Karnataka Science and Technology Academy ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆ.05 ರಿಂದ 07 ರವರೆಗೆ “Science Communication: Strategies for Reaching Diverse Audiences” ಎಂಬ ವಿಷಯದ ಕುರಿತು ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.
ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು, ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು Google-form-https://forms.gle/iyPn85smZ81RGGnf6 ಮೂಲಕ ದಿ:02/08/2025 ರೊಳಗಾಗಿ ನೋಂದಾಯಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಶ್ರೀನಿವಾಸು ವಿ. ಕೆ. -ಮೊ: 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಬಹುದಾಗಿದೆ.
Karnataka Science and Technology Academy ರಾಜ್ಯ ವಿಜ್ಞಾನ & ತಂತ್ರಜ್ಞಾನ ಅಕಾಡೆಮಿಯಿಂದ ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರ
Sri Ramakrishna Vidyaniketan School ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರಿಗೆ ಡಾ.ಶುಭ್ರತಾ ಅವರಿಂದ ಒತ್ತಡ ರಹಿತ ಅಧ್ಯಯನದ ಬಗ್ಗೆ ತಿಳುವಳಿಕೆ
Sri Ramakrishna Vidyaniketan School ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಭಯ ನಿವಾರಣೆ ಹಾಗೂ ಒತ್ತಡ ರಹಿತ ಅಧ್ಯಯನದ ಬಗ್ಗೆ ಶಿವಮೊಗ್ಗದ ಮನೋರೋಗ ತಜ್ಞೆಯಾದ ಡಾ||ಕೆ.ಎಸ್.ಶುಭ್ರತಾ ತಿಳುವಳಿಕೆ ನೀಡಿದರು.
ಹಾಗೆಯೇ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಕೇಳಿದ ಉತ್ತಮ ಪ್ರಶ್ನೆಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
Nagasubrahmanya Temple ಭಜನೆಯಿಂದ ಮನಸ್ಸಿಗೆ ಶಾಂತಿ, ಭಕ್ತಿಭಾವ ಸ್ಮರಣೆ- ಸಂದೇಶ ಉಪಾದ್ಯ
Nagasubrahmanya Temple ಭಜನೆ ಭಕ್ತಿ ಗೀತೆಗಳು ದೇವರ ಆರಾಧನೆಯ ಹಾಡುಗಳು ನಮಗೆ ಮನಸ್ಸಿಗೆ ಶಾಂತಿ ಹಾಗೂ ಭಕ್ತಿ ಭಾವವನ್ನು ಮೂಡಿಸುತ್ತದೆ ಎಂದು ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂದೇಶ್ ಉಪಾಧ್ಯ ನುಡಿದರು. ಅವರು ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ. ಶ್ರೀ ಸ್ವಾಮಿ ವಿವೇಕಾನಂದ ಅಡ್ವೆಂಚರಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಹಾಗೂ ಅರ್ಚಕ ವೃಂದ ಮತ್ತು ಬಜನಾ ಪರಿಷತ್ ಇವರ ಸಹಯೋಗದೊಂದಿಗೆ ಆಷಾಢ ಮಾಸದಲ್ಲಿ ಸತತ ಎಂಟನೇ ವರ್ಷದ ಆಶಾಡ ಭಜನಾೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯನ್ನು ಕುರಿತು ಮಾತನಾಡಿದರು. ಶುದ್ಧ ಮನಸ್ಸಿನಿಂದ ಶ್ರದ್ಧೆಯ ಭಕ್ತಿ ಭಾವದಿಂದ ಭಜನೆಯನ್ನು ಮಾಡಿದರೆ ಆ ಜಾಗದಲ್ಲಿ ಸಕಾರಾತ್ಮಕ ಭಾವನೆಗಳು ಮೂಡುತ್ತವೆ ಹಾಗೂ ಖಿನ್ನತೆ ದೂರವಾಗುತ್ತದೆ ದೇವರಲ್ಲಿ ಭಕ್ತಿ ಹೆಚ್ಚುತ್ತದೆ ಎಂದು
ನುಡಿದ ಅವರು ಈಗಾಗಲೇ ಶಿವಮೊಗ್ಗ ನಗರದ ಸಾಕಷ್ಟು ಭಜನಾ ಮಂಡಳಿ ಸದಸ್ಯರು ಈ ಪವಿತ್ರ ಕಾರ್ಯದಲ್ಲಿ ವಿಶೇಷವಾದ ಭಜನೆಗಳನ್ನು ಮಾಡುವುದರ ಮುಖಾಂತರ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ ಎಂದು ನುಡಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಅತಿಥಿಗಳಾಗಿ ಆಗಮಿಸಿ ನಾಳೆ ಸುಬ್ರಮಣ್ಯ ದೇವಸ್ಥಾನ ಒಂದು ಶಕ್ತಿ ಕೇಂದ್ರವಾಗಿದೆ ಇಲ್ಲಿ ಎಲ್ಲಾ ಹಬ್ಬ ಹರಿದಿನಗಳು ಹಾಗೂ ವಿಶೇಷ ಕಾರ್ಯಕ್ರಮಗಳಿಂದ ದೇವಸ್ಥಾನ ಎಲ್ಲಾ ಭಕ್ತರ ಮನಃಶಾಂತಿಯ ತಾಣವಾಗಿದೆ ಒಳ್ಳೆ ಒಳ್ಳೆಯ ಭಜನೆಗಳಿಂದ ನಮ್ಮ ಬದುಕು ಬದಲಾಗುತ್ತದೆ ಪರಸ್ಪರರಲ್ಲಿ ಒಡನಾಟ ಹೆಚ್ಚುತ್ತದೆ ಹಾಗೆ ನಮ್ಮ ಧ್ವನಿ ಕೂಡ ಸಂಸ್ಕರಣವಾಗುತ್ತದೆ ಅಭಿನಂದಿಸಿದರು. Nagasubrahmanya Temple ಇದೇ ಸಂದರ್ಭದಲ್ಲಿ ಜೆಸಿ ನಗರ ಶಿವಮೊಗ್ಗದ ಶ್ರೀ ದುರ್ಗಾ ವಾಹಿನಿ ಭಜನಾ ಮಂಡಳಿ ಕೊಲ್ಲಾಪುರದಮ್ಮ ದೇವಸ್ಥಾನದ ಬದಲಾವಣೆಯ ಸದಸ್ಯರಾದ ಶ್ರೀಮತಿ ಪ್ರಮೀಳಾ ಉಮೇಶ್. ಮಮತಾ. ಮಾಲತಿ. ತೇಜಸ್ವಿನಿ. ರಜನಿ. ಸವಿತಾ. ರೇಖಾ. ಹಾಗೂ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಆಕಾಶವಾಣಿಯ ಕಲಾವಿದರು ಹಾಗೂ ಸದಸ್ಯರು ಉಪಸ್ಥಿಧರಿದ್ದರು.
Karnataka Sugama Sangeet Bangalore Parishad ಆಗಸ್ಟ್ 2 ರಿಂದ ಮೈಸೂರಿನಲ್ಲಿ 19 ನೇ ಸುಗಮ ಸಂಗೀತ ಸಮ್ಮೇಳನ.ಸರ್ವಾಧ್ಯಕ್ಷರಾಗಿ ಶ್ರೀನಿವಾಸ ಉಡುಪ
Karnataka Sugama Sangeet Bangalore Parishad ಕರ್ನಾಟಕ ಸುಗಮ ಸಂಗೀತ ಬೆಂಗಳೂರು ಪರಿಷತ್ತು ವತಿಯಿಂದ ಆ.2 ಮತ್ತು 3 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿ 19ನೇ ಸುಗಮ ಸಂಗೀತ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಗಾಯಕ ನಗರ ಶ್ರೀನಿವಾಸ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ. ನಾಡಿನ 33 ಭಾಗಗಳಿಂದ 300ಕ್ಕೂ ಅಧಿಕ ಸುಗಮ ಸಂಗೀತ ಕಲಾವಿದರು, ಕವಿಗಳು ಭಾಗವಹಿಸಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸುಗಮಸಂಗೀತ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ವಿ.ಪ್ರವೀಣ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆ.2 ರಂದು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಪರಿಷತ್ತು ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಆ.3 ರಂದು ಸಮಾರೋಪದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ಸುಗಮ ಸಂಗೀತ ಪರಿಷತ್ತು ಬೆಂಗಳೂರು ಆಯೋಜಿಸಿರುವ ಗೀತೋತ್ಸವ -19, ಸುಗಮ ಸಂಗೀತ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆಯ ಸುಗಮ ಸಂಗೀತ ಸದಸ್ಯರು ಗೀತೋತ್ಸವ ವೇದಿಕೆಯಲ್ಲಿ ಹಾಡಲಿದ್ದಾರೆ. ಏಕವ್ಯಕ್ತಿ ಗಾಯನದಲ್ಲಿ ಕೆ.ಯುವರಾಜ್, ಸುರೇಖಾ ಹೆಗಡೆ, ಜಯಶ್ರೀ ಶ್ರೀಧರ್, ಮಥುರಾ ನಾಗರಾಜ್, ಶುಭಾ ಹರ್ಷ, ಧನಪಾಲ್ ಸಿಂಗ್ ರಜಪೂತ್, ಸಾಕೇತ ಶಾಸ್ತ್ರಿ, ಸಾಗರದ ಸುನೀತಾ ಶ್ರೀಪಾದ ರಾವ್ ಹಾಗೂ ವೃಂದಗಾನ ವಿಭಾಗದಲ್ಲಿ ಉಮಾದಿಲೀಪ್, ಲಕ್ಷ್ಮೀಮಹೇಶ್, ನಳಿನಾಕ್ಷಿ, ಬಿಂದು ವಿಜಯಕುಮಾರ್, ಹೇಮಾ ಟಿ., ಮಂಜುನಾಥ್, ಜಿ.ವಿಜಯಕುಮಾರ್ ಬಸವರಾಜ್,ರಾಜಕುಮಾರ್, ಮುರಳಿಧರ್ ಹಾಡಲಿದ್ದಾರೆ.
Karnataka Sugama Sangeet Bangalore Parishad 2023 ಮತ್ತು 2024ನೇ ಸಾಲಿನ ‘ಕಾವ್ಯಶ್ರೀ’ ಮತ್ತು ‘ಭಾವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ‘ಕಾವ್ಯಶ್ರೀ’ ಪ್ರಶಸ್ತಿಗೆ ಕವಿಗಳಾದ ಬಿ.ಆರ್.ಲಕ್ಷ್ಮಣರಾವ್, ಡಾ. ನಾ.ದಾಮೋದರ ಶೆಟ್ಟಿ ಹಾಗೂ ‘ಭಾವಶ್ರೀ’ ಪ್ರಶಸ್ತಿಗೆ ಗಾಯಕಿಯರಾದ ಶ್ರೀಮತಿ ರತ್ನಮಾಲಾ ಪ್ರಕಾಶ್ ಮತ್ತು ಶ್ರೀಮತಿ ಕೆ.ಎಸ್.ಸುರೇಖಾ ಅವರನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ಸಾಹಿತಿಗಳಾದ ಡಾ. ಹಂಪ ನಾಗರಾಜಯ್ಯ, ಸಿ.ಪಿ.ಕೃಷ್ಣಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪರಿಷತ್ತಿನ ಗೌರವ ಖಜಾಂಚಿ ಪ್ರಶಾಂತ ಉಡುಪ ಪ್ರಕಟಿಸಿದ್ದಾರೆ. ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಗೀತೋತ್ಸವ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀಮತಿ ಶಾಂತಾ ಶೆಟ್ಟಿ ವಿನಂತಿಸಿದ್ದಾರೆ.
