Wednesday, May 6, 2026
Wednesday, May 6, 2026
Home Blog Page 24

D S Arun ಶಿವಮೊಗ್ಗ ಹಾಸನ& ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ವಿವಿಧ ವಯೋಮಾನ ವಿಭಾಗಗಳಲ್ಲಿ ಕೆಎಸ್ಸಿಎ ವಲಯ ಆಯ್ಕೆ ಪ್ರಕ್ರಿಯೆ- ಡಿ.ಎಸ್.ಅರುಣ್

0

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ.), ಶಿವಮೊಗ್ಗ ವಲಯದ ವತಿಯಿಂದ 2026–27ನೇ ಸಾಲಿನ ಅಕಾಡೆಮಿ ಆಯ್ಕೆ ಪ್ರಕ್ರಿಯೆಗಳು (ಪುರುಷರು ಹಾಗೂ ಮಹಿಳೆಯರಿಗೆ) ಆಯೋಜಿಸಲಾಗುತ್ತಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ.
ಈ ಆಯ್ಕೆ ಪ್ರಕ್ರಿಯೆಗಳು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿವಿಧ ವಯೋಮಾನದ ವಿಭಾಗಗಳಲ್ಲಿ ನಡೆಯಲಿದ್ದು, ದಿನಾಂಕ 20 ಮಾರ್ಚ್ 2026 ರಂದು ಪ್ರಕಟಿಸಿದ ಅಧಿಕೃತ ವೇಳಾಪಟ್ಟಿಯಂತೆ ಆಯೋಜಿಸಲಾಗುತ್ತಿದೆ.
ಈ ಪ್ರಕ್ರಿಯೆಗಳ ಮೂಲಕ ಅಂಡರ್-14, ಅಂಡರ್-16, ಅಂಡರ್-19 (ಬಾಲಕರು) ಹಾಗೂ ಅಂಡರ್-15, ಅಂಡರ್-19 (ಮಹಿಳೆಯರು) ವಿಭಾಗಗಳಲ್ಲಿ ಪ್ರತಿಭಾವಂತ ಆಟಗಾರರನ್ನು ಗುರುತಿಸಿ, ಮುಂದಿನ ಹಂತದಲ್ಲಿ ಕೆ.ಎಸ್.ಸಿ.ಎ. ಅಕಾಡೆಮಿ ತರಬೇತಿ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ, ಕೆ.ಎಸ್.ಸಿ.ಎ. ಶಿವಮೊಗ್ಗ ವಲಯದ ಕನ್ವೀನರ್ ಶ್ರೀ ಡಿ. ಎಸ್. ಅರುಣ್ ಅವರು ಸ್ಥಳದಲ್ಲಿ ಹಾಜರಿದ್ದು, ಆಯ್ಕೆ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಮೇಲ್ವಿಚಾರಣೆ ನಡೆಸುತ್ತಿದಾರೆ.
ಈ ಮಹತ್ವದ ಕ್ರೀಡಾ ಚಟುವಟಿಕೆಯನ್ನು ನಿಮ್ಮ ಪ್ರತಿಷ್ಠಿತ ಮಾಧ್ಯಮಗಳ ಮೂಲಕ ಪ್ರಸಾರ / ಪ್ರಕಟಣೆ ಮಾಡುವಂತೆ ವಿನಂತಿಸುತ್ತೇವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಕೆ.ಎಸ್.ಸಿ.ಎ. ಶಿವಮೊಗ್ಗ ವಲಯ: ಕೆ.ಎಸ್.ಸಿ.ಎ. ನವಲೆ ಕ್ರೀಡಾಂಗಣ, ಶಿವಮೊಗ್ಗ
ಇಮೇಲ್: shivamogga@ksca.co.in
ನಿಮ್ಮ ಸಹಕಾರಕ್ಕೆ ಧನ್ಯವಾದಗಳು.
ವಂದನೆಗಳೊಂದಿಗೆ,
ಡಿ. ಎಸ್. ಅರುಣ್
ವಲಯ ಕನ್ವೀನರ್
KSCA ಶಿವಮೊಗ್ಗ ವಲಯ.

Dr. Ambedkar ಇಂದಿನ ಯುವಕರು ಅಂಬೇಡ್ಕರ್ ಜೀವನ ಚರಿತ್ರೆ ಓದಿದರೆ ಸಾಕು ಖಿನ್ನತೆಯಿಂದ ಹೊರಬರಬಹುದು- ಬಿ.ವೈ‌ರಾಘವೇಂದ್ರ.

