Monday, February 23, 2026
Monday, February 23, 2026
Home Blog Page 239

S.N.Chennabasappa ಕೃತಕ ಬುದ್ಧಿಮತ್ತೆ ಜಾಗತಿಕ ಅಭಿವೃದ್ಧಿಗೆ ಪೂರಕ- ಶಾಸಕ ಚನ್ನಬಸಪ್ಪ

0

S.N.Chennabasappa ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದಲ್ಲಿ ನಡೆದ “ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಸಮಗ್ರ ಜಾಗತಿಕ ಅಭಿವೃದ್ಧಿಗಾಗಿ ಮತ್ತು ಡಿಜಿಟಲ್ ವೇದಿಕೆಗಳನ್ನು ಬಳಸಿಕೊಳ್ಳುವುದರ ಕುರಿತು ಆಯೋಜಿಸಲಾಗಿದ್ದ ಅರ್ಥಪೂರ್ಣ ಜ್ಞಾನವರ್ಧಕ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಡಿಜಿಟಲ್ ಯುಗದ ಪ್ರಮುಖ ಆಯಾಮವಾದ ಕೃತಕಬುದ್ಧಿಮತ್ತೆ (AI) ಇಂದು ಶಿಕ್ಷಣ, ಆರೋಗ್ಯ, ಕೃಷಿ, ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಿದ್ದು, ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ AI ಬಗ್ಗೆ ಅರಿವು ಹೆಚ್ಚಿಸಿ, ಭವಿಷ್ಯದ ಕೌಶಲ್ಯಗಳಿಗೆ ಸಿದ್ಧರಾಗುವಂತೆ ಪ್ರೇರಣೆಯಾಗುವಂತಿತ್ತು.

S.N.Chennabasappa ಕಾರ್ಯಕ್ರಮದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ಹಾಗೂ ಡಾ. ಧನಂಜಯ್ ಸರ್ಜಿ, ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರು, ವಿಷಯ ತಜ್ಞರು, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

Department of Horticulture ಅಡಿಕೆಯಲ್ಲಿ ಕೊಳೆರೋಗ ಕಾರಣ & ನಿಯಂತ್ರಣ, ತೋಟಗಾರಿಕೆ ಇಲಾಖೆಯಿಂದ ಮಾಹಿತಿ

0

Department of Horticulture ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ನಮ್ಮ ವಾತಾವರಣದಲ್ಲಿ ಎಲ್ಲಾ ಕಡೆ ಬೀಜಾಣು ರೂಪದಲ್ಲಿ ಇರುತ್ತದೆ, ಇದು ಅನುಕೂಲ ಪರಿಸ್ಥಿತಿ ಕೂಡಿ ಬಂದಾಗ ಬೀಜಾಂಕುರವಾಗುತ್ತದೆ.

ಸಂತಾನಾಭಿವೃದ್ದಿ ಹೊಂದಿ ಅಡಿಕೆಯ ಎಳೆ ಕಾಯಿಗಳಿಗೆ ಹಾನಿ ಮಾಡಿ ಬೆಳೆ ನಷ್ಟಕ್ಕೆ ಕಾರಣವಾಗುತ್ತದೆ. ಪ್ರಾರಂಭದಲ್ಲೇ ಬೀಜಾಂಕುರವನ್ನು ತಡೆದರೆ ಪರಿಣಾಮ ಹೆಚ್ಚು.

ತಜ್ಞರು ಕೊಳೆ ಔಷಧಿಯನ್ನು ಮುಂಗಾರು ಮಳೆ ಪ್ರಾರಂಭವಾಗುವ ಮುಂಚೆಯೇ ಅಡಿಕೆ ಗೊನೆಗಳಿಗೆ ಸಿಂಪರಣೆ ಮಾಡಬೇಕು ಎನ್ನುತ್ತಾರೆ.
ನಾವು ಇನ್ನೂ ಅಡಿಕೆ ಮಿಡಿಗಳು ಸಣ್ಣದಿವೆ. ಅದಕ್ಕೆ ಹೇಗಪ್ಪಾ ಔಷಧಿ ತಗಲುವುದು ಎಂದು ಸಾಧ್ಯವಾದಷ್ಟು ತಡ ಮಾಡುತ್ತೇವೆ.
ಮಳೆ ಸರಿಯಾಗಿ ಹಿಡಿದ ನಂತರ ಅಲ್ಪ ಸ್ವಲ್ಪ ಮಳೆಯನ್ನೂ ಲೆಕ್ಕಿಸದೇ ಸಿಂಪರಣೆ ಮಾಡುತ್ತೇವೆ.
ಇದರಿಂದ ಏನಾಗುತ್ತದೆ ಇಲ್ಲಿದೆ.

ಮಾಹಿತಿ.
ರೋಗ ಪ್ರಾರಂಭ:
ಸಾಮಾನ್ಯವಾಗಿ ಸ್ಪ್ರಿಂಕ್ಲರ್ ನೀರಾವರಿ ಮಾಡುವ ಸದಾ ತೇವವಾಗಿರುವ ತೋಟಗಳಲ್ಲಿ ಕೊಳೆ ರೋಗಕ್ಕೆ ಕಾರಣವಾದ Phytophthora arecae ಶಿಲೀಂದ್ರ ತೋಟದಲ್ಲೇ ಬೀಜಾಣು ರೂಪದಲ್ಲಿ ಇರುತ್ತದೆ.
ಮೊದಲ ಮಳೆ ಜೊತೆಗೆ ಹೆಚ್ಚಿನ ಆರ್ಧ್ರತೆಯಲ್ಲಿ ಇದು ಬೀಜಾಂಕುರಗೊಳ್ಳಲಾರಂಭಿಸುತ್ತದೆ.
ಇದೇ ಸಮಯದಲ್ಲಿ ಆಗಾಗ ಮಳೆ, ಗಾಳಿ ಮತ್ತು ಸಿಡಿಲು ಮಿಂಚುಗಳು ಉಂಟಾಗುತ್ತದೆ.
ಇದು ಒಂದು ಕಡೆಯಿಂದ ಮತ್ತೊಂದು ಕಡೆಗೆ ಶಿಲೀಂದ್ರದ ಬೀಜಾಣುಗಳ ಪ್ರಸಾರಕ್ಕೆ ಮತ್ತು ಮೊಳೆಯುವಿಕೆಗೆ ಸಹಕಾರಿಯಾಗುತ್ತದೆ.
ಸಾಮಾನ್ಯವಾಗಿ ತೆಂಗಿನ ಮರದ ಗರಿ ಕೊಳೆಯುವ ರೋಗ ಪ್ರಾರಂಭವಾಗುವುದು ಮುಂಗಾರು ಮಳೆ ಪ್ರಾರಂಭದಲ್ಲಿ.
ಅದೇ ರೀತಿಯಲ್ಲಿ ಎಳೆಯ ಅಡಿಕೆ ಗಿಡಗಳಲ್ಲೂ ಇದೇ ಸಮಯದಲ್ಲಿ ಸುಳಿ ಕೊಳೆ ಪ್ರಾರಂಭವಾಗುತ್ತದೆ. ಇದೆಲ್ಲಾ ಒಂದೇ ಕುಟುಂಬಕ್ಕೆ ಸೇರಿದ ಶಿಲೀಂದ್ರಗಳಿಂದ ಆಗುವ ತೊಂದರೆ.

