Tuesday, February 24, 2026
Tuesday, February 24, 2026
Home Blog Page 245

Kanaada Yoga & Research Foundation ಚಾರಣಪ್ರಿಯರೇ, ಜುಲೈ 20ರಂದು “ಆಗುಂಬೆ ಸೋಮೇಶ್ವರ ಮಳೆ ಚಾರಣಕ್ಕೆ ಬರುವಿರಾ?” ಇಲ್ಲಿದೆ ಮಾಹಿತಿ

0

Kanaada Yoga & Research Foundation ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು ಋತುಮಾನಕ್ಕೆ ತಕ್ಕಂತೆ ಕೈಗೊಳ್ಳಬಹುದಾದ ಪ್ರವಾಸಗಳಲ್ಲಿ “ಆಗುಂಬೆ ಸೋಮೇಶ್ವರ” ಮಳೆನಡಿಗೆಯು ಪ್ರವಾಸಿ ಚಾರಣಿಗರಿಗೆ ವಿಶಿಷ್ಠವಾದ ಅನುಭವವನ್ನು ನೀಡುತ್ತದೆ.

ಮಳೆ ನಡಿಗೆಯು ಅಪ್ಪಟ ಮಲೆನಾಡಿನ ದೃಶ್ಯ ಕಾವ್ಯವನ್ನೇ ಉಣಬಡಿಸುತ್ತದೆ.
ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಆಗುಂಬೆಯು ಮಲೆನಾಡಿನ ಸ್ವರ್ಗದಂತಿದೆ. ಪ್ರತಿ ವರ್ಷದ ಮಳೆಗಾಲದ‌ ಸಮಯದಲ್ಲಿ “ಕಣಾದ ಯೋಗ & ರಿಸರ್ಚ್ ಫೌಂಡೇಷನ್” ವತಿಯಿಂದ “ಮಳೆ ನಡಿಗೆ”ಯ ಕಾರ್ಯಕ್ರಮಗಳನ್ನು ಶಿವಮೊಗ್ಗ ಜಿಲ್ಲೆಯ ಅತಿ ಹೆಚ್ಚು ಮಳೆ ಬೀಳುವ ವಿವಿಧ ಸ್ಥಳಗಳಲ್ಲಿ ಒಂದು ದಿನದ ಪ್ರವಾಸವನ್ನು ಏರ್ಪಡಿಸುವ ಮೂಲಕ ಹಮ್ಮಿಕೊಳ್ಳಲಾಗುತ್ತದೆ.

10 ನೇ ವರ್ಷದ” ಮಳೆ ನಡಿಗೆಯ ಅಂಗವಾಗಿ ಈ ಬಾರಿ ಮತ್ತೆ “ಆಗುಂಬೆ ಸೋಮೇಶ್ವರ” ಕ್ಕೆ ಮಳೆ ನಡಿಗೆಯ ಪ್ರವಾಸವನ್ನು ಏರ್ಪಡಿಸಲಾಗಿದೆ.ಜುಲೈ 20 ರ ಭಾನುವಾರದಂದು ಬೆಳಿಗ್ಗೆ 6 ಕ್ಕೆ ಮಿನಿ ಬಸ್ ಗಳಲ್ಲಿ ಶಿವಮೊಗ್ಗದಿಂದ ಆಗುಂಬೆ ತಲುಪಿ,ಅಲ್ಲಿನ ಸೂರ್ಯಾಸ್ತಮಾನ ಗೋಪುರದಿಂದ ಸೋಮೇಶ್ವರ ದೇವಾಲಯದವರೆಗೂ 14 ತಿರುವುಗಳಲ್ಲಿ ಮಳೆಯಲ್ಲಿ ನೆನೆಯುತ್ತಾ,ನಡೆಯುತ್ತಾ ,ಸಣ್ಣಪುಟ್ಟ ಫಾಲ್ಸ್ ಗಳನ್ನು ನೋಡುತ್ತಾ ನಡೆಯುವುದೇ ಒಂದು ರೋಮಾಂಚನಕಾರಿ ಅನುಭವವನ್ನು ನೀಡುತ್ತದೆ.

