Backward Classes Welfare Department ಶಿವಮೊಗ್ಗಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ ಮೂಲಕ ದಿ: 14/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.inನ್ನು ಸಂಪರ್ಕಿಸಿ, ಅರ್ಜಿ Backward Classes Welfare Department ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂ. 8050770004/ 8050770005 ಗಳನ್ನು ಸಂಪರ್ಕಿಸುವುದು.
Backward Classes Welfare Department ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
Guarantee scheme ರಾಜ್ಯದ ಮಹಿಳೆಯರಿಂದ 500 ಕೋಟಿ ಬಸ್ ಪ್ರಯಾಣವಾಗಿದೆ ಇದೊಂದು ಸಂತಸದ ಸಂಗತಿ- ಶಾಸಕಿ ಬಲ್ಕೀಶ ಬಾನು
Guarantee scheme ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಈವರೆಗೆ ರಾಜ್ಯದಾದ್ಯಂತ ಸುಮಾರು 500 ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುವುದು ಸಂತಸದ ಸಂಗತಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು ಅವರು ಹೇಳಿದರು.
ಅವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೆ.ಎಸ್.ಆರ್.ಟಿ.ಸಿ.ಸಂಸ್ಥೆಯ ಸಹಯೋಗದೊಂದಿಗೆ ನಗರದ ರಾಜ್ಯ ರಸ್ತೆ ಸಾರಿಗೆ ಬಸ್ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ನಾರಿಯರ ಸಬಲೀಕರಣಕ್ಕೆ ಪುಷ್ಠಿ ನೀಡಿದೆ. ರಾಜ್ಯದಾದ್ಯಂತ ಪ್ರತಿದಿನ ಸುಮಾರು 50-60ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆಯುತ್ತಿದೆ ಎಂದರು.
ಶಕ್ತಿ ಯೋಜನೆಯ ಕುರಿತು ರಾಷ್ಟ್ರೀಯ-ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಅಧ್ಯಯನಗಳು ನಡೆದಿದ್ದು ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನೆರೆಯ ರಾಜ್ಯಗಳೂ ಕೂಡ ಈ ಯೋಜನೆಯನ್ನು ಮಾದರಿಯಾಗಿ ಇಟ್ಟುಕೊಂಡು ಅನುಷ್ಠಾನಕ್ಕೆ ಮುಂದಾಗಿರುವುದು ಯೋಜನೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಒಟ್ಟಾರೆಯಾಗಿ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಶಕ್ತಿಗೆ ನವಚೈತನ್ಯ ತುಂಬಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದ ಅವರು, ಕಾಲಕಾಲಕ್ಕೆ ಬೆಲೆ ಏರಿಕೆಯ ಬಿಸಿ, ನಿರುದ್ಯೋಗ ಮತ್ತಿತರ ಹಲವು ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದ ಜನರ ಸ್ಥಿತಿಗತಿಗಳನ್ನು ಅರಿತು, ಆಡಳಿತಾರೂಢ ಸರ್ಕಾರವು ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಶಕ್ತಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