ಅಡಿಕೆಯ ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರವನ್ನು ಅವು ಬೀಜಾಂಕುರವಗುವ ಸಮಯದಲ್ಲೇ ಹತ್ತಿಕ್ಕಿದರೆ ಅದರ ತೊಂದರೆ ಬಹುಮಟ್ಟಿಗೆ ಕಡಿಮೆಯಾಗುತ್ತದೆ. ಸಾಮಾನ್ಯವಾಗಿ ಅಡಿಕೆ ಮರದ ಹೂ ಗೊಂಚಲು ಸಂದಿನಲ್ಲಿ, ಹಿಂದಿನ ವರ್ಷದ ಹಳೆಯ ಹೂಗೊಂಚಲು ಬುಡದಲ್ಲಿ ಬೀಜಾಣುಗಳು ಇರುತ್ತವೆ. ಈ ಬೀಜಾಣುಗಳು ಮೊದಲ ಮಳೆ ಬಂದಾಗ ಬೀಜಾಂಕುರವಾಗಲು ಸಜ್ಜಾಗುತ್ತದೆ.

ಈಗ ಅದಕ್ಕೆ ಪ್ರತಿರೋಧ ಉಂಟು ಮಾಡುವ ಕೊಳೆ ರೋಗ ನಿಯಂತ್ರಕವನ್ನು ಸಿಂಪರಣೆ ಮಾಡಿದರೆ ಅವುಗಳ ಸಂಖ್ಯಾಭಿವೃದ್ದಿ ಕಡಿಮೆಯಾಗುತ್ತದೆ ಎನ್ನುತ್ತಾರೆ ತಜ್ಞರು.
ಬೋರ್ಡೋ ದ್ರಾವಣಕ್ಕೆ ಬರೇ ಶಿಲೀಂದ್ರ ನಿಯಂತ್ರಕ ಗುಣ ಮಾತ್ರವಲ್ಲ.

ಇದು ಬ್ಯಾಕ್ಟೀರಿಯಾ ನಿಯಂತ್ರಕವೂ ಹೌದು. ಇದು ಕೊಳೆ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕಾ ಔಷಧಿ ಮಾತ್ರ.
ಬೇಗ ಸಿಂಪರಣೆಯಿಂದ ಅನುಕೂಲ:

Department of Horticulture ಅಡಿಕೆ ಮರಗಳಿಗೆ ಧೀರ್ಘ ಕಾಲದ ತನಕ ಉಳಿದುಕೊಂಡು ರೋಗ ಸಾಧ್ಯತೆಯನ್ನು ಕಡಿಮೆ ಮಾಡುವ ಔಷಧಿಯಲ್ಲಿ ಬೋರ್ಡೋ ದ್ರಾವಣವೇ ಪ್ರಮುಖವಾದುದು.
ಪರಿಶುದ್ಧವಾದ ಮೈಲುತುತ್ತೇ ಮತ್ತು ಸುಣ್ಣಕ್ಕೆ ರೋಗ ಹತ್ತಿಕ್ಕುವ ಎಲ್ಲಾ ಗುಣಗಳೂ ಇವೆ.ಮೈಲು ತುತ್ತೆಯಲ್ಲಿ ತಾಮ್ರ ಮತ್ತು ಸಲ್ಫರ್ ಎರಡು ಸಸ್ಯಕ್ಕೆ ಬೇಕಾಗುವ ಪೋಷಕಾಂಶ ಇರುತ್ತದೆ.

ತಾಮ್ರ ಒಂದು ಲಘು ಪೋಷಕಾಂಶ, ಸಲ್ಫರ್ ದ್ವಿತೀಯ ಅವಷ್ಯ ಪೋಷಕಾಂಶ. ಸುಣ್ಣದಲ್ಲಿ ಕ್ಯಾಲ್ಸಿಯಂ ಎಂಬ ದ್ವಿತೀಯ ಅವಶ್ಯ ಪೋಷಕಾಂಶ ಇರುತ್ತದೆ.
ಇದನ್ನು ಮುಂಗಾರು ಮಳೆಗೆ ಮುಂಚೆ ಸಿಂಪಡಿಸಿದಾಗ ಅಡಿಕೆ ಮರಕ್ಕೆ ಈ ಮೂರು ಪೋಷಕಗಳು ದೊರೆತು ಕಾಯಿ ಉದುರುವಿಕೆ, ಮತ್ತು ಕೆಲವು ರಸ ಹೀರುವ ಕೀಟಗಳ ಸಮಸ್ಯೆಯೂ ಕಡಿಮೆಯಾಗುತ್ತದೆ.
ಗಂಧಕ ಮತ್ತು ಕ್ಯಾಲ್ಸಿಯಂ ಈ ಸಮಯದಲ್ಲಿ ಸಸ್ಯಕ್ಕೆ ಅಂತರ್ಗತ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಡುತ್ತದೆ.
ಒಂದೆರಡು ಮೂಂಗಾರು ಪೂರ್ವ ಮಳೆ ಬಂದ ತಕ್ಷಣ ಮಿಳ್ಳೆ ಉದುರುವುದು ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರ ಸಮಸ್ಯೆ.
ಇದಕ್ಕೆ ಏನು ಸಿಂಪಡಿಸಬೇಕು ಎಂದು ಎಲ್ಲರೂ ಕೇಳುತ್ತಾರೆ.
ಕೀಟನಾಶಕ- ರೋಗ ನಾಶಕ ಸಿಂಪಡಿಸುವ ಬದಲು ಬೋರ್ಡೋ ದ್ರಾವಣವನ್ನು ಸಿಂಪಡಿಸಿದರೆ ಖರ್ಚು ಕಡಿಮೆಯಾಗುತ್ತದೆ.

ಇದರಿಂದ ತೊಂದರೆಯಂತೂ ಇಲ್ಲವೇ ಇಲ್ಲ. ಪರಿಹಾರವೂ ಸಿಗುತ್ತದೆ.
ಕೊಳೆ ರೋಗ ತಡೆಗೆ ಬೇರೆ ರೋಗ ನಾಶಕಗಳು ಇದೆಯಾದರೂ ಇದರಷ್ಟು ಧೀರ್ಘ ಕಾಲದ ತನಕ ಅದರ ಪರಿಣಾಮ ಇರುವುದಿಲ್ಲ. ಇದು ಅಗ್ಗವೂ ಆಗುತ್ತದೆ.ಶೇ 1 ರ ಶಿಫಾರಿತ ಪ್ರಮಾಣಕ್ಕಿಂತ ಹೆಚ್ಚು ಸಿಂಪರಣೆ ಮಾಡಬಾರದು.

Adichunchanagiri Mutt ಮಕ್ಕಳಲ್ಲಿ ಶಿಸ್ತು,ಆಚಾರ- ವಿಚಾರ,ಸಂಸ್ಕೃತಿಯನ್ನ ಬೆಳೆಸಬೇಕು- ಶ್ರೀನಾದಮಯಾ ನಂದನಾಥಶ್ರೀ

0

Adichunchanagiri Mutt ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆದ್ದರಿಂದ ಅವರಲ್ಲಿ ಶಿಸ್ತು,ಆಚಾರ, ವಿಚಾರ,ಸಂಸ್ಕೃತಿಯನ್ನು ಮೈಗೂಡಿಸಿ, ದೇಶದ ಆಸ್ತಿಗಳನ್ನಾಗಿ ಮಾಡಬೇಕಾಗಿದೆ ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ಶ್ರೀ ನಾದಮಯಾ ನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಶಾಲೆಯ ಪ್ರಿ ಕೆ ಜಿ ಮತ್ತು ಎಲ್ ಕೆ ಜಿ ಪುಟಾಣಿ ಮಕ್ಕಳಿಗೆ ಬಿ ಜಿ ಎಸ್ ಸಭಾಭವನದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ,ಅಕ್ಷರಾಭ್ಯಾಸವು ಮಗುವಿನ ಶಿಕ್ಷಣದ ಆರಂಭವನ್ನು ಸೂಚಿಸುವ ಒಂದು ಮಹತ್ವದ ಆಚರಣೆಯಾಗಿದೆ. ಇದು ಮಗುವಿಗೆ ಜ್ಞಾನ ಮತ್ತು ಕಲಿಕೆಯ ಮಾರ್ಗವನ್ನು ತೆರೆಯುತ್ತದೆ ಎಂದು ನಂಬಲಾಗಿದೆ.

ಮಗುವಿನ ತಂದೆ ಅಥವಾ ಗುರುವು ಮಗುವಿನ ಕೈ ಹಿಡಿದು, ಸ್ಲೇಟ್ ಅಥವಾ ತಟ್ಟೆಯಲ್ಲಿ ಅಕ್ಕಿಯ ಮೇಲೆ ಓಂ, ಶ್ರೀ, ಮತ್ತು ಇತರ ದೇವರ ಹೆಸರುಗಳನ್ನು ಬರೆಯುತ್ತಾರೆ. ನಂತರ, ಮಗುವು ತಾನೇ ಅಕ್ಷರಗಳನ್ನು ಬರೆಯಲು ಪ್ರಯತ್ನಿಸುತ್ತದೆ ಎಂದು ಪೂಜ್ಯರು ತಿಳಿಸಿದರು.

Adichunchanagiri Mutt ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ಮಾಸಪ್ಪಗೌಡ, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಪೋಷಕರು,ಶಿಕ್ಷಕರು ಇನ್ನು ಮುಂತಾದವರು ಉಪಸ್ಥಿತರಿದ್ದರು.

Klive Special Article “ನರೇಗಾ ಯೋಜನೆ” ಜೀವನೋಪಾಯಕ್ಕೆ ಆಸರೆ

0

ವಿಶೇಷ ಬರಹ
ಲೇ:ಆಕಾಶ್.ಆರ್‌ಎಸ್.

Klive Special Article ಸಾಗರ ತಾಲ್ಲೂಕಿನ ಕೆಳದಿ ಗ್ರಾಮದ ಶಿವಪ್ಪನಾಯಕರ ಕಾಲದಲ್ಲಿ ನಿರ್ಮಿಸಿದ್ದರೆನ್ನಲಾದ ಅತ್ಯಂತ ದೊಡ್ಡದಾದ ಹಿರೆಕೆರೆಯ ಹೂಳೆತ್ತುವ ಕಾಮಗಾರಿಯನ್ನು ನರೇಗಾ ಯೋಜನೆಯಡಿ ಕೈಗೊಳ್ಳುವ ಮೂಲಕ ಮಳೆಗಾಲದಲ್ಲಿ ಕೆರೆ ತುಂಬಲು ಮತ್ತು ಸುತ್ತಮುತ್ತಲ ಜಮೀನುಗಳಿಗೆ ಬೇಸಿಗೆ ಬೆಳೆಗೆ ಅನುಕೂಲ ಮಾಡಿಕೊಟ್ಟಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ವಿವಿಧ ಕಾಮಗಾರಿಗಳ ಮೂಲಕ ಉದ್ಯೋಗ ಖಾತ್ರಿ ಪಡಿಸುವ ಮೂಲಕ ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕೆ ಆಸರೆಯಾಗಿದ್ದು ಬದುಕು ಹಸನುಗೊಳಿಸುತ್ತಾ ಬಂದಿದೆ.

ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆರೆಗಳನ್ನು ಹೂಳು ತೆಗೆದು ಕೆರೆ ಅಭಿವೃದ್ದಿಪಡಿಸುವ ಮೂಲಕ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಒದಗಿಸಲು ಸಾಧ್ಯವಾಗಿಸಿದೆ ‘ನರೇಗಾ’.
ಕೆಳದಿ ಗ್ರಾಮದಲ್ಲಿ ಶಿವಪ್ಪನಾಯಕನ ಆಡಳಿತ ಅವಧಿಯಲ್ಲಿ ನಿರ್ಮಾಣವಾಗಿರುವ ಹಿರೆಕೆರೆ ಅತ್ಯಂತ ದೊಡ್ಡ ಕೆರೆಯಾಗಿದೆ. ಈ ಕೆರೆಯು ಸುಮಾರು 150 ಎಕರೆಯಷ್ಟು ವಿಸ್ತಿರ್ಣ ಹೊಂದಿದೆ. ಸುತ್ತಲೂ ಸುಮಾರು 200 ಎಕರೆ ಜಮೀನಿಗೆ ಈ ಕೆರೆಯ ನೀರೇ ಮೂಲವಾಗಿದೆ. ಈ ಕೆರೆಯಿಂದ ಕೆಳಭಾಗದಲ್ಲಿರುವ ಸಾಕಷ್ಟು ಜಮೀನುಗಳು ಕೃಷಿಗೆ ಈ ನೀರನ್ನೆ ಬಳಸುತ್ತಾರೆ.

ಇಲ್ಲಿನ ಬಹುತೇಕ ಜಮೀನಿನಲ್ಲಿ ಭತ್ತ ಮತ್ತು ಅಡಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಹಿರೆಕೆರೆಯಿಂದ ಬರುವ ನೀರು ಮತ್ತು ಈ ಗ್ರಾಮದಲ್ಲಿರುವ ಕಾಲುವೆ ಅಕ್ಕಪಕ್ಕದ ಜಮೀನುಗಳಿಂದ ಬರುವ ನೀರು ಸಹ ಕಾಲುವೆ ಮೂಲಕ ಹರಿದು ಮುಂದೆ ನದಿ ಸೇರುತ್ತದೆ. ಆದರೆ ಕಾಲುವೆ ಹೂಳು ತುಂಬಿದ್ದರಿಂದ ಮಳೆಗಾಲದಲ್ಲಿ ಬರುವ ನೀರು ಸುತ್ತಲೂ ಇರುವ ಜಮೀನು ಮತ್ತು ತೋಟಗಳಿಗೆ ನುಗ್ಗಿ ಸಾಕಷ್ಟು ಹಾನಿಯುಂಟು ಮಾಡಿದ್ದು, ಇದರಿಂದ ಅಲ್ಲಿನ ರೈತರು ಕಂಗೆಟ್ಟಿದ್ದರು.

ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾರ್ಯವನ್ನು ಕೈಗೊಂಡಿದ್ದು, ಇದರಿಂದ ಸುಮಾರು 200 ಎಕರೆಯಷ್ಟು ಜಮೀನುಗಳಿಗೆ ಬೇಸಿಗೆ ಅವಧಿಯಲ್ಲಿ ನೀರು ಜಮೀನುಗಳಿಗೆ ಸರಾಗವಾಗಿ ಹರಿದು ಹೋಗಲು ಅನುಕೂಲಕರವಾಗಿದೆ. ಹಾಗೂ ಮಳೆಗಾಲದಲ್ಲಿ ಅತಿಯಾದ ಮಳೆಯಿಂದ ಕಾಲುವೆ ತುಂಬಿ ತೋಟ, ಗದ್ದೆಗಳಿಗೆ ನೀರು ನುಗ್ಗಿ ಗಿಡಗಳಿಗೆ ಹಾಕಿರುವ ಗೊಬ್ಬರ ಮತ್ತು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಮಸ್ಯೆ ತಪ್ಪಿದೆ.

ಪ್ರತಿ ವರ್ಷ ಮಳೆಗಾಲ ಬಂದಾಗ ಜಮಿನುಗಳಲ್ಲಿರುವ ಬೆಳೆಗಳಿಗೆ ಯಾವ ರೀತಿ ಹಾನಿಯಾಗುತ್ತದೆ ಮತ್ತು ಏನು ನಷ್ಟ ಉಂಟು ಮಾಡುತ್ತದೆ ಎಂಬ ಭಯದಿಂದ ಕಾಲ ಕಳೆಯುತ್ತಿದ್ದೆವು. ಆದರೆ ಈ ವರ್ಷ ಕಾಲುವೆ ಹೂಳೆತ್ತಿ ಅಭಿವೃದ್ದಿಪಡಿಸಿರುವುದರಿಂದ ಚಿಂತೆ ಇಲ್ಲದೇ ಇದ್ದೇವೆ ಎಂದು ರೈತರಾದ ನಾರಾಯಣಪ್ಪ ಅವರು ಹೇಳಿದ್ದಾರೆ.

ಮಾಸೂರಿನಲ್ಲಿ ನೆಡುತೋಪುಗಳು:
ನರೇಗಾ ಯೋಜನೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಮಾಸೂರಿನ ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳ ಸುತ್ತಲೂ ಗಿಡಗಳನ್ನು ನೆಟ್ಟು, ಬೆಳೆಸಿ ಪೋಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನರೇಗಾ ಯೋಜನೆಯನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಂಡಿರುವ ಸಾಮಾಜಿಕ ಅರಣ್ಯ ಇಲಾಖೆಯು 1000 ಗಿಡಗಳನ್ನು ಈ ಭಾಗದಲ್ಲಿ ನೆಟ್ಟಿದ್ದು, ಈ ಕಾಮಗಾರಿಯಲ್ಲಿ ಅಂದಾಜು ರೂ. 5 ಲಕ್ಷ ಮೊತ್ತದಲ್ಲಿ 892 ಮಾನವ ದಿನಗಳನ್ನು ಸೃಜನೆ ಮಾಡಿಕೊಡಲಾಗಿದೆ.

