Monday, February 23, 2026
Monday, February 23, 2026
Home Blog Page 237

Chamber Of Commerce Shivamogga ಶಿವಮೊಗ್ಗದಲ್ಲಿ ಜುಲೈ 23 ರಿಂದ ಉದ್ದಿಮೆ ಪರವಾನಗಿ ನೀಡುವ ಬೃಹತ್ ಮೇಳ

0

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಹಾನಗರಪಾಲಿಕೆ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷದಂತೆ ಉದ್ದಿಮೆ ಪರವಾನಗಿಯನ್ನು ಪಡೆದುಕೊಳ್ಳಲು ಉದ್ದಿಮೆದಾರರಿಗೆ ಅನುಕೂಲಕ್ಕಾಗಿ ದಿನಾಂಕ:23, 24 ಮತ್ತು 25ನೇ ಜುಲೈ ರಂದು ಬೆಳಿಗ್ಗೆ 10 ರಿಂದ 4 ಘಂಟೆಯವರೆಗೆ ಮೂರು ದಿನಗಳ ಕಾಲ “ಉದ್ದಿಮೆ ಪರವಾನಿಗೆ” (ಟ್ರೇಡ್ ಲೈಸೆನ್ಸ್) ನೀಡುವ ಬೃಹತ್ ಮೇಳವನ್ನು ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತರಾದ ಶ್ರೀಯುತ ಮಾಯಣ್ಣ ಗೌಡರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ. ಗೋಪಿನಾಥ್‌ರವರು ವಹಿಸಲಿದ್ದಾರೆ. ಸಂಘದ ಆಡಳಿತ ಮಂಡಳಿಯ ಎಲ್ಲಾ ನಿರ್ದೆಶಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಮಾನ್ಯ ಸದಸ್ಯ ಉದ್ದಿಮೆದಾರರು, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕಾರ್ಯದರ್ಶಿ ಎ.ಎಂ. ಸುರೇಶ್‌ರವರು ಸಂಘದ ತಿಳಿಸಿದ್ದಾರೆ.

ಉದ್ದಿಮೆ ಪರವಾನಗಿ ನವೀಕರಿಸಲು ಅರ್ಜಿಯೊಂದಿಗೆ ಕಳೆದ ವರ್ಷದ 1) ಲೈಸೆನ್ಸ್ ಪ್ರತಿ, 2)ಪಾನ್‌ಕಾರ್ಡ್ ಪ್ರತಿ, 3) ಮೊಬೈಲ್ ನಂಬರ್ ಮತ್ತು

Chamber Of Commerce Shivamogga ಹೊಸದಾಗಿ ಪರವಾನಗಿ ಪಡೆಯುವವರು ಅರ್ಜಿಯೊಂದಿಗೆ ಈ ಕೆಳಕಾಣಿಸಿದ ದಾಖಲೆಗಳನ್ನು ಸಲ್ಲಿಸಿ ಪರವಾನಗಿ ಪಡೆಯಲು ಕೋರಲಾಗಿದೆ.

  1. ಅರ್ಜಿದಾರರ ಪಾಸ್‌ಪೋರ್ಟ್ ಭಾವಚಿತ್ರ, 2. ಮುನಿಸಿಪಲ್ ಖಾತಾ ನಕಲು/ಪಹಣೆ/ಬಾಡಿಗೆ ಕರಾರು 4. ಆಧಾರ್ ಕಾರ್ಡ್ 5. ವಿದ್ಯುಚ್ಛಕ್ತಿ ಬಿಲ್ 6. ಮೊಬೈಲ್ ನಂಬರ್ 7. ಪಾನ್‌ಕಾರ್ಡ್ 8. ಇ-ಮೇಲ್ ಐಡಿ.

Davangere University ಸಾಂಸ್ಕೃತಿಕ ವಿನಿಮಯದಿಂದ ದೇಶಗಳ ನಡುವೆ ಭ್ರಾತೃತ್ವ ಸಾಧ್ಯ- ಡಾ.ಹೆಚ್.ಬಿ.ಮಂಜುನಾಥ್

0

Davangere University ದೇಶ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ ಏರ್ಪಟ್ಟಲ್ಲಿ ಸ್ನೇಹ ವೃದ್ಧಿಯಾಗಿ ತನ್ಮೂಲಕ ವಿಶ್ವ ಭ್ರಾತೃತ್ವ ಸಾಧಿಸಬಹುದು, ಇದಕ್ಕಾಗಿ ವಿದ್ಯಾರ್ಥಿ ದೆಸೆಯಿಂದಲೇ ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.

ಅವರು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಏರ್ಪಾಡಾಗಿದ್ದ ಸಾಂಸ್ಕೃತಿಕ ಸೌರಭ ಉದ್ಘಾಟಿಸಿ ಮಾತನಾಡುತ್ತಾ ದೇಶದ ಸುಮಾರು 1,200 ವಿಶ್ವವಿದ್ಯಾನಿಲಯಗಳಿಂದ ವಾರ್ಷಿಕ ಸುಮಾರು 10 ಮಿಲಿಯನ್ ಪದವೀಧರರು ಹೊರ ಬರುತ್ತಿದ್ದು ವಿಶ್ವವಿದ್ಯಾನಿಲಯಗಳು ಕೇವಲ ಪದವೀಧರರನ್ನು ತಯಾರು ಮಾಡುವ ಕಾರ್ಖಾನೆಗಳಂತಾಗದೆ ಸುಸಂಸ್ಕೃತ ಪ್ರಜೆಗಳಾಗಬಲ್ಲ ವಿದ್ಯಾರ್ಥಿಗಳನ್ನು ಹೊರಹೊಮ್ಮಿಸಬೇಕು, ದಾವಣಗೆರೆ ವಿಶ್ವವಿದ್ಯಾನಿಲಯವು ಸ್ನಾತಕೋತರ ವಿದ್ಯಾರ್ಥಿ ಸ್ನೇಹಕೂಟದ ವತಿಯಿಂದ ಸಾಂಸ್ಕೃತಿಕ ಕ್ರೀಡಾ ಉತ್ಸವ ಏರ್ಪಡಿಸುತ್ತಿರುವುದು ಸ್ವಾಗತಾರ್ಹ, ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗುತ್ತಿರುವ ಭಾರತದಲ್ಲಿ ವಿದೇಶಿ ಬಂಡವಾಳ ಹೂಡಿಕೆಯೂ ವೃದ್ಧಿಸಲಿದ್ದು ಬಹುರಾಷ್ಟ್ರೀಯ ಸಂಸ್ಥಾಪನೆಗಳು ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವಾಗ ಕೇವಲ ಶೈಕ್ಷಣಿಕ ಸಾಧನೆಯನ್ನಷ್ಟೇ ಅಲ್ಲದೆ ಕ್ರೀಡಾ ಮತ್ತು ಸಾಂಸ್ಕೃತಿಕ ಅಭಿರುಚಿ ಮತ್ತು ಸಾಧನೆಗಳನ್ನು ಸಹಾ ಪರಿಗಣಿಸುತ್ತವೆ, ಆದ್ದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸಾಧನೆಗಳನ್ನೂ ಮಾಡಬೇಕು ಎಂದು ಮಂಜುನಾಥ್ ಹೇಳಿದರು.

