Monday, February 23, 2026
Monday, February 23, 2026
Home Blog Page 232

CM Siddaramaiah ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ‘ಮತಗಳ್ಳತನ” ಆರೋಪ, ಸೀಎಂ ಸಿದ್ಧರಾಮಯ್ಯನವರ ಪ್ರತಿಕ್ರಿಯೆ

0

CM Siddaramaiah ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು.

ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

CM Siddaramaiah ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ x ಖಾತೆಯ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

DC Shivamogga ಜಿಎಸ್ ಟಿಯಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

0

DC Shivamogga ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ ಡೀಲರ್‌ದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ಜಿಎಸ್‌ಟಿ ವ್ಯಾಪ್ತಿಯಲ್ಲಿ ವಾರ್ಷಿಕ 1 ಕೋಟಿ ರೂ. ವಹಿವಾಟು ನಡೆಸಲು ಅವಕಾಶ ಮಾಡಿಕೊಡಬೇಕು. ನಮಗೆ ಶೇ. 3ರಿಂದ 4ರಷ್ಟು ಮಾರ್ಜಿನ್ ಇದ್ದು, ವಾರ್ಷಿಕ ಒಂದು ಲಕ್ಷ ರೂ.ನಿಂದ ಎರಡು ಲಕ್ಷ ರೂ. ವರೆಗೆ ಆದಾಯ ಇರುತ್ತದದೆ. ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆರೋಗ್ಯ ಖರ್ಚು ಎಲ್ಲವನ್ನು ನಿರ್ವಹಣೆ ಮಾಡಬೇಕಿರುತ್ತದೆ. ಜಿಎಸ್‌ಟಿಯಲ್ಲಿ ಬರುವುದರಿಂದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳಾಗುತ್ತಿವೆ ಎಂದು ಮನವಿಯಲ್ಲಿ ತಿಳಿಸಿದರು.
DC Shivamogga ಈಗಾಗಲೇ ನಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಆರೋಗ್ಯ ವಿಮೆ, ಸರ್ಕಾರಿ ಸೌಲಭ್ಯಗಳ ಮತ್ತು ಕಾರ್ಮಿಕ ಕಾರ್ಡ್ಗಳಿಂದಲೂ ವಂಚಿತರಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಗಮನಿಸಿ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಯುಕೆ ಪ್ರಕಾಶ್, ಸಹ ಕಾರ್ಯದರ್ಶಿ ಮೋಹನ್, ಖಜಾಂಚಿ ಕೆ ಕೆ ಚಂದ್ರಶೇಖರ್, ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್ ಎಂ ಸಿ, ನಾಗರಾಜ್, ಮಲ್ಲಿಕಾರ್ಜುನ್, ಜಲೀಲ್ ಸಾಬ್, ನವೀನ್, ರಾಘವೇಂದ್ರ ಇತರರಿದ್ದರು.

Department of Sainik Welfare & Resettlement ಬಿಇಎಲ್ ನಲ್ಲಿ 10 ಖಾಯಂ ಚಾಲಕರ ಹುದ್ದೆಗಳಿಗೆ ಭರ್ತಿ ಮಾಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

0

Department of Sainik Welfare & Resettlement ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಬೆಂಗಳೂರು ಇವರು 10 ಖಾಯಂ ಚಾಲಕ ಹುದ್ದೆಗಳನ್ನು ತುಂಬಲು ಮಾಜಿ ಸೈನಿಕರಿಂದ ಆಹ್ವಾನಿಸಿದ್ದಾರೆ.

43 ವರ್ಷದೊಳಗಿನ ಎಸ್‌ಹೆಚ್‌ಎಪಿಇ-1 ಮೆಡಿಕಲ್ ಕ್ಯಾಟಗರಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 20500-3%-7900 ಮತ್ತು ಇತರೆ ಭತ್ಯೆಗಳು ಅನ್ವಯವಾಗುತ್ತವೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 6 ಕಡೆಯ ದಿನವಾಗಿರುತ್ತದೆ.

ಅರ್ಜಿಯನ್ನು ವೆಬ್‌ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-22195650 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

MESCOM ಜುಲೈ 26 ಹಳೇ ಮಂಡ್ಲಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್‌ನಿಂದ 4ನೇ ಕ್ರಾಸ್ ವರೆಗೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ್ ರೈಸ್ ಮಿಲ್, ಬೆನೆಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Madhu Bangarappa ಶಿವಮೊಗ್ಗದಲ್ಲಿ ಮಲೆನಾಡು ಪ್ರದೇಶದ ಪ್ರಮುಖ ಆರೋಗ್ಯ ಕೇಂದ್ರದ ಅಭಿವೃದ್ಧಿ- ಸಚಿವ ಮಧು ಬಂಗಾರಪ್ಪ

0

Madhu Bangarappa ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಬುಧವಾರ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಸಚಿವರು ಪರಿಶೀಲನೆ ನಡೆಸಿದರು.

ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ನಿರ್ಧರಿಸಿದರು.

ಬರಲಿದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ
ಈ ಕೇಂದ್ರವು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಪೂರ್ಣ ಆರೋಗ್ಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಸಂಸ್ಥೆಗಳ ಸಮೂಹವನ್ನು ಒಳಗೊಂಡಿರುತ್ತದೆ. ಶಿವಮೊಗ್ಗವು ಈಗಾಗಲೇ ಅತ್ಯುತ್ತಮ ರಸ್ತೆ, ರೈಲು ಮತ್ತು ವಾಯು ಸಂಪರ್ಕವನ್ನು ಹೊಂದಿರುವುದರಿಂದ, ನಗರವು ಮಲೆನಾಡು ಪ್ರದೇಶಕ್ಕೆ ಆರೋಗ್ಯ ಕೇಂದ್ರವಾಗಲಿದೆ ಎಂದು ಸಚಿವರು ವಿವರಿಸಿದರು.

“ಕಲಬುರಗಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಿದಂತೆಯೇ, ಶಿವಮೊಗ್ಗವು ಈಗ ಮಲೆನಾಡಿನ ಪ್ರದೇಶದ ವೈದ್ಯಕೀಯ ಸೇವಾ ಹಬ್‌ ಆಗಿ ಕಾರ್ಯನಿರ್ವಹಿಸಲಿದೆ” ಎಂದು ಡಾ. ಪಾಟೀಲ್ ಹೇಳಿದರು.

Madhu Bangarappa “ಸಿಮ್ಸ್ ಮತ್ತು ಮೆಗ್ಗಾನ್‌ ಆಸ್ಪತ್ರೆಗಳು ಪ್ರಸ್ತುತ ಕಿಕ್ಕಿರಿದು ತುಂಬಿವೆ ಮತ್ತು ವೈದ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಹೊರೆಯನ್ನು ಕಡಿಮೆ ಮಾಡಲು ಮತ್ತು ಈ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಸುಧಾರಿಸಲು ಹೊಸ ಸ್ಪೆಷಾಲಿಟಿ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲು ಹೆಚ್ಚಿನ ಹಣವನ್ನು ಹೂಡುತ್ತೇವೆ” ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿವಮೊಗ್ಗ ಜಿಲ್ಲೆ ಕೇವಲ ಏಳು ತಾಲ್ಲೂಕುಗಳನ್ನು ಹೊಂದಿದ್ದರೂ, ಸಿಮ್ಸ್ ಮತ್ತು ಮೆಗ್ಗಾನ್‌ ಆಸ್ಪತ್ರೆಗಳಿಗೆ ನೆರೆಯ 26 ತಾಲೂಕುಗಳಿಂದಲೂ ರೋಗಿಗಳು ಬರುತ್ತಾರೆ. ಇದರಿಂದ ಹೊರೆ ಹೆಚ್ಚಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

“ಈ ಒತ್ತಡವನ್ನು ಕಡಿಮೆ ಮಾಡಲು ಮತ್ತು ಗುಣಮಟ್ಟದ ಆರೈಕೆಯನ್ನು ಖಚಿತಪಡಿಸಿಕೊಳ್ಳಲು, ಸುಧಾರಿತ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದು ಅವಶ್ಯಕವಾಗಿದೆ” ಎಂದು ಹೇಳಿದರು.

