Shivamogga Police ದೊಡ್ಡಪೇಟೆ ಇನ್ಸೆಪಕ್ಟರ್ ನಾರಾಯಣ್ ಮಧುಗಿರಿ ಮತ್ತು ಟ್ರಾಫಿಕ್ ಇನ್ಸೆಪಕ್ಟರ್ ತಿರುಮಲೇಶ್ ಮತ್ತು ಸಿಬ್ಬಂಧಿಯವರ ಸಹಯೋಗದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಪೊಲೀಸ್ ಠಾಣೆಗಳ ಸುತ್ತಲೂ ವಿವಿಧ ಬಗೆಯ ಗಿಡಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಸುರೇಶ್ ಶೆಟ್ಟಿ ಮತ್ತು ಜಿಲ್ಲಾ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.
Department of Kannada and Culture ಕನ್ನಡ ಸಂಸ್ಕೃತಿಯ ಉಳಿವಿಗೆ ದುಡಿದವರು ಫ.ಗು.ಹಳಕಟ್ಟಿ- ಡಾ.ಶ್ರೀಮರುಳಸಿದ್ಧಶ್ರೀ
Department of Kannada and Culture ಕನ್ನಡ ಸಾಹಿತ್ಯ ಪರಂಪರೆಗೆ ದೊಡ್ಡ ಕೊಡುಗೆಯಾದ ವಚನಗಳನ್ನು ಸಂರಕ್ಷಿಸುವ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು.ಹಳಕಟ್ಟಿಯವರ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಶಿವಮೊಗ್ಗ ಬಸವಕೇಂದ್ರ ಹಾಗೂ ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠದ ಡಾ.ಶ್ರೀ ಬಸವ ಮರಳಸಿದ್ದ ಸ್ವಾಮಿಗಳು ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಡಾ.ಫ.ಗು.ಹಳಕಟ್ಟಿರವರ ಜನ್ಮದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ವಚನ ಸಂರಕ್ಷಣೆ ಮೂಲಕ ಕನ್ನಡದ ಅಸ್ಮಿತೆ ಕಾಪಾಡಿರುವ ಹಳಕಟ್ಟಿಯವರು ಅತ್ಯಂತ ಮೌಲಿಕವಾದ ಜೀವನ ನಡೆಸಿದ್ದಾರೆ. ಮಹಾಕಾವ್ಯಗಳು, ರಗಳೆ ಚಂಪೂ ಕಾವ್ಯ, ಇತರೆ ವಿವಿಧ ಪ್ರಾಕಾರದ ಕಾವ್ಯಗಳಿಗೆ ಸೀಮಿತವಾಗಿದ್ದ ಸಮಯದಲ್ಲಿ ಸಾಮಾನ್ಯ ಜನತೆಗೆ ಅರ್ಥವಾಗುವಂತೆ ರಚಿಸಲಾದ ವಚನಗಳು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹೊಸ ತಿರುವನ್ನು ನೀಡಿತು. ಇಂತಹ ವಚನ ಸಾಹಿತ್ಯವನ್ನು ಸಂರಕ್ಷಿಸುವ ಕೆಲಸವನ್ನು ಮಾಡುವಲ್ಲಿ ನಾಲ್ಕನೇ ಕಾಲಘಟ್ಟಕ್ಕೆ ಸೇರಿದ ಫ.ಗು.ಹಳಕಟ್ಟಿಯವರ ಪಾತ್ರ ಮತ್ತು ಸಾಧನೆ ಅಸಾಧಾರಣಾವಾಗಿದೆ.
