Tuesday, February 24, 2026
Tuesday, February 24, 2026
Home Blog Page 240

ತಾಳಗುಪ್ಪ ದಿಂದ ಯಶವಂತಪುರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು, ಜುಲೈ 26 ರಿಂದ ಸಂಚಾರ ಆರಂಭ

0

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.

ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು (00:13/00:15 AM), ಅರಸೀಕೆರೆ (00:33/00:38 AM), ಬೀರೂರು (01:13/01:15 AM), ತರೀಕೆರೆ (01:43/01:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್ (02:20/02:25 AM), ಆನಂದಪುರಂ (03:10/03:12 AM) ಮತ್ತು ಸಾಗರ ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ವಾಪಸ್ ಬರುವಾಗ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 26, 2025 ರಂದು ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ಸಾಗರ ಜಂಬಗಾರು (08:30/08:32 AM), ಆನಂದಪುರಂ (09:00/09:02 AM), ಶಿವಮೊಗ್ಗ ಟೌನ್ (09:45/09:50 AM), ಭದ್ರಾವತಿ (10:15/10:17 AM), ತರೀಕೆರೆ (10:30/10:32 AM), ಬೀರೂರು (11:00/11:02 AM), ಅರಸೀಕೆರೆ (12:00/12:10 PM), ತಿಪಟೂರು (12:28/12:30 PM) ಮತ್ತು ತುಮಕೂರು (03:18/03:20 PM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 01 ಎಸಿ ಟು ಟೈರ್, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

Adichunchanagiri Education Trust ಶಿವಮೊಗ್ಗದಲ್ಲಿ ಆಗಸ್ಟ್ 11 ರಿಂದ 14 ವರೆಗೆ “ಚುಂಚಾದ್ರಿ ಕಪ್” ವಾಲಿಬಾಲ್ ಪಂದ್ಯಾವಳಿ

0


Adichunchanagiri Education Trust ಪದ್ಮಭೂಷಣ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ,
ಪ್ರತಿವರ್ಷದಂತೆ ಈ ವರ್ಷವೂ ಸಹ ಶಿವಮೊಗ್ಗ ನಗರದ ಕ್ರೀಡಾ ಪ್ರೇಮಿಗಳಿಗಾಗಿ ಹಾಗೂ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್( ರಿ )ಶಿವಮೊಗ್ಗ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ “ಚುಂಚಾದ್ರಿ ಕಪ್ 2025” ರ ವಾಲಿಬಾಲ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ ಆಗಸ್ಟ್ 11 ರಿಂದ 14 ರವರೆಗೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು,
ಈ ಕ್ರೀಡಾ ಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಿಸುವರು.

ತಮ್ಮ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರ ತಂಡಗಳನ್ನು ಈ ಸ್ಪರ್ಧೆಗೆ ಕಳುಹಿಸಿ, ಚುಂಚಾದ್ರಿ ಕಪ್ 2025 ನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕೋರುತ್ತೇವೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಕಡ್ಡಾಯವಾಗಿ ತಮ್ಮ ಶಾಲೆಯ ಕ್ರೀಡಾಪಟುಗಳ ಜೊತೆಯಲ್ಲಿ ಇರತಕ್ಕದ್ದು, ಒಂದು ವೇಳೆ ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳ ಜೊತೆ ಇಲ್ಲದ ತಂಡಗಳಿಗೆ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.

Adichunchanagiri Education Trust ಜೊತೆಗೆ ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರವನ್ನು ತರಬೇತಿದಾರರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ತರತಕ್ಕದ್ದು.
ತಮ್ಮ ತಂಡಗಳ ನೋಂದಣಿಗಾಗಿ ನಾವು ಕಳುಹಿಸಿರುವ ನೋಂದಣಿ ಪತ್ರದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡಿ ಪ್ರಾಂಶುಪಾಲರು,ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ,ಶರಾವತಿ ನಗರ, ಶಿವಮೊಗ್ಗ ಇವರಿಗೆ 03-8 – 2025 ರೊಳಗಾಗಿ ಕಳುಹಿಸಿಕೊಡಲು ಕೋರಲಾಗಿದೆ.

ವಿ. ಸೂ : ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.17 ವರ್ಷ ವಯೋಮಿತಿ ಮೀರಿರಬಾರದು (01-01-2009 ರ ನಂತರ ಜನಿಸಿರಬೇಕು )
ಕಡ್ಡಾಯವಾಗಿ 18 ಕಾಲಂ ಇರುವ ಗುರುತಿನ ಚೀಟಿ ತರಬೇಕು (ಇತ್ತೀಚಿನ ಭಾವಚಿತ್ರದೊಂದಿಗೆ ), ವಿದ್ಯಾರ್ಥಿಗಳ ಆಧಾರ ಗುರುತಿನ ಕಾರ್ಡ್, SATS ನಂಬರ್ ಹಾಗೂ ಶಾಲೆಯ ಡೈಸ್ ಕೋಡ್ ಕಡ್ಡಾಯವಾಗಿರುತ್ತದೆ.