0

Dr. Ambedkar ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ
ಯುಗಪುರುಷ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.
ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ।। ಬಿ.ಆರ್ ಅಂಬೇಡ್ಕ‌ರವರ135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ರವರ ತತ್ವಗಳು, ಆದರ್ಶಗಳು ಹಾಗೂ
ಮೌಲ್ಯಗಳು ಉದಾತ್ತವಾಗಿದ್ದು, ನಾವೆಲ್ಲ ಅದೇ ಸಂಕಲ್ಪ ಮಾಡಿ ಅವನ್ನು ಮುನ್ನಡೆಸಿಕೊಂಡು‌ ಹೋಗಬೇಕಿದೆ.
ಅತ್ಯಂತ ಸುಶಿಕ್ಷಿತರಾಗಿದ್ದ ಅವರು ಶ್ರೇಷ್ಟ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿದ್ದಾರೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾದ ಇವರು ಅತ್ಯಂತ ಮೇಧಾವಿ. ಅಸಮಾನತೆ ವಿರುದ್ದ ಧ್ವನಿ ಎತ್ತಿ, ಮಹಿಳಾ ಹಕ್ಕುಗಳಿಗೆ ಹೋರಾಡಿ, ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಕ್ಕುಗಳನ್ನು‌ ನೀಡಿದರು.
ಇಂದಿನ‌ ಯುವಜನತೆ ಅಂಬೇಡ್ಕರ್ ರವರ ಜೀವನ ಚರಿತ್ರೆ, ಅವರ ಸಾಹಿತ್ಯವನ್ನು ಓದಿ ತಿಳಿದರೆ ಸಾಕು, ಖಿನ್ನತೆಯಿಂದ ಹೊರ ಬರಬಹುದು ಎಂದ ಅವರು ಅಂಬೇಡ್ಕರ್ ರವರ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕೇಲವ ವ್ಯಕ್ತಿಯಲ್ಲ ಅವರೊಬ್ಬ ಶಕ್ತಿ. ಅಸ್ಪೃಶ್ಯತೆ ನಿವಾರಣೆ ಮಾಡಿ, ಸರ್ವಧರ್ಮಗಳು ಸಮ ಭಾವದಿಂದ ಬದುಕಬೇಕೆಂಬ ಸಂವಿಧಾನ ನೀಡಿದ ಮಹಾನ್ ಚೇತನ.
ಬಿದ್ದವರನ್ನು ಮೇಲೆತ್ತಿ, ಅಸ್ಪೃಶ್ಯತೆ ವಿರುದ್ದ ಗಟ್ಟಿಯಾಗಿ ಧ್ವನಿ ಎತ್ತಿದ ಅಂಬೇಡ್ಕರ್ ರವರ ಮೊದಲ ಸೂತ್ರ ಶಿಕ್ಷಣವಾಗಿದ್ದು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು.
ಭಾರತೀಯ ಸಂವಿಧಾನ ರಚನೆ ಮುನ್ನ ನಮ್ಮ ದೇಶದ ಪ್ರತಿ ಅಂಶಗಳನ್ನು ಅಧ್ಯಯನ ಮಾಡಿ, ಸರ್ವಧರ್ಮಗಳು ಸಮವೆಂದು ಸಾರುವ ಅಂಶಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಪ್ರಾತಸ್ಮರಣೀಯರಾಗಿದ್ದಾರೆ.
ದೇಶಕ್ಕಾಗಿ ಬದುಕಿದ ಅವರ ಕಾರ್ಯಗಳು ಎಂದಿಗೂ ಜೀವಂತ.
ಪ್ರತಿಭಟನೆ ಮೂಲಕ ಅಸ್ಪೃಶ್ಯರಿಗೆ ಮಂದಿರಗಳಿಗೆ ಪ್ರವೇಶ ಕೊಡಿಸಿದರು. ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡಿದರು. ಅವರ ಜೀವನವೇ ಹೋರಾಟವಾಗಿದ್ದು,
