Wednesday, February 25, 2026
Wednesday, February 25, 2026
Home Blog Page 256

Kateel Ashok Pai Memorial College ವರ್ತನಾ ಸಮಸ್ಯೆಗಳನ್ನ ಬದಲಾಯಿಸದಿದ್ದರೆ ಮುಂದೆ ಮಾನಸಿಕ ಅಸ್ವಸ್ಥತೆ ಸಾಧ್ಯತೆ ಹೆಚ್ಚು- ಡಾ.ನಂದಕುಮಾರ್ ಪೂಜಂ

0

Kateel Ashok Pai Memorial College ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಮನಃಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಇದರ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕರಾಗಿರುವ ಡಾ.ನಂದಕುಮಾರ್ ಪೂಜಂ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇಂದು ಮನಃಶಾಸ್ತ್ರಜ್ಞರು ಎಲ್ಲ ಕ್ಷೇತ್ರಗಳಲ್ಲೂ ಅತಿ ಅಗತ್ಯವಾಗಿ ಬೇಕಾಗಿರುವ ತಜ್ಞರು, ಎಲ್ಲಾ ಶಾಲೆಗಳಲ್ಲೂ ಇಂದು ಮನಃಶಾಸ್ತ್ರಜ್ಞರು ಲಭ್ಯವಿರಲೇ ಬೇಕಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ ಅಸ್ವಸ್ಥತೆಗಳಿಗಿಂತಲೂ ವರ್ತನಾತ್ಮಕ ಸಮಸ್ಯೆಗಳನ್ನು ಹೊಂದಿರುವುದನ್ನು ಕಾಣುತ್ತೇವೆ. ಇಂಥ ಸಮಸ್ಯೆಗಳನ್ನು ಮನಃಶಾಸ್ತ್ರೀಯವಾಗಿ ಅರ್ಥೈಸಿಕೊಂಡು ಪರಿವರ್ತಿಸಬೇಕಾಗುತ್ತದೆ. ಅದಕ್ಕೆ ಮನಃಶಾಸ್ತ್ರಜ್ಞರು ಬಹಳ ಮುಖ್ಯವಾಗಿ ಸೂಕ್ತ ಮಾನಸಿಕ ಮಾಪಕಗಳನ್ನು ಬಳಸಿ ಸರಿಯಾದ ವರ್ತನಾತ್ಮಕ ಬದಲಾವಣೆಯ ತಂತ್ರಗಳನ್ನು ಬಳಸುತ್ತಾರೆ. ವಿದ್ಯಾರ್ಥಿಗಳು ಹಲವು ರೀತಿಯ ವರ್ತನಾ ಸಮಸ್ಯೆಗಳನ್ನು ತೋರ್ಪಡಿಸುತ್ತಾರೆ.ವಿನಾಕಾರಣ ಬೇರೆಯವರನ್ನು ಛೇಡಿಸುವುದು,ಸುಳ್ಳು ಹೇಳುವುದು, ಕಳ್ಳತನ ಮಾಡುವುದು,ಇದಿರು ಹೇಳುವುದು,ವಸ್ತುಗಳನ್ನು ಹಾಳುಮಾಡುವುದು,ಇದಿರು ನುಡಿಯುವುದು ,ಅನಗತ್ಯವಾಗಿ ಹಿಂಸಿಸುವುದು ಇತ್ಯಾದಿ ನಡವಳಿಕೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮಾತ್ರವಲ್ಲದೆ ಸಾಮಾಜಿಕ ಸ್ವಾಸ್ಥ್ಯಕ್ಕೂ ಮಾರಕ. ಇವುಗಳನ್ನು ಬದಲಾಯಿಸದಿದ್ದಲ್ಲಿ ಅವರು ಮುಂದೆ ಮಾನಸಿಕ ಅಸ್ವಸ್ಥೆಗಳಿಗೆ ಒಳಗಾಗುವ ಸಾಧ್ಯತೆಗಳೇ ಹೆಚ್ಚು.