Davangere University ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಬಿ ಡಿ ಕುಂಬಾರರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದನ್ ಪ್ರಾರ್ಥನೆಯನ್ನು ಹಾಡಿದರೆ ಪ್ರೊ. ಶಿಶುಪಾಲ ಎಸ್ ಸ್ವಾಗತ ಕೋರುತ್ತಾ ಪ್ರಾಸ್ತಾವಿಕ ನುಡಿಗಳ ನಾಡಿದರು. ಡಾ. ತಿಪ್ಪೇಶ್ ಕೆ ವರದಿ ವಾಚನ ಮಾಡಿದರು. ವೀರ ಯೋಧರಾದ ಸುರೇಶ್ ರಾವ್ ಎಚ್ ಹವಾಲ್ದಾರ್ ಅವರನ್ನು ಸನ್ಮಾನಿಸಲಾಯಿತು. ಪ್ರಿಯಾಂಕಾ ಹಾಗೂ ಮುಗ್ಧಾ ಹೆಗಡೆ ನಿರೂಪಿಸಿದರೆ ಬಹುಮಾನಗಳ ವಿತರಣೆ ನಂತರ ಡಾ.ರೆಣುಕಾ ಕಾಪ್ಸೆ ವಂದನೆಗಳನ್ನು ಸಲ್ಲಿಸಿದರು.
ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿನಿ ಮೋನಿಕಾ ಆರ್ ಉಪಸ್ಥಿತರಿದ್ದರು

Tarunodaya Samskruta Seva Samsthe ಜುಲೈ 24 ರಿಂದ 31 ವರೆಗೆ ಶಿವಮೊಗ್ಗದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

0

Tarunodaya Samskruta Seva Samsthe ಜುಲೈ 24 ರಿಂದ 31ರ ವರೆಗೆ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಶಿವಮೊಗ್ಗ ನಗರದ ಶ್ರೀರಾಮ ಮಂದಿರ, ಜಯನಗರದಲ್ಲಿ ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ. Tarunodaya Samskruta Seva Samsthe ಕೇವಲ ಹತ್ತು ದಿನಗಳಲ್ಲಿ ಸರಳವಾಗಿ ಸಂಸ್ಕೃತ ಮಾತನಾಡುವ ಅವಕಾಶ ಇದೀಗ ನಿಮ್ಮ ಮಂದಿರದಲ್ಲಿ ಸಮಯ ಸಂಜೆ 6 ರಿಂದ 7.30ರ ವರೆಗೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ಸಂಯೋಜಕಿ ವಿಮಲಾ ರೇವಣಕರ್ 9663514011

Madhu Bangarappa ಆರೈಕೆ ,ಅಂಧತ್ವ ಮುಕ್ತ ಶಿವಮೊಗ್ಗ ಜಿಲ್ಲೆ ಒಳ್ಳೆಯ ಅಭಿಯಾನ, ಮನೆಮನೆಗೆ ಭೇಟಿ ನೀಡಿ ಕಣ್ಣಿನ ತಪಾಸಣೆಯಾಗಲಿ – ಮಧು ಬಂಗಾರಪ್ಪ

0

Madhu Bangarappa ‘ಆರೈಕೆ’ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಜಿಲ್ಲೆಯಾದ್ಯಂತ ಯಶಸ್ವಿಯಾಗಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾರೈಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಆರೈಕೆ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಕಾರ್ಯಕ್ರಮ ಹಾಗೂ ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ ಮತ್ತು ಆಶಾ ಕೈಪಿಡಿ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಆರೈಕೆ’ ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಬಹಳ ಮಹತ್ವವಾದ ಕಾರ್ಯಕ್ರಮ. ಮನೆ ಮನೆಗೆ ಭೇಟಿ ನೀಡಿ 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಕಣ್ಣಿನ ತಪಾಸಣೆ ಮಾಡಲಾಗುತ್ತದೆ. ಚಿಕಿತ್ಸೆ ಅವಶ್ಯತೆ ಇದ್ದಲ್ಲಿ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಸೊರಬದಲ್ಲಿ ಹಿಂದೆ ನಾನು ಇಂತಹ ಕಣ್ಣಿನ ತಪಾಸಣೆ-ಚಿಕಿತ್ಸೆ ಕುರಿತಾದ ಕಾರ್ಯಕ್ರಮ ಮಾಡಿದಾಗ ಬಹಳ ಯಶಸ್ವಿಯಾಗಿತ್ತು.
ಆರೋಗ್ಯ ಬಹಳ ಮುಖ್ಯ. ನಾವೆಲ್ಲ ನಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನಾವು ನಮ್ಮ ವಾಹನಗಳನ್ನು ಕಾಲ ಕಾಲಕ್ಕೆ ಸರ್ವಿಸ್ ಮಾಡಿಸ್ತಿವಿ. ಇಲ್ಲದಿದ್ದರೆ ಅವು ಕೈಕೊಡುತ್ತವೆ. ಹಾಗಿದ್ದ ಮೇಲೆ ಮನುಷ್ಯರಾದ ನಾವು ನಮ್ಮ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಸರ್ಕಾರ ಸಹ ಈ ನಿಟ್ಟಿನಲ್ಲಿ ಹೆಚ್ಚಿನ ನಿಗಾ ವಹಿಸುತ್ತಿದೆ ಎಂದ ಅವರು ಕಣ್ಣಿನ ಸಮಸ್ಯೆಗಳನ್ನು ತಿಳಿಯಲು ಮನೆ ಮನೆ ಭೇಟಿ ನೀಡಿ ತಪಾಸಣೆ ನಡೆಸುವ ಆಶಾ ಕಾರ್ಯಕರ್ತೆಯರಿಗೆ, ಶಂಕರ ಕಣ್ಣಿನ ಆಸ್ಪತ್ರೆ, ಮಣಿಪಾಲ ಆಸ್ಪತ್ರೆ, ಸುಬ್ಬಯ್ಯ ಆಸ್ಪತ್ರೆ ಸೇರಿದಂತೆ ಸಹಕರಿಸುತ್ತಿರುವ ಎಲ್ಲ ಆಸ್ಪತ್ರೆಗಳು, ವೈದ್ಯರು, ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಕ್ಯಾನ್ಸರ್ ಪೀಡಿತ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶೀಘ್ರದಲ್ಲೇ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಶಾಲೆಯನ್ನು ಆರಂಭಿಸಲಾಗುವುದು. ಮಕ್ಕಳಿಗೆ ಅನುಕೂಲವಾಗುವಂತೆ ಊಟ, ವಸತಿ, ಶಿಕ್ಷಣ ನೀಡಲು ಕದ್ವಾಯಿ ಆಸ್ಪತ್ರೆಯಿಂದ 4 ಕಿ.ಮೀ. ದೂರದಲ್ಲಿ ಶಾಲೆ ಆರಂಭಿಸಲಾಗುವುದು. ಮಕ್ಕಳನ್ನು ನೋಡಿಕೊಳ್ಳುವ ಪೋಷಕರಿಗೆ ಸಹ ವಸತಿ ವ್ಯವಸ್ಥೆ ಮಾಡಲಾಗುವುದು ಎಂದರು.
ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ‘ಆರೈಕೆ’ ಸಮಾಜಕ್ಕೆ ಶಕ್ತಿ ನೀಡುವ ಕೆಲಸವಾಗಿದೆ. ಜನರು ಅನೇಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿರುವ ಇಂತಹ ಸಂದರ್ಭದಲ್ಲಿ ಮನೆ ಮನೆಗೆ ಆರೋಗ್ಯ ಕಾರ್ಯಕ್ರಮದ ಅವಶ್ಯಕತೆ ಇದೆ.
ಅಂಧತ್ವ ನಿವಾರಣೆಗಾಗಿ ಹಗಲು ರಾತ್ರಿ ಕೆಲಸ ಮಾಡಿದ ಡಾ.ಮೋದಿ ಯವರು ನಮಗೆಲ್ಲ ಮಾದರಿ. ಈ ಕಾರ್ಯಕ್ರಮ ಯಶಸ್ವಿಯಾಗಿ, ನಿರಂತರವಾಗಿ ನಡೆಯಲಿ. ಜೀವನ ಪಣಕ್ಕಿಟ್ಟು ಕೆಲಸ ಮಾಡುವ ಆಶಾ-ಅಂಗವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದರು.
Madhu Bangarappa ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಮಾತನಾಡಿ ಕ್ಯಾನ್ಸರ್ ಪೀಡಿತ ಮಕ್ಕಳ ಶಾಲೆ ಆರಂಭಿಸುತ್ತಿರುವುದು ಅಭಿನಂದನೀಯ. ಜಿ.ಪಂ ಸಿಇಓ ರವರು ಅತ್ಯಂತ ಆಸಕ್ತಿ ವಹಿಸಿ ಆರೈಕೆಯಂತಹ ಉಪಯುಕ್ತ ಮತ್ತು ವಿನೂತನ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಗ್ಲೂಕೊಮಾ, ಪೊರೆ ಸೇರಿದಂತೆ ಇತರೆ ಕಣ್ಣಿನ ಸಮಸ್ಯೆಗಳ ಕುರಿತು ಜಾಗೃತಿ ಮುಖ್ಯ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಗ್ರಾ.ಪಂ ಗಳ ಮೂಲಕವೂ ಅರಿವು ಮೂಡಿಸಬೇಕಾಗಿದೆ.
ಕಣ್ಣಿಗೆ ಸಂಬAಧಿಸಿದ ಶೇ.80 ಸಮಸ್ಯೆಗಳನ್ನು ಗುಣಪಡಿಸಬಹುದು . ಸರ್ಕಾರ ಇವನ್ನು ಗುರುತಿಸಿ ಚಿಕಿತ್ಸೆ ನೀಡಲು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸಹಾಯ ಧನದ ಕುರಿತು ಸರ್ಕಾರ ಗಮನಿಸಬೇಕು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಚೆನ್ನಾಗಿ ಕೆಲಸ ನಿರ್ವಹಿಸುತಿದ್ದು ಅಕ್ಕ ಪಕ್ಕದ ಜಿಲ್ಲೆಗಳಿಂದಲೂ ಅನೇಕ ರೋಗಿಗಳು ಬರುತ್ತಾರೆ. ಇಲ್ಲಿನ ವೈದ್ಯರಿಗೆ ಅಗತ್ಯವಾದ ಸೌಲಭ್ಯಗಳು ದೊರಕಬೇಕು ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಇದೊಂದು ಅತ್ಯುತ್ತಮ ಕಾರ್ಯಕ್ರಮ. ಆರೋಗ್ಯವೇ ಒಂದು ಸಂಪತ್ತಾಗಿದ್ದು, ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಿದೆ. ನಿಮ್ಮ ಬಗ್ಗೆ ನಮಗೆ ಕಾಳಜಿ ಇದೆ. ಸರ್ಕಾರ ನಿಮ್ಮ ಜೊತೆ ಇದೆ ಎಂದ ಅವರು ಶಿಕ್ಷಣ ಸಚಿವರು ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಆರಂಭಿಸುತ್ತಿರುವ ಶಾಲೆ ಅತ್ಯಂತ ಅವಶ್ಯಕವಾಗಿದ್ದು, ಮಾದರಿಯಾಗಲಿದೆ ಎಂದರು.
ಡಿಎಲ್‌ಓ ಡಾ. ಕಿರಣ್ ಮಾತನಾಡಿ, ಅಂಧತ್ವ ಕಡಿಮೆ ಮಾಡಲು ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಆದರೆ ಜೀವನ ಶೈಲಿಯ ಬದಲಾವಣೆಯಿಂದ ವಿವಿಧ ರೀತಿಯ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ.
ಆರೈಕೆ-ಅಂಧತ್ವ ಮುಕ್ತ ಅಭಿಯಾನ ಶಿವಮೊಗ್ಗದಿಂದಲೇ ಮೊದಲ ಬಾರಿಗೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಮೂಲಕ ಅಂಧತ್ವ್ವದ ಬಗ್ಗೆ ಸಮಗ್ರವಾಗಿ ಆಶಾ ಕಾರ್ಯಕರ್ತೆಯರ ಮೂಲಕ ವಿವರಣೆ ಪಡೆಯಲಾಗುವುದು. ಬಳಿಕ ವೈದ್ಯರು ತಪಾಸಣೆ ಮಾಡಿ, ಸಣ್ಣ ಪುಟ್ಟ ತೊಂದರೆ ಇದ್ದರೆ, ಚಿಕಿತ್ಸೆ ನೀಡುತ್ತಾರೆ. ಶಸ್ತ್ರ ಚಿಕಿತ್ಸೆ ಸೇರಿದಂತೆ ಯಾವುದೇ ಚಿಕಿತ್ಸೆ ಇದ್ದರೂ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು. ಇದು ಈ ಕಾರ್ಯಕ್ರಮದ ಉದ್ದೇಶ. ಖಾಸಗಿ ಕಣ್ಣಿನ ಆಸ್ಪತ್ರೆಗಳ ಸಹಯೋಗ ಕೂಡ ಈ ಕಾರ್ಯಕ್ರಮಕ್ಕೆ ಇದೆ. ಆಶಾ ಕಾರ್ಯಕರ್ತೆಯರ ಕಾರ್ಯ ಮತ್ತು ಸಹಕಾರ ಪ್ರಮುಖವಾಗಿದೆ ಎಂದರು.
ಡಿಎಸ್‌ಓ ಡಾ. ನಾಗರಾಜ್ ನಾಯ್ಕ್ ಮಾತನಾಡಿ, ಸಾಂಕ್ರಾಮಿಕ ರೋಗಗಳು ಜನರನ್ನು ಹೆಚ್ಚಾಗಿ ಕಾಡುತ್ತಿದ್ದು ಪ್ರಸ್ತುತ ರೋಗ ನಿಯಂತ್ರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಗುಣಮಟ್ಟದ ನೀರು, ಒಳ ಚರಂಡಿ ವ್ಯವಸ್ಥೆ ಸೇರಿದಂತೆ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
2024 ರಲ್ಲಿ ಗೃಹ ಆರೋಗ್ಯ ಯೋಜನಾ ಕಾರ್ಯಕ್ರಮ ಸರ್ಕಾರ ರೂಪಿಸಿದ್ದು ಇದು ಎಲ್ಲ ಜಿಲ್ಲೆಗಳಲ್ಲಿ ಜಾರಿಗೊಂಡಿದೆ. ಸಕ್ಕರೆ ಕಾಯಿಲೆ ಮತ್ತು ಬಿಪಿ ಸೇರಿ 14 ಅಸಾಂಕ್ರಾಮಿಕ ಕಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 14 ಕಾಯಿಲೆಗಳ ಕುರಿತು ಮಾಹಿತಿ ನೀಡುತ್ತಾರೆ. ಅಡುಗೆ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ನೀಡಬೇಕು ಎನ್ನುವುದು ಸರ್ಕಾರದ ಘನ ಉದ್ದೇಶವಾಗಿದೆ ಎಂದರು.
ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್, ಜಿ.ಪಂ. ಸಿಇಓ ಹೇಮಂತ್ ಎನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ಇತರೆ ಅಧಿಕಾರಿಗಳು ಹಾಜರಿದ್ದರು.

JCI Shivamogga ಶಿವಮೊಗ್ಗಕ್ಕೆ ಜುಲೈ 23. ಜೆಸಿಐ (ಇಂಡಿಯ) ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುನ್ ಜುನ್ವಾಲ‌ ಅವರ ಭೇಟಿ

0

JCI Shivamogga ಶಿವಮೊಗ್ಗ ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಅಂಕುರ್ ಜುನ್ ಜುನ್ವಾಲ ರವರು ವಲಯ ಜು. 23ಕ್ಕೆ ಜಿಲ್ಲೆಗೆ ಅಧಿಕೃತ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 11ಕ್ಕೆ ವಿಮಾನ ನಿಲ್ದಾಣದಿಂದ ಸರ್ಕಾರಿ ನೌಕರರ ಭವನದವರೆಗೆ ಕಾರ್ ಮತ್ತು ಬೈಕ್ ರಾಲಿ ಮೂಲಕ ಸ್ವಾಗತಿಸಲಾಗುವುದು ಎಂದು ಜೆಸಿಐ ಶಿವಮೊಗ್ಗ ಅಧ್ಯಕ್ಷ ಜಿ. ಗಣೇಶ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಎಲ್ಲಾ ವಿಭಾಗಗಳ ಸಹಯೋಗದೊಂದಿಗೆ ಕಾಲೇಜಿನ ಮುಂಭಾಗದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಶಿವಮೊಗ್ಗೆಯ ಹೊರವಲಯದಲ್ಲಿ ಪುರ ಪ್ರವೇಶಿಸುವ ಸ್ಥಳದಲ್ಲಿ ಜೆಸಿ ಶಿವಮೊಗ್ಗ ರಾಯಲ್ಸ್ ಮತ್ತು ಜೇಸಿ ಶಿವಮೊಗ್ಗ ಭಾವನಾ ವತಿಯಿಂದ ಸ್ವಾಗತ -ಫಲಕ ಅನಾವರಣ, ಜೇಸಿಐ ಸಮೃದ್ಧಿ ವತಿಯಿಂದ ಪೋಲೀಸ್ ಬ್ಯಾರಿಕೇಡ್ ಕೊಡುಗೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದ ಅವರು, ಜೆಸಿಐ ವತಿಯಿಂದ ನಾಯಕತ್ವ ತರಬೇತಿ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.

