Tuesday, February 24, 2026
Tuesday, February 24, 2026
Home Blog Page 244

Shivamogga City Karate Association ಜಮ್ಮುವಿನಲ್ಲಿ ನಡೆಯುವ ಪೊಲೀಸ್ ಗೇಮ್ಸ್ ಗೆ ಆಯ್ಕೆಯಾಗಿರುವ ಗೋವಿಂದಸ್ವಾಮಿ ಅವರಿಗೆ ಸನ್ಮಾನ

0

Shivamogga City Karate Association ಸಪ್ಟೆಂಬರ್ ಮೊದಲ ವಾರದಲ್ಲಿ ಜಮ್ಮುವಿನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುವ ಶಿವಮೊಗ್ಗದ ಮಾಚೇನಹಳ್ಳಿಯ ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯ 8ನೇ ಬೆಟಾಲಿಯನ್ ನ ಹೆಡ್ ಕಾನ್ಸ್ಟೇಬಲ್ ಹಾಗೂ ಶೋಟೋಖಾನ್ ವರ್ಲ್ಡ್ ಕರಾಟೆ ಕರ್ನಾಟಕದ ಕರಾಟೆ ತರಬೇತಿದರಾದ ಗೋವಿಂದಸ್ವಾಮಿ ರವರಿಗೆ ವಿನೋಬನಗರದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ತರಬೇತಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು.

ಗೋವಿಂದಸ್ವಾಮಿ ರವರು ಮಾಚೇನಹಳ್ಳಿ ಯಲ್ಲಿ ಇರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ಕರಾಟೆ ತರಬೇತಿ ನೀಡುತ್ತಿದ್ದು ಕರಾಟೆ ಬ್ಲಾಕ್ ಬೆಲ್ಟ್ ಸಹ ಆಗಿದ್ದು ಈ ಸಂದರ್ಭದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಮತ್ತು ಪ್ರಮುಖರಾದ ಸಚಿನ್ ಅನೂಪ್ ಪ್ರೀತಿ ಶ್ರೀ ಗಣಪತಿ ರುಚಿತಾ ಕಲೀಮ್ ಉಪಸ್ಥಿತರಿದ್ದರು.

Youth Hostel Association of India ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಅಧ್ಯಕ್ಷರಾಗಿ ಎನ್.ಗೋಪಿನಾಥ್ ಆಯ್ಕೆ

0

Youth Hostel Association of India ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ( ವೈಎಚ್‌ಎಐ ) ತರುಣೋದಯ ಘಟಕದ ಅಧ್ಯಕ್ಷರಾಗಿ ಎನ್.ಗೋಪಿನಾಥ್ ಆಯ್ಕೆಯಾಗಿದ್ದಾರೆ.

