Friday, August 14, 2026
Friday, August 14, 2026
Home Blog Page 265

Women and Child Development Department ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

0

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೀರಮಹಿಳೆ ಪ್ರಶಸ್ತಿಗೆ ಅರ್ಹತೆಗಳು : 18 ರಿಂದ 45ವರ್ಷ ವಯೋಮಿತಿಯೊಳಗಿನ ಒಬ್ಬ ಮಹಿಳೆ ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದು. ತಾವು ಮಾಡಿದ ಸಾಧನೆ ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31ರೊಳಗಾಗಿ ಇರಬೇಕು. ವೀರಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆ ಮಾಡಿರಬೇಕು. ಪ್ರಶಸ್ತಿಗೆ ಸಂಬಂಧಿಸಿದ ಮಹಿಳೆಯ ತಂದೆ/ತಾಯಿ ಪೋಷಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. Women and Child Development Department ಈ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25,000 ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.
ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹತೆಗಳು : ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಶ್ರೇಷ್ಟ ಮಟ್ಟದ ಸಾಧನೆಗಳನ್ನು ಕೈಗೊಂಡಿರಬೇಕು. ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪಧಾಧಿಕಾರಿಗಳು ಸ್ವೀಕರಿಸಬಹುದು.
ಆಸಕ್ತರು ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ. ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:22/12/2025ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು.

Railway Shivamogga ರೈಲು ಗಾಡಿಯಿಂದ ಬಿದ್ದು ವ್ಯಕ್ತಿ ಸಾವು

0

Railway Shivamogga ನವೆಂಬರ್ 28 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಭದ್ರಾವತಿ ರೈಲ್ವೇ ನಿಲ್ದಾಣದ ಹತ್ತಿರ ರೈಲು ಗಾಡಿಯಿಂದ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿ ಡಿ.10 ರಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿರುತ್ತಾರೆ.
Railway Shivamogga ಮೃತ ವ್ಯಕ್ತಿಯು ಸುಮಾರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಸುಮಾರು 2-3 ಇಂಚು ಉದ್ದನೆಯ ಕಪ್ಪು ಮತ್ತು ಬಿಳಿ ಕೂದಲು, ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಈ ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ರೈಲ್ವೇ ಪೊಲೀಸ್ ಸಬ್‌ಇನ್ಸ್ಪೆಕ್ಟರ್, ದೂ.ಸಂ: 08182-222974, ಮೊ.ಸಂ: 948082124 ನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

B. Y. Raghavendra ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ

0

B. Y. Raghavendra ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನ ಅವರ ಕಚೇರಿಯಲ್ಲಿ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ವಿವರವಾಗಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೊಲ್ಲೂರು ಕಾರಿಡಾರ್ ಅಭಿವೃದ್ಧಿ ಯೋಜನೆ ಹಾಗೂ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತ್ಯುನ್ನತ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ಹಣಕಾಸು ಸಹಾಯ ಹಾಗು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ನೆರವು ಒದಗಿಸಬೇಕೆಂದು ವಿನಂತಿಸಲಾಯಿತು.

B. Y. Raghavendra ಈ ಬೇಡಿಕೆಗಳನ್ನು ಗಮನದಿಂದ ಆಲಿಸಿದ ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಅಗತ್ಯ ಸಹಕಾರದ ಭರವಸೆಯನ್ನು ನೀಡಿದ್ದಾರೆ.

Rotary Shimoga ಸಂತೃಪ್ತಿ ಜೀವನಕ್ಕೆ ಆರೋಗ್ಯವೇ ಮೂಲ ಕಾರಣ:ಡಾ.ವಿಎಲ್ ಎಸ್ ಕುಮಾರ್

0

Rotary Shimoga ಅತ್ಯುತ್ತಮ ಜೀವನಕ್ಕೆ, ಸಮಾಜಿಕ ಸೇವೆ, ಆತ್ಮೀಯರೊಂದಿಗೆ ಬೆರೆಯುವುದು, ಉತ್ತಮ ಜೀವನ ಶೈಲಿ, ಆಹಾರ, ನಿದ್ದೆ, ಸಂತೃಪ್ತಿ ಮಾನಸಿಕ ಅರೋಗ್ಯ, ವ್ಯಾಯಾಮ ದಿಂದ ಆರೋಗ್ಯಕರ ಜೀವನ ಗಳಿಸಲು ಸಾದ್ಯ ಎಂದು ರೋಟರಿ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂತರಾಷ್ಟ್ರೀಯ ವಿಪ್ಪತ್ತು ನಿರ್ವಣೆ ತರಬೇತುದಾರರಾದ ಶ್ರೀ ಡಾ.ವಿ.ಎಲ್.ಎಸ್.ಕುಮಾರ್ ಮಾತನಾಡುತ್ತಿದ್ದರು.
ಹಿರಿಯರು ಅತ್ಯುತ್ತಮ ಜೀವನ ಸಾಗಿಸುತ್ತಿದ್ದಾರೆ, ಆದರೆ ಯುವಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿಯೆ ಇಲ್ಲ. ಮೊಬೈಲ್, ಕಂಪ್ಯೂಟರ್, ಹವನಿಯಂತ್ರಿತ ಕೊಠಡಿ, ಲಿಪ್ಟ್, ದುಷ್ಟಚಟಗಳ ದಾಸರಾಗಿ ತಮ್ಮ ಆರೋಗ್ಯ ಹಾಳುಮಾಡಿಕೊಂಡು ಚಿಕ್ಕ ವಯಸಿನಲ್ಲಿಯೆ, ಪಾಲಕರ ಮುಂದೆಯೆ ಜೀವ ಕಳೆದುಕೊಳ್ಳುತ್ತಿದ್ದಾರೆ.
ಪ್ರಕೃತಿ ವಿಕೋಪ ವಾರದ ಮುಂಚೆಯೆ ತಿಳಿಯುತ್ತೆ, ಇದರಿಂದ ಜೀವ ಹಾನಿ ಕಡಿಮೆಯಾಗಿದೆ. ಪ್ರವಾಹದಿಂದ ಮುನ್ನೂರು, ಭೂಕುಸಿತ ದಿಂದ ಐವತ್ತು, ಸಿಡಲಿನಿಂದ ಹತ್ತು, ಅಫಘಾತದಿಂದ ಒಂದುಲಕ್ಷ ಎಂಬತ್ತು ಸಾವಿರ, ಹೃದಯಾಘತದಿಂದ ನಾಲ್ಕು ಲಕ್ಷ ಜನ ಪ್ರತಿ ವರ್ಷ ಭಾರತದಲ್ಲಿ ಸಾಯುತ್ತಾರೆ.
Rotary Shimoga ಅತ್ಯುತ್ತಮ ರಕ್ಷಣೆಯ ವಾಹನಗಳು ಇದ್ದರೂ, ವೇಗದ ಮಿತಿಯಿಲ್ಲದೆ ಅಫಘಾತ ಆಗುತ್ತವೆ. ನಿಮ್ಮನ್ನು ಹಿಂದಿಕ್ಕಲು ಬಂದವರಿಗೆ ಅವಕಾಶ ಮಾಡಿಕೊಡಿ, ಅವರನ್ನು ಮೀರಿಸುವ ದುಸ್ಸಾಹಸ ಮಾಡಬೇಡಿ. ಅಪಘಾತವಾದಾಗ ಸಹಾಯ ದೊರೆಯದೆ ಹೆಚ್ಚು ಜನ ಜೀವಕಳೆದು ಕೊಳ್ಳುತ್ತಾರೆ. ಕನಿಷ್ಟ ತಕ್ಷಣ ಆ್ಯಂಬುಲೆನ್ಸ್ ಕರೆದು ಆಸ್ವತ್ರೆಗೆ ಸೇರಿಸಿ. ನೀವೆ ಜೀವ ಹೊಗಿರಬಹುದು ಎಂದು ನಿರ್ಲಕ್ಷ ಮಾಡಬೇಡಿ. ರಸ್ತೆಯ ಬಲ ಬದಿಯಲ್ಲಿ ವಾಯುಸಂಚಾರ ಮಾಡಿ, ಸಂಗೀತ ಹಾಕಿ ಕೊಂಡು ನಡೆಯಬೇಡಿ‌.
ಎರಡು ದಿನ ಮುಂಚಿತವಾಗಿ ಹೃದಯಘಾತದ ಮುನ್ಸೂಚನೆ ದೊರಕುತ್ತದೆ. ಗ್ಯಾಸ್ಟಿಕ್ ಎಂದು ಸ್ವ-ಔಷದ ಉಪಚಾರ ಮಾಡಿಕೊಂಡು, ಅಪಾಯ ತಂದು ಕೊಳ್ಳುತ್ತಾರೆ. ಪ್ರಥಮ ಚಿಕಿತ್ಸೆ ಎಂದು ತಕ್ಷಣ ನೀರು ಕುಡಿಸುತ್ತಾರೆ, ಇದು ತಪ್ಪು. ಮಲಗಿಸದೆ, ಕಾಲುಚಾಚಿ ಕುಳ್ಳರಿಸಿ ಹೆಚ್ಚು ಗಾಳಿ ಬರಲು ಅವಕಾಶ ಇರಲಿ, ಮೆದಳಿಗೆ ರಕ್ತಚಲನೆ ಇಲ್ಲದೆ ಇದ್ದಾಗ ಜೀವ ಹೋಗುತ್ತದೆ
ಹೃದಯದಿಂದ ಮೆದುಳಿಗೆ ರಕ್ತಚಲನೆ ಆಗುತ್ತದೆ. ಅದರಲ್ಲಿ ವ್ಯತ್ಯಾಸವಾದಾಗ ಉಸಿರಾಟದ ತ್ತೊಂದರೆ ಯಾಗುತ್ತದೆ. ದೀರ್ಘ ಉಸಿರಾಡಲು ಹೇಳಿ. ಕೆಮ್ಮಲು ಹೇಳಬೇಡಿ, ಇದರಿಂದು ಅಮ್ಲುಜನಕ ಸಿಗುವುದಿಲ್ಲ.
ಇತ್ತೀಚೆಗೆ ನರರೋಗ ತಜ್ಞರಿಗೆ ಹೆಚ್ಚು ರೋಗಿಗಳು ಬರುತ್ತಿದ್ದಾರೆ. ರಕ್ತಹೆಪ್ಪು ಗಟ್ಟುವಿಕೆಯಿಂದ ಸ್ಟ್ರೋಕ್ ಆಗುತ್ತಿದೆ, ಉತ್ತಮ ಆಹಾರದ ಸೇವನೆ, ವ್ಯಾಯಾಮ, ದಿನದ ಎಂಟುಗಂಟೆ ಕೆಲಸ, ನಿದ್ರೆ, ಕುಟುಂಬ ದವರೊಂದಿಗೆ ಬೆರೆಯುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾದ್ಯ ಎಂದರು.
ರೊ.ಬಿ.ಎಸ್.ಅಶ್ವಥ್ ಅಧ್ಯಕ್ಷತೆ ವಹಿಸಿದ್ದರು, ರೊ.ಉಮಾದೇವಿ ಸ್ವಾಗತಿಸಿದರು, ಕಾರ್ಯದರ್ಶಿ ರೊ.ರೇವಣಸಿದ್ದಪ್ಪ ವಂದಿಸಿದರು. ಭಾರದ್ವಾಜ್, ಪ್ರವೀಣ್ ಜವಳಿ, ಉಮೇಶ್, ವಾಗೇಶ್, ಗಂಗಾಧರಸ್ವಾಮಿ, ನವೀನ್ ಹೇಮಾಶೇಖರ್, ರಾಜಶೇಖರ್ ಮುಂತಾದವರಿದ್ದರು