ಯಾರೇ ಆಗಲಿ ಯಾವುದೇ ಮಠ, ಮಂದಿರಕ್ಕೆ ಯಾವಾಗಲಾದರೂ ಹೋಗಬಹುದು, ಯಾವುದೇ ಕೇರಿಯಲ್ಲಿ ಬಾವಿ ನೀರು ಕುಡಿಯುವಂತೆ ಮಾಡುವ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡಿದರು. ಇಂತಹ ಭವ್ಯ ಭಾರತದ ಅಭಿವೃದ್ಧಿಯ ತೇರನ್ನು ನಾವೆಲ್ಲ ಸೇರಿ ಎಳೆಯಬೇಕಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ರವರು ದೈವದತ್ತ ಕೊಡುಗೆ. ನಮ್ಮ‌ ಸಂವಿಧಾನಕ್ಕೆ ಮಹಾನ್ ಶಕ್ತಿ ಇದ್ದು, ಪರಿಣಾಮಕಾರಿಯಾಗಿ ನಾವೆಲ್ಲ ಅನುಷ್ಠಾನ ಮಾಡಿಕೊಂಡು ಹೋಗಬೇಕಿದೆ. ನಮ್ಮೆಲ್ಲರಿಗೆ ಧ್ವನಿ‌ ನೀಡಿದ ಮಹಾನ್ ಚೇತನವು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕು. ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಗಾಗಿ ವಿಶೇಷವಾಗಿ ಹೋರಾಡಿದ ಶಕ್ತಿ ಅವರು ಎಂದು ಸ್ಮರಿಸಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ.ನಾಗೇಶ್ ಬಿದರಗೋಡು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರ ವಿಷಯದಲ್ಲಿ ವಿಜೃಂಭಣೆಗಿಂತ ವಿಚಾರ ಮುಖ್ಯ, ಆರಾಧನೆಗಿಂತ ಆಚರಣೆ ಮುಖ್ಯವಾಗಬೇಕು. ಅಂಬೇಡ್ಕರ್ ಪ್ರಜ್ಞೆಯಾಗಿ ನಮ್ಮೊಳಗೆ ಇರಬೇಕು. ಯಾವ ಮಾನದಂಡಗಳಲ್ಲೂ ಅವರನ್ನು ಅಳೆಯಲು ಸಾಧ್ಯವಿಲ್ಲ. ಅಗತ್ಯವಿರುವುದನ್ನು ಹುಟ್ಟುಹಾಕಿದರು.
ಸಂಘರ್ಷದ ಹಾದಿಗಿಂತ ಸಂವಾದದ ಹಾದಿ ಅವರದ್ದಾಗಿತ್ತು. ಮನುಷ್ಯರು ಮನುಷ್ಯರ ಮುಂದೆ ಸಮಾನವಾಗಿರಬೇಕು ಎಂಬುದು ಅವರ ನಡೆಯಾಗಿತ್ತು.
ಶಿಕ್ಷಣ ಪಡಯಿರಿ, ಸಂಘಟಿತರಾಗಿ ಹೋರಾಡಿ ಎಂಬುದು ಅವರ ಮೂಲಮಂತ್ರವಾಗಿತ್ತು.
ಮಹಿಳೆಯರನ್ನು ಈ ದೇಶದ ಪ್ರಗತಿಯ
ಮಾನದಂಡವಾಗಿ ಎತ್ತಿ ಹಿಡಿದವರು ಅಂಬೇಡ್ಕರ್ ಎಂದರು.
Dr. Ambedkar ಈಗಲೂ ಅಸಮಾನತೆ ಇದೆ. ನಮ್ಮ ಎದೆಯೊಳಗೆ ಅಂಬೇಡ್ಕರ್ ಇಳಿಯದ ಹೊರತು, ಅವರನ್ನು ಅನುಸರಿಸದ ಹೊರತು ಅಸಮಾನತೆ ಹೋಗಲಾಡಿಸಲು ಸಾಧ್ಯವಿಲ್ಲ.
ಮನುಷ್ಯರಾಗಲು ಹಿಂದೆ ಉಳಿದಿದ್ದು, ಆ ನಿಟ್ಟಿನಲ್ಲಿ‌ ನಾವು ಮುಂದೆ ಸಾಗಬೇಕಿದೆ.
ಅಂಬೇಡ್ಕರ್ ಕಂಡ ಕನಸಿನೆಡೆ ನಮ್ಮ‌ಹೆಜ್ಜೆ ಇರಿಸಬೇಕಿದೆ. ಕಿರಿಯ ತಲೆಮಾರು ಅವರ ದಾರಿಯಲ್ಲಿ ಸಾಗಬೇಕಿದೆ ಎಂದರು.
ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ಜವಳಿ‌ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳು) ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ. ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸಮಾಜ‌ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Nalanda Chess Academy ನಳಂದ ಚೆಸ್ ಅಕಾಡೆಮಿಯ ಬೇಸಿಗೆ ಶಿಬಿರದ ಮಾಹಿತಿ.

