Tuesday, February 24, 2026
Tuesday, February 24, 2026
Home Blog Page 242

CM Siddaramaiah ಹಿರಿಯ ಪೊಲೀಸ್ ಅಧಿಕಾರಿಗಳು ಅಧೀನಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

0

CM Siddaramaiah ಉತ್ತಮ ಅಧಿಕಾರಿಗಳಿದ್ದಲ್ಲಿ ಅಂತಹ ಕಡೆ ಅಪರಾಧಗಳು ಕಡಿಮೆಯಿರುವುದು ಗಮನಾರ್ಹ. ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ.
ಹಿರಿಯ ಅಧಿಕಾರಿಗಳು ಕೆಳ ಮಟ್ಟದ ಪೊಲೀಸ್ ಅಧಿಕಾರಿಗಳ ಜೊತೆಗೆ ಉತ್ತಮವಾದ ಬಾಂಧವ್ಯವನ್ನು ಇಟ್ಟುಕೊಂಡು ಕೆಲಸ ಮಾಡುವುದು ಒಳ್ಳೆಯದು. ಹಿರಿಯ ಅಧಿಕಾರಿಗಳು ಆಗಾಗ್ಗೆ ಪೋಲೀಸ್ ಠಾಣೆಗೆ ಭೇಟಿ ನೀಡಬೇಕು. ಇತರೆ ಇಲಾಖೆಗಳಿಗೆ ಹೋಲಿಸಿದರೆ ಪೊಲೀಸ್ ಇಲಾಖೆಯಲ್ಲಿ ಶ್ರೇಣಿ ವ್ಯವಸ್ಥೆ ಹೆಚ್ಚಿದೆ. ಶಿಸ್ತು ಕೂಡ ಹೆಚ್ಚಿದೆ. ನೀವು ಮನಸ್ಸು ಮಾಡಿದರೆ ಅಪರಾಧಗಳು ತಾನಾಗಿಯೇ ಕಡಿಮೆಯಾಗಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೋಮುಗಲಭೆಗಳು ಆಗಾಗ್ಗೆ ನಡೆಯುತ್ತಲೇ ಇರುವುದರಿಂದ ಕರಾವಳಿಯಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಕೋಮುಗಲಭೆಗಳನ್ನು ಹತ್ತಿಕ್ಕುವುದು ಅಗತ್ಯವಾಗಿ ಆಗಬೇಕಿದೆ. ಕೋಮುಗಲಭೆಗಳು ನಡೆಯಬಾರದು. ಅದು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅದಕ್ಕಾಗಿ ಪ್ರಾರಂಭದಲ್ಲಿಯೇ ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ ಎಂದಿದ್ದಾರೆ.

CM Siddaramaiah ಇತ್ತೀಚೆಗೆ ನಡೆದ ಪೊಲೀಸ್ ಸಮ್ಮೇಳನದಲ್ಲಿಯೂ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. 2023 ಕ್ಕೆ ಹೋಲಿಸಿದರೆ ಸೈಬರ್ ಅಪರಾಧಗಳು 2024 ರಲ್ಲಿ ಹೆಚ್ಚಾಗಿವೆ. ಕೊಲೆ, ದರೋಡೆ, ಸರಗಳ್ಳತನ ಮುಂತಾದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಾದಕ ವಸ್ತುಗಳಿಂದ ನಮ್ಮ ಯುವ ಪೀಳಿಗೆ ಹಾಳಾದರೆ ಭವಿಷ್ಯ ಹಾಳಾಗುತ್ತದೆ. ಪೊಲೀಸರನ್ನು ಕಂಡರೆ ನಾಗರಿಕರಿಗೆ ಭಯ ಹಾಗೂ ಸ್ನೇಹ ಎರಡೂ ಇರಬೇಕು. ಪೋಲಿಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ನಾಗರಿಕರೊಂದಿಗೆ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು, ಆಗ ಪರಿಹಾರಗಳು ಹೊಳೆಯುತ್ತವೆ. ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು. ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದ್ದಾರೆ.

Chamber Of Commerce Shivamogga ಮಣ್ಣು,ಲೋಹ, ವೈದ್ಯಕೀಯ,ವಾಣಿಜ್ಯ ,ಕೈಗಾರಿಕೆ & ಆಸ್ಪತ್ರೆಗೆ ಸಂಬಂಧಿಸಿದ ಲ್ಯಾಬ್ ಗಳು ಎನ್ಎಬಿಎಲ್ ಮಾನ್ಯತೆ ಪಡೆಯಬೇಕು- ಬಿ.ಗೋಪಿನಾಥ್

0

Chamber Of Commerce Shivamogga ವಾಣಿಜ್ಯ, ಕೈಗಾರಿಕೆ ಮತ್ತು ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ಪ್ರಯೋಗಾಲಯಗಳು ಎನ್‌ಎಬಿಎಲ್ ಮಾನ್ಯತೆ ಪಡೆಯುವುದು ಅತ್ಯಂತ ಮುಖ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಎನ್‌ಎಬಿಎಲ್ ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಎನ್‌ಎಬಿಎಲ್ ಮಾನ್ಯತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎನ್‌ಎಬಿಎಲ್ ಸ್ವಾಯತ್ತ ಮಂಡಳಿ ಆಗಿದ್ದು, ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಡಿ ಬರುತ್ತದೆ. ಮಣ್ಣು, ಮೆಟಲ್, ಮೆಡಿಕಲ್, ವಾಣಿಜ್ಯ, ಕೈಗಾರಿಕೆ, ಆಸ್ಪತ್ರೆಗೆ ಸಂಬಂಧಿಸಿದ ಎಲ್ಲ ಪ್ರಯೋಗಾಲಯಗಳು ಎನ್‌ಎಬಿಎಲ್ ಮಾನ್ಯತೆ ಪಡೆಯುವುದರಿಂದ ವಿಶ್ವಾಸಾರ್ಹತೆ ಹೆಚ್ಚುತ್ತದೆ ಎಂದು ತಿಳಿಸಿದರು.
ಎನ್‌ಎಬಿಎಲ್ ಮಾನ್ಯತೆಯಿಂದ ವ್ಯವಹಾರ ವೃದ್ಧಿಯಾಗಿ ಯುವಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನ ಮತ್ತು ಸೇವೆ ದೊರೆಯುತ್ತದೆ. ಜಿಲ್ಲೆಯ ಪ್ರಯೋಗಾಲಯಗಳು ಎನ್‌ಎಬಿಎಲ್ ಮಾನ್ಯತೆ ಪಡೆಯುವುದಕ್ಕೆ ಸಹಕರಿಸಲು ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘ ಬದ್ಧವಾಗಿದೆ. ಎಂದು ಹೇಳಿದರು.
ಎನ್‌ಎಬಿಎಲ್ ಪ್ರಾಂತೀಯ ನಿರ್ದೇಶಕ ಆರ್ ಶ್ರೀಕಾಂತ್ ಮಾತನಾಡಿ, ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯ ಮಂಡಳಿಯಲ್ಲಿ ಮಾನ್ಯತೆ ಪಡೆದ ಪ್ರಯೋಗಾಲಯಗಳು ಅಂತರಾಷ್ಟ್ರೀಯ ಮಾನದಂಡ ಮತ್ತು ಗುಣಮಟ್ಟದ ನಿರ್ವಹಣಾ ವ್ಯವಸ್ಥೆಯ ಅನುಸರಣೆ ಹೊಂದಿರುತ್ತದೆ. ಆದ್ದರಿಂದ ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಭಾರತದಲ್ಲಿ 9,400ಕ್ಕೂ ಹೆಚ್ಚು ಪ್ರಯೋಗಾಲಯಗಳು ಎನ್‌ಎಬಿಎಲ್ ಮಾನ್ಯತೆ ಪಡೆದ ಪರಿಣಾಮವಾಗಿ ಸ್ವದೇಶ ಮತ್ತು ವಿದೇಶದಲ್ಲಿ ವ್ಯವಹಾರ ಮಾಡುತ್ತ ಉದ್ಯೋಗವನ್ನು ಸೃಷ್ಟಿಸಿ ಸಂಪತ್ತು ವೃದ್ಧಿಸಿಕೊಂಡಿವೆ. ಮಾನ್ಯತಾ ಪರವಾನಗಿ ನಾಲ್ಕು ವರ್ಷ ಇರಲಿದ್ದು, ಪ್ರತಿ ವರ್ಷ ರಿನಿವಲ್ ಮಾಡಬೇಕಾಗುತ್ತದೆ ಎಂದು ಹೇಳಿದರು.
Chamber Of Commerce Shivamogga ಎನ್‌ಎಬಿಎಲ್ ಬೆಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರವನ್ನು ಹೊಂದಿದ್ದು, ದಕ್ಷಿಣ ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಸರ್ಕಾರಿ ಸ್ವಾಮ್ಯದ ಪ್ರಯೋಗಾಲಯಗಳು ಮಾನ್ಯತೆ ಪಡೆಯುವಲ್ಲಿ ಮುಂಚೂಣಿಯಲ್ಲಿವೆ. ಖಾಸಗಿ ಪ್ರಯೋಗಾಲಯಗಳು ಸಹ ಈ ದಿಸೆಯಲ್ಲಿ ಮುಂದೆ ಬರಬೇಕು ಎಂದರು.
ಎನ್‌ಎಬಿಎಲ್ ಸಹಾಯಕ ಡೈರೆಕ್ಟರ್ ಶ್ರೀರಾಮ್, ಕೋಆರ್ಡಿನೇಟರ್ ಚೈತ್ರ ಎಂ, ಶಂಕರ್ ಪೂಜಾರಿ ಅವರು ಎನ್‌ಎಬಿಎಲ್ ಮಾನ್ಯತೆ ಬಗ್ಗೆ, ಆನ್ ಲೈನ್ ನೋಂದಣಿ ಪ್ರಕ್ರಿಯೆ ಬಗ್ಗೆ, ಮಾನ್ಯತೆ ತೆಗೆದುಕೊಂಡ ನಂತರ ಪ್ರಯೋಗಾಲಯಗಳು ಅಂತರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಎನ್‌ಎಬಿಎಲ್ ಪ್ರಕ್ರಿಯೆಗಳನ್ನು ಪಾಲಿಸುವ ಬಗ್ಗೆ ರೂಪುರೇಷೆ ವಿವರಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಕಾರ್ಯಕ್ರಮ ಸಮಿತಿ ಚೇರ್ಮನ್ ಶರತ್ ನಿರ್ದೇಶಕರಾದ ಪಿ.ರುದ್ರೇಶ್, ಎಸ್.ಎಸ್.ಉದಯಕುಮಾರ್, ಬಿ.ಸುರೇಶ್‌ಕುಮಾರ್, ಪ್ರದೀಪ್ ವಿ ಎಲಿ, ವಿನೋದ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ವಾಸುದೇವ್, ಕಮಲಾಕ್ಷರಪ್ಪ, ಡಾ. ವಿನಯಾ ಶ್ರೀನಿವಾಸ್, ಕೈಗಾರಿಕೆ, ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

Country Club Shivamogga ವ್ಯಾಪಾರವೃದ್ಧಿಗೆ ಆರ್ ಎಂಬಿ ಸಂಸ್ಥೆಯ ನೆರವು ಪಡೆಯಿರಿ- ಕೆ.ಫಾಲಾಕ್ಷ

0

Country Club Shivamogga ವ್ಯಾಪಾರಸ್ಥರಿಗೆ ಉದ್ಯಮ ವಹಿವಾಟು ವಿಸ್ತರಿಸಿಕೊಳ್ಳಲು ಆರ್‌ಎಂಬಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.

ಶಿವಮೊಗ್ಗ ನಗರದ ಕಂಟ್ರಿ ಕ್ಲಬ್‌ನಲ್ಲಿ ಆಯೋಜಿಸಿದ್ದ ರೋಟರಿ ಆರ್‌ಎಂಬಿ ಶಿವಮೊಗ್ಗ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಶಿವಮೊಗ್ಗ ಜಿಲ್ಲೆ ಜತೆಯಲ್ಲಿ ಬೇರೆ ಎಲ್ಲ ಕಡೆ ಅರ್‌ಎಂಬಿ ಸ್ಥಾಪಿಸಬೇಕು. ಇದರ ಸದುಪಯೋಗ ನಮ್ಮ ಬೇರೆ ಜಿಲ್ಲೆಯಲ್ಲಿರುವ ರೋಟೆರಿ ಸದಸ್ಯರಿಗೂ ಸಿಗುವಂತೆ ಆಗಬೇಕು ಎಂದು ತಿಳಿಸಿದರು.

ಆರ್‌ಎಂಬಿ ಶಿವಮೊಗ್ಗ ಸ್ಥಾಪಕ ಅಧ್ಯಕ್ಷ ವಸಂತ್ ಹೋಬಳಿದಾರ್ ಮಾತನಾಡಿ ಆರ್‌ಎಂಬಿ ಸಂಸ್ಥೆ ನಡೆದು ಬಂದ ದಾರಿ ಹಾಗೂ ಅದರ ಕಾರ್ಯವೈಖರಿ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ನಿಕಟಪೂರ್ವ ಅಧ್ಯಕ್ಷ ಮೋಹನ್ ಎಚ್.ಎಸ್. ಮಾತನಾಡಿ ಅವರ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲ ಸದಸ್ಯರಿಗೂ ಕೃತಜ್ಞತೆ ತಿಳಿಸಿದರು.

ರೋಟರಿ ಆರ್‌ಎಂಬಿ ಶಿವಮೊಗ್ಗದ ನೂತನ ಅಧ್ಯಕ್ಷರಾಗಿ ಕಿರಣ್ ಕುಮಾರ್ ಜಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಎಲ್ಲ ಸದಸ್ಯರ ಸಹಕಾರ ಕೇಳಿ ಅವರ ಕಾರ್ಯಕಾರಿ ಮಂಡಳಿಯನ್ನು ಸಭೆಗೆ ಪರಿಚಯಿಸಿದರು.
ಉಪಾಧ್ಯಕ್ಷರಾಗಿ ಮಂಜುನಾಥ್, ಕಾರ್ಯದರ್ಶಿಯಾಗಿ ಮಂಜುನಾಥ್ ರಾವ್ ಕದಂ, ಸಹ ಕಾರ್ಯದರ್ಶಿಯಾಗಿ ಎಸ್ ಪಿ ಶಂಕರ್, ಖಜಾಂಚಿಯಾಗಿ ನೆಪ್ಚೂನ್ ಕಿಶೋರ್ ಕುಮಾರ್, ನಿರ್ದೇಶಕರಾಗಿ ಜಿ.ವಿಜಯಕುಮಾರ್, ಬಸವರಾಜ.ಬಿ, ಚಂದ್ರು ಜೆಪಿ, ಗೋವರ್ಧನ್, ಆರ್ ಎಂ ಬಿ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Country Club Shivamogga ನಿಕಟಪೂರ್ವ ಕಾರ್ಯದರ್ಶಿ ರವೀಂದ್ರನಾಥ್ ಐತಾಳ್, ವಲಯ 11ರ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣಗೌಡ, ವಲಯ 10ರ ಸಹಾಯಕ ಗವರ್ನರ್ ಕೆಪಿ.ಶೆಟ್ಟಿ, ನೂತನ ಕಾರ್ಯದರ್ಶಿ ಮಂಜುನಾಥ್ ರಾವ್ ಕದಂ, ವಲಯ 10 ಮತ್ತು 11ರ ನೂತನವಾಗಿ ಅಧಿಕಾರ ಸ್ವೀಕಾರ ಮಾಡಿರುವ ಎಲ್ಲಾ ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Yuvanidhi Scheme ಯುವನಿಧಿ 2025 ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿ ಅಭಿಯಾನ- ಮಾಹಿತಿ

0

Yuvanidhi Scheme ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು ಹಾಗೂ ಸ್ವಯಂ ಉದ್ಯೋಗ ಮಾಡದವರು, ಉನ್ನತ ವ್ಯಾಸಂಗ ಮುಂದುವರೆಸದೇ ಇರುವವರು ನೋಂದಣಿ ಮಾಡಿಕೊಳ್ಳುವುದು.

ಮಾಹೆಯಾನ ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ನೀಡಲಾಗುವುದು.
ಆರ್ಹ ಯುವಜನರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಆಗಸ್ಟ್ 07 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Yuvanidhi Scheme ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ದೂ.ಸಂ.: 08182-255293/ 9380663606 ಇವರುಗಳನ್ನು ಸಂಪರ್ಕಿಸಬಹುದು.

Shimoga District Horticulture Department ಜೇನು ಸಾಕಾಣಿಕೆ ಸಹಾಯಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ

0

Shimoga District Horticulture Department ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Shimoga District Horticulture Department ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ದೂ.ಸಂ: 08182-279415 /9900046087, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/ 9900046117, ಸಾಗರ- 08183-295124/ 9449177200, ಹೊಸನಗರ-08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.

Department of Fisheries ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನ

0

Department of Fisheries ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ರಾಜ್ಯ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಮತ್ತು ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ ಜಿಲ್ಲಾ ಪಂಚಾಯತ್ ಯೋಜನೆಗಳಿಗೆ http://shimoga.nic.in ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ದಿ:17/08/2025 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Department of Fisheries ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಹಾಗೂ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.

District Minority Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಪಡೆಯಲು ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಪ್ರಕಟಣೆ

0

District Minority Welfare Department 2025-26 ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಪಿ.ಯು.ಸಿ. ಹಾಗೂ ಸಮಾನಾಂತರ ಕೋರ್ಸ್, ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಆಗಸ್ಟ್ 02 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9036866642, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

Rotary Club ರೋಟರಿಯಿಂದ ಶಿಸ್ತುಬದ್ಧ ಜೀವನಶೈಲಿ – ಡಾ.ಪಿ.ನಾರಾಯಣ್

0

Rotary Club ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜತೆಯಲ್ಲಿ ಶಿಸ್ತುಬದ್ಧ ಜೀವನಶೈಲಿ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ಹಿರಿಯ ವೈದ್ಯ ಡಾ. ಪಿ.ನಾರಾಯಣ್ ಹೇಳಿದರು.

ಶಿವಮೊಗ್ಗ ನಗರದ ಮಲೆನಾಡು ಗೇಟ್ ವೇ ಸಭಾಂಗಣದಲ್ಲಿ ಆಯೋಜಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, 20ಕ್ಕೂ ಹೆಚ್ಚು ಹೊಸ ಸದಸ್ಯರನ್ನು ಸಭೆಗೆ ಪರಿಚಯಿಸಿರುವುದು ತುಂಬಾ ಸಂತಸವಾಗಿದೆ. ಹೊಸ ಸದಸ್ಯರು ಮೀಟಿಂಗ್ ಹಾಜರಾಗುವ ಮೂಲಕ ರೋಟರಿ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜಮುಖಿ ಕೆಲಸಲದಲ್ಲಿ ಸದಾ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ನೂತನ ಅಧ್ಯಕ್ಷರಾಗಿ ಪ್ರಕಾಶ್ ಮೂರ್ತಿ.ಎಂ.ಆರ್ ಹಾಗೂ ಕಾರ್ಯದರ್ಶಿಯಾಗಿ ರಶ್ಮಿ ಆರ್.ಎಸ್ ಅವರು ಅಧಿಕಾರ ಸ್ವೀಕರಿಸಿದರು. ಡಾ. ಪಿ.ನಾರಾಯಣ್ ನೂತನ ಅಧ್ಯಕ್ಷರಿಗೆ ಪ್ರತಿಜ್ಞಾವಿಧಿ ಭೋದಿಸಿದರು.

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಪ್ರಕಾಶ್ ಮೂರ್ತಿ ಎಂ.ಆರ್ ಮಾತನಾಡಿ, ಈ ದಿನ ನಾನು ಅಧ್ಯಕ್ಷರಾಗಿದ್ದು ಸುದಿನ, ಡಾ. ಪಿ.ನಾರಾಯಣ್ ಪ್ರತಿಜ್ಞಾವಿಧಿ ಬೋಧಿಸಿತ್ತಿದ್ದು ಅತ್ಯಂತ ಸಂತೋಷ ದಿನ. ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಹೊಸ ಸದಸ್ಯರ ಪರಿಚಯಿಸುತ್ತಿದ್ದೇವೆ ಎಂದರು. ಮೂರು ಇಂಟರ‍್ಯಾಕ್ಟ್ ಕ್ಲಬ್, ಎರಡು ರೋಟರ‍್ಯಾಕ್ಟ್ ಕ್ಲಬ್ ಆರಂಭಿಸುವುದಾಗಿ ಘೋಷಿಸಿದರು.

ಇಂಟರ‍್ಯಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಿಸಲಾಯಿತು.
ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, 20ಕ್ಕೂ ಹೆಚ್ಚು ರೋಟರಿ ಸದಸ್ಯರು ಬಂದಿರುವುದು ನಿಜಕ್ಕೂ ಖುಷಿ ತರಿಸಿದೆ. ಸದಸ್ಯರು ಹೆಚ್ಚಿನ ಸೇವಾ ಕಾರ್ಯಗಳಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.

Rotary Club ರಂಗರಾಜನ್, ನಿಕಟ ಪೂರ್ವ ಅಧಕ್ಷ ಮುಸ್ತಕ್ ಆಲಿ ಷಾ ಹಾಗೂ ಕಾರ್ಯದರ್ಶಿ ಶ್ರೀಕಾಂತ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿಕಾರಿಪುರ ಆಸ್ಪತ್ರೆಗೆ ಮೂಳೆ & ಕೀಲು ತಜ್ಞವೈದ್ಯರನ್ನ ಕೂಡಲೇ ನೇಮಿಸಲು ಆಗ್ರಹಿಸಿ ಮನವಿ

0

ಶಿಕಾರಿಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮತ್ತು ಮೂಳೆ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಹಾಗೂ ಸಾರ್ವಜನಿಕರು ಖಾಸಗಿ ಆಸ್ಪತ್ರೆ ಅವಲಂಬಿತರಾಗುವಂತಾಗಿದೆ ಕೂಡಲೇ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ ಮಾತನಾಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರ ಅವಧಿಯಲ್ಲಿ ಕೋಟ್ಯಾಂತರ ಅನುದಾನ ಮಾಡಿ ತಾಲೂಕು ಮಟ್ಟದ ಆಸ್ಪತ್ರೆಯನ್ನು ಜಿಲ್ಲಾ ದರ್ಜೆಗೆ ಏರಿಸಿ ಸುಸಜ್ಜಿತ ಕಟ್ಟಡ ಹಾಗೂ ಡಯಾಲಿಸಿಸ್ ಸೇರಿದಂತೆ ನುರಿತ ವೈದ್ಯರನ್ನು ನೇಮಿಸುವ ಮೂಲಕ ಕೇವಲ ಶಿಕಾರಿಪುರ ಮಾತ್ರವಲ್ಲದೆ ಸುತ್ತಮುತ್ತ ತಾಲೂಕಿನ ಜನತೆ ಹಾಗೂ ಅಕ್ಕಪಕ್ಕದ ಜಿಲ್ಲೆಯವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಿರುತ್ತಾರೆ. ಎಲ್ಲಾ ರೀತಿಯ ಸೌಲಭ್ಯಗಳಿದ್ದರೂ ಕೂಡ ವೈದ್ಯರ ಕೊರತೆಯಿಂದ ಅನಾನುಕೂಲವಾಗಿದೆ ಎಂದು ಆರೋಪಿಸಿದರು.
ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ ಮಾತನಾಡಿ ಮೂರು ವರ್ಷಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ರೋಗದ ತಜ್ಞ ವೈದ್ಯರಿಲ್ಲದೆ ರೋಗಿಗಳು, ಬಡವರು, ಸಾಲ ಮಾಡಿ ಹೆಚ್ಚಿನ ಹಣ ತೆತ್ತು ಶಿವಮೊಗ್ಗ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಒದಗಿ ಬಂದಿದೆ ಎಂದರು.
ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ರಘುವೀರ್ ಸಿಂಗ್ ರವರು ಮಾತನಾಡಿ ಜನಪ್ರತಿನಿಧಿಗಳ ಬೇ ಜವಾಬ್ದಾರಿಯಿಂದ ಹಾಗೂ ಜಿಲ್ಲಾ ಆಡಳಿತದ ಬೇಜವಾಬ್ದಾರಿಯಿಂದ ಈ ರೀತಿಯ ಅನಾನುಕೂಲವಾಗಿದೆ ಕೂಡಲೇ ಸರಿಪಡಿಸುವಂತೆ ಆಗ್ರಹಿಸಿದರು.
ಕೂಡಲೇ ವೈದ್ಯರನ್ನು ನೇಮಿಸದಿದ್ದರೆ ಜೈ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶಿಕಾರಿಪುರ ತಾಲೂಕು ಆಸ್ಪತ್ರೆಯ ಆವರಣದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಮುಖಂಡ ವಿನೋದ್, ಹಾಗೂ ಶಿಕಾರಿಪುರ ತಾಲೂಕಿನ ಜಯ ಕರ್ನಾಟಕ ಜನಪರ ವೇದಿಕೆ ಮುಖಂಡರಾದ ಅಕ್ರಂ ಆಲಿ, ಮಟ್ಟಿಕೋಟೆ ಮಾಲತೇಶ್, ಇಮ್ರಾನ್, ನವೀನ್, ಸುನಿಲ್, ಸೈಯದ್, ಮಧು, ವೆಂಕಟೇಶ್ ಸೇರಿದಂತೆ ಹಲವರಿದ್ದರು.

Klive Special Article ಕಾರ್ಮೆಲ್ ಮಾತೆಯ ಮಹೋತ್ಸವ

0

ಲೇಖನ: ರಾಕೇಶ್ ಡಿಸೋಜ
ಮೊಬೈಲ್: ೯೪೪೮೩ ೪೩೨೧೧

Klive Special Article ಆಕಾಶವನ್ನೆಲ್ಲಾ ಆವರಿಸಿದ ಕಾರ್ಮೋಡ, ಮಿಂಚು, ಗುಡುಗು, ಸಿಡಿಲು, ರೊಂಯ್ಯನೆ ಬೀಸುವ ಗಾಳಿಯೊಂದಿಗೆ ಧೋಽ.. ಎಂದು ಸುರಿಯುವ ಮಳೆ ಇದು ಮುಂಗಾರು ಮಳೆಗಾಲದಲ್ಲಿ ಕಾಣುವ ಪ್ರಮುಖ ದೃಶ್ಯಾವಳಿ. ಎಲ್ಲೆಡೆ ಮಳೆಯದ್ದೇ ಕಾರುಬಾರು.

ಹೀಗೆ ಜೂನ್ ತಿಂಗಳ ಮೊದಲ ವಾರದಲ್ಲಿ ನೈರುತ್ಯ ಮುಂಗಾರಿನ ಮೂಲಕ ದೇಶಾದ್ಯಂತ ೪ ತಿಂಗಳ ಪಯಣಕ್ಕೆ ಇದು ಮುನ್ನುಡಿ ಬರೆಯುತ್ತಿದೆ. ಅದೇ ರೀತಿ ರಾಜ್ಯದ ಮಳೆನಾಡು ಭಾಗದಲ್ಲಿ ಪ್ರತಿ ವರ್ಷ ಅದರ ಅಬ್ಬರ ಜೋರಾಗಿಯೇ ಇರುತ್ತಿತ್ತು. ಈ ರೀತಿಯ ಮುಂಗಾರು ಮಳೆಯ ಹನಿಗಳನ್ನು ಕಣ್ತುಂಬಿಕೊಳ್ಳುವ ಜೊತೆ ಜೊತೆಗೆ ತುಂಗೆಯ ತಟದಲ್ಲಿ ವಾಸಿಸುತ್ತಿದ್ದ ಜನತೆಗೆ ನೆರೆಯ ಭಯ ಸದಾ ಕಾಡುತ್ತಿರುತ್ತಿತ್ತು.

ಇಲ್ಲಿನ ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ೧೯೨೮ರಿಂದ ಈಚೆಗೆ ಜುಲೈ ೧೬ರಂದು ಮಳೆಯ ಆರ್ಭಟದ ನಡುವೆಯೇ ಕಾರ್ಮೆಲ್ ಮಾತೆಯ ಉತ್ಸವವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸತೊಡಗಿದರು.

ಕಾರ್ಮೆಲ್ ಮಾತೆಯ ಉತ್ಸವದ ಹಿನ್ನೆಲೆ: ಜು.೧೬; ಈ ದಿನ ವಿಶ್ವದೆಲ್ಲೆಡೆಯ ದೇವ ಮಾತೆಯ ಭಕ್ತರಿಗೆ ಶುಭದಿನ. ಅಂದು ಕಾರ್ಮೆಲ್ ಬೆಟ್ಟದ ಮೇಲೆ ದೇವ ಮಾತೆ ಪ್ರತ್ಯಕ್ಷವಾಗಿ ಮನುಕುಲಕ್ಕೆ ದರ್ಶನ ನೀಡಿದ್ದರು. ಈ ಕಾರಣದಿಂದಲೇ ವಿಶ್ವದೆಲ್ಲೆಡೆ ಕಾರ್ಮೆಲ್ ಮಾತೆಯ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಅಂತೆಯೇ ಮಲೆನಾಡಿನ ಹೃದಯ ಭಾಗವಾದ ಶಿವಮೊಗ್ಗ ನಗರದಲ್ಲಿ ಕ್ರಿ.ಶ. ೧೯೨೮ರಲ್ಲಿ ಇಲ್ಲಿನ ಜೀವನದಿ ತುಂಗೆಯು ಉಕ್ಕಿ ಹರಿದು ನೂರಾರು ಮಂದಿ ಜನಸಾಮಾನ್ಯರು, ಸಾವಿರಾರು ಪ್ರಾಣಿಪಕ್ಷಿಗಳು ಹಾಗೂ ಅಪಾರ ಪ್ರಮಾಮದ ಆಸ್ತಿಪಾಸ್ತಿ ನಾಶವಾಗಿತ್ತು.
ಹೀಗೆ ಜಲಪ್ರಳಯವಾದಾಗ ನಗರದ ಹೃದಯಭಾಗದಲ್ಲಿದ್ದ ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ಜಾತಿ-ಧರ್ಮದ ಬೇಧವಿಲ್ಲದೆ ಪ್ರವಾಹ ಪೀಡಿತರಿಗೆ ಆಶ್ರಯ ನೀಡಿ, ಚರ್ಚ್ನ ಅಂದಿನ ಧರ್ಮಕೇಂದ್ರದ ಗುರುಗಳು ಮತ್ತು ಮೇರಿ ಇಮ್ಯಾಕ್ಯುಲೇಟ್ ಕನ್ಯಾಸ್ತಿ ಮಠದ ಸಿಸ್ರ‍್ಸ್ಗಳು ನಿರಾಶ್ರಿತರಿಗೆ ಊಟೋಪಚಾರದ ವ್ಯವಸ್ಥೆಯ ಜೊತೆಗೆ ಅನಾರೋಗ್ಯ ಪೀಡಿತರಿಗೆ ಶುಶ್ರೂಷೆಯನ್ನೂ ಸಹ ನೀಡುತ್ತಿದ್ದರು. ಆದರೆ ಪ್ರಕೃತಿಯ ಮುನಿಸು ಕಡಿಮೆಯಾಗದೆ ದಿನದಿಂದ ದಿನಕ್ಕೆ ಮಳೆಯ ಆರ್ಭಟ ಹೆಚ್ಚಿತು. ಈ ಕಾರಣದಿಂದ ತುಂಗೆಯ ಒಡಲು ತುಂಬಿ, ಜೀವನದಿಯಲ್ಲಿ ಪ್ರವಾಹ ಉಂಟಾಯಿತು.

ಈ ಸಂದರ್ಭದಲ್ಲಿ ಚರ್ಚ್ನಲ್ಲಿ ಆಶ್ರಯ ಪಡೆದಿದ್ದ ನೆರೆ ನಿರಾಶ್ರಿತರು ಸೇರಿದಂತೆ ಜಾತಿ-ಧರ್ಮದ ಬೆಧವಿಲ್ಲದೆ ನಗರದ ವಿವಿಧ ಸ್ಥಳಗಳಿಂದ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬಂದು ಕಾರ್ಮೆಲ್ ಮಾತೆಯ ಸನ್ನಿಧಿಯಲ್ಲಿ ಸೇರಿ ಪ್ರಕೃತಿ ವಿಕೋಪದಿಂದ ತಮ್ಮನ್ನು ರಕ್ಷಿಸಲು ಪರಿಪರಿಯಾಗಿ ಬೇಡಿಕೊಂಡು ಕಣ್ಣೀರಿಟ್ಟು ಪ್ರಾರ್ಥಿಸಿ, ಹರಕೆಹೊತ್ತರು.

ನಂತರ ಮಳೆರಾಯ ತನ್ನ ಆರ್ಭಟವನ್ನು ಕಡಿಮೆಗೊಳಿಸತೊಡಗಿದ, ಹಾಗೆಯೇ ತುಂಗೆಯ ಪ್ರವಾಹವು ನಿಧಾನವಾಗಿ ಇಳಿಯಿತು ಎಂಬ ಬಲವಾದ ನಂಬಿಕೆ ಅಂದಿನಿAದ ಇಂದಿನವರೆಗೂ ಮಾತೆಯ ಭಕ್ತರಲ್ಲಿದೆ. ಈ ಕಾರಣದಿಂದಾಗಿ ಅಂದಿನಿಂದ ಪ್ರತಿವರ್ಷವೂ ಕಾರ್ಮೆಲ್ ಮಾತೆಯ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.

