Tuesday, February 24, 2026
Tuesday, February 24, 2026
Home Blog Page 241

Innerwheel Club ನಿರಂತರ ಅಧ್ಯಯನದಿಂದ ಉನ್ನತ ಸಾಧನೆ ಸಾಧ್ಯ- ಲತಾ ರಮೇಶ್

0

Innerwheel Club ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆ ವತಿಯಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಚಟುವಟಿಕೆಗಳನ್ನು ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ನಿರಂತರವಾಗಿ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಶ್ರೀ ರಂಜಿನಿ ದತ್ತಾತ್ರಿ ನೇತೃತ್ವದಲ್ಲಿ ಮಕ್ಕಳು ಮತ್ತು ಸರಳ ಸಾಮಾಜಿಕ ಜವಾಬ್ದಾರಿ ಕುರಿತು ಪಿಕ್ ಅಂಡ್ ಸ್ಪೀಚ್ ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಜನಸಂಖ್ಯೆ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

Innerwheel Club ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಕಾರ್ಯದರ್ಶಿ ಶೃತಿ ರಾಕೇಶ್ ಮಾತನಾಡಿದರು. ಯಶೋಧ ಗೌಳೆರ್ ಮಕ್ಕಳಿಗೆ ಹಲವು ಮಾಹಿತಿಗಳನ್ನು ನೀಡಿದರು. ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಅಧ್ಯಕ್ಷೆ ಲತಾ ಎಂ ರಮೇಶ್ ಅವರು ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಗುರುಪೂರ್ಣಿಮೆ ಪ್ರಯಕ್ತ ಕಿರುಕಾಣಿಕೆಗಳನ್ನು ನೀಡಿ ಗೌರವಿಸಿದರು.

MESCOM ಜುಲೈ 20, ಹೊನ್ನವಿಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

0

MESCOM ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Rotary Club ರೋಟರಿ ರಿವರ್ ಸೈಡ್ ಕ್ಲಬ್ಬಿನ ಸೇವಾ ಚಟುವಟಿಕೆಗಳಿಗೆ ಚಾಲನೆ

0

Rotary Club ರೋಟರಿ ಕ್ಲಬ್ ರಿವರ್ ಸೈಡ್, ಇನ್ನರ್‌ವೀಲ್ ಕ್ಲಬ್ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಘದ ಸಹಯೋಗದಲ್ಲಿ ನೂತನ ಸೇವಾ ಅವಧಿಯ ಸೇವಾ ಚಟುವಟಿಕೆಗಳ ಕಾರ್ಯಕ್ರಮಕ್ಕೆ ತುಂಗಾ ತೀರದಲ್ಲಿ ಚಾಲನೆ ನೀಡಲಾಯಿತು.
ಹಿಂದು ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರಕಾರ ಪವಿತ್ರತೆಯ ಪ್ರತೀಕವಾದ ಗಂಗಾ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ ನೂತನ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕಾರಿ ಮಂಡಳಿ ಅವರು ತಮ್ಮ ಸೇವೆಯ ಅವಧಿಯನ್ನು ಪ್ರಾರಂಭಿಸಿದರು. ಮೂರು ಸಂಘಗಳ ಅಧ್ಯಕ್ಷರು ತಮ್ಮ ತಮ್ಮ ಅವಧಿಯ ದೃಷ್ಟಿಕೋನ ಹಂಚಿಕೊಂಡರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಅಧ್ಯಕ್ಷ ಕೆ.ಎಸ್. ವಿಶ್ವನಾಥ ನಾಯಕ ಮಾತನಾಡಿ, ನಮ್ಮ ಅವಧಿಯಲ್ಲಿ ಮಾನವೀಯ ಸೇವೆಯನ್ನು ಮುಖ್ಯ ಗುರಿಯನ್ನಾಗಿ ಇಟ್ಟು, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಸೇವೆ ಮಾಡುತ್ತೇವೆ ಎಂದು ಹೇಳಿದರು.
ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಶೀಲಾ ಸುರೇಶ್ ಮಾತನಾಡಿ, ಮಹಿಳಾ ಶಕ್ತಿ, ಶಿಕ್ಷಣ ಹಾಗೂ ಆರೋಗ್ಯದತ್ತ ನಮ್ಮ ಗಮನವಿದ್ದು, ಸೇವೆಯ ಹಾದಿಯನ್ನು ವಿಸ್ತರಿಸುತ್ತೇವೆ ಎಂದು ಭರವಸೆ ನೀಡಿದರು.
Rotary Club ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಘದ ಅಧ್ಯಕ್ಷ ಆದಿತ್ಯ ಅರುಣ್‌ಕುಮಾರ್ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದು ಸಂಕಲ್ಪ ವ್ಯಕ್ತಪಡಿಸಿದರು.
ಶಿವಮೊಗ್ಗದ ಕೊರ್ಪಳಯ್ಯ ಛತ್ರದ ತುಂಗಾ ಮಂಟಪದ ಬಳಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ನಿತಿನ್ ಯಾದವ್, ವಲಯ ಸೇನಾನಿ ಎಸ್.ಪಿ. ಶಂಕರ್, ಎಂ.ಆರ್.ಬಸವರಾಜ್, ದೇವೇಂದ್ರಪ್ಪ ಎನ್., ರಾಜೇಂದ್ರ ಕುಮಾರ್, ಕಾರ್ಯದರ್ಶಿ ರೂಪಾ ರವಿ, ರೇಣುಕಮ್ಮ ಕಗ್ಗಲಿ ಮತ್ತು ಅನೇಕರು ಭಾಗವಹಿಸಿದ್ದರು.