ತರುಣೋದಯ ಘಟಕದ 2026 ರಿಂದ 2028ನೇ ಅವಧಿಗೆ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಎನ್.ಗೋಪಿನಾಥ್, ಕಾರ್ಯಾಧ್ಯಕ್ಷರಾಗಿ ಎಸ್.ಎಸ್.ವಾಗೇಶ್, ಉಪಾಧ್ಯಕ್ಷರಾಗಿ ಡಾ. ಅರುಣ್.ಎಮ್.ಎಸ್ ಮತ್ತು ಡಾ. ಪ್ರಕೃತಿ ಮಂಚಾಲೆ, ಸಂಘಟನ ಕಾರ್ಯದರ್ಶಿಯಾಗಿ ಜಿ.ವಿಜಯಕುಮಾರ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್.ಜಿ, ಖಚಾಂಚಿಯಾಗಿ ಎಮ್.ಪಿ.ನಾಗರಾಜ್, ನಿರ್ದೇಶಕರಾಗಿ ಕೆ.ಹೆಚ್.ಸುಮಾರಾಣಿ, ರಾಜ್.ಎಮ್.ಎಸ್, ಮಮತಾ.ಕೆ, ಭಾರತಿ.ಕೆ, ಮಲ್ಲಿಕಾರ್ಜುನ್ ಕಾನೂರು, ನಾಗರಾಜ್ ಮರಿದಾಸ್, ಲಕ್ಷ್ಮೀರಾಜೇಶ್, ಎನ್.ಎಸ್.ರವೀಂದ್ರ, ಕೆ.ಗಣಪತಿ, ಕೃಷ್ಣಮೂರ್ತಿ.ಹೆಚ್.ಜಿ, ಮಂಜಪ್ಪ.ಆರ್. ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷ ಎಸ್.ಎಸ್.ವಾಗೇಶ್ ಮಾತನಾಡಿ, ನಗರದ ಸಾವಿರಾರು ಜನರಿಗೆ ನಮ್ಮ ಘಟಕದ ವತಿಯಿಂದ ಹಿಮಾಲಯ ಚಾರಣ ಮಾಡಿಸಲಾಗಿದೆ. ಅದ್ಭುತ ಅನುಭವ ಪಡೆಯಲು ಹಾಗೂ ಆರೋಗ್ಯದಲ್ಲಿ ಸುಧಾರಣೆಯಾಗಲು ಹಿಮಾಲಯ ಚಾರಣ ಪ್ರತಿಯೊಬ್ಬರು ಪಡೆಯಬೇಕು. ಸ್ಥಳಿಯ ಚಾರಣಗಳನ್ನು ಆಗಿಂದಾಗೆ ಆಯೋಜಿಸುತ್ತಿದ್ದು, ನಮ್ಮ ಸದಸ್ಯರು ಅತ್ಯತ್ತಮವಾಗಿ ಸ್ವಂದಿಸುತ್ತಿದ್ದಾರೆ ಎಂದರು.

ವೈಎಚ್‌ಎಐನ ಅ.ನಾ.ವಿಜಯೇಂದ್ರ ರಾವ್ ಮಾತನಾಡಿ, ತರುಣೋದಯ ಘಟಕ ಚಾರಣದೊಂದಿಗೆ ಸಾಮಾಜಿಕ ಕಳಕಳಿಯ ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ, ಕ್ಯಾನ್ಸರ್ ಬರುವುದಕ್ಕಿಂತ ಮುಂಚೆ ತೆಗೆದುಕೊಳ್ಳಬಹುದ ಮುನ್ನೆಚರಿಕೆ ಬಗ್ಗೆ ಮಾರ್ಗದರ್ಶನವನ್ನು ತಜ್ಞ ವೈದ್ಯರಿಂದ ಸಲಹೆ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿ.ವಿಜಯಕುಮಾರ್ ಮಾತನಾಡಿ, ಅಜೀವ ಸದಸ್ಯತ್ವ ಹೊಂದುವಲ್ಲಿ ನಮ್ಮ ಘಟಕ ದ್ವಿತೀಯ ಸ್ಥಾನದಲ್ಲಿದ್ದು, ಎಲ್ಲಾ ಸದಸ್ಯರ ಸಹಕಾರದಿಂದ ಈ ಸಾಲಿನಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಸಹಕಾರ ನೀಡಬೇಕು ಎಂದರು.

Youth Hostel Association of India ಎನ್.ಗೋಪಿನಾಥ್ ಮಾತನಾಡಿ, ನಗರದಲ್ಲಿ ವಿಶೇಷ ಮಲೆನಾಡು ಪದಾರ್ಥಗಳ ಆಹಾರ ಮೇಳವನ್ನು ನವೆಂಬರ್‌ನಲ್ಲಿ ಜಿಲ್ಲಾಡಳಿತದ ಸಹಕಾರದಲ್ಲಿ ಏರ್ಪಡಿಸಲು ಆಯೋಜಿಸಲು ಪ್ರಯತ್ನ ನಡೆಸುತ್ತಿದ್ದು, ಎಲ್ಲರ ಸಹಕಾರ ಮುಖ್ಯ. ಆಸಕ್ತರು ನಮ್ಮಲ್ಲಿ ಹೆಸರು ನೊಂದಾಯಿಸಿದಲ್ಲಿ ಆ ಕಾರ್ಯಕ್ರಮದ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು, ಯಶಸ್ವಿಗೊಳಲು ಸಹಕಾರಿಯಾಗುತ್ತದೆ ಎಂದರು.

ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಸತೀಶ್ ಕುಮಾರ್ ನೂತನ ತಂಡಕ್ಕೆ ಶುಭಕೋರಿದರು. ಸುಮಾರಾಣಿ, ಮಮತಾ, ಭಾರತಿ ಗುರುಪಾದಪ್ಪ, ಸುರೇಶ್ ಕುಮಾರ್ ಮತ್ತಿತರರು ಇದ್ದರು.

Kadamba Kannada Vedike ವಾಣಿಜ್ಯ ಮಳಿಗೆ, ಸಂಕೀರ್ಣ‌ ಕಟ್ಟಡಗಳ ನೆಲ ಮಹಡಿಗಳಲ್ಲಿ ವಾಹನ ಪಾರ್ಕಿಂಗ್ ಇಲ್ಲದೇ ತೊಂದರೆ, ಸಮಸ್ಯೆ ಪರಿಹರಿಸಲು ಆಯುಕ್ತರಿಗೆ ಮನವಿ

0

Kadamba Kannada Vedike ಶಿವಮೊಗ್ಗ ನಗರದ ವಾಣಿಜ್ಯ ಮಳಿಗೆಗಳು ಹಾಗೂ ಕಾಂಪ್ಲೆಕ್ಸ್‌ಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, ವಸತಿಗೃಹಗಳು, ಹಾಗೂ ಹೋಟೆಲ್‌ಗಳಲ್ಲಿರುವ ನೆಲ ಮಹಡಿಯನ್ನು ಲಘು ವಾಹನಗಳ ನಿಲುಗಡೆಗೆ ಅವಕಾಶವಿಲ್ಲದೆ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡಿಕೊಂಡಿರುವುದು ಸೆಟ್ ಬ್ಯಾಕ್ ಉಲ್ಲಂಘನೆ ಮಾಡಿದ್ದು ಸದರಿ ಮಹಾನಗರ ಪಾಲಿಕೆ ಆಯಕ್ತರು ಹಾಗೂ ಇಂಜಿನಿಯರ್‌ಗಳು ನೋಟಿಸ್ ಜಾರಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ವಿಶ್ವನಾಥ ಔಡ್ರು ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಕೊಡಲಾಯಿತು.

ಸಂದರ್ಭದಲ್ಲಿ ನವೀನ್ ಹೆಚ್.ಸಿ, ರಾಘವೇಂದ್ರ ಎಸ್.ಗಂಗಾಧರ್, ಲಕ್ಷ್ಮೀಶ್, ರುದ್ರೇಶ್, ನವೀದ್, ಶಿವಣ್ಣ ಎಸ್.ಪಿ, ಯೋಗೇಶ್ ಉಪಸ್ಥಿತರಿದ್ದರು.

Guru Poornima ಅಂಧಕಾರವನ್ನ ದೂರಮಾಡಿ ಜ್ಞಾನದ ಬೆಳಕನ್ನ ನೀಡುವ ಮಹಾನ್ ಶಕ್ತಿಯೇ ‘ಗುರು’- ಚಂದ್ರಹಾಸ ಪಿ.ರಾಯ್ಕರ್

0

Guru Poornima ಗುರುಪೂರ್ಣಿಮೆ ಆಚರಣೆಯು ಗುರು ಶಿಷ್ಯರ ಸಂಬಂಧ, ಅನುಬಂಧ, ಬಾಂಧವ್ಯ ವೃದ್ಧಿಸುತ್ತದೆ ಎಂದು ದೈವಜ್ಞ ಗುರುಪೀಠ ಸಮಿತಿ ಅಧ್ಯಕ್ಷ ಚಂದ್ರಹಾಸ ಪಿ.ರಾಯ್ಕರ್ ಹೇಳಿದರು.

