾರೈಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬೆಳೆದು, ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿನಿ ವಂದನಾ ಅವರು ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿದರೆ ಸಾಧನೆ ಸುಲಭ ಎಂದು ತಿಳಿಸಿದರು.
Shimoga News ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿನಿ ವಂದನಾ ಅವರ ಸಾಧನೆ ನಮ್ಮೆಲ್ಲರಿಗೂ ಹೆಮ್ಮ ತರುವಂತಹ ಸಂಗತಿ. ಇಂತಹ ಪ್ರತಿಭೆ ಎಲ್ಲರಿಗೂ ಮಾದರಿ ಎಂದು ಹೇಳಿದರು.
ಇನ್ನರ್ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ನಮ್ಮ ಟಿವಿಯ ಶ್ರೀಕಾಂತ್, ತರುಣ್, ಪ್ರಾಧ್ಯಾಪಕಿ ಡಾ. ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.
Shimoga News ಜ್ಞಾನಕ್ಕಿಂತ ಮಿಗಿಲು ಯಾವುದೂ ಇಲ್ಲ. ಶ್ರದ್ಧೆ,ತಾಳ್ಮೆ,ನಿರಂತರ ಶ್ರಮದಿಂದ ಅಧ್ಯಯನ ಮಾಡಬೇಕು- ಡಾ.ವಿವೇಕ್.ಎಸ್.ರೇವಣಕರ್
Shimoga News ಉತ್ತಮ ಶಿಕ್ಷಣ ಪಡೆದಲ್ಲಿ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿಕ್ಟೋರಿಯ ಆಸ್ಪತ್ರೆ ಸಹಾಯಕ ಪ್ರಾಧ್ಯಾಪಕ ಡಾ. ವಿವೇಕ್ ಎಸ್. ರೇವಣ್ಕರ್ ಹೇಳಿದರು.
ದೈವಜ್ಞ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ದೈವಜ್ಞ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆಯಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ, ಜ್ಞಾನಕ್ಕಿಂತ ಮಿಗಿಲಾದುದು ಯಾವುದೂ ಇಲ್ಲ. ಶ್ರದ್ಧೆ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಸೋಲು ಕೊನೆಯಲ್ಲ, ಸೋಲಿನಿಂದ ಜೀವನದ ಪಾಠಗಳನ್ನು ಕಲಿಯಬೇಕು. ಪ್ರಾಮಾಣಿಕತೆಯಿಂದ ಇರಬೇಕು. ದೇವರನ್ನು ಎಂದಿಗೂ ಮರೆಯಬಾರದು. ಪೋಷಕರು ಮಕ್ಕಳಿಗೆ ಓದುವುದನ್ನು ಮಾತ್ರ ಕಲಿಸದೆ ಜೀವನದ ಪಾಠವನ್ನು ಕಲಿಸಬೇಕು ಎಂದು ಹೇಳಿದರು.
ಸೊಸೈಟಿ ಅಧ್ಯಕ್ಷ ಚಂದ್ರಹಾಸ ಪಿ. ರಾಯ್ಕರ್ ಮಾತನಾಡಿ, ದೈವಜ್ಞ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯು ಎ ದರ್ಜೆಯ ಸಹಕಾರ ಸೊಸೈಟಿಯಾಗಿದೆ. ಸೊಸೈಟಿಯು 95 ಕೋಟಿ ರೂ.ಗೂ ಹೆಚ್ಚು ವ್ಯವಹಾರ ನಡೆಸಿ 73.01 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ವಿವಿಧ ರೀತಿ ಸಾಲಗಳನ್ನು ಕಡಿಮೆ ಬಡ್ಡಿದರದಲ್ಲಿ ನಿಡಲಾಗುತ್ತಿದೆ. ಠೇವಣಿಗಳಿಗೆ ಹೆಚ್ಚಿನ ಬಡ್ಡಿ ನೀಡಲಾಗುತ್ತಿದೆ. ಸುಸ್ತಿದಾರರಾಗಿರುವ ಸದಸ್ಯರು ಸಾಲ ಮರುಪಾವತಿಸಬೇಕು ಎಂದರು.
Shimoga News ಪ್ರತಿಭಾ ಪುರಸ್ಕಾರ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಸೊಸೈಟಿ ಉಪಾಧ್ಯಕ್ಷ ಎಸ್. ಪಾಂಡುರಂಗ ಶೇಟ್, ಖಜಾಂಚಿ ಸುಧಾಕರ ವಿ. ಶೇಟ್, ನಿರ್ದೇಶಕರಾದ ಬಿಳಿಕಿ ಕೃಷ್ಣಮೂರ್ತಿ ಬಿ.ಎನ್, ಕಮಲಾಕ್ಷ ಎಸ್.ಡಿ., ಗುರುರಾಜ ಎಂ. ಶೇಟ್, ಮಂಜುನಾಥ ಜಿ. ಶೇಟ್, ನಾಗರಾಜ ಜಿ. ಶೇಟ್, ವಿಜಯೇಂದ್ರ ಜಿ. ವರ್ಣೇಕರ್, ನಿರ್ಮಲಾ ಪಿ. ಶೇಟ್, ಪ್ರತಿಮಾ ದಿನೇಶ ಶೇಟ್ ಹಾಗೂ ಅಚ್ಚುತ ಶ್ರೀಧರ ಶೇಟ್ ಉಪಸ್ಥಿತರಿದ್ದರು.
Tunga Nagar Police Station ಅಪಘಾತಕ್ಕೆ ಸಿಕ್ಕ ವ್ಯಕ್ತಿ ಚಿಕಿತ್ಸೆಗೆ ತೆರಳಿದವರು ನಾಪತ್ತೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ
Tunga Nagar Police Station ಪ್ರಶಾಂತ್ ಪಿ ಆರ್,45 ವರ್ಷ ಇವರಿಗೆ ರಸ್ತೆ ಅಪಘಾತವಾಗಿ ಬಲಗಾಲಿಗೆ ಗಾಯವಾಗಿದ್ದು, ಅದರ ಚಿಕಿತ್ಸೆಗೆಂದು ಜೂ.25 ರಂದು ಬೆಳಿಗ್ಗೆ 9.30 ಕ್ಕೆ ಆಂಧ್ರಪ್ರದೇಶದ ರಾಯದುರ್ಗಕ್ಕೆ ತೆರಳಿದ್ದು ಅಲ್ಲಿಂದ ಕಾಣೆಯಾಗಿರುತ್ತಾರೆ.
ಕಾಣೆಯಾದ ವ್ಯಕ್ತಿ 5.8 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಕಪ್ಪುಮಿಶ್ರಿತ ಬಿಳಿ ಕೂದಲು ಹೊಂದಿದ್ದು, ಸಿಮೆಂಟ್ ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಬಲಗಾಲಿಗೆ ಫ್ರಾö್ಯಕ್ಚರ್ ಆಗಿದ್ದು, ಕೋಲಿನ ಸಹಾಯದಿಂದ ನಡೆಯುತ್ತಾರೆ. ಎಡಗೈ ತೋರು ಬೆರಳು ಮೇಲೆ ರೇಣುಕಮ್ಮ ಹಾಗೂ ಮುಂಗೈ Tunga Nagar Police Station ಹಿಂಭಾಗದಲ್ಲಿ ರೋಹಿತ್ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.