Department of Kannada and Culture ವಚನ ಸಾಹಿತ್ಯ ಸಂಗ್ರಹ, ಸಂಪಾದನೆ ಮತ್ತು ಮುದ್ರಣಗೊಳಿಸುವುದೊಂದೇ ಅವರ ಜೀವನದ ಮುಖ್ಯ ಧ್ಯೇಯವಾಗಿತ್ತು. ಅವರಲ್ಲಿ ಆಸೆ, ಭಯ ಇರಲಿಲ್ಲ, ನಿರಪೇಕ್ಷ ಭಾವದ, ಭಾವಗಳಲ್ಲಿ ದಿಗಂಬರತ್ವ ಅಳವಡಿಸಿಕೊಂಡಿದ್ದ ಇವರು ಸತ್ಯದ ಅರಿವು ಮೂಡಿಸಿಕೊಂಡು ಜ್ಞಾನದ ಪರಮಾನಂದದಲ್ಲಿ ಇದ್ದರು. ನಿಸ್ವಾರ್ಥ ಸೇವೆಗೆ ಇನ್ನೊಂದು ಹೆಸರೇ ಫ.ಗು.ಹಳಕಟ್ಟಿಯಾಗಿದ್ದು ಸರಳವಾದ ವ್ಯಕ್ತಿತ್ವ ಹೊಂದಿದ್ದರು. ಕಠಿಣಾತಿಕಠಿಣ ಸಂದರ್ಭ ಬಂದರೂ ಸ್ವಾರ್ಥಿಗಳಾಗಲಿಲ್ಲ. ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳದೇ ಸ್ಥಿತಪ್ರಜ್ಞರಾಗಿದ್ದರು. ಮಗನ ಸಾವಿನ ಸಂದರ್ಭದಲ್ಲೂ ‘ಶಿವ ಕೊಟ್ಟು ತೆಗೆದುಕೊಂಡ’ ಎಂಬ ಭಾವದಲ್ಲಿ ತಮ್ಮ ನೋವು ನುಂಗಿ ವಚನ ಸಂರಕ್ಷಣಾ ಕಾರ್ಯವನ್ನು ಮುಂದುವರೆಸಿದರು. ಸಂತನಿಗೂ ನೀಡದ ಗೌರವವನ್ನು ಜನ ಸಮೂಹ ಅವರು ನೀಡುತ್ತಿತ್ತು ಎಂದು ನೆನೆದರು.
ವಚನ ಸಾಹಿತ್ಯ ಸಂಗ್ರಹ ಕಾರ್ಯ ಸುಲಭದ್ದಾಗಿರಲಿಲ್ಲ. ತಾಳೆಗರಿಯಲ್ಲಿನ ವಚನಗಳನ್ನು ಮನೆ ಮನೆಗಳಿಗೆ ತೆರಳಿ ಸಂಗ್ರಹಿಸುತ್ತಿದ್ದರು. ಕಾಲಾನುಕ್ರಮದಲ್ಲಿ ಜನರು ಇವನ್ನು ದೇವರ ಕೋಣೆಯಲ್ಲಿರಿಸಿ ಪೂಜೆ ಮಾಡಲು ಶುರು ಮಾಡಿದ್ದರು. ಮೌಢ್ಯತೆಯೆಡೆಗೆ ತಿರುಗಿ ಜ್ಞಾನಭಂಡಾರ ವಿನಾಶದ ಕಡೆ ಹೋಗುವ ಸಂದರ್ಭದಲ್ಲಿ ಚದುರಿ ಹೋಗಿದ್ದ ವಚನಗಳನ್ನು ರಕ್ಷಣೆ ಮಾಡಲು ಜೀವನವನ್ನೇ ಮುಡಿಪಾಗಿಟ್ಟರು.
ಹಿಂದೆ ಪ್ರಿಂಟಿAಗ್ ಪ್ರೆಸ್ ವ್ಯವಸ್ಥೆ ತೀರಾ ವಿರಳವಾಗಿದ್ದು, ಮಂಗಳೂರಿನಲ್ಲಿದ್ದ ಬಾಸೆಲ್ ಮಿಷನ್ನವರು ವಚನಗಳನ್ನು ಮುದ್ರಿಸದೇ ಇದ್ದಾಗ ತಮ್ಮ ಮನೆಯನ್ನು ಮಾರಾಟ ಮಾಡಿ ‘ಹಿತ ಚಿಂತಕ’ ಮುದ್ರಣಾಲಯ ಸ್ಥಾಪಿಸಿ ಸಂಪುಟಗಳನ್ನು ಮುದ್ರಿಸುತ್ತಾರೆ.
