Tuesday, February 24, 2026
Tuesday, February 24, 2026
Home Blog Page 247

Bhadravati Social Welfare Department ಭದ್ರಾವತಿಯಲ್ಲಿನ ಮೆಟ್ರಿಕ್ ಪೂರ್ವ & ನಂತರದ ‌ವಿದ್ಯಾರ್ಥಿ ವೇತನಕ್ಕೆ ‌ಅರ್ಜಿ ಆಹ್ವಾನ

0

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ (ಎನ್.ಎಸ್.ಪಿ) https://ssp.postmatric.karnataka.gov.in/ssppre ರಲ್ಲಿ ದಿ:31/10/2025ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ ಮೆಟ್ರಿಕ್ ನಂತರದ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನ ಪಡೆಯಲು SSP ರಲ್ಲಿ SAT ID ಮುಖಾಂತರ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.
Bhadravati Social Welfare Department ಅರ್ಜಿ ಸಲ್ಲಿಸಲು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾಥಿಯ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ ಮತ್ತು ಆಧಾರ್‌ನಲ್ಲಿರುವ ಹೆಸರು ಒಂದೇ ಆಗಿರಬೇಕು. ಪೋಷಕರ ಆಧಾರ್/ಇ.ಐ.ಡಿ. ಮತ್ತು ಆಧಾರ್ / ಇ.ಐ.ಡಿ.ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ವಿದ್ಯಾರ್ಥಿಯು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ಇವರನ್ನು ಸಂಪರ್ಕಿಸುವುದು.

Karnataka Rakshana Vedike ಕರವೇ ಸ್ವಾಭಿಮಾನಿ ಬಣದ ನಗರ ಘಟಕದ ಅಧ್ಯಕ್ಷರಾಗಿ ಡಿ.ಜೀವನ್ ನೇಮಕ

0

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ. ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ತಮ್ಮ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರ.ಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು

Adichunchanagiri Education Trust Branch ಶಿವಮೊಗ್ಗದ ಅವಳಿ ಸಹೋದರರ ಷಟಲ್‌ ಬ್ಯಾಡ್ಮಿಂಟನ್ ಸಾಧನೆ

