Wednesday, May 6, 2026
Wednesday, May 6, 2026
Home Blog Page 25

ತೀರ್ಥಹಳ್ಳಿ ತಾಲ್ಲೂಕಿನ ರಶ್ಮಿತಾ ಗೆ ಪಿಯು ಪರೀಕ್ಷೆಯಲ್ಲಿ ಶೇ.93 ಅಂಕಗಳು

0

ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 93ರಷ್ಟು ಅಂಕ ಪಡೆದಿದ್ದಾರೆ.

ಈ ಪ್ರತಿಭಾನ್ವಿತೆ ತೀರ್ಥಹಳ್ಳಿ ತಾಲೂಕಿನ ಹಿರೇಗೋಡು ಗ್ರಾಮದ ಶ್ರೀಮತಿ ಕವಿತಾ ರಾಜೇಶ್ ಅವರ ಪುತ್ರಿ.

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

0

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ನಡೆದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. B.Y. Raghavendra ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಲಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತದ ಸಮಯದಲ್ಲಿ ತಕ್ಷಣವೇ ಸ್ಪಂದಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ ಸ್ಥಳೀಯ ಸಾರ್ವಜನಿಕರ ಕಾರ್ಯ ಶ್ಲಾಘನೀಯ.ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಏಪ್ರಿಲ್ 15. ಶಿವಮೊಗ್ಗದ ವಿದ್ಯಾನಗರ ಮುಖ್ಯರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ, ಜನರಲ್ ಹಾಸ್ಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗದ ಎಸ್.ಲಾವಣ್ಯ ಪಿಯು ವಿಜ್ಞಾನ ವಿಭಾಗದಲ್ಲಿ 566 ಅಂಕ ಗಳಿಕೆ

0

ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಸ್.ಲಾವಣ್ಯ 566 ಅಂಕ ಗಳಿಸಿದ್ದಾಳೆ. ಕನ್ನಡ 98, ಇಂಗ್ಲೀಷ್ 91, ಭೌತಶಾಸ್ತ್ರ 97, ರಾಸಾಯನ ಶಾಸ್ತ್ರ 90, ಗಣಿತ 96 ಮತ್ತು ಜೀವಶಾಸ್ತ್ರದಲ್ಲಿ 94 ಅಂಕ ಗಳಿಸಿದ್ದಾಳೆ. ವಿ.ಸತೀಶ್ ಮತ್ತು ಜಿ.ಎಲ್.ಶಿಲ್ಪಾ ದಂಪತಿ ಪುತ್ರಿ. ಸರ್ ಎಂ.ವಿ.ಕಾಲೇಜು ( ವಿದ್ಯಾ ಭಾರತಿ ) ಆಡಳಿತ ಮಂಡಳಿ, ಪ್ರಾಂಶುಪಾಲರು, ಪೋಷಕರು ಮತ್ತು ಜಿಲ್ಲಾ ಗಾಣಿಗ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಪತ್ರಕರ್ತ ವೆಂಕಟೇಶ್ ಎಸ್ ಸಂಪ ಅವರಿಗೆ ಮಂಗಳ ಎಂ.ಸಿ.ವರ್ಗೀಸ್ ಪ್ರಶಸ್ತಿ

0

ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್ ಸಂಪ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಮಂಗಳ ಎಂ. ಸಿ. ವರ್ಗೀಸ್ ಪ್ರಶಸ್ತಿಯನ್ನು ಏ.12 ರಂದು ಬೀದರನಲ್ಲಿ ನೆಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು. ಟಿ. ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಅರಣ್ಯ ಹಾಗೂ ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಬೀದರ್ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರದಾನ ಮಾಡಿದರು.

ವೆಂಕಟೇಶ ಸಂಪ ಅವರು ಕಳೆದ 20 ವರ್ಷಗಳಿಂದ ನಿರಂತರವಾಗಿ ಸಂಪದ ಸಾಲು ಎನ್ನುವ ಧನಾತ್ಮಕ ಪತ್ರಿಕೆಯನ್ನು ನಡೆಸುತ್ತಿರುವ ವೆಂಕಟೇಶ ಸಂಪರವರ ಸಾವಿರಾರು ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಧನಾತ್ಮಕವಾಗಿ ಸಮಾಜಮುಖಿಯಾಗಿ ಮತ್ತು ಯುವಕರಿಗೆ ಸ್ಪೂರ್ತಿದಾಯಕವಾಗಿ ಅವರ ಹಲವಾರು ಲೇಖನಗಳು ಸಂಪದ ಸಾಲು ಪತ್ರಿಕೆಯ ಸಂಪಾದಕೀಯದಲ್ಲಿಯೂ ಪ್ರಕಟವಾಗಿವೆ ಮತ್ತು ಜನಪ್ರಿಯತೆ ಪಡೆದಿದೆ, ಹಾಗೂ ರೇಡಿಯೋ ಟಿವಿಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಇವರು ಹಲವಾರು ಟೀವಿ ಚಾನಲ್ ಗಳ ಪ್ಯಾನಲ್ ಡಿಸ್ಕಷನ್ ಗಳಲ್ಲಿ ಭಾಗವಹಿಸುವುದರ ಜೊತೆಗೆ ಹಲವಾರು ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.

ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್ ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

0

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು.
ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ ಎಂದು ಅಭಿಪ್ರಾಯಪಟ್ಟರು.
U.T. Khader ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, 371ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೪೦ ಪತ್ರಕರ್ತರಿಗೆ ದತ್ತಿನಿಽ, ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನದಲ್ಲಿ ಶಿವಮೊಗ್ಗೆಯ ಪತ್ರಕರ್ತರಾದ ಮಹೇಶ್ ಹೆಗ್ಡೆ, ಶರತ್‌ಕುಮಾರ್ ಹಾಗೂ ಅರುಣ್ ಕುಮಾರ್‌ರವರನ್ನು ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಜಿಲ್ಲಾ ಶಾಖೆಯ ಅಧ್ಯಕ್ಷರಾದ ಹೆಚ್. ಯು. ವೈದ್ಯನಾಥ್, ಉಪಾಧ್ಯಕ್ಷರಾದ ದೇಶಾದ್ರಿ ಹೊಸ್ಮನಿ, ನೂತನ ರಾಜ್ಯಸಮಿತಿ ಸದಸ್ಯ ಎನ್. ರವಿಕುಮಾರ್, ಖಜಾಂಚಿ ಎಸ್. ಆರ್. ರೋಹಿತ್, ನಗರ ಕಾರ್ಯದರ್ಶಿ ಕೆ. ಆರ್. ಸೋಮನಾಥ್, ನಿರ್ದೇಶಕರಾದ ಎಸ್. ಆರ್. ರಂಜಿತ್, ಆರುಂಡಿ ಶ್ರೀನಿವಾಸ ಮೂರ್ತಿ ಹಾಗೂ ಪತ್ರಕರ್ತ ನಾಗೇಶ್ ನಾಯ್ಕ ಉಪಸ್ಥಿತರಿದ್ದರು.

ಹುಲಿಕಲ್ ಘಾಟಿ‌ ಕುಸಿತ: ಗುತ್ತಿಗೆದಾರರು ಗೈಡ್ ಲೈನ್ಸ್ ಅನುಸರಿಸಿಲ್ಲ- ಸತೀಶ್ ಜಾರಕಿಹೊಳಿ

0

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ತೀರ್ಥಹಳ್ಳಿಯಲ್ಲಿ ಹುಲಿಕಲ್ ಘಾಟಿ ಕುಸಿತದಲ್ಲಿ 3 ಸಾವುಗಳಾಗಿರುವ ವಿಚಾರವಾಗಿ ಮಾತನಾಡಿದರು.

ನಾನು ಘಟನಾ ಸ್ಥಳಕ್ಕೆ ಭೇಟಿ ನೀಡುತ್ತೇನೆ‌. ಯಾವ ಕಾರಣಕ್ಕೆ ಆಗಿದೆ ಹಾಗೂ ಮುಂದೆ ಶಾಶ್ವತವಾಗಿ ಈ ರೀತಿಯ ಘಟನೆಗಳು ಆಗದಂತೆ ನೋಡಿಕೊಳ್ಳಲು ಬೇಕಾದ ಚರ್ಚೆ ನಡೆಸಲಿದ್ದೇನೆ. ಸರ್ಕಾರದಿಂದ ಪರಿಹಾರ ಕೊಡುವ ಕೆಲಸ ಈಗಾಗಲೇ ಆಗಿದೆ ಎಂದಿದ್ದಾರೆ.

ಇಲಾಖೆಯಿಂದ ಗೈಡ್ ಲೈನ್ಸ್ ಕೊಡಲಾಗಿದ್ದು, ಅದನ್ನ ಗುತ್ತಿಗೆದಾರರು ಅನುಸರಿಸಬೇಕಿತ್ತು. ಎರಡು ಕಡೆಯಿಂದಲೂ ತಪ್ಪಾಗಿದೆ ಎಂದರು.

ಶಿಕಾರಿಪುರದ ಬಳಿ ಬಸ್ ಅಪಘಾತ 12 ಮಂದಿಗೆ ತೀವ್ರ ಗಾಯ, ಸಂಸದ ರಾಘವೇಂದ್ರ ಅವರಿಂದ ಗಾಯಾಳುಗಳಿಗೆ ಸಾಂತ್ವನ

0

ಇಂದು ಶಿಕಾರಿಪುರದ ಬಳಿ ಬಸ್ ಅಪಘಾತದಲ್ಲಿ ನಡೆದಿದ್ದು, ಸುಮಾರು 12 ಜನ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.

ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಬೈಕ್ ಅಪಘಾತ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ ಯಾಗಿದ್ದು ಹಲವರಿಗೆ ಗಾಯಗಳಾಗಿವೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುತ್ತಿದ್ದ ವಿಜಯ ಬಸ್ ಪಲ್ಟಿ ಹೊಡೆದಿದ್ದು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್ ನ ಮುಂಭಾಗದಲ್ಲಿದ್ದ ಬೈಕ್ ಸವಾರ ಹಂಪ್ ತಪ್ಪಿಸಲು ಹೋಗಿ ಬಸ್ಸಿನ ಬಲಭಾಗಕ್ಕೆ ತಿರುಗಿಸಿದ ಪರಿಣಾಮ, ಬಸ್ ಚಾಲಕ ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ

ಶಿವಮೊಗ್ಗ ಆಲ್ಕೊಳದ ಬಂಗಾರಪ್ಪ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಇಕ್ಕೆಲ ತಿಂಡಿಗಾಡಿಗಳ‌ ತೆರವು

0

ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್‌ನಿಂದ ಡಿ.ವಿ.ಜಿ. ಸರ್ಕಲ್‌ವರೆಗೆ ಇರುವ ಶ್ರೀ ಎಸ್. ಬಂಗಾರಪ್ಪ ರಸ್ತೆಯಲ್ಲಿ, ಸಾರ್ವಜನಿಕ ವಾಹನಗಳು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ರಸ್ತೆಯ ಎರಡೂ ಬದಿಗಳ ಪುಟ್‌ಪಾತ್ ಹಾಗೂ ರಸ್ತೆಯ ಮೇಲಿಟ್ಟಿದ್ದ ತಿಂಡಿ ಗಾಡಿಗಳು ಮತ್ತು ಹಣ್ಣಿನ ಅಂಗಡಿಗಳನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳ ಸಹಕಾರದೊಂದಿಗೆ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.
ಜೊತೆಗೆ, ಎಲ್ಲಾ ಪುಟ್‌ಪಾತ್ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳದಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ, ಸೋಮವಾರ ಈ ಪ್ರದೇಶದ ವ್ಯಾಪಾರಸ್ಥರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

0

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಭಾನುವಾರ(ಏ.12) ನಿಧನರಾದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ತಿಳಿಸಿದ್ದಾರೆ.

ಇತ್ತೀಚೆಗೆ ಹೃದಯ ಸ್ತಂಭನದಿಂದಾಗಿ ಬೀಚ್ ಕ್ಯಾಂಡಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಅವರ ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು.

ಅವರ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ‘ಅಭಿ ನಾ ಜಾವೋ ಛೋಡ್ ಕರ್’, ‘ಇನ್ ಆಂಖೋನ್ ಕಿ ಮಸ್ತಿ’, ‘ದಿಲ್ ಚೀಜ್ ‘, ‘ಪಿಯಾ ತೂ ಅಬ್ ತೋ ಆಜಾ’, ‘ದುನಿಯಾ ಮೇ ಗೋನ್ ಕೋ’ ಮತ್ತು ‘ಜರಾ ಸಾ ಝೂಮ್ ಲೂನ್ ಮೈ’ ಸೇರಿದಂತೆ ಹಲವು ಹಾಡುಗಳು ಸೇರಿವೆ. ಮೀನಾ ಕುಮಾರಿ, ಮಧುಬಾಲಾ, ಝೀನತ್ ಅಮಾನ್ ಅವರಿಂದ ಹಿಡಿದು ಕಾಜೋಲ್‌, ಊರ್ಮಿಳಾ ಮಾತೋಂಡ್ಕ‌ರ್ ಮತ್ತು ದಕ್ಷಿಣದ ನಟಿಯರಾದ ಪದ್ಮನಿ ಮತ್ತು ವೈಜಯಂತಿಮಾಲಾ ಅವರವರೆಗೆ ಅನೇಕ ಖ್ಯಾತ ನಟಿಯರಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಎಂಟು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನವನ್ನು ಹೊಂದಿದ್ದ ಆಶಾ ಭೋಸ್ಥೆ, ವಿವಿಧ ಭಾರತೀಯ ಭಾಷೆಗಳಲ್ಲಿ 12 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ.

ವಿಶಿಷ್ಟ ಧ್ವನಿ ಹಾಗೂ ವಿಭಿನ್ನ ಗಾಯನ ಶೈಲಿಯಿಂದಲೇ ಹೆಸರುವಾಸಿಯಾಗಿದ್ದರು. ಅವರಿಗೆ ಪದ್ಮ ವಿಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

ಅತ್ಯಧಿಕ ರೆಕಾರ್ಡಿಂಗ್ ಹಾಡುಗಳ ಒಡತಿ ಎಂಬ ಗಿನ್ನಿಸ್ ದಾಖಲೆಯನ್ನೂ ಬರೆದಿದ್ದರು.