Tuesday, February 24, 2026
Tuesday, February 24, 2026
Home Blog Page 249

Skill Development Entrepreneurship and Livelihood Department ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

0

Skill Development Entrepreneurship and Livelihood Department ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ 2025-26 ನೇ ಸಾಲಿನ ಎಐಟಿಟಿ- ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಐಟಿಐ /ಡಿಪ್ಲೋಮಾ/ಬಿ.ಇ. ವಿದ್ಯಾರ್ಹತೆಯುಳ್ಳವರಿಗೆ 4 ತಿಂಗಳ ಸಿ.ಎನ್.ಸಿ. ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್/ ಸಿ.ಎನ್.ಸಿ.ಪ್ರೋಗ್ರಾಮರ್/ ಪ್ರೋ.ಇ./ ಆಟೋ ಕ್ಯಾಡ್ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯುಳ್ಳವರಿಗೆ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ರೂ. 2500/- ಗಳ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ಲಾಟ್ ನಂ. ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸುವಂತೆ ಘಟಕ ಮುಖ್ಯಸ್ಥರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಘಟಕ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿಧಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ದೂ; 08182-246054/ 9448307027/ 9449286543 ಗಳನ್ನು ಸಂಪರ್ಕಿಸುವುದು.

MESCOM ಮೆಗ್ಗಾನ್ ಆಸ್ಪತ್ರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

0

MESCOM ಮೆಗ್ಗಾನ್ ಆಸ್ಪತ್ರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ. ದೊಡ್ಡಪೇಟೆಪೊಲೀಸ್ ಠಾಣೆ ಪ್ರಕಟಣೆ ಮೆಗ್ಗಾನ್ ಆಸ್ಪತ್ರೆಯ ಮೆಡಿಕಲ್ ಫಾರ್ಮಸಿ ಹತ್ತಿರ ಜು.09 ರಂದು ಸುಮಾರು 35 ವರ್ಷ ವಯಸ್ಸಿನ ಅನಾಮದೇಯ ವ್ಯಕ್ತಿ ಪ್ರಜ್ಞೆ ಇಲ್ಲದೇ ಮಲಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.
ಮೃತ ವ್ಯಕ್ತಿಯು 5.6 ಅಡಿ ಉದ್ದ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು ಇದ್ದು, ಮುಖದ ಮೇಲೆ ಕಪ್ಪು ಬಣ್ಣದ ಕುರುಚಲು ಗಡ್ಡ, ಮೀಸೆ ಇರುತ್ತದೆ. MESCOM ಮೆಗ್ಗಾನ್ ಆಸ್ಪತ್ರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ. ದೊಡ್ಡಪೇಟೆಪೊಲೀಸ್ ಠಾಣೆ ಪ್ರಕಟಣೆ ಮೃತನ ಮೈ ಮೇಲೆ ಕಪ್ಪು ಬಣ್ಣದ ಜಾಕೇಟ್, ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ. ಬಲಗೈನ ಒಳಭಾಗದಲ್ಲಿ ಲಕ್ಷಿ ಹಾಗೂ ಬಿಲ್ಲು ಬಾಣದ ಚಿತ್ರದ ಹಚ್ಚೆ ಗುರುತು ಇರುತ್ತದೆ. ಬಲಗೈ ಮಣಿಕಟ್ಟಿನ ಹೆಬ್ಬೆರಳ ಹತ್ತಿರ ಹಾರ್ಟ್ ಚಿಹ್ನೆ ಅದರ ಮಧ್ಯ ‘ಎನ್’ ಅಕ್ಷರದ ಹಚ್ಚೆ ಹಾಗೂ ಮೃತನ ಎದೆಯ ಎಡ ಭಾಗದಲ್ಲಿ ಹಾರ್ಟ್ ಹಾಗೂ ಬಾಣದ ಚಿತ್ರವಿರುವ ಹಚ್ಚೆ ಗುರುತು ಇರುತ್ತದೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ಸಂ.08182-261414, ಮೊ.ಸಂ.9916882544, ದೊಡ್ಡಪೇಟೆ ಪೊಲೀಸ್ ಠಾಣೆ ಇವರನ್ನು ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

Sri Kannika Parameshwari Temple ಶ್ರೀಕನ್ನಿಕಾ ಪರಮೇಶ್ವರಿಗೆ 1008 ಸೀರೆಗಳಿಂದ ಅಲಂಕಾರ ಪೂಜೆ

0

Sri Kannika Parameshwari Temple ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶಿವಮೊಗ್ಗ ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣದ ಪ್ರಯುಕ್ತ ಆಷಾಢ ಶುಕ್ರವಾರದಂದು 1008 ಸೀರೆಗಳಿಂದ ಶ್ರೀ ಕನ್ನಿಕಾ ಪರಮೇಶ್ವರಿಗೆ ಲಲಿತಾ ಸಹಸ್ರನಾಮ ಪೂಜೆ ನಡೆಸಲಾಯಿತು.
ಶಿವಮೊಗ್ಗ ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಪ್ರತಿಭಾ ಅರುಣ್ ಮಾತನಾಡಿ, ಆಷಾಡ ಮಾಸದಲ್ಲಿ ಲಲಿತಾ ದೇವಿಯ ಅರ್ಚನೆ ಮಾಡುವುದರಿಂದ ಸಕಲ ಸಿದ್ಧಿಗಳು ಲಭಿಸುತ್ತವೆ ಎಂದು ನಮ್ಮ ಸಂಪ್ರದಾಯ ಹಾಗೂ ಹಿರಿಯರು ಹೇಳಿದ್ದಾರೆ. ಶ್ರೀ ಲಲಿತಾ ಸಹಸ್ರನಾಮ ಎನ್ನುವುದು ಬ್ರಹ್ಮ ಪುರಾಣದ ಒಂದು ಭಾಗ. ಲಲಿತಾ ಆನಂದ ದೇವತೆ, ಈಶ್ವರನ ಪತ್ನಿ ಪಾರ್ವತಿಯ ರೂಪ. ಶ್ರೀ ಲಲಿತಾ ಸಹಸ್ರನಾಮವು ಅತ್ಯಂತ ಪವಿತ್ರವಾದ ಮಂತ್ರವಾಗಿದೆ ಎಂದು ಹೇಳಿದರು.
ಶಿವಮೊಗ್ಗ ವಾಸವಿ ಮಹಿಳಾ ಸಂಘದ ಕಾರ್ಯದರ್ಶಿ ನಮ್ರತಾ ಪ್ರಶಾಂತ್ ಮಾತನಾಡಿ, ಪೂಜೆಯಲ್ಲಿ ಒಟ್ಟು 1008 ಸೀರೆಗಳನ್ನು ದೇವಿಗೆ ಅರ್ಪಿಸಲಾಯಿತು. ಇದರಲ್ಲಿ 500 ಸೀರೆಗಳನ್ನು ದಾನದ ಮೂಲಕ ಅಗತ್ಯ ಇರುವವರಿಗೆ ನೀಡಲಾಗುವುದು ಎಂದು ತಿಳಿಸಿದರು.
ಭಗವಾನ್ ಹಯಗ್ರಿವ ಹಾಗೂ ಅಗಸ್ತ್ಯ ಮುನಿಗಳ ಚರ್ಚೆಯಿಂದ ಹೊರಹೊಮ್ಮಿದ ಮಂತ್ರವೇ ಶ್ರೀ ಲಲಿತಾ ಸಹಸ್ರನಾಮ. ಇದು ಅತ್ಯಂತ ಪವಿತ್ರವಾದ ಹಾಗೂ ಶಕ್ತಿಯುತವಾದ ಮಂತ್ರ. ಇದನ್ನು ಪಠಿಸುವುದರಿಂದ ಇಷ್ಟಾರ್ಥಗಳು ಹಾಗು ನಮ್ಮ ಮೇಲೆ ದೇವಿ ರಕ್ಷಣೆ ಸದಾ ಇರುತ್ತದೆ ಎಂದರು.
ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹಾಗೂ ಆರ್ಯವೈಶ್ಯ ಮಹಾಜನ ಸಮಿತಿ ಅಧ್ಯಕ್ಷ ಭೂಪಾಲಂ ಶಶಿಧರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಶ್ರೀ ಕನ್ನಿಕಾ ಸಹಸ್ರನಾಮ ಹಾಗೂ ಶ್ರೀ ಲಲಿತಾ ಸಹಸ್ರನಾಮ ಪೂಜೆಯನ್ನು ಮಾಡಲಾಯಿತು. 108 ಮಹಿಳೆಯರು ಪೂಜೆಯಲ್ಲಿ ಭಾಗವಹಿಸಿದ್ದರು. ಹತ್ತು ತರಹದ ಪೂಜಾ ದ್ರವ್ಯಗಳು ಹಾಗೂ ಒಂದು ಸೀರೆಯಿಂದ ಪ್ರತಿಯೊಬ್ಬರು ಪೂಜೆ ನೆರವೇರಿಸಿದರು.
ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಅಶ್ವತ್ ನಾರಾಯಣ ಶೆಟ್ಟಿ, ಆರ್ಯವೈಶ್ಯ ಸಮಾಜದ ಹಿರಿಯ ಶೇಷಾಚಲ, ಸಂಘದ ನಿಕಟಪೂರ್ವ ಅಧ್ಯಕ್ಷೆ ರಾಧಿಕಾ ಮಾಲತೇಶ್, ಉಪಾಧ್ಯಕ್ಷೆ ಕವಿತಾ ಸಂತೋಷ್, ಖಜಾಂಚಿ ವಿಜಯ ದತ್ತ ಕುಮಾರ್, ಜಂಟಿ ಕಾರ್ಯದರ್ಶಿ ಅನಿತಾ ರಘು, ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಆರ್ಯವೈಶ್ಯ ಸಮಾಜದ ಮುಖಂಡರು ಭಾಗವಹಿಸಿದ್ದರು.

Scouts and Guides ಸ್ಕೌಟ್ಸ್ & ಗೈಡ್ಸ್ ಮಕ್ಕಳಲ್ಲಿ ದೇಶಪ್ರೇಮ & ಪಾಮಾಣಿಕತೆಯಂತಹ ಆದರ್ಶಗಳನ್ನ ಕಲಿಸುತ್ತದೆ – ಗುರುದತ್ತ ಹೆಗಡೆ

0

Scouts and Guides ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಲ್ಲಿ ದೇಶಪ್ರೇಮ ಪ್ರಾಮಾಣಿಕತೆ ಸಮಾಜ ಸೇವೆ ಆತ್ಮವಿಶ್ವಾಸ ಮುಂತಾದ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ
ಯವರು ಅಭಿಮತ ವ್ಯಕ್ತಪಡಿಸಿದರು.

ತಮ್ಮ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಅನಾವರಣ ಮಾಡಿ ಮಾತನಾಡಿದರು. ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸ್ಕೌಟ್ಸ್ ಅಂಡ್ ಗೈಡ್ಸ್ ತುಂಬಾ ಸಹಕಾರಿಯಾಗಿದೆ ಎಂದು ನುಡಿದರು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ. ( ಸಿ ಇ ಓ ) ಹೇಮಂತ್ ಎನ್ ರವರು ಮಾತನಾಡುತ್ತಾ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಆಧ್ಯಾತ್ಮ ಕೌಶಲ್ಯ ಹಾಗೂ ದೇಶಪ್ರೇಮವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ನುಡಿದರು.

Scouts and Guides ಪರೀಕ್ಷಾರ್ಥ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು ಉಪಸ್ಥಿತರಿದ್ದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ. ಜಿಲ್ಲಾ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರು ಮಾತನಾಡುತ್ತಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ. ಸಹ ಕಾರ್ಯದರ್ಶಿ ವೈಆರ್ ವೀರೇಶಪ್ಪ. ಸ್ಕೌಟ್ಸ್ ಆಯುಕ್ತರಾದ ಎಸ್ ಜಿ ಆನಂದ್. ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ ವಿಜಯಕುಮಾರ್. ರಾಜ್ಯ ಸಂಘಟನಾ ಆಯುಕ್ತರಾದ ಸುಮನ್ ಶೇಖರ್. ಸ್ಕೌಟ್ಸ್ ಅಂಡ್ ಗೈಡ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

MESCOM ಜುಲೈ13 , ಆಲ್ಕೊಳ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರ ದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 13 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 3.00ರವರೆಗೆ ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಸವಿ ಬೇಕರಿ ಸುತ್ತಮುತ್ತ, ಹುಚ್ಚುರಾಯ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Union Bank Shivamogga ಭದ್ರಾವತಿಯಲ್ಲಿ ಸ್ವಸಹಾಯ ಸಂಘಗಳ ಸಾಲಮೇಳ ಉದ್ಘಾಟನೆ

0

Union Bank Shivamogga ಭದ್ರಾವತಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸ್ವಸಹಾಯ ಸಂಘಗಳ ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್, ತಾಲೂಕು ಪಂಚಾಯತ್ ಭದ್ರಾವತಿ ಹಾಗೂ NRLM ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್ ಶಿವಮೊಗ್ಗ ಕ್ಷೇತ್ರೀಯ ಉಪಮುಖ್ಯಸ್ಥರಾದ ಶ್ರೀ ರವಿಚಂದ್ರನ್ ರವರು ಉದ್ಘಾಟಿಸಿದರು.
ಸ್ವಸಹಾಯ ಸಂಘಗಳ ಸದಸ್ಯರಿಗೆ ಸಂಘಗಳ ಪಂಚ ಸೂತ್ರ, ಬ್ಯಾಂಕ್ ಗಳಿಂದ ಸಾಲ ಸೌಲಭ್ಯ, ಜೀವ ವಿಮೆ, ಆರ್ಥಿಕ ಸ್ವಾವಲಂಬನೆ ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.
ಮೇಳದಲ್ಲಿ 130ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿದ್ದರು.15 ವಿವಿಧ ಸಂಘಗಳ ಸದಸ್ಯರಿಗೆ ಸಾಲ ಮಂಜೂರಾತಿ ಪತ್ರ ನೀಡಲಾಯಿತು.
Union Bank Shivamogga ಸಾಲ ಮೇಳದ ಮುಖ್ಯ ಅತಿಥಿಗಳಾಗಿ ಭದ್ರಾವತಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಎಂ ಗಂಗಣ್ಣ ಅವರು ವಹಿಸಿದ್ದರು ಮೇಳದ ಅಧ್ಯಕ್ಷತೆಯನ್ನು ಯೂನಿಯನ್ ಬ್ಯಾಂಕ್ ಭದ್ರಾವತಿ BH ರಸ್ತೆ ಶಾಖೆಯು ಮುಖ್ಯ ವ್ಯವಸ್ಥಾಪಕರಾದ ಶ್ರೀ ವಿಜಯ್ ಭಾಸ್ಕರ್ ರವರು ವಹಿಸಿದ್ದರು. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಉಪಸ್ಥಿರಿದ್ದರು

Rotary Blood Bank ರೋಟರಿ ಮಿಡ್ ಟೌನ್ಅಧ್ಯಕ್ಷ ಹರ್ಷ ಬಿ.ಕಾಮತ್ ಅವರಿಗೆ ಎಲ್ಲ ರೀತಿಯ ಸಹಕಾರವಿದೆ- ಶಾಸಕ ಡಿ.ಎಸ್.ಅರುಣ್

0

Rotary Blood Bank ಶಿವಮೊಗ್ಗ ನಗರದ ಪ್ರತಿಷ್ಠಿತ ರೋಟರಿ ಸಂಸ್ಥೆಗಳಲ್ಲಿ ಒಂದಾದ ರೋಟರಿ ಮಿಡ್ ಟೌನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ತಮ್ಮ ತಂಡದೊಂದಿಗೆ. ವಿನಾಯಕ ನಗರದಲ್ಲಿರುವ ರೋಟರಿ ರಕ್ತ ನಿಧಿ ಸಭಾಂಗಣ ದಲ್ಲಿ ನಿನ್ನೆ ರಾತ್ರಿ ರೋಟರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರ್ಷ ಬಿ. ಕಾಮತ್ ತಂಡಕ್ಕೆ ಅಂಬೆಗಾಲು ತಂಡದ ಅಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್ ಅವರು ಅಭಿನಂದಿಸಿ ಗೌರವಿಸಿದರು. ಅವರ ಅವಧಿಯಲ್ಲಿ ನಡೆಯುವ ಎಲ್ಲಾ ಸಮಾಜಮುಖಿ ಕಾರ್ಯಾಗಳಿಗೆ ಸಹಕರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ನಿಯೋಜಿತ ಜಿಲ್ಲಾ ಗವರ್ನರ್. ಬಿ ಎಂ ಭಟ್. ವಲಯ 10ರ ಸಹಾಯಕ ಗವರ್ನರ್ ಕೆಪಿ ಶೆಟ್ಟಿ ಮಾಜಿ ಸಹಾಯಕ ಗೌರ್ನರ್ ಜಿ. ವಿಜಯಕುಮಾರ್. ಎಸ್ ಆರ್ ನಾಗರಾಜ್. ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಟಿ ಆರ್ ಅಶ್ವಥ್ ನಾರಾಯಣ ಶೆಟ್ಟಿ. ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್ ಉದ್ಯಮಿ ಹಾಲಪ್ಪನವರು ಮಾಜಿ ಅಧ್ಯಕ್ಷರಾದ ವೀರಣ್ಣ ಹುಗ್ಗಿ ವಲಯ ಸೇನಾನಿ ರಂಗರಾಜನ್. ಕಾರ್ಯದರ್ಶಿ ಆರ್‌ಎಂ ಮಂಜುನಾಥ್. ಅನ್ಸ್ ಕ್ಲಬ್ ಅಧ್ಯಕ್ಷರಾದ ಪವಿತ್ರ ಕಾಮತ್. ಕಾರ್ಯದರ್ಶಿ ಪ್ರೀತಿ ದೀಪಕ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಅತಿಯಾದ ಮಳೆ ರೈತರಿಗೆ ಶೀಘ್ರ ಬೆಳೆ ವಿಮೆ ಪರಿಹಾರ ನೀಡಿ- ಎಚ್.ಎನ್.ನಾಗರಾಜ್

0

ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಿಕೆ, ಶುಂಠಿ, ಅನಾನಸ್ ಮತ್ತಿತರ ಬೆಳೆಗಳು ಹಾಳಾಗಿದ್ದು ಸರ್ಕಾರದಿಂದ ಲಭ್ಯವಿರುವ ಬೆಳೆ ವಿಮೆ ಹಾಗೂ ಮತ್ತಿತರ ಪರಿಹಾರ ಕಾರ್ಯಗಳು ರೈತರಿಗೆ ಸಕಾಲದಲ್ಲಿ ಸಿಗದ ಕಾರಣ ಸಾಕಷ್ಟು ತೊಂದರೆಗೊಳಗಾಗಿದ್ದು, ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ರೈತರಿಗೆ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಚ್. ಎನ್. ನಾಗರಾಜ್ ಅಗ್ರಹಿಸಿದರು.
ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ರೈತರು ತಮ್ಮ ಬೆಳೆಗಳನ್ನು ಕಳೆದು ಕೊಂಡು ಅತಿಯಾದ ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಸಂದರ್ಭ ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ರೈತರ ಕಷ್ಟಗಳಿಗೆ ಸ್ಪಂದಿಸಬೇಕಲ್ಲದೆ ಕೃಷಿ, ತೋಟಗಾರಿಕೆ ಹಾಗೂ ಪಶು ಸಂಗೋಪನೆ ಮತ್ತಿತರ ಇಲಾಖೆಯ ಅಧಿಕಾರಿಗಳು ತಾಲ್ಲೂಕು ಹಾಗೂ ಗ್ರಾ.ಪಂ. ಮಟ್ಟದಲ್ಲಿ ಮಾಹಿತಿ ಕಾರ್ಯಾಗಾರಗಳನ್ನು ಹಮ್ಮಿಕೊಂಡು ರೈತರಿಗೆ ಉತ್ತಮ ಬೆಳೆ ಪಡೆಯಲು ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ರೈತರು ಬೆಳೆದ ಮಾವು ಮತ್ತು ಅನಾನಸ್ ಬೆಳೆಗಳಿಗೆ ಉತ್ತಮ ಬೆಲೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ ಆದ್ದರಿಂದ ರೈತರು ಉಪ ಉತ್ಪನ್ನ ಗಳನ್ನು ತಯಾರಿಸಲು ಅನುಕೂಲ ವಾಗುವಂತೆ ಜಿಲ್ಲೆಗೆ ಜ್ಯೂಸ್ ಫ್ಯಾಕ್ಟರಿಗಳ ಅಗತ್ಯತೆ ಇರುವುದರಿಂದ ಇದನ್ನು ಸರ್ಕಾರದ ಗಮನಕ್ಕೆ ಅಧಿಕಾರಿಗಳು ತರಬೇಕೆಂದು ರಾಜ್ಯ ಪ್ರತಿನಿಧಿ ನಗರದ ಮಹದೇವಪ್ಪ ಕರೆ ನೀಡಿದರು.
ಕೃಷಿ ತೋಟಗಾರಿಕೆ ಹಾಗೂ ಮತ್ತಿತರ ರೈತರಿಗೆ ಸಂಬಂಧಪಟ್ಟ ಇಲಾಖೆಗಳು ರೈತರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಹಾಗೂ ತಾಲ್ಲೂಕುವಾರು ನೀಡಿರುವ ಸೇವೆ ಗಳ ಕುರಿತು ಸಂಪೂರ್ಣ ಮಾಹಿತಿ ಯನ್ನು ಮುಂದಿನ ಸಭೆಯಲ್ಲಿ ಮಂಡಿಸ ಬೇಕೆಂದು ಜಿಲ್ಲಾ ಉಪಾ ಧ್ಯಕ್ಷ ಉಮೇಶ್ ರವರು ಕೋರಿದರು. ಸಭೆಯಲ್ಲಿ ಚರ್ಚಿತವಾದ ರೈತ ಮುಖಂಡರುಗಳ ಅಹವಾಲುಗಳನ್ನು ಸರ್ಕಾರದ ಗಮನಕ್ಕೆ ತರಲಾಗು ವುದೆಂದು ಜಂಟಿ ಕೃಷಿ ನಿರ್ದೇಶಕ ಡಾ. ಕಿರಣ್ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿದರು, ಜಿಲ್ಲಾ ಕೃಷಿಕ ಸಮಾಜದ ಎಲ್ಲ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

S.N.Chennabasappa ಶಿವಮೊಗ್ಗದ ವಾರ್ಡ್ ನಂ 21 ಕ್ಕೆ ಶಾಸಕ ಚೆನ್ನಿ ಭೇಟಿ, ಸ್ಥಳೀಯರ ಸಮಸ್ಯೆಗಳ ಬಗ್ಗೆ ಪರಿಶೀಲನೆ

0

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಅವರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿರುವಂತಹ ಇರುವಂತಹ ಯುಜಿಡಿ ಸಮಸ್ಯೆಗಳು, ಕನ್ಸರ್ವೆನ್ಸಿ ರಸ್ತೆಗಳ ಸ್ವಚ್ಛತೆ ಕುರಿತು ಸ್ಥಳೀಯರಿಂದ ವಿವರವಾದ ಮಾಹಿತಿ ಪಡೆದರು.

ಈ ಕುರಿತು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚಿಸಿ, ಶೀಘ್ರದಲ್ಲಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

S.N.Chennabasappa ಈ ಭೇಟಿ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಶ್ರೀ ಶಿವಾನಂದ್, ಪ್ರಮುಖರಾದ ಶ್ರೀ ಕಿರಣ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

MESCOM ಜುಲೈ 12 ರಂದು ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.