Guarantee scheme ಮಹಿಳೆಯರಿಗಾಗಿ ರೂಪಿಸಿ ಅನುಷ್ಠಾನಗೊಳಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಬಡವರಿಗೆ, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಈ ಓಡಾಟದ ವೆಚ್ಚವನ್ನು ಮನೆ ಖರ್ಚಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಎಂದು ಗಜೇಂದ್ರಘಡದ ಪ್ರಯಾಣಿಕರಾದ ಶ್ರೀಮತಿ ಜಯಶ್ರೀ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಈ ಯೋಜನೆಯು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಪುರುಷರಿಗೆ ಸಮಾನವಾಗಿ ನಿಲ್ಲುವಂತೆ ಮಾಡುವ ಪ್ರಯತ್ನಕ್ಕೆ ಸಹಕಾರಿಯಾಗಿದೆ. ದುಡಿಯುವ ಮಹಿಳೆಯರಿಗೆ ಅದರಲ್ಲೂ ಮಧ್ಯಮ ಮತ್ತು ಕೆಳವರ್ಗದ ದುಡಿಯುವ ಮಹಿಳೆಯರಿಗೆ ವರದಾನವಾಗಿದೆ ಎಂದ ಅವರು, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಈ ಸೌಲಭ್ಯ ಜಾರಿಯಿಂದ ಸಂತಸಗೊಂಡಿದ್ದಾರೆ. ನಾಲ್ಕು ಗೋಡೆಗಳ ನಡುವೆ ಸಂಸಾರದ ಕೋಟೆಯಲ್ಲಿ ಬಂಧಿಗಳಾಗಿದ್ದ ಮಹಿಳೆಯರು ಈಗ ಗೂಡಿನಿಂದ ಹೊರಬಂದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಿ, ತೀರ್ಥಕ್ಷೇತ್ರಗಳು, ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಮತ್ತೊಂದ ಕಡೆಗೆ ಈ ಯೋಜನೆ ವಾಣಿಜ್ಯ ಚಟುವಟಿಕೆ ಗರಿಗೆದರಲು ಅವಕಾಶ ಬಂದೊದಗಿದಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಿ.ಸಿ.ಸಿ.ಬ್ಯಾಂಕ್ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮುಖಂಡರಾದ ಹೆಚ್.ಸಿ.ಯೋಗೀಶ್, ಎನ್.ರಮೇಶ್, ಕೆ.ಎಸ್.ಆರ್.ಟಿ.ಸಿ. ಡಿ.ಸಿ., ನವೀನ್ಕುಮಾರ್, ಡಿ.ಟಿ.ಓ. ದಿನೇಶ್ಕುಮಾರ್ಚನ್ನಗಿರಿ, ಡಿಪೋ ವ್ಯವಸ್ಥಾಪಕ ರಾಮಚಂದ್ರ, ಜಿಲ್ಲಾ ಸಂಚಾರಿ ನಿಯಂತ್ರಕ ಎ.ವಿ.ಪ್ರಕಾಶ್ಸೇರಿದಂತೆ ಗ್ಯಾರಂಟಿ ಸಮಿತಿಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು, ಸಾರಿಗೆ ನಿಗಮ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬಸ್ಚಾಲಕ ಮತ್ತು ನಿರ್ವಾಹಕರಿಗೆ ಗೌರವಿಸಲಾಯಿತು.
JCI Shimoga ಜುಲೈ 19 & 20 ರಂದು ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ
JCI Shimoga ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳ ವತಿಯಿಂದ ನಗರದ ಮಥುರಾ ಪ್ಯಾರಾಡೈಸ್ನಲ್ಲಿ ಜುಲೈ 19 ಮತ್ತು 20ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜೆಸಿಐ ಸಂಸ್ಥೆಯ ಡಾ. ಎಸ್.ವಿ.ಶಾಸ್ತ್ರಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು. ಜೆಸಿಐ ಸಂಸ್ಥೆಯ ಪ್ರವೀಣ್ ದೇಶಪಾಂಡೆ, ನಿವೇದಿತಾ, ವಿನೀತ್ ತರಬೇತುದಾರರಾಗಿ ಪಾಲ್ಗೊಳ್ಳುವರು. ಜೆಸಿಐ ಶಿವಮೊಗ್ಗ ಶಕ್ತಿ ಸಂಸ್ಥೆಯ ಅಧ್ಯಕ್ಷೆ ಸ್ವಾತಿ ಎಸ್.ಎಂ., ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಯ ಅಧ್ಯಕ್ಷೆ ಶಿಲ್ಪಾ ಎನ್. ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು. ಎರಡು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಮೊಬೈಲ್ ಸಂಖ್ಯೆ 8050114993 ಸಂಪರ್ಕಿಸಬಹುದಾಗಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ ಗಣೇಶ್ ತಿಳಿಸಿದ್ದಾರೆ.
