Friday, February 6, 2026
Friday, February 6, 2026
Home Blog Page 23

Chess ಜನವರಿ 18 ರಾಜ್ಯಮಟ್ಟದ ರಾಪಿಡ್ ಚೆಸ್ ಪಂದ್ಯಾವಳಿ

0

Chess ಜನವರಿ 18 ಭಾನುವಾರ ದಂದು ಚಾಣಕ್ಯ ಚೆಸ್ ಸ್ಕೂಲ್ ಹಾಗೂ ಭಾರತೀಯ ವಿದ್ಯಾ ಭವನ ಸ್ಕೂಲ್ ಸಹಯೋಗದಲ್ಲಿ, ಶಿವಮೊಗ್ಗ ನಗರದ ವಿದ್ಯಾ ನಗರ ಬಡಾವಣೆಯ ಭಾರತೀಯ ವಿದ್ಯಾ ಭವನ ಶಾಲೆಯಲ್ಲಿ ರಾಜ್ಯ ಮಟ್ಟದ ರಾಪಿಡ್ ಚೆಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಪಂದ್ಯದಲ್ಲಿ ರಾಜ್ಯದ ಎಲ್ಲಾ 17ವರ್ಷ ವಯೋಮಿತಿಯ ಮಕ್ಕಳು ಭಾಗವಹಿಸಬಹುದು.

ಆಸಕ್ತರು ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9845830133 ,9741591672

Shimoga News ರಾಜ್ಯ “ಯುವ ಪ್ರಶಸ್ತಿ,- 2025-26” . ಶಿವಮೊಗ್ಗದ ಎಸ್.ವಿ.ರಂಜಿತಾ ಆಯ್ಕೆ.

0

Shimoga News ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ವತಿಯಿಂದ ಕನ್ನಡ ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಬಾಲಾಜಿ ಅವರ ನೇತೃತ್ವದಲ್ಲಿ ನೀಡುವ ‘ಯುವ ಸಂಭ್ರಮ 2026’ ‘ರಾಜ್ಯ ಯುವ ಪ್ರಶಸ್ತಿ 2025-26’ಕ್ಕೆ ಶಿವಮೊಗ್ಗ ಜಿಲ್ಲಾ ಜಾನಪದ ಪರಿಷತ್, ಯುವ ಬ್ರಿಗೇಡ್ ಜಾನಪದ ಕಲಾವಿದೆ, ನಿರೂಪಕಿ ಎಸ್.ವಿ.ರಂಜಿತಾ ಆಯ್ಕೆಯಾಗಿದ್ದಾರೆ.

Shimoga News ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 18ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆಯಲಿದೆ. ಡಿವಿಎಸ್ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಭಿನಂದಿಸಿದ್ದಾರೆ.

B.Y. Raghavendra ಕಾಯಕವೇ ಶ್ರೇಷ್ಠ, ಮನುಷ್ಯತ್ವ ಬೋಧಿಸುವುದೇ ನಿಜವಾದ ಧರ್ಮ- ಬಿ.ವೈ.ರಾಘವೇಂದ್ರ

0

B.Y. Raghavendra ಕಾಯಕವೇ ಎಲ್ಲಕ್ಕಿಂತ ಶ್ರೇಷ್ಟ. ಮನುಷ್ಯತ್ವ ಬೋಧಿಸುವುದೇ ನಿಜವಾದ ಧರ್ಮ ಎಂದು ನಂಬಿ ಅದನ್ನೇ ಪ್ರತಿಪಾತಿಸುತ್ತಿದ್ದ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರು ನಮ್ಮೆಲ್ಲರಿಗೂ ಆದರ್ಶ ಪುರುಷರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಸಿದ್ದರಾಮೇಶ್ವರರು ನೇರ ಮತ್ತು ನಿಷ್ಟುರ ನುಡಿಯ ದಾರ್ಶಜನಿಕರು. ಬಸವಾದಿ ಶರಣರೊಂದಿಗೆ ಸಮ ಸಮಾಜದ ನಿರ್ಮಾಣದಲ್ಲಿ ತೊಡಗಿದ್ದವರು. 12 ನೇ ಶತಮಾನದಲ್ಲೇ ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ನೀರಾವರಿ ಕ್ರಾಂತಿಗೆ ನಾಂದಿ ಹಾಡಿದವರು. ಕುಡಿಯುವ ನೀರಿನ ಯೋಜನೆಗಳಿಗೆ ಇವರೇ ಪ್ರೇರಕ ಶಕ್ತಿ .
ಇವರು ದೂರದೃಷ್ಟಿವುಳ್ಳ ಕಾರ್ಯಕ್ರಮ ನೀಡುತ್ತಿದ್ದರು. ಹಾಗೂ ಜನ ಸೇವೆಯ ಮೂಲಕ ಶಿವಾರಾಧನೆ ಮಾಡುತ್ತಿದ್ದರು. ಇಂತಹ ದಾರ್ಶನಿಕರ ಜೀವನ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ಈ ಸಮಾಜಕ್ಕೆ, ನಮ್ಮ ಜೀವನಕ್ಕೆ ನಾವು ನ್ಯಾಯ ಒದಗಿಸಬಹುದು.
ಮೂಢನಂಬಿಕೆ, ಅಸಮಾನತೆ, ತಾರತಮ್ಯ ತಿರಸ್ಕರಿಸಿದ್ದ ಅವರು ಮನುಷ್ಯತ್ವವೇ ಮುಖ್ಯವೆಂದು ಮನುಕುಲದ ಏಳ್ಗೆಗಾಗಿ ದುಡಿದರು. ಇಂತಹ ಮಹಾನ್ ಪುರುಷರ ಮೌಲ್ಯಗಳು, ತತ್ವಗಳು ಯುವ ಪೀಳಿಗೆಗೆ ಎಂದಿಗೂ ಮಾದರಿಯಾಗಿವೆ ಎಂದ ಅವರು ಶ್ರೀ ಸಿದ್ದರಾಮೇಶ್ವರರಂತೆ ಅವರ ಸಮಾಜ ಕೂಡ ಶ್ರೇಷ್ಠವಾಗಿದೆ ಎಂದರು.
B.Y. Raghavendra ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ದೇಶಾದ್ರಿ ಹೊಸ್ಮನೆ ಉಪನ್ಯಾಸ ನೀಡಿ ಮಾತನಾಡಿ, ಯಾವುದೇ ಮಹಾನ್‌ಪುರುಷರ, ದಾರ್ಶನಿಕರ ಜಯಂತಿಗಳು ಆತ್ಮಾವಲೋಕನಕ್ಕೆ ಒಂದು ವೇದಿಕೆಯಾಗಿ, ಅವರ ಜೀವನ ಚರಿತ್ರೆ, ಮೌಲ್ಯಗಳು, ತತ್ವಗಳನ್ನು ಅರಿತು ಅವುಗಳನ್ನು ಅಳವಡಿಸಿಕೊಂಡು ಅವರ ದಾರಿಯಲ್ಲಿ ನಡೆಯುವ ಪ್ರಯತ್ನಗಳಾಗಬೇಕೇ ವಿನಃ ಕೇವಲ ಸಭೆ ಸಭಾರಂಭಗಳಿಗೆ ಸೀಮಿತವಾಗಬಾರದು ಎಂದರು.
ಶ್ರೀ ಸಿದ್ದರಾಮೇಶ್ವರರು ಕಾಯಕಯೋಗಿಗಳು. ಕಾಯಕವೇ ಸರ್ವಶ್ರೇಷ್ಟವೆಂದು ಅದನ್ನೇ ನಂಬಿ ನಡೆದವರು. 12 ನೇ ಶತಮಾನದಲ್ಲಿಯೇ ಯಾವುದೇ ಆಧುನಿಕ ಇಂಜಿನಿಯರಿAಗ್ ವ್ಯವಸ್ಥೆ ಇಲ್ಲದ ಕಾಲದಲ್ಲಿ ಜನ-ಜಾನುವಾರುಗಳಿಗೆ ಅತ್ಯುತ್ತಮವಾದ ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು. ಸಮ ಸಮಾಜದ ನಿರ್ಮಾಣಕ್ಕಾಗಿ ಬಸವಾದಿ ಶರಣರೊಂದಿಗೆ ಹೋರಾಡಿದ್ದರು. ಅತ್ಯುತ್ನತ ಉನ್ನತ ಸ್ಥಾನವಾದ ಅನುಭವ ಮಂಟಪದ 3 ನೇ ಪೀಠಾಧ್ಯಕ್ಷರಾಗಿದ್ದರು.
12 ನೇ ಶತಮಾನದ ವಚನ ಚಳವಳಿಯನ್ನು ನಾವ್ಯಾರೂ ಮರೆಯಲಿಕ್ಕೆ ಸಾಧ್ಯವಿಲ್ಲ. ಅಂತಹ ಚಳವಳಿಯಲ್ಲಿ ಇವರು ಮುಂಚೂಣಿಯಲ್ಲಿದ್ದು, ಬಸವಣ್ಣನವರ ಸಮ ಸಮಾಜ ನಿರ್ಮಾಣ ಪರಿಕಲ್ಪನೆಯಿಂದ ಪ್ರೇರೇಪಣೆಗೊಂಡು ಅದೇ ಮಾರ್ಗದಲ್ಲಿ ನಡೆದವರು.
ಶ್ರಮ ಸಂಸ್ಕೃತಿಯಲ್ಲಿ ನಂಬಿಕೆ ಇರಿಸಿದ್ದ ಇವರು ಮೂರ್ತಿ ಪೂಜೆಗಿಂತ ಕಾಯಕವೇ ಶ್ರೇಷ್ಟವೆಂದು ನಡೆದವರು. ಮನುಕುಲದ ಏಳ್ಗೆಯೇ ಮುಖ್ಯ ಎಂದು ನಂಬಿದವರು. ನಾವು ಕೂಡ ಇಂತಹ ದಾರ್ಶನಿಕರ ದೇವಾಲಯ ನಿರ್ಮಿಸಿ ಇವರ ಮೂರ್ತಿ ಪೂಜೆ ಮಾಡುವುದಕ್ಕಿಂತ ಇವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ನಡೆಯಬೇಕು. ಶೋಷಿತ ಸಮಾಜಗಳ ಸಂಘಟಕರಾದ ಇವರು ಸಂಘಟನೆಯ ಪ್ರತಿಪಾದಕರಾಗಿದ್ದು, ನಾವೆಲ್ಲ ಸಂಘಟಿತರಾಗಬೇಕು ಹಾಗೂ ಇವರ ಆದರ್ಶಗಳ ಅಡಿಯಲ್ಲಿ ನಾವು ಸಮಾಜ ಕಟ್ಟಬೇಕು.
ಕೇವಲ ಮೂರ್ತಿ ಪೂಜೆ ಮಾಡಿದರೆ ಸಮಾಜ ಎಚ್ಚರಗೊಳ್ಳಲು ಸಾಧ್ಯವಿಲ್ಲ. ವಚನಕಾರರ ಅನುಯಾಯಿಗಳಾದ ನಮ್ಮ ಸಮಾಜ ಆಚರಣೆಗಳಿಗೆ ಬಲಿಯಾಗುತ್ತಿದ್ದೇವೆ. ಆಚರಣೆಗಳಿಗಿಂತ ತಿಳುವಳಿಕೆಯ ಜ್ಞಾನದ ಕಡೆ ನಡೆಯಬೇಕಿದೆ ಎಂದ ಅವರು ಶ್ರೀ ಸಿದ್ದರಾಮೇಶ್ವರ ಬಾಲ್ಯ ಸೇರಿದಂತೆ ಜೀವನ ಚರಿತ್ರೆ ಕುರಿತು ವಿವರಿಸಿದರು.
ಶ್ರೀ ಸಿದ್ದರಾಮೇಶ್ವರರು ಅಧಿಕಾರದ ಆಸೆ ತಿರಸ್ಕರಿಸಿ, ಬಸವಣ್ಣನವರ ಸಂಪರ್ಕ ಬೆಳೆಸಿ ವಚನ ಚಳವಳಿಯಲ್ಲಿ ಪಾಲ್ಗೊಳ್ಳುತ್ತಾರೆ. ಜಾತಿ ವ್ಯವಸ್ಥೆ ವಿರುದ್ದ ಹೋರಾಡುತ್ತಾರೆ.
ಕಲ್ಲು, ಮಣ್ಣು, ನೀರಿನ ಮೂಲಕ ದೊಡ್ಡ ದೊಡ್ಡ ಕಟ್ಟಡಗಳು, ಅರಮನೆ, ಅಣೆಕಟ್ಟು ಇತರೆ ಕಟ್ಟುವ ಸಂಸ್ಕೃತಿಯ ಪ್ರತೀಕವಾದ ನಮ್ಮ ಸಮಾಜ ಕೀಳರಿಮೆ ಬಿಟ್ಟು ಉನ್ನತ ಸ್ಥಾನದಲ್ಲಿದ್ದೇವೆ ಎಂದು ಹೆಮ್ಮೆ ಪಡಬೇಕು. ಸಂಘಟಿತರಾಗಬೇಕು. ನಮ್ಮ ಸಮಾಜಕ್ಕಾಗಿ ನಾವು ಕೊಡುಗೆಗಳನ್ನು ನೀಡಬೇಕು. ಕುಲಗುರುಗಳ ಮಹತ್ವ ತಿಳಿದು ಎಚ್ಚರಗೊಳ್ಳಬೇಕು. ಅವರ ವಚನಗಳ ಸಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ಅವರ ಆದರ್ಶಗಳನ್ನು ಪಾಲಿಸಿದರೆ ಮಾತ್ರ ಸಮಾಜದ ಉದ್ದಾರ ಸಾಧ್ಯ ಎಂದರು.
ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ, ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ ಮಾತನಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಸಿ ಎಸ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎನ್ ರವಿಕುಮಾರ್, ತಾಲ್ಲೂಕು ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಟಿ.ಜಗದೀಶ್, ಸಮಾಜದ ಮುಖಂಡರು, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ರ‍್ದೇಶಕ ಉಮೇಶ್ ಹೆಚ್, ಅಧಿಕಾರಿಗಳು ಹಾಜರಿದ್ದರು.

“ಕಲಬೆರಕೆ ತಿಂಡಿ ತಿನಿಸು ಸೇವಿಸದಿರಿ” ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಸಾರ್ವಜನಿಕ ಜಾಗೃತಿ

0

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿ ಕಲಬೆರಕೆ ಹೆಚ್ಚುತ್ತಿರುವುದು ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿರುವ ಹಿನ್ನಲೆಯಲ್ಲಿ, ಸುರಕ್ಷಿತ, ಶುದ್ಧ ಹಾಗೂ ಗುಣಮಟ್ಟದ ಆಹಾರವನ್ನು ಜನರಿಗೆ ಒದಗಿಸುವ ಉದ್ದೇಶದಿಂದ “ಕಲಬೆರಕೆ ತಡೆಗೆ – ನಮ್ಮ ನಡಿಗೆ” ಆಹಾರ ಸುರಕ್ಷತಾ ಅಭಿಯಾನ – 2026 ಅನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದ ಮೂಲಕ ಆಹಾರ ಕಲಬೆರಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಆಹಾರ ಸುರಕ್ಷತಾ ಕಾಯ್ದೆ-2006ರ ಮಹತ್ವವನ್ನು ತಿಳಿಸುವುದರ ಜೊತೆಗೆ, ಸುರಕ್ಷಿತ ಆಹಾರದ ಬಳಕೆಯನ್ನು ಉತ್ತೇಜಿಸುವುದು ಮುಖ್ಯ ಗುರಿಯಾಗಿದೆ. ಜನಸಾಮಾನ್ಯರ ಸಹಕಾರದೊಂದಿಗೆ ಶುದ್ಧ ಆಹಾರ ಸಂಸ್ಕೃತಿಯನ್ನು ಬೆಳೆಸಿ, ಉತ್ತಮ ಆರೋಗ್ಯಯುತ ಸಮಾಜ ನಿರ್ಮಿಸುವುದೇ ಈ ಅಭಿಯಾನದ ಆಶಯವಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅನ್ವಯ ಆಹಾರ ವಸ್ತುಗಳ ಉತ್ಪಾದನೆ ಸಂಸ್ಕರಣೆ ಮತ್ತು ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಸಣ್ಣ ಮಧ್ಯಮ ಪರಮಾಣದ ಉತ್ಪಾದಕರು, ಬೀದಿ ಬದಿ ಆಹಾರ ವಸ್ತುಗಳ ವ್ಯಾಪಾರಿಗಳು, ಪಾಸ್ಟ್ ಫುಡ್ ಕೇಂದ್ರಗಳು, ಬೇಕರಿಗಳು, ಹೋಟೆಲ್ ಮತ್ತು ರೆಸ್ಟೋರೆಂಟ್, ಜ್ಯೂಸ್ ಸೆಂಟರ್, ಐಸ್ ಕ್ರೀಮ್ ಹಾಗೂ ಕಾಂಡಿಮೆಂಟ್ಸ್ ಮಾಲೀಕರುಗಳು ಇಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
ಆಹಾರ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮಾಡುವವರು ಕಡ್ಡಾಯವಾಗಿ FSSAI ನ ನೊಂದಣಿ/ಪರವಾನಿಗೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯ. ನಿಷೇಧಿತ ಕೃತಕ ಬಣ್ಣಗಳು ಮತ್ತು ಹಾನಿಕಾರಕ ರಸಾಯನಿಕ ವಸ್ತುಗಳನ್ನು ಆಹಾರ ತಯಾರಿಕೆಯಲ್ಲಿ ಬಳಸಬಾರದು. ಆಹಾರ ತಯಾರಿಕೆಯಲ್ಲಿ ಕೃತಕ ರುಚಿಕಾರಕಗಳನ್ನು (ಎಂಎಸ್‌ಜಿ/ಟೆಸ್ಟಿಂಗ್ ಪೌಂಡರ್) ಬಳಕೆ ಮಾಡಬಾರದು. ಕಳಪೆ ಗುಣಮಟ್ಟದ, ಕಲಬೆರಕೆಯಾಗಿರುವ, ಹಾನಿಕಾರಕ ಆಹಾರ ವಸ್ತುಗಳ ತಯಾರಿಕೆ ದಾಸ್ತಾನು ವಿತರಣೆ ಮತ್ತು ಮಾರಾಟ ಮಾಡುವಂತಿಲ್ಲ. ಅವಧಿ ಮೀರಿದ ಆಹಾರ ಪದಾರ್ಥಗಳು ಮತ್ತು ಅವಧಿ ಮುಗಿಯುವ ದಿನಾಂಕ ಹೊಂದಿರದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಬಾರದು. ತಪ್ಪುದಾರಿಗೆ ಎಳೆಯುವ ಜಾಹೀರಾತು ನೀಡುವ ಮೂಲಕ ಆಹಾರ ವಸ್ತುಗಳ ಉತ್ಪಾದನೆ, ಸಂಸ್ಕರಣೆ ಮತ್ತು ಮಾರಾಟ ಮಾಡಬಾರದು. ಆಹಾರ ಪದಾರ್ಥಗಳನ್ನು ಅನಾರೋಗ್ಯಕರ ಮತ್ತು ಅನೈರ್ಮಲ್ಯಕರ ವಾತಾವರಣದಲ್ಲಿ ಸಂಸ್ಕರಿಸುವುದು ಮತ್ತು ತಯಾರಿಸುವುದು ನಿಷೇಧಿಸಲಾಗಿದೆ. ಆಹಾರ ತಯಾರಿಕೆ ಸಂಸ್ಕರಣೆಯಲ್ಲಿ ಶುದ್ದಿಕರಿಸಿದ ನೀರುನ್ನು ಬಳಕೆ ಮಾಡಬೇಕು. ಕಲಬೆರಕೆ ಕಾರಕ ವಸ್ತುಗಳನ್ನು ಆಹಾರ ತಯಾರಿಕಾ ಸ್ಥಳದಲ್ಲಿ ಹೊಂದಿರಬಾರದು. ಆಹಾರ ತಯಾರಿಕೆ, ಸಂಸ್ಕರಣೆಯಲ್ಲಿ ಶುದ್ಧವಾದ ನೀರನ್ನು ಬಳಕೆ ಮಾಡಬೇಕು. ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಅಥವಾ ಗ್ರಾಮ ಪಂಚಾಯಿತಿಯ ವ್ಯಾಪಾರೋಧ್ಯಮ ಪರವಾನಿಗೆ ಹೊಂದಿರಬೇಕಾಗಿರುವುದು ಕಡ್ಡಾಯ. ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ.
ಇವೇ ಮೊದಲಾದ ಉಪಬಂಧಗಳಿಗೆ ಸಂಬಂಧಪಟ್ಟಂತೆ ಆಹಾರ ವಸ್ತಗಳ ಉತ್ಪಾದನೆ, ಸಂಸ್ಕರಣ ಮತ್ತು ಮಾರಾಟ ವ್ಯವಹಾರದಲ್ಲಿ ತೊಡಗಿರುವ ವ್ಯಕ್ತಿ ಮತ್ತು ಸಂಸ್ಥೆಗಳು ಈ ಮೇಲ್ಕಂಡ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಅಂತಹ ಅಪರಾಧಗಳಿಗೆ ಗರಿಷ್ಟ 05 ಲಕ್ಷದವರೆಗೆ ದಂಡ ಮತ್ತು ಗರಿಷ್ಟ 03 ವರ್ಷಗಳವರೆಗೆ ಕಾರಗೃಹ ವಾಸ ಮತ್ತು ಈ ಎರಡು ದಂಡನೆಗಳಿಗೆ ಗುರಿಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರನ್ವಯ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ರೀತಿಯ ಆಹಾರ ವಸ್ತು ಪ್ರವರ್ತಕರುಗಳಿಗೆ ಈ ಮೂಲಕ ಸಾರ್ವಜನಿಕ ತಿಳುವಳಿಕೆ ನೀಡಲಾಗಿದೆ.
ಈ ಯಾವುದೇ ಉಲ್ಲಂಘನೆಗಳು ಕಂಡುಬಂದಲ್ಲಿ ಸಾರ್ವಜನಿಕರು, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರದ ಕಛೇರಿ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳನ್ನು ಹಾಗೂ ಟೋಲ್ ಫ್ರೀ ನಂ.080-22270035 ಅನ್ನು ಅಥವಾ ಆರೋಗ್ಯ ನೀರಿಕ್ಷಕರು/ ಮಹಾನಗರ ಪಾಲಿಕೆ/ ಆಹಾರ ನೀರಿಕ್ಷಕರು/ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರನ್ನು ಸಂಪರ್ಕಿಸಲು ಕೋರಿದೆ.

ಬೆಜ್ಜವಳ್ಳಿಯಲ್ಲಿ ಇರುಮುಡಿ ಅರ್ಪಿಸಿದ ನಟ ಶಿವರಾಜ್ ದಂಪತಿ

0

ಮಕರ ಸಂಕ್ರಮಣ ಅಂಗವಾಗಿ ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಚಿತ್ರನಟ ಡಾ.ಶಿವರಾಜ್ ಕುಮಾರ್ ಹಾಗೂ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಮಾಲೆ ಧರಿಸಿ, ಇರುಮುಡಿ ಕಟ್ಟಿ ದೇವಸ್ಥಾನಕ್ಕೆ ತೆರಳಿದರು.

ಈ ವೇಳೆ ಗರುಡ ದರ್ಶನ ಪಡೆದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಿ, ಅಯ್ಯಪ್ಪ ಸ್ವಾಮಿಯ ದಿವ್ಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು

Department of Labour ಕಾರ್ಮಿಕ ಇಲಾಖೆಯಿಂದ ದಿಢೀರ್ ಧಾಳಿ: 4 ಕಿಶೋರ ಕಾರ್ಮಿಕರ ಪತ್ತೆ

0

Department of Labour ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು, 04 ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ. ಈ ಕಿಶೋರಾ ಕಾರ್ಮಿಕರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿರುತ್ತಾರೆ.

ಈ ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿಕಾಯ್ದೆ 2016ರಡಿ ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆ, ಬೈಪಾಸ್, ನ್ಯೂ ಮಂಡ್ಲಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಆಟೋವಕ್ಸ್, ಬೀದಿ ಬದಿ ವ್ಯಾಪಾರಿಗಳಿಗೆ, ಬಾಲ ಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ಈ ತಪಾಸಣೆಯಲ್ಲಿ ಕೃಷ್ಣ ಎಂ. ಕಾರ್ಮಿಕ ನಿರೀಕ್ಷಕರು, ಶಿವಮೊಗ್ಗ, ರಘುನಾಥ ಎ.ಎಸ್. ಯೋಜನಾ ನಿರ್ದೇಶಕರು, ಲಕ್ಷಣ್, ಪೊಲೀಸ್ ಇಲಾಖೆ ಮತ್ತು ಪುನೀತ್ ಜಿಲ್ಲಾ ಮಕ್ಕಳ ರಕ್ಷಣಾಘಟಕ, ರಾಮಪ್ಪ ಶಿಕ್ಷಕರು ಈ ತಂಡದಲ್ಲಿ ಭಾಗವಹಿಸಿದ್ದರು.

ಅಭಿಮಾನಿ ಮಿತ್ರರೊಂದಿಗೆ ಸಂಕ್ರಾತಿ ಸಂಭ್ರಮದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

0

ಶಿವಮೊಗ್ಗದ ಸಂಸದ ರಾಘವೇಂದ್ರ ನಿವಾಸದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.

ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿ, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಭದ್ರಾವತಿ ಬಿಜೆಪಿ ಮುಖಂಡರು, ವೈದ್ಯ ಮಿತ್ರರು ಹಾಗೂ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿಕರು.

S.N. Channabasappa “ವಿಷಮುಕ್ತ ತುಂಗಭದ್ರಾ ರೈತರ ಫಸಲು ಭದ್ರ” ಜನಜಾಗೃತಿಯಲ್ಲಿ ಪಾಲ್ಗೊಂಡ ಶಾಸಕ ಚೆನ್ನಿ

0

S.N. Channabasappa ಇಂದು ಪವಿತ್ರ ತುಂಗಭದ್ರಾ ಸಂಗಮ ಸ್ಥಳವಾದ ಕೂಡಲಿ ಪುಣ್ಯಕ್ಷೇತ್ರದಲ್ಲಿ, ‘ನಿರ್ಮಲಾ ತುಂಗಾ ಅಭಿಯಾನ’ದ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಷಮುಕ್ತ ತುಂಗಭದ್ರಾ, ರೈತರ ಫಸಲು ಸುಭದ್ರ” ಜಾಗೃತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗವಹಿಸಿದ್ದರು.

ನಮ್ಮ ಜೀವನದಿಯಾಗಿರುವ ತುಂಗಭದ್ರೆಯನ್ನು ಮಾಲಿನ್ಯಮುಕ್ತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ.
ಬನ್ನಿ, ನಮ್ಮ ನದಿಗಳನ್ನು ವಿಷಮುಕ್ತವಾಗಿಸೋಣ, ಮುಂದಿನ ಪೀಳಿಗೆಗೆ ಶುದ್ಧ ಜಲವನ್ನು ಉಳಿಸೋಣ.
ಈ ನಿಟ್ಟಿನಲ್ಲಿ, ಪುಣ್ಯಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ, ನದಿಯಲ್ಲಿ ಸ್ನಾನ ಮಾಡುವಾಗ ಸೋಪು, ಶ್ಯಾಂಪು ಹಾಗೂ ಇತರೆ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವ ಬದಲಿಗೆ, ನೈಸರ್ಗಿಕವಾದ ಕಡ್ಲೆಹಿಟ್ಟನ್ನು ಬಳಸುವಂತೆ ಯಾತ್ರಿಗಳಿಗೆ ವಿನಂತಿಸಿದರು.
S.N. Channabasappa ನದಿಯ ಪಾವಿತ್ರ್ಯತೆ ಮತ್ತು ಪರಿಸರ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಭಕ್ತಾದಿಗಳಿಗೆ ಕಡ್ಲೆಹಿಟ್ಟನ್ನು ವಿತರಿಸುವ ಮೂಲಕ ಈ ವಿಶೇಷ ಅಭಿಯಾನಕ್ಕೆ ಸಾಥ್ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಗಿರೀಶ್ ಪಟೇಲ್, ಪ್ರಮುಖರಾದ ಶ್ರೀ ಪ್ರಭಾಕರ್, ಅಭಿಯಾನದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Shivaganga Yoga Center ಮಾನವ ಸಂಬಂಧಗಳನ್ನ ಮಕರ ಸಂಕ್ರಾಂತಿ ಘಟ್ಟಿಗೊಳಿಸುತ್ತದೆ: ಎಸ್.ಎಸ್.ಜ್ಯೋತಿಪ್ರಕಾಶ್

0

Shivaganga Yoga Center ಶ್ರೀ ಶಿವಗಂಗಾ ಯೋಗ ಕೇಂದ್ರದ ವಿಶ್ವಸ್ಥ ಮಂಡಳಿ ಸದಸ್ಯರು, ಅಧ್ಯಕ್ಷರು ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘ, ಶಾಖೆಯ ಯೋಗ ಅಭ್ಯಾಸಿಯವರಾದ ಶ್ರೀಯುತರು ಯೋಗ ಶಿಕ್ಷಣಾರ್ಥಿಗಳಿಗೆ ಶುಭ ಹಾರೈಸುತ್ತಾ ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವ ಸಂಕ್ರಾಂತಿ ಹೊಸ ವರ್ಷದ ಪ್ರಥಮ ಹಬ್ಬವಾಗಿದೆ, ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ ಹಾಗೆ ನಮ್ಮ ನಡೆನುಡಿಯಲ್ಲೂ ಸಹ ಶುದ್ಧವಾಗಿರಲು ಪ್ರಯತ್ನಿಸೋಣ ಎಂದು ನುಡಿದರು.

ಅವರು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಹಬ್ಬಗಳು ನಮಗೆ ಜೀವನೋತ್ಸಾಹವನ್ನು ಮೂಡಿಸುತ್ತದೆ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪ್ರವೇಶ ಮಾಡುವುದರ ಜೊತೆಗೆ ಹೆಚ್ಚು ಬೆಳಕನ್ನ ನೀಡುತ್ತದೆ ಎಂದ ಅವರು ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ ಹಾಗೆ ಸ್ತ್ರೀಯರಿಗೆ. ರೈತರಿಗೆ ಸಂಭ್ರಮದ ಹಬ್ಬವಾಗಿದೆ.

Shivaganga Yoga Center ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಜಿ.ಎಸ್.ಓಂಕಾರ್ ಅವರು ಮಾತನಾಡುತ್ತಾ ಸೂರ್ಯದೇವನು ಉತ್ತರಾಯಣಕ್ಕೆ ಪ್ರವೇಶ ನೀಡುವ ಶುಭದಿನ ನಮ್ಮ ಆಲೋಚನೆಗಳು ಒಳ್ಳೆಯ ದಿಕ್ಕಿನತ್ತ ತಿರುಗಲಿ ಬದುಕು ಎಳ್ಳು ಬೆಲ್ಲದಂತೆ ಮಿಶ್ರವಾಗಿರುವಂತೆ ನಮ್ಮ ನಡೆ-ನುಡಿಗಳು ಮಧುರ ಬಾಂಧವ್ಯವನ್ನ ಮೂಡಿಸಲಿ ಈ ಹಬ್ಬಕ್ಕೆ ಸಾಕಷ್ಟು ಆಧ್ಯಾತ್ಮಿಕ ಹಿನ್ನೆಲೆ ಇದೆ ಈ ಸುಗ್ಗಿ ಹಬ್ಬ ಎಲ್ಲರಲ್ಲೂ ಚೈತನ್ಯವನ್ನು ಮೂಡಿಸುತ್ತದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಶಿಬಿರಾರ್ಥಿಗಳಿಗೆ ಎಳ್ಳು ಬೆಲ್ಲ ಸಿಹಿ ಕಬ್ಬು ವಿತರಿಸಿ ಪರಸ್ಪರಲ್ಲಿ ಶುಭಾಶಯ ಕೋರಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರ ವಿಜಯ ಕೃಷ್ಣ. ಹರೀಶ್ . ರೋಟರಿ ಜಿ ವಿಜಯಕುಮಾರ್. ಸುಬ್ರಮಣಿ. ಶ್ರೀನಿವಾಸ್. ನರಸೂಜಿ ರಾವ್. ಶಂಕರ್. ಸುಜಾತಾ. ಗಾಯಿತ್ರಿ. ಶೋಭಾ, ಗಾಯತ್ರಿ ರಮೇಶ್
ಉಪಸ್ಥಿತರಿದ್ದರು.

Shivamogga District Health and Family Welfare Department ನೇತ್ರ ಸಹಾಯಕರ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸುವವರಿಗೆ ಅವಕಾಶ

0

Shivamogga District Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ನೇತ್ರ ಸಹಾಯಕರ 5 ಹುದ್ದೆಗೆ 2ನೇ ಹಂತದಲ್ಲಿ ಅಂತಿಮವಾಗಿ ಆಯ್ಕೆಯಾದವರ ಹಾಗೂ ಆಯ್ಕೆಯಾಗದವರ ಪಟ್ಟಿಯನ್ನು ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಜ. 21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿಗಳು ತಿಳಿಸಿರುತ್ತಾರೆ.
Shivamogga District Health and Family Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ , ದೂ.ಸಂ.: 8197094440/ 9481691580/ 08182-222382 ಗಳನ್ನು ಸಂಪರ್ಕಿಸಬಹುದಾಗಿದೆ.