ರಾಜ್ಯದ ವಿವಿಧ ಭಾಗದಿಂದ ಕ್ರೈಸ್ತರು, ಹಿಂದೂ-ಮುಸ್ಲಿಂಮರು ಕಾರ್ಮೆಲ್ ಮಾತೆಯ ಉತ್ಸವವನ್ನು ಆಚರಿಸಲು ಮಲೆನಾಡಿದ ಹೃದಯ ಭಾಗವಾದ ಶಿವಮೊಗ್ಗ ನಗರದಲ್ಲಿರುವ ಇಂದಿನ ಸೇಕ್ರೆಡ್ ಹಾರ್ಟ್ ಪ್ರಧಾನಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಕಾರ್ಮೆಲ್ ಮಾತೆಗೆ ಹೂವು, ಧೂಪ, ಮೇಣದ ಭತ್ತಿ, ದವಸ-ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿ ಧನ್ಯತಾಭಾವ ಹೊಂದುತ್ತಿದ್ದಾರೆ.

ಸೇಕ್ರೆಡ್ ಹಾರ್ಟ್ ಚರ್ಚ್ನ ವಿಶೇಷತೆ: ಶಿವಮೊಗ್ಗ ಜಿಲ್ಲೆಯು ಈ ಮೊದಲು ಚಿಕ್ಕಮಗಳೂರು ಧರ್ಮ ಪ್ರಾಂತ್ಯದ ಆಡಳಿತಕ್ಕೊಳಪಟ್ಟಿತ್ತು. ನಂತರ ನ.೧೪, ೧೯೮೮ ಅಂದಿನ ಮಹಾಧರ್ಮಾಧ್ಯಕ್ಷ (ಅರ್ಚ್ ಬಿಷಪ್)ರಾದ ಪರಮಪೂಜ್ಯ ಅಲ್ಪೋನ್ಸ್ ಮತಾಯಸ್ ಅವರು ಅದನ್ನು ಚಿಕ್ಕಮಗಳೂರು ಧರ್ಮಕ್ಷೇತ್ರದಿಂದ ಬೇರ್ಪಡಿಸಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನೊಳಗೊಂಡು ಶಿವಮೊಗ್ಗ ಧರ್ಮಕ್ಷೇತ್ರವನ್ನು ಅಸ್ಥಿತ್ವಕ್ಕೆ ತಂದರು. ಹೀಗೆ ಸ್ವತಂತ್ರವಾಗಿ ಅಸ್ಥಿತ್ವಕ್ಕೆ ಬಂದ ಶಿವಮೊಗ್ಗ ಧರ್ಮಕ್ಷೇತ್ರದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮಪೂಜ್ಯ ಇಗ್ನೇಷಿಯಸ್ ಪಿಂಟೋ ಅವರು ಧರ್ಮಾಧಿಕಾರ ಸ್ವೀಕರಿಸಿದರು.

Klive Special Article ನಂತರ ಈ ಧರ್ಮಕ್ಷೇತ್ರದ ದ್ವಿತಿಯ ಧರ್ಮಾಧ್ಯಕ್ಷರಾಗಿ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಹಾಗೂ ಪ್ರಸ್ತುತ ತೃತೀಯ ಧರ್ಮಾಧ್ಯಕ್ಷರಾಗಿ ಪರಮಪೂಜ್ಯ ಫ್ರಾನ್ಸಿಸ್ ಶೆರಾವೋ ಅವರು ಶಿವಮೊಗ್ಗ ಧರ್ಮಕ್ಷೇತ್ರದ ಪೀಠಾಧಿಕಾರಿಯಾಗಿದ್ದಾರೆ. ಈಗ ಈ ದೇವಾಲಯವು ಶಿವಮೊಗ್ಗ ಧರ್ಮಕ್ಷೇತ್ರದ ಪ್ರಧಾನಾಲಯವಾಗಿ ಮೇಲ್ದರ್ಜೆಗೇರಿದ್ದು, ಅತ್ಯಂತ ಸುಸಜ್ಜಿತವಾದ ಹಾಗೂ ವಿಶ್ವದಲ್ಲೇ ೨ನೇ ಅತಿ ದೊಡ್ಡ ಕ್ರೈಸ್ತ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸದರಿ ದೇವಾಲಯವನ್ನು ಯೇಸುವಿನ ಪವಿತ್ರ ಹೃದಯಕ್ಕೆ ಸಮರ್ಪಿಸಲಾಗಿದ್ದು, ಇಲ್ಲಿ ಪ್ರತಿ ವರ್ಷವು ಯೇಸುವಿನ ಪವಿತ್ರ ಹೃದಯದ ಹಬ್ಬ ಮತ್ತು ಕಾರ್ಮೆಲ್ ಮಾತೆಯ ಉತ್ಸವ ಎರಡನನ್ನೂ ಅದ್ದೂರಿಯಾಗಿ ಆಚರಿಸುತ್ತಿರುವುದು ಈ ದೇವಾಲಯದ ವಿಶೇಷಗಳಲ್ಲೊಂದಾಗಿದೆ.