ದೈವಜ್ಞ ಬ್ರಾಹ್ಮಣ ಗುರುಪೀಠ ಸೇವಾ ಸಮಿತಿ ಮತ್ತು ಶ್ರೀ ಜ್ಞಾನೇಶ್ವರಿ ಗೋಶಾಲೆ ವತಿಯಿಂದ ನಗರದ ಜೈಲ್ ಸರ್ಕಲ್‌ನಲ್ಲಿರುವ ದೈವಜ್ಞ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಸಂಧ್ಯಾವಂದನೆ ಮತ್ತು ದೇವಪೂಜೆ ಕಲಿಕಾ ಶಿಬಿರದಲ್ಲಿ ಮಾತನಾಡಿ, ಪ್ರತಿ ವರ್ಷ ಆಷಾಢಪೂರ್ಣಿಮೆಯಂದು ಗುರುಪೂರ್ಣಿಮೆ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಹಿಂದುಗಳ ಮಹಾಕಾವ್ಯ ರಚಿಸಿದ ಮಹಾಭಾರತದ ಮಹರ್ಷಿ ವೇದವ್ಯಾಸ ಜನ್ಮದಿನ ವ್ಯಾಸಪೂರ್ಣಿಮೆ ಎಂದು ಕರೆಯುತ್ತಾರೆ. ಅಂಧಕಾರವನ್ನು ದೂರ ಮಾಡಿ, ಜ್ಞಾನ ಎಂಬ ಬೆಳಕನ್ನು ನೀಡುವ ಮಹಾನ್ ಶಕ್ತಿಯೇ ಗುರು. ಜೀವನದಲ್ಲಿ ಸರಿದಾರಿ ತೋರುವ ಮಾರ್ಗದರ್ಶಕ ಗುರು ಆಗಿರುತ್ತಾರೆ ಎಂದರು.

ಮಕ್ಕಳಿಗೆ ಬಾಲ್ಯದಿಂದಲೇ ಸಂಪ್ರದಾಯ ಆಚರಣೆಗಳನ್ನು ಕಲಿಸಲು ಪಾಲಕರು ಮುಂದಾಗಬೇಕು. ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗಬೇಕು ಎಂದು ಸಲಹೆ ನೀಡಿದರು.

Guru Poornima ಗುರುಪೂಜೆ ನಂತರ ಸಮಾಜದ ಜನರಿಗೆ ವೇದಮೂರ್ತಿ ಸಂತೋಷ್ ಎನ್.ಭಟ್ ಅವರ ಮಾರ್ಗದರ್ಶನದಲ್ಲಿ ನಾಲ್ಕು ದಿನಗಳ ಶಿಬಿರ ನಡೆಯಿತು.

Department of Labor ಕಾರ್ಮಿಕ ಕಲ್ಯಾಣ ಯೋಜನೆಯಡಿ 2025-26 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಹರಿಂದ ಆನ್ ಲೈನ್ ಅರ್ಜಿ ಆಹ್ವಾನ

0

Department of Labor ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Labor ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು.

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

0

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಇಂದು ಕರ್ನಾಟಕದ ಶಿವಮೊಗ್ಗದಲ್ಲಿ ಬಹು ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ನಡೆಯುತ್ತಿದೆ.

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಜಿ ಅವರಿಗೆ ಜುಲೈ 11, 2025 ರಂದು ಅಧಿಕೃತ ಆಹ್ವಾನವನ್ನು ನೀಡಲಾಯಿತು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲು ಅವರನ್ನು ಆಹ್ವಾನಿಸಲಾಯಿತು. ಯಾವುದೇ ಸಂಭವನೀಯ ವೇಳಾಪಟ್ಟಿ ಸವಾಲುಗಳ ಹಿನ್ನೆಲೆಯಲ್ಲಿ, ಜುಲೈ 12 ರಂದು ಅವರ ವರ್ಚುವಲ್ ಉಪಸ್ಥಿತಿಯನ್ನು ಕೋರಿ ಮುಂದಿನ ಪತ್ರವನ್ನು ಕಳುಹಿಸಲಾಗಿದೆ.