Nomadic community of SC and ST ಪರಿಶಿಷ್ಠ ಜಾತಿಯ ಅಲೆಮಾರಿ ಸಮುದಾಯ 150 ಕುಟುಂಬಕ್ಕೆ ತಾಡಪಾಲು ವಿತರಣೆ
Nomadic community of SC and ST ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ನಿವೇಶನ / ವಸತಿ ರಹಿತ ಬಡ ಕುಟುಂಬದವರು ಟೆಂಟು ಮತ್ತು ಗುಡಿಸಲುಗಳಲ್ಲಿ ಹೊದಿಕೆಯಾಗಿದ್ದ ತಾಡಪಾಲುಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ, ಶ್ರೀ ರಾಂಪುರದಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದವರು ವಾಸಿಸುತ್ತಿರುವ 91 ಕುಟುಂಬಗಳಿಗೆ ಹಾಗೂ ಶಿವಮೊಗ್ಗ ನಗರದ ಎಮ್.ಆರ್.ಎಸ್. ಡಬಲ್ ಟ್ಯಾಂಕ್ ಹತ್ತಿರ ಟೆಂಟು, ಗುಡಾರಗಳನ್ನು ನಿರ್ಮಿಸಿಕೊಂಡು ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದ 44 ಕುಟುಂಬಗಳು ವಾಸಿಸುತ್ತಿದ್ದು. ಈ ನಡುವೆ ಅತಿ ಮಳೆಯಿಂದಾಗಿ ತೊಂದರೆ ಯಾಗುತ್ತಿದ್ದು, ನಿಗಮದಿಂದ ಮೂಲಭೂತ ಸೌಕರ್ಯ ಯೋಜನೆಗೆ ನಿಗದಿ ಪಡಿಸಿದ ಅನುದಾನದಲ್ಲಿ ತಾತ್ಕಾಲಿಕವಾಗಿ ಸುಮಾರು 150 ಕುಟುಂಬಗಳಿಗೆ ತಡಪಾಲುಗಳನ್ನು ಶ್ರೀಮತಿ ಪಲ್ಲವಿ ಜಿ. ಅಧ್ಯಕ್ಷರು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮರವರು ವಿತರಿಸಿದರು. ಇವರುಗಳಿಗೆ ಶಾಶ್ವತ ನೆಲೆ ಕಲ್ಪಿಸಲು ಶಿದಿಲೀಪುರ ಗ್ರಾಮದ ಹತ್ತಿರ ಸರ್ಕಾರಿ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದ್ದು, ಅದನ್ನು ಹಂಚಿಕೆ ಮಾಡಿ ಅಭಿವೃದ್ಧಿ ಮಾಡುವ ಕಾರ್ಯವು ಪ್ರಗತಿಯಲ್ಲಿರುತ್ತದೆ.
Nomadic community of SC and ST ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಚನ್ನಬಸಪ್ಪರವರು ಉಪಸ್ಥಿತರಿದ್ದು, ಸದರಿ ಅಲೆಮಾರಿ ಕುಟುಂಬಕ್ಕೆ ನೆಲೆ ಕಲ್ಪಿಸುವ ಸಂಬಂಧ ಸರ್ಕಾರವು ಆಶ್ರಯ ಯೋಜನೆಗೆ ನಿಗಧಿಪಡಿಸಿರುವ ಭೂಮಿಯಲ್ಲಿ ಸದರಿ ಶಾಸಕರು ಮುಂಬರುವ ಅಧಿವೇಶನದ ನಂತರದಲ್ಲಿ ಆದ್ಯತೆಯ ಮೇರೆಗೆ ಈ ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ಕೊಡಿಸುವ ವರದಿ ನೀಡಿದರು. ಈ ಸಂದರ್ಭದಲ್ಲಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಜಿಲ್ಲೆರವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲೆರವರು ಮತ್ತು ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇತರೆ ಅಲೆಮಾರಿ ಮುಖಂಡರುಗಳು ಭಾಗಿಯಾಗಿದ್ದರು.
ಬೆಂಗಳೂರು ನಗರ ಕೆರೆಗಳ ಬಗ್ಗೆ ಪರಿವೀಕ್ಷಣಾ ಸಮಿತಿಯ ಸಭೆ
ಬೆಂಗಳೂರು ನಗರದ ಸಂರಕ್ಷಿತ ಕೆರೆಗಳು ಹಾಗೂ ಎಸ್.ಟಿ.ಪಿ ಘಟಕಗಳಿಗೆ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಪರಿವೀಕ್ಷಣಾ ಭೇಟಿ ತಂಡವು ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಸಭೆ ಸೇರಿ ಭೇಟಿ ನೀಡಬೇಕಾದ ಕೆರೆಗಳ ಸ್ಥಿತಿಗತಿ ಕುರಿತು ಪೂರ್ವಭಾವಿ ಸಭೆ ನೆಡೆಸಿ ನಂತರ ಮೆಡಹಳ್ಳಿಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ವೀಕ್ಷಣೆ ಮಾಡಿತು.