ಆದುದರಿಂದ MSc Psychology ಮುಗಿಸುವ ವಿಧ್ಯಾರ್ಥಿಗಳು ಶಾಲೆಗಳಲ್ಲಿ ಉದ್ಯೋಗಗಳನ್ನು ಕಂಡುಕೊಳ್ಳಿರಿ ಎಂದು ಹೇಳಿದರು.ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಮನಃಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಅದೃಷ್ಟವಂತರು.

Kateel Ashok Pai Memorial College ಈ ಕಾಲೇಜ್ ವಿದ್ಯಾರ್ಥಿಗಳಿಗೆ ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಹಾಗೂ ತನ್ನದೇ ಮಾನಸ ಆಸ್ಪತ್ರೆಯ ಮೂಲಕ ಅತ್ಯುತ್ತಮ ತರಬೇತಿಯನ್ನು ನೀಡುತ್ತಿದೆ. ಇದರ ಕಾರಣದಿಂದ ಇಲ್ಲಿಯ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕೆಲಸ ಮಾಡುತ್ತಾರೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾನಸ ಟ್ರಸ್ಟ್ನ ನಿರ್ದೇಶಕರಾಗಿರುವ ಡಾ. ರಜನಿ ಪೈ ರವರು ಮಾತನಾಡುತ್ತಾ ಮನಃಶಾಸ್ತ್ರಜ್ಞರು ಬೇರೆಯವರ ಮಾನಸಿಕ ಆರೋಗ್ಯ ಮಾತ್ರವಲ್ಲ ತಮ್ಮ ಆ ರೋಗ್ಯವನ್ನೂ ಕಾಯ್ದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಹಿಂದಿನ ಕಾಲದಲ್ಲಿ ಒತ್ತಡದಿಂದ ಹೊರಗೆ ಬರುವುದು ಹೇಗೆ ಎಂದು ತಿಳಿಸಬೇಕಿತ್ತು..ಆದರೆ ಇಂದು ಒತ್ತಡದೊಂದಿಗೆ ಬದುಕುವ ಕೌಶಲ್ಯ ಬೇಕಿದೆ. ಅದನ್ನು ರೂಢಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಎಂ ಎಸ್ಸಿ ಸೈಕಾಲಜಿ ಈ ವರ್ಷ ಪೂರೈಸುತ್ತಿರುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ ಸಂಧ್ಯಾ ಕಾವೇರಿಯವರು ಕುವೆಂಪು ವಿಶ್ವವಿದ್ಯಾಲಯದ ಸಂಯೋಜನೆಯೊಂದಿಗೆ 2017ರಲ್ಲಿ ಮನಃಶಾಸ್ತ್ರ ಹಾಗೂ ಸಮಾಜಕಾರ್ಯದ ಪದವಿ ಶಿಕ್ಷಣದೊಂದಿಗೆ ಪ್ರಾಂಭಿಸಲಾದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಇಂದು ವಿವಿಧ ಪದವಿ ಶಿಕ್ಷಣಗಳಾದ BA,BSc,BSW,BCom ಹಾಗೂ BCA ಮತ್ತು MSc Psychology ಶಿಕ್ಷಣ ಲಭ್ಯವಿದೆ. ಈ ವರ್ಷದಿಂದ ಕುವೆಂಪು ವಿಶ್ವವಿದ್ಯಾಲಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಃಶಾಸ್ತ್ರದ ವಿಭಾಗವನ್ನು ಸಂಶೋಧನಾ ಕೇಂದ್ರವಾಗಿ ಅನುಮೋದನೆ ನೀಡಿರುವುದು ಗೌರವವನ್ನು ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ವಿದ್ಯಾರ್ಥಿಗಳಿಗೆ ವಿಭಾಗದ ಎಲ್ಲರಿಗೂ ಅಭಿನಂದಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ವಾರ್ಷಿಕ ವರದಿಯನ್ನು ಮನಃಶಾಸ್ತ್ರ ವಿಭಾಗದ ಉಪನ್ಯಾಸಕ ಮಂಜುನಾಥ್ ನಡೆಸಿದರು. ವಿಭಾಗದ ಮುಖಸ್ಥರಾದ ಡಾ. ಅರ್ಚನಾ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಉಪನ್ಯಾಸಕಿ ಶಿಲ್ಪಾ ಪ್ರಶಸ್ತಿ ವಿತರಣೆಯ ನಿರ್ವಹಣೆ ಮಾಡಿದರು.ಉಪನ್ಯಾಸಕಿ ಗೌರಿ ಶ್ರೀ ಎಲ್ಲರನ್ನು ವಂದಿಸಿದರು.ಪ್ರಥಮ ವರ್ಷದ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡಿದರು. ವಿದ್ಯಾರ್ಥಿಗಳಾದ ಆಲಿಯಾ ಹಾಗೂ ಕೀರ್ತನ ತಮ್ಮ ಅನುಭವಗಳನ್ನು ಹಂಚಿಕೊಂಡರು.

CM Siddaramaiah ನಾನು ದೇವಸ್ಥಾನಕ್ಕೆ ಹೋದಾಗ ಕುಂಕುಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ- ಸೀಎಂ ಸಿದ್ಧರಾಮಯ್ಯ

0

CM Siddaramaiah ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ.
ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ.

CM Siddaramaiah ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ಹೇಳಿದರು.

“ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದು ನುಡಿದರು.

S.N.Chennabasappa ಅವರಿಗೆ ತೊಂದರೆಯಾದರೆ ಈ ಭಾಗದಲ್ಲಿ ವಾಸಿಸಲು ಅರ್ಹರಲ್ಲ” ಶಾಸಕ ಚೆನ್ನಿ ಅವರ ಖಾರ ಪ್ರತಿಕ್ರಿಯೆ

0

S.N.Chennabasappa ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಘಟನೆಯ ಕುರಿತು ಸ್ಥಳೀಯರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪನವರಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ದ್ವಂಸಗೊಳಿಸಲಾದ ದೇವರ ವಿಗ್ರಹಗಳ ಎದುರು ಭಾಗದಲ್ಲಿರುವ ಅನ್ಯಕೋಮಿನ ಮನೆ ಅಕ್ರಮವಾಗಿ ನಿರ್ಮಿಸಿದ್ದು, ಆ ಮನೆಯ ನಿವಾಸಿಗಳು ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಈ ದೇವರ ವಿಗ್ರಹಗಳನ್ನು ನೋಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಅವರಿಗೆ ತೊಂದರೆಯಾದರೆ, ಅವರು ಈ ಭಾಗದಲ್ಲಿ ವಾಸಿಸಲು ಅರ್ಹರಲ್ಲ” ಎಂದು ಖಾರವಾಗಿ ನುಡಿದರು.

ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕ ಚನ್ನಬಸಪ್ಪನವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ದೂರವಾಣಿ ಕರೆ ಮಾಡಿ, ಅಕ್ರಮವಾಗಿ ನಿರ್ಮಿಸಲಾದ ಮನೆಯ ದಾಖಲಾತಿಗಳನ್ನು ಪರಿಶೀಲಿಸಿ, ಅದು ಅಕ್ರಮವಾಗಿದ್ದರೆ ತಕ್ಷಣವೇ ತೆರವುಗೊಳಿಸುವಂತೆ ಸೂಚನೆ ನೀಡಿದರು.

ಅಲ್ಲದೆ, ಬಂಗಾರಪ್ಪ ಬಡಾವಣೆಯಲ್ಲಿ ವಾಸಿಸುತ್ತಿರುವ ಹಿಂದೂ ಜನಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆಯೂ ಪೊಲೀಸ್ ಇಲಾಖೆಗೆ ತಿಳಿಸಿದರು.

