Monday, February 23, 2026
Monday, February 23, 2026
Home Blog Page 230

K.J. George ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಲ್ಲಾ ಸಮುದಾಯಗಳನ್ನು ಒಂದೇ ರೀತಿ ಕಾಣುತ್ತಿದೆ – ಸಚಿವ ಕೆ.ಜೆ.ಜಾರ್ಜ್

0

K.J. George ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ಸ್ವಕ್ಷೇತ್ರ ಸರ್ವಜ್ಞನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರಲ್ಲದೆ, ಕೆಲಸ ತ್ವರಿತಗೊಳಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸರ್ವಜ್ಞನಗರ ಕ್ಷೇತ್ರದಲ್ಲಿ ನವೀಕೃತ ಸ್ಮಶಾನ ಉದ್ಘಾಟನೆ ನೆರವೇರಿಸಿದ ಅವರು, ವಿವಿಧೆಡೆ ಪಾದಚಾರಿ ಮಾರ್ಗ ಮತ್ತು ವೈಟ್ ಟ್ಯಾಪಿಂಗ್ ಕಾಮಗಾರಿ ಪರಿಶೀಲನೆ ಮಾಡಿದರು. ಅಲ್ಲದೆ, ತ್ಯಾಜ್ಯ ಸಾಗಣಿಕೆ ಕೇಂದ್ರಕ್ಕೆ ತೆರಳಿ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದರು.

ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು,” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಚಿವರು ಕಲ್ಯಾಣ ನಗರದಲ್ಲಿ ಬ್ರ್ಯೂ ಲಾ ಪಾಕ್ಸಿ ಕೆಫೆಯನ್ನು ಉದ್ಘಾಟಿಸಿದರು. ಬಳಿಕ ನಾಗವಾರ ಮುಖ್ಯ ರಸ್ತೆಯ ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿದರು. ನಾಗವಾರ ಮುಖ್ಯ ರಸ್ತೆ, ಗೋವಿಂದಪುರ ರಸ್ತೆ, ಹೆಣ್ಣೂರು ಮುಖ್ಯ ರಸ್ತೆ, ನೆಹರೂ ರಸ್ತೆಗಳಲ್ಲಿ ಕೈಗೊಂಡಿರುವ ಫುಟ್ ಪಾತ್, ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಲದೆ, ಎಚ್ ಬಿಆರ್ ಲೇಔಟ್ ನಲ್ಲಿರುವ ತ್ಯಾಜ್ಯ ಸಾಗಣಾ ಕೇಂದ್ರವನ್ನು ವೀಕ್ಷಿಸಿದರು.

K.J. George ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, “ಸರ್ವಜ್ಞನಗರ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರಿದ್ದು, ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕೊಡಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ,” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಲ್ಲಾ ಸಮುದಾಯಗಳನ್ನು ಒಂದೇ ರೀತಿ ಕಾಣುತ್ತಿದೆ. ಆದರೆ, ಕೆಲವರು ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅಂಥವರಿಗೆ ಅವಕಾಶ ಮಾಡಿಕೊಡದೆ ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕ್ಷೇತ್ರವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದು ನಮ್ಮ ಉದ್ದೇಶ,” ಎಂದರು.

ಸ್ಥಳೀಯ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸಚಿವರ ಭೇಟಿ ವೇಳೆ ಆ ಭಾಗದ ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಗಳನ್ನು ಹೇಳಿಕೊಂಡರಲ್ಲದೆ, ಅವುಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

Chamber of Commerce Shivamogga ಟ್ರೇಡ್ ಲೈಸೆನ್ಸ್ ನಿಂದ ಪಾಲಿಕೆಗೆ ಪ್ರಮುಖ ಆದಾಯ, ನಾಗರೀಕರು ಪಾಲಿಕೆಯನ್ನ ಆರ್ಥಿಕವಾಗಿ ಸದೃಢಗೊಳಿಸಿ – ಮಾಯಣ್ಣಗೌಡ

0

Chamber of Commerce Shivamogga ಟ್ರೇಡ್ ಲೈಸನ್ಸ್ ಮೇಳ ಅತ್ಯಂತ ಯಶಸ್ವಿಯಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ನೂರಾರು ವರ್ತಕರು ವ್ಯಾಪಾರ ನಡೆಸಲು ಅವಶ್ಯವಿರುವ ಲೈಸೆನ್ಸ್ ಪಡೆದುಕೊಂಡರು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಿದ್ದ ಲೈಸೆನ್ಸ್ ಮೇಳದಲ್ಲಿ ವರ್ತಕರಿಗೆ ಪರವಾನಗಿ ಪತ್ರ ವಿತರಿಸಿ ಮಾತನಾಡಿ, ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ವರ್ತಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಮೇಳ ನಡೆಸಲು ಸಹಕಾರ ನೀಡಿದ್ದು ಅಭಿನಂದನೀಯ ಎಂದು ತಿಳಿಸಿದರು.

ಟ್ರೇಡ್ ಲೈಸೆನ್ಸ್ ಮಹಾನಗರ ಪಾಲಿಕೆಗೆ ಒಂದು ಪ್ರಮುಖ ಆದಾಯದ ಮೂಲವಾಗಿದೆ. ಶಿವಮೊಗ್ಗದ ನಾಗರಿಕರಾಗಿ ಮಹಾನಗರ ಪಾಲಿಕೆಯನ್ನು ಆರ್ಥಿಕವಾಗಿ ಸದೃಢಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ವಾಣಿಜ್ಯ ಮತ್ತು ಕೈಗಾರಿಕೋದ್ಯಮಗಳಿಗೆ ಕಾನೂನು ಬದ್ಧ ವ್ಯವಹಾರ ಮಾಡಲು ಟ್ರೇಡ್ ಲೈಸೆನ್ಸ್ ಕಡ್ಡಾಯವಾಗಿದೆ. ವ್ಯವಹಾರದ ವಿಶ್ವಾಸಾರ್ಹತೆ ಹೆಚ್ಚಿಸುತ್ತದೆ. ಸರ್ಕಾರಿ ಯೋಜನೆಗಳಿಗೆ ಟೆಂಡರ್ ಹಾಕಲು ಅನುಕೂಲವಾಗುತ್ತದೆ. ಶಿವಮೊಗ್ಗದಲ್ಲಿ ಹೆಚ್ಚಿನ ಸಂಖ್ಯೆಯ ವರ್ತಕರು ಅಭಿಯಾನದ ಪ್ರಯೋಜನ ಪಡೆದಿದ್ದಾರೆ. ಮುಂದೆ ಇನ್ನು ಈ ರೀತಿಯ ಅನೇಕ ಕಾರ್ಯಕ್ರಮಗಳನ್ನು ಸಂಘದಿಂದ ನಡೆಸಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಇ ಖಾತೆ ಸಮಸ್ಯೆ ಇದ್ದು, ಈಗ ಸರಳವಾಗಿದೆ. ಇನ್ನೂ ಸಣ್ಣಪುಟ್ಟ ತೊಂದರೆಗಳಿವೆ. ಶಿವಮೊಗ್ಗ ನಗರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಾಗೂ ಜನತೆಗೆ ಸಾಕಷ್ಟು ಉದ್ಯೋಗವನ್ನು ಒದಗಿಸಿರುವ ಶಿವಮೊಗ್ಗ ನಗರದ ಸಾಗರ ರಸ್ತೆ, ಆಟೋ ಕಾಂಪ್ಲೆಕ್ಸ್ ಹಾಗೂ ಕಲ್ಲೂರು – ಮಂಡ್ಲಿ ಕೈಗಾರಿಕಾ ಪ್ರದೇಶಗಳ ನಿರ್ವಹಣೆ ಮತ್ತು ಸ್ವಚ್ಛತೆಯನ್ನು ನಿಯಮಿತವಾಗಿ ನಿರ್ವಹಿಸಬೇಕು. ನಗರದ ಅಭಿವೃದ್ಧಿಗೆ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸದಾ ಸಿದ್ಧವಾಗಿದೆ ಎಂದು ಭರವಸೆ ನೀಡಿದರು.

Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್ ಮನೋಹರ, ವಿತರಕ ಸಂಘದ ಅಧ್ಯಕ್ಷ ದೇವರಾಜ್, ಖಜಾಂಚಿ ಚಂದ್ರಶೇಖರ್, ಮಹಾನಗರ ಪಾಲಿಕೆಯ ಪ್ರಭುರಾಜ್, ಪುಷ್ಪವತಿ, ವಿಕಾಸ್, ವಸಂತ್, ನವೀನ್, ಇನ್ನೂ ಅನೇಕ ಸಿಬ್ಬಂದಿಗಳು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳು, ವರ್ತಕರು ಭಾಗವಹಿಸಿದ್ದರು.

Bengaluru Metropolitan Transport Corporation ಬೆಂಗಳೂರು ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ “ಜನೋಪಕಾರಿ ದೊಡ್ಡಣ್ಣಶೆಟ್ಟಿ” ಹೆಸರು

0

Bengaluru Metropolitan Transport Corporation ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,795 ಮಾರ್ಗಗಳಲ್ಲಿ 6,187 ಅನುಸೂಚಿಗಳನ್ನು 64,975 ಸುತ್ತುವಳಿಗಳೊಂದಿಗೆ 12.79 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ/ ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 42 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25.0 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ನಗರದ ಕೇಂದ್ರ ಭಾಗದಿಂದ ಸುಮಾರು 50.0 ಕಿ.ಮೀ ವ್ಯಾಪ್ತಿಯಲ್ಲಿ ಸಾರಿಗೆ ಸೇವೆಯನ್ನು ಪ್ರಯಾಣಿಕರಿಗೆ ಒದಗಿಸಲಾಗುತ್ತಿದೆ.