ಸೋಮೇಶ್ವರದಿಂದ ಬಸ್ ಗಳಲ್ಲಿ ಆಗುಂಬೆಗೆ ವಾಪಸಾದ ನಂತರ ಹತ್ತಿರದ ಫಾಲ್ಸ್ ಮತ್ತು ಅಪರೂಪದ ಸ್ಥಳಗಳಿಗೆ ಭೇಟಿ ನೀಡಿ, ರಾತ್ರಿ 9•30 ರ ಹೊತ್ತಿಗೆ ಶಿವಮೊಗ್ಗ ತಲುಪಲಾಗುತ್ತದೆ.ಈ ಪ್ರವಾಸದಲ್ಲಿ ಪರಿಸರ ಸ್ವಚ್ಛತೆ, ಪರಿಸರ ಅಧ್ಯಯನ ಮತ್ತು ಪ್ರವಾಸಿ ಸ್ಥಳಗಳ ಇತಿಹಾಸವನ್ನು ಅರಿಯಬಹುದಾಗಿದೆ.”ವಸುದೈವ ಕುಟುಂಬಕಂ” ನ ಸಂದೇಶದಂತೆ ಅಪರಿಚಿತರನ್ನು ಆತ್ಮೀಯರನ್ನಾಗಿಸುತ್ತದೆ ಈ ಮಳೆನಡಿಗೆ.

Kanaada Yoga & Research Foundation ಒಂದು ದಿನದ ಈ ಪ್ರವಾಸದಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದ್ದು ಬೆಳಗಿನ ಕಾಫಿ,ಉಪಹಾರ,ಊಟ,ಸ್ನ್ಯಾಕ್ಸ್ , ರಾತ್ರಿ ಊಟ,ಮತ್ತು “ಉಚಿತ ಯೋಗ ಟಿ ಷರ್ಟ್” ಸೇರಿದಂತೆ ಶುಲ್ಕವನ್ನು₹1250/- ನಿಗದಿ ಪಡಿಸಿದ್ದು ಮೊದಲು ಜುಲೈ 17 ರ ಗುರುವಾರದೊಳಗಾಗಿ ನೊಂದಾಯಿಸುವ ಕೇವಲ 45 ಜನರಿಗೆ ಮಾತ್ರವೇ ಅವಕಾಶವಿರುತ್ತದೆ.

ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ (9886674375) ಮಂಜು ಕಾರ್ನಳ್ಳಿ (9916138314)
ಶ್ರೀಧರ್ ಅಯ್ಯರ್ (9480354389) ಸಂಪರ್ಕಿಸಲು ಕೋರಿದೆ.

Lakshmi Hebbalkar ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಸಂತಾಪ

0

Lakshmi Hebbalkar ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ವರನಟ ರಾಜ್‌ಕುಮಾರ್ ಸೇರಿದಂತೆ ಖ್ಯಾತ ನಟರೊಂದಿಗೆ ಅಭಿನಯಿಸಿದ್ದ ಸರೋಜಾದೇವಿ, ತಮ್ಮ ಮನೋಜ್ಞ ಅಭಿನಯದಿಂದ ಅಭಿನಯ ಸರಸ್ವತಿ ಎಂದೇ ಗುರಿತಿಸಿಕೊಂಡಿದ್ದರು. ನಾನು ಚಿಕ್ಕವಯಸ್ಸಿನಿಂದಲೂ ಸರೋಜಾದೇವಿ ಅವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಇಡೀ ದಕ್ಷಿಣ ಭಾರತದಲ್ಲೇ ಅವರು ದೊಡ್ಡ ಹೆಸರು ಮಾಡಿದ್ದರು. ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುಮಾರು ಆರು ದಶಕಗಳ ಕಾಲ ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳ ಚಿತ್ರಗಳಲ್ಲಿ ಅಭಿನೇತ್ರಿ ಬಿ. ಸರೋಜಾದೇವಿ ಅಭಿನಯಿಸಿದ್ದರು. ‌ ಕಿತ್ತೂರು ರಾಣಿ ಚೆನ್ನಮ್ಮ, ಮಲ್ಲಮ್ಮನ ಪವಾಡ, ಅಮರಶಿಲ್ಪಿ ಜಕ್ಕಣಾಚಾರಿ, ಶ್ರೀನಿವಾಸ ಕಲ್ಯಾಣ, ಬಬ್ರುವಾಹನ, ವಿಜಯನಗರದ ವೀರಪುತ್ರ ಸೇರಿದಂತೆ ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ, ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ.

