Dist Horticulture office,Shimoga ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರಿಂದ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ.
ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಮೀಪದ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಜು 31 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವAತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dist Horticulture office,Shimoga ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಅಥವಾ ಆಯಾ ರೈತ ಸಂಪರ್ಕ ಕೇಂದ್ರಗಳಾದ ಶಿವಮೊಗ್ಗ: 08182-279415/9900046087, ಭದ್ರಾವತಿ:08282-295029/ 9108252536, ಶಿಕಾರಿಪುರ: 08187-223544/8310662972, ಸೊರಬ: 08184-295112/ 990046117, ಸಾಗರ: 08183-295124/9449177200 ತೀರ್ಥಹಳ್ಳಿ: 08181-228151/ 9108280642, ಹೊಸನಗರ:08185-295364/9591695327 ಅಧಿಕಾರಿಗಳನ್ನು ಸಂಪರ್ಕಿಸುವುದು.
Dist Horticulture office,Shimoga ಹವಾಮಾನಾಧಾರಿತ ಬೆಳೆ ವಿಮೆ.ನೋಂದಣಿ ಮಾಡಿಸಿಕೊಳ್ಳಲು ಅರ್ಜಿ ಆಹ್ವಾನ
ISRO ನಮ್ಮದು ಬಾಹ್ಯಾಕಾಶ ಕ್ಷೇತ್ರ ವಿಜ್ಞಾನದಲ್ಲಿ ಸಾಧನೆ ಮಾಡಿದ ಪ್ರಮುಖ ರಾಷ್ಟ್ರ- ಶಿವಾನಿ ಕೋಣಂದೂರು
ISRO ಮಾನವ ಸಹಿತ ಗಗನಯಾನವು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ದೊಡ್ಡ ಯೋಜನೆಯಾಗಿದೆ ಎಂದು ವಿಜ್ಞಾಣಿ ಶಿವಾನಿ ಕೋಣಂದೂರು ಹೇಳಿದರು.
ಇಸ್ರೋ ಸಂಸ್ಥೆಗೆ ಭೇಟಿ ನೀಡಿದ ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ದೇಶದ ಬೆಳವಣಿಗೆಯಲ್ಲಿ ಇಸ್ರೋ ಪಾತ್ರ ತುಂಬಾ ಮಹತ್ತರವಾಗಿದೆ. ದೇಶದ ಸಂಪರ್ಕ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇಸ್ರೋ ಪಾತ್ರ ತುಂಬಾ ಪ್ರಮುಖವಾಗಿದೆ. ಈಗಾಗಲೇ ನಮ್ಮ ದೇಶ ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ವಿಜ್ಞಾನಿ ಶಿವಶಂಕರ್ ಅವರು ಇಸ್ರೋ ಸಂಸ್ಥೆ ಸ್ಥಾಪನೆಯಾದ ವೇಳೆಯಿಂದ ಈವರೆಗೂ ಸಾಗಿಬಂದ ದಾರಿ, ಅದರ ಬೆಳವಣಿಗೆ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ವಾಗ್ದೇವಿ ಬಸವರಾಜ್ ಮಾತನಾಡಿ, ನಮ್ಮ ದೇಶದ ಪ್ರತಿಷ್ಠಿತ ಸಂಸ್ಥೆ ಇಸ್ರೋಗೆ ಭೇಟಿ ನೀಡಿರುವುದು ತುಂಬಾ ಸಂತಸ ತಂದಿದೆ. ಇದರ ಕಾರ್ಯವೈಖರಿ ನಮಗೆ ತುಂಬಾ ಆಶ್ಚರ್ಯ ಮೂಡಿಸಿದೆ. ನಿಜಕ್ಕೂ ನಮ್ಮ ದೇಶದ ISRO ಪ್ರಗತಿಗೆ ಇಸ್ರೋ ವಿಜ್ಞಾನಿಗಳು ಹಗಲಿರಳು ಶ್ರಮಿಸುತ್ತಿದ್ದಾರೆ. ಆದ್ದರಿಂದ ನಮ್ಮ ದೇಶದ ವಿಜ್ಞಾನಿಗಳಿಗೆ ನಾವು ಸದಾ ಚಿರಋಣಿಯಾಗಿರಬೇಕು ಎಂದು ನುಡಿದರು.