ಸಂಸ್ಥೆಯು ಸತತವಾಗಿ 04 ವರ್ಷಗಳಿಂದ ಎಲೆಕ್ಟ್ರಿಕ್ ಬಸ್ಸುಗಳನ್ನು ಪರಿಚಯಿಸುತ್ತಿದ್ದು, ಇಲ್ಲಿಯವರೆಗೆ 1473 ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಗೆ ನಿಯೋಜಿಸಲಾಗಿರುತ್ತದೆ. PM E-Drive ಯೋಜನೆಯಡಿಯಲ್ಲಿ 400 ಹವಾನಿಯಂತ್ರಿತ ಹಾಗೂ 4100 ಸಾಮಾನ್ಯ (ಹವಾನಿಯಂತ್ರಣರಹಿತ) ಎಲೆಕ್ಟ್ರಿಕ್ ಬಸ್ಸುಗಳನ್ನು ನಿಯೋಜಿಸಲಾಗುತ್ತಿದೆ.
ಕಲಾಸಿಪಾಳ್ಯದ ಬಸ್ ನಿಲ್ದಾಣದ ಮರುನಾಮಕರಣ ಹಾಗೂ ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಡರ ಬಗ್ಗೆ ಮಾಹಿತಿ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯನ್ನು ಶ್ರೀ ದೊಡ್ಡಣ್ಣಶೆಟ್ಟರು 1906ರಲ್ಲಿಯೇ ಸ್ಥಾಪಿಸಿ, ಸಮಾಜದಲ್ಲಿನ ಬಡವರು, ಹಿಂದುಳಿದವರು ಎಂಬ ಭೇದ-ಭಾವವಿಲ್ಲದೇ ಸರ್ವ ಜನಾಂಗಕ್ಕೂ ಸಮಾನ ಶಿಕ್ಷಣವನ್ನು ನೀಡಬೇಕೆಂಬ ದೂರದೃಷ್ಟಿಯನ್ನು ಇಟ್ಟುಕೊಂಡು, ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿದ್ದರು.

ಮುಂದುವರೆದು, ಶ್ರೀ ದೊಡ್ಡಣ್ಣ ಶೆಟ್ಟರ ಸಮಾಜ ಸೇವೆಯನ್ನು ಗುರುತಿಸಿ, ಅಂದಿನ ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು “ಜನೋಪಕಾರಿ” ಎಂಬ ಬಿರುದನ್ನು ನೀಡಿ ಸನ್ಮಾನಿಸಿರುತ್ತಾರೆ. ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮ ಸಂಸ್ಥೆಯು ಎಲ್ಲಾ ಜನಾಂಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ, ವಸತಿ, ವಿದ್ಯಾರ್ಥಿ ವೇತನ ಹಾಗೂ ಜನಾಂಗದ ಆಸಕ್ತ ಮಹಿಳೆಯರಿಗೆ ವಿಧವಾ ಮಾಸಾಶನ ನೀಡುತ್ತಿದೆ. ಸದರಿಯವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣಕ್ಕೆ “ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ” ಎಂದು ಮರು ನಾಮಕರಣ ಮಾಡಲು ಸಂಸ್ಥೆಯ 108ನೇ ಮಂಡಳಿ ಸಭೆಯ ಠರಾವು ಸಂಖ್ಯೆ: 2080 / ದಿನಾಂಕ:15.03.2025ರಲ್ಲಿ ಅನುಮೋದನೆ ನೀಡಲಾಗಿದೆ. ಆದ್ದರಿಂದ ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣಕ್ಕೆ “ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ” ಎಂದು ಮರು ನಾಮಕರಣ ಮಾಡಲು ಸರ್ಕಾರದ ಅನುಮೋದನೆಯನ್ನು ಕೋರಿದ್ದು, ಸರ್ಕಾರದ ಆದೇಶ ಸಂಖ್ಯೆ: ಟಿಡಿ 107 ಟಿಸಿಒ 2025, ಬೆಂಗಳೂರು, ದಿನಾಂಕ:09.07.2025ರನ್ವಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ “ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಲು ಆದೇಶಿಸಲಾಗಿರುತ್ತದೆ.

ಕಲಾಸಿಪಾಳ್ಯ ಬಸ್ ನಿಲ್ದಾಣದ ಬಗ್ಗೆ ಮಾಹಿತಿ

Bengaluru Metropolitan Transport Corporation ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 04 ಪ್ರಮುಖ ಬಸ್ ನಿಲ್ದಾಣಗಳು, 10 ಟಿ.ಟಿ.ಎಂ.ಸಿ ಗಳನ್ನು ಮತ್ತು 36 ಮಧ್ಯಮ/ಸಣ್ಣ ಬಸ್ ನಿಲ್ದಾಣಗಳನ್ನು ಹೊಂದಿರುತ್ತದೆ. ಸದರಿ ಬಸ್ ನಿಲ್ದಾಣಗಳ ಪೈಕಿ ಒಂದಾದ ಕಲಾಸಿಪಾಳ್ಯದಲ್ಲಿ ಸುಸಜ್ಜಿತ, ಮೂಲಭೂತ ಸೌಕರ್ಯಗಳನ್ನು ಒಳಗೊಂಡ ನೂತನ ಬಸ್ ನಿಲ್ದಾಣವನ್ನು ನಾಗರೀಕರ ಬಳಕೆಗೆ ದಿನಾಂಕ: 10-03-2023 ರಂದು ಸಮರ್ಪಿಸಲಾಗಿರುತ್ತದೆ. ಸದರಿ ಬಸ್ ನಿಲ್ದಾಣದಲ್ಲಿ 07 ಬಸ್-ಬೇ, ಪ್ರತಿ ಬಸ್-ಬೇಯಲ್ಲಿ 06 ಪ್ಲಾಟ್ ಫಾರಂಗಳು, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ದ್ವಿಚಕ್ರ ಹಾಗೂ ಕಾರುಗಳ ನಿಲುಗಡೆಗೆ ಸ್ಥಳಾವಕಾಶದ ಸೌಲಭ್ಯಗಳನ್ನು ಹೊಂದಿರುತ್ತದೆ.
ಪ್ರಸ್ತುತ, ಕಲಾಸಿಪಾಳ್ಯ ಬಸ್ ನಿಲ್ದಾಣದಿಂದ ವಿವಿಧ ಪ್ರದೇಶಗಳಿಗೆ 671 ಅನುಸೂಚಿಗಳಲ್ಲಿ 2004 ಸುತ್ತುವಳಿಗಳನ್ನು ಹಾಗೂ ಚಂದ್ರಭವನನಿಂದ 505 ಅನುಸೂಚಿಗಳಲ್ಲಿ 1217 ಸುತ್ತುವಳಿಗಳನ್ನು ಒಟ್ಟಾರೆಯಾಗಿ ಕೃ.ರಾ.ಮಾರುಕಟ್ಟೆಯಿಂದ ಒಟ್ಟು 1176 ಅನುಸೂಚಿಗಳಲ್ಲಿ 3221 ಸುತ್ತುವಳಿಗಳನ್ನು ಆಚರಣೆಗೊಳಿಸಲಾಗುತ್ತಿದೆ.
ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ 62,374 ಚದರ ಅಡಿ ವಾಣಿಜ್ಯ ಜಾಗ ಹಾಗೂ 52,180 ಚದರ ಅಡಿ ಪಾರ್ಕಿಂಗ್ ಜಾಗ ಸೇರಿ ಒಟ್ಟು 1,14,914 ಚದರ ಅಡಿ ವಾಣಿಜ್ಯ ಜಾಗವಿರುತ್ತದೆ. ನಿಲ್ದಾಣದಲ್ಲಿನ ವಾಣಿಜ್ಯ/ಕಛೇರಿ ಜಾಗವನ್ನು ಪರವಾನಗಿ ಆಧಾರದಲ್ಲಿ ಹಂಚಿಕೆ ಪಡೆಯುವಂತೆ ವಿವಿಧ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಹಂಚಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಸದರಿ ಬಸ್ ನಿಲ್ದಾಣದಲ್ಲಿನ ವಾಣಿಜ್ಯ ಜಾಗಗಳಿಂದ ಮಾಸಿಕ ಅಂದಾಜು ರೂ.42,88,497/- ಸಾರಿಗೇತರ ಆದಾಯ ನಿರೀಕ್ಷಿಸಲಾಗಿದೆ. ಪ್ರಸ್ತುತ, ಸದರಿ ಬಸ್ ನಿಲ್ದಾಣದಿಂದ ಮಾಸಿಕ ರೂ.2,52,074/- ಆದಾಯ ಗಳಿಸಲಾಗುತ್ತಿದೆ.

