Saturday, February 7, 2026
Saturday, February 7, 2026
Home Blog Page 25

Alva’s Education Foundation ಎತ್ತರಜಿಗಿತದಲ್ಲಿ ಶಿವಮೊಗ್ಗದ ಸುದೀಪ್ ಗೆ ಚಿನ್ನದ ಪದಕ

0

Alva’s Education Foundation ಮೂಡುಬಿದಿರೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಆಲ್ ಇಂಡಿಯಾ ಅಂತರ ವಿವಿ ಕ್ರೀಡಾಕೂಟದ ಪುರುಷರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕುವೆಂಪು ವಿಶ್ವವಿದ್ಯಾಲಯ ಪ್ರತಿನಿಧಿಸಿದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ ಚಿನ್ನದ ಪದಕ ವಿಜೇತರಾಗಿದ್ದಾರೆ.
2.11 ಮೀ. ಎತ್ತರ ಹಾರುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ದೇಶೀಯ ವಿದ್ಯಾಶಾಲಾ ಸಮಿತಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿದ್ಯಾರ್ಥಿ ಸುದೀಪ್ ಸಾಧನೆಯನ್ನು ಶ್ಲಾಘಿಸಿದ್ದಾರೆ.
Alva’s Education Foundation ಇತ್ತೀಚೆಗೆ ರಾಜಸ್ಥಾನದಲ್ಲಿ ಆಯೋಜಿದ್ದ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲೂ ಸಹ ಚಿನ್ನದ ಪದಕ ವಿಜೇತರಾಗಿದ್ದಾರೆ.

Karnataka State Guarantee Schemes Implementation Authority ಜನವರಿ 21. ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾಮಟ್ಟದ ಕಾರ್ಯಾಗಾರ

0

Karnataka State Guarantee Schemes Implementation Authority ಶಿವಮೊಗ್ಗಜಿಲ್ಲಾ ಪಂಚಾಯತ್ ಕಛೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮತ್ತು ವಿಧಾನ ಪರಿಷತ್ತಿನ ಶಾಸಕರಾಗಿರುವ
ಶ್ರೀ ದಿನೇಶ್ ಗೋಳಿಗೌಡರ ಅಧ್ಯಕ್ಷತೆ
ಯಲ್ಲಿ ಮತ್ತು ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ರವರ ಉಪಸ್ಥಿತಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ

ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕಬಲಿಕಟ್ಟಿ ಮತ್ತು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಗಳಾದ ಶ್ರೀ ಹೇಮಂತ್ .ಎನ್ ರವರು ಉಪಸ್ಥಿತರಿದ್ದರು

Karnataka State Guarantee Schemes Implementation Authority ಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು
ಸದಸ್ಯರು ಮತ್ತು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು / ಸದಸ್ಯರು ಮತ್ತು ಜಿಲ್ಲಾ
ಪಂಚಾಯತ್ ಅಧಿಕಾರಿಗಳು ಜೊತೆಗೆ
ಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

Shivamogga Youth Empowerment and Sports Department ತಾಲ್ಲೂಕು ಮಟ್ಟದಿಂದ ಕ್ರೀಡಾಶಾಲೆ/ ನಿಲಯಗಳಿಗೆ ಜಿಲ್ಲೆಯಲ್ಲಿ ಆಯ್ಕೆ ಪ್ರಕ್ರಿಯೆ

0

Shivamogga Youth Empowerment and Sports Department ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ವಹಿಸುತ್ತಿರುವ ಜಿಲ್ಲಾ ಕ್ರೀಡಾಶಾಲೆಗೆ 2026-27 ನೇ ಸಾಲಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆಯನ್ನು ನಡೆಸಲಾಗುವುದು

ಅಥ್ಲೆಟಿಕ್ಸ್, ಹಾಕಿ, ಫುಟ್‌ಬಾಲ್, ಕುಸ್ತಿ ಕ್ರೀಡೆಗಳಲ್ಲಿ ಆಯಾ ತಾಲ್ಲೂಕುಗಳಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಜ.16 ರಂದು ತೀರ್ಥಹಳ್ಳಿ ತಾಲ್ಲೂಕಿಗೆ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ಸಾಗರ ತಾಲ್ಲೂಕಿಗೆ ಸಾಗರ ತಾಲ್ಲೂಕು ಕ್ರೀಡಾಂಗಣ, ಹೊಸನಗರ ತಾಲ್ಲೂಕಿಗೆ ಹೊಸನಗರ ತಾಲ್ಲೂಕು ಕ್ರೀಡಾಂಗಣ. ಆ.19 ರಂದು ಸೊರಬ ತಾಲ್ಲೂಕಿಗೆ ಸ.ಪ.ಪೂ ಕಾಲೇಜು ಆನವಟ್ಟಿ, ಶಿಕಾರಿಪುರ ತಾಲ್ಲೂಕಿಗೆ ಶಿಕಾರಿಪುರ ತಾಲ್ಲೂಕು ಕ್ರೀಡಾಂಗನ. ಭದ್ರಾವತಿ ತಾಲ್ಲೂಕಿಗೆ ಕನಕ ಮಂಟಪ ಮೈದಾನ ಭದ್ರಾವತಿ. ಹಾಗೂ ಜ.24 ರಂದು ಶಿವಮೊಗ್ಗ ತಾಲ್ಲೂಕಿಗೆ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಆಯ್ಕೆ ನಡೆಸಲಾಗುವುದು.

Shivamogga Youth Empowerment and Sports Department ಆಯ್ಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಶಾಲಾ ಮುಖ್ಯಸ್ಥರಿಂದ ಜನ್ಮ ದಿನಾಂಕ ಪ್ರಮಾಣ ಪತ್ರ ಹಾಗೂ ವ್ಯಾಸಂಗ ಮಾಡುತ್ತಿರುವ ತರಗತಿಯ ವಿವರಗಳನ್ನೊಳಗೊಂಡ ದೃಢೀಕರಣ ಪತ್ರವನ್ನು ಆಯ್ಕೆಯ ದಿನದಂದು ಕಡ್ಡಾಯವಾಗಿ ತಮ್ಮೊಂದಿಗೆ ತರತಕ್ಕದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ತಿಳಿಸಿದ್ದಾರೆ.

Shivamogga City Water Supply and Board ಜನವರಿ 18. ನೀರಿನ ಬಾಕಿ ಕರ ಪಾವತಿಮಾಡಲು ವಿಶೇಷ ಕೌಂಟರ್. ನೀರಿ ಸರಬರಾಜು & ಒಳಚರಂಡಿ ಪ್ರಕಟಣೆ

0

Shivamogga City Water Supply and Board ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 18 ರಂದು ನಗರದ ವಿವಿಧ ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
ಚಿಕ್ಕಲ್ ಶಿವನ ಪಾರ್ಕ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ವಿನೋಬನಗರ ಕಲ್ಲಹಳ್ಳಿ ಅಭೀಷ್ಟವರ ಗಣಪತಿ ದೇವಸ್ಥಾನದ ಹತ್ತಿರ-ಕೆ.ಹೆಚ್.ಬಿ., ಪರಿಚಯ ಸ್ಟೋರ್ ಎದುರು ಓ.ಟಿ.ರಸ್ತೆ, ಕೃಷಿನಗರ ಗಣಪತಿ ದೇವಸ್ಥಾನದ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಜರ್ಮನಿಯ ಚಾನ್ಸಲರ್ ಫೆಡ್ರಿಕ್ ಮೆರ್ಜ್ ಅವರಿಗೆ ಬೆಂಗಳೂರಲ್ಲಿ ಭವ್ಯ ಸ್ವಾಗತ

0

ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ಜಿ ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್,
ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಜರ್ಮನಿ ಕಾನ್ಸೂಲೇಟ್ ಜನರಲ್ ನವದೆಹಲಿ ಕಚೇರಿಯ ಅಧಿಕಾರಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗವು ಇಂದು ಬೆಂಗಳೂರಿನ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಇಂದು ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾಗಲಿದ್ದಾರೆ.

ದೇವಿಕೊಪ್ಪದಲ್ಲಿ ಸಾಲಬಾಧೆ ತಾಳದೇ ವ್ಯಕ್ತಿ ನೇಣಿಗೆ ಶರಣು

0

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳಿನ ದೇವಿಕೊಪ್ಪದಲ್ಲಿ
ಸಾಲಭಾದೆಗೆ -ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ
ಘಟನೆ ನಡೆದಿದೆ.

ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಸಾಲ ಭಾದೆಯಿಂದ ಬೇಸತ್ತು ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೋಲಿಸರಿಗೆ ವಿಷಯ ತಿಳಿಸಿದ್ದಾರೆ . ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

Department of Animal Husbandry and Veterinary Services ಸಾಕು ನಾಯಿ ಮಾಲೀಕರೇ, ಜನವರಿ 25, ಜಿಲ್ಲಾಮಟ್ಟದ ಸಾಕು ನಾಯಿ ಪ್ರದರ್ಶನಕ್ಕೆ ಸಜ್ಜಾಗಿರಿ

0

Department of Animal Husbandry and Veterinary Services ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಬಳಿಯ ಪಶು ಆಸ್ಪತ್ರೆ ಆವರಣದಲ್ಲಿ ಸಾಕು ನಾಯಿಗಳ ಪ್ರದರ್ಶವನ್ನು ಏರ್ಪಡಿಸಲಾಗಿದೆ.
Department of Animal Husbandry and Veterinary Services ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿಗೆ ಜ.22 ಕಡೆಯ ದಿನವಾಗಿದ್ದು ನೋಂದಣಿ ಶುಲ್ಕ ರೂ.200 ಕಡ್ಡಾಯವಾಗಿರುತ್ತದೆ. 6 ತಿಂಗಳ ಒಳಗಿನ ವಯಸ್ಸಿನ ಶ್ವಾನಗಳಿಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವ ಸ್ಥಳದಲ್ಲಿ ನೋಂದಾಯಿಸಲು ಅವಕಾಶವಿರುವುದಿಲ್ಲ. ಇತರೆ ನಿಬಂಧನೆಗಳಿದ್ದು, ನೋಂದಣಿಗಾಗಿ ಡಾ.ಪ್ರಸನ್ನ ಕೆ ಎಂ, ಮೊ.ಸಂ: 9343464008, ಡಾ.ಶಿವರಾಜ್ 9448318878, ಡಾ.ಕೆಂದೇಶ್ 9880043904, ಡಾ.ಒ.ಎಸ್.ಪ್ರಕಾಶ್ 7628659762, ಎನ್.ರಾಜೇಂದ್ರ ಕಾಮತ್ 9902191333, ಗಜಾನನ ಹೆಗಡೆ 9742352112, 9448007542, 9482635093, 9480467707, 8762099569, 9980371799, 7337629259, 9611948135 ನ್ನು ಸಂಪರ್ಕಿಸಬಹುದೆAದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Soldier Welfare Department ದೂರವಾಣಿ ಮೂಲಕ ಕುಂದುಕೊರತೆ ಸ್ವೀಕಾರ, ಮಾಜಿ ಸೈನಿಕ ಕಲ್ಯಾಣ ಇಲಾಖೆ ಪ್ರಕಟಣೆ

0

Soldier Welfare Department ಜನವರಿ 14 ರಂದು ‘ಆರ್ಮಡ್ ಫೋರ್ಸಸ್ ವೆಟರನ್ಸ್ ಡೇ’ ಅಂಗವಾಗಿ ಮಾಜಿ ಸೈನಿಕರು ಹಾಗೂ ಅವಲಂಬಿತರುಗಳಿಗೆ ದೂರುವಾಣಿ ಮೂಲಕ ಕುಂದು ಕೊರತೆಗಳ ಆಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.
Soldier Welfare Department ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಹಾಗೂ ಕೇಂದ್ರ ಸ್ಥಾನದ ಜಂಟಿ ನಿರ್ದೇಶಕರು ಮಾಜಿ ಸೈನಿಕರು ಹಾಗೂ ಅವಲಂಬಿತರ ದೂರವಾಣಿ ಕರೆಗಳ ಮೂಲಕ ಅಹವಾಲುಗಳನ್ನು ಸ್ವೀಕರಿಸುವರು. ಮಾಜಿ ಸೈನಿಕರು ಹಾಗೂ ಅವಲಂಬಿತರು ತಮ್ಮ ತಮ್ಮ ಕುಂದು ಕೊರತೆಗಳನ್ನು ದೂರವಾಣಿ ಸಂಖ್ಯೆಗಳಾದ 080-25589459, 8105233863, 9871103814, 7892289635 ನ್ನು ಸಂಪರ್ಕಿಸಿ ಪ್ರಸ್ತಾಪಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ)ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Adichunchanagiri ಶಿವಮೊಗ್ಗದ ಶರಾವತಿ ಮಹಿಳಾ ಮಂಡಳಿಯಿಂದ ಸಂಕ್ರಾಂತಿ ಆಚರಣೆ

0

Adichunchanagiri ಶಿವಮೊಗ್ಗ ನಗರದ ಶರಾವತಿ ಮಹಿಳಾ ಮಂಡಳಿ ವತಿಯಿಂದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ “ಸಂಕ್ರಾಂತಿ ಸಂಭ್ರಮ” ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರು ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಎಳ್ಳು-ಬೆಲ್ಲ ನೀಡುವುದರ ಮೂಲಕ ಶುಭಾಶಯಗಳು ಕೋರಿದರು.

ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರು ಎಳ್ಳು ಬೆಲ್ಲವನ್ನು ವಿತರಿಸಿ ಶುಭಾಶಯ ತಿಳಿಸಿದರು.

B.Y. Raghavendra ಎಲ್ಲಾ ವರ್ಗದವರ ಅಭ್ಯುದಯ ಮುಖ್ಯ- ಸಂಸದ ರಾಘವೇಂದ್ರ

0

B.Y. Raghavendra ಭದ್ರಾವತಿ ತಾಲೂಕಿನ ಅರಬಿಳಚಿ ಜಿ.ಪಂ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ 2024-25 ಮತ್ತು 2025-26ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ರವರೊಂದಿಗೆ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಭಾಭವನ, ಮರಾಠಾ ಸಮಾಜದ ಸಭಾಭವನ ಮತ್ತು ದೇವಾಂಗ ಸಮಾಜದ ಸಭಾಭವನ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು:

ಎಲ್ಲಾ ವರ್ಗದ ಜನರ ಅಭ್ಯುದಯ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಸಮುದಾಯ ಭವನಗಳು ಸದ್ಬಳಕೆಯಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದರು

B.Y. Raghavendra ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ ಜಗದೀಶ್, ಜಿ.ಪಂ ಮಾಜಿ ಸದಸ್ಯರಾದ ಶ್ರೀ ಶ್ರೀನಿವಾಸ್, ದಿಶಾ ಸಮಿತಿ ಸದಸ್ಯರಾದ ಶ್ರೀ ಗಿರೀಶ್ ಭದ್ರಾಪುರ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಶ್ರೀ ರಾಜು ತಲ್ಲೂರು,ಮರಾಠ ಸಮಾಜದ ಅಧ್ಯಕ್ಷರಾದ ಶ್ರೀ ರುದ್ರೋಜಿ ರಾವ್, ತಾ.ಪಂ ಮಾಜಿ ಸದಸ್ಯರಾದ ಶ್ರೀ ನಾಗರಾಜಪ್ಪ ನವರು, ದೇವಾಂಗ ಸಮಾಜದ ಅಧ್ಯಕ್ಷರಾದ ಶ್ರೀ ನಾಗೇಂದ್ರ, ಉಪ್ಪಾರ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಖಾ ಭೋಸ್ಲೆ, ಅರಬೀಳಚಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರುದ್ರೋಜಿ, ಸಿದ್ದಪ್ಪ, ಉಜಿನಪ್ಪ ಸೇರಿದಂತೆ ಅನೇಕ ಗಣ್ಯರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದರು.