Tuesday, February 24, 2026
Tuesday, February 24, 2026
Home Blog Page 250

MESCOM ಜುಲೈ 15, ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗದ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.

Department of School Education 2025 ವಾರ್ಷಿಕ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ

0

Department of School Education ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಸಿ. ಮಾನ್ಯತೆ ಪಡೆದ ಶಾಲೆಗಳಲ್ಲಿ ಖಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ 2025ರ ಏಪ್ರಿಲ್ ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಸಕ್ತರು https://nationalawardstoteachers,education.gov.in ಮೂಲಕ ಜು. 15 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Department of School Education ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.

Actress Umashree ಜುಲೈ 12 ರಂದು “ರೇಡಿಯೋ ಶಿವಮೊಗ್ಗ ಎಫ್.ಎಂ” ನಲ್ಲಿ ಖ್ಯಾತ ನಟಿ ಉಮಾಶ್ರೀ ಅರೊಂದಿಗೆ ಫೋನ್ ಇನ್ ಕಾರ್ಯಕ್ರಮ

0

Actress Umashree ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ ಮತ್ತು ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಇದೇ ೧೨-೭-೨೫ ರ ಶನಿವಾರ ಬೆಳಗ್ಗೆ ೧೧.೩೦ಕ್ಕೆ ಕನ್ನಡ ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಅಭಿನಯದ ಮೂಲಕ ವಿಶಿಷ್ಟ ಛಾಪನ್ನು ಮೂಡಿಸಿರುವ ಕನ್ನಡದ ಹೆಮ್ಮೆಯ, ಜನಪ್ರಿಯ ನಟಿ ಉಮಾಶ್ರೀ ಅವರೊಂದಿಗೆ ಸಂದರ್ಶನ ಮತ್ತು ನೇರ ಫೋನ್ ಇನ್ ಕಾರ್ಯಕ್ರಮ ಇರಲಿದೆ. Actress Umashree ನಟಿಯಾಗಿ, ರಾಜಕಾರಣಿಯಾಗಿ ಪ್ರಸಿದ್ದಿ ಪಡೆದಿರುವ ಇವರು ಇತ್ತೀಚೆಗೆ ನಟಿಸಿದ ಏಕವ್ಯಕ್ತಿ ನಾಟಕ ‘ಶ್ರಮಿಷ್ಠೆ’ ನಾಟಕವು ಯಶಸ್ವಿಯಾಗಿ ರಾಜ್ಯದ್ಯಂತ ಪ್ರದರ್ಶನ ಕಾಣುತ್ತಿದೆ. ಇವರ ಬದುಕು, ರಂಗಭೂಮಿ, ಸಿನಿಪಯಣ, ಸಮಾಜಸೇವೆಯ ಬಗ್ಗೆ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೇಳುಗರು ಸಹ ೯೬೮೬೦೯೬೨೭೯ ನಂಬರ್ ಗೆ ಕರೆ ಮಾಡಿ ಮಾತನಾಡಬಹುದು. ಆಸಕ್ತರು ತಪ್ಪದೇ ಕಾರ್ಯಕ್ರಮವನ್ನು ಆಲಿಸಿ. ಎಂದು ರೇಡಿಯೋ ಶಿವಮೊಗ್ಗದ ನಿಲಯದ ನಿರ್ದೇಶಕರಾದ ಜನಾರ್ಧನ್.ಜಿ.ಎಲ್. ರವರು ಕೋರಿದ್ದಾರೆ.

Department of Kannada and Culture ತ್ರಿಕರಣ ಶುದ್ಧವಾಗಿ ಮಾಡುವ ಕಾಯಕವೇ ನಿಜವಾದ ಕಾಯಕ ಎಂಬುದೇ ಹಡಪದಪ್ಪಣ್ಣನವರ ಸಂದೇಶ- ಕೆ.ವೀರೇಶ್

0

Department of Kannada and Culture 12 ನೇ ಶತಮಾನದಲ್ಲಿ ಸಮಾಜದಲ್ಲಿನ ಅಂಕುಡೊಂಕುಗಳು, ಕಠೋರ ಜಾತಿ ಪದ್ದತಿ ಮತ್ತು ಮೌಢ್ಯತೆಯನ್ನು ತೊಡೆದುಹಾಕಲು ಹಾಗೂ ಕಾಯಕ ಸಂಸ್ಕೃತಿಯನ್ನು ಬಿತ್ತಲು ಹಡಪದ ಅಪ್ಪಣ್ಣ ಸೇರಿದಂತೆ ಬಸವಾದಿ ಶರಣರು ತಮ್ಮ ಜೀವನ ಮುಡಿಪಾಗಿಟ್ಟರು ಎಂದು ಪ್ರಿಯದರ್ಶಿನಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ವೀರೇಶ್ ಸ್ಮರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಮಾತನಾಡಿದರು.

ಮಾಡುವ ಕಾಯಕದಲ್ಲಿ ಮೇಲೂ ಅಲ್ಲ. ಕೀಳೂ ಅಲ್ಲ. ತನು, ಮನ, ಧನವೆಂಬ ತ್ರಿಕರಣ ಶುದ್ಧವಾಗಿ ಮಾಡುವುದೇ ನಿಜವಾದ ಕಾಯಕವೆಂದು ಶಿವಶರಣ ಶ್ರೀ ಹಡದಪ್ಪ ಅಪ್ಪಣ್ಣ 12 ನೇ ಶತಮಾನದಲ್ಲಿ ಇಡೀ ಸಮಾಜಕ್ಕೆ ತಿಳಿಸಿದರು.

ಅಪ್ಪಣ್ಣನವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿಹಾಳ ಗ್ರಾಮದಲ್ಲಿ ಜನಿಸಿದ್ದಾರೆ ಎಂಬ ಪ್ರತೀತಿ ಇದೆ. ಇದು ಬಸವಣ್ಣನವರ ಜನ್ಮಸ್ಥಳವಾದ ಇಂಗಳೇಶ್ವರದಿಂದ 6 ಕಿ.ಮೀ. ದೂರ ಇದೆ. ಅಪ್ಪಣ್ಣನವರು ಅಪಾರ ಭಕ್ತಿ, ಜ್ಞಾನವುಳ್ಳವರಾಗಿದ್ದರು. ಕಾಯಕ ಜೀವಿಗಳಾಗಿ ಕ್ಷೌರ ವೃತಿಯನ್ನು ನಡೆಸಿಕೊಂಡು ಹೋಗುತ್ತಿದ್ದರು.

ಕಾಯಕ ನಿಷ್ಠರಾದ ಶರಣ ಹಡಪದ ಅಪ್ಪಣ್ಣನವರು ಲಿಂಗಮ್ಮನವರನ್ನು ವಿವಾಹವಾದರು. ಶರಣೆ ಲಿಂಗಮ್ಮನವರು ಕೂಡ ಅಪಾರವಾದ ಜ್ಞಾನವನ್ನು ಹೊಂದಿದವರಾಗಿದ್ದರು. ಇವರಿಬ್ಬರೂ ಆಗಿನ ಕಾಲದ ಜಾತಿ ವ್ಯವಸ್ಥೆಯಲ್ಲಿ ಭೌತಿಕವಾಗಿ ಹಿಂದುಳಿದವರಾಗಿದ್ದು ಮಾನಸಿಕವಾಗಿ ಅತ್ಯಂತ ಸದೃಢ ಮನಸ್ಸಿನವರಾಗಿ ಮೇರು ಜ್ಞಾನವನ್ನು ಹೊಂದಿದ್ದ ಶರಣ ದಂಪತಿಗಳಾಗಿದ್ದರು. 12 ನೇ ಶತಮಾನದಲ್ಲಿ ಬಸವಣ್ಣನವರ ಬಗ್ಗೆ ತಿಳಿದುಕೊಂಡ ಈ ದಂಪತಿಗಳಿಬ್ಬರು ಸಂಗಮಕ್ಕೆ ಬಂದು ಬಸವಣ್ಣನವರನ್ನು ಕಂಡರು.