ಸಂಸ್ಥೆಯಲ್ಲಿ ಕೈಗೊಂಡಿರುವ ಕಾರ್ಮಿಕ ಉಪಕ್ರಮಗಳ ಮಾಹಿತಿ

40 ವರ್ಷ ಮೇಲ್ಪಟ್ಟ ನೌಕರರು ಮತ್ತು ಅಧಿಕಾರಿಗಳ ಹೃದಯ ಸಂಬಂಧಿ ತಪಾಸಣೆಗಳನ್ನು ನಡೆಸಲು ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 05 ವರ್ಷಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. ಇಲ್ಲಿಯವರೆಗೆ ಒಟ್ಟು 13,668 ನೌಕರರುಗಳಿಗೆ ಉಚಿತವಾಗಿ ಹೃದಯ ತಪಾಸಣೆಗೆ ಒಳಪಡಿಸಲಾಗಿರುತ್ತದೆ.
ಬೆಂಗಳೂರು ನಗರದ ಜನದಟ್ಟಣೆಯ ಸಾರಿಗೆ ವ್ಯವಸ್ಥೆಯಲ್ಲಿ ಸದಾ ಕರ್ತವ್ಯನಿರತ ಸಿಬ್ಬಂದಿಗಳ ಶ್ವಾಸಕೋಶ, ಉಸಿರಾಟ ಕಾಯಿಲೆ, ಅಲರ್ಜಿಗಳಿಗೆ ಸಂಬಂಧಿಸಿದ ಸ್ಕ್ರೀನಿಂಗ್ ಮತ್ತು ಸುಧಾರಿತ ಪರೀಕ್ಷೆಗಳನ್ನು ಮಾಡಿಸುವ ಕಾಳಜಿಯೊಂದಿಗೆ ಜಯನಗರದ ವಾಯು ಚೆಸ್ಟ್ ಅಂಡ್ ಸ್ಲೀಪ್ ಸೆಂಟರ್ ನಲ್ಲಿ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಈವರೆವಿಗೂ 2577 ನೌಕರರುಗಳು ತಪಾಸಣೆಗೆ ಒಳಪಟ್ಟಿರುತ್ತಾರೆ.
ಸಂಸ್ಥೆಯ ನೌಕರರ ಆರೋಗ್ಯದ ಹಿತದೃಷ್ಟಿಯಿಂದ ಸಂಸ್ಥೆಯ ಎಲ್ಲಾ ನೌಕರರಿಗೆ Department of Biotechnology Govt of India ದ ಸಹಕಾರದೊಂದಿಗೆ C-CAMP ಅನ್ನು ಸರ್ಕಾರದ ಸಾರಿಗೆ ಇಲಾಖೆಯ “ಸಾರಿಗೆ ಆಶಾಕಿರಣ ಯೋಜನೆ”ಯಡಿ ಸಂಸ್ಥೆಯ ಕೇಂದ್ರ ಕಛೇರಿ ಸೇರಿದಂತೆ 50 ಘಟಕಗಳು ಮತ್ತು 4 ಕಾರ್ಯಾಗರಗಳಲ್ಲಿ ವಿವಿಧ ತಂಡಗಳೊಂದಿಗೆ ಕಣ್ಣಿನ ತಪಾಸಣಾ ಶಿಬಿರಗಳನ್ನು ಹಂತಹಂತವಾಗಿ ಆಯೋಜಿಸಿ, ನೌಕರರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದರಂತೆ, ಪರೀಕ್ಷೆಗೆ ಒಳಪಡಿಸಲಾದ ನೌಕರರ ಕಣ್ಣಿನ ದೋಷದ ಪ್ರಮಾಣಕ್ಕೆ ತಕ್ಕಂತೆ ಕನ್ನಡಕಗಳನ್ನು ಸಿದ್ಧಪಡಿಸಿ, ನೌಕರರು ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯಸ್ಥಾನಗಳಿಗೆ ಈ ಯೋಜನೆಯಡಿಯಲ್ಲಿಯೇ ವಿತರಿಸಲಾಗುತ್ತದೆ.
ಸಂಸ್ಥೆಯು ನೌಕರರ ಭದ್ರತೆ ಮತ್ತು ಕಲ್ಯಾಣಕ್ಕೆ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ, ನೌಕರರು ತಮ್ಮ ಕರ್ತವ್ಯ ನಿರ್ವಹಣೆಯ ವೇಳೆ ಅಥವಾ ವ್ಯಕ್ತಿಗತ ಅಪಘಾತದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಸಂಸ್ಥೆಯು ದಿನಾಂಕ:25-07-2025 ರಂದು ಬ್ಯಾಂಕ್ ಆಫ್ ಬರೋಡಾದೊಂದಿಗೆ ಐದು ವರ್ಷಗಳ ಅವಧಿಗೆ ವಿಮಾ ಸೇವೆಗಳ ಒಡಂಬಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯ ಪ್ರಮುಖ ವಿಮಾ ಸೌಲಭ್ಯಗಳಲ್ಲಿ ಕರ್ತವ್ಯನಿರತ ಸಿಬ್ಬಂದಿಯು ಕರ್ತವ್ಯ ನಿರ್ವಹಣೆ ವೇಳೆ ಅಪಘಾತ ಮರಣ ಹೊಂದಿದ್ದಲ್ಲಿ ರೂ. 1.25 ಕೋಟಿ ಪರಿಹಾರವನ್ನು ಮೃತರ ನಾಮನಿರ್ದೇಶಿತರಿಗೆ ನೀಡಲಾಗುತ್ತದೆ; ವೈಯಕ್ತಿಕ ಅಪಘಾತ, ವಿಮಾನ ಅಪಘಾತದಲ್ಲಿ ಮರಣ ಹಾಗೂ ಶಾಶ್ವತ ಪೂರ್ಣ ಅಂಗವಿಕಲತೆಯಾದಲ್ಲಿ ಬ್ಯಾಂಕಿನಿಂದ ರೂ. 1.00 ಕೋಟಿ ಪರಿಹಾರ ಒದಗಿಸಲಾಗುವುದು ಮತ್ತು ಸ್ವಾಭಾವಿಕ ಮರಣ ಹೊಂದಿದ್ದಲ್ಲಿ ರೂ.10 ಲಕ್ಷ ಪರಿಹಾರ ನೀಡಲಾಗುವುದು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೊಳಿಸಲಾಗಿದ್ದು, ಸದರಿಯವರುಗಳಿಗೆ ಕೌನ್ಸಲಿಂಗ್ ಮೂಲಕ ಘಟಕ ನಿಯೋಜನೆ ಮಾಡಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.
ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಗೆ 200 ಅಭ್ಯರ್ಥಿಗಳನ್ನು, 25 ಕೆ.ಎಸ್.ಟಿ. ಪೇದೆ, 07 ಚಾಲಕರನ್ನು, 10 ನಿರ್ವಾಹಕರನ್ನು, 17 ತಾಂತ್ರಿಕ ಸಿಬ್ಬಂದಿಗಳನ್ನು, 51 ಕಛೇರಿ ಸಹಾಯಕರಿಗೆ ನೇಮಕಾತಿ ನೀಡಲಾಗಿದೆ. ಜೂನ್ 2023 ರಿಂದ ಇಲ್ಲಿಯವರೆಗೂ ಒಟ್ಟು 310 ಮೃತಾವಲಂಬಿತರುಗಳಿಗೆ ಅನುಕಂಪ ಆಧಾರಿತ ನೇಮಕಾತಿ ಆದೇಶವನ್ನು ನೀಡಲಾಗಿರುತ್ತದೆ.
ಈ ಸಾಲಿನಲ್ಲಿ Urban Mobility India ಮತ್ತು ASRTU ನಂತಹ ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳಿಂದ ಪಡೆದಿರುವ ಪ್ರಶಸ್ತಿಗಳು ಒಳಗೊಂಡಂತೆ, ಬೆಂ.ಮ.ಸಾ.ಸಂಸ್ಥೆಗೆ ಒಟ್ಟಾರೆ 149 ಪ್ರಶಸ್ತಿ/ಪುರಸ್ಕಾರಗಳು ಲಭಿಸಿರುತ್ತದೆ.

Kateel Ashok Pai Memorial College ಮಲ್ಲಿಗೇನಹಳ್ಳಿ ಕೆರೆಯಲ್ಲಿ ತ್ಯಾಜ್ಯದಿಂದಾಗಿರುವ ಕೆರೆಯ ಸೌಂದರ್ಯದ ವಿರೂಪ ತಪ್ಪಿಸಲು ಕೆರೆಯ ಆಸುಪಾಸು ವನಮಹೋತ್ಸವ – ಡಾ.ಸಂಧ್ಯಾ ಕಾವೇರಿ

0

Kateel Ashok Pai Memorial College ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾಕ್ಟರ್ ರಜನಿ ಎ ಪೈರವರು ಮಲ್ಲಿಗೆನಹಳ್ಳಿಯ ಕೆರೆಯ ದಂಡೆಯಲ್ಲಿ ಹೊಂಗೆ ಗಿಡವನ್ನು ನೆಡುವುದರ ಮೂಲಕ ಈ ವನಮಹೋತ್ಸವ ಆಚರಣೆಗೆ ಚಾಲನೆಯನ್ನು ನೀಡಿದರು.

ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಲೆನಾಡಿನ ಮಳೆಗಾಲದ ತುಂತುರು ಹನಿ ಲೇಪನ ದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಕೆರೆಯ ದಂಡೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಮಳೆಗಾಲ ದ ಪರಿಸರವನ್ನು ಅರ್ಥಪೂರ್ಣವಾಗಿ ಅನುಭವಿಸಿದರು.

“ಮಲ್ಲಿಗೆನಹಳ್ಳಿ ಕೆರೆಯ ದಂಡೆಯಲ್ಲಿ ಹಲವರು ಅನಗತ್ಯ ಕಸಗಳನ್ನು ಚೆಲ್ಲಾಡುತ್ತಾರೆ ,ಇದರಿಂದ ಕೆರೆಯ ಸೌಂದರ್ಯವು ಹಾಳಾಗುತ್ತಿದೆ ಮಾತ್ರವಲ್ಲದೆ ಪರಿಸರಕ್ಕೆ ಹಾನಿಯಾಗುತ್ತಿದೆ .ಇದನ್ನು ಮನಗಂಡು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಕೆರೆಯ ದಂಡೆಯಲ್ಲಿ ಮರ ಗಿಡಗಳನ್ನು ಬೆಳೆಸುವ ಯೋಜನೆಯನ್ನು ರೂಪಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ತಿಳಿಸಿದರು.