ಯಾರಿಗಾದರೂ ಕಾಣೆಯಾದ ವ್ಯಕ್ತಿಯ ಸುಳಿವು ಪತ್ತೆಯಾದಲ್ಲಿ ದೂ.ಸಂ: 08182-261400,261418, 9480803332, 94808803350 ಗೆ ಸಂಪರ್ಕಿಸಬಹುದೆAದು ಎಂದು ಗ್ರಾಮಾಂತರ ಪೊಲೀಸ್ ಠಾಣಾ ತನಿಖಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ginger Leaf Spot Disease ಶುಂಠಿಗೆ ಎಲೆಚುಕ್ಕೆ ರೋಗ.ನಿಯಂತ್ರಣಾ ಕ್ರಮಗಳ ಬಗ್ಗೆ ಇರುವಕ್ಕಿಕೃಷಿ ವಿವಿ ತಜ್ಞರಿಂದ ಸಲಹೆ
Ginger Leaf Spot Disease ಜಿಲ್ಲೆಯ ಎಲ್ಲಾ ಶುಂಠಿ ಬೆಳೆಯುವ ಪ್ರದೇಶಗಳಲ್ಲಿ ಪೈರಿಕುಲೇರಿಯಾ ಎಂಬ ಶಿಲೀಂಧ್ರದಿಂದ ಎಲೆಚುಕ್ಕೆ ರೋಗವು ಹೊಸದಾಗಿ ಉಲ್ಬಣಗೊಂಡಿದ್ದು, ಶುಂಠಿ ಬೆಳೆಗಾರರು ನಿರ್ವಹಣಾ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕೆಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ರೋಗವು ಗಾಳಿಯಿಂದ ಹಾಗೂ ಮಳೆ ಹನಿಗಳ ಮೂಲಕ ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ಮತ್ತು ಒಂದು ಹೊಲದಿಂದ ಮತ್ತೊಂದೆಡೆಗೆ ಬೇಗನೆ ಹರಡಲಿದೆ. ಅತೀ ಹೆಚ್ಚಿನ ಮಳೆ ಮತ್ತು ಅಧಿಕ ತೇವಾಂಶದ ಜೊತೆಗೆ ಕಡಿಮೆ ತಾಪಮಾನ ರೋಗ ಹರಡಲು ಪೂರಕ ವಾತಾವರಣವಾಗಿದೆ.
ಈ ರೋಗದಿಂದ ಶುಂಠಿ ಬೆಳೆಗಳಲ್ಲಿ ಮೊದಲಿಗೆ ಎಲೆಗಳ ಮೇಲೆ ಕಪ್ಪು ಅಥವಾ ಹಸಿರು ಬಣ್ಣದ ಚುಕ್ಕೆಗಳು ಕಂಡುಬರಲಿದ್ದು, ಸುತ್ತಲೂ ಕಂದು ಬಣ್ಣದಿಂದ ಕೂಡಿರುತ್ತದೆ. ಕ್ರಮೇಣವಾಗಿ ಸಸ್ಯದ ಎಲ್ಲಾ ಭಾಗಗಳಿಗೆ ಈ ಚುಕ್ಕೆಗಳು ಆವರಿಸಿ ಎಲೆಗಳು ಒಣಗಿ, ಸಸಿಗಳು ಸಾಯಲಾರಂಭಿಸುತ್ತವೆ.
ನಿರ್ವಹಣಾ ಕ್ರಮಗಳು:
Ginger Leaf Spot Disease ಜಿಲ್ಲೆಯಲ್ಲಿ ಶುಂಠಿ ಬೆಳೆಗಳಲ್ಲಿ ಪೈರಿಕುಲೇರಿಯಾ ಎಂಬ ಶಿಲೀಂಧ್ರದಿAದ ಎಲೆಚುಕ್ಕೆ ರೋಗವು ಹೆಚ್ಚಾಗಿ ಉಲ್ಭಣಿಸುತ್ತಿದ್ದು, ರೋಗವನ್ನು ಹತೋಟಿಗೆ ತರಲು ಶಿಲೀಂಧ್ರ್ರನಾಶಕಗಳಾದ ಹೆಕ್ಸಾಕೋನೋಜೋಲ್ 25 ಇಸಿ 1 ಮಿ.ಲೀ. ಅಥವಾ ಟೆಬುಕೋನೋಜೋಲ್ 25 ಇಸಿ 1 ಮಿ.ಲೀ. ಅಥವಾ ಟೆಬುಕೋನೋಜೋಲ್ + ಟ್ರೆöÊಪ್ಲಾಕ್ಸಿಸ್ಟೊçಬಿನ್ 0.5 ಮಿ.ಲೀ. ಅಥವಾ ಅಜಾಕ್ಸಿಸ್ಟೊçÃಬಿನ್ + ಡೈಪೆನ್ಕೋನೋಜೋಲ್ 0.5 ಮಿ.ಲೀ. ಒಂದು ಲೀಟರ್ ನೀರಿಗೆ ಬೆರೆಸಿ ಜೊತೆಗೆ ಒಂದು ಮಿ.ಲೀ. ಅಂಟು ಅಥವಾ ರಾಳವನ್ನು ಸೇರಿಸಿ ಮಳೆ ಬಿಡುವಿನ ಸಮಯದಲ್ಲಿ ಸಿಂಪಡಿಸಬೇಕು. ಮತ್ತೆ ಹದಿನೈದು ದಿನಗಳ ಅಂತರದಲ್ಲಿ ಮೇಲೆ ತಿಳಿಸಿರುವ ಯಾವುದಾದರೊಂದು ಶಿಲೀಂಧ್ರ ನಾಶಕವನ್ನು 2 ರಿಂದ 3 ಬಾರಿ ಸಿಂಪಡಿಸಬೇಕು.