Lakshmi Hebbalkar ಪದ್ಮಭೂಷಣ ಪ್ರಶಸ್ತಿಯ ಜೊತೆಗೆ ಪದ್ಮಶ್ರೀ, ಡಾ.ರಾಜ್‌ಕುಮಾರ್ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ, ತಮಿಳುನಾಡು ಸರ್ಕಾರದಿಂದ ಕಲೈಮಾಣಿ ಪ್ರಶಸ್ತಿ, ಆಂಧ್ರ ಸರ್ಕಾರದಿಂದ ಎನ್‌ಟಿಆರ್ ಪ್ರಶಸ್ತಿಗೆ ಬಿ.ಸರೋಜಾದೇವಿ ಭಾಜನರಾಗಿದ್ದರು. ಅವರ ಅಭಿನಯ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

S.N.Chennabasappa ಶಿವಮೊಗ್ಗ ನಗರದ ವಾರ್ಡ ನಂ.7 ಕ್ಕೆ ಶಾಸಕರ ಭೇಟಿ, ನಿವಾಸಿಗಳ ಕುಂದುಕೊರತೆ ಪರಿಶೀಲನೆ

0

S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 07ರ ದಾಮೋದರ ಬಡಾವಣೆ ಹಾಗೂ ವಾರ್ಡ್ ನಂಬರ್ 34ರ ವಿದ್ಯಾನಗರದ ಮಹಾದೇವಿ ಟಾಕೀಸ್ ಹಿಂಭಾಗದ ಇಸ್ಲಾಪುರ ಬಡಾವಣೆಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು.

S.N.Chennabasappa ಈ ಸಂದರ್ಭದಲ್ಲಿ:
1. ಸ್ವಚ್ಛತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ತೊಂದರೆಗಳಿಗೆ ಸಂಬಂಧಿಸಿದಂತೆ ನಿವಾಸಿಗಳಿಂದ ವಿವರವಾದ ಮಾಹಿತಿ ಪಡೆಯಲಾಗಿದ್ದು, ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
2. ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ, ಸಿಬ್ಬಂದಿಯ ಲಭ್ಯತೆ ಮತ್ತು ಸೇವಾ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ, ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
3. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ, ಬಿಸಿ ಊಟಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
4. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳೀಯರು, ಬಿಜೆಪಿಯ ಪ್ರಮುಖರು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಿದರು.

Karnataka Skill Development Corporation ವಿಶ್ವ ಯುವ ಕೌಶಲ್ಯ ದಿನಾಚರಣೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

0

Karnataka Skill Development Corporation ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ, ಶುಶೂಷಾ ಪರಿಷತ್ತು (KSNC) ವತಿಯಿಂದ ಆಧಾರ್ ಹಾಗೂ ಡಿಜಿಲಾಕರ್ ಇ-ಕೆವೈಸಿ ಮೂಲಕ ಶುಶೂಷಾ ಸಮೂಹದವರಿಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Karnataka Skill Development Corporation ಈ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ‌ ನಾಯಕ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Youth Hostel of India ಸಂಸ್ಥೆಗಳ ಪ್ರಗತಿಗೆ ಶ್ರಮಿಸಿದ ಹಿರಿಯರನ್ನ ಗೌರವಿಸುವುದು ನಮ್ಮ ಕರ್ತವ್ಯ- ಸತೀಶ್

0

Youth Hostel of India ಸಂಘ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಿರಿಯ ಸದಸ್ಯರ ಶ್ರಮ ಅಪಾರವಾಗಿರುತ್ತದೆ. ಸಂಸ್ಥೆಗಳ ಪ್ರಗತಿಗೆ ಶ್ರಮಿಸಿದ ಹಿರಿಯರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಯೂತ್ ಹಾಸ್ಟೆಲ್ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಸತೀಶ್ ಹೇಳಿದರು.

ಮಥುರಾ ಪ್ಯಾರಾಡೈಸ್‌ನಲ್ಲಿ ಯೂತ್ ಹಾಸ್ಟೆಲ್ ಆಫ್ ಇಂಡಿಯಾದ ತರುಣೋದಯ ಘಟಕದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, 35 ವರ್ಷದ ಹಿಂದೆ ಪ್ರಾರಂಭವಾದ ಈ ಸಂಸ್ಥೆಯ ಹಿರಿಯ ಸದಸ್ಯರನ್ನು ಗೌರವಿಸುತ್ತಿರುವುದು ಉತ್ತಮ ಕಾರ್ಯ. ಅವರ ಪರಿಶ್ರಮದಿಂದ ಈ ಘಟಕ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿದೆ. ಮುಂದಿನ ಪೀಳಿಗೆಗೆ, ಹಿಂದಿನ ಸಂಘಟಕರ ವಿಷಯವನ್ನು ತಿಳಿಸುವುದು ನಾವು ತಪ್ಪದೇ ಮಾಡಬೇಕಾದ ವಿಷಯ ಎಂದು ತಿಳಿಸಿದರು.