ಜೆಸಿ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಈಗಾಗಲೇ ರಕ್ತದಾನ ಶಿಬಿರಗಳು, ಪರಿಣಾಮಕಾರಿ ಭಾಷಣ ಕಲೆ, ನೇತ್ರ ತಪಾಸಣಾ ಶಿಬಿರಗಳು, ಶಾಲಾ ಕಾಲೇಜುಗಳಲ್ಲಿ ವ್ಯಕ್ತಿತ್ವ ವಿಕಸನ, ಅರ್ಹರಿಗೆ ಆಹಾರ ಸಾಮಗ್ರಿಗಳ ಕೊಡುಗೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗಿದೆ ಎಂದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ 22 ಜೇಸಿ ಘಟಕಗಳಿದ್ದು, ಎಲ್ಲವೂ ಸಹ ಸಕ್ರಿಯವಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

JCI Shivamogga ರಾಷ್ಟ್ರೀಯ ಅಧ್ಯಕ್ಷರ ಭೇಟಿಯ ಹಿನ್ನೆಲೆಯಲ್ಲಿ 12 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಘಟಕಗಳ ಅಧ್ಯಕ್ಷರುಗಳೊಂದಿಗೆ ಸಭೆ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಅಂಕುರ್ ಜುನ್ ಜುನ್ವಾಲ ಪಾಲ್ಗೊಳ್ಳಲಿದ್ದು, ವಲಯ 24ರ ಅಧ್ಯಕ್ಷರಾದ ಜೆಸಿಐ ಸೆನೆಟರ್ ಸಿ.ಎ. ಗೌರೀಶ್ ಭಾರ್ಗವ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ವಲಯ 24ರ ಎಲ್ಲಾ ಉಪಾಧ್ಯಕ್ಷರುಗಳು, ರಾಷ್ಟ್ರೀಯ ಅಧ್ಯಕ್ಷರ ಟೂರ್ ಡೈರೆಕ್ಟರ್ ಸುದರ್ಶನ್ ತಾಯಿ ಮನೆ, ವಲಯ ಉಪಾಧ್ಯಕ್ಷ ಶಿವಮೊಗ್ಗ ಜಿಲ್ಲೆಯ ಎಲ್ಲಾ ಘಟಕದ ಅಧ್ಯಕ್ಷರುಗಳು ಉಪಸ್ಥಿತರಿರಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಸ್. ಎಂ. ಸ್ವಾತಿ, ಶಿಲ್ಪಾ ಸತೀಶ್, ಜಿ. ವಿಜಯಕುಮಾರ್, ಗಣೇಶ್ ಪೈ, ನವೀನ್ ತಲಾರಿ, ನಿವೇದಿತಾ ವಿಕಾಸ್, ಸ್ಮಿತಾ ಮೋಹನ್, ರೇಖಾ ರಂಗನಾಥ್, ರುದ್ರೇಶ್ ಕೋರಿ, ಎನ್. ಶಿಲ್ಪಾ, ಮಧುಸೂಧನ ನಾವಡ ಮೊದಲಾದವರು ಉಪಸ್ಥಿತರಿದ್ದರು.

MESCOM ಜು.23 ರಂದು ಶೆಟ್ಟಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

0

MESCOM ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Minority Welfare Department Shimoga ವೃತ್ತಿಪರ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

0

Minority Welfare Department Shivamogga ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಬೆಂಗಳೂರು ಇಲ್ಲಿ 18 ರಿಂದ 35 ವರ್ಷ ವಯೋಮಿತಿಯುಳ್ಳ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಲ್ಟಿ ಕುಸಿನ್ ಕುಕ್ (5 ತಿಂಗಳು), ಎಪ್ &ಡಿ ಸರ್ವಿಸ್ (4 ತಿಂಗಳು) ಹಾಗೂ ಎಂಟರ್‌ಪ್ರನೂರ್‌ಶಿಪ್ ಪ್ರೋಗ್ರಾಂ (1 ತಿಂಗಳು) ವೃತ್ತಿಪರ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿದ್ದು, ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ವಿದ್ಯಾರ್ಥಿಯು 10 ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Minority Welfare Department Shivamogga ಆಸಕ್ತರು https://sevasindhuservices.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಆಗಸ್ಟ್ 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ನ್ನು ಸಂಪರ್ಕಿಸುವುದು.

Madhu Bangarappa ಜುಲೈ 22 ರಿಂದ ಭದ್ರಾ ಬಲದಂಡೆಯಲ್ಲಿ ಮುಂಗಾರು ಬೆಳೆಗೆ 120 ದಿನ ನೀರು ಬಿಡುಗಡೆ – ಮಧು ಬಂಗಾರಪ್ಪ

0

Madhu Bangarappa ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ‌ ಹೇಳಿದರು.
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26 ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸುವ ಕುರಿತು ಸೋಮವಾರ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜು.22 ರಿಂದ ಬಲದಂಡೆ ನಾಲೆಗೆ ೧೨೦ ದಿನಗಳ ಕಾಲ‌ ನೀರು ಹರಿಸಲು ಸಭೆ ನಿರ್ಧರಿಸಿದ್ದು, ಸುರಕ್ಷತಾ ಕ್ರಮ‌ಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದು . ಶೀಘ್ರದಲ್ಲೇ ಎಡದಂಡ ನಾಲೆಗೆ ನೀರು ಹರಿಸಲು ದಿನಾಂಕ ನಿಗದಿಗೊಳಿಸಲಾಗುವುದು.
ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ನೀರು ಹಂಚಿಕೆ ಕುರಿತು ನೀರಾವರಿ ಸಚಿವರೊಂದಿಗೆ ಸಭೆ ನಿಗದಿಪಡಿಸಿ ಮಾತನಾಡಬೇಕು.
ಕಾಡಾ ವ್ಯಾಪ್ತಿಯಲ್ಲಿ 537
ನೀರು ಬಳಕೆದಾರರ ಸಂಘಗಳಿದ್ದು, ಇವುಗಳಿಗೆ ನೀರು ಬಳಕೆ, ಇತರೆ ರೈತ ಚಟುವಟಿಕೆ ಕುರಿತು
ಕಾರ್ಯಾಗಾರ ಮಾಡಿದರೆ ಒಳಿತು ಎಂದು ಸಲಹೆ ನೀಡಿದರು.

ಹರಿಹರ ಶಾಸಕರಾ ಬಿ.ಪಿ.ಹರೀಶ್ ಮಾತನಾಡಿ, ಮಂಗಳವಾರದಿಂದಲೇ ನೀರು ಬಿಟ್ಟರೆ ಒಳಿತಾಗುತ್ತದೆ. ಹರಪನಹಳ್ಳಿ ಕೊನೆ ಭಾಗಕ್ಕೆ ನೀರು ತಲುಪುವುದಿಲ್ಲ. ರೈತಪರ ಕಾಳಜಿ‌ವಹಿಸಿ ಕೊನೆ ಭಾಗದ ರೈತರಿಗೆ ನೀರು ತಲುಪಿಸಬೇಕು. ಅಕ್ರಮ ಪಂಪ್ ಸೆಟ್ ತೆರವು ಕಷ್ಟವಾಗಿದೆ. ಕೆರೆ ತುಂಬಿಸಲು, ಕುಡಿಯುವ ನೀರಿಗಾಗಿ ಭದ್ರಾ ನಾಲೆಯನ್ನು ಸೀಳುತ್ತಾ ಹೋಗುವುದು ಅಷ್ಟು ಸರಿಯಲ್ಲ. ಇದರಿಂದ ಮುಂದಿನ‌ ದಿನಗಳಲ್ಲಿ ಕಷ್ಟ ಆಗುತ್ತದೆ. ಜಲಾಶಯ ಉಳಿವಿಗೆ ಹೆಚ್ಚು ಅನುದಾನ ಸರ್ಕಾರ ನೀಡಬೇಕು.‌ನಾಲೆಗಳು ಕೆಲವೆಡೆ ಹೊಡೆದಿದ್ದು ರಿಪೇರಿ ಹಾಗೂ ಹೂಳು ತೆಗೆಯಲು ಅನುದಾನ ನೀಡಬೇಕು. ಹಾಗೂ ನಾಲೆ ಸೀಳುವುದನ್ನು ಸಭೆ ವಿರೋಧಿಸಬೇಕು ಎಂದು‌ ಮನವಿ ಮಾಡಿದರು.
ಹೊನ್ನಾಳಿ ಶಾಸಕರಾದ ಶಾಂತನಗೌಡ ಮಾತನಾಡಿ ನಾಳೆಯಿಂದಲೇ ನೀರು ಬಿಟುವ ಬಗ್ಗೆ ನೀರಿನ ವಿಳಾಸಪಟ್ಟಿಯನ್ನು ಸಿದ್ದಪಡಿಸಿದರೆ ಒಳಿತು. ಕೊನೆ ಭಾಗದ ರೈತರಿಗೂ ನೀರು ಸಿಗಬೇಕು ಎಂದರು.
ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ ಕೊನೆಯ ಭಾಗಕ್ಜೆ ತಲುಪಲು ೪೦೦ ಕಿ.ಮೀ ಸಾಗಿ ಬರಬೇಕು. ಇಂದೇ ಬಿಟ್ಟರೆ ಒಳಿತು ಎಂದರು.
Madhu Bangarappa ತರೀಕೆರೆ ಶಾಸಕರಾದ ಜಿ.ಹೆಚ್.ಶ್ರೀನಿವಾಸ್, ಬಲದಂಡ ನಾಲೆಯ ಅನೇಕ ಭಾಗದಲ್ಲಿ‌ ಹಲವಾರು ಕಡೆ ಅನಧಿಕೃತ ಪಂಪ್ ಸೆಟ್ ಗಳು ಇವೆ. ಲೀಕೇಜ್ ಗಳುವೆ.‌ಅನಧಿಕೃತ ರೈತರ ಪಂಪ್ ಸೆಟ್ ಕಡಿವಾಣ ಹಾಕಬೇಕು ಎಂದರು.
ಸಮಿತಿ ಸದಸ್ಯರಾದ ತೇಜಸ್ವಿ‌ ಪಟೇಲ್ ಮಾತನಾಡಿ , ವೇಳಾಪಟ್ಟಿ ಬಗ್ಗೆ ಯಾತಲ್ಲೂ ಭಿನ್ನಾಭಿಪ್ರಾಯ ಇಲ್ಲ. ಕಾಲುವೆ ತುಂಬಾ ನೀರು ಹರಿಸಲಾಗುತ್ತದೆ. ಆದರೂ ಕೊನೆಭಾಗ ತಲುಪುತ್ತಿಲ್ಲವೆಂದರೆ , ಲೀಕೇಜ್ ತಡೆದು ಉಳಿಸಬೇಕು. ಹೂಳು, ರಿಪೇರಿ ಸೇರಿದಂತೆ ನಾಲೆಗಳ ನಿರ್ವಹಣೆ ಸಮರ್ಪಕವಾಗಿ ಆಗಬೇಕು. ಎಲ್ಲ ಭಾಗದವರಿಗೂ ಅನುಕೂಲ ಆಗುವಂತಹ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ರೈತ ಮುಖಂಡರು, ತುಂಗಾ ದಿಂದ ಭದ್ರಾ ಜಲಾಶಯಕ್ಕೆ ನೀರು ಲಿಫ್ಟ್ ಮಾಡುವ ಯೋಜನೆ ಜಾರಿ ಮಾಡಬೇಕು ಹಾಗೂ ಎಡದಂಡೆಗೆ ಆ.೧ ರಿಂದ ನೀರು ಬಿಡಲು ಮನವಿಮಾಡಿದರು.
ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಅಂಶುಮಂತ್ ಮಾತನಾಡಿ, ಕಟ್ಟಕಡೆಯ ರೈತರಿಗೂ ಯಾವುದೇ ತೊಂದರೆಯಾಗದಂತೆ ನೀರು ಬಿಡುತ್ತೇವೆ. ರೈತರ ಹಿತ ಕಾಪಾಡಲು ಸದಾ ಸಿದ್ದವಾಗಿದ್ದೇವೆ. ತಾಂತ್ರಿಕ, ಕೃಷಿ ವಿಭಾಗಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆ.‌ ಸವಳು ಜವಳು ಯೋಜನೆ ಜಾರಿ‌ ಮಾಡಲು ರೈತ ರ ಸಹಕಾರ ಬೇಕು. ಭೂಮಿ ಫಲವತ್ತತೆಯ, ಸುರಕ್ಷತೆ ಬಗ್ಗೆ ಸಹ ಕಾಡಾ ಕೆಲಸ ಮಾಡುತ್ತಿದೆ. ಕಾಡಾ ವ್ಯಾಪ್ತಿಯಲ್ಲಿ ೩೫ ನೀರಾವರಿ ಯೋಜನೆಗಳು ಬರುತ್ತವೆ. ೫೩೭ ನೀರು ಬಳಕೆದಾರರ ಸಂಘಗಗಳು ಇವೆ. ೧೧೦ ಸಂಘಗಳಿಗೆ ಸರ್ಕಾರ ರೂ. ೧ ಲಕ್ಷ ಅನುದಾನ ನೀಡಲಾಗಿದೆ. ಸಹಕಾರ ವ್ಯವಸ್ಥೆ ಇದೆ.
ನರೇಗಾ ಸಹಭಾಗಿತ್ವ ದಲ್ಲಿ ಕೆಲಸಕ್ಕೆ ಮುಂದಾಗಿದ್ದೇವೆ. ಯಾವುದೇ ನೀರಾವರಿ ಸಮಸ್ಯೆ ಪರಿಹರಿಸಲು ಕಾಡಾ ಬದ್ದವಾಗಿದೆ ಎಂದರು.

ಸಭೆಯಲ್ಲಿ ಮುಂಗಾರು ಬೆಳೆಗೆ ನೀರು ಹರಿಸಲು ದಿನಾಂಕವನ್ನು ನಿರ್ಧರಿಸುವ ಕುರಿತು ಹಾಗೂ ನೀರಾವರಿಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಕುರಿತು ಜನಪ್ರತಿನಿಧಿಗಳು, ಸದಸ್ಯರು, ರೈತ ಮುಖಂಡರಿಂದ ಅಗತ್ಯ ಸಲಹೆಗಳನ್ನು ಪಡೆಯಲಾಯಿತು.
ಭದ್ರಾವತಿ ತಾಲ್ಲೂಕಿನ ಕಾಗೆಕೋಡಮಗ್ಗೆ ನೀರು ಬಳಕೆದಾರರ ಸಂಘದ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ಎರಡನೇ ಸ್ಥಾನ ಬಂದಿದ್ದು, ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು.
ಸಭೆಯಲ್ಲಿ ವಿಧಾನ ಸಭೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಶಾಂತನಗೌಡ, ಬಸವರಾಜಪ್ಪ, ಬಿ.ಪಿ.ಹರೀಶ್ ಮಾತನಾಡಿದರು. .ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ,
ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು,
ಆಡಳಿತಾಧಿಕಾರಿ, ಮುಖ್ಯ ಇಂಜಿನಿಯರ್ , ಇತರೆ ಅಧಿಕಾರಿಗಳು ಹಾಜರಿದ್ದರು

Shivamogga District Tourism Development Forum ವಾರಾಂತ್ಯ ಪ್ರವಾಸ, ಜುಲೈ 27 ರಂದು ಶಿವಮೊಗ್ಗದಿಂದ ಆನಂದಪುರ ಚಂಪಕ ಸರಸಿ, ನೀನಾಸಂ ಸಿಗಂದೂರು, ಅಮ್ಮನಘಟ್ಟ ವೀಕ್ಷಣೆ

0

Shivamogga District Tourism Development Forum ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ವತಿಯಿಂದ ವಾರಾಂತ್ಯದ ಪ್ರವಾಸದ ಯೋಜನೆಯಡಿಯಲ್ಲಿ 27.07.2025 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಲ್ಲಿರುವ ಆನಂದಪುರ ಸಮೀಪವಿರುವ ಚಂಪಕ ಸರಸಿ ಕೊಳ, ಹೆಗ್ಗೋಡಿನ ನೀನಾಸಂ, ಚರಕ, ಸಿಗಂದೂರು ಚೌಡೇಶ್ವರಿ ಅಮ್ಮನವರ ದೇವಸ್ಥಾನ ಹಾಗೂ ಹೊಸನಗರ ತಾಲೂಕಿನಲ್ಲಿ ಇರುವ ಜೇನುಕಲ್ಲು ಗುಡ್ಡಮ್ಮನ ದೇವಸ್ಥಾನಕ್ಕೆ ಪ್ರವಾಸವನ್ನು ಏರ್ಪಡಿಸಲಾಗಿದೆ.