ಅರಣ್ಯ ಇಲಾಖೆಯು ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಿಗೆ, ಪ್ರಾಣಿ, ಪಕ್ಷಿಗಳಿಗೆ ಹಣ್ಣು, ಆಹಾರ ಮತ್ತು ಆಶ್ರಯ ನಿಡಲು ಸಹಾಯಕವಾಗಿರುತ್ತವೆ. ಈ ರೀತಿಯಾಗಿ ಅರಣ್ಯ ಪ್ರದೇಶಗಳನ್ನು ಅಭಿವೃದ್ದಿ ಮಾಡುವುದರಿಂದ ಮುಂದಿನ ಪೀಳಿಗೆಗಾಗಿ ಕಾಡನ್ನು ಬೆಳೆಸಲು ಮತ್ತು ಉಳಿಸಿಕೊಳ್ಳಲು ಸಹಕಾರಿಯಾಗಿದೆ.

Klive Special Article ನಮ್ಮೂರಿನಲ್ಲಿ ಅರಣ್ಯಕ್ಕೇನೂ ಕೊರತೆ ಇಲ್ಲ. ಆದರೆ ಉದ್ಯೋಗ ಖಾತರಿ ಯೋಜನೆಯಡಿ ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಗಿಡ ನೆಡುವ ಮೂಲಕ ಉತ್ತಮವಾದ ನೆಡುತೋಪು ನಿರ್ಮಾಣ ಮಾಡಲು ಸಾದ್ಯವಾಗಿದೆ ಮತ್ತು ಸ್ಥಳೀಯವಾಗಿ ಜನರಿಗೆ ಕೂಲಿ ದೊರೆತ್ತಿದ್ದರಿಂದ ಅವರಿಗೆ ಆರ್ಥಿಕವಾಗಿ ಸಹಕಾರವಾಗಿದ್ದು ಸರ್ಕಾರಕ್ಕೆ ಧನ್ಯವಾದಗಳು ಮಾಸೂರಿನ ಸುಬ್ಬಯ್ಯ ಭಟ್ ನವರು ಹೇಳಿದ್ದಾರೆ.

2024-25 ನೇ ಸಾಲಿನಲ್ಲಿ ಕೆಳದಿ ಗ್ರಾಮ ಪಂಚಾಯಿತಿಯಲ್ಲಿ ಅಂದಾಜು ಮೊತ್ತ ರೂ. 3.00 ಲಕ್ಷ ಮೊತ್ತದಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಕೈಗೊಂಡಿದ್ದು, 750 ಮಾನವ ದಿನಗಳನ್ನು ಸೃಜಸಿ, ಒಟ್ಟು ರೂ. 2.74 ಲಕ್ಷ ವೆಚ್ಚ ಮಾಡಲಾಗಿದೆ.
ಸಾಗರ ತಾಲ್ಲೂಕಿನ ಕೆಳದಿ, ಮಾಸೂರು ಹಾಗೂ ಇತರೆಡೆ ನರೇಗಾ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಅಲ್ಲಿನ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುತ್ತಾ ಬಂದಿದೆ. 2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಿಂದ ಕಾಲುವೆ, ನೆಡುತೋಪು ಕಾಮಗಾರಿಗಳನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಾಡಕಲಸಿ ಗ್ರಾಮ ಪಂಚಾಯಿತಿಯು ಸಾಗರ ತಾಲ್ಲೂಕು ಕೇಂದ್ರದಿAದ 10 ಕೀ.ಮೀ ದೂರವಿದೆ. ಭೌಗೋಳಿಕವಾಗಿ ಸಾಕಷ್ಟು ಚದುರಿದ ವಿಸ್ತೀರ್ಣ ಹೊಂದಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14 ಕೆರೆಗಳಿದ್ದು, ಈ ಕೆರೆಗಳಿಂದ ಜಮೀನುಗಳಿಗೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ನರೇಗಾ ಯೋಜನೆಯ ಮೂಲಕ ಕಾಲುವೆ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡಲಾಗಿದೆ.

ಬಾಳಗೋಡು ಗ್ರಾಮದಲ್ಲಿನ ಕಪ್ಪೆಹೊಂಡದಿಂದ ಕೆಳಭಾಗದ ರೈತರ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ನರೇಗಾ ಯೋಜನೆಯಿಂದ ರೂ. 3.00 ಲಕ್ಷ ಮೊತ್ತದಲ್ಲಿ ಕಾಮಗಾರಿ ಕೈಗೊಂಡಿದ್ದು ಅನೇಕ ರೈತರ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ದೊರಕಿದೆ. ಈ ಭಾಗದಲ್ಲಿ ಸುಮಾರು 14 ರಿಂದ 15 ಪರಿಶಿಷ್ಟ ಜಾತಿಗೆ ಸೇರಿದ ರೈತರ ಜಮೀನುಗಳು ಇದ್ದು ಈ ಕಾಲುವೆ ನಿರ್ಮಾಣದಿಂದ ಅವರಿಗೆ ಅನುಕೂಲವಾಗಿದೆ. ಹಾಗೂ ಬೇಸಿಗೆ ಅವಧಿಯಲ್ಲಿ ಮೇಲಿನ ಕೆರೆಗಳಿಂದ ಕೆಳಭಾಗದ ರೈತರಿಗೆ ನೀರು ಹರಿಸುವ ಮೂಲಕ ಅನುಕೂಲವಾಗಿದೆ.

ಕಾಲುವೆ ನಿರ್ಮಾಣ ಕಳೆದ ಹಲವಾರು ವರ್ಷಗಳ ಬೇಡಿಯಾಗಿತ್ತು ಈ ವರ್ಷದಲ್ಲಿ ಅದು ಮುಕ್ತಾಯವಾಗಿದ್ದು ಮಳೆಗಾಲದಲ್ಲಿ ನಮ್ಮ ಜಮಿನುಗಳಿಗೆ ನೀರು ನುಗ್ಗವುದಿಲ್ಲ ಮತ್ತು ನಮ್ಮ ಜಮೀನಿಗೆ ಹಾಕಿದ ಸಾವಯವ ಗೊಬ್ಬರ ಹಾಳಾಗುವುದಿಲ.್ಲ ನರೇಗಾ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ ಎಂದು ರೈತರಾದ ಬಾಳಗೋಡು ನವರು ಮಂಜಪ್ಪ ನವರು ತಿಳಿಸಿದ್ದಾರೆ.

ನರೇಗಾ ಯೋಜನೆ ಕೇವಲ ಜಿಲ್ಲೆಯಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವ, ಕಾಲುವೆ ನಿರ್ಮಾಣ ಸೇರಿದಂತೆ ಗ್ರಾಮೀಣ ಭಾಗದ ಜನ ಜೀವನ ಸುಗಮಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರವಾಹ, ಬರದಂತಹ ಪ್ರಾಕೃತಿಕ ವಿಕೋಪ ಸಂಭವಿಸಿ, ಘೋಷಣೆಯಾದ ಪ್ರದೇಶಗಳಲ್ಲಿ 150 ಮಾನವ ದಿನಗಳನ್ನು ಸೃಜಿಸಲಾಗುತ್ತದೆ. ಪ್ರಸ್ತುತ ಪ್ರತಿ ಕಾರ್ಮಿಕರಿಗೆ ದಿನವೊಂದಕ್ಕೆ ರೂ.370 ಕೂಲಿ ಪಾವತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ
ಹೇಮಂತ್ ಎನ್ ತಿಳಿಸಿದ್ದಾರೆ.

Samanvaya Trust ಸಕಾರಾತ್ಮಕ ಆಲೋಚನೆಗಳಿಂದ ಪ್ರಯತ್ನಪಟ್ಟರೆ ಗುರಿ ಸಾಧನೆ – ಕೆ.ಎ.ದಯಾನಂದ

0

Samanvaya Trust ಮನದಲ್ಲಿ ಇರುವ ನಕರಾತ್ಮಕ‌ ಅಂಶಗಳನ್ನು ಮೊದಲು ದೂರ ಮಾಡಿಕೊಳ್ಳಬೇಕು. ಸಕರಾತ್ಮಕ ಅಲೋಚನೆಯಿಂದ ಪ್ರಯತ್ನ ಪಟ್ಟರೆ ಗುರಿ ತಲುಪುವುದು ನಿಶ್ಚಿತ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ, ಕರ್ನಾಟಕ ಹೌಸಿಂಗ್ ಬೋರ್ಡ್ ಆಯುಕ್ತ ಕೆ.ಎ.ದಯಾನಂದ್ ಹೇಳಿದರು.

ಸಮನ್ವಯ ಸಂಸ್ಥೆಯ 20ನೇ ಸಂವತ್ಸರ “ ಸಮನ್ವಯ ಸಂಗಮ “ ಸಂಭ್ರಮದ ಹಿನ್ನೆಲೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ “ಭರವಸೆಯ ಹೆಜ್ಜೆ” ಉದ್ಘಾಟಿಸಿ ಮಾತನಾಡಿದರು.

ಮೊಬೈಲ್ ಅತಿಯಾದ ಬಳಕೆ ಸಮಯ ವ್ಯರ್ಥಕ್ಕೆ ದಾರಿಯಾಗಬಲ್ಲದು. ಆದರೆ ಮೊಬೈಲ್ ಅನ್ನು ಧನಾತ್ಮಕವಾಗಿ ಬಳಸಲು ಅವಕಾಶವಿದೆ. ಕಲಿಕೆಯ ದೃಷ್ಟಿಯಿಂದ ಮೊಬೈಲ್ ಬಳಸಬೇಕು. ಮೊಬೈಲ್ ಸದ್ಭಳಕೆಯಿಂದ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ ಟ್ರಸ್ಟ್ ನಡೆದು ಬಂದ ದಾರಿ ಹಾಗೂ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಸಮನ್ವಯ ಧ್ಯೇಯ ಗೀತೆ ಬಿಡುಗಡೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‌ಕುಮಾರ್ ಭೂಮರಡ್ಡಿ ಮಾತನಾಡಿ, ಬದುಕಿನ ಅಮೂಲ್ಯ ಘಟ್ಟ, ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ಮುನ್ನಡೆದು ಜೀವನ ರೂಪಿಸಿಕೊಳ್ಳಬೇಕು. ನಿಮ್ಮಲ್ಲಿರುವ ಪ್ರತಿಭೆ ಅರಿತುಕೊಂಡು ನಿಮ್ಮ ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು. ಭವ್ಯ ಭಾರತ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.

ಅಮೃತ್ ನೋನಿ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ ಮಾತನಾಡಿ, ಧನಾತ್ಮಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಸಾಧನೆ ಮಾಡುವ ಸಂಕಲ್ಪ ಮಾಡಬೇಕು. ಮಾದರಿ ವಿದ್ಯಾರ್ಥಿಯಾಗಿ ಇತರರಿಗೂ ಪ್ರೇರಣೆಯಾಗಬೇಕು ಎಂದು ಹೇಳಿದರು.

ಡಿಡಿಪಿಯು ಚಂದ್ರಪ್ಪ ಎಸ್.ಗುಂಡಪಲ್ಲಿ ಮಾತನಾಡಿ, ನಿರಂತರ ಪರಿಶ್ರಮ ಹಾಗೂ ಛಲದಿಂದ ಪ್ರಾಮಾಣಿಕ ಪ್ರಯತ್ನ ಮಾಡಿದಲ್ಲಿ ಗುರಿ ತಲುಪಲು ಸಾಧ್ಯ. ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆ ನಡೆಸಿ ಯಶಸ್ಸು ಹೊಂದಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆ ನಿರ್ದೇಶಕಿ ಡಾ. ರಜನಿ ಪೈ ಉಪಸ್ಥಿತರಿದ್ದರು.

ಉದ್ಯಮಿ ವೆಂಕಟೇಶ್ ಎಸ್.ವಿ, ತರಬೇತುದಾರ ಸಾಧನಾ ಮಂಜುನಾಥ್, ಕೃಷಿಕ ದುರ್ಗಪ್ಪ ಅಂಗಡಿ ಹಾಗೂ ಕೆಎಪಿಎಂಸಿ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮನ್ವಯ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 500ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.