Kateel Ashok Pai Memorial College ಈ ದಂಡೆಯನ್ನು ಒಂದು ರಮ್ಯ ಹಾಗೂ ಪರಿಸರಕ್ಕೆ ಪೂರಕವಾದ ಮರಗಳ ತಾಣವನ್ನಾಗಿ ಮಾಡುವ ಯೋಜನೆ ಇದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾಕ್ಟರ್ ಸುಕೀರ್ತಿ ಹಾಗೂ ಮೋಹನ್ ಕುಮಾರ್ ರವರು ತಿಳಿಸಿದರು. ಪರಿಸರಕ್ಕೆ ಪೂರಕವಾದ ಹೊಂಗೆ ,ಬಾದಾಮಿ ,ಹೊಳೆಮತ್ತಿ ಇತ್ಯಾದಿ ಮರಗಳ ಗಿಡಗಳನ್ನು ಇಲ್ಲಿ ನೆಡಲಾಗುತ್ತಿದೆ, ಈ ಗಿಡ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯು ವಿದ್ಯಾರ್ಥಿಗಳು ಹಾಗೂ ಕಾಲೇಜಿನದ್ದಾಗಿದೆ ಎಂದು ತಿಳಿಸಿದರು.

” ಶಿವಮೊಗ್ಗದ ಮಲ್ಲಿಗೆನಹಳ್ಳಿ ಕೆರೆಯು ಅತ್ಯಂತ ಸಂಪನ್ಮೂಲ ಭರಿತ ಹಾಗೂ ಪರಿಸರಕ್ಕೆ ಶೋಭೆಯುಳ್ಳ ಒಂದು ಕೆರೆಯಾಗಿದೆ .ಇದನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕು. ಇಲ್ಲಿ ಕಸಗಳನ್ನು ಯಾರು ಎಸೆಯಬಾರದೆಂದು ಮಾನಸ ಟ್ರಸ್ಟ್ ನ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಅವರು ಶಿವಮೊಗ್ಗದ ಜನತೆಗೆ ಮನವಿಯನ್ನು ಮಾಡಿದರು.

ಮುಂದಿನ ದಿನಗಳಲ್ಲಿ ಕಾಲೇಜು ಶಿವಮೊಗ್ಗ ಹಾಗೂ ಸುತ್ತಲಿನ ಕೆರೆಗಳ ಬದಿಗಳಲ್ಲಿ ಗಿಡಗಳನ್ನು ನೆಡುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಎಂದು ನಿರ್ಧರಿಸಲಾಯಿತು.

Dr. Mansukh Mandaviya ಇಎಸ್ಐಸಿ , ಉದ್ಯೋಗಿಗಳ ಸಾಮಾಜಿಕ ಭದ್ರತಾ ವ್ಯಾಪ್ತಿ ವಿಸ್ತರಿಸಲು ಹೊಸ ಯೋಜನೆ

0

Dr. Mansukh Mandaviya ನೌಕರರ ರಾಜ್ಯ ನಿಗಮ(ಇಎಸ್‌ಐಸಿ)ವು ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಎಸ್‌ಪಿಆರ್‌ಇಇ 2025 ಯೋಜನೆಯನ್ನು ಪ್ರಾರಂಭಿಸಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ಹಿಚಾಲಯ ಪ್ರದೇಶದ ಶಿಮ್ಲಾದಲ್ಲಿ ನಡೆದ 196 ನೇ ಇಎಸ್‌ಐ ಕಾರ್ಪೊರೇಷನ್ ಸಭೆಯಲ್ಲಿ ಎಸ್‌ಪಿಆರ್‌ಇಇ 2025(ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ) ಅನ್ನು ಅನುಮೋದಿಸಿದೆ.
ಈ ಯೋಜನೆಯಡಿ ಇಎಸ್‌ಐ ಕಾಯ್ದೆಯಡಿಯಲ್ಲಿನ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು 2025 ರ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಸಕ್ರಿಯವಾಗಿರುತ್ತದೆ. ಹಾಗೂ ನೋಂದಾಯಿಸದ ಉದ್ಯೋಗದಾತರು ಮತ್ತು ಉದ್ಯೋಗಿಗಳು, ಗುತ್ತಿಗೆ ಮತ್ತು ತಾತ್ಕಾಲಿಕ ಕೆಲಸಗಾರರು ಸೇರಿದಂತೆ ತಪಾಸಣೆ ಅಥವಾ ಹಿಂದಿನ ಬಾಕಿಗಳ ಬೇಡಿಕೆಗಳನ್ನು ಎದುರಿಸದೇ ನೊಂದಾಯಿಸಿಕೊಳ್ಳಲು ಒಂದು ಬಾರಿ ಅವಕಾಶವನ್ನು ನೀಡುತ್ತದೆ.
ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್‌ಐಸಿ ಪೋರ್ಟಲ್, ಶ್ರಮ ಸುವಿಧಾ ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು. ಉದ್ಯೋಗದಾತರು ಘೋಷಿಸಿದ ದಿನಾಂಕದಿAದ ನೋಂದಣಿಯನ್ನು ಮಾನ್ಯವೆಂದು ಪರಿಗಣಿಸಲಾಗುತ್ತದೆ. ನೋಂದಣಿಗೆ ಮುಂಚಿನ ಅವಧಿಗಳಿಗೆ ಯಾವುದೇ ಕೊಡುಗೆ ಅಥವಾ ಪ್ರಯೋಜನ ಅನ್ವಯಿಸುವುದಿಲ್ಲ. ನೋಂದಣಿ ಪೂರ್ವ ಅವಧಿಗೆ ಯಾವುದೇ ತಪಾಸಣೆ ಅಥವಾ ಹಿಂದಿನ ದಾಖಲೆಗಳಿಗೆ ಬೇಡಿಕೆಯನ್ನು ಮಾಡಲಾಗುವುದಿಲ್ಲ.
Dr. Mansukh Mandaviya ಹಿಂದಿನ ದಂಡಗಳ ಭಯವನ್ನು ತೆಗೆದು ಹಾಕುವ ಮೂಲಕ ಮತ್ತು ನೋಂದಣಿ ಪ್ರಕ್ರಿಯೆಯನ್ನು ಸರಾಗಗೊಳಿಸುವ ಮೂಲಕ ಈ ಯೋಜನೆಯು ಸ್ವಯಂಪ್ರೇರಿತ ಅನುಸರಣೆಯನ್ನು ಪ್ರೋತ್ಸಾಹಿಸುತ್ತದೆ. ಈ ಯೋಜನೆಯು ನೋಂದಣಿ ಪ್ರಕ್ರಿಯೆಗೆ ಮೊದಲಿದ್ದ ಅಡೆತಡೆಗಳನ್ನು ಪರಿಹರಿಸುತ್ತದೆ. ಬಿಟ್ಟು ಹೋದ ಸಂಸ್ಥೆಗಳು ಮತ್ತು ಕಾರ್ಮಿಕರನ್ನು ಇಎಸ್‌ಐ ವ್ಯಾಪ್ತಿಗೆ ತರುವ ಮತ್ತು ವಿಶಾಲವಾದ ಸಾಮಾಜಿಕ ರಕ್ಷಣೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ.
ಎಸ್‌ಪಿಆರ್‌ಇಇ 2025 ಎಲ್ಲರನ್ನು ಒಳಗೊಳ್ಳುವ ಮತ್ತು ನೌಕರರ ಸಾಮಾಜಿಕ ಭದ್ರತೆಯ ಕಡೆಗೆ ಇಟ್ಟಿರುವ ಒಂದು ಪ್ರಗತಿಪರ ಹೆಜ್ಜೆಯಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಮತ್ತು ಹಿಂದಿನ ಹೊಣೆಗಾರಿಕೆಗಳಿಂದ ವಿನಾಯಿತಿ ನೀಡುವ ಮೂಲಕ ಈ ಯೋಜನೆಯು ಉದ್ಯೋಗದಾತರು ತಮ್ಮ ಕಾರ್ಯ ಪಡೆಯನ್ನು ಕ್ರಮಬದ್ದಗೊಳಿಸಲು ಪ್ರೋತ್ಸಾಹಿಸುವುದಲ್ಲದೇ, ಹೆಚ್ಚಿನ ಕಾರ್ಮಿಕರು, ವಿಶೇಷವಾಗಿ ಗುತ್ತಿಗೆ ವಲಯಗಳಲ್ಲಿರುವವರು ಇಎಸ್‌ಐ ಕಾಯ್ದೆಯಡಿಯಲ್ಲಿ ಅಗತ್ಯ ಆರೋಗ್ಯ ಮತ್ತು ಸಾಮಾಜಿಕ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸುತ್ತದೆ.
ಭಾರತದಲ್ಲಿ ಕಲ್ಯಾಣ ಕೇಂದ್ರಿತ ಕಾರ್ಮಿಕ ಪರಿಸರ ವ್ಯವಸ್ಥೆಯ ದೃಷ್ಟಿಕೋನಕ್ಕೆ ಅನುಗುಣವಾಗಿ ತನ್ನ ವ್ಯಾಪ್ತಿಯನ್ನು ಬಲಪಡಿಸಲು ಮತ್ತು ಸಾರ್ವತ್ರಿಕ ಸಾಮಾಜಿಕ ರಕ್ಷಣೆಯ ಉದ್ದೇಶವನ್ನು ಪೂರೈಸಲು ಇಎಸ್‌ಐಸಿ ಬದ್ದವಾಗಿದೆ ಎಂದು ಶಿವಮೊಗ್ಗ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Police Department ಇನ್ಸ್ಪೈರ್ ಆನ್ ಲೈನ್ ಪಾಡ್ ಕಾಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಯಶಸ್ವಿ