9945833464,8971452532,,8884483484 ,6361711504 ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಸಂಸ್ಥೆಯ ಪ್ರಾಂಶುಪಾಲರಾದ ಕುಮಾರಿ, ದಿವ್ಯಾ ಕರಣಮ್ ರವರು ಕೋರಿದ್ದಾರೆ.

Chamber Of Commerce Shivamogga ಜುಲೈ 23 ರಿಂದ 25 ಶಿವಮೊಗ್ಗದಲ್ಲಿ ” ಟ್ರೇಡ್ ‌ಲೈಸನ್ಸ್ ಬೃಹತ್ ಮೇಳ”ಉದ್ದಿಮೆ ಪರವಾನಗಿ ಬಯಸುವ ಆಸಕ್ತರಿಗೆ ಸುವರ್ಣಾವಕಾಶ

0

Chamber Of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಹಾನಗರಪಾಲಿಕೆ, ಶಿವಮೊಗ್ಗ ಸಹಭಾಗಿತ್ವದೊಂದಿಗೆ ಪ್ರತಿ ವರ್ಷದಂತೆ ಮೂರು ದಿನಗಳ ಕಾಲ “ಉದ್ದಿಮೆ ಪರವಾನಿಗೆ” (ಟ್ರೇಡ್ ಲೈಸೆನ್ಸ್) ನೀಡುವ ಬೃಹತ್ ಮೇಳವನ್ನು ಆಯೋಜಿಸಲಾಗಿದೆ. ಉದ್ದಿಮೆ ಪರವಾನಗಿಯನ್ನು ಪಡೆದುಕೊಳ್ಳಲು ಉದ್ದಿಮೆದಾರರಿಗೆ ಅನುಕೂಲವಾಗುವ ನೆಲೆಯಲ್ಲಿ ಮಹಾನಗರಪಾಲಿಕೆಯಿಂದ ಸರಳೀಕೃತಗೊಳಿಸಿದ್ದು, ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವಂತಹ ಪ್ರತಿಯೊಬ್ಬ ಉದ್ದಿಮೆದಾರರು, ವರ್ತಕರು ಪರವಾನಗಿ ಪಡೆಯುವುದಲ್ಲದೆ ತಮ್ಮ ಅಕ್ಕಪಕ್ಕದ ವ್ಯಾಪರಸ್ಥರಿಗೆ ಮಾಹಿತಿ ನೀಡಿ “ಟ್ರೇಡ್ ಲೈಸೆನ್ಸ್” ಪಡೆದುಕೊಳ್ಳಲು ಕೋರಿದೆ.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿAದ ಬೃಹತ್ ಮೇಳವನ್ನು ಮೂರು ದಿನಗಳ ಕಾಲ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮಾನ್ಯ ಸದಸ್ಯರು ನಗರದ ಉದ್ದಿಮೆದಾರರು, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕಾರ್ಯದರ್ಶಿ ಎ.ಎಂ. ಸುರೇಶ್‌ರವರು ಸಂಘದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Chamber Of Commerce Shivamogga ಉದ್ದಿಮೆ ಪರವಾನಗಿ ನಮೂನೆಯೊಂದಿಗೆ ನವೀಕರಿಸಲು ಕಳೆದ ವರ್ಷದ ೧) ಲೈಸೆನ್ಸ್ ಪ್ರತಿ, ೨)ಪಾನ್‌ಕಾರ್ಡ್ ಪ್ರತಿ, ೩) ಮೊಬೈಲ್ ನಂಬರ್ ಮತ್ತು ಹೊಸದಾಗಿ ಪರವಾನಗಿ ಪಡೆಯುವವರು ಈ ಕೆಳಕಾಣಿಸಿದ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಪರವಾನಗಿ ಪಡೆಯಲು ಕೋರಲಾಗಿದೆ.

೧. ಅರ್ಜಿದಾರರ ಪಾಸ್‌ಪೋರ್ಟ್ ಭಾವಚಿತ್ರ, ೨. ಮುನಿಸಿಪಲ್ ಖಾತಾ ನಕಲು/ಪಹಣೆ/ಬಾಡಿಗೆ ಕರಾರು ೪. ಆಧಾರ್ ಕಾರ್ಡ್ ೫. ವಿದ್ಯುಚ್ಛಕ್ತಿ ಬಿಲ್ ೬. ಮೊಬೈಲ್ ನಂಬರ್ ೭. ಪಾನ್‌ಕಾರ್ಡ್ ೮. ಇ-ಮೇಲ್ ಐಡಿ.

