Tuesday, February 24, 2026
Tuesday, February 24, 2026
Home Blog Page 243

Rupashree Pre Graduate College ಪ್ರಾಚೀನದಿಂದಲೂ ಸಂಸ್ಕೃತ ಭಾಷೆಗೆ ಭಾರತದಲ್ಲಿ ವಿಶೇಷ ಸ್ಥಾನ ನೀಡಲಾಗಿದೆ- ಚಂದ್ರಪ್ಪ ಎಸ್. ಗುಂಡಪಲ್ಲಿ

0

Rupashree Pre Graduate College ಪ್ರಾಚೀನಕಾಲದಿಂದಲೂ ಇರುವ ಸಂಸ್ಕೃತ ಭಾಷೆಗೆ ಭಾರತದಲ್ಲಿ ವಿಶೇಷ ಸ್ಥಾನಮಾನ ನೀಡಲಾಗಿದೆ ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು ಎಂದು ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಚಂದ್ರಪ್ಪ ಎಸ್ ಗುಂಡಪಲ್ಲಿ ಹೇಳಿದರು.

ಸಾಗರ ತಾ. ಹೆಗ್ಗೋಡಿನ ವಿ. ಸಂ. ವಿದ್ಯಾಸಂಸ್ಥೆಯ ರೂಪಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಸಂಸ್ಕೃತ ಉಪನ್ಯಾಸಕರ ವೇದಿಕೆ ವತಿಯಿಂದ ಆಯೋಜಿಸಿದ್ದ ಸಂಸ್ಕೃತ ವಿಷಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಮ್ಮಲ್ಲಿ ಸಂಸ್ಕೃತ ಭಾಷೆಯನ್ನು ದೇವ ಎಂದು ಕರೆಯಲಾಗುತ್ತದೆ ಅನೇಕ ಪ್ರಾಚೀನ ಪುರಾಣ ಗ್ರಂಥಗಳು ಸಂಸ್ಕೃತ ಭಾಷೆಯಲ್ಲಿದೆ ಯುರೋಪಿಯನ್ ದೇಶಗಳಲ್ಲಿ ಪುರಾತನ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗೆ ಇರುವ ಸ್ಥಾನ ಭಾರತದಲ್ಲಿ ಸಂಸ್ಕೃತ ಭಾಷೆಗೆ ನೀಡಲಾಗಿದೆ ಪುರಾತನ ಗ್ರಂಥಗಳ ಬಗ್ಗೆ ತಿಳಿಯಲು ನಾವು ಅದರ ಅಧ್ಯಯನ ಮಾಡಬೇಕು
ವಿದ್ಯಾರ್ಥಿಗಳು ಆಸಕ್ತಿ ವಹಿಸಿ ಅಭ್ಯಾಸ ಮಾಡಿದರೆ ಸಂಸ್ಕೃತ ವಿಷಯದಲ್ಲಿ ಶೇ 100 ಫಲಿತಾಂಶ ಪಡೆಯಬಹುದು ಎಂದರು
ಜಿಲ್ಲೆಯ ಉಪನ್ಯಾಸಕರು ಒಟ್ಟಾಗಿ ಕಾರ್ಯಾಗಾರ ಮಾಡುವುದರಿಂದ ಪರಸ್ಪರ ಸಂದೇಹ ಪರಿಹರಿಸಲು ಸಹಾಯ ಆಗಲಿದೆ ಎಂದು ಹೇಳಿದರು