ತಕ್ಷಣದ ನವೀಕರಣಗಳ ಭಾಗವಾಗಿ, ಮೆಗ್ಗಾನ್‌ ಆಸ್ಪತ್ರೆಗೆ ಹೆಚ್ಚುವರಿ ಎಂಆರ್‌ ಐ ಯಂತ್ರ ಮತ್ತು ಶವ ಸಾಗಿಸುವ ವಾಹನವನ್ನು ಖರೀದಿಸಲು ಸರ್ಕಾರ ಅನುಮೋದನೆ ನೀಡಿದೆ.

Nikhil Kumaraswamy ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಅಪಸ್ವರ ಇಲ್ಲ- ನಿಖಿಲ್ ಕುಮಾರಸ್ವಾಮಿ

0

Nikhil Kumaraswamy ಶಿವಮೊಗ್ಗದಲ್ಲಿ ಜೆಡಿಎಸ್ ಯುವರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಜನರೊಂದಿಗೆ ಜನತಾದಳ ಕಾರ್ಯಕ್ರಮ ವಿಶೇಷವಾಗಿ ಸಾಗುತ್ತಿದೆ.ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನ ಕೈಗೊಂಡಿದ್ದೇವೆ
ಜೆಡಿಎಸ್ ವರಿಷ್ಠರ ಆದೇಶದಂತೆ ಪ್ರವಾಸ ಹೊರಟಿದ್ದೇವೆ
ಜನಾಭಿಪ್ರಾಯವನ್ನು ಕೂಡ ಸಂಗ್ರಹಣೆ ಮಾಡುತ್ತಿದ್ದೇವೆ
ಈ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಸಾಗುತ್ತಿದೆ
45 ರಿಂದ 50 ದಿನಗಳ ಕಾಲ ಇದು ನಿರಂತರವಾಗಿ ಸಾಗುತ್ತದೆ
ಶಿವಮೊಗ್ಗ ನಗರ ಭದ್ರಾವತಿ ಹಾಗೂ ಗ್ರಾಮಾಂತರ ಕ್ಷೇತ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ತಮ್ಮ ಪಕ್ಷದ ಯೋಜನೆ ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರದ ಪ್ರಸ್ತಾಪಸಿದ
ನಿಖಿಲ್ ಕುಮಾರಸ್ವಾಮಿ,
ಮೈತ್ರಿ ಬಹಳ ಬಲವಾಗಿ ಮುಂದುವರಿಯುತ್ತಿದೆ
ಮೈತ್ರಿಯಲ್ಲಿ ಯಾವುದೇ ರೀತಿಯ ಅಪಸ್ವರ ಹಾಗೂ ಬಿರುಕು ಉಂಟುಮಾಡುವ ಪ್ರಶ್ನೆಯೇ ಇಲ್ಲ.ಇದು ದೇವೇಗೌಡರು ತೆಗೆದುಕೊಂಡ ನಿರ್ಧಾರ ಶಾಶ್ವತವಾಗಿ ಉಳಿಯುತ್ತದೆ
ನರೇಂದ್ರ ಮೋದಿ ಅವರಿಗೆ ಶಕ್ತಿಯನ್ನು ತುಂಬುವಂತ ಕೆಲಸ ಮಾಡಲಾಗುತ್ತದೆ ಎಂದರು.

ಎನ್ ಡಿ ಎ ಬೆಂಬಲಕ್ಕೆ ನಾವು ನಿಂತಿದ್ದೇವೆ
ಮುಂದಿನ 2028ರ ಚುನಾವಣೆಯಲ್ಲಿ ಕೂಡ ಇದೇ ಮೈತ್ರಿ ಸಾಗುತ್ತದೆ
ನೂರಕ್ಕೆ ನೂರರಷ್ಟು ಮೈತ್ರಿ ಸದೃಢವಾಗಿ ಮುಂದಿನ ಚುನಾವಣೆಯಲ್ಲಿ ಇರುತ್ತದೆ. ಎಸ್ಐಟಿಗೆ ಧರ್ಮಸ್ಥಳ ಪ್ರಕರಣ ನೀಡಿರುವ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ,
ಅದು ನ್ಯಾಯಾಲಯದಲ್ಲಿದೆ ವಿಚಾರ ಆಚೆ ಬಂದ ಮೇಲೆ ಚರ್ಚೆ ಮಾಡೋಣ ಎಂದರು.

ಈ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರ ಹಗರಣಗಳ ಅಸ್ತ್ರ ಆಗಿದೆ ಎಂದರು.