Gubbi Vani Trust ತಂತ್ರಜ್ಞಾನ ಬೆಳವಣಿಗೆಯಿಂದಾಗಿ ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ವಿಪುಲ ಅವಕಾಶಗಳಿವೆ-ಮಾಳವಿಕಾ ಗುಬ್ಬಿವಾಣಿ
Gubbi Vani Trust ಮಹಿಳೆಯರ ಪ್ರತಿಭೆ ಅನಾವರಣಗೊಳ್ಳಲು ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ಆತ್ಮವಿಶ್ವಾಸ ವೃದ್ಧಿಸಿಕೊಳ್ಳಲು ಇನ್ನರ್ ವೀಲ್ ಸಂಸ್ಥೆ ಅತ್ಯಂತ ಸಹಕಾರಿಯಾಗಿದೆ ಎಂದು ಗುಬ್ಬಿ ವಾಣಿ ಟ್ರಸ್ಟ್ ಸಂಸ್ಥಾಪಕರಾದ ಮಾಳವಿಕಾ ಗುಬ್ಬಿವಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರದ ರೋಟರಿ ರಕ್ತ ನಿಧಿಯ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಇಂದು ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ವಿಪುಲವಾದ ಅವಕಾಶಗಳಿವೆ ಇಂತಹ ಅಂತರಾಷ್ಟ್ರೀಯ ಸಂಘ ಸಂಸ್ಥೆಗಳ ಮುಖಾಂತರ ತೊಡಗಿಸಿ ಕೊಂಡಾಗ ಪರಸ್ಪರ. ಸಾಧನೆ. ವ್ಯಕ್ತಿತ್ವ ಪರಿಚಯವಾಗುವುದರ ಜೊತೆಗೆ ನಾವು ಸಹ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಇನ್ನರ್ ವೀಲ್ ಸಂಸ್ಥೆ ಈಗಾಗಲೇ ಪ್ರಪಂಚಾದ್ಯಂತ ವಿಶೇಷ ಸೇವಾ ಕಾರ್ಯಗಳ ಮುಖಾಂತರ ತನ್ನದೇ ಆದ ಗುರುತರವಾದ ಹೆಜ್ಜೆಯನ್ನು ಮೂಡಿಸಿದೆ ಮಹಿಳೆಯರಿಗಾಗಿ ಸ್ಥಾಪಿತವಾದ ಅಂತರಾಷ್ಟ್ರೀಯ ಸಂಸ್ಥೆ ಮುಖಾಂತರ ಸಮಾಜಮುಖಿ ಸೇವೆಗಳು ಹಾಗೂ ಪ್ರೀತಿ ಸ್ನೇಹ ಒಡನಾಟ ಇವುಗಳ ಮುಖಾಂತರ ನಮ್ಮ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಇಂತಹ ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಸದಸ್ಯತ್ವ ತೆಗೆದುಕೊಳ್ಳುವುದರ ಮುಖಾಂತರ ಸಂಸ್ಥೆಯನ್ನು ಬಲಪಡಿಸಬೇಕು ಎಂದು ನುಡಿದರು.
ಇದೇ ಸಂದರ್ಭದಲ್ಲಿ 2024 -25ರ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರಿಂದ
2025 -26ರ ನೂತನ ಅಧ್ಯಕ್ಷರಾಗಿ ವೀಣಾ ಸುರೇಶ್ ಅಧಿಕಾರ ಹಸ್ತಾಂತರಿಸಿಕೊಂಡರು ಕಾರ್ಯದರ್ಶಿ ಲತಾ ಸೋಮಣ್ಣನವರಿಂದ ನೂತನ ಕಾರ್ಯದರ್ಶಿ ಶಿಲ್ಪ ಗೋಪಿನಾಥ ಅವರು ಅಧಿಕಾರವಹಿಸಿಕೊಂಡರು .
