Tuesday, February 24, 2026
Tuesday, February 24, 2026
Home Blog Page 248

Rotary Interact Club of Pragati School ರೋಟರಿ ಇಂಟರ್ ಆ್ಯಕ್ಟ್ ಕ್ಲಬ್ ನಿಂದ ಪರಿಸರ ರಕ್ಷಣೆ ಪ್ರಬಂಧ ಸ್ಪರ್ಧೆ, ಬಹುಮಾನ ವಿತರಣೆ

0

ಪ್ರಗತಿ ಶಾಲೆಯ ರೋಟರಿ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಡೆಸಲಾಯಿತು.

Rotary Interact Club of Pragati School ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ನಿರಂಜನ್ ಹೊಸಬಾಳೆ ಇವರು ವಹಿಸಿಕೊಂಡಿದ್ದು, ರೋಟರಿ ನೂತನ ಅಧ್ಯಕ್ಷರಾದ ಗೌತಮ್ ಕೆ. ಎಸ್ ವಕೀಲರು ಹಾಗೂ ಇಂದಿನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಗಿರೀಶ್ ಜನ್ನೆ ಇವರು ಪಾಲ್ಗೊಂಡಿದ್ದರು. ಪ್ರಗತಿ ಶಾಲೆಯ ರೆಕ್ಟರ್ ಡಾ ಟಿ ಎಸ್. ರಾಘವೇಂದ್ರ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ, ಇಂಟರ್ಯಾಕ್ಟ್ ಕ್ಲಬ್ ನ ಪದಾಧಿಕಾರಿಗಳು ವಿದ್ಯಾರ್ಥಿಗಳು , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

DC Shivamogga ಪರಿಶಿಷ್ಠ ಜಾತಿ/ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ, ಚಾರ್ಜ್ ಶೀಟ್ ಬಗ್ಗೆ ಕ್ರಮಕೈಗೊಳ್ಳಿ – ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ದಾಖಲಾದ 60 ದಿನಗಳೊಳಗಾಗಿ ಚಾರ್ಜ್‌ಶೀಟ್‌ಸಲ್ಲಿಕೆಯಾಗದಿರುವ ಪ್ರಕರಣಗಳನ್ನು ಗುರುತಿಸಿ, ಸಭೆಗೆ ಮಂಡಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂತ್ರಸ್ಥರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಬೇಕಾದ ಪರಿಹಾರಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ಪ್ರತಿ ಮಾಹೆಯ ಸಭೆಯಲ್ಲಿ ಚರ್ಚಿಸುವ ಅಗತ್ಯವಿದೆ. ಜಿಲ್ಲೆಯಾದ್ಯಂತ ಕಂಡುಬರುವ ಬಾಲ್ಯವಿವಾಹ ಪ್ರಕರಣಗಳ ನಿಯಂತ್ರಣಕ್ಕಾಗಿ ಇಲಾಖೆಗಳಿಂದ ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಉಸ್ತುವಾರಿ ಹಾಗೂ ಬಾಲ್ಯವಿವಾಹಗಳ ನಿಯಂತ್ರಿಸುವಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದ ಅವರು, ಗುರುತಿಸಲಾಗುತ್ತಿರುವ ಬಾಲಗರ್ಭಿಣಿಯರಲ್ಲಿಯೂ ಪರಿಶಿಷ್ಟ ಜಾತಿ ಜನಾಂಗದವರೆ ಹೆಚ್ಚಾಗಿರುವುದು ಅತ್ಯಂತ ನೋವಿನ ಸಂಗತಿ. ಈ ವಿಷಯದಲ್ಲಿ ಸಂಬಂಧಿಸಿದ ಸಮುದಾಯದ ಮುಖಂಡರು ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯ ಪೊಲೀಸ್‌ಠಾಣೆಗಳಲ್ಲಿ ದಾಖಲಾಗುವ ದೌರ್ಜನ್ಯ ಪ್ರಕರಣಗಳನ್ನು ಅವಧಿಪೂರ್ಣಗೊಳ್ಳುವ ಮುನ್ನವೇ ನಿಯಮಾನುಸಾರ ವಿಚಾರಣೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.‌ಜಾತಿನಿಂದನೆಗೆ ಸಂಬಂಧಿಸಿದಂತೆ ದಾಖಲಾಗುವ ಪ್ರಕರಣಗಳಲ್ಲಿ ಅಗತ್ಯ ಸಾಕ್ಷ್ಯಾಧಾರಗಳೊಂದಿಗೆ ರುಜುವಾತಾಗುವ ಪ್ರಕರಣಗಳು ಶೇ.3ರಷ್ಟು ಮಾತ್ರ. ದೂರುದಾರರ ಹೇಳಿಕೆಗಳು, ಸಮರ್ಥನೀಯವಲ್ಲದ ಮತ್ತಿತರ ಕಾರಣಗಳಿಂದಾಗಿ ಪ್ರಕರಣಗಳು ಮುಕ್ತಾಯಗೊಳ್ಳುತ್ತವೆ. – ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳು.

DC Shivamogga ಜಿಲ್ಲೆಯ ನ್ಯಾಯಾಲಯದಲ್ಲಿ ದಾಖಲಾಗಿರುವ ಪರಿಶಿಷ್ಟರ ಮೇಲಿನ ಒಟ್ಟು ದೌರ್ಜನ್ಯಗಳ ಪೈಕಿ ಸುಮಾರು 158ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಉಳಿದ ಪ್ರಕರಣಗಳ ಸ್ಥಿತಿಗತಿಗಳ ಕುರಿತು ಮುಂದಿನ ಸಭೆಯಲ್ಲಿ ವಿವರಗಳನ್ನು ಮಂಡಿಸಲಾಗುವುದು. ಜಾತಿನಿಂದನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಆಸಕ್ತರು ಮೊಕದ್ದಮೆಯ ವಿವರಗಳನ್ನು ಮೊಬೈಲ್‌ಆಪ್‌ಮೂಲಕ ವೀಕ್ಷಿಸಬಹುದಾಗಿದೆ. -ಶ್ರೀಮತಿ ಪುಷ್ಪಾ, ಪಬ್ಲಿಕ್‌ಪ್ರಾಸಿಕ್ಯೂಟರ್. ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಪಬ್ಲಿಕ್‌ಪ್ರಾಸಿಕ್ಯೂಟರ್‌ಶ್ರೀಮತಿ ಪುಷ್ಪಾ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮಲ್ಲೇಶಪ್ಪ, ಜಾಗೃತಿ ಸಮಿತಿ ಸದಸ್ಯರಾದ ಶಿವಬಸಪ್ಪ, ರುದ್ರಪ್ಪ ಹೆಚ್‌, ಬಸವರಾಜು ಡಿ ಬೂದಿಗೆರೆ, ಎಂ.ಮಂಜುನಾಥ್‌, ಎಂ.ಅಣ್ಣಪ್ಪ, ನಾಗರಾಜ, ಓಂಪ್ರಕಾಶ್‌ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಾಗೃತಿ ಸಮಿತಿಗೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಗುರುತಿನ ಚೀಟಿಯನ್ನು ವಿತರಿಸಿದರು.

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

0

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.‌

ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.

ಈ ಸಮಯದಲ್ಲಿ ಸಚಿವರಾದ ಸುರೇಶ್ ಬಿ.ಎಸ್. (ಬೈರತಿ) ಅವರು ಉಪಸ್ಥಿತರಿದ್ದರು.

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

0

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ಪ್ರತಿಶತ 48ರಷ್ಟು ಆಕರಣೆ ಮಾಡಬೇಕು ಎಂಬ ಬೇಡಿಕೆಯನ್ನು ಪರಿಗಣಿಸುವುದಾಗಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಕೃಷಿ ಮಾರಾಟ ಇಲಾಖೆ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ, ಸಂಸ್ಥೆಯ ಚಟುವಟಿಕೆಗಳು, ವಾರ್ಷೀಕ ವಹಿವಾಟು ಹಾಗೂ ಯಾವ ಯಾವ ರಾಜ್ಯಗಳ ಕಾರ್ಯವ್ಯಾಪ್ತಿ ಹೊಂದಿದೆ ಎಂಬ ಮಾಹಿತಿ ಪಡೆದ ಸಚಿವರು, ಈ ಹಿಂದಿನಂತೆ ಶೇ. 48ರಷ್ಟು ಮಾರುಕಟ್ಟೆ ಶುಲ್ಕ ಆಕರಣೆ ಮಾಡುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದ ಸಚಿವರು, ಕ್ಯಾಂಪ್ಕೋ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ ಶುಲ್ಕವನ್ನು ಈ ಮೊದಲಿನಂತೆ ಆಕರಣೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕ್ಯಾಂಪ್ಕೋ ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಬರುವ ಕಾರಣ ಮೇ ತಿಂಗಳಲ್ಲಿ ಮಾರುಕಟ್ಟೆ ಶುಲ್ಕವನ್ನು ಪ್ರತಿಶತ 48 ರಿಂದ 60ಕ್ಕೆ ಹೆಚ್ಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸಚಿವರನ್ನು ಭೇಟಿ ಮಾಡಿದ ಅಧ್ಯಕ್ಷರ ನಿಯೋಗ ಈ ಮೊದಲಿನಂತೆ ಪ್ರತಿಶತ 48 ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಬೇಕು ಎಂದು ಮನವಿ ಮಾಡಿತು.

ಕ್ಯಾಂಪ್ಕೋ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿಯೇ ಆರಂಭವಾಗಿದ್ದು, ಕ್ರಮೇಣ ಕೇರಳ ಸೇರಿದಂತೆ ಇತರ ರಾಜ್ಯಗಳಿಗೂ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಣೆ ಮಾಡಿದೆ. ಬಹುರಾಜ್ಯಗಳಲ್ಲಿ ಮಾರಾಟ ಘಟಕ ತೆರೆದು ರಾಷ್ಟ್ರವ್ಯಾಪಿ ವಾಣಿಜ್ಯ ಚಟುವಟಿಕೆ ಹೊಂದಿದ್ದರೂ ಮಂಗಳೂರಿನಲ್ಲಿಯೇ ನೋಂದಾಯಿತ ಕೇಂದ್ರ ಕಚೇರಿ ಹೊಂದಿದೆ. ಎಪಿಎಂಸಿಗೆ ವಾರ್ಷೀಕ ಸುಮಾರು ಒಂಭತ್ತು ಕೋಟಿ ರೂ. ಮಾರುಕಟ್ಟೆ ಶುಲ್ಕ ಪಾವತಿ ಮಾಡುತ್ತಿದೆ ಎಂದು ಅಧ್ಯಕ್ಷ ಕಿಶೋರ್‌ಕುಮಾರ್‌ ಸಚಿವರಿಗೆ ವಿವರಿಸಿದರು.

ರಾಜ್ಯದಲ್ಲಿ ಹಲವಾರು ಶಾಖೆ ತೆರೆದು ಉತ್ತಮ ಸಂಪರ್ಕ ಜಾಲ ಹೊಂದಿರುವ ಕ್ಯಾಂಪ್ಕೋ, ರಾಜ್ಯ ಸರ್ಕಾರದ ನೋಡಲ್‌ ಏಜನ್ಸಿಯಾಗಿ ಕಾರ್ಯ ನಿರ್ವಹಿಸಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಯೋಜನೆಗಳನ್ನು ರೈತ ಕುಟುಂಬಗಳಿಗೆ ತಲುಪಿಸುವ ಕಾರ್ಯನಿರ್ವಹಿಸಿದೆ. 2002, 2004 ಹಾಗೂ 2009 ರಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಗೆ ನೋಡಲ್‌ ಏಜನ್ಸಿಯಾಗಿ ನೇಮಕ ಮಾಡಿದ್ದು, ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದೆ ಎಂದು ತಿಳಿಸಿದರು.

ಸಂಸ್ಥೆ 1,48,381 ಸದಸ್ಯರನ್ನು ಹೊಂದಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಪ್ರತಿಶತ 85ರಷ್ಟು ಸದಸ್ಯರನ್ನೊಳಗೊಂಡಿದೆ. ರಾಜ್ಯದಲ್ಲಿ ಒಟ್ಟು 66 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚಿನ ಶಾಖೆಗಳು ಮತ್ತು ಖರೀದಿ ಕೇಂದ್ರಗಳು ಎಪಿಎಂಸಿ ಪ್ರಾಂಗಣ ಅಥವಾ ಸಮಿತಿ ಅಧಿಸೂಚಿತ ವಲಯದಲ್ಲೇ ಕಾರ್ಯನಿರ್ವಹಿಸುತ್ತಿವೆ. ಹಾಗೂ ನಿಮಯಗಳ ಪ್ರಕಾರ ರಾಜ್ಯ ಸರ್ಕಾರಕ್ಕೆ ಕಾಲಕಾಲಕ್ಕೆ ನಿಗದಿತ ಮಾರುಕಟ್ಟೆ ಶುಲ್ಕವನ್ನು ಪಾವತಿ ಮಾಡುತ್ತಿವೆ.

Department of Agriculture ಸಂಸ್ಥೆಯ ಚಟುವಟಿಕೆಗಳನ್ನು ಗಮನಿಸಿ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮದ ಪ್ರಕಾರ ಮಾರುಕಟ್ಟೆ ಶುಲ್ಕವನ್ನು ಪ್ರತಿಶತ 48ರಷ್ಟು ವಿಧಿಸಬೇಕು ಎಂದು ಮನವಿ ಮಾಡಿದರು. ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್‌ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ. ಸತ್ಯನಾರಾಯಣ, ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ ಇದ್ದರು.

Department of Fisheries ಮೀನುಗಾರಿಕೆ ವಿವಿಧ ಯೋಜನೆಗಳ ಲಾಭ ಪಡೆಯಲು ಅರ್ಜಿ ಆಹ್ವಾನ

0

Department of Fisheries ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು) ಮತ್ತು ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಗೆ ಸಹಾಯಧನ (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು)
ರಾಜ್ಯ ವಲಯ ಯೋಜನೆಗಳು: ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು), ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಹಾಗೂ ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ.
ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಪೋರ್ಟಲ್ ಮೂಲಕ ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಜು. 15 ರಿಂದ ಆ. 14ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of Fisheries ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/ 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

0

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ಪೂರ್ಣಾವಧಿ / ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ/ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್ / ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು / ಸಂಬಂಧಿತ ದಾಖಲೆಗಳನ್ನು ಲಗತ್ತಿಸುವುದು” ಎಂದು ಸೇರ್ಪಡೆ ಮಾಡಿದೆ.
ದಿನಾಂಕ: 30-06-2025ರ ತಿದ್ದುಪಡಿ ಆದೇಶದಂತೆ ಸ್ವೀಕೃತವಾದ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ದಾಖಲೆಗಳ ಕೊರತೆಯಾದ್ದಲ್ಲಿ ಅರ್ಜಿದಾರರಿಗೆ ತಿಳಿಸಿ ದಾಖಲೆಗಳನ್ನು ಪಡೆದು ಸಲ್ಲಿಸುವುದು. ಪೂರಕ ದಾಖಲೆಗಳಿದ್ದಲ್ಲಿ ಮಾತ್ರ ಕೇಂದ್ರ ಕಚೇರಿಗೆ ಕಳುಹಿಸಿಕೊಡಲು ಕೋರಿದೆ.

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

0

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ, ಬೆಂಗಳೂರಿನಲ್ಲಿ ದಿನಾಂಕ ೧೧ ರಿಂದ ೧೩ ಜುಲೈ, ೨೦೨೫ ರವರೆಗೆ “ಸಸ್ಯ ಸಂತೆ” ಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಮೊದಲನೆ ದಿನ ೧೧ ಜುಲೈ ೨೦೨೫ ರಂದು ಶ್ರೀ. ಎಸ್. ಆರ್. ವಿಶ್ವನಾಥ್ ಮಾನ್ಯ ಶಾಸಕರು, ಯಲಹಂಕ ವಿಧಾನಸಭಾ ಕ್ಷೇತ್ರ ಇವರು ಸಸ್ಯ ಸಂತೆಯ ಪ್ರದರ್ಶನ ಮಳಿಗಗಳನ್ನು ಉದ್ಘಾಟಿಸುವುದರೊಂದಿಗೆ ತೋಟಗಾರಿಕೆಗೆ ಸಂಬಂಧಿತ ವೈವಿಧ್ಯಮಯ ಮಳಿಗೆಗಳನ್ನು ವೀಕ್ಷಿಸಿದರು. ನಂತರ ತಮ್ಮ ಉದ್ಘಾಟನಾ ಭಾಷಣದಲ್ಲಿ ನಗರಿಕರಣದ ಭರದಲ್ಲಿ ಜನತೆ ಕೃಷಿಯನ್ನು ಮರೆಯುತ್ತಿದ್ದು, ಭವಿಷ್ಯದಲ್ಲಿ ಇದೊಂದು ಅಪಾಯಕಾರಿ ಸಂಗತಿ ಆಗಬಹುದೆಂದು ತಿಳಿಸಿದರು. ಮುಂದುವರೆದು ಸ್ವತಃ ಅವರೆ ಕೃಷಿ, ತೋಟಗಾರಿಕೆ, ಹೈನುಗಾರಿಕೆಯನ್ನು ಮಾಡುತ್ತಿದ್ದು ಇದರಿಂದ ಉತ್ತಮ ಆಹಾರವನ್ನು ಬೆಳೆದು ಸೇವಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡಿರುವುದಾಗಿ ತಿಳಿಸಿದರು. ಸಾಂಪ್ರದಾಯಿಕ ಪದ್ದತಿಗಳ ಜೊತೆಗೆ ವಿಜ್ಞಾನಿಗಳು ಸಂಶೋದಿಸಿದ ನವೀನ ವೈಜ್ಞಾನಿಕ ಪದ್ದತಿಗಳನ್ನು ಅಳವಡಿಸಿಕೊಂಡರೆ ದೇಶದ ೧೫೦ ಕೋಟಿ ಜನಸಂಖ್ಯೆಗೆ ಪೌಷ್ಠಿಕ ಆಹಾರ ಒದಗಿಸಬಹುದು. ನಗರವಾಸಿಗಳು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಹಾಗೂ ಮುಂಭಾಗದಲ್ಲಿ ತರಕಾರಿ ಹಾಗೂ ಗಿಡಗಳನ್ನು ಬೆಳೆದು ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಿರಿ ಎಂದು ಕರೆನೀಡಿದರು ಹಾಗೂ ಮೊಬೈಲ್ ಬಿಟ್ಟು ಪ್ರತಿಯೊಬ್ಬರು ೨ ಗಿಡ ನೆಟ್ಟರೆ ಈ ಕಾರ್ಯಕ್ರಮ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. University of Horticultural Sciences ಕನ್ನಡದ ಬಿಗ್ ಬಾಸ್ ಖ್ಯಾತಿಯ ಜನಪ್ರಿಯ ಯುವನಟ, ನಿರ್ಮಾಪಕ ಹಾಗೂ ಕೃಷಿ ಉದ್ದಿಮೆದಾರರು ಆದ ಶ್ರೀ. ಶಶಿ ಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಎಲ್ಲಾ ಕೃಷಿ ಪದವಿದರರು ಕೃಷಿಯಲ್ಲಿ ತೊಡಗಿಕೊಂಡು ತಮ್ಮದೇ ರೀತಿಯಲ್ಲಿ ಕೃಷಿ ಅಬಿವೃದ್ದಿಗೆ ಕೊಡಿಗೆ ನೀಡಿ ಎಂದು ತಿಳಿಸಿದರು. ಜೊತೆಗೆ ಕೃಷಿಯನ್ನು ಒಂದು ಉಧ್ಯಮವಾಗಿ ನೋಡುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು. ಡಾ. ಎಸ್. ಬಿ. ದಂಡಿನ, ಸಂಸ್ಥಾಪಕ ಹಾಗೂ ವಿಶ್ರಾಂತ ಕುಲಪತಿಗಳು, ತೋ. ವಿ. ವಿ., ಬಾಗಲಕೋಟೆ ಇವರು ಮಣ್ಣಿನ ಪಲವತ್ತತೆ, ನೀರು, ಹಾಗೂ ರೈತರ ಜ್ಞಾನ ಕೃಷಿಗೆ ಬಹುಮುಖ್ಯ ಮತ್ತು ಯುವಕರು ಕೃಷಿಗೆ ಬಂದು ಕೃಷಿಯಲ್ಲಿ ಬದಲಾವಣೆ ತರಲು ತಿಳಿಸಿದರು. ಡಾ. ಜಿ. ಎಸ್. ಕೆ. ಸ್ವಾಮಿ, ಡೀನ್, ತೋಟಗಾರಿಕೆ ಮಹಾವಿದ್ಯಾಲಯ ಬೆಂಗಳೂರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ರಾಜಾಸಾಬ್ ಎ. ಹೆಚ್., ಅಧ್ಯಕ್ಷರು, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳುರು ಹಾಗೂ ಡಾ. ಜಿ. ಕೆ. ಸೀತಾರಾಮು, ನಿರ್ದೇಶಕರು, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ, ಬೆಂಗಳೂರು ರವರು ಕರ‍್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಎಸ್.ಎಲ್. ಜಗದೀಶ್, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು ಅತಿಥಿಗಳನ್ನ ಸ್ವಾಗತಿಸಿದರು .

CM Siddaramaiah ದೆಹಲಿ ಮಟ್ಟದಲ್ಲಿ ‘ಸೀಎಂ’ ಬದಲಾವಣೆ ಚರ್ಚೆಯೇ ಆಗಿಲ್ಲ. ಎಲ್ಲಾ ಮಾಧ್ಯಮಗಳ ಊಹೆ – ಸಿದ್ಧರಾಮಯ್ಯ

0

CM Siddaramaiah ದೆಹಲಿ ಮಟ್ಟದಲ್ಲಿ ‘ಸೀಎಂ’ ಬದಲಾವಣೆ ಚರ್ಚೆಯೇ ಆಗಿಲ್ಲ. ಎಲ್ಲಾ ಮಾಧ್ಯಮಗಳ ಊಹೆ – ಸಿದ್ಧರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ಕುರಿತಲ್ಲ. ಇದನ್ನು ಸ್ವತಃ ಅವರೇ ಅಲ್ಲಗೆಳೆದ ಮೇಲೆ ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸದ್ಯ ಎದ್ದಿರುವ ಸೀಎಂ ಬದಲಾವಣೆ ಸುದ್ದಿ ಊಹಾಪೋಹಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇವೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ? ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ. ಕರ್ನಾಟಕದ ಮುಖ್ಯಮಂತ್ರಿ ನಾನೇ. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಅದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ.

CM Siddaramaiah ದೆಹಲಿ ಮಟ್ಟದಲ್ಲಿ ‘ಸೀಎಂ’ ಬದಲಾವಣೆ ಚರ್ಚೆಯೇ ಆಗಿಲ್ಲ. ಎಲ್ಲಾ ಮಾಧ್ಯಮಗಳ ಊಹೆ – ಸಿದ್ಧರಾಮಯ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ದೆಹಲಿಯ ನನ್ನ ಇಂದಿನ ಭೇಟಿಯಲ್ಲಿ ಯಾವುದೇ ಚರ್ಚೆಯಾಗುವುದಿಲ್ಲ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂಎಲ್‌ಸಿ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯ ತಮ್ಮ X ಖಾತೆಯಲ್ಲಿ‌ ಅನಿಸಿಕೆ ಹಂಚಿಕೊಂಡಿದ್ದಾರೆ

CM Siddaramaiah ಜುಲೈ 18 ಯುವ ರಾಜ್ ಕುಮಾರ್ ಅಭಿನಯದ “ಎಕ್ಕ”ಸಿನಿಮಾ ಬೆಳ್ಳಿತೆರೆಗೆ ಪ್ರೀಮಿಯರ್ ಶೋ ವೀಕ್ಷಿಸಲು ಸೀಎಂ ಗೆ ಆಹ್ವಾನ

0

CM Siddaramaiah ನಟ ಯುವ ರಾಜ್‌ಕುಮಾರ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿಯಾಗಿ, ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.

ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್‌ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ‌ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಸೀಎಂ ಸಿದ್ಧರಾಮಯ್ಯ ಖುಷಿ ವ್ಯಕ್ತಪಡಿಸಿದರು.

CM Siddaramaiah ಚಿತ್ರ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

Gajanur Dam ಗಮನಿಸಿ, ಜುಲೈ 14 ರಂದು ಗಾಜನೂರು ಡ್ಯಾಂ ನಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಹರಿಸಲಾಗುವುದು

0

Gajanur Dam ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು. ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್, ತುಂ ಮೇ ಯೋ, ವಿಭಾಗ ಇವರು ತಿಳಿಸಿದ್ದಾರೆ.