ಮೇಲೆ ತಿಳಿಸಿರುವ ವಾತಾವರಣವು ಕೆಂಪು ಕೊಳೆ ಹಾಗೂ ಹಸಿರು ಕೊಳೆ ರೋಗಗಳಿಗೂ ಸೂಕ್ತವಾಗಿದ್ದು, ಎಲೆ ಚುಕ್ಕೆ ರೋಗದ ಹತೋಟಿಗೆ ಉಪಯೋಗಿಸುವ ಶಿಲೀಂಧ್ರ ನಾಶಕದ ಜೊತೆಯಲ್ಲಿ ವಾಲಿಡಮೈಸಿನ್ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.
ಪೈರಿಕುಲೇರಿಯಾ ಎಲೆಚುಕ್ಕೆ ರೋಗಕ್ಕೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಇರುವಕ್ಕಿಯ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಸಸ್ಯ ರೋಗಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ
ಡಾ. ಹೆಚ್.ಬಿ.ನರಸಿಂಹಮೂರ್ತಿ-8050173788, ಶಿವಮೊಗ್ಗ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಸ್ಯ ರೋಗಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಇಮ್ರಾನ್ ಖಾನ್, ಹೆಚ್. ಎಸ್.- 9379228200 ಹಾಗೂ ಇರುವಕ್ಕಿ ರೈತರ ತರಬೇತಿ ಸಂಸ್ಥೆಯ ವಿಸ್ತರಣಾ ನಿರ್ದೇಶನಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕೃಷ್ಣ ರೆಡ್ಡಿ, ಪಿ. – 9483162891 ಇವರುಗಳನ್ನು ಸಂಪರ್ಕಿಸಬಹುದು ಎಂದು ರೈತರ ತರಬೇತಿ ಸಂಸ್ಥೆಯ ವಿಸ್ತರಣಾ ನಿರ್ದೇಶಕ ಡಾ.ಜಿ.ಕೆ.ಗಿರಿಜೇಶ್ ತಿಳಿಸಿದ್ದಾರೆ.
Keladi Shivappa Nayaka University ಕೃಷಿಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
Keladi Shivappa Nayaka University ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್ಎಸ್ಎಲ್ಸಿ ಪಾಸ್ ಆದರಿಗೆ ಅವಕಾಶ ನೀಡಲಾಗಿದ್ದು, ವಿಶ್ವವಿದ್ಯಾಲಯದ ವೆಬ್ಸೈಟ್ www.uahs.edu.in ಮೂಲಕ ಅರ್ಜಿ ಪಡೆದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿವಮೊಗ್ಗ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200 ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಇರುತ್ತದೆ.
Keladi Shivappa Nayaka University ಕೋರ್ಸ್ ಎರಡು ಸೆಮಿಸ್ಟರ್ಗಳಲ್ಲಿ ನಡೆಯಲಿದ್ದು, 20 ಸಾವಿರ ರೂ. ವಿದ್ಯಾರ್ಥಿ ಶುಲ್ಕವಿರುತ್ತದೆ. ಅರ್ಜಿ ಸಲ್ಲಿಸುವರು ರಾಷ್ಟಿçÃಕೃತ ಬ್ಯಾಂಕ್ನಲ್ಲಿ Comptroller, KSNUAHS, Iruvakki, Shivamogga-577412 payable at Shivamogga ಇವರ ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿಯನ್ನು ಸಲ್ಲಿಸಬೇಕೆಂದು ವಿಶ್ವವಿದ್ಯಾಲಯದ ಸಂಯೋಜಕರು ತಿಳಿಸಿದ್ದಾರೆ.