Sri Rameshwar Temple ಡಾ.ಹೆಚ್.ಎಸ್.ವೆಂಕಟೇಶ ಮೂರ್ತಿ,ಉಪಮಾಲೋಲ ಕವಿ.- ಡಾ.ಕೃಷ್ಣ ಎಸ್ ಭಟ್
Sri Rameshwar Temple ಹಳೆ ನಗರದ ಶ್ರೀರಾಮೇಶ್ವರ ದೇವಸ್ಥಾನದ ಹಿಂಭಾಗದ, ಶ್ರೀ ಗಾಯಿತ್ರಿ ಧರ್ಮಶಾಲಾ ಸಭಾಂಗಣದಲ್ಲಿ, ದಿವಂಗತ ಡಾಕ್ಟರ್ ಎಚ್ಎಸ್ ವೆಂಕಟೇಶಮೂರ್ತಿಯವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ, ಭಾವ ಗಾನ ಗೌರವ ಮತ್ತು ಸಂಸ್ಮರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಭೂಮಿಕಾ ವೇದಿಕೆ ಅಧ್ಯಕ್ಷ ಡಾಕ್ಟರ್ ಕೃಷ್ಣ ಎಸ್ ಭಟ್ ಮಾತನಾಡಿದರು.
ಪ್ರಮುಖ ವ್ಯಕ್ತಿಗಳ ಸಂಸ್ಮರಣೆ ಮಾಡುವುದು ಎಂದರೆ ಪ್ರಸಿದ್ಧ ವ್ಯಕ್ತಿಗಳ ಜೀವನ ಪಥ ಅವರು ಸಮಾಜಕ್ಕೆ ಮತ್ತು ತಾವು ಇರುವ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವಾಗಿದೆ ಎಂದು ನುಡಿದರು.
ಡಾಕ್ಟರ್ ಎಚ್ಎಸ್ ವಿ ಅವರ ಕವಿತೆ, ಕವನಗಳು ,ಆಯಾಯ ಕಾಲಘಟ್ಟದಲ್ಲಿ ಆಯಾಯ ವಯೋಮಾನದವರು ಅನುಭವಿಸಿದ ಸಂಗತಿಗಳನ್ನು ,ಪ್ರಕೃತಿಯೊಡನೆ ಹೋಲಿಕೆಯಾಗಿ ನೀಡಿ, ಉಪಮಾಲೋಲ ಕವಿಯಾಗಿ ,ಹಾಡನ್ನು ರಚಿಸಿರುವುದು ಅವರ ವ್ಯಕ್ತಿತ್ವದ ವಿಶೇಷವಾಗಿದೆ. ಅವರು ಇಂದು ಭೌತಿಕವಾಗಿ ನಮ್ಮ ನಗಲಿದರೂ, ಅವರ ಕಾವ್ಯದಲೆಗಳ ಕಂಪು ,ಇನ್ನು ನೂರಾರು ವರ್ಷಗಳ ಕಾಲ ತೇಲಿ ಬರುತ್ತಲೇ ಇರುತ್ತವೆ. ಅವರ ಭಾವಗೀತೆಗಳು ಕನ್ನಡಿಗರ ಹೃದಯಗೀತೆಯಾಗಿ, ಭಾವ ಪ್ರಪಂಚದ ಬೆರಗಾಗಿ, ಮೆರೆಯುತ್ತಾ ಕನ್ನಡಿಗರ ಮನದಲ್ಲಿ, ಸದಾ ನೆಲೆಸಿದ್ದಾರೆ ಎಂದು ತಿಳಿಸಿದರು.
Sri Rameshwar Temple ಭೂಮಿಕ ವೇದಿಕೆ ಸದಸ್ಯರು ,ಡಾಕ್ಟರ್ ಎಚ್ಎಸ್ ವಿ ಅವರು ರಚಿಸಿದ, ಆಯ್ದ 10 ಗೀತೆಗಳನ್ನು ಶುಶ್ರಾವ್ಯವಾಗಿ ಹಾಡಿದರು. ಡಾಕ್ಟರ್ ಎಚ್ಎಸ್ ವಿ ಅವರ ಜೀವನ ಪಥ, ಕುರಿತು ಶ್ರೀಮತಿ ಉಷಾ ಶೇಷಗಿರಿ, ಡಾಕ್ಟರ್ ಎಚ್ಎಸ್ವಿಯವರ ಕಾವ್ಯಪತ ಕುರಿತು ಬಿ ಕಾಂತಪ್ಪ,ನುಡಿ ನಮನ ಸಲ್ಲಿಸಿದರು.