0

Nalanda Chess Academy ನಗರದ ನಳಂದಾ ಚೆಸ್ ಅಕಾಡೆಮಿಯಿಂದ ಬರುವ ಗ್ರೀಷ್ಮ ಕೋಚಿಂಗ್ ಕ್ಯಾಂಪ್‌ಗಳನ್ನು ಘೋಷಿಸುವುದು ನಮಗೆ ಸಂತೋಷವಾಗಿದೆ. ಎಲ್ಲಾ ಮಟ್ಟದ ಆಟಗಾರರಿಗೆ ವಿನ್ಯಾಸಗೊಳಿಸಲಾದ ಈ ಕ್ಯಾಂಪ್‌ಗಳು ಗುರಿ-ಆಧಾರಿತ ತರಬೇತಿ, ದೈನಂದಿನ ಆಟ ಸೆಷನ್‌ಗಳು ಮತ್ತು ಮಜÁ ಸ್ಪರ್ಧೆಗಳ ಮೂಲಕ ಕೌಶಲ್ಯ ಅಭಿವೃದ್ಧಿಗೆ ಗಮನ ಹರಿಸುತ್ತವೆ.
ನಿಮ್ಮ ಚೆಸ್ ಕೌಶಲ್ಯವನ್ನು ತೀಕ್ಷ÷್ಣಗೊಳಿಸಲು ನಮ್ಮೊಂದಿಗೆ ಸೇರಿ ಕ್ಯಾಂಪ್ ಷೆಡ್ಯೂಲ್ ಮತ್ತು ವಿವರಗಳು¾ಅಡ್ವಾನ್ಸ್÷್ಡ ೨ ಕ್ಯಾಂಪ್ (ಅನುಭವಿ ಆಟಗಾರರಿಗೆ)¾ದಿನಾಂಕಗಳು: ಏಪ್ರಿಲ್ ೧೬ ಹಾಗೂ 25 ಮತ್ತು ಮೇ1, 10, ಪ್ರತಿದಿನ ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೪.೩೦ರವರೆಗೆ ಓಪನಿಂಗ್ ಸಿದ್ಧಾಂತಗಳು, ಮಧ್ಯಭಾಗದ ಟ್ಯಾಕ್ಟಿಕ್ಸ್, ಮುಖ್ಯ ಎಂಡ್‌ಗೇಮ್, ಪಝಲ್‌ಗಳು,ಕನಿಷ್ಠ ೨ ಗಂಟೆಗಳ ಆಟ ಸೆಷನ್ ಮತ್ತು ಆಟ ವಿಶ್ಲೇಷಣೆ, ಹೆಚ್ಚುವರಿ ಬ್ಲಿಟ್ಜ್ ಸ್ಪರ್ಧೆಗಳು, ರ್ಯಾಪಿಡ್ ಚೆಸ್ ಟೂರ್ನಿಯುಂಟ್ ಮತ್ತು ಪಝಲ್-ಪರಿಹಾರ ಸ್ಪರ್ಧೆಗಳು ಅಡ್ವಾನ್ಸ್ಡ್ 1 ಕ್ಯಾಂಪ್ (ಮೂಲಭೂತಗಳನ್ನು ತಿಳಿದವರಿಗೆ) ದಿನಾಂಕಗಳು: ಏಪ್ರಿಲ್ ೧೬, ೨೫ ಮತ್ತು ಮೇ ೧, ೧೦, ೨೦೨೬ ಪ್ರತಿದಿನ ಮಧ್ಯಾಹ್ನ 3.30 ರಿಂದ ೫ರವರೆಗೆ 5ರಿಂದ 6ಗಂಟೆಗಳವರೆಗೆ ಆಟ ಸೆಷನ್, ಕನಿಷ್ಠ ಟ್ಯಾಕ್ಟಿಕ್ಸ್ಕನಿಷ್ಠ ಎಂಡ್‌ಗೇಮ್ Nalanda Chess Academy ಪ್ರತಿದಿನ ೧ ಗಂಟೆಯ ಆಟ ಸೆಷನ್, ಮೂಲಭೂತ ಸಿದ್ಧಾಂತಗಳು ಬೇಸಿಕ್ ಚೆಸ್ ಕೋಚಿಂಗ್ ಕ್ಯಾಂಪ್ (ಪೂರ್ಣ ನವಶಿಕ್ಷಕರಿಗೆ) ಏಪ್ರಿಲ್ 16, 25ಮತ್ತು ಮೇ 1, 10, 2026 ಪ್ರತಿದಿನ ಬೆಳಿಗ್ಗೆ ೯.೩೦ರಿಂದ ೧೧ರವರೆಗೆ ಚೆಸ್ ಮೂಲಭೂತಗಳ ಪರಿಚಯವನ್ನು ಮಜÁ ಮೂಲಕ ಶುರುವಿನಿಂದ ಕಲಿಸುವುದು!¾ಲಾಡ್ಜಿಂಗ್ ಮತ್ತು ಬೋರ್ಡಿಂಗ್ ವಿವರಗಳು ಮತ್ತು ವ್ಯವಸ್ಥೆಗೆ ಉಡುಪ ಅವರ ಮೊ. 9844436276, 9945809662 ಅಥವಾ ಅಕಾಡೆಮಿಗೆ ಭೇಟಿ ನೀಡಲು ಕೋರಿದ್ದಾರೆ.