Rotary Club Shimoga Midtown ಗಿಡ ನೆಟ್ಟಾಗ ಸಿಗುವ ತೃಪ್ತಿ ,ಪ್ರಾಣಿಗಳಿಗೆ ಆಹಾರ ತಿನ್ನಿಸಿದಾಗಿನ ಆನಂದ ಅಮೂಲ್ಯ- ಅಮರ ಅಕ್ಷರ್
Rotary Club Shimoga Midtown ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಹಾಗೂ ಇನ್ನಲ್ ವೀಲ್ ನ ವತಿಯಿಂದ
ಹುಲಿ ಮತ್ತು ಸಿಂಹಧಾಮದಲ್ಲಿ ಪರಿಸರ ಜಾಗೃತಿ ಮತ್ತು ಪ್ರಾಣಿಗಳ ಕಲ್ಯಾಣ ಕಾರ್ಯಕ್ರಮ
ಶಿವಮೊಗ್ಗ: ಜಿಟಿಜಿಟಿ ಮಳೆಯ ಹಸಿರು ಹನಿ ನಡುವೆ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ವತಿಯಿಂದ “ಪರಿಸರ ಜಾಗೃತಿ ಮತ್ತು ಪ್ರಾಣಿಗಳ ಕಲ್ಯಾಣ ಕಾರ್ಯಕ್ರಮ”ವನ್ನು ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಹುಲಿ ದತ್ತು ತೆಗೆದುಕೊಳ್ಳುವುದು ಮತ್ತು ಸಸಿ ನೆಡುವ ಮೂಲಕ ಪ್ರಕೃತಿಗೆ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮವು ಗಿಡಕ್ಕೆ ನೀರು ಹಾಕುವ ಸಂಕೇತಾತ್ಮಕವಾಗಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಈ ಹಸಿರು ಹಬ್ಬದಲ್ಲಿ ರೋಟರಿ ಬಂಧುಗಳು ಹಾಗೂ ಅತಿಥಿಗಳು ಪ್ರಕೃತಿಗೆ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷರಾದ ಕೆ.ಎಸ್.ವಿಶ್ವನಾಥ ನಾಯಕ ಇವರ ಸಾರಥ್ಯದಲ್ಲಿ ರೋಟರಿ ಕುಟುಂಬ ಹಾಗೂ ಅತಿಥಿಗಳನ್ನು ಸ್ವಾಗತಿಸಿ,ಪ್ರಕೃತಿಯೊಂದಿಗಿನ ಸ್ನೇಹವೇ ಶಾಶ್ವತ ಮಾನವೀಯ ಮೌಲ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಐಎಫ್ಎಸ್. ಕಾರ್ಯಕಾರಿ ನಿರ್ದೇಶಕ ಅಮರ್ ಅಕ್ಷರ್ ಮಾತನಾಡಿ, ಗಿಡ ನೆಟ್ಟಾಗ ಸಿಗುವ ತೃಪ್ತಿ, ಪ್ರಾಣಿಗಳಿಗೆ ಆಹಾರ ಕೊಟ್ಟಾಗ ಸಿಗುವ ಆನಂದ ಅಮೂಲ್ಯ. ಆದರೆ ಕಾಡಿನ ಅಂಚಿನ ಪ್ರಾಣಿಗಳಿಗೆ ಮನುಷ್ಯರು ಆಹಾರ ನೀಡುವುದು ಅವರ ನೈಸರ್ಗಿಕ ಜೀವನ ಕ್ರಮವನ್ನು ವ್ಯತ್ಯಾಸಗೊಳಿಸುತ್ತದೆ. ಪ್ರಕೃತಿಯಿಂದಲೇ ಬೇಟೆಯಾಡಿ, ಮರ ಹತ್ತಿ ಹಣ್ಣು ಕಿತ್ತು ತಿನ್ನಬೇಕಾದ ಶಕ್ತಿ–ಚಾತುರ್ಯ ಕುಂದುತ್ತದೆ. ನಿಧಾನವಾಗಿ ಮುಂದಿನ ಪೀಳಿಗೆ ಮರಗಳನ್ನು ಹತ್ತಿ ಹಣ್ಣು ಕಿತ್ತು ತಿನ್ನುವ ಬದಲು, ರಸ್ತೆಬದಿಯಲ್ಲಿ ಕೈ ಚಾಚಿ ಬೇಡುವ ಮಟ್ಟಕ್ಕೆ ಇಳಿಯುವ ದುರಂತ ಪರಿಸ್ಥಿತಿ ನಿರ್ಮಾಣವಾಗಬಹುದು. ಇದು ಕೇವಲ ವರ್ತನೆಯಲ್ಲಿ ಮಾತ್ರವಲ್ಲ, ಅವುಗಳ ಜೀನ್ಸ್ಗಳ ಗುಣಾತ್ಮಕ ಶ್ರೇಷ್ಠತೆಯಲ್ಲಿಯೂ ಅಪಾಯಕಾರಿ ಬದಲಾವಣೆ ತರುತ್ತದೆ. ಆದ್ದರಿಂದ ನೈಸರ್ಗಿಕ ಸಮತೋಲನವನ್ನು ಕಾಪಾಡುವುದು ನಮ್ಮ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಚ್ಚರಿಸಿದರು.
Rotary Club Shimoga Midtown ರೋಟರಿ ಸದಸ್ಯರನ್ನು ಪ್ರಕೃತಿ ಹಾಗೂ ಪ್ರಾಣಿಗಳ ಸಂರಕ್ಷಣೆಗೆ ಮತ್ತಷ್ಟು ಪ್ರೇರೇಪಿಸಿ, ಒಂದು ಹುಲಿಯನ್ನು ದತ್ತು ಪಡೆಯಲು ರೋಟರಿ ಮುಂದಾಗಬೇಕು ಎಂದು ಮನವಿ ಮಾಡಿದರು.
ಅದಕ್ಕೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷ ವಿಶ್ವನಾಥ ನಾಯಕ ತಕ್ಷಣವೇ ಒಂದು ಹುಲಿಯನ್ನು ಒಂದು ತಿಂಗಳಿಗೆ ದತ್ತು ಪಡೆದು ಅಗತ್ಯ ವೆಚ್ಚವನ್ನು ಭರಿಸಿದರು. ದತ್ತು ಪ್ರಮಾಣ ಪತ್ರವನ್ನು ಸ್ವೀಕರಿಸಿ ಎಲ್ಲರ ಹೃದಯ ಗೆದ್ದರು.
ಶಿವಮೊಗ್ಗ ಬಯೋ ಡೈವರ್ಸಿಟಿ ಫಾರೆಸ್ಟ್ ಟ್ರಸ್ಟ್ ಕಾರ್ಯದರ್ಶಿ ಆನಂದ್ ಮೂರ್ತಿ.ಎಂ.ಪಿ ಮಾತನಾಡಿ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಪರಿಸರ ಸಂರಕ್ಷಣೆಯಲ್ಲಿ ಹಸಿರು ಕ್ರಾಂತಿಯನ್ನು ಮೂಡಿಸುತ್ತಿದೆ. ಸಸಿ ನೆಡುವುದರಿಂದ ಪ್ರಾಣಿಗಳ ದತ್ತು ಯೋಜನೆವರೆಗೂ ನೈಸರ್ಗಿಕ ಸಂಪತ್ತನ್ನು ಉಳಿಸುವಲ್ಲಿ ಇಂತಹ ಸಂಸ್ಥೆಗಳ ಪಾತ್ರ ಅಮೂಲ್ಯ ಎಂದು ಸವಿಸ್ತಾರವಾಗಿ ವಿವರಿಸಿದರು.
ವಲಯ ಸಂರಕ್ಷಣಾಧಿಕಾರಿಯ ನಾಗೇಶ್ ಬಳಗಾರ್, 1998ರಿಂದ ಹುಲಿ–ಸಿಂಹಧಾಮದ ಇತಿಹಾಸ ಹಾಗೂ ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳನ್ನು ನೆನಪಿಸಿಕೊಂಡು, ಪ್ರವಾಸಿಗರಿಂದಲೇ ಹಾಗೂ ಅವರ ಸಹಾಯ ಹಸ್ತದಿಂದಲೇ ಈ ಪ್ರಾಣಿಗಳಿಗೆ ಉತ್ತಮ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸ್ಪೂರ್ತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿ.ಎನ್.ಮಲ್ಲೇಶ್ ಇನ್ನರ್ ವೀಲ್ ಅಧ್ಯಕ್ಷೆ ಶೀಲಾ ಸುರೇಶ್, ವಲಯ ಸೇನಾನಿ ಎಸ್.ಪಿ.ಶಂಕರ್, ಪಿ.ಆರ್.ಓ ಸಮೀನಾ, ಮಾಜಿ ಅಸಿಸ್ಟೆಂಟ್ ಗವರ್ನರ್ ಜಗನ್ನಾಥ್, ಆನಂದಮೂರ್ತಿ , ಸದಸ್ಯರಾದ ಬಸವರಾಜ್, ಧನರಾಜ್, ದೇವೇಂದ್ರಪ್ಪ, ಪ್ರತಾಪ್, ಎಂ.ಎಂ.ರವಿ, ಇವರಲ್ಲದೆ ರೋಟೆರಿಯ ಹೊಸ ಸದಸ್ಯರು ಹಾಗೂ ಇನ್ನರ್ವೀಲ್ ಸದಸ್ಯರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
Red Cross ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವವುಳಿಸಿ- ಡಿ.ಕಿಶೋರ್ ಕುಮಾರ್
Red Cross ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸಲು ನೆರವಾಗಬೇಕು ಎಂದು ಶಿವಮೊಗ್ಗ ರೋಟರಿ ಪೂರ್ವದ ಅಧ್ಯಕ್ಷರಾದ ಕಿಶೋರ್ ಕುಮಾರ್ ಡಿ ಅವರು ಕರೆ ಕೊಟ್ಟರು
ಶಿವಮೊಗ್ಗ ರೋಟರಿ ಪೂರ್ವ, ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರ ಸ್ಪಂದನ ಹೆಲ್ತ್ ಫೌಂಡೇಶನ್ ಟ್ರಸ್ಟ್ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್ಎಸ್ಎಸ್ ಘಟಕಗಳು ಎನ್ ಸಿ ಸಿ ಮತ್ತು ಇತರೇ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನದ ಮಹತ್ವದ ಬಗ್ಗೆ ತಮ್ಮ ಸ್ವಂತ ಅನುಭವವನ್ನು ವಿವರಿಸುತ್ತಾ ಇಂತಹ ಶಿಬಿರ ಏರ್ಪಡಿಸುವುದು ಅತ್ಯಂತ ಶ್ರೇಷ್ಠವಾದ ಕೆಲಸ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಮಮತಾ ರವರು ಮಾತನಾಡುತ್ತಾ ತಮ್ಮ ಕಾಲೇಜಿನಲ್ಲಿ ವರ್ಷಕ್ಕೆ ಮೂರು ಬಾರಿಯಾದರೂ ಇಂಥ ಶಿಬಿರವನ್ನು ಏರ್ಪಡಿಸುತ್ತೇವೆ ಎಂದು ತಿಳಿಸುತ್ತಾ ನೆರೆದಿದ್ದ ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವಂತೆ ಪ್ರೇರೇಪಿಸಿದರು
ಇದೆ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ರೋಟರಿ ಪೂರ್ವದ ಕಾರ್ಯದರ್ಶಿಯಾದ ಧನಂಜಯ್ ರವರು ರಕ್ತದಾನ ಮಾಡು ದರಿಂದ ಉಂಟಾಗುವ ಆರೋಗ್ಯದ ಪ್ರಯೋಜನಗಳ ಬಗ್ಗೆ ವಿವರಿಸಿದರು.
Red Cross ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ , ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಲು ಸಹಾಯವಾಗುತ್ತದೆ ಅಲ್ಲದೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಮತ್ತೋರ್ವ ಅತಿಥಿ ಸ್ವಯಂ ಪ್ರೇರಿತ ರಕ್ತ ದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದರು
ಉಪಸ್ಥಿತರಿದ್ದ ವೈದ್ಯಾಧಿಕಾರಿಗಳು, 119ನೇ ಬಾರಿ ರಕ್ತದಾನ ಮಾಡಿರುವ ಹಿರಿಯ ರಕ್ತದಾನಿ ಧರಣೇಂದ್ರ ದಿನಕರ್, ಆರ್.ಗಿರೀಶ್ ಮತ್ತಿತರು ಸುರಕ್ಷಿತ ರಕ್ತದಾನದ ಮಹತ್ವದ ಬಗ್ಗೆ ಸಭೆಗೆ ವಿವರಿಸಿದರು . ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಸದಸ್ಯರಾದ ಶ್ರೀಯುತ ಆರ್ ಮನೋಹರ್,,ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ್ ಕೆ.ಎಂ, ಮಾಜಿ ಪ್ರಾಂಶುಪಾಲರಾದ ಜಗದೀಶ್
ಮತ್ತು ಇತರೆ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿ ರಕ್ತದಾನಿಗಳು ಪಾಲ್ಗೊಂಡಿದ್ದರು
Santosh Lad ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ
Santosh Lad ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಂದು ಬೆಳಗಾವಿಯ ಯಮನಾಪೂರ ಕೈಗಾರಿಕ ಪ್ರದೇಶದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ,ಬೆಳಗಾವಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರಿಗೆ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳಿಗೆ ಉದ್ಘಾಟನೆ ನೆರವೇರಿಸಿದರು. ಇದರೊಂದಿಗೆ ವೇದಿಕೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್ “ವಿತರಿಸಿ ಇಲಾಖೆಯ ಯೋಜನೆಗಳ ಕುರಿತು ಅರಿವು Santosh Lad ಮೂಡಿಸಿದರು.ಇದಕ್ಕೂ ಮುನ್ನ ಜಿಲ್ಲಾ ಕಾರ್ಮಿಕರ ಆಗುಹೋಗುಗಳ ಬಗ್ಗೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಉದ್ಘಾಟನಾ ಹಾಗೂ ಸಭಾ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಬಾಬಾ ಸಾಹೇಬ್ ಪಾಟೀಲ್,ಶ್ರೀನಿವಾಸ ಮಾನೆ ಸೇರಿದಂತೆ ಜಿಲ್ಲೆಯ ಪ್ರಮುಖರು, ಕಾರ್ಮಿಕ ಇಲಾಖೆಯ ಪ್ರಮುಖ ಅಧಿಕಾರಿಗಳು ಸಚಿವರೊಂದಿಗೆ ಪಾಲ್ಗೊಂಡಿದ್ದರು.
Missing Case ಶಿವಮೊಗ್ಗದಿಂದ ಮಹಿಳೆ ನಾಪತ್ತೆ.ಸುಳಿವು ಸಿಕ್ಕವರು ಮಾಹಿತಿ ನೀಡಲು ಕೋಟೆ ಪೊಲೀಸ್ ಪ್ರಕಟಣೆ.
Missing Case ಖಿನ್ನತೆಯಿಂದ ಬಳಲುತ್ತಿದ್ದ ಸುಮಾರು 75 ವರ್ಷದ ನಿಂಗಮ್ಮ ಎಂಬುವವರು ಜು.12 ರಂದು ಮಧ್ಯಾಹ್ನ 3.45ಕ್ಕೆ ಮನೆ ಆಚೆ ಬಂದಿದ್ದು, ವಾಪಾಸ್ ಮನೆಗೆ ಬರದೆ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿ ಸುಮಾರು 5.5 ಡಿ ಎತ್ತರ, ಕೋಲು ಮುಖ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಚೆಕ್ಸ್, ಬಣ್ಣಧ Missing Case ಬ್ಲೌಸ್ ಹಾಗೂ ಗ್ರೇ ಬಣ್ಣದ ಸೇರೆ ಧರಿಸಿದ್ದಾರೆ, ಇವರು ಕನ್ನಡ ಮತ್ತು ಉರ್ದು ಭಾಷೆ ಮಾತಾನಾಡುತ್ತಾರೆ.
ಕಾಣೆಯಾದ ವ್ಯಕ್ತಿಯು ಎಲ್ಲಿಯಾದರೂ ಕಂಡುಬAದಲ್ಲಿ ಕೋಟೆ ಪೊಲೀಸ್ ಠಾಣೆ, ದೂ.ಸಂ: 08182-261415, 08182-261404, 261400, 08192-237830, sdposhimogashi@ksop.gov.in ಮಾಹಿತಿ ನೀಡಬೇಕೆಂದು ಕೋಟೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