ಇಸ್ರೋ ಸಂಸ್ಥೆಯ ಹಿರಿಯ ವಿಜ್ಞಾನಿ ಶಿವಶಂಕರ್, ಮಹಾದೇವ್ ಸ್ವಾಮಿ ಮತ್ತು ಡಾ. ಅನಿಲ್ ಕುಮಾರ್, ಇನ್ನರ್ವ್ಹೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯಕುಮಾರ್, ಲತಾ ಸೋಮಣ್ಣ, ರಾಜೇಶ್ವರಿ ಪ್ರತಾಪ್, ವೀಣಾ ಹರ್ಷ, ವೀಣಾ ಸುರೇಶ್, ಹಾಗೂ ಇನ್ನರ್ವ್ಹೀಲ್ ನಿರ್ದೇಶಕರು, ಪದಾಧಿಕಾರಿಗಳು, ಸದಸ್ಯರು, ಉಪಸ್ಥಿತರಿದ್ದರು.
Padma Awards ಪದ್ಮಶ್ರೇಣಿ ಪ್ರಶಸ್ತಿಗಳಿಗಾಗಿ ಪರಿಶಿಷ್ಟ ಪಂಗಡದವರಿಂದ ಅರ್ಜಿಗಳ ಆಹ್ವಾನ
Padma Awards 2026 ನೇ ಸಾಲಿನ ದೇಶದ ನಾಗರೀಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿ ಅತ್ಯತ್ತಮ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು https://awards.gov.in ಅಥವಾ https://padmaawards.gov.in ಮುಖಾಂತರ ಜು.15 ರೊಳಗಾಗಿ ಸಲ್ಲಿಸಿ, ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ uspoliticaldpar@karnataka.gov.in ಕ್ಕೆ ನೇರವಾಗಿ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Padma Awards ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ, ದೂ.ಸಂ.08182-200266 ನ್ನು ಹಾಗೂ ಎಲ್ಲಾ ತಾಲ್ಲೂಕು ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವAತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Yoga Day ಯೋಗಾದಿಂದ ಉತ್ತಮ ಬದುಕು- ದಿವ್ಯಾ ಶೆಟ್ಟಿ
Yoga Day ಯೋಗದಿಂದ ಬದುಕು ಉತ್ತಮವಾಗಿದೆ. ಸಾವಿರಾರು ವರ್ಷಗಳಿಂದ ದೇಹ ಮತ್ತು ಮನಸ್ಸನ್ನು ಒಟ್ಟು ಗೂಡಿಸುವ ಅದ್ಭುತ ಕೆಲಸವನ್ನು ಯೋಗ ಮಾಡುತ್ತಾ ಬಂದಿದೆ ಎಂದು ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲೆ ದಿವ್ಯ ಶೆಟ್ಟಿ ಹೇಳಿದರು.
ಅವರು ನಗರದ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ಆಯೋಜಿಸಿದ್ದ ೧೧ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಸ್ತುತ ೧೭೭ ದೇಶಗಳಲ್ಲಿ ಯೋಗ ಅಭ್ಯಾಸ ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಆರೋಗ್ಯ ಚೆನಾಗಿದ್ದರೆ ಬದುಕು ಚೆನ್ನಾಗಿರುತ್ತದೆ ಎಂದರು.
Yoga Day ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಕಾರ್ತಿಕ್ ಎಸ್. ಎಲ್ ಮಾತನಾಡುತ್ತಾ, ಯೋಗವು ದೇಹವನ್ನು ಮತ್ತು ಮನಸ್ಸನ್ನು ಸದೃಢಗೊಳಿಸುತ್ತದೆ ಎಂದರು.
ಶಾಲೆಯ ವಿದ್ಯಾರ್ಥಿನಿ ಚಾರ್ವಿ ಎಸ್ ಸೇರಿದಂತೆ ಹಲವರು ವಿದ್ಯಾರ್ಥಿಗಳು ಆಸನಗಳ ಪ್ರದರ್ಶನವನ್ನು ನೀಡಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ರಘು, ಶಿಕ್ಷಕರು, ಮಕ್ಕಳು, ಸೇರಿದಂತೆ ಹಲವರಿದ್ದರು.
National Day Calendar ಮಳೆಕಾಡುಗಳ ಪ್ರಯೋಜನ ತಿಳಿಸುವ ಉದ್ದೇಶದಿಂದ ಮಳೆಕಾಡು ದಿನಾಚರಣೆ- ಡಾ.ಹನುಮಂತಪ್ಪ
National Day Calendar ಪ್ರತಿ ವರ್ಷ ಜೂನ್ ೨೨ ರಂದು ವಿಶ್ವ ಮಳೆಕಾಡು ದಿನವನ್ನಾಗಿ ಆಚರಿಸುತ್ತಾರೆ. ಈ ಕಾರ್ಯಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ. ಹನುಮಂತಪ್ಪ ಅವರು ಉದ್ಘಾಟಿಸಿ ಈ ವರ್ಷದ ಘೋಷ ವಾಕ್ಯ ಅರಣ್ಯ ಮತ್ತು ಆಹಾರ ವಾಗಿದೆ ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಮಳೆ ಕಾಡಿನ ಪ್ರಾಮುಖ್ಯತೆ, ಮಳೆ ಕಾಡಿನಿಂದಾಗುವ ಪ್ರಯೋಜನಗಳು, ಮಳೆ ಕಾಡನ್ನು ಉಳಿಸಿಕೊಳ್ಳುವ ಪರಿ ಕುರಿತು ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ವಿಶ್ವದಾದ್ಯಂತ ಮಳೆ ಕಾಡಿನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ರಮೇಶ್ ಮಳೇ ಕಾಡಿನ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ಅವರು ವಿಭಾಗದ ವಿದ್ಯಾರ್ಥಿಗಳನ್ನು ಅರಣ್ಯ ಇಲಾಖೆಯ National Day Calendar ಅಧಿಕಾರಿಗಳೊಂದಿಗೆ ಆಗುಂಬೆಯ ಮಳೆ ಕಾಡಿನ ವೀಕ್ಷಣೆಗೆ ಕರೆದುಕೊಂಡು ಹೋಗಿ ಅರಣ್ಯದ, ಜೀವ ವೈವಿಧ್ಯತೆಯ ಪ್ರಾಮುಖ್ಯತೆ ಕುರಿತು ತಿಳಿಸಿಕೊಟ್ಟರು. ಕುವೆಂಪು ವಿವಿಯ ವನ್ಯಜೀವಿ ವಿಭಾಗದ ವಿದ್ಯಾರ್ಥಿ ಲೋಹಿಯಾ ನಾರಾಯಣ್ ಔಷಧಿ ಸಸ್ಯಗಳ ಪ್ರಾಮುಖ್ಯತೆಯ ಕುರಿತು ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಓಪನ್ ಮೈಂಡ್ಸ್ ಶಾಲೆಯ ಮಕ್ಕಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಶ್ರೀ ವಿಜಯಕುಮಾರ್ ಇನ್ನಿತರ ಅರಣ್ಯ ಅಧಿಕಾರಿಗಳು, ಶ್ರೀ ಲೋಕೇಶ್ವರಪ್ಪ, ಶ್ರೀ ಬಾಲಕೃಷ್ಣ, ಡಾ. ಸುಬ್ರಮಣ್ಯ, ಶ್ರೀಮತಿ ಪೂಜಾ ನಾಗರಾಜ್ ಪರಿಸರ, ಸಂಶೋಧನಾ ವಿದ್ಯಾರ್ಥಿಗಳಾದ ಶ್ರೀ ಜಯಂತ್ ಬಾಬು, ಶ್ರೀ ಅನಿಲ್ ಕುಮಾರ್ ಇನ್ನಿತರರು ಭಾಗವಹಿಸಿದ್ದರು.
Department of Horticulture,Shimoga ತೋಟಗಾರಿಕೆ ಇಲಾಖೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಶಿಕಾರಿಪುರ ಕಾರ್ಯಾಲಯದಿಂದ ಪ್ರಕಟಣೆ
Department of Horticulture,Shimoga 2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಕಾರ್ಯಕ್ರಮದ ಸದುಉಪಯೋಗ ಪಡೆಯಬಹುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ(ವೀಡ್ ಮ್ಯಾಟ್), ಟ್ರ್ಯಾಕ್ಟರ್ (20 ಪಿಟಿಓ), ಕೃಷಿಹೊಂಡ, ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ (ಶಿಲೀಂದ್ರ ನಾಶಕಗಳ ಜಿ.ಎಸ್.ಟಿ. ಬಿಲ್) ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು, ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ- ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ರೈತರಿಗೆ ಸಹಾಯಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ Department of Horticulture,Shimoga ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೆöÊಲರ್ ಮತ್ತು ಇನ್ನಿತರೆ ಯಂತ್ರೋಪಕರಣಗಳಿಗೆ ಸಹಾಯಧನ, ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಕ್ರೇಟ್ಸ್, ಸೋಲಾರ್ ಪಂಪ್ ಸೆಟ್, ಅಳವಡಿಸಿಕೊಳ್ಳಲು ಸಹಾಯಧನ, ಮಧುವನ ಮತ್ತು ಜೇನು ಸಾಕಾಣೆ ಅಭಿವೃದ್ಧಿ ಯೋಜನೆಯಡಿ ಜೇನು ಪೆಟ್ಟಿಗೆ ಹಾಗೂ ಕುಟುಂಬ, ತರಬೇತಿ ಹಾಗೂ ಖಾಸಗಿ ಮಧುವನ ಸ್ಥಾಪಿಸಲು ಸಹಾಯಧನ, ಹೀಗೆ ಮೇಲಿನ ಎಲ್ಲಾ ಯೋಜನೆಗಳಿಗೆ ಸಹಾಯಧನ ಕೋರಿ ಆಸಕ್ತ ರೈತರು ಅರ್ಜಿಯನ್ನು ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮತ್ತು ಹಿರಿಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ.08187-223544 ನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga News ಪರಿಸರ ಮಾಸದ ವಿಶೇಷವಾಗಿ “ಕಾಡಾ” ದಿಂದ ಗಿಡ ನೆಡುವ ಚಟುವಟಿಕೆ
Shivamogga News ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಚ್ಚುಕಟ್ಟು ಭಾಗದ ರೈತರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಪ್ರಶಾಂತ್ ಕೆ, ಉಪಆಡತಾಧಿಕಾರಿಗಳು ಪಾಂಡು ಕೆ.ಎಚ್, ಕಾರ್ಯಪಾಲಕ ಇಂಜಿನಿಯರ್ ಶಿವಮೊಗ್ಗ ಮತ್ತು ರಾಣೆಬೆನ್ನೂರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ATNCC college Shimoga ಎಟಿಎನ್ ಸಿಸಿ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿಗಳಿಗೋಸ್ಕರ” ಥಟ್ ಅಂತ ಹೇಳಿ” ಕಾರ್ಯಕ್ರಮ
ATNCC college Shimoga ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಬಾಲ್ಯದ ನೆನಪು ಗಳನ್ನು ಕೆದುಕುವ ಸಲುವಾಗಿ ಹಳೆಯ ಚಿತ್ರಗೀತೆಗಳು, ಪುಸ್ತಕಗಳು, ಒಗಟುಗಳು, ಮುಂತಾದ ತಮ್ಮ ನೆನಪನ್ನು ಕೆಣುಕುವ ಪ್ರಶ್ನೆಗಳಿರುವ ಥಟ್ ಅಂತ ಹೇಳಿ ಎಂಬ ಕಾರ್ಯಕ್ರಮವನ್ನು ಕಾಲೇಜ್ ಆವರಣದಲ್ಲಿ ದಿನಾಂಕ: 29-06-2025ನೇ ಭಾನುವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಆಯೋಜಿಸಲಾಗಿದೆ.
ATNCC college Shimoga ಈ ಕಾರ್ಯಕ್ರಮವನ್ನು ಶ್ರೀನಿವಾಸ್ ದಂಪತಿಗಳು ನಡೆಸಿಕೊಡಲಿದ್ದು ಈ ಕಾರ್ಯಕ್ರಮಕ್ಕೆ ಕಾಲೇಜಿನ ಎಲ್ಲಾ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆಯಲು ಉತ್ತಮ ಅವಕಾಶವನ್ನು ಹಳೆಯ ವಿದ್ಯಾರ್ಥಿ ಬಳಗ ಆಯೋಜಿಸಿದೆ. ಹಳೆಯ ವಿದ್ಯಾರ್ಥಿಗಳು ತಮ್ಮ ತರಗತಿಯ ಸ್ನೇಹಿತ- ಸ್ನೇಹಿತೆಯರೊಂದಿಗೆ ತಪ್ಪದೆ ಭಾಗವಹಿಸಬೇಕಾಗಿ ಹಳೆಯ ವಿದ್ಯಾರ್ಥಿಬಳಗದ ಕಾರ್ಯದರ್ಶಿ ಶಿವಾನಂದಸಾನು ಕೋರಿರುತ್ತಾರೆ.
Sainik Rehabilitation office Shimoga ಮೇಟಿ ಕಂ ವಾಚ್ ಮನ್ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
Sainik Rehabilitation office Shimoga ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧೀನದಲ್ಲಿರುವ ಸೈನಿಕ ಆರಾಮ ಗೃಹಕ್ಕೆ ಒರ್ವ ಮೇಟಿ ಕಂ ವಾಚ್ಮನ್ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತ ಅರ್ಹ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು “ಸ್ವಯಂ ಲಿಖಿತ ಅರ್ಜಿ ಮತ್ತು ಸ್ವವಿವರ” ದೊಂದಿಗೆ ಅರ್ಜಿಯನ್ನು ಜೂನ್ 30 ಸಂಜೆ 5.00 ಗಂಟೆಯೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಸ್ಥಳೀಯರಾಗಿರಬೇಕು. ಸೈನ್ಯದಲ್ಲಿ ದುರ್ನಡೆತೆ ಸಲುವಾಗಿ/ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರಬಾರದು. ಅರ್ಜಿ ಸಲ್ಲಿಸಿದ ನಂತರ ಜುಲೈ 02 ರ ಮಧ್ಯಾಹ್ನ 3.00 ಗಂಟೆಯೊಳಗೆ ನಿಗದಿಪಡಿಸಲಾದ ಸಂದರ್ಶನಕ್ಕೆ ಹಾಜರಾಗದ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
Sainik Rehabilitation office Shimoga ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಜುಲೈ 02 ರಂದು ಮಧ್ಯಾಹ್ನ 3.00 ಗಂಟೆಗೆ ಅಗತ್ಯ ಮೂಲ ದಾಖಲೆಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಕಛೇರಿ ಇಲ್ಲಿ ಸಂದರ್ಶನಕ್ಕೆ ಹಾಜರಿರತಕ್ಕದ್ದು. ಕೆಲಸದ ವಿವರ, ನಿಯಮ ಮತ್ತು ನಿಬಂಧನೆಗಳನ್ನು ಕಛೇರಿಯಿಂದ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಕಛೇರಿ, ದೂ.ಸಂ: 08182-220925 ನ್ನು ಸಂಪರ್ಕಿಸಬೇಕೆAದು ಸೈನಿಕ ಮತ್ತು ಪುನರ್ವಸತಿ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
District police Shimoga ನಿರುಪಯುಕ್ತ ವಾಹನ & ಸುಟ್ಟ ತೈಲ ಹರಾಜು ಪ್ರಕಟಣೆ
District police Shimoga ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 01 ನಿರುಪಯುಕ್ತ ಪೊಲೀಸ್ ವಾಹನ ಮತ್ತು 150 ಲೀಟರ್ ಸುಟ್ಟ ತೈಲವನ್ನು ಯಥಾಸ್ಥಿತಿಯಲ್ಲಿ ದಿ: 03-07-2025 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತç ಮೀಸಲು ಪಡೆ ಕಚೇರಿಯ ಆವರಣದಲ್ಲಿ(ಡಿಎಆರ್) ಟೆಂಡರ್ ಕಂ ಬಹಿರಂಗ ಹರಾಜು ಮಾಡಲಾಗುವುದು.
ಹೆಚ್ಚಿನ ವಿವರಗಳಿಗೆ ಡಿಎಸ್ಪಿ ಡಿಎಆರ್ ಶಿವಮೊಗ್ಗ ದೂ.ಸಂ: 08182-261412 ಇವರನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪೊಲಿಸ್ ಅಧೀಕ್ಷಕರು ತಿಳಿಸಿದ್ದಾರೆ