Ananya Residential Public School ಪ್ರತಿಯೊಬ್ಬರಿಗೂ ಎಲ್ಲ ಹಕ್ಕುಗಳು ದೊರಕುವುದು ಮುಖ್ಯ : ಇ.ಡಿ.ಅಶ್ವಿನಿ

0

Ananya Residential Public School ಪ್ರತಿಯೊಬ್ಬ ಮನುಷ್ಯ ಸಮಾನವಾಗಿ ಸದೃಢವಾಗಿ ಬದುಕಬೇಕು. ಎಲ್ಲ ಹಕ್ಕುಗಳು ಮಾನವ ಹಕ್ಕುಗಳು. ಪ್ರತಿಯೊಬ್ಬ ಮನುಷ್ಯನು ನೆಮ್ಮದಿಯಿಂದ ಬದುಕಬೇಕು. ಅದೇ ವಿಶ್ವ ಮಾನವ ಹಕ್ಕುಗಳ ಮೂಲ ಉದ್ದೇಶ ಎಂದು ಉಪಪ್ರಧಾನ ಕಾನೂನು ನೆರವು ಅಭಿರಕ್ಷಕಿ ಇ.ಡಿ.ಅಶ್ವಿನಿ ಹೇಳಿದರು.
ಶಿವಮೊಗ್ಗ ನಗರದ ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಇನ್ನೊಬ್ಬರಿಗೆ ತೊಂದರೆ ಉಂಟು ಮಾಡಿ ಮಾನವನ ಹಕ್ಕುಗಳನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಮಕ್ಕಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದರ ಬಗ್ಗೆ ಸರ್ಕಾರವು ಹೆಚ್ಚು ನಿಗಾ ವಹಿಸಿದೆ. ಆದರಿಂದ ಮಕ್ಕಳು ಈ ಕಾನೂನುಗಳನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ಮಾತನಾಡಿ, ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲುವುದರ ಜೊತೆಗೆ ಅನಾಹುತಗಳಿಂದ ತಪ್ಪಿಸಿಕೊಳ್ಳಬಹುದು. ಮಕ್ಕಳು ಕಾನೂನುಗಳನ್ನು ಸಹ ಆರಿತುಕೊಳ್ಳಬೇಕು ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುವಾರ್ ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಇಂತಹ ಕಾನೂನಿನ ಅರಿವಿನ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಈಗಾಗಲೇ ನಮ್ಮ ಸಂಸ್ಥೆಯಿಂದ ಸಾಕಷ್ಟು ಪ್ರಕರಣಗಳಿಗೆ ನ್ಯಾಯ ಒದಗಿಸಿದ್ದೇವೆ ಎಂದರು.
ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲಿನ ಶಿಕ್ಷಕ ಆರ್.ಗಿರೀಶ್ ಅವರು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮಾಹಿತಿ ನೀಡಿದರು. ಹಿರಿಯ ವಕೀಲ ಡಿ.ಎನ್.ಹಾಲಸಿದ್ದಪ್ಪ, ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಪ್ರದೀಪ್ ಮೀತ್ತಲ್, ಸಂತೋಷ್ ಪೂಜಾರಿ, ಎಂ.ಎಂ.ಗೋಪಿ, ಎ.ಆರ್.ರವಿಕುಮಾರ್, ಶಮೀರ್ ಪಾಷಾ ಎನ್, ಪ್ರಮೀಳಾ ಕೆ ಆರ್, ಶಾಜಿಯಾ ಬಾನು, ಜೀವನ್ ಡಿ, ಶರತ್ ಕುಮಾರ್ ಎ, ಸುಧಾಕರ ಕೆ ಜಿ, ರವಿಕುಮಾರ್ ಇತರರಿದ್ದರು.

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

0

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು, ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರ್ಥ ಮಾಡಿಕೊಂಡು ಬೇರೆಯವರ ಮಾನವ ಹಕ್ಕುಗಳನ್ನೂ ಗೌರವಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಾನವ ಹಕ್ಕುಗಳ ಆಯೋಗ, ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಡಿವಿಎಸ್ ಪದವಿಪೂರ್ವ(ಸ್ವತಂತ್ರ) ಕಾಲೇಜು, ಶಿವಮೊಗ್ಗ ಇವರ ಸಹಯೋಗದಲ್ಲಿ ಬುಧವಾರ ಡಿವಿಎಸ್ ಪಿಯು ಸ್ವತಂತ್ರ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜೀವಿಸುವ ಹಕ್ಕು, ಉಚಿತ ಶಿಕ್ಷಣದ ಹಕ್ಕು. ದೌರ್ಜನ್ಯ ವಿರುದ್ದ ಹಕ್ಕು, ಆರೋಗ್ಯ ಹಕ್ಕು, ಸಮಾನತೆಯ ಹಕ್ಕು ಸೇರಿದಂತೆ ಮಾನವ ಹಕ್ಕುಗಳ ವ್ಯಾಪ್ತಿ ಬಹು ವಿಸ್ತಾರವಾಗಿದೆ. ಎಲ್ಲರೂ ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಇತರರ ಹಕ್ಕುಗಳನ್ನು ಗೌರವಿಸಬೇಕು ಎಂದ ಅವರು ವಿದ್ಯಾರ್ಥಿಗಳು ತಮ್ಮ ತಮ್ಮ ಗುರಿ ಸಾಧನೆ ಮಾಡುವುದು ಕೂಡ ಒಂದು ಕರ್ತವ್ಯವಾಗಿದೆ ಎಂದರು.
ವಿದ್ಯಾರ್ಥಿಗಳಾದ ನೀವು ನಿಮ್ಮ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಬಾಲ್ಯ ವಿವಾಹದ ಕುರಿತು ವಿಷಯ ತಿಳಿದಲ್ಲಿ, ಬಾಲ್ಯ ವಿವಾಹವಾಗುತ್ತಿರುವುದು ಕಂಡು ಬಂದಲ್ಲಿ ಸಂಸ್ಥೆಯ ಶಿಕ್ಷಕರು, ಮುಖ್ಯಸ್ಥರು ಹಾಗೂ ಯಾವುದೇ ಅಧಿಕಾರಿಗಳಿಗೆ ತಿಳಿಸಬೇಕು ಎಂದರು. ಗುರು ಹಿರಿಯರು, ತಂದೆ ತಾಯಿಯರೊಂದಿಗೆ ಗೌರವದಿಂದ ನಡೆದುಕೊಂಡು, ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೆಕು. ದೊಡ್ಡ ಗುರಿಗಳನ್ನು ಹೊಂದಿ, ಸಾಧಿಸಿಯೇ ತೀರುತ್ತೇನೆಂದು ಪಣ ತೊಟ್ಟು ಈ ನಿಟ್ಟಿನಲ್ಲಿ ಸಾಗಿದರೆ ಶೇ.100 ರಷ್ಟು ಗುರಿಯನ್ನು ಸಾಧಿಸಬಹುದು. ಆ ಗುರಿ ಸಾಧನೆಗೆ ನಾವೇ ದಾರಿ ಕಂಡುಕೊಳ್ಳಬೇಕು. ಸಮಯಪಾಲನೆ, ಏಕಾಗ್ರತೆಯಿಂದ ಪಠ್ಯ ವಿಷಯಗಳನ್ನು ಕೇಳಿ, ಅಭ್ಯಾಸ ಮಾಡಬೇಕು. ಸಮಸ್ಯೆಗಳಿದ್ದರೆ ಶಿಕ್ಷಕರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.

2004 ರಲ್ಲಿ ನಾನು ಇದೇ ಡಿವಿಎಸ್ ಸ್ವತಂತ್ರ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದೆ. ಅತ್ಯಂತ ಉತ್ತಮವಾಗಿ, ಶ್ರದ್ದೆಯಿಂದ ಪ್ರಾಮಾಣಿಕವಾಗಿ ಹಾಗೂ ಶಿಸ್ತುಬದ್ದವಾಗಿ ಕಲಿಸುತ್ತಿದ್ದರು. ಟ್ಯೂಷನ್‌ಗೆ ಹೋಗುವ ಅವಶ್ಯಕತೆಯೇ ಇರಲಿಲ್ಲ. ಇಂತಹ ಸಂಸ್ಥೆಗಳಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳು ಬರುತ್ತಾರೆ, ಶಿಕ್ಷಕರು ಸಹ ಎಲ್ಲರನ್ನು ಸಮಾನವಾಗಿ ಕಾಣುತ್ತಾರೆ. ಈ ಸಂದರ್ಭದಲ್ಲಿ ನನಗೆ ಪಾಠ ಮಾಡಿ ದಾರಿ ತೋರಿದ ಎಲ್ಲ ಗುರುಗಳನ್ನು ಸ್ಮರಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಆದ ಎನ್ ಹೇಮಂತ್ ಅವರು ತಿಳಿಸಿದ್ದಾರೆ.

Human Rights Commission ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಾನವ ಹಕ್ಕುಗಳು ಎಂದರೆ ನೈಸರ್ಗಿಕವಾಗಿ ಬಂದಿರುವ ಹಕ್ಕುಗಳಾಗಿವೆ. ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದು ಬೇರೆಯವರ ಹಕ್ಕುಗಳನ್ನು ಹಾಗೂ ನಿಬಂಧನೆಗಳನ್ನೂ ಗೌರವಿಸಬೇಕು.
ಪ್ರಸ್ತುತ ಜಗತ್ತಿನಲ್ಲಿ ಮಾಹಿತಿ ಸ್ಫೋಟವಾಗುತ್ತಿದೆ. ಒಂದು ವ್ಯವಸ್ಥೆಯಲ್ಲಿ ಒಳ್ಳೆಯದು, ಕೆಟ್ಟದ್ದು ಎರಡೂ ಇರುತ್ತದೆ. ಒಳ್ಳೆಯದಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಈಗಂತೂ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ವಿಷಯಗಳನ್ನು ಸಲೀಸಾಗಿ ಮತ್ತು ಅತಿ ಶೀಘ್ರವಾಗಿ ತಲುಪಿಸಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಅತಿ ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು. ವಾಹನ ಪರವಾನಗಿ ಇಲ್ಲದೇ ವಾಹನ ಚಲಾವಣೆ ಮಾಡಬಾರದು. ತಂದೆ ತಾಯಿಯೊಂದಿಗೆ ಹಠ ಮಾಡಿ ನೋಯಿಸಬಾರದು. ಹೀಗೆ ನೋಯಿಸುವುದು ಕೂಡ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಗುರಿ ಸಾಧನೆಯೆಡೆ ಹೆಚ್ಚಿನ ಗಮನ ಹರಿಸಬೇಕೆಂದರು.

ನನ್ನ ಹಕ್ಕು ನಿಮ್ಮ ಕರ್ತವ್ಯ ಹಾಗೆಯೇ ನಿಮ್ಮ ಹಕ್ಕು ನನ್ನ ಕರ್ತವ್ಯ ಎನ್ನುವ ಹಾಗೆ ಬದುಕಬೇಕು. ಆಗ ಮಾನವ ಹಕ್ಕುಗಳು ಗೌರವಯುತವಾಗಿ ನೆಲೆಸಲು ಸಾಧ್ಯವಾಗುತ್ತದೆ. ಜೊತೆಗೆ ನಮ್ಮ ಹಕ್ಕುಗಳ ಮಿತಿಯನ್ನು ಅರಿತಾಗ ಉತ್ತಮವಾದ ಸಮಾಜ ರಕ್ಷಣೆ ಮಾಡಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ. ಎಸ್. ತಿಳಿಸಿದ್ದಾರೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ಎಲ್ಲ ನಾಗರೀಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣದ ಹಕ್ಕಿನ ಬಗ್ಗೆ ಮುಖ್ಯವಾಗಿ ತಿಳಿದುಕೊಳ್ಳಬೇಕು. ಹಕ್ಕುಗಳೊಂದಿಗೆ ತಮ್ಮ ಕರ್ತವ್ಯಗಳ ಬಗ್ಗೆಯೂ ತಿಳಿದುಕೊಳ್ಳುವುದು ಅತಿ ಅವಶ್ಯಕ. ಮಾನವ ಹಕ್ಕುಳಗ ರಕ್ಷಣೆಗೆ ಅನೇಕ ಕಾನೂನುಗಳಿದ್ದು ಅವುಗಳನ್ನು ತಿಳಿದುಕೊಳ್ಳಬೇಕು ಎಂದ ಅವರು ನಮ್ಮ ಸಂವಿಧಾನವನ್ನು ಓದಿ ಅದರಂತೆ ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಎಎಸ್‌ಪಿ ರಮೇಶ್ ಕುಮಾರ್, ಡಿಡಿಪಿಯು ಚಂದ್ರಪ್ಪ ಎಸ್ ಗುಂಡಪಲ್ಲಿ
ಡಿವಿಎಸ್ ಅಧ್ಯಕ್ಷರಾದ ಕೆ.ಎನ್.ರುದ್ರಪ್ಪ ಕೊಳಲೆ, ಕಾರ್ಯದರ್ಶಿ ಎಸ್ ರಾಜಶೇಖರ್, ಸಹ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸ್ವತಂತ್ರ ಕಾಲೇಜಿನ ಪ್ರಾಂಶುಪಾಲರಾದ ಸವಿತ ಎನ್ ರಾವ್ ಉಪನ್ಯಾಸಕ ಮಂಜುನಾಥ ಬಣಕಾರ್, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವರು ಸೂಚನೆ

0

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ ಮತ್ತು 4 ಚಿರತೆಗಳು ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಸಿಲುಕಿ ಸಾವನಪ್ಪಿವೆ. ಈ ಪೈಕಿ 3 ಕರಡಿ ಹಾಗೂ 2 ಚಿರತೆಗಳು ಮೃತಪಟ್ಟಿರುವ ವಿಚಾರ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು
ಆನೆ ಕಂದಕಗಳ ಬಳಿ ಬೆಳೆದ ಹುಲ್ಲಿನ ನಡುವೆ ಉರುಳು ಅಳವಡಿಸಿ ಕಳ್ಳಬೇಟೆ ಪ್ರಯತ್ನ ನಡೆಯುತ್ತಿದ್ದು ಇದರಿಂದ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಭದ್ರಾವತಿ, ಚಿಕ್ಕಮಗಳೂರು ಭಾಗದಲ್ಲೂ ಈ ರೀತಿಯ ಸಮಸ್ಯೆ ಇರುವ ಬಗ್ಗೆ ದೂರುಗಳು ಬಂದಿವೆ. ಉರುಳು ಮತ್ತು ತಂತಿ ಬೇಲಿಗೆ ಅಕ್ರಮವಾಗಿ ಹರಿಸುವ ವಿದ್ಯುತ್‌ ಸ್ಪರ್ಶದಿಂದ ವನ್ಯಜೀವಿಗಳು ಸಾವಿಗೀಡಾಗುತ್ತಿರುವ ವಿಭಾಗಗಳಲ್ಲಿ ಒಂದು ವಿಶೇಷ ತಂಡ ರಚಿಸಿ ಕಾಡಿನಂಚಿನ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿ, ಉರುಳುಗಳನ್ನು ತೆರವು ಮಾಡಿಸಲು. ಗಸ್ತು ಹೆಚ್ಚಿಸಿ ಉರುಳು ಮತ್ತು ತಂತಿ ಬೇಲಿಗೆ ಅಕ್ರಮ ವಿದ್ಯುತ್ ಸಂಪರ್ಕ ಅಳವಡಿಕೆಯ ಬಗ್ಗೆ ಪರಿಶೀಲನೆ ನಡೆಸಲು ಹಾಗೂ ವನ್ಯಜೀವಿಗಳ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

0

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ರವರ ನೇತೃತ್ವದಲ್ಲಿ ಪುಟ್ಟಪ್ಪ-ಅ.ಉ.ನಿ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ಇವರುಗಳು ಈ ದಾಳಿಯನ್ನು ನಡೆಸಿದ್ದಾರೆ.

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

0

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು. ತಮ್ಮ ಮೊದಲ ಮಗು ಬರಲಿರುವ ಖುಷಿಯಲ್ಲಿದ್ದಾಗ, ಅವರ ಜೀವನದಲ್ಲಿ ದೊಡ್ಡ ಸಂಕಷ್ಟ ಎದುರಾಯಿತು. ಗರ್ಭಿಣಿಯಾಗಿ ಎಲ್ಲವೂ ಸರಿಯಾಗಿದ್ದರೂ, ಅವರ ರಕ್ತದೊತ್ತಡ ಮಾತ್ರ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಏಳನೇ ತಿಂಗಳಿಗೆ ಕಾಲಿಟ್ಟಾಗ, ಅವರಿಗೆ ದಿಢೀರನೇ ಕಣ್ಣು ಕಾಣಿಸದಂತಾಯಿತು. ಪರಿಸ್ಥಿತಿ ತೀವ್ರ ಹದಗೆಡುತ್ತಿದ್ದರಿಂದ, ತಮ್ಮ ಹಳ್ಳಿಯ ಆಸ್ಪತ್ರೆಯಿಂದ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಹೋಗಿ, ಕೊನೆಗೆ ಸುಧಾರಿತ ಚಿಕಿತ್ಸೆಗಾಗಿ ಅವರನ್ನು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆತರಲಾಯಿತು.

ಆಸ್ಪತ್ರೆಗೆ ಬಂದಾಗ ರೋಗಿಯ ಸ್ಥಿತಿ ಗಂಭೀರವಾಗಿತ್ತು. ತೀವ್ರವಾದ ಅಧಿಕ ರಕ್ತದೊತ್ತಡದಿಂದಾಗಿ ‘ಎಕ್ಲಾಂಪ್ಸಿಯಾ’ (ಭಾರೀ ಮೂರ್ಛೆ ಬರುವ ಸ್ಥಿತಿ) ಅಪಾಯದಲ್ಲಿದ್ದರು. ತಕ್ಷಣವೇ ತುರ್ತು ಚಿಕಿತ್ಸೆ ಆರಂಭಿಸಿದ ತಂಡ, ಹೈ-ರಿಸ್ಕ್ ಗರ್ಭಾವಸ್ಥೆಗಳನ್ನು ನಿಭಾಯಿಸುವುದರಲ್ಲಿ ಹೆಸರುವಾಸಿಯಾದ ಹಿರಿಯ ಸ್ತ್ರೀರೋಗ ತಜ್ಞ ಡಾ. ರಾಘವೇಂದ್ರ ಭಟ್ ಅವರನ್ನು ತುರ್ತಾಗಿ ಕರೆಸಲಾಯಿತು. ತಕ್ಷಣವೇ ಅಗತ್ಯ ಪರೀಕ್ಷೆಗಳನ್ನು ನಡೆಸಲಾಯಿತು.

ಪರೀಕ್ಷೆಗಳಿಂದ ಗೊತ್ತಾದ ವಿಷಯ ಏನು ಅಂದರೆ, ಅವರಿಗೆ ತೀವ್ರವಾದ ‘ಪ್ರೀ-ಎಕ್ಲಾಂಪ್ಸಿಯಾ’ ಇತ್ತು ಮತ್ತು ದೃಷ್ಟಿ ಕಳೆದುಕೊಳ್ಳಲು ಕಾರಣವಾಗಿದ್ದ ‘ರೆಟಿನಾ ಡಿಟ್ಯಾಚ್‌ಮೆಂಟ್’ (ಕಣ್ಣಿನ ಪರದೆಯ ಬೇರ್ಪಡಿಕೆ) ಸಮಸ್ಯೆ ಇತ್ತು. ಕೂಡಲೇ ನಿರ್ಧಾರ ತೆಗೆದುಕೊಂಡ ಡಾ. ಭಟ್ ಅವರ ತಂಡ, ತಾಯಿಯ ಜೀವ ಉಳಿಸಲು ತುರ್ತಾಗಿ ಶಸ್ತ್ರಚಿಕಿತ್ಸೆ (ಸಿಸೇರಿಯನ್) ಮಾಡಿ ಮಗುವನ್ನು ಹೊರತೆಗೆಯಲು ತೀರ್ಮಾನಿಸಿತು. ಅಂದು ರಾತ್ರಿ, ಕೇವಲ 1 ಕೆ.ಜಿ ತೂಕದ ಅವಧಿಪೂರ್ವ (Premature) ಶಿಶುವಿಗೆ ಆ ತಾಯಿ ಜನ್ಮ ನೀಡಿದರು.

ಡಾ. ಭಟ್ ಅವರ ಪ್ರಕಾರ, ತಾಯಿ ಮತ್ತು ಮಗು ಇಬ್ಬರೂ ಐಸಿಯುನಲ್ಲಿ (ICU) ತೀವ್ರ ಆರೋಗ್ಯ ಸವಾಲುಗಳನ್ನು ಎದುರಿಸಿದರು. ತಾಯಿಗೆ ನಂತರ ಮೆದುಳಿನ ತೊಂದರೆಯಾದ ‘ಎನ್ಸೆಫಲೋಪತಿ’ ಕಾಣಿಸಿಕೊಂಡಾಗ, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಯ ನರರೋಗ ತಜ್ಞರಾದ ಡಾ. ರೂಪಾ ಅವರು ಅದನ್ನೂ ಯಶಸ್ವಿಯಾಗಿ ಸರಿಪಡಿಸಿದರು. ಐಸಿಯುನಲ್ಲಿ ನಾಲ್ಕು ದಿನ ಇದ್ದ ನಂತರ, ತಾಯಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಮೂರು ದಿನಗಳಲ್ಲಿ ಆಕೆಯ ದೃಷ್ಟಿ ಸುಧಾರಿಸಿ ಅವರು ಮನೆಗೆ ಹೋದರು.

ಅವಧಿ ಪೂರ್ವ ಜನಿಸಿದ ಮಗುವನ್ನು ಶಿಶು ರೋಗ ತಜ್ಞ ಡಾ. ಶಶಿಧರ್ ಹೆಗ್ಡೆ ಅವರ ಮೇಲ್ವಿಚಾರಣೆಯಲ್ಲಿ ಎನ್ಐಸಿಯುನಲ್ಲಿ (NICU) ಇಡಲಾಯಿತು. ಡಾ. ಶಶಿಧರ್ ಹೇಳಿದಂತೆ, ಮಗುವಿನ ಬಹುತೇಕ ಅಂಗಗಳು ಪೂರ್ಣವಾಗಿ ಬೆಳೆದಿಲ್ಲದ ಕಾರಣ, ಅದನ್ನು ಸುಮಾರು 45 ದಿನಗಳ ಕಾಲ ತೀವ್ರ ನಿಗಾದಲ್ಲಿ ಇಡಬೇಕಾಯಿತು. ಹೃದಯ ಬಡಿತ ಕಡಿಮೆ ಇತ್ತು, ಉಸಿರಾಡಲು ಕಷ್ಟವಿತ್ತು. ಹಾಗಾಗಿ, ಮಗುವನ್ನು ನಿರಂತರ ಆಮ್ಲಜನಕ ಬೆಂಬಲದೊಂದಿಗೆ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಒಮ್ಮೆ ಹೃದಯ ಬಡಿತ ನಿಂತಾಗ ಸಿಪಿಆರ್ (CPR) ನೀಡಿ ಮತ್ತೆ ಚೇತರಿಸಲಾಯಿತು.

Sahyadri Narayana Hospital ಇದಲ್ಲದೆ, ಮಗುವಿನ ಹೃದಯದಲ್ಲಿ ರಂಧ್ರವಿತ್ತು. ಅದನ್ನು ಔಷಧಿಗಳ ಮೂಲಕವೇ ಸರಿಪಡಿಸಲಾಯಿತು. ರಕ್ತದ ಮಟ್ಟ ಕಡಿಮೆಯಾಗಿದ್ದರಿಂದ ರಕ್ತವನ್ನೂ ನೀಡಲಾಯಿತು. ಅತಿ ಕಡಿಮೆ ತೂಕದ ಮಗುವಾಗಿದ್ದರಿಂದ, ಕೆಲವೊಮ್ಮೆ ಮೆದುಳಿನ ಅಪಕ್ವತೆಯಿಂದ ಉಸಿರಾಟ ನಿಲ್ಲಿಸುವ ತೊಂದರೆಯೂ ಇತ್ತು.

“ನಮ್ಮ ನರ್ಸಿಂಗ್ ಸಿಬ್ಬಂದಿ ದಣಿವರಿಯದೆ ಕೆಲಸ ಮಾಡಿದರು. ತಮ್ಮ ಊಟ-ತಿಂಡಿಯನ್ನೂ ಲೆಕ್ಕಿಸದೆ ಮಗುವನ್ನು ನೋಡಿಕೊಂಡರು. ಮಗುವಿಗೆ ಮೊದಲು ಟ್ಯೂಬ್ ಮೂಲಕ ಆಹಾರ ನೀಡಿ, ನಂತರ ತಾಯಿಯಿಂದ ಹಾಲುಣಿಸಲು ತರಬೇತಿ ನೀಡಲಾಯಿತು. ಆ ಸಿಬ್ಬಂದಿಯ ಕಾಳಜಿಯಿಂದ, ಮಗುವು ಸ್ಥಿರವಾಗಿ, ಆಟವಾಡುತ್ತಾ, ಸುಮಾರು 1.8 ಕೆಜಿ ತೂಕದೊಂದಿಗೆ ಒಂದೂವರೆ ತಿಂಗಳ ನಂತರ ಆಸ್ಪತ್ರೆಯಿಂದ ಮನೆಗೆ ಮಗು ತೆರಳಿದೆ,” ಎಂದು ಡಾ. ಶಶಿಧರ್ ಸಂತೋಷ ಹಂಚಿಕೊಂಡರು.

ಇಂತಹ ಪ್ರಕರಣ ಅಪರೂಪ ಎಂದು ಹೇಳಿದ ಡಾ. ಭಟ್, ತಮ್ಮ ವೃತ್ತಿಯಲ್ಲಿ ಪ್ರೀ-ಎಕ್ಲಾಂಪ್ಸಿಯಾದಿಂದಾಗಿ ಗರ್ಭಿಣಿಯೊಬ್ಬರು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದನ್ನು ಕಂಡಿದ್ದು ಇದೇ ಮೊದಲು ಎಂದರು.

“ಇಂತಹ ಕಠಿಣ ಸಮಸ್ಯೆಗಳ ಬಗ್ಗೆ ನಾವು ಪುಸ್ತಕಗಳಲ್ಲಿ ಓದುತ್ತೇವೆ, ಆದರೆ ನಿಜವಾಗಿಯೂ ಹೀಗಾಗುವುದು ಬಹಳ ವಿರಳ. ಇದು ಕೈ ಮೀರಿ ಹೋಗುವ ಸನ್ನಿವೇಶವಾಗಿತ್ತು, ಅದನ್ನು ನಾವು ಗೆಲುವಾಗಿ ಪರಿವರ್ತಿಸಿದ್ದೇವೆ,” ಎಂದು ಅವರು ಹೇಳಿದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್ ಅವರು ವೈದ್ಯರಾದ ಡಾ. ರಾಘವೇಂದ್ರ ಭಟ್, ಡಾ. ಶಶಿಧರ್ ಹೆಗ್ಡೆ, ಡಾ. ರೂಪಾ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸಿದ್ದಾರೆ. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಸವಾಲಿನ ಗರ್ಭಾವಸ್ಥೆಗಳನ್ನು ನಿಭಾಯಿಸುವಲ್ಲಿ ಮುಂದಿದೆ ಮತ್ತು ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನಾವು ಬದ್ಧವಾಗಿದ್ದೇವೆ ಎಂದು ಪುನರುಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್‌ ಎಸ್‌ ಎನ್‌, ಹಾಗೂ ಇನ್ನಿತರರು ಇದ್ದರು.

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

0

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ “ಹೆಲ್ತ್ ಹಿಂಟ್ಸ್” ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.
Akashavani Bhadravati ಡಿ 16 ರಿಂದ ಪ್ರತೀ ಮಂಗಳವಾರ ಬೆಳಿಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ “ಬದುಕು ಜಟಕಾಬಂಡಿ” ಎಂಬ 15 ನಿಮಿಷದ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿದ್ದಾರೆ.