ABVP ದೇಶದ ಉಜ್ವಲ ಭವಿಷ್ಯ ಯುವಕರ ಕೈಯಲ್ಲಿದೆ- ರಾಕೇಶ್ ಗೌಡ

0

ABVP ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ (ABVP) ಪ್ರಾಂತ್ಯ ಸಮ್ಮೇಳನವು 18 ಜುಲೈ 2025 ರಂದು ಶಿವಮೊಗ್ಗದ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಯುವ ಉದ್ಯಮಿ ರಾಕೇಶ್ ಗೌಡ ಅವರು ಪ್ರಮುಖ ಉದ್ಘಾಟಕರಾಗಿ ಭಾಗವಹಿಸಿ, ತನ್ನ ಪ್ರೇರಣಾದಾಯಕ ಭಾಷಣದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ತಲುಪಿದರು.
ಅವರು ತಮ್ಮ ಭಾಷಣದಲ್ಲಿ, “ಈ ದೇಶದ ಉಜ್ವಲ ಭವಿಷ್ಯ ಯುವಕರ ಕೈಯಲ್ಲಿದೆ. ಸದೃಢ ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಮತ್ತು ದೇಶಭಕ್ತಿ ಎಂದರೆ ಕೇವಲ ಮಾತುಗಳಲ್ಲ, ಅವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ನಿಜವಾದ ಮೌಲ್ಯಗಳು,” ಎಂದು ವಿದ್ಯಾರ್ಥಿಗಳಿಗೆ ಉತ್ಸಾಹ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಬಿವಿಪಿ ಕರ್ನಾಟಕ ದಕ್ಷಿಣ ಘಟಕದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಎಚ್ ಕೆ ವಹಿಸಿದ್ದರು.
ಪ್ರಾಂತ ವಿದ್ಯಾರ್ಥಿನಿ ಪ್ರಮುಖ ಸುಧ, ಶಿವಮೊಗ್ಗ ಜಿಲ್ಲಾ ಸಂಚಾಲಕ ಲೋಹಿತ್, ವಿಭಾಗ ಸಂಚಾಲಕ ರವಿ ಇರೂಜಿ, ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷರಾಗಿ ಮಂಜಪ್ಪ ಜಿ ಕೆ ಅವರು ನೂತನ ಜವಾಬ್ದಾರಿಯನ್ನು ಸ್ವೀಕರಿಸಿದರು. ಜೊತೆಗೆ ವಿವಿಧ ವಿದ್ಯಾರ್ಥಿಗಳು ವಿಭಿನ್ನ ಹೊಣೆಗಾರಿಕೆಗಳನ್ನು ಸ್ವೀಕರಿಸಿ ಸಂಘಟನೆಯ ಚಟುವಟಿಕೆಗೆ ಬಲ ನೀಡಿದರು.

ABVP ಸಮ್ಮೇಳನದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಗಿದ್ದು, ದೇಶಪ್ರೇಮ, ಶಿಸ್ತು ಮತ್ತು ಸೇವಾಭಾವನೆ ಕುರಿತ ಸಂದೇಶಗಳು ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯವನ್ನು ತುಂಬಿದವು.

University of Mysore ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ‌ ಕಲಾ ಕಾಲೇಜಿಗೆ ಪ್ರವೇಶಾತಿ ಪ್ರಕಟಣೆ

0

University of Mysore ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
University of Mysore ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https:/www.cavamysore.karnataka.gov.in ಮೂಲಕ ಜು. 30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ತಿಳಿಸಿದ್ದಾರೆ.