ಶ್ರೀಮತಿ ಶಾಮಲಾ ಮತ್ತು ವೀಣಾ ಪ್ರಾರ್ಥಿಸಿ, ಕಾರ್ಯದರ್ಶಿ ಶಿವರಾಜ್ ಸ್ವಾಗತಿಸಿದರು. ಆನಂದ ಕಾರ್ಯಕ್ರಮ ನಿರೂಪಿಸಿದರು. ಶ್ರೀ ರಮೇಶ್ ವಂದಿಸಿದರು. ಕೋಶಾಧ್ಯಕ್ಷ ಮುನಿರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Rotary Club Shivamogga ಇಂಟರ್ಯಾಕ್ಟ್ ಕ್ಕಬ್ ಯುವಜನರಲ್ಲಿ ಆತ್ಮ ವಿಶ್ವಾಸ ಬೆಳೆಸುತ್ತದೆ- ಸೂರ್ಯನಾರಾಯಣ ಉಡುಪ
Rotary Club Shivamogga ಇಂಟರ್ಯಾಕ್ಟ್ ಕ್ಲಬ್ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಜತೆಯಲ್ಲಿ ಸಂವಹನ ಕೌಶಲ್ಯ ಕಲಿಕೆಗೆ ನೆರವಾಗುತ್ತದೆ ಎಂದು ವಲಯ 10ರ ಇಂಟರ್ಯಾಕ್ಟ್ ಜೋನಲ್ ಕೋಆರ್ಡಿನೇಟರ್ ಸೂರ್ಯನಾರಾಯಣ ಉಡುಪ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಮಾತನಾಡಿ, ಇಂಟರ್ಯಾಕ್ಟ್ ಕ್ಲಬ್ ಉತ್ತಮ ವಿದ್ಯಾರ್ಥಿ ನಾಯಕರನ್ನು ತಯಾರು ಮಾಡುವಲ್ಲಿ ಸಫಲವಾಗಿದೆ. ನಮ್ಮ ರೋಟರಿ ಸಂಸ್ಥೆ ಸದಾ ನಿಮ್ಮೊಂದಿಗೆ ಇದೆ. ಮುಂದಿನ ದಿನಗಳಲ್ಲಿ ನಿಮ್ಮ ಕುಂದು ಕೊರತೆಗಳನ್ನು ಪರಿಹರಿಸುವುದರಲ್ಲಿ ನಿಮ್ಮ ಜೊತೆಗೆ ನಾವಿದ್ದೇವೆ ಎಂದರು.
Rotary Club Shivamogga ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ಇಂಟರ್ಯಾಕ್ಟ್ ಕ್ಲಬ್ 1962ರಲ್ಲಿ ಪ್ರಾರಂಭವಾಗಿ ಇಂದಿಗೂ ಉತ್ತಮ ವಿದ್ಯಾರ್ಥಿಗಳನ್ನು ಮತ್ತು ವಿದ್ಯಾರ್ಥಿ ನಾಯಕರನ್ನು ಸಮಾಜಕ್ಕೆ ನೀಡಿದೆ ಎಂದು ತಿಳಿಸಿದರು.
ಇಂಟರ್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಕೀರ್ತನಾ ಮತ್ತು ಕಾರ್ಯದರ್ಶಿಯಾಗಿ ತಿಪ್ಪೇಸ್ವಾಮಿ ಅವರಿಗೆ ಪದಗ್ರಹಣ ಮಾಡಿ ಶುಭಾಶಯ ತಿಳಿಸಿದರು. ಶಾರದಾ ದೇವಿ ಅಂಧರ ವಿಕಾಸ ಶಾಲೆಯ ಟ್ರಸ್ಟಿ ಅನಿತಾ ಮಾತನಾಡಿ, ರೋಟರಿ ಸಂಸ್ಥೆಯ ಸಹಕಾರವನ್ನು ಶ್ಲಾಘಿಸಿದರು.
ಶಾರದಾ ದೇವಿ ಅಂಧರ ವಿಕಾಸ ಶಾಲೆಯ ಮುಖ್ಯಶಿಕ್ಷಕ ಸುರೇಶ್, ಅಧ್ಯಕ್ಷೆ ರಾಜಶ್ರೀ ಬಸವರಾಜ್ ಹಾಗೂ ಕಾರ್ಯದರ್ಶಿ ಮಥುರಾ ಧನಂಜಯ್, ಇಂಟರ್ಯಾಕ್ಟ್ ಚೇರ್ಮನ್ ಗೀತಾ ಜಗದೀಶ್, ರೋಟರಿ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ್ ಶೆಟ್ಟಿ, ಮಾಜಿ ಸಹಾಯಕ ಗವವರ್ನರ್ ರವಿ ಕೋಟೋಜಿ, ರಮೇಶ, ಸುರೇಖಾ ಮುರಳಿಧರ್, ಗಿರೀಶ್, ಧರ್ಮೇಂದ್ರ ಸಿಂಗ್, ಬಲರಾಮ್, ಜ್ಯೋತಿ, ಶ್ರೀರಾಮ್, ಲಕ್ಷ್ಮೀ ರವಿ, ದೀಪಾ ಶೆಟ್ಟಿ, ಗುರುರಾಜ್, ಈಶ್ವರ, ಮುರುಳಿ, ಅನಿತಾ ಹಾಗೂ ಚೈತ್ರ ಹೊಳ್ಳ ಉಪಸ್ಥಿತರಿದ್ದರು.
Karnataka Innerwear Association ಇನ್ನರ್ ವೇರ್ ಉದ್ಯಮಕ್ಕೆ ರಾಜ್ಯದ ಯಾವುದೇ ಭಾಗದಲ್ಲಿ ನಿಗದಿಯಾದಂತೆ ಭೂಮಿ ನೀಡಲಾಗುವುದು- ಸಚಿವ ಶಿವಾನಂದ ಪಾಟೀಲ್
Karnataka Innerwear Association ರಾಜ್ಯದ ಯಾವುದೇ ಭಾಗದಲ್ಲಿ ಇನ್ನರ್ ವೇರ್ ಉದ್ಯಮ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ 15ರಿಂದ 20 ಎಕರೆ ಭೂಮಿ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಕರ್ನಾಟಕ ಇನ್ನರ್ವೇರ್ ಅಸೋಸಿಯೇಷನ್ (ಕೆಐಎ) ಇಲ್ಲಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಆಯೋಜಿಸಿರುವ ಮೂರು ದಿನಗಳ ಇನ್ನರ್ ಸ್ಟೋರಿ ಇನ್ನರ್ವೇರ್ ಟ್ರೇಡ್ ಶೋನ 4ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಐಎ ರಾಜ್ಯದ ಯಾವುದೇ ಪ್ರದೇಶದಲ್ಲಿ ಬಯಸಿದ ಕಡೆ ಭೂಮಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಗಾರ್ಮೆಂಟ್ಸ್ ಉದ್ಯಮಕ್ಕೆ ರಾಜ್ಯ ಸರ್ಕಾರ ಅಗತ್ಯ ಸಹಾಯ ಸಹಕಾರ ನೀಡುತ್ತಿದ್ದು, 3500 ಕೋಟಿ ರೂ. ಸಬ್ಸಿಡಿ ನೀಡಿದೆ. ಸಿದ್ದ ಉಡುಪು ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ದೇಶದ ಒಟ್ಟು ಉತ್ಪಾದನೆಯಲ್ಲಿ ರಾಜ್ಯದ ಕೊಡುಗೆ ಪ್ರತಿಶತ 20ರಷ್ಟಿದೆ ಎಂದರು.
ಬಾಂಗ್ಲಾದೇಶದ ಪ್ರತಿಕೂಲ ಪರಿಸ್ಥಿತಿ ಪರಿಣಾಮ ಅಲ್ಲಿನ ಜವಳಿ ಉದ್ಯಮ ಕರ್ನಟಕ, ಮಹಾರಾಷ್ಟ್ರ ಕಡೆ ಸ್ಥಳಾಂತರವಾಗುತ್ತಿದ್ದು, ರಾಜ್ಯ ಈ ಪರಿಸ್ಥಿತಿ ಬಳಸಿಕೊಂಡು ಜವಳಿ ಉದ್ಯಮಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದರು.
ಜವಳಿ ಕ್ಷೇತ್ರ, ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜನೆಗೆ ಉದ್ಯಮಸ್ನೇಹಿ ನೂತನ ಜವಳಿ ನೀತಿ 2025-30 ರೂಪಿಸುವ ಸಿದ್ದತೆ ನಡೆದಿದ್ದು, ಈ ಸಮಿತಿಯಲ್ಲಿ ಕರ್ನಾಟಕ ಇನ್ನರ್ವೇರ್ ಅಸೋಸಿಯೇಷನ್ನ ಪ್ರತಿನಿಧಿಯೊಬ್ಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ಇನ್ನರ್ವೇರ್ ಅಸೋಸಿಯೇಷನ್ಗೆ ಬೆಂಗಳೂರಿನಲ್ಲಿ ಕಚೇರಿಗೆ ಸ್ಥಳಾವಕಾಶ ಕಲ್ಪಿಸಬೇಕು, ಜವಳಿ ನೀತಿಯಲ್ಲಿ ಅಸೋಸಿಯೇನಷ್ ಪ್ರತಿನಿಧಿ ಸೇರ್ಪಡೆ ಮಾಡಬೇಕು ಎಂದು ಪದಾಧಿಕಾರಿಗಳು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು. ಸೌಥ್ ವೆಸ್ಟ್ರನ್ ರೈಲ್ವೆ ಝಡ್ಆರ್ಯುಸಿಸಿ ಸದಸ್ಯ ಮಹೇಂದ್ರ ಸಿಂಘಿ ಮಾತನಾಡಿ, ಬೆಂಗಳೂರಿನಲ್ಲಿ ಸತತವಾಗಿ ನಾಲ್ಕನೇ ಬಾರಿ ಟ್ರೇಡ್ ಶೋ ಆಯೋಜನೆ ಮಾಡಲಾಗುತ್ತಿದ್ದು, ಇದು ಒಂದು ರೀತಿ ಹೂಡಿಕೆದಾರರ ಸಮಾವೇಶವಾಗಿದೆ ಎಂದರು.
Karnataka Innerwear Association ಟೆಸ್ಸೂಟಿ ಇಂಡಸ್ಟ್ರೀಸ್ನ ಸಂಸ್ಥಾಪಕ ರಮೇಶ ಕೊಠಾರಿ, ಕೆಇಎ ಅಧ್ಯಕ್ಷ ದಿಲೀಪ್ಕುಮಾರ್ ಜೈನ್, ಉಪಾಧ್ಯಕ್ಷ ಅಶ್ವಿನ್ ಸೆಮ್ಲಾನಿ, ಮಹಾವೀರಚಂದ್ ಮೆಹ್ತಾ, ಕಾರ್ಯದರ್ಶಿ ರವೀಂದ್ರ ಬಂಬೋಲಿ, ಖಜಾಂಚಿ ಪ್ರಕಾಶ್ ಎಚ್. ಜೈನ್ ಮತ್ತಿತರ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಮೂರು ದಿನಗಳ ಕಾಲ ನಡೆಯಲಿರುವ ಟ್ರೇಡ್ ಶೋನಲ್ಲಿ ಇನ್ನರ್ ವೇರ್ ಉತ್ಪಾದಕರು, ಹೋಲ್ಸೇಲ್ ಮತ್ತು ರೀಟೇಲ್ ಮಾರಾಟಗಾರರು ಸೇರಿದಂತೆ ಎರಡು ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಇನ್ನರ್ವೇರ್ ಅಸೋಸಿಯೇಷನ್ ತಿಳಿಸಿದೆ.
Ministry of Tribal Affairs ಧರ್ತಿ ಆಬಾಜನ್ ಜಾತೀಯ ಉತ್ಕರ್ಷ ಅಭಿಯಾನಕ್ಕೆ ಮುದ್ದಿನಕೊಪ್ಪ ಗ್ರಾಮ ಪಂಚಾಯತಿಯ ಕೆಲವು ಗ್ರಾಮಗಳ ಆಯ್ಕೆ
Ministry of Tribal Affairs ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿಯ ಸದಾಶಿವಪುರ ಗ್ರಾಮಗಳನ್ನು ಗುರುತಿಸಲಾಗಿದೆ.
ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ನಿರ್ಮಿಸಲು ರೂ. 5.00 ಲಕ್ಷ ಹಾಗೂ ನವೀಕರಿಸಲು ರೂ. 3.00 ಲಕ್ಷಗಳ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Ministry of Tribal Affairs ಈ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಆಸಕ್ತರಾಗಿರುವ ಅರ್ಹ ವ್ಯಕ್ತಿ/ ಕುಟುಂಬದವರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಷರೇಷನ್ ಫಾರಂ, ಗ್ರಾ.ಪಂ. ಎನ್ಓಸಿ ದಾಖಲೆಗಳ ಜೇರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 11 ರೊಳಗಾಗಿ ಸಲ್ಲಿಸುವಂತ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆಗಿರುವ ಗುರುದತ್ತ ಹೆಗಡೆರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444/7026296510 ಗಳನ್ನು ಸಂಪರ್ಕಿಸುವುದು.