Ambedkar Jayanti ಏಪ್ರಿಲ್14. ಸಮಾನತೆ,ಸ್ವಾತಂತ್ರ್ಯ, & ಸಾಮಾಜಿಕ ಮೌಲ್ಯಗಳನ್ನ ಉಸಿರಾಗಿಸಿಕೊಳ್ಳುವ ದಿನ- ಕೆ.ರಂಗನಾಥ್.

0

Ambedkar Jayanti ಡಾ ಬಿ ಆರ್ ಅಂಬೇಡ್ಕರ್ ಜಯಂತಿ- ನಮ್ಮೂರ ಬಳಗದಿಂದ ಸಂವಿಧಾನ ಪೀಠಿಕೆ ಓದುವ ಮುಖಾಂತರ ಆಚರಣೆ – ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಸಂಕಲ್ಪ ದಿನ – ಕೆ ರಂಗನಾಥ್

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವವನ್ನು ನಮ್ಮೂರ ಬಳಗದ ವತಿಯಿಂದ ಇಂದು ಬೆಳಗ್ಗೆ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂವಿಧಾನದ ಪೀಠಿಕೆಯನ್ನು ಓದಿ, ಸಿಹಿ ವಿತರಿಸಿ ಆಚರಿಸಲಾಯಿತು

Ambedkar Jayanti ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ.ರಂಗನಾಥ್ ರವರು “ಕಲಿಯಿರಿ, ಸಂಘಟಿತರಾಗಿ, ಹೋರಾಡಿ” ಇದು ಕೇವಲ ಘೋಷಣೆಯಲ್ಲ, ಪ್ರತಿಯೊಬ್ಬರ ಬದುಕಿಗೆ ದಾರಿದೀಪ.​ ಏಪ್ರಿಲ್ 14, ಕೇವಲ ಒಂದು ಆಚರಣೆಯ ದಿನವಲ್ಲ; ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ನಮ್ಮ ಉಸಿರಾಗಿಸಿಕೊಳ್ಳುವ ಸಂಕಲ್ಪದ ದಿನ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಅತಿದೊಡ್ಡ ಉಡುಗೊರೆ ಎಂದರೆ ನಮ್ಮ ‘ಭಾರತದ ಸಂವಿಧಾನ’. ಇದು ಪ್ರತಿಯೊಬ್ಬ ಭಾರತೀಯನ ಹಕ್ಕುಗಳನ್ನು ರಕ್ಷಿಸುವ ಮತ್ತು ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಪವಿತ್ರ ಗ್ರಂಥ.​ಶಿಕ್ಷಣವೇ ಶಕ್ತಿ ಎಂದು ಜಗತ್ತಿಗೆ ಸಾರಿದ, ಅಸಮಾನತೆಯ ವಿರುದ್ಧ ಸಿಡಿದೆದ್ದ ಆ ಮಹಾನ್ ಚೇತನದ ಹೆಜ್ಜೆಗುರುತುಗಳನ್ನು ನಾವೆಲ್ಲರೂ ಅನುಸರಿಸೋಣ. ಅವರ ವಿಚಾರಧಾರೆಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಗೌರವ ಸಂಚಾಲಕರಾದ ಹೆಚ್ ಪಾಲಾಕ್ಷಿ, ಸಿ ರವಿ, ಸಂಚಾಲಕರುಗಳಾದ ಕೆ.ಆರ್ ಸುರೇಶ್, ಎಚ್‌.ಪಿ ಗಿರೀಶ್, ಟಿ ಗುರುಪ್ರಸಾದ್, ಎಂ ರಾಕೇಶ್, ರಾಜೇಶ್ ಮಂದಾರ, ರವಿ ಶಾಸ್ತ್ರಿ, ಮೈಸೂರು ಕುಮಾರ್ ,ಜಯಪ್ರಕಾಶ್, ಕೇಶವಮೂರ್ತಿ,ಗೋಪಿ ಆಚಾರಿ,ದಾನೇಶ್, ಕಿರಣ್, ಕೇಶವ ಸೀಗೆಹಟ್ಟಿ,ಶ್ರೀಕಾಂತ್, ರಾಘವೇಂದ್ರ, ನಂದನ್, ತೇಜಸ್, ಸಂದೇಶ್, ಇತರರು ಇದ್ದರು