ಇದೇ ಸಂದರ್ಭದಲ್ಲಿ ಗ್ರಾಮೀಣ ಶಾಲೆಗೆ ಒಂದು ಕಂಪ್ಯೂಟರ್
ಹಾಗೂ ಇನ್ನರ್ ವೀಲ್ ಮಾಜಿ ಅಧ್ಯಕ್ಷ ರಾದ ರಾಜೇಶ್ವರಿ ಪ್ರತಾಪ್ ಅವರು ಸರ್ಕಾರಿ ಶಾಲೆಗೆ ತಟ್ಟೆ ಲೋಟ ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ವೀಣಾ ಸುರೇಶ್ ಅವರು ಮಾತನಾಡುತ್ತಾ ಈಗಾಗಲೇ ಈ ಪರ ಗ್ರಹಣದ ನಿಮಿತ್ತ ರೋಟರಿ ಶಾಲೆಗೆ ಕುಡಿಯುವ ನೀರಿನ ಯಂತ್ರ ಹಾಗೂ ವೃದ್ಧಾಶ್ರಮಗಳಿಗೆ ಆರೋಗ್ಯ ತಪಾಸಣಾ ಯಂತ್ರಗಳನ್ನು ನೀಡುವುದರ ಮುಖಾಂತರ ನಮ್ಮ ಸೇವಾ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ ಹಾಗೂ ಮತ್ತೊಂದು ಹೆಮ್ಮೆಯ ಸಂಗತಿ ಎಂದರೆ ನಮ್ಮ ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶೋಭಾ ಕಡಿದಾಳ ರವರ ಪುತ್ರಿ ಶಬರಿ ಕಡಿದಾಳವರು ಇನ್ನರ್ ವೀಲ್ ಜಿಲ್ಲಾ ಚೇರ್ಮನ್ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದಾರೆ ಎಂದು ನುಡಿದರು ಇದೇ ಸಂದರ್ಭದಲ್ಲಿ ಇನ್ನರ್ ವೀಲ್ ಸಂಸ್ಥೆಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.
Gubbi Vani Trust ಸಮಾರಂಭದಲ್ಲಿ ಮಮತಾ ಸುಧೀಂದ್ರ
ಶ್ವೇತಾ ಅಶಿತ್. ಚೇತನ ಕಿರಣ್. ವಿಜಯಶ್ರೀ ಷಣ್ಮುಖ. ಉಮಾ ವೆಂಕಟೇಶ್. ರೇಖಾ ಅಶೋಕ್ ಕುಮಾರ್. ವಿಜಯ ಜವಳಿ. ವಾಸಂತಿ ಷಣ್ಮುಖಪ್ಪ. ವಿನೋದ ರಮೇಶ್. ಸವಿತಾ. ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್. ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
Shivamogga District Tourism Development Forum ಜಿಲ್ಲೆಯ ಪ್ರತಿಯೊಬ್ಬರೂ ಪ್ರವಾಸಿತಾಣಗಳ ಬಗ್ಗೆ ಅರಿತಿರಬೇಕು- ಡಿ.ಎಂ.ಶಂಕರಪ್ಪ
Shivamogga District Tourism Development Forum ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ವೇದಿಕೆ ವತಿಯಿಂದ ಆಯೋಜಿಸಿದ್ದ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 12ನೇ ಶತಮಾನದ ಶರಣರು ನಾಡು ನಮ್ಮ ಜಿಲ್ಲೆ ಶಿವಮೊಗ್ಗ, ಅದರಲ್ಲು ಶಿಕಾರಿಪುರ ತಾಲ್ಲೂಕಿನಲ್ಲಿ ಹಲವಾರು ಶರಣರನ್ನು ಕಾಣಬಹುದು. ಜಿಲ್ಲೆಯಲ್ಲಿರುವ ಪ್ರತಿಯೊಬ್ಬರಿಗೂ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ಅರಿತಿರಬೇಕು. ಈ ನಿಟ್ಟಿನಲ್ಲಿ ಪ್ರತಿ ವಾರ ಒಂದು ದಿನದ ಪ್ರವಾದ ಏರ್ಪಡಿಸುತ್ತಿದ್ದೇವೆ. ಅತ್ಯಂತ ಕಡಿಮೆ ದರದಲ್ಲಿ ಪ್ರವಾಸ ಆಯೋಜಿಸಿದ್ದೇವೆ ಎಂದು ತಿಳಿಸಿದರು.
ಬಸ್ ಮಾಲಿಕರ ಸಂಘದ ಅಧ್ಯಕ್ಷ ರಂಗಪ್ಪ ಮಾತನಾಡಿ, ಬಸ್ ಮಾಲಿಕರು ಅತ್ಯಂತ ಕಡಿಮೆ ದರಕ್ಕೆ ಅತ್ಯುತ್ತಮ ಬಸ್ ಸೌಲಭ್ಯ ನೀಡುತ್ತಿದ್ದು, ಪ್ರಯಾಣಿಕರ ಸಂತೋಷವೆ ಪ್ರವಾಸೋದ್ಯಮದ ಉನ್ನತಿಗೆ ಕಾರಣವಾಗುತ್ತದೆ ಎಂಬ ನಂಬಿಕೆ ಇದೆ ಎಂದರು.
ಅಂಜನಾಪುರ, ಶಿಕಾರಿಪುರ, ಬನವಾಸಿ, ಚಂದ್ರಗುತ್ತಿ ಹಾಗೂ ಹಲವಾರು ಐತಿಹಾಸಿಕ ಸ್ಥಳಗಳಿಗೆ ಒಂದು ದಿನದ ಪ್ರವಾಸ ಏರ್ಪಡಿಸಲಾಗಿತ್ತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸದಿಂದ ಜೀವನೋತ್ಸಾಹ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ನಾಲ್ಕನೇ ಪ್ರವಾಸವಾಗಿದೆ. ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
Shivamogga District Tourism Development Forum ವಾಗೇಶ್ ಮಾತನಾಡಿ, ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಯೂತ್ ಹಾಸ್ಟೆಲ್ ಹಾಗೂ ಅಭಿವೃದ್ಧಿ ವೇದಿಕೆಯಿಂದ ನಿರಂತರವಾಗಿ ಪ್ರವಾಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ಲಕ್ಷ್ಮೀ ರಾಜೇಶ್, ಮಹಾದೇವ ಸ್ವಾಮಿ ಇದ್ದರು. 50ಕ್ಕೂ ಹೆಚ್ಚು ಜನ ಪ್ರವಾಸದಲ್ಲಿ ಪಾಲ್ಗೊಂಡಿದ್ದರು.
J.S. Chidananda Gowda ಸಿಗಂದೂರು ಸೇತುವೆಗೆ ಹಿರಿಯ ಬಿಎಸ್ ವೈ ಅವರ ಹೆಸರಿಡಲು ಸೊರಬದ ಜೆ.ಎಸ್.ಚಿದಾನಂದ ಗೌಡ ಆಗ್ರಹ
J.S. Chidananda Gowda ಶರಾವತಿ ಹಿನ್ನೀರಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಆಗ್ರಹಿಸಿದ್ದಾರೆ.
೧೯೬೪ರಲ್ಲಿ ಲಿಂಗನಮುಕ್ಕಿ ಆಣೆಕಟ್ಟೆಯ ಪರಿಣಾಮ ಸಾಗರ ಹೊಸನಗರ ಭಾಗದ ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳು ಮುಳುಗಡೆಯಾದವು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ೧೦೦ ಕೋಟಿ ರೂ., ಅನುದಾನವನ್ನು ಸೇತುವೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದರು. ಸೇತುವೆ ನಿರ್ಮಾಣಕ್ಕಾಗಿ ಸುಮಾರು ಏಳು ದಶಕಗಳ ಕಾಲ ದ್ವೀಪದ ಜನರು ಹೋರಾಟ ಮಾಡಿದ್ದರು. ಬಿ.ಎಸ್. ಯಡಿಯೂರಪ್ಪನವರ ಹಠ ಮತ್ತು ಬಿ.ವೈ. ರಾಘವೇಂದ್ರ ಅವರ ಛಲದಿಂದ ಇದೀಗ ಸೇತುವೆ ನಿರ್ಮಾಣವಾಗಿರುವುದು ಸಂತಸದ ವಿಷಯವಾಗಿದೆ ಎಂದಿದ್ದಾರೆ.
J.S. Chidananda Gowda ದ್ವೀಪದ ಜನತೆ ತುರ್ತು ಸ್ಥಿತಿಯಲ್ಲಿ ಸಾಗರಕ್ಕೆ ತಲುಪಲು ಸಾಧ್ಯವಾಗುತ್ತಿರಲಿಲ್ಲ. ವಿದ್ಯಾರ್ಥಿಗಳಿಗೂ ಸಹ ಅನಾನೂಕೂಲವಾಗಿತ್ತು. ಬಿ.ಎಸ್. ಯಡಿಯೂರಪ್ಪನವರ ನಿರಂತರ ಪ್ರಯತ್ನದಿಂದಾಗಿ ಜಿಲ್ಲಾ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸಲು ಸಾಧ್ಯವಾಯಿತು. ಈ ನಡುವೆ ಅರಣ್ಯ ಇಲಾಖೆಯ ಕೆಲ ತೊಡಕುಗಳನ್ನು ಸಂಸದ ಬಿ.ವೈ. ರಾಘವೇಂದ್ರ ನಿವಾರಿಸುವಲ್ಲಿ ಯಶಸ್ವಿಯಾದರು. ಇದರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಬೆಸೆಯುವಲ್ಲಿ ಸೇತುವೆಯ ಪಾತ್ರ ಮಹತ್ವರವಾಗಿದೆ. ವ್ಯಾಪಾರ-ವಹಿವಾಟು ಅಭಿವೃದ್ಧಿಯಾಗುವ ಜೊತೆಗೆ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಮೂಡಲಿದೆ. ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಹಾಗೂ ಕೊಲ್ಲೂರು ಮೂಕಾಂಬಿಕ ದೇವಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲಿದೆ. ವಿನೂತನ ವಿನ್ಯಾಸದ ಸೇತುವೆಗೆ ಬಿಎಸ್ವೈ ಬ್ರಿಡ್ಜ್ ಎಂದೇ ಘೋಷಿಸುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ನೂತನವಾಗಿ ನಿರ್ಮಾಣವಾದ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗಮನ ನೀಡಬೇಕು. ಯಡಿಯೂರಪ್ಪನವರ ಶ್ರಮ ಅಜರಾಮರವಾಗಿಸಲು ಗಮನ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೂ ಸಹ ಮನವಿ ಸಲ್ಲಿಸಲಾಗಿದೆ
CM Siddaramaiah ಶಿಷ್ಟಾಚಾರ ಪಾಲಿಸಿಲ್ಲ. ಸಚಿವ ನಿತಿನ್ ಗಡ್ಕರಿ ಅವರಿಗೆ ಕಾರ್ಯಕ್ರಮ ಮುಂದೂಡಲು ತಿಳಿಸಿದ್ದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ
CM Siddaramaiah ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದೆ,
ಜೊತೆಗೆ ಪತ್ರವನ್ನೂ ಬರೆಯಲಾಗಿತ್ತು.
ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು, ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೆಯೆ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿದ್ಧರಸಮಯ್ಯ ತಿಳಿಸಿದ್ದಾರೆ.
ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು
ಸಾಧ್ಯವಾಗುತ್ತಿಲ್ಲ.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ.
ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲೀ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲೀ, ಸ್ಥಳೀಯ ಶಾಸಕರಿಗಾಗಲೀ ಸರಿಯಾಗಿ ಆಮಂತ್ರಣ ನೀಡಿಲ್ಲ.
CM Siddaramaiah ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Karnataka Rakshana Vedike ಕರವೇ ಸ್ವಾಭಿಮಾನಿ ಬಣದ ನಗರ ಘಟಕದ ಅಧ್ಯಕ್ಷರಾಗಿ ಡಿ.ಜೀವನ್ ನೇಮಕ
Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ. ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ತಮ್ಮ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರ.ಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು
Adichunchanagiri Education Trust Branch ಶಿವಮೊಗ್ಗದ ಅವಳಿ ಸಹೋದರರ ಷಟಲ್ ಬ್ಯಾಡ್ಮಿಂಟನ್ ಸಾಧನೆ
Adichunchanagiri Education Trust Branch ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಅವಳಿ ಸಹೋದರರಾದ ಪುನೀತ್.ಎಸ್. ಮತ್ತು ಪವನ್.ಎಸ್.ಆಲ್ ಇಂಡಿಯಾ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭೆಗಳು.
ಈ ಪ್ರತಿಭಾನ್ವಿತರು 2025 – 26 ನೇ ಸಾಲಿನಲ್ಲಿ ಗೋವಾ ಮಾಪ್ಸಿಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ಆಲ್ ಇಂಡಿಯಾ ರಾಷ್ಟ್ರೀಯ ರ್ಯಾಂಕಿಂಗ್ ನಲ್ಲಿ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ ಆಟದ ಪ್ರದರ್ಶನ ನೀಡಿ, ಡಬಲ್ಸ್ ನಲ್ಲಿ ಮಣಿಪುರದ ತಂಡದ ಜೊತೆ ಪ್ರಥಮ ಸ್ಥಾನ ಪಡೆದು.
ಬೆಂಗಳೂರಿನ ಯಲಹಂಕ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಆಲ್ ಇಂಡಿಯಾ ರಾಷ್ಟ್ರೀಯ ಕ್ರೀಡಾ ಕೂಟವನ್ನು, ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ದೆಹಲಿ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಷಟಲ್ ಬ್ಯಾಡ್ಮಿಂಟನ್ ನಾಕ್ ಔಟ್ ಮಾದರಿಯ ಪಂದ್ಯಾವಳಿಯಲ್ಲಿ ಪ್ರತಿಭಾನ್ವಿತ ಅವಳಿ ಸಹೋದರರಾದ ಪುನೀತ್ ಎಸ್ ಮತ್ತು ಪವನ್ ಎಸ್ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ, ಫೈನಲ್ ಮೈಸೂರು ತಂಡದ ಜೊತೆ ಪಂದ್ಯಾಟದಲ್ಲಿ ಡಬಲ್ಸ್ ನಲ್ಲಿ ಅತ್ಯುತ್ತಮ ಆಟದ ಪ್ರದರ್ಶನ ಹಾಗೂ ಬಿರುಸಿನ ಹೊಡೆತ ಮತ್ತು ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಪ್ರಥಮ ಸ್ಥಾನ ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬಂಗಾರದ ಪದಕವನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.
ಇದೇ ತಿಂಗಳು ಬೆಂಗಳೂರಿನಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ಆಲ್ ಇಂಡಿಯಾ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ ಡಬಲ್ಸ್ ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಮೈಸೂರಿನ ಅಂತಿಮ ಪಂದ್ಯದ ಜೊತೆ ಅತ್ಯಾಕರ್ಷ ಆಟದ ಪ್ರದೇಶ ನೀಡಿ, ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ.
ಈ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಜ್ಯ ಮಟ್ಟದ ಮತ್ತು ರಾಷ್ಟ್ರ ಮಟ್ಟದಲ್ಲಿ ಬಾಗವಹಿಸಿ ಬಂಗಾರದ ಪದಕ ಪಡೆದು, ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 17 ವರ್ಷದೊಳಗಿನ “ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
Adichunchanagiri Education Trust Branch 17 ವರ್ಷ ವಯೋಮಿತಿಯೊಳಗಿನ ಷಟಲ್ ರಾಷ್ಟ್ರೀಯ ರ್ಯಾಂಕಿಂಗ್ ನಲ್ಲಿ 1ನೇ ಸ್ಥಾನದಲ್ಲಿರುವುದು, 19 ವರ್ಷ ದೊಳಗಿನ ರಾಜ್ಯ ರ್ಯಾಂಕಿಂಗ್ ನಲ್ಲಿ 1 ನೇ ಸ್ಥಾನದಲ್ಲಿರುವುದು ಮತ್ತೊಂದು ವಿಶೇಷ.
ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ಮಧುಸೂಧನ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ
ಈ ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