S.N.Chennabasappa ಈ ಸಂದರ್ಭದಲ್ಲಿ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ದೀನದಯಾಳು, ಮಂಜುನಾಥ್ ಕೆ ನವಲೆ, ಮಾಧ್ಯಮ ಸಂಚಾಲಕ ಶ್ರೀನಾಗ, ಸ್ಥಳೀಯ ಪ್ರಮುಖರು, ಮತ್ತು ಬಂಗಾರಪ್ಪ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

ಈ ಘಟನೆ ಸ್ಥಳೀಯ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Shiralakoppa Police ಶಿರಾಳಕೊಪ್ಪದಿಂದ ವ್ಯಕ್ತಿ ನಾಪತ್ತೆ, ಸುಳಿವು ಸಿಕ್ಕರೆ ತಿಳಿಸಲು ಪೊಲೀಸ್ ಪ್ರಕಟಣೆ

0

Shiralakoppa Police ಅಬ್ದುಲ್ ಮುನಾಫ್, 56 ವರ್ಷ, ಮೀನಿನ ವ್ಯಾಪಾರಿ, 2 ನೇ ಕ್ರಾಸ್ ಪಂಪ್ ಹೌಸ್ ಕೇರಿ, ಶಿರಾಳಕೊಪ್ಪ, ಶಿಕಾರಿಪುರ ತಾಲ್ಲೂಕು, ಶಿವಮೊಗ್ಗ ಇವರು ಜೂನ್ 08 ರಂದು ಎಂದಿನಂತೆ ಶಿರಾಳಕೊಪ್ಪ ಮೀನು ಮಾರುಕಟ್ಟೆಗೆ ವ್ಯಾಪಾರಕ್ಕೆಂದು ಹೋದವರು ಮನೆಗೆ ಹಿಂದಿರುಗಿ ಬಂದಿರುವುದಿಲ್ಲ.

Shiralakoppa Police ಕಾಣೆಯಾದ ಅಬ್ದುಲ್ ಮುನಾಫ್ ಸುಮಾರು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಬಿಳಿ ಗಡ್ಡ ಮತ್ತು ತಲೆಯಲ್ಲಿ ಬಿಳಿಕೂದಲು ಇದ್ದು ಕಾಣೆಯಾದ ವೇಳೆ ಬಿಳಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ಹಿಂದಿ ಮತ್ತು ಉರ್ದು ಭಾಷೆಯನ್ನು ಮಾತನಾಡುತ್ತಾನೆ. ಯಾರಿಗಾದರೂ ಈ ವ್ಯಕ್ತಿಯ ಸುಳಿವು ಪತ್ತೆಯಾದಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ಸಂಖ್ಯೆ 8722983310, ಮೊ.ಸಂ: 9480803367 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

Asha Kirana project ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ”ಆಶಾಕಿರಣ ದೃಷ್ಟಿ ಕೇಂದ್ರ” ಗಳಿಗೆ ಚಾಲನೆ

0

Asha Kirana project ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರಗಳನ್ನು’ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ.

ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿ ನಿಂತಿವೆ ಎಂದು ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಇದೇ ತಿಂಗಳು 3 ರಂದು ಬುಧವಾರ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಏಕಕಾಲಕ್ಕೆ ಎಲ್ಲ ಕೇಂದ್ರಗಳಲ್ಲೂ ಆರೋಗ್ಯ ಸೇವೆ ಪ್ರಾರಂಭವಾಗಿದೆ.

ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು.‌

Asha Kirana project ಈ ಮೊದಲು 8 ಜಿಲ್ಲೆಗಳಲ್ಲಿ ಆಶಾಕಿರಣ ಯೋಜನೆ ಯಶಸ್ವಿಯಾಗಿದ್ದು, 1.40 ಕೋಟಿ ಜನರು ನೇತ್ರ ತಪಾಸಣೆಗೆ ಒಳಗಾಗಿದ್ದರು. 24.50 ಲಕ್ಷ ಜನರಿಗೆ ನೇತ್ರದ ತೊಂದರೆಗಳನ್ನ ಪತ್ತೆ ಹಚ್ಚಿ ಸೂಕ್ತ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಇವರಲ್ಲಿ 4.3 ಲಕ್ಷ ಜನರಿಗೆ ಉಚಿತ ಕನ್ಮಡಕ ವಿತರಿಸಲಾಗಿದ್ದು, 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.. ಇನ್ಮುಂದೆ ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲೂ ಹೆಚ್ಚು ಪರಿಣಾಮಕಾರಿಯಾಗಿ ಕಣ್ಣಿನ ಆರೋಗ್ಯ ಸೇವೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

Health and Family Welfare Officer ಸರ್ಕಾರಿ ಪಾಲನಾ ಸಂಸ್ಥೆಗಳಲ್ಲಿನ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಿ- ನ್ಯಾ.ದೀಪಾ