0

Police Department ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ “ಇಗ್ನೆಂಟ್ ಮೈಂಡ್ ಅಂಡ್ ಇಗ್ನೆಂಟ್ ಪಾಸಿಟಿವಿಟಿ” ಎಂಬ ಘೋಷವಾಕ್ಯದಡಿ ಜು.24 ರಂದು ಆನ್‌ಲೈನ್ ಪಾಡ್‌ಕಾಸ್ಟ್ ಮೂಲಕ ‘ಇನ್ಸ್ಪೈರ್’ ಎಂಬ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ “ಇಗ್ನೆಂಟ್ ಮೈಂಡ್ ಅಂಡ್ ಇಗ್ನೆಂಟ್ ಪಾಸಿಟಿವಿಟಿ” ಎಂಬ ಘೋಷವಾಕ್ಯದಡಿ ಜು.24 ರ ಸಂಜೆ 7 ಗಂಟೆಗೆ ಆನ್‌ಲೈನ್ ಪಾಡ್‌ಕಾಸ್ಟ್ ಮೂಲಕ “ಇನ್ಸೆ÷್ಪರ್” ವಿಡಿಯೋ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸೈಬರ್ ಕ್ರೈಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಇವರು ಮಾತನಾಡಿ ಸೈಬರ್ ಕ್ರೈಂ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಮದ್ಯಪಾನ, ಡ್ರಗ್ಸ್, ಗಾಂಜಾ, ಮಾದಕ ದ್ರವ್ಯ ಸೇವನೆ, ಸಂಚಾರ ನಿಯಮಗಳು, ಎಪಿಕೆ ಫೈಲ್, ಆನ್‌ಲೈನ್ ಫಿಶಿಂಗ್, ಸಾಮಾಜಿಕ ಜಾಲತಾಣಗಳಿಂದ ಆಗುವ ಅನಾಹುತಗಳು, ಸಾರ್ವಜನಿಕ ವೈ-ಫೈ ಉಪಯೋಗಿಸುವುದರಿಂದ ಆಗುವ ದುಷ್ಪರಿಣಾಗಳು, ಆನ್‌ಲೈನ್ ಶಾಪಿಂಗ್ ನಿಂದಾಗುವ ಸ್ಯಾಮ್ಗಳ ಬಗ್ಗೆ ಮತ್ತು ಸಂಚಾರ್ ಸಾಥಿ ಆ್ಯಪ್‌ನ ಉಪಯೋಗದ ಕುರಿತು ಹಾಗೂ ಇತರೆ ಉಪಯುಕ್ತ ಮಾಹಿತಿಯನ್ನು ನೀಡಿದರು.
Police Department ಈ ಆನ್‌ಲೈನ್ ಪಾಡ್‌ಕಾಸ್ಟ್ ನಲ್ಲಿ ಜಿಲ್ಲೆಯ 33 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 200 ವಿದ್ಯಾರ್ಥಿ ನಿಲಯಗಳಲ್ಲಿ 6 ನೇ ತರಗತಿಯಿಂದ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಓದುತ್ತಿರುವ ಸುಮಾರು 15 ರಿಂದ 16 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಎನ್ ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಪ್ರೀತಿ, ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Rotary Shimoga ಸರ್ಕಾರದ ಜೊತೆ ಸಂಘಸಂಸ್ಥೆಗಳೂ ನೆರವು ನೀಡಿ ಶಾಲಾ ಮಕ್ಕಳನ್ನ ಪ್ರೋತ್ಸಾಹಿಸಬೇಕು- ಸುಮತಿ ಕುಮಾರಸ್ವಾಮಿ

0

Rotary Shimoga ಸರ್ಕಾರಿ ಶಾಲೆ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಸೂಕ್ತ ಪ್ರೋತ್ಸಾಹ ಮತ್ತು ಅಗತ್ಯ ಮಾರ್ಗದರ್ಶನ ನೀಡಿದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.

ಕೊಮ್ಮನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಟೀ ಶರ್ಟ್ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ಸರ್ಕಾರದ ಸೌಲಭ್ಯಗಳ ಜತೆಯಲ್ಲಿ ಸಂಘ ಸಂಸ್ಥೆಗಳ ನೆರವು ಅತಿ ಮುಖ್ಯ ಇದರಿಂದ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್ ಕುಮಾರ್ ಮಾತನಾಡಿ, ಈ ವರ್ಷ ರೋಟರಿಯ ಹಲವಾರು ಪ್ರಮುಖ ಜಿಲ್ಲಾ ಯೋಜನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನಗೊಳಿಸುತ್ತಿದ್ದೇವೆ. ರಸ್ತೆ ಸುರಕ್ಷತೆ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮಾಡುತ್ತಿದ್ದೇವೆ ಎಂದರು.

ಸರ್ಕಾರಿ ಶಾಲಾ ಮಕ್ಕಳು ವೈಯಕ್ತಿಕ ಸ್ವಚ್ಛತೆ ಹಾಗೂ ಪ್ರತಿನಿತ್ಯ ವಿದ್ಯಾಭ್ಯಾಸದ ಜತೆಗೆ ದೈಹಿಕ ವ್ಯಾಯಾಮ, ಯೋಗಾಸನ ಹಾಗೂ ಕ್ರೀಡೆಗಳ ಬಗ್ಗೆ ಗಮನಹರಿಸಬೇಕು ಎಂದು ನುಡಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಇರುವುದರ ಜೊತೆಗೆ ಸರ್ಕಾರದ ಒಳ್ಳೆಯ ಸೌಲಭ್ಯಗಳು ಇದ್ದು, ಸದುಪಯೋಗ ಪಡಿಸಿಕೊಂಡು ಮಕ್ಕಳು ಸರ್ವತೋಮುಖವಾಗಿ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಕೊಮ್ಮನಾಳು ಶಾಲೆಗೆ ಈಗಾಗಲೇ ಮ್ಯಾಚಿಂಗ್ ಗ್ರಾಂಟ್ ಮುಖಾಂತರ ಬೆಂಚ್, ಡೆಸ್ಕ್ ಹಾಗೂ ಶೌಚಾಲಯ ನಿರ್ಮಾಣದಲ್ಲಿ ಸಹಕರಿಸಿದೆ. ಜಿಲ್ಲೆಯಲ್ಲಿ ಒಂದು ಮಾದರಿ ಶಾಲೆಯಾಗಿ ಹೊರಹೊಮ್ಮಿದ ಸರ್ಕಾರಿ ಕೊಮ್ಮನಾಳು ಶಾಲೆ ಇಂದಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

Rotary Shimoga ಮುಖ್ಯೋಪಾಧ್ಯಾಯ ಚಂದ್ರಪ್ಪ ಮಾತನಾಡಿ, ರೋಟರಿ ಸೇವೆಯನ್ನು ನಾವು ಮರೆಯಲು ಸಾಧ್ಯವೇ ಇಲ್ಲ. ಪ್ರತಿಭಾ ಪುರಸ್ಕಾರ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ರೋಟರಿ ಸಂಸ್ಥೆ ನಮ್ಮ ಶಾಲೆಗೆ ಮಾಡುತ್ತಿದೆ. ಈಗ ಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಯೂನಿಫಾರಂ ಟಿ-ಶರ್ಟ್ ಹಾಗೂ ಅಗತ್ಯ ವಸ್ತುಗಳ ವಿತರಣೆ ಸ್ಮರಣೀಯವಾಗಿದೆ ಎಂದರು.

ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 120 ಜನ ವಿದ್ಯಾರ್ಥಿಗಳಿಗೆ ಟೀ ಶರ್ಟ್, ಯೂನಿಫಾರಂ ಅನ್ನು ವಿತರಿಸಲಾಯಿತು. ಶಿಕ್ಷಕರಾದ ಗೀತಾ ಚಿಕ್ಕಮಠ ಉಪಸ್ಥಿತರಿದ್ದರು.

DC Shivamogga ಆರಂಭಿಕವಾಗಿ ರೈಲ್ವೆ ನಿಲ್ದಾಣದ ಸನಿಹ ಮೂರು ಕಡೆ ಪ್ರೀಪೆಯ್ಡ್ ಆಟೋ ಕೌಂಟರ್ ತೆರೆಯುವ ಉದ್ದೇಶವಿದೆ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

0

DC Shivamogga ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆಪ್ಟಂಬರ್‌ 01ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳನ್ನು ಆರಂಭಿಸುವ ಕುರಿತಂತೆ ಏರ್ಪಡಿಸಲಾಗಿದ್ದ ಸಂಬಂಧಿತ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪೊಲೀಸ್‌, ಸಾರಿಗೆ, ಮಹಾನಗರಪಾಲಿಕೆ ಇವರುಗಳ ಸಹಯೋಗದೊಂದಿಗೆ ಪ್ರೀಪೇಯ್ಡ್‌ವ್ಯವಸ್ಥೆಯನ್ನು ಅನುಷ್ಟಾನಕ್ಕೆ ತರಲಾಗುವುದು. ಅದಕ್ಕೂ ಮುನ್ನ ಆಟೋ ಚಾಲಕರು ಮತ್ತು ಮಾಲೀಕರ ಅಭಿಪ್ರಾಯವನ್ನೂ ಪಡೆದು, ಸಾರ್ವಜನಿಕರು ಹಾಗೂ ಆಟೋ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದವರು ನುಡಿದರು. ಆರಂಭಿಕ ಹಂತದಲ್ಲಿ ರೈಲ್ವೇ ನಿಲ್ದಾಣದಲ್ಲಿ ಆಯ್ದ ಮೂರು ಸ್ಥಳಗಳಲ್ಲಿ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನಗರ ಸ್ಥಳೀಯ ಸ್ವಯಂಸೇವಾ ಸಂಸ್ಥೆ ಚೈತನ್ಯ ರೂರಲ್‌ಡೆವಲಪ್‌ಮೆಂಟ್‌ಸೊಸೈಟಿಯ ವ್ಯವಸ್ಥಾಪಕರು ಆಸಕ್ತಿ ವಹಿಸಿದ್ದು, ಈಗಾಗಲೇ ಅದರ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದ ಅವರು, ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಹಾಗೂ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದವರು ನುಡಿದರು.