ಜಿಲ್ಲಾ ಸಂಸ್ಕೃತ ಉಪನ್ಯಾಸಕರ ವೇದಿಕೆ ಅಧ್ಯಕ್ಷ ವಿದ್ವಾನ್ ದತ್ತಮೂರ್ತಿ ಭಟ್ ಮಾತನಾಡಿ ಯಾವುದೇ ಭಾಷೆ ಶ್ರೇಷ್ಠವೂ ಅಲ್ಲ ಕನಿಷ್ಠವೂ ಅಲ್ಲ ಆದರೆ ಸಂಸ್ಕೃತ ಭಾಷೆ ಎಲ್ಲಾ ಭಾಷೆಯ ಮೂಲ ಎಲ್ಲಾ ಭಾಷೆಯ ವ್ಯಾಕರಣದಲ್ಲಿ ಸಂಸ್ಕೃತ ಇದೆ ಇತ್ತೀಚೆಗೆ ಇದರ ಅಧ್ಯಯನ ಮಾಡುವರ ಸಂಖ್ಯೆ ಕಡಿಮೆ ಯಾಗಿದೆ ಹಿಂದೆ ಮೈನಾರಿಟಿ ಲಾಂಗ್ವೇಜ್ ಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗಿತ್ತು ಹತ್ತು ವಿದ್ಯಾರ್ಥಿಗಳು ಇದ್ದರೂ ಅಧ್ಯಯನಕ್ಕೆ ಅವಕಾಶ ನೀಡಲಾಗುತ್ತಿತ್ತು ಆದರೆ ಈಗ ಕನಿಷ್ಠ 40 ವಿದ್ಯಾರ್ಥಿಗಳು ಇರುಬೇಕು ಎಂಬ ನಿಯಮವಿದೆ ವಿದ್ಯಾರ್ಥಿಗಳ ಜೊತೆಗೆ ಉಪನ್ಯಾಸಕರೂ ಕಾಲಕಾಲಕ್ಕೆ ಅಪ್ಡೇಟ್ ಆಗಬೇಕು ಹೊಸ ಹೊಸ ವಿಷಯಗಳನ್ನು ತಿಳಿಯಲು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬೇಕು ವಿಷಯ ವಿನಿಮಯ ದಿಂದ ಅನೇಕ ಸಂಗತಿಗಳನ್ನು ತಿಳಿದುಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಹೇಳಿದರು

ಸಂಸ್ಥೆಯ ಅಧ್ಯಕ್ಷ ಕೇಶವ ಸಂಪೆಕೈ ಮಾತನಾಡಿ ಸಮಾಜದ ಬದಲಾವಣೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯ ಶಿಕ್ಷಕರು ಉತ್ತಮ ಪ್ರಜೆಗಳನ್ನು ತಯಾರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು

Rupashree Pre Graduate College ಸಂಸ್ಕೃತ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ಸಂಸ್ಕೃತ ಉಪನ್ಯಾಸಕರಿಗೆ ಸಂಸ್ಕೃತ ವಿಷಯ ಕುರಿತು ವಿವಿಧ ವಿಚಾರಗೋಷ್ಠಿ ನಡೆಸಲಾಯಿತು

ವಿ ಸಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೇಶವ ಸಂಪೆಕೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ರೂಪಶ್ರೀ ಕಾಲೇಜು ಪ್ರಾಂಶುಪಾಲ ಎಂ ಎಂ ತಿಮ್ಮಪ್ಪ, ಉಪನ್ಯಾಸಕಿ ಡಾ ಮೈತ್ರೇಯಿ ಆದಿತ್ಯ ಪ್ರಸಾದ್, ಜ್ಯೋತಿ,ಶುಭಾ,ವಿ ಜಿ ಶ್ರೀಧರ ಇನ್ನಿತರರು ಇದ್ದರು.

Department of Soldiers Welfare and Rehabilitation ಶಾಲಾಕಾಲೇಜುಗಳಲ್ಲಿ ಓದುತ್ತಿರುವ ಕರ್ನಾಟಕ ಮೂಲ ನಿವಾಸಿಗಳಾದ ಮಾಜಿ‌ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

0

Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ, 2025-26 ನೇ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಕ್ಕಳಿಗೆ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಜಿಲ್ಲಾ ಕಚೇರಿಯಲ್ಲಿ ಶುಲ್ಕ ರಹಿತವಾಗಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30, 2025 ರೊಳಗಾಗಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182220925 ಗೆ ಸಂಪರ್ಕಿಸುವುದು .

ಬೀಡಾಡಿ ದನಗಳ ಹಾವಳಿ ತಪ್ಪಿಸಲು ಗೋರಕ್ಷಣಾ ಹೋರಾಟ ಸಮಿತಿಯ ಮನವಿ

0

ಸೊರಬ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿಯಿಂದಾಗುವ ತೊಂದರೆಗಳನ್ನು ಸರಿ ಪಡಿಸಬೇಕೆಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಹಾಗೂ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ವತಿಯಿಂದ ಪಟ್ಟಣದ ಪುರಸಭೆ ಮುಂಭಾಗ ಕಾಲು ಮುರಿದ ಕರುವನಿಟ್ಟು ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಎಚ್.ವಿ. ಚಂದನ್ ಅವರಿಗೆ ಮನವಿ ಸಲ್ಲಿಸಲಾಯಿತು.

ನೇತೃತ್ವ ವಹಿಸಿದ್ದ ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಪಟ್ಟಣದ ಬೀದಿಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ರಸ್ತೆಯಲ್ಲಿ ಮಲಗುವುದರಿಂದ ವಾಹನ ಸವಾರರಿಗೆ ತೊಂದರೆ ಆಗಿ ದುರ್ಘಟನೆಗಳು ನಡೆಯುತ್ತಿವೆ.

ಮಂಗಳವಾರದ ಸಂತೆ ಬಂದರೆ ಸಾಕು, ಸಂತೆಯ ಮಾರುಕಟ್ಟೆಯ ತುಂಬ ಬಿಡಾಡಿ ದನಗಳೇ ಇರುತ್ತವೆ. ಕಳೆದ ಎರಡು ದಿನದ ಹಿಂದೆ ಬೀದಿ ದನಗಳು ಕಾದಾಟ ಮಾಡುತ್ತಾ ಬಂದು ಸೊರಬ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್ ಅವರು ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ ಎಂದರು.

ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಜಕ ಲೋಕೇಶ್ ಕಕ್ಕರಸಿ ಮಾತನಾಡಿ, ಇತ್ತೀಚೆಗೆ ಎಪಿಎಂಸಿ ಸಮೀಪದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೂರು ಜಾನುವಾರುಗಳು ಮೃತಪಟ್ಟಿವೆ. ಒಂದು ಕರು ಗಾಯಗೊಂಡಿದ್ದು, ಕಳೆದ ೧೫ ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ ಪಟ್ಟಣದಲ್ಲಿ ಅನೇಕ ಅವಘಡಗಳು ಸಂಭವಿಸಿವೆ.

ರಾತ್ರಿ ಸಮಯದಲ್ಲಿ ಎಲ್ಲೆಂದರಲ್ಲಿ ರಸ್ತೆಯ ಮೇಲೆ ಮಲಗುತ್ತವೆ. ಈ ಬಗ್ಗೆ ಹಲವು ಬಾರಿ ಮನವಿ ಸಹ ನೀಡಲಾಗಿದೆ. ಜಾನುವಾರುಗಳ ಮಾಲಿಕರಿಗೆ ಎಚ್ಚರಿಕೆ ನೀಡಿ, ಮನೆಯಲ್ಲಿ ಕಟ್ಟಿ ಹಾಕಲು ಆದೇಶ ನೀಡಬೇಕು. ಇಲ್ಲವಾದಲ್ಲಿ ಪುರಸಭೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ಎಚ್.ವಿ. ಚಂದನ್ ಮಾತನಾಡಿ, ಶೀಘ್ರದಲ್ಲಿಯೇ ಜಾನುವಾರುಗಳ ಮಾಲಿಕರಿಗೆ ನೋಟಿಸ್ ನೀಡಲಾಗುವುದು. ಮಾಲಿಕರಿಲ್ಲದ ಜಾನುವಾರುಗಳನ್ನು ಗೋ ಶಾಲೆಗೆ ಕಳುಹಿಸಲು ಕ್ರಮ ವಹಿಸಲಾಗುವುದು ಎಂದರು.

ಬಜರಂಗದಳ ಸಾಗರ ಜಿಲ್ಲಾ ಸಹ ಸಂಚಾಲಕ ರವಿ ಗುಡಿಗಾರ್, ಹಿಂದು ಜಾಗರಣಾ ವೇದಿಕೆ ತಾಲೂಕು ಸಹ ಸಂಚಾಲಕ ರಾಘು ಆಚಾರ್, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಉಪಾಧ್ಯಕ್ಷ ದತ್ತಾ, ಕಾರ್ಯದರ್ಶಿ ಶರತ್ ಸ್ವಾಮಿ, ಸಹ ಕಾರ್ಯದರ್ಶಿ ನಾಗಪ್ಪ ಬಿದರಗೇರಿ, ಹಾಲೇಶ್, ಕೇಶವ ಪೇಟ್ಕರ್ ಸೇರಿದಂತೆ ಇತರರಿದ್ದರು.

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಅಳವಡಿಕೆ

0

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ, ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು ಹಾಗೂ ಸದರಿ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು ಅಳವಡಿಸುತ್ತಿದ್ದು, ಈ ದಿನ ದಿನಾಂಕಃ 16-07-2025 ರಂದು ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಟ್ರಾಫಿಕ್ ಸಿಗ್ನಲ್ ಗೆ ಚಾಲನೆ ನೀಡಿ, ಈ ಕೆಳಕಂಡಂತೆ ಮಾತನಾಡಿರುತ್ತಾರೆ.

1) ಸಂಚಾರ ದಟ್ಟಣೆಯ ನಿಯಂತ್ರಣದ ಸಂಬಂಧ ಉಷಾ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅನ್ನು ಅಳವಡಿಸಲಾಗಿರುತ್ತದೆ.

2) ಈ ಸ್ಥಳದಲ್ಲಿ ಸಿಗ್ನಲ್ ಲೈಟ್ ನ ಅಳವಡಿಕೆಯ ಅವಶ್ಯಕತೆ ತುಂಬಾ ಇದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಮುಖಂಡರು ಗಳ ಸಹಾ ಸಿಗ್ನಲ್ ಲೈಟ್ ಅಳವಡಿಕೆ ಮಾಡುವಂತೆ ಕೋರಿಕೆ ಸಲ್ಲಿಸಿದ್ದು, ಈ ಸಂಬಂಧ ಟ್ರಾಫಿಕ್ ಲೈಟ್ ಅನ್ನು ಅಳವಡಿಕೆ ಮಾಡಲಾಗಿರುತ್ತದೆ.

3) ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಒಳ್ಳೆಯ ಕೆಲಸವಾಗುತ್ತದೆ ಎಂಬುದಕ್ಕೆ, ಇದೇ ಒಂದು ಉತ್ತಮ ಉದಾಹರಣೆಯಾಗಿರುತ್ತದೆ.

4) ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದಾರೆ, ಸಂಚಾರಿ ಟ್ರಾಫಿಕ್ ಸಿಗ್ನಲ್ ಇದೆ ಎಂದು ಮಾತ್ರ ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಂಚಾರ ನಿಯಮಗಳನ್ನು ಪಾಲನೆ ಮಾಡಿರಿ.

5) ನಿಮ್ಮ ಕುಟುಂಬ, ಸ್ನೇಹಿತರು, ಅವಲಂಬಿತರು ಮತ್ತು ನಿಮ್ಮ ಜೀವದ ಸುರಕ್ಷತೆಯ ಹಿನ್ನೆಲೆಯಲ್ಲಿ ಸಂಚಾರ ನಿಯಮ ಪಾಲನೆ ಅವಶ್ಯಕವಿರುತ್ತದೆ.

6)ಕೇವಲ ಸೀಟ್ ಬೆಲ್ಟ್, ಹೆಲ್ಮೇಟ್ ಧರಿಸುವುದರಿಂದಲೇ ಎಷ್ಟೋ ಬಾರಿ ಮಾರಣಾಂತಿಕ ಅಪಘಾತ ತಡೆದು, ಪ್ರಾಣವನ್ನು ರಕ್ಷಿಸಲು ಸಾಧ್ಯವಿರುತ್ತದೆ.

7) ಅಪಘಾತದಲ್ಲಿ ಹೆಚ್ಚಿನ ಸಂದರ್ಭ ಯುವಕರೇ ಪ್ರಾಣ ಕಳೆದುಕೊಳ್ಳುತ್ತಾರೆ, ಸಾಮಾನ್ಯ ಸಂಚಾರ ನಿಯಮಗಳನ್ನು ಪಾಲನೆ ಮಾಡದೇ ಇದ್ದ ಸಂದರ್ಭದಲ್ಲಿ ಈ ರೀತಿಯ ಸಣ್ಣ ಪುಟ್ಟ ಅಪಘಾತಗಳು ಸಹಾ ಮಾರಣಾಂತಿಕ ಅಪಘಾತಗಳಾಗಿ ಪರಿಣಮಿಸುತ್ತವೆ.

8) ಅಪಘಾತದಲ್ಲಿ ಕೇವಲ ಗಾಯಾಳುವಲ್ಲದೇ ಆತನ ಅವಲಂಬಿತರೂ ಸಹಾ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ. Shivamogga Police ದೇವರಾಜ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ, ನವೀನ್ ಎಂ, ಪಿಎಸ್ಐ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ ರವರು ಹಾಗೂ ಮುಖಂಡರುಗಳಾದ ಸಂತೋಷ್ ಬೆಳ್ಳಿಕೆರೆ, ಯೋಗೇಶ್, ಉದಯ್ ದಾಸ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಸಾಗರದ ನಾಲಂದ ಪ್ರೌಢಶಾಲೆಯಲ್ಲಿ ಉಚಿತವಾಗಿ ಸ್ಟೀಲ್ ಪ್ಲೇಟ್, ನೋಟ್ ಪುಸ್ತಕ ವಿತರಣೆ

0

ನಾಲಂದ ಶಾಲೆಯ ಹಿರಿಯ ವಿದ್ಯಾರ್ಥಿಗಳ ವತಿಯಿಂದ ಉಚಿತ ನೋಟ್ ಪುಸ್ತಕ ಹಾಗೂ ತಟ್ಟೆ ಲೋಟ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಾದ ಶ್ರೀ ಸೋಮಶೇಖರ್ ತಾಳಗುಪ್ಪ ಹಾಗೂ ಅಶ್ವತ್ಥನಾರಾಯಣ ನಾಲಂದ ಪ್ರೌಢಶಾಲೆಯ ನಿವೃತ್ತ ಹಿರಿಯ ಶಿಕ್ಷಕರುಗಳಾದ ಶ್ರೀ ಎಸ್. ಆರ್. ಎಸ್. ಹಾಗೂ ಕೆ. ಆರ್. ಎಸ್. ಉಪಸ್ಥಿತರಿದ್ದರು. ನೋಟ್ ಪುಸ್ತಕಗಳನ್ನು ಹಿರಿಯ ಶಿಕ್ಷಕರಿಂದ
ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಾಲಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಷಡಾಕ್ಷರಿ ಅವರಿಂದ ನಗರಾಭಿವೃದ್ಧಿ ಸಚಿವರ ಭೇಟಿ

0

ಕಳೆದ ವಾರ ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದರು

ಈ ಸಂದರ್ಭದಲ್ಲಿ ಮುಷ್ಕರವನ್ನು ಹಿಂಪಡೆಯಲು ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರಿಗೆ ಸೂಚಿಸಿ ಅವರ ಬೇಡಿಕೆಗಳನ್ನು ಇಡೇರಿಸುವ ಭರವಸೆ ನೀಡಿದ ಮೇರೆಗೆ ಬೆಂಗಳೂರು ಮಹಾನಗರ ಪಾಲಿಕೆಯ ನೌಕರರು ಮುಷ್ಕರ ವಾಪಸ್ ಪಡೆಯಲಾಗಿತ್ತು

ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರು ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಸಭೆ ನಡೆಸಿದರು.

ಸಭೆಯಲ್ಲಿ ಮಾನ್ಯ ಸಚಿವರು ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಮಹಾನಗರ ಪಾಲಿಕೆಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರ ನಿಯೋಗ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರಿಗೆ ಸನ್ಮಾನಿಸಿ ಅಭಿನಂದಿಸಿದರು

ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಸಂಗಾ ರವರು ಉಪಸ್ಥಿತರಿದ್ದರು.

Karnataka Sanga Shivamogga ಕವಿ “ಹೆಚ್ ಎಸ್ ವಿ” ಅವರಿಗೆ ಕರ್ನಾಟಕ ಸಂಘದಲ್ಲಿ”ಭಾವಾಂಜಲಿ”

0

Karnataka Sanga Shivamogga ದಿನಾಂಕ 18 ಜುಲೈ ೨೦೨೫ರ ಶುಕ್ರವಾರ, ಸಂಜೆ 5;30 ಕ್ಕೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಭಾವಾಂಜಲಿ” ಹೆಚ್.ಎಸ್.ವಿ. ಸಂಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಸಾಹಿತಿಗಳು, ಉಡುಪಿ ಇವರು ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಅವರ ಕುರಿತು ನುಡಿ ನಮನಗಳನ್ನಾಡಲಿದ್ದಾರೆ. ಶ್ರೀ ಪಾರ್ಥ ಚಿರಂತನ್ ಹಾಗೂ ಕು. ಸಂಜನಾ ಎಸ್. ಕುಮಾರ್ ಇವರಿಂದ ಹೆಚ್.ಎಸ್.ವಿ. ಅವರ ಗೀತೆಗಳ ಗಾನ ನಮನ ಕಾರ್ಯಕ್ರಮವಿರುತ್ತದೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