CM Siddaramaiah ಸಾಗರ ತಾಲ್ಲೂಕಿನಲ್ಲಿ ಕಸ ವಿಲೇವಾರಿ ಸಂಬಂಧ ವೃದ್ಧೆಯ ಮೇಲೆ ವಿನಾಕಾರಣ ಹಲ್ಲೆ, ಮುಖ್ಯಮಂತ್ರಿಗಳ ಮಾಧ್ಯಮ ಕಚೇರಿಯಿಂದ ಸೂಕ್ತ ಕ್ರಮ

0

CM Siddaramaiah ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವೃದ್ಧೆಯೊರ್ವರನ್ನು ನೆರೆ ಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳ ಮೆಲೆ ಕಾನೂನು ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆನಂದಪುರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ತಿಳಿಸಿದ್ದಾರೆ.

CM Siddaramaiah ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

B.Y. Raghavendra ಸಿಗಂದೂರು ಸೇತುವೆ ಉದ್ಘಾಟನೆ‌ ಯಶಸ್ಸಿಗೆ ಕಾರಣೀಭೂತರಾದ ಪ್ರಧಾನಿ ಮೋದಿ & ಸಚಿವ ನಿತಿನ್ ಗಡ್ಕರಿಗೆ ಧನ್ಯತೆ ಅರ್ಪಣೆ- ಬಿ.ವೈ.ರಾಘವೇಂದ್ರ

0

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಪರ್ಕ ಕ್ರಾಂತಿಯ ಹೊಸ ಅಧ್ಯಾಯ ಆರಂಭ ಎಂದು ಹೆಮ್ಮೆ ಪಡುವ ಸಂಗತಿಯನ್ನ ಶಿವಮೊಗ್ಗ
ಕ್ಷೇತ್ರದ ಸಂಸದ ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನಸಾಮಾನ್ಯರ ಹಿತ ದೃಷ್ಟಿಯಿಂದ ತುರ್ತಾಗಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ಒದಗಿಸಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಅನೇಕ ಯೋಜನೆಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ಕಾಮಗಾರಿಗಳು ಸಾಗಲು ಸಹಕಾರವಾಗಿದೆ.

ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ನಿರಂತರವಾಗಿ ಸಾಗಲು ಎಲ್ಲಾ ರೀತಿಯಿಂದಲೂ ಅನುಕೂಲ ನೀಡುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಭೂ ಸಾರಿಗೆ ಮಂತ್ರಾಲಯ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಅನಂತ ಅನಂತ ಧನ್ಯವಾದಗಳನ್ನ ಸಂಸದ ಬಿ.ವೈ.ರಾಘವೇಂದ್ರ ಅರ್ಪಿಸಿದ್ದಾರೆ.