Nikhil Kumaraswamy ಸಣ್ಣ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ವಸೂಲಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್
ರಾಜ್ಯ ಸರ್ಕಾರ ದಿವಾಳಿಗೆ ಹೋಗಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಇಂದು ಸುನಾಮಿ ರೀತಿ ಆಗಿದೆ
ಹಾಗಾಗಿ ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ಬೇಕರಿಗಳ ಮೇಲೆ ಇವರ ದೌರ್ಜನ್ಯ ಮಾಡುತ್ತಿದ್ದಾರೆ. ಇದು ನಿಜಕ್ಕೂ ಕೂಡ ಶೋಭೆ ತರುವಂತದ್ದಲ್ಲ, ವ್ಯಾಪಾರಿಗಳು ಬೀದಿಗಿಳಿದು ಹೋರಾಟ ಮಾಡಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಸಮಯ ನೀಡಿದ್ದು ಟಿವಿಯಲ್ಲಿ ನೋಡಿದ್ದೇನೆ.ಶಾಸಕರಿಗೆ 50 ಕೋಟಿ ಶಾಸಕರ ನಿಧಿಗೆ ನೀಡಿರುವ ವಿಚಾರ
ಇದು ಮೂಗಿಗೆ ತುಪ್ಪ ವರಿಸುವ ಕೆಲಸ
50 ಕೋಟಿ ಘೋಷಣೆ ಮಾಡಿರುವುದು ಕಾಂಗ್ರೆಸ್ ಎಂಎಲ್ಎಗಳಿಗೆ ಮಾತ್ರ
ನಮ್ಮ ಪಕ್ಷದವರು ಹಾಗೂ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ?ಎಂದು ಸರ್ಕಾರಕ್ಕೆ ಪ್ರಶ್ನಿಸಿದರು.

50 ಕೋಟಿಯಲ್ಲಿ ಎಲ್ಲಾ ತಾಲೂಕುಗಳನ್ನ ಅಭಿವೃದ್ಧಿಪಡಿಸಲು ಸಾಧ್ಯವಿದೆಯೇ
ಇದು ನಿಜಕ್ಕೂ ಕೂಡ ಮೂಗಿಗೆ ತುಪ್ಪ ವರಿಸುವ ಕೆಲಸ ಎಂದು
ಟೀಕಿಸಿದರು.

Basaveshwara Veerashaiva Lingayat Samaja ಶ್ರೀಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭ

0

Basaveshwara Veerashaiva Lingayat Samaja ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾಸಂಘದ ವತಿಯಿಂದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಜು.31ರಂದು ಸಂಜೆ 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳು ನೆಹರೂ ರಸ್ತೆ, ಬಸವಸದನ ಸಮಾಜದ ಕಛೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕಾರ್ಯದರ್ಶಿ ಎಸ್.ಪಿ. ದಿನೇಶ್ ಕೋರಿದ್ದಾರೆ.
Basaveshwara Veerashaiva Lingayat Samaja ಈ ಕಾರ್ಯಕ್ರಮ ಜು. 27ರಂದು ಏರ್ಪಡಿಸಿದ್ದು, ಇದೀಗ ಜು.31ಕ್ಕೆ ಈ ಕಾರ್ಯಕ್ರಮ ಜರುಗಲಿದೆ. ಮಾನ್ಯ ಸದಸ್ಯರು ದಿನಾಂಕ ಬದಲಾವಣೆ ಗಮನಿಸಲು ಪ್ರಕಟಣೆಯಲ್ಲಿ ಕೋರಿದೆ.
ಜು.31ರ ಸಂಜೆ ಜರುಗುವ ಕಾರ್ಯಕ್ರಮದಲ್ಲಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.

Department of Labor ಪರಿಶಿಷ್ಠ ಜಾತಿ/ ವರ್ಗಗಳ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ನೌಕರಿ ನೀಡಿದರೆ ಮ್ಯಾನೇಜ್ ಮೆಂಟಿಗೆ ತಲಾ ₹ 7000 ನೀಡಿಕೆ- ಸಚಿವ ಸಂತೋಷ್ ಲಾಡ್

0

Department of Labor ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು.

ಅವರಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ, ಸಾರಿಗೆ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಲಾಖೆಯಡಿ ಸರ್ಕಾರ ಸಾಂಸ್ಕೃತಿಕ ಕಾರ್ಮಿಕರ ಕಾರ್ಯಕರ್ತರ ಕಾಯಿದೆಗೆ ಉದ್ದೇಶಿಸಿದ್ದು, ಅದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸುವ ಕೆಲಸ ಇಲಾಖೆಯಡಿ ಮಾಡಲಾಗುತ್ತಿದೆ.ಆಶಾದೀಪ ಯೋಜನೆಯಡಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ಕೆಲಸ ನೀಡಿದಲ್ಲಿ ಅಥವ ಅಪ್ರೆಂಟೈಸರ್ ನೀಡದಲ್ಲಿ ತಿಂಗಳಿಗೆ ಒಬ್ಬ ಅಭ್ಯರ್ಥಿಗೆ ಸುಮಾರು 7ಸಾವಿರ ರೂಪಾಯಿವರೆಗೆ ಮ್ಯಾನೇಜ್ ಮೆಂಟಿಗೆ ರಿಅಂಬ್ರೈಸ್ ಮಾಡಲಾಗುವುದು ಎಂದು ಸಚಿವ ಲಾಡ್ ಮಾಹಿತಿ ನೀಡಿದರು.

Department of Labor ಈ ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸಲೆಂದು ತಾವು ಕಾರ್ಮಿಕ ಸಚಿವರಾದ ಬಳಿಕ ಹೊಸಹೊಸ ಯೋಜನೆಗಳನ್ನು ತರಲಾಗಿದೆ. ರಾಜ್ಯದಲ್ಲಿ ಪ್ರಸಕ್ತ 91 ವರ್ಗದ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾರ್ಮಿಕರನ್ನು ಗುರುತಿಸಿ ಕಾರ್ಮಿಕರ ದತ್ತಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ.ಪ್ರಾರಂಭಿಕವಾಗಿ ಹೊಸಹೋಸ ಯೋಜನೆಗಳನ್ನು ಕಾರ್ಮಿಕರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯೂ ಇದೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಹೊಸ ಕಾರ್ಮಿಕ ಯೋಜನೆಗಳ ಕಾರ್ಮಿಕರಿಗೆ ಅಪಘಾತ ವಿಮೆ, ಆಸ್ಪತ್ರೆ ವೆಚ್ಚಕ್ಕೆ ಸಹಾಯ, ಅಪಘಾತ ಹಾಗೂ ಸಹಜ ಮರಣಕ್ಕೆ ಸಹಾಯ, ಮೃತ ಕಾರ್ಮಿಕ ಕುಟುಂಬಕ್ಕೆ ಸಹಾಯ ಮಾಡಲಾಗುತ್ತಿದೆ.ಸಾರಿಗೆ ಮತ್ತು ಅದಕ್ಕೆ ಸಂಬಂಧಿಸಿದ ಕಾಮಿಕರಿಗೆ ಯೋಜನೆ ಮತ್ತು ಮಂಡಳಿ ಜಾರಿಗೆ ತರಲಾಗಿದೆ.ಸುಮಾರು 25ಲಕ್ಷ ಮಂದಿ ಇದಕ್ಕೆ ಸಂಬತಂಧಿಸಿದ ಕಾರ್ಮಿಕರಿದ್ದಾರೆಂದು ಗುರುತಿಸಲಾಗಿದೆ. ಗಿಗ್ ವರ್ಕರ್ಸ್ಗಾಗಿ ಪ್ರತ್ಯೇಕ ಕಾಯಿದೆ ಜಾರಿಗೆ ತರಲಾಗಿದೆ ಎಂದರು .

ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಕಾರ್ಮಿಕರ ಪರವಾಗಿ ಕಾಂಗ್ರೆಸ್ ಸರ್ಕಾರ ಸದಾ ಐದ್ಧಾವಿದೆ ಎಂದು ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.