0

Health and Family Welfare Officer ಶಿವಮೊಗ್ಗ ನಗರದ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ಪಾಲನಾ ಸಂಸ್ಥೆಯ ಸುಪರ್ದಿಯಲ್ಲಿನ ನಿವಾಸಿಗಳ ಆರೋಗ್ಯ ಮತ್ತು ಸುರಕ್ಷತೆಗೆ ವಿಶೇಷ ಗಮನ ನೀಡುವಂತೆ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶರು ಹಾಗೂ 2ನೇ ಹೆಚ್ಚುವರಿ ಹಿರಿಯ ಸಿವಿಲ್‌ನ್ಯಾಯಾಧೀಶೆ ಶ್ರೀಮತಿ ದೀಪಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಮೆಗ್ಗಾನ್‌ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿದರು.
ಅವರು ರಾಜ್ಯ ಮಹಿಳಾ ನಿಲಯದ ಸಭಾಂಗಣದಲ್ಲಿ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಕ್ಕಳ ಪಾಲನಾ ಸಂಸ್ಥೆಗಳ ನಿವಾಸಿಗಳ ಕುರಿತು ಏರ್ಪಡಿಸಲಾಗಿದ್ದ ಸಂಬಂಧಿತ ವಿವಿಧ ಇಲಾಖಾ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳ ಪಾಲನಾ ಸಂಸ್ಥೆ ಮತ್ತು ಮಹಿಳಾ ನಿಲಯದಲ್ಲಿನ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಮಾನಸಿಕ ಮತ್ತು ಬೌದ್ಧಿಕ ವಿಕಾರಗಳಿಗೆ ಒಳಗಾಗಿರುವರ ಆರೋಗ್ಯ ಮತ್ತು ದೈಹಿಕ ತಪಾಸಣೆಗೆ ಕಾಲಕಾಲಕ್ಕೆ ಆರೋಗ್ಯ ಇಲಾಖೆಯಿಂದ ವೈದ್ಯರನ್ನು ನಿಯೋಜಿಸಬೇಕು. ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಅನುಕೂಲವಾಗುವಂತೆ ಮಹಿಳಾ ಸಿಬ್ಬಂಧಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ವಿವಿಧ ಪ್ರಕರಣಗಳಲ್ಲಿ ದೌರ್ಜನ್ಯಕ್ಕೊಳಗಾದ, ಅನಾಥ, ಒಪ್ಪಿಸಲ್ಪಟ್ಟ, ಬಿಕ್ಷೆ ಬೇಡುವ, ಚಿಂದಿ ಆಯುವ, ಬೀದಿಬದಿಯ ನಿರ್ಲಕ್ಷ್ಯಕ್ಕೆ ಒಳಗಾದ, ಸಂಘರ್ಷಕ್ಕೆ ಒಳಗಾದ, ಪಾಲನೆ ಮತ್ತು ಪೋಷಣೆಯ ಅಗತ್ಯವಿರುವ ಮಕ್ಕಳು, ಸರ್ಕಾರಿ ಪಾಲನಾ ಸಂಸ್ಥೆಗಳು ಮತ್ತು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲಿಸುವ ಮಕ್ಕಳಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು. ಇಂತಹ ತುರ್ತು ಸಂದರ್ಭಗಳಲ್ಲಿ ನಗರದ ಮೆಗ್ಗಾನ್‌ಆಸ್ಪತ್ರೆಗೆ ಬಾಧಿತರನ್ನು ಕರೆದುಕೊಂಡು ಹೋದಾಗ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ವಿಳಂಬವಾಗುತ್ತಿದೆ. ಅಲ್ಲದೇ ಮಾನಸಿಕ ವಿಕಾರಗಳಿಗೆ ಒಳಗಾಗಿರುವ ಪ್ರಕರಣಗಳಿದ್ದಾಗ ಮಾನವೀಯ ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಭಾವಿಸಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಕೂಡಲೇ ತಪಾಸಣೆ ನಡೆಸಿ, ಅಗತ್ಯ ಔಷಧ ನೀಡಿ ಕಳುಹಿಸಿಕೊಡಬೇಕು ಎಂದು ಸೂಚಿಸಿದ ಅವರು, ಮೆಗ್ಗಾನ್‌ಸ್ವಾಯತ್ತ ಸಂಸ್ಥೆಯಾಗಿರುವ ಕಾರಣ ಆರೋಗ್ಯ ತಪಾಸಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಈ ಶುಲ್ಕ ಪಾವತಿಸುವಲ್ಲಿ ಇಲ್ಲಿನ ನಿವಾಸಿಗಳಿಗೆ ವಿನಾಯಿತಿ ನೀಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ತುರ್ತು ಕ್ರಮ ಕೈಗೊಳ್ಳಬೇಕು. ಹಾಗೂ ಅಲ್ಲಿನ ಅಧೀನ ಅಧಿಕಾರಿ-ಸಿಬ್ಬಂಧಿಗಳಿಗೆ ಮಾರ್ಗದರ್ಶನ ನೀಡುವಂತೆ ಅವರು ಸಲಹೆ ನೀಡಿದರು.
ಕೆಲವು ಪ್ರಕರಣಗಳಲ್ಲಿ ದಾಖಲಾಗುವ ಅಪ್ರಾಪ್ತ ಮಕ್ಕಳು ಸರದಿ ಸಾಲಿನಲ್ಲಿರುವಾಗ ಸಂಸ್ಥೆಯ ರಕ್ಷಕರಿಂದ ತಪ್ಪಿಸಿಕೊಳ್ಳುವ ಸಂಭವನೀಯತೆಯೂ ಹೆಚ್ಚಾಗಿರುತ್ತದೆ. ಅಲ್ಲದೇ ಅಪ್ರಾಪ್ತ ಮಕ್ಕಳ ಗೌಪ್ಯತೆಯನ್ನು ಕಾಪಾಡುವಲ್ಲಿ ಬಾಲನ್ಯಾಯ ಕಾಯ್ದೆಯ ಉಲ್ಲಂಘನೆ ಆಗುತ್ತಿರುವುದನ್ನು ಮಂಡಳಿ ಗಂಭೀರವಾಗಿ ಪರಿಗಣಿಸಿದೆ ಎಂದ ಅವರು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ಥ ಮಕ್ಕಳ ಚಿಕಿತ್ಸೆಗಾಗಿ ಗೌಪ್ಯತೆಯ ದೃಷ್ಠಿಯಿಂದ ಪ್ರತ್ಯೇಕ ವ್ಯವಸ್ಥೆ ಒದಗಿಸಲು ಮುಂದಾಗುವಂತೆ ಸೂಚಿಸಿದರು.
Health and Family Welfare Officer ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಫೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದ ಅವರು, ಅವುಗಳ ನಿಯಂತ್ರಣದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ನಿಲಯವು ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಡಾ. ಕೆ.ಎಸ್.ಪವಿತ್ರಾ, ಶ್ರೀಮತಿ ರೇಖಾ ಜಿ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Transport Department ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ, ಇತ್ಯಾದಿ ಪತ್ರ ಇಲ್ಲವೆ ? ಸಾಗರ ಸಾರಿಗೆ ಕಾರ್ಯಾಲಯ ಪ್ರಕಟಣೆ ಗಮನಿಸಿ