ವೈದ್ಯಕೀಯ ವೆಚ್ಚ ಮರುಪಾವತಿ ಪ್ರಕ್ರಿಯೆಯಲ್ಲಿ ಸೇವಾ ನ್ಯೂನತೆ, ಗ್ರಾಹಕರ ಪರ ತೀರ್ಪು

0

ದೂರುದಾರರಾದ ಶಿವಮೊಗ್ಗದ ದುರ್ಗಿಗುಡಿ ಆನಂದಮೂರ್ತಿ ಡಿ.ಹೆಚ್. ಎಂಬುವವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರ ವಿರುದ್ಧ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ದೂರುದಾರ ಆನಂದಮೂರ್ತಿಯವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರಿಂದ ವೈದ್ಯಕೀಯ ವಿಮಾ ಪಾಲಿಸಿಯನ್ನು ಪಡೆದಿದ್ದು, ಮೇ 2024 ರಂದು ಹೃದಯ ಸಂಬಂಧಿತ ಕಾಯಿಲೆಗೆ ಚಿಕಿತ್ಸೆ ಪಡೆದು, ಚಿಕಿತ್ಸೆ ವೆಚ್ಚ ರೂ. 2.50 ಲಕ್ಷಗಳ ಬಿಲ್‌ಗಳನ್ನು ಸಲ್ಲಿಸಿ ಕ್ಲೇಮ್ ಮೊತ್ತವನ್ನು ನೀಡಲು ಕೋರಿರುತ್ತಾರೆ. ಆದರೆ ಎದುರುದಾರ ಇನ್ಷೂರನ್ಸ್ ಕಂಪನಿಯು ಪಾಲಿಸಿ ಪಡೆಯುವಾಗ ದೀರ್ಘಕಾಲದ ಕಾಯಿಲೆಯಿರುವುದನ್ನು ಮರೆಮಾಚಿರುತ್ತಾರೆ ಎಂಬ ಕಾರಣ ನೀಡಿ ವಿಮಾ ಹಣವನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ದೂರು ಸಲ್ಲಿರುತ್ತಾರೆ.
ಆಯೋಗವು ದೂರನ್ನು ದಾಖಲಿಸಿಕೊಂದು, ಎದುರುದಾರರಿಗೆ ನೀಡಿದ ನೋಟಿಸ್‌ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ಫೆ. 2025 ರಂದು ಅರ್ಹದಾಯಕ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲಾಗಿದೆ ಹಾಗೂ ತಮ್ಮಿಂದ ಯಾವುದೇ ಸೇವಾ ನ್ಯೂನತೆಯಾಗಿರುವುದಿಲ್ಲವಾದ ಕಾರಣ ದೂರನ್ನು ವಜಾ ಮಾಡಬೇಕಾಗಿ ವಿನಂತಿಸಿರುತ್ತಾರೆ. ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ ಮತ್ತು ದೂರುದಾರರು ಆಯೋಗಕ್ಕೆ ದೂರು ಸಲ್ಲಿಸಿದ ನಂತರ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಿರುವುದರಿಂದ ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರುದಾರರು ಸಲ್ಲಿಸಿರುವ ದೂರನ್ನು ಪುರಸ್ಕರಿಸಿ, ವೈದ್ಯಕೀಯ ವೆಚ್ಚದ ಮೊತ್ತ ರೂ.2,28,018 ಗಳಿಗೆ ವಾರ್ಷಿಕ ಶೇ.9 ರಂತೆ ಬಡ್ಡಿಯನ್ನು ದಿ: 27/06/2024 ರಿಂದ ದಿ:13/02/2025ರವರೆಗೆ ಈ ಆದೇಶವಾದ 45 ದಿನಗಳೊಳಗಾಗಿ ಪಾವತಿಸಲು, ತಪ್ಪಿದಲ್ಲಿ ವಿಮಾ ಮೊತ್ತಕ್ಕೆ ಶೇ.12 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡುವುದು ಹಾಗೂ ರೂ.27,000/- ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು, ತಪ್ಪಿದಲ್ಲಿ ವಿಮಾ ಮೊತ್ತಕ್ಕೆ ಶೇ.12 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಜು.07 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಗಂಗಾಧರ ನಾಯ್ಕ್ ತಿಳಿಸಿದ್ದಾರೆ.

ಜು. 20 ರಂದು ಹೊನ್ನವಿಲೆ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ – ಮೆಸ್ಕಾಂ ಪ್ರಕಟಣೆ

0

ಮೆಸ್ಕಾಂ ಪ್ರಕಟಣೆಯ ಪ್ರಕಾರ, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-17 ಮತ್ತು ಎಂಸಿಎಫ್-18 ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ, ಜುಲೈ 20 (ಶನಿವಾರ) ರಂದು ಬೆಳಿಗ್ಗೆ 10:00 ರಿಂದ ಸಂಜೆ 6:00 ರವರೆಗೆ ಕೆಲವೊಂದು ಗ್ರಾಮಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

  • ಹೊನ್ನವಿಲೆ
  • ನವುಲೆಬಸವಾಪುರ
  • ಅಮರಾವತಿ ಕ್ಯಾಂಪ್
  • ಹಳೆ ಶೆಟ್ಟಿಹಳ್ಳಿ
  • ಶೆಟ್ಟಿಹಳ್ಳಿ
  • ಮಾಳೇನಹಳ್ಳಿ
  • ಗುಡ್ರಕೊಪ್ಪ
  • ಮತ್ತಿಘಟ್ಟ
  • ಪದ್ಮೇನಹಳ್ಳಿ
  • ಇತರೆ ಸುತ್ತಮುತ್ತಲ ಗ್ರಾಮಗಳು

ಮೆಸ್ಕಾಂ (MESCOM) ಇಲಾಖೆಯು ಗ್ರಾಹಕರಿಗೆ ಈ ವಿಷಯವನ್ನು ತಿಳಿಸಿ, ತಾತ್ಕಾಲಿಕ ಅಸೌಕರ್ಯಕ್ಕೆ ವಿಷಾದ ವ್ಯಕ್ತಪಡಿಸಿದೆ. ಕಾರ್ಯಕ್ಷಮತೆಯ ಸುಧಾರಣೆಗೆ ಈ ನಿರ್ವಹಣಾ ಕಾಮಗಾರಿಗಳು ಅಗತ್ಯವಾಗಿರುವುದರಿಂದ, ಗ್ರಾಹಕರು ಸಹಕರಿಸಬೇಕೆಂದು ವಿನಂತಿಸಲಾಗಿದೆ.

📞 ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: MESCOM ಸಹಾಯವಾಣಿ 1912 ಅಥವಾ ಸ್ಥಳೀಯ ಮೆಸ್ಕಾಂ ಕಚೇರಿ

Shivamogga City Karate Association ಶಿವಮೊಗ್ಗದ ಮೌಂಟ್ ಹೀರಾ ಶಾಲೆಯ ವಿದ್ಯಾರ್ಥಿಗಳಿಗೆ ಕರಾಟೆ ಪಂದ್ಯಾವಳಿ ಸಮಗ್ರ ಪ್ರಶಸ್ತಿ

0

Shivamogga City Karate Association ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ನಡೆದ ಯೂತ್ ಕಪ್ ರಾಷ್ಟ್ರಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶಿವಮೊಗ್ಗದ ಮೌಂಟ್ ಹೀರಾ ಶಾಲೆಯ ವಿದ್ಯಾರ್ಥಿಗಳು ಕತಾ ಮತ್ತು ಕುಮತಿ ವಿಭಾಗದಲ್ಲಿ ವಿವಿಧ ಬಹುಮಾನಗಳನ್ನು ಪಡೆದು ಸಮಗ್ರ ಬಹುಮಾನ ಪಡೆದು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದು ವಿಜೇತ ಕ್ರೀಡಾಪಟುಗಳಿಗೆ Shivamogga City Karate Association ಶಾಲೆಯ ಕಾರ್ಯದರ್ಶಿ ಮೆಹಬೂಬ್ ಕೆ ಜವೇರಿಯ ಮೆಹಬೂಬ್ ಕೆ ಉಪಾಧ್ಯಕ್ಷರು ಹಾಗೂ ಆಡಳಿತ ಅಧಿಕಾರಿಗಳು ಅಕಾಡಮಿಕ್ಸ್ ರವರು ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಶುಭ ಕೋರಿದ್ದು ಈ ಸಂದರ್ಭದಲ್ಲಿ
ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಪದಾಧಿಕಾರಿ ಶಿಲ್ಪಿ ಮಂಜುನಾಥ್ ಮತ್ತು ಶಾಲೆಯ ಕರಾಟೆ ಕೋಚ್ ಕಾವ್ಯ ಉಪಸ್ಥಿತರಿದ್ದರು.

E-Pauti ಜಮೀನು ಮಾಲೀಕರು ಮೃತರಾದಲ್ಲಿ , ವಾರಸುದಾರರಿಗೆ ಹಕ್ಕು ಬದಲಾಯಿಸುವ”ಇ- ಪೌತಿ” ಆಂದೋಲನ- ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್

0

E-Pauti ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

E-Pauti ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ತಿಳಿಸಿದ್ದಾರೆ.

Karnataka State Open University ರಾಜ್ಯ ಮುಕ್ತ ವಿವಿ‌ಗೆ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕಟಣೆ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಆರಂಭವಾಗಿದ್ದು ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿ, ಶಿವಮೊಗ್ಗ ಇಲ್ಲಿ ಪ್ರವೇಶಾತಿ ಪಡೆಯಬಹುದು.
ಎಲ್ಲಾ ಭಾನುವಾರ, ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಕಚೇರಿ ಎಂದಿನಂತೆ ಕಾರ್ಯ ನಿರ್ವಹಿಸುತ್ತದೆ. ಆದ್ದರಿಂದ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ KSOUPORTAL.COM ದೂ.ಸಂ: 08182-250367 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.