Adichunchanagiri mutt ಸಂವಿಧಾನವು ಪ್ರಜೆಗಳಾದ ನಮಗೆ ಚುನಾವಣೆ ಎಂಬ ಅಸ್ತ್ರ ನೀಡಿದೆ, ಸೂಕ್ತವಾಗಿ ಬಳಸಿ- ಶ್ರೀನಾದಮಾಯಾನಂದಶ್ರೀ

0


Adichunchanagiri mutt ಶಿವಮೊಗ್ಗ ಶಾಲಾ ದಿನಗಳಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವ ದೃಷ್ಟಿಯಿಂದ ಮತ್ತು ಉತ್ತಮ ಆಡಳಿತ ವ್ಯವಸ್ಥೆಯನ್ನ ಅಧಿಕಾರಕ್ಕೆ ತರಬೇಕು ಎಂಬ ಕಲ್ಪನೆಯನ್ನು ಮೂಡಿಸುವ ಸಲುವಾಗಿ ವಿದ್ಯಾರ್ಥಿ ಒಕ್ಕೂಟವನ್ನ ಶಾಲೆಯಲ್ಲಿ ನಿರ್ಮಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹೇಳಿದರು.
ಅವರು ಶಿವಮೊಗ್ಗ ನಗರದ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಒಕ್ಕೂಟವನ್ನ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸಂವಿಧಾನ ಚುನಾವಣೆ ಎಂಬ ಮಹತ್ವದ ಅಸ್ತ್ರವನ್ನ ಪ್ರಜೆಗಳಾದ ನಮಗೆ ಕಲ್ಪಿಸಿ ಕೊಟ್ಟಿದೆ ಅದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂಬುದನ್ನು ಪರಿಚಯಿಸುವ ಸಲುವಾಗಿ ನಿಮ್ಮಗಳಿಗೆ ವಿದ್ಯಾರ್ಥಿ ಒಕ್ಕೂಟದ ಮುಖಾಂತರ ಚುನಾವಣೆ ಪ್ರಕ್ರಿಯೆಯನ್ನು ನಡೆಸಲಾಗಿದೆ ಎಂದರು.
ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸುವ ಸಲುವಾಗಿ ಮತ್ತು ಶಾಲೆಯ ವಾರ್ಷಿಕ ಚಟುವಟಿಕೆಗಳ ಜವಾಬ್ದಾರಿಯನ್ನ ನೀಡುವ ಮೂಲಕ ನಿಮ್ಮಲ್ಲಿ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ, ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ವ್ಯವಸ್ಥೆಯ ಮೂಲಕ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿ ಅವರುಗಳಿಗೆ ವಿವಿಧ ತರಹದ ಜವಾಬ್ದಾರಿಗಳನ್ನ ನೀಡಿದೆ ಎಂದು ಹೇಳಿದರು.
Adichunchanagiri mutt ಚುನಾವಣೆ ಎಂದರೆ ರಾಜಕಾರಣಿಗಳು ಹಾಗೂ ಅಭ್ಯರ್ಥಿಗಳು ವಿವಿಧ ಆಮಿಷಗಳನ್ನ ಒಡ್ಡುತ್ತಾರೆ, ಈ ಆಮಿಷಕ್ಕೆ ಬಲಿಯಾದರೆ ಐದು ವರ್ಷಗಳ ಕಾಲ ನಾವುಗಳು ಯಾತನೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಆಮಿಷಗಳಿಗೆ ಬಲಿಯಾಗದೆ ನಮ್ಮ ಹಕ್ಕನ್ನ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಬಳಸಬೇಕು ಎಂಬುದನ್ನ ಪರಿಚಯಿಸುವುದು ಕೂಡ ಈ ಚುನಾವಣೆಯ ಮುಖ್ಯ ಉದ್ದೇಶ ಎಂದ ಅವರು,ವಿದ್ಯಾರ್ಥಿಗಳಾದ ನೀವುಗಳು ಯಾವುದೇ ಆಮಿಷಕ್ಕೆ ಬಲಿಯಾಗದೆ ನಿಮ್ಮ ನಾಯಕನನ್ನ ಉತ್ತಮ ರೀತಿಯಲ್ಲಿ ಆಯ್ಕೆ ಮಾಡಿಕೊಂಡಿದ್ದೀರಿ ಅದಕ್ಕಾಗಿ ನಿಮಗೆಲ್ಲರಿಗೂ ಅಭಿನಂದನೆಗಳು. ಅವರುಗಳು ಈ ವರ್ಷವಿಡಿ ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನು ನೀವೇ ನೋಡಿ ಎಂದು ಹೇಳಿದರು.
ಆಮಿಷಕ್ಕೆ ಬಲಿಯಾಗಿ ಮತವನ್ನ ಚಲಾಯಿಸಿದರೆ ಮತದಾರರನ್ನ ಅಸಡ್ಡೆ ಮಾಡುತ್ತಾನೆ,ನಂತರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಾನೆ. ಸ್ವತಹ ತಾನು ಸಹ ಭ್ರಷ್ಟಾಚಾರ ಮಾಡುತ್ತಾನೆ,ಇದರಿಂದಾಗಿ ಜನಸಾಮಾನ್ಯರ ಕೆಲಸಗಳು ಲಂಚವಿಲ್ಲದೆ ಆಗದಂತಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ಇದೆಲ್ಲವನ್ನ ಹೋಗಲಾಡಿಸಬೇಕಾದರೆ ನೀವುಗಳು ಆಮಿಷಕ್ಕೆ ಬಲಿಯಾಗದೆ ಮುಂದಿನ ದಿನಗಳಲ್ಲಿ ಉತ್ತಮ ನಾಯಕನ ಮಾಡಬೇಕು ಎಂದು ಮಾರ್ಮಿಕವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಪ್ರಾಚಾರ್ಯ ಎಸ್.ಹೆಚ್. ಸುರೇಶ್ ಹಾಗೂ ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