Shri Kshetra Dharmasthala ಹಾರ್ನಹಳ್ಳಿಯ ಚೌಕಿ ಮಠಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ₹10 ಲಕ್ಷ ಮೌಲ್ಯದ ಚೆಕ್ ಸಮರ್ಪಣೆ

0

Shri Kshetra Dharmasthala ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾರ್ನಳ್ಳಿ ಗ್ರಾಮದ ಚೌಕಿ ಮಠಕ್ಕೆ ಮಂಜೂರು ಮಾಡಿದ 10ಲಕ್ಷದ ಡಿ ಡಿಯನ್ನು ಈ ದಿನ ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಅವರು ಮಠದ ಸ್ವಾಮೀಜಿಗಳಾದ ಶ್ರೀ ಮ. ನಿ. ಪ್ರ ನೀಲಕಂಠ ಸ್ವಾಮಿಗಳು ಮತ್ತು ಕಮಿಟಿಯ ಸದಸ್ಯರುಗಳ ಸಮ್ಮುಖದಲ್ಲಿ ಹಸ್ತಾಂತರ ಮಾಡಿ ಶ್ರೀ ಕ್ಷೇತ್ರದಿಂದ ಸುಮಾರು 15 ಸಾವಿರಕ್ಕೂ ಮಿಕ್ಕಿ ದೇವಸ್ಥಾನ, ಮಠ ಮಂದಿರಗಳ ಅಭಿವೃದ್ಧಿ ಕೆಲಸಗಳಿಗೆ ಸಾಕಷ್ಟು ಅನುದಾನಗಳನ್ನು ನೀಡಿದ್ದಾರೆ. ಇವತ್ತು ಕೇವಲ ಸ್ವಸಹಾಯ ಸಂಘಗಳನ್ನು ಮಾಡಿ ಅವರ ಮತ್ತು ಅವರ ಕುಟುಂಬದ ಅಭಿವೃದ್ಧಿಗೆ ಶ್ರಮಿಸುವುದಲ್ಲದೆ, ಗ್ರಾಮಗಳ ಹಳ್ಳಿಗಳ ಸರ್ವಾಂಗಿನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಶ್ರೀ ಕ್ಷೇತ್ರದಿಂದ ಪೂಜ್ಯರು ಹಾರ್ನಳ್ಳಿ ಚೌಕಿ ಮಠಕ್ಕೆ 10 ಲಕ್ಷ ಮೊತ್ತವನ್ನು ಮಂಜೂರು ಮಾಡಿದ್ದು ಮಠದ ಅಭಿವೃದ್ಧಿಗೆ ಇನ್ನಷ್ಟು ಪುಷ್ಟಿ ನೀಡಿದಂತಾಗಿದೆ ಎಂದರು, ತಾಲೂಕಿನ ಯೋಜನಾಧಿಕಾರಿಗಳಾದ ಉಲ್ಲಾಸ್ ಮೆಸ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವಸ್ಥಾನಗಳ ಅಭಿವೃದ್ಧಿ, ಮಠ ಮಂದಿರಗಳ ಅಭಿವೃದ್ಧಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು, ಸುಜ್ಞಾನ ನಿಧಿ ಶಿಷ್ಯವೇತನ, ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆಜ್ಞಾನದೀಪ ಶಿಕ್ಷಕರ ನಿಯೋಜನೆ, ಸಮಾಜದಲ್ಲಿ ಯಾರು ಇಲ್ಲದೆ ನಿರ್ಗತಿಕವಾಗಿ ಜೀವನ ನಡೆಸುತ್ತಿರುವವರಿಗೆ ಮಾಸಿಕ, ಮಾಶಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ 10 ಹಲವಾರು ಕೆಲಸಗಳನ್ನು ಯೋಜನೆ ಮಾಡುತ್ತಿದೆ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

Shri Kshetra Dharmasthala ವಲಯದ ಮೇಲ್ವಿಚಾರಕರಾದ ಸುರೇಶ್ ಶೆಟ್ಟಿಗಾರ್ ಎಲ್ಲರನ್ನು ಸ್ವಾಗತಿಸಿದರು, ಹಾರ್ನಳ್ಳಿ ಒಕ್ಕೂಟದ ಅಧ್ಯಕ್ಷರಾದ ಭಾಗ್ಯ, ಮಠದ ಕಮಿಟಿಯವರಾದ ಸುರೇಶ್ ಮತ್ತು ಸದಸ್ಯರು, ಸೇವಾ ಪ್ರತಿನಿಧಿಗಳಾದ ಕವಿತಾ ಮತ್ತು ಆಶಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು

Klive Special Article ಕಾಂಗ್ರೆಸ್ ಮಾನ ಕಾಪಾಡಿದ ಕಾಗೋಡು

0

ಕೆ ಲೈವ್ ಸಂಪಾದಕೀಯ ಲೇ: ಡಾ. ಸುಧೀಂದ್ರ

Klive Special Article ರಾಜಕೀಯ ಈಗ ಯಾವಕ್ಷೇತ್ರವನ್ನು ಬಿಟ್ಟಿದೆ ಎಂದು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುವುದು ಕಷ್ಟಸಾಧ್ಯ.
ಈಗಂತೂ ಜನಕಲ್ಯಾಣ ಯೋಜನೆಗಳು ಸಾಕಾರವಾದಾಗ. ರಾಜಕೀಯ ಪಕ್ಷಗಳು
ನಡೆಸಿರುವ ” ಕ್ರೆಡಿಟ್ ವಾರ್” , ದೇಶದ ಎಕ್ಸ್ಟರ್ನಲ್ ವಾರ್ ಗಿಂದ ಗರಂ ಗರಂ ಆಗಿ ಬೀಸುತ್ತಿದೆ ಎನ್ನಬಹುದು.

ಬಸ್ ನಿಲ್ದಾಣ, ಸಮುದಾಯ ಭವನ, ನೀರಾವರಿ ಕಾಲುವೆ, ಅಣೆಕಟ್ಟೆ, ಬಸ್ ಸಂಪರ್ಕ, ರಸ್ತೆ ನಿರ್ಮಾಣ ಕೊನೆಗೆ ಸೇತುವೆ ನಿರ್ಮಾಣ …ಹೀಗೆ ಈ
ಕ್ರೆಡಿಟ್ ಬಗ್ಗೆ ನಮ್ಮ ಸರ್ಕಾರ ಮಾಡಿದ್ದು , ನಾವೇ ಶುರು ಮಾಡಿದ್ದು ಎನ್ನುವ ಕೂಗಾಟ , ಹಾರಾಟ ಮಾಧ್ಯಮಗಳಲ್ಲಿ ಈಗ ಸಾಮಾನ್ಯವಾಗಿಬಿಟ್ಟಿದೆ.

ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಸಿಗಂದೂರು ಸೇತುವೆ ಉದ್ಘಾಟನೆಗೂ
ಈ ಕ್ರೆಡಿಟ್ ಭೂತ ವಕ್ಕರಿಸಿತು .

ಹಾಲಿ ಸಂಸದರು ಪಟ್ಡು ಬಿಡದೇ ಸೇತುವೆ ನಿರ್ಮಾಣಕ್ಕೆ ಕೇಂದ್ರದ ಎಲ್ಲ ಇಲಾಖೆ ಅಧಿಕಾರಿಗಳ ಬೆನ್ನಿಗೆ ಬಿದ್ದು ಅದಕ್ಕೊಂದು ರೂಪ ತಂದರು.ನಿಜ.

ಈ ಕಲ್ಪನೆ ಜಿಲ್ಲೆಯ ಹಿರಿಯ ರಾಜಕಾರಣಿಗಳಾದ ಯಡಿಯೂರಪ್ಪ, ಕಾಗೋಡು ತಿಮ್ಮಪ್ಪ ಅವರಿಗೆ ರಕ್ತದೊಳಗೇ ಇತ್ತು.

ಈರ್ವರೂ ಬೇರೆ ಬೇರೆ ಪಕ್ಷಗಳಾದರೂ ಜನೋಪಯೋಗಿ ಯೋಜನೆಗೆ ತಮ್ಮ ಕೈಲಾದಷ್ಟು ಶ್ರಮಿಸಿದ್ದಾರೆ. ಈ ವಾಸ್ತವ ಎಲ್ಲರಿಗೂ ಗೊತ್ತಿದೆ.

ಉದ್ಘಾಟನಾ ಸಮಾರಂಭಕ್ಕೆ ನಯವಾಗಿಯೇ ರಾಜ್ಯದ ಮುಖ್ಯಮಂತ್ರಿಗಳು
ಶಿಷ್ಟಾಚಾರ ಪಾಲಿಸಿಲ್ಲ.
ಬರಲು ಆಗಲಿಲ್ಲ ಎಂದು ತಿರಸ್ಕರಿಸದ್ದಾರೆ.
ಈ ಕುರಿತು ಕೇಂದ್ರಕ್ಕೆ ಪತ್ರವನ್ನೂ ಕಳಿಸಿದ್ದಾರೆ.

Klive Special Article ಆದರೆ ಸಂಸದರು ಎಲ್ಲ ಹಂತಗಳಲ್ಲೂ ಶಿಷ್ಡಾಚಾರಭಂಗವಾಗಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಪಕ್ಷದ ರಾಜಕೀಯ ಮುಖಂಡರು ಒಳಗೊಳಗೆ ಮುಖ್ಯಮಂತ್ರಿಗಳ ಇಮೇಜಿಗೆ ಕುಂದುತರುವಂತೆ ಮಸಲತ್ತು ಮಾಡಿದ್ದಾರೆ ಎಂಬರ್ಥದಲ್ಲಿ‌ ಸಂಸದರು ಮನನೊಂದು ಹೇಳಿಕೆ ನೀಡಿದ್ದಾರೆ.
ಹೊರಗೆ ವೈಯಕ್ತಿಕವಾಗಿ
ಇವರೆಲ್ಲರೂ ಸೌಜನ್ಯವಾಗಿ ಪರಸ್ಪರ ಸಂಭಾಷಿಸುತ್ತಾರೆ. ಆದರೆ ಯೋಜನೆಗಳ ಕ್ರೆಡಿಟ್ ಬಂದಾಗ ಅವರ ಮುಖಗಳು ವಿರುದ್ಧದಿಕ್ಕಿಗೆ ನಿಲ್ಲುತ್ತವೆ.

ಯಾಕೀ ರಾಜಕೀಯ ದೊಂಬರಾಟ? ಜನಮೆಚ್ಚಿಸಲು ಈ ಆಟಗಳು ಯಾರದ್ದೇ ಆಗಲಿ ನಡೆಯುವುದಿಲ್ಲ.

ಕಾಗೋಡು ತಿಮ್ಮಪ್ಪನವರು ಸಮಾರಂಭದಲ್ಲಿ ಹಾಜರಿದ್ದು ಜನೋಪಯೋಗಿ ಸನ್ನಿವೇಶದಲ್ಲಿ ಸಂತಸಪಟ್ಟಿದ್ದಾರೆ.
” ಗಡ್ಕರಿ ಅವರ ಕಾಲಿಗೆ ನಮಸ್ಕರಿಸುತ್ತೇನೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಈ ನುಡಿಗಳಿಂದಾಗಿ ಹಿರಿಯರಾದ ಕಾಗೋಡು ಸಣ್ಣವರಾಗದೇ ದೊಡ್ಡ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಗಡ್ಕರಿ ಅವರಿಗೆ ಕನ್ನಡ ಅರ್ಥವಾಗುವಂತಿದ್ದರೆ
ಅದಕ್ಕೆ ಮುಜುಗರ ಪಟ್ಟುಕೊಳ್ಳುತ್ತದ್ದರೇನೊ!?.

ಏನೇ ಆಗಲಿ ಮೂವತ್ತು ವರ್ಷಗಳಲ್ಲಿ ಗ್ರಾಮೀಣ ಜನತೆ ಪಟ್ಟ ಬವಣೆ , ದುಃಖ ,ಪರಿಪಾಟಲು ಎಷ್ಟು ಅಂತ ಹೇಳಲು ಯಾರಿಗೂ ಆಗುವುದಿಲ್ಲ.
ಅದರ ಸಂಕೇತವಾಗಿ ಸಾಗರ ಪ್ರದೇಶದ ಹಿರಿಯ ಜನನಾಯಕ ಕಾಗೋಡು ತಿಮ್ಮಪ್ಪನವರು ಒಂದು ಸಾಂಕೇತಿಕ ಧ್ವನಿಯಾಗಿ ನಮಗೆ ಕೇಳಿಸುತ್ತಾರೆ ಮತ್ತು ಕಾಣಿಸುತ್ತಾರೆ.
ನಿರ್ಭಿಡೆಯಾಗಿ ಅವರು ಕಾಂಗ್ರೆಸ್ಸಿಗರೆ, ಆದರೆ ಪಕ್ಷದ ಎಲ್ಲೆಗಳನ್ನೂ ,ರಾಜಕೀಯದ ಮಡಿವಂತಿಕೆಗಳನ್ನೂ ದಾಟಿ ದೊಡ್ಡವರಾಗಿದ್ದಾರೆ.