ಕಾರ್ಯಾಧ್ಯಕ್ಷ ವಾಗೇಶ್ ಮಾತನಾಡಿ, ಕಳೆದ ಕೆಲ ವರ್ಷದಿಂದ ಹಿರಿಯ ಸದಸ್ಯರನ್ನು ಸನ್ಮಾನಿಸಿ, ಅವರಿಗೆ ಗೌರವ ಸಮರ್ಪಿಸುತ್ತಿದ್ದೇವೆ. ಅದೇ ರೀತಿ ಇಂದು ಕೆಲವು ಹಿರಿಯ ಸದಸ್ಯರನ್ನು ಆಹ್ವಾನಿಸಿದ್ದೇವು. ಹಿರಿಯ ಸದಸ್ಯರಿಗೆ ಸನ್ಮಾನಿಸಿ ಸಂಘಟನೆ ಗೌರವವನ್ನು ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

Youth Hostel of India ಯೂತ್ ಹಾಸ್ಟೆಲ್ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ಅ.ನಾ.ವಿಜಯೇಂದ್ರರಾವ್ ಅವರು ಯೂತ್ ಹಾಸ್ಟೆಲ್ ನಡೆದು ಬಂದ ದಾರಿ, ಚಾರಣದಿಂದ ಆಗುವ ಅನುಭವಗಳು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಶ ವಿದೇಶಗಳ ಚಾರಣಿಗರ ಸಂಪರ್ಕ ಸಿಗುತ್ತದೆ. ತರುಣೋದಯ ಘಟಕ ಚಾರಣದ ಜತೆಗೆ ಪ್ರತಿ ವರ್ಷ 200ಕ್ಕೂ ಹೆಚ್ಚು ಜನರನ್ನು ಹಿಮಾಲಯ ಚಾರಣಕ್ಕೆ ಕಳಿಸುತ್ತಿದೆ. ಸದಸ್ಯತ್ವದಲ್ಲಿ ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೂತ್ ಹಾಸ್ಟೆಲ್ ತರುಣೋದಯ ಘಟಕದ ಗೌರವಾಧ್ಯಕ ಎನ್.ಗೋಪಿನಾಥ್ ಮಾತನಾಡಿ, ಮಲೆನಾಡು ಹಬ್ಬ ಎಂಬ ಹೊಸ ಕಾರ್ಯಕ್ರಮವನ್ನು ಸ್ವಾತಂತ್ರ‍್ಯ ಉದ್ಯಾನವನದಲ್ಲಿ ಎರಡನೂರು ಮಳಿಗೆಗಳನ್ನು ಹಾಕಿ ಆಯೋಜಿಸಲಾಗುವುದು. ಎಲ್ಲರ ಸಹಕಾರ ಅವಶ್ಯಕತೆ ಇದ್ದು, ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ತಿಳಿಸಿದರು.

ಯೂತ್ ಹಾಸ್ಟೆಲ್ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ, ಸುಮಾರಾಣಿ, ಮಮತಾ,
ಸುರೇಶ್ ಇತರರು ಹಾಜರಿದ್ದರು.

CM Siddaramaiah ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ. ಪ್ರಧಾನಿಗೆ ಪತ್ರ ಬರೆದ ಸಿದ್ಧರಾಮಯ್ಯ

0

CM Siddaramaiah ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ತಾ. 14-7-25 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಭವಿಸಿದ ಶಿಷ್ಟಾಚಾರ ಉಲ್ಲಂಘನೆಯ ಕುರಿತು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಧ್ಯಮಗಳಿಗೆ ತಾವು ಬರೆದ ಪತ್ರವನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

MESCOM ಜುಲೈ 17. ಗೋಪಿಶೆಟ್ಟಿ‌ಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Narayana Multispeciality Hospital ಜುಲೈ 17. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸರ್ವೈವರ್ ಕ್ಲಿನಿಕ್ ಆರಂಭ

0

Narayana Multispeciality Hospital ಕ್ಯಾನ್ಸರ್ ಸರ್ವೈವರ್ಸ ಗಳಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ ಕ್ಲಿನಿಕ್ ಆರಂಭಿಸಿದ್ದಾರೆ.

ಜುಲೈ ೧೭ ರಂದು ಈ ಕ್ಲಿನಿಕ್ ನಡೆಯುತ್ತದೆ, ಇದು ಪ್ರತಿ ತಿಂಗಳ 3ನೇ ಗುರುವಾರದಂದು ನಡೆಯುವ ಕ್ಲಿನಿಕ್ ಆಗಿದ್ದು ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಈ ಕ್ಲಿನಿಕ್ ಆರಂಭಿಸಲಾಗಿದೆ.

ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಲು ತಜ್ಞರಿಂದ ಸಹ ಇಲ್ಲಿ ಮಾಹಿತಿ ನೀಡಲಾಗುತ್ತದೆ.

Narayana Multispeciality Hospital ಈ ತಿಂಗಳು ಎಂಡೋಕ್ರೈನಾಲೋಜಿಸ್ಟ್ ಡಾ. ಸುಜನ್ ಆರ್ ಮುದದೇವಣ್ಣನವರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅವರು ಕ್ಯಾನ್ಸರ್ ಚಿಕಿತ್ಸೆ ವೇಳೆ ಮಧುಮೇಹ ನಿರ್ವಹಣೆ: ಕ್ಯಾನ್ಸರ್ ಅನ್ನು ಗೆದ್ದವರು ಮತ್ತು ರೋಗಿಗಳು ಏನು ತಿಳಿಯಬೇಕು ಈ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ದಿನಾಂಕ: 17 ಜುಲೈ 2025, ಗುರುವಾರ
ಸಮಯ ಮತ್ತು ಸ್ಥಳ: ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:00 | ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ. ಮಾಹಿತಿಗಾಗಿ
18003090309 ಸಂಪರ್ಕಿಸಿ ಅಥವಾ ಎನ್ ಎಚ್ ಕೇರ್ ಆಪ್ ಬಳಿಸಿ.

Backward Classes Welfare Department ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

0

Backward Classes Welfare Department ಶಿವಮೊಗ್ಗಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ದಿ: 14/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.inನ್ನು ಸಂಪರ್ಕಿಸಿ, ಅರ್ಜಿ Backward Classes Welfare Department ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂ. 8050770004/ 8050770005 ಗಳನ್ನು ಸಂಪರ್ಕಿಸುವುದು.

Guarantee scheme ರಾಜ್ಯದ ಮಹಿಳೆಯರಿಂದ 500 ಕೋಟಿ ಬಸ್ ಪ್ರಯಾಣವಾಗಿದೆ ಇದೊಂದು ಸಂತಸದ ಸಂಗತಿ- ಶಾಸಕಿ ಬಲ್ಕೀಶ ‌ಬಾನು

0

Guarantee scheme ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಈವರೆಗೆ ರಾಜ್ಯದಾದ್ಯಂತ ಸುಮಾರು 500 ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುವುದು ಸಂತಸದ ಸಂಗತಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು ಅವರು ಹೇಳಿದರು.
ಅವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೆ.ಎಸ್.ಆರ್.ಟಿ.ಸಿ.ಸಂಸ್ಥೆಯ ಸಹಯೋಗದೊಂದಿಗೆ ನಗರದ ರಾಜ್ಯ ರಸ್ತೆ ಸಾರಿಗೆ ಬಸ್ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ನಾರಿಯರ ಸಬಲೀಕರಣಕ್ಕೆ ಪುಷ್ಠಿ ನೀಡಿದೆ. ರಾಜ್ಯದಾದ್ಯಂತ ಪ್ರತಿದಿನ ಸುಮಾರು 50-60ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆಯುತ್ತಿದೆ ಎಂದರು.
ಶಕ್ತಿ ಯೋಜನೆಯ ಕುರಿತು ರಾಷ್ಟ್ರೀಯ-ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಅಧ್ಯಯನಗಳು ನಡೆದಿದ್ದು ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನೆರೆಯ ರಾಜ್ಯಗಳೂ ಕೂಡ ಈ ಯೋಜನೆಯನ್ನು ಮಾದರಿಯಾಗಿ ಇಟ್ಟುಕೊಂಡು ಅನುಷ್ಠಾನಕ್ಕೆ ಮುಂದಾಗಿರುವುದು ಯೋಜನೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಒಟ್ಟಾರೆಯಾಗಿ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಶಕ್ತಿಗೆ ನವಚೈತನ್ಯ ತುಂಬಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದ ಅವರು, ಕಾಲಕಾಲಕ್ಕೆ ಬೆಲೆ ಏರಿಕೆಯ ಬಿಸಿ, ನಿರುದ್ಯೋಗ ಮತ್ತಿತರ ಹಲವು ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದ ಜನರ ಸ್ಥಿತಿಗತಿಗಳನ್ನು ಅರಿತು, ಆಡಳಿತಾರೂಢ ಸರ್ಕಾರವು ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಶಕ್ತಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
Guarantee scheme ಮಹಿಳೆಯರಿಗಾಗಿ ರೂಪಿಸಿ ಅನುಷ್ಠಾನಗೊಳಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಬಡವರಿಗೆ, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಈ ಓಡಾಟದ ವೆಚ್ಚವನ್ನು ಮನೆ ಖರ್ಚಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಎಂದು ಗಜೇಂದ್ರಘಡದ ಪ್ರಯಾಣಿಕರಾದ ಶ್ರೀಮತಿ ಜಯಶ್ರೀ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಈ ಯೋಜನೆಯು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಪುರುಷರಿಗೆ ಸಮಾನವಾಗಿ ನಿಲ್ಲುವಂತೆ ಮಾಡುವ ಪ್ರಯತ್ನಕ್ಕೆ ಸಹಕಾರಿಯಾಗಿದೆ. ದುಡಿಯುವ ಮಹಿಳೆಯರಿಗೆ ಅದರಲ್ಲೂ ಮಧ್ಯಮ ಮತ್ತು ಕೆಳವರ್ಗದ ದುಡಿಯುವ ಮಹಿಳೆಯರಿಗೆ ವರದಾನವಾಗಿದೆ ಎಂದ ಅವರು, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಈ ಸೌಲಭ್ಯ ಜಾರಿಯಿಂದ ಸಂತಸಗೊಂಡಿದ್ದಾರೆ. ನಾಲ್ಕು ಗೋಡೆಗಳ ನಡುವೆ ಸಂಸಾರದ ಕೋಟೆಯಲ್ಲಿ ಬಂಧಿಗಳಾಗಿದ್ದ ಮಹಿಳೆಯರು ಈಗ ಗೂಡಿನಿಂದ ಹೊರಬಂದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಿ, ತೀರ್ಥಕ್ಷೇತ್ರಗಳು, ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಮತ್ತೊಂದ ಕಡೆಗೆ ಈ ಯೋಜನೆ ವಾಣಿಜ್ಯ ಚಟುವಟಿಕೆ ಗರಿಗೆದರಲು ಅವಕಾಶ ಬಂದೊದಗಿದಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಿ.ಸಿ.ಸಿ.ಬ್ಯಾಂಕ್ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮುಖಂಡರಾದ ಹೆಚ್.ಸಿ.ಯೋಗೀಶ್, ಎನ್.ರಮೇಶ್, ಕೆ.ಎಸ್.ಆರ್.ಟಿ.ಸಿ. ಡಿ.ಸಿ., ನವೀನ್ಕುಮಾರ್, ಡಿ.ಟಿ.ಓ. ದಿನೇಶ್ಕುಮಾರ್ಚನ್ನಗಿರಿ, ಡಿಪೋ ವ್ಯವಸ್ಥಾಪಕ ರಾಮಚಂದ್ರ, ಜಿಲ್ಲಾ ಸಂಚಾರಿ ನಿಯಂತ್ರಕ ಎ.ವಿ.ಪ್ರಕಾಶ್ಸೇರಿದಂತೆ ಗ್ಯಾರಂಟಿ ಸಮಿತಿಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು, ಸಾರಿಗೆ ನಿಗಮ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬಸ್ಚಾಲಕ ಮತ್ತು ನಿರ್ವಾಹಕರಿಗೆ ಗೌರವಿಸಲಾಯಿತು.