Wednesday, February 25, 2026
Wednesday, February 25, 2026
Home Blog Page 255

Department of Health ಹೃದಯಾಘಾತ ಸರಣಿ ಸಾವು, ತಾಂತ್ರಿಕ ಸಲಹಾ ಸಮಿತಿ ವರದಿ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

0

Department of Health ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ , ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.

Department of Health ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.

Daivajna Samaj Sangha ಜುಲೈ 10 ರಿಂದ ದಾವಣಗೆರೆಯಲ್ಲಿ ಕರ್ಕಿ ಕ್ಷೇತ್ರದ ದೈವಜ್ಞ ಬ್ರಾಹ್ಮಣ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಶ್ರೀಗಳ ಚಾತುರ್ಮಾಸ್ಯ ವ್ರತ

0

Daivajna Samaj Sangha ದಾವಣಗೆರೆಯ ಪಿಬಿ ರಸ್ತೆಯ ರೇಣುಕಾ ಬಡಾವಣೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ದೈವಜ್ಞ ಸಮಾಜ ಸಂಘ, ಚಾತುರ್ಮಾಸ್ಯ ವ್ರತೋತ್ಸವ ಸಮಿತಿಯಿಂದ ಜುಲೈ 10ರಿಂದ ಸೆಪ್ಟೆಂಬರ್ 7ರವರೆಗೆ ಚಾತುರ್ಮಾಸ್ಯ ವ್ರತ 2025 ಹಮ್ಮಿಕೊಳ್ಳಲಾಗಿದೆ.

ಹೊನ್ನಾವರದ ಶ್ರೀ ಕ್ಷೇತ್ರ ಕರ್ಕಿಯ ದೈವಜ್ಞ ಬ್ರಾಹ್ಮಣ ಮಠದ ಶ್ರೀ ಜ್ಞಾನೇಶ್ವರಿ ಪೀಠದ ದೇವಜ್ಞ ಬ್ರಾಹ್ಮಣ ಮಠಾಧೀಶ್ವರರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಹಮ್ಮಿಕೊಳ್ಳಲಾಗಿದೆ.

ಜುಲೈ 10ರಂದು ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರು ಚಾತುರ್ಮಾಸ್ಯ ವ್ರತವನ್ನು ದ್ವಿತೀಯ ಬಾರಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರು ಈ ಸಂವತ್ಸರದ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ದೇವನಗರಿ ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ವ್ಯಾಸಾದಿ ಗುರುಗಳ ಪೂಜೆಯೊಂದಿಗೆ ನೆರವೇರಿಸಲು ನಿಶ್ಚಯಿಸಿದ್ದಾರೆ.

Daivajna Samaj Sangha ಚಾತುರ್ಮಾಸ್ಯ ಮಹಾಪರ್ವದ ಶ್ರೀ ಗುರು ಪಾದುಕಾ ಪೂಜಾದಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿಶೇಷ ಉದ್ಯಾಪನೆ, ಹೋಮ ಹವನಗಳಲ್ಲಿ ಹಾಗೂ ಪೂಜೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ದೈವಜ್ಞ ಗುರುಪೀಠ ಸಮಿತಿ ಅಧ್ಯಕ್ಷ ಚಂದ್ರಹಾಸ ಪಿ.ರಾಯ್ಕರ್ ತಿಳಿಸಿದ್ದಾರೆ. ಮಾಹಿತಿಗೆ 9448154495 ಸಂಪರ್ಕಿಸಬಹುದಾಗಿದೆ.

Shivamogga Minority Welfare Department ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತರಬೇತಿಗೆ ಆನ್ ಲೈನ್ ಅರ್ಜಿ ಆಹ್ವಾನ

0

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವ2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್‌ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನಲ್ ವಸತಿಯುಕ್ತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‌ಸಿ ಗ್ರೂಪ್ ‘ಸಿ’ ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಯುನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ ಯುಪಿಎಸ್‌ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನಲ್, ಕೆಪಿಎಸ್‌ಸಿ ಗ್ರೂಪ್ ‘ಸಿ’ ತರಬೇತಿಗೆ 21 ರಿಂದ 35 ವರ್ಷಗಳು ಹಾಗೂ ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ತರಬೇತಿಗಳಿಗೆ 30 ವರ್ಷಗಳು ಮೀರಿರಬಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಮತ್ತು ಹಿಂದಿನ ಸಾಲಿನಲ್ಲಿ ಐಎಎಸ್ /ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ಆಸಕ್ತರು ಜಾಲತಾಣ https://sevasindhuservices.karnataka.gov.in ಲಿಂಕ್ ಮೂಲಕ ಆಗಸ್ಟ್ 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Shivamogga Minority Welfare Department ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ನ್ನು ಅಥವಾ ಜಿಲ್ಲಾ ಕಚೇರಿಯನ್ನು ಖುದ್ದಾಗಿ ಹಾಗೂ ದೂ.ಸಂ.: 08182-220206 ನ್ನು ಹಾಗೂ ಶಿವಮೊಗ್ಗ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರದ ದೂ.ಸಂ-7676888388, ಭದ್ರಾವತಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-9538853680, ತೀರ್ಥಹಳ್ಳಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-8861982835, ಸೊರಬ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9513815513, ಶಿಕಾರಿಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 7829136724, ಹೊಸನಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9008447029, ಸಾಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-7338222907 ಗೆ ಸಂಪರ್ಕಿಸುವುದು.