B.Y. Vijayendra ಸ್ವಾತಂತ್ರ್ಯಾನಂತರ ಡಾ.ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ- ಬಿ.ವೈ.ವಿಜಯೇಂದ್ರ

0

B.Y. Vijayendra ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಬಿಜೆಪಿಯವರು ಆಚರಣೆ ಮಾಡುತ್ತಿದ್ದೇವೆ.ನೆನ್ನೆ ಎಲ್ಲಾ ನಗರದ ಅಂಬೇಡ್ಕರ್ ಅವರ ಪುತ್ತಳಿ ಸ್ವಚ್ಛತೆ ಮಾಡುವುದು.ದೀಪಗಳನ್ನು ಪ್ರಜ್ವಲಿಸುವ ಮೂಲಕ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು.

ಸ್ವತಂತ್ರ ನಂತರ ಅಂಬೇಡ್ಕರ್ ಅವರಿಗೆ ಗೌರವವನ್ನು ಕೊಡುವ ಕೆಲಸ ಬಿಜೆಪಿ ಮಾಡಿದೆ.
ಅಂಬೇಡ್ಕರ್ ಅವರ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಮುಂದಾಳತ್ವವನ್ನು ವಹಿಸಿದ್ದಾರೆ.

ಕಾಂಗ್ರೆಸ್ ಅಂಬೇಡ್ಕರ್ ಅವರ ಹೆಸರನ್ನ ಇಟ್ಟುಕೊಂಡು ಶೋಷಿತ ವರ್ಗದವರ ವೋಟ್ ಬ್ಯಾಂಕಿಗಾಗಿ ದುರುಬಳಕೆ ಮಾಡಿಕೊಂಡಿದೆ.
ಅಂಬೇಡ್ಕರ್ ಅವರ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಕಾಂಗ್ರೆಸ್ಗರು, ಎರಡು ಬಾರಿ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಾದಿಯಾಗಿ ಕಾಂಗ್ರೆಸ್ ನವರು ಏನೇ ಪುಂಗಿಬಾರಿಸಿದರು. ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.

ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ.
ಆಡಳಿತ ಯಂತ್ರ ಕುಸಿದಿರುವುದು ಹಾಗೂ ಮುಖ್ಯಮಂತ್ರಿಯ ಕುರ್ಚಿ ಗಾಗಿ ಪೈಪೋಟಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ ಎಂದು ಹೇಳಿದರು.

B.Y. Vijayendra ಅಭಿವೃದ್ಧಿ ಕೂಡ ರಾಜ್ಯದಲ್ಲಿ ಇಲ್ಲ. ಕಾಂಗ್ರೆಸ್ ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ ಎಂದರೆ ಅಲ್ಪಸಂಖ್ಯಾತರ ಓಲೈಕೆ ಮಾಡಿಕೊಂಡು ಹಿಂದುಗಳಿಗೆ ಅಪಮಾನ ಮಾಡುತ್ತಿದ್ದಾರೆ‌ ಎಂದು ತಿಳಿಸಿದರು.

ಇದರ ಎಲ್ಲದರ ಪರಿಣಾಮ ಎರಡು ಕ್ಷೇತ್ರದಲ್ಲಿ ಬಿಜೆಪಿ ಆಶೀರ್ವಾದ ಮಾಡಲಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಿಗೆ ನಾನು ಸವಾಲನ್ನು ಹಾಕುತ್ತೇನೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಲ್ಲಿ ಇದ್ದಾಗ ಏನು ಅಭಿವೃದ್ಧಿ ಕಾರ್ಯಗಳಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ ಮೈಸೂರಿಗೆ ಏನು ಅಭಿವೃದ್ಧಿ ಕೆಲಸಗಳಾಗಿವೆ ಎಂದು ಹೇಳಿದರು.