ಸಮಾರಂಭ ಇಡೀ ಜನತೆಯದ್ದು. ಅವರ ಹಕ್ಕುಬಾಧ್ಯತೆಯಲ್ಲಿ ಆಡಳಿತಾರೂಢ ಸರ್ಕಾರವೂ ಸೇರಿರುತ್ತದೆ. ಹೀಗಾಗಿ ಸಮಾರಂಭದಲ್ಲಿ ಸರ್ಕಾರವೂ ಪಾಲ್ಗೊಂಡು , ಎಸಗಿರುವ ಶಿಷ್ಟಾಚಾರ ಲೋಪವನ್ನ ಬೊಟ್ಟುಮಾಡಿ ತೋರಿಸಬೇಕಿತ್ತು. ಜನಕ್ಕೆ ಅದು ಇಷ್ಟವಾಗುತ್ತಿತ್ತು.
ಅದೇ ಅಧಿಕಾರಷಾಹಿ
ಯಾವ ಪಕ್ಷವಿದ್ದರೂ ಅವರೇ ಇರುತ್ತಾರೆ.
ತಿದ್ದುವುದಕ್ಕೆ ಮುಖ್ಯಮಂತ್ರಿಗಳಿಗೆ
ತೆರೆದ ಅವಕಾಶವಿತ್ತು.
ಸದ್ಯ ರೈತರ ಭೂಮಿ ಸಮಸ್ಯೆಗೆ ಹೇಗೆ ಸುಲಲಿತ ಪೂರ್ಣವಿರಾಮ ಹಾಕಿದರೋ ಹಾಗೆ ಈ ಪ್ರದೇಶದ ಜನತೆ ಸಿದ್ಧರಾಮಯ್ಯನವರ
ನಡೆವಳಿಕೆಯನ್ನ ಶ್ಲಾಘಿಸುತ್ತಿತ್ತು.
ಇದೊಂದು ಅವಕಾಶದಿಂದ ಮಾನ್ಯ ಮುಖ್ಯಮಂತ್ರಿಗಳು ವಂಚಿತರಾದರು ಎನ್ನದೇ ವಿಧಿಯಿಲ್ಲ.

ಸಂವಿಧಾನದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದೊಂದಿಗೆ ತಾರ್ಕಿಕ ವ್ಯತ್ಯಾಸಗಳಿರಬಹುದು
ಆದರೆ ನೇರವಾಗಿ ,ಗೈರುಹಾಜರಿಗೆ ಕಾರಣ ಹೇಳುವುದು ,ಜನೋಪಯೋಗಿ ದೃಷ್ಟಿಯಿಂದ ಸಾಧುವೆ? ಎಂಬ ಪ್ರಶ್ನೆ ಸಾರ್ವಜನಿಕರನ್ನ ಕಾಡುತ್ತಿದೆ.

Rotary Shivamogga ರೋಟರಿ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಸಸಿ ನೆಟ್ಟು ಪರಿಸರಕ್ಕೆ ವಿಶೇಷ ಕೊಡುಗೆ ನೀಡಬೇಕು- ಬಿ.ಎಂ.ಭಟ್