ನಂತರ ಬಸವಣ್ಣನವರೊಡನೆ ಕಲ್ಯಾಣದಲ್ಲೇ ನೆಲೆಸಿದ ಅವರು ಶರಣರು ಕಲ್ಯಾಣಕ್ಕೆ ಬಂದರೆ ಜೀವ ಬಂದಂತೆ ಎಂದು ನಂಬಿದ್ದರು.
ಅಪ್ಪಣ್ಣನವರಿಗೆ ಬಸವಣ್ಣನೇ ಗುರುವಾದನು, ಲಿಂಗವಾದನು, ಜಂಗಮವಾದನು, ಪ್ರಸಾದವಾದನು. ನಾನು ದೇಹವಾದರೆ, ಬಸವಣ್ಣನೇ ಪ್ರಾಣವಾದನು ಎಂದು ಬಸವಪ್ರಿಯರಾದರು. ಕ್ಷೌರಿಕರಾದ ಹಡಪದ ಅಪ್ಪಣ್ಣನವರ ಮುಖ ನೋಡಿದರೆ ಅಪಶಕುನ ಎಂದು ಕಲ್ಯಾಣದ ಮೇಲ್ಜಾತಿಗಳು ಬೊಬ್ಬಿಡುತ್ತಿದ್ದರು. ಹೀಗಿರುವಾಗ ಬಸವಣ್ಣನವರು ಅಪ್ಪಣ್ಣನವರು ಆಪ್ತಕಾರ್ಯದರ್ಶಿ ಹಾಗೂ ತಮ್ಮ ಜೀವದ ಒಡನಾಡಿಯಾಗಿ ಮಾಡಿಕೊಂಡರು.

ಆ ಮೂಲಕ ಮೇಲ್ಜಾತಿಯವರ ಮೌಢ್ಯತೆಯನ್ನು ಬಸವಣ್ಣ ಧಿಕ್ಕರಿಸಿ ತಮ್ಮನ್ನು ಭೇಟಿಯಾಗಲು ಬರುವ ಯಾರೇ ಆಗಲಿ, ಅವರು ಮೊದಲು ಹಡಪದ ಅಪ್ಪಣ್ಣನವರನ್ನು ಭೇಟಿಯಾಗಿಯೇ ಬರಬೇಕೇಂಬ ನಿಯಮ ಮಾಡಿದರು. ಅದರಂತೆ ಎಲ್ಲರೂ ಅಪ್ಪಣ್ಣನವರನ್ನು ಭೇಟಿಯಾಗಿ ಬರುತ್ತಿದ್ದರು. ಜಾತೀಯತೆ ಮೂಢನಂಬಿಕೆ ರಹಿತ ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಹಡಪದ ಅಪ್ಪಣ್ಣನವರು ಸದಾ ಬಸವಣ್ಣನವರ ಬಲಗೈ ಬಂಟರಾಗಿದ್ದರು ಎಂದರು.
ಪ್ರತಿ ಕ್ಷಣದಲ್ಲೂ ಬಸವಣ್ಣನವರಿಗೆ ಪ್ರತಿಯೊಂದು ಮಾಹಿತಿಯನ್ನೂ ಮೊದಲು ತಿಳಿಸುತ್ತಿದ್ದರು. ಕಲ್ಯಾಣಕ್ಕೆ ಬರುವ ಶರಣರ ಸಮೂಹಕ್ಕೆ ತಾಂಬೂಲ ಕೊಟ್ಟು ಸ್ವಾಗತಿಸುತ್ತಿದ್ದರು.

ಕ್ಷಣವಾದರೂ ಬಸವಣ್ಣನವರನ್ನು ಬಿಟ್ಟಿರಲಾರದ ಜೀವ ಅಪ್ಪಣ್ಣನವರದ್ದು.
ಸದಾ ಬಸವಣ್ಣನವರ ಆಪ್ತ ಒಡನಾಡಿಗಳಾಗಿ ಅನುದಿನ ಅನುಕ್ಷಣವೂ ಅಣ್ಣನವರ ದಿವ್ಯ ಸಾನಿಧ್ಯದಲ್ಲಿ ಇರುತ್ತಿದ್ದ ಅಪ್ಪಣ್ಣನವರು ಎಲ್ಲಾ ಶರಣರ ಮೆಚ್ಚುಗೆಗೆ ಪಾತ್ರರಾಗಿ ನಿಜಸುಖಿ ಅಪ್ಪಣ್ಣ ಎಂಬ ಬಿರುದನ್ನು ಪಡೆದರು. ಹಡಪದ ಅಪ್ಪಣ್ಣನವರ ಧರ್ಮಪತ್ನಿ ಲಿಂಗಮ್ಮನವರೂ ಕೂಡ ಮಹಾಜ್ಞಾನಿಗಳಾಗಿದ್ದರು. ಇವರು ನಿಜಮುಕ್ತ ಲಿಂಗಮ್ಮನವರು ಎಂದೇ ಪ್ರಖ್ಯಾತಿ ಪಡೆದರು ಎಂದು ತಿಳಿಸಿದರು.

Department of Kannada and Culture ಸೂಡಾ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಮಾತನಾಡಿ, ಹಡಪದ ಅಪ್ಪಣ್ಣರಂತಹ ಮಹಾನೀಯರ ಇತಿಹಾಸವನ್ನು ಯುವಜನತೆ ಸೇರಿದಂತೆ ನಾವೆಲ್ಲ ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಇಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿದೆ. ಈ ಮಹನೀಯರು ಶತಮಾನಗಳಿಂದ ಸಮಾಜ ಸೇವೆ ಮಾಡಿಕೊಂಡು ಬಂದಿದ್ದಾರೆ. ಕ್ಷೌರಿಕರ ಮುಖ ನೋಡಬಾರದೆಂಬ ಮೌಢ್ಯತಿಯಿಂದ ಸಮಾಜವನ್ನು ಹೊರತರಲು 12 ನೇ ಶತಮಾನದ ಬಸವಣ್ಣ ಅನುಭವ ಮಂಟಪದ ಪ್ರಧಾನ ಕಾರ್ಯದರ್ಶಿಯಾಗಿ ಹಡಪದ ಅಪ್ಪಣ್ಣನನ್ನು ನೇಮಿಸಿ, ಅವರನ್ನು ಮೊದಲು ಭೇಟಿಯಾಗಿ ನಂತರ ಬಸವಣ್ಣನವರನ್ನು ಭೇಟಿಯಾಗುವಂತೆ ಮಾಡಿದರು.

ಬಸವಣ್ಣ ಮತ್ತು ಅಪ್ಪಣ್ಣ ತುಂಬಾ ಆತ್ಮೀಯರಾಗಿದ್ದರು. ಹಡಪದ ಅಪ್ಪಣ್ಣ ಓರ್ವ ಜ್ಞಾನಿ. ಕ್ರಾಂತಿಕಾರಿ. ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಕೆಲಸ ಮಾಡಿದ್ದಾರೆ. ಅವರ ತತ್ವ ಮತ್ತು ವಿಚಾರಗಳನ್ನು ನಾವು ಅನುಸರಿಸಿ ಅವರ ದಾರಿಯಲ್ಲಿ ಸಾಗಬೇಕಿದೆ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ ಮಾತನಾಡಿ, ಅಪ್ಪಣ್ಣನವರು ಶರಣರಲ್ಲಿ ಅತ್ಯಂತ ಮಾದರಿಯಾಗಿ ಬದುಕಿ ಬಾಳಿದವರು. ತಮ್ಮ ಜೀವತ ಕಾಲದಲ್ಲಿ ಬಸವಣ್ಣನವರಿಗೆ ಅತ್ಯಂತ ಆತ್ಮೀಯರಾಗಿದ್ದು ಬಸವಣ್ಣನವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ತಮ್ಮ ಪ್ರಾಣ ತ್ಯಾಗ ಮಾಡಿದರು. ಅಂದು ಸಮಾಜದಲ್ಲಿದ್ದ ಮೂಢನಂಬಿಕೆಯನ್ನು ಹೋಗಲಾಡಿಸಲು ಬಸವಣ್ಣನವರು ಹಡಪದ ಅಪ್ಪಣ್ಣನವರನ್ನು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದರು.

ಕ್ಷೌರಿಕ ವೃತ್ತಿ ಒಂದು ಮಹಾವೃತ್ತಿಯಾಗಿದ್ದು ನಮ್ಮನ್ನೆಲ್ಲ ಸ್ವಚ್ಚಗೊಳಿಸುವ ಕಾಯಕವಾಗಿದೆ. ಅಪ್ಪಣ್ಣನವರ ಪತ್ನಿ ನಿಂಗಮ್ಮ ಸಹ ನಿಜಶರಣೆಯಾಗಿದ್ದರು. ಯಾವುದೇ ಶರಣರನ್ನು ಜಾತಿಗಳಿಗೆ ಸೀಮಿತಗೊಳಿಸಬಾರದು. ನಾವೆಲ್ಲ ಅಪ್ಪಣ್ಣನವರ ವಚನಗಳನ್ನು ಓದಿ, ಅದರ ಆಶಯದಂತೆ ಮುಂದೆ ಸಾಗಬೇಕು ಎಂದ ಅವರು ರಾಜ್ಯ ಸರ್ಕಾರ ಹಿಂದುಳಿದ, ಬಡ ವರ್ಗದ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿದ್ದು, ವಿಶ್ವಸಂಸ್ಥೆ ಸಹ ಈ ಯೋಜನೆಗಳನ್ನು ಶ್ಲಾಘಿಸಿದೆ. ಶಕ್ತಿ ಯೋಜನೆಯಡಿ ಈ ವರೆಗೆ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಎಲ್ಲರೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬೇಕೆಂದರು.

ಶಿವಶರಣ ಶ್ರೀ ಹಡಪದ ಅಪ್ಪಣ್ಣ ಸೇವಾ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಎಂ.ಮಲ್ಲೇಶಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಷಣ್ಮುಖಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಉಮೇಶ್ ಹೆಚ್, ಇತರೆ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

Sir. M. Vishveshvaraya ದೇಶ ಮತ್ತು ಸಮಾಜಕ್ಕೆ ವಿದ್ಯಾರ್ಥಿಗಳು ಉತ್ತಮ ಕೊಡುಗೆ ನೀಡಬೇಕು – ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧ್ಯಾ

0

Sir. M. Vishveshvaraya ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ನಮ್ಮ ದೇಶ, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಎಂದು ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಎಂ ಸಿಂಧ್ಯಾ ಅವರು ಕರೆ ನೀಡಿದರು.

ನಾಗರಬಾವಿಯ ವಿಟಿಯು-ವಿ.ಆರ್.ಐ.ಎಫ್- ಟಿ.ಸಿ.ಓ.ಇ ಹಬ್ ಅಂಡ್ ಸ್ಪೋಕ್ ಸೆಂಟರ್ ಆಫ್ ಎಕ್ಸೆಲೆನ್ಸ್‍ನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ವಿಶ್ವವಿದ್ಯಾಲಯದಲ್ಲಿ ವಿಪುಲವಾದ ಅವಕಾಶಗಳಿವೆ. ನವೀನ ತಾಂತ್ರಿಕತೆಯನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವುದರ ಮೂಲಕ ಸದುಪಯೋಗಪಡಿಸಿಕೊಂಡು ತಮ್ಮ ಕನಸನ್ನು ನನಸಾಗಿಕೊಳ್ಳಿ. ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರೊಂದಿಗೆ ನಮ್ಮ ದೇಶಕ್ಕೆ ಉತ್ತಮ ಕೊಡುಗೆ ನೀಡಿ. ನಿಮ್ಮ ಆಲೋಚನೆಗಳನ್ನು ವಿಸ್ತರಿಸಿಕೊಂಡು ಇಂದಿನ ಕಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ರೀತಿಯಲ್ಲಿ ನವೋದ್ಯಮ ಆರಂಭವಾಗಲಿ. ಇದು ಭಾರತದ ಅಭಿವೃದ್ಧಿಗೂ ಸಹಕಾರಿಯಾಗಿರಲಿ ಎಂದು ತಿಳಿಸಿದರು.

ಗುರು ಪೂರ್ಣಿಮಯ ದಿನ ಕಾರ್ಯಕ್ರಮದ ಉದ್ಘಾಟನೆ ಮಾಡಿರುವುದು ನನಗೆ ಸಂತಸವಾಗಿದೆ. ಗುರು ಪೂರ್ಣಿಮ ದಿನ ಮಹತ್ವದ ದಿನವಾಗಿದ್ದು ಶಿಷ್ಯರು ತಮ್ಮ ಗುರುಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಶುಭ ದಿನ. ಗುರುಗಳು ನಮ್ಮನ್ನು ಅಜ್ಞಾನದ ಕತ್ತಲೆಯಿಂದ ಹೊರತೆಗೆದು ಜ್ಞಾನದ ಬೆಳಕಿನ ಕಡೆಗೆ ಕರೆದೊಯ್ಯುತ್ತಾರೆ. ನನ್ನ ಜೀವನದಲ್ಲಿ 3 ಗುರು ಗುರುಗಳಿದ್ದಾರೆ. ಜೀವದಾತ, ಜ್ಞಾನದಾತ, ಅನ್ನದಾತ. ವೈದ್ಯರು ಜನನ ನೀಡುತ್ತಾರೆ. ಗುರುಗಳು ಜ್ಞಾನ ನೀಡುತ್ತಾರೆ. ರೈತರು ಅನ್ನವನ್ನು ನೀಡುತ್ತಾರೆ ಎಂದು ತಿಳಿಸಿದರು.

ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಮಾಡಿದ ಸಾಧನೆ ಎಂದೆಂದಿಗೂ ಚಿರಸ್ಮರಣೀಯ. ಅವರ ಸಾಧನೆ ಯಾವಾಗಲು ಶಾಶ್ವತವಾಗಿದೆ. ವಿಶ್ವೇಶ್ವರಯ್ಯನವರು ದೂರದೃಷ್ಟಿಯನ್ನಿಟ್ಟುಕೊಂಡು ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿದರು.

ಸರ್.ಎಂ. ವಿಶ್ವೇಶ್ವರಯ್ಯ ಅವರಿಗೂ ನಮ್ಮ ಮನೆತನಕ್ಕೂ ಸಂಬಂಧವಿದೆ. 1903ರಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಅವರು ಪುಣೆಯಲ್ಲಿನ ಖಡಕವಾಸಲ ಅಣಿಕಟ್ಟು ನಿರ್ಮಾಣಕ್ಕೆ ತಾಂತ್ರಿಕ ನೆರವು ನೀಡಿದರು. ಇದನ್ನು ನೋಡಿ ನಮ್ಮ ಮನೆತನದವರಾದ ಮಾಧವರಾವ್ ಸಿಂಧ್ಯ ಅವರು ಗ್ವಾಲಿಯರ್ ಅಣಿಕಟ್ಟು ನಿರ್ಮಾಣ ಮಾಡುವ ಸಂಬಂಧ ಅವರ ತಾಂತ್ರಿಕ ಸಲಹೆ ಮತ್ತು ನೆರವನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಮಾಡಿದ ಸಾಧನೆ ಎಂದೆಂದಿಗೂ ಚಿರಸ್ಮರಣೀಯ. ಅವರ ಸಾಧನೆ ಯಾವಾಗಲು ಶಾಶ್ವತವಾಗಿದೆ. ವಿಶ್ವೇಶ್ವರಯ್ಯನವರು ದೂರದೃಷ್ಟಿಯನ್ನಿಟ್ಟುಕೊಂಡು ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿದರು.

ಸರ್.ಎಂ. ವಿಶ್ವೇಶ್ವರಯ್ಯ ಅವರಿಗೂ ನಮ್ಮ ಮನೆತನಕ್ಕೂ ಸಂಬಂಧವಿದೆ. 1903ರಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಅವರು ಪುಣೆಯಲ್ಲಿನ ಖಡಕವಾಸಲ ಅಣಿಕಟ್ಟು ನಿರ್ಮಾಣಕ್ಕೆ ತಾಂತ್ರಿಕ ನೆರವು ನೀಡಿದರು. ಇದನ್ನು ನೋಡಿ ನಮ್ಮ ಮನೆತನದವರಾದ ಮಾಧವರಾವ್ ಸಿಂಧ್ಯ ಅವರು ಗ್ವಾಲಿಯರ್ ಅಣಿಕಟ್ಟು ನಿರ್ಮಾಣ ಮಾಡುವ ಸಂಬಂಧ ಅವರ ತಾಂತ್ರಿಕ ಸಲಹೆ ಮತ್ತು ನೆರವನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸರ್.ಎಂ. ವಿಶ್ವೇಶ್ವರಯ್ಯ ಅವರ ಸಾಧನೆಯನ್ನು ಮಾದರಿಯಾಗಿಸಿಕೊಂಡು ಉತ್ತಮ ಕೊಡುಗೆಯನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ದೇಶಕ್ಕೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Sir. M. Vishveshvaraya ವಿಟಿಯು ವ್ಯಾಪ್ತಿಯಲ್ಲಿರುವ 210ಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳಿದ್ದು, 20 ಸಾವಿರಕ್ಕೂ ಹೆಚ್ಚು ಪಿಎಚ್.ಡಿ ಪದವೀಧರರು, 4 ಲಕ್ಷಕ್ಕೂ ಹೆಚ್ಚಿನ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರನ್ನು ಹೊಂದಿದ್ದು ಮಿನಿ ಸಿಟಿಯಾಗಿ ಕಾಣುತ್ತದೆ. ಈ ವಿಶ್ವವಿದ್ಯಾಲಯದಲ್ಲಿ ಉದಯೋನ್ಮುಖ ಕ್ಷೇತ್ರಗಳಾದ 5ಜಿ, 6ಜಿ ಕಮ್ಯೂನಿಕೇಷನ್, ಕೃತಕ ಬುದ್ಧಿಮತ್ತೆ (ಎಐ), ಮಷಿನ್ ಲನಿರ್ಂಗ್ (ಎಂಎಲ್), ಆಗ್ಮೆಟೆಂಡ್ ಅಂಡ್ ವರ್ಚುವಲ್ ರಿಯಾಲಿಟಿ (ಎಆರ್. ವಿಆರ್), ಕ್ವಾಟಂ ಕಂಪ್ಯೂಟಿಂಗ್, ಹೆಲ್ತ್ ಕೇರ್ ಮತ್ತು ಇತರೆ ಪ್ರಮುಖ ತಂತ್ರಜ್ಞಾನದ ಕುರಿತು ಸಂಶೋಧನೆ ನಡೆಯುತ್ತಿರುವುದು ಸಂತಸದ ವಿಷಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇಂದಿನ ಸಿಲಿಕಾನ್ ಸಿಟಿಯಾದ ಬೆಂಗಳೂರು ಮುಂದಿನ ದಿನಗಳಲ್ಲಿ ಸಿಲಿಕಾನ್ ವ್ಯಾಲಿಗೆ ಮಾದರಿಯಾಗಲಿದೆ. ಬೆಂಗಳೂರಿನಲ್ಲಿ ಉದ್ಯಮ ಪ್ರಾರಂಭಿಸಲು ಅವಕಾಶಗಳು ಹೆಚ್ಚಾಗಿದ್ದು, ಉದ್ದಿಮೆಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ತಿಳಿಸಿದರು.

ಹನ್ನೊಂದು ವರ್ಷದ ಹಿಂದೆ ಮೊಬೈಲ್‍ನ್ನು ಆಮದು ಮಾಡಿಕೊಳ್ಳುತ್ತಿದ್ದೆವು. ಈಗ ರಫ್ತು ಮಾಡುತ್ತೇವೆ. ಸ್ವಂತ ಆತ್ಮನಿರ್ಭರ್ 4ಜಿ ಟೆಕ್ನಾಲಜಿಯಲ್ಲಿ ಜಗತ್ತಿನ 5ನೇ ಸ್ಥಾನವನ್ನು ನಮ್ಮ ದೇಶವು ಪಡೆದಿದೆ. ಭವಿಷ್ಯದಲ್ಲಿ 6 ಜಿ ಬರಲಿದೆ. ನಾವು ತಂತ್ರಜ್ಞಾನ ಕ್ಷೇತ್ರದ ಬೆಳೆವಣಿಗೆ ಜೊತೆಗೆ ಕೆಲಸ ಮಾಡುತ್ತಿದ್ದೇವೆ. ಇಂದು ಮಾಹಿತಿ ತಂತ್ರಜ್ಞಾನದ ಕ್ರಾಂತಿ ಆಗಬೇಕಿದೆ. 11 ವರ್ಷದ ಹಿಂದೆ 60 ಬಿಲಿಯನ್ ಇದ್ದ, ಬ್ರಾಡ್ ಬ್ಯಾಂಡ್ ಬಳಕೆದಾರರ ಸಂಖ್ಯೆ ಇಂದು 940 ಬಿಲಿಯನ್‍ಗೆ ತಲುಪಿದೆ ಎಂದರು.

ಡಿಜಿಟಲ್ ಸೌಲಭ್ಯಗಳು ಸುಲಭವಾಗಬೇಕು ಸಾರ್ವಜನಿಕರ ಜೀವನ ಶೈಲಿಯಲ್ಲಿ ಬದಲಾವಣೆ ತರಬೇಕು. ಭಾರತದ ಸಾಧನೆಯು ಸೇವಾವಲಯದಲ್ಲಿ ಉತ್ತಮವಾಗಿದೆ. ಉತ್ಪನ್ನಗಳ ಅಭಿವೃದ್ಧಿಯ ಕಡೆ ಗಮನಹರಿಸಬೇಕಾಗಿದೆ ಎಂದು ಹೇಳಿದರು.

ಸಂಶೋಧನೆ ಮತ್ತು ನವೋದ್ಯಮ, ಭವಿಷ್ಯದ ಪೀಳಿಗೆ ತಂತ್ರಜ್ಞಾನಕ್ಕೆ ಸಾಮಥ್ರ್ಯ ನಿರ್ಮಾಣ ಮಾಡಲಿದೆ : ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಕೌಶಲ್ಯಾಭಿವೃದ್ಧಿ ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಮಾತನಾಡಿ, ಈ ಕೇಂದ್ರವನ್ನು ವಿಟಿಯು 1 ಲಕ್ಷ ಚದರ ಅಡಿಯಲ್ಲಿರುವ ವಿಶಾಲವಾದ ಕೇಂದ್ರದಲ್ಲಿ ನಿರ್ಮಾಣ ಮಾಡಿದೆ. ಇದು
ಸಂಶೋಧನೆ ಮತ್ತು ನವೋದ್ಯಮ, ಭವಿಷ್ಯದ ಪೀಳಿಗೆ ತಂತ್ರಜ್ಞಾನಕ್ಕೆ ಸಾಮಥ್ರ್ಯ ನಿರ್ಮಾಣ ಮಾಡಲಿದೆ. ಈ ಸೆಂಟರ್ ಆಫ್ ಎಕ್ಸಾಲೆನ್ಸ್ (ಸಿಒಇ) ವಿಟಿಯು, ವಿಶ್ವೇಶ್ವರಯ್ಯ ಸಂಶೋಧನೆ ಮತ್ತು ನಾವೀನ್ಯತೆಯ ಫೌಂಡೇಶನ್ (ವಿಆರ್‍ಐಎಫ್), ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾ ನಡುವೆ ಒಂದು ಕಾರ್ಯತಂತ್ರದ ಪಾಲುದಾರಿಕೆಯಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಉದಯೋನ್ಮುಖ ಕ್ಷೇತ್ರಗಳಾದ 5ಜಿ, 6ಜಿ ಕಮ್ಯೂನಿಕೇಷನ್, ಕೃತಕ ಬುದ್ಧಿಮತ್ತೆ (ಎಐ), ಮಷಿನ್ ಲನಿರ್ಂಗ್ (ಎಂಎಲ್), ಆಗ್ಮೆಟೆಂಡ್ ಅಂಡ್ ವರ್ಚುವಲ್ ರಿಯಾಲಿಟಿ (ಎಆರ್.ವಿಆರ್), ಕ್ವಾಟಂ ಕಂಪ್ಯೂಟಿಂಗ್, ಹೆಲ್ತ್ ಕೇರ್ ಮತ್ತು ಇತರೆ ಪ್ರಮುಖ ತಂತ್ರಜ್ಞಾನದ ಕುರಿತು ಸಂಶೋಧನೆ ನಡೆಯಲಿದೆ. ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಇಂದೊಂದು ಉತ್ತಮವಾದ ಕೇಂದ್ರವಾಗಲಿದೆ ಎಂದರು.

ಹಬ್ ಅಂಡ್ ಸ್ಪೋಕ್ :
ರಾಷ್ಟ್ರೀಯ ನಾವೀನ್ಯತೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಈ ಕೇಂದ್ರವು ವಿಟಿಯುನ ವಿಸ್ತಾರವಾದ ಶೈಕ್ಷಣಿಕ ಜಾಲವನ್ನು ಬಳಕೆ ಮಾಡಿಕೊಳ್ಳಲಿದೆ. ವಿಶ್ವೇಶ್ವರಯ್ಯ ತಾಂತ್ರಿಕಾ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ 210ಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳಿದ್ದು, 20 ಸಾವಿರಕ್ಕೂ ಹೆಚ್ಚು ಪಿಎಚ್.ಡಿ ಪದವೀಧರರು, 4 ಲಕ್ಷಕ್ಕೂ ಹೆಚ್ಚಿನ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರು ಈ ಸಂಶೋಧನಾ ಮತ್ತು ನಾವೀನ್ಯತೆ ಕೇಂದ್ರದ ಸದ್ಭಳಕೆ ಮಾಡಿಕೊಳ್ಳಲಿದ್ದಾರೆ.

ಟಿಸಿಒಇ ತಂತ್ರಜ್ಞಾನ ಚಾಲಿತ ಉದ್ಯಮಶೀಲತೆ ಮತ್ತು ದೊಡ್ಡ ಪ್ರಮಾಣದ ಕೌಶಲ್ಯ ಅಭಿವೃದ್ಧಿಯನ್ನು ಸುಗಮಗೊಳಿಸಲು ದೃಢವಾದ ಇಂಟರ್‍ಫೇಸ್ ಆಗಿ ಜೊತೆಯಾಗಲಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದಿಂದ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ : ಕುಲಪತಿ ಡಾ. ಎಸ್. ವಿದ್ಯಾಶಂಕರ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್.ವಿದ್ಯಾಶಂಕರ್ ಅವರು ಮಾತನಾಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಕಲಿಕೆಗೆ ಉತ್ತಮವಾದ ವಾತಾವರಣವನ್ನು ಸೃಷ್ಟಿಸಿ ಕೊಟ್ಟಿದೆ. ಇದು ಹೊಸ ಸಂಶೋಧನಾ ಕೇಂದ್ರವಾಗಿದ್ದು, ಹಲವು ಕಂಪನಿಗಳು ಸ್ಟಾರ್ಟ್ ಆಪ್ ಆರಂಭಿಸಬಹುದು. ಇದಕ್ಕೆ ಬೇಕಾದ ಸೌಲಭ್ಯವನ್ನು ನಾವು ನೀಡುತ್ತೇವೆ ಎಂದು ತಿಳಿಸಿದರು.
ಈ ಪ್ರಾದೇಶಿಕ ಕಚೇರಿಯಲ್ಲಿ ನಾವೀನ್ಯತೆ ಕೇಂದ್ರದ ಹೈಲೈಟ್ಸ್, ಪ್ರಯೋಗಾಲಯದ ವ್ಯವಸ್ಥೆ, ವೀಡಿಯೋ ಕಾನ್ಫರೆನ್ಸ್‍ಗೆ ಪ್ರತ್ಯೇಕ ಕೊಠಡಿ, ಗೃಹಿಣಿಯರ ಅನುಕೂಲಕ್ಕಾಗಿ ಡೇ ಕೇರ್, ಅತ್ಯಾಧುನಿಕ ಕೆಫಿಟೇರಿಯಾ, ವಿಟಿಯು ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಅವಕಾಶ ಹಾಗೂ ಇಂಟರ್ನ್‍ಶಿಪ್‍ಗೂ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Sankara Eye Hospital ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಪಾಸಣೆ ಶಿಬಿರಗಳಿಂದ ಬಡಜನರಿಗೆ ಅನುಕೂಲವಾಗಿದೆ- ರೋ‌. ಅಶ್ವಥ್

0

Sankara Eye Hospital ಭಗವಂತನ ಕೃಪೆಯಿಂದ ಎಲ್ಲಾ ಪ್ರಾಣಿಗಳಿಗೆ ಕಣ್ಣನ್ನು ನೀಡಿರುವುದರಿಂದ ಜಗತ್ತನ್ನು ನೊಡುವ ಹಾಗೂ ದೇಹದಲ್ಲಿ ಅತ್ಯಂತ ಹೆಚ್ಚಿನ ಮಹತ್ವ ಹೊಂದಿದ ಅಂಗವಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯುಬಿಲಿ ಅಧ್ಯಕ್ಷರಾದ ರೊ.ಅಶ್ವಥ್ ಮತ್ತೂರಿನಲ್ಲಿ ಆಯೋಜಿಸಿದ್ದ ಕಣ್ಣಿನ ಪರೀಕ್ಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಂಕರ ಕಣ್ಣಿನ ಆಸ್ವತ್ರೆ ಸಹಯೋಗದಲ್ಲಿ ಈಗಾಗಲೆ ಇಪ್ಪತ್ತೆಂಟು ಶಿಬಿರಗಳನ್ನು ಏರ್ಪಡಿಸಿ, ಸಾವಿರಾರು ಗ್ರಾಮಾಂತರ ಪ್ರದೇಶದ ಬಡ ಕಾರ್ಮಿಕರಿಗೆ ಅನುಕೂಲವಾಗಿದೆ, ಇಲ್ಲಿನ ಸಿಬ್ಬಂದಿ ಅತ್ಯಂತ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಅವರ ಸಹಕಾರದಿಂದ ನಾವು ಉತ್ತೇಜಿತರಾಗಿ ಸೇವೆ ಸಲ್ಲಿಸಲು ಸಹಕಾರಿಯಾಗಿದೆ ಎಂದರು.
ಶಂಕರಕಣ್ಣಿನ ಆಸ್ವತ್ರೆ ರವೀಂದ್ರ ಮಾತನಾಡಿ, ದೇಶಾದ್ಯಂತ ಇರುವ ಆಸ್ವತ್ರೆಗಳಲ್ಲಿ ವರ್ಷಕ್ಕೆ ಇಪ್ಪತ್ತಮೂರು ಸಾವಿರಕ್ಕಿಂತ ಹೆಚ್ಚಿನ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಈ ರೀತಿ ಸೇವಾ ಮನೀಭಾವವಿರುವ ಸಂಸ್ಥೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಶಿಬಿರಗಳನ್ನು ಮಾಡುತ್ತಿರುವುದಾಗಿ ತಿಳಿಸಿದರು.
Sankara Eye Hospital ಡಾ.ಕುಮಾರಿ ವೈಷ್ಣ, ಮಾತನಾಡಿ ಈಗ ಕಣ್ಣಿನ ಪೊರೆ ಬಂದಿರುವವರನ್ನು ಗುರ್ತಿಸಿ ಆಯ್ಕೆ ಮಾಡಲಾಗಿದೆ. ಅವರನ್ನು ಆಸ್ವತ್ರೆಗೆ ಕರೆದು ಕೊಂಡು ಹೀಗಿ ಆರೋಗ್ಯ ಪರೀಕ್ಷೆ ಮಾಡಿ ಯಾವಿದೇ ತ್ತೊಂದರೆ ಇಲ್ಲದಿದ್ದಲ್ಲಿ, ನಾಳೆಯೆ ಶಸ್ತ್ರಚಿಕಿತ್ಸೆ ಮಾಡಿಸಿ, ನಾಡಿದ್ದು ನಮ್ಮ ವಾಹದಲ್ಲೇ ಕರೆದು ಕೊಂಡು ಬಂದು ಇಲ್ಲಿಗೆ ಬಿಡುತ್ತೇವೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಡಾಕ್ಟರ್ ರಘುಪ್ರಸಾದ್ ಮಾತನಾಡಿ ಅನಾರೋಗ್ಯ ಇರುವವರಿಗೆ ಚಿಕಿತ್ಸೆ ಮಾಡಿ ಅವರು ಗುಣಮುಖರಾದ ನಂತರ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಿ ಮತ್ತು ನಿಮಗೆ ಗೊತ್ತಿರುವವರಿಗೂ ತಿಳಿಸಿ ಎಂದರು.
ಕಾರ್ಯದರ್ಶಿ ರೊ.ರೇವಣಸಿದ್ದಪ್ಪ ಸ್ವಾಗತಿಸಿ, ರೊ.ಲಕ್ಷ್ಮೀನಾರಾಯಣ್ ವಂದಿಸಿದರು, ರೊ.ವಾಗೇಶ್ ನಿರೂಪಿಸಿದರು

Rotary Shimoga ರಸ್ತೆ ಅಪಘಾತಕ್ಕೆ ಸಂಚಾರಿ ನಿಯಮಗಳ ಪಾಲನೆ ಮಾಡದಿರುವುದೇ ಕಾರಣ-ಬಿ.ಎಂ.ಭಟ್

0

Rotary Shimoga ಪ್ರತಿ ನಿತ್ಯ ಸಾವಿರಾರು ಜನರು ಅಪಘಾತಗಳಿಂದ ಸಾವನ್ನಪ್ಪುತ್ತಿದ್ದು, ರಸ್ತೆ ಸಂಚಾರ ನಿಯಮಗಳ ಪಾಲನೆ ಮಾಡದಿರುವುದು ಸಹ ಒಂದು ಕಾರಣವಾಗಿದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ನಗರದ ಬಿಹೆಚ್ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅಳವಡಿಸಿದ ಜಾಗೃತಿ ನಾಮಫಲಕ ಉದ್ಘಾಟಿಸಿ ಮಾತನಾಡಿ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಹಾಗೂ ಹೆಲ್ಮೆಟ್ ಧರಿಸದೆ ಗಾಡಿ ಚಲಾಯಿಸುವುದು, ಯುವಕರು ವೀಲ್ಹಿಂಗ್ ಮಾಡುವುದು ಮತ್ತು ಓವರ್ ಸ್ಪೀಡ್‌ನಿಂದ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಈ ವರ್ಷ ರೋಟರಿಯು ರಸ್ತೆ ಸುರಕ್ಷತೆ ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ರಸ್ತೆ ಸಂಚಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿ ಅವರಿಂದ ಪ್ರಾತ್ಯಕ್ಷತೆ ಮಾಡಿಸಬೇಕು. ಅವರ ಮನಸ್ಸಿನಲ್ಲಿ ಇಂತಹ ಕಾರ್ಯಕ್ರಮಗಳು ಉಳಿಯುವುದರಿಂದ ಪೋಷಕರಿಗೆ ಅರಿವು ಮೂಡಿಸುತ್ತಾರೆ ಎಂದು ನುಡಿದರು.

ರೋಟರಿ ಶಿವಮೊಗ್ಗ ಪೂರ್ವದ ನೂತನ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಮಾತನಾಡಿ, ರೋಟರಿ ಜಿಲ್ಲಾ ಯೋಜನೆಗಳಲ್ಲಿ ಒಂದಾದ ರಸ್ತೆ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರ ಮುಖಾಂತರ ವರ್ಷದ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

Rotary Shimoga ಸಂಚಾರಿ ಠಾಣೆಯ ಇನ್ಸೆಪೆಕ್ಟರ್ ತಿರುಮಲೇಶ್ ಮಾತನಾಡಿ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಯುವಜನತೆ ಅರಿತುಕೊಳ್ಳಬೇಕು ಎಂದು ತಿಳಿಸಿದರು. ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಲಯ ಸೇನಾನಿ ಕಿರಣ್ ಕುಮಾರ್, ಅರುಣ್ ದೀಕ್ಷಿತ್, ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಮಾಜಿ ಅಧ್ಯಕ್ಷರಾದ ಎನ್.ಹೆಚ್.ಶ್ರೀಕಾಂತ್, ಓ.ಮಹೇಶ್, ಮಂಜುನಾಥ್, ಲಕ್ಷ್ಮಣ್, ಮಂಜುನಾಥ್ ರಾವ್ ಕದಂ, ಡಾ. ರವಿಕಿರಣ್ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Dr. H. C. Mahadevappa SCSP-TSP ಯೋಜನೆ – ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ : ಡಾ. ಹೆಚ್ ಸಿ ಮಹದೇವಪ್ಪ

0

Dr. H. C. Mahadevappa ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಬಹಳಷ್ಟು ದೂರದೃಷ್ಟಿ ಇಟ್ಟುಕೊಂಡು ಜಾರಿಗೊಳಿಸಲಾದ SCSP-TSP ಯೋಜನೆಯನ್ನು ಜಾರಿಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡದೇ ಕಾಯ್ದೆಯ ಆಶಯಗಳನ್ನು ಉಲ್ಲಂಘಿಸಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ತಿಳಿಸಿದರು.

ವಿಧಾನಸೌಧದ ಸಭಾಂಗಣ ಸಂಖ್ಯೆ 334 ರಲ್ಲಿ ಮಾನ್ಯ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ 2025-26 ನೇ ಸಾಲಿನ ಕ್ರೀಯಾ ಯೋಜನೆಯ ಸಭೆಯಲ್ಲಿ ಮಾನ್ಯ ಸಚಿವರು ಮಾತನಾಡಿದರು.

ಸರ್ಕಾರ ಬಂದು ಎರಡು ವರ್ಷ ಕಳೆದರೂ ಸಹ ಪರಿಶಿಷ್ಟರ ಬದುಕಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರವೇ ರೂಪಿಸಿರುವ SCSP-TSP ಕಾಯ್ದೆಯ ಆಶಯಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡದೇ ಇರುವುದು ನನ್ನಲ್ಲಿ ಬೇಸರ ಮೂಡಿಸಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳದೇ ಇದ್ದ ಪಕ್ಷದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲೂ ನಾನು ಹಿಂಜರಿಯುವುದಿಲ್ಲ ಎಂದು ಮಾನ್ಯ ಸಚಿವರು ತಿಳಿಸಿದರು.

ಸುಮಾರು 8 ಗಂಟೆಗಳಿಗೂ ಹೆಚ್ಚಿನ ಕಾಲ ಸರ್ಕಾರದ 34 ಇಲಾಖೆಗಳೊಂದಿಗೆ ಸುದೀರ್ಘ ಅವಧಿಯ ಸಭೆ ನಡೆಸಿದ ಸಚಿವರು, ಕೃಷಿ, ನೀರಾವರಿ, ವಸತಿ, ಕೈಗಾರಿಕೆ, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಂಧನ, ಸಾರಿಗೆ, ರೇಷ್ಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಉನ್ನತ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಗದಿಗೊಳಿಸಿರುವ ಅನುದಾನದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಎಷ್ಟರ ಮಟ್ಟಿಗೆ ಸಾಧ್ಯವಾಗಿದೆ ಎಂದು ತಿಳಿಸಲು ಮಾನ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಬಹು ಮುಖ್ಯವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಶಿಷ್ಟ ಸಮುದಾಯಗಳ ಅದರಲ್ಲೂ ಪರಿಶಿಷ್ಟ ಮಹಿಳೆಯರ ಬದುಕಲ್ಲಿ ಆಗಿರುವ ಗುಣಾತ್ಮಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಗಿರುವ ಬದಲಾವಣೆಯ ಕುರಿತಾಗಿ ನಿಖರವಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

Dr. H. C. Mahadevappa ಬಹುಮುಖ್ಯವಾಗಿ ಈ ನಾಡಿನಲ್ಲಿ ವಾಸಿಸುವ ಮಾಜಿ ದೇವದಾಸಿ ಮಹಿಳೆಯರ ಕುಟುಂಬದ ಶಿಕ್ಷಣ, ಆರೋಗ್ಯ ಮತ್ತು ಔದ್ಯೋಗಿಕ ಅವಕಾಶಗಳಿಗೆ ಸಂಬಂಧಿಸಿದಂತೆ ಅವರಿಗೆ ಕ್ರಮವಾಗಿ 54 ಲಕ್ಷ,16 ಲಕ್ಷ ರೂಪಾಯಿಗಳನ್ನು ನಿಗದಿ ಮಾಡುವ ಕುರಿತಂತೆ ಚರ್ಚೆ ನಡೆಸಲಾಯಿತು.

ಪರಿಶಿಷ್ಟ ಸಮುದಾಯದ ಮಕ್ಕಳು ಓದುತ್ತಿರುವಂತಹ ವಸತಿ ಶಾಲೆಗಳಲ್ಲಿ ಆಗುವ ವಿದ್ಯುತ್ ವೆಚ್ಚವನ್ನು ಇಂಧನ ಇಲಾಖೆಯಿಂದ ಭರಿಸುವ ಬಗ್ಗೆ ಮಾನ್ಯ ಸಚಿವರು ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸಿದರು.

ಬಹು ಮುಖ್ಯವಾಗಿ GKVK ಕೃಷಿ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ, ದೇಶದ ಉದ್ಧಾರಕ್ಕಾಗಿ ಕೃಷಿ, ನೀರಾವರಿಯ ಕುರಿತು ಬಾಬಾ ಸಾಹೇಬರು ಹೊಂದಿದ್ದ ನಿಲುವುಗಳನ್ನು ಹೆಚ್ಚು ಹೆಚ್ಚು ಪ್ರಚುರ ಪಡಿಸಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಪಂಗಡದ ಇಲಾಖೆಯ ಅಡಿಯಲ್ಲಿ ಹಾಡಿಗಳಲ್ಲಿ ವಾಸ ಮಾಡುವ ಜನರಿಗೆ ಭೂ ಮಂಜೂರಾತಿ ಮಾಡಲಾಗಿದ್ದು ಅವರಿಗೆ ಮನೆ ಸೌಲಭ್ಯವನ್ನು ಕಲ್ಪಿಸುವ ಕುರಿತಾಗಿ ಚಿಂತನೆ ನಡೆಸಲಾಯಿತು.

ಇನ್ನು ಕನ್ನಡ ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಅಂಬೇಡ್ಕರ್ ಅವರ ವಿಚಾರಗಳ ಕುರಿತಾಗಿ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಬೇಕು ಮತ್ತು ಅಧಿಕಾರಿಗಳೂ ಸಹ ದೇಶ ನಿರ್ಮಾಣದಲ್ಲಿ ಬಾಬಾ ಸಾಹೇಬರು ವಿವಿಧ ಕ್ಷೇತ್ರಗಳಲ್ಲಿ ಹೊಂದಿದ್ದ ಜ್ಞಾನದ ಬಗ್ಗೆ ಅಧ್ಯಯನ ಮಾಡಬೇಕೆಂದು ಸೂಚಿಸಿದರು

ಪರಿಶಿಷ್ಟ ಸಮುದಾಯದ ಏಳಿಗೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಸಹ ಪರಿಶಿಷ್ಟ ಸಮುದಾಯದ ಬದುಕಲ್ಲಿ ಅಂತಹ ಪ್ರತಿಫಲನ ಕಾಣಿಸದೇ ಇರುವುದು ನನ್ನಲ್ಲಿ ಬೇಸರ ಮೂಡಿಸಿದ್ದು ಈ ಬಗ್ಗೆ ಸರ್ಕಾರವು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಪರಿಶಿಷ್ಟರಿಗೆ ನೀಡುವ ಸೌಲಭ್ಯದ ಕುರಿತ ನಿಖರ ದತ್ತಾಂಶವನ್ನು ಸಂಗ್ರಹಿಸಿ, ಆ ದತ್ತಾಂಶದ ಪ್ರತಿಯ ಮೇಲೆ ತಮ್ಮ ಸಹಿ ಹಾಕಿ, ಅದನ್ನು ಧೃಢೀಕರಿಸಬೇಕು ಎಂದು ತಿಳಿಸಿದರು.

ಇನ್ನು ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶಿಷ್ಟರಿಗೆ ಮನೆಗಳನ್ನು ನಿರ್ಮಿಸಲು ತೊಡಗಿದ್ದು ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಪರಿಶಿಷ್ಟರ ವಸತಿ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ನೀಡಬೇಕೆಂದು ಮಾನ್ಯ ಸಚಿವರು ಸೂಚಿಸಿದರು.

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ 34 ಇಲಾಖೆಗಳು ಕೊಟ್ಟಿರುವ ಹಣವನ್ನು ಖರ್ಚು ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಯೋಜನೆಗಳನ್ನು ಜಾರಿ ಮಾಡಿದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಮಾನ್ಯ ಸಚಿವರು ತಿಳಿಸಿದರು.

ಇನ್ನು ದೀರ್ಘಕಾಲದ ಖಾಯಿಲೆಯಿಂದ ಬಳಲುತ್ತಿರುವ ಪರಿಶಿಷ್ಟ ಸಮುದಾಯದ ರೋಗಿಗಳಿಗೆ ವೈದ್ಯರ ಪತ್ರವನ್ನು ಆಧರಿಸಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕೆಂದು ಸಚಿವರು ಸೂಚಿಸಿದರು.

ಇನ್ನು ತೋಟಗಾರಿಕೆ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಅಡಿಯಲ್ಲಿ ಪರಿಶಿಷ್ಟ ಸಮುದಾಯದ ಜನರ ಬದುಕಿಗೆ ಅನುಕೂಲ ಆಗುವಂತಹ ಉತ್ಪಾದನಾ ಅವಕಾಶಗಳು ಮತ್ತು ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಮಾನ್ಯ ಸಚಿವರು ತಿಳಿಸಿದರು.

ಕಡೆಯಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ SCSP-TSP ಕಾಯ್ದೆಗೆ ಆಶಯಕ್ಕೆ ವಿರುದ್ಧವಾಗಿ ಹಣ ಖರ್ಚಾಗಿರುವ ಬಗ್ಗೆ ಚರ್ಚೆ ನಡೆಯಿತು ಮತ್ತು ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಮಾನ್ಯ ಸಚಿವರು ಸೂಚನೆ ನೀಡಿದರು.

ಈ ಮಹತ್ವದ ಸಭೆಯಲ್ಲಿ ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕೀಹೊಳಿ, ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಶ್ರೀ ವೆಂಕಟಯ್ಯ ಅವರು ಉಪಸ್ಥಿತರಿದ್ದರು.

Sri Shivaganga Yoga Center ಅಸಾಧ್ಯವಾದದನ್ನು ಸಾಧಿಸುವ ಶಕ್ತಿ ಗುರುವಿಗೆ ಮಾತ್ರ ಇದೆ : ಮುರುಘರಾಜೇಂದ್ರ ಸ್ವಾಮೀಜಿ

0

Sri Shivaganga Yoga Center ಜಗತ್ತಿನಲ್ಲಿ ಗುರುವಿನ ಸ್ಥಾನಮಾನ ತುಂಬಾ ದೊಡ್ಡದು. ಹೆತ್ತ ತಂದೆ ತಾಯಿ ಹಾಗೂ ಗುರುವಿನ ಋಣ ತೀರಿಸುವುದು ತುಂಬಾ ಕಷ್ಟ. ಅಸಾಧ್ಯವಾದದನ್ನು ಸಾಧಿಸುವ ಶಕ್ತಿ ಗುರುವಿಗೆ ಮಾತ್ರ ಇದೆ ಎಂದು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ನಗರದ ಕಲ್ಲಹಳ್ಳಿಯ ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಆಯೋಜಿಸಿದ್ದ ವ್ಯಾಸ ಪೂರ್ಣಿಮೆ, ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಗುರುಹಿರಿಯರನ್ನು ನಾವೆಲ್ಲರೂ ಗೌರವಿಸಬೇಕು. ಪ್ರತಿಯೊಂದು ಹಂತದಲ್ಲೂ ಕ್ಷೇತ್ರದಲ್ಲೂ ಗುರುವಿನ ಮಾರ್ಗದರ್ಶನ ಬೇಕೇ ಬೇಕು. ಶಿಕ್ಷಣದ ಜೊತೆಗೆ ಯಾವುದೇ ಸಂದರ್ಭದಲ್ಲಿ ಸಣ್ಣಪುಟ್ಟ ಸಹಾಯವನ್ನು ಮಾಡಿದವನು ಸಹ ಗುರುವಾಗುತ್ತಾನೆ ಎಂದು ತಿಳಿಸಿದರು.
ಮನೆಯ ಯಜಮಾನ ಕುಟುಂಬವನ್ನು ರಕ್ಷಿಸಿದರೆ ಒಬ್ಬ ಗುರು ಸಮಾಜವನ್ನು ರಕ್ಷಿಸುತ್ತಾನೆ. ಗುರುವಿಗೆ ಸಹಿಸಿಕೊಳ್ಳುವ ಶಕ್ತಿಯೊಂದಿಗೆ ಸಮಾಜವನ್ನು ತಿದ್ದುವ ಭಾರವಾದ ಶಕ್ತಿಯನ್ನು ಗುರು ಹೊಂದಿರುತ್ತಾನೆ ಎಂದರು.
ಶ್ರೀ ಶಿವಗಂಗಾ ಯೋಗ ಕೇಂದ್ರ ರಾಜ್ಯದಲ್ಲಿ ಮಾದರಿಯಾಗಿದೆ. ಬೆಳಗ್ಗೆ ಸಾವಿರಾರು ಜನ ಯೋಗ ಶಿಬಿರಾರ್ಥಿಗಳು ಬಂದು ಸೇರುವುದು ಸಣ್ಣ ಮಾತಲ್ಲ. ಈ ಸ್ಥಳಕ್ಕೆ ಅಂತ ದಿವ್ಯವಾದ ಶಕ್ತಿ ಇದೆ. ಪ್ರಾತಃಕಾಲದಲ್ಲಿ ಯೋಗವವರು ಸದಾ ಹಸನ್ಮುಖಿಗಳಾಗಿ ಇರುವ ಜತೆಯಲ್ಲಿ ದೀರ್ಘಾಯುಷ್ಯ ಹೊಂದಿರುವವರಾಗಿರುತ್ತಾರೆ ಎಂದು ನುಡಿದರು.
Sri Shivaganga Yoga Center ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಮಾತನಾಡಿ ಗುರುಪೂರ್ಣಿಮೆ ನಡೆದು ಬಂದ ದಾರಿ ಹಾಗೂ ಗುರುವಿನ ಮಹತ್ವ ಅದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಯೋಗ ಕೇಂದ್ರದ ಶಿಕ್ಷಕರಾದ ಡಾ. ಪದ್ಮನಾಭ ಅಡಿಗ ಮಾತನಾಡಿ, ಗುರು ಎಂದರೆ ದೊಡ್ಡ ಶಕ್ತಿ. ಗುರುವಿನ ಆಶೀರ್ವಾದ ಬೆನ್ನಿಗೆ ವಜ್ರ ಕವಚ. ಗುರುವಿನಿಂದ ಕಲಿತ ಪಾಠ ನಮಗೆ ದಾರಿ ದೀಪ ಎಂದು ತಿಳಿಸಿದರು.
ಶ್ರೀ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್.ರುದ್ರೇಗೌಡ ಎಲ್ಲರನ್ನೂ ಸನ್ಮಾನಿಸಿದರು. ಉರಗತಜ್ಞ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.
ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್, ಹೊಸತೋಟ ಸೂರ್ಯನಾರಾಯಣ, ಮೋಹನ್ ಬಾಳೇಕಾಯಿ, ಕಾಟನ್ ಜಗದೀಶ್, ಕೆ.ವಿ.ವಸಂತಕುಮಾರ್, ಹಾಲಪ್ಪ, ಕಲಗೋಡು ರತ್ನಾಕರ್, ಕಿರಣ್, ಎಂ.ಪಿ. ಆನಂದಮೂರ್ತಿ, ಜಿ.ಎಸ್. ಓಂಕಾರ್, ಜಿ.ವಿಜಯಕುಮಾರ್, ದೇವೇಂದ್ರ ಹಾಗೂ ಎಲ್ಲಾ ಟ್ರಸ್ಟಿಗಳು, ಪೋಷಕರು. ಶಿಕ್ಷಕರು. ಉಪಸ್ಥಿತರಿದ್ದರು.

Department of Youth Empowerment & Sports ಹೃದಯದ ಆರೋಗ್ಯಕ್ಕೆ ಯೋಗ ಶಿಬಿರ

0

Department of Youth Empowerment & Sports ಯುವಸಬಲೀಕರಣ & ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜುಲೈ 11 ರಿಂದ ಜುಲೈ 20 ರವರೆಗೆ 10 ದಿನಗಳ “ಹೃದಯ ಜೋಪಾನ” ಎಂಬ ” ಹೃದಯದ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ5•45 ರಿಂದ 7•15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ. ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು
Department of Youth Empowerment & Sports ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.