ಈ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ. ದುರಂತವೆಂದರೆ ಮೈಸೂರಿನಲ್ಲಿ ಎಂ ಎಸ್ ಐ ಎಲ್ ಉಳಿಸಿಕೊಳ್ಳಲು ಆಗುತ್ತಿಲ್ಲ. ಎಂಎಸ್ಐಎಲ್ ಅನ್ನು ಮಚ್ಚಿ ಅಲ್ಲೊಂದು ಸ್ಟೇಡಿಯಂ ಮಾಡಲು ಹೊರಟಿದ್ದಾರೆ.ಇವರಿಗೆ ಅಭಿವೃದ್ಧಿಯ ಮೇಲೆ ಯಾವುದೇ ಕಾಳಜಿ ಇಲ್ಲ.
ನಾಲ್ಕನೇ ತಾರೀಕು ಜನರು ಇದಕ್ಕೆ ಸರಿಯಾಗಿ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು.

Shivamogga Namma Halli Theatre ಡಾ.ರಘುನಂದನ್& ಜಿ. ಎಂ.ರೇಖಾ ಅವರಿಗೆ ನಮ್ಮ ಹಳ್ಳಿಥಿಯೇಟರ್ ವಾರ್ಷಿಕ ಪ್ರಶಸ್ತಿ ಘೋಷಣೆ.

0

Shivamogga Namma Halli Theatre ನಮ್ಮ ಹಳ್ಳಿ ಥಿಯೇಟರ್ ನೀಡುವ 2025-26 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಖ್ಯಾತ ರಂಗಕರ್ಮಿ ಡಾ.ಬೇಲೂರು ರಘುನಂದನ್ ಹಾಗೂ ಸಮಾಜಸೇವೆಗಾಗಿ ಶ್ರೀಮತಿ ರೇಖಾ ಜಿ.ಎಂ ರವರಿಗೆ ಈ ಬಾರಿಯ ಪ್ರಶಸ್ತಿ ಪ್ರಕಟವಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರಾದ ಚೇತನ್.ಸಿ ತಿಳಿಸಿದ್ದಾರೆ. ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಸನ್ಮಾನ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಕರ್ನಾಟಕ ಸಂಘದಲ್ಲಿ ನಡೆಯುವ ಮನಃಸ್ಫೂರ್ತಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು. ಈ Shivamogga Namma Halli Theatre ಮೊದಲು ಈ ಪ್ರಶಸ್ತಿಗೆ ಪದ್ಮಶ್ರೀ ಹಾಜಬ್ಬ, ಡಾ.ವಿ.ಎಲ್.ಎಸ್.ಕುಮಾರ್, ಡಾ.ರಜನಿ.ಎ.ಪೈ, ಮಾಲತಿ.ಎಸ್, ಸಂದೇಶ್ ಜವಳಿ, ಪುರುಷೋತ್ತಮ ತಲವಾಟ, ಸೇತುರಾಂ, ಗಣೇಶ್ ಮಾಸ್ಟರ್, ಡಾ.ಸಂಧ್ಯಾ ಕಾವೇರಿ .ಡಾ.ಗಜಾನನ ಶರ್ಮಾ, ದಾಕ್ಷಾಯಿಣಿ ಭಟ್, ಜನಾರ್ಧನ್ ರವರು ಭಾಜನರಾಗಿದ್ದರು.

Manasadhara Trust ಮಕ್ಕಳಲ್ಲಿನ ಮಾನಸಿಕ ಒತ್ತಡ ದೂರಮಾಡಲು ಬೇಸಿಗೆ ಶಿಬಿರಗಳು ಸಹಕಾರಿ- ಡಾ.ಐಶ್ವರ್ಯ.

0

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್(ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮನಃಸ್ಫೂರ್ತಿ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಡಾ.ಐಶ್ವರ್ಯ ರವರು “ಮಕ್ಕಳಿಗೆ ಪ್ರಸ್ತುತ ಒತ್ತಡದ ಬದುಕಿದೆ. ಅದನ್ನು ದೂರಗೊಳಿಸಲು ಬೇಸಿಗೆ ಶಿಬಿರಗಳ ಪಾತ್ರ ಬಹಳ ಮುಖ್ಯ. ಪೋಷಕರು ಇದನ್ನು ಮನಗಂಡು ಇಂತಹ ಶಿಬಿರಗಳಿಗೆ ಮಕ್ಕಳನ್ನು ಸೇರಿಸಬೇಕು, ಹಾಗೆಯೇ ಶಿಬಿರಗಳು ಮಕ್ಕಳಿಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ಮಾನಸಿಕವಾಗಿ ಧೈರ್ಯವನ್ನು ತುಂಬುತ್ತದೆ ಮತ್ತು ಅವರನ್ನು ಮೊಬೈಲ್ ನಿಂದ ದೂರವಿಡುವುದಕ್ಕೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಈ ಶಿಬಿರ ಬಹಳ ಉಪಯುಕ್ತವಾಗಿದೆ” ಎಂದರು.

Manasadhara Trust ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ ರವರು ಮಾತನಾಡಿ “ಮನಃಸ್ಫೂರ್ತಿ ಬೇಸಿಗೆ ಶಿಬಿರವು ಸಂಪೂರ್ಣ ಉಚಿತವಾಗಿದ್ದು ಇದು ಒಂಬತ್ತನೇ ವರ್ಷದ ಶಿಬಿರವಾಗಿದೆ. ಮುಖ್ಯವಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮತ್ತು ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಈ ಶಿಬಿರವು ರೂಪುಗೊಂಡಿದ್ದು ನಾಟಕ, ಚಿತ್ರಕಲೆ, ಹಾಡು, ಕ್ರಾಫ್ಟ್, ಪರಿಸರದ ಅರಿವು…. ಹೀಗೆ ಇತ್ಯಾದಿ ವಿಷಯಗಳನ್ನು ಇಂದಿನಿಂದ ಹೇಳಿಕೊಡಲಾಗುತ್ತದೆ” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕರಾದ ಶ್ರೀ ಯುತ ಮಂಜುನಾಥ ಸ್ವಾಮಿ, ಶಿಬಿರದ ಸಂಚಾಲಕರಾದ ಶ್ರೀ ಮತಿ ರಂಗನಾಯಕಿ, ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್, ಶ್ರೀ ಯುತ ಪ್ರತೀಕ್.ಸಿ.ಎಂ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ಪ್ರಶಿಕ್ಷಣಾರ್ಥಿಗಳಾದ ಸ್ಫೂರ್ತಿ.ವೈ.ಹೆಚ್, ಮಂಜುಳ, ಜ್ಯೋತಿ, ರಾಹುಲ್, ಶಶಾಂಕ್, ಮಂಜು.ಆರ್.ಪಿ, ನಮ್ಮ ಹಳ್ಳಿ ಥಿಯೇಟರ್ ನ ಸದಸ್ಯರು, ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರದ ಶಿಕ್ಷಕರು ಉಪಸ್ಥಿತರಿದ್ದರು.

D.S.Arun ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆ ಕಿರಿದಾಗಿ ಸಂಚಾರಕ್ಕೆ ಕಿರಿಕಿರಿ. ಪರಿಹಾರ ಮಾಡಿ- ಡಿ.ಎಸ್.ಅರುಣ್ .

0

D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..

D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

S. N. Channabasappa ಶಿಕಾರಿಪುರ ಬಸ್ ಅಪಘಾತ. ಗಾಯಾಳುಗಳ ಕ್ಷೇಮ ವಿಚಾರಿಸಿದ ಶಾಸಕ ಚನ್ನಿ.

0

S. N. Channabasappa ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ನಿನ್ನೆ ಬೆಳಿಗ್ಗೆ ಸಂಭವಿಸಿದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಕಳಕಳಿ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಶಾಸಕರು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಹಾಗೂ ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು

S. N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ಚನ್ನಬಸಪ್ಪ ಸಾಮಾಜಿಕ ತಾಣದಲ್ಲಿ
ತಮ್ಮ ಕಾಳಜಿಯನ್ನ ಹಂಚಿಕೊಂಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಟೆಲೆಕ್ಸ್ ರವಿಕುಮಾರ್ ಆಯ್ಕೆ

0

ಏ. 12ರಂದು ಬೀದರ್ ನ 40ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ.
ರವಿಕುಮಾರ್‌ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.

ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕಗೊಂಡ ಎನ್. ರವಿಕುಮಾರ್‌ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ. ಏಪ್ರಿಲ್ 12ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಹೆಚ್ ಬಿ ಮದನಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು ಸನ್ಮಾನಿಸಿದರು.