ಸಂಗ್ರಹ, ಮುದ್ರಣಕ್ಕೂ ಮುನ್ನ ಕೇವಲ 50 ರಿಂದ 60 ವಚನಗಳು ಮಾತ್ರ ಲಭ್ಯವಿದ್ದು, ವಚನ ಸಂಗ್ರಹ ಸಾರ ಸಂಪುಟಗಳಲ್ಲಿ 22 ಸಾವಿರಕ್ಕೂ ಹೆಚ್ಚು ವಚನಗಳನ್ನು ಮುದ್ರಿಸಿದರು. ಹಿಂದೆ ಹಲವಾರು ವಿರಕ್ತರು ಮಾಡಿದ ಕೆಲಸವನ್ನು ಇವರೊಬ್ಬರೇ ಮಾಡುತ್ತಾರೆ. ಸಮುದ್ರಕ್ಕಿರುವ ಶಕ್ತಿ ಅವರೊಬ್ಬರಲ್ಲಿತ್ತು.
ಶಿವಾನುಭವ ಪತ್ರಿಕೆ ಆರಂಭಿಸುತ್ತಾರೆ. ಈ ಪತ್ರಿಕೆ ಬಹಳ ದೊಡ್ಡ ವಿದ್ವಾಂಸರಿಗೆ ಸಂಶೋಧನೆಗೆ ವೇದಿಕೆ ಕಲ್ಪಿಸಿಕೊಟ್ಟಿತು. ಕನ್ನಡಿಗರನ್ನು ಸಂಘಟಿಸಲು, ಕರ್ನಾಟಕ ಏಕೀಕರಣಕ್ಕಾಗಿ ನವ ಕರ್ನಾಟಕ ವಾರಪತ್ರಿಕೆ ಶುರು ಮಾಡುತ್ತಾರೆ. ನಾಡು ಕಟ್ಟುವ ಮತ್ತು ಕನ್ನಡ ಭಾಷಾ ಸಂಸ್ಕೃತಿ ಉಳಿಸುವ ಎರಡೂ ಕೆಲಸಗಳನ್ನು ಮಾಡುತ್ತಾರೆ.
ಪ್ರತಿಭಾವಂತ ವಕೀಲರಾಗಿದ್ದ ಹಳಕಟ್ಟಿಯವರು ದೂರದೃಷ್ಟಿವುಳ್ಳವರಾಗಿದ್ದರು. ಸಮಾಜದ ಸಮಗ್ರ ಅಭಿವೃದ್ದಿಗಾಗಿ ಸಹಕಾರ, ನೇಕಾರಿಕೆ, ಹೀಗೆ ಅನೇಕ ಸಂಘ ಸಂಸ್ಥೆಗಳನ್ನು ಕಟ್ಟುತ್ತಾರೆ. ಬಿಜಾಪುರ ನಗರ ಸಭೆ ಅಧ್ಯಕ್ಷರಾಗಿ ಕುಡಿಯುವ ನೀರಿಗೆ ವ್ಯವಸ್ಥೆ ಮಾಡುತ್ತಾರೆ. ಮರಾಠಿ, ಉರ್ದುಮಯವಾದ ಭಾಗದಲ್ಲಿ ಕನ್ನಡ ಶಾಲೆಗಳನ್ನು ತೆರೆಯುತ್ತಾರೆ. ಹತ್ತು ಹಲವು ಸಹಕಾರ ಸಂಘಗಳ ಸ್ಥಾಪನೆ ಮಾಡಿದರು. ಅವರ ಸೇವೆಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸುತ್ತದೆ. ರಾವ್ ಬಹದ್ದೂರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಲ್ಲುತ್ತವೆ. ಬಿಎಲ್ಡಿಇಎ ಸಂಸ್ಥೆ ಇವರ ಅಧ್ಯಯನ ಪೀಠ, ಸಂಗ್ರಹಾಲಯ, ಮತ್ತು ಇವರ ಸಮಗ್ರ ಸಾಹಿತ್ಯ ಪ್ರಕಟಿಸಿದೆ.
ಈ ಹಿಂದೆ ಸರ್ಕಾರ 22 ಸಾವಿರ ವಚನಗಳನ್ನು 15 ಸಂಪುಟಗಳಲ್ಲಿ ಮುದ್ರಿಸಿತ್ತು. ನಂತರ ಕೇವಲ 2 ಸಂಪುಟಗಳಲ್ಲಿ ಮುದ್ರಿಸಿ ಕಡಿಮೆ ಬೆಲೆಯಲ್ಲಿ ನೀಡಿದೆ. ಅಪರೂಪದ ಸಾಹಿತ್ಯವಾದ ವಚನಗಳನ್ನು ನಾವೆಲ್ಲ ಓದಿ, ಅಳವಡಿಸಿಕೊಂಡು ಉಳಿಸಿಕೊಂಡು ಹೋಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್. ರವಿಕುಮಾರ್ ಮಾತನಾಡಿ, ಡಾ.ಫ.ಗು.ಹಳಕಟ್ಟಿರವರು ಕಷ್ಟಪಟ್ಟು ವಚನಗಳನ್ನು ಸಂಗ್ರಹಿಸಿದ್ದರಿAದ ಇಷ್ಟೊಂದು ವಚನಗಳು ನಮಗೆ ಓದಲು, ಅಧ್ಯಯನ ಮಾಡಲು ಲಭ್ಯವಿದೆ. ಇಂತಹ ಮಹಾನ್ ಸಾಧನೆ ಮಾಡಿದ ಮಹನೀಯರ ಜನ್ಮ ದಿನಾಚರಣೆಯನ್ನು ನಾವೆಲ್ಲ ಅರ್ಥಪೂರ್ಣವಾಗಿ ಆಚರಿಸಿ ಅವರ ಹಾದಿಯಲ್ಲಿ ನಡೆಯೋಣವೆಂದು ಕರೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಮಾತನಾಡಿ, ವಚನ ಸಾಹಿತ್ಯದ ಸಂರಕ್ಷಣೆ ಅತ್ಯಂತ ಮಹತ್ವವಾದ ಕೆಲಸ. ಫ.ಗು.ಹಳಕಟ್ಟಿಯವರ ವಚನ ಸಾಹಿತ್ಯ ಸಂರಕ್ಷಣಾ ಕಾರ್ಯ ಸೇರಿದಂತೆ ಅವರ ಹಲವಾರು ಜನಪರ ಕೆಲಸಗಳು, ಸಾಧನೆಗಳು ಅತ್ಯಂತ ಅಮೂಲ್ಯವಾಗಿದ್ದು ಮಾದರಿಯಾಗಿದೆ. ಸಾಮಾನ್ಯ ವ್ಯಕ್ತಿಯಾದ ಹಳಕಟ್ಟಿಯವರು ಎಲ್ಲ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಸಾಮಾನ್ಯ ಸಾಧನೆ ಮಾಡಿದ್ದು ಅವರು ಕಟ್ಟಿದ ಸಂಘ ಸಂಸ್ಥೆಗಳು ಇಂದಿಗೂ ಜೀವಂತವಾಗಿವೆ ಎಂದರು.
ಹೊಸನಗರ ತಾಲ್ಲೂಕಿನ ಮೂಲಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್. ಉಮೇಶ್, ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಜರಿದ್ದರು.
CM Siddaramaiah ರೈಲ್ವೆ ಇಲಾಖೆ ಕಾರ್ಯ ನಿರ್ವಹಣೆ: ಶ್ವೇತಪತ್ರ ಹೊರಡಿಸಿ- ಮುಖ್ಯಮಂತ್ರಿ ಸಿದ್ಧರಾಮಯ್ಯ
CM Siddaramaiah ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದಿದ್ದಾರೆ.
ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ಕರ್ನಾಟಕ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ.
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಬೀದಿಗಿಳಿದಿದ್ದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುವ ದರ ನಿರ್ಣಯ ಸಮಿತಿಯೇ ಆ ಏರಿಕೆಯ ನಿರ್ಧಾರ ಕೈಗೊಂಡಿರುವುದನ್ನು ಬಚ್ಚಿಟ್ಟು ನಮ್ಮ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ವಿಫಲ ಪ್ರಯತ್ನ ನಡೆಸಿದ್ದರು.
ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ.
CM Siddaramaiah ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
Almatti Dam ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ಕೃಷಿ ಭೂಮಿಗೆ ನೀರು ಬಿಡುಗಡೆ- ಸಚಿವ ಆರ್.ಬಿ.ತಿಮ್ಮಾಪುರ
Almatti Dam ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್. ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.
ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.
Almatti Dam ಜುಲೈ 8 ರಿಂದ ಮುಂದಿನ 120 ದಿನಗಳಿಗೆ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.
Shivamogga City Corporation ರೈಲ್ವೆ ಪ್ರಯಾಣದರ ಏರಿಕೆ ತಕ್ಷಣ ಹಿಂಪಡೆಯಿರಿ- ರೇಖಾ ರಂಗನಾಥ್ ಆಗ್ರಹ
Shivamogga City Corporation ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. Shivamogga City Corporation ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯ ನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ತತ್ತಕ್ಷಣದಲ್ಲಿ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದಲ್ಲಿ ಜನಸಾಮಾನ್ಯರು ರಸ್ತೆಗೆಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
District Industrial Centre ಕೌಶಲ್ಯ ಕಲಿತ ಮಹಿಳೆಯರು ಬ್ಯಾಂಕ್ ಗಳ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ- ಸುರೇಶ್
District Industrial Centre ಕೌಶಲ್ಯ ಆಯ್ಕೆ ಮಾಡಿಕೊಂಡು ಕಲಿತು ಸದ್ವಿನಿಯೋಗ ಮಾಡಿಕೊಳ್ಳಿ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ಶ್ರೀ ಸುರೇಶ್ ನುಡಿದರು. ಅವರು ಶಿವಮೊಗ್ಗ ಜಿಲ್ಲೆಯ ಮತ್ತೋಡು ಗ್ರಾಮದಲ್ಲಿ ಸ್ವೇದ ಮಹಿಳಾ ಉದ್ಯಮಿಗಳ ಸಂಘ ಆಯೋಜಿಸಿದ್ದ ಗ್ರಾಮೀಣ ಆರ್ಥಿಕ ಹಾಗೂ ಕೌಶಲ್ಯ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೌಶಲ್ಯ ಕಲಿತು ಬ್ಯಾಂಕ್ ಗಳಲ್ಲಿ ಮಹಿಳೆಯರಿಗಾಗಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಉತ್ಪಾದನೆ ಮಾಡಲು ಅವರು ಕರೆ ನೀಡಿದರು.ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಕಾರ ಪಡೆದುಕೊಳ್ಳಬೇಕೆಂದು ನುಡಿದರು.
ಜಿಲ್ಲಾ ಕೌಶಲ್ಯಾಧಿಕಾರಿ ಶ್ರೀ ಹೆಚ್. ಎಂ ಸುರೇಶ್ ಮಾತ್ಕ್ನಾಡಿ ವಿವಿಧ ಎಡೆಗಳಲ್ಲಿ ದೊರೆಯುವ ಕೌಶಲ್ಯ ತರಬೇತಿಗಳನ್ನು ವಿವರಿಸಿದರು. ಕೌಶಲ್ಯ ಕಲಿತು ಉದ್ಯಮಿಗಳಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ನುಡಿದರು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದ ವ್ಯವಸ್ಥಾಪಕಿ ಶ್ರೀಮತಿ ಶಾಲಿನಿ ಮಾತನಾಡಿ ಇಂದು ಮಹಿಳೆಯರಿಗಾಗಿ ಬ್ಯಾಂಕ್ ಗಳಲ್ಲಿ ಹಲವಾರು ಯೋಜನೆಗಳು ಲಭ್ಯವಿದೆ ಎಂದು ವಿವರಗಳನ್ನು ನೀಡಿದರು. ಅದಲ್ಲದೆ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ಮುಂತಾದ ವ್ಯವಸ್ಥೆಗಳಿದ್ದು, ಗುಂಪುಗಳಿಗಾಗಿ ಇರುವ ಸಾಲ ಸೌಲಭ್ಯಗಳು ಹಾಗೂ ಸಾಲ ದೊರೆಯದಿದ್ದರೆ ಪ್ರಶ್ನಿಸುವ ವಿವರ ಪಡೆಯುವ ವಿಧಾನವನ್ನು ವಿವರಿಸಿದರು .
District Industrial Centre ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ. ವಿ. ಲಕ್ಷ್ಮಿದೇವಿ ಗೋಪಿನಾಥ್ ಮಾತನಾಡಿ ಸಂಫವು ಆಯೋಜಿಸುವ ತರಬೇತಿಗಳಲ್ಲಿ ಭಾಗವಹಿಸಿ ಉದ್ಯಮವನ್ನು ಆರಂಭಿಸಿ ಮುನ್ನೆಡೆಸಬೇಕೆಂದು ನುಡಿದರು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದ ಮುಖ್ಯ ವ್ಯವಸ್ಥಾಪಕರಾದ ಶ್ರೀ ಸಂಜಯ್ ಸಿಂಗ್, ಶ್ರೀಮತಿ ನಂದಿನಿ, ಶ್ರೀಮತಿ ಸುಧಾ, ಶ್ರೀಮತಿ ಶ್ರುತಿ ಉಪಸ್ಥಿರರಿದ್ದರು.
Shimoga District Tourism Development ಜುಲೈ 13. ಶಿವಮೊಗ್ಗ – ಅಂಜನಾಪುರ ಡ್ಯಾಂ, ಉಡುತಡಿ, ಚಂದ್ರಗುತ್ತಿ, ಬನವಾಸಿ ಮಧುಕೇಶ್ವರ ದರ್ಶನ: ಒಂದುದಿನದ ಪ್ರವಾಸ ಆಯೋಜನೆ
Shimoga District Tourism Development ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯಿಂದ 13.07.25 ರ ಭಾನುವಾರ ಶಿವಮೊಗ್ಗದಿಂದ ಅಂಜನಾಪುರ ಡ್ಯಾಂ, ಷಿಕಾರಿಪುರ ಹುಚ್ಚರಾಯಸ್ವಾಮಿ ದೇವಸ್ಥಾನ, ಅಕ್ಕಮಹಾದೇವಿ ಜನ್ಮಸ್ಥಾನ ಉಡುಗಣಿ, ಬಳ್ಳಿಗಾವಿಯ ಕೇದಾರೇಶ್ವರ ದೇವಸ್ಥಾನ, ತೋಗರ್ಸಿಯ ಶ್ರೀ ಮಲ್ಲಿಕಾರ್ಜುನ – ದೇವಸ್ಥಾನ, ಶ್ರೀ ಗುರು ಕೊಟ್ಟೂರೇಶ್ವರ ಐತಿಹಾಸಿಕ ದೇವಸ್ಥಾನ ಕುಬಟೂರು, ಬನವಾಸಿಯ ಮಧುಕೇಶ್ವರ ದೇವಸ್ಥಾನ ಮತ್ತು ಚಂದ್ರಗುತ್ತಿಯ ರೇಣುಕಾಂಬದೇವಿ ದೇವಸ್ಥಾನ ಸ್ಥಳಗಳಿಗೆ ಒಂದು ದಿನದ ಪ್ರವಾಸವನ್ನು ಏರ್ಪಡಿಸಲಾಗಿದೆ.
ಶಿವಮೊಗ್ಗದಿಂದ ಬೆಳಿಗ್ಗೆ 6:30 ಕ್ಕೆ ಹೊರಟು ರಾತ್ರಿ 10 ರ ಒಳಗಾಗಿ ಶಿವಮೊಗ್ಗಕ್ಕೆ ತಲುಪಲಾಗುವುದು ಶುಲ್ಕ ಒಬ್ಬರಿಗೆ ರೂ 700 ಮಾತ್ರ. (ಶುಲ್ಕದಲ್ಲಿ ಬಸ್ ಚಾರ್ಜ್, ಬೆಳಿಗ್ಗೆ ಉಪಹಾರ, ಮದ್ಯಾಹ್ನ ಮತ್ತು ರಾತ್ರಿಯ ಊಟದ ಖರ್ಚು ಸೇರಿರುತ್ತದೆ.) 45 ಜನರಿಗೆ ಮಾತ್ರ ಅವಕಾಶವಿದ್ದು ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಹೆಸರನ್ನು ಮಹದೇವಸ್ವಾಮಿ ದೂರವಾಣಿ 9448844380 ಅಥವಾ ಲಕ್ಷ್ಮೀ ನಾಗೇಶ್ ದೂರವಾಣಿ ಸಂಖ್ಯೆ 9916334736 ಇವರ ಬಳಿ ನೋಂದಾಯಿಸುವಂತೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಕಾರ್ಯದರ್ಶಿ ಎನ್.ಗೋಪಿನಾಥ್ ಅವರು ತಿಳಿಸಿದ್ದಾರೆ.
Press Day ಪತ್ರಿಕಾ ದಿನಾಚರಣೆ, ಮುಖ್ಯಮಂತ್ರಿಗಳಿಂದ ಮಾಧ್ಯಮ ಸಂಜೀವಿನಿ ಯೋಜನೆ ಸಾಂಕೇತಿಕ ಉದ್ಘಾಟನೆ
Press Day ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼಪತ್ರಿಕಾ ದಿನಾಚರಣೆ 2025ʼ ಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಸ್ ಸೌಲಭ್ಯಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಹತ್ತು ಪತ್ರಕರ್ತರಿಗೆ ಪಾಸ್ಗಳನ್ನು ವಿತರಿಸಿದರು. ಪತ್ರಕರ್ತರಿಗೆ ರೂ.5 ಲಕ್ಷವರೆಗೆ ನಗದುರಹಿತ ಉಚಿತ ಆರೋಗ್ಯ ಸೇವೆ ಒದಗಿಸುವ ʼಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆʼಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ಮೊಜೊ ಕಿಟ್ಗಳನ್ನು ವಿತರಿಸಲಾಯಿತು. ಮಾಧ್ಯಮ ಅಕಾಡೆಮಿಯ ಕಾರ್ಯಚಟುವಟಿಕೆಗಳ ಚಿತ್ರ ಸಂಪುಟ ಮಾಧ್ಯಮ ಗ್ಯಾಲರಿಯನ್ನು ಅತಿಥಿಗಳು ಬಿಡುಗಡೆ ಮಾಡಿದರು.
Press Day ಈ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ಪಿ ಸಾಯಿನಾಥ್, ಹಿರಿಯ ಸಾಹಿತಿ ಶ್ರೀ ರಹಮತ್ ತರೀಕೆರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ ವಿ ಪ್ರಭಾಕರ್, ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶ್ರೀಮತಿ ಬಿ ಬಿ ಕಾವೇರಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ನಸೀರ್ ಅಹಮದ್, ವಾರ್ತಾ ಇಲಾಖೆ ಆಯುಕ್ತರಾದ ಶ್ರೀ ಹೇಮಂತ್ ಎಂ ನಿಂಬಾಳ್ಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಷಾ ಖಾನಂ, ಕಂಠೀರವ ಸ್ಟೇಡಿಯಂ ಅಧ್ಯಕ್ಷರಾದ ಶ್ರೀ ಮೆಹಬೂಬ ಪಾಶ, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಮತ್ತಿತರರು ಉಪಸ್ಥಿತರಿದ್ದರು
CM Siddharamaiah ನಮ್ಮ ಸರ್ಕಾರ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿರುತ್ತದೆ- ಸಿದ್ಧರಾಮಯ್ಯ
CM Siddharamaiah ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ.
ನೀರಾವರಿಗೆ ನಮ್ಮ ಸರ್ಕಾರ 25 ಸಾವಿರ ಕೋಟಿ ಕೊಟ್ಟಿದೆ. ಬೇರೆ ಯಾವುದಾದರೂ ಸರ್ಕಾರ ಈ ಮಟ್ಟದ ಅನುದಾನ ಕೊಟ್ಟಿತ್ತಾ?
ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬರಲು ಸಾಧ್ಯ?
ಕೃಷಿ ಪ್ರಗತಿಗಾಗಿ ವರ್ಷಕ್ಕೆ 19,000 ಸಾವಿರ ಕೋಟಿ ಹಣವನ್ನು ಪಂಪ್ ಸೆಟ್ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಡ್ಯಾಂ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಲಾಗುವುದು.
ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೆ “ಸಿದ್ದರಾಮಯ್ಯ ಅವರ ಕಾಲುಗುಣ ಸರಿಯಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳ ಮೂಡಾತ್ಮರು ಈಗ ಏನು ಹೇಳ್ತಾರೆ?
ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ₹3,000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಯಾಕೆ?
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನಲ್ಲಿ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ?
CM Siddharamaiah ಕಾವೇರಿ ತಾಯಿ, ಚಾಮುಂಡೇಶ್ವರಿ ತಾಯಿಯ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ಆದೇಶ ನೀಡುತ್ತಿದ್ದೇನೆ.
ಎಂದು ಮಂಡ್ಯದಲ್ಲಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.