0

Transport Department ರಸ್ತೆಯ ಮೇಲೆ ಚಾಲನಾ ಅನುಜ್ಞಾಪತ್ರ ಹಾಗೂ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ ಇಲ್ಲದೇ ಸಂಚರಿಸುತ್ತಿರುವುದನ್ನು ಸಾಗರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಗಮನಿಸಿದ್ದು, ವಾಹನ ಮಾಲೀಕರು/ಸವಾರರು ಈ ಎಲ್ಲಾ ದಾಖಲೆಗಳನ್ನು ಪಡೆದು/ ವಾಯಿದೆಯ 15 ದಿನಗಳ ಮುಂಚಿತವಾಗಿ ನವೀಕರಿಸುವಂತೆ ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರೇಶ್ ಡಿ.ಹೆಚ್. ತಿಳಿಸಿದ್ದಾರೆ. Transport Department ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವ್ಯಾಪ್ತಿಗೆ ಬರುವ ಎಲ್ಲಾ ಆಟೋರಿಕ್ಷಾ/ ಮೋಟಾರ್ ಕ್ಯಾಬ್/ಮ್ಯಾಕ್ಸಿ ಕ್ಯಾಬ್/ಹಾಗೂ ಇತರೆ ಸಾರಿಗೇತರ ವಾಹನಗಳಿಗೆ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ / ಚಾಲನಾ ಅನುಜ್ಞಾ ಪತ್ರಗಳನ್ನೊಳಗೊಂಡ ಸೂಕ್ತ ದಾಖಲೆಗಳನ್ನು ಮಾಡಿಸುವಂತೆ ಹಾಗೂ ನೋಂದಣಿ/ ಅರ್ಹತಾ ಪತ್ರಗಳ ಅವಧಿ ಮೀರಿದ ವಾಹನಗಳ ನಿಗಧಿತ ಶುಲ್ಕ ಹಾಗೂ ಅರ್ಜಿ ಸಲ್ಲಿಸಿ ವಾಹನ ತಪಾಸಿಸಲು ಕಚೇರಿಗೆ ಹಾಜರುಪಡಿಸುವಂತೆ ವಾಹನ ಮಾಲೀಕರಿಗೆ ತಿಳಿಸಲಾಗಿದೆ ತಪ್ಪಿದಲ್ಲಿ ಅಂತಹ ವಾಹನಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿರುತ್ತಾರೆ.

Sharada Pooryanayak ಜುಲೈ 7 ರಂದು ಆಯನೂರಿನಲ್ಲಿ ಶಾಸಕಿ ಶಾರದಾ ಪೂರ್ಯಾನಾಯಕ್ ಅವರ “ಜನಸ್ಪಂದನ” ಕಾರ್ಯಕ್ರಮ

0

Sharada Pooryanayak ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಾದ ಶ್ರೀಮತಿ ಶಾರದ ಪೂರ್ಯಾನಾಯಕ್ ರವರು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸ್ವೀಕರಿಸಲು ಜು. 07 ರಂದು ಆಯನೂರು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ರಾಜೀವ್ ವಿ.ಎಸ್. ತಿಳಿಸಿದ್ದಾರೆ.