Rotary Shivamogga ನಾವೆಲ್ಲರೂ ಪ್ರಕೃತಿಗೆ ಪೂರಕ ಬದುಕಬೇಕು, ವಿರುದ್ಧ ಹೋಗಬಾರದು – ವಿದ್ವಾನ್ ಜಿ.ಎಸ್.ನಟೇಶ್

0

Rotary Shivamogga ಡಿವಿಜಿ ಅವರ ಮಂಕುತಿಮ್ಮನ ಕಗ್ಗದಲ್ಲಿ ಬದುಕಿಗೆ ಅತ್ಯಮೂಲ್ಯ ಸಂದೇಶಗಳು ಇದ್ದು, ಜನರು ಸಾಹಿತ್ಯದಲ್ಲಿ ಅಂಶಗಳನ್ನು ಅರಿತುಕೊಳ್ಳಬೇಕು ಎಂದು ಸಾಹಿತಿ, ವಿದ್ವಾನ್ ಜಿ.ಎಸ್.ನಟೇಶ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರೋಟರಿ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಕುತಿಮ್ಮನ ಕಗ್ಗ ಕುರಿತು ಮಾತನಾಡಿ, ಕನ್ನಡದಲ್ಲಿ ಮಾತನಾಡಿದರೆ ಅದೇ ನಿತ್ಯೋತ್ಸವ. ನಮ್ಮ ಭಾಷೆಯ ಬಗ್ಗೆ ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ನಾವೆಲ್ಲರೂ ಪ್ರಕೃತಿಗೆ ಪೂರಕವಾಗಿ ಬದುಕಬೇಕೆ ಹೊರತು ವಿರುದ್ಧವಾಗಿ ಹೋಗಬಾರದು. ಪ್ರಾಣಿ ಪಕ್ಷಿಗಳನ್ನು ನೋಡಿ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಮಂಕುತಿಮ್ಮನ ಕಗ್ಗವನ್ನು ಓದುತ್ತಿದ್ದರೆ ನಮ್ಮ ಬದುಕು ಬದಲಾಗುತ್ತದೆ. ಜೀವನದಲ್ಲಿ ಭರವಸೆ ಮೂಡುತ್ತದೆ. ಪ್ರತಿಯೊಬ್ಬರೂ ಮಂಕುತಿಮ್ಮನ ಕಗ್ಗ ಅಧ್ಯಯನ ಮಾಡಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಪೂರಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
Rotary Shivamogga ಸಭೆಗೆ ನೂತನ ಸದಸ್ಯರನ್ನು ಪರಿಚಯಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ.ಬಿ.ಆರ್., ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಕಡಿದಾಳ್ ಗೋಪಾಲ್, ಮ್ಯಾನೇಜಿಂಗ್ ಟ್ರಸ್ಟಿ ಕೆ.ಬಿ.ರವಿಶಂಕರ್, ಚಂದ್ರಹಾಸ ಪಿ.ರಾಯ್ಕರ್, ಎಸ್.ಸಿ.ರಾಮಚಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.