Maratha Community Development Corporation ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

0

Maratha Community Development Corporation ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಕ ಸಾಲ ಯೋಜನೆ ನವೀಕರಣ), ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ), ಮರಾಠ ಮಿಲ್ಟ್ರೀ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಮರಾಠ ಸಮುದಾಯದ ಜನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸಿರಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು.

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

2023-24 ಮತ್ತು 2024-25 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Maratha Community Development Corporation ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಜುಲೈ 4 ರಿಂದ ಜುಲೈ 10 ರವರೆಗೆ ವಿಸ್ತರಿಸಲಾಗಿದೆ.

(ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಹಾಗೂ ನಿಗಮದ ಸಹಾಯವಾಣಿ 08182-229634, ಮೊ.ನಂ. 8867537799 ದೂ.ಸಂ.080-29903994 ಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Rotary Club Shimoga ಸ್ವಚ್ಛತೆ ,ಕೇವಲ ಶೌಚಾಲಯ,ರಸ್ತೆಗೆ ಸೀಮಿತವಿಲ್ಲ. ನೈತಿಕತೆಯೂ ಬೇಕು-ವಿಶ್ವನಾಥ ನಾಯಕ್

0

Rotary Club Shimoga 2025–26ನೇ ಸಾಲಿನ ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸ್ ಸೈಡ್‌ನ ಅಧ್ಯಕ್ಷರಾಗಿ ಶ್ರೀಯುತ ವಿಶ್ವನಾಥ್ ನಾಯಕ್ ಅಧಿಕಾರ ಸ್ವೀಕರಿಸುತ್ತಿರುವ ಈ ಸಂದರ್ಭದಲ್ಲಿ, ಕ್ಲಬ್ ಆವರಣದ ಮುಂಭಾಗದಲ್ಲಿ ಒಂದು ಮಾದರಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯದಲ್ಲಿ ಅಧ್ಯಕ್ಷರೊಂದಿಗೆ ಪದಾಧಿಕಾರಿಗಳು, ಸದಸ್ಯರು, ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವ ಜನತೆ ಸಹ ಭಾಗವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮತ್ತು ಸಮಾಜ ಸೇವಕ ಶ್ರೀ ವಿಶ್ವಾಸ್ ರವರು ತಮ್ಮ ಶ್ರೇಷ್ಠ ಮಾರ್ಗದರ್ಶನದಲ್ಲಿ ಪೌರಕಾರ್ಮಿಕರನ್ನು ಪ್ರೇರೇಪಿಸಿ, ಈ ಸ್ವಚ್ಛತಾ ಕಾರ್ಯಕ್ಕೆ ಸಮರ್ಥ ನಾಯಕತ್ವವನ್ನು ನೀಡಿದರು.

ಪೌರಕಾರ್ಮಿಕರು ತಮ್ಮ ಶ್ರಮ ಹಾಗೂ ನಿಷ್ಠೆಯಿಂದ ಆವರಣವನ್ನು ಸ್ವಚ್ಛಗೊಳಿಸಿದ್ದು, ಒಂದು ನಿಜವಾದ ನ್ಯಾಯಕ ಮಾದರಿಯನ್ನು ಸಮುದಾಯಕ್ಕೆ ತೋರಿಸಿತು. ಅವರ ಪರಿಶ್ರಮ ಮತ್ತು ಸೇವೆಯನ್ನು ಗುರುತಿಸಿ, ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಅವರನ್ನೊಬ್ಬರೊಬ್ಬರಾಗಿ ಗೌರವಿಸಿ ಸನ್ಮಾನಿಸಿದರು.