0

Rotary Shivamogga ರೋಟರಿ ಜಿಲ್ಲೆಯಿಂದ ಅತಿ ಹೆಚ್ಚು ಸಸಿಗಳನ್ನು ನೆಡುವುದರ ಮುಖಾಂತರ ಪರಿಸರಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರೋಟರಿ ಬಯೋಡೈವರ್ಸಿಟಿ ಪಾರ್ಕ್ನಲ್ಲಿ ಸಸಿ ನೆಡುವುದರ ಮೂಲಕ ರೋಟರಿ ಜಿಲ್ಲಾ ಯೋಜನೆ ಪರಿಸರ ಸಂರಕ್ಷಣೆ, ಹಸಿರು-ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣ ಜಿಲ್ಲಾ ಮಾಜಿ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಅವರ ಕನಸು. ಈಗಾಗಲೇ ಇಲ್ಲಿ ವಿವಿಧ ಜಾತಿ ಸಸಿಗಳನ್ನು ನೆಡುವುದರ ಮೂಲಕ ಈ ಜಾಗವನ್ನು ಬಹಳ ಸುಂದರವಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಯುಟಿಪಿ ವತಿಯಿಂದ ಬಯೋಡೈವರ್ಸಿಟಿ ಉದ್ಯಾನವನ ಮಾಡಲು, ನಿರ್ವಹಣೆ ಮಾಡಲು ಈ ಸ್ಥಳ ನೀಡಿದ್ದು, ಈಗಾಗಲೇ ನಗರದ 8 ರೋಟರಿ ಕ್ಲಬ್‌ಗಳು ಈ ಯೋಜನೆಯಲ್ಲಿ ಸಹಕರಿಸುತ್ತಿದ್ದಾರೆ. ಹಾಗೆ ನಗರದ ಎಲ್ಲ ಸಂಘ ಸಂಸ್ಥೆಗಳು ಮತ್ತು ಶಾಲಾ ಕಾಲೇಜಿನವರು ವಿಶೇಷ ದಿನಗಳಲ್ಲಿ ಸಸಿಗಳನ್ನು ನೆಡುತ್ತಿದ್ದಾರೆ ಎಂದರು.
Rotary Shivamogga ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ನೆಪ್ಚೂನ್ ಕಿಶೋರ್ ಮಾತನಾಡಿ, ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ವಿಶೇಷ ಸೇವಾ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಸಹಾಯಕ ಗವರ್ನರ್ ಲಕ್ಷ್ಮಣ್‌ಗೌಡ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಡಾ. ಗುಡದಪ್ಪ ಕಸಬಿ, ಡಾ. ರವಿಕಿರಣ್, ವಲಯ ಸೇನಾನಿ ಕಿರಣಕುಮಾರ್, ಮಾಜಿ ಅಧ್ಯಕ್ಷ ಎನ್.ಎಚ್.ಶ್ರೀಕಾಂತ್, ಅರುಣ್ ದೀಕ್ಷಿತ್, ಮಂಜುನಾಥ ರಾವ್ ಕದಂ, ಎಂ.ಎಲ್.ಪ್ರತಾಪ್, ಎ.ಒ.ಮಹೇಶ್, ಗಣೇಶ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Rotary Club ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವುದು ಅವಶ್ಯ-ಬಿ.ಬಸವರಾಜ್

0

Rotary Club ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ನೆರವು ನೀಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಊಟದ ತಟ್ಟೆ ಹಾಗೂ ಕೈ ಲೋಟ ಮತ್ತು ಲೇಖನ ಸಾಮಗ್ರಿ ವಿತರಿಸಿ ಮಾತನಾಡಿ, ಮಕ್ಕಳಿಗೆ ಅಗತ್ಯ ವಸ್ತುಗಳನ್ನು ರೋಟರಿ ಕ್ಲಬ್ ಸೆಂಟ್ರಲ್ ಸದಸ್ಯ ನಾರಾಯಣಮೂರ್ತಿ ನೀಡಿದ್ದು, ಇದೇ ರೀತಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ದಾನಿಗಳು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ ನಾರಾಯಣ ಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರ ಸೇವಾ ಕಾರ್ಯಗಳು ನಡೆಯುತ್ತಿದ್ದು, ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಲ್ಲಿ ಸದಸ್ಯರಾಗಿರುವುದು ಹೆಮ್ಮೆ ಎಂದು ತಿಳಿಸಿದರು.
ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಜಿಲ್ಲಾ ಕಾರ್ಯಕ್ರಮವಾದ ಶಿಕ್ಷಣದ ಅಡಿಯಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲೆಗಳ ಕುಂದು ಕೊರತೆಗಳನ್ನು ಪರಿಹರಿಸಲು ಶ್ರಮಿಸುತ್ತಿದೆ ಎಂದರು.
ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.
Rotary Club ಕಾರ್ಯದರ್ಶಿ ಜಯಶೀಲಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೊಟೊಜಿ, ಧರ್ಮೇಂದ್ರ ಸಿಂಗ್, ಗುರುರಾಜ್, ರಮೇಶ, ಸಂತೋಷ್, ಮೋಹನ್, ಗೀತಾ ಜಗದೀಶ್, ಜ್ಯೋತಿ ಶ್ರೀರಾಮ್, ದೀಪಾ ಶೆಟ್ಟಿ, ವಿನುತ ಅಶ್ವಿನ್ ಹಾಗೂ ಆನ್ ಕ್ಲಬ್ ಕಾರ್ಯದರ್ಶಿ ಮಥುರಾ ಧನಂಜಯ್ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