20ರಂದು ಗಾನ-ಸನ್ಮಾನ-ಸತ್ಕಾರ ಕಾರ್ಯಕ್ರಮ

Samanvaya Trust ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 20ರಂದು ಸಂಜೆ 5.30ರಿಂದ ಸಮನ್ವಯ ಸಂಗಮ 2025, ಗಾನ-ಸನ್ಮಾನ-ಸತ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್ ಮುನ್ನಡೆಸುತ್ತಿರುವ ಕೆ.ಎ.ದಯಾನಂದ ಐಎಎಸ್ ಸ್ಮರ್ಧಾತ್ಮಕ ಪರೀಕ್ಷೆಗಳ ತಯಾರಿ ಉಚಿತ ವಾಚನಾಲಯದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಸಂಸ್ಥೆಯ ಜತೆಯಲ್ಲಿ 20 ವರ್ಷಗಳಲ್ಲಿ ಕೆಲಸ ಮಾಡಿರುವ ಮಹಾಪೋಷಕರು, ಪೋಷಕರು, ಸ್ವಯಂಸೇವಕರು ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಸಮನ್ವಯ ಯೂತ್ ಐಕಾನ್ ಪ್ರಶಸ್ತಿ ನೀಡಲಾಗುವುದು.


21ರಂದು ಗುರುವಂದನಾ ಕಾರ್ಯಕ್ರಮ

ಶಿವಮೊಗ್ಗ ನಗರದ ಸೋಮಿನಕೊಪ್ಪ ರಸ್ತೆಯ ಆರ್ಯವೈಶ್ಯ ಸಮುದಾಯ ಭವನದಲ್ಲಿ ಜುಲೈ 21ರಂದು ಸಂಜೆ 6ಕ್ಕೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಭಜನಾ ಪರಿಷತ್, ಆರ್.ಜಿ.ಎಸ್.ಸ್ಕೇಟರಿಂಗ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿರಾಳಕೊಪ್ಪದ ಶ್ರೀ ಶಿವನಾಗ ಪಾರ್ಥ ಅವಧೂತರು ಉಪಸ್ಥಿತರಿರುವರು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ಅಬ್ದುಲ್ ಮುಜೀಬ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಗಿರಿಜಾದೇವಿ ಉಪಸ್ಥಿತರಿರುವರು. ಆರ್.ಜಿ.ಎಸ್.ಸ್ಕೇಟರಿಂಗ್‌ನ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸುವರು.

National Education Committee ಪ್ಲಾಸ್ಟಿಕ್ ತ್ಯಜಿಸಿ , ಪರಿಸರ ಸ್ವಚ್ಛವಾಗಿರಿಸಿ, ಗಿಡ ನೆಟ್ಟು ಪೋಷಿಸಿ- ಡಾ.ಪಿ.ನಾರಾಯಣ್

0

National Education Committee ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಪರಿಸರ ನಾಶದಿಂದ ಇಂದು ಮನುಕುಲ ಅಸಮಾತೋಲನದಲ್ಲಿದೆ ಆದ್ದರಿಂದ ಇದಕ್ಕೆ ಸರಿಯಾದ ಪರಿಹಾರ ಹೆಚ್ಚು ಹೆಚ್ಚು ಗಿಡ ಮರಗಳನ್ನು ನೀಡುವುದರ ಮುಖಾಂತರ. ಹಾಗೂ ಪ್ಲಾಸ್ಟಿಕ್ ಅನ್ನು ತ್ಯಜಿಸುವುದರ ಮುಖಾಂತರ ಪರಿಸರವನ್ನು ಸ್ವಚ್ಛವಾಗಿದೆ ಇಟ್ಟುಕೊಳ್ಳುವವರ ಜೊತೆಗೆ ಗಿಡ ಮರಗಳನ್ನು ನೆಟ್ಟು ಪಾಲನೆಯ ಪೋಷಣೆ ಮಾಡುವುದು ತುಂಬಾ ಅಗತ್ಯವಾಗಿದೆ. ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾಕ್ಟರ್ ಪಿ ನಾರಾಯಣ್ ಅಭಿಮತ ವ್ಯಕ್ತಪಡಿಸಿದರು. ನಾರಾಯಣ ವನ ಸ್ಥಾಪನೆ ಮಾಡಲು ಪೂರ್ವಭಾವಿಯಾಗಿ ಇಂದು ರೋಟರಿ ಶಿವಮೊಗ್ಗ ಪೂರ್ವದ ವತಿಯಿಂದ ಸಸಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು ಈ ವರ್ಷ ರೋಟರಿಯ ಜಿಲ್ಲಾ ಯೋಜನೆಗಳಲ್ಲಿ ಒಂದಾದ ಹಸಿರೇ ಉಸಿರು ಪರಿಸರ ಸಂರಕ್ಷಣೆಯ ಒಂದು ಉತ್ತಮವಾದ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಹಾಗೆ ಎಲ್ಲಾ ಜಿಲ್ಲೆಗಳನ್ನು ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಲು ಆದೇಶ ನೀಡಲಾಗಿದೆ ಎಂದು ನುಡಿದರು.

National Education Committee ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ಕಾಲೇಜಿನ ಪ್ರಾಂಶುಪಾಲೆ ಪ್ರೊಫೆಸರ್ ಮಮತಾ ಬಿ ರಾವ್ ಅವರು ಮಾತನಾಡುತ್ತಾ. ಮನುಷ್ಯ ಸಮಾಜದಲ್ಲಿ ನೆಮ್ಮದಿಯಿಂದ ಜೀವನ ಮಾಡಲು ಉತ್ತಮವಾದ ಪರಿಸರ. ಗಾಳಿ ಬೆಳಕುಆಮ್ಲಜನಕ ತುಂಬಾ ಅಗತ್ಯವಾಗಿದೆ ಇಂದು ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯದಿಂದ ಪರಿಸರ ತುಂಬಾ ಹಾಳಾಗಿದೆ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಗಿಡ ಮರಗಳನ್ನು ನಾವು ಎಲ್ಲರೂ ಬಳಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ನೆಪ್ಚೂನ್ ಕಿಶೋರ್ ಅವರು ಮಾತನಾಡುತ್ತಾ ಈಗಾಗಲೇ ಮಹಿಳಾ ಪಾಲಿಟೆಕ್ನಿಕ್. ಮಳೆ ಇರುವ ವರದಾಂಜನೇಯ ದೇವಸ್ಥಾನದ ಬಳಿ ಸ್ಥಾಪಿಸಲಾಗುವ ನಾರಾಯಣ ವನಕ್ಕೆ ಈಗಾಗಲೇ ಎಲ್ಲಾ ಸಂಘ ಸಂಸ್ಥೆಯವರು ವಿಶೇಷವಾದ ಸಸಿಗಳನ್ನು ನೀಡುವುದರ ಮುಖಾಂತರ ಒಂದು ಮಾದರಿ ವನವನ್ನಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ. ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ನಾಗರಾಜ್. ರೋಟರಿ ಮಾಜಿ ಸಹಾಯಕ ಗೌರ್ನರ್
ಜಿ ವಿಜಯಕುಮಾರ್. ಪ್ರೊಫೆಸರ್ ನಾಗರಾಜ್.. ಉಪಸ್ಥಿತರಿದ್ದರು.

Karnataka Media Academy ಮಾಧ್ಯಮ ಅಕಾಡೆಮಿಯಿಂದ ವಿವಿಧ ವಿಷಯಗಳ ಬಗ್ಗೆ ಫೆಲೋಷಿಪ್ ಪಡೆಯಲು ಅಸಕ್ತರಿಂದ ಅರ್ಜಿ ಆಹ್ವಾನ

0

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್‌ ನೀಡಲಾಗುವುದು.

ಫೆಲೋಷಿಪ್‌ ಅವಧಿ 6 ತಿಂಗಳು.
ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‌ಗೆ ಅರ್ಜಿ ಸಲ್ಲಿಸಬಹುದು.

ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.

ಫೆಲೋಷಿಪ್‌ನ ವಿಷಯಗಳು ಈ ಕೆಳಗಿನಂತಿವೆ

  1. ಬಾಲ್ಯವಿವಾಹ, POCSO, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ
  2. ಕೃಷಿ ಸಂವಹನ- ಒಂದು ಅಧ್ಯಯನ
  3. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ
  4. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ
  5. Role of Media in creating awareness on cybercrime and digital safety (ಇಂಗ್ಲಿಷ್‌ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು)
  6. ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ

Karnataka Media Academy ಫೆಲೋಷಿಪ್‌ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು 2 ನೇ ಆಗಸ್ಟ್‌ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್‌ mediaacademy.karnataka.gov.in
ನಿಂದ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್‌, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್.‌ ಅಂಬೇಡ್ಕರ್‌ ವೀದಿ, ಬೆಂಗಳೂರು 560001 ಇವರಿಗೆ ಕಳುಹಿಸಬಹುದು ಅಥವಾ kmafellowship2025@gmail.com ಗೆ ಇ – ಮೇಲ್ ಮೂಲಕ ಕಳಿಸಬಹುದು.

MESCOM ಜುಲೈ 21. ಶಿವಮೊಗ್ಗ ಗುಡ್ ಲಕ್ ಸರ್ಕಲ್ ಬಳಿಯ ಮೆಸ್ಕಾಂ ಕಚೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಶಿವಮೊಗ್ಗ ನಗರ ಉಪವಿಭಾಗ-3ರ ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್.ವಿ. ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ಜು. 21 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದ್ದು, ಈ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸುವಂತೆ ಮೆಸ್ಕಾಂ ತಿಳಿಸಿದೆ.

MESCOM ಜುಲೈ 20. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

0

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-04ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.20 ರಂದು ಬೆಳ್ಳಗ್ಗೆ 10:00 ರಿಂದ 03:00 ರವರೆಗೆ ಈ ವ್ಯಾಪ್ತಿಯ ಹಾಲದೇವ ಹೊಸೂರು, ಶ್ರೀರಾಂಪುರ, ಮುದ್ದಿನಕೊಪ್ಪ, ಸಿದ್ಲಿಪುರ, ಕೋಟೆಗಂಗೂರು, ತಾವರೆಕೊಪ್ಪ, ವಿರೂಪಿನಕೊಪ್ಪ, ನೀರಾವರಿ ಪಂಪ್‌ಸೆಟ್ ಸ್ಥಾವರಗಳಿಗೆ MESCOM ಮಾತ್ರ, ಗಾಡಿಕೊಪ್ಪ, ಗಾಡಿಕೊಪ್ಪ ತಾಂಡ, ಮೈಸ್ರರು ಕೇರಿ, ಗೋಲ್ಡನ್ ಸಿಟಿ ಲೇಔಟ್, ಡಾ. ಶಶಿಭೂಷಣ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಮಲ್ಲಿಗೇನಹಳ್ಳಿ, ಎಬಿವಿಪಿ ಲೇಔಟ್, ಗಾಯತ್ರಿದೇವಿ ಬಡಾವಣೆ, ಅಡಕೆ ವರ್ತಕರ ಸಂಘ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

All India Radio Bhadravati ಜುಲೈ 22 ಆಕಾಶವಾಣಿ ಭದ್ರಾವತಿ, ಕಿಸಾನ್ ವಾಣಿಯಲ್ಲಿ ” ಆತ್ಮ” ಯೋಜನೆ ಬಗ್ಗೆ ಫೋನ್ ಇನ್ ಕಾರ್ಯಕ್ರಮ

0

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜುಲೈ 22 ರಂದು ಸಂಜೆ 6.51 ರಿಂದ 7.30ರವರೆಗೆ ಹಲೋ ಕಿಸಾನ್‌ವಾಣಿ ನೇರಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೃಷಿ ಇಲಾಖೆಯ ಉಪಯೋಜನಾಧಿಕಾರಿ ಮಂಜುನಾಥ್ ಅವರು ‘ಆತ್ಮಯೋಜನೆ’ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಮಂಗಳ ರೇವಣಕರ್ ಅವರು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕಗಳ ನಿಯಮ ಬದ್ದಗೊಳಿಸುವಿಕೆ ಕುರಿತು ಮಾಹಿತಿ ನೀಡಲಿದ್ದಾರೆ.

All India Radio Bhadravati ಕೇಳುಗರು ಹಾಗೂ ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಗಳನ್ನು ಕೇಳಿ ತಮ್ಮ ಸಂದೇಹಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600) ಆಗಿದೆ.