CM Siddaramaiah ಕೇಂದ್ರ ಸರ್ಕಾರವು ಸ್ಥಾಪಿತ ಶಿಷ್ಟಾಚಾರಗಳನ್ನು ಎತ್ತಿಹಿಡಿಯುವುದನ್ನು ಮುಂದುವರೆಸಿದೆ ಮತ್ತು ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಕೊಡುಗೆಗಳನ್ನು ಮತ್ತು ಸಹಕಾರವನ್ನು ನಿರಂತರವಾಗಿ ಶ್ಲಾಘಿಸಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆ ಮತ್ತು ಎಲ್ಲಾ ರಾಜ್ಯಗಳೊಂದಿಗೆ ನಿಕಟ ಸಮನ್ವಯಕ್ಕೆ ಬದ್ಧವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ x ಖಾತೆಯಲ್ಲಿ ಪತ್ರವನ್ನ ಹಂಚಿಕೊಂಡಿದ್ದಾರೆ.

Kanaada Yoga & Research Foundation ಚಾರಣಪ್ರಿಯರೇ, ಜುಲೈ 20ರಂದು “ಆಗುಂಬೆ ಸೋಮೇಶ್ವರ ಮಳೆ ಚಾರಣಕ್ಕೆ ಬರುವಿರಾ?” ಇಲ್ಲಿದೆ ಮಾಹಿತಿ

0

Kanaada Yoga & Research Foundation ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು ಋತುಮಾನಕ್ಕೆ ತಕ್ಕಂತೆ ಕೈಗೊಳ್ಳಬಹುದಾದ ಪ್ರವಾಸಗಳಲ್ಲಿ “ಆಗುಂಬೆ ಸೋಮೇಶ್ವರ” ಮಳೆನಡಿಗೆಯು ಪ್ರವಾಸಿ ಚಾರಣಿಗರಿಗೆ ವಿಶಿಷ್ಠವಾದ ಅನುಭವವನ್ನು ನೀಡುತ್ತದೆ.

ಮಳೆ ನಡಿಗೆಯು ಅಪ್ಪಟ ಮಲೆನಾಡಿನ ದೃಶ್ಯ ಕಾವ್ಯವನ್ನೇ ಉಣಬಡಿಸುತ್ತದೆ.
ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಆಗುಂಬೆಯು ಮಲೆನಾಡಿನ ಸ್ವರ್ಗದಂತಿದೆ. ಪ್ರತಿ ವರ್ಷದ ಮಳೆಗಾಲದ‌ ಸಮಯದಲ್ಲಿ “ಕಣಾದ ಯೋಗ & ರಿಸರ್ಚ್ ಫೌಂಡೇಷನ್” ವತಿಯಿಂದ “ಮಳೆ ನಡಿಗೆ”ಯ ಕಾರ್ಯಕ್ರಮಗಳನ್ನು ಶಿವಮೊಗ್ಗ ಜಿಲ್ಲೆಯ ಅತಿ ಹೆಚ್ಚು ಮಳೆ ಬೀಳುವ ವಿವಿಧ ಸ್ಥಳಗಳಲ್ಲಿ ಒಂದು ದಿನದ ಪ್ರವಾಸವನ್ನು ಏರ್ಪಡಿಸುವ ಮೂಲಕ ಹಮ್ಮಿಕೊಳ್ಳಲಾಗುತ್ತದೆ.

10 ನೇ ವರ್ಷದ” ಮಳೆ ನಡಿಗೆಯ ಅಂಗವಾಗಿ ಈ ಬಾರಿ ಮತ್ತೆ “ಆಗುಂಬೆ ಸೋಮೇಶ್ವರ” ಕ್ಕೆ ಮಳೆ ನಡಿಗೆಯ ಪ್ರವಾಸವನ್ನು ಏರ್ಪಡಿಸಲಾಗಿದೆ.ಜುಲೈ 20 ರ ಭಾನುವಾರದಂದು ಬೆಳಿಗ್ಗೆ 6 ಕ್ಕೆ ಮಿನಿ ಬಸ್ ಗಳಲ್ಲಿ ಶಿವಮೊಗ್ಗದಿಂದ ಆಗುಂಬೆ ತಲುಪಿ,ಅಲ್ಲಿನ ಸೂರ್ಯಾಸ್ತಮಾನ ಗೋಪುರದಿಂದ ಸೋಮೇಶ್ವರ ದೇವಾಲಯದವರೆಗೂ 14 ತಿರುವುಗಳಲ್ಲಿ ಮಳೆಯಲ್ಲಿ ನೆನೆಯುತ್ತಾ,ನಡೆಯುತ್ತಾ ,ಸಣ್ಣಪುಟ್ಟ ಫಾಲ್ಸ್ ಗಳನ್ನು ನೋಡುತ್ತಾ ನಡೆಯುವುದೇ ಒಂದು ರೋಮಾಂಚನಕಾರಿ ಅನುಭವವನ್ನು ನೀಡುತ್ತದೆ.