K. S. Eshwarappa ಶಿವಮೊಗ್ಗ ಕಾರ್ನಿವಲ್ ಅಂತಹ ವಸ್ತು ಪ್ರದರ್ಶನಗಳು ಮಹಿಳಾ ಸಬಲೀಕರಣಕ್ಕೆ ಪೂರಕ- ಕೆ.ಎಸ್.ಈಶ್ವರಪ್ಪ

0

K. S. Eshwarappa ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ನಗರದ ಶ್ರೀ ಸಾಯಿ ಇವೆಂಟ್ಸ್ ಪ್ರೆಸೆಂಟ್ಸ್ ಹಾಗೂ ಜೆಸಿಐ ಶಿವಮೊಗ್ಗ ಭಾವನ ಸಹಯೋಗದೊಂದಿಗೆ ಶುಭ ಮಂಗಳ ಸಮುದಾಯ ಭವನದಲ್ಲಿ ನಡೆಯುತ್ತಿರುವ ‘ಶಿವಮೊಗ್ಗ ಕಾರ್ನಿವಲ್ ‘ ವಸ್ತು ಪ್ರದರ್ಶನವನ್ನು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ. ಎಸ್. ಈಶ್ವರಪ್ಪ ನವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಈ ರೀತಿಯ ಶಿವಮೊಗ್ಗ ಕಾರ್ನಿವಲ್ ಅಂತಹ ವಸ್ತು ಪ್ರದರ್ಶನಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾದ ಬೆಳವಣಿಗೆಗಳು ಜೆಸಿಐ ಶಿವಮೊಗ್ಗ ಭಾವನ ಸಂಸ್ಥೆಯು ವಿಶೇಷವಾಗಿ ಮಹಿಳೆಯರಿಗೆ ವಿನೂತನ ರೀತಿಯ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು ಶ್ರೀ ಸಾಯಿ ಇವೆಂಟ್ಸ್ ರವರ ಸಹಯೋಗದೊಂದಿಗೆ ಈ ಎರಡು ದಿನಗಳ ಕಾಲ ನಡೆಯುತ್ತಿರುವ ಅದ್ಭುತವಾದ ವಸ್ತು ಪ್ರದರ್ಶನವು ಯಶಸ್ವಿಯಾಗಲೆಂದು ಶುಭ ಹಾರೈಸಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷರಾದ ಜೆಸಿ ರೇಖಾ ರಂಗನಾಥ್ ವಹಿಸಿದ್ದರು. K. S. Eshwarappa ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜೆಸಿಐ ವಲಯ ಅಧ್ಯಕ್ಷರಾದ ಗೌರೀಶ್ ಭಾರ್ಗವ, ಯುವ ಮುಖಂಡರಾದ ಹೆಚ್‌.ಪಿ.ಗಿರೀಶ್, ಸಮಾಜ ಸೇವಕಿ ಪುಷ್ಪಾ ಶೆಟ್ಟಿ, ನಗರದ ಪ್ರಖ್ಯಾತ ವೈದ್ಯರುಗಳಾದ ಡಾ.ರಾಹುಲ್, ಡಾ.ಸಂಧ್ಯಾ, ಡಾ. ವಿದ್ಯಾ, ಡಾ ಸೌಮ್ಯ ರಾಣಿ, ವಕೀಲರಾದ ಅಲಿಯ ಶರಾವತಿ ಮಹಿಳಾ ಸಂಘದ ಅಧ್ಯಕ್ಷರಾದ ಶಶಿಕಲಾ, ಪ್ರಮುಖರಾದ ಭಾರತೀಯ ರಾಮಕೃಷ್ಣ, ಸಾಯಿವರಂ ನ ಮಾಲೀಕರಾದ ಪ್ರಮೀಳಾ, ಸಾಯಿ ಇವೆಂಟ್ಸ್ನ ಸೋಮೇಶ್ ಸಿಹಿಮೊಗ್ಗೆ , ರಾಜೇಶ್ವರಿಸೋಮೇಶ್ , ರಾಜೇಶ್ , ಹೂವಿತ , ಜೆಸಿಐ ಭಾವನದ ಕಾರ್ಯದರ್ಶಿ ಚೈತ್ರ ಪಿ ಸಜ್ಜನ್ , ಹಾಗೂ ಜೆಸಿಐ ಭಾವನದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು