Friday, August 14, 2026
Friday, August 14, 2026
Home Blog Page 266

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

0

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಶಿವಮೊಗ್ಗ), ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ) ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ಸಿಂಗನಮನೆ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀ ರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್(ಇಸಿಜಿ), 2ಡಿ ಎಕೋಕಾರ್ಡಿಯೋಗ್ರಫಿ (2ಡಿ ಎಕೋ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.

ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವಸಂಪನ್ಮೂಲ), ವಿಐಎಸ್‌ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ವಿಐಎಸ್‌ಎಲ್‌ನ ಅಧಿಕಾರಿಗಳಾದ ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ. ಎಸ್.ಎನ್. ಸುರೇಶ್, ಶ್ರೀ ಎಮ್.ಎಲ್. ಯೋಗೀಶ್, ಸಿಂಗನಮನೆ ಗ್ರಾಮದಿಂದ ಶ್ರೀಮತಿ ಮಂಜುಳ ಅಧ್ಯಕ್ಷರು ಸಿಂಗನಮನೆ ಗ್ರಾಮಪಂಚಾಯ್ತಿ, ಶ್ರೀಮತಿ ಕವಿತ.ಕೆ.ಬಿ, ಸದಸ್ಯರು, ಸಿಂಗನಮನೆ ಗ್ರಾಮಪಂಚಾಯ್ತಿ, ಡಾ. ಪ್ರಭುದೇವ, ಸಿಂಗನಮನೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಸುಪ್ರೀತ, ಡಾ. ಅನ್ಶು ಮತ್ತು ಶ್ರೀ ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಯ ಶ್ರೀ ಹರ್ಷ ಆರ್. ಗೌಡ ಮತ್ತು ತಂಡದವರು ಉಪಸ್ಥಿತರಿದ್ದರು. 216 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್‌ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.

Sahyadri Narayana Multispeciality Hospital ಸೈಲ್-ವಿಐಎಸ್‌ಎಲ್ ನ ‘ಹಸಿರೆಡೆಗೆ-ನಮ್ಮ ನಡೆ’ ಉಪಕ್ರಮದಡಿಯಲ್ಲಿ ನುಗ್ಗೆ ಮತ್ತು ಪಪ್ಪಾಯಿಯ ಉತ್ತಮ ತಳಿಯ ಬೀಜಗಳನ್ನು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

0

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2026 ರಿಂದ ಡಿಸೆಂಬರ್-2026ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು.
Information and Public Relations Department ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಆದರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯಿಂದ ಯಾವುದೇ ರೀತಿ ವಾಸ್ತವ್ಯ/ವಸತಿ ನೀಡಲು ಅವಕಾಶವಿರುವುದಿಲ್ಲ. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅಸಕ್ತರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:25/12/2025 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆAಚೆ: varthabhavansmg1@gmail.com ನ್ನು ಸಂಪರ್ಕಿಸಬಹುದಾಗಿದೆ.

ಡಿ. 11 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

0

ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರುಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

0

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025ರ ಅದ್ಭುತ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಆಳ್ವಾಸ್ ನುಡಿಸಿರಿ ವಿರಾಸತ್ ಶಿವಮೊಗ್ಗ ಜಿಲ್ಲಾ ಘಟಕದಿಂದ ಆಯೋಜಿಸಿರುವ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025 ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಡಿಸೆಂಬರ್ 15ರಂದು ಸಂಜೆ 5.30ರಿಂದ ಅಲ್ಲಮ ಪ್ರಭು ಬಯಲು ಫ್ರೀಡಂ ಪಾರ್ಕ್ ನಲ್ಲಿ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿ ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ವಿದ್ಯಾರ್ಥಿ ಕಲಾವಿದರಿಂದ 3 ಗಂಟೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಹೇಳಿದರು.
District Chamber of Commerce and Industry ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಬಳ್ಳೆಕೆರೆ ಸಂತೋಷ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಯೆಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್, ಸಿ.ಎ.ಶರತ್, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್, ಎಸ್.ಪಿ.ಶಂಕರ್ ಹಾಗೂ ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಅಶ್ವಥ್ ನಾರಾಯಣ್ ಶೆಟ್ಟಿ, ಜೆ.ಆರ್.ವಾಸುದೇವ್ ಹಾಗು ಸದಸ್ಯರಾದ ಮಧುಮಿತಾ ಇತರರು ಭಾಗವಹಿಸಿದ್ದರು.

ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕನ ಸಾವು

0

ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ
ಮೀನುಗುಂದ ಗ್ರಾಮದ ಪುನೀತ್‌ (26) ಎಂಬ ಯುವಕ ಅಫಘಾತದಲ್ಲಿ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌

ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ
ರಾಜಹಂಸ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸಾವಿಗೀಡಾಗಿದ್ದಾರೆ.

ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

District Chamber of Commerce and Industry ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಯಿಂದ ಆರ್ಥಿಕ ಅಭಿವೃದ್ಧಿಗೆ ಅನುಕೂಲ : ಬಿ.ಗೋಪಿನಾಥ್

0

District Chamber of Commerce and Industry ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣಾ ಕ್ರಮಗಳಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಾಯಕವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಶಿವಮೊಗ್ಗ ನಗರದ ಕಂಟ್ರಿ ಕ್ಲಬ್‌ನಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘ, ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ವತಿಯಿಂದ ಆಯೋಜಿಸಿದ್ದ ಬ್ಯಾಂಕಿಂಗ್ ಕ್ಷೇತ್ರದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರ್ಥಿಕ ಸುಧಾರಣಾ ಯುಗದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಸಾಕಷ್ಟು ಬದಲಾವಣೆ ಕಂಡಿದೆ. ಸಾಂಪ್ರದಾಯಿಕ ಬ್ಯಾಂಕಿಂಗ್‌ನಿಂದ ಬದಲಾಗಿ ತಾಂತ್ರಿಕ ಮೇಲ್ದರ್ಜೆಗೆ ಪರಿವರ್ತನೆಯಾಗಿದೆ. ಇಂದು ಬ್ಯಾಂಕಿಂಗ್ ವಲಯದಲ್ಲಿ ಸಾಲ ಪಡೆಯಲು ಬ್ಯಾಂಕ್‌ಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ಬ್ಯಾಂಕ್ ನಮ್ಮ ಬ್ಯಾಂಕಿಂಗ್ ಕಾನ್ಸೆಪ್ಟ್ ಪ್ರಾರಂಭವಾಗಿ ಕುಳಿತಲ್ಲೇ ಸಾಲ ಪಡೆಯಬಹುದು. ಠೇವಣಿ ಇಡಬಹುದು, ಎಲ್ಲಾ ರೀತಿಯ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಬಹುದು ಎಂದು ತಿಳಿಸಿದರು.
ಡಿ.ಜಿ.ಬೆನಕಪ್ಪ ಮಾತನಾಡಿ, ಡಿಜಿಟಲ್ ಮೊಬೈಲ್ ಬ್ಯಾಂಕಿಂಗ್ ಕ್ರಾಂತಿಕಾರ ಬ್ಯಾಂಕಿಂಗ್ ಸುಧಾರಣೆಯಾಗಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ತಿಳಿಸಿದರು. ಬ್ಯಾಂಕಿಂಗ್ ಉತ್ಪನ್ನಗಳು, ಜಾಗತಿಕ ಮಾರುಕಟ್ಟೆ, ಟ್ರೇಡ್ ಫೈನಾನ್ಸ್ ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು.
District Chamber of Commerce and Industry ಕೋಟಕ್ ಮಹಿಂದ್ರಾ ಬ್ಯಾಂಕ್ ಶಿವಮೊಗ್ಗ ಕ್ಲಸ್ಟರ್ ಏರಿಯಾ ಮ್ಯಾನೇಜರ್, ಪೊರ್ಟ್ಪೋಲಿಯೋ ಮ್ಯಾನೇಜರ್ ಸಚಿನ್ ಕಾಮಟೆ, ಏರಿಯಾ ಮ್ಯಾನೇಜರ್ ಕಲ್ಲೋಲ್ ಮಂಜುಂದರ್, ಗಿರೀಶ್ ಹೆಗ್ಡೆ, ಏರಿಯಾ ಮ್ಯಾನೇಜರ್ ಮಂಜುನಾಥ ಗಡಿಯಾರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ಮತ್ತಿತರರು ಇದ್ದರು.

Padma Gandhi Film ನಿರ್ದೇಶಕ ಸುಚೇಂದ್ರ ಪ್ರಸಾದ್ ನಿರ್ದೇಶನದ “ಪದ್ಮಗಂಧಿ” ಚಿತ್ರ ಡಿ. 12 ರಂದು ಶಿವಮೊಗ್ಗದ ಭಾರತ್ ಸಿನಿಮಾದಲ್ಲಿ ಪ್ರದರ್ಶನ

0

Padma Gandhi Film ಹಿರಿಯ ನಟ ಸುಚೇಂದ್ರ ಪ್ರಸಾದ್ ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಲು ಮುಂದಾಗಿರುವ ಪದ್ಮಗಂಧಿ ತೆರೆಗೆ ಸಿದ್ಧವಾಗಿದೆ.

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಿರುವ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿವೃತ ಪ್ರಾಧ್ಯಾಪಕಿ ಎಸ್‌. ಆರ್.ಲೀಲಾ ಚಿತ್ರದ ಕಥೆ ಬರೆದಿದ್ದು, ಚಿತ್ರ ನಿರ್ಮಾಣಕ್ಕೂ ಬಂಡವಾಳ ಹೂಡಿದ್ದಾರೆ.

ಕಳೆದ ತಿಂಗಳು ದುಬೈನಲ್ಲಿ ನಡೆದ ಇಂಡೋ ದುಬೈ ಇಂಟ‌ರ್ ನ್ಯಾಷನಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಪದ್ಮಗಂಧಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಪನೋರಮ ಚಿತ್ರೋತ್ಸವಕ್ಕೂ ಪದ್ಮಗಂಧಿ ಆಯ್ಕೆಯಾಗಿದೆ. ಈ ಸಿನಿಮಾವು ಆದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವಿಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ, ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖ‌ರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಡಾ. ಆ‌ರ್.ಗಣೇಶ್‌, ಡಾ.ಗೌರಿ ಸುಬ್ರಹ್ಮಣ್ಯ, ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್ ಮೃತ್ಯುಂಜಯ ಶಾಸ್ತ್ರಿ, ಪಂಡಿತಾ ಪ್ರಸನ್ನ ವೈದ್ಯ, ಡಾ.ದೀಪಕ್ ಪರಮಶಿವನ್, ಹೇಮಂತಕುಮಾರ. ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಪಾರ್-ನಾಗರಾಜ್ ಅದ್ವಾನಿ, ಗಿರಿಧರ್ ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನ ಈ ಚಿತ್ರಕ್ಕಿದೆ. ಭಾರತೀಯ ಪರಂಪರೆಯನ್ನು ಚಿತ್ರಿಸಿ ನೈಜವಾಗಿ ತೆರೆಗೆ ತರುವಲ್ಲಿ ನಟ ನಿರ್ದೇಶಕ ಸುಚೇಂದ್ರ ಪ್ರಸಾದ್ ತಮ್ಮೆಲ್ಲ ಜಾಣ್ಮೆಯನ್ನು ದಾರೆಯೆರದಿದ್ದಾರೆ.

ಪ್ರತಿಯೊಬ್ಬರೂ ನೋಡಲೇಬೇಕಾದ ಚಿತ್ರ ಇದಾಗಿದೆ.

Padma Gandhi Film ಪ್ರತಿಯೊಂದು ಹಂತದಲ್ಲಿ ಚಿತ್ರ ಕಥೆಗೆ ಪಾತ್ರದ ಮೂಲಕ ಜೀವಕಳೆ ತುಂಬಿದ ಪದ್ಮಗಂಧಿ ಎಲ್ಲರ ಮನಸ್ಸನ್ನು ಗೆಲ್ಲುವುದು ಸಂಶಯವೇ ಇಲ್ಲ.

ಪದ್ಮಗಂಧಿ ಇದೇ ತಿಂಗಳು 12 ನೆ ತಾರೀಖಿನಂದು ಶಿವಮೊಗ್ಗ ನಗರದ ಭರತ್ (ನೆಹರೂ ರಸ್ತೆಯಲ್ಲಿ ಇರುವ ಸಿಟಿ ಮಾಲ್) ಚಿತ್ರಮಂದಿರದಲ್ಲಿ ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪ್ರದರ್ಶನವಿರುತ್ತದೆ.

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

0

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ ದೈನಂದಿನ ಒತ್ತಡದಿಂದ ಹೊರಬಂದು ಕ್ರೀಡೆ, ಮನೋರಂಜನೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಕಾರ್ಯಕ್ಷೇತ್ರದಲ್ಲಿ ಇನ್ನಷ್ಟು ಹೊಸತನದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ.

ಈ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಡಿಸೆಂಬರ್‌12 ಮತ್ತು 13ರಂದು ಕಂದಾಯ ಇಲಾಖಾ ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಂದಾಯ ನೌಕರರ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಿಸೆಂಬರ್‌12ರಂದು ಪಿ.ಇ.ಎಸ್.‌ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಡಿಸೆಂಬರ್‌13ರಂದು ರಾಜ್ಯ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಸಂಗೀತ ನೃತ್ಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದವರು ವಿವರಿಸಿದರು. ಡಿ.12ರಂದು ಬೆಳಿಗ್ಗೆ 08ಗಂಟೆಗೆ ಪಿ.ಇ.ಎಸ್.‌ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಕಾರ್ಯಕ್ರಮದ ಅ‍ಧ್ಯಕ್ಷತೆ ವಹಿಸುವರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿ, ಪ್ರೊಬೇಷನರ್‌ಅಧಿಕಾರಿ ನಾಗೇಂದ್ರಬಾಬು ಕುಮಾರ್‌ಅವರು ಉಪಸ್ಥಿತರಿರುವರು.

ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ, ಸಾಗರ ಉಪವಿಭಾಗಾಧಿಕಾರಿ ವೀರೇಶ ಕುಮಾರ್‌ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಡಿ.13ರಂದು ಸಂಜೆ 6ಗಂಟೆಗೆ ನಗರದ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಕಂದಾಯೋತ್ಸವದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.

DC Shivamogga ಈ ಕಾರ್ಯಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು.

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

0

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಳ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

0

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರು ಎರಡು ದಿನ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಅಥ್ಲೆಟಿಕ್ಸ್ ವಿಭಾಗದಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಬಾಲಕ ಮತ್ತು ಬಾಲಕಿಯರು ಪ್ರಥಮ, ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆಯೊಂದಿಗೆ, ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ತಂದು ಕೊಟ್ಟು ಜಿಲ್ಲೆಗೆ ಮತ್ತು ಇಲಾಖೆಗೆ ಕೀರ್ತಿ ತಂದುಕೊಟ್ಟಿರುತ್ತಾರೆ.
ಬಾಲಕಿಯರ ವಿಭಾಗದಲ್ಲಿ: ಅಮೂಲ್ಯ ತ್ರಿಪಲ್ ಜಂಪ್ ಪ್ರಥಮ, ಸಿರಿ ಕೆ ಜಿ.ಹರ್ಡಲ್ಸ್ ನಲ್ಲಿ ದ್ವಿತೀಯ, ಲಾಂಗ್ ಜಂಪ್ ನಲ್ಲಿ ತೃತೀಯ, ಅಪೂರ್ವ 400 ಮೀಟರ್,ಹರ್ಡಲ್ಸ್ ನಲ್ಲಿ ಪ್ರಥಮ, ಪದ್ಮಾವತಿ ಜಾವಲಿನ್ ಮತ್ತು ಪೋಲೊ ವ್ಯಾಟ್ ನಲ್ಲಿ ಪ್ರಥಮ, ಅನ್ವಿತಾ ಎತ್ತರ ಜಿಗಿತದಲ್ಲಿ ತೃತೀಯ, ಇರಾನ್ ಶೇಕ್ 100ಮೀ, 200ಮೀ ಪ್ರಥಮ, ಲೇಖನ ಸಾಗರ್ 400 ಮೀ,ಹರ್ಡಲ್ಸ್ ದ್ವಿತೀಯ, ವೇದಾ ಹ್ಯಾಮರ್ ಪ್ರಥಮ, ಮಿತಾಲಿ ಎಸ್. ಗುಂಡು ಎಸೆದಲ್ಲಿ ದ್ವಿತೀಯ, 4×100 ರಿಲೇಯಲ್ಲಿ ಅಮೂಲ್ಯ, ಸಿರಿ, ಅಪೂರ್ವ, ಪದ್ಮಾವತಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತರಾಗಿರುತ್ತಾರೆ.
ಬಾಲಕರ ವಿಭಾಗದಲ್ಲಿ : ಸಂಜಯ್ 100 ಪ್ರಥಮ, 200 ದ್ವಿತೀಯ, ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ, ಲೋಕೇಶ್ ಜಾದವ್ 100ಮೀ ದ್ವಿತೀಯ, ಮೊಹಮದ್ ಆಯಿಲ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ, ಮಣಿಕಂಠಗೌಡ ಎತ್ತರ ಜಿಗಿತದಲ್ಲಿ ಪ್ರಥಮ, ತ್ರಿಬಲ್ ಜಂಪ್ ನಲ್ಲಿ ದ್ವಿತೀಯ, ಆರೂನ್ ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ, ಸುಧನ್ವಾ ಹ್ಯಾಮರ್ ಪ್ರಥಮ,ಶರತ್ ಕೆ. ಜೆ. 400ಮೀ ಪ್ರಥಮ, ಸಾಗರ್ ಪೋ ಲೋ ವ್ಯಾಟ್ನಲ್ಲಿ ಪ್ರಥಮ ಸ್ಥಾನ ಪಡೆದು,4×100 ರಿಲೇಯಲ್ಲಿ ಬಾಲಕರು ತೃತೀಯ ಸ್ಥಾನ, ಶಿವಮೊಗ್ಗ ಜಿಲ್ಲೆಯ ಪ್ರತಿಭಾನ್ವಿತರು ರಾಷ್ಟ್ರ ಮಟ್ಟದಲ್ಲಿ ಆಡಲಿದ್ದಾರೆ.ಅಸಂಖ್ಯಾತ ಕ್ರೀಡಾಭಿಮಾನಿಗಳು ಪ್ರೋತ್ಸಾಹದಿಂದ ಹುರಿದುಂಬಿಸಿದರು.
Department of School Education ಉತ್ತರ ಪ್ರದೇಶ ಲಕ್ನೋದಲ್ಲಿ ನಡೆಯುವ 17 ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಶಿವಮೊಗ್ಗ ಜಿಲ್ಲೆಯಿಂದ 9 ಬಾಲಕಿಯರು,8 ಬಾಲಕರು, ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರ.12 ಬಂಗಾರದ ಪದಕ,8 ಬೆಳ್ಳಿ ಪದಕ, 4 ಕಂಚಿನ ಪದಕ, ಒಟ್ಟು 24ಪದಕಗಳನ್ನು ಪಡೆದು ಜಿಲ್ಲೆಗೆ ಸಮಗ್ರ ಪ್ರಶಸ್ತಿಯನ್ನು ತಂದು ಕೊಟ್ಟಿರುತ್ತಾರೆ.ಅಸಂಖ್ಯಾತ ಕ್ರೀಡಾಭಿಮಾನಿಗಳು ಪ್ರೋತ್ಸಾಹದಿಂದ ಹುರಿದುಂಬಿಸಿದರು. ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡೆಗೆ ಮೆರಗು ತಂದಿದ್ದಾರೆ.
ಕ್ರೀಡಾ ಪ್ರತಿಭೆಗಳ ಸಾಧನೆಯನ್ನು ಮೆಚ್ಚಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಪ ನಿರ್ದೇಶಕರಾದ ಮಂಜುನಾಥ್ ಎಸ್.ಆರ್. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಪ್ರಕಾಶ್ ಎಂ. ರಾಜ್ಯಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುವ ಈ ಪ್ರತಿಭೆಗಳನ್ನು ಇಲಾಖೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸಿಹಿ ವಿತರಿಸಿ, ಆತ್ಮೀಯವಾಗಿ ಗೌರವಿಸಿ,ಪ್ರೋತ್ಸಾಹಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಎಸ್. ಆರ್. ಮಾತನಾಡುತ್ತಾ,ಆಟ ಅಂತ ಬಂದಾಗ ಸೋಲು ಗೆಲುವು ಸಹಜ.ಆದರೆ ಯಾವ ಪಂದ್ಯಾವಳಿಗಳು ಮಕ್ಕಳಲ್ಲಿ ಹೊಸ ಹುರುಪು,ಉತ್ಸಾಹಕ್ಕೆ ಮುನ್ನಡಿ ಬರೆಯುತ್ತವೆ.ಆ ನಿಟ್ಟಿನಲ್ಲಿ ಕ್ರೀಡೆಯು ದೈಹಿಕವಾಗಿ ಸದೃಢವಾಗಿಸುವುದರ ಜೊತೆಗೆ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಸತತ ಅಭ್ಯಾಸ, ಪರಿಶ್ರಮ,ನಿತ್ಯ ಸಾಧನೆ ಇರುವವರಿಗೆ ಮಾತ್ರ ಕ್ರೀಡೆ ಒಲಿಯುತ್ತದೆ ಎಂದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿರ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ತಾವುಗಳು, ರಾಷ್ಟ್ರ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ, ಚಂದ್ರಕಾಂತ್,ವಿನಯ್ ಹೆಗಡೆ, ಆಂಜಿನಪ್ಪ,ರಾ. ಹ. ತಿಮ್ಮೇನಹಳ್ಳಿ, ಕಾಳನಾಯ್ಕ, ಮಹೇಶ್ ಉಲ್ಲತ್ತಿ, ಜೋಶಿ ಇನ್ನು ಮುಂತಾದವರು ಉಪಸ್ಥಿತರಿದ್ದರು.