Karnataka Building And Other Construction Workers Welfare ಸಿಗಂದೂರು ಸೇತುವೆ ನಿರ್ಮಿಸಿದ ಕೂಲಿ ಕಾರ್ಮಿಕರಿಗೆ ಸನ್ಮಾನ

0

Karnataka Building And Other Construction Workers Welfare ದೇಶದಲ್ಲಿಯೇ ಎರಡನೇ ಅತೀ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿದ್ದು, ಸೇತುವೆ ನಿರ್ಮಾಣ ಕಾರ್ಯದಲ್ಲಿ ಭಾಗಿಯಾದ, ಕಳೆದ ಐದು ವರ್ಷಗಳಿಂದ ಹಗಲಿರುಳು ಕರ್ತವ್ಯ ನಿರ್ವಹಿಸಿದ ಕಾರ್ಮಿಕರಿಗೆ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಮಿಕರಿಗೆ ಶಾಲು ಹೊದಿಸಿ, ಹೂವಿನ ಮಾಲೆ ಹಾಕಿ ಅಭಿನಂದಿಸಲಾಯಿತು. ಜೊತೆಗೆ ಊಟದ ಬಾಕ್ಸ್, ಕುಡಿಯುವ ನೀರಿನ ಬಾಟಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ ಸಂಜಯ್ ಕುಮಾರ್, ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷೆ ಕವಿತಾ ಥೋರತ್, ಸಂಘಟನೆಯ ಪ್ರಮುಖರಾದ ಕೆ ಸುಂದರ್ ಬಾಬು, ಧನುಶ್ರೀ, ತಾಲ್ಲೂಕು ಅದ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಮೊದಲಾದವರಿದ್ದರು.

Rotary Club ಕೋಣಂದೂರು ರೋಟರಿ ಕ್ಲಬ್ ಮಹತ್ತರ ಸೇವಾಕಾರ್ಯ ಮಾಡುತ್ತಿದೆ- ಆರಗ ಜ್ಞಾನೇಂದ್ರ

0

Rotary Club ರೋಟರಿ ಸೇವೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಮನುಕುಲದ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಕೋಣಂದೂರಿನ ವಿನಾಯಕ ಮಾಂಗಲ್ಯ ಮಂದಿರದಲ್ಲಿ ರೋಟರಿ ಕ್ಲಬ್ ಏರ್ಪಡಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, ತೀರ್ಥಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೋಣಂದೂರು ರೋಟರಿ ಸಂಸ್ಥೆ ಮಹತ್ತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಗಳು ಇರುವುದರಿಂದ ಶೈಕ್ಷಣಿಕವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಾಗೂ ಹಲವಾರು ಸೇವಾ ಯೋಜನೆಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

ರೋಟರಿ ಕೋಣಂದೂರು ಸಂಸ್ಥೆಯಲ್ಲಿ ವಿಶೇಷವಾದ ಯುವ ಪಡೆ ಇದ್ದು, ನಮ್ಮ ಕೋಣಂದೂರು ಸಂಸ್ಥೆ ಮಾಡುವ ಪ್ರತಿಯೊಂದು ಸೇವಾ ಕಾರ್ಯಗಳ ಜೊತೆಗೆ ನಮ್ಮ ಸಹಕಾರ ನಿರಂತರವಾಗಿ ಇರುತ್ತದೆ. ಅವರ ಸಹಕಾರವೂ ಕೂಡ ನಮಗೆ ತುಂಬಾ ಅಗತ್ಯವಾಗಿದೆ ಎಂದು ತಿಳಿಸಿದರು.

Rotary Club ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ನವೀನ ಅವಕಾಶಗಳ ಮೂಲಕ ಸಮಾಜ ಸೇವೆ ಮಾಡಬೇಕು. ಸಮಾಜದ ಒಳಿತಿಗೆ ಕೆಲಸ ಮಾಡಲು ಎಲ್ಲರೂ ಕೈಜೋಡಿಸಬೇಕು. ಬೆಳ್ಳಿ ಹಬ್ಬದಲ್ಲಿರುವ ಈ ರೋಟರಿ ಕ್ಲಬ್‌ನಿಂದ ಶಾಶ್ವತವಾದ ಬಹುಕಾಲ ನೆನಪಿನಲ್ಲಿ ಉಳಿಯುವ ಕೆಲಸ ಮಾಡಬೇಕು. ಆ ಮೂಲಕ ಜಿಲ್ಲೆಗೆ ಮಾದರಿಯಾಗುವಂತಹ ಕಾರ್ಯ ಆಗಬೇಕು ಎಂದು ಶುಭಹಾರೈಸಿದರು. ಅಧಿಕಾರ ವಹಿಸಿಕೊಂಡ ನೂತನ ಅಧ್ಯಕ್ಷ ಕೆ.ಆರ್.ಸದಾಶಿವ ಹಾಗೂ ತಂಡದವರಿಗೆ ಸನ್ಮಾನಿಸಿ ಗೌರವಿಸಿದರು. ರೋಟರಿ ಕ್ಲಬ್ ಕೋಣಂದೂರು ನೂತನ ಅಧ್ಯಕ್ಷ ಕೆ.ಆರ್.ಸದಾಶಿವ ಮಾತನಾಡಿ, ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ನಮ್ಮ ಕ್ಲಬ್‌ನ ಈ ವರ್ಷದ ಕಾರ್ಯ ಚಟುವಟಿಕೆಗಳನ್ನು ಸ್ಮರಣೀಯವಾಗಿಸಬೇಕು ಎಂದು ಹೇಳಿದರು.

ಡಿ.ಆರ್.ಗಿರೀಶ್, ರೋಟರಿ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ ಗೌಡ, ಜೋನಲ್ ಲೆಫ್ಟಿನೆಂಟ್ ಭರತ್ ಕುಮಾರ್ ಕೋಡ್ಲು, ಕಾರ್ಯದರ್ಶಿಗಳಾದ ಎಂ.ಟಿ.ಪುಟ್ಟಪ್ಪ, ಬಿ.ಟಿ.ಈಶ್ವರಪ್ಪ, ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ.. ಗುಡದಪ್ಪ ಕಸಬಿ ಉಪಸ್ಥಿತರಿದ್ದರು.

All India Radio Bhadravati ಭದ್ರಾವತಿ ಬಾನುಲಿಯಲ್ಲಿ ಯುವಜನರಿಗಾಗಿ “ಗೆಲುವಿನ ಗುಟ್ಟು” ಕಾರ್ಯಕ್ರಮ ಸರಣಿ

0

All India Radio Bhadravati ಯುವಜನರಲ್ಲಿ ಆತ್ಮಸ್ಥೈರ್ಯ ಕುಂದುತ್ತಿರುವ ಹಿನ್ನಲೆಯಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬಲು ಹಾಗು ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡುವ ವಿಶೇಷ ಕಾರ್ಯಕ್ರಮ ಸರಣಿ “ಗೆಲುವಿನ ಗುಟ್ಟು” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 09:05ರಿಂದ 09:20ರವರೆಗೆ ಪ್ರಸಾರವಾಗಲಿದೆ.

ಈ ಸರಣಿಯಲ್ಲಿ ವಿವಿಧ ವಿಭಾಗದಲ್ಲಿ ನೈಪುಣ್ಯತೆ ಪಡೆಯುವ ವಿಧಾನ, ಕೌಶಲ್ಯದ ಅವಶ್ಯಕತೆ ಹಾಗೂ ಪಡೆಯುವ ವಿಧಾನ ಮತ್ತು ಜೀವನದಲ್ಲಿ ಯಶಸ್ಸನ್ನು ಪಡೆದ ಹಲವು ಗಣ್ಯರ ಯಶೋಗಾಥೆ ಪ್ರಸಾರವಾಗಲಿದ್ದು ಶಿವಮೊಗ್ಗದ ಪಿ.ಇ.ಎಸ್ ಸಂಸ್ಥೆಯ 52 ವಿಷಯ ಪರಿಣಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

All India Radio Bhadravati ಪಿ.ಇ.ಎಸ್ ಸಹಯೋಗದಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮ ಸರಣಿಯನ್ನು ಸಾರ್ವಜನಿಕರು ಉಪಯೋಗ ಪಡೆಯಬೇಕೆಂದು ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಹಾಗು ಪಿ.ಇ.ಎಸ್ ಸಂಸ್ಥೆಯ ಮುಖ್ಯ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಆರ್ ಅವರು ತಿಳಿಸಿದ್ದಾರೆ.