ಸೋಮೇಶ್ವರದಿಂದ ಬಸ್ ಗಳಲ್ಲಿ ಆಗುಂಬೆಗೆ ವಾಪಸಾದ ನಂತರ ಹತ್ತಿರದ ಫಾಲ್ಸ್ ಮತ್ತು ಅಪರೂಪದ ಸ್ಥಳಗಳಿಗೆ ಭೇಟಿ ನೀಡಿ, ರಾತ್ರಿ 9•30 ರ ಹೊತ್ತಿಗೆ ಶಿವಮೊಗ್ಗ ತಲುಪಲಾಗುತ್ತದೆ.ಈ ಪ್ರವಾಸದಲ್ಲಿ ಪರಿಸರ ಸ್ವಚ್ಛತೆ, ಪರಿಸರ ಅಧ್ಯಯನ ಮತ್ತು ಪ್ರವಾಸಿ ಸ್ಥಳಗಳ ಇತಿಹಾಸವನ್ನು ಅರಿಯಬಹುದಾಗಿದೆ.”ವಸುದೈವ ಕುಟುಂಬಕಂ” ನ ಸಂದೇಶದಂತೆ ಅಪರಿಚಿತರನ್ನು ಆತ್ಮೀಯರನ್ನಾಗಿಸುತ್ತದೆ ಈ ಮಳೆನಡಿಗೆ.

Kanaada Yoga & Research Foundation ಒಂದು ದಿನದ ಈ ಪ್ರವಾಸದಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದ್ದು ಬೆಳಗಿನ ಕಾಫಿ,ಉಪಹಾರ,ಊಟ,ಸ್ನ್ಯಾಕ್ಸ್ , ರಾತ್ರಿ ಊಟ,ಮತ್ತು “ಉಚಿತ ಯೋಗ ಟಿ ಷರ್ಟ್” ಸೇರಿದಂತೆ ಶುಲ್ಕವನ್ನು₹1250/- ನಿಗದಿ ಪಡಿಸಿದ್ದು ಮೊದಲು ಜುಲೈ 17 ರ ಗುರುವಾರದೊಳಗಾಗಿ ನೊಂದಾಯಿಸುವ ಕೇವಲ 45 ಜನರಿಗೆ ಮಾತ್ರವೇ ಅವಕಾಶವಿರುತ್ತದೆ.

ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ (9886674375) ಮಂಜು ಕಾರ್ನಳ್ಳಿ (9916138314)
ಶ್ರೀಧರ್ ಅಯ್ಯರ್ (9480354389) ಸಂಪರ್ಕಿಸಲು ಕೋರಿದೆ.