ಬೆಳಿಗ್ಗೆ 6.30 ಕ್ಕೆ ಹೋಟೆಲ್ ಮಥುರಾ ಪ್ಯಾರಡೈಸ್ ಹೋಟೆಲ್ ನಿಂದ
ಹೊರಟು ರಾತ್ರಿ 8.30 ಕ್ಕೆ ಶಿವಮೊಗ್ಗಕ್ಕೆ ವಾಪಾಸಾಗುವುದು. ಶುಲ್ಕ ಒಬ್ಬರಿಗೆ ರೂ. 600.00, Shivamogga District Tourism Development Forum 45 ಜನರಿಗೆ ಮಾತ್ರ ಅವಕಾಶ, ಮೊದಲು ಹೆಸರು ನೊಂದಾಯಿಸಿದವರಿಗೆ ಆಧ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಹೆಸರನ್ನು ಅ.ನಾ.ವಿಜಯೇಂದ್ರ ರಾವ್, ಸಹ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಪ್ರವಾಸೋಧ್ಯಮ ಅಭಿವೃದ್ಧಿ ವೆದಿಕೆ ದೂರವಾಣಿ ಸಂಖ್ಯೆ 9448790127 ಇವರನ್ನು ಸಂಪರ್ಕಿಸುವಂತೆ ವೇದಿಕೆಯ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ.

Shivaganga Yoga Center ಯೋಗಾಭ್ಯಾಸದಿಂದ ಸಮೃದ್ಧ ಆರೋಗ್ಯ- ಸಿ.ಆರ್.ಅಶ್ವಿನ್

0

Shivaganga Yoga Center ಯೋಗ ಚಿಕಿತ್ಸೆಯು ಮನುಷ್ಯನ ದೈಹಿಕ, ಮಾನಸಿಕ ಅಸಮತೋಲನವನ್ನು ನಿವಾರಿಸುವ ಮೂಲಕ ಸರ್ವತೋಮುಖ ಸಮತೋಲನವನ್ನು ತಂದು ಆರೋಗ್ಯ ಸ್ಥಿರಗೊಳಿಸುವ ವಿದ್ಯೆಯಾಗಿದೆ ಎಂದು ಶಿಕ್ಷಣ ಇಲಾಖೆ ಯೋಗ ಶಿಕ್ಷಕ, ಉಪನ್ಯಾಸಕ ಸಿ ಆರ್ ಅಶ್ವಿನ್ ಹೇಳಿದರು.

ಶ್ರೀ ಶಿವಗಂಗಾ ಯೋಗ ಕೇಂದ್ರದ ಕಲ್ಲಹಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಹಾಗೂ ಪುನಶ್ಚೇತನ ಕಾರ್ಯಗಾರದಲ್ಲಿ ಮಾತನಾಡಿ, ಯೋಗಾಭ್ಯಾಸದ ಬಲವು ಸಮೃದ್ಧ ಆರೋಗ್ಯ ಕೊಡುತ್ತದೆ. ರೋಗವನ್ನು ದೂರ ಮಾಡುವ ಜತೆಯಲ್ಲಿ ರೋಗ ಬರದಂತೆ ನೋಡಿಕೊಳ್ಳುತ್ತದೆ. ಆದ್ದರಿಂದ ಯೋಗವು ಆರೋಗ್ಯ ಸಂವರ್ಧಕ, ರೋಗ ನಿವಾರಕ ಮತ್ತು ರೋಗ ನಿರೋಧಕ ಹೀಗೆ ಯೋಗಕ್ಕೆ ನಾನಾ ಆಯಾಮಗಳು ಉಂಟು ಎಂದು ತಿಳಿಸಿದರು.
ಯೋಗ ಎಂದರೆ ಒಂದು ವ್ಯಾಯಾಮ ಅಲ್ಲ, ಅದು ನಮ್ಮ ಮನಸ್ಸುಗಳನ್ನು ಪರಿಶುದ್ಧಿಗೊಳಿಸುವುದು. ಸಕಾರಾತ್ಮಕವಾದ ಭಾವನೆಗಳನ್ನು ಮೂಡಿಸುವುದೇ ಯೋಗ ಎಂದರು.

ಯೋಗಾಚಾರ್ಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಯೋಗ, ಪ್ರಾಣಾಯಾಮ, ಧ್ಯಾನಕ್ಕೆ ತನ್ನದೇ ಆದ ಒಂದು ವೈಚಾರಿಕತೆ ಇದೆ. ಸರಿಯಾದ ರೀತಿಯಲ್ಲಿ ಯೋಗಾಭ್ಯಾಸ ಮಾಡಬೇಕು. ಒಂದು ವರ್ಷ ನಡೆಯುವ ತರಬೇತಿ ಶಿಬಿರದಲ್ಲಿ ಎಲ್ಲರೂ ಸರಿಯಾಗಿ ಭಾಗವಹಿಸಿ ಅಭ್ಯಾಸ ಮಾಡಬೇಕು ಎಂದು ಹೇಳಿದರು.

ಶಿವಗಂಗಾ ಯೋಗ ಕೇಂದ್ರದ ಟ್ರಸ್ಟ್ ನ ಟ್ರಸ್ಟಿ ಹಾಲಪ್ಪ ಮಾತನಾಡಿ, ಸಮಾಜದ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಶ್ರಮಿಸುತ್ತಿರುವ ಏಕೈಕ ಕೇಂದ್ರ ಶಿವಗಂಗಾ ಯೋಗ ಕೇಂದ್ರ. ಈಗಾಗಲೇ ಶಿವಮೊಗ್ಗದ 38 ಶಾಖೆಗಳಲ್ಲಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆ ಉಚಿತ ಯೋಗ ಶಿಕ್ಷಣ, ಪ್ರಾಣಾಯಾಮ, ಧ್ಯಾನ ಹಾಗೂ ಆರೋಗ್ಯ ಮಾಹಿತಿಗಳನ್ನು ನೀಡುತ್ತಿದೆ ಎಂದರು.

Shivaganga Yoga Center ವೇದಿಕೆಯಲ್ಲಿ ಟ್ರಸ್ಟ್ ಪೋಷಕರಾದ ಎಂ.ಪಿ.ಆನಂದಮೂರ್ತಿ, ಬಾಳೆಕಾಯಿ ಮೋಹನ್, ಅಡಿಗ, ಸುರೇಶ್, ಹೂವೇಗೌಡ, ದೇವೇಂದ್ರಪ್ಪ, ಯೋಗ ಶಿಕ್ಷಕ ಜಿ.ಎಸ್.ಓಂಕಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ.ವಿಜಯಕುಮಾರ್ ಹಾಗೂ ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.