ಈ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳ ಆರಂಭದಿಂದ ನಗರದಲ್ಲಿನ ಸಾರ್ವಜನಿಕರು ಹಾಗೂ ನೆರೆಯ ಜಿಲ್ಲೆ, ತಾಲೂಕುಗಳಿಂದ ನಗರಕ್ಕೆ ವಿವಿಧ ಉದ್ದೇಶಗಳಿಗಾಗಿ ಆಗಮಿಸುವವರಿಗೆ ಅನುಕೂಲವಾಗಲಿದೆ ಎಂದ ಅವರು ಸುಗಮ ಸಂಚಾರ ವ್ಯವಸ್ಥೆಯಿಂದಾಗಿ ಶಿಸ್ತು ಮೂಡಲಿದೆ.

ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿರುವ ಈ ವ್ಯವಸ್ಥೆ ಯಶಸ್ವಿಯಾದಲ್ಲಿ ನಗರದ ಎಲ್ಲಾ ಪ್ರಮುಖ ವರ್ತುಲಗಳು, ಜನನಿಬಿಡ ಸ್ಥಳಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಈ ಕೌಂಟರ್‌ಗಳ ಆರಂಭದಿಂದಾಗಿ ನಗರದಲ್ಲಿನ ಆಟೋ ಚಾಲಕರಲ್ಲಿ ಸ್ಪರ್ಧೆ ಅಥವಾ ಚರ್ಚೆಗೆ ಅವಕಾಶಗೊಳ್ಳದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸಮಾಲೋಚನೆ ನಡೆಸಬೇಕು. ಅದಕ್ಕೆ ಚಾಲಕರು ಸಹಕಾರ ನೀಡಬೇಕು. ಚಾಲಕರು ನಿಯಮಾನುಸಾರ ಸದರಿ ಸಾಲಿನಲ್ಲಿ ನಿಂತು ಸಾರ್ವಜನಿಕ ಸೇವೆಗೆ ಸಿದ್ಧರಾಗಬೇಕು. ಪ್ರೀಪೇಯ್ಡ್‌ಸೇವೆ ನೀಡುವ ಪ್ರತಿ ಆಟೋಗಳ ಚಾಲಕರು ನಿಯಮಾನುಸಾರ ವಾಹನ ಚಾಲನ ಪರವಾನಿಗಿ, ನೋಂದಣಿ ಪ್ರಮಾಣಪತ್ರ ಹೊಂದಿರಬೇಕು. ದಿನನಿತ್ಯ ರೈಲ್ವೇ ಸ್ಟೇಷನ್‌ನ ಸ್ಟ್ಯಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಮೊದಲ ಆದ್ಯತೆಯಾಗಿ ಪರಿಗಣಿಸುವ ಬಗ್ಗೆಯೂ ಚರ್ಚಿಸಲಾಗಿದೆ ಎಂದವರು ನುಡಿದರು.

DC Shivamogga ಈಗಿರುವ ಕನಿಷ್ಟ ದರವನ್ನೇ ನಿಗಧಿಪಡಿಸಿಕೊಂಡು ಯಾವುದೇ ಬದಲಾವಣೆಗಳಿಲ್ಲದೆ ಆಟೋ ನಡೆಸಲು ಚಾಲಕರು ಸಹಕರಿಸಬೇಕು. ಉಳಿದಂತೆ ಆಟೋ ಚಾಲಕರ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಗಮನಹರಿಸಲಾಗುವುದು ಎಂದವರು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಮಾತನಾಡಿ, ಹೊಸದಾಗಿ ಪ್ರವೇಶಿಸುತ್ತಿರುವ ಆಟೋಗಳಿಗೆ ನೀಡಲಾಗುತ್ತಿರುವ ಪರವಾನಿಗೆಯನ್ನು ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಬೇಕು. ಮಹಾವೀರ್‌ಸರ್ಕಲ್‌ಸೇರಿದಂತೆ ನಗರದ ಪ್ರಮುಖ ವರ್ತುಗಳಲ್ಲಿ ಬಿಕ್ಷೆ ಯಾಚಿಸುವವರು, ವಸ್ತುಗಳ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಆಕಸ್ಮಿಕ ಅಪಘಾತಗಳು ಸಂಭವಿಸುತ್ತಿವೆ. ಅದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಗಮನಹರಿಸಬೇಕು ಎಂದರು.

ಸಭೆಯಲ್ಲಿ ಪ್ರೊಬೇ಼ಷನರ್‌ಐಎಎಸ್.‌ಅಧಿಕಾರಿ ನಾಗೇಂದ್ರ ಬಾಬು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳಕರ್‌, ಅಧೀಕ್ಷಕ ಶಶಿಧರ್‌, ಮಲ್ಲೇಶಪ್ಪ, ಕೆ.ಎಸ್.ಆರ್.ಟಿ.ಸಿ. ನಿಯಂತ್ರಣಾಧಿಕಾರಿ ದಿನೇಶ್‌ಕುಮಾರ್‌, ರೈಲ್ವೇ ಇಲಾಖೆಯ ಅಧಿಕಾರಿ ಬಿಶ್ವಾಸ್‌, ಮಂಜುನಾಥ್‌ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

DC Shivamogga ಶಿವಮೊಗ್ಗದಲ್ಲಿ ಭೂ ಮಾಫಿಯ, ರೌಡಿ ಫಂಡಿಂಗ್ ಬಗ್ಗೆ ಸಮಗ್ರ ತನಿಖೆಗೆ ಮನವಿ

0

DC Shivamogga ಶಿವಮೊಗ್ಗ ನಗರದಲ್ಲಿ ಲ್ಯಾಂಡ್ ಲಿಟಿಗೇಶನ್ (ಭೂ ಮಾಫಿಯಾ) ನಾಗರೀಕ ಆತಂಕವನ್ನು ಹುಟ್ಟು ಹಾಕುತ್ತಿದೆ, ದುರ್ಬಲ ವರ್ಗದವರ ಸ್ವಾಧೀನಾನುಭವದ ಸ್ವತ್ತುಗಳು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವತ್ತುಗಳು, ತಾಲ್ಲೂಕಿನ ಮೀಸಲು ಭೂಮಿಗಳಾದ ದನಕ್ಕೆ ಮುಪತ್ತು, ಗ್ರಾಮ ಠಾಣಾ, ಕೆರೆ ಜಾಗಗಳು, ಸ್ಮಶಾನಗಳು, ವಾರಸುದಾರರಿಲ್ಲದ ವ್ಯತ್ಯಾಸದ ವಿಸ್ತೀರ್ಣದ ಭೂಮಿ, ಸರಕಾರಿ ಪಡೆ ಭೂ ಪ್ರದೇಶಗಳು ಇದೀಗ ಅನಾಹುತಕಾರಿ ಜಾಲಗಳ ಭೂ ಕಬಳಿಕೆಗೆ ಒಳಗಾಗುತ್ತಿರುವುದು ಹಾಡು ಹಗಲೇ ದರೋಡೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರ ಗಮನಕ್ಕೆ ತರಬಯಸುತ್ತದೆ.

ಟಾಸ್ಕ್ ಪೋರ್ಸ್ ಸಮಿತಿ ರಚಿಸಲು ಒತ್ತಾಯ : ಶಿವಮೊಗ್ಗದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ನಗರ ಹಾಗೂ ತಾಲ್ಲೂಕಿನ ನಾಡ ಕಛೇರಿ, ತಾಲ್ಲೂಕು ಕಛೇರಿಯ ಅಧಿಕಾರಿಗಳು, ಸರ್ವೇ ಇಲಾಖೆಯ ಇಲಾಖಾಧಿಕಾರಿಗಳಲ್ಲಿ ಒಂದಷ್ಟು ಜವಾಬ್ದಾರಿಯುತ ಕೆಲ ರಜಸ್ವ, ಗ್ರಾಮ ಲೆಕ್ಕಿಗ ಅಧಿಕಾರಿಗಳೇ ಶಾಮೀಲು ಆಗಿರುವುದರಿಂದಲೇ ಇಂತಹದೊಂದು ಬಹುದೊಡ್ಡ ಭೂ ಕಬಳಿಕೆ ಆಗುತ್ತಿದೆ ಎಲ್ಲಿ ನೋಡಿದರು ಬೇಲಿ ಸುತ್ತಿ, ಇದು ತಮ್ಮ ಆಸ್ತಿ ಎಂದು ನೇರವಾಗಿಯೇ ನಾಮಫಲಕಗಳನ್ನು ಹಾಕಿಕೊಂಡಿರುವುದು ಅಚ್ಚರಿಯಾಗಿದೆ, ಇದರಿಂದ ಶಿವಮೊಗ್ಗ ತಾಲ್ಲೂಕು ಕೆರೆಗಳ ವಿಸ್ತೀರ್ಣ ಕಡಿತವಾಗಿದೆ, ಹಲವೆಡೆ ಕೆರೆಕಟ್ಟೆ, ಗೋಮಾಳ, ಜಮೀನು ಕರಾಬು, ಸರಕಾರಿ ಪಡೆ ಜಮೀನುಗಳೇ ಮಂಗ ಮಾಯವಾಗಿ ಲೇ-ಔಟ್‌ಗಳಾಗಿ ಪರಿವರ್ತಿತಗೊಂಡಿದೆ, ಇದಕ್ಕೆ ನೀಡಲಾಗಿರುವ ಪಥ ಬದಲಾವಣೆ, ನಕ್ಷೆ ತಿದ್ದುಪಡಿ, ನಕಾಶೆ ತೋರಿಸಿದ ಹಾದಿ ತಿರುಚುವಿಕೆಗಳಿಂದ ಪಕ್ಕಾಪೋಡಿಗಳು ರಾತ್ರೋರಾತ್ರಿ ಸಿದ್ದಗೊಂಡು ಇದೇ ರೆಕಾರ್ಡ್‌ಗಳನ್ನು ಘನ ನ್ಯಾಯಾಲಯಕ್ಕೂ ಸಲ್ಲಿಸಿರುವ ಪ್ರಕರಣಗಳಲ್ಲಿ ಸತ್ಯಾಸತ್ಯತೆ ಪರೀಶೀಲಿಸಬಹುದಾಗಿದೆ,

ಎಲ್ಲಿಲ್ಲಿ ಈ ಪ್ರಕರಣಗಳು : ಇಂತಹ ಪ್ರಕರಣಗಳು ನಗರದ ಆಲ್ಕೊಳ ಗ್ರಾಮ, ಇಂದಿನ ನಗರ ವ್ಯಾಪ್ತಿ, ಗಾಡಿಕೊಪ್ಪ, ಮಲ್ಲಿಗೆನಹಳ್ಳಿ, ಕೋಟೆಗಂಗೂರು, ಗೆಜ್ಜೆನಹಳ್ಳಿ, ನವುಲೆ, ರಾಗಿಗುಡ್ಡ, ಅಬ್ಬಲಗೆರೆ, ತೇವರ ಹಾಗೂ ಗೋಂದಿ ಚಟ್ನಳ್ಳಿ, ಹಸೂಡಿ, ಬೊಮ್ಮನಕಟ್ಟೆ, ಅನುಪಿನಕಟ್ಟೆ, ರಾಮೀನಕೊಪ್ಪ, ಹಾಯ್‌ಹೊಳೆ, ಸೋಗಾನೆ, ಕೊರ್ಲಳ್ಳಿ, ಅಗಸವಳ್ಳಿ ಇನ್ನೂ ಮುಂತಾದೆಡೆ ಇಂತಹದೊಂದು ಪ್ರಕರಣಗಳು ಹೆಚ್ಚುತ್ತಿದೆ, ಇದಕ್ಕೆ ಸವಳಂಗ ರಸ್ತೆಯ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ದೇವರ ಗುಡಿ ಹೊಡೆದು ಹಾಕಿ ಜಮೀನು, ಕೆರೆ ಜಾಗವನ್ನು ಹದ್ದುಬಸ್ತು ಮಾಡಿಕೊಳ್ಳಲು ಮುಂದಾದವರ ವಿರುದ್ದ ಸಾರ್ವಜನಿಕರೇ ರಸ್ತೆತಡೆ ನಡೆಸಿದ ಪ್ರಕರಣ, ಹಾಗೂ ಮೂಲ ನಕ್ಷೆಯ ಆಧಾರಿತವಲ್ಲದ ಸರ್ವೇ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗದಡಿ ಸ್ವಯಂ ಸಿದ್ದಪಡಿಸಿ ಸರಕಾರಿ ದಾಖಲೆಯನ್ನಾಗಿಸಿದ ನಕ್ಷೆಯನ್ನು ನ್ಯಾಯಾಲಯ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ನೀಡಿ ವಂಚಿಸುತ್ತಿರುವುದು ಕಂಡು ಬಂದಿದೆ

DC Shivamogga ಇನ್ನೂ ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಮೇಲೆ ಕಬ್ಜಾ : ವಿನೋಬಾನಗರದ ೨ನೇ ಮುಖ್ಯರಸ್ತೆಯ ಆಜು-ಬಾಜಿನಲ್ಲಿ ಒಟ್ಟು ಈಗಾಗಲೇ ಗೊತ್ತು ಪಡಿಸಿದಂತೆ ಒಟ್ಟು ಹದಿನೆಂಟು ನಿವೇಶನಗಳನ್ನು ಮೂಲ ಪಾರ್ಟಿಯಿಂದ ಉಪನೊಂದಣಾಧಿಕಾರಿಗಳವರ ಕಛೇರಿನಲ್ಲಿ ನೊಂದಣಿ ಮಾಡಿಸಿಕೊಂಡಿದ್ದೇವೆ ಎನ್ನುವ ಭೂ ಮಾಫಿಯಾದ ಮಂದಿಗಳಿಗೆ ಯಾರು ಮೂಲ ವಾರಸುದಾರರು ಎನ್ನುವುದು ಇಂದಿಗೂ ಸ್ಪಷ್ಟ ಪಡಿಸುವ ದಾಖಲೆಗಳು ಇಂತಿವರ ಬಳಿ ಇಲ್ಲವಾಗಿದೆ, ಜಿಪಿಎ ( ಜನರಲ್ ಪೋರಾಪಟ್ ಅಥಾರಿಟಿ) ಎನ್ನುವ ದಾಖಲೆಗಳ ಮೂಲಕ ನೊಂದಣಿ ಮಾಡಿಸಿದ್ದೇವೆ ಎಂದು ಪಾಲಿಕೆಯಲ್ಲಿ ಇ-ಸ್ವತ್ತು ಮಾಡಿಸಿಕೊಳ್ಳಲಾಗಿದೆ, ಅಲ್ಲದೆ ಇದೇ ದಾಖಲೆಗಳನ್ವಯ ಎಲ್‌ಐಸಿ ಹಾಗೂ ಕೆನರಾ ಬ್ಯಾಂಕುಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲಮೇಳ ಮಾಡಿಕೊಳ್ಳಲಾಗಿದೆ, ಈ ಸಂಗತಿ ವಿನೋಬಾನಗರ ಪೊಲೀಸ್ ಠಾಣೆಯವರಿಗೆ ಗೊತ್ತಿದ್ದರು ಸಹ ಯಾವುದೇ ಕ್ರಮ ಜರುಗಿಸದೆ ಇರುವುದು ತಮ್ಮ ಗಮನಕ್ಕೆ ತರಯಸುತ್ತೇವೆ, ಮಾನ್ಯ ಉಚ್ಚ ನ್ಯಾಯಾಲಯ ಹಾಗೂ ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಜಿಪಿಎ ಆಧಾರದ ಮೇಲೆ ಈ ಸದರಿ ಪತ್ರದಲ್ಲಿ ನಮೂದಿಸಲಾಗಿದೆ ಎನ್ನುವ ಕಾರಣಕ್ಕೆ ಜಿಪಿಎ ಹೋಲ್ಡರ್ ವ್ಯಕ್ತಿ ಎಂದಿಗೂ ಇನ್ನೋರ್ವರಿಗೆ ಮಾರಾಟ (ಪರಭಾರೆ) ಮಾಡುವ ಹಕ್ಕು ಹೊಂದಲು ಸಾಧ್ಯವಿಲ್ಲ, ಒಂದು ವೇಳೆ ಮಾರಾಟ ಮಾಡಲು ಮುಂದಾಗಿ ನೊಂದಾಯಿಸಿದ್ದರೆ ಅಂತಹ ಪತ್ರಗಳು ಸಿಂಧುತ್ವ ಕಳೆದುಕೊಳ್ಳುತ್ತದೆ, ಹಾಗೂ ನೊಂದಾಯಿಸಿದ ಉಪನೊಂದಣಾಧಿಕಾರಿಗಳನ್ನು ಅಮಾನತ್ತು ಪಡಿಸಿ ಸುಳ್ಳು ದಾಖಲೆ ಸೃಷ್ಟಿಸಿದ ಆದಾರದ ಆಸಾಮಿಗಳ ಮೇಲೆ ಸ್ಥಳೀಯ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮಾಡಬಹುದಾಗಿದ ಎಂದಿದ್ದರು ಯಾತಕ್ಕಾಗಿ ಇಂದಿಗೂ ಈ ಪೋರ್ಜರಿಸ್ಟ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ಇಂತಹ ಅಸಲಿ ಕಾರಣಕ್ಕಾಗಿ ತಾಲ್ಲೂಕು ಕಛೇರಿ, ಸರ್ವೇ ಇಲಾಖೆ, ಉಪನೊಂದಾವಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಮಹಾನಗರ ಪಾಲಿಕೆ ಕೆಲ ಅಧಿಕಾರಿಗಳು ಶಾಮೀಲು ಆಗಿರುವುದರಿಂದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಜಿಲ್ಲಾಧಿಕಾರಿಗಳಿಗೆ ಸಮಗ್ರ ತನಿಖೆಗೆ ಟಾಸ್ಕ್ ಪೋರ್ಸ್ ಸಮಿತಿ ರಚಿಸಲು ಒತ್ತಾಯಿಸುತ್ತದೆ,