Lakshmi Hebbalkar ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಸಂತಾಪ

0

Lakshmi Hebbalkar ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ವರನಟ ರಾಜ್‌ಕುಮಾರ್ ಸೇರಿದಂತೆ ಖ್ಯಾತ ನಟರೊಂದಿಗೆ ಅಭಿನಯಿಸಿದ್ದ ಸರೋಜಾದೇವಿ, ತಮ್ಮ ಮನೋಜ್ಞ ಅಭಿನಯದಿಂದ ಅಭಿನಯ ಸರಸ್ವತಿ ಎಂದೇ ಗುರಿತಿಸಿಕೊಂಡಿದ್ದರು. ನಾನು ಚಿಕ್ಕವಯಸ್ಸಿನಿಂದಲೂ ಸರೋಜಾದೇವಿ ಅವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಇಡೀ ದಕ್ಷಿಣ ಭಾರತದಲ್ಲೇ ಅವರು ದೊಡ್ಡ ಹೆಸರು ಮಾಡಿದ್ದರು. ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುಮಾರು ಆರು ದಶಕಗಳ ಕಾಲ ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳ ಚಿತ್ರಗಳಲ್ಲಿ ಅಭಿನೇತ್ರಿ ಬಿ. ಸರೋಜಾದೇವಿ ಅಭಿನಯಿಸಿದ್ದರು. ‌ ಕಿತ್ತೂರು ರಾಣಿ ಚೆನ್ನಮ್ಮ, ಮಲ್ಲಮ್ಮನ ಪವಾಡ, ಅಮರಶಿಲ್ಪಿ ಜಕ್ಕಣಾಚಾರಿ, ಶ್ರೀನಿವಾಸ ಕಲ್ಯಾಣ, ಬಬ್ರುವಾಹನ, ವಿಜಯನಗರದ ವೀರಪುತ್ರ ಸೇರಿದಂತೆ ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ, ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ.

Lakshmi Hebbalkar ಪದ್ಮಭೂಷಣ ಪ್ರಶಸ್ತಿಯ ಜೊತೆಗೆ ಪದ್ಮಶ್ರೀ, ಡಾ.ರಾಜ್‌ಕುಮಾರ್ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ, ತಮಿಳುನಾಡು ಸರ್ಕಾರದಿಂದ ಕಲೈಮಾಣಿ ಪ್ರಶಸ್ತಿ, ಆಂಧ್ರ ಸರ್ಕಾರದಿಂದ ಎನ್‌ಟಿಆರ್ ಪ್ರಶಸ್ತಿಗೆ ಬಿ.ಸರೋಜಾದೇವಿ ಭಾಜನರಾಗಿದ್ದರು. ಅವರ ಅಭಿನಯ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

S.N.Chennabasappa ಶಿವಮೊಗ್ಗ ನಗರದ ವಾರ್ಡ ನಂ.7 ಕ್ಕೆ ಶಾಸಕರ ಭೇಟಿ, ನಿವಾಸಿಗಳ ಕುಂದುಕೊರತೆ ಪರಿಶೀಲನೆ

0

S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 07ರ ದಾಮೋದರ ಬಡಾವಣೆ ಹಾಗೂ ವಾರ್ಡ್ ನಂಬರ್ 34ರ ವಿದ್ಯಾನಗರದ ಮಹಾದೇವಿ ಟಾಕೀಸ್ ಹಿಂಭಾಗದ ಇಸ್ಲಾಪುರ ಬಡಾವಣೆಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು.

S.N.Chennabasappa ಈ ಸಂದರ್ಭದಲ್ಲಿ:
1. ಸ್ವಚ್ಛತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ತೊಂದರೆಗಳಿಗೆ ಸಂಬಂಧಿಸಿದಂತೆ ನಿವಾಸಿಗಳಿಂದ ವಿವರವಾದ ಮಾಹಿತಿ ಪಡೆಯಲಾಗಿದ್ದು, ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
2. ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ, ಸಿಬ್ಬಂದಿಯ ಲಭ್ಯತೆ ಮತ್ತು ಸೇವಾ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ, ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
3. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ, ಬಿಸಿ ಊಟಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
4. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳೀಯರು, ಬಿಜೆಪಿಯ ಪ್ರಮುಖರು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಿದರು.

Karnataka Skill Development Corporation ವಿಶ್ವ ಯುವ ಕೌಶಲ್ಯ ದಿನಾಚರಣೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

0

Karnataka Skill Development Corporation ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ, ಶುಶೂಷಾ ಪರಿಷತ್ತು (KSNC) ವತಿಯಿಂದ ಆಧಾರ್ ಹಾಗೂ ಡಿಜಿಲಾಕರ್ ಇ-ಕೆವೈಸಿ ಮೂಲಕ ಶುಶೂಷಾ ಸಮೂಹದವರಿಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Karnataka Skill Development Corporation ಈ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ‌ ನಾಯಕ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.