ಶ್ರೀ ವಿಶ್ವಾಸ್ ರವರು ಕೇವಲ ರಾಜಕೀಯ ನಾಯಕನಾಗಿ ಮಾತ್ರವಲ್ಲದೆ, ರೋಟರಿ ಚಟುವಟಿಕೆಗಳಲ್ಲೂ ಸದಾ ಮುಂಚೂಣಿಯಲ್ಲಿರುವ ಸೇವಾಭಾವಿ ವ್ಯಕ್ತಿತ್ವದ ಮಾದರಿಯಾಗಿದ್ದಾರೆ. ಪೌರಭದ್ರತೆ, ಪರಿಸರದ ಸ್ವಚ್ಛತೆ ಮತ್ತು ಸಮಾಜದ ಸಜ್ಜನ ಬದ್ಧತೆಯ ಕುರಿತು ಅವರು ಹೊರಹೊಮ್ಮಿಸುತ್ತಿರುವ ತಾತ್ವಿಕ ದೃಷ್ಟಿಕೋಣ ಈ ಕಾರ್ಯಕ್ರಮದ ಮೂಲಕ ಮತ್ತಷ್ಟು ಸ್ಪಷ್ಟವಾಯಿತು.

“ಸ್ವಚ್ಛತೆ ಎನ್ನುವುದು ಕೇವಲ ಶೌಚಾಲಯ ಅಥವಾ ರಸ್ತೆ ಸ್ವಚ್ಛಗೊಳಿಸುವ ಕಾರ್ಯವಲ್ಲ; ಅದು ನಮ್ಮ ನೈತಿಕತೆಯ ಪ್ರತಿಫಲವೂ ಹೌದು. ಈ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರೂ ಸಮಾಜದ ಅರಿವುಳ್ಳ ನಾಗರಿಕರಾಗಿ ಬೆಳೆಯಬೇಕೆಂಬ ಸಂದೇಶ ನೀಡಲಾಗಿದೆ,” ಎಂಬ ಮಾತುಗಳ ಮೂಲಕ ಅಧ್ಯಕ್ಷ ವಿಶ್ವನಾಥ್ ನಾಯಕ್ ತಮ್ಮ ಭಾವನೆಗಳನ್ನು ಹಂಚಿಕೊಂಡರು.

Rotary Club Shimoga ಇದೇ ರೀತಿಯ ಸಮೂಹ ಸೇವಾ ಚಟುವಟಿಕೆಗಳ ಮೂಲಕ ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸ್ ಸೈಡ್ ಮುಂದಿನ ದಿನಗಳಲ್ಲಿ ನಗರ ಸ್ವಚ್ಛತೆ, ಶಿಕ್ಷಣ, ಆರೋಗ್ಯ ಮತ್ತು ಪರಿಸರ ರಕ್ಷಣೆಗಾಗಿ ಹೆಚ್ಚಿನ ಕೊಡುಗೆ ನೀಡಲಿರುವ ಬಗ್ಗೆ ವಿಶ್ವಾಸ ವ್ಯಕ್ತವಾಯಿತು.

Dr. P. Narayan ಡಾ.ಪಿ.ನಾರಾಯಣ್ ಅವರಿಗೆ ಗೌರವ ಅರ್ಪಣೆ

0

Dr. P. Narayan ರೋಟರಿ ಜಿಲ್ಲೆಯಲ್ಲಿ ಪೋಲಿಯೋ ನಾರಾಯಣ ಎಂದು ವಿಶೇಷವಾಗಿ ಗುರುತಿಸಿಕೊಂಡ ರೊಟೇರಿಯನ್ ಮಾಜಿ ಜಿಲ್ಲಾ ಗವರ್ನರ್ ಆದ ಡಾಕ್ಟರ ಪಿ ನಾರಾಯಣ್ ರವರಿಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜನ ವೈದ್ಯ ನಮನ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 31 82ರ ಪರವಾಗಿ ರೋಟರಿ ಜಿಲ್ಲಾ ಗವರ್ನರ್. ಕೆ ಪಾಲಾಕ್ಷ. ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿಧರ್. ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹಾಸನ್
Dr. P. Narayan ಮಾಜಿ ಜಿಲ್ಲಾ ರಾಜ್ಯಪಾಲರಾದ ಪ್ರೊಫೆಸರ್ ಎ ಎಸ್ ಚಂದ್ರಶೇಖರ್. ಡಿಎಸ್ ರವಿ. ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್. ಡಾಕ್ಟರ್ ಗುಡದಪ್ಪ ಕಸಬಿ. ನಿವೃತ್ತ ಡಿಪಿಐ ಚಂದ್ರಶೇಖರಯ್ಯ. ಎಂ ಪಿ ಆನಂದಮೂರ್ತಿ . ವಲಯ ಹತ್ತರ ಸಹಾಯಕ ಗೌರ್ನರ್ ಕೆಪಿ ಶೆಟ್ಟಿ. ಕಿಶೋರ್. ಧನಂಜಯ ರಾಂಪುರ ಭಾರತಿ ಚಂದ್ರಶೇಖರ್. ಶಂಕರ್ ಹಾಗೂ ರೋಟರಿ ಜಿಲ್ಲಾ ಪದಾಧಿಕಾರಿಗಳು ಅಧ್ಯಕ್ಷರುಗಳು ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು

Delhi Words School ಸಮಾಜದ ಮುಂದಿನ ಗುರುತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ- ರಘುವೀರ್

0

Delhi Words School ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಬೇಕು ಎಂದು ತುಂಗಾನಗರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಘುವೀರ್ ಹೇಳಿದರು.
ಅವರು ನಗರದ ಡೆಲ್ಲಿ ವರ್ಡ್ಸ್ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸಮಾಜದ ಮುಂದಿನ ಗುರುತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಸಹಾಯವಾಣಿ ಸಂಖ್ಯೆ-1098, ಕಾನೂನಿನಲ್ಲಿ ಮಕ್ಕಳಿಗೆ ಇರುವ ಹಕ್ಕುಗಳು, ಮಕ್ಕಳಿಗೆ ಶಿಕ್ಷಣದ ಮಹತ್ವ, ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.
ಹಿರಿಯ ಸೈನಿಕ ಅಧಿಕಾರಿ ಸುಬೇದಾರ್ ಪರಮಜಿತ್ ಸಿಂಗ್ ಮಾತನಾಡಿ, ಇಂದಿನ ಮಕ್ಕಳೇ ಮುಂದೆ ದೇಶವನ್ನು ಬಲಿಷ್ಠ ಗೊಳಿಸುವ ಮಹಾ ನಾಯಕರು ಎಂದರು.
Delhi Words School ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಅವರು ಮಾತನಾಡಿ, ಮಕ್ಕಳು ಚಿಕ್ಕವಯಸ್ಸಿನಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಮಾದರಿ ನಾಯಕರಾಗಿ ಬೆಳೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಶಿನಾಥ್, ಶಾಲೆಯ ಶಿಕ್ಷಕವೃಂದ, ಆಡಳಿತ ಮಂಡಳಿ, ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಆಫಶೀನ್ ನಿರೂಪಿಸಿ, ವಿದ್ಯಾರ್ಥಿ ಮಹಮ್ಮದ್ ಕೈಫ್ ಸ್ವಾಗತಿಸಿ, ವಿದ್ಯಾರ್ಥಿನಿ ಸಾಕ್ಷಿ ವಂದಿಸಿದರು.

Babu Jagjivan Ram ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 38 ನೇ ಪುಣ್ಯಸ್ಮರಣೆ

0

Babu Jagjivan Ram ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯ ಸ್ಮರಣೆ ಅಂಗವಾಗಿ, ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Babu Jagjivan Ram ಈ ಸಂದರ್ಭದಲ್ಲಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಡಾ. ಹೆಚ್.ಸಿ.ಮಹದೇವಪ್ಪ, ಬಿ.ಎಸ್.ಸುರೇಶ, ಮಾಜಿ ಸಚಿವ ಹೆಚ್.ಆಂಜನೇಯ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Eshwara Khandre ಬುಕ್ಕಾಪಟ್ಟಣ ವನ್ಯಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆ – ಸಚಿವ ಈಶ್ವರ ಖಂಡ್ರೆ

0

Eshwara Khandre ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ.

ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದಿದ್ದಾರೆ.

Eshwara Khandre ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅರಣ್ಯ ಸಚಿವ ಈಶ್ವರ‌ಖಂಡ್ರೆ ಹೇಳಿದರು.

Atma Yojana ಆತ್ಮ ಯೋಜನೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

0

Atma Yojana ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿದ್ದು, 1 ವರ್ಷದ ಅನುಭವ, ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು. ಅರ್ಜಿಯೊಂದಿಗೆ ಸ್ನಾತಕ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು.

Atma Yojana ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ನಿರ್ದೇಶಕರು, ಶಿವಮೊಗ್ಗ ಇವರ ಕಚೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ದಿನಾಂಕ: 21-07-2025 ರೊಳಗೆ ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ 577202 ಇಲ್ಲಿಗೆ ಸಲ್ಲಿಸಬಹುದೆಂದು ಕೃಷಿ ಜಂಟಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು(ಆತ್ಮ) ತಿಳಿಸಿದ್ದಾರೆ.