Diksoochi Adventure ಮಡಿಕೇರಿಯ ತಡಿಯಂಡಮೊಳ್ ಬೆಟ್ಟಕ್ಕೆ ಜುಲೈ 11ರಿಂದ ಚಾರಣ, ಆಸಕ್ತರಿಗೆ ಆಹ್ವಾನ ಮಾಹಿತಿ

0

Diksoochi Adventure ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ್ಸ್‌ ವತಿಯಿಂದ ಜುಲೈ 11ರಿಂದ 13ರವರೆಗೆ ಮಡಿಕೇರಿಯ ಪ್ರಸಿದ್ಧ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಏರ್ಪಡಿಸಲಾಗಿದೆ.
ಶಿವಮೊಗ್ಗದಿಂದ ಜುಲೈ 11ರ ರಾತ್ರಿ 11.45ಕ್ಕೆ ಪ್ರವಾಸ ಆರಂಭಗೊಳ್ಳಲಿದೆ. ಎರಡನೇ ದಿನ ಜುಲೈ 12ರಂದು ಬೆಳಗ್ಗೆ ಮಡಿಕೇರಿ ತಲುಪುವುದು ನಂತರ ಟ್ರೆಕ್ ಬೇಸ್ ಆಗಿರುವ ನಾಲಕ್ನಾಡ್ ಪ್ಯಾಲೇಸ್ ತಲುಪಿದ ನಂತರ ತಡಿಯಂಡಮೋಳ್ ಬೆಟ್ಟದ ಚಾರಣ ಆರಂಭಗೊಳ್ಳಲಿದೆ. ಎತ್ತರದ ಸ್ಥಳಕ್ಕೆ ತಲುಪಿದ ಬಳಿಕ ಊಟದ ವ್ಯವಸ್ಥೆ ಇರಲಿದೆ.
Diksoochi Adventure ಮಧ್ಯಾಹ್ನದ ನಂತರ ಚೆಕ್‌ಪೋಸ್ಟ್ ಸ್ಥಳಕ್ಕೆ ಹಿಂದಿರುಗುವುದು. ವಾಸ್ತವ್ಯದ ಜಾಗ ತಲುಪಿದ ಬಳಿಕೆ ಕೂರ್ಗ್ ಶೈಲಿಯ ರಾತ್ರಿ ಊಟದ ವ್ಯವಸ್ಥೆ ಹಾಗೂ ಕ್ಯಾಂಪ್ ಫೈರ್ ಇರಲಿದೆ. ಜುಲೈ 13ರಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ಮಡಿಕೇರಿಯಲ್ಲಿನ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲಾಗುವುದು. ನಮ್ಡ್ರೋಲಿಂಗ್ ಮೋನಾಸ್ಟರಿಗೆ ಭೇಟಿ ನೀಡುವುದು. ನಂತರ ಶಿವಮೊಗ್ಗಕ್ಕೆ ರಾತ್ರಿ 10ರೊಳಗೆ ಹಿಂದಿರುಗುವುದು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗೆ 8277314779 ಸಂಪರ್ಕಿಸಬಹುದಾಗಿದೆ.

Department of Social Welfare ವಿದ್ಯಾರ್ಥಿ ವೇತನ ಪಡೆಯಲು ಒನ್ ಟೈಮ್ ಪಾಸ್ ವರ್ಡ್ ರಚನೆ ಕಡ್ಡಾಯ, ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ

0

Department of Social Welfare 2025-26 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) https://scholarships.karnataka.gov.in ರಲ್ಲಿ ಒನ್ ಟೈಮ್ ನೋಂದಣಿ (ಓಟಿಆರ್) ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.

Department of Social Welfare ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿಕಾರಿಪುರ, ದೂ.ಸಂ: 08187-295026 ನ್ನು ಸಂಪರ್ಕಿಸಬಹುದಾಗಿದೆ.