0

Adichunchanagiri Education Trust Branch ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಅವಳಿ ಸಹೋದರರಾದ ಪುನೀತ್.ಎಸ್. ಮತ್ತು ಪವನ್.ಎಸ್.ಆಲ್ ಇಂಡಿಯಾ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭೆಗಳು.
ಈ ಪ್ರತಿಭಾನ್ವಿತರು 2025 – 26 ನೇ ಸಾಲಿನಲ್ಲಿ ಗೋವಾ ಮಾಪ್ಸಿಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ಆಲ್ ಇಂಡಿಯಾ ರಾಷ್ಟ್ರೀಯ ರ್ಯಾಂಕಿಂಗ್ ನಲ್ಲಿ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ ಆಟದ ಪ್ರದರ್ಶನ ನೀಡಿ, ಡಬಲ್ಸ್ ನಲ್ಲಿ ಮಣಿಪುರದ ತಂಡದ ಜೊತೆ ಪ್ರಥಮ ಸ್ಥಾನ ಪಡೆದು.
ಬೆಂಗಳೂರಿನ ಯಲಹಂಕ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಆಲ್ ಇಂಡಿಯಾ ರಾಷ್ಟ್ರೀಯ ಕ್ರೀಡಾ ಕೂಟವನ್ನು, ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ದೆಹಲಿ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಷಟಲ್ ಬ್ಯಾಡ್ಮಿಂಟನ್ ನಾಕ್ ಔಟ್ ಮಾದರಿಯ ಪಂದ್ಯಾವಳಿಯಲ್ಲಿ ಪ್ರತಿಭಾನ್ವಿತ ಅವಳಿ ಸಹೋದರರಾದ ಪುನೀತ್ ಎಸ್ ಮತ್ತು ಪವನ್ ಎಸ್ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ, ಫೈನಲ್ ಮೈಸೂರು ತಂಡದ ಜೊತೆ ಪಂದ್ಯಾಟದಲ್ಲಿ ಡಬಲ್ಸ್ ನಲ್ಲಿ ಅತ್ಯುತ್ತಮ ಆಟದ ಪ್ರದರ್ಶನ ಹಾಗೂ ಬಿರುಸಿನ ಹೊಡೆತ ಮತ್ತು ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಪ್ರಥಮ ಸ್ಥಾನ ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬಂಗಾರದ ಪದಕವನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.
ಇದೇ ತಿಂಗಳು ಬೆಂಗಳೂರಿನಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ಆಲ್ ಇಂಡಿಯಾ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ ಡಬಲ್ಸ್ ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಮೈಸೂರಿನ ಅಂತಿಮ ಪಂದ್ಯದ ಜೊತೆ ಅತ್ಯಾಕರ್ಷ ಆಟದ ಪ್ರದೇಶ ನೀಡಿ, ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ.
ಈ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಜ್ಯ ಮಟ್ಟದ ಮತ್ತು ರಾಷ್ಟ್ರ ಮಟ್ಟದಲ್ಲಿ ಬಾಗವಹಿಸಿ ಬಂಗಾರದ ಪದಕ ಪಡೆದು, ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 17 ವರ್ಷದೊಳಗಿನ “ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
Adichunchanagiri Education Trust Branch 17 ವರ್ಷ ವಯೋಮಿತಿಯೊಳಗಿನ ಷಟಲ್ ರಾಷ್ಟ್ರೀಯ ರ‌್ಯಾಂಕಿಂಗ್ ನಲ್ಲಿ 1ನೇ ಸ್ಥಾನದಲ್ಲಿರುವುದು, 19 ವರ್ಷ ದೊಳಗಿನ ರಾಜ್ಯ ರ‌್ಯಾಂಕಿಂಗ್ ನಲ್ಲಿ 1 ನೇ ಸ್ಥಾನದಲ್ಲಿರುವುದು ಮತ್ತೊಂದು ವಿಶೇಷ.
ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ಮಧುಸೂಧನ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ
ಈ ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Actress B. Saroja Devi ಚತುರ್ಭಾಷಾ ತಾರೆ ಅಭಿನೇತ್ರಿ, ಬಿ. ಸರೋಜಾದೇವಿ ಅಸ್ತಂಗತ

0

Actress B. Saroja Devi ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ
ಅವರಿಗೆ 87 ವರ್ಷ ವಯಸ್ಸಾಗಿತ್ತು..

ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಹೃದಯ ವಿದ್ರಾವಕ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದ ಅವರು ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.

“ಕಿತ್ತೂರು ಚೆನ್ನಮ್ಮ,” “ಬಬ್ರುವಾಹನ “ಮತ್ತು “ಅಣ್ಣ ತಂಗಿ”ಯಂತಹ ಚಿತ್ರಗಳಲ್ಲಿನ ಅವರ ಅಭಿನಯ ನೆನಪಿಗೆ ಬರುತ್ತದೆ.

Actress B. Saroja Devi ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

S.N.Chennabasappa ಬಂಗಾರಪ್ಪನವರ ಗುಣಗಳು ಪುತ್ರ ಮಧು ಅವರಲ್ಲಿವೆ – ಶಾಸಕ ಚನ್ನಬಸಪ್ಪ

0

S.N.Chennabasappa ನೆಚ್ಚಿನ ಶಿಕ್ಷಣ ಮಂತ್ರಿ‌ ಎಂದು ಭಾಷಣ ಆರಂಭಿಸಿದ ಎಸ್.ಎನ್. ಚೆನ್ನಬಸಪ್ಪನವರು ಬಂಗಾರಪ್ಪರನ್ನು ನೆನಪಿಸಿಕೊಂಡರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ವಿಶ್ವ ಆರಾಧನ ಆಶ್ರಯ ದಂತ ಯೋಜನೆಗಳನ್ನು ಜಾರಿಗೆ ತಂದರು. ಮಧು ಬಂಗಾರಪ್ಪ ರನ್ನು ಇತ್ತಿಚ್ಚೆಗೆ ಹತ್ತಿರದಿಂದ ನೋಡುತ್ತಿದ್ದೇನೆ. ಅಂದುಕೊಂಡಿದ್ದನ್ನು ಮಾಡಿ ಪೂರೈಸುತ್ತಾರೆ ಎಂದು ಹೇಳಿದರು.

S.N.Chennabasappa ರಾಜಕಾರಣದಲ್ಲಿ ಅದು ಬೇಕು. ಬಂಗಾರಪ್ಪರ ಗುಣಗಳು ಇವರಿಗೆ ಬಂದಿಗೆ. ಬಂಗಾರಪ್ಪ ಮುಖ್ಯ ಮಂತ್ರಿ ಎನ್ನುವುದಕ್ಕಿಂತ ಸಾಮಾನ್ಯ ಜನರಂತೆ ಕಾಣುತ್ತಾರೆ. ಶರಾವತಿ ಶಿಕ್ಷಣ ಸಂಸ್ಥೆಯನ್ನ ಬಂಗಾರಪ್ಪ ಕಟ್ಡಿದರು. ಮಧು ಅದನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Shimoga Central Jail ಕೈದಿ‌ಯ ಹೊಟ್ಟೆಯಲ್ಲಿ ಮೊಬೈಲ್ !. ವೈದ್ಯರಿಂದ ಯಶಸ್ವಿ ಆಪರೇಷನ್

0

Shimoga Central Jail ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಶಿವಮೊಗ್ಗದ ಸೋಗಾನೆ ಬಳಿಯ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ದೌಲತ್ ಖಾನ್ ಎಂಬ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈತ ಜೈಲಿನ ಆಸ್ಪತ್ರೆಗೆ ತಾನು ಕಲ್ಲು ನುಂಗಿದ್ದೇನೆ ಎಂದು ಹೇಳಿಕೊಂಡು ಹೋಗಿದ್ದ. ಆದರೆ ವೈದ್ಯರು ಎಕ್ಸರೇ ಮತ್ತು ಸ್ಕ್ಯಾನ್ ಮಾಡಿದಾಗ, ಆತನ ಹೊಟ್ಟೆಯಲ್ಲಿ ಮೊಬೈಲ್ ಇರುವುದು ಪತ್ತೆಯಾಯಿತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಹೊರತೆಗೆದಿದ್ದಾರೆ. ದೌಲತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆ ಜೈಲಿನ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Shimoga Central Jail ಖೈದಿಗಳು ಮೊಬೈಲ್ ಹೇಗೆ ಪಡೆದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಜೈಲಿನ ಅಧೀಕ್ಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಮೊಬೈಲ್ ಮಾರಾಟದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯ ರಹಸ್ಯವಾಗಿ ವಿಡಿಯೋ ಚಿತ್ರೀಕರಣಕ್ಕೆ ಸರ್ಕಾರದ ನಿರ್ಧಾರ

0

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯಲು ಹಾಗೂ ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ, ಮಹಿಳೆಯರಿಗೆ ಕಿರುಕುಳ ನೀಡುವುದು, ಜಾಲತಾಣಗಳಲ್ಲಿ ವೀಡಿಯೋ ಶೇರ್ ಮಾಡುವುದು, ಮಹಿಳೆಯರ ಮಾನಹಾನಿ ಮಾಡುವುದು, ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುವಂತಹ ಕೃತ್ಯಗಳು ನಡೆದಲ್ಲಿ ಅಥವಾ ಅಂತಹ ವಿಡಿಯೊಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ ತಕ್ಷಣವೇ ಸೈಬರ್ ಸೆಲ್‌ನ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

DDA Dance Academy ಸೊರಬದ ಹೊಸೇಪೇಟೆಯಲ್ಲಿ ಕರಾಟೆ ತರಬೇತಿ ಪಡೆಯಲು ಅವಕಾಶ

0

DDA Dance Academy ಡಿಡಿಎ ಡ್ಯಾನ್ಸ್ ಅಕಾಡೆಮಿ ವತಿಯಿಂದ ಪಟ್ಟಣದ ಹೊಸಪೇಟೆ ಬಡಾವಣೆಯ ಹರ್ಷಿತಾ ಕಾಂಪ್ಲೆಕ್ಸ್ ನಲ್ಲಿ ಕರಾಟೆ ತರಬೇತಿ ಆರಂಭವಾಗಿದೆ.

6 ರಿಂದ 60 ವರ್ಷದವರು ಕರಾಟೆ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಬ್ಲಾಕ್ ಬೆಲ್ಟ್ ಫಿಫ್ತ್ ಡಾನ್ ದೀಪಕ್ ಪೆರೈರಾ ತರಬೇತಿ ನೀಡಲಿದ್ದು, ಆತ್ಮ ರಕ್ಷಣೆ, ಶಿಸ್ತು, ಗೌರವ, ಸಂವಹನ, ಆತ್ಮವಿಶ್ವಾಸ, ಸದೃಢತೆ, ರಕ್ಷಣೆ ಸೇರಿದಂತೆ ಹಲವು ತರಬೇತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 8197460089 ಅಥವಾ 8904511639 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

Chamber Of commerce Shivamogga ಜುಲೈ 15 ರಂದು ಎನ್. ಎ. ಬಿ. ಎಲ್.ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

0

Chamber Of commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ಟ್ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಮತ್ತು ಪರೀಕ್ಷೆ ಮಾತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯ ರಾಷ್ಟ್ರೀಯ ಮಾನ್ಯತಾ ಮಂಡಳಿ ಓಂಃಐ ಸಹಭಾಗಿತ್ವದಲ್ಲಿ ಜುಲೈ 15ರಂದು ಬೆಳಿಗ್ಗೆ 10ಕ್ಕೆ ಓಂಃಐ ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ. ಗೋಪಿನಾಥ್‌ರವರು ಅಧ್ಯಕ್ಷತೆ ವಹಿಸಿ, ಹಿರಿಯ ಅಧಿಕಾರಿಗಳು ಮುಖ್ಯ ಅಥಿತಿಗಳಾಗಿ ಆಗಮಿಸುವರು.

ಸರ್ಕಾರದ ಅಡಿಯಲ್ಲಿ ಬರುವ ಒಂದು ಮಂಡಳಿಯಾಗಿದ್ದು, ಇದು ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಅಡಿಯಲ್ಲಿ ಸ್ಥಾಪಿತವಾದ ಸ್ವಾಯತ್ತ ಸಂಸ್ಥೆಯಾಗಿದೆ. ಇದು ವಿವಿಧ ಕ್ಷೇತ್ರಗಳಲ್ಲ್ಲಿನ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳಿಗೆ ಮಾನ್ಯತೆ ನೀಡುತ್ತದೆ. ಮಾನ್ಯತೆ ಪ್ರಕ್ರಿಯೆಯು ಪ್ರಯೋಗಾಲಯದ ಸಾಮರ್ಥ್ಯದ ಕಠಿಣ ಮೌಲ್ಯಮಾಪನ, ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ಗುಣಮಟ್ಟ ನಿರ್ವಹಣಾ ವ್ಯವಸ್ಥೆಯ ಅನುಸರಣೆಯನ್ನು ಒಳಗೊಂಡಿರುತ್ತದೆ. ಹೀಗಾಗಿ ಗ್ರಾಹಕರ ವಿಸ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಜಾಗತಿಕವಾಗಿ ಪರಿಕ್ಷಾ ಫಲಿತಾಂಶಗಳನ್ನು ಸ್ವೀಕರಿಸಲು ಅನುಕೂಲವಾಗುತ್ತದೆ.

ಭಾರತದಲ್ಲಿನ ಅನುಸರಣಾ ಮೌಲ್ಯಮಾಪನ ಸಂಸ್ಥೆಗಳಿಗೆ (ಪ್ರಯೋಗಾಲಯಗಳು) ಮಾನ್ಯತಾ ಸೇವೆಗಳನ್ನು ಒದಗಿಸುತ್ತದೆ ಹಾಗೂ ಪರಿಕ್ಷಾ ಸೌಲಭ್ಯಗಳ ಅಡಿಯಲ್ಲಿ ಜೈವಿಕ, ರಾಸಾಯನಿಕ, ವಿದ್ಯುತ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ರೇಡಿಯಾಲಜಿಕಲ್ ವಿಭಾಗಗಳಲ್ಲಿ ಓಂಃಐ ಮಾನ್ಯತೆಯನ್ನು ಒದಗಿಸುತ್ತದೆ.

ವೈದ್ಯಕೀಯ ಪರೀಕ್ಷ್ಷಾ ಪ್ರಯೋಗಾಲಯಗಳ ಕ್ಷೇತ್ರದಲ್ಲಿ ಕ್ಲಿನಿಕಲ್ ಬಯೋಕೆಮಿಸ್ಟಿç, ಕ್ಲಿನಿಕಲ್ ಪ್ಯಾಥಾಲಜಿ, ಮೈಕ್ರೋಬಯಾಲಜಿ ವಿಭಾಗಗಳಲ್ಲಿ ಮಾನ್ಯತೆಯನ್ನು ನೀಡಲಾಗುತ್ತದೆ. ಇದರ ಜೊತೆಗೆ ಓಂಃಐ ಂPAಅ ಮತ್ತು Iಐಂಅ ಒಖಂ ಹೊಂದಿರುವ ಪ್ರಾವಿಣ್ಯತೆ ಪರೀಕ್ಷಾ ಪೂರೈಕೆದಾರರು ಮತ್ತು ಉಲ್ಲೇಖ ವಸ್ತು ಉತ್ಪಾದಕರಿಗೆ ಮಾನ್ಯತೆಯನ್ನು ನೀಡುತ್ತದೆ.

ಓಂಃಐ ಸರ್ಕಾರಿ ಮಾನ್ಯಸಂಸ್ಥೆಯಾಗಿರುವುದರಿಂದ ನಿಯಂತ್ರಕರೊಂದಿಗೆ ಸಂಯೋಜಿತ ಮೌಲ್ಯಮಾಪನಗಳನ್ನು ನಡೆಸುತ್ತದೆ ಮತ್ತು ಏಷ್ಯಾ ಪೆಸಿಫಿಕ್ ಮಾನ್ಯತಾ ಸಹಕಾರ ಅಂತರರಾಷ್ಟ್ರೀಯ ಪ್ರಯೋಗಾಲಯ ಮಾನ್ಯತಾ ಸಹಕಾರ ನೊಂದಿಗೆ ಪರಸ್ಪರ ಗುರುತಿಸುವಿಕೆ ವ್ಯವಸ್ಥೆ ಹೊಂದಿದೆ.

Chamber Of commerce Shivamogga ಅಲ್ಲದೆ ಜಾಗೃತಿ ಕಾರ್ಯಕ್ರಮದಲ್ಲಿ ಓಂಃಐಒದಗಿಸುವ ಸೇವೆಗಳು: ಪ್ರಯೋಗಾಲಯಗಳನ್ನು ಪರೀಕ್ಷಿಸುವುದು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳು, ಉಲ್ಲೇಖ ವಸ್ತು ಉತ್ಪಾದಕರು ಪ್ರಾವೀಣ್ಯತೆ ಪರೀಕ್ಷಾ ಪೂರೈಕೆದಾರರು ಬಯೋಬ್ಯಾಂಕಿಂಗ್ ಇವುಗಳ ಬಗ್ಗೆ ಚರ್ಚಿಸಲಾಗುವುದು. ಮುಂದುವರೆದು ಓಂಃಐ ಮಾನ್ಯತೆ ಪ್ರಕ್ರಿಯೆಯ ಮಾರ್ಗಸೂಚಿಗಳ ಹಂತಗಳ ಬಗ್ಗೆ ವಿವರಣೆ ನೀಡುತ್ತದೆ. ಓಂಃಐ ಮಾನ್ಯತೆ ಬಯಸುವ ಪ್ರಯೋಗಾಲಯಗಳು ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆಯೂ ತಿಳಿಸಲಾಗುವುದು. ಸದಸ್ಯರು ಇದರ ಪ್ರಯೋಜನವನ್ನು ಪಡೆದುಕೊಳ್ಳು ಕೋರಲಾಗಿದೆ.

ಕಾರ್ಯಕ್ರಮಕ್ಕೆ ನೊಂದಣಿ ಕಡ್ಡಾಯವಾಗಿದ್ದು, ಮೊಭೈಲ್ ಸಂಖ್ಯೆ 7019663300ಗೆ ಸಂಪರ್ಕಿಸಲು ಕೋರಿದೆ.

Central Department of Small Industries and Labour ಮಂಗಳಮುಖಿಯರು ಆಟೋಚಾಲನೆ ತರಬೇತಿ ಪಡೆದು ತಮ್ಮ ಜೀವನ ಸದೃಢ ಕಟ್ಟಿಕೊಳ್ಳಲಿ- ಸಚಿವೆ ಶೋಭಾ ಕರಂದ್ಲಾಚೆ

0

Central Department of Small Industries and Labour ಬೆಂಗಳೂರಿನ ಮಲ್ಲೇಶ್ವರಂನಲ್ಲಿಂದು ಜರುಗಿದ ʼಮಹಿಳೆಯರಿಗೆ ಮತ್ತು ಮಂಗಳಮುಖಿಯರಿಗೆ ಆಟೋ ಚಾಲನಾ ಕೌಶಲ್ಯ ತರಬೇತಿ 2025ʼ ರ ಕಾರ್ಯಕ್ರಮದಲ್ಲಿ ಕೇಂದ್ರ ‌ಸಣ್ಣ ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಪಾಲ್ಗೊಂಡು, ಆಟೋ ರಿಕ್ಷಾ ಓಡಿಸುವ ತರಬೇತಿಗೆ ಚಾಲನೆ ನೀಡಿ, ಮಹಿಳೆಯರಿಗೆ ಚಾಲನಾ ಪರವಾನಗಿ ವಿತರಣೆ ಮಾಡಿದರು.

ತಳಮಟ್ಟದಿಂದ ಮಹಿಳೆಯರನ್ನು ಸಬಲೀಕರಣಗೊಳಿಸುವ ಹಿತದೃಷ್ಠಿಯಿಂದ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಮಹಿಳೆಯರು ವಿಶೇಷವಾಗಿ ಮಂಗಳಮುಖಿಯರು ಈ ರೀತಿಯ ತರಬೇತಿಗಳ ಮೂಲಕ ತಮ್ಮ ಜೀವನವನ್ನು ಮತ್ತಷ್ಟು ಸದೃಢವಾಗಿ ಕಟ್ಟಿಕೊಳ್ಳಲಿ ಹಾಗೂ ಸಮಾಜಕ್ಕೆ ಮಾದರಿಯಾಗಲಿ ಎಂದು ಸಚಿವೆ
ಮಂಗಳಮುಖಿಯರಿಗೆ ಹಾರೈಸಿದರು.