ಬೊಮ್ಮನಕಟ್ಟೆಯಲ್ಲಿ ೧೦ ಗುಂಟೆ ಜಾಗ, ಅಗಸವಳ್ಳಿಯ ೪ ಎಕರೆ ಜಾಗ, ವಿನೋಭಾನಗರದ ೨ನೇ ಮುಖ್ಯರಸ್ತೆಯ ೧೮ ನಿವೇಶನಗಳು, ಆಟೋ ಕಾಂಪ್ಲೆಕ್ಸ್ ನಲ್ಲಿ ಖಾಸಗಿ ವ್ಯಕ್ತಿಗೆ ಒಂದೂವರೆ ಕೋಟಿಗೆ ಮಾರಾಟವಾದ ಸರ್ಕಾರಿ ಆಸ್ತಿ, ಭಾರ್ಗವಿ ಪೆಟ್ರೋಲ್ ಬಂಕ್ ಹಿಂಬದಿ ಇರುವ ಇಪ್ಪತ್ತಕ್ಕೂ ಹೆಚ್ಚು ಪಾಲಿಕೆ ಜಾಗಗಳಿಗೆ ಖಾಸಗಿ ವ್ಯಕ್ತಿಗಳು ಹಾಕಿರುವ ನಾಮಫಲಕಗಳು, ಗಾಡಿಕೊಪ್ಪ ಹಾಗೂ ಆಲ್ಕೋಳದಲ್ಲಿ ನಡೆಯುತ್ತಿರುವ ಭೂ ಕಬ್ಜಾಗಳು, ಶಂಕರಚಾರ್ಯರ ಲೇ ಔಟ್‌ನಲ್ಲಿ ಕನಿಷ್ಟ ೧೫ಕ್ಕೂ ಹೆಚ್ಚು ನಿವೇಶನಗಳಿಗೆ ಸುತ್ತಿರುವ ಬೇಲಿಗಳು, ಸರ್ಕಾರಿ ಕರಾಬು ಒಂದು ಎಕರೆ ಜಾಗಕ್ಕೆ ನಿರ್ಮಿಸಲಾದ ಸಿಮೆಂಟ್ ಕಾಂಪೊಂಡ್‌ಗಳು, ಅನುಪಿನ ಕಟ್ಟೆನಲ್ಲಿರುವ ಗ್ರಾಮಠಾಣಾ ಭೂಮಿಗಳು, ಪುರದಾಳಿನ ಗ್ರಾಮ ಠಾಣ ಭೂಮಿಗಳು, ಗೋಪಾಳದ ಡಿವಿಜಿ ವೃತ್ತದಲ್ಲಿರುವ ನಾಲ್ಕು ಎಕರೆಗೂ ಅಧಿಕ ಸೆಟ್ಲಮೆಂಟ್ ಭೂಮಿ, ಸರ್ವೇ ನಂಬರ್ ೧ರಲ್ಲಿನ ೩೮ ಗುಂಟೆ ಭೂ ವಿಸ್ತೀರ್ಣ, ಅಗಸವಳ್ಳಿ ಗ್ರಾಪಂ ನಲ್ಲಿರುವ ಹಾಯ್‌ಹೊಳೆಯ ೧೬೭ ಸರ್ವೇ ನಂಬರ್ ಭೂಮಿ ಚಕ್ರಾ ಸಾವೆ ಹಕ್ಲು ಭೂಮಿನಲ್ಲಿ ಮಣ್ಣು ಮಾರಾಟ, ಇಟ್ಟಿಗೆ ಗುಮ್ಮಿ ಸ್ಥಾಪನೆ, ಲೇ ಔಟ್ ನಿರ್ಮಾಣ, ಮಂಡ್ಲಿ ಗ್ರಾಮದ ಸರ್ವೇ ನಂಬರ್ ೧೩೫ ಹಿಸ್ಸಾ ೨ರಲ್ಲಿನ ೨ ಎಕರೆ ಭೂ ಪ್ರದೇಶ ಒತ್ತುವರಿ, ತುಂಗಾನಗರದ ಕೆರೆ ಭೂ ಪ್ರದೇಶದ ಕರಾಬು ಜಾಗಕ್ಕೂ ಬೇಲಿ ಸುತ್ತಿರುವ ಪ್ರಕರಣಗಳಿವೆ ಹಾಗೂ ಆಯನೂರಿನ ಡಗಳಿ ಮನೆ ಸರ್ವೇ ನಂಬರ್ ೧೦ ರಲ್ಲಿ ೨೭.೧೩ ಎಕರೆ ಮೀಸಲು ಭೂಮಿ ಒತ್ತುವರಿ, ನಕಲಿ ದಾಖಲೆಗಳ ಸೃಷ್ಠಿ ಹಾಗೂ ದಾಸ್ ವೆಂಚರ್‍ಸ್ ಎನ್ನುವ ರೆಸಾರ್ಟ್ ನಿರ್ಮಾಣ, ಇನ್ನುಳಿದಿದ್ದು ಖಾಸಗಿ ವ್ಯಕ್ತಿಗಳು ಭೂ ಕಬ್ಜಾ ಮಾಡಿಕೊಂಡಿರುವ ಅಸಲಿ ಪ್ರಕರಣಗಳ ಜೊತೆಗೆ ಇದಕ್ಕೆ ಹೊಂದಿಕೊಂಡಂತೆ ಇರುವ ಹನ್ನೊಂದು ಎಕರೆ ಕರೆ ಜಾಗ ಭೂ ವಿಸ್ತೀರ್ಣ ಕಬಳಿಕೆಗಳು ಕೊಹಳ್ಳಿ ಗ್ರಾಪಂ ಗೆ ಗೊತ್ತಿದ್ದರು ಶಾಮೀಲು ಆಗಿರುವುದು ಬೆಳಕಿಗೆ ಬಂದಿರುವುದರಿಂದ ಜಿಲ್ಲಾಧಿಕಾರಿಗಳಾದ ತಾವುಗಳು ತನಿಖಗೆ ರೆವಿನ್ಯೂ ಇಲಾಖೆ ಹಾಗೂ ಡಿಸಿ ಕಛೇರಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಟಾಸ್ಕ್ ಪೋರ್ಸ್ ಕಮಿಟಿ ರಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರಿಗೆ ಈ ಮೂಲಕ ಒತ್ತಾಯಿಸುತ್ತದೆ.

ಈ ಮೇಲಿನ ಕೋಟ್ಯಾಂತರ ರೂ ಮೌಲ್ಯದ ಭೂ ಪ್ರದೇಶಗಳ ಕಬಳಿಕೆಗಾಗಿ ಅಧಿಕಾರಿಗಳನ್ನು ಶಾಮೀಲು ಮಾಡಿಕೊಂಡು, ರೌಡಿ ಎಲಿಮೆಂಟ್‌ಗಳಿಗೆ ಕೋಟಿ ಕಂತೆಗಳು ಕೊಟ್ಟು ಭದ್ರತೆಗಾಗಿ ದುರ್ಬಲ ವರ್ಗದವರಿಗೆ ಬೆದರಿಸುವುದಕ್ಕಾಗಿ, ಬೇಲಿ ಸುತ್ತಿಕೊಡುವುದಕ್ಕಾಗಿ ನೇಮಿಸಿಕೊಂಡಿರುವುದು ಶಿವಮೊಗ್ಗ ನಗರದಲ್ಲಿ ಕಂಡು ಬಂದಿದೆ.

ಈ ಮೇಲಿನ ಮೀಸಲು ಭೂಮಿಗಳಿಗೆ ಡಿ-ನೋಟಿ ಪೈ ಮಾಡುವ ಬ್ರೋಕರ್ : ಶಿವಮೊಗ್ಗದಲ್ಲಿ ಲ್ಯಾಂಡ್ ಡೆವಲಪರ್ ಎನ್ನುವ ನಕಲಿಗಳಿಗೆ ಇಂತಹ ಮೀಸಲು ಭೂಮಿಗಳನ್ನು ಸರ್ವೇ ಇಲಾಖೆ, ಕಂದಾಯ ಇಲಾಖೆ, ಎಸಿ ಕಛೇರಿ ಅಧಿಕಾರಿಗಳಿಗೆ ಪುಸಲಾಯಿಸಿ, ಲಂಚದ ಆಮಿಷಗಳೊಡ್ಡಿ ದಿನವಹಿ ಇಲ್ಲಿಯೇ ಮೊಕ್ಕಾಂ ಹೂಡಿ ಸರ್ಕಾರಿ ಅಧಿಕಾರಿಯಂತೆ ಅಂಡಲೆವ ಬ್ರೋಕರ್‌ಗೆ ಲಕ್ಷಾಂತರ ರೂ ಹಣ ಕೊಟ್ಟು ಡಿ-ನೋಟಿ ಪೈ ಮಾಡಿಸುವ ಅಸಲು ಸಂಗತಿಗಳಿರುವುದನ್ನು ತಾವು ಈ ಇಲಾಖಾಧಿಕಾರಿಗಳಿಗೆ ವಿಚಾರಣೆ ನಡೆಸಿ ಅಂತಹ ಬ್ರೋಕರ್‌ಗಳ ಮೇಲೆ ಗುಂಡಾಕಾಯ್ದೆಯಡಿ ದೂರು ದಾಖಲಿಸಿ ಗಡಿಪಾಡು ಮಾಡುವ ಸಲುವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರಿಗೆ ಈ ಮೂಲಕ ಒತ್ತಾಯಿಸುತ್ತದೆ. ಈ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೆಗೌಡ್ರು ಹಾಗೂ ಬೇರೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಿವುಗೌಡ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ನಗರಾಧ್ಯಕ್ಷರಾದ ಜೀವನ ಡಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ್ ಫ್ರಾಂಕ್ಲಿನ್ ಉಮೇಶ್ ಗದ್ದೆಮನೆ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಹಾಗೂ ಜೈ ಕೃಷ್ಣ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು

Shimoga News ತಾ.26-7-25 ಶನಿವಾರ ಶಿವಮೊಗ್ಗ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

Shimoga News ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ.

Shimoga News ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.